Tag: ಪ್ಯಾಲೆಸ್ತೀನ್‌

  • ಅಮೆರಿಕ ವಿರೋಧದ ನಡ್ವೆ ಪ್ಯಾಲೆಸ್ಟೀನ್‌ಗೆ ದೇಶದ ಮಾನ್ಯತೆ ನೀಡಲು ಬ್ರಿಟನ್ ಸಿದ್ಧತೆ

    ಅಮೆರಿಕ ವಿರೋಧದ ನಡ್ವೆ ಪ್ಯಾಲೆಸ್ಟೀನ್‌ಗೆ ದೇಶದ ಮಾನ್ಯತೆ ನೀಡಲು ಬ್ರಿಟನ್ ಸಿದ್ಧತೆ

    ಲಂಡನ್: ಅಮೆರಿಕದ (USA) ತೀವ್ರ ವಿರೋಧದ ನಡುವೆಯೂ ಬ್ರಿಟನ್ ಸರ್ಕಾರವು ಪ್ಯಾಲೆಸ್ಟೀನ್‌ಗೆ (Palestine) ದೇಶದ ಮಾನ್ಯತೆ ನೀಡಲು ಮುಂದಾಗಿದೆ.

    ಗಾಜಾದಲ್ಲಿ ನಡೆಸುತ್ತಿರುವ ಯುದ್ಧ ಸಂಬಂಧ ಬ್ರಿಟನ್ ಸರ್ಕಾರ ಇಸ್ರೇಲ್‌ಗೆ (Israel) ಕೆಲ ನಿಬಂಧನೆ ವಿಧಿಸಿತ್ತು. ಆದ್ರೆ ಇಸ್ರೇಲ್‌ ನಿಬಂಧನೆ ಪಾಲಿಸದ ಹಿನ್ನೆಲೆ ಬ್ರಿಟನ್‌ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಗಾಜಾ ಮೇಲೆ ಇಸ್ರೇಲ್‌ ದಾಳಿ – ಒಂದೇ ದಿನ 91 ಮಂದಿ ಸಾವು

    ಸೋಮವಾರದಿಂದ (ಸೆ.22) ವಿಶ್ವಸಂಸ್ಥೆಯ (United Nations) 80ನೇ ಸಾಮಾನ್ಯ ಸಭೆ ಆರಂಭವಾಗಲಿದೆ. ಗಾಜಾದಲ್ಲಿ ನಡೆಯುತ್ತಿರುವ ಯುದ್ಧ, ಪ್ಯಾಲೆಸ್ಟೀನ್‌ಗೆ ದೇಶದ ಮಾನ್ಯತೆ ನೀಡುವ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚೆ ನಡೆಯಲಿದೆ. ಅದಕ್ಕೂ ಮುನ್ನ ಬ್ರಿಟನ್, ಫ್ರಾನ್ಸ್, ಕೆನಡಾ, ಆಸ್ಟ್ರೇಲಿಯಾ, ಪೋರ್ಚುಗಲ್ ಸೇರಿದಂತೆ ಸುಮಾರು 140 ದೇಶಗಳು ಪ್ಯಾಲೆಸ್ಟೀನ್ ಅನ್ನು ಪ್ರತ್ಯೇಕ ದೇಶವನ್ನಾಗಿ ಪರಿಗಣಿಸಲು ಮುಂದಾಗಿವೆ. ಇದನ್ನೂ ಓದಿ: H1B ವೀಸಾಕ್ಕೆ ಮೊದಲು ಎಷ್ಟು ಶುಲ್ಕ ಇತ್ತು? ಟ್ರಂಪ್‌ ನಿರ್ಧಾರ ಭಾರತಕ್ಕೆ ಲಾಭವೋ? ನಷ್ಟವೋ?

    ಇದೊಂದು ಸಾಂಕೇತಿಕ ನಡೆಯಾಗಲಿದೆಯಾದರೂ ಯುದ್ಧ ನಿಲ್ಲಿಸಲು ಇಸ್ರೇಲ್ ಮೇಲೆ ಈ ನಿರ್ಧಾರವು ರಾಜತಾಂತ್ರಿಕ ಒತ್ತಡವನ್ನು ಮತ್ತಷ್ಟು ಹೆಚ್ಚಿಸಬಹುದು. ಇದರಿಂದ ಗಾಜಾದಲ್ಲಿ ಶಾಂತಿ ನೆಲಸಬಹುದು ಎಂದು ಬ್ರಿಟನ್ ಆಶಿಸಿದೆ. ಫ್ರಾನ್ಸ್ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ನಿರ್ಧಾರವನ್ನು ಇಸ್ರೇಲ್‌ನಲ್ಲಿರುವ ಶಾಂತಿಪರ ಹೋರಾಟಗಾರರು ಸ್ವಾಗತಿಸಿದ್ದಾರೆ. ಇದನ್ನೂ ಓದಿ: H-1B ವೀಸಾ ಶುಲ್ಕ ಹೊಸ ಅರ್ಜಿದಾರರಿಗೆ ಮಾತ್ರ- ಒಂದು ಬಾರಿ ಪಾವತಿಸಬೇಕು: ಅಮೆರಿಕ ಸರ್ಕಾರ

    ಈ ಬೆಳವಣಿಗೆ ನಡುವೆಯೇ ಗಾಜಾ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಒಂದೇ ದಿನ 91 ಸಾವು ಸಾವನ್ನಪ್ಪಿದ್ದಾರೆ. ಇದರಿಂದ ಟೆಲ್ ಅವೀವ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಗಾಜಾದ ಅತಿದೊಡ್ಡ ನಗರ ಕೇಂದ್ರವನ್ನು ವಶಪಡಿಸಿಕೊಳ್ಳಲು ವಾಯು ಮತ್ತು ಭೂಸೇನಾ ಕಾರ್ಯಾಚರಣೆ ತೀವ್ರಗೊಳಿಸಲಾಗಿತ್ತು. ಇಸ್ರೇಲಿ ಪಡೆಗಳು ಒಂದೇ ದಿನದಲ್ಲಿ ಗಾಜಾದಲ್ಲಿ 91 ಪ್ಯಾಲೆಸ್ಟೀನಿಯನ್ನರನ್ನು ಹತ್ಯೆ ಮಾಡಿವೆ. ಪ್ರಮುಖ ವೈದ್ಯರ ಕುಟುಂಬ ಸದಸ್ಯರು ಮತ್ತು ಉತ್ತರ ಗಾಜಾ ನಗರದ ಹಲವಾರು ಜನರು ಮೃತಪಟ್ಟಿದ್ದಾರೆ ಎಂದು ಅಲ್ ಜಜೀರಾ ವರದಿ ಮಾಡಿದೆ.

