Tag: ಪೊಲೀಸ್ ವಿಚಾರಣೆ

  • ವಂಚನೆ ಕೇಸ್‌ಗೆ ಟ್ವಿಸ್ಟ್ ಕೊಟ್ಟ ವರ್ತೂರು ಪ್ರಕಾಶ್‌ – 12 ಲಕ್ಷ ನಗದು, 3 ಬ್ರಾಸ್‌ಲೆಟ್‌, ಚಿನ್ನದ ಉಂಗುರ ವಾಪಸ್

    ವಂಚನೆ ಕೇಸ್‌ಗೆ ಟ್ವಿಸ್ಟ್ ಕೊಟ್ಟ ವರ್ತೂರು ಪ್ರಕಾಶ್‌ – 12 ಲಕ್ಷ ನಗದು, 3 ಬ್ರಾಸ್‌ಲೆಟ್‌, ಚಿನ್ನದ ಉಂಗುರ ವಾಪಸ್

    – ಶ್ವೇತಾ ಹೀಗೆ ಮಾಡ್ತಾಳೆಂದು ನನಗೆ ಗೊತ್ತಿಲ್ಲ ಎಂದ ಮಾಜಿ ಸಚಿವ

    ಬೆಂಗಳೂರು: ವಂಚನೆ ಕೇಸ್‌ನಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್‌ (Varthur Prakash) ವಿಚಾರಣೆ ಬಳಿಕ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ.

    ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದ ವರ್ತೂರು ಪ್ರಕಾಶ್‌, ಎಸಿಪಿ ಗೀತಾ ಎದುರು ವಿಚಾರಣೆ (Police Inquiry) ಎದುರಿಸಿದ್ದಾರೆ. ಇದೇ ವೇಳೆ ಆರೋಪಿ ಶ್ವೇತಾ ಗೌಡ (Shweta Gowda) ಕೊಟ್ಟಿದ್ದ ಗಿಫ್ಟ್‌ಗಳನ್ನ ಅಂದ್ರೆ ನಗದು, ಚಿನ್ನಾಭರಣ ಎಲ್ಲವನ್ನೂ ಪೊಲೀಸರಿಗೆ ವಾಪಸ್‌ ಕೊಟ್ಟಿದ್ದಾರೆ. ಒಟ್ಟು 12.50 ಲಕ್ಷ ರೂ. ನಗದು, ಮೂರು ಬ್ರಾಸ್ ಲೆಟ್, 1 ಚಿನ್ನದ ಉಂಗುರವನ್ನ ಎಸಿಪಿ ಗೀತಾ ಎದುರಿಗೇ ಪೊಲೀಸರಿಗೆ ಒಪ್ಪಿಸಿದ್ದಾರೆ.

    ಶ್ವೇತಾ ಗೌಡ ಹೀಗೆ ಮಾಡ್ತಾಳೆಂದು ನನಗೆ ಗೊತ್ತಿಲ್ಲ, ನನಗೂ ಶ್ವೇತಗೌಡಳಿಗೂ ಯಾವುದೇ ಸಂಬಂಧವಿಲ್ಲ. ಗಿಫ್ಟ್ ಅಂತ ನನಗೆ ಆಕೆ ಕೆಲ ಒಡವೆ ನೀಡಿದ್ಲು ಎಂದು ಪೊಲೀಸರಿಗೆ ಜವಾಬು ನೀಡಿದ್ದಾರೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಆಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ: ದೆಹಲಿ ಹೈಕೋರ್ಟ್‌

    ವಿಚಾರಣೆ ಬಳಿಕ ಮಾತನಾಡಿದ ವರ್ತೂರ್ ಪ್ರಕಾಶ್, ನನಗೆ ಆಕೆ ಸ್ನೇಹಿತೆ ಅಲ್ಲ. ಐದಾರು ತಿಂಗಳ. ಹಿಂದೆ ಪರಿಚಯ ಆಗಿದೆ. ನನ್ನ ಹೆಸರು ಬಳಸಿಕೊಂಡು ಚಿನ್ನಭಾರಣ ಖರೀದಿ ಮಾಡಿಕೊಂಡಿದ್ದಾಳೆ. ನನಗೂ ಮನಸ್ಸಿಗೆ ನೋವಾಗಿದೆ. ಚಿನ್ನದ ಅಂಗಡಿಯವರು 2 ಕೋಟಿ ರೂ. ಚಿನ್ನಭಾರಣ ಕೊಟ್ಟಿದ್ದಾರೆ, ಅದ್ಹೇಗೆ ಕೊಟ್ರು ಗೊತ್ತಿಲ್ಲ. ನನ್ನ ತರ ಕೆಲ ರಾಜಕಾರಣಿಗಳು ಹೆಸರು, ಫೋಟೋ ತೆಗೆದುಕೊಂಡು ವಂಚನೆ ಮಾಡಿದ್ದಾಳೆ. ಪೊಲೀಸರ ವಿಚಾರಣೆ ವೇಳೆ ಎಲ್ಲಾ ಮಾಹಿತಿ ಕೊಟ್ಟಿದ್ದೀನಿ ಎಂದು ಸ್ಪಷ್ಟಪಡಿಸಿದ್ದಾರೆ.

    ಚಾಮುಂಡಿ ಬೆಟ್ಟದಲ್ಲಿ ಮೀಟ್‌:
    ವಂಚಕಿ ಶ್ವೇತಾ ವಿಚಾರಣೆ ವೇಳೆ ಹಲವು ಸ್ಪೋಟಕ ಮಾಹಿತಿಗಳು ಬಹಿರಂಗವಾಗಿದೆ. ಶ್ವೇತಾಗೌಡ ಹಾಗೂ ವರ್ತೂರು ಪ್ರಕಾಶ್‌ಗೆ ನಿಕಟ ನಂಟಿರುವುದು ಪತ್ತೆಯಾಗಿದೆ. ಇಬ್ಬರೂ ಹಲವು ಬಾರಿ ಚಾಮುಂಡಿ ಬೆಟ್ಟಕ್ಕೆ ಹೋಗಿ ಬಂದಿದ್ದಾರೆ. ಅಲ್ಲದೇ ತಿರುಪತಿಗೆ ಹೋಗಲು ಸಹ ಟಿಕೆಟ್ ಬುಕ್ ಮಾಡಿರುವುದು ಬಹಿರಂಗವಾಗಿದೆ. ಇದಕ್ಕೆ ಪೂರಕವಾಗಿ ಶ್ವೇತಾ ಮೊಬೈಲ್‌ನಲ್ಲಿ ಹಲವು ಫೋಟೋ ಸಾಕ್ಷ್ಯಗಳು ಸಿಕ್ಕಿವೆ. 3 ಚಿನ್ನದ ಅಂಗಡಿ ಮಾಲೀಕರ ಜ್ಯುವೆಲ್ಲರಿ ಶಾಪ್‌ಗೆ ಶ್ವೇತಾ ಜೊತೆ ವರ್ತೂರು ಪ್ರಕಾಶ್ ಹೋಗಿರುವುದಕ್ಕೆ ಸಾಕ್ಷಿ ಸಿಕ್ಕಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಶಿವಣ್ಣಗೆ ಇಂದು ಶಸ್ತ್ರಚಿಕಿತ್ಸೆ – ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳಿಂದ ಪೂಜೆ

    ಗುಲಾಬ್ ಜಾಮೂನ್ ಅಂತ ನಂಬರ್ ಸೇವ್:
    6 ತಿಂಗಳ ಹಿಂದೆಯಷ್ಟೇ ಶ್ವೇತಾ, ವರ್ತೂರು ಪ್ರಕಾಶ್‌ಗೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದಳು, ತಾನೇ ರಿಕ್ವೆಸ್ಟ್ ಕಳಿಸಿ ಸ್ನೇಹದ ಬಲೆಗೆ ಬೀಳಿಸಿಕೊಂಡಿದ್ದಳು. ಬಳಿಕ ಮೆಸೆಂಜರ್‌ನಲ್ಲಿ ಚಾಟಿಂಗ್ ಶುರುವಾಗಿ ಇಬ್ಬರೂ ಮೊಬೈಲ್‌ನಂಬರ್ ವಿನಿಮಯ ಮಾಡಿಕೊಂಡಿದ್ದಾರೆ. ಬಳಿಕ ವಾಟ್ಸಪ್‌ನಲ್ಲೂ ಚಾಟಿಂಗ್ ಮುಂದುವರಿದಿದೆ. ಶ್ವೇತಾ ವರ್ತೂರು ಪ್ರಕಾಶ್ ನಂಬರ್ ಅನ್ನು ಗುಲಾಬ್ ಜಾಮೂನ್ ಎಂಬ ಹೆಸರಿನಿಂದ ಸೇವ್ ಮಾಡಿಕೊಂಡಿದ್ದಳು ಅನ್ನೋ ವಿಚಾರವೂ ತನಿಖೆ ವೇಳೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕೋಲ್ಕತ್ತಾ ರೇಪ್ & ಮರ್ಡರ್ ಕೇಸ್ | ಘಟನಾ ಸ್ಥಳದಲ್ಲಿ ಪ್ರತಿರೋಧದ ಪುರಾವೆ ಇಲ್ಲ – ಸಿಬಿಐಗೆ CFSL ವರದಿ ಸಲ್ಲಿಕೆ

    ಆತ್ಮೀಯತೆ ಮುಂದುವರಿದ ನಂತರ ಶ್ವೇತಾ ಬಳಿಯೇ ವರ್ತೂರು ಪ್ರಕಾಶ್ 10 ಲಕ್ಷ ರೂ. ಸಾಲ ಪಡೆದುಕೊಂಡಿದ್ದಾರೆ ಅನ್ನೋ ಆರೋಪವೂ ಶ್ವೇತಾಳಿಂದ ಕೇಳಿಬಂದಿದೆ. ಮೂರು ಬ್ರೇಸ್ಲೆಟ್, ಒಂದು ಉಂಗುರ ಸೇರಿ, ಬ್ಯಾಂಕ್ ಖಾತೆಗೆ 10 ಲಕ್ಷ ರೂ. ಹಾಕಿಸಿಕೊಂಡಿದ್ದರಂತೆ, ತಿರುಪತಿಗೆ ಹೋಗಲು ಶ್ವೇತಾ ಜೊತೆ ಟಿಕೆಟ್ ಕೂಡ ಬುಕ್ ಮಾಡಿದ್ದರಂತೆ, ಟಿಕೆಟ್ ಬುಕ್ ಮಾಡಿದ್ದ ಫೋಟೋ ಸಹ ಲಭ್ಯವಾಗಿದೆ. ಹೀಗೆ ಇಬ್ಬರೂ ಸೇರಿ ಕೋಟ್ಯಂತರ ರೂ. ವಂಚನೆ ಮಾಡಿದ್ದಾರೆ ಎಂಬ ಆರೋಪ ಬಹಿರಂಗವಾಗಿದೆ.

  • ಪೊಲೀಸ್ ವಿಚಾರಣೆಗೆ ಹೆದರಿ 3 ವರ್ಷದ ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಟೆಕ್ಕಿ

    ಪೊಲೀಸ್ ವಿಚಾರಣೆಗೆ ಹೆದರಿ 3 ವರ್ಷದ ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಟೆಕ್ಕಿ

    ಕೋಲಾರ: ಬೆಂಗಳೂರಿನಲ್ಲಿ (Bengaluru) ಬಂದು ನೆಲೆಸಿದ್ದ ಗುಜರಾತ್ (Gujarat) ವ್ಯಕ್ತಿಯೊಬ್ಬ ಪೊಲೀಸ್ ವಿಚಾರಣೆಗೆ (Police Enquiry) ಹೆದರಿ ತನ್ನ ಮೂರು ವರ್ಷದ ಮಗಳನ್ನೂ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

    ಕೋಲಾರ ತಾಲ್ಲೂಕು ಕೆಂದಟ್ಟಿ ಗ್ರಾಮದ ಕೆರೆಯಲ್ಲಿ ಕಳೆದ ರಾತ್ರಿ 3 ವರ್ಷದ ಮಗುವಿನ ಶವ ಪತ್ತೆಯಾಗಿದೆ. ಜೊತೆಗೆ ಕೆರೆಯ ದಡದಲ್ಲೇ ನೀಲಿ ಬಣ್ಣದ I-20 ಕಾರು ಸಹ ಪತ್ತೆಯಾಗಿದೆ. ಇದರಿಂದ ಅನುಮಾನಗೊಂಡ ಸ್ಥಳೀಯರು ಕೋಲಾರ ಗ್ರಾಮಾಂತರ ಠಾಣಾ ಪೊಲೀಸರಿಗೆ (Kolar Rural Police) ಮಾಹಿತಿ ನೀಡಿದ್ದಾರೆ. ಪರಿಶೀಲನೆ ನಡೆಸಿದ ಬಳಿಕ ಬೆಂಗಳೂರಿನ ಬಾಗಲೂರು ರಾಗಾ ಅಪಾರ್ಟ್ಮೆಂಟ್‌ನಲ್ಲಿ ವಾಸವಿರುವ, ಗುಜರಾತ್ ಮೂಲದ ಕುಟುಂಬ ಅನ್ನೋದು ಮಾಹಿತಿ ತಿಳಿದು ಬಂದಿದೆ. ಇದನ್ನೂ ಓದಿ: ಅಲೆಮಾರಿ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಪಡೆದುಕೊಳ್ಳಲಿ: ಈಶ್ವರಪ್ಪ

    ಸ್ಥಳಕ್ಕೆ ಬಂದ ಪತ್ನಿ ಭವ್ಯ, ಪತಿ ರಾಹುಲ್ ಹಾಗೂ ಮೂರು ವರ್ಷದ ಮಗು ಜಿಯಾ ಎಂಬುದಾಗಿ ಗುರುತಿಸಿದ್ದಾರೆ. ನಿನ್ನೆ ಬೆಳಗ್ಗೆ ಮಗುವನ್ನು ಶಾಲೆಗೆ (School) ಬಿಟ್ಟು ಬರೋದಾಗಿ ರಾಹುಲ್ ಹೇಳಿ ಹೋಗಿದ್ದರು. ಬಳಿಕ ಫೋನ್ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಈಗ ಶವವಾಗಿ ಪತ್ತೆಯಾಗಿದ್ದಾರೆ. ಇದನ್ನೂ ಓದಿ: ಕ್ರೈಸ್ತ ಧರ್ಮಕ್ಕೆ ಮತಾಂತರವಾದ್ರೆ ಮಾತ್ರ ಸಂಸಾರ – ಪತ್ನಿ ವಿರುದ್ಧ ಠಾಣೆಯ ಮೆಟ್ಟಿಲೇರಿದ ಪತಿ

    ಏನಿದು ಘಟನೆ?
    2-3 ವರ್ಷಗಳ ಹಿಂದೆಯಷ್ಟೇ ರಾಹುಲ್ – ಭವ್ಯ ದಂಪತಿ ಗುಜರಾತ್‌ನಿಂದ (Gujarat) ಬೆಂಗಳೂರಿನಲ್ಲಿ ಬಂದು ನೆಲೆಸಿದ್ದರು. ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ ಕಳೆದ 6 ತಿಂಗಳಿನಿಂದ ರಾಹುಲ್ ಕೆಲಸವಿಲ್ಲದೆ ಮನೆಯಲ್ಲೇ ಇದ್ದರು. ಇದರಿಂದ ಸಾಲದ ಹೊರೆ ಹೆಚ್ಚಾಯಿತು. ಇದೇ ವಿಚಾರಕ್ಕೆ ರಾಹುಲ್ ತುಂಬಾ ಬೇಸರ ಮಾಡಿಕೊಂಡಿದ್ದರು.

    ಇತ್ತೀಚೆಗೆ ರಾಹುಲ್ ತಮ್ಮ ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿದೆ ಎಂದು ಬಾಗಲೂರು ಪೊಲೀಸ್ ಠಾಣೆಗೆ (Bagaluru Police Station) ದೂರು ನೀಡಿದ್ದರು. ಪದೇ-ಪದೇ ಪೊಲೀಸ್ ಠಾಣೆಗೆ ಹೋಗಿ ವಿಚಾರಿಸಿ ಬರುತ್ತಿದ್ದರು. ಪೊಲೀಸರು ದೂರಿನ ಅನ್ವಯ ತನಿಖೆ ನಡೆಸಿದಾಗ, ಮನೆಯಲ್ಲಿ ಇದ್ದ ಒಡವೆಯನ್ನು ರಾಹುಲ್ ತಾನೇ ಕದ್ದು ಚೆಮ್ಮನೂರ್ ಜ್ಯುವೆಲರ್ಸ್‌ನಲ್ಲಿ ಅಡವಿಟ್ಟು, ಬಳಿಕ ಕಳ್ಳತನದ ನಾಟಕವಾಡಿ ಸುಳ್ಳು ದೂರು ನೀಡಿದ್ದ ವಿಚಾರ ತಿಳಿದು ಬಂದಿದೆ. ಇದರಿಂದ ಪೊಲೀಸರು ರಾಹುಲ್ ಮೇಲೆ ಕೋಪಗೊಂಡು ಠಾಣೆಗೆ ಬರುವಂತೆ ತಾಕೀತು ಮಾಡಿದ್ದಾರೆ. ಮನೆಗೂ ಬಂದು ಹೇಳಿ ಹೋಗಿದ್ದಾರೆ. ಇದೇ ವಿಚಾರಕ್ಕೆ ಭಯ ಪಟ್ಟು ರಾಹುಲ್ ಏನಾದ್ರೂ ಮಾಡಿಕೊಂಡಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.

    ರಾಹುಲ್ ಬಳಿಯಿದ್ದ ಪರ್ಸ್, ಮೊಬೈಲ್ ಎಲ್ಲವೂ ಕಾರ್‌ನಲ್ಲೇ ಇದೆ. ಕೋಲಾರ ಗ್ರಾಮಾಂತರ ಪೊಲೀಸರು ಹಾಗೂ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದ್ದು, ಕೆಂದಟ್ಟಿ ಕೆರೆಯಲ್ಲಿ ರಾಹುಲ್ ಶವಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಐಟಿ ಅಧಿಕಾರಿಗಳ ಟಾರ್ಚರ್‌ಗೆ ಪತಿ ಆತ್ಮಹತ್ಯೆ – ಪರಮೇಶ್ವರ್ ಪಿಎ ರಮೇಶ್ ಪತ್ನಿ ಹೇಳಿಕೆ

    ಐಟಿ ಅಧಿಕಾರಿಗಳ ಟಾರ್ಚರ್‌ಗೆ ಪತಿ ಆತ್ಮಹತ್ಯೆ – ಪರಮೇಶ್ವರ್ ಪಿಎ ರಮೇಶ್ ಪತ್ನಿ ಹೇಳಿಕೆ

    ರಾಮನಗರ: ಐಟಿ ಅಧಿಕಾರಿಗಳ ಟಾರ್ಚರ್ ಕೊಟ್ಟರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತಿ ಹೇಳಿದ್ದರು. ಆದರಂತೆ ಅಧಿಕಾರಿಗಳ ಕಿರುಕುಳಕ್ಕೆ ಆತ್ಮಹತ್ಯೆ ಶರಣಾಗಿದ್ದಾರೆ. ಪತಿಯ ಸಾವಿನಿಂದ ಅನ್ಯಾಯವಾಗಿದ್ದು, ನಮಗೆ ನ್ಯಾಯ ಬೇಕು ಎಂದು ಮಾಜಿ ಡಿಸಿಎಂ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಪತ್ನಿ ಸೌಮ್ಯ ಹೇಳಿದ್ದಾರೆ.

    ಐಟಿ ಅಧಿಕಾರಿಗಳ ತನಿಖೆಗೆ ಹೆದರಿ ಅ.12ರಂದು ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಡಾ.ಜಿ.ಪರಮೇಶ್ವರ್ ಅವರ ಅಪ್ತ ಸಹಾಯಕ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ ಹಾಗೂ ವಿಚಾರಣೆ ನಡೆಸಿರುವ ಕುರಿತು ರಮೇಶ್ ಪತ್ನಿ ಸೌಮ್ಯ ಅವರು ಐಟಿ ಅಧಿಕಾರಿಗಳ ವಿರುದ್ಧ ಜ್ಞಾನಭಾರತಿ ಪೊಲೀಸರ ಎದುರು ಹೇಳಿಕೆ ನೀಡಿದ್ದಾರೆ.

    ಐಟಿ ಅಧಿಕಾರಿಗಳು ನಮ್ಮ ಮನೆಗೆ ಬಂದಿದ್ದರು. ಐಟಿ ಅಧಿಕಾರಿಗಳ ಕಿರುಕುಳದಿಂದ ಮನನೊಂದು ನನ್ನ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳ ದಾಳಿಯಿಂದ ಸಾಕಷ್ಟು ಮಾನ ಮಾರ್ಯದೆ ಹೋಗಿದೆ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಎಲ್ಲಾ ಬಗ್ಗೆ ಜ್ಞಾನ ಭಾರತಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದೇನೆ ಎಂದು ಸೌಮ್ಯ ತಿಳಿಸಿದ್ದಾರೆ.

