Tag: ಪ್ರಣಿತಾ

  • ಭೀಮನ ಅಮಾವ್ಯಾಸೆಗೆ ಪತಿಯ ಪಾದ ಪೂಜೆ ಮಾಡಿದ ಪ್ರಣಿತಾ

    ಭೀಮನ ಅಮಾವ್ಯಾಸೆಗೆ ಪತಿಯ ಪಾದ ಪೂಜೆ ಮಾಡಿದ ಪ್ರಣಿತಾ

    ಸ್ಯಾಂಡಲ್‌ವುಡ್ ನಟಿ ಪ್ರಣಿತಾ (Pranitha) ಅವರು ಬಹುಭಾಷಾ ನಾಯಕಿಯಾಗಿ ಮಿಂಚ್ತಿದ್ದಾರೆ. ಮದುವೆಯಾಗಿ, ಮಗುಯಾದ್ಮೇಲೆ ಮತ್ತೆ ಮಲಯಾಳಂ ಸಿನಿಮಾ ಮೂಲಕ ‘ಪೊರ್ಕಿ’ (Porki) ಬ್ಯೂಟಿ ನಟನೆಗೆ ಕಮ್‌ಬ್ಯಾಕ್ ಆಗುತ್ತಿದ್ದಾರೆ. ಶುಭ ಸೋಮವಾರ ಇಂದು (ಜುಲೈ 17) ರಂದು ಭೀಮನ ಅಮಾವ್ಯಾಸೆಗೆ ಪ್ರಣಿತಾ, ಪತಿ ಪಾದಾ ಪೂಜೆ ಮಾಡಿದ್ದಾರೆ. ಪೂಜೆಯ ಫೋಟೋವನ್ನು ನಟಿ ಸಾಮಾಜಿಕ ಜಾಲತಾಣದಲ್ಲಿ ನಟಿ ಶೇರ್ ಮಾಡಿದ್ದಾರೆ.

    ಕನ್ನಡ ಸಿನಿಮಾ ಮೂಲಕ ಸಿನಿ ರಂಗಕ್ಕ ಎಂಟ್ರಿ ಕೊಟ್ಟ ಪ್ರಣಿತಾ, ಹಿಂದಿ,ತೆಲುಗು, ತಮಿಳು ಸೇರಿದಂತೆ ಸ್ಟಾರ್ ನಟರ ಜೊತೆ ಪ್ರಣಿತಾ ನಟಿಸಿದ್ದಾರೆ. ಡಿಮ್ಯಾಂಡ್ ಇರುವಾಗಲೇ ಉದ್ಯಮಿ ನಿತಿನ್ ಜೊತೆ ಲಾಕ್‌ಡೌನ್‌ನಲ್ಲಿ ಮದುವೆಯಾದರು. ಹಲವು ವರ್ಷಗಳ ಪ್ರೀತಿಗೆ ಗುರುಹಿರಿಯರ ಸಮ್ಮತಿ ಪಡೆದು ದಾಂಪತ್ಯ (Wedding) ಜೀವನಕ್ಕೆ ನಟಿ ಕಾಲಿಟ್ಟರು. ಇವರ ಪ್ರೀತಿಗೆ ಸಾಕ್ಷಿಯಾಗಿ ಈಗ ಮುದ್ದಾದ ಮಗಳಿದ್ದಾರೆ. ಇದನ್ನೂ ಓದಿ:ಜ್ಯೂ.ಎನ್‌ಟಿಆರ್ ಸಿನಿಮಾದಲ್ಲಿ ಐಕಾನ್ ಸ್ಟಾರ್ ಪುತ್ರಿ?

    ಇಂದು ಬೆಳಿಗ್ಗೆ ಭೀಮನ ಅಮಾವ್ಯಾಸೆಯಂದು(Bheemana Amavasye) ಪತಿ ನಿತಿನ್‌ಗೆ(Nithin) ಪಾದ ಪೂಜೆ ಮಾಡಿರುವ ಫೋಟೋವನ್ನ ನಟಿ ಶೇರ್ ಮಾಡಿದ್ದಾರೆ. ಸನಾತನ ಧರ್ಮದಲ್ಲಿ ಭೀಮನ ಅಮಾವ್ಯಾಸೆಗೆ ಹೆಚ್ಚಿನ ಮಹತ್ವವಿದೆ ಎಂದು ಎಂದಿದ್ದಾರೆ. ದೇವಿಯರನ್ನು ಸಮಾನವಾಗಿ ಪೂಜಿಸುವ ಕೆಲವು ನಂಬಿಕೆಗಳಲ್ಲಿ ಇದು ಒಂದಾಗಿದೆ ಎಂದು ನಟಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

    ‘ಪೊರ್ಕಿ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪರಿಚಿತರಾದ ಪ್ರಣಿತಾ, ಜರಾಸಂದ, ಮಿ.420, ಅಂಗಾರಕ ಸೇರಿದಂತೆ ಹಲವು ಕನ್ನಡ ಸಿನಿಮಾದಲ್ಲಿ ಪ್ರಣಿತಾ ನಟಿಸಿದ್ದಾರೆ. ಬಳಿಕ ತೆಲುಗು- ತಮಿಳು ಸಿನಿಮಾರಂಗದಲ್ಲಿ ನಟಿ ಬ್ಯುಸಿಯಾದರು. ಮದುವೆಗೂ ಮುನ್ನ ಬಾಲಿವುಡ್‌ನ ಹಂಗಾಮ 2, ಭುಜ್ ಸಿನಿಮಾದಲ್ಲಿ ಪೊರ್ಕಿ ನಾಯಕಿ ಅಭಿನಯಿಸಿದ್ದರು.

    ಇದೀಗ ಪ್ರಣಿತಾ, ನಟ ದಿಲೀಪ್‌ಗೆ ನಾಯಕಿಯಾಗುವ ಮೂಲಕ ಮಾಲಿವುಡ್‌ಗೆ (Mollywood) ಎಂಟ್ರಿ ಕೊಟ್ಟಿದ್ದಾರೆ. ದಿಲೀಪ್‌ಗೆ ಪ್ರಣಿತಾ ಮತ್ತು ತಮನ್ನಾ ನಾಯಕಿಯರಾಗಿದ್ದಾರೆ. ಪ್ರಣಿತಾ ಭಾಗದ ಚಿತ್ರೀಕರಣ ಕೇರಳದಲ್ಲಿ ನಡೆದಿದೆ. ಶೂಟಿಂಗ್‌ಗೂ ಹಾಜರಾಗಿ ಬಂದಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭೀಮನ ಅಮವಾಸ್ಯೆ: ಪತಿಯ ಪಾದ ಪೂಜೆ ಮಾಡಿದ ಪ್ರಣಿತಾ ಸುಭಾಷ್

    ಭೀಮನ ಅಮವಾಸ್ಯೆ: ಪತಿಯ ಪಾದ ಪೂಜೆ ಮಾಡಿದ ಪ್ರಣಿತಾ ಸುಭಾಷ್

    ಹುಭಾಷಾ ನಟಿ ಪ್ರಣಿತಾ ಸುಭಾಷ್ ಸದ್ಯ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಮಗುವಿನ ಪೋಷಣೆಯಲ್ಲಿ ಬ್ಯುಸಿಯಾಗಿದ್ದಾರೆ. ಭೀಮನ ಅಮವಾಸ್ಯೆಗೆ ವಿಶೇಷ ಫೋಟೋವೊಂದನ್ನು ಪ್ರಣಿತಾ ಶೇರ್ ಮಾಡಿದ್ದಾರೆ.

