Tag: ಪೋರ್ಶೆ ಕಾರು ಅಪಘಾತ

  • ಪೋರ್ಶೆ ಕಾರು ಅಪಘಾತ ಕೇಸ್ – ಆರೋಪಿ ಅಪ್ರಾಪ್ತನ ತಾಯಿ ಬಂಧನ

    ಪೋರ್ಶೆ ಕಾರು ಅಪಘಾತ ಕೇಸ್ – ಆರೋಪಿ ಅಪ್ರಾಪ್ತನ ತಾಯಿ ಬಂಧನ

    ಮುಂಬೈ: ಪೋರ್ಶೆ ಕಾರು ಡಿಕ್ಕಿ (Porsche Crash Case) ಹೊಡೆದು ಇಬ್ಬರು ಟೆಕ್ಕಿಗಳು ಮೃತಪಟ್ಟ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಕಾರು ಚಲಾಯಿಸಿದ್ದ ಆರೋಪಿ ಅಪ್ರಾಪ್ತನ ತಾಯಿಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.

    ಅಪಘಾತ ಸಂಭವಿಸಿದಾಗ ತನ್ನ ಮಗ ಕುಡಿದಿರಲಿಲ್ಲ ಎಂದು ಸಾಬೀತುಪಡಿಸಲು ತಾಯಿ ತನ್ನ ರಕ್ತದ ಮಾದರಿಯನ್ನು ಬದಲಾಯಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪೋರ್ಶೆ ಕಾರು ಅಪಘಾತ ಕೇಸ್‌; ಅಪ್ರಾಪ್ತನ ರಕ್ತದ ಮಾದರಿ ವರದಿ ಬದಲಾಯಿಸಲು ವೈದ್ಯರಿಗೆ 3 ಲಕ್ಷ ಲಂಚ

    ಅಪ್ರಾಪ್ತನ ರಕ್ತದ ಮಾದರಿ ಬದಲಿಗೆ ಆತನ ತಾಯಿಯ ರಕ್ತದ ಮಾದರಿಯನ್ನು ಪರೀಕ್ಷೆ ವೇಳೆ ಬದಲಾಯಿಸಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಹೇಳಿದ್ದಾರೆ.

    ಮೇ 19 ರಂದು ಪುಣೆಯ ಕಲ್ಯಾಣಿ ನಗರದಲ್ಲಿ ಅಪ್ರಾಪ್ತ ಪಾನಮತ್ತರಾಗಿ ಪೋರ್ಶೆ ಕಾರು ಚಲಾಯಿಸಿದ ಕಾರಣ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಇಬ್ಬರು ಟೆಕ್ಕಿಗಳು ಸಾವನ್ನಪ್ಪಿದ್ದರು. ಅಪ್ರಾಪ್ತನ ಕುಟುಂಬದ ಚಾಲಕನನ್ನು ಅಪಹರಿಸಿ ತಾನೇ ತಪ್ಪು ಒಪ್ಪಿಕೊಳ್ಳುವಂತೆ ಆಮಿಷ ಒಡ್ಡಲಾಗಿತ್ತು. ಈ ಆರೋಪದಲ್ಲಿ ಈಗಾಗಲೇ ಬಾಲಕನ ತಂದೆ ಮತ್ತು ತಾತನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಪೋರ್ಶೆ ಕಾರು ಅಪಘಾತ ಪ್ರಕರಣ- ಇಬ್ಬರು ವೈದ್ಯರ ಬಂಧನ

    ಅಪರಾಧವನ್ನು ಮುಚ್ಚಿಡಲು ಪ್ರಭಾವಿ ಕುಟುಂಬ ನಡೆಸಿದ ಪ್ರಯತ್ನಗಳು ತನಿಖೆಯಿಂದ ತಿಳಿದುಬಂದಿದೆ. ಸರ್ಕಾರಿ ಸ್ವಾಮ್ಯದ ಸಸೂನ್ ಆಸ್ಪತ್ರೆಯಲ್ಲಿ ಅಪ್ರಾಪ್ತನ ವೈದ್ಯಕೀಯ ಪರೀಕ್ಷೆಯಲ್ಲೂ ಅಕ್ರಮಗಳು ನಡೆದಿವೆ.

  • ಪೋರ್ಶೆ ಕಾರಿಗೆ ಟೆಕ್ಕಿಗಳು ಬಲಿ ಪ್ರಕರಣ – ಅಪ್ರಾಪ್ತನ ತಂದೆಗೆ 2 ದಿನ ಪೊಲೀಸ್ ಕಸ್ಟಡಿ

    ಪೋರ್ಶೆ ಕಾರಿಗೆ ಟೆಕ್ಕಿಗಳು ಬಲಿ ಪ್ರಕರಣ – ಅಪ್ರಾಪ್ತನ ತಂದೆಗೆ 2 ದಿನ ಪೊಲೀಸ್ ಕಸ್ಟಡಿ

    ಮುಂಬೈ: ಪುಣೆಯಲ್ಲಿ ಐಷಾರಾಮಿ ಕಾರು ಪೋರ್ಶೆ (Porsche Car Accident) ಚಲಾಯಿಸಿ ಇಬ್ಬರು ಟೆಕ್ಕಿಗಳನ್ನು ಬಲಿ ಪಡೆದ 17 ವರ್ಷದ ಬಾಲಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ ರಿಯಲ್ ಎಸ್ಟೇಟ್ ಉದ್ಯಮಿ ವಿಶಾಲ್ ಅಗರ್‌ವಾಲ್ ಅವರನ್ನು ಬಂಧಿಸಿದ್ದ ಪೊಲೀಸರು ಇಂದು ನ್ಯಾಯಲಯದ ಮುಂದೆ ಹಾಜರುಪಡಿಸಿ ಎರಡು ದಿನಗಳ ಕಸ್ಟಡಿಗೆ (Police Custody) ಪಡೆದಿದ್ದಾರೆ.

    ಘಟನೆಗೆ ಅಪ್ರಾಪ್ತ ಬಾಲಕನಿಗೆ ಐಷಾರಾಮಿ ಕಾರ್ ನೀಡಿದ್ದು, ಬಾಲಕನ ತಂದೆಯ ನಿರ್ಲಕ್ಷವೂ ಕಾರಣವಾಗಿದ್ದು, ತನಿಖೆ ನಡೆಸಲು ಕಸ್ಟಡಿಗೆ ಬೇಕು ಎಂದು ಪೊಲೀಸರು ಮನವಿ ಮಾಡಿದರು. ವಾದ ಆಲಿಸಿದ ಕೋರ್ಟ್ ಎರಡು ದಿನಗಳ ಕಾಲ ವಿಶಾಲ್ ಅಗರ್‌ವಾಲ್ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿದೆ. ಇದನ್ನೂ ಓದಿ: ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬೆದರಿಕೆ

    ಈ ನಡುವೆ ಬೆಂಗಳೂರಿನಲ್ಲಿ ಖರೀದಿಸಿದ್ದ ಕಾರಿಗೆ ಶಾಶ್ವತ ನೋಂದಣಿ ಮಾಡಿಸಿರಲಿಲ್ಲ. 1,758 ರೂ. ಶುಲ್ಕ ಬಾಕಿ ಉಳಿಸಿಕೊಂಡು ನಿರ್ಲಕ್ಷ್ಯ ತೋರಿದ್ದ ಹಿನ್ನೆಲೆ ಕಾರಿನ ನೋಂದಣಿಯನ್ನು ಶಾಶ್ವತವಾಗಿ ಬಾಕಿ ಉಳಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ದೇಶದಾದ್ಯಂತ ಈ ಪ್ರಕರಣದ ಬಗ್ಗೆ ವಿರೋಧ ವ್ಯಕ್ತವಾದ ಬಳಿಕ ಎಚ್ಚೆತ್ತಿರುವ ಅಧಿಕಾರಿಗಳು ಆರೋಪಿ ಬಾಲಕನಿಗೆ 17 ವರ್ಷ ತುಂಬಿದ್ದು ಆತನಿಗೆ 25 ವರ್ಷ ತುಂಬವವರೆಗೆ ಡ್ರೈವಿಂಗ್ ಲೈಸೆನ್ಸ್ ನೀಡಲಾಗುವುದಿಲ್ಲ ಎಂದು ಪುಣೆ ಆರ್‌ಟಿಓ ತಿಳಿಸಿದೆ. ಇದನ್ನೂ ಓದಿ: ಪುತ್ರನಿಗೆ 2.5 ಕೋಟಿ ಮೌಲ್ಯದ ಕಾರು ಗಿಫ್ಟ್‌; 1,758 ರೂ. ಕೊಟ್ಟು ನೋಂದಣಿಯನ್ನೇ ಮಾಡಿಸಿಲ್ಲ ಪುಣೆಯ ಬಿಲ್ಡರ್‌

    ತನಿಖೆ ಸದ್ಯ ಮುಂದುವರಿದಿದ್ದು, ಅಪ್ರಾಪ್ತ ಮದ್ಯಪಾನ ಮಾಡಲು ಹೋಗಿದ್ದ ಬಾರ್‌ನಿಂದ 48,000 ರೂ ಹಣದ ಬಿಲ್ ಅನ್ನು ಪಡೆದುಕೊಳ್ಳಲಾಗಿದೆ. ಇದನ್ನೂ ಓದಿ: ಮೈಸೂರಿನಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆ – ಒಂದೇ ಕುಟುಂಬದ ನಾಲ್ವರು ದುರ್ಮರಣ