Tag: ಪೌರತ್ವ ತಿದ್ದುಪಡಿ ಮಸೂದೆ

  • ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ – ರಾಯಚೂರಿನಲ್ಲಿ ಪ್ರತಿಭಟನೆ

    ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ – ರಾಯಚೂರಿನಲ್ಲಿ ಪ್ರತಿಭಟನೆ

    ರಾಯಚೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಯಚೂರು ಜಿಲ್ಲೆಯ ಲಿಂಗಸೂಗುರು ಪಟ್ಟಣದಲ್ಲಿ ಮುಸ್ಲಿಂ ಸಂಘಟನೆಯ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

    ನಗರದ ಗಡಿಯಾರ ವೃತ್ತದಲ್ಲಿ ಜಮಾಯಿಸಿದ ನೂರಾರು ಮುಸ್ಲಿಂ ಯುವಕರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಪೌರತ್ವ ಕಾಯ್ದೆ ಜಾರಿ ಮಾಡಬಾರದು ಎಂದು ಆಗ್ರಹಿಸಿದರು. ಪೌರತ್ವ ಕಾಯ್ದೆ ದೇಶದ ಹಿತಾಸಕ್ತಿ ಮತ್ತು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದರು.

    ದೇಶದ ಜಾತ್ಯಾತೀತ ತತ್ವವನ್ನು ನಾಶ ಮಾಡುವ ಕಾಯ್ದೆಯನ್ನು ಯಾರು ಬೆಂಬಲಿಸುವುದಿಲ್ಲ. ಪ್ರಜೆಗಳನ್ನು ಧರ್ಮ, ನಂಬಿಕೆಗಳ ನೆಲೆಯಲ್ಲಿ ವಿಭಜಿಸುವ ಕಾಯ್ದೆಗೆ ನಮ್ಮ ವಿರೋಧ ಇದೆ ಎಂದು ಘೋಷಣೆ ಕೂಗಿದರು. ಕೂಡಲೇ ಕಾಯ್ದೆ ವಾಪಸ್ ಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಜನ ಯುವಕರು ಪಾಲ್ಗೊಂಡಿದ್ದರು.

  • ಪೌರತ್ವ ಕಾಯ್ದೆ ಕಿಚ್ಚು- ಇಂಡಿಯಾ ಗೇಟ್ ಬಳಿ ಪ್ರಿಯಾಂಕಾ ಧರಣಿ

    ಪೌರತ್ವ ಕಾಯ್ದೆ ಕಿಚ್ಚು- ಇಂಡಿಯಾ ಗೇಟ್ ಬಳಿ ಪ್ರಿಯಾಂಕಾ ಧರಣಿ

    ನವದೆಹಲಿ: ದೇಶದ ಬಹುತೇಕ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕಿಚ್ಚು ಹೊತ್ತಿಕೊಂಡಿದ್ದು, ಈಶಾನ್ಯ ರಾಜ್ಯಗಳು ಹಾಗೂ ಪಶ್ಚಿಮ ಬಂಗಾಳದಲ್ಲಿನ ಹಿಂಸಾಚಾರದ ನಂತರ ದೆಹಲಿಯಲ್ಲೂ ಹೆಚ್ಚಾಗಿದೆ. ಈ ನಡುವೆಯೇ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಧರಣಿ ನಡೆಸಲು ಪ್ರಾರಂಭಿಸಿದ್ದಾರೆ.

    ಪ್ರಿಯಾಂಕಾ ಗಾಂಧಿಯವರು ಇಂಡಿಯಾ ಗೇಟ್ ಬಳಿ ಧರಣಿ ಆರಂಭಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕಾಯ್ದೆ ವಿರುದ್ಧ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿ ಸಂಘಟನೆಗಳು ಅವರಿಗೆ ಬೆಂಬಲ ವ್ಯಕ್ತಪಡಿಸಿವೆ.

    ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ, ಪ್ರಿಯಾಂಕಾ ಗಾಂಧಿ ಸೇರಿದಂತೆ ಪಕ್ಷದ ನಾಯಕರು ಎರಡು ಗಂಟೆಗಳ ಕಾಲ ಇಂಡಿಯಾ ಗೇಟ್ ಬಳಿ ಧರಣಿ ನಡೆಸುವುದಾಗಿ ಹೇಳಿದ್ದರು. ಇದು ದೇಶದ ವಿದ್ಯಾರ್ಥಿಗಳು ಹಾಗೂ ಯುವಕರ ಪ್ರಶ್ನೆಯಾಗಿದೆ. ಹೀಗಾಗಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಸಂಜೆ ನಾಲ್ಕರಿಂದ 2ಗಂಟೆಗಳ ಕಾಲ ಸಾಂಕೇತಿಕ ಧರಣಿ ನಡೆಸುತ್ತೇವೆ ಎಂದು ಹೇಳಿದ್ದರು.

    ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸುತ್ತಿವೆ. ಈ ಮಧ್ಯೆಯೇ ಈಶಾನ್ಯ ರಾಜ್ಯಗಳು ಹಾಗೂ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಹೆಚ್ಚಾಗಿದೆ. ಪೌರತ್ವ ತಿದ್ದಪಡಿ ಮಸೂದೆಯು ಮೇಲ್ಮನೆ ಹಾಗೂ ಕೆಳಮನೆ ಎರಡರಲ್ಲೂ ಪಾಸ್ ಆಗಿ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಸಹ ಅಂಕಿತ ಹಾಕಿದ್ದು, ಕಾಯ್ದೆಯಾಗಿದೆ. ಇದರ ಬೆನ್ನಲ್ಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಹೋರಾಟ ತೀವ್ರಗೊಂಡಿದೆ.

    ಅಸ್ಸಾಂ, ಮೆಘಾಲಯ ಸೇರಿದಂತೆ ಈಶಾನ್ಯದ ರಾಜ್ಯಗಳು ಹಾಗೂ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಹೆಚ್ಚಾಗಿದ್ದು, ಬಸ್, ರೈಲುಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ಥಾನ ಅಲ್ಪಸಂಖ್ಯಾತರಿಗೆ ಪೌರತ್ವ ವಿಸ್ತರಿಸುವುದಾಗಿದೆ.

  • ಸಂವಿಧಾನಾತ್ಮಕವಾದ ಗೌರವವಿಲ್ಲ, ಡಿಸಿಎಂ ಸ್ಥಾನಗಳೇ ಬೇಡ – ಯತ್ನಾಳ್

    ಸಂವಿಧಾನಾತ್ಮಕವಾದ ಗೌರವವಿಲ್ಲ, ಡಿಸಿಎಂ ಸ್ಥಾನಗಳೇ ಬೇಡ – ಯತ್ನಾಳ್

    – ಕೈ ನಾಯಕರು ಪಾಕಿಸ್ತಾನದವರಿಗೆ ಹುಟ್ಟಿದಂತೆ ಮಾತನಾಡುತ್ತಿದ್ದಾರೆ

    ವಿಜಯಪುರ: ಡಿಸಿಎಂ ಸ್ಥಾನಗಳನ್ನು ಕೈ ಬಿಡುವುದು ಒಳ್ಳೆಯದು. ಮುಖ್ಯಮಂತ್ರಿ ಒಬ್ಬರೇ ಸಾಕು, ಉಪ ಮುಖ್ಯಮಂತ್ರಿಗಳು ಬೇಡ. ಉಳಿದವರು ಮಂತ್ರಿಗಳಾಗಿ ಇರಲಿ, ಉಪಮುಖ್ಯಮಂತ್ರಿ ಏಕೆ ಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

    ವಿಜಯಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಯತ್ನಾಳ್, ಡಿಸಿಎಂ ಸ್ಥಾನಗಳೇ ಬೇಡ ಎಂದರು. ಅಲ್ಲದೇ ಡಿಸಿಎಂ ಸ್ಥಾನಕ್ಕೆ ಸಂವಿಧಾನಾತ್ಮಕವಾದ ಗೌರವ ಇಲ್ಲ. ಮುಖ್ಯಮಂತ್ರಿಗಳು ಸಮರ್ಥರಿದ್ದು, ಬಿಎಸ್‍ವೈ ನಾಯಕತ್ವದಲ್ಲಿ ಎಲ್ಲರೂ ಕೆಲಸ ಮಾಡಲಿ. ಮಂತ್ರಿಗಿರಿ ಏಕೆ ಬೇಕು? ಒಂದು ಗೂಟದ ಕಾರು ಹಾಗೂ ಪೈಲಟ್‍ಗಾಗಿ ಮಂತ್ರಿ ಬೇಡ ಎಂದು ಸಲಹೆ ನೀಡಿದರು.

    ಸಚಿವ ಸಂಪುಟ ವಿಸ್ತರಣೆಯಲ್ಲಿ ವಿಜಯಪುರ ಜಿಲ್ಲೆಗೆ ಸಿಎಂ ಸೂಕ್ತ ಸ್ಥಾನಮಾನ ಕೊಟ್ಟರೆ ಅದನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿ ವಿಜಯಪುರದವರಿಗೆ ಇದೆ. ಸಚಿವ ಸ್ಥಾನ ಕೊಟ್ಟರೆ ನೋಡೋಣ ಎನ್ನುವ ಮೂಲಕ ಸಚಿವ ಸ್ಥಾನದ ರೇಸಿನಲ್ಲಿರುವುದನ್ನು ಸ್ಪಷ್ಟಪಡಿಸಿದರು. ಅಲ್ಲದೇ ಅಭಿವೃದ್ಧಿಗಾಗಿ ಜಿಲ್ಲೆಗೆ ಇಂದು ಸಾವಿರಾರು ಕೋಟಿ ಬರುತ್ತಿದೆ. ಜಿಲ್ಲೆ ಅಭಿವೃದ್ಧಿಯಾದರೆ ನನಗೆ ಅಷ್ಟೇ ಸಾಕು ಎಂದರು.

    ರಾಷ್ಟ್ರೀಯ ನಾಯಕರು ಜಾರ್ಖಂಡ್ ಚುನಾವಣೆಯಲ್ಲಿ ತೊಡಗಿದ್ದಾರೆ. ಪರಿಣಾಮ ಸಚಿವ ಸಂಪುಟ ವಿಸ್ತರಣೆ ತಡವಾಗುತ್ತೆ. ಎರಡು ವಾರ ಎಲ್ಲರೂ ಕಾಯೋಣ ಎಂದರು. ಇದೇ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಐತಿಹಾಸಿಕ ಮಸೂದೆ ಪಾಸ್ ಮಾಡಲಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶದಲ್ಲಿ ಸೇರಿದಂತೆ ವಿವಿಧೆಡೆ ಹಿಂದೂಗಳಿಗೆ ಭಯದ ವಾತಾವರಣ ನಿರ್ಮಾಣವಾಗಿತ್ತು. ಅಂತಹವರಿಗೆ ಭಾರತದಲ್ಲಿ ಪೌರತ್ವ ಕೊಡುವ ಕೆಲಸ ಆಗಿದ್ದು, ಐತಿಹಾಸಿಕ ನಿರ್ಧಾರವಾಗಿದೆ. ಸಮಸ್ತ ಹಿಂದೂಗಳನ್ನು ಸಂರಕ್ಷಣೆ ಮಾಡುವ ಕೆಲಸ ಪ್ರಧಾನಿಗಳು ಸೇರಿದಂತೆ ನಾಯಕರು ಮಾಡಿದ್ದಾರೆ ಎಂದು ಧನ್ಯವಾದಗಳು ಸಲ್ಲಿಸಿದರು.

    ಮಸೂದೆಯನ್ನ ವಿರೋಧ ಮಾಡುವ ಕಾಂಗ್ರೆಸ್ ನಾಯಕರು ಪಾಕಿಸ್ಥಾನದ ಏಜೆಂಟರು. ಅವರಿಗೇನಾದರೂ ನ್ಯಾಯ, ನೀತಿ ಎಂಬುವುದಿದ್ದರೆ ಇದಕ್ಕೆ ವಿರೋಧ ಮಾಡಬಾರದು. ಕಾಂಗ್ರೆಸ್ ನಾಯಕರು ಪಾಕಿಸ್ತಾನದವರಿಗೆ ಹುಟ್ಟಿದಂತೆ ಮಾತನಾಡುತ್ತಿದ್ದಾರೆ. ಇದು ದೇಶದ ದುರ್ದೈವವಾಗಿದೆ ಎಂದು ವಾಗ್ದಾಳಿ ನಡೆಸಿದರು.

  • ಭಾರತದ ಇತಿಹಾಸದಲ್ಲೇ ಕರಾಳ ದಿನ: ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಸೋನಿಯಾ ಕಿಡಿ

    ಭಾರತದ ಇತಿಹಾಸದಲ್ಲೇ ಕರಾಳ ದಿನ: ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಸೋನಿಯಾ ಕಿಡಿ

    ನವದೆಹಲಿ: ರಾಜ್ಯ ಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಪಾಸ್ ಆಗುತ್ತಿದ್ದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಕೆಂಡಾಮಂಡಲರಾಗಿದ್ದು, ಇದೊಂದು ‘ಕರಾಳ ದಿನ’ ಎಂದು ಸಂಭೋದಿಸಿದ್ದಾರೆ.

    ಕಾಂಗ್ರೆಸ್ ಸಂಸದೀಯ ಪಕ್ಷದಿಂದ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಪೌರತ್ವ ತಿದ್ದುಪಡಿ ಮಸೂದೆಯ ಅಂಗೀಕಾರವು ಭಾರತದ ಬಹುತ್ವದ ಮೇಲೆ ಸಂಕುಚಿತ ಮನಸ್ಸಿನ ಹಾಗೂ ಧರ್ಮಾಂಧ ಶಕ್ತಿಗಳ ವಿಜಯವನ್ನು ಸೂಚಿಸುತ್ತದೆ ಎಂದು ಹರಿಹಾಯ್ದಿದ್ದಾರೆ.

    ಧರ್ಮದ ಆಧಾರದ ಮೇಲೆ ನಿರಾಶ್ರಿತರಿಗೆ ಪೌರತ್ವ ನೀಡುವ ಮಸೂದೆಯು ಭಾರತದ ಪರಿಕಲ್ಪನೆಯನ್ನು ಸೋಲಿಸಿದೆ. ನಮ್ಮ ಪೂರ್ವಜರ ಪರಿಕಲ್ಪನೆಯನ್ನು ಈ ಮಸೂದೆ ಪ್ರಶ್ನಿಸುತ್ತದೆ. ಧರ್ಮವು ರಾಷ್ಟ್ರದ ನಿರ್ಣಾಯಕವಾಗಿದೆ. ವಿಚಲಿತ, ವಿಕೃತ ಹಾಗೂ ವಿಭಜಿತ ಭಾರತವನ್ನು ಸೃಷ್ಟಿಸಲಾಗುತ್ತಿದೆ. ಸಂವಿಧಾನದ ಪ್ರತಿಪಾದಿಸಲಾಗಿರುವ ಸಮಾನತೆ ಮತ್ತು ಧಾರ್ಮಿಕ ತಾರತಮ್ಯರಹಿತ ತತ್ವಗಳಿಗೆ ವಿರುದ್ಧವಾಗಿದೆ ಎಂದು ಸೋನಿಯಾ ಕಿಡಿಕಾರಿದ್ದಾರೆ.

    ಧರ್ಮ, ಪ್ರದೇಶ, ಜಾತಿ, ಮತ, ಭಾಷೆ ಅಥವಾ ಜನಾಂಗವನ್ನು ಲೆಕ್ಕಿಸದೇ ಎಲ್ಲರಿಗೂ ಮುಕ್ತವಾಗಿರುವ ಭಾರತವನ್ನು ಇದೀಗ ನಿರಾಕರಿಸುವಂತೆ ಮಾಡಲಾಗಿದೆ. ಐತಿಹಾಸಿಕವಾಗಿ, ಭಾರತವು ಎಲ್ಲ ರಾಷ್ಟ್ರಗಳು ಧರ್ಮಗಳಿಗೆ ಕಿರುಕ್ಕೊಳಗಾದವರಿಗೆ ಆಶ್ರಯ ನೀಡಿದೆ. ಆದರೆ ಬಿಜೆಪಿ ಸರ್ಕಾರ ವಿಭಜಿಸಿದೆ ಎಂದು ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದರು.

    ಭಾರೀ ಚರ್ಚೆಗೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿಯೂ ಅಂಗೀಕಾರವಾಗಿದೆ. ಉಭಯ ಸದನಗಳಲ್ಲಿ ಮಸೂದೆ ಅಂಗೀಕಾರವಾಗಿದೆ. ರಾಜ್ಯ ಸಭೆಯಲ್ಲಿ ಮಸೂದೆಯ ಪರವಾಗಿ 125 ಮತ್ತು ವಿರೋಧವಾಗಿ 105 ಮತಗಳು ಬಿದ್ದವು.

    ಆರಂಭದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಆಯ್ಕೆ ಸಮಿತಿಗೆ ಕಳುಹಿಸುವ ಪ್ರಸ್ತಾವನೆಗೆ ಸೋಲುಂಟಾಯಿತು. ಆಯ್ಕೆ ಸಮಿತಿಗೆ ಕಳುಹಿಸುವಂತೆ ಕಾಂಗ್ರೆಸ್ ಸೇರಿದಂತೆ ಎಡಪಕ್ಷಗಳು ಒತ್ತಾಯಿಸಿದ್ದವು. ಇಲ್ಲಿ ಸರ್ಕಾರದ ಪರ 124 ಮತ್ತು ವಿರೋಧವಾಗಿ 99 ಮತಗಳು ಬಿದ್ದಿದ್ದವು. ಇನ್ನು ಶಿವಸೇನೆಯ ಸಂಸದರು ಸಭಾತ್ಯಾಗ ಮಾಡುವ ಮೂಲಕ ಮತದಾನ ಬಹಿಷ್ಕರಿಸಿದರು. ಪೌರತ್ವ ತಿದ್ದುಪಡಿ ಮಸೂದೆ 311 ಮತಗಳಿಂದ ಲೋಕಸಭೆಯಲ್ಲಿ ಪಾಸ್ ಆಗಿತ್ತು.

    ಗೃಹ ಸಚಿವ ಅಮಿತ್ ಶಾ ಅವರು ಮಧ್ಯಾಹ್ನ 2 ಗಂಟೆಗೆ ಬಿಲ್ ಮಂಡಿಸಿದರು. ಇದಕ್ಕೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಇದು ಭಾರತ ಗಣರಾಜ್ಯದ ಮೇಲಿನ ಹಲ್ಲೆ. ದೇಶದ ಆತ್ಮಕ್ಕೆ ಘಾಸಿ ಮಾಡಿದೆ. ಇದು ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾದದ್ದು ಅಂತ ಪ್ರತಿಪಾದಿಸಿದರು. ಆದರೂ ಅಮಿತ್ ಶಾ ಮಸೂದೆಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದರು.

    ಈ ಮಸೂದೆಯಿಂದ ಮುಸ್ಲಿಮರು ಯಾವುದೇ ಗೊಂದಲ, ಆತಂಕಕ್ಕೀಡಾಗೋದು ಬೇಡ. ಭಾರತೀಯ ಮುಸ್ಲೀಮರು ಇಂದಿಗೂ, ಎಂದೆಂದಿಗೂ ಭಾರತೀಯ ಪೌರರು ಎಂದು ಅಮಿತ್ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಿದರು.

  • ರಾಜ್ಯಸಭೆಯಲ್ಲಿಯೂ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ

    ರಾಜ್ಯಸಭೆಯಲ್ಲಿಯೂ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ

    – ಪರ 125, ವಿರುದ್ಧ 105 ಮತ

    ನವದೆಹಲಿ: ಭಾರೀ ಚರ್ಚೆಗೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿಯೂ ಅಂಗೀಕಾರವಾಗಿದೆ. ಉಭಯ ಸದನಗಳಲ್ಲಿ ಮಸೂದೆ ಅಂಗೀಕಾರವಾಗಿದೆ. ರಾಜ್ಯ ಸಭೆಯಲ್ಲಿ ಮಸೂದೆಯ ಪರವಾಗಿ 125 ಮತ್ತು ವಿರೋಧವಾಗಿ 105 ಮತಗಳು ಬಿದ್ದವು.

    ಆರಂಭದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಆಯ್ಕೆ ಸಮಿತಿಗೆ ಕಳುಹಿಸುವ ಪ್ರಸ್ತಾವನೆಗೆ ಸೋಲುಂಟು ಆಯಿತು. ಆಯ್ಕೆ ಸಮಿತಿಗೆ ಕಳುಹಿಸುವಂತೆ ಕಾಂಗ್ರೆಸ್ ಸೇರಿದಂತೆ ಎಡಪಕ್ಷಗಳ ಒತ್ತಾಯಿಸಿದ್ದವು. ಇಲ್ಲಿ ಸರ್ಕಾರದ ಪರ 124 ಮತ್ತು ವಿರೋಧವಾಗಿ 99 ಮತಗಳು ಬಿದ್ದಿದ್ದವು. ಇನ್ನು ಶಿವಸೇನೆಯ ಸಂಸದರು ಸಭಾತ್ಯಾಗ ಮಾಡುವ ಮೂಲಕ ಮತದಾನ ಬಹಿಷ್ಕರಿಸಿದರು. ಪೌರತ್ವ ತಿದ್ದುಪಡಿ ಮಸೂದೆ 311 ಮತಗಳಿಂದ ಲೋಕಸಭೆಯಲ್ಲಿ ಪಾಸ್ ಆಗಿತ್ತು.

    ಗೃಹ ಸಚಿವ ಅಮಿತ್ ಶಾ ಅವರು ಮಧ್ಯಾಹ್ನ 2 ಗಂಟೆಗೆ ಬಿಲ್ ಮಂಡಿಸಿದರು. ಇದಕ್ಕೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಇದು ಭಾರತ ಗಣರಾಜ್ಯದ ಮೇಲಿನ ಹಲ್ಲೆ. ದೇಶದ ಆತ್ಮಕ್ಕೆ ಘಾಸಿ ಮಾಡಿದೆ. ಇದು ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾದದ್ದು ಅಂತ ಪ್ರತಿಪಾದಿಸಿದರು. ಆದರೂ ಅಮಿತ್ ಶಾ ಮಸೂದೆಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದರು.

    ಈ ಮಸೂದೆಯಿಂದ ಮುಸ್ಲಿಮರು ಯಾವುದೇ ಗೊಂದಲ, ಆತಂಕಕ್ಕೀಡಾಗೋದು ಬೇಡ. ಭಾರತೀಯ ಮುಸ್ಲೀಮರು ಇಂದಿಗೂ, ಎಂದೆಂದಿಗೂ ಭಾರತೀಯ ಪೌರರು ಎಂದು ಅಮಿತ್ ಆ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಿದರು. ಶಿವಸೇನೆಯ ಸಂಜಯ್ ರಾವತ್ ಮಾತನಾಡಿ, ಮಸೂದೆ ಅಡಿಯಲ್ಲಿ ಭಾರತದ ಪೌರತ್ವ ಪಡೆಯುವ ನಿರಾಶ್ರಿತರಿಗೆ ಮತದಾನದ ಹಕ್ಕು ಲಭಿಸಲಿದೆಯೇ? ಅಕ್ರಮ ಒಳನುಸುಳುಕೋರರನ್ನು ಇದರ ಮೂಲಕ ಹೊರಹಾಕಲಾಗುತ್ತದೆಯೇ? ಅಂತ ಪ್ರಶ್ನಿಸಿದರು.

    ಕಾಂಗ್ರೆಸ್‍ನ ಕಪಿಲ್ ಸಿಬಲ್, ಭಾರತದ ಸಂವಿಧಾನವನ್ನು ಎರಡು ಡೈನೋಸರ್‍ಗಳ ಜುರಾಸಿಕ್‍ಪಾರ್ಕ್ ಆಗಿ ಪರಿವರ್ತಿಸಬೇಡಿ ಅಂದರು. ಸಂಸತ್‍ನಲ್ಲಿ ಮಸೂದೆ ಅಂಗೀಕಾರವಾದ್ರೆ ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸ್ತೇವೆ ಅಂತ ಚಿದಂಬರಂ ಹೇಳಿದರು. ರಾಜ್ಯಸಭೆಯಲ್ಲಿ ಚರ್ಚೆ ಆರಂಭವಾಗುವುದಕ್ಕೂ ಮುನ್ನ ಬಿಜೆಪಿ ಸಂಸದರ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಪೌರತ್ವ ಮಸೂದೆಯನ್ನು ಸುವರ್ಣಾಕ್ಷರಗಳಲ್ಲಿ ಬರೆಯಲಾಗುವುದು. ಧಾರ್ಮಿಕ ದೌರ್ಜನ್ಯಕ್ಕೊಳಗಾಗಿ ವಲಸೆ ಹೋದ ಜನರಿಗೆ ಇದು ಶಾಶ್ವತ ಪರಿಹಾರ ನೀಡುತ್ತವೆ. ಆದ್ರೆ ವಿಪಕ್ಷದಲ್ಲಿರುವ ಕೆಲವರು ಪೌರತ್ವ ಮಸೂದೆ ಬಗ್ಗೆ ಪಾಕಿಸ್ತಾನದ ಧಾಟಿಯಲ್ಲೇ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದರು.

  • ಪೌರತ್ವ ತಿದ್ದುಪಡಿ ಮಸೂದೆ, ಕೆಲ ವಿರೋಧ ಪಕ್ಷಗಳು ಪಾಕಿಸ್ತಾನದ ರೀತಿ ಮಾತನಾಡುತ್ತಿವೆ – ಮೋದಿ

    ಪೌರತ್ವ ತಿದ್ದುಪಡಿ ಮಸೂದೆ, ಕೆಲ ವಿರೋಧ ಪಕ್ಷಗಳು ಪಾಕಿಸ್ತಾನದ ರೀತಿ ಮಾತನಾಡುತ್ತಿವೆ – ಮೋದಿ

    ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ಕುರಿತು ಕೆಲವು ವಿರೋಧ ಪಕ್ಷಗಳು ಪಾಕಿಸ್ತಾನದ ರೀತಿಯಲ್ಲೇ ಮಾತನಾಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿ ಕಾರಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಬುಧವಾರ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದು, ಪೌರತ್ವ ತಿದ್ದುಪಡಿ ಮಸೂದೆ ಕುರಿತು ಕೆಲವು ವಿರೋಧ ಪಕ್ಷಗಳು ಪಾಕಿಸ್ತಾನದ ರೀತಿಯಲ್ಲೇ ಮಾತನಾಡುತ್ತಿವೆ. ಆದರೆ ಇದು ಐತಿಹಾಸಿಕ ನಿರ್ಧಾರವಾಗಿದ್ದು, ಪೌರತ್ವ ತಿದ್ದುಪಡಿ ಮಸೂದೆ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ನಿರ್ಧಾರವಾಗಿದೆ ಎಂದು ಬಣ್ಣಿಸಿದ್ದಾರೆ.

    ಧಾರ್ಮಿಕ ಕಿರುಕುಳ ಅನುಭವಿಸುತ್ತಿರುವವರಿಗೆ ಈ ಮಸೂದೆಯಿಂದ ಶಾಶ್ವತ ಪರಿಹಾರ ಸಿಗಲಿದೆ. ಆದರೆ ಈ ವಿಚಾರವಾಗಿ ಕೆಲ ವಿರೋಧ ಪಕ್ಷಗಳು ಸುಖಾಸುಮ್ಮನೆ ಗದ್ದಲ ಎಬ್ಬಿಸುವ ಮೂಲಕ ಪಾಕಿಸ್ತಾನ ರೀತಿಯಲ್ಲಿ ಮಾತನಾಡುತ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಪೌರತ್ವ ತಿದ್ದುಪಡಿ ಮಸೂದೆಯನ್ನು ಡಿಸೆಂಬರ್ 9 ರಂದು ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಮಂಡಿಸಿದ್ದು, 311 ಮತಗಳಿಂದ ಪಾಸ್ ಸಹ ಆಗಿದೆ. ಆದರೆ ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಭಾರೀ ಗದ್ದಲ ಎಬ್ಬಿಸಿದ್ದವು. ಈ ವೇಳೆ ಎಐಎಂಐಎಂ ಪಕ್ಷದ ನಾಯಕ ಅಸಾದುದ್ದಿನ್ ಓವೈಸಿ ಮಸೂದೆಯ ಪ್ರತಿಯನ್ನೇ ಹರಿದು ಹಾಕುವ ಮೂಲಕ ತೀವ್ರ ಚರ್ಚೆಗೆ ಕಾರಣರಾಗಿದ್ದರು.

    ವಿಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸಿ, ಇದು ಅಲ್ಪಸಂಖ್ಯಾತ ವಿರೋಧಿ ಎಂದು ಕರೆದರು. ಆರೋಪವನ್ನು ತಳ್ಳಿ ಹಾಕಿದ ಅಮಿತ್ ಶಾ, ಪೌರತ್ವ ತಿದ್ದುಪಡಿ ಮಸೂದೆಯು ಶೇ.0.001 ರಷ್ಟು ಕೂಡ ದೇಶದ ಅಲ್ಪಸಂಖ್ಯಾತ ಸಮುದಾಯದ ವಿರುದ್ಧವಿಲ್ಲ ಎಂದು ಸ್ಪಷ್ಟಪಡಿಸಿದ್ದರು.

    ಆರು ದಶಕಗಳ ಹಳೆಯ ಪೌರತ್ವ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದ್ದು, ಬಾಂಗ್ಲಾದೇಶ, ಅಫ್ಘಾನಿಸ್ಥಾನ ಹಾಗೂ ಪಾಕಿಸ್ತಾನದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡುವುದು ತಿದ್ದುಪಡಿಯ ಉದ್ದೇಶವಾಗಿದೆ.

    ವಿಪಕ್ಷಗಳಿಗೆ ಶಾ ಸುದೀರ್ಘ ಉತ್ತರ:
    ವಿಪಕ್ಷಗಳ ಆರೋಪಗಳಿಗೆ ಅಮಿತ್ ಶಾ ಉತ್ತರಿಸಲು ಆರಂಭಿಸಿ, ಈ ಮಸೂದೆ ಯಾವುದೇ ರೀತಿಯಲ್ಲಿ ಅಲ್ಪಸಂಖ್ಯಾತರ ವಿರುದ್ಧವಲ್ಲ. ಕಾಂಗ್ರೆಸ್ ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸದಿದ್ದರೆ, ಪೌರತ್ವ ಮಸೂದೆಯನ್ನು ತರುವ ಅಗತ್ಯವೇ ಇರಲಿಲ್ಲ. ಸಮಾನತೆಯ ಕಾನೂನು ಇದ್ದರೆ ಅಲ್ಪಸಂಖ್ಯಾತರಿಗೆ ಹೇಗೆ ಸವಲತ್ತುಗಳು ಸಿಗುತ್ತವೆ? ಸಂವಿಧಾನದ 14ನೇ ವಿಧಿ ಶಿಕ್ಷಣ ಮತ್ತು ಇತರ ವಿಷಯಗಳಲ್ಲಿ ಉಲ್ಲಂಘನೆಯಾಗಿಲ್ಲವೇ? ಎಲ್ಲ ಉಲ್ಲಂಘನೆಗಳನ್ನು ಗಣನೆಗೆ ತೆಗೆದುಕೊಂಡ ನಂತರವೇ ಮಸೂದೆಯನ್ನು ರಚಿಸಲಾಗಿದೆ ಎಂದು ತಿಳಿಸಿದರು.

    ಅಫ್ಘಾನಿಸ್ತಾನದ ಸಂವಿಧಾನದ 2ನೇ ವಿಧಿ ಪ್ರಕಾರ, ಆ ದೇಶ ಇಸ್ಲಾಮಿಕ್ ಆಗಿದೆ. ಪಾಕಿಸ್ತಾನ ಕೂಡ ಇಸ್ಲಾಮಿಕ್ ಆಗಿದೆ. ಬಾಂಗ್ಲಾದೇಶದ ಸಂವಿಧಾನದಲ್ಲಿ ಇಸ್ಲಾಂ ಧರ್ಮ ಎಂದು ತಿಳಿಸಲಾಗಿದೆ. ನಾನು ಇದನ್ನು ಉಲ್ಲೇಖಿಸುತ್ತಿದ್ದೇನೆ. ಏಕೆಂದರೆ ಈ ಮೂರು ದೇಶಗಳ ಸಂವಿಧಾನವು ಧರ್ಮವನ್ನು ಉಲ್ಲೇಖಿಸುತ್ತದೆ. ಆದರೂ ಈ ಮೂರು ದೇಶಗಳಿಂದ ನಿರಾಶ್ರಿತರು ಇಲ್ಲಿಗೆ ಬರುತ್ತಿದ್ದಾರೆ ಎಂದು ಹೇಳಿದರು.

    ತುಳಿತಕ್ಕೊಳಗಾದ ಮುಸ್ಲಿಮರಿಗೆ ಆಶ್ರಯ ನೀಡುವ ಕುರಿತು ಪ್ರತಿಕ್ರಿಯಿಸಿದ ಅಮಿತ್ ಶಾ, ಮೂರು ನೆರೆಹೊರೆಯ ದೇಶಗಳ ಯಾವುದೇ ಮುಸ್ಲಿಂ ಧಾರ್ಮಿಕ ಕಿರುಕುಳದ ಆಧಾರದ ಮೇಲೆ ಪೌರತ್ವವನ್ನು ಕೋರಿದರೆ, ನಾವು ಮುಕ್ತ ಮನಸ್ಸಿನಿಂದ ಪರಿಗಣಿಸುತ್ತೇವೆ. ಪ್ರಧಾನಿ ಮೋದಿ ಸರ್ಕಾರದ ಹಿಂದಿನ ಅವಧಿಯಲ್ಲಿ ಪೌರತ್ವ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದ್ದರೂ ರಾಜ್ಯಸಭೆಯಲ್ಲಿ ಸಿಲುಕಿಕೊಂಡಿತ್ತು. ಈ ಮಸೂದೆಯನ್ನು ಕೇಂದ್ರ ಸಚಿವ ಸಂಪುಟ ಡಿಸೆಂಬರ್ 4ರಂದು ಅಂಗೀಕರಿಸಿತ್ತು. ಈ ಮಸೂದೆಯು ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಮುಸ್ಲಿಮೇತರರಿಗೆ (ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು) ಭಾರತೀಯ ಪೌರತ್ವ ನೀಡಲು ಅನುಕೂಲವಾಗಲಿದೆ ಎಂದು ತಿಳಿಸಿದರು.

  • ಪೌರತ್ವ ತಿದ್ದುಪಡಿ ಮಸೂದೆಗೆ ಬೆಂಗ್ಳೂರಿನಲ್ಲಿ ತೀವ್ರ ವಿರೋಧ

    ಪೌರತ್ವ ತಿದ್ದುಪಡಿ ಮಸೂದೆಗೆ ಬೆಂಗ್ಳೂರಿನಲ್ಲಿ ತೀವ್ರ ವಿರೋಧ

    ಬೆಂಗಳೂರು: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಹಲವು ಮುಸ್ಲಿಂ ಸಂಘಟನೆಗಳು ಇಂದು ಸಿಲಿಕಾನ್ ಸಿಟಿಯಲ್ಲಿ ಪ್ರತಿಭಟನೆ ನಡೆಸಿದವು.

    ಟೌನ್ ಹಾಲ್ ಬಳಿ 10ಕ್ಕೂ ಹೆಚ್ಚು ಸಂಘಟನೆಗಳು ಸೇರಿಕೊಂಡು ಲೋಕಸಭೆಯಲ್ಲಿ ಅಂಗೀಕಾರವಾದ ಮುಸ್ಲಿಂಯೇತರ ಅಕ್ರಮ ವಲಸಿಗರಿಗೆ ಭಾರತ ಪೌರತ್ವ ನೀಡುವ ಈ ಮಸೂದೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಈ ಮಸೂದೆಯಿಂದ ಸಂವಿಧಾನದ ಪರಿಚ್ಛೇದ 14 ಮತ್ತು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಒಪ್ಪಂದಗಳ ಉಲ್ಲಂಘನೆಯಾಗಿದೆ. ದೇಶಕ್ಕೆ ಬಂದಿರುವ ನುಸುಳುಕೋರರನ್ನು ಹುಡುಕಿ. ಇದಕ್ಕೆಂದೆ ಪೊಲೀಸ್ ವ್ಯವಸ್ಥೆ ಇದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಪೌರತ್ವ ತಿದ್ದುಪಡಿ ಮಸೂದೆಗೆ ಇಮ್ರಾನ್ ಖಾನ್ ಆಕ್ರೋಶ

    ಎಲ್ಲಾ ಮುಸಲ್ಮಾನರನ್ನು ಹೊರ ರಾಷ್ಟ್ರದಿಂದ ಬಂದಿದ್ದಾರೆ ಎಂದು ಬಿಂಬಿಸುವುದು ತಪ್ಪು. ಈ ಮಸೂದೆಯನ್ನು ಹಿಂಪಡೆಯದಿದ್ದರೆ ದೊಡ್ಡ ಮಟ್ಟದ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಸಂಘಟನೆಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ.

    ಪೌರತ್ವ ತಿದ್ದುಪಡಿ ಮಸೂದೆಯನ್ನು ಸೋಮವಾರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಮಂಡಿಸಿದ್ದು, ಪಾಸ್ ಸಹ ಆಗಿದೆ. ಆದರೆ ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಭಾರೀ ಗದ್ದಲ ಎಬ್ಬಿಸಿದ್ದು, ಎಐಎಂಐಎಂ ನಾಯಕ ಅಸಾದುದ್ದಿನ್ ಓವೈಸಿ ಲೋಕಸಭೆಯಲ್ಲಿ ಮಸೂದೆಯ ಪ್ರತಿಯನ್ನೇ ಹರಿದು ಹಾಕುವ ಮೂಲಕ ತೀವ್ರ ಚರ್ಚೆಗೆ ಕಾರಣರಾಗಿದ್ದಾರೆ. ಇದನ್ನೂ ಓದಿ: ಪೌರತ್ವ ತಿದ್ದುಪಡಿ ಮಸೂದೆಯ ಪ್ರತಿ ಹರಿದು ಹಾಕಿದ ಓವೈಸಿ

    ಮಸೂದೆಗೆ ಈಶಾನ್ಯ ರಾಜ್ಯಗಳು ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ವಿರೋಧ ವ್ಯಕ್ತವಾಗುತ್ತಿದ್ದು, ವಿಪಕ್ಷಗಳು ಸಹ ಈ ಕುರಿತು ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿವೆ. ಕಾಂಗ್ರೆಸ್ ಹಾಗೂ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೇರಿದಂತೆ ಇತರೆ ವಿರೋಧ ಪಕ್ಷಗಳು ಪೌರತ್ವ ತಿದ್ದುಪಡಿ ಮಸೂದೆ ಅಸಂವಿಧಾನಿಕವಾಗಿದೆ ಎಂದು ದೂರಿದ್ದಾರೆ. ಇದನ್ನೂ ಓದಿ: ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಪಾಸ್ – ಪರ 311, ವಿರುದ್ಧ 80 ಮತ

    ಈಶಾನ್ಯ ರಾಜ್ಯಗಳಲ್ಲಿಯೂ ಸಹ ಈ ಕುರಿತು ಜನಾಕ್ರೋಶ ಹೆಚ್ಚಾಗುತ್ತಿದೆ. ಅಕ್ರಮ ವಲಸಿಗರನ್ನು ಧಾರ್ಮಿಕ ಆಧಾರದ ಮೇಲೆ ಹೊರತಾಗಿಯೂ ಗಡಿಪಾರು ಮಾಡುವ 1985ರ ಅಸ್ಸಾಂ ಒಪ್ಪಂದವನ್ನು ರದ್ದುಗೊಳಿಸಿ, ಮಸೂದೆಯನ್ನು ಅಂಗೀಕಾರ ಮಾಡಲಾಗುತ್ತಿದೆ ಎಂದು ಈಶಾನ್ಯ ರಾಜ್ಯಗಳಲ್ಲಿ ವಿದ್ಯಾರ್ಥಿ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

  • ಪೌರತ್ವ ತಿದ್ದುಪಡಿ ಮಸೂದೆಗೆ ಇಮ್ರಾನ್ ಖಾನ್ ಆಕ್ರೋಶ

    ಪೌರತ್ವ ತಿದ್ದುಪಡಿ ಮಸೂದೆಗೆ ಇಮ್ರಾನ್ ಖಾನ್ ಆಕ್ರೋಶ

    ಇಸ್ಲಾಮಾಬಾದ್: ಪೌರತ್ವ ತಿದ್ದುಪಡಿ ಮಸೂದೆ ಕುರಿತು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದು, ಅಂತರಾಷ್ಟ್ರೀಯ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ದೂರಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಇಮ್ರಾನ್ ಖಾನ್, ಭಾರತದ ಪೌರತ್ವ ಮಸೂದೆಯು ಅಂತರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನನ್ನು ಉಲ್ಲಂಘಿಸುತ್ತದೆ. ಅಲ್ಲದೆ ಎರಡು ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಒಪ್ಪಂದಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ದೂರಿದ್ದಾರೆ.

    ಬಿಜೆಪಿ ಹಾಗೂ ಆರ್‌ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಪೌರತ್ವ  ಮಸೂದೆಯು ಹಿಂದೂ ರಾಷ್ಟ್ರದ ಭಾಗವಾಗಿದೆ. ಅದೇ ರೀತಿಯಾಗಿ ಇದನ್ನು ನಿರ್ಮಿಸಲಾಗಿದೆ ಎಂದು ಹರಿಹಾಯ್ದಿದ್ದಾರೆ.

    ಪೌರತ್ವ ತಿದ್ದುಪಡಿ ಮಸೂದೆಯು ಲೋಕಸಭೆಯಲ್ಲಿ ಪಾಸ್ ಆಗಿದ್ದು, ಬುಧವಾರ ರಾಜ್ಯಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಲಿದೆ. ಕೇಂದ್ರ ಸರ್ಕಾರಕ್ಕೆ ರಾಜ್ಯಸಭೆಯಲ್ಲಿ ಬಹುಮತವಿಲ್ಲ. ಆದರೂ ಸಹ ತಟಸ್ಥವಾಗಿರುವ ಪಕ್ಷಗಳನ್ನು ಸೆಳೆಯಲು ಸರ್ಕಾರ ಮುಂದಾಗಿದೆ.

     ಮಸೂದೆಗೆ ಈಶಾನ್ಯ ರಾಜ್ಯಗಳು ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ವಿರೋಧ ವ್ಯಕ್ತವಾಗುತ್ತಿದ್ದು, ವಿಪಕ್ಷಗಳು ಸಹ ಈ ಕುರಿತು ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿವೆ. ಕಾಂಗ್ರೆಸ್ ಹಾಗೂ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೇರಿದಂತೆ ಇತರೆ ವಿರೋಧ ಪಕ್ಷಗಳು ಪೌರತ್ವ ತಿದ್ದುಪಡಿ ಮಸೂದೆ  ಅಸಂವಿಧಾನಿಕವಾಗಿದೆ ಎಂದು ದೂರಿವೆ.

    ಪೌರತ್ವ ತಿದ್ದುಪಡಿ ಮಸೂದೆಯನ್ನು ಸೋಮವಾರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಮಂಡಿಸಿದ್ದು, ಪಾಸ್ ಸಹ ಆಗಿದೆ. ಆದರೆ ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಭಾರೀ ಗದ್ದಲ ಎಬ್ಬಿಸಿದ್ದು, ಎಐಎಂಐಎಂ ನಾಯಕ ಅಸಾದುದ್ದಿನ್ ಓವೈಸಿ ಲೋಕಸಭೆಯಲ್ಲಿ ಮಸೂದೆಯ ಪ್ರತಿಯನ್ನೇ ಹರಿದು ಹಾಕುವ ಮೂಲಕ ತೀವ್ರ ಚರ್ಚೆಗೆ ಕಾರಣರಾಗಿದ್ದಾರೆ.

    ಈಶ್ವಾನ್ಯ ರಾಜ್ಯಗಳಲ್ಲಿಯೂ ಸಹ ಈ ಕುರಿತು ಜನಾಕ್ರೋಶ ಹೆಚ್ಚಾಗುತ್ತಿದೆ. ಅಕ್ರಮ ವಲಸಿಗರನ್ನು ಧಾರ್ಮಿಕ ಆಧಾರದ ಮೇಲೆ ಹೊರತಾಗಿಯೂ ಗಡಿಪಾರು ಮಾಡುವ 1985ರ ಅಸ್ಸಾಂ ಒಪ್ಪಂದವನ್ನು ರದ್ದುಗೊಳಿಸಿ, ಮಸೂದೆಯನ್ನು ಅಂಗೀಕಾರ ಮಾಡಲಾಗುತ್ತಿದೆ ಎಂದು ಈಶಾನ್ಯ ರಾಜ್ಯಗಳಲ್ಲಿ ವಿದ್ಯಾರ್ಥಿ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

  • ಪೌರತ್ವ ಮಸೂದೆಗೆ ಲೋಕಸಭೆಯಲ್ಲಿ ಬೆಂಬಲ ನೀಡಿ ಯೂಟರ್ನ್ ಹೊಡೆದ ಶಿವಸೇನೆ

    ಪೌರತ್ವ ಮಸೂದೆಗೆ ಲೋಕಸಭೆಯಲ್ಲಿ ಬೆಂಬಲ ನೀಡಿ ಯೂಟರ್ನ್ ಹೊಡೆದ ಶಿವಸೇನೆ

    – ಬೆಂಬಲಿಸಿದ ಸಂಸದರ ವಿರುದ್ಧ ರಾಹುಲ್ ಕಿಡಿ
    – ಗೊಂದಲದಲ್ಲಿ ಶಿವಸೇನೆ ಸಂಸದರು

    ಮುಂಬೈ: ಲೋಕಸಭೆಯಲ್ಲಿ ಸೋಮವಾರ ರಾತ್ರಿ ಪೌರತ್ವ ತಿದ್ದುಪಡಿ ಮಸೂದೆ ಪರ ಮತ ಹಾಕಿದ್ದ ಶಿವಸೇನೆ ಈಗ ಯೂಟರ್ನ್ ಹೊಡೆದಿದ್ದು, ರಾಜ್ಯಸಭೆಯಲ್ಲಿ ಮಸೂದೆಗೆ ಬೆಂಬಲ ನೀಡಲ್ಲ ಎಂದು ಪಕ್ಷದ ಮುಖ್ಯಸ್ಥ, ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸ್ಪಷ್ಟಪಡಿಸಿದ್ದಾರೆ.

    ಮಹಾರಾಷ್ಟ್ರದ ಮೈತ್ರಿ ಸರ್ಕಾರ ಈಗಾಗಲೇ ತೊಂದರೆಯಲ್ಲಿದೆ. ಏಕೆಂದರೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಸೂದೆಯನ್ನು ಬೆಂಬಲಿಸಿದ ಪಕ್ಷ ಹಾಗೂ ಸಂಸದರನ್ನು ಖಂಡಿಸಿ ತೀಕ್ಷ್ಣವಾದ ಟ್ವೀಟ್ ಮಾಡಿದ್ದಾರೆ. ಈ ಬೆನ್ನಲ್ಲೇ ಮಸೂದೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಉದ್ಧವ್ ಠಾಕ್ರೆ, ಪೌರತ್ವ ತಿದ್ದುಪಡಿ ಮಸೂದೆಯ ವಿಷಯಗಳು ಸ್ಪಷ್ಟವಾಗದ ಹೊರತು ನಾವು ಬೆಂಬಲ ನೀಡುವುದಿಲ್ಲ. ಲೋಕಸಭೆಯಲ್ಲಿ ಸೋಮವಾರ ನಾವು ಕೇಳಿದ ಪ್ರಶ್ನೆಗಳಿಗೆ ಉತ್ತರಗಳು ಸಿಕ್ಕಿಲ್ಲ ಎಂದು ಹೇಳಿದ್ದಾರೆ.

    ಕೇಂದ್ರ ಸರ್ಕಾರವು ಮಸೂದೆಯನ್ನು ರಾಜ್ಯಸಭೆಗೆ ತರುವಾಗ ಬದಲಾವಣೆಗಳನ್ನು ಮಾಡಬೇಕು. ನಾವು ಮಸೂದೆ ಪರ ಲೋಕಸಭೆಯಲ್ಲಿ ಮತ ಚಲಾಯಿಸಿದ್ದೇವೆ. ಆದರೆ ರಾಜ್ಯಸಭೆ ಅದು ಸಾಧ್ಯವಾಗದೆ ಇರಬಹುದು ಎಂದು ಉದ್ಧವ್ ಠಾಕ್ರೆ ಅವರ ಆಪ್ತ, ಶಿವಸೇನಾ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

    ರಾಜ್ಯಸಭೆಯಲ್ಲೂ ಮಸೂದೆಯನ್ನು ಪಕ್ಷವು ಬೆಂಬಲಿಸುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಶಿವಸೇನೆ ಸಂಸದ ಅರವಿಂದ ಸಾವಂತ್ ಅವರು, ನಮಗೆ ವಿಭಿನ್ನ ಪಾತ್ರಗಳಿವೆಯೇ? ಶಿವಸೇನೆ ರಾಷ್ಟ್ರೀಯ ಹಿತಾಸಕ್ತಿಯೊಂದಿಗೆ ನಿಂತಿದೆ. ಪಕ್ಷವು ಯಾರೊಬ್ಬರ ಏಕಸ್ವಾಮ್ಯವಲ್ಲ. ನಾವು ರಾಷ್ಟ್ರದ ಹಿತದೃಷ್ಟಿಯಿಂದ ಮಸೂದೆಯನ್ನು ಬೆಂಬಲಿಸಿದ್ದೇವೆ. ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಮಹಾರಾಷ್ಟ್ರದಲ್ಲಿ ಮಾತ್ರ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ.

    ಸೈದ್ಧಾಂತಿಕವಾಗಿ ಭಿನ್ನಾಭಿಪ್ರಾಯದ ಶಿವಸೇನೆ-ಎನ್‍ಸಿಪಿ-ಕಾಂಗ್ರೆಸ್ ಮೈತ್ರಿಕೂಟವು ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಿವೆ. ಆದರೆ ಶಿವಸೇನೆ ಕಾಂಗ್ರೆಸ್ ವಿರೋಧದ ನಡುವೆಯೂ ಪೌರತ್ವದ ತಿದ್ದುಪಡಿ ಮಸೂದೆ ಬೆಂಬಲಿಸಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ಹೀಗಾಗಿ ರಾಜ್ಯಸಭೆಯಲ್ಲಿ ಬೆಂಬಲ ನೀಡದಿರಲು ಶಿವಸೇವೆ ಮುಂದಾಗಿದೆ. ರಾಜ್ಯಸಭೆಯಲ್ಲಿ ಶಿವಸೇನೆಯ ಮೂವರು ಸದಸ್ಯರಿದ್ದಾರೆ.

  • ಪೌರತ್ವ ತಿದ್ದುಪಡಿ ಮಸೂದೆಯ ಪ್ರತಿ ಹರಿದು ಹಾಕಿದ ಓವೈಸಿ

    ಪೌರತ್ವ ತಿದ್ದುಪಡಿ ಮಸೂದೆಯ ಪ್ರತಿ ಹರಿದು ಹಾಕಿದ ಓವೈಸಿ

    ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಯನ್ನು ಸೋಮವಾರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಮಂಡಿಸಿದ್ದು, ಪಾಸ್ ಸಹ ಆಗಿದೆ. ಆದರೆ ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಭಾರೀ ಗದ್ದಲ ಎಬ್ಬಿಸಿದ್ದು, ಎಐಎಂಐಎಂ ನಾಯಕ ಅಸಾದುದ್ದಿನ್ ಓವೈಸಿ ಮಸೂದೆಯ ಪ್ರತಿಯನ್ನೇ ಹರಿದು ಹಾಕುವ ಮೂಲಕ ತೀವ್ರ ಚರ್ಚೆಗೆ ಕಾರಣರಾಗಿದ್ದಾರೆ.

    ಗೃಹ ಸಚಿವರು ಲೋಕಸಭೆಯಲ್ಲಿ ಮಸೂದೆ ಮಂಡಿಸುತ್ತಿದ್ದಂತೆ ವಿರೋಧ ಪಕ್ಷಗಳು ಕೋಲಾಹಲ ಎಬ್ಬಿಸಿವೆ. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಲೋಕಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಮಸೂದೆಯ ಪ್ರತಿಯನ್ನು ಹರಿದು ಹಾಕಿದ್ದಾರೆ. ಈ ಮಸೂದೆಯ ಮೂಲಕ ಭಾರತವನ್ನು ವಿಭಾಗಿಸಲಾಗುತ್ತಿದೆ. ಹೀಗಾಗಿ ಈ ಮಸೂದೆಯನ್ನು ನಾನು ಹರಿದು ಹಾಕುತ್ತೇನೆ. ಇದು ಎರಡನೇ ವಿಭಜನೆಯಾಗಿದೆ ಎಂದು ಕಿಡಿಕಾರಿದ್ದಾರೆ.

    ಇತ್ತ ಈಶ್ವಾನ್ಯ ರಾಜ್ಯಗಳಲ್ಲಿಯೂ ಸಹ ಈ ಕುರಿತು ಜನಾಕ್ರೋಶ ಹೆಚ್ಚಾಗುತ್ತಿದೆ. ಅಕ್ರಮ ವಲಸಿಗರನ್ನು ಧಾರ್ಮಿಕ ಆಧಾರದ ಮೇಲೆ ಹೊರತಾಗಿಯೂ ಗಡಿಪಾರು ಮಾಡುವ 1985ರ ಅಸ್ಸಾಂ ಒಪ್ಪಂದವನ್ನು ರದ್ದುಗೊಳಿಸಿ, ಮಸೂದೆಯನ್ನು ಅಂಗೀಕಾರ ಮಾಡಲಾಗುತ್ತಿದೆ ಎಂದು ಈಶಾನ್ಯ ರಾಜ್ಯಗಳಲ್ಲಿ ವಿದ್ಯಾರ್ಥಿ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

    ಮಸೂದೆ ಕುರಿತು ಈಶಾನ್ಯ ರಾಜ್ಯಗಳಲ್ಲಿನ ಬಹುತೇಕ ಜನ ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ. ಆರು ದಶಕಗಳ ಹಳೆಯ ಪೌರತ್ವ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದ್ದು, ಬಾಂಗ್ಲಾದೇಶ, ಅಫ್ಘಾನಿಸ್ಥಾನ ಹಾಗೂ ಪಾಕಿಸ್ತಾನದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡುವುದು ತಿದ್ದುಪಡಿಯ ಉದ್ದೇಶವಾಗಿದೆ.

    ಭಾರೀ ಚರ್ಚೆಗೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ಮಸೂದೆಯು 293 ಮತಗಳಿಂದ ಲೋಕಸಭೆಯಲ್ಲಿ ಪಾಸ್ ಆಗಿದೆ. ಲೋಕಸಭೆಯಲ್ಲಿ ಸೋಮವಾರ ನಡೆದ ಪೌರತ್ವ ತಿದ್ದುಪಡಿ ಮಸೂದೆ ಚರ್ಚೆ ನಡೆಯಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಸೂದೆಯನ್ನು ಸದನದಲ್ಲಿ ಮಂಡಿಸಿ ಮತಕ್ಕೆ ಹಾಕಿದರು. ಆದರೆ ಇದಕ್ಕೆ ವಿಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸಿ, ಇದು ಅಲ್ಪಸಂಖ್ಯಾತ ವಿರೋಧಿ ಎಂದು ಕರೆದರು. ಆರೋಪವನ್ನು ತಳ್ಳಿ ಹಾಕಿದ ಅಮಿತ್ ಶಾ, ಪೌರತ್ವ ತಿದ್ದುಪಡಿ ಮಸೂದೆಯು ಶೇ.0.001 ರಷ್ಟು ಕೂಡ ದೇಶದ ಅಲ್ಪಸಂಖ್ಯಾತ ಸಮುದಾಯದ ವಿರುದ್ಧವಿಲ್ಲ ಎಂದು ಸ್ಪಷ್ಟಪಡಿಸಿದರು.

    ಮಸೂದೆ ಮಂಡನೆಗೂ ಮುನ್ನ ಮಾತನಾಡಿದ ಅಮಿತ್ ಶಾ, ನಿಮ್ಮ ಪ್ರತಿ ಪ್ರಶ್ನೆಗೂ ನಾವು ಉತ್ತರಿಸುತ್ತೇವೆ. ಆದರೆ ಸದನವನ್ನು ಬಹಿಷ್ಕರಿಸಿ ಹೊರ ನಡೆಯಬೇಡಿ. ಈ ಮಸೂದೆಯಲ್ಲಿ ಒಮ್ಮೆಯೂ ಮುಸ್ಲಿಂ ಸಮುದಾಯವನ್ನು ಉಲ್ಲೇಖಿಸಲಾಗಿಲ್ಲ ಎಂದು ಮನವಿ ಮಾಡಿಕೊಂಡರು. ಇದನ್ನು ಲೆಕ್ಕಿಸಿದ ವಿಪಕ್ಷಗಳ ಸಂಸದರು, ಮಸೂದೆ ಮಂಡಿಸುವುದನ್ನು ವಿರೋಧಿಸುತ್ತಲೇ ಇದ್ದರು. ಇದರಿಂದಾಗಿ ಸುಮಾರು ಒಂದು ಗಂಟೆ ಸುದೀರ್ಘ ಚರ್ಚೆಯಾಯಿತು.

    ಕಾಂಗ್ರೆಸ್‍ನ ಸಂಸದ, ಮುಖಂಡ ಅಧೀರ್ ರಂಜನ್ ಚೌಧರಿ, ಎಐಎಂಐಎಂನ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೇರಿದಂತೆ ಅನೇಕ ಸಂಸದರು ಸದನದಲ್ಲಿ ಅಸಮಾಧಾನ ಹೊರಹಾಕಿದರು. ಈ ಎಲ್ಲ ಬೆಳವಣಿಗೆಯಿಂದಾಗಿ ಸ್ಪೀಕರ್ ಓಂ ಬಿರ್ಲಾ ಮಸೂದೆಯನ್ನು ಮಂಡಿಸಿ, ಮತದಾನಕ್ಕೆ ಹಾಕುವಂತೆ ನಿರ್ದೇಶನ ನೀಡಿದರು. ಮಸೂದೆಯನ್ನು ಮತಕ್ಕೆ ಹಾಕಿದಾಗ 375 ಸಂಸದರು ಮತದಾನದಲ್ಲಿ ಭಾಗವಹಿಸಿದ್ದರು. ಈ ಪೈಕಿ 293 ಸಂಸದರು ಮಸೂದೆ ಪರವಾಗಿ ಮತ ಹಾಕಿದರೆ, ಪ್ರತಿಪಕ್ಷದ 82 ಸಂಸದರು ವಿರೋಧವಾಗಿ ಮತ ಹಾಕಿದರು. ಪೌರತ್ವ ತಿದ್ದುಪಡಿ ಮಸೂದೆಯೂ ಬಹುಮತ ಪಡೆದು ಲೋಕಸಭೆಯಲ್ಲಿ ಪಾಸ್ ಆಯಿತು.