Tag: ಪ್ರಜ್ಞಾ ಸಿಂಗ್ ಠಾಕೂರ್

  • ತಮ್ಮ ಮನೆಯಲ್ಲಿ ಸುರಕ್ಷಿತವಾಗಿಲ್ಲ ಅಂದ್ರೆ ಹಿಜಬ್ ಧರಿಸಿ, ಶಾಲಾ-ಕಾಲೇಜುಗಳಲ್ಲ: ಪ್ರಜ್ಞಾ ಠಾಕೂರ್

    ತಮ್ಮ ಮನೆಯಲ್ಲಿ ಸುರಕ್ಷಿತವಾಗಿಲ್ಲ ಅಂದ್ರೆ ಹಿಜಬ್ ಧರಿಸಿ, ಶಾಲಾ-ಕಾಲೇಜುಗಳಲ್ಲ: ಪ್ರಜ್ಞಾ ಠಾಕೂರ್

    ಭೋಪಾಲ್: ತಮ್ಮ ಮನೆಯಲ್ಲಿ ಸುರಕ್ಷಿತವಾಗಿಲ್ಲ ಅಂದರೆ ಹಿಜಬ್ ಧರಿಸಬಹುದು. ಆದರೆ ಶಾಲಾ-ಕಾಲೇಜುಗಳಲ್ಲಿ ಹಿಜಬ್ ಧರಿಸುವ ಅಗತ್ಯವಿಲ್ಲ ಎಂದು ಶಿಕ್ಷಣ ಸಂಸ್ಥೆಗಳಲ್ಲಿ ಮಹಿಳೆಯರು ಮತ್ತು ಹುಡುಗಿಯರು ಹಿಜಬ್ ಧರಿಸುವುದಕ್ಕೆ ಭೋಪಾಲ್ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಬುಧವಾರ ಭೋಪಾಲ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಹಿಜಬ್ ಧರಿಸುವ ಅಗತ್ಯವಿಲ್ಲ. ನಿಮ್ಮ ಮನೆಯಲ್ಲಿ ನೀವು ಹಿಜಬ್ ಧರಿಸಬಹುದು. ಹಿಂದೆ ಗುರುಕುಲಕ್ಕೆ ಹೋಗುತ್ತಿದ್ದ ಶಿಷ್ಯರು ಭಗವ (ಕೇಸರಿ) ಬಣ್ಣದ ಉಡುಪನ್ನು ಧರಿಸಿ ಹೋಗುತ್ತಿದ್ದರು. ಹಾಗೆಯೇ ವಿದ್ಯಾರ್ಥಿಗಳು ಶಾಲೆಗೆ ಹೋಗುವಾಗ ಶಾಲಾ ಸಮವಸ್ತ್ರ ಧರಿಸಿ ಶಿಕ್ಷಣ ಸಂಸ್ಥೆಗಳ ಶಿಸ್ತನ್ನು ಪಾಲಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಹಿಜಬ್ ವಿವಾದ – ರಾಮನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ರಜೆ ಘೋಷಣೆ

    ಇದೇ ವೇಳೆ ಖಿಜಬ್ ಅನ್ನು ಬೂದು ಕೂದಲನ್ನು ಮರೆಮಾಡಲು ಬಳಸಲಾಗುತ್ತದೆ. ಆದರೆ ಹಿಜಬ್ ಅನ್ನು ಮುಖವನ್ನು ಮುಚ್ಚಲು ಬಳಸಲಾಗುತ್ತದೆ. ಹಿಜಬ್ ಒಂದು ಪರ್ದಾ. ನಿಮ್ಮನ್ನು ಕೆಟ್ಟ ದೃಷ್ಟಿಯಿಂದ ನೋಡುವುದನ್ನು ತಡೆಯಲು ಪರ್ದಾವನ್ನು ಬಳಸಬೇಕು. ಆದರೆ ಒಂದು ವಿಷಯ ಸ್ಪಷ್ಟವಾಗಿ ಹೇಳುತ್ತೇನೆ, ಹಿಂದೂಗಳು ಮಹಿಳೆಯರನ್ನು ಪೂಜಿಸುತ್ತಾರೆ ಕೆಟ್ಟ ದೃಷ್ಟಿಯಿಂದ ನೋಡುವುದಿಲ್ಲ. ಇಲ್ಲಿ ಹೆಣ್ಣನ್ನು ಪೂಜಿಸುವುದು ಸನಾತನ ಸಂಸ್ಕೃತಿಯಾಗಿದೆ. ಹೆಣ್ಣಿನ ಸ್ಥಾನವೇ ಪ್ರಧಾನವಾಗಿರುವ ಈ ದೇಶದಲ್ಲಿ ಹಿಜಬ್ ಧರಿಸುವ ಅವಶ್ಯಕತೆಯಿದೆಯೇ? ಭಾರತದಲ್ಲಿ ಹಿಜಬ್ ಧರಿಸುವ ಅಗತ್ಯವಿಲ್ಲ. ತಮ್ಮ ಮನೆಗಳಲ್ಲಿ ತೊಂದರೆ ಎದುರಿಸುತ್ತಿರುವವರು ಅಲ್ಲಿ ಹಿಜಾಬ್ ಧರಿಸಬೇಕಾಗುತ್ತದೆ ಎಂದು ಟಾಂಗ್ ನೀಡಿದ್ದಾರೆ.

    ಹೊರಗಿರುವಾಗ ಹಿಂದೂ ಸಮಾಜದಲ್ಲಿ ಇರುವವರೆಲ್ಲಾ ಹಿಜಬ್ ಧರಿಸುವ ಅಗತ್ಯವಿಲ್ಲ. ಆದರೆ ಮದರಸಾಗಳಲ್ಲಿ ಹಿಜಬ್ ಅಥವಾ ಖಿಜಬ್ ಧರಿಸಿ, ಅದು ಹೇಗೆ ನಮಗೆ ಸಂಬಂಧಿಸಿರುತ್ತದೆ? ಆದರೆ ನೀವು ದೇಶಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳ ಶಿಸ್ತನ್ನು ಅಡ್ಡಿಪಡಿಸಿದರೆ ಅದನ್ನು ಮಾತ್ರ ಸಹಿಸಲಾಗುವುದಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ತುಪ್ಪ ಸವಿಯುವ ಮುನ್ನ ಇರಲಿ ಎಚ್ಚರ – ನಕಲಿ ತಯಾರಿಕಾ ಘಟಕದ ಮೇಲೆ ಪೊಲೀಸರ ದಾಳಿ

  • ಅನಾರೋಗ್ಯದಿಂದ ಜಾಮೀನಿನ ಮೇಲೆ ಹೊರಬಂದಿರೋ ಪ್ರಜ್ಞಾ ಸಿಂಗ್‌ರಿಂದ ಕ್ರಿಕೆಟ್, ಡ್ಯಾನ್ಸ್ – ವೀಡಿಯೋ ವೈರಲ್

    ಅನಾರೋಗ್ಯದಿಂದ ಜಾಮೀನಿನ ಮೇಲೆ ಹೊರಬಂದಿರೋ ಪ್ರಜ್ಞಾ ಸಿಂಗ್‌ರಿಂದ ಕ್ರಿಕೆಟ್, ಡ್ಯಾನ್ಸ್ – ವೀಡಿಯೋ ವೈರಲ್

    ಭೋಪಾಲ್: ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಅನಾರೋಗ್ಯದ ಕಾರಣದಿಂದ ಜಾಮೀನಿನ ಮೇಲೆ ಹೊರಬಂದಿದ್ದ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಕ್ರಿಕೆಟ್ ಆಟದಲ್ಲಿ ನಿರತರಾಗಿರುವ ವೀಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.

    ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಅವರು ಕ್ರಿಕೆಟ್ ಆಡುತ್ತಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಆರೋಪಿ ಆಗಿರುವ ಅವರು, ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಆದರೂ ಅವರು ಹಲವು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ. ಬಾಸ್ಕೆಟ್ ಬಾಲ್ ಆಟ, ನೃತ್ಯ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಅನಾರೋಗ್ಯದ ಕಾರಣ ನೀಡಿ ಜಾಮೀನಿನ ಮೇಲೆ ಹೊರಬಂದವರು ಕಾರ್ಯಕ್ರಮಗಳಲ್ಲಿ ಹೀಗೆ ಸಕ್ರಿಯವಾಗಿ ಪಾಲ್ಗೊಳ್ಳುತ್ತಿರುವುದಕ್ಕೆ ಹಲವರು ಅನುಮಾನ ವ್ಯಕ್ತಪಡಿಸಿದ್ದಾರೆ.

    ವೀಡಿಯೋದಲ್ಲಿ ಏನಿದೆ?
    ಭೋಪಾಲ್‌ನ ಶಕ್ತಿ ನಗರ ಪ್ರದೇಶದಲ್ಲಿ ಕೇಸರಿ ವಸ್ತ್ರಧಾರಿ ಸಂಸದೆ ಬ್ಯಾಟ್ ಹಿಡಿದುಕೊಂಡಿದ್ದಾರೆ. ಅವರ ಸುತ್ತ ಹಲವಾರು ಜನರಿದ್ದಾರೆ. ಒಬ್ಬರು ಬೌಲಿಂಗ್ ಮಾಡಿದ್ದು, ಬಾಲ್ ಅನ್ನು ಸಂಸದೆ ಹಿಟ್ ಮಾಡಿದ್ದಾರೆ. ಸಂಸದೆ ಸುತ್ತ ಇರುವ ಜನರೆಲ್ಲರೂ ಪ್ರೋತ್ಸಾಹಿಸುತ್ತಿರುವ ದೃಶ್ಯ ವೀಡಿಯೋದಲ್ಲಿದೆ.

    ಈ ವೀಡಿಯೋ ಹೆಚ್ಚು ವೀವ್ಸ್ ಪಡೆದಿದ್ದು, ಸಂಸದೆ ಯಾವುದೇ ಅನಾರೋಗ್ಯಕ್ಕೆ ತುತ್ತಾದವರ ಹಾಗೇ ಕಾಣುವುದಿಲ್ಲ ಎಂದು ನೆಟ್ಟಿಗರು ಟೀಕಿಸಿದ್ದಾರೆ. ಇದನ್ನೂ ಓದಿ: ಮತಾಂತರ ನಿಷೇಧ ಸರ್ಕಾರಿ ಪ್ರಾಯೋಜಿತ ಭಯೋತ್ಪಾದನಾ ಮಸೂದೆಯನ್ನು ಹಿಂಪಡೆಯಿರಿ: SDPI

    ಈ ಹಿಂದೆ ನವರಾತ್ರಿ ಆಚರಣೆ ವೇಳೆ ದೇಗುಲಕ್ಕೆ ಭೇಟಿ ನೀಡಿದ್ದಾಗ ಗಾರ್ಬಾ ನೃತ್ಯವನ್ನು ಸಂಸದೆ ಪ್ರದರ್ಶಿಸಿದ್ದರು. ಕೆಲ ದಿನಗಳ ನಂತರ ಬಾಸ್ಕೆಟ್ ಬಾಲ್ ಹಾಗೂ ಮಹಿಳಾ ಆಟಗಾರರೊಂದಿಗೆ ಕಬ್ಬಡಿಯನ್ನು ಆಡಿದ್ದ ವೀಡಿಯೋ ಭಾರೀ ವೈರಲ್ ಆಗಿತ್ತು. ಆಗ ಪ್ರತಿಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದರು. ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿದ್ದ ರೈತರು ಪಂಜಾಬ್‌ ಚುನಾವಣೆಯಲ್ಲಿ ಕಣಕ್ಕೆ

    2008ರ ಮಾಲೆಗಾಂವ್ ಬಾಂಬ್ ಸ್ಫೋಟದಲ್ಲಿ 10 ಜನರು ಸಾವನ್ನಪ್ಪಿದ್ದರು. ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದರು. ಈ ಪ್ರಕರಣದ ಆರೋಪಿಯಾಗಿ ಪ್ರಜ್ಞಾ ಠಾಕೂರ್ ಗುರುತಿಸಿಕೊಂಡಿದ್ದಾರೆ. 2017ರಲ್ಲಿ ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ನೀಡಲಾಗಿತ್ತು. ನಂತರ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು. ಇದನ್ನೂ ಓದಿ: ಜ.3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ: ಮೋದಿ

  • ಹಿಂದಿನ ಸಾಲಿನಲ್ಲಿ ತಮ್ಮ ಕುರ್ಚಿ ಕಂಡು ಹೊರ ನಡೆದ ಪ್ರಜ್ಞಾ ಸಿಂಗ್

    ಹಿಂದಿನ ಸಾಲಿನಲ್ಲಿ ತಮ್ಮ ಕುರ್ಚಿ ಕಂಡು ಹೊರ ನಡೆದ ಪ್ರಜ್ಞಾ ಸಿಂಗ್

    – ಸಿಎಂ ಆಗಮನಕ್ಕೂ ಮುನ್ನವೇ ಹೊರ ಬಂದ ಸಂಸದೆ

    ಭೋಪಾಲ್: ತಮಗೆ ಹಿಂದೆ ಕುರ್ಚಿ ಹಾಕಿದ್ದಕ್ಕೆ ಕೋಪಗೊಂಡ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಹೊರ ಬಂದಿದ್ದಾರೆ. ಭೋಪಾಲ್ ನಗರದ ಬಿಜೆಪಿ ಕಚೇರಿಯಲ್ಲಿಯ ಸಭೆಗೆ ಪಕ್ಷದ ರಾಜ್ಯಾಧ್ಯಕ್ಷ, ಸಿಎಂ, ಪ್ರಜ್ಞಾ ಸಿಂಗ್ ಸೇರಿದಂತೆ ಹಲವು ಮುಖಂಡರನ್ನ ಆಹ್ವಾನಿಸಲಾಗಿತ್ತು.

