Tag: ಪೊಲೀಸ್ ಅಧಿಕಾರಿಗಳು

  • ಪೊಲೀಸ್‌ ವಾಹನ ಡಿಕ್ಕಿಯಾಗಿ ವ್ಯಕ್ತಿ ಸಾವು – ಕುಡಿದು ಚಲಾಯಿಸಿದ್ದ ಇಬ್ಬರು ಪೊಲೀಸರು ಸಸ್ಪೆಂಡ್‌

    ಪೊಲೀಸ್‌ ವಾಹನ ಡಿಕ್ಕಿಯಾಗಿ ವ್ಯಕ್ತಿ ಸಾವು – ಕುಡಿದು ಚಲಾಯಿಸಿದ್ದ ಇಬ್ಬರು ಪೊಲೀಸರು ಸಸ್ಪೆಂಡ್‌

    ನವದೆಹಲಿ: ಕಂಠಪೂರ್ತಿ ಕುಡಿದು ಇಬ್ಬರು ಪೊಲೀಸ್ ಅಧಿಕಾರಿಗಳು ವಾಹನ ಚಲಾಯಿಸಿದ್ದಕ್ಕೆ ವ್ಯಕ್ತಿ ಸಾವನ್ನಪ್ಪಿರುವ ಘಟನೆ ದೆಹಲಿಯ (Delhi) ರಾಮಕೃಷ್ಣ ಆಶ್ರಮ ಮೆಟ್ರೋ ಸ್ಟೇಷನ್ (Ramakrishna Ashram Metro Station) ಬಳಿ ನಡೆದಿದೆ.

    ಮೃತ ವ್ಯಕ್ತಿಯನ್ನು ಗಂಗಾರಾಮ್ ತಿವಾರಿ ಎಂದು ಗುರುತಿಸಲಾಗಿದ್ದು, ಟೀ ಸ್ಟಾಲ್‌ವೊಂದನ್ನು ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ ಸಹಾಯಕ ಸಬ್-ಇನ್ಸ್‌ಪೆಕ್ಟರ್‌ ರವೀಂದ್ರ ಹಾಗೂ ಕಾನ್‌ಸ್ಟೆಬಲ್ ಅರುಣ್ ಅನ್ನು ಅಮಾನತುಗೊಳಿಸಿದ್ದಾರೆ.ಇದನ್ನೂ ಓದಿ:ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ: ಸುದ್ದಿಗೋಷ್ಠಿಯಲ್ಲಿ ರಾಹುಲ್‌ ಗಾಂಧಿ ಗಂಭೀರ ಆರೋಪ

    ಗುರುವಾರ (ಸೆ.18) ಬೆಳಗ್ಗೆ 5ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಈ ಕುರಿತು ಮೃತ ವ್ಯಕ್ತಿಯ ಮಗ ಮಾತನಾಡಿ, ಇಬ್ಬರು ಅಧಿಕಾರಿ ಹಾಗೂ ಓರ್ವ ಮಹಿಳೆಯಿದ್ದ ಪೊಲೀಸ್ ವಾಹನವು ನನ್ನ ತಂದೆಗೆ ಡಿಕ್ಕಿ ಹೊಡೆದಿದೆ. ಅವರು ತುಂಬಾ ಕುಡಿದಿದ್ದರು. ನನ್ನ ತಂದೆ ಫುಟ್‌ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ರ‍್ಯಾಂಪ್ ಮೇಲೆ ವಾಹನ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

    ಘಟನೆ ನಡೆದ ಸ್ಥಳದ ಹತ್ತಿರದಲ್ಲಿಯೇ ಒಂದು ಜಾಗವಿದೆ. ಅವರು ಯಾವಾಗಲೂ ಅಲ್ಲಿ ಕುಡಿಯಲು ಬರುತ್ತಾರೆ. ಅಲ್ಲದೇ ಅವರ ವ್ಯಾನ್‌ನಲ್ಲಿ ಖಾಲಿ ಮದ್ಯದ ಬಾಟಲಿಗಳಿದ್ದವು, ಅಲ್ಲದೇ ಮದ್ಯದ ವಾಸನೆಯೂ ಬರುತ್ತಿತ್ತು ಎಂದು ತಿಳಿಸಿದ್ದಾರೆ.

    ಈ ಕುರಿತು ದೆಹಲಿ ಪೊಲೀಸರು ಮಾಹಿತಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಇಬ್ಬರು ಪೊಲೀಸರ ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು. ಸದ್ಯ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದಿದ್ದಾರೆ.ಇದನ್ನೂ ಓದಿ:ಅಕ್ಕ, ಬಾವನ ಜೊತೆ ಗಲಾಟೆ – ಬಿಗ್‌ ಬಾಸ್‌ ರಂಜಿತ್‌ ಮೇಲೆ ದೂರು ದಾಖಲು

  • ಹೊರಗಡೆ ನಾಯಿಗಳಿದೆ ಎಂದು ಮಕ್ಕಳನ್ನು ಆಚೆ ಬಿಡದೇ ಇರಬೇಕೇ: ಎಚ್.ಕೆ.ಕುಮಾರಸ್ವಾಮಿ

    ಹೊರಗಡೆ ನಾಯಿಗಳಿದೆ ಎಂದು ಮಕ್ಕಳನ್ನು ಆಚೆ ಬಿಡದೇ ಇರಬೇಕೇ: ಎಚ್.ಕೆ.ಕುಮಾರಸ್ವಾಮಿ

    ಹಾಸನ: ಹೊರಗಡೆ ನಾಯಿಗಳು ಇದೆ ಎಂದು ಮಕ್ಕಳನ್ನು ಆಚೆ ಬಿಡದೇ ಇರಬೇಕೇ? ಹಾಗಂತ ಮಕ್ಕಳನ್ನು ತಡೆಯುವುದೋ, ನಾಯಿಗಳನ್ನೋ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮೈಸೂರಿನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣ ಅತ್ಯಂತ ಖಂಡನೀಯವಾದದ್ದು ವೈಯಕ್ತಿಕವಾಗಿ ಪಕ್ಷದ ಪರವಾಗಿ ಉಗ್ರವಾಗಿ ಖಂಡಿಸುತ್ತೇನೆ. ನೈತಿಕತೆ ಇದ್ದರೆ ಗೃಹ ಸಚಿವರು ಪ್ರಕರಣ ಸಂಬಂಧ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.

    ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಯ ಹೊಣೆಯನ್ನು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಹೊರಬೇಕಾಗುತ್ತದೆ. ಪೊಲೀಸ್ ಇಲಾಖೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ದೆಹಲಿಯಲ್ಲಿ ಕೆಲ ವರ್ಷಗಳ ಹಿಂದೆ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣದ ರೀತಿ ನಡೆದಿದೆ. ಈ ಘಟನೆ ರಾಜ್ಯಕ್ಕೆ ಹಾಗೂ ಮೈಸೂರಿಗೆ ದೊಡ್ಡ ಕಪ್ಪುಚುಕ್ಕೆ ಎಂದ ಅವರು ಪ್ರಕರಣ ಸಂಬಂಧ ಪೊಲೀಸರನ್ನು ಗೃಹಸಚಿವರು ಸಮರ್ಥಿಸಿಕೊಳ್ಳುತ್ತಿರುವುದು ಹೇಸಿಗೆ ತರುತ್ತಿದೆ ಅವರ ವೈಯಕ್ತಿಕ ಲಾಭಕ್ಕಾಗಿ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಅವರ ವ್ಯಕ್ತಿತ್ವಕ್ಕೆ ಕಳಂಕ ತರುವಂತಹದ್ದು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:ಅರಗ ಜ್ಞಾನೇಂದ್ರ ನೆಗೆಟಿವ್ ಆಗಿ ಹೇಳಿಕೆ ಕೊಟ್ಟಿಲ್ಲ: ಪೂರ್ಣಿಮಾ ಶ್ರೀನಿವಾಸ್

    ಹೆಣ್ಣುಮಕ್ಕಳು ಸಂಜೆ 7 ಮೇಲೆ ಹೊರಬರಬಾರದು ಎಂದಾದರೆ, ಸಂಜೆ 6:00 ರ ಮೇಲೆ ಹೆಣ್ಣು ಮಕ್ಕಳು ಹೊರ ಬಾರದಂತೆ ಆದೇಶ ಹೊರಡಿಸಲಿ. ಈಗಾಗಲೇ ಪೊಲೀಸ್ ಅಧಿಕಾರಿಗಳನ್ನು ಸರ್ಕಾರ ಅಮಾನತ್ತಿನಲ್ಲಿ ಇಡಬೇಕಿತ್ತು ಘಟನೆ ನಡೆದ ಸ್ಥಳ ನಗರ ಪ್ರದೇಶದಿಂದ ಆರೇಳು ಕಿಲೋಮೀಟರ್ ದೂರದಲ್ಲಿದೆ. ಇಲ್ಲಿ ಪೊಲೀಸರ ಗಸ್ತು ಮಾಡುವುದು ಕಷ್ಟಕರವಲ್ಲ ಎಂದಿದ್ದಾರೆ.

    ಈ ಘಟನೆಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕುಡಿದು ತಿಂದು ಅನಾಗರಿಕವಾಗಿ ವರ್ತಿಸುತ್ತಿದ್ದಾರೆ. ಪೊಲೀಸರು ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಹಾಗೂ ಬಿಜೆಪಿ ಸರ್ಕಾರ ಬಂದ ಮೇಲೆ ದಲಿತರು ಮಹಿಳೆಯರು ಮಕ್ಕಳು ಅಸಹಾಯಕರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿದೆ. ನಿರ್ಭಯಾ ಪ್ರಕರಣದಲ್ಲಿ ದೆಹಲಿ ಸರ್ಕಾರ ಹೇಗೆ ವಿಶೇಷ ನ್ಯಾಯಾಲಯ ಸ್ಥಾಪಿಸಿ ಶಿಕ್ಷೆ ನೀಡಿತು. ಅದೇ ರೀತಿ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ:ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

  • ಬಂಧಿಸಲು ಹೋದಾಗ ಕ್ರಿಮಿನಲ್ ಗ್ಯಾಂಗ್‍ನಿಂದ ಫೈರಿಂಗ್- 8 ಮಂದಿ ಪೊಲೀಸರು ದುರ್ಮರಣ

    ಬಂಧಿಸಲು ಹೋದಾಗ ಕ್ರಿಮಿನಲ್ ಗ್ಯಾಂಗ್‍ನಿಂದ ಫೈರಿಂಗ್- 8 ಮಂದಿ ಪೊಲೀಸರು ದುರ್ಮರಣ

    ಕಾನ್ಪುರ: ಉತ್ತರಪ್ರದೇಶದ ಕಾನ್ಪುರದಲ್ಲಿ 8 ಮಂದಿ ಪೊಲೀಸರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಡಿವೈಎಸ್ಪಿ, ಮೂವರು ಸಬ್ ಇನ್ಸ್ ಪೆಕ್ಟರ್‍ಗಳು ಹಾಗೂ ನಾಲ್ಕು ಮಂದಿ ಕಾನ್ಸ್ ಸ್ಟೇಬಲ್ ಗಳನ್ನು ಕಾನ್ಪುರದ ಡಿಕ್ರು ಗ್ರಾಮದಲ್ಲಿ ಕ್ರಿಮಿನಲ್ ಗ್ಯಾಂಗ್ ಹತ್ಯೆ ಮಾಡಿದೆ. ಈ ಘಟನೆ ಉತ್ತರಪ್ರದೇಶ ರಾಜಧಾನಿ ಲಕ್ನೋದಿಂದ 150 ಕಿ.ಮಿ ದೂರದಲ್ಲಿ ನಡೆದಿದೆ.

    ಮೃತರನ್ನು ಸಿಒ ದೇವೇಂದ್ರ ಕುಮಾರ್ ಮಿಶ್ರಾ, ಎಸ್‍ಒ ಮಹೇಶ್ ಯಾದವ್, ಅನೂಪ್ ಕುಮಾರ್, ಸಬ್ ಇನ್ಸ್ ಪೆಕ್ಟರ್ ನೆಬುಲಾಲ್, ಕಾನ್ ಸ್ಟೇಬಲ್ ಸುಲ್ತಾನ್ ಸಿಂಗ್, ರಾಹುಲ್, ಜಿತೇಂದ್ರ ಹಾಗೂ ಬಬ್ಲು ಎಂದು ಗುರುತಿಸಲಾಗಿದೆ.

    ಮೂರು ಪೊಲೀಸ್ ಠಾಣೆಯ ಈ ಪೊಲೀಸರ ತಂಡ ಗ್ರಾಮಕ್ಕೆ ತೆರಳಿ 60 ಪ್ರಕರಣ ದಾಖಲಾಗಿದ್ದ ವಿಕಾಸ್ ದುಬೆಯನ್ನು ಬಂಧಿಸಲು ತೆರಳಿತ್ತು. ಇತ್ತೀಚೆಗೆ ವಿಕಾಸ್ ವಿರುದ್ಧ ಕೊಲೆ ಯತ್ನ ಪ್ರಕರಣವೊಂದು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲಿಸರ ತಂಡ ಗ್ರಾಮಕ್ಕೆ ದಾಳಿ ನಡೆಸಿತ್ತು.

    ಆತನನ್ನು ಬಂಧಿಸುವುದೇ ಪೊಲೀಸರ ಉದ್ದೇಶವಾಗಿತ್ತು. ಆದರೆ ಈ ವೇಳೆ ಆರೋಪಿ ಬೆಂಬಲಿಗರು ಹೊಂಚು ಹಾಕಿ ಮೂರು ಕಡೆಗಳಿಂದ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಒಟ್ಟಿನಲ್ಲಿ ಗ್ಯಾಂಗ್ ಪ್ಲಾನ್ ಮಾಡಿಯೇ ಈ ಕೊಲೆಗಳನ್ನು ನಡೆಸಿದ್ದಾರೆ ಎಂದು ಕಾನ್ಪುರದ ಪೊಲೀಸ್ ಅಧಿಕಾರಿ ದಿನೇಶ್ ಕುಮಾರ್ ತಿಳಿಸಿದ್ದಾರೆ.

    ಪೊಲೀಸರು ಗ್ರಾಮಕ್ಕೆ ತೆರಳಿರುವ ಸುಳಿವು ಸಿಗುತ್ತಿದ್ದಂತೆಯೇ ದುಬೆ ಬೆಂಬಲಿಗರು ರಸ್ತೆ ಬ್ಲಾಕ್ ಮಾಡಿದ್ದಾರೆ. ಅಲ್ಲದೆ ಪೊಲೀಸರು ಗ್ರಾಮದೊಳಗೆ ತೆರಳುತ್ತಿದ್ದಂತೆಯೇ ಇತ್ತ ರಸ್ತೆ ಬ್ಲಾಕ್ ಮಾಡಿದ್ದಾರೆ. ನಂತರ ಪೊಲೀಸರ ಮೇಲೆ ಗುಂಡಿನ ಸುರಿಮಳೆಗೈದಿದ್ದಾರೆ ಎಂದು ಅಲ್ಲಿನ ಡಿಜಿಪಿ ಹೇಳಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿ, ತನಿಖೆಗೆ ಆದೇಶಿಸಿದ್ದಾರೆ.

  • ಪುಣೆಯಲ್ಲಿ ಸಾವನ್ನಪ್ಪಿದ ಮಂಡ್ಯದ ಟೆಕ್ಕಿ – ಕರ್ನಾಟಕ, ಮಹರಾಷ್ಟ್ರ ಗಡಿಯಲ್ಲಿ ಅಂತ್ಯಕ್ರಿಯೆ

    ಪುಣೆಯಲ್ಲಿ ಸಾವನ್ನಪ್ಪಿದ ಮಂಡ್ಯದ ಟೆಕ್ಕಿ – ಕರ್ನಾಟಕ, ಮಹರಾಷ್ಟ್ರ ಗಡಿಯಲ್ಲಿ ಅಂತ್ಯಕ್ರಿಯೆ

    ಬೆಳಗಾವಿ(ಚಿಕ್ಕೋಡಿ): ಪುಣೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದ ಮಂಡ್ಯ ಜಿಲ್ಲೆಯ ಮಹಿಳೆಯ ಅಂತ್ಯಸಂಸ್ಕಾರ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

    ಪುಣೆಯಲ್ಲಿ ಟೆಕ್ಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಂಡ್ಯ ಜಿಲ್ಲೆಯ ಮುದ್ದೂರು ತಾಲೂಕಿನ ತೈಲೂರು ಗ್ರಾಮದ ನಿವಾಸಿ ಸೌಮ್ಯ ಟಿ.ಎ ಎರಡು ದಿನಗಳ ಹಿಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತ ದೇಹವನ್ನು ಆಕೆಯ ಪತಿ ಶರತ್ ತನ್ನೂರಿಗೆ ತೆಗೆದುಕೊಂದು ಬರಲು ಮಂಡ್ಯ ಜಿಲ್ಲಾಡಳಿತಕ್ಕೆ ಅನುಮತಿ ಕೇಳಿದ್ದಾರೆ. ಆದರೆ ಮೃತ ಸೌಮ್ಯಾಳನ್ನು ಕೊರೊನಾ ವೈರಸ್ ಟೆಸ್ಟ್ ಗೆ ಒಳಪಡಿಸದ ಹಿನ್ನೆಲೆ ಮಂಡ್ಯ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಆದರೂ ಪತಿ ಶರತ್ ಪತ್ನಿ ಮೃತದೇಹವನ್ನು ಕರ್ನಾಟಕ ಮಹಾರಾಷ್ಟ್ರ ಗಡಿಯವರೆಗೆ ತೆಗೆದುಕೊಂಡು ಬಂದಿದ್ದರು.

    ಮಂಡ್ಯ ಜಿಲ್ಲಾಡಳಿತ ಅನುಮತಿ ನೀಡದ ಹಿನ್ನೆಲೆ ಗಡಿಯಲ್ಲೂ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡಿಲ್ಲ. ಇದರಿಂದ ಭಾನುವಾರ ಪತಿ ಶರತ್, ಮಗಳು ಯುಕ್ತಾ(5) ಹಾಗೂ ನಿವೃತ್ತ ಪಿಎಸ್‍ಐ ತಂದೆ ಅಪ್ಪಯ್ಯ ಆಕಡೆ ಪುನಃ ಪುಣೆಗೂ ಹೋಗಲು ಆಗದೆ ಸುಮಾರು 24 ಘಂಟೆಗಳ ಕಾಲ ರಾಜ್ಯ ಪ್ರವೇಶ ಅನುಮತಿಗಾಗಿ ಕಾದು ಕುಳಿತ್ತಿದ್ದರು. ಘಟನೆಯ ಸಂಪೂರ್ಣ ಮಾಹಿತಿ ತಿಳಿದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ, ಚಿಕ್ಕೋಡಿ ಉಪವಿಭಾಗಾಧಿಕಾರಿ ರವೀಂದ್ರ ಕರಿಲಿಂಗಣ್ಣವರ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರ ನೆರವಿಗೆ ನಿಂತಿರು.

    ರಾತ್ರಿ 12 ಘಂಟೆಗೆ ಸ್ವತಃ ಅಧಿಕಾರಿಗಳು ಕುಟುಂಬಸ್ಥರ ಜೊತೆ ಸೇರಿ ಚೆಕ್‍ಪೋಸ್ಟ್ ಬಳಿಯ ಸರ್ಕಾರಿ ಗೋಮಾಳದಿಂದ ಕಟ್ಟಿಗೆ ವ್ಯವಸ್ಥೆ ಮಾಡಿ, ಧೂದಗಂಗಾ ನದಿ ದಡದಲ್ಲಿ ಮೃತ ಸೌಮ್ಯರ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಕುಟುಂಬಸ್ಥರ ಜೊತೆ ಸೇರಿ ಸೌಮ್ಯ ಆತ್ಮಕ್ಕೆ ಮೋಕ್ಷ ಕೊಡುವ ಕೆಲಸವನ್ನು ಮಾಡಿದ್ದಾರೆ. ಕುಟುಂಬಸ್ಥರ ಕಷ್ಟದ ಸಮಯದಲ್ಲಿ ಮಾನವೀಯತೆ ಮೆರೆದ ಅಧಿಕಾರಿಗಳ ಕಾರ್ಯವೈಖರಿಗೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.

  • ಐಎಂಎ ವಂಚನೆ ಪ್ರಕರಣ: 200 ಕೋಟಿಯ ಫಾರ್ಮ್ ಹೌಸ್, ಬಂಗಲೆಗಳು ಪತ್ತೆ!

    ಐಎಂಎ ವಂಚನೆ ಪ್ರಕರಣ: 200 ಕೋಟಿಯ ಫಾರ್ಮ್ ಹೌಸ್, ಬಂಗಲೆಗಳು ಪತ್ತೆ!

    ಬೆಂಗಳೂರು: ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳಿಗೆ ಈಗ ನಡುಕ ಶುರುವಾಗಿದೆ.

    ಐಎಂಎ ಬಗ್ಗೆ ವಿಚಾರಣೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಸೇರಿ 13 ಮಂದಿಯ ಮೇಲೆ ಎಫ್‍ಐಆರ್ ಮೇಲೆ ದಾಖಲು ಮಾಡಿದ್ದಾರೆ. ಸಿಬಿಐ ಅಧಿಕಾರಿಗಳು ಡಿಸಿ ವಿಜಯ್ ಶಂಕರ್ ಮನೆ ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಬೇನಾಮಿ ಆಸ್ತಿ ಪತ್ರ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

    ಬೇನಾಮಿ ಆಸ್ತಿಯ ಹುಡುಕಿ ಹೊರಟ ಸಿಬಿಐ ಅಧಿಕಾರಿಗಳಿಗೆ ಶಾಕ್ ದೊರೆತಿದ್ದು, ಚಿತ್ತೂರಿನಲ್ಲಿ ಬೇನಾಮಿ ಪ್ರಾಪರ್ಟಿ ಪತ್ತೆಯಾಗಿದೆ. ಅಲ್ಲದೆ 200 ಕೋಟಿಯ ಫಾರ್ಮ್ ಹೌಸ್, ಬಂಗಲೆಗಳು ಕೂಡ ಪತ್ತೆಯಾಗಿದೆ.

    ಡಿಸಿಪಿ ಮನೆಯಲ್ಲಿ ಐಎಂಎಗೆ ಸಂಬಂಧಿಸಿದ ಡೈರಿ ಕೂಡ ಸಿಕ್ಕಿದೆ ಎನ್ನುವ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಡೈರಿಯಲ್ಲಿ ಎಂಬತ್ತೆರಡು ಕೋಟಿಯ ಡೀಲ್ ಕಹಾನಿ ಇದ್ದು, ಐಎಂಎಯಿಂದ ಆರು ಬಾರಿ ಪಡೆದ ಹಣದ ಲೆಕ್ಕಾಚಾರ ಬರೆದಿಡಲಾಗಿದೆ.

    ಇದೇ ರೀತಿ ಐಜಿ ಮನೆಯಲ್ಲೂ ಐಎಂಎ ಕಂಪೆನಿಯಿಂದ ಹಣ ಪಡೆದಿದ್ದ ದಾಖಲೆಗಳು ಪತ್ತೆಯಾಗಿದೆ. ಹಾಗಾಗಿ ಇದೀಗ 8 ಪೊಲೀಸ್ ಅಧಿಕಾರಿಗಳ ಮೇಲೆ ಸಿಬಿಐ ನೋಂದಣಿ ಪ್ರಮಾಣ ಪತ್ರ (ಆರ್ ಸಿ) ದಾಖಲಿಸಿಕೊಂಡಿದೆ.

    ಯಾರ ಮೇಲೆ ದಾಳಿ?
    ನವೆಂಬರ್ 8ರ ಶುಕ್ರವಾರದಂದು ಸಿಐಡಿ ಆರ್ಥಿಕ ಅಪರಾಧ ವಿಭಾಗದ ಐಜಿ ಹೇಮಂತ್ ನಿಂಬಾಳ್ಕರ್, ಸಿಐಡಿ ಪೊಲೀಸ್ ಉಪವರಿಷ್ಠಾಧಿಕಾರಿ ಇ.ಬಿ. ಶ್ರೀಧರ್, ಪೂರ್ವ ವಲಯ ಡಿಸಿಪಿ ಅಜಯ್ ಹಿಲೋರಿ, ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣಾಧಿಕಾರಿ ಎಂ. ರಮೇಶ್, ಕಮರ್ಷಿಯಲ್ ಸ್ಟ್ರೀಟ್ ಠಾಣೆಯ ಉಪನಿರೀಕ್ಷಕ ಗೌರಿ ಶಂಕರ್, ಬೆಂಗಳೂರು ಉತ್ತರ ಉಪವಿಭಾಗದ ಎಸಿಪಿ ಹಾಗೂ ಕೆಪಿಐಡಿ ಕಾಯ್ದೆಯ ಅಧಿಕಾರಿ ಎಲ್.ಸಿ. ನಾಗರಾಜ್, ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ವಿಜಯ್ ಶಂಕರ್, ಉತ್ತರ ಉಪವಿಭಾಗದ ಲೆಕ್ಕಿಗ ಮಂಜುನಾಥ್, ಬಿಡಿಎ ಮುಖ್ಯ ಎಂಜಿನಿಯರ್ ಪಿಡಿ ಕುಮಾರ್, ಬೆಂಗಳೂರು ಉತ್ತರ ವಿಭಾಗದ ಲೆಕ್ಕಿಗ ಮಂಜುನಾಥ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು.

    ಅಜಯ್ ಹಿಲೋರಿ ಮೂಲತಃ ಉತ್ತರ ಪ್ರದೇಶದ ಮೀರತ್‍ನವರಾಗಿದ್ದು ಅವರ ಅಲ್ಲಿನ ನಿವಾಸದ ಮೇಲೆ ದಾಳಿ ನಡೆದಿದೆ. ದಾಳಿ ಮುಗಿಸಿ ಪಂಚನಾಮೆ ಮಾಡಿ ಸಿಬಿಐ ಅಧಿಕಾರಿಗಳು ತೆರಳಿದ್ದರು. ಸಿಬಿಐ ವಿಚಾರಣೆ ಸಮಯದಲ್ಲಿ ಐಎಂಐ ಮುಖ್ಯಸ್ಥ ಮನ್ಸೂರ್ ಖಾನ್ ಹೇಳಿಕೆಯ ಆಧಾರದ ಮೇಲೆ ಈ ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆದಿದೆ. ಸರ್ಕಾರಿ ಅಧಿಕಾರಿಗಳು ತನಿಖೆಯ ಸಂದರ್ಭದಲ್ಲಿ ಐಎಂಎ ಪರವಾಗಿ ವರದಿ ನೀಡಲು ಸಹಕರಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಸಿಬಿಐ ಹೇಳಿತ್ತು.

    ಯಾರ ಮೇಲೆ ಏನು ಆರೋಪ?
    ನಿಂಬಾಳ್ಕರ್- ಹಣ ಪಡದು ಕ್ಲೀನ್‍ಚಿಟ್ ಕೊಟ್ಟಿದ್ಧಾರೆ ಎಂಬ ಆರೋಪ
    ಅಜಯ್ ಹಿಲೋರಿ- ಪೂರ್ವ ವಲಯ ಡಿಸಿಪಿಯಾಗಿದ್ದಾಗ 20 ಕೋಟಿ ಹಣ 25 ಕೆಜಿ ಚಿನ್ನ ಪಡೆದಿದ್ದಾರೆಂಬ ಆರೋಪ
    ಶ್ರೀಧರ್- ಸಿಐಡಿಯಲ್ಲಿ ಕ್ಲೀನ್‍ಚಿಟ್ ಕೊಟ್ಟ ತನಿಖಾಧಿಕಾರಿ
    ಎಸಿಪಿ ರಮೇಶ್- ಪ್ರಕರಣ ದಾಖಲಿಸಿಕೊಳ್ಳದೇ ಪರವಾಗಿ ಕೆಲಸ ಮಾಡಿದ್ದು
    ರಮೇಶ್ – ಪ್ರಕರಣ ದಾಖಲಿಸಿಕೊಳ್ಳದೇ ಪರವಾಗಿ ಕೆಲಸ ಮಾಡಿದ್ದು

    ಗೌರಿಶಂಕರ್ – ಪ್ರಕರಣ ದಾಖಲಿಸಿಕೊಳ್ಳದೇ ಪರವಾಗಿ ಕೆಲಸ ಮಾಡಿದ್ದು
    ಎಸಿ ನಾಗರಾಜ್ – ಸರ್ಕಾರಿ ಇಲಾಖೆಯಲ್ಲಿ ಕ್ಲೀನ್‍ಚಿಟ್ ಕೊಡೊಕೆ 5 ಕೋಟಿ ಪಡೆದಿದ್ದಾರೆಂಬ ಆರೋಪ
    ವಿಜಯ್‍ಕುಮಾರ್ – 3 ಕೋಟಿ ಪಡೆದಿದ್ದಾರೆಂಬ ಆರೋಪ
    ಮಂಜುನಾಥ್ – 2 ಕೋಟಿ ಪಡೆದಿದ್ದಾರೆಂಬ ಆರೋಪ

  • ರಾಸಲೀಲೆ ಕೇಸ್‍ನಲ್ಲಿ ಸಿಕ್ಕಿಬಿದ್ದಿದ್ದ ಸ್ವಾಮಿಗೆ ಪೊಲೀಸ್ ಅಧಿಕಾರಿಗಳಿಂದ ಸನ್ಮಾನ

    ರಾಸಲೀಲೆ ಕೇಸ್‍ನಲ್ಲಿ ಸಿಕ್ಕಿಬಿದ್ದಿದ್ದ ಸ್ವಾಮಿಗೆ ಪೊಲೀಸ್ ಅಧಿಕಾರಿಗಳಿಂದ ಸನ್ಮಾನ

    ಕೊಪ್ಪಳ: ಮಹಿಳೆಯೊಂದಿಗೆ ರಾಸಲೀಲೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಕಾಮಿ ಸ್ವಾಮಿಗೆ ಪೊಲೀಸ್ ಇಲಾಖೆ ಅಧಿಕಾರಿಗಳು ಸನ್ಮಾಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಗಂಗಾವತಿಯ ಕಲ್ಮಠದ ಕೊಟ್ಟೂರು ಮಠಕ್ಕೆ ಪೊಲೀಸ್ ಅಧಿಕಾರಿಗಳು ದೀಪಾವಳಿಯ ಹಬ್ಬದಂದು ಬಂದಿದ್ದರು. ಈ ವೇಳೆ ಮಠದ ಕಾಮಿ ಸ್ವಾಮಿಯನ್ನು ಸನ್ಮಾನಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಈ ನಡೆಯ ಬಗ್ಗೆ ಸಾರ್ವಜನಿಕರಿಂದ ತೀವ್ರ ಅಸಮಾಧಾನ ಎದುರಾಗಿದೆ.

    ಕೊಟ್ಟೂರು ಮಠದ ಸ್ವಾಮಿ ಎರಡು ವರ್ಷಗಳ ಹಿಂದೆ ಖಾಸಗಿ ಹೋಟೆಲೊಂದರಲ್ಲಿ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ್ದರು. ಅಂದಿನಿಂದ 6 ತಿಂಗಳುಗಳ ಕಾಲ ನಾಪತ್ತೆಯಾಗಿದ್ದ ಕಾಮಿ ಸ್ವಾಮಿ ಅನೇಕ ರಾಜಕೀಯ ಪ್ರಭಾವ ಬಳಸಿಕೊಂಡು ಮತ್ತೆ ಮಠಕ್ಕೆ ಬಂದಿದ್ದರು. ಇದನ್ನೂ ಓದಿ: ಕಲ್ಮಠದ ಕೊಟ್ಟೂರು ಸ್ವಾಮಿಯ ಕಾಮಪುರಾಣ ಬಯಲು- ಟೀಚರ್, ಅಡುಗೆ ಮಹಿಳೆ, ಲೈಬ್ರೇರಿಯನ್ ಯಾರನ್ನೂ ಬಿಟ್ಟಿಲ್ಲ ಈ ಸ್ವಾಮಿ

    ಕಾಮಿ ಸ್ವಾಮಿಯನ್ನ ಸನ್ಮಾನಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪೊಲೀಸ್ ಇಲಾಖೆ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿಬರುತ್ತಿವೆ.

    https://www.youtube.com/watch?v=utpp_AldyJw

  • ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣ: ಪಿಎಸ್‍ಐ, ಪೇದೆ ಅಮಾನತು

    ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣ: ಪಿಎಸ್‍ಐ, ಪೇದೆ ಅಮಾನತು

    ರಾಯಚೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣದ ಸಂಬಂಧ ಠಾಣೆಯ ಪಿಎಸ್‍ಐ ಹಾಗೂ ಪೇದೆಯನ್ನು ಅಮಾನತುಗೊಳಿಸಲಾಗಿದೆ.

    ನಗರದ ಮಹಿಳಾ ಪೊಲೀಸ್ ಠಾಣೆಯ ಪಿಎಸ್‍ಐ ಬಿ.ಬಿ.ಮರಿಯಮ್ ಹಾಗೂ ಸದರ್ ಬಜಾರ್ ಠಾಣೆಯ ಪೇದೆ ಆಂಜನೇಯ ಅಮಾನತುಗೊಂಡಿದ್ದಾರೆ. ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಕಿಶೋರಬಾಬು ಆದೇಶ ಹೊರಡಿಸಿದ್ದಾರೆ.

    ವಿದ್ಯಾರ್ಥಿನಿಯ ಪೋಷಕರು ಮಗಳು ನಾಪತ್ತೆಯಾದ ಕುರಿತು ದೂರು ದಾಖಲಿಸಲು ಏಪ್ರಿಲ್ 13ರಂದು ಮಹಿಳಾ ಪೊಲೀಸ್ ಠಾಣೆಗೆ ಬಂದಿದ್ದರು. ಆದರೆ ಪಿಎಸ್‍ಐ ಬಿ.ಬಿ.ಮರಿಯಮ್ ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದರು. ಹೀಗಾಗಿ ಅವರನ್ನು ಅಮಾನತುಗೊಳಿಸಲಾಗಿದೆ.

    ಬಂಧಿತ ಆರೋಪಿ ಸುದರ್ಶನ್ ಯಾದವ್‍ನ ಮಾವ, ಸದರ್ ಬಜಾರ್ ಠಾಣೆಯ ಪೇದೆ ಆಂಜನೇಯ ಮೃತಳ ಮೊಬೈಲ್ ಹಾಗೂ ವಾಹನದ ಕೀಯನ್ನು ಪೋಷಕರಿಗೆ ಮುಂಚಿತವಾಗಿಯೇ ಹಿಂತಿರುಗಿಸಿದ್ದ. ಅಷ್ಟೇ ಅಲ್ಲದೇ ಪೇದೆ ಆಂಜನೇಯ ಅವರಿಂದ ಆರೋಪಿಯ ರಕ್ಷಣೆಯಾಗುವ ಸಾಧ್ಯತೆ ಇದೆ ಎಂದು ಮೃತ ವಿದ್ಯಾರ್ಥಿನಿಯ ಪೋಷಕರು ದೂರಿದ್ದರು. ಹೀಗಾಗಿ ಅಮಾನತುಗೊಳಿಸಲಾಗಿದೆ.

    ವಿದ್ಯಾರ್ಥಿನಿಯ ಮೃತ ದೇಹವು ಕೊಳೆತ ಸ್ಥಿತಿಯಲ್ಲಿ ಏಪ್ರಿಲ್ 16 ರಂದು ಪತ್ತೆಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ್ದ ನೇತಾಜಿ ನಗರ ಪೊಲೀಸ್ ಠಾಣೆ ಅಧಿಕಾರಿಗೆ ಡೆತ್‍ನೋಟ್ ಸಿಕ್ಕಿತ್ತು. ಹೀಗಾಗಿ ಇದು ಆತ್ಮಹತ್ಯೆ ಎಂದು ಪ್ರಕರಣ ದಾಖಲಿಸಿದ್ದರು. ಬಳಿಕ ಮೃತ ಮಧು ತಾಯಿ ಇದು ಆತ್ಮಹತ್ಯೆಯಲ್ಲ. ನನ್ನ ಮಗಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ದೂರು ದಾಖಲಿಸಿದ್ದರು.

    ವಿದ್ಯಾರ್ಥಿನಿ ಸಾವು ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿ ಸುದರ್ಶನ್ ಯಾದವ್ ನನ್ನು ಸಿಐಡಿ ಪೊಲೀಸರು ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಜಿಲ್ಲಾ ಕಾರಾಗೃಹದಿಂದ ನಾಲ್ಕು ದಿನಗಳ ಮಟ್ಟಿಗೆ ವಶಕ್ಕೆ ಪಡೆದಿರುವ ಸಿಐಡಿ ಅಧಿಕಾರಿಗಳು ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ. ಸಿಐಡಿ ಎಸ್.ಪಿ.ಶರಣಪ್ಪ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಮಂಗಳವಾರ ಮೃತ ವಿದ್ಯಾರ್ಥಿನಿಯ ಪೋಷಕರು ಹಾಗೂ ಆರೋಪಿಯ ಸ್ನೇಹಿತರ ವಿಚಾರಣೆ ನಡೆಸಿ ಮಾಹಿತಿ ಪಡೆದಿದ್ದಾರೆ. ಇಂದು ಆರೋಪಿಯನ್ನ ರಿಮ್ಸ್ ಆಸ್ಪತ್ರೆಯಲ್ಲಿ ಪುನಃ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ವಿಚಾರಣೆ ಮುಂದುವರಿಸಿದ್ದಾರೆ.

    ವಿದ್ಯಾರ್ಥಿನಿ ಸಾವು ಪ್ರಕರಣದ ಹಿನ್ನೆಲೆ ನ್ಯಾಯಕ್ಕಾಗಿ ರಾಯಚೂರಿನಲ್ಲಿ ಹೋರಾಟಗಳು ನಿರಂತರವಾಗಿ ನಡೆದಿವೆ. ನಗರದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಇಲ್ಲಿನ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಮೃತ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.

    ಯಾವುದೇ ಲೋಪದೋಷಕ್ಕೆ ಅವಕಾಶವಿಲ್ಲ. ತಪ್ಪಿತಸ್ಥರನ್ನ ಅತ್ಯಂತ ಕಠಿಣ ಶಿಕ್ಷೆಗೆ ಒಳಪಡಿಸಲಾಗುತ್ತದೆ. ಅವಶ್ಯಕತೆಯಿದ್ದರೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬಹುದು, ಹೋರಾಟಕ್ಕೆ ಸರ್ಕಾರ ಸ್ಪಂದಿಸುತ್ತದೆ ಎಂದು ಸಚಿವ ನಾಡಗೌಡ ಪ್ರತಿಕ್ರಿಯಿಸಿದರು.

  • ದೇಶ ದ್ರೋಹಿಗಳ ಹಿತ ಕಾಯುವ ಪೊಲೀಸ್ ಅಧಿಕಾರಿಗಳು ಪಾಕಿಸ್ತಾನಕ್ಕೆ ಹೋಗಲಿ: ಸುರೇಶ್ ಅಂಗಡಿ

    ದೇಶ ದ್ರೋಹಿಗಳ ಹಿತ ಕಾಯುವ ಪೊಲೀಸ್ ಅಧಿಕಾರಿಗಳು ಪಾಕಿಸ್ತಾನಕ್ಕೆ ಹೋಗಲಿ: ಸುರೇಶ್ ಅಂಗಡಿ

    ಬೆಳಗಾವಿ: ಪಾಕಿಸ್ತಾನ ಜಿಂದಾಬಾದ್ ಅನ್ನುವರನ್ನ ಗುಂಡಿಕ್ಕಿ ಕೊಲ್ಲಬೇಕು. ಗುಂಡಿಕ್ಕಿ ಕೊಲ್ಲಲು ಆಗದ ಪೊಲೀಸ್ ಅಧಿಕಾರಿಗಳು ಇಲ್ಲಿ ಇರೋದು ಬೇಡ. ದೇಶ ವಿರೋಧಿಗಳ ಹಿತ ಕಾಯುವ ಪೊಲೀಸ್ ಅಧಿಕಾರಿಗಳು ಬೇಕಾದ್ರೆ ಪಾಕಿಸ್ತಾನಕ್ಕೆ ಹೋಗಲಿ ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ಕಿಡಿಕಾರಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಮದುರ್ಗ ಮಾಜಿ ಶಾಸಕ ಅಶೋಕ ಪಟ್ಟಣ ಅವರ ಆಪ್ತ ಶಫಿ ಬೆಣ್ಣಿ ದೇಶ ವಿರೋಧಿ ಪೋಸ್ಟ್ ವಿಚಾರ ಪ್ರತಿಕ್ರಿಯಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಪರ ಕೆಲಸ ಮಾಡುತ್ತಿದ್ದಾರೆ. ಒಂದು ಗಂಟೆಯಲ್ಲಿ ದೇಶ ವಿರೋಧಿ ಪೋಸ್ಟ್ ಹಾಕಿದವರನ್ನ ಪೊಲೀಸರು ಬಂಧಿಸಬೇಕು. ಇಲ್ಲವಾದಲ್ಲಿ ಬೆಳಗಾವಿ ಎಸ್ ಪಿ ವರ್ಗಾವಣೆ ಮಾಡಿಕ್ಕೊಂಡು ಹೋಗಬೇಕು. ಪೊಲೀಸರು ಕಾಂಗ್ರೆಸ್ ಕೈ ಗೊಂಬೆಯಾಗಿದ್ದಾರೆ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ:ಮಾಜಿ ಶಾಸಕನ ಬಲಗೈ ಬಂಟನಿಂದ ದೇಶದ್ರೋಹಿ ಪೋಸ್ಟ್

    ಬಿಜೆಪಿ ಕಾರ್ಯಕರ್ತರು ಖಡ್ಗದಿಂದ ಕೇಕ್ ಕಟ್ ಮಾಡಿದರೆ ಸಾಕು ಅರೆಸ್ಟ್ ಮಾಡ್ತೀರಿ. ಕಾಂಗ್ರೆಸ್ ಮಾಜಿ ಶಾಸಕನ ಆಪ್ತ ಪಾಕಿಸ್ತಾನ ಜಿಂದಾಬಾದ್ ಅಂದರೂ ಅರೆಸ್ಟ್ ಮಾಡುತ್ತಿಲ್ಲ. ದೇಶ ದ್ರೋಹಿಗಳಿಗೆ ಬೆಂಬಲಿಸುವ ಪೊಲೀಸ್ ಅಧಿಕಾರಿಗಳು ಪಾಕಿಸ್ಥಾನಕ್ಕೆ ಹೋಗಲಿ, ಭಾರತದಲ್ಲಿ ಇರೋದು ಬೇಡ ಎಂದು ಬೆಳಗಾವಿ ಪೊಲೀಸ್ ವರಿಷ್ಠರ ಬಗ್ಗೆ ಸಂಸದ ಅಂಗಡಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸತ್ತ ಸೋಗಿನಲ್ಲಿ ಐವರು ಯೋಧರನ್ನು ಕೊಂದ ಉಗ್ರ

    ಸತ್ತ ಸೋಗಿನಲ್ಲಿ ಐವರು ಯೋಧರನ್ನು ಕೊಂದ ಉಗ್ರ

    ಶ್ರೀನಗರ: ಇಡೀ ದೇಶಕ್ಕೆ ದೇಶವೇ ಅಭಿನಂದನ್ ಸ್ವಾಗತಕ್ಕೆ ಜಾತಕ ಪಕ್ಷಿಯಂತೆ ಕಾದು ಕುಳಿತಿದ್ದರು. ಆದರೆ ಕಣಿವೆ ನಾಡಿನಲ್ಲಿ ಉಗ್ರರು ತಮ್ಮ ಕುತಂತ್ರಿ ಬುದ್ಧಿ ಮುಂದುವರಿಸಿದ್ದು, ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ನಡೆದ ಎನ್‍ಕೌಂಟರ್‍ನಲ್ಲಿ ಐವರು ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದಾರೆ.

    ಉಗ್ರರು ಮತ್ತು ಸೇನಾಪಡೆಗಳ ನಡುವೆ ಗಡಿ ನಿಯಂತ್ರಣ ರೇಖೆಯ ಕುಪ್ವಾರದ ಹಂದ್ವಾರದಲ್ಲಿ ಗುಂಡಿನ ಕಾಳಗ ನಡೆದಿದೆ. ಈ ಘಟನೆಯಲ್ಲಿ ಐವರು ಸೇನಾಧಿಕಾರಿಗಳು ಹುತಾತ್ಮರಾಗಿದ್ದು, ಓರ್ವ ನಾಗರಿಕ ಕೂಡ ಸಾವನ್ನಪ್ಪಿದ್ದಾರೆ.

    ಗುಂಡಿನ ದಾಳಿಯಲ್ಲಿ ಉಗ್ರಗಾಮಿಯೋರ್ವ ಸತ್ತಂತೆ ನಟಿಸಿದ್ದು, ಹತ್ತಿರ ಬರುತ್ತಿದ್ದ ಸೇನಾಪಡೆ ಮೇಲೆ ಏಕಾಏಕಿ ಗುಂಡಿನ ದಾಳಿ ಮಾಡಿದ್ದಾನೆ. ಈ ವೇಳೆ ಸಿಆರ್‍ಪಿಎಫ್ ಇನ್ಸ್ ಪೆಕ್ಟರ್ ಹಾಗೂ ನಾಲ್ವರು ಪೊಲೀಸ್ ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಇತ್ತ ಸತ್ತಂತೆ ನಟಿಸಿ ಯೋಧರನ್ನು ಕೊಂದ ಉಗ್ರ ಕೂಡ ಫಿನೀಶ್ ಆಗಿದ್ದಾನೆ ಎಂದು ಹೇಳಲಾಗುತ್ತಿದೆ.

    ಭಾರತ ಮತ್ತು ಪಾಕ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೆಚ್ಚಾಗುತ್ತಿದ್ದರೂ ಪಾಕಿಸ್ತಾನ ತನ್ನ ಕುತಂತ್ರಿ ಬುದ್ಧಿ ಬಿಟ್ಟಿಲ್ಲ. ಉಗ್ರರ ಮೂಲಕ ಗಡಿ ನಿಯಂತ್ರಣ ರೇಖೆಯ ಕುಪ್ವಾರದ ಹಂದ್ವಾರದಲ್ಲಿ ಶಾಂತಿ ಕದಡುತ್ತಿದೆ.

    ಗಡಿಯಲ್ಲಿನ ಕೊನೆಯ ಹಳ್ಳಿಗಳಲ್ಲಿ ವಾಸವಾಗಿರುವವರ ಭದ್ರತೆಗಾಗಿ ಪೂಂಚ್ ಸೆಕ್ಟರ್‍ನಲ್ಲಿ ಸೇನಾ ಬಂಕರ್‍ಗಳನ್ನು ಸ್ಥಾಪಿಸಲಾಗುತ್ತಿದೆ. ಸೇನೆ ನಮ್ಮ ಸುತ್ತಮುತ್ತಲೇ ಇರುವುದರಿಂದ ನಮಗೆ ಪಾಕಿಸ್ತಾನ ನೀಡುತ್ತಿದ್ದ ಭೀತಿ ದೂರಾಗಿದೆ ಅಂತ ಸ್ಥಳೀಯರು ಹೇಳುತ್ತಿದ್ದಾರೆ. ಈ ಮಧ್ಯೆ ಗಡಿಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿ ಹುತಾತ್ಮರಾದ ಇಬ್ಬರು ಪೈಲಟ್‍ಗಳ ಅಂತ್ಯಕ್ರಿಯೆ ಹುಟ್ಟೂರುಗಳಲ್ಲಿ ಸೇನಾ ಗೌರವದೊಂದಿಗೆ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಣ್ಣಾ ಮಲೈ ಸೇರಿ ನಾಲ್ವರು ಖಡಕ್ ಪೊಲೀಸ್ ಅಧಿಕಾರಿಗಳು ಬೆಂಗ್ಳೂರಿಗೆ ವರ್ಗಾವಣೆ

    ಅಣ್ಣಾ ಮಲೈ ಸೇರಿ ನಾಲ್ವರು ಖಡಕ್ ಪೊಲೀಸ್ ಅಧಿಕಾರಿಗಳು ಬೆಂಗ್ಳೂರಿಗೆ ವರ್ಗಾವಣೆ

    ಬೆಂಗಳೂರು: ಅಲೋಕ್ ಕುಮಾರ್ ಮತ್ತು ಗಿರೀಶ್ ಅವರಂತಹ ಖಡಕ್ ಪೊಲೀಸ್ ಅಧಿಕಾರಿಗಳನ್ನು ಸಿಸಿಬಿಗೆ ಹಾಕಿ, ದಂಧೆಕೋರರಿಗೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಬಿಸಿ ಮುಟ್ಟಿಸಿದ್ದಾರೆ. ಇದರ ಬೆನ್ನಲ್ಲೇ ಐವರು ಖಡಕ್ ಆಫೀಸರ್ ಗಳನ್ನು ವರ್ಗಾವಣೆ ಮಾಡಿದ್ದಾರೆ.

    ಭೂ ಮಾಫಿಯಾ ಮಟ್ಟ ಹಾಕಲು ಬೆಂಗಳೂರು ದಕ್ಷಿಣ ಡಿಸಿಪಿಯಾಗಿ ಅಣ್ಣಾ ಮಲೈ ಹಾಗೂ ಪೂರ್ವ ವಿಭಾಗ ಡಿಸಿಪಿಯಾಗಿ ರಾಹುಲ್ ಕುಮಾರ್ ಅವರನ್ನು ವರ್ಗಾವಣೆ ಮಾಡಿದ್ದಾರೆ. ಬೆಂಗಳೂರು ವಿಭಾಗದ ಹೆಚ್ಚುವರಿ ಸಂಚಾರ ಆಯುಕ್ತರಾಗಿ ಹರಿಶೇಖರನ್, ಕೆಎಸ್‍ಆರ್‍ಪಿ 1ನೇ ಬೆಟಾಲಿಯನ್ ಕಮಾಂಡೆಂಟ್‍ಗೆ ಅಜಯ್ ಹಿಲೋರಿ ಹಾಗೂ ಚಿಕ್ಕಮಗಳೂರು ಎಸ್‍ಪಿಯಾಗಿ ಹರೀಶ್ ಪಾಂಡೆ ಅವರು ವರ್ಗಾವಣೆಯಾಗಿದ್ದಾರೆ. ಇದನ್ನು ಓದಿ: ಭೂಕಳ್ಳರನ್ನು ಮಟ್ಟ ಹಾಕಲು ಬೆಂಗ್ಳೂರಿಗೆ ಬರ್ತಿದ್ದಾರೆ ಎಸ್‍ಪಿ ಅಣ್ಣಾ ಮಲೈ

    ಈ ಮೂಲಕ ಮತ್ತೆ ನಾಲ್ವರು ಖಡಕ್ ಪೊಲೀಸ್ ಅಧಿಕಾರಿಗಳಿಗೆ ಬೆಂಗಳೂರಿನಲ್ಲಿ ಮಣೆ ಹಾಕಿ, ಕಳ್ಳರಿಗೆ ಹಾಗೂ ನಿಯಮ ಉಲ್ಲಂಘನೆ ಮಾಡುವವರಲ್ಲಿ ನಡುಕ ಹುಟ್ಟಿಸಲು ಎಚ್.ಡಿ.ಕುಮಾರಸ್ವಾಮಿ ಅವರು ತಂತ್ರ ಹೆಣೆಯುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv