Tag: ಪ್ರತಿಭಟನೆ

  • ಟಿಪ್ಪು ಜಯಂತಿ ವಿರೋಧಿಗಳಿಗೆ ಸಿದ್ದರಾಮಯ್ಯ ಫುಲ್‍ಕ್ಲಾಸ್

    ಟಿಪ್ಪು ಜಯಂತಿ ವಿರೋಧಿಗಳಿಗೆ ಸಿದ್ದರಾಮಯ್ಯ ಫುಲ್‍ಕ್ಲಾಸ್

    -ಟಿಪ್ಪು ದೇಶಪ್ರೇಮ, ಜಾತ್ಯತೀತ ಧೋರಣೆ ತಿಳಿಸುತ್ತವೆ ಲಾವಣಿ ಪದಗಳು
    -ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣರನ್ನು ಯಾವ ಗುಂಪಿಗೆ ಸೇರಿಸ್ತಿರಿ?

    ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಟಿಪ್ಪು ಜಯಂತಿ ಶುಭಕೋರಿದ್ದು, ಸರಣಿ ಟ್ವೀಟ್ ಮೂಲಕ ಟಿಪ್ಪುವನ್ನು ಕೊಂಡಾಡಿದ್ದಾರೆ. ಅಷ್ಟೇ ಅಲ್ಲದೆ ಟಿಪ್ಪು ಜಯಂತಿ ವಿರೋಧಿಗಳಿಗೆ ಫುಲ್‍ಕ್ಲಾಸ್ ತೆಗೆದುಕೊಂಡಿದ್ದಾರೆ.

    ಟ್ವಿಟ್ ನಲ್ಲೇನಿದೆ?:
    ಟಿಪ್ಪು ಸ್ವಾತಂತ್ರ್ಯ ಹೋರಾಟಗಾರನಲ್ಲ. ಒಂದು ಸಂಸ್ಥಾನದ ರಾಜ ಎನ್ನುವ ವಾದ ಹುಟ್ಟಿಕೊಂಡಿದೆ. ಇಂತಹ ಮೊಂಡುವಾದದವರು ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ವೀರ ಸಿಂಧೂರ ಲಕ್ಷ್ಮಣ, ರಾಣಿ ಅಬ್ಬಕ್ಕದೇವಿ ಸೇರಿದಂತೆ ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದವರನ್ನು ಯಾವ ಗುಂಪಿಗೆ ಸೇರಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ.

    ರಾಜ್ಯ ಸರ್ಕಾರ ಆಚರಿಸುತ್ತಿರುವುದು ಯಾವುದೇ ಒಂದು ಧರ್ಮಕ್ಕೆ ಸೇರಿದ ನಾಯಕನ ಜಯಂತಿಯಲ್ಲ. ಒಬ್ಬ ದೇಶಪ್ರೇಮಿ, ಜಾತ್ಯತೀತ ಮತ್ತು ಜನಪರ ಅರಸನಾಗಿದ್ದ ಟಿಪ್ಪುವಿನ ಜಯಂತಿ ಆಚರಿಸುತ್ತಿದ್ದೇವೆ. ಟಿಪ್ಪು ಅವರನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸುವುದು ಟಿಪ್ಪುವಿಗೆ ಮಾತ್ರವಲ್ಲ ಈ ನಾಡಿಗೆ ಬಗೆವ ದ್ರೋಹ ಎಂದು ಕಿಡಿಕಾರಿದ್ದಾರೆ.

    ಟಿಪ್ಪು ಬಗ್ಗೆ ತಿಳಿದುಕೊಳ್ಳಬೇಕಾಗಿರುವುದು ವೈರಿಗಳಾಗಿದ್ದ ಬ್ರಿಟಿಷ್ ಇತಿಹಾಸಕಾರರಿಂದಲ್ಲ. ಟಿಪ್ಪು ಬಗ್ಗೆ ಮೈಸೂರು ಭಾಗದಲ್ಲಿ ಲಾವಣಿಗಳಿವೆ. ಅವುಗಳಲ್ಲಿ ಟಿಪ್ಪುವಿನ ದೇಶಪ್ರೇಮ, ಜಾತ್ಯತೀತ ಧೋರಣೆ, ಅಭಿವೃದ್ದಿಯ ಕಲ್ಪನೆಗಳ ಮಾಹಿತಿ ಇದೆ. ಈ ಲಾವಣಿ, ಪದ, ಹಾಡುಗಳೇ ನಿಜವಾದ ಇತಿಹಾಸ ಎಂದು ತಿಳಿಸಿದ್ದಾರೆ.

    ಸರ್ಕಾರವೇ ಜಯಂತಿಗಳನ್ನು ಆಚರಿಸುವುದಕ್ಕೆ ಕಾರಣವಿದೆ. ಇದನ್ನು ಸಾರ್ವಜನಿಕರಿಗೆ ಬಿಟ್ಟರೆ ತಮ್ಮ ಜಾತಿ-ಧರ್ಮಗಳಿಗೆ ಸೇರಿರುವ ಮಹಾಪುರುಷ-ಮಹಿಳೆಯರ ಜಯಂತಿ ಆಚರಣೆಯನ್ನಷ್ಟೇ ಮಾಡಿ ಅವರನ್ನು ತಮ್ಮ ಜಾತಿ-ಧರ್ಮಗಳಿಗೆ ಸೀಮಿತಗೊಳಿಸುತ್ತಾರೆ. ಇದು ಮಹಾನ್ ವ್ಯಕ್ತಿಗಳಿಗೆ ಅಗೌರವವೂ ಹೌದು. ಮಹಾಪುರುಷ-ಮಹಿಳೆಯರ ಜಯಂತಿ ಆಚರಣೆಯ ಸಂಪ್ರದಾಯವನ್ನು ಹಿಂದಿನ ನಮ್ಮ ಸರ್ಕಾರ ಹುಟ್ಟುಹಾಕಿದ್ದಲ್ಲ, ಅಧಿಕಾರಕ್ಕೆ ಬಂದ ಎಲ್ಲ ಸರ್ಕಾರಗಳು ಜಯಂತಿ ಆಚರಣೆ ಪಟ್ಟಿಗೆ ಇನ್ನಷ್ಟು ಹೆಸರುಗಳನ್ನು ಸೇರಿಸುತ್ತಾ ಬಂದಿವೆ. ಆಗ ಕಾಣಿಸಿಕೊಳ್ಳದ ಪ್ರತಿರೋಧ ಟಿಪ್ಪು ಆಚರಣೆ ಬಗ್ಗೆ ಮಾತ್ರ ಯಾಕೆ ಎಂದಿದ್ದಾರೆ.

    ಟಿಪ್ಪು ಜಯಂತಿ ಆಚರಣೆ ಬಗ್ಗೆ ನಿಲುವು ಆತ್ಮವಂಚನೆಯಿಂದ ಕೂಡಿದ್ದಾಗಿದೆ. ತಾವು ಅಧಿಕಾರದಲ್ಲಿದ್ದಾಗ ಟಿಪ್ಪು ಜಯಂತಿಯಲ್ಲಿ ಭಾಗವಹಿಸಿ, ಟಿಪ್ಪುವನ್ನು ಹಾಡಿ-ಹೊಗಳಿ, ಪುಸ್ತಕ ಬರೆಸಿ ಈಗ ವಿರೋಧಿಸುತ್ತಿರುವುದು ಸ್ವಾರ್ಥರಾಜಕಾರಣವಲ್ಲದೆ ಮತ್ತೇನು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಶ್ರೀರಾಮುಲು, ಸಿ.ಪಿ.ಯೋಗೇಶ್ ಸೇರಿದಂತೆ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.

    ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ದೇಶದಲ್ಲಿ ಸ್ವಾತಂತ್ರ್ಯದ ಕಿಚ್ಚು ಹತ್ತಿಸಿದ ದೇಶ ಪ್ರೇಮಿ ಮೈಸೂರು ಹುಲಿ ಟಿಪ್ಪು ಸುಲ್ತಾನರ ಜನ್ಮದಿನದಂದು ಅವರ ದೇಶಪ್ರೇಮ, ತ್ಯಾಗ ಮತ್ತು ಜನಪರ ಆಡಳಿತವನ್ನು ನಾವೆಲ್ಲರೂ ಸ್ಮರಿಸೋಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪತಿಯಿಂದಲೇ ಪತ್ನಿ ಕೊಲೆ- 4 ದಿನದಿಂದ ಮೃತದೇಹ ಮುಂದಿಟ್ಟುಕೊಂಡು ಸಂಬಂಧಿಕರಿಂದ ಪ್ರತಿಭಟನೆ

    ಪತಿಯಿಂದಲೇ ಪತ್ನಿ ಕೊಲೆ- 4 ದಿನದಿಂದ ಮೃತದೇಹ ಮುಂದಿಟ್ಟುಕೊಂಡು ಸಂಬಂಧಿಕರಿಂದ ಪ್ರತಿಭಟನೆ

    ಹಾಸನ: ನಾಲ್ಕು ದಿನಗಳ ಹಿಂದೆ ಗಂಡನಿಂದಲೇ ಹತ್ಯೆಯಾಗಿರುವ ಮಹಿಳೆಯ ಸಾವಿಗೆ ನ್ಯಾಯ ಕೊಡಬೇಕು ಎಂದು ಆಗ್ರಹಿಸಿ ಮೃತ ಸಂಬಂಧಿಕರು ಇಂದೂ ಸಹ ಮನೆಯ ಮುಂದೆ ಶವವಿಟ್ಟು ಪ್ರತಿಭಟನೆ ಮುಂದುವರಿಸಿದ್ದಾರೆ.

    ಗಾರ್ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದ ನಂದಿನಿಯನ್ನು(36) ಆಕೆಯ ಗಂಡ ಮೋಹನ್ ಕುಮಾರ್ ಕೊಲೆ ಮಾಡಿ ನಂತರ ವೇಲ್ ನಲ್ಲಿ ನೇಣು ಹಾಕಿ ಪರಾರಿಯಾಗಿದ್ದ. ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಮೋಹನ್ ಕುಮಾರ್ ಸ್ವಗ್ರಾಮ ಆಲೂರು ತಾಲೂಕು ಸುಳುಗೋಡು ಗ್ರಾಮಕ್ಕೆ ಕೊಂಡೊಯ್ದಿರುವ ನಂದಿನಿ ಸಂಬಂಧಿಕರು, ಕೊಲೆಗಡುಗರ ಬಂಧನವಾಗಬೇಕು. ತಾಯಿ ಕಳೆದುಕೊಂಡು ತಬ್ಬಲಿಯಾಗಿರುವ ಇಬ್ಬರು ಮಕ್ಕಳಿಗೆ ಜೀವನಾಂಶ ಕೊಡಬೇಕು ಎಂದು ಆಗ್ರಹಿಸಿ ಶವವಿಟ್ಟು ಪ್ರತಿಭಟನೆ ನಡೆಸುತ್ತಿದ್ದು, ಇಂದೂ ಸಹ ಪ್ರತಿಭಟನೆ ಮುಂದುವರಿದಿದೆ.

    ಏನಿದು ಪ್ರಕರಣ?
    2006ರಲ್ಲಿ ನಂದಿನಿ ಮತ್ತು ಮೋಹನ್ ಕುಮಾರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಒಂದೂವರೆ ವರ್ಷದ ಹಿಂದೆ ಮೋಹನ್ ಸ್ವಗ್ರಾಮ ಬಿಟ್ಟು ಹಾಸನದಲ್ಲಿ ಇರುತ್ತೇವೆ ಎಂದು ವಿದ್ಯಾನಗರದಲ್ಲಿ ಬಾಡಿಗೆ ಮನೆ ಮಾಡಿ ಸಂಸಾರ ಆರಂಭಿಸಿದ್ದ. ನಂದಿನಿ ತನ್ನ ಗಂಡ ಮೋಹನ್ ಕುಮಾರ್ ಹಾಗೂ ಇಬ್ಬರು ಹೆಣ್ಣು ಮಕ್ಕಳ ಜೊತೆಗೆ ವಿದ್ಯಾನಗರದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಳು. ಮದುವೆಯಾದ ನಂತರ ಹಣಕ್ಕಾಗಿ ಹಾಗೂ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದೀಯ ಎಂದು ಹೇಳಿ ನಂದಿನಿಗೆ ಮೋಹನ್ ತುಂಬಾ ಕಾಟಕೊಡುತ್ತಿದ್ದ. ಅಷ್ಟೇ ಅಲ್ಲದೇ ಹಲವು ಸಂದರ್ಭ ಆತನ ಪೋಷಕರ ಮಾತು ಕೇಳಿ, ಪತ್ನಿಯನ್ನು ಮನೆಯಿಂದ ಹೊರಗಡೆ ಹಾಕಿದ್ದ.

    ಈ ನಡುವೆ ಸಂಸಾರ ಸರಿಯಾಗಿ ನಡೆಯಲು ಹಿರಿಯರು ಇಬ್ಬರ ನಡುವೆ ಮಾತಕತೆ ನಡೆಸಿ ರಾಜಿ ಸಂಧಾನ ಮಾಡಿಸಿದ್ದರು. ನಂದಿನಿ ಸಂಸಾರ ಸಾಕಲು ಗಾರ್ಮೆಂಟ್ಸ್ ಗೆ ಕೆಲಸಕ್ಕೆ ಹೋಗುತ್ತಿದ್ದಳು. ಆದರೂ ಕೂಡ ಹಳೇ ಚಾಳಿ ಬಿಡದ ಪಾಪಿ ಪತಿ, ಇಬ್ಬರು ಹೆಣ್ಣು ಮಕ್ಕಳನ್ನು ಪತ್ನಿಯ ತವರು ಮನೆಗೆ ಬಿಟ್ಟುಬಂದಿದ್ದ. ಮಂಗಳವಾರ ರಾತ್ರಿ ಗಾರ್ಮೆಂಟ್ ಕೆಲಸ ಮುಗಿಸಿ ಬಂದ ಪತ್ನಿಯನ್ನು ಹೊಡೆದು ಕೊಲೆ ಮಾಡಿದ ಬಳಿಕ ವೇಲ್‍ನಿಂದ ನೇಣು ಹಾಕಿ, ನಗದು ಮತ್ತು ಚಿನ್ನಾಭರಣವನ್ನು ದೋಚಿಕೊಂದು ಆರೋಪಿ ಪರಾರಿಯಾಗಿದ್ದಾನೆ.

    ಈ ನಡುವೆ ರೊಚ್ಚಿಗೆದ್ದ ನಂದಿನಿ ಕಡೆಯವರು, ಮೋಹನ್ ಮನೆಯ ಕೆಲವು ವಸ್ತುಗಳನ್ನು ಜಖಂಗೊಳಿಸಿದ್ದಾರೆ. ಸದ್ಯ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ದೀಪಾವಳಿ ಬೋನಸ್ ನೀಡದ್ದಕ್ಕೆ ಏರ್ ಇಂಡಿಯಾ ಸಿಬ್ಬಂದಿಯಿಂದ ಸ್ಟ್ರೈಕ್

    ದೀಪಾವಳಿ ಬೋನಸ್ ನೀಡದ್ದಕ್ಕೆ ಏರ್ ಇಂಡಿಯಾ ಸಿಬ್ಬಂದಿಯಿಂದ ಸ್ಟ್ರೈಕ್

    ಮುಂಬೈ: ದೀಪಾವಳಿ ಬೋನಸ್ ನೀಡದ್ದಕ್ಕೆ ಏರ್ ಇಂಡಿಯಾ ಏರ್ ಟ್ರಾನ್ಸ್ಪೋರ್ಟ್ ಸರ್ವಿಸಸ್ ಲಿಮಿಟಿಡ್‍ನ (ಎಐಎಟಿಎಸ್‍ಎಲ್) 400 ಸಿಬ್ಬಂದಿ ಮುಂಬೈ ವಿಮಾನ ನಿಲ್ದಾಣದಲ್ಲಿ ದಿಢೀರ್ ಮುಷ್ಕರ ಆರಂಭಿಸಿದ್ದಾರೆ.

    ಬುಧವಾರ ರಾತ್ರಿ ಪ್ರಾರಂಭವಾಗಿದ್ದು ಇಂದು ಕೂಡ ಮುಂದುವರಿದಿತ್ತು. ಏರ್ ಇಂಡಿಯಾ ಸಿಬ್ಬಂದಿ ಏರ್‍ಪೋರ್ಟ್‍ನಲ್ಲಿ ಪ್ರಯಾಣಿಕರ ಟಿಕೆಟ್ ಪರಿಶೀಲನೆ, ಬ್ಯಾಗ್‍ಗಳನ್ನು ಲೋಡ್ ಹಾಗೂ ಅನ್‍ಲೋಡ್ ಮಾಡುವುದು, ವಿಮಾನ ಹಾಗೂ ಕಾರ್ಗೋಗಳನ್ನು ಸ್ವಚ್ಛ ಮಾಡುವ ಕೆಲಸಗಳನ್ನು ನಿರ್ವಹಿಸುತ್ತಾರೆ. ಅಲ್ಲದೆ ಕೆಲವು ವಿದೇಶಿ ಏರ್‍ಲೈನ್ಸ್‍ಗಳ ಗುತ್ತಿಗೆಯನ್ನು ನೋಡಿಕೊಳ್ಳುತ್ತಾರೆ.

    ಪ್ರತಿಭಟನೆಯಿಂದ ಇಂದು ಎಲ್ಲಾ ಏರ್ ಇಂಡಿಯಾ ವಿವಾನಗಳ ಹಾರಾಟ ವಿಳಂಬವಾಗಿದೆ. ಮುಂಬೈ- ಬ್ಯಾಂಕಾಕ್ ಎಐ330 ವಿಮಾನ ಬೆಳಗ್ಗೆ 8.18ಕ್ಕೆ ಮುಂಬೈ ವಿಮಾನ ನಿಲ್ದಾಣದಿಂದ 7 ಗಂಟೆ ತಡವಾಗಿ ಹೊರಟಿದೆ. ಹಾಗೆಯೇ ಬೆಳಗಿನ ಜಾವ 1.30ಕ್ಕೆ ಹೊರಡಬೇಕಾದ ಮುಂಬೈ-ನೆವಾರ್ಕ್ ವಿಮಾನ 4.08ಕ್ಕೆ ಹೊರಟಿದೆ ಎಂದು ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

    ಪ್ರತಿಭಟನೆಯಿಂದ ಹಲವು ಏರ್ ಇಂಡಿಯಾ ವಿವಾನಗಳ ನಿರ್ಗಮನ ಹಾಗೂ ಆಗಮನದಲ್ಲಿ ಸರಿಸುಮಾರು 2 ಗಂಟೆ ಕಾಲ ವಿಳಂಬವಾಗಿದೆ. ಒಟ್ಟು 16 ಅಂತರಾಷ್ಟ್ರೀಯ ಮತ್ತು 8 ದೇಶಿಯ ವಿಮಾನ ಹಾರಾಟಕ್ಕೆ ಈ ಪ್ರತಿಭಟನೆಯ ಬಿಸಿ ತಟ್ಟಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಧಮ್ ಇದ್ರೆ ಬಂಧಿಸಿ, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ವೈಫಲ್ಯವಾದ್ರೆ ಸರ್ಕಾರವೇ ನೇರ ಹೊಣೆ: ಆರ್.ಅಶೋಕ್

    ಧಮ್ ಇದ್ರೆ ಬಂಧಿಸಿ, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ವೈಫಲ್ಯವಾದ್ರೆ ಸರ್ಕಾರವೇ ನೇರ ಹೊಣೆ: ಆರ್.ಅಶೋಕ್

    ಮೈಸೂರು: ಟಿಪ್ಪು ಜಯಂತಿ ಆಚರಣೆ ವಿಚಾರಕ್ಕೆ ಸಂಬಂಧಪಟ್ಟಂತೆ ನವೆಂಬರ್ 9 ರಂದು ಇಡೀ ರಾಜ್ಯಾದ್ಯಂತ ಬಿಜೆಪಿಯಿಂದ ಹೋರಾಟ ನಡೆಸಲಾಗುತ್ತದೆ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನವೆಂಬರ್ 9 ರಂದು ಪ್ರತಿಭಟನೆ ಮಾಡುತ್ತೇವೆ. ಧಮ್ ಇದ್ದರೇ ಬಂದು ಬಂಧಿಸಿ. ನಿಮ್ಮ ಯಾವುದೇ ಗೊಡ್ಡು ಬೆದರಿಕೆಗೆ ಬೆದರಲ್ಲ. ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡೇ ಮಾಡುತ್ತೇವೆ. ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವೈಫಲ್ಯ ಆದರೆ ಅದಕ್ಕೆ ಸರ್ಕಾರವೇ ನೇರ ಕಾರಣ. ನೀವೇ ಈ ಬಗ್ಗೆ ಹೆಚ್ಚಿನ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದರು.

    ಕೆಎಫ್‍ಡಿ, ಪಿಎಫ್‍ಐ ಇಂತಹ ಸಂಘಟನೆಗಳ ಸದಸ್ಯರು ದೊಡ್ಡ ಸಂಖ್ಯೆಯಲ್ಲಿ ಕರ್ನಾಟಕಕ್ಕೆ ಬರುತ್ತಾರೆ. ಇವರು ಮಾಡುವಂತಹ ಅನಾಹುತಕ್ಕೆ ಸರ್ಕಾರವೇ ನೇರವಾಗಿ ಕಾರಣವಾಗುತ್ತದೆ. ಸರ್ಕಾರ ಈ ಸಂಘಟನೆಗಳ ಪರವಾಗಿ ಬಹಳ ಮೃದು ಧೋರಣೆಯನ್ನು ತಳೆದಿದೆ. ಅವರ ಮೇಲಿದ್ದ ಕೇಸ್‍ಗಳನ್ನು ವಾಪಸ್ ಪಡೆಯುವ ಮುಖಾಂತರ ಸರ್ಕಾರ ಅವರಿಗೆ ಉತ್ತೇಜನ ನೀಡುತ್ತಿದೆ. ಈ ದೃಷ್ಟಿಯಿಂದ ನಾವು ನವೆಂಬರ್ 9 ರಂದು ರಾಜ್ಯಾದ್ಯಂತ ಪ್ರತಿಭಟನೆಯನ್ನು ಮಾಡುತ್ತೇವೆ ಎಂದು ತಿಳಿಸಿದರು.

    ಇವತ್ತು ರಾಜ್ಯ ಸರ್ಕಾರ ಸುದ್ದಿಗೋಷ್ಠಿಯನ್ನು ಕರೆದು ಯಾರಾದರೂ ಟಿಪ್ಪು ವಿರುದ್ಧವಾಗಿ ಮಾತನಾಡಿದರೆ ಅವರನ್ನ ಜೈಲಿಗೆ ಹಾಕುತ್ತೇನೆ ಎಂದು ಹೇಳಿದೆ. ವಾಟ್ಸಾಪ್, ಫೇಸ್‍ಬುಕ್ ಸೋಶಿಯಲ್ ಮೀಡಿಯಾದಲ್ಲಿ ನೀವೇನಾದರೂ ವಿರುದ್ಧವಾಗಿ ಹಾಕಿದರೆ ನಿಮ್ಮನ್ನ ಜೈಲಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದೆ. ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಜಾರಿಗೊಳಿಸಿ ಲಕ್ಷಾಂತರ ಪತ್ರಕರ್ತರನ್ನು ಜೈಲಿಗೆ ಕಳುಹಿಸಿದ್ದರು. ಈ ರೀತಿ ಆಡಳಿತ ಮತ್ತೆ ಕರ್ನಾಟಕಕ್ಕೆ ಬರುತ್ತಿದೆಯಾ? ಹಿಟ್ಲರ್ ವ್ಯವಸ್ಥೆಯಲ್ಲಿದೆಯಾ, ಸ್ವಾತಂತ್ರ್ಯ ಇಲ್ಲವೇ? ಕಾಂಗ್ರೆಸಿನ ಗುಂಡಾಗಿರಿ ಜೆಡಿಎಸ್‍ನ ಗುಂಡಾಗಿರಿ ಬಹಳ ದಿನಗಳು ನಡೆಯುವುದಿಲ್ಲ ಎಂದು ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

    ಕಳೆದ ಬಾರಿ ಟಿಪ್ಪು ಜಯಂತಿಯಂದು ಕೇರಳದ ಬೇರೆ ಬೇರೆ ಜಾಗಗಳಿಂದ ಕರ್ನಾಟಕಕ್ಕೆ ಸುಮಾರು 5 ಸಾವಿರ ಜನರು ಬಂದಿದ್ದರು ಅಂತ ಸರ್ಕಾರಿ ದಾಖಲೆಗಳೇ ಹೇಳುತ್ತಿವೆ. ಈ ಬಾರಿಯೂ ಆ ರೀತಿಯ ಜನ ಬಂದು ದಾಂಧಲೆ ಮಾಡಿ ಹೋಗುವಂತಹ ಸಂಶಯ ಕಾಡುತ್ತಿದೆ. ವಿಶೇಷವಾಗಿ ಕೇರಳದಿಂದ ಬರುವ ಜಿಹಾದಿಗಳು ಈ ಬಾರಿಯೂ ಬಂದು ಕೋಮುಗಲಭೆಯನ್ನು ಅಂಟಿಸುವಂತಹ ಪಿತೂರಿ ನಡೆಸುತ್ತಿವೆ. ಸರ್ಕಾರ ಅದನ್ನು ತಡೆಗಟ್ಟುವುದನ್ನು ಬಿಟ್ಟು ಸರ್ಕಾರದ ಬೊಕ್ಕಸಕ್ಕೆ ಹಾನಿ ಮಾಡುತ್ತಿದೆ. ಈಗಾಗಲೇ ರೈತರ ಸಾಲವನ್ನು ಮನ್ನ ಮಾಡುವುದಕ್ಕೆ ಹಣವಿಲ್ಲ. ಸರ್ಕಾರ ಬಂದು 5 ತಿಂಗಳಾದರೂ ಟೆಕ್ ಆಫ್ ಆಗಿಲ್ಲ ಹಾಗೂ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ಇಷ್ಟೆಲ್ಲ ಹಣದ ಕೊರತೆಗಳಿದ್ದರೂ ಯಾರ ಮೂಗಿಗೆ ತುಪ್ಪ ಸವರಲು ನೀವು ಹೀಗೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿ ಸರ್ಕಾರದ ವಿರುದ್ಧ ಕಿಡಿ ಕಾರಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಪ್ರಜ್ಞಾಹೀನರಾಗಿ ಗೃಹಿಣಿ ಸಾವು

    ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಪ್ರಜ್ಞಾಹೀನರಾಗಿ ಗೃಹಿಣಿ ಸಾವು

    ರಾಮನಗರ: ವೈದ್ಯರ ನಿರ್ಲಕ್ಷ್ಯದಿಂದ ಗೃಹಿಣಿಯೊಬ್ಬರು ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.

    ಚನ್ನಪಟ್ಟಣ ತಾಲೂಕಿನ ಹಾರೋಕೊಪ್ಪ ಗ್ರಾಮದ ನಿವಾಸಿ ರಂಜಿತಾ (26) ಮೃತ ದುರ್ದೈವಿ. ಮೃತಳ ಕುಟುಂಬಸ್ಥರು ಮತ್ತು ಗ್ರಾಮಸ್ಥರು ರಂಜಿತಾಳ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆಸ್ಪತ್ರೆ ಮುಂಭಾಗ ಮೃತ ಶವವಿಟ್ಟು ಪ್ರತಿಭಟನೆ ಮಾಡಿದ್ದಾರೆ.

    ಶುಕ್ರವಾರ ಮೃತ ರಂಜಿತಾ ಸಂತಾನಹರಣ ಶಸ್ತ್ರ ಚಿಕಿತ್ಸೆಗೆಂದು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ರಂಜಿತಾ ಅವರಿಗೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಆದರೆ ಈ ವೇಳೆ ರಂಜಿತಾ ಪ್ರಜ್ಞಾಹೀನರಾಗಿದ್ದಾರೆ. ತಕ್ಷಣ ರಂಜಿತಾಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು.

    ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ತಲುಪುವ ಮೊದಲೇ ರಂಜಿತಾ ಮೃತಪಟ್ಟಿದ್ದಾರೆ. ಇದರಿಂದ ಕುಟುಂಬದವರು ಆಕ್ರೋಶಗೊಂಡು ವಾಪಸ್ ರಾಮನಗರಕ್ಕೆ ಬಂದು ಜಿಲ್ಲಾಸ್ಪತ್ರೆಯ ಬಾಗಿಲಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಾಡಿಗೆ ಹಣ ಪಾವತಿಸದ್ದಕ್ಕೆ ತಹಶೀಲ್ದಾರ್ ವಾಹನದ ಕೆಳಗೆ ಮಲಗಿದ ಕಾರು ಚಾಲಕ

    ಬಾಡಿಗೆ ಹಣ ಪಾವತಿಸದ್ದಕ್ಕೆ ತಹಶೀಲ್ದಾರ್ ವಾಹನದ ಕೆಳಗೆ ಮಲಗಿದ ಕಾರು ಚಾಲಕ

    ಚಾಮರಾಜನಗರ: ವಿಧಾನಸಭಾ ಚುನಾವಣೆ ಕೆಲಸಕ್ಕೆ ಬಾಡಿಗೆಗೆ ಕಾರು ವಾಹನ ಬಳಸಿಕೊಂಡು ಹಣ ಪಾವತಿ ಮಾಡದ ಅಧಿಕಾರಿಗಳ ವಿರುದ್ಧ ಚಾಲಕನೊಬ್ಬ ಚಾಮರಾಜನರದ ಯಳಂದೂರಿನಲ್ಲಿ ವಿಶೇಷವಾಗಿ ಪ್ರತಿಭಟನೆ ಮಾಡಿದ್ದಾರೆ.

    ಚಾಮರಾಜನಗರ ನಿವಾಸಿ ಮಹೇಶ್ ಎಂಬವರು 2018ರ ವಿಧಾನಸಭಾ ಚುನಾವಣೆ ಕೆಲಸಕ್ಕೆ ತಮ್ಮ ಕಾರನ್ನು ಬಾಡಿಗೆಗೆ ಬಿಟ್ಟಿದ್ದರು. ಯಳಂದೂರು ತಹಶೀಲ್ದಾರರು ಕಾರು ಬಳಸಿಕೊಂಡು, ಹಣ ಪಾವತಿಸಿರಲಿಲ್ಲ. ಐದು ತಿಂಗಳು ಕಳೆದರೂ ಬಾಡಿಗೆ ಹಣ ಪಾವತಿಸದೇ ಅಧಿಕಾರಿಗಳು ಸತಾಯಿಸಿದ್ದರು. ಇದರಿಂದಾಗಿ ಯಳಂದೂರು ತಹಶೀಲ್ದಾರ್ ಕಚೇರಿಗೆ ಮಹೇಶ್ ಅವರು ತಮ್ಮ ಮಕ್ಕಳ ಜೊತೆಗೆ ಬಂದು ಪ್ರತಿಭಟನೆ ನಡೆಸಿದರು.

    ಪ್ರತಿಭಟನೆ ವೇಳೆ ಮಹೇಶ್ ಅವರು ತಹಶೀಲ್ದಾರ್ ಗೀತಾ ಹುಡೆದ ಅವರ ವಾಹನದ ಕೆಳಗೆ ಮಲಗಿ, ಬಾಡಿಗೆ ಹಣ ಪಾವತಿ ಮಾಡಿಯೇ ಹೋಗಬೇಕು ಎಂದು ಪಟ್ಟು ಹಿಡಿದರು. ತಾಲೂಕು ಕಚೇರಿ ಸಿಬ್ಬಂದಿ ಎಷ್ಟೇ ಬೇಡಿಕೊಂಡರೂ ದಾರಿ ಬಿಡದ ಮಹೇಶ್ ಅವರು, ಕೆಲ ಹೊತ್ತು ಅಧಿಕಾರಿಗಳ ವಿರುದ್ಧ ಗುಡುಗಿದರು.

    ಕಾರಿಗೆ ಪೆಟ್ರೋಲ್ ಹಾಕಿಸಲು ಸಾಲ ಪಡೆದಿದ್ದೆ. ಅವರು ಕೊಟ್ಟವರು ಈಗ ಹಣ ಮರಳಿಸುವಂತೆ ಒತ್ತಾಯಿಸುತ್ತಿದ್ದಾರೆ. ಸರ್ಕಾರದಿಂದ ಬರಬೇಕಾದ ಬಾಡಿಗೆ ಹಣ ಬಂದಿಲ್ಲ. ಸುತ್ತಮುತ್ತಲಿನ ಗ್ರಾಮಗಳ ಬಾಡಿಗೆ ವಾಹನದಾರರಿಗೆ ಹಣ ಪಾವತಿಯಾಗಿದೆ. ನನ್ನನ್ನು ಸೇರಿ ಐವರ ಬಾಡಿಗೆ ಹಣವನ್ನು ಹಿಡಿದಿಡಲಾಗಿದೆ ಅಂತಾ ಅಧಿಕಾರಿಗಳು ಹೇಳುತ್ತಿದ್ದಾರೆ. ನಾವು ಚುನಾವಣೆ ದಿನ ಕೆಲಸ ಮಾಡಿಲ್ಲ ಅಂತ ಅಧಿಕಾರಿಗಳು ಹೇಳುತ್ತಿದ್ದಾರೆ ಎಂದು ಮಹೇಶ್ ಆರೋಪಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://youtu.be/3_rRJBQIjoI

  • ಓರ್ವನ ಪ್ರತಿಭಟನೆಗೆ 50ಕ್ಕೂ ಹೆಚ್ಚು ಪೊಲೀಸ್ ನಿಯೋಜನೆ!

    ಓರ್ವನ ಪ್ರತಿಭಟನೆಗೆ 50ಕ್ಕೂ ಹೆಚ್ಚು ಪೊಲೀಸ್ ನಿಯೋಜನೆ!

    ಚಿಕ್ಕಬಳ್ಳಾಪುರ: ಠಾಣೆ ಎದುರು ಅಮರಣಾಂತ ಉಪವಾಸ ಸತ್ಯಾಗ್ರಹಕ್ಕಿಳಿದ ಉಪನ್ಯಾಸಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆ ಎದುರು ನಡೆದಿದೆ.

    ಖಾಸಗಿ ಕಾಲೇಜಿನ ಉಪನ್ಯಾಸಕ ಪ್ರದೀಪ್ ಈಶ್ವರ್ ಪೊಲೀಸರು ವಶಕ್ಕೆ ಪಡೆದಾತ. ಅಂದಹಾಗೆ ರಾಜಕೀಯ ಮುಖಂಡ ನವೀನ್ ಕಿರಣ್ ಬೆಂಬಲಿಗ ಉಪನ್ಯಾಸಕ ಪ್ರದೀಪ್ ಈಶ್ವರ್ ಹಾಗೂ ಶಾಸಕ ಸುಧಾಕರ್ ಬೆಂಬಲಿಗ ನಗರಸಭಾ ಸದಸ್ಯ ಗಜೇಂದ್ರ ನಡುವೆ ನಗರಸಭಾ ಆವರಣದಲ್ಲೇ ಗಲಾಟೆ ಆಗಿತ್ತು.

    ಈ ಪ್ರಕರಣದಲ್ಲಿ ಪರಸ್ಪರರು ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಗಲಾಟೆಯ ಸಂಪೂರ್ಣ ಚಿತ್ರಣ ನಗರಸಭೆ ಸಿಸಿಟಿವಿಯಲ್ಲಿ ವಿಡಿಯೋ ರೆಕಾರ್ಡ್ ಆಗಿದ್ದು, ಆ ಸಿಸಿಟಿವಿ ಫೂಟೇಜ್ ಬಿಡುಗಡೆ ಮಾಡುವಂತೆ ಹಾಗೂ ನಗರಸಭಾ ಸದಸ್ಯ ಗಜೇಂದ್ರನನ್ನ ಬಂಧಿಸುವಂತೆ ಉಪನ್ಯಾಸಕ ಪ್ರದೀಪ್ ಆಗ್ರಹಿಸಿ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದರು. ಅಮರಣಾಂತ ಸತ್ಯಾಗ್ರಹಕ್ಕೆ ಅವಕಾಶ ಮಾಡಿಕೊಡದ ಪೊಲೀಸರು ಪ್ರದೀಪ್ ಈಶ್ವರನನ್ನ ವಶಕ್ಕೆ ಪಡೆದುಕೊಂಡರು.

    ಈ ವೇಳೆ ಮಾತನಾಡಿದ ಪ್ರದೀಪ್, ಶಾಸಕ ಸುಧಾಕರ್ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮತ್ತೊಂದೆಡೆ ಓರ್ವ ಉಪನ್ಯಾಸಕ ಪ್ರತಿಭಟನೆಗೆ ಮುಂದಾದರೆ ಚಿಕ್ಕಬಳ್ಳಾಪುರ ಪೊಲೀಸರು 50 ಕ್ಕೂ ಹೆಚ್ಚು ಮಂದಿ ಬಂದೋಬಸ್ತ್ ಗೆ ನಿಯೋಜನೆಗೊಂಡಿದ್ದರು. ಚಿಕ್ಕಬಳ್ಳಾಪುರ ನಗರ, ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ಅಲ್ಲದೆ ಹೆಚ್ಚುವರಿಯಾಗಿ ಶಿಡ್ಲಘಟ್ಟ ನಗರ ಠಾಣಾ ಪಿ ಎಸ್ ಐ ಹಾಗೂ ಗ್ರಾಮಾಂತರ ಠಾಣಾ ಪಿ ಎಸ್ ಐ ಸೇರಿದಂತೆ ಸಿಬ್ಬಂದಿಯನ್ನ ಸಹ ಕರೆಸಿಕೊಂಡಿದ್ದರು. ಇವರು ಸಾಲದೂ ಅಂತ ಒಂದು ಡಿ ಆರ್ ವ್ಯಾನ್ ತುಕಡಿಯೊಂದಿಗೆ ಸಿಬ್ಬಂದಿಯನ್ನ ನಿಯೋಜನೆಗೊಳಿಸಿದ್ದರು.

    ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆ ಎದುರು ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಅಂತ ಉಪನ್ಯಾಸಕ ಪ್ರದೀಪ್ ಅಂಬೇಡ್ಕರ್ ಭಾವಚಿತ್ರ ಹಿಡಿದು ಕೂತು ಪ್ರತಿಭಟನೆ ನಡೆಸಿದ್ದರು. ಇತ್ತ ಪೊಲೀಸ್ ಠಾಣೆ ಬಳಿ ಬಂದ ಚಿಕ್ಕಬಳ್ಳಾಪುರ ವೃತ್ತ ನಿರೀಕ್ಷಕ ಸುದರ್ಶನ್ 50ಕ್ಕೂ ಹೆಚ್ಚು ಮಂದಿ ಪೊಲೀಸರೊಂದಿಗೆ ಪರಿಸ್ಥಿತಿ ನಿಭಾಯಿಸಿ, ಪ್ರದೀಪ್ ಈಶ್ವರ್ ನನ್ನ ವಶಕ್ಕೆ ಪಡೆದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮುಖ್ಯ ಶಿಕ್ಷಕಿ ವರ್ಗಾವಣೆ ರದ್ದು ಖಂಡಿಸಿ ಶಾಲೆಗೆ ಬೀಗ ಹಾಕಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

    ಮುಖ್ಯ ಶಿಕ್ಷಕಿ ವರ್ಗಾವಣೆ ರದ್ದು ಖಂಡಿಸಿ ಶಾಲೆಗೆ ಬೀಗ ಹಾಕಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

    ಮೈಸೂರು: ಮುಖ್ಯ ಶಿಕ್ಷಕಿಯ ವರ್ಗಾವಣೆಯನ್ನು ಖಂಡಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಗೆ ಬೀಗ ಹಾಕಿ ಪ್ರತಿಭಟಿಸಿದ್ದಾರೆ.

    ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಡಿ.ಬಿ.ಕುಪ್ಪೆ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಮುಖ್ಯ ಶಿಕ್ಷಕಿ ಪ್ರತಿಮಾ ಹಲವಾರು ವರ್ಷದಿಂದ ಕರ್ತವ್ಯ ನಿರ್ವಹಿಸಿ ವಿದ್ಯಾರ್ಥಿ ಸ್ನೇಹಿ ಶಿಕ್ಷಕಿಯಾಗಿದ್ದರು. ಆದರೆ ಈಗ ಅವರನ್ನು ಸರ್ಕಾರ ಬೇರೆಡೆಗೆ ವರ್ಗಾವಣೆ ಮಾಡಿದೆ. ಇದನ್ನು ಖಂಡಿಸಿ ಶಾಲೆಯ ಕೊಠಡಿಗಳಿಗೆ ಬೆಳಗ್ಗೆಯಿಂದಲೇ ಬೀಗ ಹಾಕಿದ್ದಾರೆ.

    ಕ್ಷೇತ್ರ ಶಿಕ್ಷಣಾಧಿಕಾರಿ ಬಂದು ವರ್ಗಾವಣೆ ರದ್ದು ಮಾಡುವವರೆಗೂ ಶಾಲೆಗೆ ಹೋಗಲ್ಲ ಎಂದು ಪಟ್ಟು ಹಿಡಿದು ಮಕ್ಕಳು ಪ್ರತಿಭಟನೆ ನಡೆಸುತ್ತಿದ್ದಾರೆ. ಕ್ಷೇತ್ರ ಸಂಪನ್ಮೂಲ ಅಧಿಕಾರಿ ಶಶಿಧರ ಹಾಗೂ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯತ್ ಅಧ್ಯಕ್ಷ ತಿರುಪತಿ ನಾಯಕ ಮುಖ್ಯ ಶಿಕ್ಷಕಿ ಅವರನ್ನು ವೈಯಕ್ತಿಕ ದ್ವೇಷದಿಂದ ವರ್ಗಾವಣೆ ಮಾಡಿಸಿದ್ದಾರೆ ಎಂದು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಆರೋಪಿಸಿದ್ದಾರೆ.

    ಮೇಡಂ ಈ ಶಾಲೆಗೆ ಬಂದು 12 ವರ್ಷಗಳಾಗಿದೆ. ಇಲ್ಲಿಯವರೆಗೂ ಈ ಶಾಲೆಯಲ್ಲಿ ಯಾವುದೇ ರೀತಿ ತೊಂದರೆ ಇಲ್ಲ. ಈ ಮೇಡಂ ಮಕ್ಕಳಿಗೆ ಒಳ್ಳೆಯ ಪಾಠ, ನಡವಳಿಕೆ ಮತ್ತು ನಲಿಕಲಿಯನ್ನು ಕಲಿಸಿಕೊಂಡು ಬಂದಿದ್ದಾರೆ. ಈಗ ಏಕಾಏಕಿ ಮೇಡಂ ಅವರನ್ನು ವರ್ಗಾವಣೆ ಮಾಡಿದ್ದಾರೆ. ಬೆಳಗ್ಗೆ 8.30 ಕ್ಕೆ ಬಂದು ಸಂಜೆ 5 ಗಂಟೆಯವರೆಗೂ ಮಕ್ಕಳಿಗೆ ಪಾಠ ಹೇಳಿಕೊಡುತ್ತಿದ್ದರು. ಇಂತಹ ಶಿಕ್ಷಕಿ ಮತ್ತೆ ಸಿಗುವುದಿಲ್ಲ, ಆದ್ದರಿಂದ ಈ ಶಾಲೆಯಲ್ಲೇ ಕರ್ತವ್ಯ ನಿರ್ವಹಿಸಬೇಕೆಂದು ಆಗ್ರಹಿಸಿ ನಾವು ಪ್ರತಿಭಟಿಸುತ್ತಿದ್ದೇವೆ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸ್ಟೈಫಂಡ್‍ಗಾಗಿ ಕ್ಯಾಂಡಲ್ ಹಿಡಿದು ಪ್ರತಿಭಟಿಸಿದ ವೈದ್ಯಕೀಯ ವಿದ್ಯಾರ್ಥಿಗಳು

    ಸ್ಟೈಫಂಡ್‍ಗಾಗಿ ಕ್ಯಾಂಡಲ್ ಹಿಡಿದು ಪ್ರತಿಭಟಿಸಿದ ವೈದ್ಯಕೀಯ ವಿದ್ಯಾರ್ಥಿಗಳು

    ದಾವಣಗೆರೆ: ಜಿಲ್ಲಾಸ್ಪತ್ರೆಯ ವೈದ್ಯ ವಿದ್ಯಾರ್ಥಿಗಳು ಶಿಷ್ಯ ವೇತನಕ್ಕಾಗಿ ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ವಿದ್ಯಾರ್ಥಿಗಳು ಕ್ಯಾಂಡಲ್ ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

    ರಾಜ್ಯ ಸರ್ಕಾರ 8 ತಿಂಗಳ ಶಿಷ್ಯ ವೇತನವನ್ನು ನೀಡದ್ದರಿಂದ ಕಳೆದ ಎರಡು ದಿನಗಳಿಂದ 235 ವೈದ್ಯ ವಿದ್ಯಾರ್ಥಿಗಳು ನಗರದ ಚಿಗಟೇರಿ ಜಿಲ್ಲಾಸ್ಪತ್ರೆ ಮುಂಭಾಗ ಪೆಂಡಲ್ ಹಾಕಿ ಪ್ರತಿಭಟನೆ ನಡೆಸುತ್ತಿದ್ದರು. ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರೂ, ರಾಜ್ಯ ಸರ್ಕಾರ ಇದಕ್ಕೂ ನಮಗೂ, ಸಂಬಂಧವಿಲ್ಲದಂತೆ ಕಣ್ಣು ಮುಚ್ಚಿ ಕುಳಿತುಕೊಂಡಿದೆ.

    ಅಸಮಾಧಾನಗೊಂಡಿದ್ದ ವಿದ್ಯಾರ್ಥಿಗಳು ಇಂದು ಕ್ಯಾಂಡಲ್ ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ, ನಗರದ ಪ್ರಮುಖ ಬೀದಿಗಳಲ್ಲಿ ಕ್ಯಾಂಡಲ್ ಹಿಡಿದು ಪ್ರತಿಭಟನೆಯನ್ನು ನಡೆಸಿದವು. ಕೂಡಲೇ ಸರ್ಕಾರ ಸಮಸ್ಯೆಯನ್ನು ಬಗೆಹರಿಸಿ, ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನ ನೀಡುವವರೆಗೂ, ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಿಲ್ಲವೆಂದು ಇದೇ ವೇಳೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನನ್ನ ಸಾವಿಗೆ ಎಎಸ್‍ಐ ಕಾರಣ – ಡೆತ್‍ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

    ನನ್ನ ಸಾವಿಗೆ ಎಎಸ್‍ಐ ಕಾರಣ – ಡೆತ್‍ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

    – ಠಾಣೆಯ ಮುಂದೆ ಶವವಿಟ್ಟು ಕುಟುಂಬಸ್ಥರಿಂದ ನ್ಯಾಯಕ್ಕಾಗಿ ಪ್ರತಿಭಟನೆ

    ಚಿಕ್ಕೋಡಿ: ಜಮೀನು ವಿವಾದದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ವಿಷ ಸೇವಿಸಿ ಸಾವನ್ನಪ್ಪಿದ್ದು, ಆತನ ಸಾವಿಗೆ ನ್ಯಾಯಸಿಗಬೇಕು ಎಂದು ಆಗ್ರಹಿಸಿ ಕುಟುಂಬಸ್ಥರು ರಾಯಭಾಗ ಪೊಲೀಸ್ ಠಾಣೆ ಎದುರು ಹೆಣವನ್ನು ಇಟ್ಟು ಪ್ರತಿಭಟನೆ ನಡೆಸಿದ್ದಾರೆ.

    ರಾಯಭಾಗ ಹೊರವಲಯದ ಆನೆಬಾಯಿಖೋಡಿ ನಿವಾಸಿ ಸದಾಶಿವ ಶನಿವಾರ ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದಾಶಿವ ಸಾವಿಗೆ ಪೊಲೀಸರೇ ಕಾರಣ ಎಂದು ಆರೋಪಿಸಿ ಸಂಬಂಧಿಕರು ಪ್ರತಿಭಟನೆಗೆ ಇಳಿದಿದ್ದಾರೆ.

    ಸದಾಶಿವ ಮತ್ತು ಅವರ ಸಹೋದರರ ಮಧ್ಯೆ ಜಮೀನು ವಿಚಾರವಾಗಿ ಆಗಾಗ ಕಲಹವಾಗುತಿತ್ತು. ಈ ಹಿನ್ನೆಲೆಯಲ್ಲಿ ಮೃತ ಸದಾಶಿವ ತನ್ನ ಸಹೋದರರ ಮೇಲೆ ರಾಯಭಾಗ ಪೊಲೀಸರಿಗೆ ದೂರು ನೀಡಲು ಹೋದರೂ ಸಹ ಪೊಲೀಸರು ದೂರು ದಾಖಲಿಸಿಕೊಳ್ಳದೇ ಸದಾಶಿವನನ್ನೆ ಗದರಿಸಿ ಕಳಿಸುತ್ತಿದ್ದರು ಎಂದು ಮೃತನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ದಯಾದಿಗಳ ಕಲಹ ಮತ್ತು ಪೊಲೀಸರು ದೂರು ಸ್ವೀಕರಿಸಿದ್ದಕ್ಕೆ ಮನನೊಂದು ಸದಾಶಿವ ತನ್ನ ಸಾವಿಗೆ ರಾಯಭಾಗ ಎಎಸ್‍ಐ ಸರಿಕರ್ ಕಾರಣ ಅಂತ ಹೇಳಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಆತ್ಮಹತ್ಯೆಗೆ ಪೊಲೀಸರೇ ಕಾರಣ. ಹೀಗಾಗಿ ಹೆಣವನ್ನು ಮುಂದಿಟ್ಟುಕೊಂಡು ನ್ಯಾಯಕ್ಕಾಗಿ ಪ್ರತಿಭಟನೆ ಮಾಡಿದ್ದೇವೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv