Tag: ಪೊಲೀಸ್ ದಾಳಿ

  • ಅಕ್ರಮ ಹಣ ಸಾಗಾಟ ಆರೋಪ – ಸಚಿವ ಜಮೀರ್‌ ಇದ್ದ ಹೋಟೆಲ್ ಮೇಲೆ ಹೈದರಾಬಾದ್‌ ಪೊಲೀಸ್‌ ದಾಳಿ!

    ಅಕ್ರಮ ಹಣ ಸಾಗಾಟ ಆರೋಪ – ಸಚಿವ ಜಮೀರ್‌ ಇದ್ದ ಹೋಟೆಲ್ ಮೇಲೆ ಹೈದರಾಬಾದ್‌ ಪೊಲೀಸ್‌ ದಾಳಿ!

    ಬೆಂಗಳೂರು: ಸಚಿವ ಜಮೀರ್‌ ಅಹ್ಮದ್‌ ಖಾನ್‌ (Zameer Ahmed Khan )ಇದ್ದ ಹೋಟೆಲ್‌ ಮೇಲೆ ಹೈದರಾಬಾದ್‌ ಪೊಲೀಸರು (Hyderabad Police) ದಾಳಿ ನಡೆಸಿರುವ ಘಟನೆ ತಡರಾತ್ರಿ ನಡೆದಿದೆ.

    ಅಕ್ರಮವಾಗಿ ಹಣ ಸಾಗಾಟ ಆರೋಪದ ಹಿನ್ನೆಲೆಯಲ್ಲಿ ಜಮೀರ್‌ ವಾಸ್ತವ್ಯವಿದ್ದ ಹೈದರಾಬಾದ್‌ ನಗರದ ಪಾರ್ಕ್‌ ಹಯಾತ್‌ ಹೋಟೆಲ್‌ (Park Hyatt Hotel) ಮೇಲೆ ಪೊಲೀಸರು ಇದ್ದಕ್ಕಿದ್ದಂತೆ ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ ದಾಳಿ ನಡೆಸಿ ಜಮೀರ್ ಕೊಠಡಿ ಮತ್ತು ಬೆಂಬಲಿಗರ ಕೊಠಡಿಗಳನ್ನ ಪರಿಶೀಲಿಸಿದ್ದಾರೆ.

    ಈ ದಾಳಿ ಕುರಿತು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಸಚಿವ ಜಮೀರ್‌, ನಾನು ಉಳಿದುಕೊಂಡಿರುವ ಹೈದರಾಬಾದ್‌ ನಗರದ ಪಾರ್ಕ್‌ ಹಯಾತ್‌ ಹೋಟೆಲ್‌ ಮೇಲೆ ಪೊಲೀಸರು ದಾಳಿ ನಡೆಸಿದರು. ಆದ್ರೆ ಯಾವುದೇ ಸಾಕ್ಷ್ಯಗಳೂ ಸಿಗದೇ ಹಿಂದಿರುಗಿದರು. ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದೆ. ಇದರಿಂದ ಕೇಂದ್ರ ಬಿಜೆಪಿ (BJP) ಮತ್ತು ರಾಜ್ಯದ ಬಿಆರ್‌ಎಸ್‌ (BRS) ಸರ್ಕಾರ ಹತಾಶೆಗೊಂಡಿದ್ದು, ಜಂಟಿ ರಾಜಕೀಯ ದಾಳಿ ನಡೆಸಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಉಗ್ರರ ವಿರುದ್ಧ ಎನ್‌ಕೌಂಟರ್‌ – ಕರ್ನಾಟಕ ಮೂಲದ ಕ್ಯಾಪ್ಟನ್‌ ಸೇರಿ ನಾಲ್ವರು ಯೋಧರು ಹುತಾತ್ಮ

    ಈ ದಾಳಿಯು ನಮ್ಮನ್ನು ಹೆದರಿಸಿ ಹಿಮ್ಮೆಟ್ಟಿಸುವ ಕುತಂತ್ರವಾಗಿದೆ, ಇದಕ್ಕೆಲ್ಲ ನಾವು ಹೆದರಲ್ಲ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಸುರಂಗದಲ್ಲಿ ಸಿಲುಕಿದವರ ಹೊರತರಲು ಕ್ಷಣಗಣನೆ – ಆರೈಕೆಗೆ ಆಸ್ಪತ್ರೆ ರೆಡಿ 

  • ಮಿಡ್‌ನೈಟ್ ಆಪರೇಷನ್, ವೇಶ್ಯಾವಾಟಿಕೆಯಲ್ಲಿ ಭಾಗಿ ಶಂಕೆ – ಸಿನಿಮಿಯ ರೀತಿಯಲ್ಲಿ ವಿದೇಶಿಗರ ಬಂಧನ

    ಮಿಡ್‌ನೈಟ್ ಆಪರೇಷನ್, ವೇಶ್ಯಾವಾಟಿಕೆಯಲ್ಲಿ ಭಾಗಿ ಶಂಕೆ – ಸಿನಿಮಿಯ ರೀತಿಯಲ್ಲಿ ವಿದೇಶಿಗರ ಬಂಧನ

    ಬೆಂಗಳೂರು: ವಾರಾಂತ್ಯದಲ್ಲಿ ಬೆಂಗಳೂರಿನ (Bengaluru) ವಿವಿಧೆಡೆ ಮಿಡ್‌ನೈಟ್ ಆಪರೇಷನ್ ನಡೆಸಿದ ಖಾಕಿ ಪಡೆ ಅನೈತಿಕ ಚಟುವಟಿಕೆಗಳಲ್ಲಿ ತೊಡಗಿದ್ದ ವಿದೇಶಿಗರನ್ನು ಸಿನಿಮಿಯ ರೀತಿಯಲ್ಲಿ ಬಂಧಿಸಿರುವ ಘಟನೆ ನಡೆಸಿದೆ.

    ಎಂ.ಜಿ ರಸ್ತೆ, ಬ್ರಿಗೆಡ್ ರಸ್ತೆಯಲ್ಲಿ (Brigade Road) ದಾಳಿ ಮಾಡಿದ ಕೇಂದ್ರ ವಿಭಾಗದ ಪೊಲೀಸರು (Police) ಆಫ್ರಿಕನ್ ಪ್ರಜೆಗಳ ಆಟಟೋಪಕ್ಕೆ ಬ್ರೇಕ್ ಹಾಕಿದ್ದಾರೆ. ವೇಶ್ಯಾವಾಟಿಕೆ, ಡ್ರಗ್ಸ್‌ ದಂದೆ ಸೇರಿದಂತೆ ಅನೈತಿಕ ಚಟುವಟಿಕೆಗಳಲ್ಲಿ ಭಾಗಿಯಾದ ಶಂಕೆ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದು ಹಲವರನ್ನ ಬಂಧಿಸಲಾಗಿದೆ. ಇದನ್ನೂ ಓದಿ: ಹೆಡ್‍ಕಾನ್ಸ್ಟೇಬಲ್ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆಗೈದಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

    ಎಂ.ಜಿ ರಸ್ತೆ, ಬ್ರಿಗೆಡ್ ರಸ್ತೆಯಲ್ಲಿ ನಿಂತು ಗ್ರಾಹಕರನ್ನ ಸೆಳೆಯುತ್ತಿದ್ದವರನ್ನ ಸಿನಿಮಿಯು ರೀತಿಯಲ್ಲಿ ಅಟ್ಟಾಡಿಸಿ ಖಾಕಿ ಪಡೆ ಲಾಕ್ ಮಾಡಿದೆ. ಒಟ್ಟು 55 ವಿದೇಶಿ ಪ್ರಜೆಗಳನ್ನ ಬಂಧಿಸಿದ್ದು, ಅವರಲ್ಲಿ 25ಕ್ಕೂ ಹೆಚ್ಚು ಮಂದಿ ಮಹಿಳೆಯರು (Foreign Women) ಇದ್ದಾರೆ. ಬಂಧಿಸಿದ ಬಳಿಕ ಆಫ್ರಿಕನ್ ಪ್ರಜೆಗಳಿಗೆ ಮೆಡಿಕಲ್ ಮತ್ತು ನಾರ್ಕೊಟಿಕ್ ಟೆಸ್ಟ್ ಮಾಡಿಸಲಾಗಿದೆ. ಇದನ್ನೂ ಓದಿ: 15 ದಿನಗಳ ಹಿಂದಷ್ಟೇ ಡಿವೋರ್ಸ್- ಪತ್ನಿಯನ್ನು ಕೊಲ್ಲಲು ಪಿಸ್ತೂಲ್ ಖರೀದಿಸಿ ಅರೆಸ್ಟ್ ಆದ!

    ಆಫ್ರಿಕನ್ ಮಹಿಳೆಯರ ಹೈಡ್ರಾಮಾ:
    ಪೊಲೀಸರು ವಶಕ್ಕೆ ಪಡೆಯುವ ವೇಳೆ ವಿದೇಶಿ ಯುವತಿಯರು ಭಾರೀ ಹೈಡ್ರಾಮಾ ಕ್ರಿಯೇಟ್ ಮಾಡಿದ್ದಾರೆ. ಮದ್ಯದ ನಶೆಯಲ್ಲಿ ಪಬ್‌ನಿಂದ ಹೊರ ಬರ್ತಿದ್ದಂತೆ ಕೆಲ ಯುವತಿಯರು ಖಾಕಿ ಜೊತೆಗೆ ಕಿರಿಕ್ ತೆಗೆದಿದ್ದಾರೆ. ಬಾಯಿ ಬಡಿದುಕೊಂಡು ಚೀರಾಟ ನಡೆಸಿದ್ದಾರೆ. ಕುಡಿದ ಅಮಲಿನಲ್ಲಿ ಕ್ಯಾಮೆರಾ ಚಿತ್ರೀಕರಣಕ್ಕೂ ಅಡ್ಡಿಪಡಿಸಿದ್ದಾರೆ. ಇನ್ನೂ ಕೆಲವರು ಪೊಲೀಸರು ಹತ್ತಿರ ಬರುತ್ತಿದ್ದಂತೆ ದಿಕ್ಕಾಪಾಲಾಗಿ ಓಡಲು ಯತ್ನಿಸಿದ್ದು, ಬೆರಳೆಣಿಕೆಯಷ್ಟು ಮಹಿಳೆಯರು ಎಸ್ಕೇಪ್ ಆಗಿದ್ದಾರೆ. ಉಳಿದ ಮಹಿಳೆಯರನ್ನ ಸಮಾಧಾನ ಮಾಡಿ ವಶಕ್ಕೆ ಪಡೆಯುವಷ್ಟರಲ್ಲಿ ಪೊಲೀಸರು ಹೈರಾಣಾಗಿದ್ದಾರೆ.

    60 ಮಂದಿ ಖಾಕಿ ಪಡೆ ಕಾರ್ಯಾಚರಣೆ:
    ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಕಾರ್ಯಚರಣೆಯಲ್ಲಿ ಓರ್ವ ಡಿಸಿಪಿ, ಇಬ್ಬರು ಎಸಿಪಿ, 6 ಮಂದಿ ಇನ್ಸ್ಪೆಕ್ಟರ್, 10 ಮಂದಿ ಪಿಎಸ್‌ಐ, 20 ಮಹಿಳಾ ಸಿಬ್ಬಂದಿ, 20 ಪುರುಷ ಸಿಬ್ಬಂದಿಯಿAದ ಯಶಸ್ವಿ ಕಾರ್ಯಾಚರಣೆ ನಡೆದಿದೆ. ಡಿಸಿಪಿ ಶ್ರೀನಿವಾಸಗೌಡ ನೇತೃತ್ವದ ತಂಡ ಏಕಕಾಲದಲ್ಲಿ ಮೂರು ಕಡೆಗಳಿಂದ ದಾಳಿ ನಡೆಸಿದೆ. ಎಂ.ಜಿ ರಸ್ತೆಯಿಂದ ಒಂದು ತಂಡ, ಚರ್ಚ್ ಸ್ಟ್ರೀಟ್ ನಿಂದ ಒಂದು ತಂಡ, ಬ್ರಿಗೇಡ್ ರಸ್ತೆ ಜಂಕ್ಷನ್ ನಿಂದ ಫೀಲ್ಡಿಗಿಳಿದು ಆಪರೇಷನ್ ನಡೆಸಿ, ವಿದೇಶಿಗರನ್ನ ಬಂಧಿಸುವಲ್ಲಿ ತಂಡ ಯಶಸ್ವಿಯಾಗಿದೆ.

  • ಬೆಳ್ಳಂಬೆಳಗ್ಗೆ ಹಾಸನ ಕಾರಾಗೃಹದ ಮೇಲೆ ಪೊಲೀಸರಿಂದ ದಾಳಿ – ಮೊಬೈಲ್ ಫೋನ್, ಗಾಂಜಾ ಪತ್ತೆ

    ಬೆಳ್ಳಂಬೆಳಗ್ಗೆ ಹಾಸನ ಕಾರಾಗೃಹದ ಮೇಲೆ ಪೊಲೀಸರಿಂದ ದಾಳಿ – ಮೊಬೈಲ್ ಫೋನ್, ಗಾಂಜಾ ಪತ್ತೆ

    ಹಾಸನ: ಗುರುವಾರ ಬೆಳ್ಳಂಬೆಳಗ್ಗೆ ಜಿಲ್ಲಾ ಕಾರಾಗೃಹದ (Hassan Prison) ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಪೊಲೀಸರಿಂದ ದಾಳಿ ನಡೆಸಲಾಗಿದ್ದು, ಈ ವೇಳೆ ಮೊಬೈಲ್ ಫೋನ್, ಗಾಂಜಾ ಪತ್ತೆಯಾಗಿದೆ.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾರ್ಗದರ್ಶನದಲ್ಲಿ ಎಎಸ್‌ಪಿ ತಮ್ಮಯ್ಯ, ಡಿವೈಎಸ್‌ಪಿ ಉದಯ್‌ಭಾಸ್ಕರ್ ನೇತೃತ್ವದಲ್ಲಿ 15 ಜನ ಪೊಲೀಸ್ ಅಧಿಕಾರಿಗಳು, 100ಕ್ಕೂ ಹೆಚ್ಚು ಪೊಲೀಸರು ಮುಂಜಾನೆ 5:45ರ ಸುಮಾರಿನಲ್ಲಿ ದಾಳಿ ನಡೆಸಿದ್ದಾರೆ.

    ಜಿಲ್ಲಾ ಕಾರಾಗೃಹದಲ್ಲಿ 328 ಪುರುಷ ವಿಚಾರಣಾಧೀನ ಖೈದಿಗಳು, 17 ಮಹಿಳಾ ವಿಚಾರಣಾಧೀನ ಖೈದಿಗಳಿದ್ದು ಒಂದೂವರೆ ಗಂಟೆಗೂ ಹೆಚ್ಚು ಕಾಲ ಜೈಲಿನೊಳಗೆ ಶೋಧಕಾರ್ಯ ನಡೆಸಿದ್ದಾರೆ. ವಿಚಾರಣಾಧೀನ ಖೈದಿಗಳ ಕೊಠಡಿಗಳ ತಪಾಸಣೆ ವೇಳೆ 2 ಮೊಬೈಲ್, ಗಾಂಜಾ ಪ್ಯಾಕೇಟ್‌ಗಳು ಪತ್ತೆಯಾಗಿವೆ. ಇದನ್ನೂ ಓದಿ: ರಾಜ್ಯಕ್ಕೆ ತಟ್ಟಲಿದೆ ಇನ್ನೂ 10 ದಿನ ಕೊರೆಯುವ ಚಳಿ

    ಹಾಸನದ ರಿಂಗ್ ರಸ್ತೆಯಲ್ಲಿ ನಡೆದಿದ್ದ ಯುವಕನ ಕೊಲೆ ಪ್ರಕರಣದ ಆರೋಪಿಗಳು ಹಾಗೂ ಚಿತ್ರದುರ್ಗದ ಕಳ್ಳತನ ಪ್ರಕರಣದ ಆರೋಪಿಗಳ ಬಳಿ ಗಾಂಜಾ ಪ್ಯಾಕೆಟ್ ಪತ್ತೆಯಾಗಿವೆ.

    ಜೈಲಿನೊಳಗಿದ್ದ ವಿಚಾರಣಾಧೀನ ಖೈದಿಯೊಬ್ಬ ಯುವತಿಗೆ ಫೊನ್ ಮಾಡಿ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದುದಲ್ಲದೇ ಬೆದರಿಕೆ ಹಾಕುತ್ತಿದ್ದ. ಈ ವಿಚಾರವನ್ನು ಯುವತಿ ಪೊಲೀಸರಿಗೆ ತಿಳಿಸಿದ ಹಿನ್ನೆಲೆಯಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಪೊಲೀಸರು ದಾಳಿ ನಡೆಸಿದ್ದಾರೆ. ಜೈಲಿನ ಮೂಲೆ ಮೂಲೆಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕದಲ್ಲಿ ಮೋದಿ ಮತ ಭೇಟೆ – ಏನಿದು ಬಿಜೆಪಿ ರಣತಂತ್ರ?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವೇಶ್ಯಾವಾಟಿಕೆ ನಡೆಸುತ್ತಿದ್ದ 3 ಲಾಡ್ಜ್‌ಗಳ ಮೇಲೆ ದಾಳಿ- ವಿದೇಶಿ ಯುವತಿಯರ ರಕ್ಷಣೆ

    ವೇಶ್ಯಾವಾಟಿಕೆ ನಡೆಸುತ್ತಿದ್ದ 3 ಲಾಡ್ಜ್‌ಗಳ ಮೇಲೆ ದಾಳಿ- ವಿದೇಶಿ ಯುವತಿಯರ ರಕ್ಷಣೆ

    ಚಿತ್ರದುರ್ಗ: ನಗರದ ಮೂರು ಲಾಡ್ಜ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿ, 6 ಜನ ಆರೋಪಿಗಳನ್ನು ಬಂಧಿಸಿ, 6 ವಿದೇಶಿ ಯುವತಿಯರನ್ನು ರಕ್ಷಿಸಿದ್ದಾರೆ.

    ಬಾಂಗ್ಲಾದೇಶದಿಂದ ಅಕ್ರಮವಾಗಿ ಸಾಗಾಟ ಮಾಡಲ್ಪಟ್ಟ ಯುವತಿಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಇತ್ತೀಚೆಗೆ ಒಡನಾಡಿ ಸಂಸ್ಥೆಯು ಬಾಂಗ್ಲಾದೇಶದ ಬಾಲಕಿಯೊಬ್ಬಳನ್ನು ವಿಚಾರಿಸಿ, ವೇಶ್ಯಾವಾಟಿಕೆ ಜಾಲ ಪತ್ತೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿತ್ತು.

    ನಗರದ ಆದರ್ಶ, ಅನುಗ್ರಹ ಮತ್ತು ರಾಜಧಾನಿ ಲಾಡ್ಜ್‌ಗಳಲ್ಲಿ ಬಾಂಗ್ಲಾದೇಶದ ಯುವತಿಯರನ್ನು ಇರಿಸಿ, ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎನ್ನುವ ಮಾಹಿತಿಯನ್ನು ಇಂದು ಡಿವೈಎಸ್‍ಪಿ ಸಂತೋಷ್ ಖಚಿತ ಪಡಿಸಿಕೊಂಡಿದ್ದರು. ಅವರ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಿ 3 ಲಾಡ್ಜ್‌ಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ್ದರು.

    ದಾಳಿಯಲ್ಲಿ ಅಕ್ರಮವಾಗಿ ದೇಶದ ಒಳಗೆ ನುಸುಳಿ ಬಂದಿರುವ ಬಾಂಗ್ಲಾದೇಶ ಮೂಲದ 6 ಜನ ಯುವತಿಯರನ್ನು ರಕ್ಷಿಸಿದ ಪೊಲೀಸರು, ಸ್ಥಳದಲ್ಲಿಯೇ 3 ಜನರನ್ನು ಬಂಧಿಸಿದ್ದರು. ಬಳಿಕ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ಮತ್ತೇ ಮೂವರನ್ನು ಬಂಧಿಸಿದ್ದಾರೆ. ಲಾಡ್ಜ್‌ಗಳ ಮಾಲೀಕರು ಲಾಡ್ಜ್‌ನ ಸ್ನಾನದ ಕೊಠಡಿ ಹಾಗೂ ರೂಮ್‍ಗಳ ಕಿಂಡಿಗಳಲ್ಲಿ ಯುವತಿಯರನ್ನು ಬಚ್ಚಿಟ್ಟು, ವೇಶ್ಯವಾಟಿಕೆ ನಡೆಸುತ್ತಿದ್ದರು ಎನ್ನುವ ಮಾಹಿತಿ ಸಿಕ್ಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಎರಡು ವರ್ಷಗಳ ಹಿಂದೆ ವೇಶ್ಯಾವಾಟಿಕೆ ನಡೆಸುತ್ತಿದ್ದ ಅನುಗ್ರಹ ಲಾಡ್ಜ್‌ನ ಮೇಲೆ ಪೊಲೀಸರು ದಾಳಿ ನಡೆಸಿ, ಲಾಡ್ಜ್‌ನನ್ನು ಸೀಜ್ ಮಾಡಿದ್ದರು. ಮೊದಲೆಲ್ಲ ವಿವಿಧ ರಾಜ್ಯಗಳಿಂದ ಮಹಿಳೆಯನ್ನು ಕರೆತಂದು ವೇಶ್ಯಾವಾಟಿಕೆಗೆ ಬಳಕೆ ಮಾಡಿಕೊಳ್ಳಲಾಗುತ್ತಿತ್ತು ಎಂಬ ಆರೋಪಗಳು ಕೇಳಿ ಬಂದಿದ್ದವು. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಬಾಂಗ್ಲಾದೇಶದ ಮಹಿಳೆಯರನ್ನು ಲಾಡ್ಜ್ ಮಾಲೀಕರು ಇರಿಸಿಕೊಂಡು ದಂಧೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಜನರನ್ನು ಬಡಾವಣೆ ಠಾಣೆ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ವೇಶ್ಯಾವಾಟಿಕೆ ಹಿಂದೆ ದೊಡ್ಡ ಜಾಲವೇ ಇದೆ ಎನ್ನುವ ಶಂಕೆ ವ್ಯಕ್ತವಾಗಿದೆ.

  • ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ಪೊಲೀಸ್ ರೈಡ್-ಸಿಕ್ಕಿದ್ದೇನು ಗೊತ್ತಾ?

    ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ಪೊಲೀಸ್ ರೈಡ್-ಸಿಕ್ಕಿದ್ದೇನು ಗೊತ್ತಾ?

    ಮಂಗಳೂರು: ನಗರದ ಜಿಲ್ಲಾ ಕಾರಾಗೃಹಕ್ಕೆ ಬೆಳ್ಳಂಬೆಳಗ್ಗೆ ಪೊಲೀಸರು ದಾಳಿ ನಡೆಸಿದ್ದಾರೆ. ಜೈಲಿನೊಳಗೆ ಶಸ್ತ್ರಾಸ್ತ್ರ ರವಾನೆಯಾಗಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಡಿಸಿಪಿ ಹನುಮಂತರಾಯ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.

    ದಾಳಿ ವೇಳೆ ಗಾಂಜಾ ಪ್ಯಾಕೆಟ್, ಹುಕ್ಕಾ, ಎರಡು ರಾಡ್, ಎರಡು ಚೂರಿ, ಎರಡು ಮೊಬೈಲ್ ಮತ್ತು ಡ್ರಗ್ಸ್ ಸೇವಿಸುವ ಸಿರಿಂಜ್ ಪತ್ತೆಯಾಗಿದೆ. ದಾಳಿ ವೇಳೆ 50 ಪೊಲೀಸ್ ಅಧಿಕಾರಿಗಳು ಮತ್ತು 129 ಮಂದಿ ಪೊಲೀಸ್ ಪೇದೆಗಳು ಭಾಗಿಯಾಗಿದ್ದರು.

    ಮಂಗಳೂರು ಜೈಲಿನಲ್ಲಿ ಈ ಹಿಂದೆ ಹಲವು ಬಾರಿ ಹೊಡೆದಾಟ, ಹಲ್ಲೆ ಪ್ರಕರಣಗಳು ನಡೆದಿರುವುದರಿಂದ ಪೊಲೀಸರು ಹೆಚ್ಚಿನ ನಿಗಾ ಇಟ್ಟಿದ್ದಾರೆ. ಎರಡು ವರ್ಷದ ಹಿಂದೆ ಇದೇ ಜೈಲಿನ ಒಳಗೆ ಕೈದಿಗಳಿಬ್ಬರ ಹತ್ಯೆಯೂ ನಡೆದಿತ್ತು.

  • ಕಳ್ಳಬಟ್ಟಿ ಅಡ್ಡೆ ಮೇಲೆ ದಾಳಿ- 4 ಲೀಟರ್ ಸಾರಾಯಿ ವಶ

    ಕಳ್ಳಬಟ್ಟಿ ಅಡ್ಡೆ ಮೇಲೆ ದಾಳಿ- 4 ಲೀಟರ್ ಸಾರಾಯಿ ವಶ

    ಬಾಗಲಕೋಟೆ: ಒಂದೆಡೆ ಹೆದ್ದಾರಿ ಪಕ್ಕದಲ್ಲಿದ್ದ ಬಾರ್ ಗಳನ್ನು ಬಂದ್ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಇನ್ನೊಂದೆಡೆ ಅಕ್ರಮ ಮದ್ಯ ತಯಾರಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಂತೆಯೇ ಜಿಲ್ಲೆಯಲ್ಲಿ ಕಳ್ಳಬಟ್ಟಿ ಸಾರಾಯಿ ಅಡ್ಡೆಯ ಮೇಲೆ ಪೊಲಿಸರು ದಾಳಿ ನಡೆಸಿದ ಘಟನೆ ನಡೆದಿದೆ.

    ಈ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಗೋಠೆ ಗ್ರಾಮದಲ್ಲಿ ನಡೆದಿದೆ. ಸಾವಳಗಿ ಪಿ.ಎಸ್.ಐ. ಲಕ್ಷ್ಮಿಕಾಂತ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

    ಮಾಹಿತಿ ತಿಳಿದ ಪೊಲೀಸರು ಅಡ್ಡೆಯ ಮೇಲೆ ದಾಳಿ ನಡೆಸುತ್ತಿದ್ದಂತೆಯೇ ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಹೀಗಾಗಿ ಪೊಲೀಸರು ಅಂದಾಜು 4 ಲೀಟರಿನಷ್ಟು ಕಳ್ಳಬಟ್ಟಿ ಸಾರಾಯಿಯನ್ನು ವಶಕ್ಕೆ ಪಡೆದಿದ್ದಾರೆ. ಹಾಗೆಯೇ ರಸ್ತೆ ಬದಿ ಹೂತಿಟ್ಟಿದ್ದ 17 ಕೊಡ ರಾ ಮೆಟಿರಿಯಲ್‍ಗಳನ್ನು ನಾಶ ಮಾಡಿದ್ದಾರೆ.

    ಈ ಸಂಬಂಧ ಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪೊಲೀಸರ ಮೇಲೇ ಪ್ರತಿದೂರು ದಾಖಲಿಸ್ತಿದ್ದ, ಸಂಸದರ ಸಂಬಂಧಿಗೆ ಪಂಗನಾಮ ಹಾಕಿದ್ದ ನಾಗ

    ಪೊಲೀಸರ ಮೇಲೇ ಪ್ರತಿದೂರು ದಾಖಲಿಸ್ತಿದ್ದ, ಸಂಸದರ ಸಂಬಂಧಿಗೆ ಪಂಗನಾಮ ಹಾಕಿದ್ದ ನಾಗ

    ಬೆಂಗಳೂರು: ನಗರದ ಶ್ರೀರಾಂಪುರದ ಮಾಜಿ ರೌಡಿಶೀಟರ್ ಬಾಂಬ್ ನಾಗನ ಮನೆ ಮೇಲೆ ಇಂದು ಪೊಲೀಸರು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಆತ ಈ ಹಿಂದೆ ನಡೆಸಿದ್ದ ವಂಜನೆ ಹಾಗೂ ರೌಡಿಸಂನ ಪ್ರಕರಣಗಳು ಬೆಳಕಿಗೆ ಬರುತ್ತಿವೆ.

    ಬೆಂಗಳೂರಿನ ಹೊರಗೂ ಬಾಂಬ್ ನಾಗನ ರೌಡಿಸಂ: ಬಾಂಬ್ ನಾಗ ಬೆಂಗಳೂರಿನ ಹೊರಗೂ ರೌಡಿಸಂ ಮಾಡಿದ್ದ. ಫಾರ್ಮ್ ಹೌಸ್ ಮಾಲೀಕರನ್ನ ಅಪಹರಿಸಿ ಫಾರ್ಮ್ ಹೌಸ್ ಬರೆಸಿಕೊಂಡ ನಾಗ ರಾಜಣ್ಣ ಎಂಬವರನ್ನು 2015 ಆಗಸ್ಟ್ ತಿಂಗಳಲ್ಲಿ ಕಿಡ್ನಾಪ್ ಮಾಡಿದ್ದ ಬಾಂಬ್ ನಾಗ, ನೆಲಮಂಗಲದ ಕಾಸರಘಟ್ಟದಲ್ಲಿರುವ ಐಷಾರಾಮಿ ಬಂಗಲೆಯ್ನನ ಅವರಿಂದ ಬರೆಸಿಕೊಂಡಿದ್ದ. ಈ ಬಗ್ಗೆ ದಾಬಸ್‍ಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಬಂಗಲೆ ವಿಚಾರದಲ್ಲಿ ಈಗಲೂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಬಂಗಲೆಯ ಸುತ್ತ ಹತ್ತು ಅಡಿ ಕಾಂಪೌಂಡ್ ನಿರ್ಮಿಸಿ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ. ಬೃಹತ್ ಕಾಂಪೌಂಡ್ ಗೋಡೆಗೆ ಬಾಂಬ್ ನಾಗ ವಿದ್ಯುತ್ ತಂತಿ ಕೂಡ ಅಳವಡಿಸಿದ್ದಾನೆ.

    ಸಂಸದರ ಸಂಬಂಧಿಗೆ ಪಂಗನಾಮ: ಬಾಂಬ್ ನಾಗನ ದುಡ್ಡಿನ ದಂಧೆ ಪ್ರಕರಣ ಹೊಸದೇನಲ್ಲ. ಈ ಹಿಂದೆ ಲೋಕಸಭಾ ಸದಸ್ಯರ ಸಂಬಂಧಿಯೊಬ್ಬರಿಗೆ ಒಂದು ಕೋಟಿ ರುಪಾಯಿ ಚಳ್ಳೆಹಣ್ಣು ತಿನ್ನಿಸಿರೋ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಡಿಸೆಂಬರ್‍ನಲ್ಲಿ ಸಂಸದರೊಬ್ಬರ ಸಂಬಂಧಿಗೆ ಒಂದು ಕೋಟಿ ರುಪಾಯಿ ಹಳೇ ನೋಟನ್ನು ಪಿಂಕ್ ನೋಟ್ ಮಾಡಿಕೊಡುವುದಾಗಿ ಹೇಳಿದ್ದ ನಾಗ ಹಳೇ ನೋಟುಗಳನ್ನು ಪಡೆದುಕೊಂಡು ಉಂಡೇನಾಮ ತೀಡಿದ್ದ. ಈ ಸಂಬಂಧ ಸಿಸಿಬಿಗೆ ದೂರು ಬಂದಿತ್ತು. ಈ ದೂರಿನ ಜೊತೆ ಸರ್ಚ್ ವಾರೆಂಟ್ ಇಟ್ಟುಕೊಂಡು ಹೋದ ಇನ್ಸ್ ಪೆಕ್ಟರ್ ಮಹಾನಂದ ಅವರ ಮೇಲೆ 35 ಮಂದಿ ಮಹಿಳೆಯರಿಂದ ಅಟ್ಯಾಕ್ ಮಾಡಿಸಿ ನಾಗ ಹಗೆ ಸಾಧಿಸಿದ್ದ. ಅನಂತರ ಇನ್ಸ್ ಪೆಕ್ಟರ್ ಸೇರಿದಂತೆ ಎಲ್ಲರ ಮೇಲೂ ಕೇಸ್ ಕೂಡ ಹಾಕಿದ್ದ. ನಾನು ಇಲ್ಲದೇ ಇರುವಾಗ ಹೆಂಡ್ತಿ ಮಕ್ಕಳ ಜೊತೆ ಗಲಾಟೆ ಮಾಡಿದ್ದಾರೆ ಅಂತ ದೂರು ಕೊಟ್ಟಿದ್ದ. ವಿಚಿತ್ರವೆಂದ್ರೆ ಈ ಪ್ರಕರಣದಲ್ಲಿ ಸಿಸಿಬಿ ಹಿರಿಯ ಅಧಿಕಾರಿಗಳು ಮತ್ತು ಶ್ರೀರಾಮಪುರದ ಪೊಲೀಸರಿಂದಲೇ ಸಹಕಾರ ದೊರೆಯಲಿಲ್ಲ ಎನ್ನಲಾಗಿದೆ.

     

  • ಬಾಂಬ್ ನಾಗನ ಮನೆಯಲ್ಲಿ ಬಗೆದಷ್ಟೂ ಸಿಕ್ತಿದೆ ಕೋಟಿ ಕೋಟಿ ಹಳೇ ನೋಟು

    ಬಾಂಬ್ ನಾಗನ ಮನೆಯಲ್ಲಿ ಬಗೆದಷ್ಟೂ ಸಿಕ್ತಿದೆ ಕೋಟಿ ಕೋಟಿ ಹಳೇ ನೋಟು

    – ಖೋಟಾ ನೋಟು ದಂಧೆಯಲ್ಲೂ ನಾಗ ಭಾಗಿ?

    ಬೆಂಗಳೂರು: ಮಾಜಿ ರೌಡಿಶೀಟರ್ ಬಾಂಬ್ ನಾಗನ ಮನೆಯಲ್ಲಿ ಬಗೆದಷ್ಟೂ ಕೋಟಿ ಕೋಟಿ ದುಡ್ಡು ಸಿಕ್ತಿದೆ. ನಾಗನ ಮನೆಯಲ್ಲಿ ಈವರೆಗೆ 150 ಕೋಟಿ ರೂ. ಮೌಲ್ಯದ ಆಸ್ತಿ ಪತ್ರಗಳು ಸಿಕ್ಕಿವೆ. ಈಗಾಗ್ಲೇ 3 ಬಾಕ್ಸ್‍ಗಳನ್ನ ಪೊಲೀಸರು ತೆರೆದಿದ್ದು, ಮತ್ತೆರಡು ಬಾಕ್ಸ್ ಪತ್ತೆಯಾಗಿದೆ.

    ದೇವರ ಪುಸ್ತಕಗಳ ಹಿಂದಿತ್ತು ಹಣ: ಶ್ರೀಮದ್ ಭಗವದ್ಗೀತೆ, ಕೃಷ್ಣವಾಣಿ ಸೇರಿದಂತೆ 200ಕ್ಕೂ ಹೆಚ್ಚು ಪುಸ್ತಕಗಳ ಕೆಳಗೆ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಮೂರು ಕಬೋರ್ಡ್‍ನಲ್ಲಿ ರಿಯಲ್ ಎಸ್ಟೇಟ್ ಪತ್ರಗಳು ಸಿಕ್ಕಿದ್ದು, ಅಂದಾಜಿನ ಮೇಲೆ ಲೆಕ್ಕ ಮಾಡಿದ್ರೂ 150 ಕೋಟಿಗೂ ಮೀರಿದ ಆಸ್ತಿಪತ್ರಗಳಿವೆ.

    ಖೋಟಾ ನೋಟು ದಂಧೆಯನ್ನೂ ಮಾಡ್ತಿದ್ನಾ ನಾಗ?: ಬ್ಲಾಕ್ ಅಂಡ್ ವೈಟ್ ಮನಿ ದಂಧೆ ಜೊತೆಗೆ ಬಾಂಬ್ ನಾಗ ಖೋಟಾ ನೋಟು ದಂಧೆಯಲ್ಲೂ ತೊಡಗಿದ್ದ ಎಂಬ ಶಂಕೆ ವ್ಯಕ್ತವಾಗಿದೆ. ಬಾಂಬ್ ನಾಗನ ಮನೆಯಲ್ಲಿ ಕೋಟಿ ಕೋಟಿ ಹಳೇ ನೋಟುಗಳ ಕಂತೆ ಜೊತೆಗೆ ನೋಟು ಮುದ್ರಿಸುವ ಖಾಲಿ ಪೇಪರ್ ಕೂಡ ಪತ್ತೆಯಾಗಿದೆ. ಕಂತೆ ಕಂತೆ ಹಳೇ ನೋಟುಗಳ ಮಧ್ಯೆಯೇ ಖಾಲಿ ಪೇಪರ್ ಜೋಡಿಸಿಟ್ಟಿದ್ದ ಬಾಂಬ್ ನಾಗ. ಅಲ್ಲದೆ ನೋಟಿನ ಜೊತೆಯಲ್ಲೇ ಹಲವು ಬಗೆಯ ಪ್ರಿಂಟರ್ ಮಷಿನ್ ಕೂಡ ಸಿಕ್ಕಿದೆ.

    ಪೊಲೀಸರು ದಾಳಿ ಮಡಲು ಕಾರಣ?: ಬಾಂಬ್ ನಾಗನ ವಿರುದ್ಧ ದೂರು ನೀಡಿದ್ದು ರಿಯಲ್ ಎಸ್ಟೇಟ್ ಉದ್ಯಮಿ ಉಮೇಶ್. ದೂರುದಾರ ಉಮೇಶ್ ಕಳೆದ ತಿಂಗಳು ವೀರಣ್ಣ ಮತ್ತಿಕಟ್ಟಿ ಅವರ ಅಳಿಯ ಪ್ರವೀಣ್ ಕುಮಾರ್ ಜೊತೆ ನೋಟ್ ದಂಧೆಯಲ್ಲಿ ಬಂಧಿತನಾಗಿದ್ದ. ಉಮೇಶ್ ಬಾಂಬ್ ನಾಗನಿಗೆ 20 ಕೋಟಿ ಮೊತ್ತದ ಹಳೇ ನೋಟುಗಳನ್ನ ಪಿಂಕ್ ನೋಟ್ ಮಾಡಿಕೊಡಲು ಮೊದಲು ಆಫರ್ ನೀಡಿದ್ದ. ಅದರಂತೆ ಬಾಂಬ್ ನಾಗನ ಮನೆಯ ಕೊನೆ ಮಹಡಿಯಲ್ಲಿ 10 ಕೋಟಿ ರೂ. ಎಕ್ಸ್ ಚೇಂಜ್ ದಂಧೆ ನಡೆದಿತ್ತು. ಬಳಿಕ ಉಮೇಶ್ 4ನೇ ಮಹಡಿಗೆ ಬಂದಾಗ ನಾಗನ ಗ್ಯಾಂಗ್‍ನ ಐವರು ರಿವಾಲ್ವಾರ್ ಹಿಡಿದು ಸುತ್ತುವರಿದು ಬೆದರಿಕೆ ಹಾಕಿ, ಉಮೇಶ್‍ಗೆ ಥಳಿಸಿ, ಎಕ್ಸ್ ಚೇಂಜ್ ಆಗಿದ್ದ 10 ಕೋಟಿ ಹಣವನ್ನ ಕಿತ್ತುಕೊಂಡಿದ್ದರು. ಬಳಿಕ ಉಮೇಶ್‍ನನ್ನ ಎತ್ತಿಕೊಂಡು ಹೋಗಿ ಹಲಸೂರು ಬಳಿ ಬಿಸಾಡಿ ಬಂದಿದ್ದರು. ಈ ಎಲ್ಲಾ ಘಟನೆ ಏಪ್ರಿಲ್ 7 ರಂದು ಶ್ರೀರಾಪುರದಲ್ಲಿರುವ ಬಾಂಬ್ ನಾಗನ ನಿವಾಸದಲ್ಲಿ ನಡೆದಿತ್ತು. ದರೋಡೆ ಹಾಗೂ ಅಪಹರಣಕ್ಕೆ ಸಂಬಂಧಿಸಿದಂತೆ ಉಮೇಶ್ ದೂರಿನ ಆಧಾರದ ಮೇಲೆ ಸರ್ಚ್ ವಾರೆಂಟ್ ಪಡೆದು ಪೊಲೀಸರು ಇಂದು ದಾಳಿ ನಡೆಸಿದ್ದಾರೆ. ಡಿಸಿಪಿ ಅಜಯ್ ಹಿಲೋರಿ ನೇತೃತ್ವದಲ್ಲಿ ಬಾಂಬ್ ನಾಗನ ಮನೆ ಶೋಧ ಇನ್ನೂ ಮುಂದುವರೆದಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್, ಇಂತಹ ಆಪರೇಷನ್‍ಗಳು ರೌಡಿಗಳ ಮನೆಗಳ ಮೇಲೆ ಮುಂದುವರೆಯಲಿವೆ. ಕಳೆದ ತಿಂಗಳೇ ನಾನು ಹೇಳಿದಂತೆ, ರೌಡಿ ಚಟುವಟಿಕೆಗಳಿಂದ ಅಕ್ರಮವಾಗಿ ಯಾರೇ ಹಣ ಸಂಪಾದನೆ ಮಾಡಿದ್ರು ಬಿಡಲ್ಲ. ಅಂತವರ ಬಗ್ಗೆ ಮಾಹಿತಿ ಕಲೆ ಹಾಕ್ತಿದ್ದೇವೆ. ಇದು ಮುಂದುವರಿದ ಭಾಗವಷ್ಟೇ. ಅಕ್ರಮ ಚಟುವಟಿಕೆಗಳಿಂದ ಹಣ ಸಂಪಾದನೆ ಮಾಡೋರನ್ನ ಬಿಡುವುದಿಲ್ಲ. ಮಾಜಿ ರೌಡಿ ಅಂತ ಮುಖವಾಡ ಹಾಕಿಕೊಂಡವರಿಗೆ ಇದೆ ಹಬ್ಬ. ಎಲ್ಲರ ಮೇಲೂ ಕಣ್ಣಿಡಲಾಗಿದೆ. ಸ್ವಲ್ಪ ದಿನದ ಹಿಂದೆಯೂ ಇದೆ ರೀತಿ ದಾಳಿ ಮಾಡಲಾಗಿತ್ತು ಮುಂದೆಯೂ ದಾಳಿ ನಡೆಯಲಿದೆ ಅಂತ ಹೇಳಿದ್ರು.

    ಕಿಡ್ನ್ಯಾಪ್ ಮತ್ತು ರಾಬರಿ ಸಂಬಂಧ ಬಾಂಬ್ ನಾಗನ ಮನೆ ಮೇಲೆ ದಾಳಿ ನಡೆಸಿದ್ದೇವೆ. ಇಲ್ಲಿವರೆಗೂ ಒಂದು ರೂಮ್ ಮಾತ್ರ ಓಪನ್ ಮಾಡಿದ್ದೀವಿ. ಮನೆಯವರು ಯಾರೂ ಸ್ಪಂದಿಸಿಲ್ಲ. ಜಮೀನು ವ್ಯವಹಾರ ಸಂಬಂಧ ಸಾಕಷ್ಟು ದಾಖಲೆಗಳು ಸಿಕ್ಕಿವೆ. ಇನ್ನೂ ಹಣದ ಲೆಕ್ಕ ನಡೀತಿದೆ. ಸಂಜೆಯೊಳಗೆ ಲೆಕ್ಕ ಸಿಗಲಿದೆ. ಅಪರಾಧ ಕೃತ್ಯಗಳಿಗೆ ಬಳಸುವ ಮಾರಕಾಸ್ತ್ರಗಳು ಕೂಡ ಪತ್ತೆಯಾಗಿವೆ ಅಂತ ನಿಂಬಾಳ್ಕರ್ ತಿಳಿಸಿದ್ರು. ಸಾಕಷ್ಟು ಕುಖ್ಯಾತ ರೌಡಿಗಳ ಬಗ್ಗೆ ಮಹತ್ವದ ಮಾಹಿತಿ ಕಲೆ ಹಾಕಲಾಗುತ್ತಿದೆ ಅಂತ ನಿಂಬಾಳ್ಕರ್ ಹೇಳಿದ್ರು.

    https://www.youtube.com/watch?v=y6I5dIeMjrU