    ನಮ್ಮ ಮನೆಗೆ ಐಟಿ ಅಧಿಕಾರಿಗಳೇ ಪತಿಯನ್ನು ಕರೆದುಕೊಂಡು ಬಂದು ಮತ್ತೆ ಕರೆದುಕೊಂಡು ಹೋಗಿದ್ದರು. ನಮ್ಮವರ ಫೋನ್ ಕೂಡ ಐಟಿ ಅಧಿಕಾರಿಗಳೇ ಇಟ್ಟಿಕೊಂಡಿದ್ದರು. ಅವರನ್ನು ಶನಿವಾರದವರೆಗೂ ಸಂಪರ್ಕಿಸಲು ಸಾಧ್ಯವಾಗಲಿಲ್ಲ. ಮನೆಗೆ ಕರೆತಂದಿದ್ದ ವೇಳೆ ನಿಮ್ಮದೇನೂ ಇಲ್ಲ ನಿಮ್ಮ ಸಾಹೇಬರ ಬಗ್ಗೆ ಏನಾದ್ರೂ ಇದ್ದರೆ ಹೇಳಿ, ವ್ಯವಹಾರದ ಬಗ್ಗೆ ಕಾಲೇಜಿನ ಬಗ್ಗೆ ಎಂದು ಕೇಳಿದ್ದರು. ಇದಕ್ಕೆ ನಮ್ಮ ಪತಿ ನಾನು ಕೇವಲ ಟೈಪಿಸ್ಟ್ ನನ್ನ ಕೆಲಸ ನಾನು ಮಾಡ್ತಿದ್ದೆ ಅಷ್ಟೇ. ಅವರ ವ್ಯವಹಾರಗಳಿಗೂ ನನಗೂ ಸಂಬಂಧವಿಲ್ಲ, ನೀವು ಇದೇ ರೀತಿ ಟಾರ್ಚರ್ ಕೊಟ್ಟರೇ ಆತ್ಮಹತ್ಯೆ ಕೂಡ ಮಾಡಿಕೊಳ್ಳುತ್ತೇನೆ ಎಂದು ಐಟಿ ಅಧಿಕಾರಿಗಳ ಮುಂದೆ ಹೇಳಿಕೊಂಡಿದ್ದರು. ಅದರಂತೆ ಅವರು ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಮಗೆ ನ್ಯಾಯ ಬೇಕು ಎಂದು ಮನವಿ ಮಾಡಿದ್ದಾರೆ.

    ಮಗನನ್ನು ನೆನೆದು ತಾಯಿ ಸಾವಿತ್ರಮ್ಮ ಕಣ್ಣೀರು ಇಡುತ್ತಿದ್ದರೇ. ತಂದೆ ಸಂಪಂಗಯ್ಯ ಮಗನ ಸಾವಿನ ನೋವಿನಿಂದ ಹೊರ ಬಂದಿಲ್ಲ. ಮಗನ ಸಾವಿನ ಬಗ್ಗೆ ಏನು ಹೇಳಲಿ. ನಾವು ಊರಿನಲ್ಲಿ ಇದ್ದೇವು ಅವರ ಜೀವನ ಅವರು ಮಾಡಿಕೊಂಡು ಇದ್ದರು. ನಾನು ಮಗಳ ಮನೆಯಲ್ಲಿ ಇದ್ದೆ. ಮಗ ನನ್ನನ್ನು ನೋಡಲು ಕರೆಯುತ್ತಿದ್ದಾನೆ ಎಂದು ಕೊಂಡಿದ್ದೇ. ಅಲ್ಲಿಗೆ ಹೋಗಿ ನೋಡಿದಾಗಲೇ ನನ್ನ ಮಗ ಹೆಣವಾಗಿ ನನಗೆ ಕಂಡ ಎಂದು ತಾಯಿ ಸಾವಿತ್ರಮ್ಮ ಕಣ್ಣೀರಿಟ್ಟರು.