Tag: ಪ್ರಣಯ್

  • ಪ್ರಣಯ್ ಮರ್ಯಾದಾ ಹತ್ಯೆ ಕೇಸ್- ಅಮೃತಾ ತಂದೆ ಆತ್ಮಹತ್ಯೆ

    ಪ್ರಣಯ್ ಮರ್ಯಾದಾ ಹತ್ಯೆ ಕೇಸ್- ಅಮೃತಾ ತಂದೆ ಆತ್ಮಹತ್ಯೆ

    ಹೈದರಾಬಾದ್: ದೇಶಾದ್ಯಾಂತ ಸಂಚಲನವನ್ನು ಉಂಟು ಮಾಡಿದ್ದ ಆಂಧ್ರಪ್ರದೇಶದ ಪ್ರಣಯ್ ಮರ್ಯಾದಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾರುತಿ ರಾವ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಪುತ್ರಿ ಅಮೃತಾ ತನಗೆ ಇಷ್ಟವಿಲ್ಲದೆ ದಲಿತ ಯುವಕನೊಂದಿಗೆ ಮದುವೆಯಾದ ಕಾರಣ ಅಳಿಯ ಪ್ರಣಯ್‍ನನ್ನು ಕಳೆದ 2 ವರ್ಷಗಳ ಹಿಂದೆ ಸುಪಾರಿ ನೀಡಿ ಮಾರುತಿ ರಾವ್ ಕೊಲೆ ಮಾಡಿಸಿದ್ದ. ಈ ಪ್ರಕರಣದಲ್ಲಿ ಇತ್ತಿಚೆಗಷ್ಟೇ ಜಾಮೀನಿನ ಮೇಲೆ ಹೊರ ಬಂದಿದ್ದ ಆರೋಪಿ ಮಾರುತಿ ರಾವ್ ಹೈದರಾಬಾದ್‍ನ ಖೈರತಾಬಾದ್ ಆರ್ಯವೈಶ್ಯ ಭವನನಲ್ಲಿ ಉಳಿದುಕೊಂಡಿದ್ದನು. ಈ ವೇಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮಾರುತಿ ರಾವ್ ಪತ್ನಿ ಎಷ್ಟೇ ಬಾರಿ ಫೋನ್ ಕರೆ ಮಾಡಿದರೂ ಸ್ವೀಕರಿಸಿದ ಹಿನ್ನೆಲೆಯಲ್ಲಿ ಸಿಬ್ಬಂದಿಗೆ ಮಾಹಿತಿ ನೀಡಿದ ವೇಳೆ ಘಟನೆ ಬೆಳಕಿಗೆ ಬಂದಿದೆ.

    ಮಾರುತಿ ರಾವ್ ಪತ್ನಿ ನೀಡಿದ ಮಾಹಿತಿ ಮೇರೆಗೆ ಆರ್ಯವೈಶ್ಯ ಭವನದ ಸಿಬ್ಬಂದಿ ಕೊಠಡಿಯ ಬಾಗಿಲು ಮುರಿದು ಒಳ ಪ್ರವೇಶ ಮಾಡಿದ್ದರು. ಈ ವೇಳೆ ಆತ ವಿಷ ಸೇವನೆ ಮಾಡಿರುವುದು ಬೆಳಕಿಗೆ ಬಂದಿತ್ತು. ಅಲ್ಲದೆ ಆ ವೇಳೆಗಾಗಲೇ ಸಾವನ್ನಪ್ಪಿರುವುದು ತಿಳಿದುಬಂದಿತ್ತು. ಕೂಡಲೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮಾರುತಿ ರಾವ್ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಇದನ್ನೂ ಓದಿ: ನನಗೆ ಹಣ, ಆಸ್ತಿ ಬೇಡ- ತಂದೆಯನ್ನ ಗಲ್ಲಿಗೇರಿಸಿ: ಅಮೃತಾ ಆಕ್ರೋಶದ ಮಾತು

    ಆಂಧ್ರಪ್ರದೇಶದ ನಲ್ಗೋಂಡ ಜಿಲ್ಲೆಯ ಮಿರ್ಯಾಲಗೂಡು ನಿವಾಸಿಯಾಗಿದ್ದ ಮಾರುತಿ ರಾವ್ ರಿಯಲ್ ಎಸ್ಟೇಟ್ ವ್ಯವಹಾರದಿಂದ ಕೋಟಿ ಕೋಟಿ ಆಸ್ತಿ ಗಳಿಸಿದ್ದರು. ಆ ವೇಳೆ ಮಾರುತಿ ರಾವ್ ಪುತ್ರಿ ಅಮೃತಾ ದಲಿತ ಯುವಕ ಪ್ರಣಯ್‍ನನ್ನು ಪ್ರೀತಿಸಿ ವಿವಾಹವಾಗಿದ್ದರು. ಇದನ್ನು ಸಹಿಸದ ಮಾರುತಿ ರಾವ್ 2018ರ ಸೆ.15 ರಂದು ಐದು ತಿಂಗಳ ಗರ್ಭಿಣಿ ಅಮೃತ ಪತಿಯೊಂದಿಗೆ ನರ್ಸಿಂಗ್ ಹೋಮ್‍ಗೆ ಹೋಗಿ ವಾಪಸ್ ಬರುವ ಸಂದರ್ಭದಲ್ಲಿ ಪ್ರಣಯ್‍ನನ್ನು ಕೊಲೆ ಮಾಡಿದ್ದರು. ಅದಕ್ಕೂ ಮುನ್ನವೇ ಆತನ ಕೊಲೆಗೆ 4 ಬಾರಿ ಪ್ರಯತ್ನಿಸಿದ್ದಾಗಿ ಮಾರುತಿ ರಾವ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದ. ಇದನ್ನೂ ಓದಿ: ಮರ್ಯಾದಾ ಹತ್ಯೆ- ಗರ್ಭಿಣಿ ಅಮೃತಾಗೆ ಸರ್ಕಾರಿ ಉದ್ಯೋಗ, ಮನೆ, 8.25 ಲಕ್ಷ ರೂ. ಪರಿಹಾರ

    ಪ್ರಕರಣದಲ್ಲಿ ಮಾರುತಿ ರಾವ್ ಹಾಗೂ ಆತನ ಸಹೋದರ ಸೇರಿದಂತೆ ಹಂತಕನ ವಿರುದ್ಧ ದೂರು ದಾಖಲಿಸಿ ವಿಚಾರಣೆ ನಡೆಸಲಾಗಿತ್ತು. ಪ್ರಕರಣದಲ್ಲಿ ವಾರಂಗಲ್ ಸೆಂಟ್ರಲ್ ಜೈಲಿನಲ್ಲಿದ್ದ ಮಾರುತಿ ರಾವ್ ಕೆಲ ದಿನಗಳ ಹಿಂದೆ ಜಾಮೀನು ಪಡೆದು ಹೊರ ಬಂದಿದ್ದ. ಇದನ್ನೂ ಓದಿ: ಮರ್ಯಾದಾ ಹತ್ಯೆಗೆ ಬಲಿಯಾದ ಪ್ರಣಯ್ ಬದುಕಿರುವುದು ಈ ವಿಡಿಯೋದಲ್ಲಿ ಮಾತ್ರ

    ಆಸ್ತಿಗಾಗಿ ಒತ್ತಡ: ಕೊಲೆ ಪ್ರಕರಣದಲ್ಲಿ ಸಹೋದರರಿಬ್ಬರು ಜೈಲು ಪಾಲಾಗಿದ್ದರು. ಇತ್ತ ಪುತ್ರಿ ಅಮೃತಾ ಕೂಡ ಕುಟುಂಬಸ್ಥರ ವಿರೋಧದ ನಡುವೆಯೂ ಮದುವೆಯಾದ ಹಿನ್ನೆಲೆಯಲ್ಲಿ ಕೋಟಿ ಕೋಟಿ ಮೌಲ್ಯದ ಮಾರುತಿ ರಾವ್ ಆಸ್ತಿಯನ್ನು ತನ್ನ ಮಕ್ಕಳ ಹೆಸರಿಗೆ ಮಾಡಿಕೊಂಡು ಸಹೋದರ ಒತ್ತಡ ಹಾಕಿದ್ದ ಎನ್ನಲಾಗಿದೆ. ಆಸ್ತಿಗಾಗಿ ಸಹೋದರ ಒತ್ತಡ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಮಾರುತಿರಾವ್ ಹೆಚ್ಚು ಹೈದರಾಬಾದ್‍ನಲ್ಲೇ ಉಳಿದುಕೊಳ್ಳುತ್ತಿದ್ದ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಮುಂದಾಗಿರಬಹುದು ಎಂಬ ಶಂಕೆ ಮೂಡಿದೆ. ಇದನ್ನೂ ಓದಿ: ತಂದೆಯಿಂದ ಪತಿಯನ್ನು ಕಳೆದುಕೊಂಡಿದ್ದ ಅಮೃತಾಗೆ ಗಂಡು ಮಗು ಜನನ

  • ತಂದೆಯಿಂದ ಪತಿಯನ್ನು ಕಳೆದುಕೊಂಡಿದ್ದ ಅಮೃತಾಗೆ ಗಂಡು ಮಗು ಜನನ

    ತಂದೆಯಿಂದ ಪತಿಯನ್ನು ಕಳೆದುಕೊಂಡಿದ್ದ ಅಮೃತಾಗೆ ಗಂಡು ಮಗು ಜನನ

    ಹೈದರಾಬಾದ್: ತೆಲಂಗಾಣದಲ್ಲಿ ಮರ್ಯಾದಾ ಹತ್ಯೆಗೆ ಬಲಿಯಾಗಿದ್ದ ಪ್ರಣಯ್ ಪತ್ನಿ ಅಮೃತಾ ಅವರು ಗಂಡು ಮಗುವಿಗೆ ಗುರುವಾರ ಜನ್ಮ ನೀಡಿದ್ದಾರೆ.

    ಅಮೃತಾ ಅವರನ್ನು ಅತ್ತೆ ಆಸ್ಪತ್ರೆಗೆ ದಾಖಲಿಸಿ, ಕಾಳಜಿಯಿಂದ ನೋಡಿಕೊಳ್ಳುತ್ತಿದ್ದಾರೆ. ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ವರದಿಯಾಗಿದೆ. ಇದನ್ನು ಓದಿ:  ಪ್ರಣಯ್ ಕೊಲೆ: ಆರೋಪಿಗಳ ಜಾಮೀನು ತಿರಸ್ಕಾರ 

    ಪ್ರಣಯ್ ಮತ್ತು ಅಮೃತಾ ಇಬ್ಬರು ಪ್ರೀತಿಸಿದ್ದು, ಇವರಿಬ್ಬರ ಜಾತಿ ಬೇರೆಯಾಗಿದ್ದರಿಂದ ಅಮೃತಾ ಮನೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರು ಯುವ ಜೋಡಿ ಮನೆಯವರ ವಿರೋಧದ ನಡುವೆಯೂ ಮದುವೆ ಆಗಿದ್ದರು. ಆದರೆ 2018 ಸೆಪ್ಟಂಬರ್ 14ರಂದು ಪ್ರಣಯ್ ಮತ್ತು ಅಮೃತಾ ಆಸ್ಪತ್ರೆ ಮುಂದೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮಚ್ಚಿನಿಂದ ಪ್ರಣಯ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದನು. ಆದರೆ ಪ್ರಣಯ್ ಕೊಲೆಗೆ ಆತನ ಮಾವ ಮಾರುತಿ ರಾವ್ ಬರೋಬ್ಬರಿ ಒಂದು ಕೋಟಿ ಹಣವನ್ನು ಹಂತಕರಿಗೆ ನೀಡಿದ್ದ ವಿಚಾರ ಎಂದು ತನಿಖೆ ವೇಳೆ ಬೆಳಕಿಗೆ ಬಂದಿತ್ತು.

    ಮರ್ಯಾದಾ ಹತ್ಯೆಗೆ ಬಲಿಯಾದ ಪ್ರಣಯ್ ಕುಟುಂಬದವರಿಗೆ ರಾಜ್ಯ ಸರ್ಕಾರವೂ ಪರಿಹಾರ ಧನವನ್ನು ಫೋಷಿಸಿತ್ತು. ಕೆಲವು ದಿನಗಳ ಬಳಿಕ ಮೃತ ಪ್ರಣಯ್ ಪತ್ನಿ ಅಮೃತಾಗೆ ಸರ್ಕಾರಿ ಉದ್ಯೋಗವನ್ನು ನೀಡುವುದಾಗಿ ಕೂಡ ಭರವಸೆ ನೀಡಿತ್ತು.

    ತೆಲಂಗಾಣ ಪರಿಶಿಷ್ಟ ಜಾತಿ ಅಭಿವೃದ್ಧಿ ಸಚಿವ ಜಿ. ಜಗದೀಶ್ ರೆಡ್ಡಿ ಅವರು ನಲ್ಗೊಂಡ ಜಿಲ್ಲೆಯ ಮಿರಿಯಾಲಗುಡದಲ್ಲಿ ಮೃತ ಪ್ರಣಯ್ ಕುಟುಂಬದವರನ್ನು ಭೇಟಿ ಮಾಡಿ ಸಂತಾಪ ವ್ಯಕ್ತಪಡಿಸಿದ್ದರು. ಮೃತ ಪ್ರಣಯ್ ಪತ್ನಿ ಅಮೃತ ವರ್ಶಿನಿ ಅವರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು. ಜೊತೆಗೆ ಕೃಷಿ ಭೂಮಿ ಮತ್ತು ಡಬಲ್ ಬೆಡ್ ರೂಮ್ ಮನೆಯನ್ನು ಅವರ ಕುಟುಂಬಕ್ಕೆ ನೀಡುತ್ತೇವೆ. ಈಗಾಗಲೇ ಪ್ರಣಯ್ ಕುಟುಂಬದವರಿಗೆ ತಕ್ಷಣದ ವೆಚ್ಚಕ್ಕಾಗಿ ಸರ್ಕಾರ 8.25 ಲಕ್ಷ ರೂ. ಅನುಮೋದಿಸಿದೆ. ಇದರ ಜೊತೆ ನಾನು ವೈಯಕ್ತಿಕವಾಗಿ ಅಮೃತಾಗೆ 4.12 ಲಕ್ಷ ರೂ. ಚೆಕ್ ನೀಡಿದ್ದೇನೆ ಎಂದು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನನಗೆ ಹಣ, ಆಸ್ತಿ ಬೇಡ- ತಂದೆಯನ್ನ ಗಲ್ಲಿಗೇರಿಸಿ: ಅಮೃತಾ ಆಕ್ರೋಶದ ಮಾತು

    ನನಗೆ ಹಣ, ಆಸ್ತಿ ಬೇಡ- ತಂದೆಯನ್ನ ಗಲ್ಲಿಗೇರಿಸಿ: ಅಮೃತಾ ಆಕ್ರೋಶದ ಮಾತು

    ಹೈದರಾಬಾದ್: ದೇಶಾದ್ಯಂತ ಸಂಚಲನ ಹುಟ್ಟಿಸಿದ್ದ ಪ್ರಣಯ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಅಮೃತ ಪೊಲೀಸರಲ್ಲಿ ಮನವಿಯನ್ನು ಮಾಡಿಕೊಂಡಿದ್ದಾರೆ. ನನಗೆ ಡಬಲ್ ಬೆಡ್ ರೂಮ್, ಕೃಷಿ ಜಮೀನು, ಹಣ ಯಾವುದೂ ಬೇಡ. ಪ್ರಣಯ್ ನನ್ನು ಕೊಂದ ನನ್ನ ತಂದೆ ಸೇರಿದಂತೆ ಇತರೆ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಿ. ಅಷ್ಟೇ ಸಾಕು ನನಗೆ ಎಂದು ಅಮೃತಾ ಹೇಳಿದ್ದಾರೆ.

    ಕಳೆದ ಕೆಲವು ದಿನಗಳಿಂದ ಫೇಸ್‍ಬುಕ್ ಮತ್ತು ಇನ್ಸ್ ಸ್ಟಾಗ್ರಾಮ್ ಮುಖಾಂತರ ಹಲವು ಮೆಸೇಜ್‍ಗಳು ಬಂದಿದೆ. ಹಲವರು ಪ್ರಣಯ್ ಸಾವಿನ ಬಳಿಕ ಸರ್ಕಾರ ನೀಡುವ ಆಸ್ತಿಯನ್ನು ಪಡೆದುಕೊಳ್ಳುವುದರ ಕುರಿತು ವಿರೋಧ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ಸರ್ಕಾರ ನೀಡುವ ಸೌಲಭ್ಯ ನಿಮ್ಮ ಭವಿಷ್ಯಕ್ಕೆ ಸಹಕಾರಿ ಆಗಲಿದ್ದು, ಸ್ವೀಕರಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂಬ ಮೆಸೇಜ್ ಗಳು ಬರುತ್ತಿವೆ ಅಂತ ತಿಳಿಸಿದರು. ಇದನ್ನೂ ಓದಿ:  ಮರ್ಯಾದಾ ಹತ್ಯೆಗೆ ಬಲಿಯಾದ ಪ್ರಣಯ್ ಬದುಕಿರುವುದು ಈ ವಿಡಿಯೋದಲ್ಲಿ ಮಾತ್ರ

    ನನಗೆ ಸರ್ಕಾರ ನೀಡುತ್ತಿರುವ ಪರಿಹಾರ ಬೇಕಾಗಿಲ್ಲ. ನಾವು ಆರ್ಥಿಕವಾಗಿಯೂ ಸಬಲರಾಗಿ ಇದ್ದೇವೆ. ಮನೆ, ಕೃಷಿ ಭೂಮಿ, ಉದ್ಯೋಗ ಮತ್ತು ಹಣ ನೀಡಿ ಎಂದು ಯಾರ ಬಳಿಯೂ ನಾನಾಗಲಿ ಅಥವಾ ಕುಟುಂಬಸ್ಥರು ಕೇಳಿಕೊಂಡಿಲ್ಲ. ಪ್ರಣಯ್ ಕೊಂದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ನನ್ನ ಮನವಿ ಆಗಿದೆ ಎಂದು ಅಮೃತ ಸ್ಪಷ್ಟಪಡಿಸಿದ್ದಾರೆ.

    ಸರ್ಕಾರದಿಂದ ಉದ್ಯೋಗ:
    ತೆಲಂಗಾಣ ಪರಿಶಿಷ್ಟ ಜಾತಿ ಅಭಿವೃದ್ಧಿ ಸಚಿವ ಜಿ. ಜಗದೀಶ್ ರೆಡ್ಡಿ ಅವರು ನಲ್ಗೊಂಡ ಜಿಲ್ಲೆಯ ಮಿರಿಯಾಲಗುಡದಲ್ಲಿ ಮೃತ ಪ್ರಣಯ್ ಕುಟುಂಬದವರನ್ನು ಭೇಟಿ ಮಾಡಿ ಸಂತಾಪ ವ್ಯಕ್ತಪಡಿಸಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಇಂತಹ ಘಟನೆಗಳು ಪ್ರಸ್ತುತ ದಿನಗಳಲ್ಲಿ ಇನ್ನೂ ನಡೆಯುತ್ತಿವೆ ಎಂದು ನಾಚಿಕೆ ಆಗುತ್ತದೆ. ಈ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಮರ್ಯಾದಾ ಹತ್ಯೆ: 13 ವರ್ಷದ ಹಿಂದೆ ಮದ್ವೆಯಾದ ದಂಪತಿಯನ್ನು ಕೊಂದೇ ಬಿಟ್ಟ!

    ಮೃತ ಪ್ರಣಯ್ ಪತ್ನಿ ಅಮೃತವರ್ಶಿನಿ ಅವರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು. ಜೊತೆಗೆ ಕೃಷಿ ಭೂಮಿ ಮತ್ತು ಡಬಲ್ ಬೆಡ್ ರೂಮ್ ಮನೆಯನ್ನು ನೀಡುತ್ತೇವೆ. ಈಗಾಗಲೇ ಪ್ರಣಯ್ ಕುಟುಂಬದವರಿಗೆ ತಕ್ಷಣದ ವೆಚ್ಚಕ್ಕಾಗಿ ಸರ್ಕಾರ 8.25 ಲಕ್ಷ ರೂ. ಅನುಮೋದಿಸಿದೆ. ಇದರ ಜೊತೆ ನಾನು ವೈಯಕ್ತಿಕವಾಗಿ ಅಮೃತಾಗೆ 4.12 ಲಕ್ಷ ರೂ. ಚೆಕ್ ನೀಡಿದ್ದೇನೆ ಎಂದು ತಿಳಿಸಿದ್ದರು. ಸರ್ಕಾರದ ಸೌಲಭ್ಯಗಳನ್ನು ಅಮೃತ ಪಡೆದಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

    ಏನಿದು ಪ್ರಕರಣ..?
    ಪ್ರಣಯ್ ಮತ್ತು ಅಮೃತ ಇಬ್ಬರು ಪ್ರೀತಿಸಿದ್ದು, ಎರಡೂ ಕುಟುಂಬಗಳ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದವು. ಇಬ್ಬರ ಜಾತಿ ಬೇರೆಯಾಗಿದ್ದರಿಂದ ಅಮೃತಾ ಮನೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೂ ಯುವ ಜೋಡಿ ಮನೆಯವರ ವಿರೋಧದ ನಡುವೆಯೂ ಮದುವೆ ಆಗಿದ್ದರು. ಆದರೆ ಸೆಪ್ಟೆಂಬರ್ 15 ಶನಿವಾರ ಪ್ರಣಯ್ ಮತ್ತು ಅಮೃತಾ ಆಸ್ಪತ್ರೆ ಮುಂದೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮಚ್ಚಿನಿಂದ ಪ್ರಣಯ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದನು. ಆದರೆ ಪ್ರಣಯ್ ಕೊಲೆಗೆ ಆತನ ಮಾವ ಮಾರುತಿ ರಾವ್ ಬರೋಬ್ಬರಿ ಒಂದು ಕೋಟಿ ರೂ. ಹಣವನ್ನು ಹಂತಕರಿಗೆ ನೀಡಿದ್ದನು ಎಂದು ತನಿಖೆ ವೇಳೆ ಬೆಳಕಿಗೆ ಬಂದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv