Tag: ಪೋಸ್ಟ್ ಮಾಸ್ಟರ್

  • ಆನ್‌ಲೈನ್ ಬೆಟ್ಟಿಂಗ್‌ಗಾಗಿ ಬಡವರ ಹಣಕ್ಕೆ ಕನ್ನ – 10 ಲಕ್ಷ ವಂಚಿಸಿ ಪರಾರಿಯಾದ ಪೋಸ್ಟ್ ಮಾಸ್ಟರ್

    ಆನ್‌ಲೈನ್ ಬೆಟ್ಟಿಂಗ್‌ಗಾಗಿ ಬಡವರ ಹಣಕ್ಕೆ ಕನ್ನ – 10 ಲಕ್ಷ ವಂಚಿಸಿ ಪರಾರಿಯಾದ ಪೋಸ್ಟ್ ಮಾಸ್ಟರ್

    – ವೃದ್ಧರ ಪಿಂಚಣಿ ಹಣವನ್ನೂ ನುಂಗಿದ ಆಸಾಮಿ

    ಚಿಕ್ಕಬಳ್ಳಾಪುರ: ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಆನ್‌ಲೈನ್ ಬೆಟ್ಟಿಂಗ್‌ಗೆ ದಾಸನಾಗಿ ಬಡವರ ಹಣಕ್ಕೆ ಕನ್ನ ಹಾಕಿ ಪರಾರಿಯಾಗಿದ್ದಾನೆ.

    ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಪೈಲಗುರ್ಕಿ ಗ್ರಾಮದ ಅಂಚೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೋಸ್ಟ್ ಮಾಸ್ಟರ್ ನಿಂಗೇಶ್ ಎಂಬಾತ ಬಡವರ ಹಣವನ್ನೇ ಆನ್‌ಲೈನ್ ಬೆಟ್ಟಿಂಗ್‌ಗೆ ಹಾಕಿ ಕೈ ಸುಟ್ಟುಕೊಂಡು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಅಂದಹಾಗೆ ಚಿಕ್ಕಪೈಲಗುರ್ಕಿ ಅಂಚೆ ಕಚೇರಿಗೆ 13 ಹಳ್ಳಿಗಳು ಸೇರಿದ್ದು, ನೂರಾರು ಮಂದಿ ಹಳ್ಳಿ ಜನ ದುಡಿದ ಹಣವನ್ನ ಅಂಚೆ ಕಚೇರಿಯ ಖಾತೆಗಳಲ್ಲಿ ಜಮೆ ಮಾಡಿಕೊಂಡಿದ್ರು. ಅದರಲ್ಲೂ ಹಳ್ಳಿಗಾಡಿನಲ್ಲಿ ವಯೋವೃದ್ಧರಿಗೆ ಬರುವ ಪಿಂಚಣಿ ಸಹ ಇದೇ ಅಂಚೆ ಕಚೇರಿಯ ಮೂಲಕವೇ ಬರ್ತಿತ್ತು. ಪೆನ್ಷನ್, ಕೂಲಿ, ಆರ್‌ಡಿ, ಎಫ್‌ಡಿ ಹೀಗೆ ಬಡವರ ಖಾತಗೆಳಲ್ಲಿರಬೇಕಾದ ಹಣವನ್ನೆಲ್ಲಾ ಪೋಸ್ಟ್ ಮಾಸ್ಟರ್ ನಿಂಗೇಶ್ ಆನ್‌ಲೈನ್ ಗೇಮ್‌ಗಾಗಿ ಬಳಸಿಕೊಂಡಿದ್ದಾನೆ. ಹಳ್ಳಿಯ ಜನ ಕೇಳಿದಾಗ ಇನ್ನೂ ಬಂದಿಲ್ಲ ಅಂತ ಸುಳ್ಳು ಹೇಳಿಕೊಂಡು ಓಡಾಡಿಕೊಂಡಿದ್ದಾನೆ. ಜೋರಾಗಿ ಮಾತಾಡುವವರಿಗೆ ಆಗಾಗ್ಗೆ ಒಂದಷ್ಟು ಹಣ ಕೊಟ್ಟು ಸಮಾಧಾನ ಮಾಡಿಕೊಂಡು ಬಂದಿದ್ದಾನೆ. ಆದರೆ, ಈಗ ಬರೋಬ್ಬರಿ 10 ಲಕ್ಷಕ್ಕೂ ಅಧಿಕ ಹಣವನ್ನ ದುರುಪಯೋಗ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಹಾಸನ | ಮನೆಯಲ್ಲಿ ನಿಗೂಢ ಸ್ಫೋಟ – ಝೀರೋ ಟ್ರಾಫಿಕ್‍ನಲ್ಲಿ ಗಾಯಾಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ

    ಮೂಲತಃ ಚಿತ್ರದುರ್ಗ ಜಿಲ್ಲೆಯ ನಿಂಗೇಶ್ ಕಳೆದ 2 ವರ್ಷಗಳ ಹಿಂದಷ್ಟೇ ಚಿಕ್ಕಪೈಲಗುರ್ಕಿ ಗ್ರಾಮದ ಅಂಚೆಕಚೇರಿಗೆ ಕೆಲಸಕ್ಕೆ ಸೇರಿಕೊಂಡಿದ್ದ. ಆರಂಭದಲ್ಲಿ ಚೆನ್ನಾಗಿ ಕೆಲಸ ಮಾಡಿಕೊಂಡು ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರನಾಗಿದ್ದ. ಕಳೆದ ಒಂದು ವರ್ಷದಿಂದ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳ ದಾಸನಾಗಿ ದುಡ್ಡನ್ನೆಲ್ಲಾ ಅದಕ್ಕೆ ಹಾಕಿ ಹಾಳು ಮಾಡಿಕೊಂಡಿದ್ದ. ಸಾಲದು ಅಂತ ಬಡವರ ಹಣವನ್ನ ಹಾಕಿ ಸಾಕಷ್ಟು ಸಾಲಸೋಲ ಮಾಡಿಕೊಂಡಿದ್ದ. ವೃದ್ಧರಿಗೆ ಬರುತ್ತಿದ್ದ ಪಿಂಚಣಿ ಹಣವನ್ನೂ ಸಹ ಬಿಡದೆ ಪೋಸ್ಟ್ ಮಾಸ್ಟರ್ ಲಿಂಗೇಶ್ ದುರಪಯೋಗ ಮಾಡಿಕೊಂಡಿದ್ದಾನೆ. ನರಸಿಂಹರೆಡ್ಡಿ ಎಂಬವರ ಮಕ್ಕಳ ಹೆಸರಲ್ಲಿ ಇಟ್ಟಿದ್ದ ಎಫ್‌ಡಿ ಹಣವನ್ನೂ ಡ್ರಾ ಮಾಡಿ ನುಂಗಿ ನೀರು ಕುಡಿದಿದ್ದಾನೆ. ಇದರಿಂದ ರೊಚ್ಚಿಗೆದ್ದ ನರಸಿಂಹರೆಡ್ಡಿ ಪೋಸ್ಟ್ ಮಾಸ್ಟರ್ ನಿಂಗೇಶ್ ಬೈಕ್ ಕಿತ್ತುಕೊಂಡು ಮನೆಯಲ್ಲಿಟ್ಟುಕೊಂಡಿದ್ದಾರೆ.

    ವಿಷಯ ಬೆಳಕಿಗೆ ಬಂದ ತಕ್ಷಣ, ಅಂಚೆ ನಿರೀಕ್ಷಕರು ಹಾಗೂ ಉಪವಿಭಾಗಾಧಿಕಾರಿ ಶಶಿಕುಮಾರ್ ಚಿಕ್ಕಪೈಲಗುರ್ಕಿ ಅಂಚೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಂದು ತಿಂಗಳಿನಿಂದ ಅಂಚೆ ಕಚೇರಿಗೆ ಬಂದಿದ್ದ ಪತ್ರಗಳನ್ನು ಸಹ ಹಂಚದೆ ಕಚೇರಿಯಲ್ಲೇ ಬಿಟ್ಟು, ಕೊನೆಗೆ ನಿಂಗೇಶ್ ಪರಾರಿಯಾಗಿದ್ದಾನೆ. ಹೀಗಾಗಿ ಮೇಲಾಧಿಕಾರಿಗಳು ಆತನನ್ನ ಅಮಾನತು ಮಾಡಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಬಿಜೆಪಿ ನಾಯಕರ ಬಣ್ಣ ಬಯಲಾಗುತ್ತಿದೆ, ಸಾರ್ವಜನಿಕರ ಎದುರು ಬೆತ್ತಲಾಗುತ್ತಿದ್ದಾರೆ: ಸಮೀಕ್ಷೆಯಲ್ಲಿ ಭಾಗಿಯಾಗುವಂತೆ ಸಿಎಂ ಮನವಿ

  • ಬೆಂಗಳೂರಿನ ಪೋಸ್ಟ್ ಮಾಸ್ಟರ್ ಕೆಲಸಕ್ಕೆ ಬಿಲ್ ಗೇಟ್ಸ್ ಫಿದಾ – ಡಿಜಿಟಲೀಕರಣಕ್ಕೆ ಮನಸೋತ ಪೋಸ್ಟ್ ವೈರಲ್

    ಬೆಂಗಳೂರಿನ ಪೋಸ್ಟ್ ಮಾಸ್ಟರ್ ಕೆಲಸಕ್ಕೆ ಬಿಲ್ ಗೇಟ್ಸ್ ಫಿದಾ – ಡಿಜಿಟಲೀಕರಣಕ್ಕೆ ಮನಸೋತ ಪೋಸ್ಟ್ ವೈರಲ್

    ಬೆಂಗಳೂರು: ಸಿಲಿಕಾನ್ ಸಿಟಿ ಪೋಸ್ಟ್ ಮಾಸ್ಟರ್ (Post Master) ಕೆಲಸಕ್ಕೆ ಮೈಕ್ರೋಸಾಫ್ಟ್ (Microsoft) ಸಹಸ್ಥಾಪಕ ಬಿಲ್‌ಗೇಟ್ಸ್ (Bill Gates) ಫಿದಾ ಆಗಿದ್ದು, ಭಾರತದ ಡಿಜಿಟಲೀಕರಣಕ್ಕೆ (Digitization) ಮನಸೋತು ಪೋಸ್ಟ್‌ವೊಂದನ್ನು ಹಾಕಿದ್ದಾರೆ. ಸದ್ಯ ಈ ಪೋಸ್ಟ್ ಎಲ್ಲೆಡೆ ವೈರಲ್ ಆಗುತ್ತಿದೆ.

    ಈ ಪೋಸ್ಟ್‌ನಲ್ಲಿ ಅಂಚೆ ಕಚೇರಿ ಪೋಸ್ಟ್ ಮಾಸ್ಟರ್ ಕುಸುಮಾರನ್ನು ಬಿಲ್ ಗೇಟ್ಸ್ ಹಾಡಿಹೊಗಳಿದ್ದು, ಆಕೆಯ ಜೊತೆ ನಗುನಗುತ್ತಾ ಮಾತನಾಡುತ್ತಿರುವ ಬಿಲ್ ಗೇಟ್ಸ್ ಆಕೆಯ ಕೆಲಸದ ಬಗ್ಗೆ ಲಿಂಕ್ಡ್ ಇನ್ ಅಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೇ ಕುಸುಮಾ ಮಾಡುವ ಕೆಲಸದ ಬಗ್ಗೆ ಹೆಚ್ಚು ತಿಳಿದುಕೊಳ್ಳುವ ಸಲುವಾಗಿ ಒಂದು ಲಿಂಕ್ ಅನ್ನು ಸಹಾ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ:‌ ‘ಶಕ್ತಿ’ ವಿರೋಧಿಸಿ ಕರ್ನಾಟಕ ಬಂದ್ – ಖಾಸಗಿ ಸಾರಿಗೆ ಒಕ್ಕೂಟದ ಜೊತೆಗಿನ ಸಭೆ ವಿಫಲ

    ಬಿಲ್ & ಮೆಲಿಂಡಾ ಗೇಟ್ಸ್ ಫೌಂಡೇಶನ್‌ನ ವೆಬ್‌ಸೈಟ್ ಲಿಂಕ್‌ನಲ್ಲಿ ವಿಡಿಯೋ ಪ್ರಕಟ ಮಾಡಿದ್ದು, ಭಾರತದಲ್ಲಿ ಡಿಜಿಟಲ್ ಬ್ಯಾಂಕಿಂಗ್ ಕಥೆ ಮತ್ತು ಯುವತಿಯ ವೃತ್ತಿಜೀವನದ ಹಾದಿ ಎಂಬ ಶೀರ್ಷಿಕೆಯಡಿ ಮಾಹಿತಿ ಪ್ರಕಟಿಸಲಾಗಿದೆ. ಭಾರತದಲ್ಲಿ ಅಳವಡಿಸಿರುವ ಡಿಜಿಟಲೀಕರಣಕ್ಕೆ ಬಿಲ್ ಗೇಟ್ಸ್ ಮನಸೋತಿದ್ದಾರೆ. ಇದನ್ನೂ ಓದಿ: ಬುಧವಾರ ಆಗದಿದ್ರೆ ಆ.27ಕ್ಕೆ ಚಂದ್ರಯಾನ-3 ಲ್ಯಾಂಡಿಂಗ್

    ಪೋಸ್ಟ್‌ನಲ್ಲಿ ಏನಿದೆ?
    ನನ್ನ ಭಾರತ ಪ್ರವಾಸದಲ್ಲಿ ನಾನು ನಂಬಲಾಗದ ಶಕ್ತಿಯೊಂದನ್ನು ಭೇಟಿಯಾದೆ. ಆ ಶಕ್ತಿಯೇ ಕುಸುಮಾ. ತನ್ನ ಸ್ಥಳೀಯ ಅಂಚೆ ಇಲಾಖೆಯಲ್ಲಿ ಅದ್ಭುತ ಕೆಲಸ ಮಾಡುತ್ತಿರುವ ಗಮನಾರ್ಹ ಯುವತಿ ಈಕೆ. ಹಣಕಾಸು ಅಭಿವೃದ್ಧಿಯನ್ನು ವೇಗಗೊಳಿಸಲು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಇದನ್ನೂ ಓದಿ: ಇನ್ಮುಂದೆ ಲಗೇಜ್‌ಗಳನ್ನು ಸಾಗಿಸಲು ರಸ್ತೆಗಿಳಿಯಲಿದೆ KSRTC ಲಾರಿ

    ಕುಸುಮಾರಂತಹ ಅಂಚೆ ಕಚೇರಿ ಪೋಸ್ಟ್ಮಾಸ್ಟರ್‌ಗಳು ಭಾರತದಾದ್ಯಂತ ಗ್ರಾಹಕರಿಗೆ ಬ್ಯಾಂಕಿಂಗ್ ಸೇವೆಗಳನ್ನು ನೀಡಲು ಸ್ಮಾರ್ಟ್‌ಫೋನ್ ಸಾಧನಗಳು ಮತ್ತು ಬಯೋಮೆಟ್ರಿಕ್‌ಗಳನ್ನು ಬಳಕೆ ಮಾಡುತ್ತಿರುವುದು ಗಮನಾರ್ಹ. ಆಕೆ ಕೇವಲ ಹಣಕಾಸು ಸೇವೆಗಳನ್ನು ಒದಗಿಸುತ್ತಿಲ್ಲ, ಬದಲಾಗಿ ತನ್ನ ಸಮುದಾಯಕ್ಕೆ ಭರವಸೆ ಮತ್ತು ಆರ್ಥಿಕ ಸಬಲೀಕರಣವನ್ನು ನೀಡುತ್ತಿದ್ದಾಳೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರು ಉತ್ತರ ಗೆಲ್ಲಲು ಡಿಕೆಶಿ ರಣತಂತ್ರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಂದೆಯ ಪುಣ್ಯ ತಿಥಿಯ ಬದಲಿಗೆ ಬಡವರಿಗೆ ಆಹಾರ ಕಿಟ್ ವಿತರಿಸಿದ ಮಗ

    ತಂದೆಯ ಪುಣ್ಯ ತಿಥಿಯ ಬದಲಿಗೆ ಬಡವರಿಗೆ ಆಹಾರ ಕಿಟ್ ವಿತರಿಸಿದ ಮಗ

    ಕೋಲಾರ: ತಂದೆಯ ಪುಣ್ಯ ತಿಥಿಗಾಗಿ ಕೂಡಿಟ್ಟ ಹಣದಲ್ಲಿ ಪೋಸ್ಟ್ ಮಾಸ್ಟರ್ ಕೊರೊನಾ ಲಾಕ್‍ಡೌನ್‍ನಿಂದ ಕಂಗಾಲಾಗಿರುವ ಬಡವರು, ನಿರ್ಗತಿಕರಿಗೆ ದಿನಸಿ ಆಹಾರ ಪದಾರ್ಥಗಳ ಕಿಟ್ ವಿತರಣೆ ಮಾಡಿ ಮಾದರಿಯಾಗಿದ್ದಾರೆ.

    ಕೋಲಾರ ನಗರದ ಗಲ್‍ಪೇಟೆ ನಿವಾಸಿ ಪೋಸ್ಟ್ ಮಾಸ್ಟರ್ ನಾರಾಯಣಸ್ವಾಮಿ ತನ್ನ ತಂದೆ ಬಂಗವಾದಿ ಮುನಿಸ್ವಾಮಿ ಅವರ 13ನೇ ವರ್ಷದ ಪುಣ್ಯ ತಿಥಿ ದಿನ ಆಹಾರ ಪದಾರ್ಥಗಳನ್ನ ವಿತರಣೆ ಮಾಡಿದರು. ಮೂಲತಃ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಬಂಗವಾದಿ ಗ್ರಾಮದವರಾದ ಮುನಿಸ್ವಾಮಿ ಅವರು ಕಾಲಾಧೀನರಾಗಿ 13 ವರ್ಷಗಳು ಮುಗಿದಿದೆ.

    ಹಾಗಾಗಿ ಭಾನುವಾರ ಮುನಿಸ್ವಾಮಿ ಅವರ ಪುಣ್ಯ ತಿಥಿ ಇತ್ತು. ಆದರೆ ಮಗ ನಾರಾಯಣಸ್ವಾಮಿ ಪುಣ್ಯ ತಿಥಿ ಮಾಡಿ ದುಂದು ವೆಚ್ಚ ಮಾಡುವ ಬದಲಿಗೆ ಆಹಾರ ಪದಾರ್ಥಗಳ ಕಿಟ್ ವಿತರಣೆ ಮಾಡುವ ಮೂಲಕ ವಿಭಿನ್ನವಾಗಿ ತಂದೆಯ ಸ್ಮರಣೆ ಮಾಡಿದರು.

    ಕೋಲಾರ ನಗರದ ಗಲ್‍ಪೇಟೆಯ ತಮ್ಮ ನಿವಾಸದಲ್ಲಿ 80ಕ್ಕೂ ಹೆಚ್ಚು ಬಡವರು ಹಾಗೂ ನಿರ್ಗತಿಕರಿಗೆ ಆಹಾರ ಪದಾರ್ಥಗಳ ಕಿಟ್‍ಗಳನ್ನ ವಿತರಣೆ ಮಾಡಿದ್ದಾರೆ. ಈ ಮೂಲಕ ಕೊರೊನಾ ಸಂಕಷ್ಟಕ್ಕೀಡಾದವರಿಗೆ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ಈಗಾಗಲೇ ಒಂದೂವರೆ ತಿಂಗಳಿನಿಂದ ಕೊರೊನಾ ಲಾಕ್‍ಡೌನ್‍ನಿಂದಾಗಿ ಜನ ಕಂಗಾಲಾಗಿರುವುದನ್ನ ಅರಿತು ಈ ನಿರ್ಧಾರ ಮಾಡಿರುವುದಾಗಿ ಪೋಸ್ಟ್ ಮಾಸ್ಟರ್ ನಾರಾಯಣಸ್ವಾಮಿ ಹೇಳಿದ್ದಾರೆ.