Tag: ಪ್ರತಾಪಸಿಂಹ

  • ಮಂಡ್ಯದಲ್ಲಿ ಸ್ಟಾರ್ಟ್ ಆಗುತ್ತಾ ಮತ್ತೊಂದು ಟೆರಿಟೋರಿ ವಾರ್?

    ಮಂಡ್ಯದಲ್ಲಿ ಸ್ಟಾರ್ಟ್ ಆಗುತ್ತಾ ಮತ್ತೊಂದು ಟೆರಿಟೋರಿ ವಾರ್?

    ಮಂಡ್ಯ: ಜಿಲ್ಲೆ ವ್ಯಾಪ್ತಿಯಲ್ಲಿ ಮಳೆಯಿಂದ ಮುಳುಗಡೆಯಾದ ಪ್ರದೇಶಗಳಿಗೆ ಮೈಸೂರು-ಕೊಡಗು ಸಂಸದ ಪ್ರತಾಪಸಿಂಹ ಭೇಟಿ ಕೊಟ್ಟಿದ್ದು, ಮಂಡ್ಯದಲ್ಲಿ ಮತ್ತೆ ಟೆರಿಟೋರಿ ವಾರ್ ಶುರುವಾಗುವ ಸೂಚನೆ ಕೊಟ್ಟಿದೆ.

    ಮೈಸೂರು ಮತ್ತು ಮಂಡ್ಯ ಸಂಸದರ ನಡುವೆ ಟೆರಿಟೋರಿ ವಾರ್ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಮಂಡ್ಯ ವ್ಯಾಪ್ತಿಯ ಪ್ರದೇಶಕ್ಕೆ ಮೈಸೂರು ಸಂಸದ ಪ್ರತಾಪಸಿಂಹ ಭೇಟಿ ನೀಡಿರುವುದು ಮತ್ತೆ ಮಂಡ್ಯ ಸಂಸದರ ಅಸಮಾಧಾನಕ್ಕೆ ಕಾರಣವಾಗಲಿದೆ. ಇದನ್ನೂ ಓದಿ: ಶಾಲಾ ಪಠ್ಯದಲ್ಲಿ ಕೆಂಪೇಗೌಡ, ಸಿದ್ದರೂಢ ಜಾತ್ರೆ – ಮೋದಿ `ವೋಕಲ್ ಫಾರ್ ಲೋಕಲ್’ ಮಂತ್ರವೂ ಸೇರ್ಪಡೆ

    ಮಳೆಯಿಂದ ಮುಳುಗಡೆಯಾಗಿದ್ದ ಬೀಡಿ ಕಾಲೋನಿಗೆ ಪ್ರತಾಪಸಿಂಹ ಭೇಟಿ ನೀಡಿದರು. ಈ ವೇಳೆ ಮಳೆಯಿಂದ ಹದಗೆಟ್ಟಿರುವ ರಸ್ತೆಯನ್ನು ಸರಿಪಡಿಸಿಕೊಡುವಂತೆ ಸ್ಥಳೀಯರು ಮನವಿ ಮಾಡಿಕೊಂಡಿದ್ದರು. ಇಂಡುವಾಳ ಸಮೀಪ ಕೊಚ್ಚಿಹೋಗಿದ್ದ ಹೆದ್ದಾರಿ ಬಳಿಗೂ ಪ್ರತಾಪಸಿಂಹ ಭೇಟಿ ನೀಡಿ ಪರಿಶೀಲಿಸಿದರು.

    ಈ ಹಿಂದೆಯೂ ಪ್ರತಾಪಸಿಂಹಗೆ ನಿಮ್ಮ ಕ್ಷೇತ್ರದ ಕೆಲಸ ಮಾಡಿಕೊಳ್ಳಿ. ನಮ್ಮ ಕ್ಷೇತ್ರದ ಕೆಲಸ ನಾವು ಮಾಡಿಕೊಳ್ಳುತ್ತೇವೆ ಎಂದು ಮಂಡ್ಯ ಸಂಸದೆ ಸುಮಲತಾ ತರಾಟೆಗೆ ತೆಗೆದುಕೊಂಡಿದ್ದರು. ಇದಾದ ಬಳಿಕ ಒಂದು ವಾರಗಳ ಕಾಲ ಮೈಸೂರು ಸಂಸದ ಹಾಗೂ ಮಂಡ್ಯ ಸಂಸದರ ನಡುವೆ ವಾಕ್ ಸಮರ ಏರ್ಪಟ್ಟಿತು. ಇದೀಗ ಮತ್ತೆ ಪ್ರತಾಪಸಿಂಹ ಮಂಡ್ಯದ ವಿಚಾರಗಳಿಗೆ ಎಂಟ್ರಿ ಕೊಟ್ಟಿದ್ದಾರೆ. ಇದನ್ನೂ ಓದಿ: ಜನರಲ್ ಟಿಕೆಟ್‍ಗಾಗಿ ರೈಲು ಪ್ರಯಾಣಿಕರ ನೂಕಾಟ

    ಈ ಎಂಟ್ರಿಯಿಂದ ಮೂಲಕ ಮತ್ತಷ್ಟು ವಾಕ್ ಸಮರ ಏರ್ಪಡುವ ಸಾಧ್ಯತೆ ಇದೆ. ಇತ್ತ ಹೆಚ್ಚು ಮಳೆಹಾನಿಯಾಗಿರುವ ಪ್ರದೇಶಗಳಿಗೆ ಇದುವರೆಗೂ ಸಂಸದೆ ಸುಮಲತಾ ಭೇಟಿ ನೀಡಿಲ್ಲ. ಕೇವಲ ಒಂದು ಊರಿಗೆ ಹೋಗಿ ವಾಪಸ್ ತೆರಳಿದ್ದರು.

  • ರೇಣುಕಾಚಾರ್ಯ, ಪ್ರತಾಪ್ ಸಿಂಹ ವಿರುದ್ಧದ 4 ಕೇಸ್‌ ವಾಪಸ್‌ ಪಡೆದ ಸರ್ಕಾರ- ಹೈಕೋರ್ಟ್‌ ಗರಂ

    ರೇಣುಕಾಚಾರ್ಯ, ಪ್ರತಾಪ್ ಸಿಂಹ ವಿರುದ್ಧದ 4 ಕೇಸ್‌ ವಾಪಸ್‌ ಪಡೆದ ಸರ್ಕಾರ- ಹೈಕೋರ್ಟ್‌ ಗರಂ

    ಬೆಂಗಳೂರು: ಬಿಜೆಪಿಯ ಇಬ್ಬರು ಜನಪ್ರತಿನಿಧಿಗಳ ವಿರುದ್ಧದ ನಾಲ್ಕು ಪ್ರಕರಣಗಳನ್ನು ಹಿಂಪಡೆದಿರುವುದಾಗಿ ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

    2020ರ ಸೆಪ್ಟೆಂಬರ್ 16ರ ನಂತರ ಬಿಜೆಪಿಯ ಇಬ್ಬರು ಜನಪ್ರತಿನಿಧಿಗಳ ನಾಲ್ಕು ಕೇಸ್‌ಗಳನ್ನು ಹಿಂಪಡೆದಿರುವುದಾಗಿ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಸಂಸದ ಪ್ರತಾಪಸಿಂಹ ವಿರುದ್ಧದ ಒಂದು ಕೇಸ್, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ವಿರುದ್ಧದ ಮೂರು ಪ್ರಕರಣಗಳನ್ನು ವಾಪಸ್ ಪಡೆದಿರುವುದಾಗಿ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ನೀರು ಕುಡಿಯೋಕೆ ಹೊರಟ ಅಶೋಕ್ ಕಾಲೆಳೆದ ಸಿದ್ದರಾಮಯ್ಯ, ಯಡಿಯೂರಪ್ಪ..!

    ಇದಕ್ಕೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ಕೃಷ್ಣಕುಮಾರ್ ಅವರಿದ್ದ ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಹೈಕೋರ್ಟ್ ಸಮ್ಮತಿಯಿಲ್ಲದೇ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವಂತಿಲ್ಲ ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಹೀಗಿದ್ದೂ ಹೇಗೆ ವಾಪಸ್ ಪಡೆದಿರಿ ಎಂದು ಪ್ರಶ್ನಿಸಿದೆ.

    ವಾಪಸ್ ಪಡೆದ ಪ್ರಕರಣಗಳ ಸಂಬಂಧ ವರದಿ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.‌ ಈ ಮಧ್ಯೆ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಅಂಕೋಲಾ ಕೋರ್ಟ್‌ಗೆ ಹಾಜರಾದ ಸಚಿವ ಆನಂದ ಸಿಂಗ್, ಮಾಜಿ ಸಚಿವ ಜನಾರ್ಧನ ರೆಡ್ಡಿ, ಶಾಸಕ ನಾಗೇಂದ್ರ ಸೇರಿ ಏಳು ಜನ ಜಾಮೀನು ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಸಿಎಂ ಆಗಿದ್ದಕ್ಕೆ ಬಿಜೆಪಿ ನಾಯಕರ ಕಾಲೆಳೆದ ಸಿದ್ದರಾಮಯ್ಯ

  • ಸೋನಿಯಾ ಮಗಳು, ಉಪೇಂದ್ರ ಪತ್ನಿ ಹೆಸರು ಪ್ರಿಯಾಂಕಾ ಆದ್ರೆ ಖರ್ಗೆ ಪುತ್ರ ಯಾವ ಪ್ರಿಯಾಂಕ: ಪ್ರತಾಪಸಿಂಹ ಪ್ರಶ್ನೆ

    ಸೋನಿಯಾ ಮಗಳು, ಉಪೇಂದ್ರ ಪತ್ನಿ ಹೆಸರು ಪ್ರಿಯಾಂಕಾ ಆದ್ರೆ ಖರ್ಗೆ ಪುತ್ರ ಯಾವ ಪ್ರಿಯಾಂಕ: ಪ್ರತಾಪಸಿಂಹ ಪ್ರಶ್ನೆ

    ಕೊಪ್ಪಳ: ಅಲ್ಲಿ ಸೋನಿಯಾ ಗಾಂಧಿ ಮಗಳ ಹೆಸರು ಪ್ರಿಯಾಂಕಾ, ಇಲ್ಲಿ ನಟ ಉಪೇಂದ್ರ ಪತ್ನಿ ಹೆಸರು ಪ್ರಿಯಾಂಕಾ ಆದರೆ ಖರ್ಗೆ ಮಗ ಯಾವ ಪ್ರಿಯಾಂಕ ಎಂದು ಸಂಸದ ಪ್ರತಾಪಸಿಂಹ ಪ್ರಶ್ನಿಸಿದ್ದಾರೆ.

    ನಗರದ ಜನ ಸ್ವರಾಜ್‌ ಸಮಾವೇಶದಲ್ಲಿ ಮಾತನಾಡಿದ ಅವರು, ಅಲ್ಲಿ ಸೋನಿಯಾ ಮಗಳು ಪ್ರಿಯಾಂಕಾ, ಇಲ್ಲಿ ಉಪೇಂದ್ರ ಪತ್ನಿ ಪ್ರಿಯಾಂಕ ನಿಮ್ಮಲ್ಲೇ ಪ್ರಿಯಾಂಕಾ ಎಂದು ಕರೆದರೆ ಮಹಿಳೆಯರೇ ತಿರುಗಿ ನೋಡುತ್ತಾರೆ ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಹೆಸರಿನ ಕುರಿತು ಮತ್ತೆ ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಭಾರೀ ಮಳೆ- ಬೆಂಗಳೂರು ಸೇರಿ 6 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ, ಅಲರ್ಟ್‌ ಆಗಿರಲು 13 ಜಿಲ್ಲೆಗಳಿಗೆ ಸೂಚನೆ

    ಪ್ರಿಯಾಂಕ್ ಖರ್ಗೆ ಹೆಸರಿನಲ್ಲೇ ದಾಸ್ಯ ಇದೆ. ನೀವು ಸೋನಿಯಾ ಮಗಳ ಹೆಸರು ಇಟ್ಟುಕೊಂಡಿದ್ದೀರಿ. ಶೋಷಿತ ವರ್ಗದ ನೀವು ರಾಜ್ಯಾದ್ಯಂತ ಬಂಗಲೆ ಹೊಂದಿದ್ದೀರಿ. ನೀವು ಬಿಟ್ ಕಾಯಿನ್ ಬಗ್ಗೆ ಕೇಳುತ್ತೀರಿ ಆದರೆ ಚುನಾವಣೆ ಆಯೋಗಕ್ಕೆ ಸಾಕಷ್ಟು ಮನೆ ಇರುವ ಮಾಹಿತಿಯನ್ನೇ ನೀಡಿಲ್ಲ. ರೆಫೇಲ್‌ನಲ್ಲಿ ತಾಯಿ-ಮಗ ಹಗರಣ ಮಾಡಿದ್ದಾರೆ ಅಂತಾ ಗೊತ್ತಾಯಿತು. ಅದಕ್ಕೆ ಈಗ ಬಿಟ್ ಕಾಯಿನ್ ಹಿಡಿದುಕೊಂಡಿದ್ದಾರೆ. ಬಿಜೆಪಿ ಆರ್‌ಎಸ್‌ಎಸ್‌ಗೆ ಜನಿಸಿದೆ. ಅದರ ಸಿದ್ಧಾಂತರ ಅಡಿಯಲ್ಲೇ ಕೆಲಸ ಮಾಡುತ್ತಿದೆ. ಆದರೆ ಕಾಂಗ್ರೆಸ್ ಹುಟ್ಟಿರುವುದು ಬ್ರಿಟಿಷರಿಗೆ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಬಟ್ಟೆ ಬಿಚ್ಚಿ ತಿರುಗುವವರಿಗೇನ್‌ ಗೊತ್ತು ಗಾಂಧಿ ಮೌಲ್ಯ: ಕಂಗನಾ ವಿರುದ್ಧ ರಮೇಶ್‌ ಕುಮಾರ್‌ ಕಿಡಿ

    ನಮ್ಮ ಕ್ಯಾಪ್ಟನ್ ಬಸವರಾಜ ಬೊಮ್ಮಾಯಿ ಆದರೆ ಕಾಂಗ್ರೆಸ್‌ನ ಕ್ಯಾಪ್ಟರ್ ಯಾರು? ಸಿದ್ದರಾಮಯ್ಯ ಅವರದ್ದು ಒಂದು ಟೀಮ್, ಡಿಕೆಶಿ ಅವರದ್ದು ಮತ್ತೊಂದು ಟೀಮ್. ಸಿದ್ದರಾಮಯ್ಯ ಅವರಿಗೆ ಗೌರಿಪಾಳ್ಯದ ನ್ಯಾಷನಲ್ ಟ್ರಾವೆಲ್ ವೈಸ್ ಕ್ಯಾಪ್ಟನ್‌, ಡಿಕೆಶಿಗೆ ಫರ್ಜಿ ಕೆಫೆಯ ಪುಂಡ ವೈಸ್ ಕ್ಯಾಪ್ಟನ್. ಇವರಿಗೆ ಅಧಿಕಾರ ಕೊಟ್ಟರೆ ಕರ್ನಾಟಕದಲ್ಲಿ ಕನ್ನಡಿಗರ ಸರ್ಕಾರ ಬರುವುದಿಲ್ಲ, ತಾಲೀಬಾನ್ ಸರ್ಕಾರ ಬರುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    priyank kharge

    ಬಿಟ್‌ ಕಾಯಿನ್‌ ಹಗರಣದ ವಿಚಾರವಾಗಿ ಬಿಜೆಪಿ ವಿರುದ್ಧ ಶಾಸಕ ಪ್ರಿಯಾಂಕ್‌ ಖರ್ಗೆ ಗಂಭೀರ ಆರೋಪ ಮಾಡಿದ್ದ ವೇಳೆ ಪ್ರತಾಪಸಿಂಹ ಅವರನ್ನು ಪೇಪರ್‌ ಸಿಂಹ ಎಂದು ಲೇವಡಿ ಮಾಡಿದ್ದರು. ಇದಕ್ಕೆ ಪ್ರತಾಪಸಿಂಹ ತಿರುಗೇಟು ನೀಡಿ ಪ್ರಿಯಾಂಕ್‌ ಖರ್ಗೆ ಹೆಸರನ್ನು ಇಟ್ಟುಕೊಂಡು ವ್ಯಂಗ್ಯವಾಡಿದ್ದರು. ಈಗ ಮತ್ತೆ ಖರ್ಗೆ ಅವರ ವಿರುದ್ಧ ಕಾರ್ಯಕ್ರಮವೊಂದರಲ್ಲಿ ಹರಿಹಾಯ್ದಿದ್ದಾರೆ.

  • ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನಕ್ಕೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹೆಸರಿಡಿ: ಪ್ರತಾಪ್ ಸಿಂಹ

    ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನಕ್ಕೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹೆಸರಿಡಿ: ಪ್ರತಾಪ್ ಸಿಂಹ

    ಮೈಸೂರು: ಮೈಸೂರು-ಕೊಡಗು ವ್ಯಾಪ್ತಿಯ ನಾಗರಹೊಳೆ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನದ ಮರುನಾಮಕರಣಕ್ಕೆ ಪ್ರಸ್ತಾವನೆ ಹಿನ್ನೆಲೆಯಲ್ಲಿ ಫಿಲ್ಡ್ ಮಾರ್ಷಲ್ ಕಾರ್ಯಪ್ಪನವರ ಹೆಸರಿಡಿ ಎಂದು ಸಂಸದ ಪ್ರತಾಪ್ ಸಿಂಹ ಅರಣ್ಯ ಸಚಿವರಿಗೆ ಪತ್ರ ಬರೆದಿದ್ದಾರೆ.

    ರಾಜ್ಯ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿಗೆ ಮನವಿ ಪತ್ರ ನೀಡಿದ ಪ್ರತಾಪ್ ಸಿಂಹ, ರಾಷ್ಟ್ರೀಯ ಉದ್ಯಾನವನಕ್ಕೆ ಭಾರತೀಯ ಸೇನೆಯ ಮೊದಲ ಫೀಲ್ಡ್ ಮಾರ್ಷಲ್ ಜನರಲ್ ಕೆ. ಎಂ ಕಾರ್ಯಪ್ಪ ಹೆಸರಿಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ನಾಗರಹೊಳೆ ಅಭಯಾರಣ್ಯಕ್ಕೆ ರಾಜೀವ್ ಗಾಂಧಿ ಹೆಸರು ತೆಗೆದು, ಜನರಲ್ ಕಾರ್ಯಪ್ಪ ಹೆಸರಿಡಲಿ: ಅಪ್ಪಚ್ಚು ರಂಜನ್

    ಉದ್ಯಾನವನ ಮೈಸೂರು ಕೊಡಗು ಭಾಗಕ್ಕೆ ಸೇರಿದೆ. ಈ ಬಗ್ಗೆ ಈಗಾಗಲೇ ಆನ್‍ಲೈನ್ ಕ್ಯಾಂಪೇನ್ ಆರಂಭವಾಗಿದ್ದು, ಕೊಡಗಿನ ಜನಸಂಖ್ಯೆ ಬಹಳ ಕಡಮೆ ಇದ್ದರು, ಅದರಲ್ಲಿ ಬಹುತೇಕರು ಭಾರತೀಯ ಸೇನೆಯ ಸೇವೆಯಲ್ಲಿದ್ದಾರೆ. ಅವರಿಗೆ ಗೌರವ ಸಮರ್ಪಿಸಲು ಕಾರ್ಯಪ್ಪ ಅವರ ಹೆಸರು ಬಹಳ ಸೂಕ್ತ. ಅವರ ನಿಸ್ವಾರ್ಥ ಸೇವೆಗೆ ಗೌರವ ಕೊಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಕೊಡವ ಭಾಷೆಯಲ್ಲೇ ಫೀಲ್ಡ್ ಮಾರ್ಷಲ್ ಕಾರ್ಯಪ್ಪರನ್ನು ಸ್ಮರಿಸಿದ ರಾಷ್ಟ್ರಪತಿ

    ದೇಶದ ಹಲವು ಭಾಗದ ರಾಷ್ಟ್ರೀಯ ಉದ್ಯಾನವನಗಳಿಗೆ ನೆಹರು, ಗಾಂಧಿ ಕುಟುಂಬದ ಹೆಸರಿದೆ. ಇದರಿಂದ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ರಾಜೀವ್ ಗಾಂಧಿ ಹೆಸರು ಸೂಕ್ತವಲ್ಲ. ಕೊಡಗಿನ ಜನರು ಭಾರತೀಯ ಸೇನೆಯಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವುದನ್ನು ಗೌರವಿಸಿ ಅವರ ಭಾವನೆಗಳಿಗೆ ಪೂರಕವಾಗಿ ಉದ್ಯಾನವನಕ್ಕೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪನವರ ಹೆಸರು ಇಡಬೇಕೆಂದು ಮನವಿಯಲ್ಲಿ ವಿವರಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿಗಳಿಂದ ಜನರಲ್ ತಿಮ್ಮಯ್ಯ ಮ್ಯೂಸಿಯಂ ಲೋಕಾರ್ಪಣೆ