    ಕನ್ನಡ ಸಿನಿಮಾದ ಮೂಲಕ ಸಿನಿಪಯಣ ಶುರು ಮಾಡಿದ್ದ ನಟಿ ಪ್ರಣಿತಾ ಬಹುಭಾಷಾ ನಾಯಕಿಯಾಗಿ ಗುರುತಿಸಿಕೊಂಡರು. ಬೇಡಿಕೆಯಿರುವಾಗಲೇ ಕಳೆದ ವರ್ಷ ಹಸೆಮಣೆ ಏರಿದ್ದ ಚೆಲುವೆ ಈಗ ಮುದ್ದು ಮಗನ ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಭೀಮನ ಅಮವಾಸ್ಯೆಯಂದು ಪತಿಯ ಒಳಿತಿಗೆ ಪ್ರಣಿತಾ ಪಾದ ಪೂಜೆ ಪೂಜೆ ಮಾಡಿದ್ದಾರೆ. ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ:ಮದುವೆಯ ವದಂತಿ ಬೆನ್ನಲ್ಲೇ ಬಾಯ್‌ಫ್ರೆಂಡ್‌ ಜೊತೆಗಿನ ಹೊಸ ಫೋಟೋ ಹಂಚಿಕೊಂಡ ಅಥಿಯಾ ಶೆಟ್ಟಿ

    ಉದ್ಯಮಿ ನಿತಿನ್ ರಾಜ್ ಜೊತೆ ದಾಂಪತ್ಯ ಜೀವನಕ್ಕೆ ಕಳೆದ ವರ್ಷ ಕಾಲಿಟ್ಟಿದ್ದರು. ಇದೀನ ಭೀಮನ ಅಮವಾಸ್ಯೆಯನ್ನ ಮತ್ತಷ್ಟು ವಿಶೇಷವಾಗಿ ಆಚರಿಸಿದ್ದಾರೆ. ಈ ವಿಶೇಷ ದಿನದಂದು ಪತಿಯ ಪಾದ ಪೂಜೆ ಮಾಡಿ, ಆರ್ಶೀವಾದ ಪಡೆದುಕೊಂಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಮಗುವಿನ ಫೇಸ್ ರಿವೀಲ್ ಮಾಡಿದ ನಟಿ ಪ್ರಣಿತಾ

    ಮಗುವಿನ ಫೇಸ್ ರಿವೀಲ್ ಮಾಡಿದ ನಟಿ ಪ್ರಣಿತಾ

    ಸ್ಯಾಂಡಲ್‌ವುಡ್ ಬ್ಯೂಟಿ ಪ್ರಣಿತಾ ಈಗಾಗಲೇ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಹೆಣ್ಣು ಮಗವಿಗೆ ಪ್ರಣಿತಾ ಜನ್ಮ ನೀಡಿದ್ದಾರೆ. ಶುಕ್ರವಾರದಂದು ಮನೆಗೆ ಪುಟ್ಟ ಮಹಾಲಕ್ಷ್ಮಿಯ ಆಗಮನವಾಗಿದೆ. ಈ ಬೆನ್ನಲ್ಲೇ ಪ್ರಣಿತಾ, ತಮ್ಮ ಹೆರಿಗೆಯ ವೀಡಿಯೋ ಜೊತೆ ಮಗುವಿನ ಫೇಸ್ ರಿವೀಲ್ ಮಾಡಿದ್ದಾರೆ.

    `ಪೊರ್ಕಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗಿ ಬಹುಭಾಷಾ ನಟಿಯಾಗಿ ಮಿಂಚ್ತಿರುವ ಪ್ರತಿಭಾವಂತ ನಟಿ ಪ್ರಣಿತಾ. ಬೇಡಿಕೆಯಿರುವಾಗಲೇ ಕಳೆದ ವರ್ಷ ಲಾಕ್‌ಡೌನ್‌ನಲ್ಲಿ ಉದ್ಯಮಿ ನಿತಿನ್ ಜೊತೆ ಹಸೆಮಣೆ ಏರಿದ್ದರು. ಈಗ ಹೆಣ್ಣು ಮಗುವಿನ ತಾಯಿಯಾಗಿದ್ದಾರೆ. ಶುಭ ಶುಕ್ರವಾರ (ಜೂ.10)ದಂದು ಮನೆಗೆ ಹೊಸ ಅತಿಥಿ ಮಹಾಲಕ್ಷ್ಮಿಯ ಆಗಮನವಾಗಿದೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ. ಈ ಬೆನ್ನಲ್ಲೇ ತಮ್ಮ ಹೆರಿಗೆಯ ವೀಡಿಯೋ ಶೇರ್ ಮಾಡುವುದರ ಜೊತೆ ಮಗುವಿನ ಫೇಸ್ ಕೂಡ ರಿವೀಲ್ ಮಾಡಿದ್ದಾರೆ.

    ನಟಿ ಪ್ರಣಿತಾ ಹೆಣ್ಣು ಮಗುವಿಗೆ ತಾಯಿಯಾಗಿದ್ದಾರೆ. ಇದೇ ಖುಷಿಯಲ್ಲಿ ಮಗುವಿನ ಮುಖ ಕೂಡ ರಿವೀಲ್ ಮಾಡಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಪ್ರಣಿತಾ ಕಡೆಯದಾಗಿ ನಟಿಸಿದ ಸಿನಿಮಾ ಬಾಲಿವುಡ್‌ನ ʻಹಂಗಾಮ 2ʼ, ಮತ್ತು ʻಭುಜ್ ದಿ ಪ್ರೈಡ್‌ʼ ಮೂಲಕ ಗಮನ ಸೆಳೆದಿದ್ದರು. ಕನ್ನಡದ `ರಾಮನ ಅವತಾರ’ ಸದ್ಯದಲ್ಲೇ ತೆರೆಗೆ ಬರಲಿದೆ. ಮುಂದಿನ ದಿನಗಳಲ್ಲಿ ಚಾಲೆಂಜಿಂಗ್ ಪಾತ್ರದ ಮೂಲಕ ಬೆಳ್ಳಿತೆರೆಯಲ್ಲಿ ಪ್ರಣಿತಾ ಮಿಂಚಲಿದ್ದಾರೆ. ಪವರ್‌ಫುಲ್ ಪಾತ್ರದ ಮೂಲಕ ಕಮ್‌ಬ್ಯಾಕ್ ಆಗಲಿದ್ದಾರೆ.

  • ಮತ್ತೆ ಬೇಬಿ ಬಂಪ್ ಫೋಟೋ ಹಂಚಿಕೊಂಡ ಪ್ರಣಿತಾ ಸುಭಾಷ್

    ಮತ್ತೆ ಬೇಬಿ ಬಂಪ್ ಫೋಟೋ ಹಂಚಿಕೊಂಡ ಪ್ರಣಿತಾ ಸುಭಾಷ್

    ಹುಭಾಷಾ ನಟಿ ಪ್ರಣಿತಾ ಸುಭಾಷ್ ಸಿನಿಮಾರಂಗದಿಂದ ಕೊಂಚ ಬ್ರೇಕ್ ತೆಗೆದುಕೊಂಡು ವಯಕ್ತಿಕ ಜೀವನದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಪತಿ ನಿತಿನ್ ಜತೆ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿ ಗಮನ ಸೆಳೆದಿದ್ದರು. ಈಗ ಮತ್ತೊಂದು ಬೇಬಿ ಬಂಪ್ ಫೋಟೋ ಶೇರ್ ಮಾಡಿದ್ದಾರೆ.

    ಕನ್ನಡ ಚಿತ್ರದಿಂದ ಸಿನಿ ಕೆರಿಯರ್ ಶುರು ಮಾಡಿದ ನಟಿ ಪ್ರಣಿತಾ ಬಾಲಿವುಡ್‌ವರೆಗೂ ತಮ್ಮ ನಟನೆಯ ಛಾಪೂ ಮೂಡಿಸಿದ್ರು. ಈಗ ಮದುವೆ, ಸಂಸಾರ ಅಂತಾ ಬ್ಯುಸಿಯಾಗಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಪ್ರಣಿತಾ, ನೀರಿನಲ್ಲಿ ಕುಳಿತು ಕ್ಯಾಮೆರಾ ಕಣ್ಣಿಗೆ ಪೋಸ್ ಕೊಟ್ಟಿದ್ದಾರೆ. ಹೊಸ ಬೇಬಿ ಬಂಪ್ ಲುಕ್ ನೋಡುಗರ ಗಮನ ಸೆಳೆಯುತ್ತಿದೆ. ಇದನ್ನೂ ಓದಿ: ಕನ್ನಡದಲ್ಲೇ ಖುಷಿ ಹಂಚಿಕೊಂಡ ರಾ.. ರಾ.. ರಕ್ಕಮ್ಮ ಬೆಡಗಿ ಜಾಕ್ವಲಿನ್

    ಪ್ರಣಿತಾ ನಟನೆಯ `ರಾಮನ ಅವತಾರ’ ಚಿತ್ರದಲ್ಲಿ ನಟಿಸಿದ್ದಾರೆ. ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ. ಮಗುವಿನ ಆಗಮನದ ನಂತರ ಮತ್ತೆ ಪ್ರಣಿತಾ ನಟನೆಗೆ ಕಂಬ್ಯಾಕ್ ಮಾಡಲಿದ್ದಾರೆ. ಚಾಲೆಂಜಿಂಗ್ ಪಾತ್ರದ ಮೂಲಕ ಕಾಣಿಸಿಕೊಳ್ಳಲಿದ್ದಾರೆ.

  • ಭಾರತದಲ್ಲಿ ಹಿಂದೂ ಟೆರರ್ ಇದೆ ಅಂದವರಿಗೆ ಪ್ರಣಿತಾ ತಿರುಗೇಟು

    ಭಾರತದಲ್ಲಿ ಹಿಂದೂ ಟೆರರ್ ಇದೆ ಅಂದವರಿಗೆ ಪ್ರಣಿತಾ ತಿರುಗೇಟು

    ಬೆಂಗಳೂರು: ಭಾರತದಲ್ಲಿ ಹಿಂದೂ ಟೆರರ್ ಇದೆ ಎಂದವರಿಗೆ ನಟಿ ಪ್ರಣಿತಾ ತಿರುಗೇಟು ನೀಡಿರುವುದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಾಗುತ್ತಿದೆ.

    ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಕ್ಕೆ ಪಡೆದಿದ್ದಾರೆ. ಅಲ್ಲಿ ಹಿಂಸಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಇಡೀ ವಿಶ್ವ ಮರುಕ ವ್ಯಕ್ತಪಡಿಸುತ್ತಿದೆ. ಈ ವಿಚಾರ ಭಾರತದಲ್ಲೂ ಚರ್ಚೆ ಆಗುತ್ತಿದೆ. ಇದರ ಜೊತೆಗೆ ಹಿಂದೂ ಉಗ್ರರು ಎನ್ನುವ ವಿಚಾರ ಕೂಡ ಚರ್ಚೆಗೆ ಬಂದಿದೆ. ಆರ್‍ಎಸ್‍ಎಸ್ ಸಂಘಟನೆಗೆ ಸೇರಿದವರು ಬೇರೆ ಧರ್ಮದವರ ಮೇಲೆ ಹಿಂಸಾಚಾರ ನಡೆಸುತ್ತಿದ್ದಾರೆ. ಹೀಗಾಗಿ ಭಾರತದಲ್ಲಿ ಹಿಂದೂ ಟೆರರ್ ಇದೆ. ತಾಲಿಬಾನಿಗಳಿಗೂ ಹಿಂದೂ ಟೆರರಿಸಮ್‍ಗೂ ಹೆಚ್ಚು ವ್ಯತ್ಯಾಸವಿಲ್ಲ ಎಂಬಿತ್ಯಾದಿ ವಿಚಾರ ಮುನ್ನೆಲೆಗೆ ಬಂದಿತ್ತು. ಈ ಬಗ್ಗೆ ಅನೇಕ ಟ್ವೀಟ್‍ಗಳನ್ನು ಕೂಡ ಮಾಡಲಾಗಿದೆ. ಈ ವಿಚಾರವಾಗಿ ಪ್ರಣಿತಾ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ:  ತಾಲಿಬಾನಿಗಳಿಗಿಂತ ಭಾರತದಲ್ಲಿರೋ ಅವರ ಬೆಂಬಲಿಗರು ಬಹಳ ಡೇಂಜರ್: ಸೂಲಿಬೆಲೆ

    ಟ್ವೀಟ್‍ನಲ್ಲಿ ಏನಿದೆ?
    ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವುದನ್ನು ಮರೆ ಮಾಚಿ ತಮ್ಮನ್ನು ಸಮರ್ಥಿಸಿಕೊಳ್ಳುವುದಕ್ಕಾಗಿ ಕೆಲವರು ಹಿಂದೂ ಟೆರರ್ ಪದ ಬಳಸುತ್ತಿದ್ದಾರೆ. ಪರಿಕಲ್ಪನೆಯನ್ನು ನ್ಯಾಯಸಮ್ಮತಗೊಳಿಸುವ ಪ್ರಯತ್ನಗಳು ಅವರ ಕಲ್ಪನೆಯಾಗಿಯೇ ಉಳಿಯುತ್ತದೆ. ಭಾರತೀಯರೇ ಎಚ್ಚರ, ಶತ್ರುಗಳು ನಮ್ಮ ಗಡಿಯಾಚೆ ಇರುವುದಿಲ್ಲ, ಅವರು ನಿಮ್ಮ ಸುತ್ತಲೂ ಇದ್ದಾರೆ ಎಂದು ಬರೆದುಕೊಂಡಿದ್ದಾರೆ.

    ಈ ಟ್ವೀಟ್ ನೋಡಿದ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನೀವು ಪ್ರೌಡ್ ಹಿಂದೂ. ನಿಮ್ಮ ಬಗ್ಗೆ ನಮಗೆ ನಿಜಕ್ಕೂ ಹೆಮ್ಮೆ ಆಗುತ್ತಿದೆ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ. ಸದ್ಯ, ಈ ಟ್ವೀಟ್ ಸಾಕಷ್ಟು ವೈರಲ್ ಆಗುತ್ತಿದೆ.

  • ಚಿರು, ಸುಶಾಂತ್ ನೆನಪಿನಲ್ಲಿ ಮಾನವೀಯತೆ ಮೆರೆದ ಪ್ರಣಿತಾ

    ಚಿರು, ಸುಶಾಂತ್ ನೆನಪಿನಲ್ಲಿ ಮಾನವೀಯತೆ ಮೆರೆದ ಪ್ರಣಿತಾ

    ಬೆಂಗಳೂರು: ನಟ ಚಿರಂಜೀವಿ ಸರ್ಜಾ ಮತ್ತು ಬಾಲಿವುಡ್ ಸುಶಾಂತ್ ಸಿಂಗ್ ರಜಪೂತ್ ನೆನಪಿನಲ್ಲಿ ನಟಿ ಪ್ರಣಿತಾ ಬಡವರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ನಟಿ ಪ್ರಣಿತಾ ಸುಭಾಷ್ ಕೊರೊನಾ ಲಾಕ್‍ಡೌನ್ ಸಮಯದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಆಹಾರ ಪದಾರ್ಥಗಳು, ರೇಷನ್ ಮುಂತಾದವುಗಳನ್ನು ವಿತರಿಸುವ ಮೂಲಕ ಸಹಾಯ ಹಸ್ತ ಚಾಚಿದ್ದರು. ಇದೀಗ ಮತ್ತೆ ನೂರಾರು ಬಡ ಮಹಿಳೆಯರಿಗೆ, ಲೈಂಗಿಕ ಕಾರ್ಯಕರ್ತೆಯರಿಗೆ ಚಿರಂಜೀವಿ ಸರ್ಜಾ ಮತ್ತು ಸುಶಾಂತ್ ಸಿಂಗ್ ರಜಪೂತ್ ಹೆಸರಿನಲ್ಲಿ ರೇಷನ್ ಕಿಟ್ ಹಂಚಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ನಟಿ “ದೇವರಿಗೆ ಹತ್ತಿರವಾಗಿರುವ ಚಿರಂಜೀವಿ ಸರ್ಜಾ ಮತ್ತು ಸುಶಾಂತ್ ಸಿಂಗ್ ರಜಪೂತ್ ನೆನಪಲ್ಲಿ ನಾವು ಕಷ್ಟದಲ್ಲಿರುವವರಿಗೆ, ಲೈಂಗಿಕ ಕಾರ್ಯಕರ್ತೆಯರಿಗೆ 150ಕ್ಕೂ ಹೆಚ್ಚು ರೇಷನ್ ಕಿಟ್‍ಗಳು ಮತ್ತು ಸ್ಯಾನಿಟರಿ ಪ್ಯಾಡ್‍ಗಳನ್ನು ಹಂಚಿದ್ದೇವೆ” ಎಂದು ಪ್ರಣಿತಾ ತಿಳಿಸಿದ್ದಾರೆ.

    ಅಲ್ಲದೇ ತಮಗೆ ಪ್ರೇರಣೆಯಾದ ವ್ಯಕ್ತಿಯ ಬಗ್ಗೆಯೂ ತಿಳಿಸಿದ್ದಾರೆ. ಸುಧಾ ಮೂರ್ತಿ ಅವರು ಸದಾ ಸಮಾಜದಲ್ಲಿ ಸಂಕಷ್ಟದಲ್ಲಿರುವ ಮಹಿಳೆಯರಿಗೆ ನೆರವಾಗುತ್ತಾರೆ. ಹೀಗಾಗಿ ಸುಧಾ ಮೂರ್ತಿ ಅವರೇ ನನಗೆ ಪ್ರೇರಣೆ. ಅವರ ಮಾರ್ಗದಲ್ಲೇ ಕೆಲ ಸಮಾಜಮುಖಿ ಕಾರ್ಯಗಳನ್ನು ಮಾಡಲು ಇಷ್ಟ ಪಡುತ್ತೇನೆ ಎಂದು ತಿಳಿಸಿದ್ದಾರೆ.

    ಭಾರತೀಯ ಚಿತ್ರರಂಗದ ಇಬ್ಬರು ಜನಪ್ರಿಯರು ತಾರೆಯರು ಅಗಲಿದ್ದಾರೆ. ಜೂನ್ 7 ರಂದು ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಜೂನ್ 14 ರಂದು ತಮ್ಮ ಅಪಾರ್ಟ್ ಮೆಂಟ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಫೌಂಡೇಷನ್ ಮೂಲಕ ನಟಿ ಪ್ರಣಿತಾ ನೂರಾರು ಬಡ ಮಹಿಳೆಯರಿಗೆ, ಲೈಂಗಿಕ ಕಾರ್ಯಕರ್ತೆಯರಿಗೆ ಚಿರಂಜೀವಿ ಸರ್ಜಾ ಮತ್ತು ಸುಶಾಂತ್ ಸಿಂಗ್ ರಜಪೂತ್ ಹೆಸರಿನಲ್ಲಿ ರೇಷನ್ ಕಿಟ್ ಹಂಚಿದ್ದಾರೆ.

    ನಟಿ ಪ್ರಣಿತಾ ಲಾಕ್‍ಡೌನ್ ಜಾರಿಯಾದಾಗಿನಿಂದಲೂ ಬಡವರಿಗೆ, ಕಷ್ಟದಲ್ಲಿರುವವರಿಗೆ, ಸಹಾಯ ಮಾಡುತ್ತಲೇ ಬಂದಿದ್ದಾರೆ. ಜನ ಸಾಮಾನ್ಯರಿಗೆ ಮಾತ್ರವಲ್ಲದೇ ಪೊಲೀಸ್ ಸಿಬ್ಬಂದಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ನೀಡಿದ್ದರು.

  • ಸ್ಲಂ ನಿವಾಸಿಗಳಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಿ ಹುಟ್ಟುಹಬ್ಬ ಆಚರಿಸಿದ ಪ್ರಣಿತಾ

    ಸ್ಲಂ ನಿವಾಸಿಗಳಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಿ ಹುಟ್ಟುಹಬ್ಬ ಆಚರಿಸಿದ ಪ್ರಣಿತಾ

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಪ್ರಣಿತಾ ಸುಭಾಷ್ ಇಂದು ತಮ್ಮ 28ನೇ ವರ್ಷದ ಹುಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಗರದ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ.

    ಪ್ರಣಿತಾ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಹುಟ್ಟುಹಬ್ಬದಂದು ಪ್ರಣಿತಾ ಸರ್ಕಾರಿ ಶಾಲೆ ದತ್ತು ಪಡೆದುಕೊಂಡು, 5 ಲಕ್ಷ ರೂ. ಹಣವನ್ನು ನೀಡಿದ್ದರು. ಈ ಬಾರಿ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ.

    ಪ್ರಣಿತಾ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಲು ‘ಪ್ರಣಿತಾ ಫೌಂಡೇಶನ್ ಸಂಸ್ಥೆ’ ಆರಂಭಿಸಿದ್ದಾರೆ. ಈ ಸಂಸ್ಥೆಯಿಂದ ಮೊದಲ ಬಾರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯವನ್ನು ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ತಂಡ ಮೊದಲ ಬಾರಿಗೆ ಸ್ವತಂತ್ರವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದೆ. ತಂಡದ ಎಲ್ಲಾ ಸದಸ್ಯರಿಗೆ ಧನ್ಯವಾದ. ಇಂತಹ ಕಾರ್ಯಗಳು ಮತ್ತಷ್ಟು ಮಾಡುವ ಆಸೆ ಇದೆ ಎಂದು ತಿಳಿಸಿದರು.

    ಪ್ರಣಿತಾ ಫೌಂಡೇಶನ್ ಸಂಸ್ಥೆ ಕೈಗೊಳ್ಳುವ ಎಲ್ಲಾ ಸಾಮಾಜಿಕ ಕಾರ್ಯಗಳ ಮಾಹಿತಿ ಒಳಗೊಂಡ www.pranithafoundation.org ವೆಬ್ ಸೈಟ್ ಕೂಡ ಬಿಡುಗಡೆ ಮಾಡಿದ್ದಾರೆ. ಇವರೊಂದಿಗೆ ಕೈಜೋಡಿಸಲು ಇಷ್ಟಪಡುವವರು ವೆಬ್ ಸೈಟ್ ಮೂಲಕ ಸಂಪರ್ಕಿಬಹುದು.

    ದರ್ಶನ್ ಅಭಿನಯದ ‘ಪೊರ್ಕಿ’ ಸಿನಿಮಾದ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ್ದ ಪ್ರಣಿತಾ ಆ ಬಳಿಕ ಜರಾಸಂಧ, ಸ್ನೇಹಿತರು, ಬ್ರಹ್ಮ, ಸೆಕೆಂಡ್ ಹ್ಯಾಡ್ ಲವರ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಪ್ರಣಿತಾ ಬಾಲಿವುಡ್‍ಗೂ ಎಂಟ್ರಿ ನೀಡಿದ್ದು, ಅಜಯ್ ದೇವಗನ್ ಅಭಿನಯದ `ಭುಜ್: ದಿ ಪ್ರೈಡ್ ಆಫ್ ಇಂಡಿಯಾ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅಂದಹಾಗೇ 2017ರಲ್ಲಿ ಬಿಡುಗಡೆಯಾಗಿದ್ದ `ಮಾಸ್ ಲೀಡರ್’ ಪ್ರಣಿತಾರ ಕೊನೆಯ ಕನ್ನಡ ಸಿನಿಮಾ ಆಗಿದೆ. ಕನ್ನಡಕ್ಕಿಂತಲೂ ಹೆಚ್ಚು ಬೇರೆ ಬೇರೆ ಭಾಷೆಗಳಲ್ಲಿ ನಟಿಸಿರುವ ಅವರು ಕರ್ನಾಟಕದ ಜನರ ಬಗ್ಗೆ ಇರುವ ಸಾಮಾಜಿಕ ಕಳಕಳಿಯನ್ನು ಮಾತ್ರ ಮರೆತಿಲ್ಲ.