Tag: ಪ್ಯಾರಾಗ್ಲೈಡಿಂಗ್

  • ಹಿಮಾಚಲ | ಪ್ಯಾರಾಗ್ಲೈಡಿಂಗ್ ವೇಳೆ ಅವಘಡ – ಗುಜರಾತ್‌ನ ಪ್ರವಾಸಿಗ ಸಾವು

    ಹಿಮಾಚಲ | ಪ್ಯಾರಾಗ್ಲೈಡಿಂಗ್ ವೇಳೆ ಅವಘಡ – ಗುಜರಾತ್‌ನ ಪ್ರವಾಸಿಗ ಸಾವು

    ಶಿಮ್ಲಾ: ಪ್ಯಾರಾಗ್ಲೈಡಿಂಗ್ (Paragliding) ವೇಳೆ ನಿಯಂತ್ರಣ ತಪ್ಪಿ 25 ವರ್ಷದ ಪ್ರವಾಸಿಗ ಮೃತಪಟ್ಟಿರುವ ಘಟನೆ ಹಿಮಾಚಲ ಪ್ರದೇಶದ (Himachal Pradesh) ಇಂದ್ರುನಾಗ್‌ನಲ್ಲಿ ನಡೆದಿದೆ.

    ಮೃತ ಯುವಕನನ್ನು ಗುಜರಾತ್ ಮೂಲದ ಸತೀಶ್ ರಾಜೇಶ್ ಭಾಯ್ (25) ಎಂದು ಗುರುತಿಸಲಾಗಿದೆ. ಸತೀಶ್ ಅವರು ಧರ್ಮಶಾಲಾದಲ್ಲಿರುವ ಇಂದ್ರುನಾಗ್ ಪ್ಯಾರಾಗ್ಲೈಡಿಂಗ್ ತಾಣಕ್ಕೆ ಬಂದಿದ್ದರು. ಪ್ಯಾರಾಗ್ಲೈಡಿಂಗ್ ಮಾಡುವ ವೇಳೆ ಪ್ಯಾರಾಚೂಟ್ ಗಾಳಿಯಲ್ಲಿ ಹಾರಲು ವಿಫಲವಾಯಿತು. ಈ ವೇಳೆ ಪ್ಯಾರಾಚೂಟ್ ಕೆಳಕ್ಕೆ ಬಿದ್ದಿದೆ. ಪ್ಯಾರಾಚೂಟ್‌ನಲ್ಲಿದ್ದ ಸತೀಶ್ ಹಾಗೂ ಪೈಲಟ್ ಸೂರಜ್ ಇಬ್ಬರೂ ಗಂಭೀರ ಗಾಯಗೊಂಡಿದ್ದರು. ಇದನ್ನೂ ಓದಿ: ತಮಿಳುನಾಡಿನಲ್ಲಿ ಸ್ಟಂಟ್‌ಮೆನ್ ಸಾವು – ಚಿತ್ರನಿರ್ದೇಶಕ ಪ.ರಂಜಿತ್ ವಿರುದ್ಧ ಎಫ್‌ಐಆರ್

    ಇಬ್ಬರನ್ನೂ ಧರ್ಮಶಾಲಾದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸತೀಶ್ ಅವರ ತಲೆ, ಬಾಯಿ ಮತ್ತು ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ತಾಂಡಾ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

  • ಗೋವಾದಲ್ಲಿ ಪ್ಯಾರಾಗ್ಲೈಡಿಂಗ್‌ ವೇಳೆ ದುರಂತ – ಇಬ್ಬರು ಸಾವು

    ಗೋವಾದಲ್ಲಿ ಪ್ಯಾರಾಗ್ಲೈಡಿಂಗ್‌ ವೇಳೆ ದುರಂತ – ಇಬ್ಬರು ಸಾವು

    ಪಣಜಿ: ಪ್ಯಾರಾಗ್ಲೈಡಿಂಗ್ (Paragliding) ಅಂದ್ರೆ ಯಾರಿಗೆ ತಾನೆ ಇಷ್ಟ ಇರಲ್ಲ ಹೇಳಿ. ಪ್ರತಿಯೊಬ್ಬರ ಕನಸು, ಪ್ಯಾರಾಗ್ಲೈಡಿಂಗ್ ಸಮಯದಲ್ಲಿ ಅನೇಕ ಬಾರಿ ಅಪಘಾತಗಳು ಸಂಭವಿಸಿವೆ. ಇಂತಹ ಘಟನೆಯೊಂದು ಉತ್ತರ ಗೋವಾದಲ್ಲಿ (North Goa) ನಡೆದಿದೆ.

    ಪ್ಯಾರಾಗ್ಲೈಡಿಂಗ್ ವೇಳೆ ನಿರ್ಲಕ್ಷ್ಯದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ, ಪ್ಯಾರಾಗ್ಲೈಡಿಂಗ್ ಮಹಿಳಾ ಪ್ರವಾಸಿ ಹಾಗೂ ಇನ್‌ಸ್ಟ್ರಕ್ಟರ್ ಸಾವಗೀಡಾಗಿದ್ದಾರೆ. ಶನಿವಾರ ಸಂಜೆ 5 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

    ಅಪಘಾತದಲ್ಲಿ ಪುಣೆ ನಿವಾಸಿ ಶಿವಾನಿ ಮತ್ತು ಆಕೆಯ ಇನ್‌ಸ್ಟ್ರಕ್ಟರ್ ಸುಮಲ್ ನೇಪಾಲಿ ಸಾವನ್ನಪ್ಪಿದ್ದಾರೆ. ಇನ್ನು, ಪ್ಯಾರಾಗ್ಲೈಡಿಂಗ್‌ ಸಂಸ್ಥೆಯ ವಿರುದ್ಧ ದೂರು ದಾಖಲಾಗಿದೆ. ಇದನ್ನೂ ಓದಿ: 2 ಗ್ಯಾಸ್‌ ಸಿಲಿಂಡರ್‌ ಸ್ಫೋಟ – ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ, ಧಗಧಗಿಸಿದ ಜ್ವಾಲೆ

    ದೂರಿನನ್ವಯ ‘ಪ್ಯಾರಾಗ್ಲೈಡರ್’ ಟೇಕಾಫ್ ಆದ ತಕ್ಷಣ ಕಂದಕಕ್ಕೆ ಬಿದ್ದು ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಂಪನಿ ಮಾಲೀಕ ಶೇಖರ್ ವಿರುದ್ಧ ಮಾಂಡ್ರೆಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಾಗ ಸಾಧುಗಳು ಯಾರು? ನೇಮಕಾತಿ ಹೇಗೆ ನಡೆಯುತ್ತೆ? ದೀಕ್ಷೆ ಪೂರ್ಣಗೊಳ್ಳುವುದು ಯಾವಾಗ?

  • ಪ್ಯಾರಾಗ್ಲೈಡಿಂಗ್ ಮೂಲಕ ಆದಿಯೋಗಿಯ ದರ್ಶನಕ್ಕೆ ಪ್ರಾಯೋಗಿಕ ಹಾರಾಟ

    ಪ್ಯಾರಾಗ್ಲೈಡಿಂಗ್ ಮೂಲಕ ಆದಿಯೋಗಿಯ ದರ್ಶನಕ್ಕೆ ಪ್ರಾಯೋಗಿಕ ಹಾರಾಟ

    ಚಿಕ್ಕಬಳ್ಳಾಪುರ: ಇಶಾ ಫೌಂಡೇಶನ್‌ನಿಂದ ಚಿಕ್ಕಬಳ್ಳಾಪುರದಲ್ಲಿ (Chikkaballapura) ಆದಿಯೋಗಿ (Adiyogi) ಪ್ರತಿಮೆ ಸ್ಥಾಪನೆಯಾಗುತ್ತಿದ್ದಂತೆ ಪ್ರವಾಸಿಗರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಬೆಂಗಳೂರಿನ ಸ್ಕೈಬರ್ಡ್ ಅಡ್ವೆಂಚರಸ್ ಸಂಸ್ಥೆ ಇಶಾ ಫೌಂಡೇಶನ್ ಸಮೀಪ ಪ್ಯಾರಾಗ್ಲೈಡಿಂಗ್ ಹಾರಾಟ ನಡೆಸಲು ಸಿದ್ಧತೆ ನಡೆಸಿದೆ.

    ಬುಧವಾರ ಪ್ರಾಯೋಗಿಕವಾಗಿ ಪ್ಯಾರಾಗ್ಲೈಡಿಂಗ್ ಹಾರಾಟವನ್ನು ಯಶಸ್ವಿಯಾಗಿ ನಡೆಸಿದ್ದು, ಉತ್ತರ ಭಾರತದ ಹಿಮಾಚಲ ಪ್ರದೇಶದಲ್ಲಿ ಕಾಣುತ್ತಿದ್ದ ಪ್ಯಾರಾಗ್ಲೈಡಿಂಗ್ (Paragliding) ಸಾಹಸ ಕ್ರೀಡೆ ಮುಂದಿನ ದಿನಗಳಲ್ಲಿ ಚಿಕ್ಕಬಳ್ಳಾಪುರದಲ್ಲಿಯೂ ಹಾರಾಟ ಮಾಡಬಹುದಾಗಿದೆ. ಇದನ್ನೂ ಓದಿ: ಸಿದ್ದು, ಡಿಕೆಶಿಯನ್ನ ಪೊಲೀಸ್‌ ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿಕೊಳ್ಳಿ: ಪ್ರತಾಪ್‌ ಸಿಂಹ

    ಪ್ಯಾರಾಗ್ಲೈಡಿಂಗ್ ಮಾಡುವಾಗ ಆದಿಯೋಗಿ ಪ್ರತಿಮೆಯನ್ನು ಮೇಲಿನಿಂದ ಪಕ್ಷಿಯಂತೆ ಹಾರಿ ವೀಕ್ಷಿಸಬಹುದಾಗಿದೆ. ಈಗ ಮೊದಲ ಹಂತದ ಪ್ರಾಯೋಗಿಕ ಹಾರಾಟ ಯಶಸ್ವಿಯಾಗಿದೆ.

    ಚಿಕ್ಕಬಳ್ಳಾಪುರ ಸಮೀಪದ ಅವಲಗುರ್ಕಿ ಗ್ರಾಮದಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಸ್ಥಾಪಿಸಲಾಗಿದೆ. 2023 ರ ಜನವರಿ ತಿಂಗಳಲ್ಲಿ ಪ್ರತಿಮೆಯನ್ನು ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದ್ದರು. ಇದನ್ನೂ ಓದಿ: ಹಾಸನದಿಂದ ಜೀರೋ ಟ್ರಾಫಿಕ್‌ನಲ್ಲಿ ಬಂದ್ರೂ ಅರ್ಧ ಗಂಟೆ ಚಿಕಿತ್ಸೆಗೆ ವಿಳಂಬ – ನಿಮಾನ್ಸ್‌ನಲ್ಲಿ ಕಂದಮ್ಮ ಸಾವು

  • ಗಗನಸಖಿಯ ಸಮಾಜಮುಖಿ ಕಾಯಕ – ಗಗನದಿಂದ ಬೀಜದುಂಡೆ ಬಿತ್ತನೆ

    ಗಗನಸಖಿಯ ಸಮಾಜಮುಖಿ ಕಾಯಕ – ಗಗನದಿಂದ ಬೀಜದುಂಡೆ ಬಿತ್ತನೆ

    ಚಿಕ್ಕಬಳ್ಳಾಪುರ: ಇಂದು ವಿಶ್ವ ಪರಿಸರ ದಿನಾಚರಣೆ. ಪರಿಸರ ದಿನ ಅಂಗವಾಗಿ ಎಲ್ಲೆಲ್ಲೂ ಗಿಡಗಳನ್ನು ನೆಡುವುದರ ಮೂಲಕ ಆಚರಣೆ ಮಾಡಲಾಗುತ್ತಿದೆ. ಆದರೆ ಇಲ್ಲೊಬ್ಬರು ಗಗನಸಖಿ ಗಗನದಿಂದಲೇ ಬೀಜ ಬಿತ್ತನೆ ಮಾಡಿ ಗಮನಸೆಳೆದಿದ್ದಾರೆ.

    ಸಿಲಿಕಾನ್ ಸಿಟಿಯ ಬೆಡಗಿ, ಮಾಜಿ ಗಗನ ಸಖಿ, ಗಗನದಿಂದಲೇ ಪ್ಯಾರಾಗ್ಲೈಡಿಂಗ್ ಮೂಲಕ ಪಂಚಗಿರಿಗಳ ಸಾಲಲ್ಲಿ ಬೀಜದುಂಡೆ ಬಿತ್ತನೆ ಮಾಡಿದ್ದಾರೆ. ಈ ಮೂಲಕ ವಿಶೇಷವಾಗಿ ಪರಿಸರ ದಿನಾಚರಣೆ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಹತ್ತಾರು ವರ್ಷಗಳ ಕಾಲ ಗಗನಸಖಿಯಾಗಿ ಕೆಲಸ ಮಾಡಿದ್ದ ಸಕ್ರಿಯಾ ಚಾರಿಟೇಬಲ್ ಟ್ರಸ್ಟ್‌ನ ಸಂಸ್ಥಾಪಕಿ ಅನಿತಾ ರಾವ್ ಭಾನುವಾರ ಚಿಕ್ಕಬಳ್ಳಾಪುರ ತಾಲೂಕಿನ ಪಂಚಗಿರಿಗಳಲ್ಲಿ ಪ್ಯಾರಾಮೋಟರಿಂಗ್ ಮೂಲಕ ಬೀಜದುಂಡನೆ ಬಿತ್ತನೆ ಮಾಡಿದರು. ಇದನ್ನೂ ಓದಿ: ಲಂಕಾಗೆ 3.3 ಟನ್‌ ಔಷಧ ಪೂರೈಕೆ – ಭಾರತ ಸರ್ಕಾರದಿಂದ ನೆರವು

    ಹೌದು, ಗಗನಸಖಿಯಾಗಿ ಕೆಲಸ ಮಾಡಿ, ಸಾಂಸಾರಿಕ ಜೀವನಕ್ಕೆ ಕಾಲಿಡುವ ಸಂದರ್ಭ ಗಗನಸಖಿ ಕೆಲಸಕ್ಕೆ ಗುಡ್‌ಬೈ ಹೇಳಿದರು. ಬಳಿಕ ಅನಿತಾ ಸಕ್ರಿಯಾ ಚಾರಿಟೇಬಲ್ ಟ್ರಸ್ಟ್ ಮೂಲಕ ಸಮಾಜಮುಖಿ ಕೆಲಸದ ಕಡೆ ಮುಖ ಮಾಡಿದ್ದಾರೆ. ಇಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಬ್ರಹ್ಮಗಿರಿ, ಸ್ಕಂದಗಿರಿ, ದಿಬ್ಬಗಿರಿ, ನಂದಿಗಿರಿಧಾಮಗಳಲ್ಲಿ ಸುಮಾರು 70,000 ಬೀಜದ ಉಂಡೆಗಳನ್ನು ಹಾಕುವ ಮೂಲಕ ಬರದ ನಾಡಿನ ಬೆಟ್ಟ ಗುಡ್ಡಗಳಲ್ಲಿ ಕಾಡು ಬೆಳೆಸುವ ಕಾಯಕಕ್ಕೆ ಮುಂದಾಗಿದ್ದಾರೆ.

    ಈ ವೇಳೆ ಮಾತನಾಡಿದ ಅನಿತಾ ರಾವ್, ನಾವು ಪರಿಸರ ಬಳಸಿಕೊಳ್ಳುವುದರ ಜೊತೆಗೆ ಪರಿಸರಕ್ಕೆ ಕೊಡುಗೆಯನ್ನೂ ನೀಡಬೇಕು. ಅತಿ ಕಷ್ಟಕರ ಜಾಗಗಳಲ್ಲಿ ಅಂದರೆ, ಬೆಟ್ಟ ಗುಡ್ಡಗಳಲ್ಲಿ ಯಾರೂ ಹೋಗಿ ಗಿಡಗಳನ್ನು ನೆಡಲು ಸಾಧ್ಯವಿಲ್ಲ. ಹೀಗಾಗಿ ಪ್ಯಾರಾಮೋಟರ್, ಹೆಲಿಕಾಪ್ಟರ್, ಮೂಲಕ ಸೀಡ್ ಬಾಲ್‌ಗಳನ್ನು ಹಾಕಿ, ಗಿಡ ನೆಡಲು ಸಾಧ್ಯವಿದೆ. ಇಂದು ಪುಣೆಯಿಂದ ಪ್ಯಾರಾಮೋಟರ್ ತರಿಸಿ ಬಿತ್ತನೆ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಜೂಮ್ ಕ್ಲಾಸ್ ಮಿಸ್ ಮಾಡ್ದೆ ಹಾಜರಾಗಿದ್ದ ಬೆಕ್ಕು – ಹ್ಯಾಟ್ ಕೊಟ್ಟ ವಿಶ್ವವಿದ್ಯಾಲಯ

    ಅರಣ್ಯ ಇಲಾಖೆ ಸಹಯೋಗದೊಂದಿಗೆ 7 ಬಗೆಯ ಸುಮಾರು 100 ಕೆಜಿ ಬೀಜಗಳನ್ನು ಇಂದು ಬಿತ್ತನೆ ಮಾಡಲಾಗಿದೆ. 10 ವರ್ಷ ಗಗನಸಖಿಯಾಗಿ ಕೆಲಸ ಮಾಡಿರುವ ನಾನು ಈಗ ಮನೆಯಲ್ಲೇ ಕುಳಿತು ಕಾಲ ಕಳೆಯುವ ಬದಲು ಇಂತಹ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದೇನೆ ಎಂದರು.

  • ಯಾದಗಿರಿಯಲ್ಲಿ ನಡೀತು ವಿಭಿನ್ನ ರೀತಿಯ ಮತದಾನ ಜಾಗೃತಿ

    ಯಾದಗಿರಿಯಲ್ಲಿ ನಡೀತು ವಿಭಿನ್ನ ರೀತಿಯ ಮತದಾನ ಜಾಗೃತಿ

    ಯಾದಗಿರಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಮತದಾರರಿಗೆ ಅರಿವು ಮೂಡಿಸಲು ಇಂದು ವಿಭಿನ್ನ ರೀತಿಯಲ್ಲಿ ಪ್ರಚಾರ ಮಾಡಲಾಯಿತು.

    ಯಾದಗಿರಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಪ್ಯಾರಾಗ್ಲೈಡಿಂಗ್ ಮೂಲಕ ಸಂಚರಿಸಿ ಪ್ರಚಾರ ನಡೆಸಲಾಯಿತು. ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಅವರು ಪ್ಯಾರಾಗ್ಲೈಡಿಂಗ್ ಗೆ ಚಾಲನೆ ನೀಡಿದ್ರು.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಏಪ್ರಿಲ್ 23 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯುವ ಮತಾದನದಲ್ಲಿ ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬ ಮತದಾರನೂ ಕೂಡ ತಮ್ಮ ಅಮೂಲ್ಯ ಮತವನ್ನು ಚಲಾಯಿಸಬೇಕು. ಈ ಹಿನ್ನೆಲೆಯಲ್ಲಿ ಇಂದು ವಿಭಿನ್ನವಾಗಿ ಜಾಗೃತಿ ಮೂಡಿಸಲಾಯಿತು. ವಿಶೇಷವಾಗಿ ಈ ಬಾರಿ ವಿಕಲಚೇತನರೆಲ್ಲರೂ ಕೂಡ ಮತದಾನದಲ್ಲಿ ಭಾಗವಹಿಸಬೇಕು. ಜಿಲ್ಲೆಯಲ್ಲಿ ಸರಿಸುಮಾರು 8 ಸಾವಿರದ 900 ಮಂದಿ ವಿಕಲಚೇತನರನ್ನು ಈಗಾಗಲೇ ಗುರುತಿಸಿದ್ದೇವೆ. ಅವರೆಲ್ಲರಿಗೂ ವಿಶೇಷ ಸೌಲಭ್ಯವನ್ನು ಕಲ್ಪಿಸುವ ಮೂಲಕ ಮತದಾನ ಮಾಡುವಂತೆ ಪ್ರೇರೇಪಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

    ಪ್ಯಾರಾಗ್ಲೈಡಿಂಗ್ ನಲ್ಲಿ ಜಿಲ್ಲಾಧಿಕಾರಿ, ಜಿಪಂ ಸಿಇಓ ಕವಿತಾ ಮನ್ನಿಕೇರಿ ಹಾಗೂ ಎಸ್ ಪಿ ಋಷಿಕೇಸ್ ಭಗವಾನ್ ಸಂಚಾರ ಮಾಡಿದ್ರು. ಇದು ನಗರದೆಲ್ಲೆಡೆ ಸುಮಾರು 200 ಮೀಟರ್ ಎತ್ತರದಲ್ಲಿ ಸಂಚಾರ ಮಾಡಿತು. ಒಟ್ಟಿನಲ್ಲಿ ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ `ನಿಮ್ಮ ಮತ ನಿಮ್ಮ ಹಕ್ಕು. ತಪ್ಪದೆ ನೈತಿಕವಾಗಿ ಹಕ್ಕು ಚಲಾಯಿಸಿ’ ಎನ್ನುವ ಜಾಗೃತಿ ಬರಹದೊಂದಿಗೆ ಪ್ರಚಾರ ಕೈಗೊಳ್ಳಲಾಯಿತು.