Tag: ಪ್ರತಿಭಟನೆ

  • ಸಂಸತ್ತಿನೊಳಗೆ ಹೋಗಲು ಬಿಡದೆ ನನ್ನನ್ನೇ ತಳ್ಳಿದ್ರು, ಬೆದರಿಕೆ ಹಾಕಿದ್ರು – ರಾಗಾ ಪ್ರತ್ಯಾರೋಪ

    ಸಂಸತ್ತಿನೊಳಗೆ ಹೋಗಲು ಬಿಡದೆ ನನ್ನನ್ನೇ ತಳ್ಳಿದ್ರು, ಬೆದರಿಕೆ ಹಾಕಿದ್ರು – ರಾಗಾ ಪ್ರತ್ಯಾರೋಪ

    – ಸಂವಿಧಾನದ ಮೇಲೆ ದಾಳಿ, ಅಂಬೇಡ್ಕರ್‌ಗೆ ಅಪಮಾನ ಆದ್ರೆ ಸಹಿಸಲ್ಲ ಎಂದ ಸಂಸದ

    ನವದೆಹಲಿ: ಸಂಸತ್‌ ಭವನ ಆವರಣದಲ್ಲಿ (Parliament Premises) ನಡೆಯುತ್ತಿದ್ದ ಪ್ರತಿಭಟನೆ ವೇಳೆ ಬಿಜೆಪಿ ಸಂಸದ ಪ್ರತಾಪ್‌ ಸಾರಂಗಿ ಅವರನ್ನು ತಳ್ಳಿದ್ದಾರೆ ಎಂಬ ಆರೋಪಕ್ಕೆ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಸ್ಪಷ್ಟನೆ ನೀಡಿದ್ದಾರೆ.

    ಸಂಸತ್‌ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾರನ್ನು ತಳ್ಳಿಲ್ಲ. ಸಂಸತ್ತಿನ ಪ್ರವೇಶದ್ವಾರದ ಮೂಲಕ ಸಂಸತ್‌ ಭವನದ ಒಳಗೆ ಹೋಗಲು ಪ್ರಯತ್ನಿಸುತ್ತಿದ್ದೆ. ಈ ವೇಳೆ ಬಿಜೆಪಿ ಸಂಸದರೇ ನನ್ನನ್ನು ತಡೆದರು, ತಳ್ಳಿದ್ರು ಮತ್ತು ಬೆದರಿಕೆ ಹಾಕಲು ಪ್ರಯತ್ನಿಸುತ್ತಿದ್ದರು. ಹಾಗಾಗಿ ಈ ಘಟನೆ ಸಂಭವಿಸಿದೆ ಎಂದಿದ್ದಾರೆ. ಇದನ್ನೂ ಓದಿ: ಸಂಸತ್‌ ಭವನ ಆವರಣದಲ್ಲಿ ಹೈಡ್ರಾಮಾ – ರಾಹುಲ್‌ ತಳ್ಳಿದ್ರಿಂದ ನಾನು ಬಿದ್ದೆ ಎಂದ ಬಿಜೆಪಿ ಸಂಸದ

    ಮುಂದುವರಿದು, ಸಂಸತ್‌ಗೆ ಭವನಕ್ಕೆ ಇದೊಂದೇ ಪ್ರವೇಶದ್ವಾರ, ಒಳಗೆ ಹೋಗುವುದು ನಮ್ಮ ಹಕ್ಕು. ನಮ್ಮನ್ನ ತಳ್ಳುವುದರಿಂದ ಸಮಸ್ಯೆಯಿಲ್ಲ, ಆದ್ರೆ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ ಹಾಗೂ ಅಂಬೇಡ್ಕರ್ ಅವರ ಸ್ಮರಣೆಗೆ ಅವಮಾನ ಮಾಡಿದ್ದಾರೆ. ಇದನ್ನು ನಾವು ಸಹಿಸಲ್ಲ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಅಮಿತ್‌ ಶಾ ವಿಡಿಯೋ ಅಪ್ಲೋಡ್‌ – ಕೈ ನಾಯಕರಿಗೆ ಎಕ್ಸ್‌ನಿಂದ ನೋಟಿಸ್‌

    ಸಾರಂಗಿಗೆ ಆಗಿದ್ದೇನು?
    ಉಭಯ ಪಕ್ಷಗಳು ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ಸಂಸದ ಪ್ರತಾಪ್‌ ಸಾರಂಗಿ (Pratap Chandra Sarangi) ಕುಸಿದುಬಿದ್ದಿದ್ದರು. ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ನನ್ನನ್ನ ತಳ್ಳಿದ್ದಾರೆ ಎಂಬ ಆರೋಪ ಮಾಡಿದ್ದರು. ಸದ್ಯ ಅವರನ್ನು ದೆಹಲಿಯ ಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: PUBLiC TV Impact; 70 ಲಕ್ಷ ಕರೆಂಟ್ ಬಿಲ್ ಕಟ್ಟುವಂತೆ ಸಿದ್ದಗಂಗಾ ಮಠಕ್ಕೆ ನೀಡಿದ್ದ ನೋಟಿಸ್ ಹಿಂಪಡೆದ ಸರ್ಕಾರ

    ಬಿಜೆಪಿ vs ಕಾಂಗ್ರೆಸ್‌ ಪ್ರೊಟೆಸ್ಟ್‌:
    ಚಳಿಗಾಲದ ಅಧಿವೇಶನದಲ್ಲಿ ʻಸಂವಿಧಾನʼ ಕುರಿತ ಚರ್ಚೆ ವೇಳೆ ರಾಜ್ಯಸಭೆಯಲ್ಲಿ ಅಮಿತ್‌ ಶಾ ಅವರು ಮಾತನಾಡುತ್ತಾ, ʻಅಂಬೇಡ್ಕರ್‌ ಅಂಬೇಡ್ಕರ್‌ ಅಂಬೇಡ್ಕರ್‌ ಇದೊಂದು ಫ್ಯಾಷನ್‌ ಆಗಿಬಿಟ್ಟಿದೆ. ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಅವರಿಗೆ ಸ್ವರ್ಗದಲ್ಲಿ ಸ್ಥಾನವಾದರೂ ಸಿಗುತ್ತಿತ್ತುʼ ಎಂದು ಹೇಳಿದ್ದರು. ಈ ಕುರಿತ ವೀಡಿಯೋಗಳನ್ನು ವಿಕ್ಷ ನಾಯಕರು ತಮ್ಮ ಸೋಷಿಯಲ್‌ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಕೇಂದ್ರ ಗೃಹ ಸಚಿವರು ರಾಜೀನಾಮೇ ನೀಡಬೇಕು, ಅಂಬೇಡ್ಕರ್‌ ವಿರುದ್ಧದ ಟೀಕೆಗೆ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ನಡುವೆ ಕಾಂಗ್ರೆಸ್‌ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

    ಮತ್ತೊಂದೆಡೆ ಕಾಂಗ್ರೆಸ್ ನಿಂದ ಅಂಬೇಡ್ಕರ್‌ಗೆ ಅನ್ಯಾಯವಾಗಿದೆ ಎನ್ನುವ ಪ್ಲೆ ಕಾರ್ಡ್ ಹಿಡಿದು ಬಿಜೆಪಿ ಸದಸ್ಯರು ಪ್ರತಿಭಟನೆಗಿಳಿದಿದ್ದಾರೆ. ಇತ್ತ ಬಿಜೆಪಿ ಸಂಸದರಿಂದಲೂ ಸಂಸತ್ ಆವರಣದಲ್ಲಿ ʻಕಾಂಗ್ರೆಸ್ ನಿಂದ ಅಂಬೇಡ್ಕರ್‌ಗೆ ಅನ್ಯಾಯವಾಗಿದೆʼ ಅನ್ನೋ ಪ್ಲೆ ಕಾರ್ಡ್ ಹಿಡಿದು ಪ್ರತಿಭಟನೆಗಿಳಿದಿದ್ದಾರೆ. ಪ್ರತಿಭಟನೆಯಲ್ಲಿ ಕರ್ನಾಟಕದ ಬಿಜೆಪಿ ಸಂಸದರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಜಗ್ಗೇಶ್ ಭಾಗಿಯಾಗಿದ್ದಾರೆ.


    ಮೋದಿ ತಿರುಗೇಟು:
    ಇನ್ನೂ ಅಮಿತ್‌ ಶಾ ಅವರ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್‌ ಅಂಬೇಡ್ಕರ್‌ ಏನೇನು ಕೊಟ್ಟಿದೆ ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್‌ ಎಂದು ಹೇಳಿದ್ದರು. ಅಮಿತ್‌ ಶಾ ಅವರು ಸಂವಿಧಾನ ಶಿಲ್ಪಿ ಡಾ ಬಿ.ಆರ್‌ ಅಂಬೇಡ್ಕರ್‌ರನ್ನು ಕನಸಿನಲ್ಲಿಯೂ ಅವಮಾನಿಸಲು ಸಾಧ್ಯವಿಲ್ಲದ ಪಕ್ಷದಿಂದ ಬಂದವರು. ಕಾಂಗ್ರೆಸ್‌ ಅವರ ಹೇಳಿಕೆಯನ್ನು ತಿರುಚಿದೆ ಎಂದು ಹೇಳಿದ್ದಾರೆ.

    ಇನ್ನೂ ಸಿಎಂ ಸಿದ್ದರಾಮಯ್ಯ ಕೂಡ ಪತ್ರದ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಂಬೇಡ್ಕರ್‌ರಂತಹ ಮಹಾನ್‌ ವ್ಯಕ್ತಿ ಈ ಭೂಮಿಯಲ್ಲಿ ಹುಟ್ಟದಿದ್ದರೆ ನಾನು ಊರಿನಲ್ಲಿ ಕುರಿ ಮೇಯಿಸಿಕೊಂಡು ಇರುತ್ತಿದ್ದೆ, ಅಮಿತ್‌ ಶಾ ಅವರು ಕೂಡ ಗುಜರಿ ವ್ಯಾಪಾರ ಮಾಡಿಕೊಂಡು ಇರಬೇಕಾಗಿತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ದಾವಣಗೆರೆ ಕಾಂಗ್ರೆಸ್‌ನಲ್ಲಿ ಅಸಮಾಧಾನ – ಉಸ್ತುವಾರಿ ಮಲ್ಲಿಕಾರ್ಜುನ್‌ ಬದಲಾಯಿಸುವಂತೆ ಶಿವಗಂಗಾ ಬಸವರಾಜ್ ಪತ್ರ

  • ಬಸ್ ಬಾರದಕ್ಕೆ ಸಾರಿಗೆ ಅಧಿಕಾರಿಗೆ ವಿದ್ಯಾರ್ಥಿಗಳ ತರಾಟೆ

    ಬಸ್ ಬಾರದಕ್ಕೆ ಸಾರಿಗೆ ಅಧಿಕಾರಿಗೆ ವಿದ್ಯಾರ್ಥಿಗಳ ತರಾಟೆ

    ಬೀದರ್: ಸರಿಯಾದ ಸಮಯಕ್ಕೆ ಬಸ್ ಬರದ ಕಾರಣ ರಸ್ತೆ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿರುವ ಘಟನೆ ಬೀದರ್ (Bidar) ಜಿಲ್ಲೆಯ ಹುಮ್ನಾಬಾದ್ (Humnabad) ಬಳಿ ನಡೆದಿದೆ.ಇದನ್ನೂ ಓದಿ: ಕೋಲಾರ ನಗರದ 7ಕ್ಕೂ ಹೆಚ್ಚು ಮಳಿಗೆಗಳಲ್ಲಿ ಸರಣಿ ಕಳ್ಳತನ – ಸಿಸಿಟಿವಿಯಲ್ಲಿ ಕಳ್ಳರ ಕೈಚಳಕ ಸೆರೆ

    ಕಟಕಚಿಂಚೊಳ್ಳಿ, ಸಿಕಿಂದ್ರಾಬಾದ್, ಸುಲ್ತಾನಬಾದ್ ಗ್ರಾಮಕ್ಕೆ ಬಸ್ ಬಾರದಿದ್ದಕ್ಕೆ ಭಾಲ್ಕಿ ಟೂ ಹುಮ್ನಾಬಾದ್ ಮುಖ್ಯರಸ್ತೆ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಸಾರಿಗೆ ಅಧಿಕಾರಿಯನ್ನೇ ವಿದ್ಯಾರ್ಥಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ.

    ಬಹುತೇಕ ಸಲ ಬಸ್ ಬಾರದ ಕಾರಣಕ್ಕೆ ನಡೆದುಕೊಂಡು ಶಾಲೆಗೆ ಹೋಗಬೇಕಾದ ಸ್ಥಿತಿ ಎದುರಾಗಿದೆ. ಹೀಗಾಗಿ ಎರಡು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದು, ಪ್ರತಿಭಟನೆಗೆ ಎಬಿವಿಪಿ ಕಾರ್ಯಕರ್ತರು ಸಾಥ್ ನೀಡಿದರು.ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆ ನೇಮಕ ವಿಚಾರದಲ್ಲಿ ಗಲಾಟೆ – ಕೇಂದ್ರಕ್ಕೆ ಸ್ಥಳೀಯರಿಂದಲೇ ಬೀಗ

  • ಅತ್ಯಾಚಾರ ಖಂಡಿಸಿ ಪ್ರತಿಭಟನೆ – ಕಿಡಿಗೇಡಿಗಳಿಂದ ಕಲ್ಲು ತೂರಾಟ!

    ಅತ್ಯಾಚಾರ ಖಂಡಿಸಿ ಪ್ರತಿಭಟನೆ – ಕಿಡಿಗೇಡಿಗಳಿಂದ ಕಲ್ಲು ತೂರಾಟ!

    ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ, ಬಂಜಾರಾ ಸಮುದಾಯ ಹಾಗೂ ಸಕಲ ಹಿಂದೂ ಸಮಾಜದ ವತಿಯಿಂದ ಕರೆ ನೀಡಲಾದ ಪ್ರತಿಭಟನೆಯಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ (Stone Pelting) ನಡೆಸಿದ್ದಾರೆ.

    ನಗರದ ಬಂಜಾರಾ ಸಮುದಾಯದ ಭವನದಿಂದ ಪಾದಯಾತ್ರೆ ಮೂಲಕ ಡಿಸಿ ಕಚೇರಿವರೆಗೆ ಆಗಮಿಸಿದ ಪ್ರತಿಭಟನಾಕಾರರು, ವೇಳೆಯಲ್ಲಿ ಇಬ್ಬರು ಕಿಡಿಗೇಡಿಗಳು ಡಿಸಿ ಕಚೇರಿ ಮುಂಭಾಗದಲ್ಲಿದ್ದ ಅಂಗಡಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಕಿಡಿಗೇಡಿಗಳ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ʻಒಂದು ರಾಷ್ಟ್ರ ಒಂದು ಚುನಾವಣೆʼ ಸನ್ನಿಹಿತನಾ? – ಈ ಅಧಿವೇಶನದಲ್ಲೇ ಮಸೂದೆ ಮಂಡನೆಗೆ ಪ್ಲಾನ್!

    ಇನ್ನೂ ಪ್ರತಿಭಟನೆ ವೇಳೆ ಅಲ್ಲೆ ಡಿಸಿ ಕಚೇರಿಯ ಪಕ್ಕದಲ್ಲಿದ, ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ ಅವರದ್ದೆ ಕಾರಿನ ಮೇಲೆ ಕೂಡ ಕಲ್ಲು ತೂರಾಟ ಮಾಡಲಾಗಿದ್ದು, ಕಾರಿನ ಗಾಜು ಕೂಡ ಪುಡಿಪುಡಿಯಾಗಿದೆ.

    ಕಾರಿನ ಮೇಲೆ ಕಲ್ಲು ತೂರಾಟ ಮಾಡಿದ ವಿಷಯ ಆಂದೋಲಾ ಶ್ರೀಗಳಿಗೆ ತಿಳಿದಾಗ, ನಾವೇ ನಮ್ಮ ಹೋರಾಟಗಾರರ ಮೇಲೆ ಕಲ್ಲು ತೂರಾಟ ಮಾಡಿದ್ದು ಎಷ್ಟು ಸರಿ ಎಂಬುದು ನೀವು ಅರ್ಥ ಮಾಡಿಕೊಂಡು ಮುಂದೆ ನಡೆಯರಿ ಎಂದು ತಿಳಿ ಹೇಳಿದರು. ಇದನ್ನೂ ಓದಿ: New Delhi | ಬಡ ವ್ಯಾಪಾರಿಗಳ ತಳ್ಳುಗಾಡಿಗಳ ಮೇಲೆ ಕೇಸರಿ ಧ್ವಜ ನೆಟ್ಟ ಬಿಜೆಪಿ ಕೌನ್ಸಿಲರ್!

  • ಬಾಂಗ್ಲಾದೇಶದ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ರಾಯಚೂರಲ್ಲಿ ಪ್ರತಿಭಟನೆ

    ಬಾಂಗ್ಲಾದೇಶದ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ರಾಯಚೂರಲ್ಲಿ ಪ್ರತಿಭಟನೆ

    ರಾಯಚೂರು: ಬಾಂಗ್ಲಾದೇಶದ ಹಿಂದೂಗಳ (Bangladesh) ಮೇಲಿನ ದೌರ್ಜನ್ಯ ಹಾಗೂ ಹಿಂದೂ ವಿರೋಧಿ ನೀತಿ ಖಂಡಿಸಿ ರಾಯಚೂರು (Raichuru) ನಗರದ ಅಂಬೇಡ್ಕರ್ ವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.ಇದನ್ನೂ ಓದಿ: ಹಾಸನ ಸಮಾವೇಶ ಪಕ್ಷದ ಸಮಾವೇಶ, ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲ ಇಲ್ಲ: ಸುಧಾಕರ್

    ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು (ಡಿ.04) ಬಾಂಗ್ಲಾದೇಶದ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಹಿಂದೂ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಮಠಗಳ ಪೀಠಾಧಿಪತಿಗಳು, ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಸೇರಿ ಬಿಜೆಪಿ ಮುಖಂಡರು ಭಾಗವಹಿಸಿದ್ದರು. ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು.

    ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿ ಬಾಂಗ್ಲಾದೇಶದಲ್ಲಿನ ಹಿಂದೂಗಳಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿದರು. ಜೊತೆಗೆ ಬಾಂಗ್ಲಾದೇಶದಲ್ಲಿ ಬಂಧನಕ್ಕೊಳಗಾದ ಹಿಂದೂಗಳ ಬಿಡುಗಡೆಗೆ ಆಗ್ರಹಿಸಿದರು.ಇದನ್ನೂ ಓದಿ: BBK 11: ಶಿಶಿರ್‌ ಹೆಣ್ಮಕ್ಕಳ ಹಿಂದೆ ಸುತ್ತೋ ಜೊಲ್ಲ ಎಂದ್ರಾ ಚೈತ್ರಾ?- ರಣರಂಗವಾಯ್ತು ದೊಡ್ಮನೆ

  • ಬನಹಟ್ಟಿ | ರಸ್ತೆ ಬಂದ್ ಮಾಡಿ ಉಪಹಾರ ಮಾಡಿದ ನೇಕಾರರು

    ಬನಹಟ್ಟಿ | ರಸ್ತೆ ಬಂದ್ ಮಾಡಿ ಉಪಹಾರ ಮಾಡಿದ ನೇಕಾರರು

    ಬಾಗಲಕೋಟೆ: ಜಿಲ್ಲೆಯ ಬನಹಟ್ಟಿಯಲ್ಲಿ (Banahatti) ಕೆಹೆಚ್‌ಡಿಎಸಿ ನೇಕಾರರು ಕೈಗೊಂಡ ಅನಿರ್ದಿಷ್ಟಾವಧಿ ಪ್ರತಿಭಟನೆ (Weavers’ protest) ಗುರುವಾರ ಒಂಬತ್ತನೇ ದಿನಕ್ಕೆ‌ ಕಾಲಿಟ್ಟಿದೆ.

    ಪ್ರತಿಭಟನಾ ನಿರತ ನೇಕಾರರು ಬನಹಟ್ಟಿ ಪಟ್ಟಣದ ಭಾಂಗಿ ವೃತ್ತದ ಮುಖ್ಯ ರಸ್ತೆಯನ್ನು ಬಂದ್ ಮಾಡಿ, ರಸ್ತೆಯಲ್ಲಿಯೇ ಜಂತರದ ಮೂಲಕ ನೂಲು ಸುತ್ತಿ, ಅಲ್ಲಿಯೇ ಉಪಹಾರ ಸೇವಿಸಿ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಬಿಎಸ್‌ವೈಗೆ ಮತ್ತೊಂದು ಸಂಕಷ್ಟ- 2020ರ ಕೇಸ್‌ಗೆ ಮತ್ತೆ ಜೀವ

     

    ನೇಕಾರ ಮುಖಂಡ ಶಿವಲಿಂಗ ಟರ್ಕಿ ಮಾತನಾಡಿ, ದೇಶದ ಜನರ ಮಾನಮುಚ್ಚುವ ನೇಕಾರರು ಇಂದು ಬೀದಿಗೆ ಬಿದ್ದು, ರಸ್ತೆಯಲ್ಲಿಯೇ ಉಪಹಾರ ಮಾಡುವಂತಾಗಿದ್ದು, ಶೋಚನಿಯ ಸ್ಥಿತಿಯಾಗಿದೆ.

    ಎಂಟು ದಿನ ಕಳೆದರೂ ಯಾವೊಬ್ಬ ಜನಪ್ರತಿನಿಧಿ ಬಾರದೇ ನಿರ್ಲಕ್ಷ್ಯ ತೋರಿಸುತ್ತಿರುವುದು ನೇಕಾರರ ಮೇಲೆ ಆಗುತ್ತಿರುವ ಅನ್ಯಾಯವಾಗಿದೆ. ಮುಂದಿನ ದಿನಗಳಲ್ಲಿ ಪ್ರಮುಖ ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟಿಸಲಾಗುವುದು ಎಂಬ ಎಚ್ಚರಿಕೆಯನ್ನು ಅವರು ನೀಡಿದರು.

    ರಸ್ತೆ ಬಂದ್ ಆಗಿದ್ದರಿಂದ ಬೈಕ್ ಸವಾರರು ಸೇರಿದಂತೆ ವಾಹನ ಸವಾರರು ಬೇರೆ ದಾರಿಗಳತ್ತ ಸಾಗುವ ದೃಶ್ಯ ಸಾಮಾನ್ಯವಾಗಿತ್ತು. ಅನೇಕ ನೇಕಾರರು ಘೋಷಣೆಗಳನ್ನು ಕೂಗಿ ಸರ್ಕಾರ ಮತ್ತು ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದರು.

  • Bidar| ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ

    Bidar| ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ

    ಬೀದರ್: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ವೈದ್ಯರು ಸರಿಯಾದ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ಮಾಡಿದ ಪರಿಣಾಮ ಇಂದು (ಮಂಗಳವಾರ) ಮಹಿಳೆ ಸಾವನ್ನಪ್ಪಿದ ಘಟನೆ ಬೀದರ್ (Bidar) ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದಿದೆ.

    ನಾಗಮ್ಮ ನರಸಪ್ಪ (63) ಮೃತ ಮಹಿಳೆಯಾಗಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ಮತ್ತು ಸಿಬ್ಬಂದಿಗಳ ನಿರ್ಲಕ್ಷಕ್ಕೆ ಬಲಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ವಿಕ್ರಂ ಗೌಡ ನಕ್ಸಲ್ ತಂಡ ಸೇರಿದ್ದು ಹೇಗೆ? ಮನೆ ಮನೆಗೆ ಹೇಗೆ ಬರುತ್ತಿದ್ದರು? – ಸ್ಥಳೀಯರು ಬಿಚ್ಚಿಟ್ಟ ಸತ್ಯ ಓದಿ

    ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷತನದಿಂದ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ಮೃತ ಮಹಿಳೆಯ ಸಂಬಂಧಿಕರು ಆರೋಪ ಮಾಡಿ ಆಸ್ಪತ್ರೆ ಮುಂದೆ ಪ್ರತಿಭಟನಾ ಧರಣಿ ಮಾಡುತ್ತಿದ್ದಾರೆ. ಆಸ್ಪತ್ರೆ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಕ್ಷೇತ್ರದ ಅಭಿವೃದ್ಧಿಗೆ ಅನುದಾನವೇ ಸಿಗುತ್ತಿಲ್ಲ: ಸರ್ಕಾರದ ವಿರುದ್ಧವೇ ಕೈ ಶಾಸಕ ಗವಿಯಪ್ಪ ಆಕ್ರೋಶ

    ಘಟನೆಯ ಸುದ್ದಿ ತಿಳಿದು ಸ್ಥಳಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಜ್ಞಾನೇಶ್ವರ್ ನಿರಗುಡೆ ಭೇಟಿ ನೀಡಿದ್ದು, ತರಾಟೆಯ ಬಳಿಕ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ದಾರೆ. ಡಿಹೆಚ್‌ಒ ಭರವಸೆ ಮೇರೆಗೆ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟಿದ್ದು ಈ ಕುರಿತು ಹಳ್ಳಿಖೇಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.  ಇದನ್ನೂ ಓದಿ: ಈಗಿನ ಸರ್ಕಾರ ಬಂದ್ಮೇಲೆ ಮತ್ತೆ ನಕ್ಸಲರ ಚಟುವಟಿಕೆಗಳು ಶುರುವಾಗಿದೆ – ಸುನೀಲ್ ಕುಮಾರ್

  • ಪಿಡಿಓ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆ- 12 ಜನ, ಇತರೆ ಪಿಡಿಓ ಪರೀಕ್ಷಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲು

    ಪಿಡಿಓ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆ- 12 ಜನ, ಇತರೆ ಪಿಡಿಓ ಪರೀಕ್ಷಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲು

    ರಾಯಚೂರು: ಪಿಡಿಓ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆಯಲ್ಲಿ 12 ಜನ ಹಾಗೂ ಇತರೆ ಪಿಡಿಓ ಪರೀಕ್ಷಾರ್ಥಿಗಳ ವಿರುದ್ಧ ಸಿಂಧನೂರು (Sidhanuru) ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

    ರಾಯಚೂರಿನ (Raichur) ಸಿಂಧನೂರಿನ ಸರ್ಕಾರಿ ಪದವಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆ ಪರೀಕ್ಷೆಯಲ್ಲಿ ಅಕ್ರಮ, ಪೇಪರ್ ಲೀಕ್ ಆರೋಪಿಸಿ ಪರೀಕ್ಷೆ ಬಹಿಷ್ಕರಿಸಿ ನಿನ್ನೆ (ನ.17) ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ಪರೀಕ್ಷಾ ಮೇಲ್ವಿಚಾರಕ ಬಸವರಾಜ ತಡಕಲ್ ದೂರು ನೀಡಿದ್ದು, ಪರೀಕ್ಷಾರ್ಥಿಗಳ ವಿರುದ್ಧ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಹುತೇಕ ಯಾದಗಿರಿ ಜಿಲ್ಲೆಯ ಪರೀಕ್ಷಾರ್ಥಿಗಳ ಮೇಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಓರ್ವ ಪರೀಕ್ಷಾರ್ಥಿಯನ್ನ ವಶಕ್ಕೆ ಪಡೆದು ಸ್ಟೇಷನ್ ಬೇಲ್ ಮೇಲೆ ಬಿಟ್ಟಿದ್ದಾರೆ. ಇದನ್ನೂ ಓದಿ: Nelamangala| ಚಿರತೆ ದಾಳಿ- ಮಹಿಳೆ ಬಲಿ

    ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದೀರಿ ಎಂದು ತಪ್ಪು ಭಾವಿಸಿ ಅನಗತ್ಯ ಗೊಂದಲ ಸೃಷ್ಟಿಸಲಾಗಿದೆ. ಪರೀಕ್ಷಾ ವೀಕ್ಷಕರೊಂದಿಗೆ ವಾಗ್ವಾದ ಮಾಡಿ, ಪರೀಕ್ಷಾ ನಿಯಮಗಳ ಉಲ್ಲಂಘನೆ ಮಾಡಿದ್ದಾರೆ. ಪರೀಕ್ಷೆ ಬರೆಯಲು ಕುಳಿತಿದ್ದ ವಿದ್ಯಾರ್ಥಿಗಳಿಗೆ ಪ್ರಚೋದನೆ ನೀಡಿದ್ದಾರೆ. ಇತರ ಪರೀಕ್ಷಾರ್ಥಿಗಳು ಕೊಠಡಿಗಳಿಂದ ಹೊರ ಬರುವಂತೆ ಮಾಡಿ, ರಸ್ತೆಗಿಳಿದು ಪ್ರತಿಭಟನೆ ಮಾಡಿದ್ದಾರೆ. ಅನಗತ್ಯ ಗೊಂದಲ ಸೃಷ್ಟಿಸಿ ಇತರ ಪರೀಕ್ಷಾರ್ಥಿಗಳನ್ನ ಹೊರಗೆ ಕರೆದೊಯ್ಯಲಾಗಿದೆ. ಸುಳ್ಳು ಸುದ್ದಿ ಹರಡಿ ಕಾಲೇಜಿನ ಮುಂದುಗಡೆ ಗಲಾಟೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆ, ಕೊಠಡಿ ಸಂಖ್ಯೆ 05ರಲ್ಲಿ ಗೊಂದಲ ಸೃಷ್ಟಿಸಿ ಗಲಾಟೆ ಮಾಡಿದ ಪರೀಕ್ಷಾರ್ಥಿ ಕಾಶಿಪತಿಯನ್ನ ವಶಕ್ಕೆ ಪಡೆದು, ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ. ಬಾಬು, ಅಯ್ಯನಗೌಡ, ಅಮಿತ್, ವೆಂಕಟೇಶ್ ಸೇರಿ 12 ಜನ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Chitraduraga| 240 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಒಂದೇ ಕೊಠಡಿಯಲ್ಲಿ ಪಾಠ!

    ಗ್ರಾಮೀಣಾಭಿವೃದ್ಧಿ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದದ 97 (ಪಿಡಿಒ) ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಸಿದ್ದಪಡಿಸಲಾಗಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ಯಾ ಎಂಬ ಗಂಭೀರ ಪ್ರಶ್ನೆ ಎದ್ದಿದೆ. (ಪಿಡಿಒ) ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕ ಭಾಗದ 298 ಪರೀಕ್ಷಾ ಉಪ ಕೇಂದ್ರಗಳಲ್ಲಿ ನಿನ್ನೆ ಸ್ಪರ್ಧಾತ್ಮಕ ಪರೀಕ್ಷೆ ಆಯೋಜನೆಗೊಂಡಿತ್ತು. ಈ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ಸಿಂಧನೂರು ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಇದನ್ನೂ ಓದಿ: ಒಂದೇ ದಿನ ಮೂವರು ಗರ್ಭಿಣಿಯರು ಸಾವು – ಇನ್ನೂ ಬಳ್ಳಾರಿಗೆ ಮುಖ ಮಾಡದ ಜಮೀರ್‌

    ವಿದ್ಯಾರ್ಥಿಗಳು ಹೇಳಿದ್ದೇನು?
    ಒಂದು ಕೋಣೆಯಲ್ಲಿ 24 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಆದರೆ ಕೊಠಡಿಗೆ 24 ಪ್ರಶ್ನೆಪತ್ರಿಕೆ ಬದಲು ಕೇವಲ 12 ಪ್ರಶ್ನೆಪ್ರತಿಕೆಯನ್ನು ಕೆಪಿಎಸ್‌ಸಿ ಕಳುಹಿಸಿದೆ. ಈ ಹಿನ್ನೆಲೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು ಮಾತ್ರವಲ್ಲದೇ ಕೊಠಡಿಗೆ ತರುವಾಗಲೇ ಬಂಡಲ್‌ಗಳು ತೆರೆದಿದ್ದವು. ಅಷ್ಟೇ ಅಲ್ಲದೇ ಪರೀಕ್ಷೆ ನಿಗದಿಯಾದ ಸಮಯಕ್ಕಿಂತಲೂ ತಡವಾಗಿ ಆರಂಭವಾಗಿತ್ತು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು.

    ಸರ್ಕಾರಿ ಪದವಿ ಕಾಲೇಜಿನ ಎದುರಿನ ಕುಷ್ಟಗಿ ಸಿಂಧನೂರು ರಸ್ತೆ ಬಂದ್ ಮಾಡಿ ಪ್ರತಿಭಟಿಸಿ ಬೀದರ್, ಕಲಬುರಗಿ ಹಾಗೂ ಯಾದಗಿರಿಯಿಂದ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ನೂರಾರು ಅಭ್ಯರ್ಥಿಗಳು ಕೆಪಿಎಸ್‌ಸಿ ವಿರುದ್ಧ ಪ್ರತಿಭಟಿಸಿದ್ದು, ಸ್ಥಳಕ್ಕೆ ಸಿಂಧನೂರು ನಗರ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ವಿದೇಶಿ ಸ್ವತ್ತು, ಆದಾಯ ಘೋಷಿಸದಿದ್ರೆ 10 ಲಕ್ಷ ರೂ. ದಂಡ – ಕೊನೇ ದಿನ ಯಾವಾಗ?

    ಬೀದರ್ (Bidar), ಕಲಬುರಗಿ (Kalaburagi), ಯಾದಗಿರಿ, ರಾಯಚೂರು, ವಿಜಯನಗರ, ಬಳ್ಳಾರಿ, ಕೊಪ್ಪಳ ಜಿಲ್ಲಾ ಕೇಂದ್ರಗಳು ಹಾಗೂ ಭಾಲ್ಕಿ, ಜೇವರ್ಗಿ, ಶಹಾಪುರ, ಸಿಂಧನೂರು, ಹಗರಿ ಬೊಮ್ಮನಹಳ್ಳಿ, ಕೂಡ್ಲಿಗಿ, ಗಂಗಾವತಿ ಮತ್ತು ಕುಷ್ಟಗಿ ತಾಲೂಕು ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತಿದೆ. ಭಾನುವಾರದ ಪರೀಕ್ಷೆಗೆ 99,107 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು ಎಂದು ಕೆಪಿಎಸ್‌ಸಿ ತಿಳಿಸಿತ್ತು. ಇದನ್ನೂ ಓದಿ: ರಸ್ತೆ ಅಗಲೀಕರಣಕ್ಕಾಗಿ 70ಕ್ಕೂ ಹೆಚ್ಚು ಮನೆಗಳ ನೆಲಸಮ – ನೋಟಿಸ್‌ ನೀಡದೆ ತೆರವು ಆರೋಪ

  • ಪಿಡಿಓ ಪ್ರಶ್ನೆ ಪತ್ರಿಕೆ ಸೋರಿಕೆ? – ರಾಯಚೂರಿನಲ್ಲಿ ರಸ್ತೆ ಬಂದ್ ಮಾಡಿ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

    ಪಿಡಿಓ ಪ್ರಶ್ನೆ ಪತ್ರಿಕೆ ಸೋರಿಕೆ? – ರಾಯಚೂರಿನಲ್ಲಿ ರಸ್ತೆ ಬಂದ್ ಮಾಡಿ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

    ರಾಯಚೂರು: ಗ್ರಾಮೀಣಾಭಿವೃದ್ಧಿ ಇಲಾಖೆಯ (PDO) ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಸಿದ್ದಪಡಿಸಲಾಗಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ಯಾ ಎಂಬ ಗಂಭೀರ ಪ್ರಶ್ನೆ ಎದ್ದಿದೆ.

    (ಪಿಡಿಒ) ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕ ಭಾಗದ 298 ಪರೀಕ್ಷಾ ಉಪ ಕೇಂದ್ರಗಳಲ್ಲಿ ಇಂದು (ನ.17) ‘ಸ್ಪರ್ಧಾತ್ಮಕ ಪರೀಕ್ಷೆ’ ಆಯೋಜನೆಗೊಂಡಿತ್ತು. ಈ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ಸಿಂಧನೂರು ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಮುಂದೆ ಪ್ರತಿಭಟಿಸುತ್ತಿದ್ದಾರೆ.ಇದನ್ನೂ ಓದಿ: ಈರುಳ್ಳಿ ಬೆಲೆ ದಿಢೀರ್‌ ಏರಿಕೆಯಾಗಿದ್ದೇಕೆ?

    ವಿದ್ಯಾರ್ಥಿಗಳು ಹೇಳೋದು ಏನು?
    ಒಂದು ಕೋಣೆಯಲ್ಲಿ 24 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಆದರೆ ಕೊಠಡಿಗೆ 24 ಪ್ರಶ್ನೆಪತ್ರಿಕೆ ಬದಲು ಕೇವಲ 12 ಪ್ರಶ್ನೆಪ್ರತಿಕೆಯನ್ನು ಕೆಪಿಎಸ್‌ಸಿ ಕಳುಹಿಸಿದೆ. ಈ ಹಿನ್ನೆಲೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು  ಮಾತ್ರವಲ್ಲದೇ ಕೊಠಡಿಗೆ ತರುವಾಗಲೇ ಬಂಡಲ್‌ಗಳು ತೆರೆದಿದ್ದವು. ಅಷ್ಟೇ ಅಲ್ಲದೇ ಪರೀಕ್ಷೆ ನಿಗದಿಯಾದ ಸಮಯಕ್ಕಿಂತಲೂ ತಡವಾಗಿ ಆರಂಭವಾಗಿತ್ತು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

    ಸರ್ಕಾರಿ ಪದವಿ ಕಾಲೇಜಿನ ಎದುರಿನ ಕುಷ್ಟಗಿ – ಸಿಂಧನೂರು ರಸ್ತೆ ಬಂದ್ ಮಾಡಿ ಪ್ರತಿಭಟಿಸುತ್ತಿದ್ದು, ಬೀದರ್, ಕಲಬುರಗಿ ಹಾಗೂ ಯಾದಗಿರಿಯಿಂದ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ನೂರಾರು ಅಭ್ಯರ್ಥಿಗಳು ಕೆಪಿಎಸ್‌ಸಿ ವಿರುದ್ಧ ಪ್ರತಿಭಟಿಸುತ್ತಿದ್ದು, ಸ್ಥಳಕ್ಕೆ ಸಿಂಧನೂರು ನಗರ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

    ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯನಗರ, ಬಳ್ಳಾರಿ, ಕೊಪ್ಪಳ ಜಿಲ್ಲಾ ಕೇಂದ್ರಗಳು ಹಾಗೂ ಭಾಲ್ಕಿ, ಜೇವರ್ಗಿ, ಶಹಾಪುರ, ಸಿಂಧನೂರು, ಹಗರಿ ಬೊಮ್ಮನಹಳ್ಳಿ, ಕೂಡ್ಲಿಗಿ, ಗಂಗಾವತಿ ಮತ್ತು ಕುಷ್ಟಗಿ ತಾಲೂಕು ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತಿದೆ. ಭಾನುವಾರದ ಪರೀಕ್ಷೆಗೆ 99,107 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಕೆಪಿಎಸ್‌ಸಿ ತಿಳಿಸಿತ್ತು.ಇದನ್ನೂ ಓದಿ: ಬಾಲನಟ ರೋಹಿತ್‌ ಆರೋಗ್ಯ ಸ್ಥಿರ – ದವಡೆಗೆ ಶಸ್ತ್ರಚಿಕಿತ್ಸೆ, ಪ್ಲೇಟ್‌ ಅಳವಡಿಕೆ

  • 3 ತಿಂಗಳ ಸಂಬಳ ಕೊಡಿ – ಹೋರಾಟಕ್ಕೆ ಮುಂದಾದ 108 ಅಂಬುಲೆನ್ಸ್‌ ಸಿಬ್ಬಂದಿ

    3 ತಿಂಗಳ ಸಂಬಳ ಕೊಡಿ – ಹೋರಾಟಕ್ಕೆ ಮುಂದಾದ 108 ಅಂಬುಲೆನ್ಸ್‌ ಸಿಬ್ಬಂದಿ

    ಬೆಂಗಳೂರು: ಕರ್ನಾಟಕ ಸರ್ಕಾರದ (Karnataka Government) ವಿರುದ್ಧ ಹೋರಾಟ ನಡೆಸಲು 108 ಅಂಬುಲೆನ್ಸ್‌ ಸಿಬ್ಬಂದಿ (Ambulance Smployees) ಮುಂದಾಗಿದ್ದಾರೆ.

    3 ತಿಂಗಳಿನಿಂದ ನಮಗೆ ಸಂಬಳ (Salary) ಸಿಕ್ಕಿಲ್ಲ. ಹೀಗಾಗಿ ನ.16ರ ರಾತ್ರಿ 8 ಗಂಟೆಯ ಒಳಗಡೆ ಸಂಬಳವನ್ನು ಬಿಡುಗಡೆ ಮಾಡಬೇಕು. ಅಂದು ಸಂಬಳ ಪಾವತಿಯಾಗದೇ ಇದ್ದರೆ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ(108) ನೌಕರರ ಸಂಘ, ಅಖಿಲ ಕರ್ನಾಟಕ 108 ಅಂಬುಲೆನ್ಸ್‌ ನೌಕರರ ಹಿತರಕ್ಷಣಾ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಕವಚ(108) ಅಂಬುಲೆನ್ಸ್‌ ನೌಕರರರ ಸಂಘ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಹಾಸನ| ರೀಲ್ಸ್‌ಗಾಗಿ ಪೆಟ್ರೋಲ್‌ ಬಾಂಬ್‌ ಸ್ಫೋಟಿಸಿ ಹುಚ್ಚಾಟ – ವಿದ್ಯಾರ್ಥಿಗಳ ವಿರುದ್ಧ ಕೇಸ್‌

    ಆರೋಗ್ಯ ಕವಚ ಯೋಜನೆಯಲ್ಲಿ 2 ವರ್ಷಗಳಿಂದ ವೇತನದಲ್ಲಿ ಅನೇಕ ಸಮಸ್ಯಗಳಿವೆ. ಸರ್ಕಾರ, ಸಂಸ್ಥೆ ಮತ್ತು ಸಂಘಟನೆಗಳು ಸಭೆ ನಡೆಸಿದರೂ ವೇತನದ ಸಮಸ್ಯೆ ಬಗೆಹರಿದಿಲ್ಲ. ಸಂಘಟನೆಯ ವತಿಯಿಂದ ನ್ಯಾಯಾಲಯದ ಮೊರೆ ಹೋಗಲಾಗಿತ್ತು.

    ನ್ಯಾಯಾಲಯವು ಸೆಪ್ಟೆಂಬರ್ 12ರಂದು ಮಧ್ಯಂತರ ಆದೇಶ ನೀಡಿತ್ತು. ನ್ಯಾಯಾಲಯ ಆದೇಶ ನೀಡಿದರೂ ಆರೋಗ್ಯ ಇಲಾಖೆ ಅಂಬುಲೆನ್ಸ್‌ ಸಿಬ್ಬಂದಿಯ ಸಂಬಳದ ಬಗ್ಗೆ ನಿರ್ಲಕ್ಷ್ಯ ತೋರಿದೆ. ಈ ಕಾರಣಕ್ಕೆ ಅನಿವಾರ್ಯವಾಗಿ ನಾವು ಹೋರಾಟ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಸಂಘಗಳು ತಮ್ಮ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿವೆ.

    ನ.16 ಸಂಬಳವಾಗದೇ ಇದ್ದರೆ ರಾತ್ರಿಯಿಂದಲೇ ಕೆಲಸ ಸ್ಥಗಿತಗೊಳಿಸಲಾಗುವುದು ಎಂದು ಸಂಘ ಹೇಳಿದೆ. ಅಷ್ಟೇ ಅಲ್ಲದೇ ಕೋರ್ಟ್‌ ಆದೇಶದ ಅನ್ವಯ ಪ್ರತಿ ತಿಂಗಳ 7 ರಂದು ವೇತನ ಪಾವತಿಯಾಗಬೇಕು. ಮುಂದೆ ವೇತನ ವಿಳಂಬವಾದರೆ 7ರ ರಾತ್ರಿಯಿಂದಲೇ ಅಂಬುಲೆನ್ಸ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

  • ಗೋಕಾಕ್‌ ಜಿಲ್ಲೆಗೆ ಆಗ್ರಹಿಸಿ ನಿರಂತರ ಹೋರಾಟ : ಶ್ರೀ ಮುರುಘರಾಜೇಂದ್ರ ಸ್ವಾಮೀಜಿ

    ಗೋಕಾಕ್‌ ಜಿಲ್ಲೆಗೆ ಆಗ್ರಹಿಸಿ ನಿರಂತರ ಹೋರಾಟ : ಶ್ರೀ ಮುರುಘರಾಜೇಂದ್ರ ಸ್ವಾಮೀಜಿ

    ಬೆಳಗಾವಿ: ಗೋಕಾಕ್‌ (Gokak) ನೂತನ ಜಿಲ್ಲೆಗೆ ಆಗ್ರಹಿಸಿ ಎಲ್ಲರೊಂದಿಗೆ ಚರ್ಚಿಸಿ ನಿರಂತರ ಹೋರಾಟ ಕೈಗೊಳ್ಳಲಾಗುವುದು ಎಂದು ಗೋಕಾಕ್‌ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿಯ ಅಧ್ಯಕ್ಷ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು (Muruga Rajendra Swamiji) ಹೇಳಿದರು.

    ಗೋಕಾಕ್‌ ನಗರದಲ್ಲಿ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿ, ವಕೀಲರ ಸಂಘ ಹಾಗೂ ನಗರದ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಪ್ರತಿಭಟನೆ ನಡೆಸಲಾಯಿತು. ಇದನ್ನೂ ಓದಿ: ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಗುಡ್‌ನ್ಯೂಸ್ – ಮೊದಲ ಬಾರಿಗೆ KSRTCಯಿಂದ ಶಬರಿಮಲೆಗೆ ವೋಲ್ವೋ ಬಸ್ ಸಂಚಾರ

    ಕಳೆದ 4 ದಶಕಗಳಿಂದ ಗೋಕಾಕ್‌ ಜಿಲ್ಲಾ ಹೋರಾಟ ನಡೆಯುತ್ತಿದೆ. ಜಿಲ್ಲೆ ಮಾಡಲು ನಿರಂತರ ಹೋರಾಟಗಳನ್ನು ಮಾಡಿ ಸರ್ಕಾರಕ್ಕೆ ಮನವಿ ಸಲ್ಲಿಸಿ ಮನವರಿಕೆ ಮಾಡಿದರೂ ಅದು ಈಡೇರಿಲ್ಲ. ಮುಂಬರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸರ್ಕಾರದ ಮೇಲೆ ಒತ್ತಡ ಹಾಕಿ ಜಿಲ್ಲೆಯ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತಗೆದುಕೊಂಡು ಗೋಕಾಕ್‌ ನೂತನ ಜಿಲ್ಲಾ ಕೇಂದ್ರವನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಆಗ್ರಹಿಸಿದರು.