Tag: ಪೊಲೀಸ್ ಕೇಸ್

  • ಮನೆ ಕ್ಲೀನ್‌ ಮಾಡು ಅಂತ ಹೇಳಿದ್ದಕ್ಕೆ ಜಗಳ – ಗಂಡನ ಕಿವಿ ಕಚ್ಚಿ ತುಂಡು ಮಾಡಿದ ಹೆಂಡ್ತಿ ವಿರುದ್ಧ ಕೇಸ್‌!

    ಮನೆ ಕ್ಲೀನ್‌ ಮಾಡು ಅಂತ ಹೇಳಿದ್ದಕ್ಕೆ ಜಗಳ – ಗಂಡನ ಕಿವಿ ಕಚ್ಚಿ ತುಂಡು ಮಾಡಿದ ಹೆಂಡ್ತಿ ವಿರುದ್ಧ ಕೇಸ್‌!

    ನವದೆಹಲಿ: ಮನೆ ಸ್ವಚ್ಛ ಮಾಡು ಅಂತ ಹೇಳಿದ್ದಕ್ಕೆ ಗಂಡ-ಹೆಂಡತಿ (Husband And Wife) ನಡುವೆ ಜಗಳವಾಗಿದೆ. ಈ ವೇಳೆ ಆಕ್ರೋಶದಿಂದ ಹೆಂಡತಿ ತನ್ನ ಬಲ ಕಿವಿಯನ್ನು ಕಚ್ಚಿ ತುಂಡುಮಾಡಿರುವುದಾಗಿ ಪತಿ ಪೊಲೀಸ್‌ ಕೇಸ್‌ ದಾಖಲಿಸಿರುವ ಘಟನೆ ದೆಹಲಿ ಸುಲ್ತಾನ್‌ಪುರಿ (Sultanpuri) ಪ್ರದೇಶದಲ್ಲಿ ನಡೆದಿದೆ.

    ಹೆಂಡತಿ ಕಿವಿ ಕಚ್ಚಿ ಎರಡು ತುಂಡಾಗಿದ್ದರಿಂದ 45 ವರ್ಷದ ಬಲಿಪಶು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಸ್ಥಳೀಯ ಪೊಲೀಸರು. ಸಂತ್ರಸ್ತ ಪತಿ ನೀಡಿದ ದೂರಿನ ಆಧಾರದ ಮೇಲೆ ಪತ್ನಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಸಿಡಿಲು ಬಡಿದು 20 ಮಂದಿ ದುರ್ಮರಣ – ಅಮಿತ್‌ ಶಾ ಸಂತಾಪ

    ಪತ್ನಿ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 324 (ಸ್ವಯಂಪ್ರೇರಿತವಾಗಿ ಅಪಾಯಕಾರಿ ಶಸ್ತ್ರಾಸ್ತ್ರಗಳು ಅಥವಾ ವಿಧಾನಗಳಿಂದ ಗಾಯ ಉಂಟುಮಾಡುವುದು) ಅಡಿಯಲ್ಲಿ FIR ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ.

    ಅಷ್ಟಕ್ಕೂ ನಡೆದಿದ್ದೇನು?
    ಇದೇ ತಿಂಗಳ ನವೆಂಬರ್‌ 20 ರಂದು ಬೆಳಗ್ಗೆ 9:20ರ ಸುಮಾರಿಗೆ ನನ್ನ ಹೆಂಡತಿಗೆ ಮನೆ ಸ್ವಚ್ಛಗೊಳಿಸುವಂತೆ ಹೇಳಿ, ಮನೆಯ ಹೊರಗೆ ಕಸ ಎಸೆಯಲು ಹೋಗಿದ್ದೆ. ನಾನು ಮನೆಗೆ ವಾಪಸ್‌ ಬಂದ ಕೂಡಲೇ ನನ್ನ ಹೆಂಡತಿ ಜಗಳ ತೆಗೆದಿದ್ದಾಳೆ. ಜಗಳದ ಮಧ್ಯೆ ಮಕ್ಕಳೊಂದಿಗೆ ಪ್ರತ್ಯೇಕವಾಗಿರಲು ಮನೆ ಮಾರಾಟ ಮಾಡಿ, ತನಗೂ ಪಾಲು ನೀಡುವಂತೆ ಪತ್ನಿ ಕೇಳಿದ್ದಾಳೆ. ಈ ವೇಳೆ ಪತಿ ಸಮಾಧಾನಪಡಿಸಿದರೂ ಬಗ್ಗದೇ ಮಾತಿನ ಚಕಮಕಿ ಮುಂದುವರಿದಿದೆ.

    ಇದರಿಂದ ಆಕೆಯ ಕೋಪ ಮಿತಿಮೀರಿ ನನ್ನನ್ನೇ ಹೊಡೆಯಲು ಬಂದಿದ್ದಳು. ಆಕೆಯನ್ನು ತಳ್ಳಿ, ನಾನು ಮನೆಯಿಂದ ಹೊರಹೋಗುತ್ತಿದೆ. ಆಗ ಹಿಂಬದಿಯಿಂದ ನನ್ನನ್ನ ಹಿಡಿದುಕೊಂಡು ಬಲ ಕಿವಿಯನ್ನು ಕಚ್ಚಿದಳು. ನನ್ನ ಕಿವಿ ಮೇಲಿನ ಭಾಗ ತುಂಡಾಗಿ ರಕ್ತಸ್ರಾವವಾಯಿತು ಎಂದು ದೂರಿನಲ್ಲಿ ಹೇಳಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ

    ಸದ್ಯ ಸಂತ್ರಸ್ತ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಆದ್ರೆ ಇನ್ನೂ ಹೇಳಿಕೆ ನೀಡುವ ಸ್ಥಿತಿಯಲ್ಲಿಲ್ಲ. ನವೆಂಬರ್‌ 22ರಂದು ಪೊಲೀಸರಿಗೆ ಲಿಖಿತ ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಪ್ರತ್ಯೇಕ ತಂಡ ಕಳುಹಿಸಲಾಗಿದೆ. ಇದನ್ನೂ ಓದಿ: ಚೀನಾದಲ್ಲಿ ಮತ್ತೊಂದು ವೈರಸ್; ಆಸ್ಪತ್ರೆಗಳಲ್ಲಿ ತುರ್ತುಕ್ರಮ ಪರಿಶೀಲಿಸುವಂತೆ ರಾಜ್ಯಗಳಿಗೆ ಖಡಕ್‌ ವಾರ್ನಿಂಗ್‌

  • ಆತ ವಾರದಿಂದ ಮಾನಸಿಕ ಹಿಂಸೆ ಕೊಟ್ಟಿದ್ದಾನೆ : ಫ್ಯಾಶನ್ ಐಕಾನ್ ಪುತ್ರನ ವಿಚಿತ್ರ ಖಯಾಲಿ ಬಿಚ್ಚಿಟ್ಟ ನಟಿ ಸಂಜನಾ

    ಆತ ವಾರದಿಂದ ಮಾನಸಿಕ ಹಿಂಸೆ ಕೊಟ್ಟಿದ್ದಾನೆ : ಫ್ಯಾಶನ್ ಐಕಾನ್ ಪುತ್ರನ ವಿಚಿತ್ರ ಖಯಾಲಿ ಬಿಚ್ಚಿಟ್ಟ ನಟಿ ಸಂಜನಾ

    ಒಂದು ಕಾಲದಲ್ಲಿ ಫ್ಯಾಶನ್ ಐಕಾನ್ ಪ್ರಸಾದ್ ಬಿದ್ದಪ್ಪ ಅವರ ಶೋಗಳಲ್ಲೇ ಕಾಣಿಸಿಕೊಳ್ಳುತ್ತಿದ್ದ ನಟಿ ಸಂಜನಾ, ಇದೀಗ ಬಿದ್ದಪ್ಪ ಅವರ ಪುತ್ರ ಆಡಂ ಬಿದಪ್ಪ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾರೆ. ತಮ್ಮ ಮೊಬೈಲ್ ಗೆ ಆಡಂನಿಂದ ಅಶ್ಲೀಲ, ನಿಂದನಾತ್ಮಕ ಮತ್ತು ಮಾನಸಿಕ ಹಿಂಸೆ ಆಗುವಂತಹ ಮಸೇಜ್ ಗಳು ಬಂದಿವೆ ಎಂದು ಆರೋಪ ಮಾಡಿದ್ದಾರೆ. ಈಗಾಗಲೇ ಆಡಂ ನನ್ನು ವಶಕ್ಕೆ ಪಡೆದಿರುವ ಇಂದಿರಾ ನಗರ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲಾರೆ ಎಂದಿರುವ ನಟಿ ಸಂಜನಾ, ಮಾಧ್ಯಮಗಳಿಗೆ ಸುದೀರ್ಘ ಎರಡು ಪುಟಗಳಷ್ಟು ಪತ್ರವನ್ನು ಬರೆದಿದ್ದಾರೆ. ಇದನ್ನೂ ಓದಿ : ಬಜೆಟ್ ನಲ್ಲಿ ಪುನೀತ್ ರಾಜ್ ಕುಮಾರ್ ಮತ್ತು ಸಂಚಾರಿ ವಿಜಯ್ ಪ್ರಸ್ತಾಪ

    ನಾನು ಅಗ್ಗದ ಪ್ರಚಾರ ಬಯಸಲಾರೆ. ನನಗೆ ಅದರ ಅಗತ್ಯವೂ ಇಲ್ಲ. ಹಾಗಾಗಿ ಮಾಧ್ಯಮಗಳ ಮುಂದೆ ಬರಲು ಹಿಂದೇಟು ಹಾಕುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಆಡಂನಿಂದ ತಮಗಾದ ತೊಂದರೆಯನ್ನು ಎಳೆ ಎಳೆಯಾಗಿ ಅವರು ಬಿಚ್ಚಿಟ್ಟಿದ್ದು, ಫೆ. 25 ರಂದು ರಾತ್ರಿ 11 ಗಂಟೆಗೆ ಕುಡಿದ ಮತ್ತಿನಲ್ಲಿದ್ದ ಆಡಂ ತಮಗೆ ಅಶ್ಲೀಲ ಮಸೇಜ್ ಗಳನ್ನು ಕಳುಹಿಸುವ ಮೂಲಕ ಮಾನಸಿಕ ದಾಳಿ ಮಾಡಿದ್ದಾನೆ. ಇದರಿಂದ ನಾನು ಮತ್ತು ನನ್ನ ಕುಟುಂಬ ತೀವ್ರ ಆಘಾತಕ್ಕೆ ಒಳಗಾಗಿದೆ. ಅಸಹ್ಯಕರವಾಗಿದ್ದ ಆ ಮಸೇಜ್ ಗಳಿಂದ ತಪ್ಪಿಸಿಕೊಳ್ಳಲು ಅನಿವಾರ್ಯವಾಗಿ ನಾನು ಕಾನೂನು ಮೊರೆ ಹೋಗಬೇಕಾಯಿತು. ಏಳು ತಿಂಗಳು ಗರ್ಭಿಣಿ ನಾನು. ಹಾಗಾಗಿ ನನ್ನ ಮನಸ್ಸಿನಲ್ಲಿ ನಕಾರಾತ್ಮಕ ಅಂಶಗಳು ಘಾಸಿ ಮಾಡಬಾರದೆಂದು ವಿಐಪಿ ಮಗನ ವಿರುದ್ಧ ದೂರು ದಾಖಲಿಸಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ : ಮಾರ್ಚ್ 27ಕ್ಕೆ ಕೆಜಿಎಫ್ 2 ಟ್ರೈಲರ್ ರಿಲೀಸ್

    ಪದೇ ಪದೇ ಟಾರ್ಗೆಟ್ ಆಗುತ್ತಿದ್ದೇನೆ

    ನನ್ನದಲ್ಲದ ತಪ್ಪಿಗೆ ಪದೇ ಪದೇ ನಾನು ಟಾರ್ಗೆಟ್ ಆಗುತ್ತಿದ್ದೇನೆ. ನಾನು ಯಾರ ಜೀವನದಲ್ಲೂ ಪ್ರವೇಶ ಪಡೆಯಲು ಬಯಸುವುದಿಲ್ಲ. ಆದರೆ, ಯಾರಾದರೂ ನನ್ನ ಜೀವನಕ್ಕೆ ಎಂಟ್ರಿ ಕೊಟ್ಟರೆ ಅವರನ್ನು ಸುಮ್ಮನೆ ಬಿಡುವುದಿಲ್ಲ. ಅಂಥವರು ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ನನ್ನ ವಿರುದ್ಧ ಸಲ್ಲದ ಆರೋಪ ಮಾಡುವವರು, ನನ್ನ ಕುಟುಂಬಕ್ಕೆ ತೊಂದರೆ ಕೊಡಲು ಬಂದವರನ್ನು ಸುಮ್ಮನೆ ಬಿಡಲಾರೆ ಎಂದು ಪತ್ರದಲ್ಲಿ ಬರೆದಿದ್ದಾರೆ ಸಂಜನಾ. ಇದನ್ನೂ ಓದಿ : ಜನಾರ್ದನ ರೆಡ್ಡಿ ಪುತ್ರನ ಸಿನಿಮಾದಲ್ಲಿ ಇಬ್ಬರು ನಾಯಕಿಯರು?

    ಸವಾಲಿನ ಎರಡು ವರ್ಷಗಳು

    ಕಳೆದ ಒಂದೆರಡು ವರ್ಷಗಳಲ್ಲಿ ನನ್ನ ಜೀವನ ಏನೆಲ್ಲ ಅಡೆತಡೆಗಳನ್ನು ಎದುರಿಸಿದೆ. ಈ ಎರಡು ವರ್ಷಗಳಲ್ಲಿ ನಾನು ಸಾಕಷ್ಟು ನೊಂದಿದ್ದೇನೆ. ಕೆಟ್ಟ ದಿನಗಳನ್ನು ಎದುರಿಸಿದ್ದೇನೆ. ನನ್ನ ಅಧ್ಯಾತ್ಮಿಕ ಮನಸ್ಸು ಮತ್ತು ಸಕಾರಾತ್ಮಕ ಭಾವನೆಗಳು ನನಗೆ ಚೈತನ್ಯ ತುಂಬಿವೆ. ಒಂದೊಳ್ಳೆ ದಿನಗಳು ಮತ್ತೆ ನನ್ನ ಬಾಳಲ್ಲಿ ಬರುತ್ತೇವೆ ಎನ್ನುವ ಹೊತ್ತಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ ಎಂದು ಆಡಂ ಪ್ರಕರಣದ ಬಗ್ಗೆ ಉಲ್ಲೇಖಿಸಿದ್ದಾರೆ ಸಂಜನಾ. ಇದನ್ನೂ ಓದಿ: ಮೈಕಲ್ ಅಂಡ್ ಮಾರ್ಕೊನಿ ಸಿನಿಮಾದಲ್ಲಿ ಪ್ರಶಾಂತ್ ಸಿದ್ದಿ ವಿಶೇಷ ಪಾತ್ರ

    ಕಿರುಕುಳ ಕೊಡುವುದು ಆಡಂ ಚಟ

    ಆಡಂ ತಮ್ಮೊಂದಿಗೆ ನಡೆದುಕೊಂಡ ಬಗ್ಗೆ ಅವರ ಪಾಲಕರಿಗೆ ತಿಳಿಸಿದ್ದೆ. ಅವನು ಕುಡಿದ ಮತ್ತಿನಲ್ಲಿದ್ದಾಗ ಹೀಗೆ ಕಿರುಕುಳ ಕೊಡುವುದು ಸಾಮಾನ್ಯ ಅಭ್ಯಾಸ ಆಗಿ ಹೋಗಿದೆ ಎಂದು ಆತನ ತಾಯಿ ತಿಳಿಸಿದರು. ಅವರ ಪಾಲಕರಿಗೆ ಬಗ್ಗೆ ನನಗೆ ತುಂಬಾ ಗೌರವವಿದೆ. ಆದರೆ, ಆಡಂ ನಡೆದುಕೊಂಡ ರೀತಿ ಸರಿಯಿಲ್ಲ ಎಂದು ಪತ್ರದಲ್ಲಿ ಬರೆದಿದ್ದಾರೆ ಸಂಜನಾ.

  • ಲಾಕ್‍ಡೌನ್ ಉಲ್ಲಂಘನೆ – ತಂದೆ ವಿರುದ್ಧ ದೂರು ದಾಖಲಿಸಿದ ಮಗ

    ಲಾಕ್‍ಡೌನ್ ಉಲ್ಲಂಘನೆ – ತಂದೆ ವಿರುದ್ಧ ದೂರು ದಾಖಲಿಸಿದ ಮಗ

    ನವದೆಹಲಿ: ಲಾಕ್‍ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸ್ವಂತ ಮಗನೇ ತಂದಯೇ ವಿರುದ್ಧ ದೂರು ನೀಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

    30 ವರ್ಷದ ಅಭಿಷೇಕ್ ತನ್ನ ತಂದೆ ವೀರೇಂದ್ರ ಸಿಂಗ್ (59) ವಿರುದ್ಧ ದೂರು ನೀಡಿದ್ದಾರೆ. ಲಾಕ್‍ಡೌನ್ ಸಮಯದಲ್ಲೂ ನಮ್ಮ ತಂದೆ ಹೊರಗೆ ಹೋಗುತ್ತಾರೆ. ಲಾಕ್‍ಡೌನ್ ನಿಯಮಗಳನ್ನು ಪಾಲಿಸುವುದಿಲ್ಲ ಮತ್ತು ನಮ್ಮ ಏರಿಯಾದಲ್ಲಿ ಸುಮ್ಮನೆ ಓಡಾಡುತ್ತಾರೆ ಎಂದು ವಸಂತ್ ಕುಂಜ್ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

    ತಂದೆ ವಿರುದ್ಧ ದೂರು ನೀಡಿದ ಅಭಿಷೇಕ್ ಆಟೋಮೊಬೈಲ್ ಕಂಪನಿಯಲ್ಲಿ ಕೆಲಸ ಮಾಡುತ್ತಾರೆ. ಅಭಿಷೇಕ್ ರಾಜೋಕರಿ ಪ್ರದೇಶದಲ್ಲಿ ತನ್ನ ಕುಟುಂಬದೊಂದಿಗೆ ವಾಸವಿದ್ದಾರೆ. ಈ ವೇಳೆ ಲಾಕ್‍ಡೌನ್ ವೇಳೆ ಮನೆಯಲ್ಲೇ ಇರಿ ಎಂದು ಹೇಳಿದರು ಕೇಳದ ಅವರ ತಂದೆ ಏರಿಯಾ ತುಂಬ ಓಡಾಡುತ್ತಿರುತ್ತಾರಂತೆ. ಇದನ್ನು ಕಂಡು ಬೇಸತ್ತ ಅಭಿಷೇಕ್ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಮೂಲಕ ಅಭಿಷೇಕ್ ತಂದೆ ವಿರುದ್ಧ ಪ್ರಥಮ ಮಾಹಿತಿ ವರದಿ ಸಲ್ಲಿಕೆಯಾಗಿದೆ.

    ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಕಾರಣ ಮಾರ್ಚ್ 24ರಂದು ದೇಶವನ್ನು ಉದ್ದೇಶಿ ಮಾತನಾಡಿದ್ದ ಪ್ರಧಾನಿ ಮೋದಿ ಅವರು, ದೇಶವನ್ನು 21 ದಿನಗಳ ಕಾಲ ಲಾಕ್‍ಡೌನ್ ಮಾಡಿದ್ದರು. ಜೊತೆಗೆ ಮನೆಯಿಂದ ಯಾರೂ ಹೊರೆಗೆ ಬರಬೇಡಿ ಎಂದು ಸೂಚಿಸಿದ್ದರು. ಆದರೂ ಕೆಲವರು ಮನೆಯಿಂದ ಹೊರಗೆ ಬಂದು ಪೊಲೀಸರ ಕೈಯಲ್ಲಿ ಲಾಠಿ ಏಟು ತಿನ್ನುತ್ತಿದ್ದಾರೆ.

    ಮೊದಲಿಗೆ ಕಳೆದ ಡಿಸೆಂಬರ್ ತಿಂಗಳಲ್ಲಿ ಚೀನಾದಲ್ಲಿ ಕಾಣಿಸಿಕೊಂಡ ಕೊರೊನಾ ವೈರಸ್ ಇಂದು ವಿಶ್ವಕ್ಕೆ ಮಹಾಮಾರಿಯಾಗಿ ಭೀತಿಯನ್ನು ತರಿಸಿದೆ. ಆಗಾಲೇ ಈ ಮಹಾಮಾರಿಗೆ ಭಾರತದಲ್ಲಿ 50ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. 2500ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ.

  • ರೇವಣ್ಣನಿಂದಾಗಿ ಜಿಲ್ಲೆಯ ಯುವಕರಿಗೆ ಹೆಣ್ಣು ಸಿಗ್ತಿಲ್ಲ – ಎ.ಮಂಜು

    ರೇವಣ್ಣನಿಂದಾಗಿ ಜಿಲ್ಲೆಯ ಯುವಕರಿಗೆ ಹೆಣ್ಣು ಸಿಗ್ತಿಲ್ಲ – ಎ.ಮಂಜು

    ಹಾಸನ: ದಲಿತರು ಬಂದರೆ ಮತ್ತೆ ಹೋಗಿ ಸ್ನಾನ ಮಾಡುವ ನೀಚ ರಾಜಕಾರಣಿ ರೇವಣ್ಣನಿಂದಾಗಿ ಯುವಕರಿಗೆ ಹೆಣ್ಣು ಸಿಗುತ್ತಿಲ್ಲ ಎಂದು ಎ.ಮಂಜು ಗಂಭೀರ ಆರೋಪ ಮಾಡಿದ್ದಾರೆ.

    ಹಾಸನದ ಶಾಂತಿಗ್ರಾಮದಲ್ಲಿ ನೂತನ ಮಂಡಲ ಅಧ್ಯಕ್ಷ ಮೋಹನ್‍ಕುಮಾರ್ ಗೆ ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ರೇವಣ್ಣ ವಿರುದ್ಧ ಆಕ್ರೋಶ ಹೊರಹಾಕಿದ ಮಾಜಿ ಸಚಿವ ಎ.ಮಂಜು, ಅವರು ಪೊಲೀಸರ ಮೂಲಕ ಕೇಸ್ ಹಾಕಿಸುತ್ತೇನೆ ಎಂದು ಹೆದರಿಸಿ ಪಕ್ಷ ಮತ್ತು ಮನೆಯನ್ನು ಸಂಘಟನೆ ಮಾಡಿಕೊಂಡಿದ್ದಾರೆ. ಅವರು ಪ್ರೀತಿಯಿಂದ ಜಿಲ್ಲೆಯನ್ನು ಹಿಡಿತದಲ್ಲಿ ಇಟ್ಟುಕೊಂಡಿಲ್ಲ ಎಂದರು.

    ಯಾರಾದರೂ ಸತ್ತರೆ ರೇವಣ್ಣ ತನ್ನ ಸ್ವಂತ ಕಾರಲ್ಲಿ ಹೋಗಲ್ಲ. ಏನೋ ಮಂತ್ರ ಮಾಡಿಸಿಕೊಂಡು ಬಂದಿದ್ದಾರೆ ಅಂತ ಶರ್ಟ್ ಗುಂಡಿ ಬಿಚ್ಚಿಕೊಂಡು ಏಲಕ್ಕಿ ಹಾರ ಎಲ್ಲ ತೋರಿಸ್ತಾನೆ. ಅವರು ಮಾಡಿರುವ ಕೆಲಸದಿಂದ ಹಿಂದೆ ಮುಂದೆ ಪೊಲೀಸ್ ಇಲ್ಲದೇ ಅವರಿಗೆ ಊರಿಗೆ ಬರಲು ಆಗಲ್ಲ. ಒಂದು ದಿನ ಜನ ಅವರಿಗೆ ಪಾಠ ಕಲಿಸುತ್ತಾರೆ. ರೇವಣ್ಣನಿಂದ ಈ ಭಾಗದಲ್ಲಿ ಯುವಕರಿಗೆ ಹೆಣ್ಣು ಸಿಗದಂತಾಗಿದೆ. ಅವರ ಜೊತೆ ಸೇರಿ ಆ ಕೇಸ್, ಈ ಕೇಸ್ ಅಂತಾ ಆಗಿ ಯಾರೂ ಯುವಕರಿಗೆ ಹೆಣ್ಣು ಕೊಡುತ್ತಿಲ್ಲ. ಹೀಗಾಗಿ ಜನರಿಗೆ ಒಳ್ಳೆಯದಾಗಲು ನಮ್ಮ ಜೊತೆ ಬನ್ನಿ ಎಂದು ಎ.ಮಂಜು ತಿಳಿಸಿದರು.

    ಎ.ಮಂಜು ಮಾತನ್ನು ಬೆಂಬಲಿಸಿದ ನೂತನ ಮಂಡಲ ಅಧ್ಯಕ್ಷ ಮೋಹನ್ ಕುಮಾರ್, ರೇವಣ್ಣ ಅವರಿಂದಾಗಿ ಯುವಕರ ಮೇಲೆ ಕೇಸ್ ಬೀಳುತ್ತಿರುವುದು ಹೆಚ್ಚಾಗಿದೆ. ಯುವರಿಗೆ ಹೆಣ್ಣು ಸಿಗದಿರುವುದು ಕೂಡ ನಿಜ ಎಂದು ಹೇಳಿದರು.