Tag: ಪೇಜಾವರ ಶ್ರೀಗಳು

  • ಶುಕ್ಲಾಂಬರಧರಂ ಶ್ಲೋಕ ಹೇಳಿ ಕಾಫಿ ಪ್ರಿಯರ ಕಾಲೆಳೆದ ಪೇಜಾವರ ಶ್ರೀಗಳು

    ಶುಕ್ಲಾಂಬರಧರಂ ಶ್ಲೋಕ ಹೇಳಿ ಕಾಫಿ ಪ್ರಿಯರ ಕಾಲೆಳೆದ ಪೇಜಾವರ ಶ್ರೀಗಳು

    ಉಡುಪಿ: ಪೇಜಾವರ ಶ್ರೀ ಧಾರ್ಮಿಕ ಪ್ರವಚನ ಮಾಡುತ್ತಾರೆ. ಅಗತ್ಯ ಬಿದ್ದಾಗ ಪ್ರಸಕ್ತ ರಾಜಕೀಯಕ್ಕೆ ಸಂಬಂಧಿಸಿದ ಹೇಳಿಕೆಗಳನ್ನು ಕೊಟ್ಟು ಕೆಲವೊಮ್ಮೆ ಚರ್ಚೆಗೆ ಗ್ರಾಸವಾಗುತ್ತಾರೆ. ಆದರೆ ಕಾಫಿ ಬಗ್ಗೆ ಶ್ರೀಗಳು ಪಾಠ ಮಾಡಿದ್ದು, ಕಾಫಿ ಎಂದರೆ ಏನು ಎಂದು ತಿಳಿಸಿಕೊಟ್ಟಿದ್ದಾರೆ.

    ಹೌದು. ಉಡುಪಿ ಕೃಷ್ಣಮಠದಲ್ಲಿ ಪರ್ಯಾಯ ಪಲಿಮಾರು ಸ್ವಾಮೀಜಿ ದೇಸಿ ಗೋವು ಸಮ್ಮೇಳನ ಆಯೋಜಿಸಲಾಗಿತ್ತು. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ಶ್ರೀಗಳು ಕಾಫಿ ಪ್ರಿಯರಿಗೆ ಮಾತಿನೇಟು ಕೊಟ್ಟಿದ್ದಾರೆ. ಶುಕ್ಲಾಂಬರಧರಂ ವಿಷ್ಣುಂ ಶಶಿ ವರ್ಣಂ  ಚತುರ್ಭುಜಂ ಪ್ರಸನ್ನವದನಂ ಧ್ಯಾಯೇತ್ ಸರ್ವ ವಿಘ್ನೋಪಶಾಂತಯೇತ್ ಶ್ಲೋಕವನ್ನು ಮಾತಿಗೆತ್ತಿಕೊಂಡ ಶ್ರೀಗಳು ಕಾಫಿ ಪ್ರಿಯರ ಕಾಲೆಳೆದರು. ಇದನ್ನೂ ಓದಿ:ಗೋಮಾಂಸ ತಿನ್ನುವವರು ರಾಕ್ಷಸ ಸಮಾನ: ಪೇಜಾವರ ಶ್ರೀ

    ಈ ಕಾಫಿ ವಿಚಾರದಲ್ಲಿ ಶ್ರೀಗಳು ಆಡಿದ ಮಾತು ನೂರಾರು ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದ್ದಲ್ಲದೆ, ಕಾಫಿ ಪ್ರಿಯರನ್ನು ಚಿಂತೆಗೀಡು ಮಾಡಿತು.

    ಶ್ಲೋಕವನ್ನು ವಿವರಿಸಿ, ಕಾಫಿ ವಿಷ್ಣುವಿನಂತೆ ವಿಶ್ವದೆಲ್ಲೆಡೆ ವ್ಯಾಪಿಸಿದೆ. ಶುಕ್ಲಾಂ ಅಂದ್ರೆ ಹಾಲು, ಕಾಫಿ ಹುಡಿ ಸೇರಿದರೆ ಹಾಲು ಚಂದ್ರನ ಬಣ್ಣವಾಗಿ ಬದಲಾಗುತ್ತದೆ. ಕಾಫಿ ಕೊಡುವ ಎರಡು ಕೈ, ಕಾಫಿ ತೆಗೆದುಕೊಳ್ಳುವ ಎರಡು ಕೈ ಸೇರಿದರೆ ಚತುರ್ಭುಜಂ  ಆಗುತ್ತದೆ. ಕಾಫಿ ಕುಡಿದ ಬಳಿಕ ಮನಸ್ಸು, ಮುಖ ಅರಳಿಸುತ್ತೇವೆ ಎಂದರು.

    ಶ್ಲೋಕದ ಕಡೆಯಲ್ಲಿ ಬರುವ ಸರ್ವ ವಿಘ್ನೋಪ ಶಾಂತಯೇ ಎಂಬಂತೆ ಮನುಷ್ಯನ ಆರೋಗ್ಯ ಶಾಂತವಾಗಿ ಇರುವುದಿಲ್ಲ. ಬದಲಾಗಿ ಕಾಫಿ ಕುಡಿದು ಅನಾರೋಗ್ಯವನ್ನು ತರಿಸಿಕೊಳ್ಳುತ್ತೇವೆ ಎಂದು ಹೇಳಿದರು. ಭಾರತದ ದೇಸಿ ದನದ ಹಾಲನ್ನು ಕುಡಿದರೆ ಆರೋಗ್ಯ, ಮನಸ್ಸು ಎರಡೂ ಚೆನ್ನಾಗಿರುತ್ತದೆ. ಮನುಷ್ಯ ವಿಕೃತಿ ಮಾಡುತ್ತಾ ಹೋದರೆ ಸಮಸ್ಯೆಗಳಾಗುತ್ತದೆ ಎಂದರು.

    ಕಾಫಿ ಶಬ್ದ ಸೃಷ್ಟಿಯಾದ ಬಗ್ಗೆ ಹಾಸ್ಯ ಚಟಾಕಿ ಹಾರಿಸಿದ ಸ್ವಾಮೀಜಿ, `ಕಾ’ ಅಂದರೆ ಕಾಲಕೂಟ(ವಿಷ) `ಪಿ’ ಅಂದರೆ ಪೂಯೂಶ(ಅಮೃತ). ಅಮೃತಕ್ಕೆ ಮನುಷ್ಯರು ವಿಷವೆಂಬ ಕಾಫಿ ಪುಡಿ ಹಾಕಿ ಸೇವಿಸುತ್ತಾರೆ. ಹಸುವಿನ ಶುದ್ಧ ಹಾಲನ್ನು ನೇರವಾಗಿ ಕುಡಿಯದೆ ಆರೋಗ್ಯಕ್ಕೆ ಒಳ್ಳೆಯದಲ್ಲದ ವಿಷಕಾರಿ ಅಂಶ ಬೆರೆಸಿ ಕುಡಿಯುವ ಪ್ರವೃತ್ತಿ ಮನುಷ್ಯನಿಗೆ ಅಂಟಿಕೊಂಡಿರುವ ಚಟ ಎಂದರು.

    ಹಸುವಿನ ಹಾಲು, ಅದರ ಶ್ರೇಷ್ಠತೆ ಬಗ್ಗೆ ಮಾತನಾಡುತ್ತಾ ಕಾಫಿ ಬಗ್ಗೆ ಮಾತನಾಡಲು ಶುರು ಮಾಡಿದರು. ಈ ಮೂಲಕ ಕಾಫಿ ಪ್ರಿಯರಿಗೆ ಕೆಲ ಬುದ್ಧಿ ಮಾತನ್ನು ಕೂಡ ಹೇಳಿದರು.

  • ಅಧಿಕಾರದಲ್ಲಿ ಮುಂದುವರಿದಿದ್ದರೆ ಕಾಶ್ಮೀರ ಸಮಸ್ಯೆ ಎಚ್‍ಡಿಡಿಯಿಂದ ಪರಿಹಾರ ಆಗ್ತಿತ್ತು: ಪೇಜಾವರ ಶ್ರೀ

    ಅಧಿಕಾರದಲ್ಲಿ ಮುಂದುವರಿದಿದ್ದರೆ ಕಾಶ್ಮೀರ ಸಮಸ್ಯೆ ಎಚ್‍ಡಿಡಿಯಿಂದ ಪರಿಹಾರ ಆಗ್ತಿತ್ತು: ಪೇಜಾವರ ಶ್ರೀ

    ಉಡುಪಿ: ಸದಾ ಬಿಜೆಪಿ ಪರ ಮಾತನಾಡ್ತಾರೆ ಎಂದು ಟೀಕೆಗೆ ಒಳಪಡುವ ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಮಾಜಿ ಪ್ರಧಾನಿ ದೇವೇಗೌಡರನ್ನು ಹಾಡಿ ಹೊಗಳಿದ್ದಾರೆ. ಕಾಶ್ಮೀರ ಸಮಸ್ಯೆ ದೊಡ್ಡ ಗೌಡರಿಂದ ಪರಿಹಾರ ಆಗುತ್ತಿತ್ತು ಎಂದು ಹೇಳಿದ್ದಾರೆ.

    ಪೇಜಾವರ ಶ್ರೀಗಳ 88ನೇ ಜನ್ಮ ನಕ್ಷತ್ರ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿದ್ದರು. ಈ ವೇಳೆ ಪರಸ್ಪರ ಆರೋಗ್ಯ ವಿಚಾರಿಸಿಕೊಂಡು, ಗೌರವಾರ್ಪಣೆ ಮಾಡಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಗಳು, ರಾಷ್ಟ್ರ ರಾಜಕಾರಣದಲ್ಲಿ ದೇವೇಗೌಡರು ಅತ್ಯಂತ ಹಿರಿಯರು. ಪ್ರಧಾನ ಮಂತ್ರಿಯಾಗಿ ಉತ್ತಮ ಕೆಲಸ ಮಾಡಿದ್ದರು. ದೇವೇಗೌಡರೇ ಪ್ರಧಾನಿಯಾಗಿದ್ದರೆ ಕಾಶ್ಮೀರ ಸಮಸ್ಯೆ ಬಗೆಹರಿಯಲು ಅವಕಾಶ ಇತ್ತು ಎಂದು ಹಾಡಿ ಹೊಗಳಿದರು.

    ದೇವೇಗೌಡರಿಗೆ ಆಶೀರ್ವಾದ ಮಾಡಿದ್ದೇನೆ. ದೇವೇಗೌಡರಿಗೆ ಪ್ರಧಾನಿಯಾಗಿ ಅಧಿಕಾರ ನಡೆಸಲು ಕಡಿಮೆ ಅವಧಿ ಸಿಕ್ಕಿತ್ತು. ಆದರೆ ಗೌಡರ ಕುಟುಂಬದಿಂದ ಹೆಚ್ಚಿನ ರಾಷ್ಟ್ರಸೇವೆ ಆಗಲಿ. ನಾವಿಬ್ಬರೂ ರಾಜಕೀಯ ವಿಚಾರ ಮಾತನಾಡಿಲ್ಲ. ಗೌಡರು ಬನ್ನಂಜೆ ಗೋವಿಂದಾಚಾರ್ಯರ, ಮಧ್ವಾಚಾರ್ಯರ ಚರಿತ್ರೆ ಕುರಿತ ಪುಸ್ತಕ ಓದುತ್ತಿದ್ದಾರೆ ಎಂದು ತಿಳಿಸಿದರು.

    ಗೌಡರ ಪತ್ನಿ ಚೆನ್ನಮ್ಮ ಅತ್ಯಂತ ಸರಳಜೀವಿ ಮಹಾನ್ ದೈವಭಕ್ತೆ. ಇಬ್ಬರಿಗೂ ಯಾವ ಶ್ರೀಮಂತಿಕೆ, ಆಡಂಭರ ಇಲ್ಲ. ಅಂದೂ ಇಂದೂ ಅದೇ ತರದ ಬಟ್ಟೆ ಧರಿಸುತ್ತಾರೆ ಎಂದು ಪೇಜಾವರ ಸ್ವಾಮೀಜಿ ಭಾರೀ ಪ್ರಶಂಸೆ ವ್ಯಕ್ತಗೊಳಿಸಿದರು. ಅಲ್ಲದೆ ತುರ್ತು ಪರಿಸ್ಥಿತಿ ಕಾಲದಲ್ಲಿ ಬಹಳ ಚರ್ಚೆ ಮಾಡಿದ್ದೆವು ಎಂದು ಗೌಡರ ಜೊತೆಗಿನ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.

    ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ದೇವೇಗೌಡರು, ಸ್ವಾಮೀಜಿಯ ಆಶೀರ್ವಾದ ಪಡೆದಿದ್ದೇನೆ, ಅವರಿಗೆ ಶುಭ ಹಾರೈಸಿದ್ದೇನೆ. ಮೂಳೂರಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದೇನೆ. ರಾಜಕೀಯವಾಗಿ ಮಾತಾಡಲ್ಲ ಎಂದು ಹೇಳಿ ತೆರಳಿದರು. ಅಲ್ಲಿಂದ ಪತ್ನಿ ಸಮೇತರಾಗಿ ಕೃಷ್ಣಮಠಕ್ಕೆ ತೆರಳಿ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಮಾಡಿ, ಪರ್ಯಾಯ ಪಲಿಮಾರು ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.

  • 89ನೇ ವಸಂತಕ್ಕೆ ಕಾಲಿಟ್ಟ ಪೇಜಾವರ ಶ್ರೀಗಳು- ಹೂವಿನ ಸುರಿಮಳೆಗೈದ ಪಲಿಮಾರು ಸ್ವಾಮೀಜಿ

    89ನೇ ವಸಂತಕ್ಕೆ ಕಾಲಿಟ್ಟ ಪೇಜಾವರ ಶ್ರೀಗಳು- ಹೂವಿನ ಸುರಿಮಳೆಗೈದ ಪಲಿಮಾರು ಸ್ವಾಮೀಜಿ

    ಉಡುಪಿ: ಅಷ್ಟಮಠಗಳ ಹಿರಿಯ ಯತಿ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ 88 ವರ್ಷಗಳನ್ನು ಪೂರೈಸಿ 89ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಶ್ರೀಗಳಿಗೆ ಪುಷ್ಪಾಭಿಷೇಕ ಸಲ್ಲಿಸಲಾಯಿತು.

    ಪೇಜಾವರ ಶ್ರೀಗಳ 89ನೇ ವರ್ಷದ ಹುಟ್ಟುಹಬ್ಬದ ಶುಭದಿನದಂದು ಮಠದ ಪರ್ಯಾಯ ಪಲಿಮಾರು ಮಠಾಧೀಶ ವಿದ್ಯಾಧೀಶ ತೀರ್ಥ ಶ್ರೀಪಾದರು, ಶ್ರೀಗಳಿಗೆ ಪುಷ್ಪಾಭಿಷೇಕ ಮಾಡುವ ಮೂಲಕ ಗೌರವಿಸಿ ಶುಭಕೋರಿದ್ದಾರೆ. ಮಠದ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀಗಳನ್ನು ಕಮಲ ಪೀಠದಲ್ಲಿ ಕೂರಿಸಿ, ಶಾಲು-ಹಾರ ಹಾಕಿ ಪುಷ್ಪಾಭಿಷೇಕ ಮಾಡಲಾಯಿತು.

    ಪೇಜಾವರ ಶ್ರೀಗಳ ಮೇಲೆ ಹೂವಿನ ಸುರಿಮಳೆಗೈದು ನೂರು ಕಾಲ ಆರೋಗ್ಯದಿಂದ ಇರಿ ಎಂದು ಪಲಿಮಾರು ಸ್ವಾಮೀಜಿ ಹಾರೈಸಿದರು. ಹಾಗೆಯೇ ಹಿರಿಯ ಶ್ರೀಗಳ ಪಾಂಡಿತ್ಯ, ಅವರು ಸಮಾಜಮುಖಿ ಕಾರ್ಯದಿಂದಲೇ ಉಳಿದ ಪೀಠಾಧಿಪತಿಗಳಿಗೆ ಮಾರ್ಗದರ್ಶಕ ಎಂದು ಹಾಡಿ ಹೊಗಳಿದರು. ಈ ಶುಭವೇಳೆಯಲ್ಲಿ ವೇದಿಕೆಯಲ್ಲಿದ್ದ ವಿದ್ವಾಂಸರು, ಸ್ವಾಮೀಜಿ ಶಿಷ್ಯರು, ಹಿರಿಯರು ಹಿರಿಯ ಮಠಾಧೀಶರಿಗೆ ಹುಟ್ಟು ಹಬ್ಬಕ್ಕೆ ಶುಭಕೋರಿದರು.

    ಈ ಸಂದರ್ಭ ಮಾತನಾಡಿದ ಪೇಜಾವರ ಶ್ರೀಗಳು ನಾನು ಈ ಸನ್ಮಾನ, ಗೌರವ ಪ್ರೀತಿಗೆ ಅರ್ಹನೆ? ಇದೆಲ್ಲವನ್ನು ಮಾಡಿಸಿಕೊಳ್ಳುವ ಗುಣಗಳು ನನ್ನಲ್ಲಿವೆಯೇ ಎಂದು ಅಂತರಂಗದಲ್ಲಿ ಪ್ರಶ್ನೆ ಮಾಡುವ ಕಾಲ ಇದು. ನಿಮ್ಮ ಈ ಪ್ರೀತಿ, ಗೌರವ ನನ್ನ ಹೃದಯ ಕಮಲವನ್ನು ಅರಳಿಸಿದೆ. ಈ ಗೌರವವನ್ನು ಶ್ರೀಕೃಷ್ಣ ಮುಖ್ಯಪ್ರಾಣದ ಪಾದದ ಕೆಳಗೆ ಅರ್ಪಿಸುವುದಾಗಿ ಹೇಳಿ ಸಂತೋಷ ಹಂಚಿಕೊಂಡರು.

  • ಶಬರಿಮಲೆ ವಿಚಾರ ನಿರ್ಧರಿಸಲು ಜಾತ್ಯಾತೀತ ಸರ್ಕಾರಕ್ಕೆ ಹಕ್ಕಿಲ್ಲ: ಪೇಜಾವರ ಶ್ರೀ

    ಶಬರಿಮಲೆ ವಿಚಾರ ನಿರ್ಧರಿಸಲು ಜಾತ್ಯಾತೀತ ಸರ್ಕಾರಕ್ಕೆ ಹಕ್ಕಿಲ್ಲ: ಪೇಜಾವರ ಶ್ರೀ

    ಉಡುಪಿ: ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಪಟ್ಟಂತೆ ಧಾರ್ಮಿಕ ಮುಖಂಡರ ಸಭೆ ಕರೆಯಲಿ. ಅದನ್ನ ಬಿಟ್ಟು ಜಾತ್ಯಾತೀತ ಸರ್ಕಾರಕ್ಕೆ ಈ ವಿಚಾರವಾಗಿ ನಿರ್ಧಾರ ತೆಗೆದುಕೊಳ್ಳುವ ಹಕ್ಕಿಲ್ಲ ಎಂದು ಪೇಜಾವರ ಶ್ರೀಗಳು ಅಭಿಪ್ರಾಯ ಪಟ್ಟಿದಾರೆ.

    ಉಡುಪಿಯಲ್ಲಿ ಮಾತನಾಡಿದ ಅವರು, ಕೇರಳ ಸರ್ಕಾರ ಜನಮತಗಣತೆ ಮಾಡಬೇಕು. ಹಿಂದೂಗಳ ಅಭಿಪ್ರಾಯವನ್ನ ಪಡೆದುಕೊಳ್ಳಬೇಕು. ಅದಾಗದಿದ್ರೆ ಧಾರ್ಮಿಕ ಮುಖಂಡರ ಸಭೆ ಕರೆದು ಇತ್ಯರ್ಥ ಮಾಡಲಿ. ಅದನ್ನ ಬಿಟ್ಟು ಜಾತ್ಯಾತೀತ ಸರ್ಕಾರಕ್ಕೆ ದೇವರ ಮೇಲೆ ನಂಬಿಕೆ ಇಲ್ಲವೆಂದ ಮೇಲೆ ಅವರಿಗೆ ಈ ಕುರಿತು ನಿರ್ಧಾರ ತೆಗೆದುಕೊಳ್ಳಲು ಅದ್ಯಾವ ಹಕ್ಕಿದೆ ಎಂದು ಪ್ರಶ್ನಿಸಿದ್ದಾರೆ.

    ಧಾರ್ಮಿಕವಾಗಿ ನಾನು ಹಲವಾರು ಪರಿವರ್ತನೆ ಮಾಡಿದ್ದೇನೆ. ಜೊತೆಗೆ ಹಲವಾರು ಸಂಪ್ರದಾಯವನ್ನು ಕೂಡ ಅನುಸರಿಸಿದ್ದೇನೆ. ಇದು ಸಂಪ್ರದಾಯ ಮತ್ತು ಶಾಸ್ತ್ರದ ತಿಕ್ಕಾಟ ಆಗಿರೋದ್ರಿಂದ ಜಾತ್ಯಾತೀತ ಸರ್ಕಾರ ಇದನ್ನ ತೀರ್ಮಾನ ಮಾಡಬಾರದು. ಧಾರ್ಮಿಕ ಮುಖಂಡರು ಹಾಗೂ ಹಿಂದೂ ಜನತೆ ಇದನ್ನ ತೀರ್ಮಾನ ಮಾಡಬೇಕು. ಮಹಿಳೆಯರು ಇದನ್ನ ಅವಮಾನ ಅಂತ ಭಾವಿಸಬಾರದು ಎಂದು ಪೇಜಾವರ ಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಐವರು ಅಯ್ಯಪ್ಪ ಮಾಲಾಧಾರಿಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ..!

    ಜನಾಭಿಪ್ರಾಯಕ್ಕೆ ಮಣಿದು ಶ್ರೀ ರಾಮ ಸೀತೆಯನ್ನ ಕಾಡಿಗೆ ಕಳುಹಿಸಿದ ಅನ್ನೋದು ವಾಲ್ಮೀಕಿ ರಾಮಾಯಣದಲ್ಲಿ ಉಲ್ಲೇಖವಾಗಿದೆ. ಹಾಗೆಯೇ ಕೇರಳ ಸರ್ಕಾರ ತನ್ನ ಹಠವನ್ನ ಬಿಟ್ಟು ಇದನ್ನೂ ಕೂಡ ಜನಾಭಿಪ್ರಾಯಕ್ಕೆ ಬಿಡಬೇಕು ಎಂದರು. ಹಾಗೆಯೇ ತಲಾಖ್ ವಿಚಾರವನ್ನ ಪ್ರಸ್ತಾಪಿಸಿದ ಶ್ರೀಗಳು, ತಲಾಖ್ ವಿಚಾರವನ್ನು ಶಬರಿಮಲೆಗೆ ತಳಕು ಹಾಕುವ ಅಗತ್ಯ ಇಲ್ಲ. ತಲಾಖ್ ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆಗೆ ಸಮಾನ. ನಾನು ತಲಾಖ್ ವಿರುದ್ಧ ಕಾಯ್ದೆಗೆ ಬೆಂಬಲಿಸುತ್ತೇನೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಡೆದಾಡುವ ದೇವರ ಆರೋಗ್ಯ ವಿಚಾರಿಸಿದ ಪೇಜಾವರ ಶ್ರೀಗಳು

    ನಡೆದಾಡುವ ದೇವರ ಆರೋಗ್ಯ ವಿಚಾರಿಸಿದ ಪೇಜಾವರ ಶ್ರೀಗಳು

    ತುಮಕೂರು: ಸಿದ್ದಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ ಭಕ್ತಾಧಿಗಳು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಇಂದು ಬೆಳಗ್ಗೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಪೇಜಾವರ ಶ್ರೀಗಳು ಹೇಳಿದರು.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ್ದೇನೆ. ಅವರನ್ನು ನೋಡಿ ಸಮಾಧಾನವಾಯ್ತು. ಅವರು ಆರೋಗ್ಯವಾಗಿದ್ದಾರೆ. ವೈದ್ಯರ ಬಳಿ ನಾನು ಮಾತನಾಡಿದ್ದೇನೆ ಯಾವುದೇ ಆತಂಕವಿಲ್ಲ. ಶ್ರೀಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಭಕ್ತಾಧಿಗಳು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

    ಸಿದ್ದಗಂಗಾ ಶ್ರೀಗಳನ್ನು ನಾನು ನೋಡಿ ಬಂದಿದ್ದೇನೆ. ಅವರು ವಿಶ್ರಾಂತಿಯಲ್ಲಿದ್ದಾರೆ ಹಾಗಾಗಿ ಮಾತನಾಡಿಸಲು ಆಗಲಿಲ್ಲ. ಚಿಕ್ಕ ಶ್ರೀಗಳು ಹಾಗೂ ಮಠದ ಇತರೇ ಸದಸ್ಯರು ಕೂಡ ಶ್ರೀಗಳ ಬಳಿ ಇದ್ದಾರೆ. ಎಲ್ಲರನ್ನೂ ನಾನು ಭೇಟಿ ಮಾಡಿ ಮಾತನಾಡಿದ್ದೇನೆ. ನಡೆದಾಡುವ ದೇವರಿಗೆ ಯಾವುದೇ ತೊಂದರೆಯಿಲ್ಲ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪೇಜಾವರಶ್ರೀ ಮಧ್ವಪೀಠವೇರಿ 80 ವರ್ಷ ಪೂರ್ಣ- ರಾಷ್ಟ್ರಪತಿ ಕೋವಿಂದ್, ಉಮಾಭಾರತಿಯಿಂದ ಗುರುವಾರ ಗುರುವಂದನೆ

    ಪೇಜಾವರಶ್ರೀ ಮಧ್ವಪೀಠವೇರಿ 80 ವರ್ಷ ಪೂರ್ಣ- ರಾಷ್ಟ್ರಪತಿ ಕೋವಿಂದ್, ಉಮಾಭಾರತಿಯಿಂದ ಗುರುವಾರ ಗುರುವಂದನೆ

    ಉಡುಪಿ: ಅಷ್ಟಮಠದ ಹಿರಿಯಶ್ರೀಗಳಾದ ಪೇಜಾವರ ಶ್ರೀಗಳು ಮಧ್ವಪೀಠವೇರಿ 80 ವರ್ಷ ಪೂರ್ಣಗೊಂಡಿದ್ದು, ಸ್ವತಃ ರಾಷ್ಟ್ರಪತಿಗಳು ಹಾಗೂ ಶ್ರೀಗಳ ಶಿಷ್ಯೆ ಕೇಂದ್ರ ಸಚಿವೆ ಉಮಾಭಾರತಿಯವರು ಗುರುವಂದನೆ ಮಾಡಲಿದ್ದು ಉಡುಪಿಯಲ್ಲಿ ಕಾರ್ಯಕ್ರಮದ ಸಿದ್ಧತೆ ಜೋರಾಗಿದೆ.

    ಪೇಜಾವರ ಶ್ರೀಗಳು ಬ್ರಾಹ್ಮಣ ಯತಿಯಾದ್ರೂ ದಲಿತ ಕೇರಿಗೆ ಹೋದ ಕ್ರಾಂತಿಕಾರಿ. ಸರ್ವಸಂಘ ಪರಿತ್ಯಾಗಿಯಾದ್ರೂ ರಾಜಕೀಯ ಪಂಡಿತ. ಪ್ರಪಂಚ ಅರಿಯದ ವಯಸ್ಸಿನಲ್ಲಿ ಪೀಠವೇರಿ ಸನ್ಯಾಸಿಯಾದ್ರು ಶ್ರೀ ಪೇಜಾವರ ಶ್ರೀಗಳು. 80 ವರ್ಷದ ಹಿಂದೆ ಇವರ ಹೆಸರು ವೆಂಕಟರಮಣ. ಆಗಿನ್ನೂ ಅವರು 8 ವರ್ಷದ ಬಾಲಕ. ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಶಾಲೆಯಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಪುಟ್ಟ ಬಾಲಕನಿಗೆ ಅದೇನು ಕನಸಿತ್ತೋ, ಮುಂದೇನು ಆಗಬೇಕೆಂಬ ಮನಸ್ಸಿತ್ತೋ ಗೊತ್ತಿಲ್ಲ. ಆದ್ರೆ ಮಧ್ವಾಚಾರ್ಯರಿಂದ ಸ್ಥಾಪಿತವಾದ ಅಷ್ಟಮಠಗಳ ಪೈಕಿ ಒಂದಾಗ ಪೇಜಾವರ ಮಠಕ್ಕೆ ಉತ್ತರಾಧಿಕಾರಿಯಾಗಿ ಧೀಕ್ಷೆ ಕೊಡಲಾಯ್ತು. ಬಳಿಕ ಮಾಣಿ ವೆಂಕಟರಮಣ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರಾದರು.

    ಪೇಜಾವರ ಸ್ವಾಮೀಜಿ ಸನ್ಯಾಸಿಯಾಗಿ 80 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಗುರುವಂದನಾ ಕಾರ್ಯಕ್ರಮ ನೆರವೇರುತ್ತಿದೆ. ಆದರಿಂದ ಪೇಜಾವರಶ್ರೀ ಶಿಷ್ಯೆ ಉಮಾಭಾರತಿ ಗುರುವಂದನೆ ಮಾಡಲಿದ್ದಾರೆ. ಡಿಸೆಂಬರ್ 27ರಂದು ನಡೆಯುವ ಕಾರ್ಯಕ್ರಮಕ್ಕೆ ಭಾರತದ ಪ್ರಥಮ ಪ್ರಜೆ ರಾಮನಾಥ ಕೋವಿಂದ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಕರ್ನಾಟಕ ರಾಜ್ಯಪಾಲ ವಜೂಭಾಯಿ ವಾಲಾ, ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ ಆಚಾರ್ಯ ಸ್ವಾಮೀಜಿಯವರ ಎಂಬತ್ತನೇ ಸನ್ಯಾಸ ಉತ್ಸವದಲ್ಲಿ ಭಾಗಿಯಾಗಲಿದ್ದಾರೆ.

    ಪೇಜಾವರ ಶ್ರೀಗಳಿಗೆ ಈಗ 89 ವಯಸ್ಸು. ಹೆಸರಿಗೆ 89, ಆದ್ರೆ ಶ್ರೀಗಳ ಓಡಾಟ, ಚುರುಕುತನ, ಪೂಜೆ, ಯೋಗ, ಭಾಷಣ, ಪ್ರವಚನ ಕೇಳಿದ್ರೆ ಇನ್ನೂ ಮೂವತ್ತೊಂಬತ್ತು ಅನ್ನಿಸುತ್ತದೆ. ಕಾವಿ ಉಟ್ಟು ಕೇವಲ ಧಾರ್ಮಿಕವಾಗಿ ತೊಡಗಿಸಿಕೊಳ್ಳದೆ ಸಾಮಾಜಿಕ ಚಟುವಟಿಕೆಯಲ್ಲೂ ಪೇಜಾವರಶ್ರೀ ಮುಂಚೂಣಿಯಲ್ಲಿದ್ದಾರೆ. 60ರ ದಶಕದಲ್ಲಿ ದಲಿತ ಕೇರಿಗೆ ಭೇಟಿಕೊಟ್ಟು ಅಸ್ಪೃಶ್ಯತೆಯನ್ನು ಹೋಗಲಾಡಿಸುವ ದಿಟ್ಟ ಹೆಜ್ಜೆಯನ್ನು ಶ್ರೀಗಳು ಇಟ್ಟಿದ್ದರು. ಬ್ರಾಹ್ಮಣರಿಂದ ವಿರೋಧ ಬಂದರೂ, ಲೆಕ್ಕಕ್ಕೆ ತೆಗೆದುಕೊಳ್ಳದೆ ಮುಂದುವರಿದವರು. ಇತ್ತೀಚಿನ ಮಡೆಸ್ನಾನಕ್ಕೆ ಪರಿಹಾರ ನೀಡಿ ಪರ್ಯಾಯ ಸಂದರ್ಭದಲ್ಲಿ ಇಫ್ತಾರ್ ಕೂಟ ಮಾಡಿ ವಿರೋಧ ಕಟ್ಟಿಕೊಂಡ ಶ್ರೀಗಳು, ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸುತ್ತಾ, ಉಡುಪಿ ಕೃಷ್ಣನಿಗೆ ಅತೀಹೆಚ್ಚು ಪೂಜೆ ಮಾಡಿದ ಸಂತ ಎಂಬ ಕೀರ್ತಿಗೂ ಸ್ವಾಮೀಜಿ ಪಾತ್ರವಾಗಿದ್ದಾರೆ. ರಾಮಮಂದಿರ ನಿರ್ಮಾಣ ಆಗಬೇಕೆಂಬ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಪೇಜಾವರ ಶ್ರೀಗಳಿಗೆ ಇದೀಗ ತನ್ನ ಶಿಷ್ಯೆ ಹಾಗೂ ದೇಶದ ಮೊದಲ ಪ್ರಜೆಯಿಂದ ಸನ್ಯಾಸದ 80ನೇ ವರ್ಷದ ಸಂದರ್ಭ ಗುರುವಂದನೆಯಲ್ಲಿ ಪಡೆಯಲ್ಲಿದ್ದಾರೆ.

    ಪಲಿಮಾರು ವಿದ್ಯಾಧೀಶತೀರ್ಥ ಸ್ವಾಮೀಜಿ ಅವರು ಮಾತನಾಡಿ, ಹಿರಿಯ ಶ್ರೀಗಳಿಗೆ ನಮ್ಮ ಪರ್ಯಾಯ ಸಂದರ್ಭದಲ್ಲಿ 80ರ ಗುರುವಂದನೆ ನಡೆಯುತ್ತಿರುವುದು ಮನಸ್ಸಿಗೆ ಬಹಳ ಖುಷಿ ಕೊಟ್ಟಿದೆ. ಅವರ ನೂರನೇ ಗುರುವಂದನಾ ಕಾರ್ಯಕ್ರಮ ನೋಡುವ ಅವಕಾಶವನ್ನು ಭಗವಂತ ಕರುಣಿಸಲಿ. ಕೃಷ್ಣಮಠಕ್ಕೆ ರಾಷ್ಟ್ರಪತಿಗಳು ಆಗಮಿಸಲಿದ್ದು ದೇವರ ದರ್ಶನ ಮತ್ತು ಅವರ ಗೌರವಕ್ಕೆ ಸಿದ್ಧತೆ ನಡೆಸಿದ್ದೇವೆ ಎಂದರು.

    ಪೇಜಾವರಶ್ರೀಗಳಿಗೆ ದೇಶಾದ್ಯಂತ ಭಕ್ತರಿದ್ದಾರೆ. ಬಾಬ್ರಿ ಮಸೀದಿ ಧ್ವಂಸ, ಸಂವಿಧಾನ ತಿದ್ದುಪಡಿ ಮುಂತಾದ ಕೆಲ ಘಟನೆಗಳ ನಂತರ ಅವರನ್ನು ಟೀಕಿಸುವವರೂ ಹೆಚ್ಚಿದ್ದಾರೆ. ಒಟ್ಟಿನಲ್ಲಿ ಸನ್ಯಾಸ ಜೀವನದಲ್ಲಿ 80 ವರ್ಷಗಳನ್ನು ಪೂರೈಸಿರುವುದು ಹಾಗೂ ಸಮಾಜದ ಎಲ್ಲಾ ವರ್ಗಗಳನ್ನು ಮುಟ್ಟುವುದು ಸಾಮಾನ್ಯ ವಿಷಯವಲ್ಲ. 1940ರಿಂದ ಪೀಠವನ್ನು ನಿಭಾಯಿಸಿಕೊಂಡು ಬಂದು ಈಗಲೂ ಪ್ರಸಿದ್ಧರಾಗಿರುವುದು ಸುಲಭದ ಮಾತಲ್ಲ ಅನ್ನುವುದು ಎಲ್ಲರೂ ಒಪ್ಪಿಕೊಳ್ಳುವ ಸತ್ಯಂಶವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯೋಗಿ ಬೇಡ ಮೋದಿಯೇ ಪ್ರಧಾನಿ ಅಭ್ಯರ್ಥಿ ಆಗಲಿ- ಪೇಜಾವರಶ್ರೀ

    ಯೋಗಿ ಬೇಡ ಮೋದಿಯೇ ಪ್ರಧಾನಿ ಅಭ್ಯರ್ಥಿ ಆಗಲಿ- ಪೇಜಾವರಶ್ರೀ

    ಉಡುಪಿ: ಪಂಚರಾಜ್ಯ ಸೋಲು ಅನುಭವಿಸಿರುವ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಡುಪಿಯಲ್ಲಿ ಪೇಜಾವರ ಶ್ರೀಗಳು ಸಾಕಷ್ಟು ಕಿವಿಮಾತು ಹೇಳಿದ್ದಾರೆ. ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ವಿರೋಧ ಕಟ್ಟಿಕೊಳ್ಳಬೇಡಿ ಅಂತ ಸಲಹೆ ಕೊಟ್ಟಿದ್ದಾರೆ.

    ಪಂಚರಾಜ್ಯ ಫಲಿತಾಂಶವು ಪ್ರಧಾನಿ ಮೋದಿ ಅವರಿಗೆ ಎಚ್ಚರಿಕೆಯಾಗಿದೆ ಎಂದಿರುವ ಶ್ರೀಗಳು, ಆರ್ಥಿಕ ಸುಧಾರಣೆ ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಆದ್ಯತೆ ಕೊಡಲಿ. ಮಂದಿರ ನಿರ್ಮಾಣ ಹಿಂದೂ ಮತದಾರರ ಉತ್ಸಾಹವನ್ನು ಹೆಚ್ಚಿಸಬಹುದು. ಎನ್‍ಡಿಎ ಮೈತ್ರಿಕೂಟದ ಮೂಲಕ ಸಮಾನ ವಿಚಾರಧಾರೆಯುಳ್ಳ ಪಕ್ಷಗಳ ಜೊತೆ ಬಿಜೆಪಿ ಮೈತ್ರಿ ಸಾಧಿಸಬೇಕು ಎಂದು ತಿಳಿಸಿದರು.

    ಚಂದ್ರಬಾಬು ನಾಯ್ಡು ವಿರೋಧ ಕಟ್ಟಿಕೊಳ್ಳಬೇಡಿ:
    ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ವಿರೋಧವನ್ನು ಕಟ್ಟಿಕೊಂಡರೆ ಬಿಜೆಪಿಗೆ ನಷ್ಟವಾಗುತ್ತದೆ. ಚಂದ್ರಬಾಬು ನಾಯ್ಡು ಬಿಜೆಪಿಯನ್ನು ಬಗ್ಗುಬಡಿಯಲು ಹಠ ಹಿಡಿದಿದ್ದಾರೆ. ನೀವು ಮಾಜಿ ಪ್ರಧಾನಿ ವಾಜಪೇಯಿ ಅವರ ನೀತಿಯನ್ನು ಅನುಸರಿಸಬೇಕು ಎಂದು ಕಿವಿಮಾತು ಹೇಳಿದರು.

    ಪ್ರಧಾನಿ ಮೋದಿ ಕೆಲವು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ಮೋದಿ ಬಗ್ಗೆ ಮೊದಲಿದ್ದ ನಿರೀಕ್ಷೆ ಈಗ ಜನರಲ್ಲಿ ಇಲ್ಲ, ಜನ ನಿರೀಕ್ಷೆ ಇಟ್ಟಷ್ಟು ಕೆಲಸ ದೇಶದಲ್ಲಿ ಆಗಿಲ್ಲ ಎಂದು ಟೀಕಿಸಿದರು. ನೋಟ್ ಬ್ಯಾನ್ ಫಲ ಜನಸಾಮಾನ್ಯರಿಗೆ ಮುಟ್ಟಿಲ್ಲ ಎಂದರು.

    ಯೋಗಿ ಪ್ರಧಾನಿ ಅಭ್ಯರ್ಥಿಯಾಗಬಾರದು:
    ಸಿಎಂ ಯೋಗಿ ಆದಿತ್ಯನಾಥ್ ಮುಂದಿನ ಪ್ರಧಾನಿ ಅಭ್ಯರ್ಥಿ ಎನ್ನುವ ವಿಚಾರ ಉತ್ತರ ಪ್ರದೇಶದ ಧರ್ಮ ಸಂಸತ್‍ನಲ್ಲಿ ಪ್ರಕಟವಾಗಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಪೇಜಾವರಶ್ರೀ, ನರೇಂದ್ರ ಮೋದಿ ಅವರೇ ಮುಂದಿನ ಪ್ರಧಾನಿ ಅಭ್ಯರ್ಥಿ ಆಗಬೇಕು. ಸಿಎಂ ಯೋಗಿ ಮೋದಿಯಷ್ಟು ಸಮರ್ಥ ಅಭ್ಯರ್ಥಿ ಅಲ್ಲ. ಆದಿತ್ಯನಾಥ್ ಅವರು ರಾಜಕಾರಣಿಯಲ್ಲ ಅವರು ಸಂತರು. ಸಂತ ಪರಂಪರೆಯ ವ್ಯಕ್ತಿ. ಉತ್ತರ ಪ್ರದೇಶದಲ್ಲಿ ಇಷ್ಟು ಕೆಲಸಗಳನ್ನು ಮಾಡಿರುವುದೇ ವಿಶೇಷ. ಆದರೆ ಅವರು ಈಗ ಪ್ರಧಾನಿ ಅಭ್ಯರ್ಥಿ ಆಗಬಾರದು ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದೀಕ್ಷೆ ಕೊಟ್ಟ ಗುರುವಿನ ಆರೋಗ್ಯ ವಿಚಾರಿಸಿದ ಉಮಾಭಾರತಿ

    ದೀಕ್ಷೆ ಕೊಟ್ಟ ಗುರುವಿನ ಆರೋಗ್ಯ ವಿಚಾರಿಸಿದ ಉಮಾಭಾರತಿ

    ಉಡುಪಿ: ದೀಕ್ಷೆ ಕೊಟ್ಟ ಗುರುವಿಗೆ ಅಪಘಾತದ ಸುದ್ದಿ ಕೇಳಿ ಕೇಂದ್ರ ನೀರಾವರಿ ಸಚಿವೆ ಉಮಾಭಾರತಿ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

    ಉಮಾಭಾರತಿ ಮೊದಲು ಪೇಜಾವರ ಮಠಕ್ಕೆ ಆಗಮಿಸಿ ಪೇಜಾವರಶ್ರೀಗೆ ಗೌರವ ಸಲ್ಲಿಸಿದರು. ನಂತರ ಸ್ವಾಮೀಜಿಯನ್ನು ಕಂಡು ಮಾತನಾಡಿಸಿ ನಿಟ್ಟುಸಿರು ಬಿಟ್ಟು ಅಪಘಾತ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ತಾವು ಆರೋಗ್ಯದ ಬಗ್ಗೆ ಹೆಚ್ಚು ಗಮನ ಕೊಡಬೇಕೆಂದು ಸ್ವಾಮೀಜಿಗೆ ಕಿವಿಮಾತು ಹೇಳಿದರು.

    ಪೇಜಾವರ ಶ್ರೀ ಶಿಷ್ಯೆಯಾಗಿರುವ ಉಮಾಭಾರತಿ ಕಳೆದ ಎರಡು ವರ್ಷದಲ್ಲಿ ಉಡುಪಿಗೆ ಮೂರು ಬಾರಿ ಭೇಟಿ ನೀಡಿದ್ದಾರೆ. ಇದೇ ಸಂದರ್ಭ ಪಂಚಮ ಪರ್ಯಾಯ ಮುಗಿಸಿ ಸರ್ವಜ್ಞ ಪೀಠದಿಂದ ಏಳುವ ಸಂದರ್ಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದು ಕ್ಷಮೆಯನ್ನು ಕೇಳಿದರು.

    ಮಾಧ್ಯಮಗಳ ಜೊತೆ ಮಾತನಾಡಿದ ಉಮಾಭಾರತಿ, ಸ್ವಾಮೀಜಿಗೆ ಅಪಘಾತ ಸುದ್ದಿ ಕೇಳಿ ಆಘಾತವಾಯ್ತು. ಕೆಲಸವನ್ನೆಲ್ಲ ಬದಿಗೊತ್ತಿ ಉಡುಪಿಗೆ ಓಡೋಡಿ ಬಂದೆ. ಸ್ವಾಮೀಜಿಯವರನ್ನು ಭೇಟಿ ಮಾಡಿ ಈಗ ನಿರಾಳವಾಗಿದ್ದೇನೆ. ಸ್ವಾಮೀಜಿ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಬೆನ್ನಿಗೆ ಹೊಡೆತ ಬಿದ್ದಿದ್ದರಿಂದ ಹೆಚ್ವಿನ ವಿಶ್ರಾಂತಿ ಅವಶ್ಯಕತೆ ಇದೆ. ವೈದ್ಯರ ಸೂಚನೆಯನ್ನು ಪಾಲಿಸಬೇಕು ಎಂದು ಸ್ವಾಮೀಜಿ ಬಳಿ ಉಮಾಭಾರತಿ ನಿವೇದಿಸಿರುವುದಾಗಿ ಹೇಳಿದರು.

    ಪೇಜಾವರಶ್ರೀ ಪಂಚಮ ಪರ್ಯಾಯ ಮುಗಿಸಿದ್ದಾರೆ. ಗುರೂಜಿ ಪಂಚಮ ಪರ್ಯಾಯ ಐತಿಹಾಸಿಕವಾದದ್ದು, ಅವರು ಗುಣಮುಖರಾದ ಕೂಡಲೇ ಉಡುಪಿಯಲ್ಲೇ ದೊಡ್ಡ ಸಂಭ್ರಮಾಚರಣೆ ಮಾಡುತ್ತೇನೆ. ಕಾರ್ಯಕ್ರಮದ ದಿನಾಂಕ ಇನ್ನೂ ನಿಗದಿಪಡಿಸಿಲ್ಲ. ಒಟ್ಟಿನಲ್ಲಿ ಕಾರ್ಯಕ್ರಮ ರಾಜಕೀಯೇತರವಾಗಿ ಇರುತ್ತದೆ. ಆಮಂತ್ರಣ ಮಾಡಿಸಲ್ಲ, ಪುಣ್ಯವಂತರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ರಾಜ್ಯ ಮತ್ತು ಕೇಂದ್ರದ ರಾಜಕಾರಣದ ಬಗ್ಗೆ ಮಾತನಾಡಲ್ಲ ಎಂದು ಉಮಾಭಾರತಿ ಹೇಳಿದರು.

    1992ರ ನವೆಂಬರ್ 17ರಂದು ಉಮಾ ಭಾರತಿ ಅವರಿಗೆ ಪೇಜಾವರ ಶ್ರೀಗಳು ಸನ್ಯಾಸ ದೀಕ್ಷೆ ಕೊಟ್ಟಿದ್ದರು.

  • ದಾಖಲೆಯ ಪರ್ಯಾಯ ಮುಗಿಸುತ್ತಿರೋ ಪೇಜಾವರಶ್ರೀ- ಇಂದು ಕೃಷ್ಣನಿಗೆ ಕೊನೆಯ ಪೂಜೆ

    ದಾಖಲೆಯ ಪರ್ಯಾಯ ಮುಗಿಸುತ್ತಿರೋ ಪೇಜಾವರಶ್ರೀ- ಇಂದು ಕೃಷ್ಣನಿಗೆ ಕೊನೆಯ ಪೂಜೆ

    ಉಡುಪಿ: ದಾಖಲೆಯ ಪಂಚಮ ಪರ್ಯಾಯ ಮಹೋತ್ಸವದ ಸಂಭ್ರಮ ಶುರುವಾಗಿದ್ದು, ಪೇಜಾವರಶ್ರೀಗಳು ದಾಖಲೆಯ ಪರ್ಯಾಯವನ್ನು ಮುಗಿಸುತ್ತಿದ್ದಾರೆ.

    ಪೇಜಾವರ ಶ್ರೀಗಳು ಜನವರಿ 18ರಂದು ಪರ್ಯಾಯ ಪೀಠಾವರೋಹಣ ಮಾಡಲಿದ್ದಾರೆ. ಎರಡು ವರ್ಷಗಳ ಕಾಲ ಕಡೆಗೋಲು ಶ್ರೀಕೃಷ್ಣನ ಪೂಜೆ ಮಾಡಿದ್ದ ಪೇಜಾವರಶ್ರೀಗಳ ಪೂಜಾಧಿಕಾರ ಮುಗಿದಿದ್ದು, ಐತಿಹಾಸಿಕ ಐದು ಪರ್ಯಾಯಗಳನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಶ್ರೀಕೃಷ್ಣನ ಪೂಜಾಧಿಕಾರ ಪೇಜಾವರ ಮಠದಿಂದ ಪಲಿಮಾರು ಮಠಕ್ಕೆ ಹಸ್ತಾಂತರವಾಗಲಿದೆ.

    ಪೇಜಾವರ ವಿಶ್ವೇಶತೀರ್ಥ ಶ್ರೀಪಾದರು ಕಡೆಗೋಲು ಶ್ರೀಕೃಷ್ಣನಿಗೆ ತನ್ನ ಅಧಿಕಾರಾವಧಿಯ ಕೊನೆಯ ಎರಡು ಪೂಜೆಗಳನ್ನು ಇಂದು ಮಾಡಲಿದ್ದಾರೆ. ನಾಳೆಯಿಂದ ಉಡುಪಿ ಕೃಷ್ಣನಿಗೆ ಪೂಜೆ ಮಾಡುವ ಅಧಿಕಾರ ಪಲಿಮಾರು ಮಠಾಧೀಶ ವಿದ್ಯಾಧೀಶ ಸ್ವಾಮೀಜಿಯ ಪಾಲಾಗಲಿದೆ.

    ಜನವರಿ 17ರ ಮಧ್ಯರಾತ್ರಿ 3 ಗಂಟೆಯಿಂದ ಬೆಳಗ್ಗಿನ ಜಾವ 7 ಗಂಟೆಯವರೆಗೆ ಧಾರ್ಮಿಕ ವಿಧಿವಿಧಾನಗಳು ನಡೆಯಲಿದೆ. ಈ ಸಂದರ್ಭದಲ್ಲಿ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿಯವರು ವಿದ್ಯಾಧೀಶ ಸ್ವಾಮೀಜಿಯವರಿಗೆ ಪೂಜಾಧಿಕಾರ ಮತ್ತು ಕೃಷ್ಣಮಠದ ಎಲ್ಲಾ ಅಧಿಕಾರಗಳನ್ನು ಹಸ್ತಾಂತರ ಮಾಡಲಿದ್ದಾರೆ. ಹೀಗಾಗಿ ಪಲಿಮಾರು ಶ್ರೀಗಳ ಪರ್ಯಾಯಕ್ಕೆ ನಮ್ಮ ಸಂಪೂರ್ಣ ಸಹಕಾರವಿದೆ ಪಲಿಮಾರು ಪರ್ಯಾಯ ಚೆನ್ನಾಗಿ ನಡೆಯಲಿ ಎಂದು ವಿಶ್ವೇಶತೀರ್ಥ ಶ್ರೀಗಳು ಆಶೀರ್ವಾದ ಮಾಡಿದ್ದಾರೆ. ಮುಂದಿನ ಪರ್ಯಾಯ ಸ್ವಾಮೀಜಿಗೆ ಹಿರಿಯ ಯತಿಗಳು ಶುಭಕೋರಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ವಿಶ್ವೇಶತೀರ್ಥ ಸ್ವಾಮೀಜಿ, ನನ್ನ ಪರ್ಯಾಯ ನನಗೆ ಸಂತೃಪ್ತಿ ತಂದಿಲ್ಲ. ಸಂತೋಷವಿದೆ. ಹಲವಾರು ಸಾಮಾಜಿಕ ಕಾರ್ಯಗಳನ್ನುಮಾಡಿದ್ದ ಖುಷಿಯಿದೆ. ವಿರೋಧಗಳು ಬಂತು, ಚರ್ಚೆಗಳು ಆಗಿದೆ. ಹೀಗಾದಾಗ ಮಾತ್ರ ಸಮಾಜದ ಬದಲಾವಣೆ ಸಾಧ್ಯ ಎಂದು ಸ್ವಾಮೀಜಿ ಹೇಳಿದರು. ಪಲಿಮಾರು ಮಠಾಧೀಶ ವಿದ್ಯಾಧೀಶ ಸ್ವಾಮೀಜಿಯ ವೈಭವದ ಪುರಪ್ರವೇಶ ನಡೆದಿದೆ. ನಗರದ ಪ್ರಮುಖ ಬೀದಿಗಳಲ್ಲಿ ಸ್ವಾಮೀಜಿಯವರನ್ನು ವಿಶೇಷ ಟ್ಯಾಬ್ಲೋದ ಮೂಲಕ ಮೆರವಣಿಗೆ ಮಾಡಿ ಉಡುಪಿ ಪುರದೊಳಗೆ ಕರೆದುಕೊಂಡು ಬರಲಾಗಿದೆ. ಮುಂದಿನ ಪರ್ಯಾಯ ಚೆನ್ನಾಗಿ ನಡೆಯುತ್ತದೆ ಎಂದು ಶುಭ ಹಾರೈಸಿದರು.

    ಪರ್ಯಾಯ ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ಹೊರೆ ಕಾಣಿಕೆಗಳು ಬಂದಿದೆ. ಧಾರ್ಮಿಕ ವಿಧಿವಿಧಾನಗಳು ರಾತ್ರಿ ಆರಂಭವಾಗಲಿದ್ದು ಜನವರಿ 18ರ ಬೆಳಗ್ಗಿನ ಜಾವ ಆರು ಗಂಟೆಗೆ ಅನ್ನದ ಸಟ್ಟುಗ ಮತ್ತು ಅಕ್ಷಯ ಪಾತ್ರೆಯನ್ನು ಪೇಜಾವರ ಸ್ವಾಮೀಜಿ ಹಸ್ತಾಂತರ ಮಾಡುತ್ತಾರೆ. ಈ ಮೂಲಕ ಎರಡು ವರ್ಷದ ಪರ್ಯಾಯ ಮುಗಿಸಲಿದ್ದಾರೆ. ಪಲಿಮಾರು ಸ್ವಾಮೀಜಿ ತಮ್ಮ ಸನ್ಯಾಸ ಜೀವನದ ಎರಡನೇ ಪರ್ಯಾಯ ಆರಂಭ ಮಾಡಲಿದ್ದಾರೆ.

    ಒಂದು ಬಾರಿ ಪರ್ಯಾಯ ಪೂಜಾಧಿಕಾರ ಸಿಕ್ಕರೆ ಮತ್ತೆ ಆ ಮಠಕ್ಕೆ ಕೃಷ್ಣನ ಪೂಜಾಧಿಕಾರ ಸಿಗೋದು 14 ವರ್ಷದ ನಂತರ. ಕೃಷ್ಣಮಠಕ್ಕೆ ಸಂಬಂಧಪಟ್ಟ ಒಟ್ಟು 8 ಮಠಗಳಿದ್ದು, ಪಲಿಮಾರು ಮಠ ತನ್ನ ಪರ್ಯಾಯವನ್ನು ಜನವರಿ 18 2018 ರಿಂದ 2020ರವರೆಗೆ ನಡೆಸಲಿದೆ. ಪೇಜಾವರಶ್ರೀಗಳಿಗೆ 8ನೇ ವಯಸ್ಸಿನಲ್ಲಿ ಸನ್ಯಾಸತ್ವ ಪಡೆದುದ್ದರಿಂದ ಈವರೆಗಿನ ಎಲ್ಲಾ ಸ್ವಾಮೀಜಿಗಳ ದಾಖಲೆಯನ್ನು ಸರಿಗಟ್ಟಿದ್ದಾರೆ. ಮತ್ಯಾರೂ ಮಾಡಲು ಅಸಾಧ್ಯವಾದ ದಾಖಲೆಯನ್ನು ತನ್ನ ಹೆಸರಿನಲ್ಲೇ ಉಳಿಸಿಕೊಂಡಿದ್ದಾರೆ.