Tag: ಪ್ರತಿಭಟನೆ

  • ಹಿಂಸಾರೂಪಕ್ಕೆ ತಿರುಗಿದ ಶಬರಿಮಲೆ ಪ್ರತಿಭಟನೆ: ಗುಂಡಾಗಿರಿ ಪ್ರದರ್ಶಿಸಿದ ಪೊಲೀಸರು!

    ಹಿಂಸಾರೂಪಕ್ಕೆ ತಿರುಗಿದ ಶಬರಿಮಲೆ ಪ್ರತಿಭಟನೆ: ಗುಂಡಾಗಿರಿ ಪ್ರದರ್ಶಿಸಿದ ಪೊಲೀಸರು!

    ತಿರುವನಂತಪುರಂ: ಪುರಾತನ ಧಾರ್ಮಿಕ ಕ್ಷೇತ್ರ ಶಬರಿಮಲೆಗೆ ಮಹಿಳೆಯ ಪ್ರವೇಶ ವಿಚಾರವಾಗಿ ಶಬರಿಮಲದ ನಿಳಕ್ಕಲ್ ಬಳಿ ನಡೆಯುತ್ತಿದ್ದ ಪ್ರತಿಭಟನೆ ಉಗ್ರ ರೂಪ ಪಡೆದುಕೊಂಡಿದೆ.

    ಹೌದು, ಸುಪ್ರೀಂ ಕೋರ್ಟ್ ತೀರ್ಪು ಬೆನ್ನಲ್ಲೇ ಮಹಿಳೆಯರು ಇಂದು ಶಬರಿಮಲೆಯ ಪ್ರವೇಶಕ್ಕೆ ಮುಂದಾಗಿದ್ದರು. ಆದರೆ ಮಹಿಳೆಯರಿಗೆ ಮಾತ್ರ ಯಾವುದೇ ಕಾರಣಕ್ಕೂ ಮಣಿಕಂಠನ ದರ್ಶನಕ್ಕೆ ಅವಕಾಶ ನೀಡುವುದಿಲ್ಲವೆಂದು ಪ್ರಭಾವಿ ನಾಯರ್ ಸಮಾಜ, ಹಿಂದೂಪರ ಸಂಘಟನೆಗಳು, ಬಿಜೆಪಿ ಹಾಗೂ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಹಿಂಸಾರೂಪ ಪಡೆದಿದೆ.

    ಶಬರಿಗಿರಿ ತಲುಪುವ ಮುಖ್ಯ ದ್ವಾರವಾದ ನಿಳಕ್ಕಲ್‍ನಲ್ಲಿ ಬೆಳಗ್ಗೆಯಿಂದಲೂ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿತ್ತು. ಇಲ್ಲಿಂದ 20 ಕಿ.ಮೀ. ಭಕ್ತರು ಕಾಲು ದಾರಿಯಲ್ಲೇ ಅಯ್ಯಪ್ಪನ ದೇಗುಲ ತಲುಪಬೇಕಿದೆ. ಇದರ ಜೊತೆ ಅಯ್ಯಪ್ಪನ ದೇಗುಲದ ದ್ವಾರ ತೆರೆಯಲು ಸಮಯ ಸಮೀಸುತ್ತಿದ್ದಂತೆಯೇ ಉದ್ರಿಕ್ತರು ಪ್ರತಿಭಟನೆಯನ್ನು ಹಿಂಸಾರೂಪಕ್ಕೆ ಬದಲಾಯಿಸಿದರು. ಅಯ್ಯಪ್ಪನ ದರ್ಶನಕ್ಕೆ ಆಗಮಿಸುತ್ತಿದ್ದ ಮಹಿಳೆಯರು ಹಾಗೂ ಹೆಣ್ಣು ಮಕ್ಕಳನ್ನು ಮಾರ್ಗಮಧ್ಯದಲ್ಲೇ ತಡೆದರು.

    ಇಂದು ಏನಾಯ್ತು?
    ಇಂದು ಬೆಳಗ್ಗೆ ಸ್ವತಃ ಮಹಿಳೆಯರಿಂದಲೇ ನಿಳಕ್ಕಲ್ ಹಾಗೂ ಪಂಪಾದಲ್ಲಿ ಪ್ರತಿಭಟನೆ ನಡೆಯಿತು. ಅಯ್ಯಪ್ಪನ ಸನ್ನಿಧಿಗೆ ಎಲ್ಲಾ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಅವಕಾಶ ನೀಡಿದ್ದು ಸರಿಯಲ್ಲ ಎಂದು ಮಹಿಳೆಯರು ಆಕ್ರೋಶ ಹೊರಹಾಕಿದರು. ಅಯ್ಯಪ್ಪನ ದರ್ಶನ ಪಡೆಯಲು ಮಕ್ಕಳೊಂದಿಗೆ ತೆರಳಿದ್ದ ಮಹಿಳೆಗೆ ಪ್ರತಿಭಟನಾಕಾರರು ದಾರಿಯಲ್ಲೇ ದಿಗ್ಬಂಧನ ಹಾಕಿದರು. ಇದರಿಂದ ಆತಂಕಕ್ಕೀಡಾದ ಮಹಿಳೆ ಮಗುವಿನೊಂದಿಗೆ ಹಿಂತಿರುಗಿದರು.

    ಮಧ್ಯಾಹ್ನ 2 ಗಂಟೆ ವೇಳೆಗೆ ಪ್ರತಿಭಟನೆ ಹಿಂಸಾರೂಪ ಪಡೀತು. ವರದಿಗೆ ತೆರಳಿದ್ದ ಇಂಗ್ಲೀಷ್ ನ್ಯೂಸ್ ಚಾನೆಲ್‍ಗಳ ವರದಿಗಾರ್ತಿಯರ ಮೇಲೆ ಹಲ್ಲೆ ನಡೆಸಲಾಯಿತು. ಪತ್ರಕರ್ತೆಯರು ಕಾರು ಹಾಗೂ ಪೊಲೀಸ್ ವ್ಯಾನ್‍ನಲ್ಲಿ ಭದ್ರತೆ ಪಡೆದರೂ, ಉದ್ರಿಕ್ತರು ದಾಳಿ ನಡೆಸಿದರು. ಮಧ್ಯಾಹ್ನ 3.45ರ ವೇಳೆಗೆ ಅಯ್ಯಪ್ಪನ ಸನ್ನಿಧಾನ ರಣಾಂಗಣವಾಗಿ ಮಾರ್ಪಟ್ಟಿತ್ತು. ಪೊಲೀಸರ ಮೇಲೆಯೇ ಪ್ರತಿಭಟನಾಕಾರರು ಕಲ್ಲುತೂರಿದರು. ಪರಿಸ್ಥಿತಿ ಮತ್ತಷ್ಟು ವಿಷಮಿಸಿ ಹಿಂಸಾಚಾರ ಭುಗಿಲೆದ್ದಿತ್ತು. ಬೆಳಗ್ಗಿನಿಂದಲೂ ಎಲ್ಲವನ್ನೂ ಸಮಚಿತ್ತದಿಂದಲೇ ನಿಭಾಯಿಸಿದ್ದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಬೀಸಿದರು.

    ಪೊಲೀಸರ ಲಾಠಿ ಚಾರ್ಜ್ ನಿಂದ ಮತ್ತಷ್ಟು ರೊಚ್ಚಿಗೆದ್ದ ಪ್ರತಿಭಟನಾಕಾರರು ಬೈಕ್‍ವೊಂದನ್ನ ಜಖಂಗೊಳಿಸಿ, ಕೇರಳ ಸಾರಿಗೆ ಬಸ್ ಮೇಲೆ ಕಲ್ಲು ತೂರಿ ಗ್ಲಾಸ್‍ಗಳನ್ನ ಹೊಡೆದು ಹಾಕಿದರು. ಪೊಲೀಸರ ಸರ್ಪಗಾವಲನ್ನೂ ಲೆಕ್ಕಿಸದೇ, ಸುಪ್ರೀಂಕೋರ್ಟ್ ತೀರ್ಪಲ್ಲ. ಸಂಪ್ರದಾಯವೇ ಮುಖ್ಯ ಎಂದು ರೊಚ್ಚಿಗೆದ್ದರು. ಈ ಮಧ್ಯೆ ಸ್ವಾಮಿ ಅಯ್ಯಪ್ಪ ಶಬರಿಮಲೆ ಸುತ್ತಲಿನ ಬುಡಕಟ್ಟು ಜನರ ಆರಾಧ್ಯ ದೈವವಾಗಿದ್ದು, ಶತಮಾನಗಳಿಂದ ಆಚರಿಸಿಕೊಂಡು ಬಂದ ಸಂಪ್ರದಾಯಗಳನ್ನು ಸರ್ಕಾರ ನಾಶಮಾಡಲು ಹೊರಟಿದೆ ಎಂದು ಬುಡಕಟ್ಟು ಸಮುದಾಯದ ಮುಖಂಡರು ಸಹ ಕಿಡಿಕಾರಿದರು.

    ಪೊಲೀಸರಿಂದ ಗುಂಡಾ ವರ್ತನೆ:
    ಸಂಜೆ ವೇಳೆಗೆ ಪ್ರತಿಭಟನೆ ಹಿಂಸಾರೂಪ ಪಡೆದ ಬೆನ್ನಲ್ಲೇ, ಪೊಲೀಸರು ಲಾಠಿ ಚಾರ್ಜ್ ಮಾಡುವ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸಿದ್ದರು. ಇದಾದ ಬಳಿಕ ಪಂಪಾದ ಬಳಿ ಪ್ರತಿಭಟನಾಕಾರರು ನಿಲ್ಲಿಸಿದ್ದ ವಾಹನಗಳ ಮೇಲೆ ಪೊಲೀಸರು ಗುಂಡಾ ವರ್ತನೆ ತೋರಿಸಿದ್ದಾರೆ. ಪೊಲೀಸರು ಸ್ಥಳದಲ್ಲಿ ನಿಲ್ಲಿಸಿದ್ದ ಬೈಕುಗಳನ್ನು ಜಂಖಗೊಳಿಸಿದ್ದಾರೆ. ಅಲ್ಲದೇ ಅನೇಕ ವಾಹನಗಳನ್ನು ಮನಸೋ ಇಚ್ಛೆ ನಾಶಮಾಡಿದ್ದಾರೆ. ಪೊಲೀಸರ ವರ್ತನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ಪ್ರತಿಭಟನೆ ಮತ್ತಷ್ಟು ಕಾವು ಪಡೆದುಕೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಣರಂಗವಾಯ್ತು ಪ್ರತಿಭಟನೆ: ಪೊಲೀಸರ ಮೇಲೆ ಅಯ್ಯಪ್ಪ ಭಕ್ತರಿಂದ ಕಲ್ಲು ತೂರಾಟ!

    ರಣರಂಗವಾಯ್ತು ಪ್ರತಿಭಟನೆ: ಪೊಲೀಸರ ಮೇಲೆ ಅಯ್ಯಪ್ಪ ಭಕ್ತರಿಂದ ಕಲ್ಲು ತೂರಾಟ!

    ತಿರುವನಂತಪುರ: ಬೆಳಗ್ಗೆಯಿಂದಲೂ ಬೂದಿ ಮುಚ್ಚಿದ ಕೆಂಡದಂತ್ತಿದ್ದ ನಿಳಕ್ಕಲ್ ಬಳಿಯ ಅಯ್ಯಪ್ಪ ಭಕ್ತರ ಪ್ರತಿಭಟನೆ ಸಂಜೆ ವೇಳೆಗೆ ಹಿಂಸಾಚಾರಕ್ಕೆ ತಿರುಗಿದ್ದು, ಭಕ್ತರು ಹಾಗೂ ಪೊಲೀಸರ ನಡುವೇ ಕಲ್ಲು ತೂರಾಟಕ್ಕೆ ನಡೆದಿದೆ.

    ನಿಳಕ್ಕಲ್ ಬಳಿ ಬೆಳಗ್ಗೆಯಿಂದ ಶಬರಿಮಲೆಗೆ ತೆರಳುತ್ತಿದ್ದ ಪ್ರತಿ ವಾಹನವನ್ನು ಪರಿಶೀಲನೆ ನಡೆಸಿ ಮಹಿಳಾ ಭಕ್ತರನ್ನು ತಡೆಯುತ್ತಿದ್ದರು. ಈ ವೇಳೆ ವರದಿ ಮಾಡಲು ತೆರಳಿದ್ದ ಮಹಿಳಾ ಪತ್ರಕರ್ತರ ಮೇಲೂ ದೌರ್ಜನ್ಯ ನಡೆಸಿದ ಭಕ್ತರು ಹಲ್ಲೆ ನಡೆಸಿದ್ದರು. ಇದರ ನಡುವೆಯೇ ಪ್ರತಿಭಟನಕಾರರು ಪೊಲೀಸ್ ಬೈಕನ್ನು ನಾಶ ಪಡಿಸಿದ್ದರು. ಅಲ್ಲದೇ ಪೊಲೀಸ್ ಕ್ಯಾಪ್ ಮೇಲೂ ಕಲ್ಲೆಸೆದಿದ್ದರು.

    ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಳ್ಳಲು ಮುಂದಾದ ಪೊಲೀಸರು ಪ್ರತಿಭಟನಕಾರರ ಮೇಲೆ ಲಾಠಿ ಚಾರ್ಜ್ ನಡೆಸಿ ಗುಂಪನ್ನು ಚದುರಿಸುವ ಪ್ರಯತ್ನ ನಡೆಸಿದರು.

    ಬೆಳಗ್ಗೆಯಿಂದ ನಿರಂತರವಾಗಿ ಪೊಲೀಸರ ಕಾರ್ಯಕರ್ತರ ನಡುವೇ ವಾಗ್ವಾದ ನಡೆಯುತ್ತಲೇ ಇತ್ತು. ಆದರೂ ಅಯ್ಯಪ್ಪ ದರ್ಶನ ಪಡೆಯಲು ಇಷ್ಟಪಟ್ಟಿದ್ದ ಮಹಿಳಾ ಭಕ್ತರಿಗೆ ಬೀಗಿ ಪೊಲೀಸ್ ಭದ್ರತೆ ನೀಡಿದ್ದ ಪೊಲೀಸರು ಅವರನ್ನು ಅಯ್ಯಪ್ಪ ಬೆಟ್ಟದತ್ತ ಕರೆದ್ಯೊಯಲು ಮುಂದಾದರು. ಈ ವೇಳೆ ರೊಚ್ಚಿಗೆದ್ದ ಭಕ್ತರು ಪೊಲೀಸ್ ಜೀಪ್ ಸೇರಿದಂತೆ ಕ್ಯಾಪ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಇವತ್ತೇ ನಾರಿಯರಿಗೆ ಮಣಿಕಂಠನ ದರ್ಶನ ಸಿಗುತ್ತಾ – ಅಯ್ಯಪ್ಪನ ಊರಲ್ಲಿ ಗಲಾಟೆ ಜೋರು

    ಇವತ್ತೇ ನಾರಿಯರಿಗೆ ಮಣಿಕಂಠನ ದರ್ಶನ ಸಿಗುತ್ತಾ – ಅಯ್ಯಪ್ಪನ ಊರಲ್ಲಿ ಗಲಾಟೆ ಜೋರು

    ತಿರುವನಂತಪುರ: ಇಂದು ಸಂಜೆ 5 ಗಂಟೆ ವೇಳೆಗೆ ದೇವಾಲಯದ ಬಾಗಿಲು ತೆರೆಯಲಿರುವ ಹಿನ್ನೆಲೆಯಲ್ಲಿ ಕೇರಳಾದ್ಯಂತ ಅಯ್ಯಪ್ಪಸ್ವಾಮಿ ಉಳಿಸಿ ಆಂದೋಲನ ಜೋರಾಗಿದೆ.

    ಸುಪ್ರೀಂ ಕೋರ್ಟ್ ಪ್ರವೇಶಕ್ಕೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಯಾವೊಬ್ಬ ಮಹಿಳೆಯರು ದೇವಾಲಯಕ್ಕೆ ತೆರಳದಂತೆ ಭಕ್ತರು ಹಾಗೂ ಮಹಿಳಾ ಹೋರಾಟಗಾರರು ಸ್ಥಳದಲ್ಲಿ ಅಡ್ಡಗಟ್ಟಿ ಪ್ರತಿ ವಾಹನವನ್ನು ಪರಿಶೀಲನೆ ನಡೆಸಿ ಮುಂದಕ್ಕೆ ಬಿಡುತ್ತಿದ್ದಾರೆ. ದೇವಾಲಯದ ಆಡಳಿತ ಮಂಡಳಿಕಾರ್ಯಕರ್ತರು, ಭಕ್ತರು ದೇವಾಲಯದ ಬೆಟ್ಟದ ಕೆಳಭಾಗದ ಅಂದರೆ ದೇವಾಲಯದಿಂದ 20 ಕಿಮೀ ದೂರದ ನಿಳಕ್ಕಲ್ ಬಳಿಯೇ ವಾಹನಗಳನ್ನು ತಡೆಯುತ್ತಿದ್ದಾರೆ.

    ಸುಪ್ರೀಂ ಕೋರ್ಟ್ ಆದೇಶವನ್ನು ಧಿಕ್ಕರಿಸಿರುವ ಭಕ್ತರು ಸ್ಥಳದಲ್ಲಿ ಭದ್ರಕೋಟೆ ನಿರ್ಮಿಸಿದ್ದಾರೆ. ಪ್ರತಿಭಟನೆ ನಡೆಸುತ್ತಿರುವವರಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಮಂಗಳವಾರ ತಿರುವಾಂಕೂರು ಆಡಳಿತ ಮಂಡಳಿ, ಪಂದಳಂ ರಾಜಮನೆತನ ಹಾಗೂ ಸರ್ಕಾರ ನಡುವೆ ಏರ್ಪಡಿಸಿದ್ದ ಸಂಧಾನ ಸಭೆಯೂ ವಿಫಲವಾಗಿದೆ. ಪೊಲೀಸರು ನಡೆಸಬೇಕಾದ ಕಾರ್ಯವನ್ನು ಕಾರ್ಯಕರ್ತರು ಕೈಗೆತ್ತುಕೊಂಡಿದ್ದು ದೇವಾಲಯ ಪ್ರದೇಶದಲ್ಲಿ ಹೈ ಆಲರ್ಟ್ ಘೋಷಣೆ ಮಾಡಲಾಗಿದೆ.

    ಈ ನಡುವೆ ವಿವಾದ ಕುರಿತು ಪ್ರತಿಕ್ರಿಯೆ ನೀಡಿರುವ ಪತ್ತನಂತಿಟ್ಟಂ ಕ್ಷೇತ್ರದ ಸಂಸದ ಆಂಟೋ ಆ್ಯಂಟನಿ ಅವರು, ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿ ಕೋರ್ಟ್ ತೀರ್ಪು ಜಾರಿಗೆ ಅವಕಾಶ ನೀಡಬೇಕು ಎಂದು ತಿಳಿಸಿದ್ದಾರೆ. ದೇವಾಲಯದ ಪ್ರದೇಶದಲ್ಲಿ ಶಾಂತಿ ಕಾಪಾಡಲಿ ಸರ್ಕಾರ ಕೂಡ ಕ್ರಮಕೈಗೊಂಡಿದ್ದು ಜಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನೇಮಕ ಮಾಡಿ ಪ್ರದೇಶವನ್ನು ವಶಕ್ಕೆ ಪಡೆದಿದೆ.

    ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ವಿಚಾರವಾದಿ ಪ್ರೋ ಭಗವಾನ್, ದೇವಾಲಯ ಪ್ರವೇಶಕ್ಕೆ ತಡೆ ನೀಡಿರುವುದು ಅವೈಜ್ಞಾನಿಕ ನಡೆ. ಮಹಿಳೆಯರಿಗೆ ತಡೆ ನೀಡಿರುವುದು ಕಂದಚಾರ ಆಚರಣೆ ಪ್ರತಿರೂಪ. ಮಹಿಳೆಯಲ್ಲಿ ನಡೆಯುವ ಕ್ರೀಯೆ ಪ್ರಕೃತಿಯ ವರ. ಆದರೆ ಈ ಕಾರಣದಿಂದ ಪ್ರವೇಶ ನಿರಾಕರಿಸಬಾರದು. ಮಹಿಳೆಯರೇ ಅಲ್ಲಿ ಪ್ರತಿಭಟನೆ ನಡೆಸುತ್ತಿರುವುದು ವಿಷಾದನೀಯ. ಆಡಳಿತ ಮಂಡಳಿ ಹಾಗೂ ರಾಜಮನೆತನ ನಡೆ ಕೂಡ ಅವರ ಮೌಢ್ಯವನ್ನು ಬೆಳೆಸುತ್ತಿದೆ. ಆದರೆ ಕೇರಳ ಸರ್ಕಾರ ಸುಪ್ರೀಂ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸದೇ ಇರುವುದು ಉತ್ತಮ ನಡೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ದೇವಾಲಯಕ್ಕೆ ಮಹಿಳೆಯರ ಪ್ರವೇಶ ನಿರಾಕರಣೆ ಮಾಡಿರುವುದು ವೈಜ್ಞಾನಿಕ ಕಾರಣಕ್ಕೂ ಆಗಿರಬಹುದು, ಏಕೆಂದರೆ ದೇವದಾಸಿ ಪದ್ಧತಿ ಜಾರಿ ಇದ್ದ ವೇಳೆ ಅಂತಹ ಘಟನೆಗಳು ಅಲ್ಲಿ ನಡೆಯಬಾರದು ಎಂಬ ಕಾರಣದಿಂದಲೂ ನಿಷೇಧ ಮಾಡಿರಬಹುದು. ಆದರೆ ಇಂದು ಸಂವಿಧಾನ ಎಲ್ಲಾ ಜನರಿಗೂ ಸಮಾನತೆ ಹಕ್ಕು ನೀಡಿದೆ. ಅದ್ದರಿಂದ ಮಹಿಳೆಯ ಪ್ರವೇಶಕ್ಕೆ ತಡೆ ನೀಡಬಾರದು ಎಂದು ತಿಳಿಸಿದರು.

    ತುಲಾ ಮಾಸದ ಆರಂಭದ ಕಾರಣ ಇಂದಿನಿಂದ 6 ದಿನಗಳ ಕಾಲ ದೇವಾಲಯ ತೆರೆಯಲಾಗುತ್ತದೆ, 6 ದಿನಗಳ ಕಾಲ ನಡೆಯುವ ವಿಶೇಷ ಪೂಜೆಯ ಬಳಿಕ ಮತ್ತೆ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ಪತ್ರಕರ್ತೆಯೊಬ್ಬರು ಕಾರಿನಲ್ಲಿ ತೆರಳಲು ಯತ್ನಿಸಿದ ವೇಳೆ ಮಹಿಳಾ ಪ್ರತಿಭಟನಕಾರರೇ ಕಾರಿನ ಗಾಜನ್ನು ಧ್ವಂಸಗೊಳಿಸಿದ್ದಾರೆ. ಈ ವೇಳೆ ಕೆಲ ಕಾಲ ಸ್ಥಳದಲ್ಲಿ ಅಂತಕದ ವಾತಾವರಣ ನಿರ್ಮಾಣವಾಗಿತ್ತು. ಅಲ್ಲದೇ ಮಹಿಳೆಯರು ದೇವಾಲಯ ಪ್ರವೇಶ ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಶಿವಸೇನೆಯ ಮಹಿಳಾ ಕಾರ್ಯಕರ್ತೆಯರು ಬೆದರಿಕೆ ಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೆಂಬಲ ಬೆಲೆಗೆ ಆಗ್ರಹ: ರಸ್ತೆಗೆ ಹೂ, ತರಕಾರಿ ಸುರಿದು ಪ್ರತಿಭಟನೆ

    ಬೆಂಬಲ ಬೆಲೆಗೆ ಆಗ್ರಹ: ರಸ್ತೆಗೆ ಹೂ, ತರಕಾರಿ ಸುರಿದು ಪ್ರತಿಭಟನೆ

    ಕೋಲಾರ: ಹೂ, ಹಣ್ಣು ಹಾಗೂ ತರಕಾರಿಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ಕೋಲಾರದಲ್ಲಿ ರೈತರು ಟೊಮೆಟೊ ಹಾಗೂ ಹೂವು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ವೃತ್ತದಲ್ಲಿ ರಸ್ತೆಗೆ ಟೊಮೆಟೊ, ತರಕಾರಿಗಳನ್ನು ಸುರಿದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪುಟ್ಟಣ್ಣಯ್ಯ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಭಾವಚಿತ್ರ ಹಿಡಿದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ದಿಕ್ಕಾರ ಕೂಗಿದರು. ಬಳಿಕ ಟೊಮೆಟೊ ರಾಶಿಯ ಮೇಲೆ ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು.

    ರಸ್ತೆ ಮಧ್ಯೆ ಟೊಮೆಟೊ ತೋಟವನ್ನು ನಿರ್ಮಿಸಿ, ಅದರಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡ ಅಣುಕು ಪ್ರದರ್ಶನ ಮಾಡಿದರು. ಬರಪೀಡಿತ ಕೋಲಾರ ಜಿಲ್ಲೆಯಲ್ಲಿ ತರಕಾರಿಗಳು ಸೇರಿದಂತೆ ಟೊಮೊಟೊ ಬೆಲೆ ಕುಸಿತವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

    ಟೊಮೆಟೊ ಬೆಳೆಯಲು ಸಾವಿರಾರು ರೂಪಾಯಿ ವೆಚ್ಚ ಮಾಡುತ್ತೇವೆ. ಆದರೆ ನಮಗೆ ಸೂಕ್ತ ಬೆಲೆ ಸಿಗುತ್ತಿಲ್ಲ, ಇತ್ತ ಬೆಂಬಲ ಬೆಲೆಯೂ ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದೇವೆ. ನಕಲಿ ಬಿತ್ತನೆ ಬೀಜದ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಕಮಿಷನ್ ದಂಧೆಗೆ ಕಡಿವಾಣ ಹಾಕುವ ಮೂಲಕ ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸಬೇಕು ಎಂದು ಆಗ್ರಹಿಸಿದರು.

    ಪ್ರತಿಭಟನೆ ಬಳಿಕ ಸ್ಥಳೀಯರು ಟೊಮೆಟೊ ಆಯ್ದುಕೊಳ್ಳಲು ಮುಂದಾದರು. ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದರಿಂದ ಪ್ರತಿಭಟನೆ ಬಳಿಕ, ಟೊಮೆಟೊ ರಾಶಿಯನ್ನು ತೆರವುಗೊಳಿಸಲು ಹರಸಾಹಸ ಪಡಬೇಕಾಯಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಫಸ್ಟ್ ಟೈಂ ರಾಜ್ಯ ಹೆದ್ದಾರಿಗೂ ಟೋಲ್- ಸಮ್ಮಿಶ್ರ ಸರ್ಕಾರದ ಪ್ರಯೋಗಕ್ಕೆ ಜನಾಕ್ರೋಶ

    ಫಸ್ಟ್ ಟೈಂ ರಾಜ್ಯ ಹೆದ್ದಾರಿಗೂ ಟೋಲ್- ಸಮ್ಮಿಶ್ರ ಸರ್ಕಾರದ ಪ್ರಯೋಗಕ್ಕೆ ಜನಾಕ್ರೋಶ

    ಉಡುಪಿ: ರಾಜ್ಯ ಸಮ್ಮಿಶ್ರ ಸರ್ಕಾರ ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಗೇಟ್ ನಿರ್ಮಿಸಲು ಎಲ್ಲಾ ಸಿದ್ಧತೆ ಮಾಡಿದೆ. ಸರ್ಕಾರ ಸ್ಥಾಪನೆ ಮಾಡಲು ಹೊರಟಿರುವ ಟೋಲ್ ವಿರುದ್ಧ ಉಡುಪಿಯ ನಲವತ್ತು ಹಳ್ಳಿಯ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

    ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಿಂದ ಕಾಪು ತಾಲೂಕನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಟೋಲ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಇತಿಹಾಸದಲ್ಲೇ ರಾಜ್ಯ ಹೆದ್ದಾರಿಯಲ್ಲಿ ಟೋಲ್ ನಿರ್ಮಾಣ ಆಗುತ್ತಿರೋದು ಇದೇ ಪ್ರಥಮ. ಹೀಗಾಗಿ ಸರ್ಕಾರದ ನೀತಿಯನ್ನು ಖಂಡಿಸಿ ಗ್ರಾಮಸ್ಥರು ಬೃಹತ್ ಪ್ರತಿಭಟನೆಯನ್ನು ಕೈಗೊಂಡರು. ಬೆಳ್ಮಣ್ಣು ಪೇಟೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮೂರು ಸಾವಿರಕ್ಕೂ ಹೆಚ್ಚು ಗ್ರಾಮಸ್ಥರು ಪಕ್ಷಾತೀತವಾಗಿ ಪಾಲ್ಗೊಂಡರು. ಯೋಜನೆ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದರು.

    ಬೆಳ್ಮಣ್ ಟೋಲ್ ವಿರೋಧಿ ಹೋರಾಟ ಸುಹಾಸ್ ಹೆಗ್ಡೆ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಮೂರು ದಿನಗಳ ಹಿಂದೆ ನೀಡಿದ ಪ್ರತಿಭಟನೆಗೆ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಹೋರಾಟ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಕೇಮಾರು ಈಶವಿಠಲ ದಾಸ ಸ್ವಾಮೀಜಿ, ಸ್ಥಳೀಯ ಶಾಸಕರಾದ ಸುನೀಲ್ ಕುಮಾರ್, ಲಾಲಾಜಿ ಮೆಂಡನ್, ಐವಾನ್ ಡಿಸೋಜಾ ಸೇರಿದಂತೆ ಎಲ್ಲಾ ಪಕ್ಷದ ನಾಯಕರು ವಿವಿಧ ಸಂಘ ಸಂಸ್ಥೆಯ ಸದಸ್ಯರು ಸಾರ್ವಜನಿಕರು ಪಾಲ್ಗೊಂಡಿದ್ದರು.

    ಈ ಸಂದರ್ಭದಲ್ಲಿ ಮಾತನಾಡಿದ ಕೇಮಾರು ಶ್ರೀ, ಸರ್ಕಾರ ರಸ್ತೆ ನೀರಿನ ಸೌಲಭ್ಯ ವಿದ್ಯುತ್ ಅನ್ನು ಒದಗಿಸದಿದ್ದರೆ ಅಂತಹ ಸರ್ಕಾರ ಇದ್ದರೆಷ್ಟು ಹೋದರೆಷ್ಟು ಅಂತ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ಹೀಗೆ ಮುಂದುವರಿದರೆ ಸರ್ಕಾರಿ ಬಾವಿಯ ನೀರು ಕುಡಿಯಲು ಬಿಲ್ ಕಟ್ಟುವ ಪರಿಸ್ಥಿತಿ ನಿರ್ಮಾಣವಾದೀತು ಎಂದು ಜನರನ್ನು ಎಚ್ಚರಿಸಿದರು. ಟೋಲ್ ವಿರುದ್ಧ ಹೋರಾಟ ಮುಂದುವರಿಯುತ್ತದೆ. ಟೋಲ್ ಸಂಗ್ರಹ ಕೇಂದ್ರ ಆರಂಭವಾದರೆ ಅದನ್ನು ಪುಡಿಗೈಯ್ಯುವ ಹೋರಾಟದಲ್ಲಿ ನಾನು ಮುಂಚೂಣಿಯಲ್ಲಿ ಇರುತ್ತೇನೆ ಎಂದು ಕಟು ಎಚ್ಚರಿಕೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮುಳಬಾಗಿಲು ತಾಲೂಕು ಕಚೇರಿಗೆ ದನಕರು, ಕೊಳಿ ನಾಯಿ ನುಗ್ಗಿಸಿ ಪ್ರತಿಭಟನೆ

    ಮುಳಬಾಗಿಲು ತಾಲೂಕು ಕಚೇರಿಗೆ ದನಕರು, ಕೊಳಿ ನಾಯಿ ನುಗ್ಗಿಸಿ ಪ್ರತಿಭಟನೆ

    -ತಹಶೀಲ್ದಾರ್ ಸೇರಿದಂತೆ ಖಾಲಿಯಿರುವ ಹುದ್ದೆಗಳ ನೇಮಕಕ್ಕೆ ಒತ್ತಾಯ

    ಕೋಲಾರ: ಮುಳಬಾಗಿಲು ತಾಲೂಕು ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡುವಂತೆ ಒತ್ತಾಯಿಸಿ, ಕಿಸಾನ್ ವೇದಿಕೆ ಕಾರ್ಯಕರ್ತರು ದನಕರು, ಕೋಳಿ ಮತ್ತು ನಾಯಿಗಳೊಂದಿಗೆ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.

    ಮುಳಬಾಗಿಲು ತಾಲೂಕು ಕಚೇರಿ ಎದುರು ಪ್ರತಿಭಟನೆ ಪ್ರಾರಂಭಿಸಿದ ಕಿಸಾನ್ ಕಾರ್ಯಕರ್ತರು, ತಾಲೂಕು ಕಚೇರಿಯಲ್ಲಿ ಕಳೆದ 6 ತಿಂಗಳುಗಳಿಂದ ತಹಶೀಲ್ದಾರ್ ಹುದ್ದೆ ಖಾಲಿ ಇದೆ. ಜೊತೆಗೆ ಸುಮಾರು ಕಚೇರಿಯ ವಿವಿಧ 36 ಹುದ್ದೆಗಳು ಖಾಲಿ ಇವೆ. ಇದರಿಂದಾಗಿ ದಿನನಿತ್ಯವೂ ಪಹಣಿ ಸೇರಿದಂತೆ ವಿವಿಧ ಕೆಲಸಗಳಿಗಾಗಿ ಸಾರ್ವಜನಿಕರು ಪರದಾಡುವಂತಾಗಿದೆ ಎಂದು ಕಿಡಿಕಾರಿದರು.

    ಸರ್ಕಾರ ಕೂಡಲೇ ಖಾಲಿ ಇರುವ ಹುದ್ದೆಗಳನ್ನು ತುಂಬಬೇಕು. ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಆಗ್ರಹಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಬಳಿಕ ಪ್ರತಿಭಟನಾಕಾರರ ಸಮ್ಮುಖದಲ್ಲಿ ಉನ್ನತ ಅಧಿಕಾರಿಗಳಿಗೆ ಕರೆ ಮಾಡಿ, ಸಮಸ್ಯೆಯನ್ನು ತಿಳಿಸಲಾಯಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನನ್ನ ಪರವಾಗಿ ಯಾವುದೇ ಪ್ರತಿಭಟನೆ ಮಾಡಬೇಡಿ: ಕೈ ಕಾರ್ಯಕರ್ತರಲ್ಲಿ ಡಿಕೆಶಿ ಮನವಿ

    ನನ್ನ ಪರವಾಗಿ ಯಾವುದೇ ಪ್ರತಿಭಟನೆ ಮಾಡಬೇಡಿ: ಕೈ ಕಾರ್ಯಕರ್ತರಲ್ಲಿ ಡಿಕೆಶಿ ಮನವಿ

    ಬೆಂಗಳೂರು: ಜಲ ಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಅವರನ್ನು ಇಡಿ ಹಾಗೂ ಐಟಿ ಇಲಾಖೆ ಟಾರ್ಗೆಟ್ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸಚಿವ ಡಿಕೆ ಶಿವಕುಮಾರ್, ನನ್ನ ಪರ ಯಾರು ಪ್ರತಿಭಟನೆ ಮಾಡಬೇಡಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

    ಈ ಕುರಿತು ತಮ್ಮ ಟ್ವಿಟ್ಟರ್ ನಲ್ಲಿ ಡಿಕೆಶಿ, ನನ್ನ ಪರವಾಗಿ ಯಾವುದೇ ಪ್ರತಿಭಟನೆ, ಚಳವಳಿ, ಹೋರಾಟ ಮಾಡಬಾರದು ಎಂದು ಯುವ ಕಾಂಗ್ರೆಸ್ ಮುಖಂಡರಲ್ಲಿ ಮನವಿ ಮಾಡಿದ್ದಾರೆ.

    ನನಗೆ ಈ ನೆಲದ ಕಾನೂನಿನ ಮೇಲೆ ಅಪಾರ ಗೌರವ ಮತ್ತು ನಂಬಿಕೆ ಇದೆ. ನನಗೆ ಎದುರಾಗಿರುವ ಸವಾಲು ಹಾಗೂ ಸಮಸ್ಯೆಗಳನ್ನು ಕಾನೂನಾತ್ಮಾಕವಾಗಿ ಹಾಗೂ ರಾಜಕೀಯವಾಗಿ ಎದುರಿಸುವ ಶಕ್ತಿಯೂ ಇದೆ. ರಾಜಕೀಯ ಎದುರಾಳಿಗಳಿಗೆ ರಾಜಕೀಯವಾಗಿಯೇ ಉತ್ತರ ನೀಡುತ್ತೇನೆ. ಹೀಗಾಗಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಯಾವುದೇ ಚಳವಳಿಯಲ್ಲಿ ನಡೆಸುವುದಾಗಲಿ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವುದಾಗಲಿ ಮಾಡುವುದು ಬೇಡ. ಇಂಥ ಹೋರಾಟಗಳಿಂದ ಜನಸಾಮಾನ್ಯರಿಗೂ ತೊಂದರೆ ಆಗುತ್ತದೆ ಎಂದು ತಿಳಿಸಿದ್ದಾರೆ.

    ಇಂದು ನಗರದ ಆದಾಯ ತೆರಿಗೆ ಇಲಾಖೆ ಎದುರು ಶಿವಕುಮಾರ್ ವಿರುದ್ಧದ ವಿಚಾರಣೆಯನ್ನು ವಿರೋಧಿಸಿ ನೂರಕ್ಕೂ ಹೆಚ್ಚು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಯಾಗಿರುವ ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಕೂಡ ಭಾಗಿಯಾಗಿದ್ದರು. ಇದನ್ನೂ ಓದಿ:  ಡಿಕೆಶಿ ಮೇಲಿನ ಐಟಿ ವಿಚಾರಣೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಆರೋಪಿ ನಲಪಾಡ್ ಪ್ರತ್ಯಕ್ಷ!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಡಿಕೆಶಿ ಮೇಲಿನ ಐಟಿ ವಿಚಾರಣೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಆರೋಪಿ ನಲಪಾಡ್ ಪ್ರತ್ಯಕ್ಷ!

    ಡಿಕೆಶಿ ಮೇಲಿನ ಐಟಿ ವಿಚಾರಣೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಆರೋಪಿ ನಲಪಾಡ್ ಪ್ರತ್ಯಕ್ಷ!

    ಬೆಂಗಳೂರು: ಕಾಂಗ್ರೆಸ್ಸಿನಿಂದ ಉಚ್ಚಾಟನೆಯಾದರೂ ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಯೂತ್ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಕಾಣಿಸಿಕೊಂಡಿದ್ದಾರೆ.

    ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಮೇಲಿನ ಆದಾಯ ತೆರಿಗೆ ಇಲಾಖೆಯ ವಿಚಾರಣೆಯನ್ನು ವಿರೋಧಿಸಿ ನೂರಕ್ಕೂ ಹೆಚ್ಚು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಇಂದು ಆದಾಯ ತೆರಿಗೆ ಕಚೇರಿ ಎದುರು ಪ್ರತಿಭಟನೆ ಮಾಡಿದ್ದಾರೆ. ಈ ಪ್ರತಿಭಟನೆಯಲ್ಲಿ ನಲಪಾಡ್ ಭಾಗಿಯಾಗಿದ್ದರು.

    ಪ್ರತಿಭಟನೆಯಲ್ಲಿ ಭದ್ರತೆಗೆ ಹಾಕಲಾಗಿದ್ದ ಬ್ಯಾರಿಕೇಡ್ ಮೇಲೆ ಹತ್ತಿ ನಲಪಾಡ್ ಪ್ರತಿಭಟನೆ ಮಾಡಿದ್ದಾರೆ. ಪೊಲೀಸರು ಪ್ರತಿಭಟನೆಯನ್ನು ತಡೆದು ನಲಪಾಡ್ ಸೇರಿದಂತೆ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಇದನ್ನೂ ಓದಿ: ಕಾಂಗ್ರೆಸ್ ಕಾರ್ಯಕ್ರಮದ ಫ್ಲೆಕ್ಸ್ ನಲ್ಲಿ ಆರೋಪಿ ನಲಪಾಡ್ ಮಿಂಚಿಂಗ್!

    ಮುಂಜಾಗೃತ ಕ್ರಮವಾಗಿ ಆದಾಯ ತೆರಿಗೆ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ ಕೂಡ ಆಯೋಜನೆ ಮಾಡಲಾಗಿತ್ತು. ಸುಮಾರು 30ಕ್ಕೂ ಹೆಚ್ಚು ಪೊಲೀಸರು ಒಂದು ಕೆಎಸ್‍ಆರ್ ಪಿ ತುಕಡಿಯನ್ನು ನಿಯೋಜನೆ ಮಾಡಲಾಗಿತ್ತು.

    ಬಿಜೆಪಿ ಐಟಿಯನ್ನ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಕಾಂಗ್ರೆಸ್ ವಿರುದ್ಧ ಐಟಿ ಅಸ್ತ್ರ ಉಪಯೋಗಿಸುತ್ತಿದೆ. ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಇದು ತೆರಿಗೆದಾರರ ಹಣ, ಈ ಹಣವನ್ನ ಲೂಟಿ ಮಾಡಿದ್ದಾರೆ ಅಂತಾ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದು, ಈ ಪ್ರಕರಣದಲ್ಲಿ ಅನಿಲ್ ಅಂಬಾನಿ ಭಾಗಿಯಾಗಿದ್ದು, ಅವರ ಮೂಲಕ ಯುದ್ಧ ವಿಮಾನಗಳನ್ನು ಖರೀದಿ ಮಾಡಲಾಗುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

    ವಿದ್ವತ್ ಮೇಲಿನ ಹಲ್ಲೆ ಪ್ರಕರಣದ ಬಳಿಕ ನಲಪಾಡ್ ನನ್ನು ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಮತ್ತು ಪಕ್ಷದ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ. ಕೆ. ಪರಮೇಶ್ವರ್ ಈ ಕುರಿತು ನಿರ್ಣಯ ತೆಗೆದುಕೊಂಡಿದ್ದು, ಪಕ್ಷದ ನಿರ್ಧಾರವನ್ನು ಕರ್ನಾಟಕ ಕಾಂಗ್ರೆಸ್ ಫೆ.18ರಂದು ಟ್ವೀಟ್ ಮಾಡಿ ತಿಳಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=Yf6tfu3N7BY

  • ರೈತರ ಬೇಡಿಕೆಗಳಿಗೆ ಕೇಂದ್ರ ಅಸ್ತು: ದೆಹಲಿ ಚಲೋ ಶೀಘ್ರವೇ ಅಂತ್ಯ!

    ರೈತರ ಬೇಡಿಕೆಗಳಿಗೆ ಕೇಂದ್ರ ಅಸ್ತು: ದೆಹಲಿ ಚಲೋ ಶೀಘ್ರವೇ ಅಂತ್ಯ!

    ನವದೆಹಲಿ: ಸಾಲಮನ್ನಾ ಹಾಗೂ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ರೈತರು ನಡೆಸಿದ ಬೃಹತ್ ಪ್ರತಿಭಟನಾ ಮೆರವಣಿಗೆಗೆ ಕೇಂದ್ರ ಬಗ್ಗಿದ್ದು, ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸಿದೆ.

    ಉತ್ತರಪ್ರದೇಶದ ರೈತರು ಹಾಗೂ ಭಾರತೀಯ ಕಿಸಾನ್ ಸಂಘ(ಬಿಕೆಯು)ದ ವತಿಯಿಂದ ಇಂದು ಹಮ್ಮಿಕೊಂಡಿದ್ದ ದೆಹಲಿ ಚಲೋ, ಹಿಂಸಾತ್ಮಕ ರೂಪ ಪಡೆದಕೊಂಡ ಬೆನ್ನಲ್ಲೇ ಕೇಂದ್ರ ಸರ್ಕಾರ ರೈತರ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ಸಮ್ಮತಿ ಸೂಚಿಸಿದೆ.

    ಈಗಾಗಲೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಬಿಕೆಯುದ ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸಿದ್ದು, ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಕೇಂದ್ರ ಸಹಾಯಕ ಕೃಷಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ.

    ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಗೃಹ ಸಚಿವ ರಾಜನಾಥ್ ಸಿಂಗ್ ಬಿಕೆಯುದ ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಮಾತುಕತೆಯ ವೇಳೆ ರೈತರ ಬಹು ಮುಖ್ಯ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಉತ್ತರ ಪ್ರದೇಶ ಸಚಿವರಾದ ಲಕ್ಷ್ಮೀ ನಾರಾಯಣ್, ಸುರೇಶ್ ರಾಣಾರ ಜೊತೆ ನಾನು ರೈತರನ್ನು ಭೇಟಿಯಾಗಲು ಹೋಗುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಏನಿದು ಪ್ರತಿಭಟನೆ?
    ಉತ್ತರ ಪ್ರದೇಶದ ಸುಮಾರು 70 ಸಾವಿರಕ್ಕೂ ಹೆಚ್ಚು ರೈತರು ಸಾಲಮನ್ನಾ ಹಾಗು 15 ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ದೆಹಲಿ ಚಲೋ ಪ್ರತಿಭಟನೆಯನ್ನು ಹರಿದ್ವಾರದಿಂದ ಹಮ್ಮಿಕೊಂಡಿದ್ದರು. ಘಾಜಿಯಾಪುರ ಮಾರ್ಗವಾಗಿ ದೆಹಲಿಗೆ ತೆರಳಿ ಪ್ರತಿಭಟನೆ ನಡೆಸಿದ್ದರು. ಆದರೆ ದೆಹಲಿ ಹಾಗೂ ಉತ್ತರ ಪ್ರದೇಶದ ಗಡಿಭಾಗ ಗಾಜೀಯಾಬಾದ್ ನಲ್ಲಿ ಬೃಹತ್ ಬ್ಯಾರಿಕೇಡ್‍ಗಳನ್ನು ಹಾಕುವ ಮೂಲಕ ಪೊಲೀಸರು ರೈತರ ಪ್ರತಿಭಟನೆಯನ್ನು ನಿಯಂತ್ರಿಸಿಲು ಯತ್ನಿಸಿದ್ದರು. ಆದರೆ ಸಾಗರೋಪಾದಿಯಲ್ಲಿ ಬಂದಿದ್ದ ಪ್ರತಿಭಟನಾಕಾರರು ಪೊಲೀಸರು ಹಾಕಿದ್ದ ಬ್ಯಾರಿಕೇಡ್‍ಗಳನ್ನು ತಮ್ಮ ಟ್ರ್ಯಾಕ್ಟರ್‍ಗಳ ಮೂಲಕ ಕೀಳಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಾ ನಿರತರ ಮೇಲೆ ಜಲಫಿರಂಗಿ ಹಾಗೂ ಅಶ್ರುವಾಯು ಪ್ರಯೋಗವನ್ನು ಮಾಡಿದ್ದಲ್ಲದೇ, ಲಾಠಿ ಚಾರ್ಜ್ ಕೂಡಾ ಮಾಡಿದ್ದರು. ಪ್ರತಿಭಟನೆಯು ಹಿಂಸಾತ್ಮಕ ರೂಪ ಪಡೆಯುವ ಮುನ್ಸೂಚನೆ ಅರಿತ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತುರ್ತು ಸಭೆ ಕರೆದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=d0tIKjItZL0

     

  • ಪ್ರತಿಭಟನಾನಿರತ ರೈತರ ಮೇಲೆ ಪೊಲೀಸರಿಂದ ಜಲಫಿರಂಗಿ, ಅಶ್ರುವಾಯು ಪ್ರಯೋಗ!

    ಪ್ರತಿಭಟನಾನಿರತ ರೈತರ ಮೇಲೆ ಪೊಲೀಸರಿಂದ ಜಲಫಿರಂಗಿ, ಅಶ್ರುವಾಯು ಪ್ರಯೋಗ!

    ನವದೆಹಲಿ: ಸಾಲಮನ್ನಾ ಸೇರಿ 15 ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಉತ್ತರಪ್ರದೇಶದ ಸುಮಾರು 70 ಸಾವಿರ ರೈತರು ಹರಿದ್ವಾರದಿಂದ ದೆಹಲಿ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದರು. ಇದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ, ದೆಹಲಿ ಹಾಗೂ ಉತ್ತರಪ್ರದೇಶ ಗಡಿ ಭಾಗದಲ್ಲಿ ರೈತರ ಮೇಲೆ ದಾಳಿ ನಡೆಸಿದೆ.

    ಹೌದು, ಸುಮಾರು 70 ಸಾವಿರಕ್ಕೂ ಹೆಚ್ಚು ರೈತರು ಸಾಲಮನ್ನಾ ಹಾಗು 15 ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ದೆಹಲಿ ಚಲೋ ಪ್ರತಿಭಟನೆಯನ್ನು ಹರಿದ್ವಾರದಿಂದ ಹಮ್ಮಿಕೊಂಡಿದ್ದರು. ಘಾಜಿಯಾಪುರ ಮಾರ್ಗವಾಗಿ ದೆಹಲಿಗೆ ತೆರಳಿ ಪ್ರತಿಭಟನೆ ನಡೆಸಿದ್ದರು. ಆದರೆ ದೆಹಲಿ ಹಾಗೂ ಉತ್ತರ ಪ್ರದೇಶದ ಗಡಿಭಾಗ ಗಾಜೀಯಾಬಾದ್ ನಲ್ಲಿ ಬೃಹತ್ ಬ್ಯಾರಿಕೇಡ್‍ಗಳನ್ನು ಹಾಕುವ ಮೂಲಕ ಕೇಂದ್ರ ಸರ್ಕಾರ ರೈತರ ಪ್ರತಿಭಟನೆಯನ್ನು ನಿಯಂತ್ರಿಸಲು ಯತ್ನಿಸಿದ್ದಾರೆ. ಆದರೆ ಸಾಗರೋಪಾದಿಯಲ್ಲಿ ಬಂದಿದ್ದ ಪ್ರತಿಭಟನಾಕಾರರು ಪೊಲೀಸರು ಹಾಕಿದ್ದ ಬ್ಯಾರಿಕೇಡ್‍ಗಳನ್ನು ತಮ್ಮ ಟ್ರ್ಯಾಕ್ಟರ್ ಗಳ ಮೂಲಕ ಕೀಳಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಾ ನಿರತರ ಮೇಲೆ ಜಲಫಿರಂಗಿ ಹಾಗೂ ಅಶ್ರುವಾಯು ಪ್ರಯೋಗವನ್ನು ಮಾಡಿದ್ದಾರೆ.

    ಇದಲ್ಲದೇ ಪರಿಸ್ಥಿತಿ ಕೈ ಮೀರುವ ಹಂತ ತಲುಪಿದಾಗ ಪೊಲೀಸರು ಲಾಠಿ ಪ್ರಹಾರವನ್ನೂ ಕೂಡ ನಡೆಸಿದ್ದಾರೆ. ಈ ವೇಳೆ ಹಲವು ರೈತರು ಗಾಯಗೊಂಡಿದ್ದಾರೆ. ಪ್ರತಿಭಟನಾ ನಿರತ ರೈತರು ಕೇಂದ್ರ ಸರ್ಕಾರ ಮತ್ತು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಪ್ರತಿಭಟನೆ ಹಿಂಸಾತ್ಮಾಕ ತಿರುವು ಪಡೆಯುತ್ತಿದ್ದು, ಪೊಲೀಸರು ವ್ಯಾಪಕ ಬಂದೋಬಸ್ತ್ ಕೈಗೊಂಡಿದ್ದಾರೆ.

    ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಮ್ಮ ನಿವಾಸದಲ್ಲಿ ತುರ್ತು ಅಧಿಕಾರಿಗಳ ಸಭೆ ಕರೆದಿದ್ದು, ಸಭೆಯಲ್ಲಿ ರೈತರ ಬೇಡಿಕೆಗಳ ಕುರಿತು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಅಲ್ಲದೆ ರೈತರು ದೆಹಲಿಗೆ ಆಗಮಿಸುವಷ್ಟರಲ್ಲಿ ಅವರ ಬೇಡಿಕೆಗಳನ್ನು ಈಡೇರಿಸುವ ಮೂಲಕ ಪ್ರತಿಭಟನೆಯನ್ನು ಶಾಂತರೂಪಕ್ಕೆ ತರುವ ಬಗ್ಗೆ ಮಾತುಕತೆ ನಡೆಸಲಾಗುತ್ತಿದೆ ಎನ್ನುವ ಮಾಹಿತಿಗಳು ಲಭ್ಯವಾಗಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv