Tag: ಪೌರತ್ವ

  • ಎಲ್ಲ ಉಕ್ರೇನ್ ಪ್ರಜೆಗಳಿಗೆ ವೇಗವಾಗಿ ರಷ್ಯಾದ ಪೌರತ್ವ ಕೊಡಲು ಮುಂದಾದ ಪುಟಿನ್

    ಎಲ್ಲ ಉಕ್ರೇನ್ ಪ್ರಜೆಗಳಿಗೆ ವೇಗವಾಗಿ ರಷ್ಯಾದ ಪೌರತ್ವ ಕೊಡಲು ಮುಂದಾದ ಪುಟಿನ್

    ಮಾಸ್ಕೋ: ರಷ್ಯಾದ ಸೇನೆ ಪ್ರಮುಖ ಉಕ್ರೇನಿಯನ್ ನಗರವನ್ನು ಆಕ್ರಮಿಸಿಕೊಳ್ಳುತ್ತಿದ್ದಂತೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೋಮವಾರ ಎಲ್ಲ ಉಕ್ರೇನಿಯನ್ನರಿಗೆ ರಷ್ಯಾದ ಪೌರತ್ವವನ್ನು ಪಡೆಯುವ ವೇಗದ ವಿಧಾನವನ್ನು ವಿಸ್ತರಿಸಿದರು.

    ಈ ಯೋಜನೆಯೂ ಯುದ್ಧದಿಂದ ಹಾನಿಗೊಳಗಾದ ಉಕ್ರೇನ್ ಮೇಲೆ ಮಾಸ್ಕೋದ ಪ್ರಭಾವವನ್ನು ಬಲಪಡಿಸುವ ಮತ್ತೊಂದು ಪ್ರಯತ್ನವಾಗಿದೆ. ಇಲ್ಲಿವರೆಗೂ ಉಕ್ರೇನ್‍ನ ಪ್ರತ್ಯೇಕತಾವಾದಿ ಪೂರ್ವ ಡೊನೆಟ್ಸ್ಕ್ ಮತ್ತು ಲುಹಾನ್ಸ್ಕ್ ಪ್ರದೇಶದ ನಿವಾಸಿಗಳು, ಹಾಗೆಯೇ ದಕ್ಷಿಣದ ಝಪೊರಿಝಿಯಾ ಮತ್ತು ಖೆರ್ಸನ್ ಪ್ರದೇಶದ ನಿವಾಸಿಗಳು ಮತ್ತು ಈಗ ರಷ್ಯಾದ ನಿಯಂತ್ರಣದಲ್ಲಿರುವ ಹೆಚ್ಚಿನ ಭಾಗದ ಜನರು ಪಾಸ್‍ಪೋರ್ಟ್‍ಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಈ ಹಿನ್ನೆಲೆ ಪುಟಿನ್ ಅವರು ಇದರ ವಿಧಾನವನ್ನು ವೇಗವಾಗಿ ಮಾಡಬೇಕು ಎಂದು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಮಲೆನಾಡಿನಲ್ಲಿ ನಿಲ್ಲದ ವರುಣನ ಆರ್ಭಟ – ಮಳೆ ದೇವನಿಗೆ ಸ್ಥಳೀಯರಿಂದ ವಿಶೇಷ ಪೂಜೆ 

    ಉಕ್ರೇನಿಯನ್ ವಿದೇಶಾಂಗ ಸಚಿವ ಡಿಮಿಟ್ರೋ ಕ್ಲುಬಾ ಅವರು ಪಾಸ್‍ಪೋರ್ಟ್ ಆದೇಶಕ್ಕೆ ಸಹಿ ಹಾಕಿದ್ದಾರೆ. ಇದು ಉಕ್ರೇನ್‍ನಲ್ಲಿರುವ ನಿವಾಸಿಗಳಿಗೂ ಅನ್ವಯಿಸುತ್ತದೆ.

    ನಮ್ಮ ರಾಜ್ಯದ ಆಕ್ರಮಿತ ಪ್ರದೇಶಗಳ ನಿವಾಸಿಗಳ ಕುತ್ತಿಗೆಗೆ ಕುಣಿಕೆಯನ್ನು ಬಿಗಿಗೊಳಿಸಲು ಪಾಸ್‍ಪೋರ್ಟ್‍ಗಳನ್ನು ನೀಡಲು ರಷ್ಯಾ ಸರಳೀಕೃತ ವಿಧಾನವನ್ನು ಬಳಸುತ್ತಿದೆ. ಆಕ್ರಮಿತ ಆಡಳಿತಗಳು ಮತ್ತು ರಷ್ಯಾದ ಆಕ್ರಮಣಕಾರಿ ಸೈನ್ಯದ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಈ ಮೂಲಕ ಒತ್ತಾಯಿಸುತ್ತಿದೆ ಎಂದು ಉಕ್ರೇನ್‍ನ ವಿದೇಶಿ ಸಚಿವಾಲಯ ಹೇಳಿಕೆಯಲ್ಲಿ ಸೇರಿಸಿದೆ.

    2019 ರ ನಡುವೆ, ಡೊನೆಟ್ಸ್ಕ್ ಮತ್ತು ಲುಹಾನ್ಸ್ಕ್ ದ 7,20,000 ಜನರಲ್ಲಿ ಸುಮಾರು 18% ಜನರು ರಷ್ಯಾದ ಪಾಸ್‍ಪೋರ್ಟ್‍ಗಳನ್ನು ಸ್ವೀಕರಿಸಿದ್ದಾರೆ. ಇದನ್ನೂ ಓದಿ:  ʼಬೆಲ್ಲದ ದೋಸೆʼ ಮಾಡುವ ಸೂಪರ್‌ ವಿಧಾನ 

    Live Tv
    [brid partner=56869869 player=32851 video=960834 autoplay=true]

  • ಪಾಕಿಸ್ತಾನದಿಂದ ಬಂದ ಶೇ.87 ಮಂದಿಗೆ ಭಾರತದ ಪೌರತ್ವ

    ಪಾಕಿಸ್ತಾನದಿಂದ ಬಂದ ಶೇ.87 ಮಂದಿಗೆ ಭಾರತದ ಪೌರತ್ವ

    ನವದೆಹಲಿ: ಕಳೆದ 5 ವರ್ಷಗಳಲ್ಲಿ ಭಾರತೀಯ ಪೌರತ್ವವನ್ನು ಪಡೆದಿರುವ ಶೇ.87 ರಷ್ಟು ಅರ್ಜಿದಾರರು ಪಾಕಿಸ್ತಾನದಿಂದ ಬಂದವರು ಎಂಬ ಮಾಹಿತಿಯನ್ನು ಗೃಹ ಸಚಿವಾಲಯವು ಬಹಿರಂಗಪಡಿಸಿದೆ.

    ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಸಲ್ಲಿಸಿದ್ದ ಅರ್ಜಿಗೆ ಉತ್ತರಿಸಿ, ಕಳೆದ 5 ವರ್ಷಗಳಲ್ಲಿ 5,220 ವಿದೇಶಿಯರಿಗೆ ಭಾರತೀಯ ಪೌರತ್ವ ನೀಡಲಾಗಿದೆ. ಅವರಲ್ಲಿ 4,552 (ಶೇ.87) ಹೊಸ ನಾಗರಿಕರು ಪಾಕಿಸ್ತಾನದಿಂದ ಬಂದಿದ್ದಾರೆ ಎಂದು ಮಾಹಿತಿ ನೀಡಿದೆ. ಇದನ್ನೂ ಓದಿ: ಇಬ್ಬರು ಮಹಿಳೆಯರ ಹೊಟ್ಟೆಯಲ್ಲಿತ್ತು 28 ಕೋಟಿ ಮೌಲ್ಯದ ಕೊಕೇನ್ – ಬೆಚ್ಚಿಬಿದ್ದ ಪೊಲೀಸರು

    REPORT

    ಕಳೆದ ವರ್ಷ ನವಂಬರ್‌ನಲ್ಲಿ ಲೋಕಸಭೆಗೆ ಮಾಹಿತಿ ನೀಡಿದ್ದ ಕೇಂದ್ರ ಗೃಹಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಪ್ರಕಾರ, 5 ವರ್ಷಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವ ತ್ಯಜಿಸಿದ್ದಾರೆ. 2021 ರಿಂದ 2021ರ ವರೆಗೆ 6,08,162 ಜನರು ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಅವರು ಲೋಕಸಭೆಗೆ ತಿಳಿಸಿದ್ದರು.

    ಗೃಹ ಸಚಿವಾಲಯವು 2017 ಮತ್ತು 2022ರ ನಡುವೆ 5,220 ವಿದೇಶಿಯರಿಗೆ ಭಾರತೀಯ ಪೌರತ್ವ ನೀಡಲಾಗಿದೆ. ಪ್ರತಿವರ್ಷ ಸರಾಸರಿ 1,21,632 ಜನರು ಭಾರತೀಯ ಪೌರತ್ವವನ್ನು ತ್ಯಜಿಸಿದರು ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಬೆಂಗ್ಳೂರು ಡ್ರೋನ್ ಹಾರಿಸಿ ಉತ್ಸವಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ

    Passport

    ಕಳೆದ 5 ವರ್ಷಗಳಲ್ಲಿ ಕೇವಲ 71 ಅಮೆರಿಕನ್ನರು ಭಾರತೀಯ ಪೌರತ್ವ ಪಡೆದಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ, ಪಾಕಿಸ್ತಾನ (ಶೇ.87), ಅಫ್ಘಾನಿಸ್ತಾನ (ಶೇ.8) ಮತ್ತು ಬಾಂಗ್ಲಾದೇಶ (ಶೇ.2) ಭಾರತದ ಪೌರತ್ವ ಪಡೆದುಕೊಂಡಿವೆ.

    ಯಾವ ವರ್ಷ ಎಷ್ಟು ಮಂದಿಗೆ ಪೌರತ್ವ?

    • 2017- 1,33,049
    • 2018- 1,34,561
    • 2019- 1,44,017
    • 2020- 85,248
    • 2021- 1,11,287

  • ನಟ ಚೇತನ್ ಗಡಿಪಾರು? : ಹೋರಾಟಗಳೇ ನಟನಿಗೆ ಮುಳುವಾಗುತ್ತಾ..?

    ನಟ ಚೇತನ್ ಗಡಿಪಾರು? : ಹೋರಾಟಗಳೇ ನಟನಿಗೆ ಮುಳುವಾಗುತ್ತಾ..?

    ಸಾಮಾಜಿಕ ಹೋರಾಟಗಾರ, ನಟ ಚೇತನ್ ಅವರನ್ನು ಭಾರತದಿಂದ ಗಡಿಪಾರು ಮಾಡುವಂತಹ ವರದಿ ಸಿದ್ಧವಾಗಿದೆ ಎಂದು ಈ ಹಿಂದೆ ಪಬ್ಲಿಕ್ ಟಿವಿ ಡಿಜಿಟಲ್ ಸುದ್ದಿಯನ್ನು ಬ್ರೇಕ್ ಮಾಡಿತ್ತು. ಈಗ ಆ ಸುದ್ದಿ ಮತ್ತೆ ಮುನ್ನೆಲೆಗೆ ಬಂದಿದೆ. ಚೇತನ್ ಸಮುದಾಯಗಳ ನಡುವೆ ಸಾಮರಸ್ಯ ಕದಡುತ್ತಿದ್ದಾರೆ ಎಂದು ಪೊಲೀಸ್ ಇಲಾಖೆಯು ಸರಕಾರಕ್ಕೆ ವರದಿ ನೀಡಿದೆ. ಕರ್ನಾಟಕ ಸರಕಾರವು ಸಿದ್ಧಪಡಿಸಿದ ವರದಿಯನ್ನು, ಕೇಂದ್ರಕ್ಕೆ ಕಳುಹಿಸಲಿ ಹೊರಟಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಕಂಗನಾಳನ್ನು ಹೀರೋಯಿನ್ ಮಾಡಿದ್ದು ಆ ಜ್ಯೋತಿಷಿ: ಅಸಲಿ ಸತ್ಯ ಬಾಯ್ಬಿಟ್ಟ ನಟ ಪ್ರಭಾಸ್

    ಸಾಗರೋತ್ತರ ಭಾರತೀಯ ನಾಗರಿಕ ಪತ್ರ (ಓಸಿಎ) ನಿಯಮಗಳನ್ನು ಚೇತನ್ ಉಲ್ಲಂಘನೆ ಮಾಡಿದ್ದಾರೆ ಎಂದು ಪೊಲೀಸ್ ಇಲಾಖೆಯು ಸರಕಾರಕ್ಕೆ ವರದಿ ಸಲ್ಲಿಸಿತ್ತು. ಈಗದು ಕೇಂದ್ರ ಸರಕಾರದ ವಿದೇಶಾಂಗ  ಇಲಾಖೆಗೆ ರವಾನೆ ಆಗಲಿದೆಯಂತೆ.  ಇದನ್ನೂ ಓದಿ: ಎಂಟು ವರ್ಷಗಳ ನಂತರ ಒಂದಾದ ನೀನಾಸಂ ಸತೀಶ್ ಮತ್ತು ಸಿಂಧು

    ಓಸಿಎ ನಿಯಮದ ಪ್ರಕಾರ ಸಾಗರೋತ್ತರ ನಾಗರಿಕರು ಸಾರ್ವಜನಿಕ ಪ್ರತಿಭಟನೆ, ಸರಕಾರದ ವಿರುದ್ಧ ಚಟುವಟಿಕೆ ಮ್ತು ರಾಜಕೀಯ ಚಟುವಟಿಕೆಗಳಲ್ಲೂ ಭಾಗಿಯಾಗುವಂತಿಲ್ಲ. ಚೇತನ್ ಭಾರತಿಯ ಪ್ರಜೆಯಲ್ಲ. ಅಮೆರಿಕದ ಪೌರತ್ವ ಹೊಂದಿದ್ದಾರೆ. ಹೀಗಾಗಿ ಓಸಿಎ ನಿಯಮವನ್ನು ಚೇತನ್ ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ ಎನ್ನುತ್ತಿದೆಯಂತೆ ಪೊಲೀಸ್ ಇಲಾಖೆ ಕೊಟ್ಟ ವರದಿ. ಇದನ್ನೂ ಓದಿ: ಉಪೇಂದ್ರ ಹೊಸ ಸಿನಿಮಾ ಮಾಡಲು ಸ್ಟಾರ್ ನಟಿ ನಯನತಾರಾ ಕಾರಣ : ಏನಿದು ಅಸಲಿ ಗುಟ್ಟು?

    ಈ ಹಿಂದೆ ಚೇತನ್ ಒಂದು ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂದು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಲ್ಲದೇ, ಚೇತನ್ ಸರಕಾರದ ವಿರುದ್ಧ ಸಾಕಷ್ಟು ಪ್ರತಿಭಟನೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಎಲ್ಲವನ್ನೂ ದಾಖಲೆ ಸಮೇತ ವರದಿ ಸಿದ್ಧವಾಗಿದೆಯಂತೆ. ಇದನ್ನೂ ಓದಿ: ಸಮಂತಾ ಯಾಕಿಂಗ್ ಆದೆ? ಗರಂ ಆದ ಅಭಿಮಾನಿಗಳು

    ಈ ಕುರಿತು ಮೊನ್ನೆಯೇ ಮಾಧ್ಯಮಗಳಿಗೆ ಸ್ಪಷ್ಟನೆ ಕೊಟ್ಟಿರುವ ಚೇತನ್, “ಈ ವರದಿ, ಗಡಿಪಾರಿನ ವಿಷಯವೇ ಅವರಿಗೆ ಗೊತ್ತಿಲ್ಲವಂತೆ.

  • ಪೌರತ್ವ ಸಾಬೀತುಪಡಿಸಿ ಎಂದಿದ್ದಕ್ಕೆ ಮಗ ಆತ್ಮಹತ್ಯೆ- 10 ವರ್ಷದ ಬಳಿಕ ವೃದ್ಧೆಗೆ ಮತ್ತೆ ನೋಟಿಸ್‌

    ಪೌರತ್ವ ಸಾಬೀತುಪಡಿಸಿ ಎಂದಿದ್ದಕ್ಕೆ ಮಗ ಆತ್ಮಹತ್ಯೆ- 10 ವರ್ಷದ ಬಳಿಕ ವೃದ್ಧೆಗೆ ಮತ್ತೆ ನೋಟಿಸ್‌

    ದಿಸ್ಪುರ: ಪೌರತ್ವ ಸಾಬೀತುಪಡಿಸಿ ಎಂದು ನೋಟಿಸ್‌ ನೀಡಿದ ಪರಿಣಾಮವಾಗಿ ಮಗನನ್ನು ಕಳೆದುಕೊಂಡಿದ್ದ ವೃದ್ಧೆಗೆ ಈಗ ಮತ್ತೆ ನೋಟಿಸ್‌ ನೀಡಲಾಗಿದೆ.

    ಪೌರತ್ವ ಸಾಬೀತುಪಡಿಸಿ ಎಂದು ಅಸ್ಸಾಂನ ಕ್ಯಾಚಾರ್ ಜಿಲ್ಲೆಯ 80 ವರ್ಷದ ವೃದ್ಧೆಗೆ ನೋಟಿಸ್‌ ನೀಡಲಾಗಿದೆ. 2012ರಲ್ಲಿ ಇದೇ ರೀತಿ ನೋಟಿಸ್‌ ನೀಡಲಾಗಿತ್ತು. ಆಗ ಈ ವೃದ್ಧೆಯ ಮಗ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗ ಮತ್ತೆ ನೋಟಿಸ್‌ ಕೊಡಲಾಗಿದೆ. ಇದನ್ನೂ ಓದಿ: ಕೆಂಪು ಟೋಪಿ ವಿರುದ್ಧ ಅಪಪ್ರಚಾರ, ಬೇರೆ ಬಣ್ಣದ ಟೋಪಿ ಧರಿಸಲು ಜನರಿಗೆ ಒತ್ತಾಯ: ಅಖಿಲೇಶ್

    ಅಕೊಲ್‌ ರಾಣಿ ನಾಮಸೂದ್ರ ಎಂಬ ವೃದ್ಧೆ ಇಂಡೋ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿ ಸಮೀಪವಿರುವ ಕಟೋಗೋರಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹರಿಟಿಕರ್‌ ಭಾಗ-1ರ ನಿವಾಸಿ. ಕಳೆದ ತಿಂಗಳು, ಸಿಲ್ಚಾರ್‌ನಲ್ಲಿರುವ ವಿದೇಶಿಯರ ನ್ಯಾಯಮಂಡಳಿಯು ಮಾ.5ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ತಿಳಿಸಿದೆ.

    ನೀವು ನಿಗದಿತ ಅವಧಿಯೊಳಗೆ ನಿಮ್ಮ ಪೌರತ್ವದ ಬಗ್ಗೆ ಯಾವುದೇ ಮಾನ್ಯ ದಾಖಲೆಗಳನ್ನು ಪೊಲೀಸರ ಮುಂದೆ ಸಲ್ಲಿಸಲು ಸಾಧ್ಯವಾಗಿಲ್ಲ. ಈ ಆಧಾರದ ಮೇಲೆ ನೀವು ಅಕ್ರಮ ವಲಸಿಗರು ಎಂದು ಶಂಕಿಸಲಾಗಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಉಕ್ರೇನ್‍ನಿಂದ ಸುರಕ್ಷಿತವಾಗಿ ಮಗಳು ಭಾರತಕ್ಕೆ – ಪ್ರಯಾಣದ ಖರ್ಚನ್ನು ಪಿಎಂ ಕೇರ್ಸ್ ಫಂಡ್‍ಗೆ ನೀಡಿದ ತಂದೆ

    ಈ ಕುರಿತು ಮಾತನಾಡಿರುವ ವಕೀಲ ಅನಿಲ್‌ ಡೇ ಅವರು, 2012ರಲ್ಲಿ ಇದೇ ರೀತಿಯ ಸೂಚನೆಯಿಂದಾಗಿ ಅವರ ಮಗ ನಿಧನರಾದರು. ಆದರೆ ಅವರ ಮರಣದ ನಂತರ ಅವರನ್ನು ಭಾರತೀಯ ಎಂದು ಘೋಷಿಸಲಾಯಿತು. ಆ ವ್ಯಕ್ತಿಯ ತಾಯಿಗೆ ಮತ್ತೆ ಅದೇ ನ್ಯಾಯಾಲಯದಿಂದ ಹೇಗೆ ನೋಟಿಸ್‌ ಬಂದಿದೆ ಎಂಬುದು ಅರ್ಥವಾಗುತ್ತಿಲ್ಲ. ಏ.4ರಂದು ಮತ್ತೆ ಹಾಜರಾಗುವಂತೆ ಕೋರ್ಟ್‌ ಹೇಳಿದ್ದು, ಅಂದು ಸಮರ್ಪಕ ದಾಖಲೆಗಳನ್ನು ಸಲ್ಲಿಸಲಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

    ತಂದೆಯ ಹೆಸರಿನಲ್ಲಿ ಭಾರತ ಸರ್ಕಾರವು 1956ರ ಪೌರತ್ವ ಕಾರ್ಡ್ ಅನ್ನು ಹೊಂದಿದ್ದರೂ, 2012 ರಲ್ಲಿ ಅರ್ಜುನ್ ನಾಮಸೂದ್ರ ಅವರ ಪೌರತ್ವವನ್ನು ಪ್ರಶ್ನಿಸಲಾಗಿತ್ತು. ತನ್ನನ್ನು ಬಂಧಿಸಿ ಬಾಂಗ್ಲಾದೇಶಕ್ಕೆ ತಳ್ಳುತ್ತಾರೆಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು ಅವರ ಕುಟುಂಬದವರು ಹೇಳಿದ್ದಾರೆ.

    2014ರ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕ್ಯಾಚಾರ್‌ಗೆ ಭೇಟಿ ನೀಡಿದ್ದರು. ಈ ವೇಳೆ ತಮ್ಮ ಭಾಷಣದಲ್ಲಿ ಅರ್ಜುನ್ ನಾಮಸೂದ್ರ ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಅರ್ಜುನ್ ನಾಮಸೂದ್ರ ನನ್ನ ಸಹೋದರನಾಗಿದ್ದು, ಅವರ ಸಾವಿನಿಂದ ನನಗೆ ನೋವಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಅರ್ಜುನ್‌ನಂಥವರಿಗೆ ಸಮಸ್ಯೆ ಆಗುವುದಿಲ್ಲ. ಯಾರೂ ಭಯಭೀತರಾಗಬೇಡಿ, ಆತ್ಮಹತ್ಯೆ ಮಾಡಿಕೊಳ್ಳಬೇಕಾಗಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಹೇಳಿದ್ದರು. ಇದನ್ನೂ ಓದಿ: ಭಾರತದ ಮೇಲೆ ಯುದ್ಧದ ಎಫೆಕ್ಟ್: ಖಾದ್ಯತೈಲ, ಗೋಧಿ, ಸಿಮೆಂಟ್, ಕಬ್ಬಿಣ ದುಬಾರಿ

    ನಾವು ಗಡಿ ಪ್ರದೇಶದಲ್ಲಿ ವಾಸಿಸುತ್ತಿದ್ದೇವೆ. ಅಲ್ಲಿ ಭಾರತದಿಂದ ಹೊರದೂಡುತ್ತಾರೆಂಬ ಭಯವಿದೆ. ಆ ಭಯದಿಂದ ನನ್ನ ಮಗ ಆತ್ಮಹತ್ಯೆ ಮಾಡಿಕೊಂಡ. 10 ವರ್ಷಗಳ ಹಿಂದೆ ನನ್ನ ಮಗನನ್ನು ಕಳೆದುಕೊಂಡೆ. ಇಂದು ಕಳೆದುಕೊಳ್ಳಲು ಏನೂ ಇಲ್ಲ. ನನ್ನ ಗುರುತನ್ನು ಮತ್ತೊಮ್ಮೆ ಸಾಬೀತುಪಡಿಸಲು ಕೇಳಿದ್ದಾರೆ. ನ್ಯಾಯಾಂಗವನ್ನು ಗೌರವಿಸಿ, ನಾನು ಪೌರತ್ವ ಸಾಬೀತುಪಡಿಸುತ್ತೇನೆ ಎಂದು ವೃದ್ಧೆ ಅಕೊಲ್‌ ರಾಣಿ ನಾಮಸೂದ್ರ ತಿಳಿಸಿದ್ದಾರೆ.

  • ಪಾಕ್ ಪೌರತ್ವಕ್ಕೆ ಮುಂದಾದ ಸನ್‍ರೈಸರ್ಸ್ ಮಾಜಿ ಆಲ್‍ರೌಂಡರ್ ಡ್ಯಾರೆಲ್ ಸ್ಯಾಮಿ

    ಪಾಕ್ ಪೌರತ್ವಕ್ಕೆ ಮುಂದಾದ ಸನ್‍ರೈಸರ್ಸ್ ಮಾಜಿ ಆಲ್‍ರೌಂಡರ್ ಡ್ಯಾರೆಲ್ ಸ್ಯಾಮಿ

    – ಕಳಪೆ ಆಟದಿಂದ ಐಪಿಎಲ್‍ನಿಂದ ಹೊಬಿದ್ದಿದ್ದ ವಿಂಡೀಸ್ ಆಟಗಾರ
    – ಪಾಕಿಸ್ತಾನ ಸೂಪರ್ ಲೀಗ್‍ನಲ್ಲಿ ಮಿಂಚಿದ ಸ್ಯಾಮಿ

    ಇಸ್ಲಾಮಾಬಾದ್: ಸನ್‍ರೈಸರ್ಸ್ ಹೈದರಾಬಾದ್ ಮಾಜಿ ಆಟಗಾರ, ವೆಸ್ಟ್ ಇಂಡೀಸ್ ಕ್ರಿಕೆಟಿಗ ಡ್ಯಾರೆನ್ ಸ್ಯಾಮಿ ಪಾಕಿಸ್ತಾನದ ಪ್ರಜೆಯಾಗಲು ಸಜ್ಜಾಗಿದ್ದು, ಅವರಿಗೆ ಗೌರವ ಪೌರತ್ವ ನೀಡುವ ಅರ್ಜಿಯನ್ನು ಪಾಕ್ ಅಧ್ಯಕ್ಷರಿಗೆ ರವಾನಿಸಲಾಗಿದೆ.

    ಇಂಡಿಯನ್ ಪ್ರಿಮಿಯರ್ ಲೀಗ್‍ನಲ್ಲಿ ಕಳಪೆ ಪದರ್ಶನ ನೀಡಿ ಟೂರ್ನಿಯಿಂದ ಹೊರಬಿದ್ದ ಡ್ಯಾರೆಲ್ ಸ್ಯಾಮಿ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‍ಎಲ್) ಸೇರಿ ಮಿಂಚಿದ್ದಾರೆ. ಉದ್ಯಮಿ ಪಿಎಸ್‍ಎಲ್‍ನ ಫ್ರ್ಯಾಂಚೈಸ್ ಜಾವೆದ್ ಅಫ್ರಿದಿ ಮಾಲೀಕತ್ವದ ಪೇಶ್ವರ್ ಜಲ್ಮಿ ತಂಡದಲ್ಲಿ ಡ್ಯಾರೆನ್ ನಾಯಕರಾಗಿದ್ದಾರೆ.

    ಡ್ಯಾರೆನ್‍ಗೆ ಗೌರವ ಪೌರತ್ವ ಕೊಡಿಸುವ ಇಡೀ ಪ್ರಕ್ರಿಯೆಯನ್ನು ಜಾವೆದ್ ಅಫ್ರಿದಿ ಆರಂಭಿಸಿದರು. ಜೊತೆಗೆ ವಿಂಡೀಸ್ ಕ್ರಿಕೆಟಿಗರ ಅರ್ಜಿಯನ್ನು ಸ್ವೀಕರಿಸುತ್ತಾರೆ ಎಂಬ ಭರವಸೆ ಕೂಡ ವ್ಯಕ್ತಪಡಿಸಿದ್ದಾರೆ.

    ‘ನಾವು ಡೇರೆನ್ ಸ್ಯಾಮಿ ಅವರಿಗೆ ಪಾಕಿಸ್ತಾನದ ಗೌರವ ಪೌರತ್ವಕ್ಕಾಗಿ ವಿನಂತಿಸಿದ್ದೇವೆ. ಈ ಸಂಬಂಧ ಅರ್ಜಿಯನ್ನು ಪಾಕಿಸ್ತಾನ ಅಧ್ಯಕ್ಷರಿಗೆ ನೀಡಿದ್ದೇವೆ. ಸ್ಯಾಮಿ ಪರ ಒಳ್ಳೆಯ ಮಾತುಗಳನ್ನು ಹೇಳಬೇಕೆಂದು ಪಿಸಿಬಿ ಅಧ್ಯಕ್ಷರಿಗೆ ವಿನಂತಿಸಿದ್ದೇನೆ. ಆದ್ದರಿಂದ ಗೌರವ ಪೌರತ್ವವನ್ನು ಅಧ್ಯಕ್ಷರು ಅನುಮೋದಿಸುತ್ತಾರೆ ಎಂಬ ಭರವಸೆ ಇದೆ. ಲಾಹೋರ್‍ನಲ್ಲಿ ಪಿಎಸ್‍ಎಲ್ ಸೀಸನ್ 2ರ ಅಂತಿಮ ಪಂದ್ಯವನ್ನು ನಡೆಸಲು ಪಿಸಿಬಿ ಪ್ರಯತ್ನಿಸುತ್ತಿದ್ದಾಗ ಸ್ಯಾಮಿ ಅವರ ಹೇಳಿಕೆಯಿಂದ ನಾವು ತುಂಬಾ ಭಾವುಕರಾಗಿದ್ದೇವು ಎಂದು ಜಾವೆದ್ ಅಫ್ರದಿ ಹೇಳಿದರು.

    ಡ್ಯಾರೆನ್ ಸ್ಯಾಮಿಗೆ ಪಾಕಿಸ್ತಾನದ ಪ್ರೀತಿ:
    ಸ್ಯಾಮಿ ಎಲ್ಲಾ ಐದು ಆವೃತ್ತಿಗಳಲ್ಲಿ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‍ಎಲ್)ನ ಭಾಗವಾಗಿದ್ದಾರೆ. ಜೊತೆಗೆ ದೇಶ ಮತ್ತು ಅದರ ಜನರ ಮೇಲಿನ ಪ್ರೀತಿಯನ್ನು ಅನೇಕ ಸಂದರ್ಭಗಳಲ್ಲಿ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ತಂಡವು ತನ್ನ ತವರಿನಲ್ಲಿ ಮತ್ತೆ ಟೂರ್ನಿ ಆರಂಭಿಸಿದಾಗ ಸಾಥ್ ನೀಡಿದ ವಿದೇಶಿ ಆಟಗಾರರಲ್ಲಿ ಡ್ಯಾರೆನ್ ಸ್ಯಾಮಿ ಕೂಡ ಒಬ್ಬರು.

    ‘ಪಾಕಿಸ್ತಾನ ಬಗ್ಗೆ ಅಪಾರ ಪ್ರೀತಿ ಇದೆ. ಇದು ನನ್ನ ಭಾವನೆ. ನನ್ನ ಬಳಿ ಪಾಸ್‌ಪೋರ್ಟ್ ಇದೆಯೋ ಇಲ್ಲವೋ, ಈ ದೇಶಕ್ಕೆ ನನ್ನ ಕೊಡುಗೆ ಎಲ್ಲವನ್ನೂ ಒದಗಿಸುತ್ತದೆ ಎಂದು ಭಾವಿಸುತ್ತೇನೆ. ಈ ದೇಶದೊಂದಿಗೆ ನನ್ನನ್ನು ಸೇರಿಸಿಕೊಳ್ಳಲು ಪಾಸ್‌ಪೋರ್ಟ್ ಅಗತ್ಯವಿಲ್ಲ’ ಎಂದು ಸ್ಯಾಮಿ ಹೇಳಿದ್ದಾರೆ.

    ಪಿಎಸ್‍ಎಲ್ ಟ್ರೋಲ್:
    ಪಿಎಸ್‍ಎಲ್ 5ನೇ ಆವೃತ್ತಿಯಲ್ಲಿ ಒಟ್ಟು 6 ತಂಡಗಳಿದ್ದು, ಫೆಬ್ರವರಿ 20ರಿಂದ ಆರಂಭಗೊಂಡಿದೆ. ಆದರೆ ಚಾಂಪಿಯನ್‍ಶಿಪ್ ತಂಡಕ್ಕೆ 3.5 ಕೋಟಿ ರೂ. ನೀಡಲಾಗುತ್ತಿದೆ. ಇದೇ ವಿಚಾರವನ್ನು ಎತ್ತಿಕೊಂಡ ನೆಟ್ಟಿಗರು ಪಾಕಿಸ್ತಾನದ ಕಾಲೆಳೆಯುತ್ತಿದ್ದಾರೆ.

  • ಪೌರತ್ವ ಗಲಾಟೆ ಬಳಸಿ ಉಗ್ರರ ನೇಮಕಕ್ಕೆ ನಡೆದಿತ್ತು ಫ್ಲಾನ್!

    ಪೌರತ್ವ ಗಲಾಟೆ ಬಳಸಿ ಉಗ್ರರ ನೇಮಕಕ್ಕೆ ನಡೆದಿತ್ತು ಫ್ಲಾನ್!

    ಬೆಂಗಳೂರು: ಸಿಸಿಬಿ ಪೊಲೀಸರಿಂದ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ. ಕರ್ನಾಟಕದಲ್ಲಿ ಸರಣಿ ವಿಧ್ವಂಸಕ ಕೃತ್ಯ ಮಾಡಲು ರೆಡಿಯಾಗಿದ್ದ ಸ್ಕೆಚ್ ಹೊರಗೆಡವಿದ್ದಾರೆ.

    ಪೌರತ್ವ ಕಾಯ್ದೆಯ ಗಲಾಟೆಯನ್ನೇ ಬಳಸಿಕೊಂಡು ಉಗ್ರರ ನೇಮಕ ಮಾಡಲು ಸ್ಕೆಚ್ ರೆಡಿಯಾಗಿದ್ದನ್ನ ಸಿಸಿಬಿ ಪೊಲೀಸರು ಬಯಲಿಗೆಳೆದಿದ್ದಾರೆ. ವಿಧ್ವಂಸಕ ಕೃತ್ಯದ ಮಾಸ್ಟರ್ ಮೈಂಡ್ ಮೆಹಬೂಬ್ ಪಾಷಾ ಎಂದು ತಿಳಿದು ಬಂದಿದೆ.

    ಅಲ್ಪ ಸಂಖ್ಯಾತರನ್ನು ಜಿಹಾದ್‍ಗೆ ಸೆಳೆಯಲು ಸ್ಕೆಚ್ ಮಾಡಿದ್ದ ಮೆಹಬೂಬ್ ಪಾಷಾ, ಬೆಂಗಳೂರಿನ ಸದ್ದು ಗುಂಟೆಪಾಳ್ಯದಲ್ಲಿ ವಾಸವಾಗಿದ್ದನು. ಅಲ್ಲದೆ ಬೆಂಗಳೂರು ಜಿಹಾದಿ ಗ್ಯಾಂಗ್‍ನ ಕಮಾಂಡರ್ ಕೂಡ ಆಗಿದ್ದ. ಮೂರು ದಿನಗಳ ಹಿಂದೆ ಸಿಕ್ಕ ಜಿಹಾದಿ ಗ್ಯಾಂಗ್ ವಿರುದ್ಧ ಎಫ್‍ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ತನಿಖೆ ವೇಳೆಯಲ್ಲಿ ಸಿಸಿಬಿಯಿಂದ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

    ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಐಸಿಸ್ ನೇಮಕಾತಿಗೆ ಸ್ಕೆಚ್ ಕೂಡ ನಡೆದಿತ್ತು. ಮೆಹಬೂಬ್ ಪಾಷಾ ಸದಸ್ಯರ ನೇಮಕ, ಶಸ್ತ್ರ ಪೂರೈಕೆಯ ನೀಲನಕ್ಷೆ ರಚಿಸಿದ್ದನು. ಬೆಂಗಳೂರು ಹೊರವಲಯ, ಮಡಿಕೇರಿಯ ಅರಣ್ಯ ಪ್ರದೇಶದಲ್ಲಿ ಟ್ರೈನಿಂಗ್ ಕೊಡಿಸಿದ್ದನು. ಅಲ್ಲದೇ ರಾಜ್ಯದಲ್ಲಿ ಸರಣಿ ವಿಧ್ವಂಸಕ ಕೃತ್ಯ ಮಾಡಲು ಸ್ಕೆಚ್ ಮಾಡಿದ್ದ ಮೆಹಬೂಬ್ ಪಾಷಾ, ತನ್ನ ಸಹಚರರ ಬಂಧನದ ಬಳಿಕ ತಲೆಮರೆಸಿಕೊಂಡಿದ್ದಾನೆ.

    ಮೆಹಬೂಬ್ ಪಾಷಾಗಾಗಿ ಸಿಸಿಬಿ ಪೊಲೀಸರ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಈ ವರ್ಷ ಕರ್ನಾಟಕದಲ್ಲಿ ವಿಧ್ವಂಸಕ ಕೃತ್ಯ ಮಾಡಲು ಸ್ಕೆಚ್ ಮಾಡಿದ್ದ ಜಿಹಾದಿ ಗ್ಯಾಂಗ್ ಹೆಡೆ ಮುರಿಕಟ್ಟಿ ಮುಂದಾಗಬಹುದಾದ ಬಹುದೊಡ್ಡ ಅಪಾಯ ತಪ್ಪಿಸಿದ್ದಾರೆ.

  • ಸಿಎಎ ರದ್ದುಗೊಳಿಸಿ : ಕೇರಳ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಸಿಎಂ ಪಿಣರಾಯಿ ವಿಜಯನ್

    ಸಿಎಎ ರದ್ದುಗೊಳಿಸಿ : ಕೇರಳ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಸಿಎಂ ಪಿಣರಾಯಿ ವಿಜಯನ್

    ತಿರುವನಂತಪುರಂ: ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ರದ್ದುಗೊಳಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದಾರೆ.

    ವಿಧಾನಸಭೆ ಮತ್ತು ಸಂಸತ್ತಿನಲ್ಲಿ ಎಸ್‍ಸಿ ಮತ್ತು ಎಸ್‍ಟಿಗಳಿಗೆ ಮೀಸಲಾತಿಯನ್ನು ಮತ್ತೊಂದು ದಶಕಗಳವರೆಗೆ ವಿಸ್ತರಿಸುವುದನ್ನು ಅಂಗೀಕರಿಸಲು ಒಂದು ದಿನದ ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು. ಇದೇ ವೇಳೆ ಸಿಎಎ ವಿಚಾರದಲ್ಲಿ ಸಾರ್ವಜನಿಕರಲ್ಲಿ ವ್ಯಾಪಕವಾದ ಕಳವಳಗಳನ್ನು ಗಮನದಲ್ಲಿಟ್ಟುಕೊಂಡು ಸಿಎಎ ವಿರುದ್ಧದ ನಿರ್ಣಯವನ್ನು ಸಹ ಕೈಗೊಳ್ಳಲಾಗಿದೆ.

    ಸಿಎಎ ವಿರುದ್ಧ ನಿರ್ಣಯವನ್ನು ಮಂಡಿಸುವಾಗ ಸಿಎಂ ಪಿಣರಾಯಿ ವಿಜಯನ್ ಸಿಎಎ ದೇಶದ ‘ಜಾತ್ಯಾತೀತ’ ದೃಷ್ಟಿಕೋನಕ್ಕೆ ವಿರುದ್ಧವಾಗಿದೆ ಮತ್ತು ಪೌರತ್ವ ನೀಡುವಲ್ಲಿ ಧರ್ಮ ಆಧಾರಿತ ತಾರತಮ್ಯ ಸರಿಯಲ್ಲ ಈ ಕಾಯ್ದೆಯು ಸಂವಿಧಾನದ ಮೂಲ ಮೌಲ್ಯಗಳು ಮತ್ತು ತತ್ವಗಳಿಗೆ ವಿರುದ್ಧವಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ದೇಶದ ಜನರಲ್ಲಿರುವ ಆತಂಕವನ್ನು ಗಮನದಲ್ಲಿಟ್ಟುಕೊಂಡು ಸಿಎಎಯನ್ನು ಕೈಬಿಡಬೇಕು ಎಂದು ಆಗ್ರಹಿಸಿದ ಅವರು ಸಂವಿಧಾನದ ಜಾತ್ಯಾತೀತ ದೃಷ್ಟಿಕೋನವನ್ನು ಎತ್ತಿಹಿಡಿಯಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಮನವಿ ಮಾಡಿದರು. ಅಲ್ಲದೇ ಕೇರಳದಲ್ಲಿ ಯಾವುದೇ ಬಂಧನ ಕೇಂದ್ರಗಳು ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

    ಸಿಎಎ ವಿರುದ್ಧ ನಿರ್ಣಯ ಮಂಡಿಸುವ ಸಂಬಂಧ ಬಿಜೆಪಿ ಏಕೈಕ ಸದಸ್ಯ ಓ ರಾಜಗೋಪಾಲ್ ವಿರೋಧ ವ್ಯಕ್ತಪಡಿಸಿದರು. ಸಂಸತ್ತಿನ ಉಭಯ ಸದನಗಳಲ್ಲಿ ಸಿಎಎ ಕಾಯ್ದೆಯನ್ನು ಅಂಗೀಕರಿಸಿದ್ದರಿಂದ ಇದು ‘ಕಾನೂನುಬಾಹಿರ’ ಎಂದು ಹೇಳುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಈ ವಿಷಯದ ಬಗ್ಗೆ ಚರ್ಚಿಸಲು ಸಿಎಂ ಪಿಣರಾಯಿ ವಿಜಯನ್ ಡಿಸೆಂಬರ್ 29 ರಂದು ಕರೆದ ಸರ್ವಪಕ್ಷ ಸಭೆಯಲ್ಲಿ ವಿಶೇಷ ಅಧಿವೇಶನ ನಡೆಸಿ ಸಿಎಎ ವಿರುದ್ಧ ನಿರ್ಣಯ ಮಂಡಿಸುವಂತೆ ಪ್ರತಿಪಕ್ಷಗಳಾದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಎಡ ಸರ್ಕಾರಕ್ಕೆ ಒತ್ತಾಯಿಸಿತ್ತು.

  • ದೆಹಲಿಯಲ್ಲಿ ಪೌರತ್ವ ಕಿಚ್ಚು : 16 ಮೆಟ್ರೋ ನಿಲ್ದಾಣ, ಮೊಬೈಲ್ ನೆಟ್ವರ್ಕ್ ಬಂದ್

    ದೆಹಲಿಯಲ್ಲಿ ಪೌರತ್ವ ಕಿಚ್ಚು : 16 ಮೆಟ್ರೋ ನಿಲ್ದಾಣ, ಮೊಬೈಲ್ ನೆಟ್ವರ್ಕ್ ಬಂದ್

    ನವದೆಹಲಿ: ಪೌರತ್ವ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಪ್ರತಿಭಟನೆ ಕಾವು ಹೆಚ್ಚಾಗಿದೆ. ಕಳೆದ ಶುಕ್ರವಾರದಿಂದ ಪ್ರತಿಭಟನೆಗಳು ಆರಂಭವಾಗಿದ್ದು ಇಂದು ತೀವ್ರ ಸ್ವರೂಪ ಪಡೆದುಕೊಂಡಿದೆ.

    ದೆಹಲಿಯಲ್ಲಿ ಇಂದು ಕೆಂಪುಕೋಟೆ, ಮಂಡಿ ಹೌಸ್, ಜಂತರ್ ಮಂತರ್ ಸೇರಿ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿದೆ. ಪ್ರತಿಭಟನೆಗೆ ನಿನ್ನೆಯೇ ಅವಕಾಶ ಕೇಳಲಾಗಿತ್ತು ಪ್ರತಿಭಟನೆ ಅವಕಾಶ ನಿರಾಕರಿಸಿದ್ದ ದೆಹಲಿ ಪೊಲೀಸರು 144 ಸೆಕ್ಷನ್ ಜಾರಿ ಮಾಡಿದ್ದರು.

    ವಿರೋಧ ನಡುವೆ ಪ್ರತಿಭಟನೆ ನಡೆಸಿದ್ದ ಸ್ವರಾಜ್ ಇಂಡಿಯಾದ ಮುಖ್ಯಸ್ಥ ಯೋಗೇಂದ್ರ ಯಾದವ್, ಜೆಎನ್‍ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಮುಖಂಡ ಉಮರ್ ಖಾಲಿದ್, ಎಡ ಪಕ್ಷದ ನಾಯಕರು ಹಾಗೂ 100 ಹೆಚ್ಚು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

    ಪ್ರತಿಭಟನೆ ಕಾವು ಪಡೆದುಕೊಳ್ಳುತ್ತಿದ್ದಂತೆ ದೆಹಲಿಯ 6 ಕಡೆ ಏರ್‌ಟೆಲ್‌ ತನ್ನ ಸೇವೆಯನ್ನು ಸ್ಥಗಿತಗೊಳಿಸಿದೆ. ಮುಸ್ತಫಾಬಾದ್, ಜಫರಾಬಾದ್, ಜಾಮಿಯಾ ನಗರ್, ಶಾಹೀನಾ ಬಾದ್, ಮಂಡಿ ಹೌಸ್, ಭಾವನ್ ಗಳಲ್ಲಿ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಮಂಡಿ ಹೌಸ್, ಕೆಂಪು ಕೋಟೆಯಲ್ಲಿ 144 ಸೆಕ್ಷನ್ ಜಾರಿ ಮಾಡಿದೆ.

    ಸೆಂಟ್ರಲ್ ಸೆಕ್ರೆಟರಿ, ಕೆಂಪು ಕೋಟೆ, ಮಂಡಿಹೌಸ್, ಪಟೇಲ್ ಚೌಕ್, ಲೋಕ ಕಲ್ಯಾಣ ಮಾರ್ಗ್, ಐಟಿಓ, ಉದ್ಯೋಗ ಭವನ ಸೇರಿ 16 ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ.

  • ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ- ಕೈ ಮಾಜಿ ಶಾಸಕನ ಬಂಧನ

    ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ- ಕೈ ಮಾಜಿ ಶಾಸಕನ ಬಂಧನ

    ಶಿವಮೊಗ್ಗ: ಪೌರತ್ವ ಕಾಯ್ದೆ ಜಾರಿ ವಿರೋಧಿಸಿ ಮಾಜಿ ಶಾಸಕ ಕೆ.ಬಿ ಪ್ರಸನ್ನಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸತ್ಯಾಗ್ರಹ ನಡೆಸಿದರು.

    ನಗರದ ಗಾಂಧಿಪಾರ್ಕ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರು ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ಎಂದು ಘೋಷಣೆ ಕೂಗಿದರು. ಕೇಂದ್ರ ಸರಕಾರ ಪ್ರಜಾಪ್ರಭುತ್ವ ವಿರೋಧಿ ಮಸೂದೆ ಮಂಡಿಸಿದೆ. ಬಿಜೆಪಿ ದೇಶಕ್ಕೆ ಮಾರಕವಾಗಿದ್ದು, ಸಂವಿಧಾನ ವಿರೋಧಿಯಾಗಿದ್ದು, ದೇಶ ಒಡೆಯಲು ಈ ಕಾಯ್ದೆ ಜಾರಿಗೊಳಿಸಿದೆ ಎಂದು ಆರೋಪಿಸಿದರು.

    ಇದೇ ವೇಳೆ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಸೇರಿದಂತೆ ಇತರೆ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

    ಪೌರತ್ವ ತಿದ್ದುಪಡಿ ಮಸೂದೆಯನ್ನು ಡಿಸೆಂಬರ್ 9 ರಂದು ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಮಂಡಿಸಿದ್ದು, 311 ಮತಗಳಿಂದ ಪಾಸ್ ಸಹ ಆಗಿತ್ತು. ಆದರೆ ಅಂದು ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಭಾರೀ ಗದ್ದಲ ಎಬ್ಬಿಸಿದ್ದವು. ಈ ವೇಳೆ ಎಐಎಂಐಎಂ ಪಕ್ಷದ ನಾಯಕ ಅಸಾದುದ್ದಿನ್ ಓವೈಸಿ ಮಸೂದೆಯ ಪ್ರತಿಯನ್ನೇ ಹರಿದು ಹಾಕುವ ಮೂಲಕ ತೀವ್ರ ಚರ್ಚೆಗೆ ಕಾರಣರಾಗಿದ್ದರು. ಇದಾದ ಬಳಿಕ ಮಸೂದೆಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅಂಕಿತ ಹಾಕಿದ್ದು, ಶುಕ್ರವಾರ ಮಧ್ಯರಾತ್ರಿಯಿಂದಲೇ ಕಾಯ್ದೆ ಜಾರಿಗೆ ಬಂದಿತ್ತು. ಆ ಬಳಿಕ ದೇಶಾದ್ಯಂತ ಪರ ವಿರೋಧ ಚರ್ಚೆಗಳಾಗುತ್ತಿದ್ದು, ಹಲವೆಡೆ ಪ್ರತಿಭಟನೆಗಳು ಕೂಡ ನಡೆಯುತ್ತಿವೆ.

  • ಭಾರತ ಮುಸ್ಲಿಮರಿಗೆ ಸೂಕ್ತ ಸ್ಥಳವಲ್ಲ- ಮೆಹಬೂಬಾ ಮುಫ್ತಿ ಪುತ್ರಿ

    ಭಾರತ ಮುಸ್ಲಿಮರಿಗೆ ಸೂಕ್ತ ಸ್ಥಳವಲ್ಲ- ಮೆಹಬೂಬಾ ಮುಫ್ತಿ ಪುತ್ರಿ

    ನವದೆಹಲಿ: ನೆರೆಯ ರಾಷ್ಟ್ರಗಳ ಮುಸ್ಲಿಮೇತರರಿಗೆ ಮಾತ್ರ ಪೌರತ್ವ ನೀಡುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪುತ್ರಿ ಸನಾ ಇಲ್ತಿಜಾ ಜವೇದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇಂದು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ವಿವಾದಿತ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಲಾಗಿದೆ. ಇದಕ್ಕೆ ಮೆಹಬೂಬಾ ಮುಫ್ತಿ ಪುತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿಯವರ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿದ್ದು, ಭಾರತ-ಮುಸ್ಲಿಮರಿಗಾಗಿ ಇರುವ ದೇಶವಲ್ಲ ಎಂದು ಬರೆದಿದ್ದಾರೆ.

    ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇಂದು ತಿದ್ದುಪಡಿ ಮಸೂದೆಗೆ ಒಪ್ಪಿಗೆ ಸೂಚಿಸುತ್ತಿದ್ದಂತೆ ಈ ಕುರಿತು ಟ್ವೀಟ್ ಮಾಡಲಾಗಿದ್ದು, ಸರ್ಕಾರ ಮುಸ್ಲಿಮರನ್ನು ಹೊರಗಿಡುವ ಪ್ರಯತ್ನ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸುವ ಸಂದರ್ಭದಲ್ಲಿ ಆಗಸ್ಟ್ 5ರಂದು ಮೆಹಬೂಬಾ ಮುಫ್ತಿಯವರನ್ನು ಬಂಧನಕ್ಕೊಳಪಡಿಸಿದಾಗಿನಿಂದ ಸನಾ ಇಲ್ತಿಜಾ ಜವೇದ್ ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿಂದೆ ಸಹ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಸನಾ, ಮುಸ್ಲಿಮರು ಹೆಚ್ಚಿರುವ ದೇಶದಲ್ಲಿ ಅವರು ಎರಡನೇ ದರ್ಜೆಯ ಪ್ರಜೆಗಳಾಗುತ್ತಿದ್ದಾರೆ ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು.

    ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸುವ ಸಂದರ್ಭದಲ್ಲಿ ಬಂಧಿಸಲಾಗಿದ್ದ ಮೆಹಬೂಬಾ ಮುಫ್ತಿ, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಖ್ ಅಬ್ದುಲ್ಲಾ ಹಾಗೂ ಮಗ ಒಮರ್ ಅಬ್ದುಲ್ಲಾ ಅವರನ್ನು ಇನ್ನೂ ಸಹ ಬಿಡುಗಡೆ ಮಾಡಿಲ್ಲ. ಅಲ್ಲದೆ ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎಂಬುದರ ಕುರಿತು ಸಹ ಸ್ಪಷ್ಟತೆ ಇಲ್ಲ.

    ಇಂದು ಸಚಿವ ಸಂಪುಟ ಸಭೆಯಲ್ಲಿ ಬಾಂಗ್ಲಾದೇಶ, ಅಫ್ಘಾನಿಸ್ಥಾನ ಹಾಗೂ ಪಾಕಿಸ್ಥಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ಪೌರತ್ವ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಲಾಗಿದೆ.

    ಈ ದೇಶಗಳಲ್ಲಿ ಅಲ್ಪಸಂಖ್ಯಾತರಾದ ಹಿಂದೂಗಳು, ಸಿಖ್, ಜೈನರು, ಬೌದ್ಧರು, ಪಾರ್ಸಿ ಹಾಗೂ ಕ್ರಿಶ್ಚಿಯನ್ ಸಮುದಾಯ ಕಿರುಕುಳ ಅನುಭವಿಸುತ್ತಿದೆ. ಹೀಗಾಗಿ ಇವರಿಗೆ ಭಾರತದ ಪೌರತ್ವ ನೀಡುವ ಅವಶ್ಯಕತೆ ಇದೆ ಎನ್ನುವುದು ಕೇಂದ್ರದ ವಾದ. ಆದರೆ ಮುಸ್ಲಿಮರನ್ನು ಹೊರಗಡೆ ಇಟ್ಟಿರುವುದು ಸಂವಿಧಾನ ವಿರೋಧಿ ನಡೆ ಎನ್ನುವುದು ವಿಪಕ್ಷಗಳ ಪ್ರತಿವಾದ.

    ಭಾರತದ ಪೌರತ್ವ ಪಡೆಯಬೇಕಾದರೆ 12 ವರ್ಷಕ್ಕಿಂತ ಹೆಚ್ಚು ಕಾಲ ದೇಶದಲ್ಲಿ ನೆಲೆಸಿರಬೇಕು ಎನ್ನುವ ನಿಯಮವನ್ನು 6 ವರ್ಷಕ್ಕೆ ಈ ಮಸೂದೆ ಇಳಿಸಿದೆ. ಸೂಕ್ತ ದಾಖಲೆಯ ಅಗತ್ಯತೆಯೂ ಇಲ್ಲದಿದ್ದರೂ ಕೂಡ ಪೌರತ್ವ ಸಿಗಲಿದೆ.

    2016ರಲ್ಲಿ ಈ ಮಸೂದೆ ಮೊದಲ ಬಾರಿಗೆ ಲೋಕಸಭೆಯಲ್ಲಿ ಮಂಡನೆಯಾಗಿತ್ತು. ಈ ವೇಳೆ ಕೋಲಾಹಲ ನಡೆದು ಜಂಟಿ ಸಂಸದೀಯ ಸಮಿತಿ ಪರಾಮರ್ಶೆಗೆ ಹೋಗಿತ್ತು. ಈ ಸಮಿತಿ ಈ ವರ್ಷದ ಜನವರಿಯಲ್ಲಿ ವರದಿ ನೀಡಿದ ಬಳಿಕ ಮಸೂದೆ ಮಂಡನೆಯಾಗಿತ್ತು. ಲೋಕಸಭೆಯಲ್ಲಿ ಪಾಸ್ ಆದರೂ ರಾಜ್ಯಸಭೆಯಲ್ಲಿ ಬಹುಮತ ಇಲ್ಲದ ಕಾರಣ ಮಸೂದೆ ಪಾಸ್ ಆಗಿರಲಿಲ್ಲ. ಈ ಸಂದರ್ಭದಲ್ಲಿ 16ನೇ ಲೋಕಸಭೆಯ ಅವಧಿ ಮುಕ್ತಾಯವಾಗಿತ್ತು. ಹೀಗಾಗಿ ಈಗ ತಿದ್ದುಪಡಿ ಮಾಡಿ ಮಂದಿನ ಮಂಗಳವಾರ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗುತ್ತಿದೆ.

    ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸುವಷ್ಟೇ ಮಹತ್ವದ ಮಸೂದೆ ಇದಾಗಿದೆ. ಹೀಗಾಗಿ ಎಲ್ಲ ಸಂಸದರು ಸದನದಲ್ಲಿ ಹಾಜರಿರಬೇಕು ಎಂದು ಈಗಾಗಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಿಜೆಪಿ ಸಂಸದರಿಗೆ ಸೂಚಿಸಿದ್ದಾರೆ.