    ಡಿಸೆಂಬರ್ 25ರಂದ ಬಿಜೆಪಿ ಜಿಲ್ಲಾ ಕಾರ್ಯಲಯದ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಧ್ಯ ಪ್ರದೇಶದ ಬಿಜೆಪಿ ಅಧ್ಯಕ್ಷ ವಿಡಿ ಶರ್ಮಾ, ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಸಂಸದೆ ಪ್ರಜ್ಞಾ ಸಿಂಗ್ ಸೇರಿದಂತೆ ಹಲವರು ಕಾರ್ಯಕ್ರಮಕ್ಕೆ ಬರೋವರಿದ್ದರು. ಕಾರ್ಯಕ್ರಮ ಆರಂಭಕ್ಕೂ ಮುನ್ನ ಆಗಮಿಸಿದ ಸಂಸದೆ ಪ್ರಜ್ಞಾ ಸಿಂಗ್ ವೇದಿಕೆ ಮೇಲೆ ಇರಿಸಲಾಗಿದ್ದ ಕುರ್ಚಿಗಳನ್ನ ಗಮನಿಸಿದ್ದಾರೆ.

    ಹಿಂದಿನ ಸಾಲಿನಲ್ಲಿ ತಮಗೆ ಮೀಸಲಿರಿಸಿದ್ದ ಕುರ್ಚಿ ಕಂಡು ಕಚೇರಿಯಿಂದ ಹೊರ ಬಂದಿದ್ದಾರೆ. ಕಾರ್ಯಕ್ರಮಕ್ಕೂ ಆಯೋಜಕರು ಮನವೊಲಿಸಲು ಮುಂದಾದ್ರೂ ಪಕ್ಷದ ಮುಖಂಡರು ಮತ್ತು ಸಿಎಂ ಆಗಮನಕ್ಕೂ ಮೊದಲು ಹೊರ ಬಂದು ಬೇರೊಂದು ಕಾರ್ಯಕ್ರಮಕ್ಕೆ ಹಾಜರಾಗಿದ್ದಾರೆ. ಈ ವೇಳೆ ತಮಗೆ ಹಿಂದಿನ ಸಾಲಿನಲ್ಲಿ ಕುರ್ಚಿ ಹಾಕಿದ್ದರ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

  • ಪ್ರಜ್ಞೆ ತಪ್ಪಿದ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್

    ಪ್ರಜ್ಞೆ ತಪ್ಪಿದ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್

    -ಆರೋಗ್ಯದಲ್ಲಿ ಏರುಪೇರು

    ಭೋಪಾಲ್: ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಇಂದು ನಗರದ ಬಿಜೆಪಿ ಕಚೇರಿಯಲ್ಲಿ ಪ್ರಜ್ಞೆ ತಪ್ಪಿದ್ದಾರೆ.

    ಇಂದು ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿಯಲ್ಲಿ ಸಂಸದೆ ಭಾಗಿಯಾಗಿದ್ದರು. ದಿಢೀರ್ ಅಂತ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಕುಸಿದಿದ್ದಾರೆ. ಕೂಡಲೇ ಅವರನ್ನು ಹೊರಗೆ ತಂದು ನೀರು ಕುಡಿಸಿ ಆರೈಕೆ ಮಾಡಲಾಗಿದೆ. ತದನಂತರ ಪ್ರಜ್ಞಾ ಸಿಂಗ್ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

    ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಭಾಷಣದ ವೇಳೆ ಪ್ರಜ್ಞಾ ಸಿಂಗ್ ಜ್ಞಾನ ತಪ್ಪಿದ್ದಾರೆ. ತುಂಬಾ ಸಮಯ ನಿಂತಿದ್ದರಿಂದ ತಲೆ ಸುತ್ತು ಬಂದ ಪರಿಣಾಮ ಕುಸಿದಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಪ್ರಜ್ಞಾ ಸಿಂಗ್ ಮನೆಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ.

    ಕಳೆದ ಕೆಲ ದಿನಗಳಿಂದ ಸಂಸದೆ ಆನಾರೋಗ್ಯದಿಂದ ಬಳಲುತ್ತಿದ್ದಾರೆ. ದೆಹಲಿ ಆಸ್ಪತ್ರೆಗೆ ದಾಖಲಾಗಿ ಹಲವು ದಿನ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಮೆದುಳಿನ ಭಾಗದಲ್ಲಿ ನರ ಊತಿದ್ದರಿಂದ ದೃಷ್ಟಿ ಸಮಸ್ಯೆ ಸಹ ಕಾಣಿಸಿಕೊಂಡಿದೆ.