Tag: ಪೇಟಾ

  • ಬೆಂಗಳೂರಿನಲ್ಲಿ ಆಯೋಜನೆಗೊಂಡಿರುವ ಕಂಬಳವನ್ನು ನಿಲ್ಲಿಸಿ: ಪೇಟಾದಿಂದ ಪಿಐಎಲ್‌ ಸಲ್ಲಿಕೆ

    ಬೆಂಗಳೂರಿನಲ್ಲಿ ಆಯೋಜನೆಗೊಂಡಿರುವ ಕಂಬಳವನ್ನು ನಿಲ್ಲಿಸಿ: ಪೇಟಾದಿಂದ ಪಿಐಎಲ್‌ ಸಲ್ಲಿಕೆ

    ಬೆಂಗಳೂರು: ಅಕ್ಟೋಬರ್‌ 25 ರಂದು ಬೆಂಗಳೂರಿನಲ್ಲಿ (Bengaluru) ಆಯೋಜನೆಗೊಂಡಿರುವ ಕಂಬಳವನ್ನು (Kambala) ನಿಲ್ಲಿಸುವಂತೆ ಕೋರಿ ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (PETA) ಸಂಸ್ಥೆ ಹೈಕೋರ್ಟ್‌ನಲ್ಲಿ (High Court) ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ.

    ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಅವರು ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್ ಅವರ ಪೀಠದ ಮುಂದೆ ಸೋಮವಾರ ಅರ್ಜಿಯನ್ನು ತುರ್ತು ವಿಚಾರಣೆ ಮಾಡಬೇಕೆಂದು ಮನವಿ ಮಾಡಿದರು.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕವಾಗಿ ನಡೆಯುವ ಈ ಕ್ರೀಡೆಯನ್ನು ಈ ತಿಂಗಳು ನಗರದಲ್ಲಿ ಆಯೋಜಿಸಲಾಗಿದ್ದು, ಇದಕ್ಕಾಗಿ ರಾಜ್ಯಾದ್ಯಂತ ಇರುವ ಕೋಣಗಳನ್ನು ಬೆಂಗಳೂರಿಗೆ ಕರೆತರಲಾಗುತ್ತದೆ. ಇದರಿಂದ ಕೋಣಗಳಿಗೆ ಹಿಂಸೆ ಆಗುತ್ತದೆ ಎಂದು ಪೀಠಕ್ಕೆ ತಿಳಿಸಿದರು. ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಮಾಸ್‌ ರೇಪಿಸ್ಟ್‌ ಎಂದ ರಾಹುಲ್‌ಗೆ ರಿಲೀಫ್‌ – ಅರ್ಜಿ ವಜಾ, 25 ಸಾವಿರ ದಂಡ

    ಈ ವರ್ಷದ ಜುಲೈನಲ್ಲಿ ಪಿಐಎಲ್ (PIL) ಸಲ್ಲಿಸಲಾಗಿದೆ. ಆದರೆ ಇಲ್ಲಿಯವರೆಗೆ ಅದನ್ನು ಪಟ್ಟಿ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ತುರ್ತು ವಿಚಾರಣೆ ಕೋರಿ ಮನವಿ ಮಾಡಿದರು. ಮನವಿಯನ್ನು ಪುರಸ್ಕರಿಸಿದ ಕೋರ್ಟ್‌ ಮಂಗಳವಾರ (ಅ.21 ರಂದು) ವಿಚಾರಣೆ ನಡೆಸುವುದಾಗಿ ಹೇಳಿತು.

    ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನ ಬಂಡಿ ಓಟಕ್ಕೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಕಳೆದ ವರ್ಷ ಮೇ ತಿಂಗಳಲ್ಲಿ ಎತ್ತಿಹಿಡಿದಿತ್ತು. ಈ ತೀರ್ಪಿನ ವಿರುದ್ಧ ಪೇಟಾ ಮರು ಪರಿಶೀಲನಾ ಅರ್ಜಿಯನ್ನು ಪೇಟಾ ಸಲ್ಲಿಸಿದೆ.

  • Independence Day | ರಾಜಸ್ಥಾನಿ ಲೆಹರಿಯಾ ಪೇಟ ಧರಿಸಿ ಗಮನ ಸೆಳೆದ ಮೋದಿ

    Independence Day | ರಾಜಸ್ಥಾನಿ ಲೆಹರಿಯಾ ಪೇಟ ಧರಿಸಿ ಗಮನ ಸೆಳೆದ ಮೋದಿ

    ನವದೆಹಲಿ: ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ (78th Independence Day) ಸಂಭ್ರಮ ಮನೆಮಾಡಿದೆ. ಇದರ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಸ್ವಾತಂತ್ರ ದಿನವನ್ನು ಆಚರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬೆಳಗ್ಗೆ 7:30ರ ಸುಮಾರಿಗೆ ಧ್ವಜಾರೋಹಣ ನೆರವೇರಿಸಿ, ದೇಶದ ಜನತೆಗೆ ಸ್ವಾತಂತ್ರೋತ್ಸವದ ಶುಭಕೋರಿದರು.

    ಬಳಿಕ ಸ್ವಾತಂತ್ರ್ಯ ದಿನವನ್ನುದ್ದೇಶಿಸಿ ಮಾತನಾಡಿದ ಮೋದಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ಸ್ಮರಿಸಿದರು. ಈ ವೇಳೆ ಗಮನ ಸೆಳೆದಿದ್ದು ಅವರ ಪೇಟ. ಪ್ರತಿ ವರ್ಷವೂ ವೇಷಭೂಷಣಗಳಿಂದಲೇ ಗಮನ ಸೆಳೆಯುವ ನಮೋ, ಗುರುವಾರ ಕೆಂಪು ಕೋಟೆಯಲ್ಲಿ ರಾಜಸ್ಥಾನಿ ಲೆಹರಿಯಾ ಪ್ರಿಂಟ್‌ ಪೇಟಾ (Leheriya Print Turban) ಧರಿಸಿ ಗಮನ ಸೆಳೆದರು. ಶಿರಸ್ತ್ರಾಣವು ಉದ್ದವಾದ ಬಾಲದೊಂದಿಗೆ ಕಿತ್ತಳೆ, ಹಳದಿ ಮತ್ತು ಹಸಿರು ಬಣ್ಣಗಳ ಮಿಶ್ರಣದಿಂದ ಕೂಡಿದ ಪೇಟ ಧರಿಸಿದ್ದರು. ಇದರೊಂದಿಗೆ ಬಿಳಿ ಕುರ್ತಾ, ತಿಳಿ ನೀಲಿ ಬಣ್ಣದ ಬಂಧಗಾಲಾ ಜಾಕೆಟ್ ಹೆಚ್ಚು ಗಮನ ಸೆಳೆಯಿತು. ಇದನ್ನೂ ಓದಿ: ದೇಶ ಮೊದಲು.. ಭಾರತವನ್ನು ಬಲಪಡಿಸಲು ದೊಡ್ಡ ಸುಧಾರಣೆಗಳಿಗೆ ಬದ್ಧ: ಪ್ರಧಾನಿ ಮೋದಿ ಪ್ರತಿಜ್ಞೆ

    ಲೆಹರಿಯಾ, ಜವಳಿ ಟೈಡೈ ವಿನ್ಯಾಸವು ರಾಜಸ್ಥಾನದ ಸಾಂಪ್ರದಾಯಿಕ ವೈಭವಕ್ಕೆ ಮತ್ತೊಂದು ಹೆಸರಾಗಿದೆ. ಥಾರ್‌ ಮರುಭೂಮಿಯಲ್ಲಿ ನೆಲೆಸಿರುವ ಜನರು ಹೆಚ್ಚಾಗಿ ಇದನ್ನು ಧರಿಸುತ್ತಾರೆ. ಇದನ್ನೂ ಓದಿ: Independence Day: ಕೆಂಪುಕೋಟೆಯಲ್ಲಿ ಸ್ವಾತಂತ್ರೋತ್ಸವದ ಸಂಭ್ರಮ – ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

    ವೇಷಭೂಷಣವೇ ನಮೋ ಆಕರ್ಷಣೆ:
    2014ರಲ್ಲಿ ಕ್ಲಾಸಿಕ್ ರಾಜಸ್ಥಾನಿ ಶೈಲಿ, 2015ರಲ್ಲಿ ಕ್ರಿಸ್-ಕ್ರಾಸ್ ರಾಜಸ್ಥಾನಿ, 2016ರಲ್ಲಿ ರೋಮಾಂಚಕ ಟೈ-ಡೈ ಟರ್ಬನ್, 2017ರಲ್ಲಿ ಜ್ಯಾಮಿತೀಯ ಹಳದಿ ಪೇಟ, 2018ರಲ್ಲಿ ಜ್ಯಾಮಿತೀ ಕೇರಸಿ ಪೇಟ, 2019ರಲ್ಲಿ ಓಡ್ ಟು ಇಂಡಿಯನ್ ಹೆರಿಟೇಜ್ ಪೇಟ, 2020ರಲ್ಲಿ ಸ್ಟ್ರೈಕಿಂಗ್ ಕೇಸರಿ ಮತ್ತು ಕೆನೆ ಪೇಟ, 2021ರಲ್ಲಿ ರಾಜಸ್ಥಾನದ ಸಂಪ್ರದಾಯ ಮತ್ತು ಸ್ಥಿತಿಸ್ಥಾಪಕತ್ವದ ಪೇಟ ಹಾಗೂ ವಸ್ತ್ರ ಧರಿಸಿದರು. 2022ರ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಕೆಂಪು, ಕೇಸರಿ ಮಿಶ್ರಿತ ಪೇಟ ಧರಿಸಿದ್ದ ನಮೋ, 2023ರಲ್ಲಿ ಹಳದಿ, ಹಸಿರು ಮತ್ತು ಕೆಂಪು ಮಿಶ್ರಿತ ರಾಜಸ್ಥಾನಿ ಬಂಧನಿ ಮುದ್ರಣ ಪೇಟ ಧರಿಸಿ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದರು. ಇದನ್ನೂ ಓದಿ: Independence Day | ಇತಿಹಾಸ, ಮಹತ್ವ, ನೀವು ತಿಳಿದಿರಲೇಬೇಕಾದ ಸಂಗತಿಗಳಿವು

  • ಪ್ರಾಣಿಗಳಿಗಾಗಿ ಬೆತ್ತಲಾಗುವಂತೆ ರಣವೀರ್ ಸಿಂಗ್ ಗೆ ಮನವಿ ಮಾಡಿದ ಪೇಟಾ

    ಪ್ರಾಣಿಗಳಿಗಾಗಿ ಬೆತ್ತಲಾಗುವಂತೆ ರಣವೀರ್ ಸಿಂಗ್ ಗೆ ಮನವಿ ಮಾಡಿದ ಪೇಟಾ

    ಬಾಲಿವುಡ್ ನಟ ರಣವೀರ್ ಸಿಂಗ್ ಬೆತ್ತಲಾಗಿದ್ದೆ ಬಂತು ಆಫರ್ ಗಳ ಮೇಲೆ ಆಫರ್ ಬರುತ್ತಿವೆಯಂತೆ. ಮೊದ ಮೊದಲು ಈ ನಟ ಯಾಕೆ ಹೀಗೆ ಮಾಡಿದರು ಎನ್ನುವ ಮಾತುಗಳು ಕೇಳಿ ಬಂದವು. ಹಲವರು ರಣವೀರ್ ವಿರುದ್ಧ ಸಿಡಿದು ಬಿದ್ದರು, ಕೆಲವರು ಗೇಲಿ ಮಾಡಿದರು. ಇನ್ನೂ ಕೆಲವರು ತಾವೂ ಬೆತ್ತಲೆ ಫೋಟೋ ಶೂಟ್ ಮಾಡಿಸಿಕೊಂಡು ಸಂಭ್ರಮಿಸಿದರು. ಇಷ್ಟೆಲ್ಲಗಳ ನಡುವೆ ರಣವೀರ್ ತಮ್ಮ ಪಾಡಿಗೆ ತಾವು ಸುಮ್ಮನಿದ್ದರು. ಈಗ ಅವರು ಮಾತನಾಡಬೇಕಾದ ಸಂದರ್ಭ ಬಂದಿದೆ.

    ಪ್ರಾಣಿಗಳ ದಯಾ ಸಂಘ ಪೇಟಾ ರಣವೀರ್ ಸಿಂಗ್ ಅವರಿಗೆ ಹೀಗೊಂದು ಮನವಿ ಮಾಡಿದ್ದು, ಪ್ರಾಣಿಗಳ ರಕ್ಷಣೆಗಾಗಿ ನೀವು ಬೆತ್ತಲಾಗಬೇಕೆಂದು ಮನವಿ ಮಾಡಿದೆ. ಈ ಬೆತ್ತಲೆ ಆಗುವುದಕ್ಕೂ ಪ್ರಾಣಿಗಳ ರಕ್ಷಣೆಗೂ ಏನು ಸಂಬಂಧ ಎನ್ನುವ ಪ್ರಶ್ನೆ ಮೂಡುವುದು ಸಹಜ. ಬೆತ್ತಲೆಯಾದರೆ, ಜನರ ಗಮನ ಸೆಳೆಯುವುದು ಸಲೀಸು. ಈ ಸಮಯದಲ್ಲಿ ಪ್ರಾಣಿಗಳ ರಕ್ಷಣೆ ಕುರಿತು ರಣವೀರ್ ಮಾತನಾಡಬಹುದು ಎನ್ನುವ ಉಪಾಯ ಇದರ ಹಿಂದಿದೆ. ಇದನ್ನೂ ಓದಿ:ಲಂಡನ್ ಸ್ಟುಡಿಯೋದಲ್ಲಿ ಕನ್ನಡ ಚಿತ್ರಕ್ಕೆ ಹಿನ್ನೆಲೆ ಸಂಗೀತ

    ಪೇಟಾ ಈ ಹಿಂದೆ ಇಂತಹ ಅನೇಕ ಪ್ರಯೋಗಗಳನ್ನು ಮಾಡಿದೆ. ಅದರಲ್ಲಿ ಗೆಲುವು ಕೂಡ ಕಂಡಿದೆ. ಪ್ರಾಣಿಗಳ ದಯೆ ವಿಷಯದಲ್ಲಿ ಅನೇಕ ಬಾರಿ ಸಿನಿಮಾಗಳ ವಿರುದ್ಧವೇ ಇದು ದಾವೆ ಹೂಡಿದೆ. ಆದರೂ, ಈ ಬಾರಿ ಸಿನಿಮಾ ಕಲಾವಿದರ ಮೂಲಕ ಪ್ರಾಣಿಗಳ ರಕ್ಷಣೆ ಕುರಿತಾಗಿ ಅಭಿಯಾನ ಮಾಡಲು ಹೊರಟಿದೆ. ಪೇಟಾ ಏನೋ ಇಂಥದ್ದೊಂದು ಕನಸು ಕಂಡಿದೆ. ಅದಕ್ಕೆ ರಣವೀರ್ ಸಿಂಗ್ ಹೇಗೆ ಸ್ಪಂದಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

  • 10 ಕೋಟಿ ಮಂದಿಗೆ ಉದ್ಯೋಗ ನೀಡುತ್ತಾ? – ಪೇಟಾ ವಿರುದ್ಧ ಅಮುಲ್ ಗರಂ

    10 ಕೋಟಿ ಮಂದಿಗೆ ಉದ್ಯೋಗ ನೀಡುತ್ತಾ? – ಪೇಟಾ ವಿರುದ್ಧ ಅಮುಲ್ ಗರಂ

    ನವದೆಹಲಿ: ಈ ಹಿಂದೆ ಕರಾವಳಿಯ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಮತ್ತು ತಮಿಳುನಾಡಿನ ಜಲ್ಲಿಕಟ್ಟು ನಿಷೇಧಿಸುವಂತೆ ಆಗ್ರಹಿಸಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದ ಪ್ರಾಣಿ ದಯಾ ಸಂಘ(ಪೇಟಾ)ನೀಡಿದ ಸಲಹೆಗೆ ಅಮುಲ್ ಸಂಸ್ಥೆ ಗರಂ ಆಗಿದೆ.

    ಹಾಲು ಉತ್ಪಾದನೆಯ ಬೃಹತ್ ಸಹಕಾರಿ ಸಂಸ್ಥೆಯಾದ ಅಮುಲ್‍ಗೆ ಪೇಟಾ ಪತ್ರ ಬರೆದು ವಿಚಿತ್ರ ಸಲಹೆಯನ್ನು ನೀಡಿದೆ. ಈಗ ಮಾರುಕಟ್ಟೆ ಬದಲಾಗಿದೆ. ದನದಿಂದ ಹಾಲನ್ನು ಕರೆಯುವ ಬದಲು ಸಸ್ಯಗಳ ಉತ್ಪನ್ನಗಳಿಂದ ಕಾರ್ಖಾನೆಗಳಲ್ಲಿ ಹಾಲನ್ನು ತಯಾರಿಸಬೇಕು. ಈ ಬದಲಾವಣೆಯನ್ನು ಅಮುಲ್ ಒಪ್ಪಿಕೊಳ್ಳುತ್ತದೆ ಎಂಬ ಭರವಸೆ ನನ್ನದು ಎಂದು ಹೇಳಿದೆ.

    ಈ ಸಲಹೆ ಅಮುಲ್ ವ್ಯವಸ್ಥಾಪಕ ನಿರ್ದೇಶಕ ಆರ್.ಎಸ್.ಸೋಧಿ ಕೆಂಡಾಮಂಡಲವಾಗಿದ್ದಾರೆ. ಹೈನುಗಾರಿಕೆಯನ್ನು ನಂಬಿರುವ ದೇಶದ 10 ಕೋಟಿ ಮಂದಿಗೆ ಪೇಟಾ ಉದ್ಯೋಗ ನೀಡುತ್ತಾ ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ : ಕುದುರೆ ರೇಸಲ್ಲಿ ಹಿಂಸೆ ಇಲ್ವಾ? ಪೇಟಾದ್ದು ಅತಿಯಾಯ್ತು- ಸಚಿವ ಡಿವಿಎಸ್ ವಾಗ್ದಾಳಿ

    ಹೈನುಗಾರಿಕೆ ಉದ್ಯೋಗ ಮಾಡುತ್ತಿರುವ ಶೇ.75 ಮಂದಿಗೆ ಭೂಮಿಯೇ ಇಲ್ಲ. ಈ ರೈತರ ಮಕ್ಕಳ ಶಾಲಾ ಶಿಕ್ಷಣಕ್ಕೆ ಹಣ ನೀಡುತ್ತಾ? ದೇಶದ ಬಡ ಜನತೆಗೆ ಇರುವ ಹಾಲಿನ ಅಗತ್ಯವನ್ನು ಕಡಿಮೆ ಬೆಲೆಗೆ ನೀಡುತ್ತಾ? ಲ್ಯಾಬ್ ಗಳಲ್ಲಿ ರಸಾಯನಿಕ ಮತ್ತು ಸಿಂಥೆಟಿಕ್ ವಿಟಮಿನ್ ಬಳಸಿ ತಯಾರಾಗುವ ಈ ಫ್ಯಾಕ್ಟರಿ ಆಹಾರವನ್ನು ಎಷ್ಟು ಮಂದಿ ಖರೀದಿಸಲು ಸಾಧ್ಯ ಎಂದು ಸೋಧಿ ಖಾರವಾಗಿ ಪ್ರಶ್ನಿಸಿದ್ದಾರೆ.

    ಈ ಟ್ವೀಟ್‍ಗೆ ಪ್ರತಿಕ್ರಿಯಿಸಿದ ಪೇಟಾ ಫೋರ್ಬ್ಸ್ ಸುದ್ದಿಯನ್ನು ಉಲ್ಲೇಖಿಸಿ, ಸಸ್ಯಾಹಾರಿ ಆಹಾರ ಮತ್ತು ಹಾಲಿನ ಮಾರುಕಟ್ಟೆಯಲ್ಲಿ ಭಾರತ ವಿಶ್ವನಾಯಕ ಎನಿಸಿಕೊಳ್ಳಲಿದೆ. ಪ್ರಾಣಿಗಳ ಜೀವ ಉಳಿಸಲು ಭಾರತದ ರೈತರು ಮತ್ತು ಉದ್ಯಮಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದೆ.

    ವಿಚಿತ್ರ ಸಲಹೆಗೆ ಜನರು ಗರಂ ಆಗಿದ್ದು ಪೇಟಾ ಇಂಡಿಯಾವನ್ನು ಸಾಮಾಜಿಕ ಜಾಲತಾಣದಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ನಿಮಗೆ ಯಾಕೆ ಭಾರತದ ಮೇಲೆಯೇ ಕಣ್ಣು? ವಿದೇಶದಲ್ಲಿ ಕುಳಿತ ನೀವು ನಮಗೆ ಸಲಹೆ ನೀಡುವ ಅಗತ್ಯವಿಲ್ಲ. ಭಾರತದ ಆರ್ಥಿಕತೆಯೆ ಮೇಲೆ ಹೊಡೆತ ನೀಡಲು ಈ ಸಲಹೆ ನೀಡಿದ್ದೀರಾ ಎಂದು ಪ್ರಶ್ನಿಸಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

    ಐಎಂಎ ವರ್ಸಸ್ ಆರ್ಯುವೇದ, ಪೇಟಾ ವರ್ಸಸ್ ಅಮುಲ್. ಭಾರತದ ಮೇಲೆ ವ್ಯವಸ್ಥಿತ ದಾಳಿಯಾಗುತ್ತಿದೆ. ಇದರ ಬೇರುಗಳ ಬಗ್ಗೆ ನಾವು ಹುಷಾರಾಗಿರಬೇಕು ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

    ಪೇಟಾ ನೀಡಿದ ಸಲಹೆಯ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಕಮೆಂಟ್ ಮಾಡಿ ಅಭಿಪ್ರಾಯ ತಿಳಿಸಿ.

  • 10 ಸಾವಿರ ಕಾರ್ಮಿಕರಿಗೆ ಅನ್ನ ನೀಡಿದ ನಟಿ ಸನ್ನಿಲಿಯೋನ್

    10 ಸಾವಿರ ಕಾರ್ಮಿಕರಿಗೆ ಅನ್ನ ನೀಡಿದ ನಟಿ ಸನ್ನಿಲಿಯೋನ್

    ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ನಿಂದ ಭಾರತ ನಲುಗುತ್ತಿದೆ. ಇದರ ಹರಡುವಿಕೆ ತಡೆಗಟ್ಟುವ ಉದ್ದೇಶದಿಂದ ಕೆಲವೆಡೆ ಲಾಕ್ ಡೌನ್ ಮಾಡಿರುವ ಪರಿಣಾಮ ಅನೇಕ ಮಂದಿ ವಲಸೆ ಕಾರ್ಮಿಕರು ಅನ್ನಕ್ಕಾಗಿ ಪರದಾಡುತ್ತಿದ್ದಾರೆ. ಇಂತವರಿಗೆ ಅನೇಕ ಮಂದಿ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಅಂತೆಯೇ ಇದೀಗ ಬಾಲಿವುಡ್ ನಟಿ ಸನ್ನಿಲಿಯೋನ್ ಕೂಡ ವಲಸೆ ಕಾರ್ಮಿಕರ ನೆರವಿಗೆ ನಿಂತಿದ್ದಾರೆ.

    ಬಾಲಿವುಡ್ ನಟಿ ಸನ್ನಿಲಿಯೋನ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುತ್ತಾರೆ. ಸದಾ ಕಷ್ಟಕ್ಕೆ ಮಿಡಿಯುವ ಸನ್ನಿ ಮನ ಕೋವಿಡ್ ಸಂಕಷ್ಟದಲ್ಲಿರುವವರ ಪಾಲಿಗೂ ನೆರವಾಗುವ ಮೂಲಕ ಮಾನವೀಯ ಕಾರ್ಯ ಮಾಡಿದ್ದಾರೆ.

    ಪೇಟಾದ ಜೊತೆ ಕೈ ಜೋಡಿಸಿರುವ ಸನ್ನಿ, ರಾಷ್ಟ್ರ ರಾಜಧಾನಿಯಲ್ಲಿ ಹಸಿದಿರುವ ಸುಮಾರು 10 ಸಾವಿರ ಮಂದಿಗೆ ಅನ್ನ ನೀಡುವ ಕೆಲಸ ಮಾಡಿದ್ದಾರೆ. ಸನ್ನಿ ಅವರ ಈ ಕಾರ್ಯವನ್ನು ಉದಯ್ ಫೌಂಡೇಶನ್ ಎಂಬ ಎನ್‍ಜಿಒ ಕೂಡ ಬೆಂಬಲಿಸಿದೆ. ಕಾರ್ಮಿಕರಿಗೆ ಆಹಾರದ ಜೊತೆ ಹಣ್ಣು ಕೂಡ ನೀಡಿದ್ದಾರೆ.

    ಈ ಸಂಬಂಧ ಮಾತನಾಡಿರುವ ಸನ್ನಿಲಿಯೋನ್, ಸದ್ಯ ನಾವು ಬಿಕ್ಕಟ್ಟನ್ನು ಎದುರಿಸುತ್ತಿದ್ದೇವೆ. ಆದರೆ ಸಹಾನುಭೂತಿ ಮತ್ತು ಒಗ್ಗಟ್ಟಿನೊಂದಿಗೆ ನಾವು ಮುಂದೆ ಬರುತ್ತೇವೆ. ಪೆಟಾ ಇಂಡಿಯಾದೊಂದಿಗೆ ಮತ್ತೆ ಕೈಜೋಡಿಸಲು ನನಗೆ ಸಂತೋಷವಾಗಿದೆ. ಈ ಸಮಯದಲ್ಲಿ ಅಗತ್ಯವಿರುವ ಸಾವಿರಾರು ಜನರಿಗೆ ಪ್ರೋಟೀನ್ ತುಂಬಿದ ಸಸ್ಯಾಹಾರಿ ಆಹಾರ ನೀಡಲು ಮುಂದಾಗಿರುವುದಾಗಿ ತಿಳಿಸಿದ್ದಾರೆ.

    ಲಾಕ್ ಡೌನ್ ಸಂದರ್ಭದಲ್ಲಿ ಈ ಹಿಂದೆಯೂ ಅನೇಕ ಮಂದಿ ಕಾರ್ಮಿಕರಿಗೆ ಆಹಾರ ನೀಡಿದ್ದಾರೆ. ನಟ ಸಲ್ಮಾನ್ ಖಾನ್ ಕೂಡ ತಮ್ಮ ಟ್ರಕ್‍ಗಳ ಮೂಲಕ ಮುಂಬೈನಲ್ಲಿ ಸಿಲುಕಿರುವ ಕಾರ್ಮಿಕರಿಗೆ ಆಹಾರ ಕಿಟ್‍ಗಳನ್ನು ವಿತರಿಸುತ್ತಿದ್ದಾರೆ. ಸಲ್ಮಾನ್‍ರ ಆಹಾರ ಟ್ರಕ್‍ಗಳು ವರ್ಲಿ ಮತ್ತು ಜುಹು ಪ್ರದೇಶಗಳಲ್ಲಿ ಆಹಾರ ಕಿಟ್‍ಗಳನ್ನು ವಿತರಿಸುತ್ತಿವೆ. ಶಿಲ್ಪಾ ಶೆಟ್ಟಿ ಕೂಡ ತಮ್ಮ ಫೌಂಡೇಶನ್ ಮೂಲಕ ಆಹಾರ ಹಾಗೂ ದಿನಸಿ ಸಾಮಾಗ್ರಿಗಳನ್ನು ಒದಗಿಸುತ್ತಿದ್ದಾರೆ.

    ಸೋನು ಸೂದ್, ಭೂಮಿ ಪೆಡ್ನೆಕರ್, ಜಾಕ್ವೆಲಿನ್ ಫರ್ನಾಂಡೀಸ್, ಅಕ್ಷಯ್ ಕುಮಾರ್, ವಿಕ್ಕಿ ಕೌಶಲ್, ಪ್ರಿಯಾಂಕಾ ಚೋಪ್ರಾ ಸೇರಿದಂತೆ ಹಲವಾರು ಗಣ್ಯರು ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳ ಮಧ್ಯೆ ನಾಗರಿಕರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.

  • ಬೆಂಗಳೂರಿನಲ್ಲಿ ಟಗರು ಬೆಟ್ಟಿಂಗ್ ಭರಾಟೆ ಜೋರು- ಹಳ್ಳಿ ಕ್ರೇಜ್ ಸಿಟಿಗೆ ಶಿಫ್ಟ್

    ಬೆಂಗಳೂರಿನಲ್ಲಿ ಟಗರು ಬೆಟ್ಟಿಂಗ್ ಭರಾಟೆ ಜೋರು- ಹಳ್ಳಿ ಕ್ರೇಜ್ ಸಿಟಿಗೆ ಶಿಫ್ಟ್

    ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಸಮಯದಲ್ಲೇ ಟಗರು ಆಟ ಜೋರಾಗಿದೆ.

    ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿದ್ದ ಟಗರು ಬೆಟ್ಟಿಂಗ್ ಕ್ರೇಜ್ ಈಗ ನಗರಕ್ಕೆ ಶಿಫ್ಟ್ ಆಗಿದೆ. ಕೆಲಸ ಇಲ್ಲದ ಯುವಕರು ಟಗರು ಆಟದ ಮೂಲ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಜಯನಗರ ಸೇರಿದಂತೆ ನಗರದ ಹಲವು ಕಡೆ ಈಗ ಟಗರು ಕಾಳಗ ಸಖತ್ ಕ್ರೇಜ್ ಸೃಷ್ಟಿಸಿದೆ. ಹೊಡಿ ಮಗಾ ಅನ್ನೋ ಟೀಂ ಇದ್ರಲ್ಲಿ ಸಕ್ರೀಯ ಆಗಿದೆ. ಆದರೆ ಈ ಟಗರು ಕಾಳಗದಿಂದ ಸ್ಥಳೀಯರು ನೆಮ್ಮದಿ ಕಳೆದುಕೊಳ್ಳುತ್ತಿದ್ದು, ಅಕ್ರಮ ಚಟುವಟಿಕೆ ವಿರುದ್ಧ ಧ್ವನಿ ಎತ್ತಿದ್ದಾರೆ. ಈ ಕುರಿತ ವಿಡಿಯೋಗಳನ್ನು ಕ್ಯೂಪಾ, ಪೇಟಾ ಸೇರಿ ಹಲವು ಪ್ರಾಣಿದಯಾ ಸಂಘಟನೆಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಟ್ಯಾಗ್ ಮಾಡಿ ದೂರು ಕೊಟ್ಟಿದ್ದಾರೆ.

  • ಸತ್ತ ಕೋಳಿಮರಿಯೊಂದಿಗೆ ಆಸ್ಪತ್ರೆಗೆ ಓಡಿದ- ಬಾಲಕನ ಮುಗ್ಧತೆಗೆ ಪೇಟಾ ಫುಲ್ ಫಿದಾ

    ಸತ್ತ ಕೋಳಿಮರಿಯೊಂದಿಗೆ ಆಸ್ಪತ್ರೆಗೆ ಓಡಿದ- ಬಾಲಕನ ಮುಗ್ಧತೆಗೆ ಪೇಟಾ ಫುಲ್ ಫಿದಾ

    ಐಜಾಲ್: ತಾನು ಸೈಕಲ್ ಹತ್ತಿಸಿದ ಕೋಳಿಮರಿಯ ಜೀವ ಉಳಿಸಿಕೊಡಿ ಎಂದು ಆಸ್ಪತ್ರೆಗೆ ಓಡಿ ಬಂದಿದ್ದ ಪುಟ್ಟ ಬಾಲಕನೊಬ್ಬನ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಈ 6ರ ಪೋರನ ಪ್ರಾಣಿ ಕಾಳಜಿ ಮೆಚ್ಚಿ ಪೇಟಾ(ಪ್ರಾಣಿ ದಯಾ ಸಂಘ) ಕಾಂಪಸಿನೇಟ್ ಕಿಡ್ ಎಂದು ಬಿರುದು ನೀಡಿದೆ.

    ಮಿಜೋರಾಂ ರಾಜ್ಯದ ಡೆರೆಕ್ ಸಿ ಲಾಲ್ ಚಹನಿಮಾ(6) ತನ್ನ ಮುಗ್ಧತೆಯಿಂದ ಎಲ್ಲರ ಮನ ಗೆದ್ದಿದ್ದಾನೆ. ಈತ ಆಟವಾಡುತ್ತಿದ್ದಾಗ ಪಕ್ಕದ ಮನೆಯ ಕೋಳಿ ಮರಿಯ ಮೇಲೆ ಆಕಸ್ಮಾತ್ತಾಗಿ ಸೈಕಲ್ ಹತ್ತಿಸಿದ್ದನು. ಪರಿಣಾಮ ಕೋಳಿ ಮರಿ ಬಿದ್ದಿದ್ದು, ಇದರಿಂದ ಗಾಬರಿಗೊಂಡ ಬಾಲಕ ತನ್ನಲ್ಲಿದ್ದ 10 ರೂ. ಹಣವನ್ನು ಹಿಡಿದುಕೊಂಡು ಆಸ್ಪತ್ರೆಗೆ ಓಡಿದ್ದಾನೆ. ಅಲ್ಲದೆ ಅಲ್ಲಿ ತನ್ನ ಕೈಯಲ್ಲಿದ್ದ ಹಣ ನೀಡಿ ಕೋಳಿ ಮರಿಯನ್ನು ಬದುಕಿಸಿಕೊಡುವಂತೆ ಗೋಗರೆದಿದ್ದಾನೆ. ಇದನ್ನು ಆಸ್ಪತ್ರೆಯಲ್ಲಿದ್ದವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದರು. ಬಳಿಕ ಬಾಲಕನ ಮುಗ್ಧತೆಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅಲ್ಲದೆ ಈ ಫೋಟೋ ಸಾಕಷ್ಟು ನೆಟ್ಟಿಗರ ಮನ ಗೆದ್ದಿತ್ತು.

    ಈ ಬಾಲಕ ಒಂದು ಕೈಯಲ್ಲಿ ಹತ್ತು ರೂ. ಹಾಗೂ ಇನ್ನೊಂದು ಕೈಯಲ್ಲಿ ಕೋಳಿ ಮರಿ ಹಿಡಿದುಕೊಂಡು ಇರುವ ಫೋಟೋವನ್ನು ಸಂಗ ಸೇಸ್ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು. ಈ ಮುಗ್ಧ ಫೋಟೋಗೆ 1 ಲಕ್ಷಕ್ಕೂ ಅಧಿಕ ಲೈಕ್ಸ್ ಹಾಗೂ 90 ಸಾವಿರಕ್ಕೂ ಹೆಚ್ಚು ಮಂದಿ ಶೇರ್ ಮಾಡಿದ್ದಾರೆ.

    ಇದನ್ನು ಗಮನಿಸಿದ ಭಾರತೀಯ ಪ್ರಾಣಿ ದಯಾ ಸಂಘವು ಈ ಬಾಲಕನ ಮುಗ್ಧತೆಗೆ ಕಾಂಪಸಿನೇಟ್ ಕಿಡ್ ಬಿರುದು ನೀಡಿ, ಈತನಿಗೆ ಪ್ರಾಣಿಗಳ ಮೇಲಿರುವ ಪ್ರೀತಿ, ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಇದಕ್ಕೂ ಮೊದಲು ಬಾಲಕನ ಶಾಲೆ ಕೂಡ ಆತನ ಕಾರ್ಯವನ್ನು ಮೆಚ್ಚಿ ಸನ್ಮಾನಿಸಿದೆ.

    https://www.facebook.com/sanga.says/posts/2544025018945443:0

  • ಪೇಟಾ ಚಿತ್ರದ ಕ್ರೇಜ್‍- ಥಿಯೇಟರ್ ಹೊರಗೆ ಮದ್ವೆಯಾದ ಜೋಡಿ

    ಪೇಟಾ ಚಿತ್ರದ ಕ್ರೇಜ್‍- ಥಿಯೇಟರ್ ಹೊರಗೆ ಮದ್ವೆಯಾದ ಜೋಡಿ

    ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ‘ಪೇಟಾ’ ಸಿನಿಮಾದ ಕ್ರೇಜ್‍ನಿಂದ ಥಿಯೇಟರ್ ಹೊರಗೆ ಜೋಡಿ ಮದುವೆಯಾದ ಅಪರೂಪದ ಕ್ಷಣವೊಂದು ಚೆನ್ನೈನಲ್ಲಿ ನಡೆದಿದೆ.

    ರಜನಿಕಾಂತ್ ಅಭಿಮಾನಿಗಳಾಗಿರುವ ಅನ್‍ಬರಸುರ್ ಹಾಗೂ ಕಾಮಾಕ್ಷಿ ರಾಯಪೇಟೆಯಲ್ಲಿರುವ ವುಡ್‍ಲ್ಯಾಂಡ್ ಚಿತ್ರಮಂದಿರದ ಹೊರಗೆ ಮದುವೆಯಾಗಿದ್ದಾರೆ. ಈ ಜೋಡಿಯ ಮದುವೆಗಾಗಿಯೇ ಚಿತ್ರಮಂದಿರದ ಹೊರಗೆ ಒಂದು ವೇದಿಕೆಯನ್ನು ಕೂಡ ನಿರ್ಮಿಸಲಾಗಿತ್ತು.

    ಅನ್‍ಬರಸುರ್ ಹಾಗೂ ಕಾಮಾಕ್ಷಿ ಮದುವೆ ಬಳಿಕ ಚಿತ್ರ ವೀಕ್ಷಿಸಲು ಬಂದಿದ್ದ ಪ್ರೇಕ್ಷಕರಿಗೆ ಊಟವನ್ನು ಸಹ ಏರ್ಪಡಿಸಲಾಗಿತ್ತು. ಅಷ್ಟೇ ಅಲ್ಲದೇ ಸಿನಿಮಾ ಶುರುವಾಗುವ ಮೊದಲೇ ಅನ್‍ಬರಸುರ್, ಕಾಮಾಕ್ಷಿ ಕುತ್ತಿಗೆಗೆ ತಾಳಿ ಕಟ್ಟಿದ್ದಾರೆ. ಬಳಿಕ ಅದೇ ಥಿಯೇಟರ್ ನಲ್ಲಿ ಕುಳಿತು ಸಿನಿಮಾ ವೀಕ್ಷಿಸಿದ್ದಾರೆ.

    ಪೇಟಾ ಸಿನಿಮಾವನ್ನು ಕಾರ್ತಿಕ್ ಸುಬ್ಬರಾಜ್ ನಿರ್ದೇಶನ ಮಾಡಿದ್ದಾರೆ. ಖ್ಯಾತ ನಟ ವಿಜಯ್ ಸೇತುಪತಿ, ಸಸಿಕುಮಾರ್, ಸಿಮ್ರಾನ್, ತ್ರಿಷಾ, ಮಹೇಂದ್ರನ್, ಬಾಬಿ ಸಿಂಹ ಹಾಗೂ ಗುರು ಸೋಮಸುಂದರಂ ನಟಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಿಯಾಂಕ-ನಿಕ್ ಮದ್ವೆಗೆ ಪೇಟಾ ಆಕ್ರೋಶ

    ಪ್ರಿಯಾಂಕ-ನಿಕ್ ಮದ್ವೆಗೆ ಪೇಟಾ ಆಕ್ರೋಶ

    ನವದೆಹಲಿ: ಬಾಲಿವುಡ್ ಹಾಗೂ ಹಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಈಗ ಅವರ ವಿರುದ್ಧ ಪೇಟಾ(ಪೀಪಲ್ ಫಾರ್ ಎಥಿಕಲ್ ಟ್ರೀಟ್‍ಮೆಂಟ್ ಆಫ್ ಎನಿಮಲ್ಸ್) ಸಂಸ್ಥೆ ಆಕ್ರೋಶ ವ್ಯಕ್ತಪಡಿಸಿದೆ.

    ಪ್ರಿಯಾಂಕ ತನ್ನ ಗೆಳೆಯ ನಿಕ್ ಜೋನಸ್ ಜೊತೆ ಡಿ.1 ಹಾಗೂ 2ರಂದು ಕ್ರೈಸ್ತ ಹಾಗೂ ಹಿಂದೂ ಸಂಪ್ರದಾಯದ ಪ್ರಕಾರ ಜೋಧ್‍ಪುರ್ ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಪ್ರಿಯಾಂಕ ಹಾಗೂ ನಿಕ್ ತಮ್ಮ ಮದುವೆಗೆ ಆನೆ ಹಾಗೂ ಕುದುರೆಯನ್ನು ಮೆರವಣಿಗೆಯಲ್ಲಿ ಬಳಸಿದಕ್ಕೆ ಪೇಟಾ ಆಕ್ರೋಶ ವ್ಯಕ್ತಪಡಿಸಿದೆ.

    ಪೇಟಾ ತನ್ನ ಟ್ವಿಟ್ಟರ್ ಖಾತೆಯಲ್ಲಿ, “ಪ್ರೀತಿಯ ಪ್ರಿಯಾಂಕ ಹಾಗೂ ನಿಕ್. ಮದುವೆಗಾಗಿ ಆನೆಗಳನ್ನು ಹಾಗೂ ಕುದುರೆ ಬಳಸುವುದು ಸರಿಯಲ್ಲ. ಏಕೆಂದರೆ ಪ್ರಾಣಿಗಳನ್ನು ಚಾಟಿಯಿಂದ ನಿಯಂತ್ರಿಸಬೇಕಾಗುತ್ತದೆ. ನಿಮ್ಮ ಮದುವೆಗೆ ನಮ್ಮ ಕಡೆಯಿಂದ ಶುಭಾಶಯಗಳು. ಆದರೆ ಈ ದಿನ ಪ್ರಾಣಿಗಳನ್ನು ಬಳಕೆ ಮಾಡಿದ್ದು ಸರಿಯಿಲ್ಲ” ಎಂದು ಟ್ವೀಟ್ ಮಾಡಿದೆ.

    ಪೇಟಾ ಅವರ ಈ ಟ್ವೀಟ್‍ಗೆ ಅಭಿಮಾನಿಯೊಬ್ಬರು ಪ್ರಿಯಾಂಕ ತಮ್ಮ ಮದುವೆಯ ಫೋಟೋವನ್ನು ಹಂಚಿಕೊಂಡಿಲ್ಲ. ಈ ಮೊದಲೇ ನೀವು ಈ ರೀತಿ ಹೇಳುವುದು ಸರಿಯಲ್ಲ ಎಂದು ರೀ-ಟ್ವೀಟ್ ಮಾಡಿದರೆ, ಮತ್ತೊಬ್ಬರು ಭಾರತದಲ್ಲಿ 80% ಜನರು ಮದುವೆ ಮೆರವಣಿಗೆಯಲ್ಲಿ ಕುದುರೆ ಬಳಸುತ್ತಾರೆ ಎಂದು ರೀ-ಟ್ವೀಟ್ ಮಾಡಿದ್ದಾರೆ.

    ಡಿ. 1ರಂದು ಹಾಗೂ 2ರಂದು ಹಿಂದೂ ಹಾಗೂ ಕ್ರೈಸ್ತ ಸಂಪ್ರದಾಯದಲ್ಲಿ ಮದುವೆಯಾದ ಬಳಿಕ ಪ್ರಿಯಾಂಕ ತಮ್ಮ ಮದುವೆಯ ಫೋಟೋಗಳನ್ನು ಮೊದಲ ಬಾರಿಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮಂಗಳವಾರ ನವದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್‍ನಲ್ಲಿ ಪ್ರಿಯಾಂಕ ಹಾಗೂ ನಿಕ್ ಆರತಕ್ಷತೆ ನಡೆದಿದೆ.

    ಆರತಕ್ಷತೆಯಲ್ಲಿ ಪ್ರಿಯಾಂಕ ಸಿಲ್ವರ್ ಬಣ್ಣದ ಲೆಹೆಂಗಾ ಧರಿಸಿದ್ದರೆ, ನಿಕ್ ಕಪ್ಪು ಬಣ್ಣದ ಉಡುಪನ್ನು ಧರಿಸಿ ಮಿಂಚಿದ್ದಾರೆ. ಇವರಿಬ್ಬರ ಆರತಕ್ಷತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗವಹಿಸಿ ನವಜೋಡಿಯನ್ನು ಶುಭ ಕೋರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸೈನ್ಸ್ ವಿದ್ಯಾರ್ಥಿಗಳಿಗೆ ಬ್ಯಾಡ್ ನ್ಯೂಸ್!

    ಸೈನ್ಸ್ ವಿದ್ಯಾರ್ಥಿಗಳಿಗೆ ಬ್ಯಾಡ್ ನ್ಯೂಸ್!

    ಬೆಂಗಳೂರು: ವಿಜ್ಞಾನದ ವಿದ್ಯಾರ್ಥಿಗಳು ಅಂದರೆ ಸಂಶೋಧನೆ, ಪ್ರಾಕ್ಟಿಕಲ್ ವರ್ಕ್ ಮಾಡೋದು ಸಹಜ. ವಿವಿಧ ಪ್ರಾಣಿಗಳು, ಜಂತುಗಳನ್ನು ಬಳಸಿ ಯಾವಾಗಲು ಲ್ಯಾಬ್‍ಗಳಲ್ಲಿ ಬ್ಯುಸಿಯಾಗಿರುತ್ತಾರೆ. ಆದರೆ ಇದೀಗ ವಿಜ್ಞಾನ ಓದೋ ವಿದ್ಯಾರ್ಥಿಗಳು ಲ್ಯಾಬ್‍ಗಳಿಗೆ ಜೀವಂತ ಪ್ರಾಣಿ ಮತ್ತು ಪಕ್ಷಿ ತರುವಂತಿಲ್ಲ ಎಂದು ಪೇಟಾ ದೂರು ಕೊಟ್ಟಿದೆ.

    ಹೌದು..ಸೈನ್ಸ್ ವಿದ್ಯಾರ್ಥಿಗಳು ಹೆಚ್ಚು ಸಮಯವನ್ನು ಲ್ಯಾಬ್‍ನಲ್ಲೇ ಕಳೆಯುತ್ತಾರೆ. ಇಲಿ, ಜಿರಲೆ ಇಂಥಹ ಸಣ್ಣ ಪುಟ್ಟ ಪ್ರಾಣಿಗಳನ್ನು ಕೊಯ್ದು ಅದರ ದೇಹ ಮತ್ತು ಅಂಗ ರಚನೆ ಬಗ್ಗೆ ಪಾಠ ಕಲಿಯುತ್ತಾರೆ. ಆದರೆ ಈಗ ಸೈನ್ಸ್ ವಿದ್ಯಾರ್ಥಿಗಳು, ಉಪನ್ಯಾಸಕರಿಗೆ ಇದು ಬೇಸರದ ಸುದ್ದಿಯಾಗಿದ್ದು, ಜೀವಂತ ಪ್ರಾಣಿಗಳನ್ನ ತಂದು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೋಧನೆ ಮಾಡುವುದು ಸರಿಯಲ್ಲ ಅಂತ ಪ್ರಾಣಿ ದಯ ಸಂಘ ಪೇಟಾ ಸೇರಿ ಹಲವು ಸಂಘಟನೆಗಳು ಶಿಕ್ಷಣ ಇಲಾಖೆಗೆ ದೂರು ಕೊಟ್ಟಿವೆ.

    ದೂರಿನನ್ವಯ ಶಿಕ್ಷಣ ಇಲಾಖೆ ಪರ್ಯಾಯ ಮಾರ್ಗದ ಮೂಲಕ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪಾಠ ಮಾಡುವಂತೆ ಉಪನ್ಯಾಸಕರಿಗೆ ಸುತ್ತೋಲೆ ಹೊರಡಿಸಿದೆ.

    ಈ ಹಿಂದೆ ವೈಜ್ಞಾನಿಕ ಪ್ರಾಯೋಗಿಕ ತರಗತಿಗಳಲ್ಲಿ ಕಪ್ಪೆ, ಜಿರಳೆ, ಮೀನು ಸೇರಿದಂತೆ ಪಕ್ಷಿಗಳ ದೇಹ ಅಂಗರಚನೆಗೆ ಜೀವಂತ ಪ್ರಾಣಿಗಳನ್ನು ತಂದು ಪಾಠ ಮಾಡಲಾಗುತ್ತಿತ್ತು. ಆದರೆ ಈಗ ಕಂಪ್ಯೂಟರ್, 3ಡಿ ಮಾಡೆಲ್, ವರ್ಚುಯಲ್ ರಿಯಾಲಿಟಿ ಮೂಲಕ ವಿದ್ಯಾರ್ಥಿಗಳಿಗೆ ಜೀವಶಾಸ್ತ್ರವನ್ನು ಬೋಧಿಸಬೇಕಿದೆ. ಆದರೆ ಇದಕ್ಕೆ ವಿರೋಧವೂ ವ್ಯಕ್ತವಾಗುತ್ತಿದೆ ಪಿಯು ಮಂಡಳಿಯ ಉಪ ನಿರ್ದೇಶಕರು ಅಸಾದುಲ್ಲಾ ಖಾನ್ ತಿಳಿಸಿದ್ದಾರೆ.

    ವೈಜ್ಞಾನಿಕ ಕ್ಷೇತ್ರಗಲ್ಲಿ ದಿನಕ್ಕೊಂದು ಸಂಶೋಧನೆಗಳು ನಡೆಯುವ ಈ ಕಾಲದಲ್ಲೂ ಈ ರೀತಿಯ ನಿರ್ಬಂಧ ಹೇರುವುದು ಎಷ್ಟು ಸರಿ ಅನ್ನೋದು ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಪ್ರಶ್ನೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews