Tag: ಪ್ರತಿಭಟನೆ

  • ಗ್ರಾ.ಪಂ ಸದಸ್ಯನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಎಸ್‍ಐ

    ಗ್ರಾ.ಪಂ ಸದಸ್ಯನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಎಸ್‍ಐ

    ಮೈಸೂರು: ಗಣಪತಿ ವಿಸರ್ಜನೆ ವಿಚಾರವಾಗಿ ಗ್ರಾ.ಪಂ ಸದಸ್ಯನಿಗೆ ದೂರವಾಣಿ ಕರೆ ಮಾಡಿದ ಎಸ್‍ಐ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿವೆ.

    ಸಿದ್ದರಾಜ್ ನಾಯಕ ರಾಮನಹಳ್ಳಿ ಗ್ರಾ.ಪಂ ಸದಸ್ಯ ಹಾಗೂ ಅಂಗವಿಕಲರಿಗೆ ಗಣೇಶ ವಿಸರ್ಜನೆಯ ವಿಚಾರವಾಗಿ ಇಲವಾಲ ಠಾಣೆ ಎಸ್‍ಐ ಮುದ್ದು ಮಾದಪ್ಪ ಅವಾಚ್ಯ ಶಬ್ದಗಳಿಂದ ಬೈದಿದ್ದಾರಂತೆ. ಅವಾಚ್ಯ ಶಬ್ದದಿಂದ ನಿಂದಿಸಿದ ಹಿನ್ನಲೆ ಗ್ರಾಮಸ್ಥರು ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆಗೆ ಮುಂದಾದರು.

    ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದ ಹಿನ್ನೆಲೆ ಮೈಸೂರು ತಾಲೂಕಿನ ಇಲವಾಲ ಪೊಲೀಸ್ ಠಾಣೆ ಬಳಿ ಗ್ರಾಮಸ್ಥರು ಪ್ರತಿಭಟನೆ ಮಾಡಿ, ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಘೊಷಣೆ ಕೂಗಿ ಆಕ್ರೋಶ ಹೊರಹಾಕಿದರು. ಇನ್ಸ್‌ಪೆಕ್ಟರ್ ಮುದ್ದು ಮಾದಪ್ಪರನ್ನು ಕೂಡಲೇ ಸೇವೆಯಿಂದ ವಜಾಗೊಳಿಸುವಂತೆ ಪ್ರತಿಭಟನಾ ನಿರತರು ಆಗ್ರಹಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಎಬಿವಿಪಿ ವಿದ್ಯಾರ್ಥಿಗಳ ಕಾಲು ಮುಟ್ಟಿ ಕ್ಷಮೆ ಕೇಳಿದ ಉಪನ್ಯಾಸಕ!- ವಿಡಿಯೋ ವೈರಲ್

    ಎಬಿವಿಪಿ ವಿದ್ಯಾರ್ಥಿಗಳ ಕಾಲು ಮುಟ್ಟಿ ಕ್ಷಮೆ ಕೇಳಿದ ಉಪನ್ಯಾಸಕ!- ವಿಡಿಯೋ ವೈರಲ್

    ಭೋಪಾಲ್: ಕ್ಷಮೆ ಕೇಳುವಂತೆ ಪ್ರತಿಭಟನೆ ನಡೆಸಿದ್ದ ಎಬಿವಿಪಿ ವಿದ್ಯಾರ್ಥಿಗಳ ಕಾಲನ್ನು ಉಪನ್ಯಾಸಕರು ಮುಟ್ಟುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಮಧ್ಯಪ್ರದೇಶದ ಮಥುರಾದ ರಾಜೀವ್ ಗಾಂಧಿ ಸ್ನಾತಕೋತ್ತರ ಕಾಲೇಜಿನಲ್ಲಿ ಘಟನೆ ನಡೆದಿದ್ದು, ಸ್ಥಳದಲ್ಲಿಯೇ ಇದ್ದ ವ್ಯಕ್ತಿಯೊಬ್ಬರು ಈ ದೃಶ್ಯವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

    ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು ಬುಧವಾರ ಉಪನ್ಯಾಸಕ ವಿರುದ್ಧ ಘೋಷಣೆ ಕೂಗುತ್ತಿದ್ದರು. ಅಲ್ಲದೆ ಅವರು ನಮ್ಮನ್ನು ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದಿದ್ದರು. ಈ ವೇಳೆ ಅಲ್ಲಿಗೆ ಬಂದ ಉಪನ್ಯಾಸಕರು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಕಾಲಿಗೆ ಬಿದ್ದಿದ್ದಾರೆ.

