Tag: ಪೊನ್ಮುಡಿ

  • ತಮಿಳುನಾಡು| ಪ್ರವಾಹ ಪರಿಸ್ಥಿತಿ ಪರಿಶೀಲಿಸಲು ಬಂದ ಸಚಿವರ ಮೇಲೆ ಕೆಸರೆರಚಿ, ಕಲ್ಲು ತೂರಿ ಜನಾಕ್ರೋಶ

    ತಮಿಳುನಾಡು| ಪ್ರವಾಹ ಪರಿಸ್ಥಿತಿ ಪರಿಶೀಲಿಸಲು ಬಂದ ಸಚಿವರ ಮೇಲೆ ಕೆಸರೆರಚಿ, ಕಲ್ಲು ತೂರಿ ಜನಾಕ್ರೋಶ

    ಚೆನ್ನೈ: ತಮಿಳುನಾಡಿನ (Tamil Nadu) ಪ್ರವಾಹಪೀಡಿತ ಪ್ರದೇಶಗಳ ಪರಿಶೀಲನೆಗೆ ತೆರಳಿದ್ದ ಅರಣ್ಯ ಸಚಿವ ಪೊನ್ಮುಡಿ (Ponmudy) ಮೇಲೆ ಜನರು ಕೆಸರು ಎರಚಿ ಕಲ್ಲು ತೂರಿರುವ ಘಟನೆ ನಡೆದಿದೆ.

    ಅರಣ್ಯ ಸಚಿವ ಪೊನ್ಮುಡಿ, ಅವರ ಪುತ್ರ ಗೌತಮ ಸಿಕಾಮಣಿ ಮತ್ತು ಜಿಲ್ಲಾಧಿಕಾರಿ ಪಳನಿ ಇರುವೆಲ್ಪಟ್ಟು, ಪ್ರವಾಹಪೀಡಿತ ಪ್ರದೇಶಗಳ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದರು. ಅತಿವೃಷ್ಟಿ ಸಮಸ್ಯೆಗೆ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲವೆಂದು ಹತಾಶರಾದ ಸಾರ್ವಜನಿಕರು, ಸಚಿವರು ಮತ್ತು ಅವರ ಪುತ್ರ ಹಾಗೂ ಜಿಲ್ಲಾಧಿಕಾರಿ ಮೇಲೆ ಕೆಸರು ಎರಚಿ ಭಾರಿ ಗಲಾಟೆ ನಡೆಸಿದರು. ಇದನ್ನೂ ಓದಿ: ತಿರುವಣ್ಣಾಮಲೈನಲ್ಲಿ ಭೂಕುಸಿತಕ್ಕೆ 7 ಮಂದಿ ಬಲಿ – ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ

    ಇರುವೇಲ್ಪಟ್ಟು ಪ್ರದೇಶದ ತಿರುಚಿರಾಪಳ್ಳಿ-ಚೆನ್ನೈ ರಸ್ತೆಯಲ್ಲಿ ಜನರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಅರಣ್ಯ ಸಚಿವ ಪೊನ್ಮುಡಿ ಸ್ಥಳಕ್ಕಾಗಮಿಸಿ ಪ್ರತಿಭಟನಾಕಾರರೊಂದಿಗೆ ಚರ್ಚಿಸಿದರು. ಸ್ಥಳದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸದೆ ತಮ್ಮ ವಾಹನದಲ್ಲೇ ಕುಳಿತು ಸಚಿವರು ಮಾತನಾಡಿಸಿದ್ದಕ್ಕೆ ಜನರು ಸಿಟ್ಟಿಗೆದ್ದರು. ಕೆಲವರು ಸಚಿವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ.

    ಸರ್ಕಾರ ಕೇವಲ ಚೆನ್ನೈನತ್ತ ಗಮನಹರಿಸಿ ಇತರೆ ಜಿಲ್ಲೆಗಳನ್ನು ನಿರ್ಲಕ್ಷಿಸಿದೆ. ಹಲವು ಜಿಲ್ಲೆಗಳು ವ್ಯಾಪಕ ಹಾನಿ ಹಾಗೂ ಸಂಕಷ್ಟಕ್ಕೆ ಸಿಲುಕಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಪ್ರವಾಹ ಬಿಕ್ಕಟ್ಟಿನ ಬಗ್ಗೆ ಸರ್ಕಾರ ನಿರ್ಲಕ್ಷ್ಯ ಧೋರಣೆ ಹೊಂದಿದೆ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: Fengal Cyclone| ತಮಿಳುನಾಡು-ಪುದುಚ್ಚೆರಿಯಲ್ಲಿ ಜಲ ಪ್ರಳಯ – ಕೊಚ್ಚಿ ಹೋಯ್ತು ವಾಹನಗಳು

  • ಹಿಂದಿಯಲ್ಲಿ ಮಾತನಾಡುವವರು ಪಾನಿಪೂರಿ ಮಾರುತ್ತಿದ್ದಾರೆ: TN ಸಚಿವ ಪೊನ್ಮುಡಿ

    ಹಿಂದಿಯಲ್ಲಿ ಮಾತನಾಡುವವರು ಪಾನಿಪೂರಿ ಮಾರುತ್ತಿದ್ದಾರೆ: TN ಸಚಿವ ಪೊನ್ಮುಡಿ

    ಚೆನ್ನೈ: ಹಿಂದಿ ಮಾತನಾಡುವವರು ಕೀಳು ಕೆಲಸಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಹಿಂದಿ ಮಾತನಾಡುವವರು ಕೊಯಮತ್ತೂರಿನಲ್ಲಿ ಪಾನಿಪುರಿ ಮಾರುತ್ತಿದ್ದಾರೆ ಎಂದು ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಪೊನ್ಮುಡಿ ಪರೋಕ್ಷವಾಗಿ ಹೇಳಿದ್ದಾರೆ.

    ಕೊಯಮತ್ತೂರಿನ ಭಾರತಿಯಾರ್ ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಪೊನ್ಮುಡಿ ಅವರು, ತಮಿಳು ವಿದ್ಯಾರ್ಥಿಗಳು ಯಾವುದೇ ಭಾಷೆಯನ್ನು ಕಲಿಯಲು ಸಿದ್ಧರಿದ್ದಾರೆ. ಆದರೆ ಹಿಂದಿ ಐಚ್ಛಿಕವಾಗಿರಬೇಕೆ ಹೊರತು ಕಡ್ಡಾಯವಾಗಿರಬಾರದು ಎಂದರು. ಇದೇ ವೇಳೆ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಪ್ರಯೋಜನಕಾರಿ ಅಂಶಗಳನ್ನು ಜಾರಿಗೆ ತರುವುದಾಗಿ ಭರವಸೆ ನೀಡಿದರು. ಆದರೆ ರಾಜ್ಯ ಸರ್ಕಾರವು ಕೇವಲ ದ್ವಿಭಾಷಾ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ಕಾಳಿ ಸ್ವಾಮಿಗೆ ಮಸಿ ಬಳೆದಿದ್ದು ಅಕ್ಷಮ್ಯ ಅಪರಾಧ: ಮುತಾಲಿಕ್

    ಈಗಾಗಲೇ ಅಂತರಾಷ್ಟ್ರೀಯ ಭಾಷೆಯಾದ ಇಂಗ್ಲಿಷ್ ಕಲಿಯುತ್ತಿರುವಾಗ ಹಿಂದಿಯನ್ನು ಏಕೆ ಕಲಿಯಬೇಕು? ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿ ತಮಿಳುನಾಡು ಮುಂಚೂಣಿಯಲ್ಲಿದೆ. ತಮಿಳು ವಿದ್ಯಾರ್ಥಿಗಳು ಯಾವುದೇ ಭಾಷೆಯನ್ನು ಕಲಿಯಲು ಸಿದ್ಧರಿದ್ದಾರೆ. ಆದರೆ, ಹಿಂದಿ ಐಚ್ಛಿಕ ಭಾಷೆಯಾಗಿರಬೇಕೇ ಹೊರತು ಕಡ್ಡಾಯವಲ್ಲ. ಹಿಂದಿಗಿಂತ ಇಂಗ್ಲಿಷ್‍ಗೆ ಹೆಚ್ಚು ಬೆಲೆಯಿದೆ. ಆದರೆ ಹಿಂದಿ ಭಾಷೆಯನ್ನು ಮಾತನಾಡುವವರು ಕೀಳು ಕೆಲಸ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

    ಅದು ಒಂದು ಕಾಲದಲ್ಲಿ ಹಿಂದಿ ಕಲಿತರೆ ಉದ್ಯೋಗ ಸಿಗುತ್ತದೆ ಎಂದು ಹೇಳುತ್ತಿದ್ದರು, ಆದರೆ ಅದು ನಿಜ ನಾ? ಕೊಯಮತ್ತೂರಿನಲ್ಲಿ ಈಗ ಯಾರು ಪಾನಿ ಪುರಿ ಮಾರುತ್ತಿರುವವರನ್ನು ನೋಡಿದ್ದೀರಾ? ಈಗ ಇಂಗ್ಲಿಷ್ ಅಂತಾರಾಷ್ಟ್ರೀಯ ಭಾಷೆಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರಮ್ಯಾಗೆ ಕೋಪ ಇದ್ರೆ ಬೈಯಲಿ ಆದ್ರೆ ಟ್ವೀಟ್‍ನಲ್ಲಿ ಬೇಡ: ನಲಪಾಡ್