Tag: ಪ್ರತಿಭಟನೆ

  • ಕೊಳ್ಳೇಗಾಲ ಬಸ್ ನಿಲ್ದಾಣದಲ್ಲಿ ಭತ್ತ ನಾಟಿ ಮಾಡಿ ಸಾರ್ವಜನಿಕರ ಪ್ರತಿಭಟನೆ

    ಕೊಳ್ಳೇಗಾಲ ಬಸ್ ನಿಲ್ದಾಣದಲ್ಲಿ ಭತ್ತ ನಾಟಿ ಮಾಡಿ ಸಾರ್ವಜನಿಕರ ಪ್ರತಿಭಟನೆ

    ಚಾಮರಾಜನಗರ: ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಯಿಂದ ಹಲವೆಡೆ ಅವಾಂತರ ಸಂಭವಿಸಿದೆ. ಭಾರಿ ಮಳೆಯಿಂದಾಗಿ ಕೊಳ್ಳೇಗಾಲ ಪಟ್ಟಣದ ಬಸ್ ನಿಲ್ದಾಣ ಕೆರೆಯಂತಾಗಿ ಸಾರ್ವಜನಿಕರು ಪರಿತಪಿಸುವಂತಾಗಿದೆ. ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಬಸ್ ನಿಲ್ದಾಣದಲ್ಲಿ ಭತ್ತದ ನಾಟಿ ಮಾಡಿ ವಿನೂತನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

    ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಶುಕ್ರವಾರ ಮಧ್ಯರಾತ್ರಿ ಭರ್ಜರಿ ಮಳೆಯಾಗಿದೆ. ಕಳೆದ ಐದು ವರ್ಷದಿಂದ ಮಳೆ ಹನಿ ಕಾಣದೇ ಕಂಗಾಲಾಗಿದ್ದ ರೈತರು ಕಳೆದ ಹತ್ತು ದಿನದಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಂದಹಾಸ ಬೀರುವಂತಾಗಿದೆ. ಜಿಲ್ಲೆಯ ಕೊಳ್ಳೆಗಾಲ, ಗುಂಡ್ಲುಪೇಟೆ, ಹನೂರು ಸೇರಿದಂತೆ ಮೊದಲಾದೆಡೆ ಭರ್ಜರಿ ಮಳೆಯಾಗಿದೆ.

    ಮಳೆ ಅವಾಂತರ: ಗುಂಡ್ಲುಪೇಟೆ ಭಾಗದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಅಲ್ಲದೆ ದೊಡ್ಡಕೆರೆ ತುಂಬಿ ಜಮೀನಿಗೆ ನೀರು ಹರಿದಿದೆ. ಕೊಡಹಳ್ಳಿ ಗ್ರಾಮದಲ್ಲಿ ಮನೆಯೊಳಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಮಳೆಯಿಂದ ಕೊಳ್ಳೇಗಾಲ ಪಟ್ಟಣದ ಬಸ್ ನಿಲ್ದಾಣ ಕೆರೆಯಂತಾಗಿದೆ. ಬಸ್ ನಿಲ್ದಾಣದ ಈ ಅವಾಂತರಕ್ಕೆ ಜನಪ್ರತಿನಿಧಿಗಳ ನಿರ್ಲಕ್ಷ್ಯವೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ರೋಷನ್ ಬೇಗ್ ಎದೆಯ ಮೇಲೆ `ಜೈ ಮಹಾರಾಷ್ಟ್ರ’ ಅಂತಾ ಬರೀತಿವಿ: ಶಿವಸೇನೆ

    ರೋಷನ್ ಬೇಗ್ ಎದೆಯ ಮೇಲೆ `ಜೈ ಮಹಾರಾಷ್ಟ್ರ’ ಅಂತಾ ಬರೀತಿವಿ: ಶಿವಸೇನೆ

    ಬೆಳಗಾವಿ: ಸಚಿವ ರೋಷನ್ ಬೇಗ್ ಎದೆ ಮೇಲೆ ಕುಳಿತು `ಜೈ ಮಹಾರಾಷ್ಟ್ರ’ ಎಂದು ಬರೆಯುತ್ತೇವೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾ ಪತ್ರಿಕೆಯಲ್ಲಿ ಬರೆದು ಮತ್ತೆ ತಮ್ಮ ಪುಂಡಾಟಿಕೆಯನ್ನು ಮೆರೆದಿದೆ.

    ರೋಷನ್ ಬೇಗ್ ಡಿಎನ್‍ಎ ಪರೀಕ್ಷೆ ಅವಶ್ಯಕತೆ ಇದೆ. ಬೇಗ್ ಮೈಯಲ್ಲಿ ದೇಶಿಯ ರಕ್ತ ಹರಿಯುತ್ತಿಲ್ಲ ಇದು ದೇಶಕ್ಕೆ ಅಪಾಯಕಾರಿಯಾಗಿದೆ. ತಕ್ಷಣ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಾವಿಸ್ ಬೆಳಗಾವಿಗೆ ತೆರಳಿ ಅಲ್ಲಿನ ಜನರ ಸಮಸ್ಯೆ ಆಲಿಸಬೇಕು. ಗಡಿ ಭಾಗದ ಮರಾಠಿಗರ ಮೇಲೆ ನಿರಂತರ ದಬ್ಬಾಳಿಕೆ, ದೌರ್ಜನ್ಯ ನಡೆಯುತ್ತಿದೆ ಎಂದು ಸಾಮ್ನಾದಲ್ಲಿ ಬರೆಯಲಾಗಿದೆ.

    ಇತ್ತ ಬೆಳಗಾವಿಯಲ್ಲಿ ಎಂಇಎಸ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಂಡಿದ್ದು, ಯಾವುದೇ ಕಾರಣಕ್ಕೂ ಘೋಷಣೆಗಳನ್ನು ಕೂಗುವ ಹಾಗಿಲ್ಲ. ಶಾಂತಿ ಮತ್ತು ಸುವ್ಯವಸ್ಥಿತ ರೀತಿಯಲ್ಲಿ ಪ್ರತಿಭಟನೆ ನಡೆಸಲು ಬೆಳಗಾವಿ ಕ್ರೈಂ ಡಿಸಿಪಿ ಅಮರನಾಥ್ ರೆಡ್ಡಿ ಎಂಇಎಸ್‍ಗೆ ಸೂಚಿಸಿದ್ದಾರೆ.

    ಇದನ್ನೂ ಓದಿ: ಕರ್ನಾಟಕ ಸರ್ಕಾರವನ್ನು ತಲೆ ಕೆಳಗೆ ಕಾಲು ಮೇಲೆ ಮಾಡ್ತೀವಿ: ಕೊಲ್ಲಾಪುರದಲ್ಲಿ ಶಿವಸೇನೆಯಿಂದ ಧಮ್ಕಿ

    ಪ್ರತಿಭಟನೆಯಲ್ಲಿ ಭಿತ್ತಿ ಪತ್ರಗಳನ್ನು ಪ್ರದರ್ಶಿಸುವಂತಿಲ್ಲ. ಶಾಂತ ರೀತಿಯಲ್ಲಿ ಮನವಿ ಪತ್ರ ಸಲ್ಲಿಸಲು ಎಂಇಎಸ್‍ಗೆ ಅವಕಾಶ ನೀಡಲಾಗಿದೆ. ನಗರದ ಸಂಬಾಜಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ನಡೆಯಲಿದೆ. ಮುಂಜಾಗೃತ ಕ್ರಮವಾಗಿ ಮಹಾರಾಷ್ಟ್ರ ಗಡಿಯವರೆಗೂ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ.

    ಬೇಗ್ ವಿರುದ್ಧ ಆಕ್ರೋಶ ಯಾಕೆ?
    ಕೆಲವು ದಿನಗಳ ಹಿಂದೆ ಸಚಿವ ರೋಷನ್ ಬೇಗ್, ಎಂಇಎಸ್ ಸಂಘಟನೆಯ ಜಿಲ್ಲಾಪಂಚಾಯತ್ ಸದಸ್ಯರು ನಾಡವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ್ರೆ ಅವರ ಸದಸ್ಯತ್ವವನ್ನು ರದ್ದು ಮಾಡಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದರು. ಈ ಎಚ್ಚರಿಕೆಗೆ ಶಿವಸೇನೆ ಮತ್ತು ಎಂಇಎಸ್ ರೋಷನ್ ಬೇಗ್ ವಿರುದ್ಧ ತಿರುಗಿ ಬಿದ್ದಿವೆ.

    https://www.youtube.com/watch?v=fCXaf8bO3Os

     

  • ಕೊಪ್ಪಳ ಆಸ್ಪತ್ರೆಯಲ್ಲಿ ಬಾಲಕಿ ಸಾವು: ವೈದ್ಯರ ವಿರುದ್ಧ ಪೋಷಕರು ಆರೋಪ

    ಕೊಪ್ಪಳ ಆಸ್ಪತ್ರೆಯಲ್ಲಿ ಬಾಲಕಿ ಸಾವು: ವೈದ್ಯರ ವಿರುದ್ಧ ಪೋಷಕರು ಆರೋಪ

    ಕೊಪ್ಪಳ: ಮೂರು ವರ್ಷದ ಮಗುವೊಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿರುವುದಾಗಿ ಬಾಲಕಿಯ ಪೋಷಕರು ಆರೋಪಿಸುತ್ತಿದ್ದಾರೆ.

    ಮೃತ ಬಾಲಕಿಯನ್ನು ಕಲ್ಗುಡಿ ಗ್ರಾಮದ ಅಮೃತಾ ಎಂದು ಗುರುತಿಸಲಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಲಕಿಯನ್ನು ಶುಕ್ರವಾರ ಬೆಳಗ್ಗೆ ಪೋಷಕರು ಗಂಗಾವತಿಯ ಕನಕಗಿರಿ ರಸ್ತೆಯಲ್ಲಿನ ಡಾ ಎಸ್ ಜಿ ಮಟ್ಟಿಗೆ ಸೇರಿದ ತೇಜಸ್ವಿನಿ ಮಕ್ಕಳ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಅಂತೆಯೇ ಬಾಲಕಿಯನ್ನು ಪರೀಕ್ಷಿಸಿರುವ ವೈದ್ಯ ರಕ್ತದ ಕೊರತೆ ಇದ್ದು, ರಕ್ತ ಹಾಕಬೇಕು ಎಂದು ಹೇಳಿದ್ರು. ಆದ್ರೆ, ಸೂಕ್ತ ಸಮಯದಲ್ಲಿ ರಕ್ತ ನೀಡದಿರುವುದೇ ಸಾವಿಗೆ ಕಾರಣವಾಗಿದೆ. ವೈದ್ಯರು ಹೇಳುತ್ತಿದ್ದಂತಯೇ ರಕ್ತ ತಂದರೂ ಹಾಕಿಲ್ಲ ಎಂದು ಬಾಲಕಿ ಕುಟುಂಬ ಆಸ್ಪತ್ರೆ ಮುಂದೆ ನಿನ್ನೆ ರಾತ್ರಿ ಇಡೀ ಪ್ರತಿಭಟನೆ ನಡೆಸಿದೆ. ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಯಾವುದೇ ಕಾರಣಕ್ಕೂ ಪ್ರತಿಭಟನೆ ಕೈ ಬಿಡಲ್ಲ ಅಂತಾ ಪಟ್ಟು ಹಿಡಿದಿದ್ರು.

    ಗಂಗಾವತಿ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ಸಮಾಧಾನಿಸಿ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

     

  • ವೇತನ ಹೆಚ್ಚಳಕ್ಕಾಗಿ ಟೆಕ್ಸ್ಪೋಟರ್ ಕಂಪೆನಿಯ ಸಾವಿರಾರು ಮಹಿಳಾ ಕಾರ್ಮಿಕರಿಂದ ಪ್ರತಿಭಟನೆ

    ವೇತನ ಹೆಚ್ಚಳಕ್ಕಾಗಿ ಟೆಕ್ಸ್ಪೋಟರ್ ಕಂಪೆನಿಯ ಸಾವಿರಾರು ಮಹಿಳಾ ಕಾರ್ಮಿಕರಿಂದ ಪ್ರತಿಭಟನೆ

    ಬೆಂಗಳೂರು: ನಗರದ ಹೊರವಲಯ ನೆಲಮಂಗಲದ ಟೆಕ್ಸ್ಪೋಟರ್ ಇಂಡಸ್ಟ್ರೀಸ್ ಕಂಪನಿಯ ಸಾವಿರಾರು ಮಹಿಳಾ ಕಾರ್ಮಿಕರು ವೇತನ ಹೆಚ್ಚಳಕ್ಕಾಗಿ ಆಗ್ರಹಿಸಿ ಕಂಪನಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ರು.

    ಪ್ರತಿ ವರ್ಷದಂತೆ ಕಾರ್ಮಿಕರ ವೇತನ ಹೆಚ್ಚಿಸಬೇಕು. ಆಡಳಿತ ಮಂಡಳಿ ಕಾರ್ಮಿಕರಿಗೆ ನೀಡಬೇಕಿದ್ದ ಸಾರಿಗೆ ವ್ಯವಸ್ಥೆ ಇನ್ನಿತರ ಮೂಲಭೂತ ಸೌಕರ್ಯವನ್ನ ನೀಡುವಲ್ಲಿ ವಿಫಲವಾಗಿದೆ. ಕೂಡಲೇ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಎಂದು ಆಗ್ರಹಿಸಿದ್ದಾರೆ.

    ಸ್ಥಳಕ್ಕೆ ನೆಲಮಂಗಲ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಆಡಳಿತ ಮಂಡಳಿ ಹಾಗೂ ಕಾರ್ಮಿಕರು ಜೊತೆಯ ಸಂಧಾನ ಮಾತುಕತೆ ನಡೆಸಿದ್ದಾರೆ. ಆಡಳಿತ ಮಂಡಳಿ ಶೀಘ್ರವೇ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದ ನಂತರ ಕಾರ್ಮಿಕರು ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ.

     

  • ಮಂಡ್ಯ: ಹೆಚ್‍ಡಿಕೆ ಸ್ಥಳಕ್ಕೆ ಬರಬೇಕೆಂದು ನೀರಿನ ಟ್ಯಾಂಕ್ ಏರಿ ಮಾನಸಿಕ ಅಸ್ವಸ್ಥನ ಪ್ರತಿಭಟನೆ

    ಮಂಡ್ಯ: ಹೆಚ್‍ಡಿಕೆ ಸ್ಥಳಕ್ಕೆ ಬರಬೇಕೆಂದು ನೀರಿನ ಟ್ಯಾಂಕ್ ಏರಿ ಮಾನಸಿಕ ಅಸ್ವಸ್ಥನ ಪ್ರತಿಭಟನೆ

    ಮಂಡ್ಯ: ಮಾಜಿ ಸಿಎಂ ಕುಮಾರಸ್ವಾಮಿ ಸ್ಥಳಕ್ಕೆ ಬರಬೇಕು ಹಾಗೂ ಫ್ರೀ ಡ್ರಿಂಕ್ಸ್, ಸಿಗರೇಟ್ ಬೇಕು ಅಂತ ಮಾನಸಿಕ ಅಸ್ವಸ್ಥನೊಬ್ಬ ನೀರಿನ ಟ್ಯಾಂಕ್ ಮೇಲೆ ಹತ್ತಿ ಪ್ರತಿಭಟನೆ ಮಾಡಿದ ಘಟನೆ ಮಂಡ್ಯದಲ್ಲಿ ನಡೆದಿದೆ.

    ಮಂಡ್ಯದ ಮಳ್ಳವಳ್ಳಿ ತಾಲೂಕಿನ ಅಂಕನಹಳ್ಳಿಯಲ್ಲಿ ಪ್ರಸನ್ನ ಎಂಬಾತ ವಿಚಿತ್ರ ಪ್ರತಿಭಟನೆ ಮೂಲಕ ಆತಂಕ ಸೃಷ್ಟಿಸಿದ್ದಾನೆ. ಇಂದು ಬೆಳ್ಳಂಬೆಳಗ್ಗೆ ನೀರಿನ ಟ್ಯಾಂಕ್ ಮೇಲೆ ಅರೆ ಬೆತ್ತಲಾಗಿ ಹತ್ತಿದ ಯುವಕ ಮದ್ಯ, ಸಿಗರೇಟ್ ಕೊಡದಿದ್ರೆ ಮೇಲಿಂದ ಜಿಗಿಯುತ್ತೀನಿ ಅಂತ ಬೆದರಿಕೆ ಹಾಕಿದ್ದಾನೆ. ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಪೊಲೀಸರು ಯುವಕನನ್ನ ಎಷ್ಟೇ ಮನವೊಲಿಸಿದ್ರೂ ಕೆಳಗಿಳಿಯಲಿಲ್ಲ.

    ಕಡೆಗೆ ಅವನ ಬೇಡಿಕೆ ಈಡೇರಿಸೋದಾಗಿ ಹೇಳಿ ಉಪಾಯವಾಗಿ ಟ್ಯಾಂಕ್ ಮೇಲೆ ಹತ್ತಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳೀಯರ ಸಹಾಯದಿಂದ ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ.

  • ನೀವು ಸ್ಥಳಕ್ಕೆ ಹೋಗೋದ್ರಿಂದ್ಲೇ ಪ್ರತಿಭಟನೆ ಹೆಚ್ಚಾಗ್ತಿದೆ- ಮಾಧ್ಯಮದ ವಿರುದ್ಧ ಕಾಗೋಡು ಗರಂ

    ನೀವು ಸ್ಥಳಕ್ಕೆ ಹೋಗೋದ್ರಿಂದ್ಲೇ ಪ್ರತಿಭಟನೆ ಹೆಚ್ಚಾಗ್ತಿದೆ- ಮಾಧ್ಯಮದ ವಿರುದ್ಧ ಕಾಗೋಡು ಗರಂ

    ಬೆಂಗಳೂರು: ಕಳೆದ ಹಲವು ಸಮಯಗಳಿಂದ ಮಡಿಕೇರಿಯ ದಿಡ್ಡಳ್ಳಿಯಲ್ಲಿ ನಡೆಯುತ್ತಿರೋ ಆದಿವಾಸಿಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಮಾಧ್ಯಮಗಳ ವಿರುದ್ಧ ಗರಂ ಆಗಿದ್ದಾರೆ.

    ಇದು ಸ್ಥಳೀಯರನ್ನ ಒಕ್ಕಲೆಬ್ಬಿಸಿ ಮಾಡುತ್ತಿರೊ ಧರಣಿಯಾಗಿದ್ದು, ಮಾಧ್ಯಮಗಳ ಪ್ರಚಾರದಿಂದ ಈ ಧರಣಿ ಹೆಚ್ಚುತ್ತಿದೆ. ಮಾಧ್ಯಮಗಳು ಪ್ರತಿಭಟನಾ ಸ್ಥಳಕ್ಕೆ ಹೋಗುವುದರಿಂದಲೇ ಪ್ರತಿಭಟನೆ ಹೆಚ್ಚಾಗುತ್ತಿದೆ ಅಂತಾ ಕಿಡಿಕಾರಿದ್ದಾರೆ.

    ಅರಣ್ಯ ಭೂಮಿ ಕೊಡಲು ಹತ್ತಾರು ಕಾನೂನು ಇದೆ. ಪ್ರಸ್ತಾವನೆ ಸಲ್ಲಿಸಿ, ಕೇಂದ್ರಕ್ಕೆ ಕಳುಹಿಸಬೇಕು. ಬೇರೆ ಭೂಮಿ ಕೊಡಲು ಒಮ್ಮೆ ಒಪ್ಪುತ್ತಾರೆ, ಒಮ್ಮೆ ಗಲಾಟೆ ಮಾಡ್ತಾರೆ. ವಾಸ್ತವಿಕತೆ ಧರಣಿ ಸರಿಯಿಲ್ಲ. ಜನಾಂದೋಲನ, ನಮ್ಮ ಭೂಮಿ ನಮ್ಮ ಹಕ್ಕು ಅಂತ ಸಮಸ್ಯೆ ಇಟ್ಡು ಧರಣಿ ಮಾಡುತ್ತಿಲ್ಲ. ಸುಮ್ಮನೆ ಗಲಾಟೆ ಮಾಡಿಸುತ್ತಿದ್ದಾರೆ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: ಅರೆಬೆತ್ತಲಾಗಿ ಮತ್ತೆ ಮರವೇರಿ ಪ್ರತಿಭಟನೆ ನಡೆಸಿದ ದಿಡ್ಡಳ್ಳಿ ನಿರಾಶ್ರಿತ ಮಹಿಳೆ!

    ಕಂದಾಯ ಭೂಮಿ ಕೊಡುತ್ತೇವೆ ಎಂದರೆ ಒಮ್ಮೆ ಆಯ್ತು ಅಂತಾರೆ, ಬಳಿಕ ಬೇಡ ಎನ್ನುತ್ತಾರೆ. 500 ಮನೆ ಮಂಜೂರು ಮಾಡಿದ್ದೇವೆ. ನಿವೇಶನ ಸಿದ್ಧವಾಗಿದೆ ಆದರೆ ಜನರಿಗೆ ಪ್ರತಿಭಟನೆ ನಡೆಸಲು ಕೆಲವರು ಪ್ರೇರೇಪಣೆ ಮಾಡುತ್ತಿದ್ದಾರೆ ಅಂತಾ ಅರೋಪಿಸಿದರು.

  • ಅರೆಬೆತ್ತಲಾಗಿ ಮತ್ತೆ ಮರವೇರಿ ಪ್ರತಿಭಟನೆ ನಡೆಸಿದ ದಿಡ್ಡಳ್ಳಿ ನಿರಾಶ್ರಿತ ಮಹಿಳೆ!

    ಅರೆಬೆತ್ತಲಾಗಿ ಮತ್ತೆ ಮರವೇರಿ ಪ್ರತಿಭಟನೆ ನಡೆಸಿದ ದಿಡ್ಡಳ್ಳಿ ನಿರಾಶ್ರಿತ ಮಹಿಳೆ!

    ಕೊಡಗು: ದಿಡ್ಡಳ್ಳಿ ಆದಿವಾಸಿ ಮಹಿಳಾ ಮುಖಂಡೆ ಮುತ್ತಮ್ಮ ಅವರು ಅರೆಬೆತ್ತಲಾಗಿ ಮರವೇರಿ ಪ್ರತಿಭಟನೆ ನಡೆಸ್ತಾ ಇದ್ದಾರೆ. ಆದಿವಾಸಿ ಜನರ ಗುಡಿಸಲುಗಳನ್ನು ತೆರವು ಮಾಡಿದ್ರೆ ಮರದಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮುತ್ತಮ್ಮ ಬೆದರಿಸ್ತಿದ್ದಾರೆ.

    ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ದಿಡ್ಡಳ್ಳಿಯ ದೇವಮಚ್ಚಿ ಮೀಸಲು ಅರಣ್ಯದೊಳಗೆ ಅಕ್ರಮ ಪ್ರವೇಶ ಮಾಡಿ ಗುಡಿಸಲು ನಿರ್ಮಿಸಿದ್ದ 600ಕ್ಕೂ ಅಧಿಕ ಆದಿವಾಸಿ ಜನರ ಕುಟುಂಬಗಳ ಗುಡಿಸಲು ಕಾರ್ಯಾಚರಣೆ ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ಅರಣ್ಯ ಇಲಾಖೆ ಆರಂಭಿಸಿದೆ. ತೆರವು ಕಾರ್ಯಾಚರಣೆಯಲ್ಲಿ ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳನ್ನು ಬಳಸಿಕೊಳ್ಳಲಾಗಿದೆ.

    ನಮ್ಮ ಕುಟುಂಬಗಳನ್ನು ಇಲ್ಲಿಂದ ತೆರವುಗೊಳಿಸಿದರೇ ಮರದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಂದು ಮುತ್ತಮ್ಮ ಹೇಳುತ್ತಾರೆ. ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಬೇಕು. ನಮ್ಮ ಕಷ್ಟಗಳನ್ನು ಆಲಿಸಬೇಕು ಎಂದು ಮುತ್ತಮ್ಮ ಪಟ್ಟು ಹಿಡಿದಿದ್ದಾರೆ. ಸ್ಥಳದಲ್ಲಿ ಸಾವಿರಾರು ನಿರಾಶ್ರಿತರು ಸೇರಿದ್ದು ಎಲ್ಲರ ಆಕ್ರಂದನ ಮುಗಿಲು ಮುಟ್ಟಿದೆ.

    ಡಿಸಂಬರ್‍ನಿಂದ ಭೂಮಿ ಮತ್ತು ವಸತಿಗೆ ಆಗ್ರಹಿಸಿ ರಸ್ತೆ ಬದಿಯಲ್ಲಿ ಪ್ರತಿಭಟನೆ ನಡೆಸ್ತಾ ಇದ್ದ ಆದಿವಾಸಿ ಜನರು ಏಪ್ರಿಲ್ 28ರಂದು ಜಿಲ್ಲಾಧಿಕಾರಿಗಳು ನಡೆಸಿದ ಸಂಧಾನ ಸಭೆಯಲ್ಲಿ ಜಿಲ್ಲಾಡಳಿತ ಗೊತ್ತುಮಾಡಿದ ಸ್ಥಳಕ್ಕೆ ಒಪ್ಪಿದ್ದರು. ಬಳಿಕ ಜಿಲ್ಲಾಡಳಿತ ಗೊತ್ತುಮಾಡಿರೋ ಸ್ಥಳಕ್ಕೆ ತೆರಳಲ್ಲ ಎನ್ನುವ ಮೂಲಕ ಜಿಲ್ಲಾಡಳಿತಕ್ಕೆ ದಿಡ್ಡಳ್ಳಿ ಆದಿವಾಸಿ ಜನರು ಟಾಂಗ್ ನೀಡಿದ್ದರು. ಅಲ್ಲದೇ ಕಳೆದ 5 ದಿನಗಳ ಹಿಂದೆ ರಸ್ತೆ ಬದಿಯಿದ್ದ ಗುಡಿಸಲುಗಳನ್ನು ದೇವಮಚ್ಚಿ ಮೀಸಲು ಅರಣ್ಯದೊಳಗೆ ಶಿಫ್ಟ್ ಮಾಡಿ ಹೋರಾಟ ತೀವ್ರಗೊಳಿಸಿದ್ದರು.

    ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಮೈಕ್‍ನಲ್ಲಿ ಸ್ಥಳ ಬಿಟ್ಟು ತೆರಳುವಂತೆ ಮನವಿ ಮಾಡುತ್ತಿದ್ದಾರೆ. ಇಷ್ಟು ದಿನ ರಸ್ತೆ ಬದಿಯಲ್ಲಿ ಗುಡಿಸಲು ನಿರ್ಮಿಸಿ ಹೋರಾಟ ನಡೆಸ್ತಾ ಇದ್ದವರು ಅರಣ್ಯ ಪ್ರವೇಶಿಸಿ ಇದ್ದ ಗುಡಿಸಲು ಕಳೆದುಕೊಂಡಿದ್ದಾರೆ. ಅರಣ್ಯ ಇಲಾಖೆ ಮಾತ್ರ ಶತಾಯ ಗತಾಯ ಅರಣ್ಯದೊಳಗೆ ಯಾವ ಗುಡಿಸಲು ಇರಲು ಬಿಡೋದಿಲ್ಲ ಎಂದು ಕಾರ್ಯಾಚರಣೆ ಆರಂಭಿಸಿದೆ. ಅರಣ್ಯದಿಂದ ಹೊರಬಿದ್ದಿರುವ ಆದಿವಾಸಿ ಜನರು ಜಿಲ್ಲಾಡಳಿತ ಜಿಲ್ಲೆಯ ಮೂರ್ನಾಲ್ಕು ಕಡೆಗಳಲ್ಲಿ ಗೊತ್ತು ಮಾಡಿರೋ ಸ್ಥಳಕ್ಕೆ ತೆರಳಬೇಕೆಂದು ಜಿಲ್ಲಾಡಳಿತರ ಪರ ಅಧಿಕಾರಿಗಳು ಆದಿವಾಸಿ ಜನರಲ್ಲಿ ಮನವಿ ಮಾಡ್ತಿದ್ದಾರೆ.

     

  • ದಿಡ್ಡಳ್ಳಿ ನಿರಾಶ್ರಿತ ಮಹಿಳೆಯಿಂದ ಮರವೇರಿ ಪ್ರತಿಭಟನೆ

    ದಿಡ್ಡಳ್ಳಿ ನಿರಾಶ್ರಿತ ಮಹಿಳೆಯಿಂದ ಮರವೇರಿ ಪ್ರತಿಭಟನೆ

    ಕೊಡಗು: ಭೂಮಿ ಮತ್ತು ವಸತಿಗೆ ಆಗ್ರಹಿಸಿ ಜಿಲ್ಲೆಯ ವಿರಾಜಪೇಟೆ ತಾಲೂಕಿನ ದಿಡ್ಡಳ್ಳಿಯಲ್ಲಿ ನಡೆಯುತ್ತಿರೋ ಹೋರಾಟ ತೀವ್ರಗೊಂಡಿದ್ದು, ಇಂದು ಆದಿವಾಸಿ ಮಹಿಳಾ ಮುಖಂಡರೊಬ್ಬರು ಮರವೇರಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.

    ಮುತ್ತಮ್ಮ ಎಂಬವರೇ ಮರವೇರಿ ಪ್ರತಿಭಟನೆ ನಡೆಸಿದ ಮಹಿಳೆ. ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಹಾಗೂ ಉಪವಿಭಾಗಾಧಿಕಾರಿ ಪ್ರತಿಭಟನಾನಿರತ ದಿಡ್ಡಳ್ಳಿ ಆದಿವಾಸಿ ಜನರೊಂದಿಗೆ ಮಾತುಕತೆ ನಡೆಸಿದರು. ಕೊನೆಗೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಮುತ್ತಮ್ಮ ಅವರೊಂದಿಗೆ ಫೋನ್‍ನಲ್ಲಿ ಮಾತನಾಡಿದಾಗ ಮರದಿಂದ ಕೆಳಗಿಳಿದರು.

    ಹಿಂದೆ ನಡೆದ ಸಭೆಯಲ್ಲಿ ದಿಡ್ಡಳ್ಳಿ ನಿರಾಶ್ರಿತರು ಸರ್ಕಾರ ನಿಗದಿ ಮಾಡಿದ್ದ ಸ್ಥಳಕ್ಕೆ ತೆರಳಲು ಒಪ್ಪಿದ್ದು, ಈಗ ಪುನಃ ಪ್ರತಿಭಟನೆ ನಡೆಸುತ್ತಿರುವುದು ಸಂಶಯ ಮೂಡಿಸುತ್ತದೆ ಎಂದು ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಹೇಳಿದರು.

     

  • 43ನೇ ದಿನಕ್ಕೆ ತುಂಗಭದ್ರ ನೌಕರರ ಪ್ರತಿಭಟನೆ – ಇಂದು ರಾಯಚೂರು ಬಂದ್

    43ನೇ ದಿನಕ್ಕೆ ತುಂಗಭದ್ರ ನೌಕರರ ಪ್ರತಿಭಟನೆ – ಇಂದು ರಾಯಚೂರು ಬಂದ್

    – ಹೋರಾಟಕ್ಕೆ 23 ಸಂಘಟನೆಗಳ ಬೆಂಬಲ

    ರಾಯಚೂರು: ತುಂಗಭದ್ರಾ ಹಂಗಾಮಿ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ರಾಯಚೂರು ಬಂದ್‍ಗೆ ಕರೆ ನೀಡಿದ್ದಾರೆ. ಹೋರಾಟ 43ನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರ ಹೋರಾಟಕ್ಕೆ ಯಾವುದೇ ಸ್ಪಂದನೆ ನೀಡದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲಾ ಬಂದ್‍ಗೆ ಕರೆ ನೀಡಿದ್ದಾರೆ.

    ಹೋರಾಟಕ್ಕೆ ಈಗಾಗಲೇ 23 ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಬೈಕ್ ಮೆರವಣಿಗೆ ಮೂಲಕ ಕಾರ್ಮಿಕರು ಬಂದ್ ಆಚರಣೆಗೆ ಮುಂದಾಗಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ವೇತನ, ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಗೊಳಿಸುವುದು ಹಾಗೂ ವೇತನ ಹೆಚ್ಚಳದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಂದ್‍ಗೆ ಕರೆ ನೀಡಲಾಗಿದೆ.

    ತುರ್ತು ಸೇವೆಗಳನ್ನ ಹೊರತುಪಡಿಸಿ ಉಳಿದೆಲ್ಲಾ ಸೇವೆಗಳ ಸಂಪೂರ್ಣ ಬಂದ್‍ಗೆ ಹೋರಾಟಗಾರರು ಮುಂದಾಗಿದ್ದಾರೆ. ಬೆಳಗಿನ ಜಾವದಿಂದ ಬಂದ್‍ಗೆ ಮಿಶ್ರಪ್ರತಿಕ್ರಿಯೇ ವ್ಯಕ್ತವಾಗುತ್ತಿದೆ. ಇಡೀ ದೇಶಾದ್ಯಂತ ಬಿಡುಗಡೆಯಾಗಿರುವ ಬಾಹುಬಲಿ-2 ಸಿನೆಮಾ ರಾಯಚೂರಿನ ಮೂರು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ಚಿತ್ರ ಪ್ರದರ್ಶನಕ್ಕೆ ಬಂದ್ ಅಡ್ಡಿಯಾಗುವ ಸಾಧ್ಯತೆಯಿದೆ.

  • ಕಲಬುರಗಿ: ವಾಮಾಚಾರಕ್ಕೆ ಹೆದರಿ ಪ್ರತಿಭಟನೆಯಿಂದ ಹಿಂದೆ ಸರಿದ ಗ್ರಾಮಸ್ಥರು

    ಕಲಬುರಗಿ: ವಾಮಾಚಾರಕ್ಕೆ ಹೆದರಿ ಪ್ರತಿಭಟನೆಯಿಂದ ಹಿಂದೆ ಸರಿದ ಗ್ರಾಮಸ್ಥರು

    ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲ ಗ್ರಾಮದಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ಗ್ರಾಮಸ್ಥರು ವಾಮಾಚಾರಕ್ಕೆ ಹೆದರಿ ಇದೀಗ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ.

    ಆಂದೋಲ ಗ್ರಾಮ ಪಂಚಾಯತಿಯಲ್ಲಿ 80 ಲಕ್ಷಕ್ಕೂ ಅಧಿಕ ಅವ್ಯವಹಾರವಾಗಿತ್ತು. ಅವ್ಯವಹಾರದ ತನಿಖೆಗೆ ಆಗ್ರಹಿಸಿ ಇಂದು ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದರು. ಆದ್ರೆ ಗ್ರಾಮಸ್ಥರ ಪ್ರತಿಭಟನೆ ಹತ್ತಿಕ್ಕಲು ಭಾನುವಾರ ರಾತ್ರಿ ಪಂಚಾಯತ್ ಮುಂಭಾಗದಲ್ಲಿ ನಿಂಬೆಹಣ್ಣು, ಅರಶಿನ, ಕುಂಕಮ, ತೆಂಗಿನಕಾಯಿ ಬಳಸಿ ವಾಮಾಚಾರ ಮಾಡಿದ್ದಾರೆ. ಈ ಮೂಲಕ ಧರಣಿ ನಡೆಸುವವರಿಗೆ ಭಯ ಹುಟ್ಟಿಸಲು ಗ್ರಾಮ ಪಂಚಾಯ್ತಿಗೆ ಭಾನಾಮತಿ ಮಾಡಿಸಿರುವ ಶಂಕೆಯಿದೆ.

    ಇದರಿಂದ ಹೆದರಿದ ಗ್ರಾಮಸ್ಥರು ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ. ಅಲ್ಲದೇ ದುಷ್ಕರ್ಮಿಗಳ ಈ ಕೃತ್ಯದಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಹೊರಗೆ ಬರಲು ಜನ ಆತಂಕ ವ್ಯಕ್ತಪಡಿಸುತ್ತಿದ್ದಾರೆ.