Tag: ಪ್ರತಿಭಟನೆ

  • ಮೋದಿ ತೈಲ ಬೆಲೆ ಏರಿಕೆ ಮಾಡಿದಾಗ ಬಿಜೆಪಿಯವರು ಯಾಕೆ ಪ್ರತಿಭಟಿಸಲಿಲ್ಲ: ಎಂ.ಬಿ.ಪಾಟೀಲ್ ಪ್ರಶ್ನೆ

    ಮೋದಿ ತೈಲ ಬೆಲೆ ಏರಿಕೆ ಮಾಡಿದಾಗ ಬಿಜೆಪಿಯವರು ಯಾಕೆ ಪ್ರತಿಭಟಿಸಲಿಲ್ಲ: ಎಂ.ಬಿ.ಪಾಟೀಲ್ ಪ್ರಶ್ನೆ

    ಬೆಂಗಳೂರು: ತೈಲ ಬೆಲೆ ಏರಿಕೆ (Petrol-Diesel Price Hike) ವಿರೋಧಿಸಿ ಬಿಜೆಪಿ (BJP) ನಡೆಸಿದ ಸೈಕಲ್ ಪ್ರತಿಭಟನೆಗೆ ಸಚಿವ ಎಂ.ಬಿ ಪಾಟೀಲ್ (MB Patil) ಲೇವಡಿ ಮಾಡಿದ್ದಾರೆ. ಬಿಜೆಪಿ ಅವರು ಸೈಕಲ್ ತುಳಿಯಲಿ ಆರೋಗ್ಯಕ್ಕೆ ಒಳ್ಳೆಯದು ಎಂದು ಟೀಕಿಸಿದ್ದಾರೆ.

    ಬಿಜೆಪಿ ಪ್ರತಿಭಟನೆ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಯುಪಿಎ ಮನಮೋಹನ್ ಸಿಂಗ್ ಸರ್ಕಾರ ಇದ್ದಾಗ ಜಾಗತಿಕ ಮಾರ್ಕೆಟ್‌ನಲ್ಲಿ ಕಚ್ಚಾತೈಲ ಬೆಲೆ ಜಾಸ್ತಿ ಇತ್ತು. ಆಗಲೂ ತೈಲ ಬೆಲೆ ಕಡಿಮೆ ಇತ್ತು. ಮೋದಿ (Narendra Modi) ಸರ್ಕಾರ ಬಂದಾಗ ಕಚ್ಚಾತೈಲ ಬೆಲೆ ಕಡಿಮೆ ಆದರೂ ಮೋದಿ ಸರ್ಕಾರ ತೈಲಬೆಲೆ ಏರಿಕೆ ಮಾಡಿತ್ತು. ಆಗ ಯಾಕೆ ಬಿಜೆಪಿ ಅವರು ಪ್ರತಿಭಟನೆ ಮಾಡಿಲ್ಲ. ನಾವು 3 ರೂ. ಮಾತ್ರ ಜಾಸ್ತಿ ಮಾಡಿರೋದು. ಬೇರೆ ರಾಜ್ಯಗಳ ಜೊತೆ ನ್ಯಾಷನಲೈಸ್ ಮಾಡೋಕೆ ನಾವು ಏರಿಕೆ ಮಾಡಿದ್ದೇವೆ. ಬೆಲೆ ಏರಿಕೆ ಮಾಡಿದ್ದರೂ ಬೇರೆ ರಾಜ್ಯಕ್ಕಿಂತ ನಮ್ಮದು ಕಡಿಮೆ ಇದೆ ಎಂದು ಬೆಲೆ ಏರಿಕೆ ಸಮರ್ಥನೆ ಮಾಡಿಕೊಂಡರು. ಇದನ್ನೂ ಓದಿ: ತಮಿಳುನಾಡಿನಲ್ಲಿ ಕಳ್ಳಭಟ್ಟಿ ಸಾರಾಯಿ ಕುಡಿದು ಸಾವು – ಮೃತರ ಸಂಖ್ಯೆ 37ಕ್ಕೆ ಏರಿಕೆ!

    ಮೋದಿ ಸರ್ಕಾರದಲ್ಲಿ ಬೆಲೆ ಜಾಸ್ತಿ ಮಾಡಿದಾಗ ಮೋದಿ ಮುಂದೆ ಮಾತಾಡೋ ಧೈರ್ಯ ಇವರಿಗೆ ಇರಲಿಲ್ಲ. ಅವತ್ತು ಜಾಸ್ತಿ ಮಾಡಿದಾಗ ಯಾಕೆ ಜಾಸ್ತಿ ಮಾಡಿದ್ರಿ ಅಂತ ಮೋದಿಗೆ ಹೇಳಬೇಕಿತ್ತು. ನಮ್ಮ ರಾಜ್ಯದ ಸಂಸದರು ಮಾತಾಡಿಲ್ಲ. ಈಗ ಯಾಕೆ ಮಾತನಾಡುತ್ತಾರೆ. ಸುಮ್ಮನೆ ಬಿಜೆಪಿ ಅವರು ಸೈಕಲ್ ಪ್ರತಿಭಟನೆ ಮಾಡಿದ್ದಾರೆ. ಮಾಡಲಿ ಅದು ಅವರ ಆರೋಗ್ಯಕ್ಕೆ ಒಳ್ಳೆಯದು.ನಾವು ಕೂಡಾ ಹಣ ಕೂಡಿಸಬೇಕು. ಹೀಗಾಗಿ ಜಾಸ್ತಿ ಮಾಡಿದ್ದೇವೆ. ಅವತ್ತು ಮೋದಿ ಜಾಸ್ತಿ ಮಾಡಿದಾಗ ಅಶೋಕ್, ವಿಜೇಂದ್ರ ಹೋಗಿ ಯಾಕೆ ಕೇಳಲಿಲ್ಲ ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿದರು. ಇದನ್ನೂ ಓದಿ: ತೈಲ ದರ ಏರಿಕೆ ಖಂಡಿಸಿ ಸೈಕಲ್ ಜಾಥಾ – ವಿಜಯೇಂದ್ರ, ಅಶ್ವಥ್ ನಾರಾಯಣ್ ಸೇರಿ ಬಿಜೆಪಿ ನಾಯಕರು ವಶಕ್ಕೆ

  • ನಮಗೆ ಫ್ರೀ ಬೇಡ, ಹೆಚ್ಚುವರಿ ಬಸ್ ಓಡಿಸಿ: ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ವಿದ್ಯಾರ್ಥಿನಿ ಕ್ಲಾಸ್

    ನಮಗೆ ಫ್ರೀ ಬೇಡ, ಹೆಚ್ಚುವರಿ ಬಸ್ ಓಡಿಸಿ: ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ವಿದ್ಯಾರ್ಥಿನಿ ಕ್ಲಾಸ್

    – ಸರಿಯಾದ ಸಮಯಕ್ಕೆ ಬಸ್ ಬಿಡಿ ಎಂದು ಘರ್ಜನೆ

    ಉಡುಪಿ: ನಮಗೆ ಫ್ರೀ ಬಸ್ ಬೇಡ, ಹೆಚ್ಚುವರಿ ಬಸ್ಸುಗಳನ್ನು ಹಳ್ಳಿಯಲ್ಲಿ ಓಡಿಸಿ ಸಹಾಯ ಮಾಡಿ ಎಂದು ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ (Student Protest) ಮಾಡಿದ ಘಟನೆ ಉಡುಪಿ (Udupi) ಜಿಲ್ಲೆಯಲ್ಲಿ ನಡೆದಿದೆ.

    ಸರಿಯಾದ ಸಮಯಕ್ಕೆ ಓಡುವ ಹೆಚ್ಚುವರಿ ಬಸ್ಸುಗಳನ್ನು ಕೊಡಿ. ನಾವು ಪಾಸ್ ಮಾಡಿಸುತ್ತೇವೆ. ಹಣಕೊಟ್ಟು ಪ್ರಯಾಣ ಮಾಡುತ್ತೇವೆ ಎಂದು ಏರು ಧ್ವನಿಯಲ್ಲಿ ಉಡುಪಿ ಜಿಲ್ಲೆಯ ಬೈಂದೂರಿನ ವಿದ್ಯಾರ್ಥಿನಿ ಕೆಎಸ್‌ಆರ್‌ಟಿಸಿ ಅಧಿಕಾರಿ (KSRTC Officer) ಮುಂದೆ ಸಮಸ್ಯೆ ತೋಡಿಕೊಂಡಿದ್ದಾಳೆ. ಎಬಿವಿಪಿ (ABVP) ನೇತೃತ್ವದಲ್ಲಿ ಕುಂದಾಪುರದಲ್ಲಿ (Kundapura) ಪ್ರತಿಭಟನೆ ನಡೆದ ಸಂದರ್ಭ ತಮಗಾಗುವ ಬಸ್ ಸಮಸ್ಯೆಗಳ ವಿರುದ್ಧ ಸರ್ಕಾರದ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿದರು. ಉಚಿತ ಬಸ್ಸಿನಿಂದಾಗಿ ವಿದ್ಯಾರ್ಥಿಗಳು ಅಲೆದಾಡುವಂತಾಗಿದೆ. ಬೆಳಗ್ಗೆ, ಸಂಜೆ ಬಸ್ಸಿನಲ್ಲಿ ಸೀಟ್ ಸಿಗುವುದಿಲ್ಲ. ಸರಿಯಾದ ಸಮಯಕ್ಕೆ ಮನೆ ತಲುಪುವುದು ಕಷ್ಟವಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಹೆಚ್ಚುವರಿ ಬಸ್ಸುಗಳನ್ನು ಓಡಿಸಿ ಸಹಾಯ ಮಾಡಿ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಇನ್ನು 5 ದಿನ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆ

    ಈ ಕುರಿತು ವಿದ್ಯಾರ್ಥಿನಿಯೊಬ್ಬಳು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ವೀಡಿಯೋ ವೈರಲ್ ಆಗಿದೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ವಿದ್ಯಾರ್ಥಿಗಳ ಪ್ರಶ್ನೆಗೆ ಉತ್ತರ ಕೊಡಿ. ಅವರ ಸಮಸ್ಯೆಯನ್ನು ಕೇಳಿ, ಅದಕ್ಕೆ ಏನು ಪರಿಹಾರ ಕೊಡುತ್ತೀರಿ ಕೊಡಿ. ವಿದ್ಯಾರ್ಥಿಗಳಿಗೆ ಸಮಸ್ಯೆಯಾದರೆ ಅವರೊಂದಿಗೆ ಶಾಸಕನಾಗಿ ನಾನು ಕೂಡ ಮಕ್ಕಳೊಂದಿಗೆ ಪ್ರತಿಭಟನೆಯಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಎಚ್ಚರಿಸಿದರು. ಇದನ್ನೂ ಓದಿ: ಮೋದಿ 3.0 ಯುಗಾರಂಭಕ್ಕೆ ಕ್ಷಣಗಣನೆ – ರಾಷ್ಟ್ರಪತಿ ಭವನಕ್ಕೆ ಮೂರು ಹಂತದ ಭದ್ರತೆ!

    ಒಂದು ವಾರದ ಒಳಗೆ ಸಮಸ್ಯೆ ಬಗೆಹರಿಸದೆ ಇದ್ದರೆ ರಸ್ತೆ ತಡೆ ಮಾಡಿ ಪ್ರತಿಭಟಿಸುತ್ತೇವೆ ಎಂದು ಎಚ್ಚರಿಸಿದರು. ವಿದ್ಯಾರ್ಥಿಗಳ ಮನವಿಗೆ ಗೌರವಿಸಿ ಮೇಲಧಿಕಾರಿಗಳಿಗೆ ತಾಲೂಕಿನ ಸಮಸ್ಯೆಯನ್ನು ತಲುಪಿಸಿ ಎಂದು ಸೂಚಿಸಿದರು. ಇದನ್ನೂ ಓದಿ: ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಖರ್ಗೆ

  • ಜೈಶ್ರೀರಾಮ್‌ ಹಾಡು ಹಾಕಿದ್ದಕ್ಕೆ ಮಾರಾಮಾರಿ – ಹಿಂದೂ ವಿದ್ಯಾರ್ಥಿಗಳ ಮೇಲಿನ FIR ಕೈಬಿಡುವಂತೆ ಆಗ್ರಹ!

    ಜೈಶ್ರೀರಾಮ್‌ ಹಾಡು ಹಾಕಿದ್ದಕ್ಕೆ ಮಾರಾಮಾರಿ – ಹಿಂದೂ ವಿದ್ಯಾರ್ಥಿಗಳ ಮೇಲಿನ FIR ಕೈಬಿಡುವಂತೆ ಆಗ್ರಹ!

    – ಹಿಂದೂಪರ ಸಂಘಟನೆ, ಬಿಜೆಪಿ ಕಾರ್ಯಕರ್ತರಿಂದ ಶಕ್ತಿ ಪ್ರದರ್ಶನ

    ಬೀದರ್: ಇಲ್ಲಿನ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಜೈ ಶ್ರೀರಾಮ್ (Jai SriRam) ಹಾಡು ಹಾಕಿದ್ದಕ್ಕೆ 2 ವಿದ್ಯಾರ್ಥಿ‌ ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಈ ವೇಳೆ ಹಿಂದೂ ವಿದ್ಯಾರ್ಥಿಗಳ (Hindu Students) ಮೇಲೆ ದಾಖಲಾಗಿರುವ ಎಫ್‌ಐಆರ್‌ ಅನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಹಿಂದೂ ಪರ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳಿಂದ ಬೀದರ್‌ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

    ನಗರದ ಪ್ರವಾಸಿ ಮಂದಿರದ ಬಳಿ ಸೇರಿದ್ದ 300ಕ್ಕೂ ಅಧಿಕ ಹಿಂದೂ ಸಂಘಟನೆ ಕಾರ್ಯಕರ್ತರು ಅಂಬೇಡ್ಕರ್ ವೃತದಿಂದ ಡಿಸಿ ಕಚೇರಿ ವರೆಗೆ ಬೃಹತ್ ಪ್ರತಿಭಟನೆ (Protest) ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ರ‍್ಯಾಲಿಯಲ್ಲಿ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ‘ವಿಕೃತ ಕಾಮಿ, ಕೊನೆಯ ಉಸಿರಿರೋವರೆಗೂ ಶಿಕ್ಷೆ ನೀಡೋ ಕೇಸ್’- ಕೋರ್ಟ್‍ನಲ್ಲಿ ವಾದ, ಪ್ರತಿವಾದ ಹೇಗಿತ್ತು?

    ಈ ವೇಳೆ ಪ್ರತಿಭಟನಾಕಾರರನ್ನು ಜಿಲ್ಲಾಧಿಕಾರಿ ಕಚೇರಿಯ ಮುಖ್ಯ ದ್ವಾರದ ಬಳಿಯೇ ತಡೆದ ಪೊಲೀಸರು ಇಲ್ಲೇ ಮನವಿ ಸಲ್ಲಿಸುವಂತೆ ತಾಕೀತು ಮಾಡಿದರು. ಬಳಿಕ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ಪ್ರತಿಭಟನಾಕಾರರು, ಡಿಸಿ ಕಚೇರಿ ಮುಖ್ಯದ್ವಾರದ ಬಳಿಯೇ ಪ್ರತಿಭಟನೆ ನಡೆಸಲು ಮುಂದಾದರು. ಹಿಂದೂ ವಿದ್ಯಾರ್ಥಿಗಳ ಮೇಲಿನ ಎಫ್‌ಐಆರ್‌ ರದ್ದುಗೊಳಿಸದೇ ಇದ್ದರೆ ಜಿಲ್ಲೆಯಲ್ಲಿ ನಾವು ಶ್ರೀರಾಮನ ಅಭಿಯಾನ ಪ್ರಾರಂಭ ಮಾಡುತ್ತೇವೆ ಎಂದು ಪಟ್ಟು ಹಿಡಿದರು. ಬಳಿಕ ಡಿಸಿ ಗೋವಿಂದ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು. ಇದನ್ನೂ ಓದಿ: ಕಾಲೇಜಿನಲ್ಲಿ ಜೈ ಶ್ರೀರಾಮ್‌ ಹಾಡು ಹಾಕಿದ್ದಕ್ಕೆ ಮಾರಾಮಾರಿ- 17ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ FIR

