Tag: ಪ್ರತಿನಿಧಿ

  • EXCLUSIVE: ಬಿಬಿಎಂಪಿ ಕಸ ದಂಧೆ ಪಬ್ಲಿಕ್ ಟಿವಿ ಕ್ಯಾಮೆರಾದಲ್ಲಿ ಸೆರೆ

    EXCLUSIVE: ಬಿಬಿಎಂಪಿ ಕಸ ದಂಧೆ ಪಬ್ಲಿಕ್ ಟಿವಿ ಕ್ಯಾಮೆರಾದಲ್ಲಿ ಸೆರೆ

    ಬೆಂಗಳೂರು: ಬಿಬಿಎಂಪಿ ವತಿಯು ಕಸದ ಮೂಲಕ ಕಾಸು ಸಂಗ್ರಹಣೆ ಮಾಡುತ್ತಿರುವ ವಿಚಾರ ಪಬ್ಲಿಕ್ ಟಿವಿ ಕ್ಯಾಮೆರಾ ಮುಂದೆ ಬೆಳಕಿಗೆ ಬಂದಿದೆ.

    ಬಿಬಿಎಂಪಿ ಅಪಾರ್ಟ್ ಮೆಂಟ್ ಕಸ ತೆಗೆದುಕೊಂಡು ಹೋಗಲು ಒಬ್ಬೊಬ್ಬರಿಗೆ ಒಂದೊಂದು ರೇಟ್ ಫಿಕ್ಸ್ ಮಾಡುವ ಮೂಲಕ ಕಸದ ದಂಧೆ ನಡೆಸುತ್ತಿದೆ. ಕಸ ಹಾಕಲು ಹೋದವರಿಗೆ ಹಸಿ ,ಒಣ ಕಸ ಬೇರ್ಪಡಿಸಿ ಎಂದು ಹೇಳುತ್ತಾರೆ. ಆದರೆ ಹಣ ನೀಡುವವರಿಗೆ ಮಾತ್ರ ಕಸವನ್ನು ಮಿಕ್ಸ್ ಮಾಡಿ ಕೊಟ್ಟರು ಕೂಡ ಪರವಾಗಿಲ್ಲ ಎಂದು ಹೇಳುವ ಮೂಲಕ ಹಣ ಸಂಗ್ರಹಣೆ ಮಾಡುತ್ತಿದ್ದಾರೆ.

    ಘನತ್ಯಾಜ್ಯ ವಿಲೇವಾರಿ ನಿರ್ವಹಣೆ ಕಾಯ್ದೆ ಪ್ರಕಾರ ಬಲ್ಕ್ ಜನರೇಟರ್ ಕಸ ಸಂಗ್ರಹಿಸುವಂತಿಲ್ಲ. 100 ಕೆಜಿ ಗಿಂತ ಹೆಚ್ಚು ಕಸ ಬಿದ್ದರೆ ಅದು ವಾಣಿಜ್ಯ ಕಸ ಆಗುತ್ತದೆ. ಬಿಬಿಎಂಪಿ ವಸತಿ ಕಸಗಳನ್ನು ಮಾತ್ರ ಸಂಗ್ರಹ ಮಾಡಲಿದ್ದು, ಒಂದು ಮನೆಯ ಕಸ 10 ಕೆಜಿಗಿಂತ ಮೀರಬಾರದು. ಆದರೆ ಬೊಮ್ಮನಹಳ್ಳಿ, ಬೆಳ್ಳಂದೂರು ಸಮೀಪದ ಅಪಾರ್ಟ್ ಮೆಂಟ್‍ಗಳಲ್ಲಿ ನಿತ್ಯ 100 ಕೆಜಿಗೂ ಹೆಚ್ಚು ಕಸ ಸಂಗ್ರಹ ಮಾಡುವ ಮೂಲಕ ಕಸದ ದಂಧೆ ನಡೆಯುತ್ತಿದೆ. ಅಲ್ಲದೆ ಈ ಕಸವನ್ನು ನಗರದ ಹೊರವಲಯಗಳಿಗೆ ವಾಣಿಜ್ಯ ಕಸ ಸಂಗ್ರಹಣೆ ಮಾಡಲಾಗುತ್ತದೆ.

    ನಗರದ ಹೊರವಲಯ ಬೆಳ್ಳಂದೂರಿನ ಖಾಸಗಿ ಅಪಾರ್ಟ್‍ಮೆಂಟ್ ಹಿಂಬಾಗಿಲಿನಿಂದ ಕಸ ತೆಗೆದುಕೊಳ್ಳುತ್ತಾರೆ. ಅಲ್ಲದೆ ಬಿನ್ನಿಮಿಲ್ ಅಪಾರ್ಟ್‍ಮೆಂಟ್ ಕಸ ತೆಗೆದುಕೊಂಡು ಹೋಗಲು ಬಿಬಿಎಂಪಿ ಸಿಬ್ಬಂದಿ , ಪಬ್ಲಿಕ್ ಟಿವಿ ಪ್ರತಿನಿಧಿಯೊಂದಿಗೆ ರೇಟ್ ಫಿಕ್ಸ್ ಮಾಡುವ ಅಸಲಿ ಸತ್ಯ ಬಯಲಾಗಿದೆ.

    ಪ್ರತಿನಿಧಿ – ನಮ್ ಅಪಾರ್ಟ್ ಮೆಂಟ್ ಕಸ ತಗೊಳ್ಳಿ
    ಸಿಬ್ಬಂದಿ – ಯಾವ್ ಏರಿಯಾ
    ಪ್ರತಿನಿಧಿ – ಇಲ್ಲಿ 12 ನೇ ಕ್ರಾಸ್ ಸ್ಟಾರ್ ಬಿಲ್ಡಿಂಗ್
    ಸಿಬ್ಬಂದಿ – ಹೌದಾ , ಎಷ್ಟ್ ಅಪಾರ್ಟ್ ಮೆಂಟ್ ಇದೇ ಹೇಳಿ ರೇಟ್ ಫಿಕ್ಸ್ ಮಾಡ್ತಿವಿ
    ಪ್ರತಿನಿಧಿ – 120 ಪ್ಲಾರ್ಟ್ ಇದೆ ,100 ಕೆಜಿಗಿಂತ ಜಾಸ್ತಿ ಕಸ .. 4 ಆಟೋ ಬೇಕೆ ಬೇಕು
    ಸಿಬ್ಬಂದಿ – ಆಗಲಿ ತಿಂಗಳಿಗೆ 100 ರೂ ಒಂದೊಂದು ಮನೆಗೆ ಕೊಡಿಸಿ
    ಪ್ರತಿನಿಧಿ – 50 ಮಾಡಿಕೊಳ್ಳಿ
    ಸಿಬ್ಬಂದಿ – ಆಗಲಿ ಓಕೆ,ಇವತ್ತೆ ಕಸ ತೆಗೆಯಬೇಕಾ
    ಪ್ರತಿನಿಧಿ – ಸೋಮವಾರದಿಂದ ಕಸ ತೆಗೆಯಿರಿ
    ಸಿಬ್ಬಂದಿ – ಹಂಗ ಆಗಲಿ , ಹಸಿ ,ಒಣ ಕಸ ಬೇರೆ ಮಾಡಿ . ಪೊಲೀಸವ್ರೇ ಮಾಡ್ತಾರೆ
    ಪ್ರತಿನಿಧಿ – ಅಯ್ಯೊ ಮಾಡಲ್ಲ ಅಂತಾರೆ
    ಸಿಬ್ಬಂದಿ – ಹೋಗಲಿ ಒಂದೊಂದು ಕವರ್ ನಲ್ಲಂತೂ ಕಟ್ಟಿ ಹಾಕಿರಬೇಕು
    ಪ್ರತಿನಿಧಿ – ಸರಿ ,ಡ್ರಮ್ ಗೆ ತುಂಬಿಸಿ ಇಡ್ತಿವಿ

    ಗುತ್ತಿಗೆದಾರ ಕೆಲಸದವರ ಮೇಲೆ ಹೆಲ್ತ್ ಇನ್ಸ್ ಪೆಕ್ಟರ್ ಇದ್ದರೂ ಕೂಡ ಯಾವುದೇ ಕ್ರಮ ಕೈಗೊಳ್ಳದೇ ಇರುವುದರಿಂದ ಸಿಬ್ಬಂದಿ ಪುಡಿಗಾಸಿನ ಆಸೆಗಾಗಿ ಬಿಬಿಎಂಪಿ ನಿಯಮಗಳನ್ನು ಗಾಳಿಗೆ ತೂರಿ ಕಸದ ದಂಧೆಯ ಮೂಲಕ ಹಣ ಸಂಗ್ರಹಣೆ ಮಾಡುತ್ತಿದ್ದಾರೆ.

  • ನನ್ನ ಹೆಂಡ್ತಿ ನನಗೆ ಬೈತಾಳೆ, ಸಿಎಂ ಮಾಡಿದ್ದು ಅನ್ಯಾಯ, ಮೈಸೂರು, ರಾಮನಗರಗಳಿಗೆ ಮಾತ್ರ ಸೀರೆ ಯಾಕೆ?

    ನನ್ನ ಹೆಂಡ್ತಿ ನನಗೆ ಬೈತಾಳೆ, ಸಿಎಂ ಮಾಡಿದ್ದು ಅನ್ಯಾಯ, ಮೈಸೂರು, ರಾಮನಗರಗಳಿಗೆ ಮಾತ್ರ ಸೀರೆ ಯಾಕೆ?

    ಚಿಕ್ಕಬಳ್ಳಾಪುರ: “ಸರ್ ಗೌರಿ ಗಣೇಶ ಹಬ್ಬಕ್ಕೆ ಕಡಿಮೆ ರೇಟ್‍ಗೆ ರೇಷ್ಮೆ ಸೀರೆ ಕೊಡ್ತಾರಲ್ಲ. ಚಿಕ್ಕಬಳ್ಳಾಪುರದಲ್ಲಿ ಎಲ್ಲಿ ಕೊಡ್ತಾರೆ ಸರ್? ನನ್ನ ಹೆಂಡತಿ ಬಿಡ್ತಾ ಇಲ್ಲ ಸರ್ ಸೀರೆ ಬೇಕೇ ಬೇಕು ಅಂತ ತಲೆ ತಿಂತಾವಳೆ. ಕಡಿಮೆ ಬೆಲೆಗೆ ರೇಷ್ಮೆ ಸೀರೆ ನಮ್ಮ ಜಿಲ್ಲೆಗೂ ನೀಡಿದ್ದರೇ ಕುಮಾರಸ್ವಾಮಿ ಅವರಿಗೆ ಏನಾಗುತ್ತಿತ್ತು. ಇದು ಅನ್ಯಾಯ ಸರ್. ಮೈಸೂರಿಗೆ ಮಾತ್ರ ನೀಡಿ, ಚಿಕ್ಕಬಳ್ಳಾಪುರಕ್ಕೆ ನೀಡುತ್ತಿಲ್ಲ. ಇದರಿಂದ ಮನೆಯಲ್ಲಿ ರೇಷ್ಮೆ ಸೀರೆಗೆ ಡಿಮ್ಯಾಂಡ್ ಮಾಡುತ್ತಿದ್ದಾರೆ. ನನ್ನ ಹೆಂಡತಿ ನನಗೆ ಬೈತಾಳೆ” – ಇದು ಚಿಕ್ಕಬಳ್ಳಾಪುರ ಜಿಲ್ಲೆಯ ಪಬ್ಲಿಕ್ ಟಿವಿ ಪ್ರತಿನಿಧಿಗೆ ಬಂದ ಕರೆಯ ಸಂಭಾಷಣೆ.

    ಗೌರಿ ಹಬ್ಬದ ಅಂಗವಾಗಿ ರಾಜ್ಯ ಸರ್ಕಾರ ಕರ್ನಾಟಕ ಸಿಲ್ಕ್ ಇಂಡಸ್ಟ್ರಿಸ್ ಕಾರ್ಪೋರೇಷನ್ ಲಿಮಿಟೆಡ್ (ಕೆಎಸ್‍ಐಸಿ) ಮಹಿಳೆಯರಿಗೆ ಕಡಿಮೆ ರೇಷ್ಮೆ ಸೀರೆ ನೀಡುವ ಆಫರ್ ಪ್ರಕಟಿಸಿದೆ. ಆದರೆ ಚಿಕ್ಕಬಳ್ಳಾಪುರದಲ್ಲಿ ಸೀರೆ ನೀಡದ್ದಕ್ಕೆ ಮಹಿಳೆಯರು ಆಕ್ರೋಶಗೊಂಡಿದ್ದಾರೆ. ಮೈಸೂರು ಸೇರಿದಂತೆ ಕೆಲ ಜಿಲ್ಲೆಗಳ ಬಹುತೇಕ ಮಹಿಳೆಯರು ಬೆಲೆಬಾಳುವ ಸೀರೆಯನ್ನು ಕಡಿಮೆ ಬೆಲೆಗೆ ಲಕ್ಕಿ ಕೂಪನ್ ಮೂಲಕ ಪಡೆಯುತ್ತಿರುವುದು ಬಯಲು ಸೀಮೆ ಜಿಲ್ಲೆಯ ಮಹಿಳೆಯರಿಗೆ ಸಹಿಸಲಾಗುತ್ತಿಲ್ಲ.

    ಏನಿದು ಆಫರ್?
    ಗೌರಿ ಹಬ್ಬದ ಅಂಗವಾಗಿ ರಾಜ್ಯ ಸರ್ಕಾರ ಕರ್ನಾಟಕ ಸಿಲ್ಕ್ ಇಂಡಸ್ಟ್ರಿಸ್ ಕಾರ್ಪೋರೇಷನ್ ಲಿಮಿಟೆಡ್ (ಕೆಎಸ್‍ಐಸಿ) ವತಿಯಿಂದ ರಾಜ್ಯಾದ್ಯಂತ 14 ಸಾವಿರ ರೂ. ಬೆಲೆ ಬಾಳುವ 5 ಸಾವಿರ ಮೈಸೂರು ಸಿಲ್ಕ್ ಸೀರೆಗಳನ್ನು 4,725 ರೂ.ಗಳ ಬಂಪರ್ ರಿಯಾಯಿತಿ ದರದಲ್ಲಿ ನೀಡಿದೆ. ಲಕ್ಕಿ ಡಿಪ್ ಮುಖಾಂತರ ಫಲಾನುಭವಿಗಳನ್ನು ಆಯ್ಕೆ ಮಾಡುತ್ತಿದೆ. ಸೀರೆ ಅಗತ್ಯವಿರುವವರಿಂದ ಆಧಾರ್ ಕಾರ್ಡ್ ಪಡೆದು ಅವರ ಹೆಸರಿನ ಚೀಟಿಗಳನ್ನು ಲಕ್ಕಿ ಡಿಪ್ ಮುಖಾಂತರ ಆಯ್ಕೆ ಮಾಡಿದೆ. ಅಂತೆಯೇ ರಾಜ್ಯದ ಐದು ಕೇಂದ್ರಗಳಲ್ಲಿ ಸೀರೆ ಕೊಳ್ಳುವ ಮಹಿಳೆಯರಿಂದ ಆಧಾರ್ ಪಡೆದು ನೋಂದಣಿ ಕಾರ್ಯ ಆರಂಭಿಸಿ, ಸೀರೆ ವಿತರಿಸಲಾಗಿದೆ. ಆದರೆ ಈ ಕೇಂದ್ರ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಲ್ಲ.

    ಇಲಾಖಾಧಿಕಾರಿಗಳ ಮಾಹಿತಿ ಪ್ರಕಾರ ಬೆಂಗಳೂರು ಮತ್ತು ಮೈಸೂರು ಕೇಂದ್ರಗಳಲ್ಲಿ 3,000, ಚನ್ನಪಟ್ಟಣದಲ್ಲಿ 1,000, ದಾವಣಗೆರೆಯಲ್ಲಿ 500, ಬೆಳಗಾವಿಯಲ್ಲಿ 500 ಸೀರೆಗಳು ಸೇರಿ ಒಟ್ಟು 5 ಸಾವಿರ ಸೀರೆಗಳನ್ನು 5,000 ಮಂದಿ ಮಹಿಳೆಯರಿಗೆ ವಿತರಿಸಿದೆ. ಸೀರೆ ನಿಗದಿತ ಮೊತ್ತ 14 ಸಾವಿರ ರೂ. ಇದ್ದು, ಸರ್ಕಾರ ಅದನ್ನು 4,725 ರೂ.ಗೆ ರಿಯಾಯಿತಿಯಲ್ಲಿ ವಿತರಿಸಿದೆ. ಈ ಸೌಲಭ್ಯ ಹಲವು ಜಿಲ್ಲೆಗಳಿಗೆ ಸಿಗದಿರುವುದು ಪತಿರಾಯರ ಕಣ್ಣೀರ ಕತೆಗೆ ಕಾರಣವಾಗಿದೆ ಎಂದರೇ ನೀವು ನಂಬಲೇ ಬೇಕು.

    ಇನ್ನೂ 5 ಜಿಲ್ಲೆಗಳಲ್ಲ ಗೌರಿ ಹಬ್ಬದ ಕೊಡುಗೆಯಾಗಿ ಬೆಲೆ ಬಾಳುವ ಸೀರೆಯನ್ನು ಕಡಿಮೆ ಬೆಲೆಗೆ ಪಡೆದುಕೊಂಡಿರುವ ನಾರಿಮಣಿಯರ ಸುದ್ದಿ ಮೀಡಿಯಾಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾದ ಬಳಿಕ ಜಿಲ್ಲೆಯಲ್ಲಿನ ಮಹಿಳೆಯರ ಕಣ್ಣು ಕೆಂಪಾಗಿದೆ. ನನಗೆ 10 ಸಾವಿರದ ರೇಷ್ಮೆ ಸೀರೆಯೇ ಬೇಕು ಎಂದು ತಮ್ಮ ಗಂಡದಿರ ಜೀವ ಹಿಂಡುತ್ತಿದ್ದಾರೆ. ಈ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದರುವ ಪತಿರಾಯರು, ಸರ್ಕಾರ ಮೋಸ ಮಾಡುತ್ತಿದೆ. ನಮ್ಮನ್ನು ನಮ್ಮ ಹೆಂಡತಿ ಮೂಲಕ ಗೋಳು ಹೂಯ್ದುಕೊಳ್ಳುತ್ತಿದೆ. ಸರ್ಕಾರ ಸುಮ್ಮನಿರಬೇಕಿತ್ತು. ಎಲ್ಲ ಜಿಲ್ಲೆಗಳಲ್ಲಿಯೂ ಸೀರೆ ನೀಡಬೇಕಿತ್ತು ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಹಬ್ಬ-ಹರಿದಿನಗಳಲ್ಲಿ ಜೇಬು ಖಾಲಿ ಮಾಡಿಕೊಳ್ಳುತ್ತಿದ್ದ ಪುರುಷರು, ಇದೀಗ ತಮ್ಮ ಪತ್ನಿಯರಿಗೆ ಸೀರೆ ಕೊಡಿಸಲು ಸಾಲ ಮಾಡುವಂತಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv