Tag: ಪ್ರತಿಭಟನೆ

  • ಸಂಧಾನ ಮಾತುಕತೆ ಯಶಸ್ವಿ: ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಆರಂಭ

    ಸಂಧಾನ ಮಾತುಕತೆ ಯಶಸ್ವಿ: ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಆರಂಭ

    ಬೆಂಗಳೂರು: ಸಿಬ್ಬಂದಿ ಜೊತೆಗಿನ ಸಂಧಾನ ಮಾತುಕತೆ ಯಶಸ್ವಿಯಾಗಿದ್ದು, ಬೆಳಗ್ಗೆಯಿಂದ ಬಂದ್ ಆಗಿದ್ದ ಮೆಟ್ರೋ ಸೇವೆ ಆರಂಭವಾಗಿದೆ.

    ಎಲ್ಲ ಮೆಟ್ರೋ ನಿಲ್ದಾಣಗಳು ಓಪನ್ ಆಗಿದ್ದು, ಪ್ರತಿಭಟನೆ ಕೈಬಿಟ್ಟು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪ್ರಯಾಣಿಕರ ಹಿತದೃಷ್ಟಿಯಿಂದ 4 ನಿಮಿಷಕ್ಕೆ ಒಂದರಂತೆ ರೈಲು ಓಡಿಸಲು ನಿರ್ಧರಿಸಲಾಗಿದೆ.

    ಸ್ಟಾಪ್ ಆಗಿದ್ದು ಯಾಕೆ?
    ಗುರುವಾರ ಮೆಟ್ರೋ ಸಿಬ್ಬಂದಿ ಹಾಗೂ ರಾಜ್ಯ ಕೈಗಾರಿಕಾ ಭದ್ರತಾ ಪಡೆ ನಡುವೆ ಮಾರಾಮಾರಿ ನಡೆದಿತ್ತು. ಈ ಗಲಾಟೆ ವೇಳೆ ಆರು ಜನ ಬಿಎಂಆರ್‍ಸಿಎಲ್ ಸಿಬ್ಬಂದಿಯನ್ನು ಬಂಧಿಸಲಾಗಿತ್ತು. ಬಿಎಂಆರ್‍ಸಿಎಲ್ ಸಿಬ್ಬಂದಿ ಬಂಧನವನ್ನು ಖಂಡಿಸಿ ಮೆಟ್ರೋ ಸಿಬ್ಬಂದಿ ರಾತ್ರಿ ಬೈಯಪ್ಪನಹಳ್ಳಿ ಮೆಟ್ರೋ ಡಿಪೋದಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದರು. ಮೆಟ್ರೋ ಸಿಬ್ಬಂದಿ ಪ್ರತಿಭಟನೆಯಲ್ಲಿ ತೊಡಗಿದ್ದರಿಂದ ಮೆಟ್ರೋ ಸಂಚಾರ ಸಂಪೂರ್ಣ ನಿಂತು ಹೋಗಿತ್ತು.

    ಇದನ್ನು ಓದಿ: ಕೆಲಸಕ್ಕೆ ಲೇಟಾಗಿ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸ್ರು, ಮೆಟ್ರೋ ಸಿಬ್ಬಂದಿ ಮಧ್ಯೆ ಜಟಾಪಟಿ: ವಿಡಿಯೋ ನೋಡಿ

     

     

  • ಬೆಂಗ್ಳೂರು ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್- ಇಂದು `ನಮ್ಮ ಮೆಟ್ರೋ’ ಬಂದ್

    ಬೆಂಗ್ಳೂರು ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್- ಇಂದು `ನಮ್ಮ ಮೆಟ್ರೋ’ ಬಂದ್

    ಬೆಂಗಳೂರು: ಗುರುವಾರ ಮೆಟ್ರೋ ಸಿಬ್ಬಂದಿ ಮೇಲೆ ಕರ್ನಾಟಕ ರಾಜ್ಯ ಇಂಡಸ್ಟ್ರಿಯಲ್ ಫೋರ್ಸ್ ಕಾನ್ಸ್‍ಟೇಬಲ್‍ನಿಂದ ಹಲ್ಲೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಮೆಟ್ರೋ ಸಿಬ್ಬಂದಿ ನಡುವೆ ನಡೆದಿದ್ದ ಗಲಾಟೆ ವೇಳೆ ಆರು ಜನ ಬಿಎಂಆರ್‍ಸಿಎಲ್ ಸಿಬ್ಬಂದಿಗಳನ್ನು ಬಂಧಿಸಲಾಗಿತ್ತು..

    ಬಿಎಂಆರ್‍ಸಿಎಲ್ ಸಿಬ್ಬಂದಿ ಬಂಧನವನ್ನು ಖಂಡಿಸಿ ಮೆಟ್ರೋ ಸಿಬ್ಬಂದಿ ರಾತ್ರಿ ಬೈಯಪ್ಪನಹಳ್ಳಿ ಮೆಟ್ರೋ ಡಿಪೋದಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದಾರೆ. ಕೂಡಲೇ ಬಂಧಿಸಲ್ಟಟ್ಟ ಸಿಬ್ಬಂದಿಯನ್ನು ಬಿಡುಗಡೆಗೊಳಿಸಿಬೇಕೆಂದು ಬೈಯಪ್ಪನಹಳ್ಳಿ ಡಿಪೋದಲ್ಲಿ ಸಾವಿರಾರರು ನೌಕರರು ಪ್ರತಿಭಟನೆ ಮಾಡುತ್ತಿದ್ದಾರೆ. ಮೆಟ್ರೋ ಸಿಬ್ಬಂದಿ ಪ್ರತಿಭಟನೆಯಲ್ಲಿ ತೊಡಗಿದ್ದರಿಂದ ಮೆಟ್ರೋ ಸಂಚಾರ ಸಂಪೂರ್ಣ ನಿಂತು ಹೋಗಿದೆ.

    ಇನ್ನು ಬಂಧಿಸಿದ ಮೆಟ್ರೋ ಸಿಬ್ಬಂದಿಯನ್ನು ಬಿಡಡುಗಡೆ ಮಾಡಲಾಗುವುದಿಲ್ಲ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿದುಬಂದಿದೆ. ಪ್ರತಿಭಟನಾ ಸ್ಥಳಕ್ಕೆ ಬಿಎಂಆರ್‍ಸಿಎಲ್ ಎಂ.ಡಿ ಪ್ರದೀಪ್ ಸಿಂಗ್ ಭೇಟಿ ನೀಡಿದ್ದು, ಪ್ರತಿಭಟನೆಯನ್ನು ಕೈ ಬಿಡುವಂತೆ ಮನವಿ ಮಾಡಿಕೊಂಡಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

     

     

  • ಗಮನಿಸಿ, ಜುಲೈ 12ರಂದು ಪೆಟ್ರೋಲ್, ಡೀಸೆಲ್ ಸಿಗಲ್ಲ

    ಗಮನಿಸಿ, ಜುಲೈ 12ರಂದು ಪೆಟ್ರೋಲ್, ಡೀಸೆಲ್ ಸಿಗಲ್ಲ

    ಬೆಂಗಳೂರು: ಪ್ರತಿ ದಿನ ದರ ಪರಿಷ್ಕರಣೆ ವಿರೋಧಿಸಿ ಅಖಿಲ ಭಾರತ ಪೆಟ್ರೋಲ್ ವರ್ತಕರ ಸಂಘ ಜುಲೈ 12ರಂದು ಬಂಕ್ ಗಳನ್ನು ಬಂದ್ ಮಾಡಿ ಪ್ರತಿಭಟಿಸಲು ಮುಂದಾಗಿದೆ.

    ದೇಶಾದ್ಯಂತೆ ನಡೆಯುವ ಪ್ರತಿಭಟನೆ ಸಾಥ್ ನೀಡಲು ರಾಜ್ಯಾದ್ಯಂತ ಮೂರುವರೆ ಸಾವಿರ ಪೆಟ್ರೋಲ್ ಬಂಕ್‍ಗಳು ಬಂದ್ ಆಗಲಿದೆ ಎಂದು ವರ್ತಕರ ಸಂಘದ ಉಪಾಧ್ಯಾಕ್ಷ ಅನೀಸ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಈ ಬಂದ್ ಗೆ ರವೀಂದ್ರನಾಥ್ ನೇತೃತ್ವದ ಪೆಟ್ರೋಲ್ ಡೀಲರ್ಸ್ ಆಸೋಸಿಯೇಷನ್ ಬೆಂಬಲ ಕೊಟ್ಟಿಲ್ಲ. ಆದರೆ ಸುಮಾರು ರಾಜ್ಯದ 24 ಜಿಲ್ಲೆಯಲ್ಲಿ ನಮ್ಮ ಸಂಘಟನೆ ಪ್ರಬಲವಾಗಿದೆ. ತೈಲ ಕಂಪನಿ ನಮ್ಮ ಬೇಡಿಕೆ ಈಡೇರಿಸದೆ ಇದ್ದರೆ ಬಂದ್ ನಡೆಸಿಯೇ ನಡೆಸುತ್ತೇವೆ ಎಂದು ಅವರು ಹೇಳಿದರು.

    ಪ್ರತಿನಿತ್ಯ ದರ ಪರಿಷ್ಕರಣೆಯಾಗುತ್ತಿರುವುದರಿಂದ ನಮಗೆ ನಷ್ಟವಾಗುತ್ತಿದೆ. ವರ್ತಕರ ಸಲಹೆ ಪಡೆಯದೇ ಕಂಪೆನಿಗಳು ಪ್ರತಿನಿತ್ಯ ಪರಿಷ್ಕರಣೆ ಮಾಡುತ್ತಿವೆ. ಜುಲೈ 12ರಂದು ಬೆಳಗ್ಗೆಯಿಂದ ರಾತ್ರಿಯವರೆಗೆ ಪೆಟ್ರೋಲ್, ಡಿಸೇಲ್ ಸಿಗಲ್ಲ. ಅಷ್ಟೇ ಅಲ್ಲದೇ ಆ ದಿನ ತೈಲವನ್ನು ಖರೀದಿಸಲ್ಲ ಎಂದು ಅವರು ತಿಳಿಸಿದರು.

    ಇದನ್ನೂ ಓದಿ: ಇನ್ನು ಐದು ವರ್ಷದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 30 ರೂ. ಆಗುತ್ತೆ!

    ಇದನ್ನೂ ಓದಿ: ದಕ್ಷಿಣ ಭಾರತದಲ್ಲಿ ಕರ್ನಾಟಕದಲ್ಲೇ ಡೀಸೆಲ್ ಬೆಲೆ ಅತಿ ಕಡಿಮೆ

     

     

  • ಬಾಗಲಕೋಟೆ-ಕುಡಚಿ ರೈಲು ಸಂಚಾರ ವಿರೋಧಿಸಿ ರೈತರ ಪ್ರತಿಭಟನೆ

    ಬಾಗಲಕೋಟೆ-ಕುಡಚಿ ರೈಲು ಸಂಚಾರ ವಿರೋಧಿಸಿ ರೈತರ ಪ್ರತಿಭಟನೆ

    ಬಾಗಲಕೋಟೆ: ನಗರದಲ್ಲಿ ಕುಡಚಿ ರೈಲು ಸಂಚಾರ ವಿರೋಧಿಸಿ ತಾಲೂಕಿನ ರೈತರು ಬುಧವಾರ ರೈಲು ಹಳಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.

    ರೈಲ್ವೆ ಇಲಾಖೆಯ ಅಧಿಕಾರಿಗಳು 5 ವರ್ಷಗಳ ಹಿಂದೆ ರೈಲು ಮಾರ್ಗಕ್ಕಾಗಿ ಬಾಗಲಕೋಟೆ ತಾಲೂಕಿನ ಸಿಗಿಕೇರಿ, ನೀರಲಕೇರಿ ಸುಳಿಕೇರಿ ಸೇರಿದಂತೆ ಹತ್ತಾರು ಗ್ರಾಮದ ನೂರಾರು ಎಕರೆ ಜಮೀನು ಸ್ವಾಧೀನ ಪಡೆಸಿಕೊಂಡಿದ್ದರು.

    ಭೂ ಸ್ವಾಧೀನ ಪಡೆಸಿಕೊಂಡು ಐದು ವರ್ಷಗಳಾದ್ರೂ ಈವರೆಗೂ ಭೂಮಿ ಕಳೆದುಕೊಂಡ ರೈತರಿಗೆ ಯೋಗ್ಯ ಬೆಲೆ ನೀಡಿರಲಿಲ್ಲ. ಅಲ್ಲದೇ ಭೂ ಸ್ವಾಧೀನ ಪಡೆಸಿಕೊಳ್ಳುವಾಗ ರೈತರ ಮಕ್ಕಳ ಶಿಕ್ಷಣಕ್ಕೆ ಅನುಗುಣವಾಗಿ ಮನೆಯೊಬ್ಬರಿಗೆ ಸರ್ಕಾರಿ ಕೆಲಸ ನೀಡುವ ಭರವಸೆ ನೀಡಿದ್ದರು.

    ಆದರೆ ಇಲ್ಲಿಯವರೆಗೆ ರೈಲ್ವೇ ಇಲಾಖೆ ನೀಡಿದ ಯಾವ ಭರವಸೆಗಳನ್ನು ಈಡೇರಿಸಿಲ್ಲ. ಹೀಗಿರುವಾಗಲೇ ಅಧಿಕಾರಿಗಳು ಪ್ರಾಯೋಗಿಕವಾಗಿ ಕುಡುಚಿ ರೈಲು ಓಡಿಸಲು ಮನಸ್ಸು ಮಾಡಿದ್ದಾರೆ. ಅಧಿಕಾರಿಗಳ ಈ ಕ್ರಮಕ್ಕೆ ನಮ್ಮ ಒಪ್ಪಿಗೆ ಇಲ್ಲ ಎಂದು ಆಕ್ರೋಶದಿಂದ ರೈಲು ಹಳಿಯಲ್ಲಿಯೇ ಕುಳಿತು ಜನರು ಪ್ರತಿಭಟನೆ ನೆಡೆಸಿದರು.

     

    ಯಾವುದೇ ಕಾರಣಕ್ಕೂ ರೈಲು ಓಡಿಸಲು ಬಿಡೋದಿಲ್ಲವೆಂದು ಖಡಕ್ಕಾಗಿ ಹೇಳಿದ ರೈತರು, ರೈಲ್ವೇ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

  • ಕರ್ನಾಟಕ ಬಂದ್ ವಿಫಲಗೊಂಡಿದ್ದು ಯಾಕೆ?

    ಕರ್ನಾಟಕ ಬಂದ್ ವಿಫಲಗೊಂಡಿದ್ದು ಯಾಕೆ?

    ಬೆಂಗಳೂರು: ಕನ್ನಡ ಒಕ್ಕೂಟಗಳು ಕರೆ ಕೊಟ್ಟಿದ್ದ ಕರ್ನಾಟಕ ಬಂದ್‍ಗೆ ಅತ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ಕೋಲಾರ ಹುಬ್ಬಳ್ಳಿಯಲ್ಲಿ ಬಂದ್ ಬಿಸಿ ಹೆಚ್ಚಿತ್ತೇ ವಿನಾಃ ಮತ್ಯಾವ ಜಿಲ್ಲೆಯಲ್ಲೂ ಬಂದ್ ಬಿಸಿ ಕಾಣಲಿಲ್ಲ.

    ಬಯಲು ಸೀಮೆ ಪ್ರದೇಶಗಳಿಗೆ ಶಾಶ್ವತ ನೀರಾವರಿ ಯೋಜನೆ, ಎತ್ತಿನಹೊಳೆ, ಮಹದಾಯಿ, ಮೇಕೆದಾಟು ಯೋಜನೆ ಆಗ್ರಹಿಸಿ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ನೀಡಿದ್ದರು. ಆದರೆ ಕನ್ನಡ ಒಕ್ಕೂಟ ಈ ಉದ್ದೇಶವನ್ನ ಆಗ್ರಹಿಸಿದ ರೀತಿಗೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾದ ಕಾರಣ ಬಂದ್ ವಿಫಲವಾಗಿದೆ.

    ವಿಫಲವಾಗಲು ಕಾರಣ ಏನು?
    1. ವಾಟಾಳ್ ನಾಗರಾಜ್ ಮೊದಲು ಕರ್ನಾಟಕ ಬಂದ್ ಎಂದು ಘೋಷಿಸಿ ನಂತರ ಕನ್ನಡ ಸಂಘಟನೆಗಳ ಜೊತೆ ಚರ್ಚೆ ನಡೆಸುತ್ತಾರೆ ಎನ್ನುವ ಆರೋಪ.
    2. ಎಲ್ಲಾ ಸಮಸ್ಯೆಗಳಿಗೂ ಬಂದ್ ಪರಿಹಾರ ಎಂಬಂತೆ ಬಳಕೆಯಾಗುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧಕ್ಕೆ ಕಾರಣವಾಗಿದೆ.

    3. ಹೋರಾಟದ ಮೊದಲ ಹಂತವಾಗಿ ಸಂಬಂಧಪಟ್ಟ ಇಲಾಖೆಗಳ ಸಚಿವರುಗಳ ಜೊತೆ ಸರಿಯಾದ ಚರ್ಚೆ ಆಗದೇ ಇರುವುದು.
    4. ಬೆಂಗಳೂರಿನಲ್ಲಿ ಕೂತು ನಿರ್ಧಾರ ಮಾಡುವ ನಾಯಕರುಗಳು, ರಾಜ್ಯದ ಪ್ರದೇಶವಾರು ಸಂಘ ಸಂಸ್ಥೆಗಳನ್ನ ಪರಿಗಣಿಸುತ್ತಿಲ್ಲ, ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ.

    5. ಏನೇ ಆದ್ರೂ ಕೊನೆಗೆ ಜನರ ಮೇಲೆಯೇ ಬಂದ್ ಬರೆ ಬೀಳತ್ತೆ ಎನ್ನುವ ನಿರ್ಧಾರಕ್ಕೆ ಬಂದಿರುವ ಜನ ಬಂದ್ ಬೆಂಬಲಿಸುತ್ತಿಲ್ಲ.
    6. ವಿಶೇಷವಾಗಿ ಕರ್ನಾಟಕ ಬಂದ್ ವಿಚಾರ ಬಂದಾಗ ಬಹಳಷ್ಟು ಜನ ಕನ್ನಡಪರ ಕಳಕಳಿ ಹೊಂದಿರುವ ವ್ಯಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬಂದ್ ಬೆಂಬಲಿಸಿ ಪೋಸ್ಟ್/ಟ್ವೀಟ್ ಗಳನ್ನು ಹಾಕುತ್ತಿದ್ದರು. ಆದರೆ ಈ ಬಾರಿ ಕರೆ ನೀಡಿದ ಬಂದ್‍ಗೆ ಈ ವ್ಯಕ್ತಿಗಳು ಹೆಚ್ಚಿನ ಆಸಕ್ತಿ ತೋರಿಸದೇ ಬಂದ್ ವಿರೋಧಿಸಿ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದರು.

    ಇದನ್ನೂ ಓದಿ: ಬೆಂಗಳೂರು ಗುತ್ತಿಗೆಯನ್ನು ನಾರಾಯಣ ಗೌಡರೇ ತೆಗೆದುಕೊಳ್ಳಲಿ: ವಾಟಾಳ್

    ಇದನ್ನೂ ಓದಿ: ಕರ್ನಾಟಕವನ್ನು ವಾಟಾಳ್‍ಗೆ ಬರೆದುಕೊಟ್ಟಿಲ್ಲ- ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಾಗ್ದಾಳಿ

     

    https://youtu.be/5fg4AvaKFmM

    https://youtu.be/QUgrRVs1kEo

    https://youtu.be/RtwzcEjVDT0

  • ಕೋಲಾರ ಬಂದ್ ಬಿಸಿ: ಊಟಕ್ಕೆ ಮದುವೆ ಮನೆಗಳಿಗೆ ಎಂಟ್ರಿ ಕೊಟ್ಟ ಪ್ರತಿಭಟನಾಕಾರರು

    ಕೋಲಾರ ಬಂದ್ ಬಿಸಿ: ಊಟಕ್ಕೆ ಮದುವೆ ಮನೆಗಳಿಗೆ ಎಂಟ್ರಿ ಕೊಟ್ಟ ಪ್ರತಿಭಟನಾಕಾರರು

    ಕೋಲಾರ: ಇಂದು ಕನ್ನಡಪರ ಸಂಘಟನೆಗಳು ನೀಡಿದ್ದ `ಕರ್ನಾಟಕ ಬಂದ್’ಗೆ ನಗರದಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಆದರೆ ಬಹುತೇಕ ಮದುವೆಗೆ ಬರಬೇಕಾದ ಜನ ಬರದೇ ಮಂಟಪಗಳು ಬಿಕೋ ಎನ್ನುತ್ತಿದ್ದವು.

    ನಗರದ ವಕೀಲ ಕೋದಂಡಪ್ಪನವರ ಮಗ ವೀರೇಂದ್ರ ಹಾಗೂ ಚಿತ್ರಾ ಎಂಬವರ ಮದುವೆಗೂ ಬಂದ್ ಬಿಸಿ ತಟ್ಟಿತ್ತು. ಬಂದ್‍ನಿಂದಾಗಿ ಮದುವೆಗಳಿಗೆ ಬರಬೇಕಾದ ಬಂಧುಗಳು ಹಾಗು ಸ್ನೇಹಿತರು ಬರದೇ ಇದ್ದಿದರಿಂದ ಕಲ್ಯಾಣ ಮಂಟಪಗಳು ಜನರಿಲ್ಲದೇ ಖಾಲಿ ಖಾಲಿಯಾಗಿತ್ತು.

    ಬಂಧುಗಳು ಬರದೇ ಇದಿದ್ದರಿಂದ ಮಾಡಿದ್ದ ಅಡುಗೆ ಹಾಗೆಯೇ ಉಳಿದಿತ್ತು. ಮದುವೆ ಮನೆಯವರ ಆಹ್ವಾನದ ಮೇರೆಗೆ ಹೋರಾಟಗಾರರೆಲ್ಲರೂ ಬಂದು ಊಟ ಮಾಡಿದ್ದಾರೆ. ಪ್ರತಿಭಟನೆ ಮಾಡಿ ಸುಸ್ತಾಗಿದ್ದ ಪ್ರತಿಭಟನಾಕಾರರು ರುಚಿಯಾದ ಊಟ ಮಾಡಿ ತಮ್ಮ ಹಸಿವು ನೀಗಿಸಿಕೊಂಡರು.

    https://www.youtube.com/watch?v=8OR7M716AWI

     

     

  • ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಬೆತ್ತಲೆ ಪ್ರತಿಭಟನೆ

    ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಬೆತ್ತಲೆ ಪ್ರತಿಭಟನೆ

    ಹಾವೇರಿ: ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ರೈತರೊಬ್ಬರು ಹಾವೇರಿಯಲ್ಲಿ ಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.

    ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ಬಳಿ ರೈತ ಕಾಳಪ್ಪ ಲಮಾಣಿ ಬೆತ್ತಲಾಗಿ ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಇದೇ ವೇಳೆ ಚಂದ್ರಪ್ಪ ಎಂಬವರು ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಹುಚ್ಚವ್ವನಹಳ್ಳಿ ಮಂಜುನಾಥ ಬಣದ ಕಾರ್ಯಕರ್ತರು ನಗರದ ಮುರುಘರಾಜೇಂದ್ರಮಠದಿಂದ ಅರೆಬೆತ್ತಲೆ ಪ್ರತಿಭಟನೆ ಪ್ರಾರಂಭಿಸಿ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೆಲ ರೈತರು ಬೇವಿನಸೊಪ್ಪು ಕಟ್ಟಿಕೊಂಡು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

    ಇದೂವರೆಗೂ ಜಿಲ್ಲೆಯ ಯಾವ ರೈತರಿಗೂ ಬಗರ್ ಹುಕುಂ ಪತ್ರವನ್ನು ನೀಡಿಲ್ಲ. ಈ ಹಿನ್ನೆಲೆಯಲ್ಲಿ ರೈತರು ರಾಣೇಬೆನ್ನೂರು ಪಟ್ಟಣದಲ್ಲಿ ಪ್ರತಿಭಟನೆ ಕೈಗೊಂಡಿದ್ರೂ, ಯಾವ ಅಧಿಕಾರಿಗಳು ಗಮನ ಹರಿಸಿರಲಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ರೈತ ಕಾಳಪ್ಪ ಸಾರ್ವಜನಿಕವಾಗಿ ಬೆತ್ತಲಾಗುವ ಮೂಲಕ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

    ವಿಷ ಸೇವಿಸಿದ ರೈತ ಚಂದ್ರಪ್ಪ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತಿಭಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ರೈತರ ಮನವೊಲಿಸುವಲ್ಲಿ ನಿರತರಾಗಿದ್ದಾರೆ. ಮುನ್ನೇಚ್ಚರಿಕಾ ಕ್ರಮವಾಗಿ ಪ್ರತಿಭಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

    https://www.youtube.com/watch?v=ODhN2OQZmUI

     

  • ರಾಹುಲ್ ಗಾಂಧಿ ಬಂಧನ ಖಂಡಿಸಿ ರಾಜ್ಯದ ಹಲವೆಡೆ ಕಾಂಗ್ರೆಸ್‍ನಿಂದ ರೈಲ್ ರೋಖೋ ಯತ್ನ

    ರಾಹುಲ್ ಗಾಂಧಿ ಬಂಧನ ಖಂಡಿಸಿ ರಾಜ್ಯದ ಹಲವೆಡೆ ಕಾಂಗ್ರೆಸ್‍ನಿಂದ ರೈಲ್ ರೋಖೋ ಯತ್ನ

    ರಾಯಚೂರು/ಉಡುಪಿ: ಮಧ್ಯಪ್ರದೇಶದ ಸರ್ಕಾರ 6 ಮಂದಿ ರೈತರ ಮೇಲೆ ನಡೆಸಿದ ಗೋಲಿಬಾರ್ ಪ್ರಕರಣದ ವಿರುದ್ಧ ಹಾಗು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಬಂಧನ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ಹಲವೆಡೆ ರೈಲ್ ರೋಖೋ ಯತ್ನ ನಡೆಸಿದ್ದಾರೆ.

    ಉಡುಪಿ, ರಾಯಚೂರು, ಯಾದಗಿರಿ ಸೇರಿದಂತೆ ರಾಜ್ಯದ ಹಲವೆಡೆ ಯುವ ಕಾಂಗ್ರೆಸ್ ಕಾರ್ಯಕರ್ತರು ರೈಲು ತಡೆಯಲು ಯತ್ನಿಸಿದರು. ಉಡುಪಿಯಲ್ಲಿ ಇಂದ್ರಾಣಿ ರೈಲು ನಿಲ್ದಾಣಕ್ಕೆ ನುಗ್ಗಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಮಂಗಳೂರು-ಮಡಗಾಂ ರೈಲನ್ನು ತಡೆಯಲು ಯತ್ನಿಸಿದರು.

    ಮಧ್ಯಪ್ರದೇಶ ಸರ್ಕಾರದ ನಡೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ರಾಯಚೂರಿನಲ್ಲಿ ರೈಲ್ವೇ ನಿಲ್ದಾಣಕ್ಕೆ ನುಗ್ಗಿ ಪ್ರತಿಭಟಿಸಲು ಯತ್ನಿಸಿದರು. ಈ ವೇಳೆ 30 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದ್ಯೊಯ್ದಿದ್ದಾರೆ. ಇದಕ್ಕೂ ಮುನ್ನ ನಗರದಲ್ಲಿ ಬೈಕ್ ಮೆರವಣಿಗೆ ನಡೆಸಿ ಮಧ್ಯಪ್ರದೇಶ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

    ಯಾದಗಿರಿಯಲ್ಲೂ ಯುವ ಕಾಂಗ್ರೆಸ್ ಕಾರ್ಯಕರ್ತರು ರೆಲ್ವೇ ನಿಲ್ದಾಣಕ್ಕೆ ನುಗ್ಗಿ ಕೋಯಿಮತ್ತೂರ್ ಕುರ್ಲಾ ಎಕ್ಸ್‍ಪ್ರೆಸ್ ರೈಲು ತಡೆಯಲು ಯತ್ನಿಸಿದಾಗ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದ್ಯೊಯ್ದಿದ್ದಾರೆ.

    ದಾವಣಗೆರೆಯಲ್ಲೂ ಕೂಡ ಯೂತ್ ಕಾಂಗ್ರೆಸ್ ಕಾರ್ಯಕರ್ತರು ರೈಲು ತಡೆಗೆ ಯತ್ನಿಸಿದ್ರು.

     

  • ಬೆಂಗ್ಳೂರಲ್ಲಿ ಪ್ಲಾಸ್ಟಿಕ್ ಅಕ್ಕಿ ಹಾವಳಿ- ಹೊಟ್ಟೆನೋವಿನಿಂದ ನರಳಿ ಧರಣಿ ಕುಳಿತ ವ್ಯಕ್ತಿ

    ಬೆಂಗ್ಳೂರಲ್ಲಿ ಪ್ಲಾಸ್ಟಿಕ್ ಅಕ್ಕಿ ಹಾವಳಿ- ಹೊಟ್ಟೆನೋವಿನಿಂದ ನರಳಿ ಧರಣಿ ಕುಳಿತ ವ್ಯಕ್ತಿ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪ್ಲಾಸ್ಟಿಕ್ ಮೊಟ್ಟೆ, ಪ್ಲಾಸ್ಟಿಕ್ ಸಕ್ಕರೆ ಮಾರಾಟ ಆಗ್ತಾ ಇರೋ ಸುದ್ದಿ ಕೇಳಿದ್ವಿ. ಆದ್ರೆ ಈಗ ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಅಕ್ಕಿಯದ್ದೆ ಸುದ್ದಿ. ಇಲ್ಲೊಬ್ರು ಮಾಮೂಲಿ ಅಕ್ಕಿ ಅಂತ ಪ್ಲಾಸ್ಟಿಕ್ ಅಕ್ಕಿ ತಿಂದು ಕುಟುಂಬವೆಲ್ಲಾ ಅನಾರೋಗ್ಯದಿಂದ ಬಳಲುತ್ತಿರುವ ವಿಚಾರ ಬೆಳಕಿಗೆ ಬಂದಿದೆ.

    ಬೆಂಗಳೂರಿನ ಉಳ್ಳಾಲದಲ್ಲಿರುವ ರಿಲಿಯನ್ಸ್ ಮಾರ್ಟ್ ನಲ್ಲಿ ಪ್ರವೀಣ್ ಎಂಬವರು 6 ಕೆ.ಜಿ ಅಕ್ಕಿ ಕೊಂಡುಕೊಂಡು ಅನ್ನಮಾಡಿ ತಿಂದಿದ್ದಾರೆ. ತಕ್ಷಣ ಹೊಟ್ಟೆ ನೋವು, ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಕ್ಕಿ ಪರೀಕ್ಷೆ ಮಾಡಿದ್ದಾರೆ. ನಂತರ ಇದು ಪ್ಲಾಸ್ಟಿಕ್ ಅಕ್ಕಿ ಅಂತ ಆರೋಪ ಮಾಡಿ ನ್ಯಾಯಕ್ಕಾಗಿ ಮಧ್ಯರಾತ್ರಿ ರಿಲಿಯನ್ಸ್ ಮಾರ್ಟ್ ಮುಂದೆ ಧರಣಿ ಕುಳಿತಿದ್ದರು.

    ಬೆಂಗಳೂರಿನ ಕೋಡಿಗೆಹಳ್ಳಿ ಗೇಟ್ ನಲ್ಲಿರುವ ಮೇಗಾ ಮೋರ್ ಸ್ಟೋರ್ ನಲ್ಲಿಯೂ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿರೋ ಬಗ್ಗೆ ವರದಿಯಾಗಿತ್ತು. ಅಲ್ಲಿ ನಾಗೇಶ್ ಎಂಬವರು ಭಾನುವಾರದಂದು 25 ಕೆಜಿ ಬ್ಯಾಂಗ್ ಅಕ್ಕಿಯನ್ನು ಖರೀದಿ ಮಾಡಿದ್ರು. ಅದನ್ನ ಬೇಯಿಸಿದ್ರೆ ಅಕ್ಕಿ ತೇಲುತ್ತಿತ್ತು.

    ರಾತ್ರಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದ್ದು, ಆ ಅಕ್ಕಿಯಿಂದ ಮಾಡಿಕೊಂಡು ಬಂದಿದ್ದ ಅನ್ನವನ್ನು ಮುದ್ದೆ ಮಾಡಿ ಗೋಡೆಗೆ ಹೊಡೆದ್ರೆ ಚೂರಾಗಲಿಲ್ಲ. ಗಟ್ಟಿಯಾಗಿ ಕೂಡಿಕೊಂಡು ಹೊಡೆದಾಗಲೆಲ್ಲಾ ಪಿಚ್ ಬೀಳುವ ರೀತಿ ಇತ್ತು. ಇದರಿಂದ ಇದು ಪ್ಲಾಸ್ಟಿಕ್ ಅಕ್ಕಿಯೆಂದು ಆರೋಪಿಸಿದ್ದಾರೆ.

  • ಬೆಂಗ್ಳೂರು ಬೀಫ್ ಫೆಸ್ಟ್ ಗೆ ಪೊಲೀಸರ ಬ್ರೇಕ್!

    ಬೆಂಗ್ಳೂರು ಬೀಫ್ ಫೆಸ್ಟ್ ಗೆ ಪೊಲೀಸರ ಬ್ರೇಕ್!

    ಬೆಂಗಳೂರು: ಕೇಂದ್ರ ಸರ್ಕಾರದ ಜಾನುವಾರು ಹತ್ಯೆ ಹಾಗು ಮಾರಾಟ ನಿಷೇಧ ಆದೇಶ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇವತ್ತು ಭಾರೀ ಗೋ ಜಟಾಪಟಿ ನಡೀತು. ಟೌನ್‍ಹಾಲ್ ಮುಂದೆ ಎಸ್‍ಎಫ್‍ಐ ಪ್ರತಿಭಟನೆಗೆ ಅನುಮತಿ ಕೇಳಿತ್ತು. ಆದ್ರೆ, ಕೇರಳ ಮಾದರಿ ಬೀಫ್ ಫೆಸ್ಟ್ ನಡೆಸಲು ಮುಂದಾದಾಗ ಪೊಲೀಸರು ಅನುಮತಿ ನೀಡಿರಲಿಲ್ಲ. ಆದ್ರೆ ಸಂಜೆ ಹೊತ್ತಿಗೆ ಆಗಮಿಸಿದ ಎಸ್‍ಎಫ್‍ಐ ಕಾರ್ಯಕರ್ತರು ಬೀಫ್ ತಿಂದು ಪ್ರತಿಭಟನೆ ನಡೆಸಲು ಮುಂದಾದ್ರು. ತಡೆಯಲು ಬಂದ ಪೊಲೀಸರ ಜೊತೆ ವಾಗ್ವಾದ ನಡೆಸಿದ್ರು.

    ಇದಕ್ಕೂ ಮುನ್ನ ಟೌನ್ ಹಾಲ್ ಬಳಿ ಬೀಫ್ ಫೆಸ್ಟ್ ಮಾಡ್ತಿದ್ದಾರೆ ಎಂದು ವಿಷಯ ತಿಳಿದು ಎಸ್‍ಎಫ್‍ಐ ವಿರುದ್ಧವಾಗಿ ಪ್ರತಿಭಟನೆಗೆ ಗೋ ಪರಿಪಾಲಕ ಸಂಘಟನೆಯವರು ಆಗಮಿಸಿದರು. ಎಸ್‍ಎಫ್‍ಐ ಪ್ರತಿಭಟನಾಕಾರರು ಆಗಮಿಸುವ ಮುನ್ನವೇ ಆಗಮಿಸಿದ ಇವರನ್ನು ಪೊಲೀಸರು ಬಂಧಿಸಿ ಕರೆದೊಯ್ದರು. ಈ ಸಂಘಟನೆಯ ಜೊತೆಯಲ್ಲಿ ಬಂದಿದ್ದ ಮಹಿಳೆಯರನ್ನೂ ಪೊಲೀಸರು ಬಂಧಿಸಿದರು. ಒಂದು ಹಂತದಲ್ಲಿ ಪರಸ್ಪರ ಕೈ ಕೈ ಮಿಲಾಯಿಸುವಂತ ಸನ್ನಿವೇಶ ಸೃಷ್ಟಿಯಾಗಿತ್ತು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದಾಗ ಎಲ್ಲರನ್ನೂ ಪೊಲೀಸರು ವಶಕ್ಕೆ ಪಡೆದ್ರು. ಈ ಮೂಲಕ ಬೆಂಗಳೂರು ಬೀಫ್ ಫೆಸ್ಟ್ ನಡೆಸಲು ಮುಂದಾಗಿದ್ದ ಎಸ್‍ಎಫ್‍ಐ ಹಾಗೂ ಎಡಪಕ್ಷಗಳ ಕಾರ್ಯಕ್ರಮ ಠುಸ್ ಆಯಿತು.

    ದೇಶದ ಬೇರೆ ಕಡೆ ಏನಾಯ್ತು?: ದೇಶಾದ್ಯಂತ ವಿರೋಧ-ಪರವಾದ ನಡೀತಿದೆ. ವಿಶೇಷ ಏನಂದ್ರೆ ಕೇಂದ್ರದ ಬಿಜೆಪಿ ಸರ್ಕಾರದ ಆದೇಶವನ್ನ ಪಾಲನೆ ಮಾಡೋಕೆ ಆಗಲ್ಲ. ಮೇಘಾಲಯದ ಬಿಜೆಪಿಯವರೆಲ್ಲಾ ದನದ ಮಾಂಸ ತಿಂತೇವೆ. ಮೇಘಾಲಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ದನದ ಮಾಂಸ ಮಾರಾಟವನ್ನ ಇನ್ನಷ್ಟು ಸರಳ ಮಾಡ್ತೇವೆ ಅಂತ ಬಿಜೆಪಿ ಮುಖಂಡ ಬರ್ನಾಡ್ ಮರಾಕ್ ಹೇಳಿದ್ದಾರೆ.

    ಕೇಂದ್ರದ ಆದೇಶದ ವಿರುದ್ಧವಾಗಿ ಕೇರಳ ರಾಜ್ಯ ತನ್ನದೇ ಪ್ರತ್ಯೇಕ ಕಾನೂನು ಜಾರಿಗೆ ಮುಂದಾಗಿದೆ. ನಾವೇನು ತಿನ್ನಬೇಕು ಅನ್ನೋದನ್ನ ದೆಹಲಿ ಅಥವಾ ನಾಗಪುರ ನಿರ್ಧರಿಸಲು ಸಾಧ್ಯವಿಲ್ಲ. ಅವರು ನಿರ್ಧರಿಸಿದರೆ ಅದನ್ನು ನಾವು ಪಾಲನೆ ಮಾಡಲ್ಲ ಅಂತ ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

    ಇನ್ನು ಕೇಂದ್ರ ರಾಜ್ಯದ ಅಧಿಕಾರವನ್ನ ಕತ್ತರಿಸ್ತಿದೆ. ರಾಜ್ಯಗಳ ವಿಚಾರದಲ್ಲಿ ಅನವಶ್ಯಕ ಮೂಗು ತೂರಿಸೋದು ಬೇಡ ಅಂತ ಪಶ್ಚಿಮ ಬಂಗಾಳ ಸಿಎಂ ಮಮತಾ ಎಚ್ಚರಿಸಿದ್ರು. ಆದ್ರೆ, ಕೇರಳದ ಕಣ್ಣೂರಿನಲ್ಲಿ ನಿನ್ನೆ ಸಾರ್ವಜನಿಕವಾಗಿ ದನ ಕಡಿದ ಹಿನ್ನೆಲೆಯಲ್ಲಿ ಯೂತ್ ಕಾಂಗ್ರೆಸ್ ನಡೆಯನ್ನ ರಾಹುಲ್ ಗಾಂಧಿ ಖಂಡಿಸಿದ್ದು, ಕೆಲ ಕಾರ್ಯಕರ್ತರನ್ನ ಪಕ್ಷದಿಂದ ವಜಾ ಮಾಡಿದ್ದಾರೆ. ಇನ್ನು, ಚೆನ್ನೈನಲ್ಲಿ ಪ್ರಗತಿಪರರು ಹಾಗೂ ಅಲ್ಪಸಂಖ್ಯಾತ ಸಮುದಾಯ ಜನ ಮಳೆಯ ಮಧ್ಯೆನೂ ಭಾರಿ ಪ್ರತಿಭಟನೆ ನಡಿಸಿದ್ರು. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಕೇಂದ್ರ ಸರ್ಕಾರ ತನ್ನ ಅಧಿಸೂಚನೆಯಲ್ಲಿ ಕೆಲವು ಮಹತ್ವದ ಬದಲಾವಣೆಗೆ ಮುಂದಾಗಿದೆ. ಜಾನುವಾರುಗಳ ಪಟ್ಟಿಯಿಂದ ಎಮ್ಮೆ, ಕೋಣಗಳನ್ನ ಹೊರಗಿಡಲು ನಿರ್ಧರಿಸಿದೆ ಅಂತ ಮೂಲಗಳಿಂದ ತಿಳಿದುಬಂದಿದೆ.