Tag: ಪ್ರತಿಭಟನೆ

  • ಇವಿ ಬಿಎಂಟಿಸಿ ಬಸ್ಸು ಚಾಲಕರಿಂದ ದಿಢೀರ್‌ ಪ್ರತಿಭಟನೆ

    ಇವಿ ಬಿಎಂಟಿಸಿ ಬಸ್ಸು ಚಾಲಕರಿಂದ ದಿಢೀರ್‌ ಪ್ರತಿಭಟನೆ

    ಬೆಂಗಳೂರು: ಅಟೆಂಡೆನ್ಸ್ ಬೋನಸ್ ಹಾಗೂ ವೇತನ‌ಭತ್ಯೆಗೆ ಆಗ್ರಹಿಸಿ ಮೈಸೂರು ರಸ್ತೆಯ ದೀಪಾಂಜಲಿ ನಗರದಲ್ಲಿರುವ ಬಿಎಂಟಿಸಿ (BMTC) ಡಿಪೋದಲ್ಲಿ ಎಲೆಕ್ಟ್ರಿಕ್‌ ಬಸ್‌ ಚಾಲಕರು (Electric Bus Driver) ದಿಢೀರ್‌ ಪ್ರತಿಭಟನೆ (Protest) ನಡೆಸುತ್ತಿದ್ದಾರೆ.

    ಬಸ್ಸುಗಳನ್ನು ತೆಗೆಯದೇ ಡಿಪೋ ನಂಬರ್ 16ರ 100 ಕ್ಕೂ ಇವಿ ಬಸ್ಸುಗಳ ಚಾಲಕರ ಪ್ರತಿಭಟನೆ ನಡೆಸುತ್ತಿರುವ ಕಾರಣ ಸಂಚಾರದಲ್ಲಿ ವ್ಯತ್ಯಯವಾಗಿದೆ. ಇದನ್ನೂ ಓದಿ:  ಮಂಗಳೂರು | ಗೆಳತಿಯ ಬಟ್ಟೆ ಬದಲಿಸುವ ವಿಡಿಯೋ ಚಿತ್ರೀಕರಿಸಿ ಹಂಚಿಕೊಂಡಿದ್ದ ಯುವತಿ ಅರೆಸ್ಟ್‌

     

     

    ಕಳೆದ ಎರಡು ವರ್ಷಗಳಿಂದ ಅಟೆಂಡೆನ್ಸ್ ಬೋನಸ್, ವೇತನ ಭತ್ಯೆ ನೀಡುತ್ತಿಲ್ಲ. ಅಪಘಾತವಾದಾಗ ಸರಿಯಾಗಿ ಪ್ರತಿಕ್ರಿಯೆ ನೀಡುವುದಿಲ್ಲ. ಚಾಲಕರಿಗೆ ಭದ್ರತೆಯಿಲ್ಲ. ನಮ್ಮ ಬೇಡಿಕೆ ಈಡೇರುವವರೆಗೆ ಇವಿ ಬಸ್ ತೆಗೆಯುವುದಿಲ್ಲ ಎಂದು ಚಾಲಕರು ಪಟ್ಟು ಹಿಡಿದಿದ್ದಾರೆ.

    ಎಲೆಕ್ಟ್ರಿಕ್‌ ಬಸ್ಸು ಚಾಲಕರು ನೇರವಾಗಿ ಬಿಎಂಟಿಸಿ ವ್ಯಾಪ್ತಿಗೆ ಬರುವುದಿಲ್ಲ. ಇವರು ಗುತ್ತಿಗೆ ನೌಕರರಾಗಿದ್ದು ಖಾಸಗಿ ಸಂಸ್ಥೆ ನೇಮಕ ಮಾಡುತ್ತದೆ. ಈ ಸಂಸ್ಥೆ ಚಾಲಕರನ್ನು ನೇಮಕ ಮಾಡುವಾಗ ಯಾವ ರೀತಿ ಒಪ್ಪಂದ ಮಾಡಿಕೊಂಡಿರುತ್ತದೋ ಒಪ್ಪಂದಂತೆ ಸಂಬಳ, ಭತ್ಯೆಯನ್ನು ನೀಡಬೇಕಾಗುತ್ತದೆ.

     

  • ಡೈರಿಯಲ್ಲಿ ಅವ್ಯವಹಾರ ಆರೋಪ –  ಅಧ್ಯಕ್ಷೆ, ಕಾರ್ಯದರ್ಶಿ ಮನೆ ಮುಂದೆ ಹಾಲು ಸುರಿದು ಗ್ರಾಮಸ್ಥರ ಪ್ರತಿಭಟನೆ

    ಡೈರಿಯಲ್ಲಿ ಅವ್ಯವಹಾರ ಆರೋಪ –  ಅಧ್ಯಕ್ಷೆ, ಕಾರ್ಯದರ್ಶಿ ಮನೆ ಮುಂದೆ ಹಾಲು ಸುರಿದು ಗ್ರಾಮಸ್ಥರ ಪ್ರತಿಭಟನೆ

    ಮಂಡ್ಯ: ಹಾಲು ಉತ್ಪಾದಕರ (Milk Dairy) ಮಹಿಳಾ ಸಹಕಾರ ಸಂಘದಲ್ಲಿ ಅವ್ಯವಹಾರವಾಗಿದೆ ಎಂದು ಆರೋಪಿಸಿ ಡೈರಿ ಅಧ್ಯಕ್ಷೆ ಹಾಗೂ ಕಾರ್ಯದರ್ಶಿಯ ಮನೆಯ ಮುಂದೆ ಹಾಲು ಸುರಿದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

    ಮಂಡ್ಯ (Mandya) ಜಿಲ್ಲೆಯ ಕೆ.ಆರ್.ಪೇಟೆ (KR Pete) ತಾಲೂಕಿನ ಐಕನಹಳ್ಳಿಕೊಪ್ಪಲು ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರವಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಷೇರುದಾರರಿಗೆ ಹಾಗೂ ಹಾಲು ಉತ್ಪಾದಕರಿಗೆ ಅನ್ಯಾಯವಾಗುತ್ತಿದೆ. ಇದರ ಜೊತೆಗೆ ಸಂಘದ ಆರ್ಥಿಕ ಸ್ಥಿತಿಗೂ ಹೊಡೆತ ಬಿದ್ದಿದೆ. ಈ ಬಗ್ಗೆ ಕ್ರಮವಹಿಸಬೇಕೆಂದು ಇಲ್ಲಿನ ಗ್ರಾಮಸ್ಥರು ಹಲವು ತಿಂಗಳುಗಳಿಂದ ಆರೋಪ ಮಾಡುತ್ತಿದ್ದರು. ಆದರೂ ಈ ಬಗ್ಗೆ ಸೂಕ್ತ ಕ್ರಮವಾಗದ ಕಾರಣ ಗ್ರಾಮಸ್ಥರು ಅಧ್ಯಕ್ಷೆ ರಾಧಾ, ಕಾರ್ಯದರ್ಶಿ ಯಶೋಧಾ ಮನೆ ಮುಂದೆ ಹಾಲು ಸುರಿದು ಪ್ರತಿಭಟನೆ ಮಾಡಿದ್ದಾರೆ.ಇದನ್ನೂ ಓದಿ: ಯಾವುದೇ ಪಶ್ಚಾತ್ತಾಪವಿಲ್ಲ, ಕ್ಷಮೆ ಕೇಳಲ್ಲ, ಶೂ ಎಸೆಯಲು ದೇವರೇ ಪ್ರಚೋದಿಸಿದ್ದಾನೆ: ವಕೀಲ ರಾಕೇಶ್‌ ಕಿಶೋರ್‌

    ಸಂಘದಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆದು, ಭ್ರಷ್ಟಾಚಾರ ಮಾಡಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಜೊತೆಗೆ ಸಂಘದಿಂದ ದುರುಪಯೋಗವಾಗಿರುವ ಹಣವನ್ನು ಮತ್ತೆ ಸಂಘಕ್ಕೆ ಕೊಡಿಸುವ ಕೆಲಸವಾಗಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

  • ಬರೇಲಿಯ ‘ಐ ಲವ್ ಮುಹಮ್ಮದ್’ ಪ್ರತಿಭಟನೆಯಲ್ಲಿ ಹಿಂಸಾಚಾರ – ಮಾಸ್ಟರ್ ಮೈಂಡ್ ನದೀಮ್ ಅರೆಸ್ಟ್

    ಬರೇಲಿಯ ‘ಐ ಲವ್ ಮುಹಮ್ಮದ್’ ಪ್ರತಿಭಟನೆಯಲ್ಲಿ ಹಿಂಸಾಚಾರ – ಮಾಸ್ಟರ್ ಮೈಂಡ್ ನದೀಮ್ ಅರೆಸ್ಟ್

    ಲಕ್ನೋ: ಉತ್ತರ ಪ್ರದೇಶದ (Uttara Pradesh) ಬರೇಲಿಯಲ್ಲಿ ‘ಐ ಲವ್ ಮುಹಮ್ಮದ್’ ಪ್ರತಿಭಟನಾ ಮೆರವಣಿಗೆಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯ ಮಾಸ್ಟರ್ ಮೈಂಡ್ ನದೀಮ್‌ನನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

    ಇತ್ತೇಹಾದ್-ಎ-ಮಿಲ್ಲತ್ ಕೌನ್ಸಿಲ್ ಮುಖ್ಯಸ್ಥ ತೌಕೀರ್ ರಜಾ ಖಾನ್ ಅವರ ಆಪ್ತ ಸಹಾಯಕನಾಗಿರುವ ನದೀಮ್ ಘಟನೆ ಬಳಿಕ ತಲೆಮರಿಸಿಕೊಂಡಿದ್ದ. ಸದ್ಯ ಆತನನ್ನು ಶಹಜಹಾನ್‌ಪುರದಿಂದ ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ ವಾಟ್ಸಾಪ್ ಗ್ರೂಪ್ ರಚಿಸಿ ನದೀಮ್ ಹಿಂಸೆಗೆ ಪ್ರಚೋದನೆ ನೀಡಿದ್ದ ಎನ್ನಲಾಗಿದೆ. ಇದನ್ನೂ ಓದಿ: ‘ಐ ಲವ್ ಮುಹಮ್ಮದ್’ ಅಭಿಯಾನಕ್ಕೆ 5 ದಿನಗಳ ಪ್ಲ್ಯಾನಿಂಗ್ – ಯುಪಿ ಪೊಲೀಸರ ತನಿಖೆಯಲ್ಲಿ ಬಯಲು

    ಹಿಂಸಾಚಾರವನ್ನು ಪ್ರಚೋದನೆ ಮಾಡಿದ ಆರೋಪದ ಮೇಲೆ ಪೊಲೀಸರು ವಶಕ್ಕೆ ಪಡೆದಿರುವ 26 ಶಂಕಿತರನ್ನು ವಿಚಾರಣೆ ನಡೆಸುತ್ತಿದ್ದು, ಈಗಾಗಲೇ ಮೌಲಾನಾ ತೌಕೀರ್ ರಜಾ ಸೇರಿದಂತೆ ಒಟ್ಟು 34 ಆರೋಪಿಗಳನ್ನು ಬಂಧಿಸಿ, ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗಿದೆ.

    ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ 5, ಬರದಾರಿಯಲ್ಲಿ 2 ಮತ್ತು ಕಿಲಾ, ಕ್ಯಾಂಟ್ ಮತ್ತು ಪ್ರೇಮ್‌ನಗರ ಪೊಲೀಸ್ ಠಾಣೆಗಳಲ್ಲಿ ತಲಾ 1 ಎಫ್‌ಐಆರ್ ದಾಖಲಿಸಲಾಗಿದ್ದು, 125 ಜನರನ್ನು ಹೆಸರಿಸಲಾಗಿದೆ. ಜೊತೆಗೆ ಮೂರು ಸಾವಿರ ಅಪರಿಚಿತರನ್ನು ಸಹ ಆರೋಪಿಗಳೆಂದು ಹೆಸರಿಸಲಾಗಿದೆ. ಬಂಧಿತ ಆರೋಪಿಗಳು ನ್ಯಾಯಧೀಶರ ಮುಂದೆ ಕ್ಷಮೆಯಾಚಿಸಿದ್ದು, ಆರೋಪಿಗಳಲ್ಲಿ ಹೆಚ್ಚಿನವರು ಯುವಕರು. ಗಲಭೆಗೆ ಕಾರಣವೇನೆಂದು ಕೇಳಿದಾಗ, ಅವರು ದಾರಿ ತಪ್ಪಿದ್ದಾರೆ ಮತ್ತು ಮತ್ತೆಂದೂ ಹಾಗೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

    ನಗರದಲ್ಲಿ ನಿಷೇಧಾಜ್ಞೆ ಹೊರತಾಗಿಯೂ, ಏಳು ಪೊಲೀಸ್ ಠಾಣೆ ಪ್ರದೇಶಗಳ ಐದು ಕೌನ್ಸಿಲರ್‌ಗಳು ಸೇರಿದಂತೆ 77 ಜನರು, ಖಲೀಲ್ ಶಾಲಾ ಮುಂದೆ ಜನಸಮೂಹವನ್ನು ನಿರ್ದೇಶಿಸುವಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಸದ್ಯ ಒಬ್ಬ ಕೌನ್ಸಿಲರ್‌ನನ್ನು ಬಂಧಿಸಲಾಗಿದ್ದು, ನಾಲ್ವರು ಕೌನ್ಸಿಲರ್‌ಗಳು ಸೇರಿದಂತೆ 76 ಜನರ ಪಾತ್ರದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ‘ಐ ಲವ್ ಮುಹಮ್ಮದ್’ಗೆ ಟಕ್ಕರ್ – ಬಿಜೆಪಿ ಯುವ ಮೋರ್ಚಾದಿಂದ `ಐ ಲವ್ ಯೋಗಿ ಆದಿತ್ಯನಾಥ್’, `ಐ ಲವ್ ಬುಲ್ಡೋಜರ್’ ಕ್ಯಾಂಪೇನ್

  • ವಲಸೆ ವಿರೋಧಿಸಿ 1 ಲಕ್ಷಕ್ಕೂ ಅಧಿಕ ಜನರಿಂದ ಲಂಡನ್​ನಲ್ಲಿ ಮೆರವಣಿಗೆ – ಪ್ರತಿಭಟನೆ ಪೊಲೀಸರ ಮೇಲೆ ಹಲ್ಲೆ

    ವಲಸೆ ವಿರೋಧಿಸಿ 1 ಲಕ್ಷಕ್ಕೂ ಅಧಿಕ ಜನರಿಂದ ಲಂಡನ್​ನಲ್ಲಿ ಮೆರವಣಿಗೆ – ಪ್ರತಿಭಟನೆ ಪೊಲೀಸರ ಮೇಲೆ ಹಲ್ಲೆ

    – ಪೊಲೀಸರ ಮೇಲೆ ಹಲ್ಲೆ; 20ಕ್ಕೂ ಹೆಚ್ಚು ಪೊಲೀಸರಿಗೆ ಗಂಭೀರ ಗಾಯ
    – ಹಿಂಸಾಚಾರ ನಡೆಸಲೆಂದೇ ಕೆಲವರು ಹೊಂಚುಹಾಕಿದ್ದರು

    ಲಂಡನ್‌: ಯುನೈಟೆಡ್ ಕಿಂಗ್‌ಡಮ್ ಇತಿಹಾಸದಲ್ಲೇ ಅತಿದೊಡ್ಡ ಬಲಪಂಥೀಯ (ರೈಟ್-ವಿಂಗ್) ಪ್ರತಿಭಟನೆಗೆ ಶನಿವಾರ ಲಂಡನ್‌ ಸಾಕ್ಷಿಯಾಯಿತು. ಬಲಪಂಥೀಯ ಕಾರ್ಯಕರ್ತ ಟಾಮಿ ರಾಬಿನ್ಸನ್ (Tommy Robinson) ನೇತೃತ್ವದಲ್ಲಿ ನಡೆದ ಬೃಹತ್‌ ʻವಲಸೆ ವಿರೋಧಿʼ ಮೆರವಣಿಗೆಯಲ್ಲಿ ಸುಮಾರು 1,00,000ಕ್ಕೂ ಹೆಚ್ಚು ಪ್ರತಿಭಟನಾಕಾರರು (Protester) ಭಾಗವಹಿಸಿದ್ದರು. ಈ ವೇಳೆ ಹಲವಾರು ಪೊಲೀಸರ ಮೇಲೆಯೇ ಹಲ್ಲೆ ನಡೆಸಲಾಗಿದೆ ಎಂದು ವರದಿಗಳು ತಿಳಿಸಿವೆ.

    ಪ್ರತಿಭಟನಾಕಾರರನ್ನು ಚದುರಿಸುತ್ತಿದ್ದ ವೇಳೆ ಸಣ್ಣ ಗುಂಪೊಂದು ಪೊಲೀಸ್‌ ಅಧಿಕಾರಿಗಳೊಂದಿಗೆ ಘರ್ಷಣೆಗೆ ಇಳಿದಿದೆ. ಈ ವೇಳೆ ರ‍್ಯಾಲಿಯ ಅಂಚಿನಲ್ಲಿದ್ದ ಕೆಲವರು ಖಾಲಿ ಬಾಟಲಿಗಳನ್ನು ಪೊಲೀಸರ (London Cops) ಮೇಲೆ ಎಸೆದಿದ್ದಾರೆ. ಇದರಿಂದ ಕರ್ತವ್ಯದಲ್ಲಿದ್ದ 1,000ಕ್ಕೂ ಹೆಚ್ಚು ಪೊಲೀಸರ ಪೈಕಿ 26 ಮಂದಿ ಗಾಯಗೊಂಡಿದ್ದಾರೆ. ಕೆಲವರಿಗೆ ಹಲ್ಲು ಮುರಿದಿದೆ, ಮೂಗು ಗಾಯವಾಗಿದೆ ಇನ್ನೂ ಕೆಲವರಿಗೆ ಬೆನ್ನು ಮೂಳೆಯಲ್ಲಿ ಸಮಸ್ಯೆಯಾಗಿರುವುದು ಕಂಡುಬಂದಿದೆ. ಪ್ರತಿಭಟನೆ ವೇಳೆ ಹಿಂಸಾತ್ಮಕ ಕೃತ್ಯಕ್ಕೆ ಮುಂದಾದ ಕನಿಷ್ಠ 25 ಜನರನ್ನ ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಚೀನಾ ಮೇಲೆ 50-100% ಸುಂಕ ವಿಧಿಸಲು ಟ್ರಂಪ್‌ ಕರೆ

    ಈ ಪ್ರತಿಭಟನೆಯನ್ನು ಫಾರ್-ರೈಟ್ ಅಕ್ಟಿವಿಸ್ಟ್ ಟಾಮಿ ರಾಬಿನ್ಸನ್ (ಸ್ಟೀಫನ್ ಯ್ಯಾಕ್ಷಿ-ಲೆನ್ನನ್) ನೇತೃತ್ವದಲ್ಲಿ ಯುನೈಟ್ ದಿ ಕಿಂಗ್‌ಡಮ್ ಎಂಬ ಹೆಸರಿನಲ್ಲಿ ಆಯೋಜಿಸಲಾಗಿತ್ತು. ಇಂಗ್ಲಿಷ್ ಡಿಫೆನ್ಸ್ ಲೀಗ್‌ ಸಂಸ್ಥಾಪಕನಾದ ರಾಬಿನ್ಸನ್‌, ಬ್ರಿಟನ್‌ನ ಪ್ರಭಾವಶಾಲಿ ಬಲಪಂಥೀಯ ನಾಯಕರಲ್ಲಿ ಒಬ್ಬರು. ಪ್ರತಿಭಟನಾಕಾರರು ಇಂಗ್ಲೆಂಡ್ (England) ಮತ್ತು ಬ್ರಿಟನ್ ಧ್ವಜಗಳನ್ನ ಹಿಡಿದು, ವೆಸ್ಟ್‌ಮಿನ್‌ಸ್ಟರ್‌ ಕಡೆಗೆ ಮೆರವಣಿಗೆ ಹೊರಟಿದ್ದರು. ಇದೇ ವೇಳೆ ರಾಬಿನ್ಸನ್ ಪ್ರತಿಭಟನೆಗೆ ಪ್ರತಿಯಾಗಿ ಸ್ಟ್ಯಾಂಡ್ ಅಪ್ ಟು ರೇಸಿಸಂ ಗುಂಪು ನೇತೃತ್ವದಲ್ಲಿ 5,000 ಮಂದಿ ಪ್ರತಿಭಟನೆ ನಡೆಸಿದರು. ʻಮಾರ್ಚ್ ಅಗೈನ್‌ಸ್ಟ್ ಫ್ಯಾಸಿಸಂʼ ಎಂಬ ಹೆಸರಿನಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಜಾರಾ ಸುಲ್ತಾನಾ ಮತ್ತು ಡಯಾನ್‌ ಅಬ್‌ಬಟ್‌ನಂತಹ ಸಂಸದರು ಕೂಡ ಭಾಗವಹಿಸಿದರು. ಈ ಎರಡು ಗುಂಪುಗಳ ನಡುವಿನ ಘರ್ಷಣೆ ತಡೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ಇದನ್ನೂ ಓದಿ: ರಷ್ಯಾದ ತೈಲ ಖರೀದಿ ರಾಷ್ಟ್ರಗಳ ಮೇಲೆ ಸುಂಕ ವಿಧಿಸಲು G7 ದೇಶಗಳಿಗೆ ಅಮೆರಿಕ ಕರೆ

    ಹಿಂಸಾಚಾರಕ್ಕೆಂದೇ ಹೊಂಚು ಹಾಕಿದ್ದ ಗುಂಪು
    ಇನ್ನೂ ವಲಸೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರನ್ನ ಹೊರತುಪಡಿಸಿ, ಹಿಂಸಾಚಾರವನ್ನೇ ಗುರಿಯಾಗಿಸಕೊಂಡು ಕೆಲವರು ಬಂದಿದ್ದರು. ಅವರು ಪೊಲೀಸರ ಮೇಲೆ ಹಲ್ಲೆಗೆ ಮುಂದಾದರು. ಪೊಲೀಸರೊಂದಿಗೆ ಗುದ್ದಾಟವನ್ನೂ ನಡೆಸಿದ್ರು ಎಂದು ಸಹಾಯಕ ಆಯುಕ್ತ ಮ್ಯಾಟ್ ಟ್ವಿಸ್ಟ್ ಹೇಳಿದರು.

    ಪ್ರತಿಭಟನೆಗೆ ಕಾರಣ ಏನು?
    ಬ್ರಿಟನ್‌ನ ಗಡಿಗಳನ್ನು ಬಲಪಡಿಸುವುದು ಮತ್ತು ಅಕ್ರಮ ವಲಸೆ ನಿಲ್ಲಿಸಬೇಕೆಂಬುದು ಯುನೈಟ್ ದಿ ಕಿಂಗ್‌ಡಮ್ ಪ್ರತಿಭಟನೆಗೆ ಮುಖ್ಯ ಕಾರಣ. ಇದನ್ನೂ ಓದಿ: 50% ತೆರಿಗೆ ಹಾಕುವುದು ಸುಲಭವಾಗಿರಲಿಲ್ಲ, ಇದರಿಂದಾಗಿಯೇ ಭಾರತದ ಜೊತೆ ಭಿನ್ನಾಭಿಪ್ರಾಯ ಶುರುವಾಯ್ತು: ಟ್ರಂಪ್‌

  • ಕೃಷಿ ಹೊಂಡಗಳನ್ನು ಮುಚ್ಚಿ ಫ್ಯಾಕ್ಟರಿ ನಿರ್ಮಾಣಕ್ಕೆ ಮುಂದು – ರೈತರಿಂದ ಬೃಹತ್ ಪ್ರತಿಭಟನೆ

    ಕೃಷಿ ಹೊಂಡಗಳನ್ನು ಮುಚ್ಚಿ ಫ್ಯಾಕ್ಟರಿ ನಿರ್ಮಾಣಕ್ಕೆ ಮುಂದು – ರೈತರಿಂದ ಬೃಹತ್ ಪ್ರತಿಭಟನೆ

    ಗದಗ: ರೈತರ (Farmers) ಜಮೀನಿನಲ್ಲಿರುವ ಕೆರೆ-ಕಟ್ಟೆಗಳನ್ನು ಮುಚ್ಚಿ ಫ್ಯಾಕ್ಟರಿ ನಿರ್ಮಿಸಲು ಮುಂದಾಗಿರುವುದನ್ನು ವಿರೋಧಿಸಿ ಗದಗ (Gadag) ಹಿರೇಮಲ್ಲಾಪೂರ ಗ್ರಾಮದ ರೈತರು ಜಯಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಜಿಲ್ಲಾಡಳಿತ ಭವನ ಬಳಿ ಬೃಹತ್ ಪ್ರತಿಭಟನೆ ಮಾಡಿದರು.

    ಈ ವೇಳೆ ಕಂಪನಿ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನ ಅಲೈನ್ ಎಥೆನಾಲ್ ಪ್ರೈವೆಟ್ ಲಿಮಿಟೆಡ್ ಎಂಬ ಕಂಪನಿ ಮಧ್ಯವರ್ತಿಗಳ ಮೂಲಕ ೩೦ ಎಕರೆಗೂ ಅಧಿಕ ಭೂಮಿ ಖರೀದಿಸಿದೆ. ಮೊದಲು ಕೃಷಿ ಚಟುವಟಿಕೆಗಳಿಗೆ ಎಂದು ರೈತರಿಗೆ ಸುಳ್ಳು ಹೇಳಿ ಭೂಮಿ ಖರೀದಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇದನ್ನೂ ಓದಿ: ಒಂದಲ್ಲ ನೂರು FIR ಹಾಕಿದ್ರೂ ಹೆದರಲ್ಲ: ಮುನಿಸ್ವಾಮಿ

    ಈಗ ಆ ಜಮೀನುಗಳಲ್ಲಿರುವ ಕೆರೆ, ಕೃಷಿ ಹೊಂಡಗಳನ್ನು ಮುಚ್ಚಿ ಫ್ಯಾಕ್ಟರಿ ನಿರ್ಮಿಸಲು ಮುಂದಾಗಿದ್ದಾರೆ. ಕೆರೆ ಕೃಷಿ ಹೊಂಡಗಳಿಂದ ಜನ, ಜಾನುವಾರುಗಳಿಗೆ ಸಾಕಷ್ಟು ಸಹಾಯವಾಗಿದ್ದವು. ಈಗ ಅಲೈನ್ ಎಥೆನಾಲ್ ಪ್ರೈವೆಟ್ ಲಿಮಿಟೆಡ್‌ನವರು ಕೆರೆ-ಕಟ್ಟೆಗಳನ್ನು ಮುಚ್ಚಿ ಫ್ಯಾಕ್ಟರಿ ನಿರ್ಮಿಸಲು ಮುಂದಾಗುವುದಕ್ಕೆ ರೈತರ ವಿರೋಧವಿದೆ ಎಂದರು. ಇದನ್ನೂ ಓದಿ: Hassan Tragedy | ಟ್ರಕ್ ಅಪಘಾತ ನಡೆದ ಜಾಗದಲ್ಲಿ ಹಂಪ್ಸ್ ನಿರ್ಮಿಸಲು ತೀರ್ಮಾನ

    ಫ್ಯಾಕ್ಟರಿಯ ಸುತ್ತಮುತ್ತಲಿನ ಗ್ರಾಮಗಳಾದ ಹಿರೇಮಲ್ಲಾಪೂರ, ಪುಟಗಾಂವ ಬಡ್ಡಿ, ಸೂರಣಗಿ ಹರದಗಟ್ಟಿ, ಅಮರಾಪುರ ಗ್ರಾಮಗಳ ಜನ ಹಾಗೂ ಜಾನುವಾರುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತಿದೆ. ಜೊತೆಗೆ ಈ ಭಾಗದಲ್ಲಿ ಕಾಯ್ದಿಟ್ಟ ಅರಣ್ಯ ಪ್ರದೇಶವಿದ್ದು, ಅದಕ್ಕೆ ಹೊಂದಿಕೊಂಡು ಕಂಪನಿಯನ್ನು ಪ್ರಾರಂಭಿಸುತ್ತಿದ್ದಾರೆ. ಇದು ರೈತರು ಹಾಗೂ ವನ್ಯಜೀವಿಗಳಿಗೆ ತೊಂದರೆಯುಂಟು ಮಾಡುತ್ತದೆ. ಇದರಿಂದ ಕೆರೆಗಳನ್ನು ಮುಚ್ಚಿಸಬಾರದು. ಕಂಪನಿಯನ್ನು ಅಲ್ಲಿಂದ ಸ್ಥಳಾಂತರಿಸಬೇಕು ಎಂದು ಪಟ್ಟುಹಿಡಿದರು.

    ಪ್ರತಿಭಟನಾಕಾರರು ಗದಗ ನಗರದ ಮುಳಗುಂದ ನಾಕಾದಿಂದ ಜಿಲ್ಲಾಡಳಿತ ಭವನದ ವರೆಗೆ ಪಾದಯಾತ್ರೆ ನಡೆಸಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ನೀಡಿದರು.

  • ತಹಶೀಲ್ದಾರ್ ಕಚೇರಿಗೆ ರೈತರ ಮುತ್ತಿಗೆ – ಹಾನಿಯಾದ ಬೆಳೆಗಳಿಗೆ ಪರಿಹಾರಕ್ಕೆ ಆಗ್ರಹ

    ತಹಶೀಲ್ದಾರ್ ಕಚೇರಿಗೆ ರೈತರ ಮುತ್ತಿಗೆ – ಹಾನಿಯಾದ ಬೆಳೆಗಳಿಗೆ ಪರಿಹಾರಕ್ಕೆ ಆಗ್ರಹ

    ಗದಗ: ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿ ರೈತೆರು ಎತ್ತು, ಚಕ್ಕಡಿಗಳೊಂದಿಗೆ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆ ಮುಂಡರಗಿ (Mudaragi) ಪಟ್ಟಣದಲ್ಲಿ ನಡೆದಿದೆ.

    ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ಎತ್ತು, ಚಕ್ಕಡಿಗಳನ್ನು ನಿಲ್ಲಿಸಿ ರೈತರು ಪ್ರತಿಭಟನೆ ಮಾಡಿದರು. ಹೆಸರು, ಮೆಕ್ಕೆಜೋಳ, ಹತ್ತಿ, ಈರುಳ್ಳಿ, ಸೂರ್ಯಕಾಂತಿ ಸೇರಿದಂತೆ ಅನೇಕ ಬೆಳೆಗಳು ಮಳೆಯಿಂದ ನಾಶವಾಗಿವೆ. ರೈತರು (Farmers) ಸಾಕಷ್ಟು ಸಾಲ ಮಾಡಿ ಬೆಳೆದ ಬೆಳೆಗಳು ಕೈತಪ್ಪಿವೆ. ಅನ್ನದಾತರು ಬೀದಿಗೆ ಬರುವಂತಾಗಿದೆ. ಇನ್ನು ಅಲ್ಪ ಸ್ವಲ್ಪ ಬೆಳೆಗೆ ಖರೀದಿ ಕೇಂದ್ರ ಇಲ್ಲ. ಶೀಘ್ರದಲ್ಲೇ ಖರೀದಿ ಕೇಂದ್ರ ಆರಂಭಿಸಬೇಕು. ಬೆಳೆ ವಿಮೆ ಏಜೆಂಟ್‌ಗಳ ಹಾವಳಿ ತಪ್ಪಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಹಾವೇರಿ | ಕತ್ತು ಸೀಳಿ ಡ್ಯಾನ್ಸ್ ಮಾಸ್ಟರ್ ಬರ್ಬರ ಹತ್ಯೆ – ಲಾಂಗ್‌ಡ್ರೈವ್ ಹೋಗಿ ಬರುತ್ತೇನೆ ಅಂದಾತ ಶವವಾಗಿ ಪತ್ತೆ

    ಈ ವೇಳೆ ಕೃಷಿ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಧಿಕಾರಿಗಳು ಸರಿಯಾಗಿ ರೈತರ ಬೆಳೆ ಸಮೀಕ್ಷೆ ಮಾಡುತ್ತಿಲ್ಲ. ಕಾಟಾಚಾರಕ್ಕೆ ಸಮೀಕ್ಷೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಮೈಸೂರಿನ ಮಧುಸೂದನ್‌ಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ – ಸೆ.5ರಂದು ರಾಷ್ಟ್ರಪತಿಗಳಿಂದ ಪ್ರದಾನ

    ಬಳಿಕ ಪ್ರತಿಭಟನಾ ಸ್ಥಳಕ್ಕೆ ಬಂದ ಕೃಷಿ ಅಧಿಕಾರಿಗಳನ್ನು ರೈತರು ತರಾಟೆಗೆ ತೆಗೆದುಕೊಂಡರು. ಕೆಲಕಾಲ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಲು ಮುಂದಾದರು. ಪ್ರತಿಭಟನೆಯಲ್ಲಿ ರೈತ ಮುಖಂಡರು, ಮಹಿಳೆಯರು, ಸಾರ್ವಜನಿಕರು ಭಾಗಿಯಾಗಿದ್ದರು.

  • ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ ರಹಸ್ಯ ಬಯಲು – ಪ್ರಿಯತಮನಿಂದಲೇ ಸ್ಕೆಚ್‌; ಮರ್ಮ ಅರಿಯದೇ ಹೊರಟಿದ್ದಳು ಮುಗ್ಧೆ

    ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ ರಹಸ್ಯ ಬಯಲು – ಪ್ರಿಯತಮನಿಂದಲೇ ಸ್ಕೆಚ್‌; ಮರ್ಮ ಅರಿಯದೇ ಹೊರಟಿದ್ದಳು ಮುಗ್ಧೆ

    ಚಿತ್ರದುರ್ಗ: ಪ್ರೀತಿಗಾಗಿ ಜೀವಬಿಟ್ಟ ಅಮರ ಪ್ರೇಮಿಗಳನ್ನು ನೋಡಿದ್ದೇವೆ. ಆದ್ರೆ‌, ಚಿತ್ರದುರ್ಗದ ವಿದ್ಯಾರ್ಥಿನಿ (Chitradurga Stundet) ವರ್ಷಿತಾ ಕೊಲೆಕೇಸಲ್ಲಿ ಪ್ರಿಯತಮನೇ ವಿಲನ್ ಆಗಿದ್ದು, ಕಿರಾತಕ ಚೇತನ್ ಪ್ರೀ ಪ್ಲ್ಯಾನ್ ಮರ್ಡರ್ ರಹಸ್ಯ ಸಿಸಿಟಿವಿ‌ಯಲ್ಲಿ ಸೆರೆಯಾಗಿದೆ.

    ಆಗಸ್ಟ್ 14 ರಂದು ಪ್ರಕರಣ‌ನಡೆದಿದ್ದು, ಆಗಸ್ಟ್ 19 ರಂದು ಅರೆಬರೆ ಸುಟ್ಟ ಸ್ಥಿತಿಯಲ್ಲಿ ವರ್ಷಿತಾ (19)ಳ ಮೃತದೇಹ ಚಿತ್ರದುರ್ಗ ತಾಲ್ಲೂಕಿನ ಗೋನೂರು‌ಬಳಿ ಪತ್ತೆಯಾಗಿತ್ತು. ಇದಕ್ಕೂ ಮುನ್ನ ರಸ್ತೆ ಬದಿಯ ಖಾಸಗಿ ಹೋಟೆಲ್‌ಗೆ (Private Hotel) ಆಗಮಿಸಿದ್ದ ಪ್ರಯಾಣಿಕರು, ಮೂತ್ರವಿಸರ್ಜನೆಗೆ ರಸ್ತೆಬದಿಗೆ ಬಂದಿದ್ದರು. ಈ ವೇಳೆ ಮೃತದೇಹ ಕಂಡು ಹೋಟೆಲ್ ವ್ಯವಸ್ಥಾಪಕರಿಗೆ ‌‌ತಿಳಿಸಿದ್ದರು. ಇದನ್ನೂ ಓದಿ: ಚಿತ್ರದುರ್ಗ | ಅಪರಿಚಿತ ಶವ ಪತ್ತೆ ಕೇಸ್‌ – ಯುವತಿಯ ಗುರುತು ಪತ್ತೆ, ಅತ್ಯಾಚಾರ ಎಸಗಿ ಕೊಲೆ ಶಂಕೆ

    Student Death

    ಆಗ ಎಚ್ಚೆತ್ತ ಹೋಟೆಲ್‌ ವ್ಯವಸ್ಥಾಪಕರು, ಚಿತ್ರದುರ್ಗ ಗ್ರಾಮಾಂತರ ಠಾಣೆಗೆ (Chitradurga Rural Police) ದೂರು ನೀಡಿದ್ದು, ಈ ಪ್ರಕರಣದ‌ ಬೆನ್ನತ್ತಿದ ಪೊಲೀಸರು ಪ್ರಿಯತಮ ಚೇತನ್‌ ಅನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ನಿನ್ನೆಯೇ ಚೇತನ್ ತನ್ನ ತಪ್ಪನ್ನು ಪೊಲೀಸರ ಬಳಿ ಒಪ್ಪಿಕೊಂಡಿದ್ದ‌ನು. ಈ ಬಗ್ಗೆ ʻಪಬ್ಲಿಕ್ ಟಿವಿʼ ಮೊದಲು ವರದಿ ಬಿತ್ತರಗೊಳಿಸಿತ್ತು. ಇದನ್ನೂ ಓದಿ: ದರ್ಶನ್ ಜಾಮೀನು ರದ್ದು; ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ: ರೇಣುಕಾಸ್ವಾಮಿ ಪತ್ನಿ

    ಈಗ ಕೊಲೆಯಾಗಿರೊ ವಿದ್ಯಾರ್ಥಿನಿ ವರ್ಷಿತಾ ಜೊತೆ ಚೇತನ್ ಇದ್ದಂತಹ ಕೊನೇ ಕ್ಷಣದ ಸಿಸಿಟಿವಿ ದೃಶ್ಯ ಕೂಡ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ವರ್ಷಿತಾಳನ್ನ ಕೊಲ್ಲಲು ಸ್ಕೆಚ್ ಹಾಕಿದ್ದ ಚೇತನ್ ಚಿತ್ರದುರ್ಗ ನಗರದ ತುರುವನೂರು‌ ರಸ್ತೆಯಲ್ಲಿನ ಖಾಸಗಿ ಪೆಟ್ರೋಲ್ ಬಂಕ್‌ನಲ್ಲಿ 2 ಬಾರಿ ಪೆಟ್ರೋಲ್ ಖರೀದಿಸಿದ್ದು, ಬಳಿಕ ವರ್ಷಿತಾಳನ್ನ ಕರೆದೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ನ್ಯಾಯಾಂಗ, ಸರ್ಕಾರದ ಬಗ್ಗೆ ವಿಶ್ವಾಸ ಮೂಡಿದೆ: ಸುಪ್ರೀಂ ತೀರ್ಪಿಗೆ ರೇಣುಕಾಸ್ವಾಮಿ ತಂದೆ ಸಂತಸ 

    ಇನ್ನೂ ಪ್ರಿಯಕರ ಪೆಟ್ರೋಲ್‌ ಬಾಟಲಿಯನ್ನ ತನ್ನ ಪ್ಯಾಂಟ್‌ ಜೇಬಿನಲ್ಲೇ ಇರಿಸಿಕೊಂಡಿದ್ದ, ಇದರ ಮರ್ಮ ಅರಿಯದ ಮುಗ್ಧೆ ವರ್ಷಿತಾ, ಅವನ ಬಣ್ಣದ ಮಾತಿಗೆ ಮರಳಾಗಿ, ಹಿಂಬಾಲಿಸುತ್ತಾ ನಡೆದುಕೊಂಡೇ ಹೋಗಿದ್ದಾಳೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದಾದ ಬಳಿಕ ಆಗಸ್ಟ್‌ 18ರಂದು ಸಂಜೆ 4 ಗಂಟೆ ಸುಮಾರಿಗೆ ಆಕೆಯನ್ನ ಚಿತ್ರದುರ್ಗ ತಾಲ್ಲೂಕಿನ ಗೋನೂರು ಬಳಿಯ ನಿರ್ಜನ ಪ್ರದೇಶಕ್ಕೆ ಕಿರಾತಕ ಚೇತನ್‌ ಕರೆದೊಯ್ದಿದ್ದಾನೆ. ಆಕೆಯನ್ನ ಮನಬಂದಂತೆ ಥಳಿಸಿದ್ದಾನೆ. ಉಸಿರುಗಟ್ಟಿಸಿ ವರ್ಷಿತಾಳನ್ನ ಹತ್ಯೆಗೈದು, ಪೆಟ್ರೋಲ್‌ ಸುರಿದು ಸುಟ್ಟಿದ್ದಾನೆ ಎಂದು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.

    ಹೀಗಾಗಿ ಆರೋಪಿ ಚೇತನ್‌ನ ಜಾಡು ಹಿಡಿದು ಖಾಕಿಯಿಂದ ತನಿಖೆ ಮುಂದುವರೆದಿದೆ. ಚಿತ್ರದುರ್ಗ ಡಿವೈಎಸ್ಪಿ ಪಿ.ದಿನಕರ್, ಗ್ರಾಮಾಂತರ ಠಾಣೆ ಸಿಪಿಐ ಮುದ್ದುರಾಜ್, ಪಿಎಸ್ ಐ ಸುರೇಶ್ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ. ಇದನ್ನೂ ಓದಿ: Chitradurga | ಕೆಆರ್ ಹಳ್ಳಿ ಗೇಟ್ ಬಳಿ ಟ್ರಾಫಿಕ್ ಜಾಮ್ – 5 ಕಿ.ಮೀ ದೂರದವರೆಗೂ ನಿಂತ ವಾಹನಗಳು

  • ಚಿತ್ರದುರ್ಗ | ಅಪರಿಚಿತ ಶವ ಪತ್ತೆ ಕೇಸ್‌ – ಯುವತಿಯ ಗುರುತು ಪತ್ತೆ, ಅತ್ಯಾಚಾರ ಎಸಗಿ ಕೊಲೆ ಶಂಕೆ

    ಚಿತ್ರದುರ್ಗ | ಅಪರಿಚಿತ ಶವ ಪತ್ತೆ ಕೇಸ್‌ – ಯುವತಿಯ ಗುರುತು ಪತ್ತೆ, ಅತ್ಯಾಚಾರ ಎಸಗಿ ಕೊಲೆ ಶಂಕೆ

    ಚಿತ್ರದುರ್ಗ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 48ರ (NH 48) ಬಳಿ ಸಿಕ್ಕ ಅಪರಿಚಿತ ಶವದ ಗುರುತು ಪತ್ತೆ ಮಾಡಲಾಗಿದ್ದು, ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

    ಕೊಲೆಯಾದ ಯುವತಿಯನ್ನ ಚಿತ್ರದುರ್ಗದ (Chitradurga) ಹಿರಿಯೂರು ತಾಲೂಕಿನ ಕೋವೇರಹಟ್ಟಿ ಗ್ರಾಮದ ವರ್ಷಿತಾ (19) ಎಂದು ಗುರುತಿಸಲಾಗಿದೆ. ಈಕೆ ಸರ್ಕಾರಿ ಪದವಿ ಕಾಲೇಜಿನ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳೆಂದು ತಿಳಿದುಬಂದಿದೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ (Police Investigation) ಶುರು ಮಾಡಿದ್ದಾರೆ.

    ಗುರುತು ಪತ್ತೆಯಾದ ಬೆನ್ನಲ್ಲೇ ವರ್ಷಿತಾ ಸಂಪರ್ಕದಲ್ಲಿದ್ದ ಯುವಕ ಚೇತನ್‌ ಅನ್ನೂ ವಿಚಾರಣೆ ನಡೆಸಲಾಗುತ್ತಿದೆ. ಚೇತನ್‌ಗೆ ಕ್ಯಾನ್ಸರ್ 3ನೇ ಹಂತದಲ್ಲಿರುವ ಬಗ್ಗೆ ಮಾಹಿತಿ ಇದೆ. ಇದನ್ನೂ ಓದಿ: 12 ದಿನಗಳ ಹಿಂದೆ ರೈಲಿನಲ್ಲಿ ನಾಪತ್ತೆಯಾಗಿದ್ದ ಹೈಕೋರ್ಟ್‌ ತರಬೇತಿ ವಕೀಲೆ ನೇಪಾಳ ಗಡಿಯಲ್ಲಿ ಪತ್ತೆ!

    ಗುರುತು ಪತ್ತೆಯಾಗಿದ್ದು ಹೇಗೆ?
    ಪೊಲೀಸರ ತನಿಖೆ ವೇಳೆ ಯುವತಿಯ ಕೈ ಮೇಲಿನ ಟ್ಯಾಟುನಿಂದ ಗುರುತುಪತ್ತೆಯಾಗಿದೆ. ಯುವತಿಯ ಹತ್ಯೆ ಖಂಡಿಸಿ ಎಬಿವಿಪಿ ಸಂಘಟನೆ ಪ್ರತಿಭಟನೆಗೆ ಕರೆ ನೀಡಿದ್ದು ಹಾಗೂ ಕಾಲೇಜು ಬಂದ್‌ಗೆ ಒತ್ತಾಯಿಸಿದೆ. ಇಂದು ಡಿಸಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಯಲಿದ್ದು, ಕುಟುಂಬಸ್ಥರು, ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಹಾಸನ ಜಿಲ್ಲೆಯಲ್ಲಿ ಮಳೆಯೋ ಮಳೆ – ಸಕಲೇಶಪುರದಲ್ಲಿ ಭೂಕುಸಿತ, ಅವಾಂತರ

  • ರಾಹುಲ್‌ ಗಾಂಧಿ ಪ್ರತಿಭಟನಾ ರ‍್ಯಾಲಿ ಆ.8ಕ್ಕೆ ಮುಂದೂಡಿಕೆ: ಡಿಕೆಶಿ

    ರಾಹುಲ್‌ ಗಾಂಧಿ ಪ್ರತಿಭಟನಾ ರ‍್ಯಾಲಿ ಆ.8ಕ್ಕೆ ಮುಂದೂಡಿಕೆ: ಡಿಕೆಶಿ

    ಬೆಂಗಳೂರು: ಇಲ್ಲಿನ ಫ್ರೀಡಂ ಪಾರ್ಕ್‌ನಲ್ಲಿ ನಿಗದಿಯಾಗಿದ್ದ‌ ರಾಹುಲ್‌ ಗಾಂಧಿ (Rahul Gandhi) ನೇತೃತ್ವದ ಪ್ರತಿಭಟನಾ ರ‍್ಯಾಲಿ ಆಗಸ್ಟ್‌ 8ಕ್ಕೆ ಮುಂದೂಡಿಕೆಯಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ತಿಳಿಸಿದ್ದಾರೆ.

    ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮತಗಳ್ಳತನ ಆರೋಪ ಮಾಡಿದ್ದರು. ಕೇಂದ್ರದ ಈ ಕ್ರಮ ವಿರೋಧಿಸಿ ಆಗಸ್ಟ್‌ 5ರಂದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಿಗದಿಯಾಗಿತ್ತು. ಇದೇ ಸಮಯದಲ್ಲಿ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ನಡುವೆ ಪ್ರತಿಭಟನಾ ರ‍್ಯಾಲಿ ಮುಂದೂಡಿರುವುದಾಗಿ ಡಿಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್; ಸಚಿವ ಶಿವಾನಂದ ಪಾಟೀಲ್‌ಗೆ ಸುಪ್ರೀಂ ಚಾಟಿ

    ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ರಣದೀಪ್ ಸುರ್ಜೇವಾಲ ಮಾತನಾಡಿದರು, ಶಿಬು ಸೊರೇನ್ ಅವರ ಮರಣದ ಹಿನ್ನೆಲೆಯಲ್ಲಿ ನಾಳೆ ಅಂತ್ಯ ಸಂಸ್ಕಾರ ನಡೆಯಲಿದೆ. ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅದರಲ್ಲಿ ಭಾಗವಹಿಸಿದ್ದಾರೆ. ಆದ್ದರಿಂದ ನಾಳೆಯ (ಆ.5) ಪ್ರತಿಭಟನೆ ಮುಂದೂಡಲಾಗಿದೆ. ಅದನ್ನ ಆ.8ಕ್ಕೆ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಷ್ಯಾದ ತೈಲ ಖರೀದಿ ಮೂಲಕ ಉಕ್ರೇನ್‌ ವಿರುದ್ಧದ ಯುದ್ಧಕ್ಕೆ ಭಾರತ ಫಂಡಿಂಗ್‌ – ಅಮೆರಿಕ

    ಇನ್ನೂ ಡಿಸಿಎಂ ಡಿಕೆ ಶಿವಕುಮಾರ್‌ ಮಾತನಾಡಿ, ನಾಳೆ ಶಿಬು ಸೊರೇನ್‌ ಅಂತ್ಯಕ್ರಿಯೆಯಲ್ಲಿ ರಾಹುಲ್‌ ಗಾಂಧಿ ಭಾಗಿಯಾಗಲಿದ್ದಾರೆ. ಇಲ್ಲಿಗೆ ಬಂದು ಅಲ್ಲಿಗೆ ಹೋಗೋದು ಅಂತ ಮೊದಲು ಮಾತುಕತೆ ಆಗಿತ್ತು. ಆದ್ರೆ ಇದು ದೊಡ್ಡ ಸಂದೇಶ ಕೊಡುವ ದಿನ, ಆದ್ದರಿಂದ ಗಡಿಬಿಡಿ ತೀರ್ಮಾನ ಬೇಡ ಅಂತ ಪ್ರತಿಭಟನೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ. ಕೆಲವರಿಗೆಲ್ಲಾ ವರಮಹಾಲಕ್ಷ್ಮಿ ಹಬ್ಬ ಅಂತ ಇರುತ್ತದೆ. ಪಕ್ಷದ ಕಾರ್ಯಕ್ರಮದಲ್ಲಿ ಅದನ್ನೆಲ್ಲ ಲೆಕ್ಕದಲ್ಲಿ ಇಟ್ಟುಕೊಳ್ಳೋಕೆ ಆಗಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಮತಾಂತರ, ಮದುವೆ ಆಗಲು ನಿರಾಕರಿಸಿದ್ದಕ್ಕೆ ಹರಿಯಿತು ನೆತ್ತರು – ಹಿಂದೂ ಮಹಿಳೆಯ ಕ್ರೂರ ಹತ್ಯೆ

  • ಗದಗ | ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ನಗರಸಭೆಗೆ ಸಾರ್ವಜನಿಕರಿಂದ ಮುತ್ತಿಗೆ

    ಗದಗ | ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ನಗರಸಭೆಗೆ ಸಾರ್ವಜನಿಕರಿಂದ ಮುತ್ತಿಗೆ

    – ಖಾಲಿ ಕೊಡಗಳನ್ನು ಹಿಡಿದು ನಗರಸಭೆ ಎದುರು ಪ್ರತಿಭಟನೆ

    ಗದಗ: ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಸಾರ್ವಜನಿಕರು ನಗರಸಭೆಗೆ ಮುತ್ತಿಗೆ ಹಾಕಿ, ಆಕ್ರೋಶ ವ್ಯಕ್ತಪಡಿಸಿದ ಘಟನೆ ಗದಗನಲ್ಲಿ (Gadag) ನಡೆದಿದೆ.

    ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರುಡಗಿ ನೇತೃತ್ವದಲ್ಲಿ ನಗರದ ಮಹಾತ್ಮ ಗಾಂಧಿ ವೃತ್ತದಿಂದ ನಗರಸಭೆ ಕಚೇರಿವರೆಗೆ ಖಾಲಿ ಕೊಡ ಹಿಡಿದು ಪ್ರತಿಭಟನಾ ರ‍್ಯಾಲಿ ನಡೆಯಿತು. ಬಳಿಕ ಪ್ರತಿಭಟನಾಕಾರರು ನಗರಸಭೆ ಕಚೇರಿ ಆವರಣದೊಳಗೆ ನುಗ್ಗಲು ಯತ್ನಿಸಿದರು. ಇದನ್ನೂ ಓದಿ: ಇ-ಖಾತೆದಾರರಿಗೆ ಬಿಗ್ ಶಾಕ್ – ಬಿಬಿಎಂಪಿಯಿಂದ ಶೋಕಾಸ್ ನೋಟಿಸ್ ಜಾರಿ

    ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತವಾಗಿ ಗೇಟ್‌ಗೆ ಬೀಗ ಹಾಕಿ, ಮುಂದೆ ಬ್ಯಾರಿಕೇಡ್ ಇಟ್ಟು ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು. ಸ್ಥಳದಲ್ಲಿ 3 ಜನ ಡಿವೈಎಸ್ಪಿ, 4 ಜನ ಸಿಪಿಐ, 10 ಜನ ಪಿಎಸ್‌ಐ, 15 ಎಎಸ್‌ಐ ಸೇರಿದಂತೆ ನೂರಾರು ಜನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿತ್ತು. ಪ್ರತಿಭಟನಾಕಾರರು ಒಳಹೋಗದಂತೆ ಪೊಲೀಸರು ತಡೆದರು. ಈ ವೇಳೆ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.

    ನಂತರ ನಗರಸಭೆ ಕಚೇರಿ ಗೇಟ್ ಮುಂದೆ ಖಾಲಿ ಕೊಡಗಳೊಂದಿಗೆ ಕುಳಿತು ಪ್ರತಿಭಟನೆ ಮುಂದುವರಿಸಿದರು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ್ ಹಾಗೂ ಸಂಬಂಧಿಸಿ ಅಧಿಕಾರಿಗಳು ಆಗಮಿಸಿ ಪರಸ್ಥಿತಿ ತಿಳಿಗೊಳಿಸಲು ಯತ್ನಿಸಿದರು. ಇದನ್ನೂ ಓದಿ: ಮಿಗ್-21 ಯುದ್ಧ ವಿಮಾನದ 62 ವರ್ಷಗಳ ಸೇವೆಗೆ ವಿದಾಯ – ಸೆ. 19ರಂದು ಬೀಳ್ಕೊಡುಗೆ ಸಮಾರಂಭ

    ಕಳೆದ 50 ವರ್ಷಗಳಿಂದ ಗದಗ-ಬೆಟಗೇರಿ ಅವಳಿ ನಗರದಲ್ಲಿ ನೀರಿನ ಸಮಸ್ಯೆ ಮುಂದುವರಿದಿದ್ದು, ನಗರಸಭೆ ಸದಸ್ಯರು ವಾರ್ಡಿನ ಸಾರ್ವಜನಿಕರಿಂದ ನಿತ್ಯ ಪೇಚಾಟ ಅನುಭವಿಸುವಂತಾಗಿದೆ. ಇದಕ್ಕೆ ಪರಿಹಾರವೇ ಇಲ್ಲದಂತಾಗಿದೆ ಎಂದು ಜಿಲ್ಲಾಧಿಕಾರಿಗಳೊಂದಿಗೆ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಅಹಮದಾಬಾದ್ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ – ಪೊಲೀಸರು, ಬಾಂಬ್ ನಿಷ್ಕ್ರಿಯ ದಳದಿಂದ ಶೋಧ

    ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಸಭೆ ನಡೆಸಿ ಚರ್ಚಿಸೋಣ. 5 ಜನ ಮುಖಂಡರು ಸಭೆಗೆ ಬನ್ನಿ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು. ಇದಕ್ಕೆ ಪ್ರತಿಭಟನಾಕಾರರು 5 ಜನ ಆಗುವುದಿಲ್ಲ, ಎಲ್ಲ ಸದಸ್ಯರನ್ನು ಸಭೆ ಕರೆಯಿರಿ ಎಂದು ಪಟ್ಟುಹಿಡಿದರು.

    ಕಳೆದ 50 ವರ್ಷದಿಂದ ಅವಳಿ ನಗರಕ್ಕೆ ನೀರು ಪೂರೈಕೆ ಆಗುತ್ತಿಲ್ಲ. ಮಳೆಗಾಲದಲ್ಲೂ ನೀರು ಪೂರೈಕೆ ಮಾಡದ ಶಾಸಕರು, ಸಚಿವರು ನಮಗೆ ಬೇಡ. ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್, ನಗರಸಭೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.