  • America | ‘ಫ್ರೀ ಪ್ಯಾಲೆಸ್ತೀನ್’ ಎಂದು ಕೂಗುತ್ತಾ  ಜನರತ್ತ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿ – 6 ಮಂದಿಗೆ ಗಾಯ

    America | ‘ಫ್ರೀ ಪ್ಯಾಲೆಸ್ತೀನ್’ ಎಂದು ಕೂಗುತ್ತಾ ಜನರತ್ತ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿ – 6 ಮಂದಿಗೆ ಗಾಯ

    ವಾಷಿಂಗ್ಟನ್: ದುಷ್ಕರ್ಮಿಯೋರ್ವ ‘ಫ್ರೀ ಪ್ಯಾಲೆಸ್ತೀನ್’ ಎಂದು ಕೂಗುತ್ತಾ ಇಸ್ರೇಲ್ (Israel) ನಾಗರಿಕರತ್ತ ಪೆಟ್ರೋಲ್ ಬಾಂಬ್ ಎಸೆದ ಘಟನೆ ಅಮೆರಿಕದ (America) ಕೊಲೊರಾಡೋದ (Colorado) ಬೌಲ್ಡರ್‌ನಲ್ಲಿ ನಡೆದಿದೆ.

    ಘಟನೆಯಲ್ಲಿ 6 ಮಂದಿಗೆ ಸುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಲೊರಾಡೋದ ಬೌಲ್ಡರ್‌ನಲ್ಲಿ (Boulder) ಗಾಜಾದಲ್ಲಿನ ಇಸ್ರೇಲ್ ಒತ್ತೆಯಾಳುಗಳ ಬಿಡುಗಡೆ ಬಗ್ಗೆ ಚರ್ಚಿಸುವ ಸಲುವಾಗಿ ಇಸ್ರೇಲ್ ನಾಗರಿಕರು ಸಭೆ ಸೇರಿದ್ದರು. ಈ ವೇಳೆ ದುಷ್ಕರ್ಮಿ ಬಾಟಲ್‌ನಲ್ಲಿ ತುಂಬಿಸಿದ್ದ ಪೆಟ್ರೋಲ್ ಬಾಂಬ್‌ಗಳನ್ನು ನಾಗರಿಕರತ್ತ ಎಸೆದು ‘ಫ್ರೀ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗಿದ್ದಾನೆ. ಇದನ್ನೂ ಓದಿ: ಜೋಳ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ಸಿಂಧನೂರು ಬಂದ್ – ರೈತರ ಹೋರಾಟಕ್ಕೆ ಸಾರ್ವಜನಿಕರ ಬೆಂಬಲ

    ಜನರ ಮೇಲೆ ಫೈರ್ ಬಾಂಬ್ ಎಸೆದ ವ್ಯಕ್ತಿಯನ್ನು ಮೊಹಮ್ಮದ್ ಸಬ್ರಿ ಸೊಲಿಮಾ (45) ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸೊಲಿಮಾ ಅಮೆರಿಕದಲ್ಲಿ ಪ್ಯಾಲೆಸ್ತೀನ್ ಪರ ನಡೆಯುತ್ತಿದ್ದ ಹಲವು ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇದನ್ನೂ ಓದಿ: ತಾಂತ್ರಿಕ ಸಮಿತಿ ವರದಿ ಆಧರಿಸಿಯೇ ಹೇಮಾವತಿ ಕೆನಾಲ್ ನಿರ್ಮಾಣ: ಪರಮೇಶ್ವರ್

    ಈ ಘಟನೆಯನ್ನು ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ‘ಉದ್ದೇಶಿತ ಭಯೋತ್ಪಾದಕ ಕೃತ್ಯ’ ಎಂದು ಕರೆದಿದ್ದಾರೆ. ಅಲ್ಲದೇ ದೇಶದಲ್ಲಿ ಹೆಚ್ಚುತ್ತಿರುವ ಯಹೂದಿ ವಿರೋಧಿ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್| ಐವರನ್ನು ಬಂಧಿಸಿದ್ದೇವೆ: ಪರಮೇಶ್ವರ್‌

  • ಪ್ಯಾಲೆಸ್ತೀನ್ ಬಳಿಕ ಬಾಂಗ್ಲಾ ಅಲ್ಪಸಂಖ್ಯಾತರ ಪರ ಪ್ರಿಯಾಂಕಾ ಧ್ವನಿ

    ಪ್ಯಾಲೆಸ್ತೀನ್ ಬಳಿಕ ಬಾಂಗ್ಲಾ ಅಲ್ಪಸಂಖ್ಯಾತರ ಪರ ಪ್ರಿಯಾಂಕಾ ಧ್ವನಿ

    ನವದೆಹಲಿ: ವಯನಾಡು (Wayanadu) ಸಂಸದೆ ಪ್ರಿಯಾಂಕಾ ಗಾಂಧಿ (Priyanka Gandhi) ತಮ್ಮ ಬ್ಯಾಗ್‌ಗಳ ಮೂಲಕ ಚರ್ಚೆಯಲ್ಲಿದ್ದಾರೆ. ನಿನ್ನೆ (ಡಿ.16) ಪ್ಯಾಲೆಸ್ತೀನ್ ಬೆಂಬಲಿಸುವ ಬ್ಯಾಗ್ ಧರಿಸಿ ಸಂಸತ್‌ಗೆ ಆಗಮಿಸಿದ್ದ ಅವರು ಇಂದು (ಡಿ.17) ಬಾಂಗ್ಲಾದೇಶದಲ್ಲಿ ದೌರ್ಜನ್ಯಕ್ಕೊಳಗಾದ ಅಲ್ಪಸಂಖ್ಯಾತರ ಜೊತೆಗಿದ್ದೇವೆ ಎನ್ನುವ ಟ್ಯಾಗ್ ಇರುವ ಧಿರಿಸನ್ನು ಹಾಕಿಕೊಂಡು ಕಾಣಿಸಿಕೊಂಡಿದ್ದಾರೆ.

    ಬಾಂಗ್ಲಾದೇಶದ (Bangladesh) ಬ್ಯಾಗ್‌ನೊಂದಿಗೆ ಸಂಸತ್ ಆವರಣಕ್ಕೆ ಆಗಮಿಸಿದ ಅವರು ಬಾಂಗ್ಲಾದೇಶದಲ್ಲಿನ ಹಿಂದೂಗಳು ಮತ್ತು ಕ್ರಿಶ್ಚಿಯನ್ನರ ಮೇಲೆ ನಡೆದ ದೌರ್ಜನ್ಯವನ್ನು ವಿರೋಧಿಸಿ ಕಾಂಗ್ರೆಸ್ ಸಂಸದರು ನಡೆಸಿದ ಪ್ರತಿಭಟನೆಯನ್ನು ಮುನ್ನಡೆಸಿದರು.ಇದನ್ನೂ ಓದಿ: ವಿಶ್ವ ಚೆಸ್ ಚಾಂಪಿಯನ್ ಗುಕೇಶ್‌ಗೆ ತಮಿಳುನಾಡು ಸರ್ಕಾರದಿಂದ ಸನ್ಮಾನ – 5 ಕೋಟಿ ರೂ. ಬಹುಮಾನ!

    ವಯನಾಡು ಚುನಾವಣಾ ಗೆಲುವಿನ ನಂತರ ತಮ್ಮ ಚೊಚ್ಚಲ ಸಂಸತ್ ಅಧಿವೇಶನದಲ್ಲಿ ಭಾಗವಹಿಸುತ್ತಿರುವ ಪ್ರಿಯಾಂಕಾ ಗಾಂಧಿ ಅವರು ಸೋಮವಾರ ಲೋಕಸಭೆಯ ಅಧಿವೇಶನದಲ್ಲಿ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆದ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದರು.

    ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು, ಈ ದಾಳಿಯಿಂದ ಬಳಲುತ್ತಿರುವವರಿಗೆ ಸರ್ಕಾರ ಬೆಂಬಲ ನೀಡಬೇಕೆಂದು ಕರೆ ನೀಡಿದರು. ಸರ್ಕಾರವು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರು, ಹಿಂದೂಗಳು ಮತ್ತು ಕ್ರಿಶ್ಚಿಯನ್ನರ ಮೇಲಿನ ದೌರ್ಜನ್ಯದ ವಿಷಯವನ್ನು ಎತ್ತಬೇಕು. ಈ ಬಗ್ಗೆ ಬಾಂಗ್ಲಾದೇಶ ಸರ್ಕಾರದೊಂದಿಗೆ ಚರ್ಚಿಸಬೇಕು ಮತ್ತು ನೋವಿನಲ್ಲಿರುವವರಿಗೆ ಬೆಂಬಲ ನೀಡಬೇಕು ಎಂದು ಉಲ್ಲೇಖಿಸಿದರು.ಇದನ್ನೂ ಓದಿ: ಕಾಲಾಯ ತಸ್ಮೈ ನಮಃ – ದರ್ಶನ್ ಬೇಲ್ ಬಗ್ಗೆ ಶ್ರೀಮುರಳಿ ರಿಯಾಕ್ಷನ್

  • ಸಂಸತ್‌ಗೆ ಪ್ಯಾಲೆಸ್ತೀನ್ ಬ್ಯಾಗ್‌ ಹಾಕಿಕೊಂಡು ಬಂದ ಪ್ರಿಯಾಂಕಾ – ಎಲ್ಲಾ ಸುದ್ದಿಗಾಗಿ ಎಂದ ಬಿಜೆಪಿ ಸಂಸದ

    ಸಂಸತ್‌ಗೆ ಪ್ಯಾಲೆಸ್ತೀನ್ ಬ್ಯಾಗ್‌ ಹಾಕಿಕೊಂಡು ಬಂದ ಪ್ರಿಯಾಂಕಾ – ಎಲ್ಲಾ ಸುದ್ದಿಗಾಗಿ ಎಂದ ಬಿಜೆಪಿ ಸಂಸದ

    ನವದೆಹಲಿ: ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi) ಅವರು ಸೋಮವಾರ ಸಂಸತ್ತಿಗೆ (Parliament) ಪ್ಯಾಲೆಸ್ತೀನ್ (Palestine) ಎಂದು ಬರೆದಿರುವ ಬ್ಯಾಗ್‌ನ್ನು ತೆಗೆದುಕೊಂಡು ಹೋಗಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ. ಇದೇ ವಿಚಾರಕ್ಕೆ ಬಿಜೆಪಿ ತೀವ್ರವಾಗಿ ಟೀಕಿಸಿದೆ.

    ಪ್ಯಾಲೇಸ್ತೀನಿನ ಜನ ಒಗ್ಗಟ್ಟಿನ ಸಂಕೇತವಾಗಿ ಕಾಣುವ ಕಲ್ಲಂಗಡಿ ಹಣ್ಣಿನ ಚಿತ್ರ ಅವರ ಚೀಲದಲ್ಲಿ ಕಾಣಿಸಿಕೊಂಡಿದೆ. ಇನ್ನೂ ಕಳೆದ ವಾರ ದೆಹಲಿಯಲ್ಲಿರುವ ಪ್ಯಾಲೆಸ್ತೀನ್ ರಾಯಭಾರ ಕಚೇರಿಯ ಚಾರ್ಜ್ ಡಿ ಅಫೇರ್ಸ್ ಅಬೇದ್ ಎಲ್ರಾಜೆಗ್ ಅಬು ಜಾಜರ್ ಅವರನ್ನು ಭೇಟಿಯಾಗಿದ್ದರು.

    ಪ್ರಿಯಾಂಕ ಗಾಂಧಿ ನಡೆಗೆ ಬಿಜೆಪಿ ಸಂಸದ ಗುಲಾಂ ಅಲಿ ಖತಾನಾ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಜನರು ಸುದ್ದಿಗಾಗಿ ಇಂತಹ ಕೆಲಸಗಳನ್ನು ಮಾಡುತ್ತಾರೆ. ಜನರಿಂದ ತಿರಸ್ಕರಿಸಲ್ಪಟ್ಟಾಗ, ಅವರು ಅಂತಹ ಕ್ರಮಗಳನ್ನು ಆಶ್ರಯಿಸುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

    ಕಳೆದ ವರ್ಷ ಅಕ್ಟೋಬರ್‌ನಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಗಾಜಾದಲ್ಲಿ ಇಸ್ರೇಲಿ ಮಿಲಿಟರಿ ದಾಳಿಯ ವಿರುದ್ಧ ಪ್ರಿಯಾಂಕಾ ಗಾಂಧಿ ಧ್ವನಿ ಎತ್ತಿದ್ದಾರೆ. ಗಾಜಾದಲ್ಲಿ ಇಸ್ರೇಲ್ ಸರ್ಕಾರ ನರಹಂತಕ ಕ್ರಮಗಳನ್ನು ಕೈಗೊಂಡಿದೆ ಎಂದು ಈ ಹಿಂದೆ ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಟೀಕಿಸಿದ್ದರು.

    ಇಸ್ರೇಲ್ ಸರ್ಕಾರದ‌ ಕ್ರಮವನ್ನು ಖಂಡಿಸುವುದು ವಿಶ್ವದ ಪ್ರತಿಯೊಂದು ದೇಶದ ಸರ್ಕಾರವೂ ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಯ ನೈತಿಕ ಜವಾಬ್ದಾರಿ ಎಂದು ಅವರು ಹೇಳಿದ್ದರು.

    ಕೇರಳದ ವಯನಾಡ್‌ನಲ್ಲಿ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಪ್ರಿಯಾಂಕ ಗಾಂಧಿ ಗೆಲುವು ಸಾಧಿಸಿದ್ದು, ತಮ್ಮ ಚೊಚ್ಚಲ ಸಂಸತ್ ಅಧಿವೇಶನದಲ್ಲಿ ಭಾಗವಹಿಸುತ್ತಿದ್ದಾರೆ.

  • ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ – 12 ಬಲಿ

    ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ – 12 ಬಲಿ

    ಬೈರುತ್‌: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಮತ್ತೆ ಯುದ್ಧದ ಕಾರ್ಮೋಡ ಆವರಿಸಿದೆ. ಪ್ಯಾಲೆಸ್ತೀನ್‌ (Palestine) ವಿರುದ್ಧ ಸಮರ ಸಾರಿರುವ ಇಸ್ರೇಲ್ (Israel) ನೆರೆಯ ಲೆಬನಾನ್ (Lebanon) ಮೇಲೂ ದಾಳಿ ಮಾಡುತ್ತಿದೆ.

    ಹೆಜ್ಬುಲ್ಲಾ (Hezbollah) ಉಗ್ರರನ್ನು ಗುರಿಯಾಗಿಸಿ ಇಸ್ರೇಲ್ ಪಡೆಗಳು ಬೈರುತ್ ನಗರ ಮೇಲೆ ವೈಮಾನಿಕ ದಾಳಿ ನಡೆಸಿವೆ. ಇದಕ್ಕೂ ಮುನ್ನ ಹೆಜ್ಬುಲ್ಲಾ ಪಡೆ ಇಸ್ರೇಲ್ ಸೇನೆಯ ಪ್ರಧಾನ ಕಚೇರಿ ಮೇಲೆಯೇ ದಾಳಿ ನಡೆಸಿತ್ತು. ಇದನ್ನೂ ಓದಿ: 17,000 ಕೆಲಸ ಕಡಿತಗೊಳಿಸಲಿದೆ ಬೋಯಿಂಗ್ – ಕಂಪನಿಯ 10% ಉದ್ಯೋಗಿಗಳ ಕೆಲಸಕ್ಕೆ ಕುತ್ತು

    ಟೆಲ್‌ ಅವೀವ್‌ನಲ್ಲಿರುವ ಇಸ್ರೇಲ್‌ ಸೇನೆಯ ಮುಖ್ಯ ಕಚೇರಿ ಮೇಲೆ ನಾವು ಕ್ಷಿಪಣಿ ಉಡಾವಣೆ ಮಾಡಿದ್ದೇವೆ ಎಂದು ಹಿಜ್ಬುಲ್ಲಾ ಹೇಳಿಕೊಂಡಿತ್ತು. ಈ ಹೇಳಿಕೆಯ ಬೆನ್ನಲ್ಲೇ ಇಸ್ರೇಲ್ ಬೈರುತ್ ಮೇಲೆ ದಾಳಿ ಮಾಡಿದೆ. ಬೈರುತ್‌ನ ಹೆಜ್ಬೊಲ್ಲಾ ಪ್ರಾಬಲ್ಯವಿರುವ ಪ್ರದೇಶಗಳಿಂದ ಸ್ಥಳಾಂತರಗೊಳ್ಳುವಂತೆ ನಿವಾಸಿಗಳಿಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಸ್ರೇಲ್ ಸೇನೆ ಪೂರ್ವ ಬಾಲ್ಟಿಕ್‌ ಪ್ರದೇಶದ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿದೆ.

    ಹಲವು ಕಟ್ಟಡಗಳಿಗೆ ಹಾನಿಯಾಗಿದ್ದು ವ್ಯಾಪಕ ನಾಶ-ನಷ್ಟ ಸಂಭವಿಸಿದೆ. ದಾಳಿ ನಡೆದ ಪ್ರದೇಶದಲ್ಲಿ ಬೆಂಕಿಯ ಜ್ವಾಲೆ ಮತ್ತು ಹೊಗೆಯ ಕಾರ್ಮೋಡ ಆಗಸಕ್ಕೆ ವ್ಯಾಪಿಸಿತ್ತು.

    ಇಸ್ರೇಲಿ ನಡೆಸಿದ ದಾಳಿಯಲ್ಲಿ ಕನಿಷ್ಠ 12 ಜನರು ಗುರುವಾರ ಸಾವನ್ನಪ್ಪಿದ್ದಾರೆ ಎಂದು ಲೆಬನಾನ್‌ ತಿಳಿಸಿದೆ.

  • ಪ್ಯಾಲೆಸ್ತೀನ್‌ ಬೆಂಬಲಿಸಿದ್ದಕ್ಕೆ ಟ್ರೋಲ್‌ ಬೆನ್ನಲ್ಲೇ ಹಿಟ್‌ಮ್ಯಾನ್‌ ಪತ್ನಿ ಪೋಸ್ಟ್‌ ಡಿಲೀಟ್

    ಪ್ಯಾಲೆಸ್ತೀನ್‌ ಬೆಂಬಲಿಸಿದ್ದಕ್ಕೆ ಟ್ರೋಲ್‌ ಬೆನ್ನಲ್ಲೇ ಹಿಟ್‌ಮ್ಯಾನ್‌ ಪತ್ನಿ ಪೋಸ್ಟ್‌ ಡಿಲೀಟ್

    ಕ್ರಿಕೆಟಿಗ ರೋಹಿತ್ ಶರ್ಮಾ (Rohit Sharma) ಸದ್ಯಕ್ಕೆ ಟಿ20 ವಿಶ್ವಕಪ್ ಆಡಲು ಅಮೆರಿಕಾದಲ್ಲಿ (America) ತರಬೇತಿ ಪಡೆಯುತ್ತಿದ್ದಾರೆ. ಆದರೆ ಅವರ ಪತ್ನಿ ರಿತಿಕಾ ಸಜ್ದೇ (Ritika Sajdeh) ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟ್ರೋಲ್ ಆಗುತ್ತಿದ್ದಾರೆ.

    ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿಯನ್ನು ಅಪ್‌ಡೇಟ್ ಮಾಡುವಾಗ, ಅವರು ‘ಆಲ್ ಐಸ್ ಆನ್ ರಫಾ’ (All Eyes On Rafah) ಅನ್ನು ಬೆಂಬಲಿಸಿ ಪೋಸ್ಟ್ ಮಾಡಿದ್ದಾರೆ. ಕೂಡಲೇ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್‌ ಆಗಿದ್ದು, ನೆಟ್ಟಿಗರು ಟೀಕಿಸಲು ಪ್ರಾರಂಭಿಸಿದರು. ವಿವಾದವಾಗುತ್ತಿದ್ದಂತೆಯೇ ರೋಹಿತ್‌ ಪತ್ನಿ ತಮ್ಮ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿದ್ದಾರೆ.

    ಟ್ರೋಲ್‌ ಯಾಕೆ?: ಇತ್ತೀಚೆಗೆ ಪ್ಯಾಲೇಸ್ತೀನಿಯನ್ ನಗರ ರಫಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 45 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದಾದ ಬಳಿಕ ಸಾಮಾಜಿಕ ಮಾಧ್ಯಮ ಬಳಕೆದಾರರು ಪ್ಯಾಲೆಸ್ತೀನ್‌ನೊಂದಿಗೆ ತಮ್ಮ ಒಗ್ಗಟ್ಟನ್ನು ತೋರಿಸಲು ‘ಆಲ್ ಐಸ್ ಆನ್ ರಾಫಾ’ ಅನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಹ್ಯಾಶ್‌ಟ್ಯಾಗ್ ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ವಿಶ್ವಾದ್ಯಂತ ಭಾರೀ ಟ್ರೆಂಡಿಂಗ್ ಆಯಿತು. ಇದನ್ನೂ ಓದಿ: ನಿರಾಶ್ರಿತರಿದ್ದ ಡೇರೆಗಳ ಮೇಲೆ ಇಸ್ರೇಲ್‌ ವಾಯುದಾಳಿ; 45 ಮಂದಿ ಸಾವು

    ಇತ್ತ ರಿತಿಕಾ ಸಜ್ದೇ ಅವರು ತಮ್ಮ ಇನ್‌ಸ್ಟಾಗ್ರಾಮ್ (Instagram) ಸ್ಟೋರಿಯಲ್ಲಿ ಇದನ್ನು ಹಂಚಿಕೊಂಡಿದ್ದಾರೆ. ರಿತಿಕಾ ಪೋಸ್ಟ್‌ ಮಾಡುತ್ತಿದ್ದಂತೆಯೇ ಭಾರೀ ಟೀಕೆಗೆ ಗುರಿಯಾದರು. ಪ್ಯಾಲೆಸ್ತೀನ್ (Palestine) ಜನತೆಯನ್ನು ಬೆಂಬಲಿಸಿ ಪೋಸ್ಟ್ ಮಾಡಿದ್ದಕ್ಕಾಗಿ ಟ್ರೋಲ್‌ ಮಾಡಿ ಆಕ್ರೋಶ ಹೊರಹಾಕಿದರು. ಎಕ್ಸ್‌ ಬಳಕೆದಾರರಲ್ಲಿ ಕೆಲವರು ಭಾರತೀಯ ವಿಷಯಗಳ ಬಗ್ಗೆ ಮಾತನಾಡುವುದಿಲ್ಲ ಎಂದು ಆರೋಪಿಸಿದರು. ಇನ್ನೂ ಕೆಲವರು ರಾಫಾ ಎಲ್ಲಿದ್ದಾರೆ ಎಂದು ರಿತಿಕಾಗೆ ತಿಳಿದಿಲ್ಲ ಎಂದು ಲೇವಡಿ ಮಾಡಿದ್ದಾರೆ. ಈ ಬೆನ್ನಲ್ಲೇ ರಿತಿಕಾ ತಮ್ಮ ಸಾಮಾಜಿಕ ಜಾಲತಾಣ ಖಾತೆಯಿಂದ ಆ ಪೋಸ್ಟ್ ತೆಗೆದುಹಾಕಿದ್ದಾರೆ.

    ಈ ಬಗ್ಗೆ ರಿತಿಕಾ ಅಥವಾ ರೋಹಿತ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಸಹ ಪ್ಯಾಲೆಸ್ತೀನ್ ಜನರಿಗೆ ತಮ್ಮ ಬೆಂಬಲವನ್ನು ತೋರಿಸಿದ್ದಾರೆ. ಇವರಲ್ಲಿ ಕರೀನಾ ಕಪೂರ್, ಆಲಿಯಾ ಭಟ್, ವರುಣ್ ಧವನ್, ತೃಪ್ತಿ ದಿಮ್ರಿ, ಸಮಂತಾ ಪ್ರಭು, ಫಾತಿಮಾ ಸನಾ ಶೇಖ್, ಸ್ವರಾ ಭಾಸ್ಕರ್ ಮತ್ತು ದಿಯಾ ಮಿರ್ಜಾ ಸೇರಿದ್ದಾರೆ.

  • ಕಚೇರಿಯಲ್ಲೇ ಪ್ಯಾಲೆಸ್ತೀನ್‌ ಪರ ಘೋಷಣೆ ಕೂಗಿದ 28 ಗೂಗಲ್‌ ಸಿಬ್ಬಂದಿ ವಜಾ

    ಕಚೇರಿಯಲ್ಲೇ ಪ್ಯಾಲೆಸ್ತೀನ್‌ ಪರ ಘೋಷಣೆ ಕೂಗಿದ 28 ಗೂಗಲ್‌ ಸಿಬ್ಬಂದಿ ವಜಾ

    ಕ್ಯಾಲಿಫೋರ್ನಿಯಾ: ಕಚೇರಿಯ ಒಳಗಡೆ ಪ್ಯಾಲೆಸ್ತೀನ್‌ (Palestine) ಪರ ಘೋಷಣೆ ಕೂಗಿದ 28 ಸಿಬ್ಬಂದಿಯನ್ನು ಗೂಗಲ್‌ (Google) ಮನೆಗೆ ಕಳುಹಿಸಿದೆ.

    ಕಂಪನಿಯು ಇಸ್ರೇಲ್‌ನೊಂದಿಗೆ 1.2 ಬಿಲಿಯನ್ ಡಾಲರ್‌ ಒಪ್ಪಂದಕ್ಕೆ ಸಹಿ ಹಾಕಿದ್ದನ್ನು ವಿರೋಧಿಸಿ ಉದ್ಯೋಗಿಗಳು ಪ್ರತಿಭಟಿಸಿದ್ದರು. ಕೆಲವರು ಕ್ಯಾಲಿಫೋರ್ನಿಯಾದಲ್ಲಿರುವ ಕಚೇರಿ ಒಳಗಡೆ ಪ್ರತಿಭಟಿಸಿದ್ದರೆ ಇನ್ನು ಕೆಲವರು ನ್ಯೂಯಾರ್ಕ್‌ನಲ್ಲಿರುವ ಪ್ರಧಾನ ಕಚೇರಿಯಲ್ಲಿ ಧರಣಿ ನಡೆಸಿದ್ದರು.ಇದನ್ನೂ ಓದಿ: ಲಂಡನ್‌, ದುಬೈನಲ್ಲಿ ಮನೆ.. 5 ಕೋಟಿ ಮೌಲ್ಯದ ಚಿನ್ನ; ದ. ಗೋವಾ ಬಿಜೆಪಿ ಅಭ್ಯರ್ಥಿ 1,400 ಕೋಟಿ ಒಡತಿ

    ಏಪ್ರಿಲ್ 16 ರಂದು ಗೂಗಲ್ ಕ್ಲೌಡ್ ಸಿಇಒ ಥಾಮಸ್ ಕುರಿಯನ್ ಅವರ ಕ್ಯಾಲಿಫೋರ್ನಿಯಾದ ಕಚೇರಿ ಪ್ರವೇಶಿಸಿ ಸಿಬ್ಬಂದಿ ಪ್ರತಿಭಟಿಸಿದ್ದರು. ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಅವರನ್ನು ಪೊಲೀಸರು ಅವರನ್ನು ಬಂಧಿಸಿದ್ದರು.  ಇದನ್ನೂ ಓದಿ: ನಾವೇ ಮಂಜುನಾಥ್‌ರನ್ನ ಬಿಜೆಪಿಯಿಂದ ನಿಲ್ಲಿಸಿದ್ದು: ಕುಮಾರಸ್ವಾಮಿ

    ಒಪ್ಪಂದಕ್ಕೆ ಸಹಿ ಹಾಕಿದ್ದರಿಂದ ಗೂಗಲ್‌ ಗಾಜಾದಲ್ಲಿ ಇಸ್ರೇಲ್‌ (Israel) ನಡೆಸುತ್ತಿರುವ ಯುದ್ಧ ಪ್ಯಾಲೆಸ್ತೀನ್‌ ಜನರ  ನರಮೇಧಕ್ಕೆ ಶಕ್ತಿ ತುಂಬುತ್ತಿದೆ. ಹೀಗಾಗಿ ಕೂಡಲೇ ಈ ಒಪ್ಪಂದವನ್ನು ರದ್ದು ಮಾಡಬೇಕೆಂದು ಸಿಬ್ಬಂದಿ ಪ್ರತಿಭಟಿಸುತ್ತಿದ್ದರು. ಗೂಗಲ್‌ ಕಂಪನಿ ಆಂತರಿಕ ತನಿಖೆ ನಡೆಸಿ ಪ್ರತಿಭಟನೆ ನಡೆಸಿದ ಸಿಬ್ಬಂದಿಯನ್ನು ಈಗ ವಜಾ ಮಾಡಿದೆ.

     

  • ಪಾಕಿಸ್ತಾನದಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ನಿಷೇಧ: ಪ್ರಧಾನಿ ಘೋಷಣೆ

    ಪಾಕಿಸ್ತಾನದಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ನಿಷೇಧ: ಪ್ರಧಾನಿ ಘೋಷಣೆ

    ಇಸ್ಲಾಮಾಬಾದ್: ದೇಶದಲ್ಲಿ ಹೊಸ ವರ್ಷಾಚರಣೆ (2024) ನಿಷೇಧಿಸಲಾಗಿದೆ ಎಂದು ಹಂಗಾಮಿ ಪ್ರಧಾನ ಮಂತ್ರಿ ಅನ್ವಾರುಲ್‌ ಹಕ್‌ ಕಾಕರ್‌ (Anwaarul Haq Kakar) ಘೋಷಿಸಿದ್ದಾರೆ.

    ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಇಸ್ರೇಲ್-ಹಮಾಸ್‌ ಯುದ್ಧದಿಂದಾಗಿ ಗಾಜಾದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಗಾಜಾ ಜನರಿಗಾಗಿ ನಾವು ದನಿ ಎತ್ತಬೇಕು. ಅದಕ್ಕಾಗಿ ಒಗಟ್ಟು ಪ್ರದರ್ಶಿಸಲು, ಹೊಸ ವರ್ಷದ ಸಂಭ್ರಮ ಬೇಡ ಎಂದು ದೇಶದ ಜನತೆಗೆ ಕರೆ ಕೊಟ್ಟಿದ್ದಾರೆ.

    ಪ್ಯಾಲೆಸ್ತೀನ್‌ನಲ್ಲಿನ ಗಂಭೀರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ನಮ್ಮ ಪ್ಯಾಲೆಸ್ತೀನ್ ಸಹೋದರ-ಸಹೋದರಿಯರೊಂದಿಗೆ ನಾವಿದ್ದೇವೆ ಎಂಬ ಒಗ್ಗಟ್ಟು ಪ್ರದರ್ಶಿಸಬೇಕಿದೆ. ಹೊಸ ವರ್ಷಕ್ಕೆ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ನಡೆಸದಂತೆ ಸರ್ಕಾರವು ಕಟ್ಟುನಿಟ್ಟಾದ ನಿಷೇಧವನ್ನು ವಿಧಿಸುತ್ತದೆ ಎಂದು ತಿಳಿಸಿದ್ದಾರೆ.

    ಅಕ್ಟೋಬರ್ 7 ರಂದು ಇಸ್ರೇಲಿ ಬಾಂಬ್ ದಾಳಿ ಪ್ರಾರಂಭವಾದಾಗಿನಿಂದ ಸುಮಾರು 9,000 ಮಕ್ಕಳು ಸೇರಿದಂತೆ 21,000 ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರು ಹತ್ಯೆಯಾಗಿದ್ದಾರೆ. ಹಿಂಸಾಚಾರ ಮತ್ತು ಅನ್ಯಾಯದ ಎಲ್ಲಾ ಮಿತಿಗಳನ್ನು ದಾಟಿದ ಇಸ್ರೇಲಿ ಪಡೆಗಳಿಂದ ಪ್ಯಾಲೆಸ್ತೀನಿಯನ್ನರು ಕೊಲ್ಲಲ್ಪಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಇಡೀ ಪಾಕಿಸ್ತಾನಿ ರಾಷ್ಟ್ರ ಮತ್ತು ಮುಸ್ಲಿಂ ಜಗತ್ತು, ಗಾಜಾದಲ್ಲಿ ಮುಗ್ಧ ಮಕ್ಕಳ ಹತ್ಯಾಕಾಂಡ ಮತ್ತು ನಿರಾಯುಧ ಪ್ಯಾಲೆಸ್ತೀನಿಯನ್ನರ ನರಮೇಧದಿಂದಾಗಿ ದುಃಖದಲ್ಲಿದೆ. ಪ್ಯಾಲೆಸ್ತೀನ್‌ಗೆ ಸಕಾಲಿಕ ನೆರವು ನೀಡಲು ಮತ್ತು ಗಾಜಾದಲ್ಲಿರುವ ಗಾಯಾಳುಗಳನ್ನು ಸ್ಥಳಾಂತರಿಸಲು ಪಾಕಿಸ್ತಾನವು ಜೋರ್ಡಾನ್ ಮತ್ತು ಈಜಿಪ್ಟ್‌ನೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

    ಪಾಕಿಸ್ತಾನವು ವಿವಿಧ ಜಾಗತಿಕ ವೇದಿಕೆಗಳಲ್ಲಿ ಪ್ಯಾಲೆಸ್ತೀನಿಯನ್‌ ಜನರ ದುಃಸ್ಥಿತಿ ಬಗ್ಗೆ ಗಮನ ಸೆಳೆಯಲು ಪ್ರಯತ್ನಿಸಿದೆ. ಇಸ್ರೇಲಿ ರಕ್ತಪಾತವನ್ನು ತಡೆಯಲು ಭವಿಷ್ಯದಲ್ಲಿಯೂ ಇದನ್ನು ಮುಂದುವರಿಸುತ್ತದೆ ಎಂದು ಪ್ರಧಾನಿ ಕಾಕರ್‌ ಸ್ಪಷ್ಟಪಡಿಸಿದ್ದಾರೆ.

  • ಜೀಸಸ್‌ ಹುಟ್ಟಿದ ನಾಡಲ್ಲೇ ಕ್ರಿಸ್ಮಸ್‌ ಸಂಭ್ರಮ ಇಲ್ಲ

    ಜೀಸಸ್‌ ಹುಟ್ಟಿದ ನಾಡಲ್ಲೇ ಕ್ರಿಸ್ಮಸ್‌ ಸಂಭ್ರಮ ಇಲ್ಲ

    ಬೆತ್ಲೆಹೆಮ್‌ (ಪ್ಯಾಲೆಸ್ತೀನ್): ಜಗತ್ತಿನಾದ್ಯಂತ ಕ್ರಿಸ್ಮಸ್‌ (Christmas) ಹಬ್ಬದ ಸಂಭ್ರಮ ಮನೆ ಮಾಡಿದೆ. ಎಲ್ಲೆಡೆ ಏಸುಕ್ರಿಸ್ತನ ಸ್ಮರಣೆ ಮಾಡಲಾಗುತ್ತಿದೆ. ಇಂತಹ ಹೊತ್ತಿನಲ್ಲಿ ಜೀಸಸ್‌ (Jesus Christ) ಹುಟ್ಟಿದ ನಾಡಲ್ಲೇ ಕ್ರಿಸ್ಮಸ್‌ ಸಂಭ್ರಮವಿಲ್ಲ. ಕ್ರಿಸ್ಮಟ್‌ ಟ್ರೀ ಕೂಡ ಇಲ್ಲ. ಈ ನೆಲದಲ್ಲಿ ಮಾತ್ರ ಸೂತಕದ ಛಾಯೆ ಆವರಿಸಿದೆ.

    ಬೆತ್ಲೆಹೆಮ್‌ (Bethlehem) ಸಾಮಾನ್ಯವಾಗಿ ಕ್ರಿಸ್ಮಸ್‌ನಲ್ಲಿ ಅತ್ಯಂತ ಜನನಿಬಿಡವಾಗಿರುತ್ತದೆ. ಆದರೆ ಈ ವರ್ಷ ಯುದ್ಧದಿಂದಾಗಿ ಇಸ್ರೇಲಿ ಆಕ್ರಮಿತ ವೆಸ್ಟ್ ಬ್ಯಾಂಕ್‌ನಲ್ಲಿರುವ ಪ್ಯಾಲೇಸ್ಟಿನಿಯನ್ ಪಟ್ಟಣ ಪ್ರವಾಸಿಗರು ಮತ್ತು ಯಾತ್ರಿಕರಿಲ್ಲದೇ ಬಣಗುಡುತ್ತಿವೆ. ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಸ್ಮಾರಕ ಅಂಗಡಿಗಳು ಖಾಲಿ ಖಾಲಿಯಾಗಿವೆ. ಇದನ್ನೂ ಓದಿ: ಇಸ್ರೇಲ್ ವೈಮಾನಿಕ ದಾಳಿಯಲ್ಲಿ 78 ಮಂದಿ ಪ್ಯಾಲೆಸ್ತೇನಿಯರ ದುರ್ಮರಣ

    ಅಕ್ಟೋಬರ್ 7 ರಂದು ದಕ್ಷಿಣ ಇಸ್ರೇಲ್‌ನಲ್ಲಿ ಹಮಾಸ್ ದಾಳಿ ನಡೆಯಿತು. ಇದಾದ ಬಳಿಕ ಇಸ್ರೇಲ್‌ ಯುದ್ಧವನ್ನು ಘೋಷಿಸಿತು. ಗಾಜಾದ ಮೇಲೆ ಇಸ್ರೇಲ್‌ನ ಮಿಲಿಟರಿ ದಾಳಿ ಮತ್ತು ಪಶ್ಚಿಮ ದಂಡೆಯಲ್ಲಿ ಹಿಂಸಾಚಾರದ ಹೆಚ್ಚಳವಾಗಿದೆ. ಹೀಗಾಗಿ ಬೆತ್ಲೆಹೆಮ್‌ಗೆ ವ್ಯಾಪಾರ ಮಾಲೀಕರು ಯಾರೂ ಬರುತ್ತಿಲ್ಲ.

    ಇದು ಪಟ್ಟಣಕ್ಕೆ (ಬೆತ್ಲೆಹೆಮ್‌) ಬಂದೊದಗಿದ ಅತ್ಯಂತ ಕೆಟ್ಟ ಕ್ರಿಸ್ಮಸ್‌ ದಿನವಾಗಿದೆ. ಬೆತ್ಲೆಹೆಮ್‌ ಅನ್ನು ಬಂದ್‌ ಮಾಡಲಾಗಿದೆ. ಕ್ರಿಸ್ಮಸ್ ಟ್ರೀ ಇಲ್ಲ, ಸಂತೋಷವಿಲ್ಲ, ಕ್ರಿಸ್ಮಸ್ ಉತ್ಸಾಹವಿಲ್ಲ ಎಂದು ಸ್ಥಳೀಯರು ನೊಂದು ನುಡಿದಿದ್ದಾರೆ. ಇದನ್ನೂ ಓದಿ: ಭಾರತದ ಧ್ವಜವುಳ್ಳ ಕಚ್ಚಾತೈಲ ಟ್ಯಾಂಕರ್‌ ಮೇಲೆ ಹೌತಿ ಉಗ್ರರಿಂದ ಡ್ರೋನ್‌ ದಾಳಿ

    ಜೆರುಸಲೆಮ್‌ನ ದಕ್ಷಿಣದಲ್ಲಿರುವ ಬೆತ್ಲೆಹೆಮ್‌ ಜೀಸಸ್ ಜನಿಸಿದ ಪವಿತ್ರ ಸ್ಥಳ ಎಂದು ಕ್ರಿಶ್ಚಿಯನ್ನರು ನಂಬಿದ್ದಾರೆ. ನೇಟಿವಿಟಿ ಚರ್ಚ್ ನೋಡಲು ಪ್ರಪಂಚದ ಮೂಲೆ ಮೂಲೆಯಿಂದ ಜನ ಕ್ರಿಸ್ಮಸ್‌ ಸಂದರ್ಭದಲ್ಲಿ ಬರುತ್ತಿದ್ದರು. ಸ್ಥಳೀಯರಿಗೆ ಪ್ರವಾಸಿಗರೇ ಆದಾಯ ಮೂಲವಾಗಿದ್ದರು. ಆದರೆ ಯುದ್ಧದಿಂದಾಗಿ ಕ್ರಿಸ್ಮಸ್‌ ಸಂಭ್ರಮ ಇಲ್ಲದಂತಾಗಿದೆ.

    ಕ್ರಿಸ್ಮಸ್‌ ಸಂದರ್ಭದಲ್ಲಿ ತುಂಬಿ ತುಳುಕುತ್ತಿದ್ದ ಹೋಟೆಲ್‌ಗಳು ಈಗ ಖಾಲಿ ಹೊಡೆಯುತ್ತಿವೆ. ಕ್ರಿಸ್ಮಸ್ ಬ್ರೇಕ್ಫಾಸ್ಟ್ ಇಲ್ಲ, ಕ್ರಿಸ್ಮಸ್ ಡಿನ್ನರ್ ಇಲ್ಲ, ಕ್ರಿಸ್ಮಸ್ ಬಫೆ ಇಲ್ಲ ಎಂದು ಹೋಟೆಲ್‌ ಮಾಲೀಕರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಮೆರಿಕಾದಲ್ಲಿ ಹಿಂದೂ ದೇಗುಲದ ಗೋಡೆ ಮೇಲೆ ಖಲಿಸ್ತಾನಿ ಪರ ಬರಹ- ಭಾರೀ ಖಂಡನೆ

  • ಫೈನಲ್‌ ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಪ್ಯಾಲೆಸ್ತೀನ್‌ ಬೆಂಬಲಿಗ ಅರೆಸ್ಟ್‌

    ಫೈನಲ್‌ ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಪ್ಯಾಲೆಸ್ತೀನ್‌ ಬೆಂಬಲಿಗ ಅರೆಸ್ಟ್‌

    ಅಹಮದಾಬಾದ್‌: ಭಾರತ (Team India) ಮತ್ತು ಆಸ್ಟ್ರೇಲಿಯಾ (Australia) ಮಧ್ಯೆ ನಡೆಯುತ್ತಿರುವ ವಿಶ್ವಕಪ್‌ ಕ್ರಿಕೆಟ್‌ ಫೈನಲ್‌ (World Cup Cricket Final) ಪಂದ್ಯದಲ್ಲಿ ದೊಡ್ಡ ಭದ್ರತಾ ಲೋಪವಾಗಿದ್ದು ಪ್ಯಾಲೆಸ್ತೀನ್‌ ಬೆಂಬಲಿಗನೊಬ್ಬ (Palestine Supporters) ಕ್ರೀಡಾಂಗಣಕ್ಕೆ ನುಗ್ಗಿದ್ದಾನೆ.

    ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್‌ ಮಾಡುತ್ತಿದ್ದಾಗ 14ನೇ ಓವರ್‌ನಲ್ಲಿ ಮೈದಾನದ ಒಳಗಡೆ ಪ್ಯಾಲೆಸ್ತೀನ್‌ ಬೆಂಬಲಿಗ ನುಗ್ಗಿದ್ದಾನೆ. ಒಳಗಡೆ ನುಗ್ಗಿದ ಆತ ನೇರವಾಗಿ ಕೊಹ್ಲಿ (Virat Kohli) ಬಳಿ ಹೋಗಿ ತಬ್ಬಿಕೊಳ್ಳಲು ಮುಂದಾಗಿದ್ದಾನೆ. ಇದನ್ನೂ ಓದಿ: ದಾಖಲೆಗಾಗಿ ಆಡದೇ ಇದ್ದರೂ ವಿಶ್ವದಾಖಲೆ ನಿರ್ಮಿಸಿದ ರೋಹಿತ್‌ ಶರ್ಮಾ

    ಪ್ಯಾಲೆಸ್ತೀನ್‌ ಮಾಸ್ಕ್‌ ಧರಿಸಿದ್ದ ಆತನ ಟೀಶರ್ಟ್‌ನಲ್ಲಿ ʼStop Bombing Palestine’ ಎಂಬ ಬರಹ ಇತ್ತು. ಕೂಡಲೇ ಭದ್ರತಾ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದು ಮೈದಾನದಿಂದ ಹೊರಗಡೆ ಕರೆದುಕೊಂಡು ಹೋಗಿದ್ದಾರೆ. ಒಳಗಡೆ ನುಗ್ಗಿದ ವ್ಯಕ್ತಿ ಹೆಸರು ಜಾನ್‌ ಆಗಿದ್ದ ಆಸ್ಟ್ರೇಲಿಯಾದಿಂದ ಬಂದಿದ್ದ. ಜಾನ್‌ ಪಿಚ್‌ ಪರೀಕ್ಷೆ ಮಾಡಲು ನಿಯೋಜನೆಗೊಂಡಿದ್ದ ವ್ಯಕ್ತಿ ಎಂದು ಈಗ ವರದಿಯಾಗಿದೆ. ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

    https://twitter.com/Mufadal_bohra/status/1726199919961337865

    ಈ ಹಿಂದೆ ಇಂಗ್ಲೆಂಡಿನ ಕ್ರಿಕೆಟ್‌ ಅಭಿಮಾನಿ ಜಾರ್ವೋ ಮೈದಾನಕ್ಕೆ ನುಗ್ಗಿದ್ದ. ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿತ್ತು. ಈ ಘಟನೆಯ ನಂತರ ಐಸಿಸಿ ಉಳಿದ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಕ್ಕೆ ಜಾರ್ವೋಗೆ ನಿಷೇಧ ಹೇರಲಾಗಿತ್ತು. ಅಷ್ಟೇ ಅಲ್ಲದೇ ಇಂಗ್ಲೆಂಡಿಗೆ ಜಾರ್ವೋನನ್ನು ಗಡಿಪಾರು ಮಾಡಲಾಗಿತ್ತು. ಇದನ್ನೂ ಓದಿ: WC Final: ವರ್ಲ್ಡ್‌ ಕಪ್‌ ಇತಿಹಾಸದಲ್ಲಿ ಕಿಂಗ್‌ ಕೊಹ್ಲಿ ವಿಶ್ವದಾಖಲೆ

    ಜಾರ್ವೋ ಘಟನೆಯ ಬಳಿಕ ವಿಐಪಿ ಪಾಸ್‌ಗಳು ಈತನಿಗೆ ಸಿಕ್ಕಿದ್ದು ಹೇಗೆ ಎನ್ನುವ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿದ್ದವು.