    ಕ್ಷಮೆ ಕೇಳಿದ್ದು ಏಕೆ?
    ಎಬಿವಿಪಿ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗುತ್ತಿದ್ದರು. ಆಗ ಅಲ್ಲಿದೆ ಬಂದ ಉಪನ್ಯಾಸಕರು ಘೋಷಣೆಯನ್ನು ನಿಲ್ಲಿಸುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದ್ದರು. ಇದರಿಂದಾಗಿ ಉಪನ್ಯಾಸಕರ ವಿರುದ್ಧ ಆಕ್ರೋಶ ಹೊರ ಹಾಕಿದ ವಿದ್ಯಾರ್ಥಿಗಳು, ತರಗತಿ ಬಿಟ್ಟು ಹೊರಬಂದು ಪ್ರತಿಭಟನೆ ಪ್ರಾರಂಭಿಸಿದ್ದರು. ‘ಭಾರತ್ ಮಾತಾ ಕಿ ಜೈ’ ಘೋಷಣೆಯನ್ನು ಕೂಗದಂತೆ ಹೇಳಿ, ದೇಶ ವಿರೋಧಿ ಧೋರಣೆ ತೋರಿದ್ದಾರೆ. ಹೀಗಾಗಿ ಅವರು ನಮಗೆ ಕ್ಷಮೆ ಕೇಳಬೇಕು ಅಂತ ಒತ್ತಾಯಿಸಿದ್ದರು.

    ವಿಡಿಯೋದಲ್ಲಿ ಏನಿದೆ?
    ಪ್ರತಿಭಟನೆ ನಿರತ ವಿದ್ಯಾರ್ಥಿಗಳ ಬಳಿ ಬಂದ ಉಪನ್ಯಾಸಕರು, ಸಹೋದ್ಯೋಗಿಗಳ ಮಾತನ್ನು ಲೆಕ್ಕಿಸದೇ ವಿದ್ಯಾರ್ಥಿಗಳ ಕಾಲು ಮುಟ್ಟಿ ಕ್ಷಮೆಯಾಚನೆಗೆ ಮುಂದಾದರು. ಬನ್ನಿ ಕ್ಷಮೆ ಕೇಳುತ್ತೇನೆ ಅಂತ ಸಾಲಾಗಿ ನಿಂತಿದ್ದ ಕೆಲವರ ಕಾಲಿಗೆ ಬಿದ್ದರು. ಅವರ ವರ್ತನೆಯಿಂದಾಗಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ತಪ್ಪಿಸಿಕೊಳ್ಳಲು ಮುಂದಾದರು. ಬಳಿಕ ನಾನು ತಪ್ಪು ಮಾಡಿದ್ದೇನೆಯೇ ಅಂತ ಪ್ರಶ್ನಿಸಿ, ದೇಶ ವಿರೋಧಿ ಅಂತ ಕರೆಯಬೇಡಿ ಅಂತ ಉಪನ್ಯಾಸಕರು ಹೇಳಿದ್ದಾರೆ.

    ಈ ವಿಡಿಯೋದ ಬಗ್ಗೆ ಜನ ತಮ್ಮದೇ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಪಾಠ ಕಲಿಸಲು ಉಪನ್ಯಾಸಕರು ಕಾಲಿಗೆ ಬಿದ್ದಿದ್ದಾರೆ ಎಂದು ಕೆಲವರು ಹೇಳಿದರೆ, ಕೆಲವರು ವಿದ್ಯಾರ್ಥಿಗಳ ಪ್ರತಿಟಭಟನೆ ಸರಿ ಇದೆ ಎಂದು ಹೇಳಿದ್ದಾರೆ.

    ಈ ವಿಚಾರಕ್ಕೆ ಸಂಬಂಧಿಸಿದಂತೆ ನಿಮ್ಮ ಅಭಿಪ್ರಾಯ ಏನು ಎನ್ನುವುದನ್ನು ಕಮೆಂಟ್ ಮಾಡಿ ತಿಳಿಸಿ.


    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತಲೆನೋವಿಗೆ ಆಸ್ಪತ್ರೆಗೆ ದಾಖಲಾದ ಯುವಕ ಸಾವು- ರೊಚ್ಚಿಗೆದ್ದ ಸಂಬಂಧಿಕರಿಂದ ಕಲ್ಲು ತೂರಾಟ

    ತಲೆನೋವಿಗೆ ಆಸ್ಪತ್ರೆಗೆ ದಾಖಲಾದ ಯುವಕ ಸಾವು- ರೊಚ್ಚಿಗೆದ್ದ ಸಂಬಂಧಿಕರಿಂದ ಕಲ್ಲು ತೂರಾಟ

    ಚಿಕ್ಕಬಳ್ಳಾಪುರ: ತೀವ್ರ ತಲೆನೋವು, ಆಯಾಸ ಆಗುತ್ತಿದೆ ಅಂತ ಯುವಕನೊಬ್ಬ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ. ಆತನ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಮೃತನ ಕುಟುಂಬದವರು ಆಸ್ಪತ್ರೆಯ ಮೇಲೆ ಕಲ್ಲು ತೂರಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ.

    ಶಿಡ್ಲಘಟ್ಟ ತಾಲೂಕಿನ ಚೊಕ್ಕಂಡಹಳ್ಳಿ ಗ್ರಾಮದ ಆಕಾಶ್(19) ಮೃತ ಯುವಕ. ಕಳೆದ ಬುಧವಾರ ಆಕಾಶ್‍ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಮೃತಪಟ್ಟಿದ್ದಾನೆ.

    ಆಕಾಶ್‍ಗೆ ಪ್ಲೇಟ್ ಲೇಟ್ ಕಡಿಮೆಯಿದ್ದು, ಡೆಂಗ್ಯೂ ಜ್ವರಕ್ಕೆ ತುತ್ತಾಗಿದ್ದ ಎನ್ನಲಾಗಿದೆ. ನಮ್ಮ ಮಗನನ್ನು ನಿಮ್ಮ ಕೈಯಲ್ಲಿ ಉಳಿಸಲು ಆಗಲ್ಲ ಅಂದ ಮೇಲೆ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಂತ ಹೇಳಬೇಕಿತ್ತು. ಅದನ್ನು ಬಿಟ್ಟು ಚೆನ್ನಾಗಿದ್ದಾನೆ, ಹುಷಾರಾಗುತ್ತಾನೆ ಎಂದು ಎರಡು ದಿನ ಚಿಕಿತ್ಸೆ ನೀಡುವ ನಾಟಕ ಮಾಡಿದ್ದು ಏಕೆ ಎಂದು ಪ್ರಶ್ನಿಸಿ ಆಕಾಶ್ ಸಂಬಂಧಿಕರು ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಬಳಿಕ ಆಸ್ಪತ್ರೆಗೆ ಮುತ್ತಿಗೆ ಹಾಕಿದ ಮೃತನ ಸಂಬಂಧಿಕರು, ಆಸ್ಪತ್ರೆಯ ಕಿಟಕಿ, ಬಾಗಿಲುಗಳ ಮೇಲೆ ಕಲ್ಲು ತೂರಿ ಗಾಜು ಒಡೆದಿದ್ದಾರೆ. ಈ ಕುರಿತು ಮಾಹಿತಿ ಪಡೆಯುತ್ತಿದ್ದಂತೆ ಸ್ಥಳಕ್ಕೆ ಬಂದ ದೇವನಹಳ್ಳಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

    ಈ ಕುರಿತು ಆಸ್ಪತ್ರೆ ಆಡಳಿತ ಮಂಡಳಿ ಹಾಗೂ ಮೃತ ಆಕಾಶ್ ಸಂಬಂಧಿಕರು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಿಸಿದ್ದರು. ಸ್ವಲ್ಪ ಸಮಯದ ನಂತರ ಇಬ್ಬರೂ ರಾಜಿ ಮೂಲಕ ಇತ್ಯರ್ಥ ಪಡಿಸಲು ಮುಂದಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಾಯಲ್ಲಿ ಬೂಟು ಇಡ್ತೀನಿ ಅಂದ ಪರಮೇಶ್ವರ್ ನಾಯ್ಕ್ ವಿರುದ್ಧ ಭುಗಿಲೆದ್ದ ಆಕ್ರೋಶ

    ಬಾಯಲ್ಲಿ ಬೂಟು ಇಡ್ತೀನಿ ಅಂದ ಪರಮೇಶ್ವರ್ ನಾಯ್ಕ್ ವಿರುದ್ಧ ಭುಗಿಲೆದ್ದ ಆಕ್ರೋಶ

    ಬಳ್ಳಾರಿ: ನೀವು ನನಗೆ ಮತ ಹಾಕಿಲ್ಲ. ನಿಮ್ಮ ಬಾಯಲ್ಲಿ ಬೂಟು ಇಟ್ಟು ಹೊಡೆಯುತ್ತೇನೆ ಎಂದು ಅವಾಜ್ ಹಾಕಿದ್ದ ಪರಮೇಶ್ವರ್ ನಾಯ್ಕ್ ವಿರುದ್ಧ ಹಡಗಲಿ ಜನರು ಆಕ್ರೋಶ ಗೊಂಡಿದ್ದು, ಜನರು ಪರಮೇಶ್ವರ್ ನಾಯ್ಕ್ ಶಾಸಕತ್ವವನ್ನು ರದ್ದು ಮಾಡಿ ಅಂತ ಆಂದೋಲನ ಶುರು ಮಾಡಿದ್ದಾರೆ.

    ಇತ್ತೀಚೆಗೆ ಮೈಲಾರ ಗ್ರಾಮದ ಮತದಾರರಿಗೆ ಮನಸೋ ಇಚ್ಛೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪರಮೇಶ್ವರ್ ನಾಯ್ಕ್ ರ ಶಾಸಕತ್ವವನ್ನ ರದ್ದುಗೊಳಿಸಬೇಕೆಂದು ಆಗ್ರಹಿಸಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಓದೋ ಗಂಗಪ್ಪ ನೇತೃತ್ವದಲ್ಲಿ ಇಂದು ಸಾವಿರಾರು ಮತದಾರರು ಬೃಹತ್ ಪ್ರತಿಭಟನೆ ನಡೆಸಿದರು.

    ಹಡಗಲಿಯ ಮೈಲಾರ ದೇವಸ್ಥಾನದಿಂದ ಹಡಗಲಿಯ ವಿವಿಧೆಡೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಓದೋ ಗಂಗಪ್ಪ ಅಭಿಮಾನಿಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಪರಮೇಶ್ವರ್ ನಾಯ್ಕ್ ರಿಂದ ಕ್ಷೇತ್ರದ ಜನರಿಗೆ ಅವಮಾನವಾಗಿದೆ ಅಂತಾ ಕಿಡಿಕಾರಿದರು. ಅಲ್ಲದೇ ಮತದಾರರಿಂದ ಮತ ಪಡೆದು ಅವರ ಬಾಯಲ್ಲೇ ಬೂಟು ಇಡ್ತೀನಿ ಅನ್ನೋ ಅವರಿಗಿರುವ ದರ್ಪ ದಬ್ಬಾಳಿಕೆ ಹಿನ್ನೆಲೆಯಲ್ಲಿ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಬೇಕೆಂದು ತಹಶಿಲ್ದಾರ್ ಮೂಲಕ ವಿಧಾನ ಸಭಾಧ್ಯಕ್ಷರು ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ ಎಂದು ಪುರಸಭೆ ಸದಸ್ಯ ವಿಲನ್ಸ್ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಿರಾಶ್ರಿತ ಕೇಂದ್ರದಲ್ಲಿ ತಹಶೀಲ್ದಾರ್ ವಿರುದ್ಧ ಸಂತ್ರಸ್ತರು ಕಿಡಿ

    ನಿರಾಶ್ರಿತ ಕೇಂದ್ರದಲ್ಲಿ ತಹಶೀಲ್ದಾರ್ ವಿರುದ್ಧ ಸಂತ್ರಸ್ತರು ಕಿಡಿ

    ಕೊಡಗು: ಪ್ರವಾಹಕ್ಕೆ ತತ್ತರಿಸಿ ನಿರಾಶಿತ್ರ ಕೇಂದ್ರ ಸೇರಿದ್ದ ಸಂತ್ರಸ್ತರನ್ನು ತಹಶೀಲ್ದಾರ್ ಕೀಳಾಗಿ ಕಾಣುತ್ತಿದ್ದಾರೆ ಎನ್ನುವ ಕಾರಣಕ್ಕೆ ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರದ ವಾಲ್ಮೀಕಿ ಭವನದ ಮುಂದೆ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕುಶಾಲನಗರದ ವಾಲ್ಮೀಕಿ ಭವನದಲ್ಲಿ ನಿರಾಶ್ರಿತ ಕೇಂದ್ರ ಶುರುವಾದ ದಿನದಿಂದಲೂ ಒಂದಿಲ್ಲೊಂದು ಕಾರಣಗಳಿಂದ ಸುದ್ದಿಯಾಗುತ್ತಲೇ ಇದೆ. ಮಂಗಳವಾರ ತಡರಾತ್ರಿಯು ಸಹ ಸಂತ್ರಸ್ತರು ತಹಶೀಲ್ದಾರ್ ಮಹೇಶ್ ವಿರುದ್ಧ ರೊಚ್ಚಿಗೆದ್ದು, ಪತ್ರಿಭಟನೆ ನಡೆಸುತ್ತಿದ್ದರು. ಅಲ್ಲದೇ ನಿರಾಶ್ರಿತ ಕೇಂದ್ರದಲ್ಲಿ ಶೌಚಾಲಯ ವ್ಯವಸ್ಥೆಯಿಲ್ಲ. ಸರಿಯಾಗಿ ಊಟ ನೀಡುತ್ತಿಲ್ಲ ಹಾಗೂ ಎಲ್ಲಾ ಅಧಿಕಾರಿಗಳು ನಮ್ಮನ್ನು ಭಿಕ್ಷುಕರಂತೆ ನೋಡುತ್ತಾರೆ ಎಂದು ಆರೋಪಿಸಿದ್ದರು.

    ಈ ವೇಳೆ ತಹಶೀಲ್ದಾರ್ ಮಹೇಶ್‍ರವರು ಮಹಿಳೆಯೊಬ್ಬರ ಮೈಯನ್ನ ಮುಟ್ಟಿದರು ಎಂದು ಆರೋಪಿಸಿ ಅವರ ಮೇಲೆ ಮುತ್ತಿಗೆ ಹಾಕುವ ಯತ್ನ ಮಾಡಿದರು. ಕೂಡಲೇ ಪ್ರತಿಭಟನಾಕಾರರಿಂದ ತಪ್ಪಿಸಿಕೊಂಡು ತಹಶೀಲ್ದಾರ್ ಕೋಣೆಯೊಳಗೆ ಹೋಗಿ ಬಾಗಿಲು ಹಾಕಿಕೊಂಡು, ನಾನು ಏನು ತಪ್ಪು ಮಾಡಿಲ್ಲ ಅಂತ ಕ್ಷಮೆಯಾಚಿಸಿದರು.

    ಸುಮಾರು 400 ಜನರು ಇರುವ ನಿರಾಶ್ರಿತ ಕೇಂದ್ರದಲ್ಲಿ ಕೇವಲ ಮೂರೇ ಮೂರು ಶೌಚಾಲಯ. ಶೌಚಾಲಯದ ವ್ಯವಸ್ಥೆ ಸರಿಪಡಿಸಿ ಹಾಗೂ ಊಟವನ್ನು ಸರಿಯಾಗಿ ನೀಡಿ ಎಂದು ಪ್ರಾರಂಭವಾದಗಿನಿಂದಲೂ ಹೇಳುತ್ತಲೆ ಬಂದಿದ್ದರು. ಸಮಸ್ಯೆಗಳನ್ನು ಪರಿಹರಿಸದೇ ಕೀಳಾಗಿ ನೋಡಿದ್ದರಿಂದ ರೊಚ್ಚಿಗೆದ್ದು ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

    ಸಂತ್ರಸ್ತ ಕೇಂದ್ರದಲ್ಲಿ ಪ್ರತಿಭಟನೆ ಜೋರಾದಾಗ ಪೊಲೀಸರು ಮಧ್ಯ ಪ್ರವೇಶಿಸಿದರು. ಈ ವೇಳೆ ಪ್ರತಿಭಟನೆ ವಿಕೋಪಕ್ಕೆ ತಿರುಗುವ ಲಕ್ಷಣ ಗೋಚರಿದ ತಕ್ಷಣ ಜಿಲ್ಲಾಧಿಕಾರಿ ಶ್ರೀವಿದ್ಯಾರವರು ತಡರಾತ್ರಿ 12.15ಕ್ಕೆ ಆಗಮಿಸಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು. ಅಲ್ಲದೇ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿ, ಸರಿಯಾಗಿ ವ್ಯವಸ್ಥೆ ಕೈಗೊಳ್ಳುತ್ತೇನೆ. ಒಂದು ವೇಳೆ ತಹಶೀಲ್ದಾರ್ ವಿರುದ್ಧ ತಪ್ಪು ಕಂಡುಬಂದರೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೀನಿ ಎನ್ನುವ ಭರವಸೆ ನೀಡಿದ ಮೇಲೆ ಪ್ರತಿಭಟನಾಕಾರರು ತಮ್ಮ ಹೋರಾಟವನ್ನು ಕೈ ಬಿಟ್ಟರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಭಗವದ್ಗೀತೆಯನ್ನು ಸುಟ್ಟು ದಲಿತ ಸಂಘಟನೆಗಳಿಂದ ಪ್ರತಿಭಟನೆ

    ಭಗವದ್ಗೀತೆಯನ್ನು ಸುಟ್ಟು ದಲಿತ ಸಂಘಟನೆಗಳಿಂದ ಪ್ರತಿಭಟನೆ

    ಹುಬ್ಬಳ್ಳಿ: ಇತ್ತೀಚೆಗೆ ದೆಹಲಿಯಲ್ಲಿ ಸಂವಿಧಾನ ಪ್ರತಿಗಳನ್ನು ಸುಟ್ಟು ಹಾಕಿದ್ದಕ್ಕೆ ಪ್ರತಿಕಾರವಾಗಿ, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡು ಬೀದಿಯಲ್ಲಿ ಭಗವದ್ಗೀತೆ ಪ್ರತಿಗಳನ್ನು ಸುಡುವ ಮೂಲಕ ದಲಿತ ಸಂಘಟನೆಗಳು ಆಕ್ರೋಶ ಹೊರಹಾಕಿವೆ.

    ಪ್ರತಿಭಟನೆಯಲ್ಲಿ ಹುಬ್ಬಳ್ಳಿ-ಧಾರವಾಡ ಸಂವಿಧಾನ ಉಳಿಸಿ ಹೋರಾಟ ವೇದಿಕೆ ಹಾಗೂ ವಿವಿಧ ದಲಿತ ಸಂಘಟನೆಗಳು ಭಾಗವಹಿಸಿದ್ದವು. ಚೆನ್ನಮ್ಮ ವೃತ್ತದಲ್ಲಿ ಸೇರಿದ್ದ ಪ್ರತಿಭಟನಾಕಾರರು, ಭಗವದ್ಗೀತೆ ಪ್ರತಿಗಳಿಗೆ ಬೆಂಕಿ ಹಚ್ಚಿದರು.

    ನೆಹರೂ ಮೈದಾನದ ಬಳಿಯ ಅಂಬೇಡ್ಕರ್ ಭವನದಿಂದ ನೂರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿ, ಬಳಿಕ ರಾಣಿ ಚನ್ನಮ್ಮ ವೃತ್ತದಲ್ಲಿ ಸೇರಿದರು. ಅಲ್ಲಿ ಕೆಲ ಹೊತ್ತು ದಲಿತ ಗೀತೆ ಹಾಡಿ, ಸಂವಿಧಾನ ಸುಟ್ಟು, ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ದುಷ್ಕರ್ಮಿಗಳಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

    ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತ ಉಂಟಾಗಿ, ಸವಾರರು ಹಾಗೂ ಚಾಲಕರು ಪರದಾಡುವಂತಾಯಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶಾಲೆಗೆ ಬೀಗ ಜಡಿದು ಬೀದಿಗಳಿದ ವಿದ್ಯಾರ್ಥಿಗಳು!

    ಶಾಲೆಗೆ ಬೀಗ ಜಡಿದು ಬೀದಿಗಳಿದ ವಿದ್ಯಾರ್ಥಿಗಳು!

    ಬಾಗಲಕೋಟೆ: ಶಿಕ್ಷಕರ ಕೊರತೆ ಹಿನ್ನೆಲೆಯಿಂದ ಬೇಸತ್ತು ಇಂದು ವಿದ್ಯಾರ್ಥಿಗಳು ಶಾಲೆಗೆ ಬೀಗ ಜಡಿದು, ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಅಡಿಗುಡಿ ಗ್ರಾಮದಲ್ಲಿ ನಡೆದಿದೆ.

    ಅಡಿಹುಡಿ ಗ್ರಾಮದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಕಳೆದ ಆರು ತಿಂಗಳಿಂದ ಗಣಿತ ಮತ್ತು ಇಂಗ್ಲಿಷ್ ಶಿಕ್ಷಕರ ಕೊರತೆ ಎದುರಿಸುತ್ತಿದ್ದಾರೆ. ಈ ಬಗ್ಗೆ ಅನೇಕ ಬಾರಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆದರೆ ಯಾರೂ ಮನವಿಗೆ ಸ್ಪಂದಿಸಿಲ್ಲ.

    ಇಲಾಖೆಯ ಆದಿಕಾರಿಳ ಸ್ಪಂದನೆ ದೊರೆಯದಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಇಂದು ತಾವು ಕಲಿಯುತ್ತಿರುವ ಸರಕಾರಿ ಪ್ರೌಢಶಾಲೆಗೆ ತಾವೆ ಬೀಗ ಜಡಿದರು. ಜೊತೆಗೆ ಗ್ರಾಮದ ರಸ್ತೆ ತಡೆದು ಧರಣಿ ನಡೆಸಿದರು. ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.

    ಶಿಕ್ಷಕರ ಕೊರತೆ ಹಿನ್ನೆಲೆ ಅಭ್ಯಾಸಕ್ಕೆ ತೊಂದರೆಯಾಗುತ್ತಿದ್ದು, ಕೂಡಲೆ ಶಿಕ್ಷಕರನ್ನು ನೇಮಿಸುವಂತೆ ಪ್ರತಿಔಟನೆಯ ವೇಳೆ ಆಗ್ರಹಿಸಿದ್ರು.

  • ಪರಿಸ್ಥಿತಿ ಕೈಮೀರಿದ್ದರೆ ಯಾರು ಜವಾಬ್ದಾರಿ ಹೊರುತ್ತಿದ್ದರು: ಉಡುಪಿ ಎಸ್‍ಪಿ

    ಪರಿಸ್ಥಿತಿ ಕೈಮೀರಿದ್ದರೆ ಯಾರು ಜವಾಬ್ದಾರಿ ಹೊರುತ್ತಿದ್ದರು: ಉಡುಪಿ ಎಸ್‍ಪಿ

    ಉಡುಪಿ: ಪೊಲೀಸ್ ಎಸ್‍ಪಿ ಕಚೇರಿಯ ಮುಂದೆಯೇ ಎರಡು ರಾಜಕೀಯ ಪಕ್ಷಗಳ ಕಾರ್ಯಕರ್ತರು ಹೊಡೆದಾಟಕ್ಕೆ ಇಳಿದಿದ್ದರು. ಮನವೊಲಿಸಿ ಚದುರಿಸಲು ಪ್ರಯತ್ನ ಮಾಡಿದರೂ ಅದು ಸಾಧ್ಯವಾಗದೇ ಇದ್ದಾಗ ಲಾಠಿ ಚಾರ್ಜ್ ಮಾಡಬೇಕಾಯಿತು ಎಂದು ಉಡುಪಿ ಎಸ್‍ಪಿ ಲಕ್ಷ್ಮಣ ನಿಂಬರಗಿ ಹೇಳಿದ್ದಾರೆ.

    ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಹೊಡೆದಾಟ ನಿಲ್ಲಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿಚಾರ್ಜ್ ಮಾಡಬೇಕಾಯಿತು. ಪರಿಸ್ಥಿತಿ ಕೈಮೀರಿದ್ದರೆ ಯಾರು ಜವಾಬ್ದಾರಿ ಹೊರುತ್ತಿದ್ದರು? ಆದ್ದರಿಂದಲೇ ಕಠಿಣ ಕ್ರಮಕೈಗೊಳ್ಳಲಾಗಿದೆ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದಾರೆ.

    ಘಟನೆ ಕುರಿತು ಮಾಹಿತಿ ಸಂಗ್ರಹಿಸಿ ಕ್ರಮ ಕೈಗೊಳ್ಳಲು ಮುಂದಾದ ಪೊಲೀಸರು ಘಟನೆಯಲ್ಲಿ ಗಾಯಗೊಂಡ ಮಂದಿಯನ್ನು ಭೇಟಿಯಾಗಿ, ಬಂಧನ ಪ್ರಕ್ರಿಯೆ ಮಾಡಲು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಎಸ್‍ಪಿ ಭೇಟಿ ಕೊಟ್ಟಿದ್ದರು. ಈ ಪ್ರಕರಣದಲ್ಲಿ ಈಗಾಗಲೇ 10 ಮಂದಿಯನ್ನು ಬಂಧಿಸಲಾಗಿದ್ದು, 10 ಮಂದಿಯ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ. ತನಿಖೆ ನಡೆಸಲು ಡಿವೈಎಸ್‍ಪಿ ಬೆಳ್ಳಿಯಪ್ಪಗೆ ಜವಾಬ್ದಾರಿ ನೀಡಲಾಗಿದೆ. ಗಲಭೆ ವಿಡಿಯೋ ಆಧರಿಸಿ ಮತ್ತಷ್ಟು ಜನರನ್ನು ಬಂಧಿಸಲಾಗುವುದು ಎಂದು ಮಾಹಿತಿ ನೀಡಿದರು.

    ಘಟನೆ ವೇಳೆ ಎರಡೂ ಪಕ್ಷದವರನ್ನು ಮನವೊಲಿಸಿದರೂ ಎರಡು ಕಡೆಯ ಉದ್ರಿಕ್ತ ಗುಂಪು ಹತೋಟಿಗೆ ಬರಲಿಲ್ಲ. ಪರಿಸ್ಥಿತಿ ಕೈಮೀರಿದಾಗ ಲಾಠಿಚಾರ್ಜ್ ಮಾಡಿದ್ದೇವೆ. ಪ್ರತಿಭಟನೆ ವಿಪರೀತಕ್ಕೆ ಹೋಗಲು ಕಾರಣ ಏನು ಎಂಬುವುದರ ಬಗ್ಗೆ ತನಿಖೆ ಮಾಡಲಾಗುವುದು ಎಂದು ವಿವರಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತೈಲ ಬೆಲೆ ಏರಿಸಬೇಕು ಎಂದ ಆಪ್ ಕಾರ್ಯಕರ್ತನಿಗೆ ಮುಖಂಡನಿಂದ ಕಪಾಳಮೋಕ್ಷ – ವಿಡಿಯೋ ನೋಡಿ

    ತೈಲ ಬೆಲೆ ಏರಿಸಬೇಕು ಎಂದ ಆಪ್ ಕಾರ್ಯಕರ್ತನಿಗೆ ಮುಖಂಡನಿಂದ ಕಪಾಳಮೋಕ್ಷ – ವಿಡಿಯೋ ನೋಡಿ

    ಬೆಳಗಾವಿ: ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ವೇಳೆ ತಪ್ಪಾಗಿ ತೈಲ ಬೆಲೆ ಏರಿಸಬೇಕು ಎಂದು ಘೋಷಣೆ ಕೂಗಿದ ಎಎಪಿ ಕಾರ್ಯಕರ್ತನಿಗೆ ಮುಖಂಡರೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ.

    ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಆಮ್ ಆದ್ಮಿ ಪಕ್ಷದಿಂದ ತೈಲ ಬೆಲೆ ಖಂಡಿಸಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತನೊಬ್ಬ ತೈಲ ಬೆಲೆ ಏರಿಸಲೇಬೇಕು ಎಂದು ಘೋಷಣೆಯನ್ನು ಕೂಗಿದ್ದಾರೆ. ಇದರಿಂದ ಆಕ್ರೋಶಗೊಂಡು ಅಲ್ಲೆ ಇದ್ದ ಮುಖಂಡ ಸದಾನಂದ್ ಬಾಮನೆ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ.

    ದೇಶದೆಲ್ಲೆಡೆ ತೈಲ ಬೆಲೆ ಏರಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಬೆಳಗಾವಿಯಲ್ಲೂ ಬಂದ್ ಗೆ ಕರೆ ನೀಡಿದ್ದರು. ಈ ವೇಳೆ ಕಾರ್ಯಕರ್ತ ತೈಲ ಬೆಲೆ ಇಳಿಸಬೇಕು ಎಂದು ಹೇಳುವ ಬದಲು ತೈಲ ಬೆಲೆ ಏರಿಸಬೇಕು ಎಂದು ಕೂಗಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೇಂದ್ರದ ಜೊತೆ ರಾಜ್ಯ ಸರ್ಕಾರಕ್ಕೂ ಎಚ್ಚರಿಕೆ ಕೊಟ್ಟ ವಾಟಾಳ್ ನಾಗರಾಜ್

    ಕೇಂದ್ರದ ಜೊತೆ ರಾಜ್ಯ ಸರ್ಕಾರಕ್ಕೂ ಎಚ್ಚರಿಕೆ ಕೊಟ್ಟ ವಾಟಾಳ್ ನಾಗರಾಜ್

    ಬೆಂಗಳೂರು: ಭಾರತ್ ಬಂದ್ ಕೇಂದ್ರ ಸರ್ಕಾರಕ್ಕೆ ಮಾತ್ರವಲ್ಲದೇ ರಾಜ್ಯ ಸರ್ಕಾರಕ್ಕೂ ಅನ್ವಯಿಸುತ್ತದೆ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

    ತೈಲ ಬೆಲೆ ಏರಿಕೆ ವಿರೋಧಿಸಿ ಹಮ್ಮಿಕೊಂಡಿರುವ ಭಾರತ್ ಬಂದ್ ವೇಳೆ ಎಮ್ಮೆ ಮೇಲೆ ಬಂದು ವಿನೂತನವಾಗಿ ವಾಟಾಳ್ ನಾಗರಾಜ್ ಪ್ರತಿಭಟಿಸಿದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಭಾರತ್ ಬಂದ್ ಕೇವಲ ಕೇಂದ್ರ ಸರ್ಕಾರಕ್ಕೆ ಮಾತ್ರ ಸೀಮಿತವಲ್ಲ, ಇದು ರಾಜ್ಯ ಸರ್ಕಾರಕ್ಕೂ ಅನ್ವಯಿಸುತ್ತದೆ. ಮೊದಲು ಪೆಟ್ರೋಲ್, ಡೀಸೆಲ್ ದರಗಳ ಮೇಲಿನ ಸೆಸ್ ದರವನ್ನು ಕಡಿಮೆ ಮಾಡಬೇಕು. ಒಂದು ವೇಳೆ ರಾಜ್ಯದಲ್ಲಿ ಬಸ್ ದರ ಏರಿಕೆ ಮಾಡಿದ್ದೇ ಆದರೆ, ನಿಮ್ಮ ವಿರುದ್ಧವು ಪ್ರತಿಭಟಿಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

    ತೈಲ ದರ ಹಾಗೂ ಅಡುಗೆ ಅನಿಲಗಳ ದರಗಳನ್ನು ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳು ಬಂದ್ ಮಾಡಲು ನಿರ್ಧಾರ ಮಾಡಿದ್ದೆವು. ಆದರೆ ಅಷ್ಟೋತ್ತಿಗೆ ಕಾಂಗ್ರೆಸ್ ಭಾರತ್ ಬಂದ್‍ಗೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ 2 ಸಾವಿರ ಕನ್ನಡಪರ ಸಂಘಟನೆಗಳು ಕಾಂಗ್ರೆಸ್ ಕರೆ ನೀಡಿದ್ದ ಬಂದ್‍ಗೆ ಬೆಂಬಲ ನೀಡಿವೆ ಎಂದು ಹೇಳಿದರು.

    ಇಂದು ಎಮ್ಮೆ ಸವಾರಿ ಮಾಡುವ ಮೂಲಕ ಕೇಂದ್ರ ಸರ್ಕಾರ ತೈಲ ಏರಿಕೆ ನೀತಿಯನ್ನು ವಿರೋಧಿಸಿದ್ದೇವೆ. ಕೇಂದ್ರ ಪೆಟ್ರೋಲ್, ಡಿಸೇಲ್ ಹಾಗೂ ಅನಿಲ ದರಗಳಿಗೆ ವೈಜ್ಞಾನಿಕ ರೀತಿಯ ಬೆಲೆ ನಿಗದಿಮಾಡಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಕುಸಿದು ಬಿದ್ದಿದೆ. ಅವರದ್ದು ಪೈಸಾ ಸರ್ಕಾರ, ಇದೇ ರೀತಿ ಮುಂದುವರಿದರೆ ದೇಶದಲ್ಲಿ ದಂಗೆ ಏಳುತ್ತದೆ ಎಂದು ಎಚ್ಚರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv