Tag: ಪ್ರತಿಭಟನೆ

  • ಬಾಂಗ್ಲಾದೇಶದ ಸರ್ಕಾರಿ ಕೆಲಸದಲ್ಲಿ ಮೀಸಲಾತಿ ರದ್ದು

    ಬಾಂಗ್ಲಾದೇಶದ ಸರ್ಕಾರಿ ಕೆಲಸದಲ್ಲಿ ಮೀಸಲಾತಿ ರದ್ದು

    ಢಾಕಾ: ಸರ್ಕಾರಿ ಸೇವೆಗಳಲ್ಲಿ ನೀಡಲಾಗುತ್ತಿದ್ದ ಮೀಸಲಾತಿ ವ್ಯವಸ್ಥೆಯನ್ನು ರದ್ದುಪಡಿಸಲು ನಿರ್ಧರಿಸಲಾಗಿದೆ ಎಂದು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ತಿಳಿಸಿದ್ದಾರೆ.

    ಬಾಂಗ್ಲಾ ದೇಶದಲ್ಲಿ ಈವರೆಗೂ ವಿಶೇಷ ವರ್ಗಕ್ಕೆ ಮೀಸಲಾತಿ ನೀಡಲಾಗುತ್ತಿತ್ತು. ಆದರೆ ಬುಧವಾರದಂದು ಪ್ರಧಾನಿ ಶೇಖ್ ಹಸೀನಾ ಮೀಸಲಾತಿ ರದ್ದು ಮಾಡುವ ನಿರ್ಧಾರವನ್ನು ಪ್ರಕಟಿಸಿದ್ದರು. ಮೀಸಲಾತಿ ರದ್ದು ಮಾಡುವಂತೆ ಆಗ್ರಹಿಸಿ ರಾಜಧಾನಿ ಢಾಕಾದಲ್ಲಿ ವಿದ್ಯಾರ್ಥಿಗಳು ಭಾರೀ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಗೆ ಮಣಿದ ಸರ್ಕಾರ ಈಗ ಮೀಸಲಾತಿಯನ್ನು ರದ್ದು ಪಡಿಸುವ ನಿರ್ಧಾರವನ್ನು ಕೈಗೊಂಡಿದೆ.

    ಬಾಂಗ್ಲಾದೇಶದ ಸರ್ಕಾರಿ ವಲಯದಲ್ಲಿ ಶೇ.56 ರಷ್ಟು ಮೀಸಲಾತಿಯನ್ನು ನೀಡಲಾಗುತ್ತಿತ್ತು. ವಿಶೇಷವಾಗಿ ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳು, ಮಹಿಳೆಯರು, ಧಾರ್ಮಿಕ ಅಲ್ಪಸಂಖ್ಯಾತರು ಹಾಗೂ ಅಂಗವಿಕಲರಿಗೆ ಉದ್ಯೋಗದಲ್ಲಿ ಮೀಸಲಾತಿ ಇತ್ತು. ಈಗ ಮೀಸಲಾತಿ ರದ್ದಾಗಿದ್ದರೂ ಅಂಗವಿಕಲರು ಮತ್ತು ಹಿಂದುಳಿದ ವರ್ಗದ ಅಲ್ಪಸಂಖ್ಯಾತರಿಗಿದ್ದ ಮೀಸಲಾತಿ ಮುಂದುವರಿಯಲಿದೆ.

    ದೇಶದ ಜನಸಂಖ್ಯೆಯಲ್ಲಿ ಇರುವ ಶೇ.98 ರಷ್ಟು ಜನ ಕೇವಲ ಶೇ.44 ಉದ್ಯೋಗಕ್ಕೆ ಪೈಪೋಟಿ ನಡೆಸಬೇಕು. ಶೇ.2 ರಷ್ಟಿರುವವರಿಗೆ ಶೇ.56 ಮೀಸಲಾತಿ ನೀಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿ ಭಾರೀ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ಹೋರಾಟ ತೀವ್ರಗೊಂಡ ಬಳಿಕ ಪ್ರಧಾನಿ ಶೇಖ್ ಹಸೀನಾ ಸರ್ಕಾರ ಮೀಸಲಾತಿ ರದ್ದು ಮಾಡುವ ಕುರಿತು ನಿರ್ಧಾರವನ್ನು ಪ್ರಕಟಿಸಿದೆ.

    ವಿದ್ಯಾರ್ಥಿಗಳ ಹಿಂಸಾಚಾರದ ಪ್ರತಿಭಟನೆಯಿಂದ ಢಾಕಾ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿತ್ತು. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ವಿದ್ಯಾರ್ಥಿಗಳ ವಿರುದ್ಧ ಅಶ್ರುವಾಯು ಹಾಗೂ ರಬ್ಬರ್ ಗುಂಡು ಹಾರಿಸಿದ್ದರು. ಈ ಸಂಬಂಧ 100ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅಲ್ಲದೇ ದೇಶ ನಾನಾ ಭಾಗಗಳಲ್ಲಿ ಮೀಸಲಾತಿ ರದ್ದತಿಯ ವಿರುದ್ಧ ಹೋರಾಟಗಳು ನಡೆಯುತಿತ್ತು.

    ವಿದ್ಯಾರ್ಥಿಗಳ ಪ್ರತಿಭಟನೆಯಿಂದ ದೇಶದ್ಯಾಂತ ಇರುವ ಎಲ್ಲಾ ವಿಶ್ವವಿದ್ಯಾಲಯಗಳ ತರಗತಿ ಹಾಗೂ ಪರೀಕ್ಷೆ ರದ್ದಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ ಶೇಖ್ ಹಸೀನಾ, ವಿದ್ಯಾರ್ಥಿಗಳ ಪ್ರತಿಭಟನೆಯಿಂದ ಜನಸಾಮಾನ್ಯರು ತೊಂದರೆಗೆ ಸಿಲುಕಿದ್ದಾರೆ. ಮೀಸಲಾತಿ ರದ್ದಾಗಿರುವುದರಿಂದ ಈಗ ವಿದ್ಯಾರ್ಥಿಗಳು ಮನೆಗೆ ತೆರಳಬೇಕು ಎಂದು ಮನವಿ ಮಾಡಿದ್ದಾರೆ.

  • ರಜನಿ, ಕಮಲ್ ಹೇಳಿಕೆಗೆ ಅಸಮಾಧಾನ- ರಾಜ್ಯದ ಪರ ಬೆಂಬಲ ವ್ಯಕ್ತಪಡಿಸಿದ ಅನಂತ್‍ನಾಗ್!

    ರಜನಿ, ಕಮಲ್ ಹೇಳಿಕೆಗೆ ಅಸಮಾಧಾನ- ರಾಜ್ಯದ ಪರ ಬೆಂಬಲ ವ್ಯಕ್ತಪಡಿಸಿದ ಅನಂತ್‍ನಾಗ್!

    ಬೆಂಗಳೂರು: ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ತಮಿಳುನಾಡಿನಲ್ಲಿ ಪ್ರತಿಭಟನೆ ಮೇಲೆ ಪ್ರತಿಭಟನೆ ನಡಿಯುತ್ತಿದೆ. ಹೀಗಿರುವಾಗ ತಮಿಳು ಸಿನಿಮಾ ನಟರು ಕೂಡ ಪ್ರತಿಭಟನೆಗೆ ಬೆಂಬಲಿಸುತ್ತಿದ್ದಾರೆ. ರಜನಿಕಾಂತ್, ಕಮಲ್ ಹಾಸನ್ ಹೇಳಿಕೆಗೆ ಕನ್ನಡದ ಹಿರಿಯ ನಟ ಅನಂತ್‍ನಾಗ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ರಾಜಕೀಯಕ್ಕೆ ಇಳಿಯುತ್ತಿದ್ದ ಹಾಗೆಯೇ ತಮಿಳುನಾಡಿನ ನಟರು ಥೇಟ್ ರಾಜಕಾರಣಿಗಳ ಥರ ಆಡುತ್ತಿದ್ದಾರೆ. ಇಂಥ ಹೊತ್ತಲ್ಲಿ ಕನ್ನಡಿಗರು ಸುಮ್ಮನಿರಬೇಕೇ ಎಂದು ಹಿರಿಯ ನಟ ಅನಂತನಾಗ್ ಪ್ರಶ್ನಿಸಿದ್ದಾರೆ. ಕನ್ನಡದ ನೆಲ-ಜಲ-ಭಾಷೆ ಮತ್ತು ಕರ್ನಾಟಕದ ಮಾತು ಬಂದಾಗ ಸಮಸ್ತ ಕನ್ನಡಿಗರ ಜೊತೆಗೆ ನಾನಿದ್ದೇನೆ ಎಂದು ಘೋಷಿಸಿದ್ದಾರೆ.

    ವಿಡಿಯೋದಲ್ಲಿ ಏನಿದೆ?
    ಕಾವೇರಿ ನದಿ ಹಂಚಿಕೆ ವಿಚಾರದಲ್ಲಿ ತಮಿಳುನಾಡು ಅಸಹನೆ, ಅಸಹಕಾರ, ಘರ್ಷಣೆ ನಿಲುವನ್ನ ತೋರಿಸುತ್ತ ಬಂದಿದೆ ಎನ್ನುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ. ಇಂದು ಮತ್ತೆ ತಮಿಳು ಮುಖಂಡರು ತಮಿಳುನಾಡು ಬಂದ್ ಆಚರಿಸಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ.

    ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಇರುವುದರಿಂದ ಕೇಂದ್ರದಲ್ಲಿರುವ ಸರ್ಕಾರ ಕರ್ನಾಟಕ್ಕೆ ಹೆಚ್ಚು ಅನುಕೂಲ ಮಾಡಿಕೊಡುತ್ತದೆ ಎಂಬ ಮಾತು ಕೇಳಿಬರುತ್ತಿದೆ. ನಿಜವೆಂದರೆ ಕೇಂದ್ರದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ನೀರು ಹಂಚಿಕೆಗೆ ಯಾವ ಸೂಕ್ತ, ಸೂತ್ರ ಪರಿಹಾರ ಸೂಚಿಸಿದ್ದರೂ ತಮಿಳುನಾಡು ಅಪಸ್ವರ ಎತ್ತಿಕೊಂಡೇ ಬಂದಿದೆ.

    ಸುಪ್ರಿಂ ಕೋರ್ಟ್ ಕೂಡ ಯಾವುದೇ ಪರಿಹಾರ ನೀಡಲು ಮುಂದಾದರೂ ಅಲ್ಲಿಯ ರಾಜಕಾರಣಿಗಳು ಒಪ್ಪುವುದಿಲ್ಲ. ಈಗ ಸದ್ಯದಲ್ಲಿ ತಮಿಳುನಾಡಿನಲ್ಲಿ ಯಾವುದೇ ಚುನಾವಣೆ ಇಲ್ಲದಾಗಿಯೂ ಅಲ್ಲಿನ ನಟರು ರಾಜಕೀಯ ಪ್ರವೇಶ ಮಾಡುವ ಮಾತುಗಳಲ್ಲಿ ಹಿಂದಿನ ಪೀಳಿಗೆಯವರಂತೆಯೇ ಅನೇಕ ಹೇಳಿಕೆಗಳನ್ನು ಕೊಡುತ್ತಿದ್ದಾರೆ.

    ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ, ಕರ್ನಾಟಕ ಭಾಷೆ, ನೆಲ, ಜಲ ಕಾಪಾಡಿಕೊಳ್ಳುವ ಕರ್ತವ್ಯದಲ್ಲಿ ಸಮಸ್ತ ಕನ್ನಡಿಗರ ಜೊತೆ ನಾನು ಕೂಡ ಟೊಂಕ ಕಟ್ಟಿ ನಿಂತಿದ್ದೇನೆ ಎನ್ನುವುದನ್ನು ಘಂಟಾಘೋಷವಾಗಿ ಅನಿವಾರ್ಯವಾಗಿ, ನಮೃತ್ತೆಯಿಂದ ಹೇಳಲು ಇಚ್ಚಿಸುತ್ತೇನೆ ಎಂದು ಹಿರಿಯ ನಟ ಹೇಳಿಕೊಂಡಿದ್ದಾರೆ.

  • ನಡುರಸ್ತೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ ಟಾಲಿವುಡ್ ನಟಿ!

    ನಡುರಸ್ತೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ ಟಾಲಿವುಡ್ ನಟಿ!

    ಹೈದರಾಬಾದ್: ಟಾಲಿವುಡ್ ನಟಿಯೊಬ್ಬರು ಫಿಲ್ಮ್ ಚೆಂಬರ್ ವಿರುದ್ಧ ನಡುರಸ್ತೆಯಲ್ಲಿ ಅರೆಬೆತ್ತಲೆಯಾಗುವ ಮೂಲಕ ಪ್ರತಿಭಟನೆ ನಡೆಸಿದ ಘಟನೆ ಹೈದರಾಬಾದ್ ನಗರದ ಫಿಲ್ಮ್ ನಗರದಲ್ಲಿ ನಡೆದಿದೆ.

    ಟಾಲಿವುಡ್‍ನ ಕೆಲ ಸಿನಿಮಾಗಳಲ್ಲಿ ನಾಯಕ ನಟಿಯಾಗಿ ಕಾಣಿಸಿಕೊಂಡಿರುವ ಶ್ರೀ ರೆಡ್ಡಿ ಅಲ್ಲಿನ ಫಿಲ್ಮ್ ಚೆಂಬರ್ ವಿರುದ್ಧ ನಡುರಸ್ತೆಯಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.

    ಇಂದು ಹೈದರಾಬಾದ್ ನಗರದ ಫಿಲ್ಮ ಚೆಂಬರ್ ಮುಂದೇ ಆಗಮಿಸಿದ ಅವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಟಾಲಿವುಡ್ ಹಿರೋಯಿನ್ ಆಗಿ ಗುರುತಿಸಿಕೊಂಡಿದ್ದರು ತಮಗೇ ಸಿನಿಮಾ ನಟರ ಆಸೋಸಿಯೇಷನ್ ಸಂಸ್ಥೆಯಲ್ಲಿ ಸದಸ್ಯತ್ವ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಅಲ್ಲದೇ ತಮ್ಮ ಪ್ರತಿಭಟನೆ ಬಳಿಕವೂ ಸಂಸ್ಥೆ ತಮಗೆ ಸದಸ್ಯತ್ವ ನೀಡದೆ ಇದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾರೆ.

    ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದ ನಟಿ ಶ್ರೀ ರೆಡ್ಡಿ ಟಾಲಿವುಡ್ ಅಂಗಳದಲ್ಲಿನ ಕಾಸ್ಟಿಂಗ್ ಕೋಚ್ ಬಗ್ಗೆ ಹೇಳಿಕೆ ನೀಡಿ ಸುದ್ದಿಯಾಗಿದ್ದರು.

    https://www.youtube.com/watch?v=5TiflmioJDA

     

  • ಕ್ಷುಲ್ಲಕ ಕಾರಣಕ್ಕೆ ನಿಶ್ಚಿತಾರ್ಥ ಬಳಿಕ ಮದ್ವೆ ಬೇಡ ಅಂದ- ವರನ ಮನೆ ಮುಂದೆ ವಧು ಪ್ರತಿಭಟನೆ

    ಕ್ಷುಲ್ಲಕ ಕಾರಣಕ್ಕೆ ನಿಶ್ಚಿತಾರ್ಥ ಬಳಿಕ ಮದ್ವೆ ಬೇಡ ಅಂದ- ವರನ ಮನೆ ಮುಂದೆ ವಧು ಪ್ರತಿಭಟನೆ

    ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ನಿಶ್ಚಿತಾರ್ಥವಾದ ಬಳಿಕ ವರ ಮದುವೆಯಾಗುವುದಿಲ್ಲ ಎಂದು ಉಲ್ಟಾ ಹೊಡೆದಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಬ್ಯಾಡರಹಳ್ಳಿಯ ನಿವಾಸಿ ಪುನೀತ್ ಯುವತಿಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ. ಬ್ಯಾಡರಹಳ್ಳಿಯಲ್ಲಿ ನಿವಾಸಿ ಪುನೀತ್ ಹಾಗೂ ತಾವರೆಕೆರೆಯ ಪ್ರಸನ್ನ ಚರಿಪಾಳ್ಯದ ನಿವಾಸಿ ಶಾಂತಿಗೆ ಮದುವೆ ನಿಶ್ಚಯವಾಗಿತ್ತು.

    ನವೆಂಬರ್ 26ರಂದು ಹಿರಿಯರ ಸಮ್ಮುಖದಲ್ಲಿ ಶಾಂತಿ ಹಾಗೂ ಪುನೀತ್‍ಗೆ ನಿಶ್ಚಿತಾರ್ಥ ನೆರವೇರಿತ್ತು. ಅಂದೇ ಏಪ್ರಿಲ್ 21 ಹಾಗೂ 22ಕ್ಕೆ ಮದುವೆ ಕೂಡ ನಿಶ್ಚಯವಾಗಿತ್ತು. ಆದರೆ ಈಗ ವರ ಪುನೀತ್ ಮದುವೆಗೆ ನಿರಾಕರಿಸಿದ್ದು, ನೊಂದ ಶಾಂತಿ ಮತ್ತು ಅವರ ಷೋಷಕರು ಒಂದು ವಾರದಿಂದ ಪುನೀತ್ ಮನೆ ಎದುರು ಧರಣಿ ಕುಳಿತಿದ್ದರು.

    ಧರಣಿಯಿಂದ ಆಕ್ರೋಶಗೊಂಡ ವರ ಪುನೀತ್ ಹಾಗೂ ಆತನ ಸಹೋದರ ಬೀರೇಶ್ ಶುಕ್ರವಾರ ರಾತ್ರಿ ಧರಣಿ ಕುಳಿತಿದ್ದ ಶಾಂತಿ ಮತ್ತು ಆಕೆಯ ತಂದೆ, ತಾಯಿಯ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾನೆ. ಅಲ್ಲದೆ ನನ್ನ ತಾಯಿಗೆ ನೀನು ಬೈದಿದ್ದೀಯ ಅದಕ್ಕೆ ನಾನು ನಿನ್ನನ್ನು ಮದುವೆಯಾಗಲ್ಲ ಎಂದು ಹೇಳಿದ್ದಾನೆ.

    ಸದ್ಯ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ಶಾಂತಿ ಷೋಷಕರು ದೂರು ನೀಡಿದ್ದಾರೆ. ಈ ಕುರಿತು ಬ್ಯಾಡರಹಳ್ಳಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

  • 7 ವರ್ಷ ಬಳಿಕ ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸಿದ ಅಣ್ಣಾ ಹಜಾರೆ

    7 ವರ್ಷ ಬಳಿಕ ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸಿದ ಅಣ್ಣಾ ಹಜಾರೆ

    ನವದೆಹಲಿ: ಯುಪಿಎ ಆಡಳಿತ ಅವಧಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿ ಸಾವಿರಾರು ಜನರು ಬೀದಿಗಿಳಿದು ಹೋರಾಟ ನಡೆಸುವಂತೆ ಮಾಡಿದ್ದ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ 7 ವರ್ಷಗಳ ಬಳಿಕ ಮತ್ತೆ ಸತ್ಯಾಗ್ರಹ ಆರಂಭಿಸಿದ್ದಾರೆ.

    ಅಂದು ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್ ವಿರುದ್ಧ ಹೋರಾಟ ಆರಂಭಿಸಿದ್ದ ಅಣ್ಣಾ ಹಜಾರೆ ಅವರು, ಇಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ರಾಮಲೀಲಾ ಮೈದಾನದಲ್ಲಿ ಹೋರಾಟ ಆರಂಭಿಸಿದ್ದಾರೆ.

    ಸತ್ಯಾಗ್ರಹ ಆರಂಭಿಸುವ ಮುನ್ನ ಅಣ್ಣಾ ಹಜಾರೆ ದೆಹಲಿಯಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದರು. ಸಮರ್ಥ ಲೋಕ್‍ಪಾಲ್ ಜಾರಿ, ಎಲ್ಲಾ ರಾಜ್ಯಗಳಲ್ಲಿ ಲೋಕಾಯುಕ್ತ ನೇಮಕ ಮತ್ತು ರೈತರ ಬೆಳೆಗಳಿಗೆ ಉತ್ತಮ ಬೆಂಬಲ ಬೆಲೆ ನೀಡಿವುದು, ಸ್ವಾಮಿನಾಥನ್ ವರದಿ ಜಾರಿ ಅವರ ಪ್ರಮುಖ ಬೇಡಿಕೆಗಳಾಗಿವೆ. ಅಣ್ಣಾ ಹಜಾರೆ ಅವರ ಹೋರಾಟಕ್ಕೆ ಬೃಹತ್ ಮಟ್ಟದಲ್ಲಿ ಬೆಂಬಲ ವ್ಯಕ್ತವಾಗಿದೆ.

    ಈ ವೇಳೆ ಮಾತನಾಡಿದ ಅವರು, ಸತ್ಯಾಗ್ರಹದಲ್ಲಿ ಭಾಗವಹಿಸಲು ಆಗಮಿಸುತ್ತಿದ್ದ ಸಾವಿರರು ರೈತರು, ಹೋರಾಟಗಾರರನ್ನು ತಡೆಯಲು ಸರ್ಕಾರ ರೈಲ್ವೇ ಸೇವೆಯನ್ನು ಸ್ಥಗಿತಗೊಳಿಸಿರುವ ಕ್ರಮದ ವಿರುದ್ಧ ಕಿಡಿಕಾರಿದರು. ಅಲ್ಲದೇ ನೀವು ಅವರನ್ನು ಹಿಂಸೆಗೆ ತಳ್ಳಲು ಬಯಸುತ್ತೀರಿ. ಪೊಲೀಸರ ರಕ್ಷಣೆ ಬೇಡವೆಂದು ಹಲವು ಪತ್ರಗಳನ್ನು ಬರೆದಿದ್ದೇನೆ. ನಿಮ್ಮ ರಕ್ಷಣೆ ನನ್ನನ್ನು ಉಳಿಸುವುದಿಲ್ಲ. ಇಂತಹ ಸರ್ಕಾರದ ಮೋಸದ ವರ್ತನೆ ಮುಗಿಯುವುದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ರು.

    2011ರಲ್ಲಿ ಅಣ್ಣಾ ಹಜಾರೆ ಆರಂಭಿಸಿದ್ದ `ಭ್ರಷ್ಟಾಚಾರ ವಿರೋಧಿ ಚಳುವಳಿ’ಗೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತು. ಭ್ರಷ್ಟಾಚಾರದ ಪ್ರಕರಣಗಳನ್ನು ತನಿಖೆ ಮಾಡಲು ಲೋಕ್‍ಪಾಲ್ ಸ್ಥಾಪಿಸಬೇಕೆಂದು ಒತ್ತಾಯಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅವರ ಈ ಬೇಡಿಕೆಯನ್ನು ಪೂರೈಸುತ್ತೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅವರು ಇದನ್ನು ಅಸಡ್ಡೆಗೊಳಿಸಿದಕ್ಕೆ ಹಜಾರೆ ಅವರು ಮತ್ತೆ ಉಪವಾಸ ಸತ್ಯಗ್ರಹವನ್ನು ಕೈಗೊಂಡಿದ್ದಾರೆ.

    ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು, ಪ್ರಧಾನಿಗಳಿಗೆ ಸುಮಾರು 30 ಪತ್ರ ಬರೆದಿದ್ದು, ಒಂದಕ್ಕೂ ಉತ್ತರ ಬಂದಿಲ್ಲ. ಮೋದಿಗೆ ಪ್ರಧಾನಮಂತ್ರಿಗಿರಿಯ ಅಹಂ ಇದೆ. ಅದಕ್ಕಾಗಿ ನನ್ನ ಪತ್ರಗಳಿಗೆ ಪ್ರತಿಕ್ರಿಯೆ ನೀಡಿಲ್ಲ ಎಂದು ಹೇಳಿದ್ದರು. ಮುಂದೆ ಹೋರಾಟ ಆರಂಭಿಸಲಿದ್ದು, ಇದು ಹಿಂದೆಂದೂ ನಡೆದಿರದಂತಹ ಬೃಹತ್ ಚಳವಳಿ ಆಗಿರಲಿದ್ದು, ಸರ್ಕಾರಕ್ಕೆ ಇದು ಎಚ್ಚರಿಕೆಯಾಗಲಿದೆ ಎಂದು ಹಜಾರೆ ಹೇಳಿದ್ರು.

    ನನ್ನ ಸಮಾವೇಶ ಮತ್ತು ಚಳವಳಿಗಳ ಮೂಲಕ ಓಟು ಗಳಿಸುವ ಉದ್ದೇಶ ನನಗಿಲ್ಲ. ಜನ ಲೋಕ್‍ಪಾಲ್‍ಗೆ ಬೃಹತ್ ಜಾಥಾ ನಡೆದಂತೆಯೇ, ರೈತರ ಸಮಸ್ಯೆಗಳ ಬಗ್ಗೆಯೂ ಅದೇ ರೀತಿ ಚಳವಳಿ ನಡೆಯುತ್ತದೆ ಎಂದು ಭಾವಿಸಿದ್ದೇನೆ ಎಂದು ಅವರು ಹೇಳಿದ್ದರು. ಸದ್ಯ ಲೋಕ್‍ಪಾಲ್ ಅನುಷ್ಠಾನ, ಲೋಕಾಯುಕ್ತ ನೇಮಕ, ರೈತರಿಗೆ 5 ಸಾವಿರ ರೂ. ಪಿಂಚಣಿ ಹಾಗೂ ರೈತರ ಬೆಳೆಗಳಿಗೆ ದರ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನ ಮುಂದಿಟ್ಟು ಅಣ್ಣಾ ಹಜಾರೆ ಹೋರಾಟಕ್ಕೆ ಮುಂದಾಗಿದ್ದಾರೆ.

    2011ರ ಪ್ರತಿಭಟನೆ ವೇಳೆ ಅಣ್ಣಾ ಹಾಜರೆ ಅವರ ಪರ ನಿಂತಿದ್ದ ಕೆಲ ನಾಯಕರು ಬಳಿಕ ಆಮ್ ಆದ್ಮಿ ರಾಜಕೀಯ ಪಕ್ಷ ಸ್ಥಾಪಿಸಿ ಅಧಿಕಾರ ಪಡೆದಿದ್ದರು. ಆದರೆ ಈ ಬಾರಿಯ ಚಳುವಳಿಯಲ್ಲಿ ಮತ್ತೊಬ್ಬ ಅರವಿಂದ ಕೇಜ್ರಿವಾಲ್ ಹುಟ್ಟಿ ಬಾರದೇ ಇದ್ದರೆ ಅಷ್ಟೇ ಸಾಕು ಎಂದು ಅಣ್ಣಾ ಹಜಾರೆ ಹೇಳಿದ್ದರು.

  • ಕಲ್ಲಂಗಡಿ ಹಣ್ಣಿನಂತೆ ಹುಡುಗಿಯರ ಎದೆ: ಪ್ರೊಫೆಸರ್ ವಿರುದ್ಧ ಯುವತಿಯರಿಂದ ಟಾಪ್‍ಲೆಸ್ ಪ್ರತಿಭಟನೆ

    ಕಲ್ಲಂಗಡಿ ಹಣ್ಣಿನಂತೆ ಹುಡುಗಿಯರ ಎದೆ: ಪ್ರೊಫೆಸರ್ ವಿರುದ್ಧ ಯುವತಿಯರಿಂದ ಟಾಪ್‍ಲೆಸ್ ಪ್ರತಿಭಟನೆ

    ತಿರುವನಂತಪುರಂ: ಕಾಲೇಜಿನಲ್ಲಿ ಪ್ರೊಫೆಸರ್ ಒಬ್ಬರು ಮಹಿಳೆಯರ ಸ್ತನವನ್ನು ಕಲ್ಲಂಗಡಿಗೆ ಹೊಲಿಸಿದ್ದಕ್ಕೆ ಯುವತಿಯರು ಫೇಸ್‍ಬುಕ್‍ನಲ್ಲಿ ಟಾಪ್‍ಲೆಸ್ ಪ್ರತಿಭಟನೆ ಮಾಡಿದ್ದಾರೆ.

    ಕ್ಯಾಲಿಕಟ್‍ನಲ್ಲಿರುವ ಫಾರೂಕ್ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಭಾಷಣ ಮಾಡುವಾಗ ಕಾಲೇಜಿನ ಯುವತಿಯರ ಸ್ತನ ಕಲ್ಲಂಗಡಿ ಹಣ್ಣಿನ ರೀತಿ ಇರುತ್ತದೆ ಎಂದು ಹೇಳಿದ್ದರು.

    ಪ್ರೊಫೆಸರ್ ಭಾಷಣದಲ್ಲಿ, “ನಾನು ಒಬ್ಬ ಶಿಕ್ಷಕನಾಗಿದ್ದು, ನನ್ನ ಕಾಲೇಜಿನಲ್ಲಿ 80% ವಿದ್ಯಾರ್ಥಿಗಳು ಯುವತಿಯರೇ. ಅದರಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಜಾಸ್ತಿ. ಇವರು ಸಂಪ್ರದಾಯಕ್ಕೆ ತಕ್ಕಂತೆ ಉಡುಪು ಧರಿಸುತ್ತಿಲ್ಲ. ಅವರು ತಮ್ಮ ಸ್ತನವನ್ನು ಹಿಜಾಬ್ ನಲ್ಲಿ ಸರಿಯಾಗಿ ಮುಚ್ಚಿಕೊಳ್ಳುವುದಿಲ್ಲ. ಇದು ತುಂಡರಿಸಿದ ಕಲ್ಲಂಗಡಿ ಹಣ್ಣನ್ನು ಪ್ರದರ್ಶನಕ್ಕೆ ಇಟ್ಟಂತೆ ಕಾಣುತ್ತದೆ” ಎಂದು ಹೇಳಿದ್ದರು.

    ಇದ್ದರಿಂದ ರೊಚ್ಚಿಗೆದ್ದ ಯುವತಿಯರು ಪ್ರೊಫೆಸರ್ ವಿರುದ್ಧ ಫೇಸ್‍ಬುಕ್‍ನಲ್ಲಿ ಟಾಪ್‍ಲೆಸ್ ಪ್ರತಿಭಟನೆ ಮಾಡುತ್ತಿದ್ದಾರೆ. ವಿಷ್ಣು ಎಂಬವರು ತನ್ನ ಗೆಳತಿ ಆರತಿ ಎಸ್‍ಎ ಅವರ ಟಾಪ್‍ಲೆಸ್ ಫೋಟೋವನ್ನು ಫೇಸ್‍ಬುಕ್‍ನಲ್ಲಿ ಶೇರ್ ಮಾಡಿದ್ದಾರೆ. ಇದಾದ ನಂತರ ತಿರುವನಂತಪುರಂ ಮೂಲದ ದಿಯಾ ಸನಾ ಎಂಬವವರು ಕೂಡ ತನ್ನ ಸ್ತನವನ್ನು ಕಲ್ಲಂಗಡಿ ಹಣ್ಣನಿಂದ ಮುಚ್ಚಿಕೊಂಡಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಸದ್ಯ ಈ ಎರಡೂ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಈ ರೀತಿಯ ಫೋಟೋವನ್ನು ಶೇರ್ ಮಾಡಿದ ವ್ಯಕ್ತಿಗಳ ಖಾತೆಯನ್ನು ಫೇಸ್‍ಬುಕ್ ಬ್ಲಾಕ್ ಮಾಡಿದೆ ಎಂದು ವರದಿಯಾಗಿದೆ.

  • ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ – ವೀರಶೈವ, ಲಿಂಗಾಯತ ಕಾರ್ಯಕರ್ತರ ನಡುವೆ ಮಾರಾಮಾರಿ

    ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ – ವೀರಶೈವ, ಲಿಂಗಾಯತ ಕಾರ್ಯಕರ್ತರ ನಡುವೆ ಮಾರಾಮಾರಿ

    ಕಲಬುರಗಿ: ರಾಜ್ಯ ಸರ್ಕಾರ ಪ್ರತ್ಯೇಕ ಲಿಂಗಾಯತ ಧರ್ಮ ವರದಿಯನ್ನು ಒಪ್ಪಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ನಿರ್ಧಾರ ಕೈಗೊಂಡಿದ್ದಕ್ಕೆ ಪರ, ವಿರೋಧ ವ್ಯಕ್ತವಾಗಿದೆ.

    ನಗರದ ಪಟೇಲ್ ವೃತ್ತದಲ್ಲಿ ವೀರಶೈವರು ತೀರ್ಮಾನವನ್ನು ವಿರೋಧಿಸಿದ್ದರೆ, ಲಿಂಗಾಯತರು ಸ್ವಾಗತಿಸಿದ್ದಾರೆ. ಇದೇ ವೇಳೆ ರಾಜ್ಯ ಸರ್ಕಾರ ಶಿಫಾರಸ್ಸು ಕೈಗೊಳ್ಳಲು ತೀರ್ಮಾನಿಸಿದ ಹಿನ್ನೆಲೆಯಲ್ಲಿ ಸಂಭ್ರಮಾಚಣೆಯಲ್ಲಿ ತೊಡಗಿದ್ದ ಲಿಂಗಾಯತರು ಹಾಗೂ ವೀರಶೈವರ ನಡುವೆ ಮಾತಿನ ಚಕಮಕಿ ನಡೆದು ಮಾರಾಮರಿ ನಡೆದಿದೆ.

    ಪ್ರತಿಭಟನೆ ನಡೆಸುತ್ತಿದ್ದಾಗ ವೀರಶೈವರು ಚಪ್ಪಲಿ ತೋರಿಸಿದ್ದಾರೆ. ಈ ವೇಳೆ ಆರಂಭದಲ್ಲಿ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದ್ದು ಈ ಸಂದರ್ಭದಲ್ಲಿ ವೀರಶೈವ ಕಾರ್ಯಕರ್ತರ ಮೇಲೆ ದಾಳಿ ನಡೆದಿದೆ. ವಿಕೋಪಕ್ಕೆ ಹೋಗಿ ವೀರಶೈವ ಲಿಂಗಾಯತ ಮುಖಂಡ ಎಮ್ ಎಸ್ ಪಾಟೀಲ್ ನರಿಬೋಳ್ ಮತ್ತು ಕಾರ್ಯಕರ್ತರು ಲಿಂಗಾಯತ ಮುಖಂಡರಿಗೆ ಚಪ್ಪಲಿ ತೋರಿಸಿದ್ದಾರೆ. ಇದರಿಂದ ರೊಚ್ವಿಗೆದ್ದ ಲಿಂಗಾಯತ ಮುಖಂಡರು, ಎಮ್ ಎಸ್ ಪಾಟೀಲ್ ನರಿಬೋಳ್‍ನ ಶರ್ಟ್ ಹಿಡಿದು ಎಳೆದಾಡಿ ಮನಬಂದಂತೆ ಥಳಿಸಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಹೆಚ್ಚಿನ ಪೊಲೀಸರು ಇಬ್ಬರ ಜಗಳವನ್ನ ಬಿಡಿಸಲು ಹರಸಾಹಸಪಟ್ಟರು.

    ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಎಂಬಿ ಪಾಟೀಲ್, ವಿನಯ್ ಕುಲಕರ್ಣಿ ಹಾಗೂ ಬಸವರಾಜ್ ಹೊರಟ್ಟಿ ಅವರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ವೀರಶೈವರು ಪ್ರತಿಭಟನೆ ನಡೆಸಿದರು. ಅಲ್ಲದೇ ರಾಜ್ಯ ಸರ್ಕಾರದ ಶಿಫಾರಸನ್ನು ಕೇಂದ್ರ ಸರ್ಕಾರ ತಿರಸ್ಕರಿಸಲು ಒತ್ತಾಯ ಮಾಡಿದ್ದಾರೆ. ಇದನ್ನೂ ಓದಿ: ಸಿಎಂ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ: ರಂಭಾಪುರಿ ಶ್ರೀ

    ಪೊಲೀಸರು ಮಧ್ಯಸ್ಥಿಕೆ ವಹಿಸಿದ್ದರು ಸಹ ವೀರಶೈವರ ಮೇಲೆ ಲಿಂಗಾಯತರ ಸಿಟ್ಟು ಮಾತ್ರ ಕಡಿಮೆಯಾಗಲಿಲ್ಲ. ಇನ್ನು ಘಟನೆ ನಂತರ ಸ್ಥಳಕ್ಕೆ ಭೇಟಿ ನೀಡಿದ ಕಲಬುರಗಿ ಎಸ್ಪಿ ಎನ್.ಶಶಿಕುಮಾರ್ ಪ್ರಕರಣ ದಾಖಲಿಸಿ ಸೂಕ್ತ ತನಿಖೆ ನಡೆಸುವುದ್ದಾಗಿ ಹೇಳಿದ್ದಾರೆ. ಇದನ್ನೂ ಓದಿ: ಲಿಂಗಾಯತ, ವೀರಶೈವ ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ – ಕೇಂದ್ರಕ್ಕೆ ಶೀಘ್ರವೇ ಸಿದ್ದು ಸರ್ಕಾರದಿಂದ ಶಿಫಾರಸ್ಸು

    ಹಲ್ಲೆ ನಡೆದ ಬಗ್ಗೆ ಪ್ರತಿಕ್ರಿಯಿಸಿದ ಲಿಂಗಾಯತರು, ನಾವು ಯಾರು ಹಲ್ಲೆ ನಡೆಸಿಲ್ಲ, ಕೆಲವರು ಶಾಂತಿ ಹಾಗೂ ಸುವ್ಯವಸ್ಥೆ ಕದಡಲು ಯತ್ನಸಿದ್ದಾರೆ ಎಂದು ಆರೋಪಿಸಿದರು. ಅಷ್ಟೇ ಅಲ್ಲೇ ಹಲವು ವರ್ಷಗಳ ಹೋರಾಟಕ್ಕೆ ಈಗ ಜಯ ಸಿಕ್ಕಿದೆ ಎಂದು ತಿಳಿಸಿದರು.

    https://www.youtube.com/watch?v=mGoyjkZFU_M

  • ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ವಿರುದ್ಧ ಬೌ..ಬೌ.., ಹಚ್..ಹಚ್.. ಪ್ರತಿಭಟನೆ

    ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ವಿರುದ್ಧ ಬೌ..ಬೌ.., ಹಚ್..ಹಚ್.. ಪ್ರತಿಭಟನೆ

    ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ವಿರುದ್ಧ ದಲಿತ ಸಂಘಟನೆಗಳಿಂದ ವಿಶಿಶ್ಟ ಬೌ..ಬೌ.., ಹಚ್..ಹಚ್ ಪ್ರತಿಭಟನೆ ನಡೆಸಲಾಯಿತು.

    ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರ ಎದುರು ಜಮಾಯಿಸಿದ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು ಅನಂತಕುಮಾರ್ ಹೆಗ್ಡೆ ಅವರನ್ನ ನಾಯಿಗೆ ಹೋಲಿಸಿ ಹಚ್ ಹಚ್ ಎಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕೋಡಿ ತಾಲೂಕಿನ ವಿವಿಧ ಕಾರ್ಯಕ್ರಮ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಸಚಿವ ಹೆಗ್ಡೆ ಭಾಗಿಯಾಗಲಿದ್ದಾರೆ ಎಂದು ಸುದ್ದಿ ತಿಳಿದು ಕಪ್ಪು ಬಾವುಟ ಪ್ರದರ್ಶನ ಮಾಡಲು ದಲಿತ ಸಂಘಟನೆಗಳ ಕಾರ್ಯಕರತರು ಮುಂದಾಗಿದ್ದರು.

    ಕೆಲ ಸಮಯದ ಬಳಿಕ ಸಚಿವರು ಕಾರ್ಯಕ್ರಮಕ್ಕೆ ಆಗಮಿಸುತ್ತಿಲ್ಲ ಎಂಬ ವಿಷಯ ತಿಳಿದ ಕಾರ್ಯಕರ್ತರು, ಗೋ ಬ್ಯಾಕ್, ಗೋ ಬ್ಯಾಕ್ ಅಂತಾ ಸಚಿವ ಹೆಗ್ಡೆ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು. ಸಂವಿಧಾನ ಬದಲಾಯಿಸಲು ನಾವು ಬಂದಿದ್ದು ಹಾಗೂ ಬೀದಿಯಲ್ಲಿ ಬೊಗಳುವ ನಾಯಿಗೆ ತಲೆ ಕೆಡಿಸಿಕೊಳಲ್ಲ ಎಂದು ಸಚಿವ ಹೆಗ್ಡೆ ಕೆಲ ದಿನಗಳ ಹಿಂದೆ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಯಿತು. ಇನ್ನೂ ಈ ಸಂದರ್ಭದಲ್ಲಿ ನೈತಿಕತೆ ಇದ್ದರೆ ಸಚಿವ ಅನಂತಕುಮಾರ್ ಹೆಗ್ಡೆ ರಾಜೀನಾಮೆ ನೀಡಬೇಕು ಎಂದು ಮುಖಂಡರು ಆಗ್ರಹಿಸಿದರು.

  • ಸರ್ಕಾರದ ವಿರುದ್ಧ ಬೀದಿಗಿಳಿದ ರೈತರು – ಪ್ರತಿಭಟನೆಯ ಮಾದರಿಯನ್ನು ಶ್ಲಾಘಿಸಿದ ಮಹಾರಾಷ್ಟ್ರ ಸಿಎಂ

    ಸರ್ಕಾರದ ವಿರುದ್ಧ ಬೀದಿಗಿಳಿದ ರೈತರು – ಪ್ರತಿಭಟನೆಯ ಮಾದರಿಯನ್ನು ಶ್ಲಾಘಿಸಿದ ಮಹಾರಾಷ್ಟ್ರ ಸಿಎಂ

    ಮುಂಬೈ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಡಳಿತರೂಢ ಬಿಜೆಪಿ ಸರ್ಕಾರ ವಿರುದ್ಧ ಮಹಾರಾಷ್ಟ್ರ ರೈತರು ನಡೆಸುತ್ತಿರುವ ಪ್ರತಿಭಟನಾ ಮೆರವಣಿಗೆಯ ಮಾದರಿಯನ್ನು ಮಹಾರಾಷ್ಟ್ರ ಸಿಎಂ ಶ್ಲಾಘಿಸಿದ್ದಾರೆ.

    ರೈತರ ಪ್ರತಿಭಟನೆ ಕುರಿತು ವಿಧಾನಸಭೆಯಲ್ಲಿ ಪ್ರತಿ ಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಿ ಮಾತನಾಡಿದ ಅವರು, ಮಹಾರಾಷ್ಟ್ರ ರೈತರ ಪ್ರತಿಭಟನೆ ದೇಶಕ್ಕೆ ಮಾದರಿಯಾಗಿದ್ದು, ರೈತರ ಎಲ್ಲಾ ಬೇಡಿಕೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾವುದು ಎಂದು ಆಶ್ವಾಸನೆ ನೀಡಿದ್ದಾರೆ.

    ಕಳೆದ ಆರು ದಿನಗಳಿಂದ ಸಾವಿರಾರು ರೈತರು ನಸೀಕ್ ಜಿಲ್ಲೆಯಿಂದ ಮುಂಬೈ ವರೆಗೂ ಸುಮಾರು 180 ಕಿಮೀ ದೂರವನ್ನು `ಕಿಸಾನ್ ಲಾಂಗ್ ಮಾರ್ಚ್’ ಹೆಸರಿನಲ್ಲಿ ಕಾಲ್ನಡಿಗೆಯಲ್ಲಿ ಕ್ರಮಿಸಿ ಪ್ರತಿಭಟನೆ ನಡೆಸಿದ್ದರು.

    ಪ್ರಸ್ತುತ ಮಹಾರಾಷ್ಟ್ರದಲ್ಲಿ ಸೋಮವಾರ ದಿಂದ ಎಸ್‍ಎಸ್‍ಎಲ್‍ಸಿ ಬೋರ್ಡ್ ಪರೀಕ್ಷೆಗಳು ನಡೆಯುತ್ತಿದ್ದು, ಬೃಹತ್ ರೈತರ ಪ್ರತಿಭಟನೆ ದೈನಂದಿನ ಜೀವನಕ್ಕೆ ಧಕ್ಕೆ ತರುವ ಸಾಧ್ಯತೆ ಇತ್ತು. ಆದರೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸುಮಾರು 50 ಸಾವಿರಕ್ಕೂ ಅಧಿಕ ರೈತರು ರಾತ್ರಿ ವೇಳೆ, ಯಾವುದೇ ಘೋಷಣೆಗಳನ್ನು ಕೂಗದೆ ತಮ್ಮ ಯಾತ್ರೆಯನ್ನು ಕೈಗೊಂಡಿದ್ದರು. ಈ ಮೂಲಕ ಪರೀಕ್ಷೆ ಎದುರಿಸಲು ಒಂದು ವರ್ಷದಿಂದ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ನಡೆದುಕೊಂಡಿದ್ದರು.

    ರೈತರು ತಮ್ಮ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರೂ ಸಹ ಅವರ ಈ ಕ್ರಮಕ್ಕೆ ಫಡ್ನಾವಿಸ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ರೈತರ ಬೇಡಿಕೆಗಳನ್ನು ಪೂರ್ಣಗೊಳಿಸುವ ಭರವಸೆಯನ್ನು ನೀಡಿದ್ದಾರೆ. ರೈತರ ಈ ಮಾದರಿ ಪ್ರತಿಭಟನೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದ್ದು, ಹಲವರು ಪ್ರತಿಭಟನೆಗೆ ಸಾಥ್ ನೀಡಿ ಟ್ವೀಟ್ ಮಾಡಿದ್ದಾರೆ.

    ರೈತರು ಪ್ರಮುಖವಾಗಿ ಸಾಲ ಮನ್ನಾ, ಬೆಳೆ ನಷ್ಟ ಪರಿಹಾರ ಹಾಗೂ ತಾವು ಬೆಳೆಯುವ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನೀಡುವಂತಹ ಹಲವು ಬೇಡಿಕೆಗಳನ್ನು ಮುಂಡಿಟ್ಟು ಪ್ರತಿಭಟನೆ ನಡೆಸಿದ್ದಾರೆ.

    ಈ ಪ್ರತಿಭಟನೆಯೂ ಆಲ್ ಇಂಡಿಯಾ ಕಿಸಾನ್ ಸಭಾ (ಎಐಕೆಎಸ್) ಹಾಗೂ ಸಿಪಿಐ(ಎಂ) ಪಕ್ಷದ ಮುಂದಾಳತ್ವದಲ್ಲಿ ಕೈಗೊಳ್ಳಲಾಗಿದೆ. ಕೈಯಲ್ಲಿ ಕೆಂಪು ಧ್ವಜ ಹಿಡಿದ ಸಾವಿರರು ರೈತರು ಮುಂಬೈ ತಲುಪಿ ತಮ್ಮ ಸಮಸ್ಯೆಗಳ ಕುರಿತು ಸರ್ಕಾರದ ಗಮನವನ್ನು ಸೆಳೆದಿದ್ದಾರೆ.

     

    https://twitter.com/ranveer_78/status/973049081084854273?

  • ಸಿಎಂ ತವರು ಕ್ಷೇತ್ರದಲ್ಲಿ ಶೌಚಾಲಯಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ

    ಸಿಎಂ ತವರು ಕ್ಷೇತ್ರದಲ್ಲಿ ಶೌಚಾಲಯಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ

    ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ಕ್ಷೇತ್ರದಲ್ಲಿ ಶಾಲಾ ವಿದ್ಯಾರ್ಥಿಗಳು ಶೌಚಾಲಯಕ್ಕಾಗಿ ಪ್ರತಿಭಟನೆಗೆ ಕುಳಿತಿದ್ದಾರೆ.

    ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಶಾಲೆಯಲ್ಲಿ ತರಗತಿ ಬಹಿಷ್ಕರಿಸಿ ಬಿರು ಬಿಸಿಲಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಶಾಲೆಯಲ್ಲಿ ಶೌಚಾಲಯ ಹಾಗೂ ಮೂಲಭೂತ ಸೌಕರ್ಯಗಳು ಇಲ್ಲ. ಕೊಠಡಿ, ಕುಡಿಯುವ ನೀರಿನ ವ್ಯವಸ್ಥೆ ಸರಿ ಇಲ್ಲ. ಬಯಲು ಬಹಿರ್ದೆಸೆಗೆ ಹೋಗಲು ಮುಜುಗರ ಮತ್ತು ತೊಂದರೆ ಆಗುತ್ತಿದೆ ಎಂದು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಶಾಲೆಗೆ ಬೀಗ ಹಾಕಿ ಬಿಸಿಲಲ್ಲಿ ಕೂತು ಪ್ರತಿಭಟಿಸಿದ್ದಾರೆ.

    ಮೂಲಭೂತ ಸೌಕರ್ಯಗಳ ಸಮಸ್ಯೆ ಬಗ್ಗೆ ಶಿಕ್ಷಣಧಿಕಾರಿಗಳಿಗೆ ಹಲವು ಬಾರಿ ಗಮನಕ್ಕೆ ತರಲಾಗಿದೆ. ಆದರೂ ಸಮಸ್ಯೆ ಬಗೆಹರಿದಿಲ್ಲ. ಇದರಿಂದ ವಿದ್ಯಾರ್ಥಿಗಳು ಪ್ರತಿಭಟನೆ ಮಾರ್ಗ ಹಿಡಿದಿದ್ದಾರೆ ಎಂದು ತಿಳಿದುಬಂದಿದೆ.