Tag: ಪ್ಯಾಲಸ್ಟೈನ್

  • ಗಾಜಾ ಮೇಲೆ ಅಣ್ವಸ್ತ್ರ ಪ್ರಯೋಗವಾಗಬೇಕು ಎಂದ ಇಸ್ರೇಲ್‌ ಸಂಸದೆ – ಅಮೆರಿಕಕ್ಕೆ ಟರ್ಕಿ ಎಚ್ಚರಿಕೆ: 3ನೇ ಮಹಾಯುದ್ಧ ನಡೆಯುತ್ತಾ?

    ಗಾಜಾ ಮೇಲೆ ಅಣ್ವಸ್ತ್ರ ಪ್ರಯೋಗವಾಗಬೇಕು ಎಂದ ಇಸ್ರೇಲ್‌ ಸಂಸದೆ – ಅಮೆರಿಕಕ್ಕೆ ಟರ್ಕಿ ಎಚ್ಚರಿಕೆ: 3ನೇ ಮಹಾಯುದ್ಧ ನಡೆಯುತ್ತಾ?

    ಟೆಲ್‌ ಅವೀವ್‌: ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿಯಿಂದ ಪಶ್ಚಿಮ ಏಷ್ಯಾ ರಣಾಂಗಣವಾಗಿ ಮಾರ್ಪಟ್ಟಿದ್ದು, ದಿನೇ ದಿನೇ ಯುದ್ಧದ ತೀವ್ರತೆ ಅಧಿಕವಾಗುತ್ತಿದೆ. ಈಗಾಗಲೇ ಗಾಜಾಪಟ್ಟಿಗೆ (Gaza Strip) ಅಷ್ಟದಿಗ್ಬಂಧನ ವಿಧಿಸಿರುವ ಇಸ್ರೇಲ್ (Israel) ಗಾಜಾ ನಗರದ ಮೇಲೆ ವೈಮಾನಿಕ ದಾಳಿ ಮೂಲಕ ಮುಗಿಬಿದ್ದಿದೆ.

    ಹಮಾಸ್ (Hamas) ಕೂಡ ನಿರಂತರವಾಗಿ ಇಸ್ರೇಲ್ ಕಡೆ ರಾಕೆಟ್ ದಾಳಿ ನಡೆಸುತ್ತಲೇ ಇದೆ. ಮತ್ತೊಂದು ಕಡೆ ಸಿರಿಯಾ, ಲೆಬನಾನ್ ಕಡೆಯಿಂದ ಉಗ್ರರು ಇಸ್ರೇಲ್ ಮೇಲೆ ಮುಗಿಬೀಳುತ್ತಿದ್ದಾರೆ. ಹೀಗಾಗಿ ಇಸ್ರೇಲ್‌ನಲ್ಲಿ ಸೈರನ್ ಮೊರೆತ ನಿಲ್ಲುತ್ತಲೇ ಇಲ್ಲ. ಇದರಿಂದ ಯುದ್ಧದ ಸ್ವರೂಪ ಮತ್ತು ವ್ಯಾಪ್ತಿ ಇನ್ನಷ್ಟು ವಿಸ್ತರಣೆ ಆಗುವ ಆತಂಕ ಎದುರಾಗಿದೆ.

    https://twitter.com/Israel/status/1712456473303826874

    ಇಸ್ರೇಲ್-ಪ್ಯಾಲೆಸ್ಟೈನ್‌ (Israel Palestine) ಯುದ್ಧದಲ್ಲಿ ಇತರರು ಮೂಗು ತೂರಿಸಬಾರದು ಎಂದು ಅಮೆರಿಕ (USA) ನೀಡುತ್ತಿರುವ ಎಚ್ಚರಿಕೆಯನ್ನು ಅರಬ್ ದೇಶಗಳು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಯಾರು ಮಧ್ಯಪ್ರವೇಶ ಮಾಡಬಾರದು ಎನ್ನುವ ಅಮೆರಿಕ ಸ್ವತಃ ಇಸ್ರೇಲ್‌ಗೆ ಒಂದು ವಿಮಾನ ಭರ್ತಿ ಶಸ್ತಾಸ್ತ್ರ ಕಳಿಸಿದೆ. ಅಷ್ಟೇ ಅಲ್ಲದೇ ಇಂದು ಟೆಲ್ ಅವೀವ್‌ಗೆ ಅಮೆರಿಕ ಮತ್ತು ಬ್ರಿಟನ್ ವಿದೇಶಾಂಗ ಮಂತ್ರಿ ಭೇಟಿ ನೀಡಿದ್ದಾರೆ.

    ಒಫಾಕಿಮ್‌ನಲ್ಲಿ ಕೇಳಿಬಂದ ಸೈರನ್ ಸದ್ದು ಮತ್ತು ರಾಕೆಟ್ ನುಗ್ಗಿ ಬಂದಿದ್ದನ್ನು ನೋಡಿ ಬ್ರಿಟನ್ ಮಂತ್ರಿ ಜೇಮ್ಸ್ ಪ್ರಾಣಭಯದಿಂದ ದಿಕ್ಕೆಟ್ಟು ಓಡಿದ್ದಾರೆ. ಈ ಮೂಲಕ ಇಸ್ರೇಲ್ ಬೆಂಬಲಕ್ಕೆ ನಿಂತಿದ್ದಾರೆ. ಇದೀಗ ಇಸ್ರೇಲ್‌ನಲ್ಲಿ ಸರ್ವಪಕ್ಷ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.  ಇದನ್ನೂ ಓದಿ: ಹೊಸಪೇಟೆಯಲ್ಲಿ ಹಮಾಸ್ ಉಗ್ರರ ಪರ ಸ್ಟೇಟಸ್ ಹಾಕಿದ್ದ ಯುವಕ ವಶಕ್ಕೆ

    ಇಸ್ರೇಲ್ ಸಂಸದೆ ತಾಲಿ ಗಾಟ್ಲಿಟ್ ಟ್ವೀಟ್ ಮಾಡಿ, ಗಾಜಾ ಮೇಲೆ ಅಣ್ವಸ್ತ್ರ ಪ್ರಯೋಗ ಆಗ್ಬೇಕು ಅಂತಿದ್ದಾರೆ. ಪ್ರಳಯವನ್ನು ಸೃಷ್ಟಿಸುವ ಆಯುಧವನ್ನು ವಿನಿಯೋಗಿಸಬೇಕು. ಈಗ ಡೂಮ್ಸ್ ಡೇಯನ್ನು ಮುದ್ದಾಡುವ ಸಮಯ ಬಂದಿದೆ. ದೇವರೇ ನಮ್ಮ ಶಕ್ತಿಯನ್ನು ಕಾಪಾಡು ಎಂದು ಟ್ವೀಟ್‌ ಮಾಡಿದ್ದಾರೆ. ಸದ್ಯದ ಬೆಳವಣಿಗೆಗಳನ್ನು ಗಮನಿಸಿದರೆ ಈ ಯುದ್ಧ ಮೂರನೇ ಮಹಾ ಯುದ್ಧಕ್ಕೆ ದಾರಿ ಮಾಡಿಕೊಡಬಹುದಾ ಎಂಬ ಚರ್ಚೆಗಳು ಶುರುವಾಗಿವೆ.

     

    ಮೂರನೇ ಮಹಾ ಯುದ್ಧ ನಡೆಯುತ್ತಾ?
    ಇಸ್ರೇಲ್ ಮೇಲೆ ಪ್ಯಾಲೆಸ್ಟೈನ್‌, ಸಿರಿಯಾ, ಲೆಬನಾನ್ ಕಡೆಯಿಂದ ದಾಳಿ ಆರಂಭವಾಗಿದೆ. ಪ್ಯಾಲೆಸ್ಟೈನ್‌ ಬೆಂಬಲಕ್ಕೆ ಇರಾನ್, ಸೌದಿ, ಕತಾರ್‌, ಕುವೈತ್, ದಕ್ಷಿಣ ಆಫ್ರಿಕಾ ಬೆಂಬಲ ನೀಡಿದೆ. ಇಸ್ರೇಲ್ ಬೆಂಬಲಕ್ಕೆ ಅಮೆರಿಕ, ಐರೋಪ್ಯ ಒಕ್ಕೂಟ, ಬ್ರಿಟನ್, ಭಾರತ, ಆಸ್ಟ್ರೇಲಿಯಾ ನಿಂತಿದೆ.

    ಅಮೆರಿಕ ಯುದ್ಧ ವಿಮಾನ, ಯುದ್ಧನೌಕೆ ಕಳಿಸಿದ್ದಕ್ಕೆ ಟರ್ಕಿ ಗರಂ ಆಗಿದ್ದು ಮಾರಣಕಾಂಡಕ್ಕೆ ದಾರಿ ಆಗಲಿದೆ ಎಂದು ಎಚ್ಚರಿಕೆ ನೀಡಿದೆ. ಅಮೆರಿಕದ ಸ್ಥಾವರಗಳ ಮೇಲೆ ದಾಳಿ ನಡೆಸುವ ಎಚ್ಚರಿಕೆ ನೀಡಿದ ಇರಾಕ್‌ನ ಉಗ್ರ ಸಂಘಟನೆ ಕತೈಬ್ ಹೆಜ್ಬುಲ್ಲಾ ಮಿಲಿಷಿಯಾ. ಇಸ್ರೇಲ್-ಪ್ಯಾಲೆಸ್ಟೈನ್‌ ಯುದ್ಧ ತಡೆಯುವ ಸಂಬಂಧ ಇರಾನ್-ಸೌದಿ ನಾಯಕರು ಮಾತುಕತೆ ನಡೆಸಿದ್ದಾರೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಸ್ರೇಲ್, ಪ್ಯಾಲೆಸ್ಟೈನ್‌ ಮಧ್ಯೆ ಕಾದಾಟ ಯಾಕೆ? 6 ದಿನ ನಡೆದ ಯುದ್ಧದಲ್ಲಿ ಏನಾಯ್ತು? – ಇಲ್ಲಿದೆ ಪೂರ್ಣ ಮಾಹಿತಿ

    ಇಸ್ರೇಲ್, ಪ್ಯಾಲೆಸ್ಟೈನ್‌ ಮಧ್ಯೆ ಕಾದಾಟ ಯಾಕೆ? 6 ದಿನ ನಡೆದ ಯುದ್ಧದಲ್ಲಿ ಏನಾಯ್ತು? – ಇಲ್ಲಿದೆ ಪೂರ್ಣ ಮಾಹಿತಿ

    ಸ್ರೇಲ್ ಹಾಗೂ ಪ್ಯಾಲೆಸ್ಟೈನ್‌ (Palestine) 2021ರಲ್ಲಿ ಭೀಕರ ಕಾಳಗ ನಡೆಸಿದ ನಂತರ ಈಗ ಮತ್ತೊಮ್ಮೆ ಎದುರು ಬದುರಾಗಿವೆ. ವೈಮಾನಿಕ ದಾಳಿ ಹಾಗೂ ಗುಂಡಿನ ಚಕಮಕಿ ಬಳಿಕ ಮತ್ತೊಮ್ಮೆ 2 ರಾಷ್ಟ್ರಗಳ ನಡುವೆ ಘನಘೋರ ಕಾದಾಟ ನಡೆಯುತ್ತಿದೆ.

    ಹಮಾಸ್‌ ಉಗ್ರರು ಇಸ್ರೇಲ್‌ (Israel) ನಗರದ ಒಳಗಡೆ ನುಗ್ಗಿ ಸೈನಿಕರ ಜನರ ಪ್ರಾಣ ತೆಗೆಯುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್‌ ದಾಳಿ ನಡೆಸುತ್ತಿದೆ.

    ಕಿತ್ತಾಟ ಯಾಕೆ?
    ಇಸ್ರೇಲ್‌ ಮತ್ತು ಪ್ಯಾಲೆಸ್ಟೈನ್‌ ಮಧ್ಯೆ ಕಾಳಗ ಯಾಕೆ ಎಂಬುದನ್ನು ತಿಳಿದುಕೊಳ್ಳಬೇಕಾದರೆ 77 ವರ್ಷಗಳ ಹಿಂದಕ್ಕೆ ಹೋಗಬೇಕು. ಎರಡನೇ ವಿಶ್ವಯುದ್ಧ ಬಳಿಕ 1945ರಲ್ಲಿ ಬ್ರಿಟನ್ ವಿಶ್ವಸಂಸ್ಥೆಗೆ ಒಟ್ಟೋಮಾನ್ ಸಾಮ್ರಾಜ್ಯವನ್ನ ಒಪ್ಪಿಸಿತು.   ಇದನ್ನೂ ಓದಿ: ಕಷ್ಟದ ಸಮಯದಲ್ಲಿ ಇಸ್ರೇಲ್ ಪರ ಒಗ್ಗಟ್ಟಿನಿಂದ ನಿಲ್ಲುತ್ತೇವೆ: ನರೇಂದ್ರ ಮೋದಿ

    1947ರಲ್ಲಿ ವಿಶ್ವಸಂಸ್ಥೆ ಅರಬ್ ರಾಜ್ಯ ಹಾಗೂ ಇಸ್ರೇಲ್ ಎಂದು ಆ ಭೂಭಾಗವನ್ನ ವಿಂಗಡಿಸಿತು. ಇದಾದ ಒಂದು ವರ್ಷದ ಬಳಿಕ 1948ರಲ್ಲಿ ಇಸ್ರೇಲ್ ತಾನೊಂದು ಸ್ವತಂತ್ರ ದೇಶ ಎಂದು ಘೋಷಣೆ ಮಾಡಿತು. ಈ ಮೂಲಕ ವಿಶ್ವದ ಮೊದಲ ಯಹೂದಿ ದೇಶವಾಗಿ ಅಸ್ತಿತ್ವಕ್ಕೂ ಬಂತು. ಯಹೂದಿ ದೇಶವಾಗಿ ಅಸ್ತಿತ್ವಕ್ಕೆ ಬಂದರೂ ಜೆರುಸಲೇಂ ಸೇರಿದಂತೆ ಹಲವು ಪ್ರದೇಶಗಳು ನನ್ನದು. ಅದು ತನಗೆ ಸೇರಬೇಕೆಂದು ಹೇಳುತ್ತಿತ್ತು. ಇಸ್ರೇಲ್‌ ದೇಶವಾಗಿದ್ದನ್ನು ಪ್ಯಾಲೆಸ್ಟೈನ್‌ ಸೇರಿದಂತೆ ಅರಬ್‌ ರಾಷ್ಟ್ರಗಳು ವಿರೋಧಿಸುತ್ತಲೇ ಇವೆ. ವಿಶೇಷ ಏನೆಂದರೆ ಮೂರು ಧರ್ಮಗಳ ಪವಿತ್ರ ಸ್ಥಳ ಜೆರುಸಲೇಂ (Jerusalem) ಆಗಿದೆ. ಈಗ ಕಿತ್ತಾಟ ನಡೆಯುತ್ತಿರುವ ಜೆರುಸಲೇಂ ಯಹೂದಿ, ಮುಸ್ಲಿಮ್‌ ಮತ್ತು ಕ್ರೈಸ್ತರ ಪವಿತ್ರ ಸ್ಥಳವಾಗಿದೆ.

    ಯಹೂದಿಗಳಿಗೆ ಯಾಕೆ?
    ಟೆಂಪಲ್ ಮೌಂಟ್ ಯಹೂದಿಗಳ (Jews) ಅತ್ಯಂತ ಪವಿತ್ರ ಸ್ಥಳವೆಂದು ಕರೆಯಲಾಗುತ್ತದೆ. ಯಹೂದಿ ದಂತಕಥೆಯ ಪ್ರಕಾರ ಅಬ್ರಹಾಂ ತನ್ನ ಧರ್ಮ ಮತ್ತು ನಂಬಿಕೆಯನ್ನು ಸಾಬೀತುಪಡಿಸಲು ದೇವರ ಬೇಡಿಕೆಯ ಮೇರೆಗೆ ತನ್ನ ಮಗ ಐಸಾಕ್‌ನನ್ನು ತ್ಯಾಗ ಮಾಡಲು ಹೋಗುತ್ತಾನೆ. ಈ ಸಂದರ್ಭದಲ್ಲಿ ಮೇಲಿನಿಂದ ಕುರಿ ಕಾಣಿಸಿಕೊಂಡಿತು ಮತ್ತು ಅವನ ಮಗನನ್ನು ಬಿಡುಗಡೆ ಮಾಡಿತು ಎಂಬ ಕಥೆಯಿದೆ.

    ಯಹೂದಿಗಳ ಮೊದಲ ಮತ್ತು ಎರಡನೆಯ ಪವಿತ್ರ ದೇವಾಲಯಗಳು ಇಲ್ಲಿದೆ. ಜೆರುಸಲೇಂನಲ್ಲಿ ಅನೇಕ ಯಹೂದಿ ಪ್ರವಾದಿಗಳು ಬೋಧಿಸಿದ್ದಾರೆ. ಜಗತ್ತನ್ನು ಸೃಷ್ಟಿಸಿದ ಅಡಿಪಾಯದ ಸ್ಥಳ ಇದು ಎಂದು ಯಹೂದಿಗಳು ನಂಬುತ್ತಾರೆ. ಅನೇಕ ಯಹೂದಿಗಳು ಡೋಮ್ ಆಫ್ ದಿ ರಾಕ್ ಅನ್ನು ಪವಿತ್ರ ಸ್ಥಳವೆಂದು ನಂಬುತ್ತಾರೆ. ವಾರ್ಷಿಕವಾಗಿ ಲಕ್ಷಾಂತರ ಮಂದಿ ಈ ಪವಿತ್ರ ಗೋಡೆಯನ್ನು ವೀಕ್ಷಿಸಲು ಭೇಟಿ ನೀಡುತ್ತಾರೆ.

    ಮುಸ್ಲಿಮರಿಗೆ ಯಾಕೆ?
    ಸೌದಿ ಅರೇಬಿಯಾದ ಮೆಕ್ಕಾ ಮತ್ತು ಮದೀನಾ ಇಸ್ಲಾಂ ಧರ್ಮದ ಮೂರನೇ ಪವಿತ್ರ ಸ್ಥಳ ಜೆರುಸಲೇಂ ಆಗಿದೆ. ಪ್ರವಾದಿ ಮುಹಮ್ಮದ್ (Prophet Muhammad) ಮೆಕ್ಕಾದಿಂದ (Mecca) ಈ ಜಾಗಕ್ಕೆ ಬಂದು ಸ್ವರ್ಗಕ್ಕೆ ಏರಿದರು ಎಂದು ಮುಸ್ಲಿಮರು (Muslims) ನಂಬುತ್ತಾರೆ. ಇಲ್ಲಿ ಡೋಮ್ ಆಫ್ ರಾಕ್ ಮತ್ತು ಅಲ್-ಅಕ್ಸಾ ಮಸೀದಿಯ ಇದ್ದು 1,300 ವರ್ಷಗಳ ಹಿಂದೆ ಸ್ಥಾಪನೆಯಾಗಿದೆ ಎಂದು ನಂಬಲಾಗುತ್ತದೆ. ಅಲ್ ಅಕ್ಸಾ ಮಸೀದಿಗೆ (Al Aqsa Mosque) ಮುಸ್ಲಿಮರು ವರ್ಷಪೂರ್ತಿ ಭೇಟಿ ನೀಡುತ್ತಾರೆ. ಆದರಲ್ಲೂ ರಂಜಾನ್ ತಿಂಗಳಲ್ಲಿ ಪ್ರತಿ ಶುಕ್ರವಾರ ಲಕ್ಷಾಂತರ ಮುಸ್ಲಿಮರು ಮಸೀದಿಯಲ್ಲಿ ಪ್ರಾರ್ಥನೆ ಮಾಡಲು ಆಗಮಿಸುತ್ತಾರೆ.

    ಕ್ರೈಸ್ತರಿಗೆ ಯಾಕೆ?
    ಕ್ರಿಶ್ಚಿಯನ್ (Christian) ಕಥೆಗಳ ಪ್ರಕಾರ ಏಸುವನ್ನು (Jesus) ಗೋಲ್ಗೊಥಾ ಅಥವಾ ಕ್ಯಾಲ್ವರಿ ಬೆಟ್ಟದ ಮೇಲೆ ಶಿಲುಬೆಗೇರಿಸಲಾಯಿತು. ಈ ಕಾರಣಕ್ಕೆ ಯೇಸುವಿನ ಖಾಲಿ ಸಮಾಧಿಗೆ ಭೇಟಿ ನೀಡಲು ಮತ್ತು ಆ ಭೂಮಿಯಲ್ಲಿ ಪ್ರಾರ್ಥನೆ ಮಾಡಲು ಲಕ್ಷಾಂತರ ಕ್ರೈಸ್ತರು ಈ ಜಾಗಕ್ಕೆ ಬರುತ್ತಾರೆ.

    1967ರ ಯುದ್ಧದಲ್ಲಿ ಏನಾಯ್ತು?
    ಸಿರಿಯಾದ ಬೆಂಬಲದೊಂದಿಗೆ ಪ್ಯಾಲೆಸ್ಟೈನ್‌ ಗೆರಿಲ್ಲಾ ಪಡೆ ಇಸ್ರೇಲ್‌ ಮೇಲೆ ದಾಳಿ ಮಾಡಿತು. ಇದಕ್ಕೆ ಅರಬ್‌ ರಾಷ್ಟ್ರಗಳು ಬೆಂಬಲ ನೀಡಿದವು. ಇದರಿಂದ ಕೆರಳಿದ ಇಸ್ರೇಲ್‌ ಭಾರೀ ಪ್ರತಿದಾಳಿ ನಡೆಸಿತು. 1967ರಲ್ಲಿ 6 ದಿನಗಳ ಕಾಲ ನಡೆದ ಈ ಯುದ್ಧದಲ್ಲಿ ಇಸ್ರೇಲ್ ಪೂರ್ವ ಜೆರುಸಲೇಂ ಹಾಗೂ ವೆಸ್ಟ್ ಬ್ಯಾಂಕ್ ಅನ್ನು ವಶಕ್ಕೆ ಪಡೆದಿತ್ತು. ಈ ಕಾರಣಕ್ಕೆ ಜೆರುಸಲೇಂನ ವಶಕ್ಕೆ ಪಡೆಯಲು ಇಸ್ರೇಲ್ ವಿರುದ್ಧ ಆಗಾಗ ಪ್ಯಾಲೆಸ್ಟೈನ್‌ ಸಂಘರ್ಷ ನಡೆಸುತ್ತಿರುತ್ತದೆ. ಈಗಲೂ ಇದೇ ವಿಚಾರಕ್ಕೆ ಹಮಾಸ್ ಉಗ್ರರು ಇಸ್ರೇಲ್ ಮೇಲೆ ಸಮರ ಆರಂಭಿಸಿದ್ದಾರೆ. ಇದನ್ನೂ ಓದಿ: ಇಸ್ರೇಲ್ ಒಳಗೆ ನುಗ್ಗಿದ ಉಗ್ರರು – ಸಾರ್ವಜನಿಕರ ಮೇಲೆ ಗುಂಡಿನ ಮಳೆ

    ಹಮಾಸ್‌ ಉಗ್ರರು ಪವಿತ್ರ ಮಸೀದಿಯಾದ ಅಲ್ ಅಕ್ಸಾ ಮಸೀದಿ ಹೆಸರಿನಲ್ಲಿ ಆಪರೇಷನ್ ಅಲ್-ಅಕ್ಸಾ ಫ್ಲಡ್ (Operation Al Aqsa Flood) ಹೆಸರನ್ನು ಇರಿಸಿದೆ. ಅಂದರೆ ಆಪರೇಷನ್ ಅಲ್-ಅಕ್ಸಾ ನೆರೆ ರೂಪದಲ್ಲಿ ಬಂದು ಇಸ್ರೇಲ್‌ ಅನ್ನು ಕೊಚ್ಚಿಕೊಂಡು ಹೋಗುತ್ತೇವೆ ಎಂದು ಉಗ್ರರು ಘೋಷಿಸಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೆರುಸಲೇಮ್ ಮಸೀದಿಯಲ್ಲಿ ಹಿಂಸಾಚಾರ – 150ಕ್ಕೂ ಹೆಚ್ಚು ಮಂದಿಗೆ ಗಾಯ

    ಜೆರುಸಲೇಮ್ ಮಸೀದಿಯಲ್ಲಿ ಹಿಂಸಾಚಾರ – 150ಕ್ಕೂ ಹೆಚ್ಚು ಮಂದಿಗೆ ಗಾಯ

    ಜೆರುಸಲೇಮ್: ಶುಕ್ರವಾರ ಜೆರುಸಲೇಮ್‌ನ ಅಲ್-ಅಕ್ಸಾ ಮಸೀದಿ ಆವರಣದಲ್ಲಿ ಪ್ಯಾಲಸ್ಟೈನ್ ಮಂದಿ ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆದಿದ್ದು, ಘಟನೆಯಲ್ಲಿ 150ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

    ಇಸ್ರೇಲ್ ಹಾಗೂ ಪ್ಯಾಲೆಸ್ಟಿನ್ ಸಂಘರ್ಷ ತಲೆಮಾರುಗಳಷ್ಟು ಹಳೆಯ ಇತಿಹಾಸ ಹೊಂದಿದೆ. ಶುಕ್ರವಾರ ನಡೆದ ಘಟನೆಯಿಂದಾಗಿ ಹಿಂಸಾಚಾರ ಇನ್ನೂ ಉಲ್ಬಣಗೊಳ್ಳುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತವಾಗಿದೆ. ಇದನ್ನೂ ಓದಿ: 6 ತಿಂಗಳ ಬಾಹ್ಯಾಕಾಶ ಯಾನ ಮುಗಿಸಿ ಬರಲಿದ್ದಾರೆ ಭಾರತೀಯ ಮೂಲದ ಗಗನಯಾತ್ರಿ

    ಶುಕ್ರವಾರ ನಡೆದ ಘರ್ಷಣೆಯಲ್ಲಿ ರಬ್ಬರ್ ಬುಲೆಟ್, ಸ್ಟನ್ ಗ್ರೆನೇಡ್, ಲಾಠಿ ಏಟಿನಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ಯಾಲಸ್ಟೈನ್‌ನವರು ಗಾಯಗೊಂಡಿದ್ದಾರೆ ಎಂದು ರೆಡ್ ಕ್ರೆಸೆಂಟ್ ತಿಳಿಸಿದೆ. ಇದನ್ನೂ ಓದಿ: ಉಕ್ರೇನ್‌ ಯುದ್ಧ – ಭಾರತದಿಂದ ಈಜಿಪ್ಟ್‌ಗೆ ರಫ್ತು ಆಗಲಿದೆ ಗೋಧಿ

    ಅಲ್-ಅಕ್ಸಾ ಮಸೀದಿ ಆವರಣ ಪೂರ್ವ ಜೆರುಸೆಲೇಮ್‌ನ ಓಲ್ಡ್ ಸಿಟಿ ಪ್ರದೇಶದಲ್ಲಿದೆ. ಇದನ್ನು ಇಸ್ರೇಲ್ 1967ರಲ್ಲಿ ಯುದ್ಧದಲ್ಲಿ ವಶಪಡಿಸಿಕೊಂಡಿದೆ.

    ಕಳೆದ 2 ವಾರಗಳ ಹಿಂದೆ ನಡೆದ ಇಸ್ರೇಲ್‌ನ ಅರಬ್ ಸ್ಟ್ರೀಟ್ ದಾಳಿಯ ಬಳಿಕ ದೇಶಾದ್ಯಂತ ಭದ್ರತಾ ಪಡೆಗಳು ಕಟ್ಟೆಚ್ಚರ ವಹಿಸಿದೆ.