    ಪ್ರತಿಭಟನಾ ಮೆರವಣಿಗೆಯಲ್ಲಿ ಶಾಸಕ ಶರಣು ಸಲಗರ್, ಎಂಎಲ್‌ಸಿ ರಘುನಾಥ್ ಮಲ್ಕಾಪೂರೆ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್ ಸೇರಿ ಹಿಂದೂ ಸಂಘಟನೆಯ ಪ್ರಮುಖರು ಭಾಗಿಯಾಗಿದ್ದರು. ಇದನ್ನೂ ಓದಿ: ನಿರೀಕ್ಷೆಗೂ ಮೀರಿ ಜಿಡಿಪಿ ಅಭಿವೃದ್ಧಿ – 4ನೇ ತ್ರೈಮಾಸಿಕದಲ್ಲಿ 7.8% , 2023-24 ಹಣಕಾಸು ವರ್ಷದಲ್ಲಿ 8.2% ಪ್ರಗತಿ

    ಏನಿದು ಪ್ರಕರಣ?
    ಬೀದರ್‌ ನಗರದ ಕಾಲೇಜು ಒಂದರಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಮಾರಾಮಾರಿ ನಡೆದು, ಹಿಂದೂ-ಮುಸ್ಲಿಂ ಸೇರಿದಂತೆ 17 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

  • ವಿಚಾರಣೆಗೆ ಬನ್ನಿ – ಹರೀಶ್‌ ಪೂಂಜಾ ಬಂಧನ ಮಾಡದೇ ತೆರಳಿದ ಪೊಲೀಸರು

    ವಿಚಾರಣೆಗೆ ಬನ್ನಿ – ಹರೀಶ್‌ ಪೂಂಜಾ ಬಂಧನ ಮಾಡದೇ ತೆರಳಿದ ಪೊಲೀಸರು

    – ಇದು ಕಾರ್ಯಕರ್ತರ ಗೆಲುವು ಎಂದ ಕಟೀಲ್‌
    – ಬೆಳಗ್ಗೆಯಿಂದ ಪೂಂಜಾ ನಿವಾಸದಲ್ಲಿ ಭಾರೀ ಹೈಡ್ರಾಮಾ

    ಮಂಗಳೂರು: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್‌ ಪೂಂಜಾ (Beltangady BJP MLA Harish Poonja) ಅವರನ್ನು ಬಂಧನ ಮಾಡದೇ ಇರಲು ಪೊಲೀಸರು ನಿರ್ಧರಿಸಿದ್ದಾರೆ. ನೋಟಿಸ್‌ ನೀಡಿ ವಿಚಾರಣೆಗೆ ಹಾಜರಾಗುವಂತೆ ಶಾಸಕರಿಗೆ ತಿಳಿಸಿ ತೆರಳಿದ್ದಾರೆ.

    ಸಂಜೆ ಮಾಧ್ಯಮಗಳ ಜೊತೆ ಮಾತನಾಡಿದ ಹರೀಶ್‌ ಪೂಂಜಾ, ಅಕ್ರಮ ಕಲ್ಲಿನ ಕೋರೆ ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾ (BJP Yuva Morcha) ಅಧ್ಯಕ್ಷ ಶಶಿಧರ್‌ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೂ ಶಶಿಧರ್‌ ಶೆಟ್ಟಿಗೂ ಯಾವುದೇ ಸಂಬಂಧವಿಲ್ಲ. ಉದ್ದೇಶಪೂರ್ವಕವಾಗಿ ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ಈ ಕಾರಣಕ್ಕೆ ನಾನು ಪ್ರತಿಭಟಿಸಿದ್ದೆ ಎಂದು ತಿಳಿಸಿದರು.

    ಅಂದು ಅಧಿಕಾರಕ್ಕಾಗಿ ಸಿದ್ದರಾಮಯ್ಯನವರು ಬಿದರಿ ಅವರ ಕಾಲರ್‌ ಪಟ್ಟಿ ಹಿಡಿದಿದ್ದರು. ನಾನು ಅಧಿಕಾರಕ್ಕೆ ಪೊಲೀಸರ ವಿರುದ್ಧ ಮಾತನಾಡಿಲ್ಲ. ಕಾರ್ಯಕರ್ತನ ಪರವಾಗಿ ನಾನು ಮಾತನಾಡಿದ್ದೇನೆ. ಅಮಾಯಕನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಾನೆ ಎಂಬ ಕಾರಣಕ್ಕೆ ಕೇಸ್‌ ಹಾಕಲಾಗಿದೆ. ಕಾಂಗ್ರೆಸ್‌ನ ದ್ವೇಷದ ರಾಜಕಾರಣವನ್ನು ನಾವು ಸಹಿಸುವುದಿಲ್ಲ ಎಂದು ಹೇಳಿದರು.

    ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿ, ದಕ್ಷಿಣ ಕನ್ನಡದ ಎಲ್ಲಾ ಬಿಜೆಪಿ ಶಾಸಕರು, ಹಾಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ ಇಲ್ಲಿಗೆ ಆಗಮಿಸಿದ್ದಾರೆ. ನೋಟಿಸ್‌ ನೀಡದೇ ಬಂಧನ ಮಾಡುವ ಪ್ರಯತ್ನ ನಡೆದಿತ್ತು. ಈಗ ನೋಟಿಸ್‌ ನೀಡಿ ಹೋಗಿದ್ದಾರೆ. ಮೊದಲ ಹಂತದ ಗೆಲುವು ಕಾರ್ಯಕರ್ಯರಿಗೆ ಮತ್ತು ಪೂಂಜಾ ಅವರಿಗೆ ಸಿಕ್ಕಿದೆ ಎಂದರು.

    ಇವತ್ತು ಬೆಳಗ್ಗೆಯೇ ಹರೀಶ್ ಪೂಂಜಾ ಬಂಧಿಸಲು ಪೊಲೀಸರು ಅವರ ಗರ್ಡಾಡಿಯ ಮನೆಗೆ ಬಂದಿದ್ದರು. ಹರೀಶ್ ಪೂಂಜಾ ಮಾತ್ರ ನಾನು ಬರುವುದಿಲ್ಲ ಎಂದು ಹೇಳಿದರು. ಹರೀಶ್ ಪೂಂಜಾ ಮಾತ್ರ ನಾನು ಬರುವುದಿಲ್ಲ ಎಂದು ಹೇಳಿದರು. ವಿಷಯ ತಿಳಿದ ಪೂಂಜಾ ಬೆಂಬಲಿಗರು ಭಾರೀ ಸಂಖ್ಯೆಯಲ್ಲಿ ಸೇರಿದರು.

    ಪೊಲೀಸರು ಮತ್ತು ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆಯುತ್ತಿದ್ದಂತೆ ಹರೀಶ್ ಪೂಂಜಾ ಮನೆಗೆ ಹೆಚ್ಚುವರಿ ಪೋಲಿಸರು ಆಗಮಿಸಿದರು. ಪುತ್ತೂರು ಡಿವೈಎಸ್ ಪಿ ಅರುಣ್ ನಾಗೇಗೌಡ ನೇತೃತ್ವದಲ್ಲಿ 150 ಕ್ಕೂ ಅಧಿಕ ಪೊಲೀಸ ಆಗಮಿಸಿದರು. ಆದರೆ ಪೊಲಿಸರನ್ನು ಮನೆಯ ಒಳಗೆ ಹೋಗಲು ಕಾರ್ಯಕರ್ತರು ಬಿಡಲಿಲ್ಲ.

    ಈ ಸಂದರ್ಭದಲ್ಲಿ ಡಿವೈಎಸ್‌ಪಿ ಹಾಗೂ ಸರ್ಕಲ್ ಪೋಲಿಸ್ ಅಧಿಕಾರಿಗಳು ಹರೀಶ್‌ ಪೂಂಜಾ ಜೊತೆ ಮಾತುಕತೆ ನಡೆಸಿದರು. ವಕೀಲರು ಸ್ಥಳಕ್ಕೆ ಆಗಮಿಸಿ ನೋಟಿಸ್‌ ನೀಡದೇ ಬಂಧನ ಮಾಡುವುದು ಎಷ್ಟು ಸರಿ. ಈ ಪ್ರಕರಣಕ್ಕೆ ಜಾಮೀನು ರಹಿತ ಸೆಕ್ಷನ್‌ ಸೇರಿಸಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಬೆಳಗ್ಗೆಯಿಂದ ಸಂಜೆಯವರೆಗೂ ಭಾರೀ ಹೈಡ್ರಾಮಾ ನಡೆದು ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿ ಬಂಧನ ಮಾಡದೇ ತೆರಳಿದರು.

    ಶಾಸಕರು ಏನೋ ಉದ್ವೇಗದಿಂದ ಮಾತಾಡಿದ್ದಾರೆ. ಆದರೆ ದುರುದ್ದೇಶದಿಂದ ಕೂಡಿಲ್ಲ. ಇದನ್ನೇ ನೆಪ ಮಾಡಿಕೊಂಡು ಶಾಸಕರ ಬಂಧನಕ್ಕೆ ಮುಂದಾಗಿರುವುದು ಸರಿಯಲ್ಲ. ಮುಂದೆ ಆಗುವ ಅನಾಹುತಗಳಿಗೆ ಪೊಲೀಸರೇ ಹೊಣೆಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದರು.

     

    ಹರೀಶ್‌ ಪೂಂಜಾ ಅವರನ್ನು ಬಂಧನ ಮಾಡಿದರೆ ನಾಳೆ ದಕ್ಷಿಣ ಕನ್ನಡ ಬಂದ್‌ಗೆ ಕರೆ ನೀಡಲಾಗುವುದು ಎಂದು ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದರು.

    ಏನಿದು ಪ್ರಕರಣ?
    ಅನುಮತಿ ಪಡೆಯದೇ ಪ್ರತಿಭಟನೆ (Protest) ನಡೆಸಿ ಬೆಳ್ತಂಗಡಿ ಪೊಲೀಸರಿಗೆ ಬೆದರಿಕೆ ಅರೋಪದ ಮೇಲೆ ಹರೀಶ್ ಪೂಂಜಾ ವಿರುದ್ಧ ಕೇಸ್ ದಾಖಲಾಗಿತ್ತು. ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ದ ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸ್ತೇನೆ ಎಂದು ಹರೀಶ್ ಪೂಂಜಾ ಬೆದರಿಕೆ ಹಾಕಿದ್ದರು. ಈ ಸಂಬಂಧ ಬೆಳ್ತಂಗಡಿ ಬಿಜೆಪಿ ಶಾಸಕರ ವಿರುದ್ಧ ಐಪಿಸಿ 143, 147, 341, 504, 506 ಜೊತೆಗೆ 149 ಸೆಕ್ಷನ್‌ಗಳ ಅಡಿ ಒಟ್ಟು ಎರಡು ಕೇಸ್ ದಾಖಲಾಗಿತ್ತು.

  • ಹರೀಶ್‌ ಪೂಂಜಾ ಬಂಧನಕ್ಕೆ ಮುಂದಾದ ಪೊಲೀಸರು – ಬೆಳ್ತಂಗಡಿಯಲ್ಲಿ ಹೈಡ್ರಾಮಾ

    ಹರೀಶ್‌ ಪೂಂಜಾ ಬಂಧನಕ್ಕೆ ಮುಂದಾದ ಪೊಲೀಸರು – ಬೆಳ್ತಂಗಡಿಯಲ್ಲಿ ಹೈಡ್ರಾಮಾ

    ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ಬಂಧನಕ್ಕೆ ಪೊಲೀಸರು ಮುಂದಾಗಿದ್ದು, ಬೆಳ್ತಂಗಡಿಯಲ್ಲಿ (Belthangady) ಇಡೀ ದಿನ ಭಾರೀ ಹೈಡ್ರಾಮಾ ನಡೆಯಿತು.

    ಇವತ್ತು ಬೆಳಗ್ಗೆಯೇ ಹರೀಶ್ ಪೂಂಜಾ ಬಂಧಿಸಲು ಪೊಲೀಸರು ಅವರ ಗರ್ಡಾಡಿಯ ಮನೆಗೆ ಬಂದಿದ್ದರು. ಹರೀಶ್ ಪೂಂಜಾ ಮಾತ್ರ ನಾನು ಬರುವುದಿಲ್ಲ ಎಂದು ಹೇಳಿದರು. ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ ಕಾರಣ  ಭಾರೀ ಸಂಖ್ಯೆಯಲ್ಲಿ ಪೊಲೀಸರು ಸಹ ಆಗಮಿಸಿದ್ದರು.   ಇನ್ನೊಂದು ಕಡೆ ವಕೀಲರು ಸಹ ಮನೆಗೆ ಆಗಮಿಸಿದರು.

    ವಿಷಯ ತಿಳಿದ ಪೂಂಜಾ ಬೆಂಬಲಿಗರು ಭಾರೀ ಸಂಖ್ಯೆಯಲ್ಲಿ ಸೇರಿದರು. ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟಾ (Brijesh Chauta) ಸೇರಿ ಹಲವರು ಆಗಮಿಸಿದರು. ಯಾವುದೇ ಕಾರಣಕ್ಕೂ ಪೂಂಜಾ ಬಂಧಿಸಬಾರದು. ಪೊಲೀಸರು ವಾಪಸ್ ಹೋಗ್ಬೇಕು ಎಂದು ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದರು.

    ಉದ್ದೇಶಪೂರ್ವಕವಾಗಿ ಪೂಂಜಾರನ್ನು ಜೈಲಿಗೆ ಕಳಿಸುವ ಷಡ್ಯಂತ್ರ ನಡೆದಿದೆ ಎಂದು ಆಕ್ರೋಶ ಹೊರಹಾಕಿದರು. ಶಾಸಕರು ಏನೋ ಉದ್ವೇಗದಿಂದ ಮಾತಾಡಿದ್ದಾರೆ. ಆದರೆ ದುರುದ್ದೇಶದಿಂದ ಕೂಡಿಲ್ಲ. ಇದನ್ನೇ ನೆಪ ಮಾಡಿಕೊಂಡು ಶಾಸಕರ ಬಂಧನಕ್ಕೆ ಮುಂದಾಗಿರೋದು ಸರಿಯಲ್ಲ. ಮುಂದೆ ಆಗುವ ಅನಾಹುತಗಳಿಗೆ ಪೊಲೀಸರೇ ಹೊಣೆ ಆಗ್ತಾರೆ ಎಂದು ಬಿಜೆಪಿ ಎಚ್ಚರಿಕೆ ನೀಡಿತ್ತು.

     

    ಪ್ರತಿಭಟನೆ ಜೋರಾಗುತ್ತಿದ್ದಂತೆ ಪೊಲೀಸರು ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿ  ಹರೀಶ್‌ ಪೂಂಜಾ ಅವರಿಗೆ ನೋಟಿಸ್‌ ಜಾರಿ ಮಾಡಿ ತೆರಳಿದರು.

    ಅನುಮತಿ ಪಡೆಯದೇ ಪ್ರತಿಭಟನೆ (Protest) ನಡೆಸಿ ಬೆಳ್ತಂಗಡಿ ಪೊಲೀಸರಿಗೆ ಬೆದರಿಕೆ ಅರೋಪದ ಮೇಲೆ ಹರೀಶ್ ಪೂಂಜಾ ವಿರುದ್ಧ ಕೇಸ್ ದಾಖಲಾಗಿತ್ತು. ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ದ ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸ್ತೇನೆ ಎಂದು ಹರೀಶ್ ಪೂಂಜಾ ಬೆದರಿಕೆ ಹಾಕಿದ್ದರು.

    ಈ ಸಂಬಂಧ ಬೆಳ್ತಂಗಡಿ ಬಿಜೆಪಿ ಶಾಸಕರ ವಿರುದ್ಧ ಐಪಿಸಿ 143, 147, 341, 504, 506 ಜೊತೆಗೆ 149 ಸೆಕ್ಷನ್‌ಗಳ ಅಡಿ ಒಟ್ಟು ಎರಡು ಕೇಸ್ ದಾಖಲಾಗಿತ್ತು.

     

  • ರಾಜ್ಯದಲ್ಲಿ ಮಹಿಳೆಯರಿಗೆ ಶೂನ್ಯ ಸುರಕ್ಷತೆ ಗ್ಯಾರಂಟಿ – ಬಳ್ಳಾರಿಯಲ್ಲಿ ಬಿಜೆಪಿ ಪ್ರತಿಭಟನೆ

    ರಾಜ್ಯದಲ್ಲಿ ಮಹಿಳೆಯರಿಗೆ ಶೂನ್ಯ ಸುರಕ್ಷತೆ ಗ್ಯಾರಂಟಿ – ಬಳ್ಳಾರಿಯಲ್ಲಿ ಬಿಜೆಪಿ ಪ್ರತಿಭಟನೆ

    ಬಳ್ಳಾರಿ: ಕಳೆದ ಹತ್ತು ದಿನಗಳ ಅಂತರದಲ್ಲಿ ಹುಬ್ಬಳ್ಳಿಯಲ್ಲಿ (Hubballi) ಇಬ್ಬರು ಯುವತಿಯ ಹತ್ಯೆ ಸೇರಿದಂತೆ ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ (Congress Government) ವಿಫಲವಾಗಿದೆ ಎಂದು ಆರೋಪಿಸಿ ಬಳ್ಳಾರಿ ಬಿಜೆಪಿ (BJP) ಮಹಿಳಾ ಘಟಕದಿಂದ ಪ್ರತಿಭಟನೆ (Protest) ಮಾಡಲಾಯಿತು.

    ರಾಜ್ಯ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಶೂನ್ಯ ಸುರಕ್ಷತೆ ಗ್ಯಾರಂಟಿ ಎಂಬ ಹೊಸ ಯೋಜನೆ ಜಾರಿಗೊಳಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮಹಿಳೆಯರ ನೆಮ್ಮದಿ ಯಿಂದ ಬದಕಲು ದುಸ್ತರವಾಗಿದೆ ಎಂದು ಆರೋಪಿಸಿದರು.

     

    ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್‌ (Neha Hiremath) ಮತ್ತು ಅಂಜಲಿ (Anjali) ಕೊಲೆ ಹಾಡಹಗಲೇ ನಡೆದಿವೆ. ಕೊಲೆಗಡುಕರಿಗೆ ಪೊಲೀಸರ ಭಯವಿಲ್ಲದೇ ಇರುವುದರಿಂದ ಪ್ರತಿ ನಿತ್ಯ ರಾಜ್ಯದ ಒಂದಲ್ಲೊಂದು ಕಡೆ ಕೊಲೆ, ಸುಲಿಗೆ ಮತ್ತು ಅತ್ಯಾಚಾರ ಮುಂತಾದವು ನಡೆಯುತ್ತಿವೆ ಎಂದು ದೂರಿದರು.  ಇದನ್ನೂ ಓದಿ: 18 ರನ್, 18.1 ಓವರ್, ಕೊಹ್ಲಿ ಜೆರ್ಸಿ ನಂ.18 – ಮೇ 18ರಂದು ಸೋಲೇ ಕಾಣದ ಆರ್‌ಸಿಬಿಗೆ ಅಗ್ನಿಪರೀಕ್ಷೆ! 

    ಕೆಲಸಕ್ಕೆ, ಕಾಲೇಜಿಗೆ ಹೋದಂತಹ ಹೆಣ್ಣು ಮಕ್ಕಳು ಸುರಕ್ಷಿತವಾಗಿ ಮನೆಗೆ ಬರುತ್ತಾರೆಂಬ ನಂಬಿಕೆ ಇಲ್ಲವಾಗಿದೆ. ರಾಜ್ಯದಲ್ಲಿ ಕ್ರೈಂ ತಡೆಯುವಲ್ಲಿ ವಿಫಲವಾದ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

     

  • ಸಂಬಳ ಪಾವತಿ ಮಾಡದ್ದಕ್ಕೆ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರಿಂದ ದಿಢೀರ್‌ ಪ್ರತಿಭಟನೆ

    ಸಂಬಳ ಪಾವತಿ ಮಾಡದ್ದಕ್ಕೆ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರಿಂದ ದಿಢೀರ್‌ ಪ್ರತಿಭಟನೆ

    – ಶಾಂತಿನಗರ ಡಿಪೋ ಮುಂದೆ ಚಾಲಕರಿಂದ ಪ್ರೊಟೆಸ್ಟ್‌
    – ಅಧಿಕಾರಿಗಳ ಸಂಧಾನ ಯಶಸ್ವಿ, ಕರ್ತವ್ಯಕ್ಕೆ ಹಾಜರ್‌

    ಬೆಂಗಳೂರು: ಸಂಬಳ (Salary) ಪಾವತಿ ಮಾಡದ್ದಕ್ಕೆ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ (BMTC Electric Bus) ಚಾಲಕರು ದಿಢೀರ್‌ ಪ್ರತಿಭಟನೆ ನಡೆಸಿದ್ದಾರೆ. ಸರಿಯಾಗಿ ಸಂಬಳ ಪಾವತಿ ಮಾಡದ್ದಕ್ಕೆ ಪ್ರತಿಭಟಿಸಿದ ನೌಕರರು ಮಂಗಳವಾರ ಬೆಳಗ್ಗೆಯಿಂದ ಗಾಡಿಯನ್ನು ಹೊರಗಡೆ ತೆಗೆದಿರಲಿಲ್ಲ. ಕೊನೆಗೆ ಬಿಎಂಟಿಸಿ ಅಧಿಕಾರಿಗಳ ಸಂಧಾನ ಯಶಸ್ವಿಯಾದ ಬಳಿಕ ಚಾಲಕರು (Drivers) ಡಿಪೋದಿಂದ ಬಸ್ಸುಗಳನ್ನು ಹೊರಗಡೆ ತೆಗೆದಿದ್ದಾರೆ.

    ಶಾಂತಿನಗರ ಡಿಪೋ- 3 ರ (Shanti Nagar Depot) ಮುಂದೆ ಬಸ್ಸನ್ನು ಹೊರ ತೆಗೆಯದೇ ಪ್ರತಿಭಟಿಸಿದರು. ಶೀಘ್ರವೇ ಬಿಎಂಟಿಸಿ ಅಧಿಕಾರಿಗಳು ವೇತನ ನೀಡುವ ಭರವಸೆ ನೀಡಿದ ಬಳಿಕ ಮಧ್ಯಾಹ್ನ ಮುಷ್ಕರವನ್ನು ಹಿಂದಕ್ಕೆ ಪಡೆದು ಚಾಲಕರು ಕರ್ತವ್ಯಕ್ಕೆ ಹಾಜರಾದರು. ಇದನ್ನೂ ಓದಿ: ಬುರ್ಖಾ ತೆಗೆದು ವೋಟರ್‌ ಐಡಿ ತೋರಿಸಲು ಹೇಳಿದ ಮಾಧವಿ ಲತಾ ವಿರುದ್ಧ ಪ್ರಕರಣ ದಾಖಲು

     

    ಮುಷ್ಕರಕ್ಕೆ ಕಾರಣ ಏನು?
    ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗುತ್ತಿಗೆ ಆಧಾರದಲ್ಲಿ ಚಾಲಕರನ್ನು ನೌಕರರನ್ನಾಗಿ ತೆಗೆದುಕೊಳ್ಳಲಾಗಿದೆ. ಉದ್ಯೋಗ ನೀಡುವಾಗ ಪ್ರತಿ ತಿಂಗಳು 26,000 ರೂ. ಸಂಬಳ ನೀಡುವುದಾಗಿ ಕಂಪನಿ ಹೇಳಿತ್ತು. ಆದರೆ ಕೇವಲ 18,000 ರೂ. ಸಂಬಳ ನೀಡುತ್ತಿದೆ. ಆರಂಭದಲ್ಲಿ ಪಿಎಫ್‌ಗೆ ಹಣ ಕಡಿತ ಮಾಡಲಾಗುತ್ತದೆ ಎಂದು ಹೇಳಿತ್ತು. ಆದರೆ ಪಿಎಫ್‌ಗೆ ನಮ್ಮ ಹಣ ಕಡಿತವಾಗಿಲ್ಲ.

    ಮೊದಲ ಎರಡು ತಿಂಗಳು 2,000 ರೂ. ಕಡಿತ ಮಾಡಿದ್ದರೆ ಈಗ ಈ ತಿಂಗಳ ಸಂಬಳದಲ್ಲಿ 5,000 ರೂ. ಕಡಿತ ಮಾಡಲಾಗಿದೆ. ಈ ತಿಂಗಳು ಕೆಲವರಿಗೆ ಮಾತ್ರ ಸಂಬಳ ನೀಡಿದ್ದರೆ ಉಳಿದ ನೌಕರರಿಗೆ ಸಂಬಳವೇ ಆಗಿಲ್ಲ. ಆರಂಭದಲ್ಲಿ ಟಾಟಾ ಕಂಪನಿಯಲ್ಲಿ ಚಾಲಕರಾಗಿ ನೇಮಕ ಮಾಡಲಾಗುವುದು ಎಂದು ಹೇಳಿತ್ತು. ಆದರೆ ಈಗ ಆರ್ಯ ಹೆಸರಿನ ಕಂಪನಿಯಲ್ಲಿ ಕೆಲಸ ನೀಡಲಾಗಿದೆ. ವಸತಿ ನೀಡುತ್ತೇವೆ ಎಂದು ಹೇಳಿದ್ದರು. ಆದರೆ ನಮಗೆ ವಸತಿ ನೀಡಿಲ್ಲ ಎಂದು ಚಾಲಕರು ಆರೋಪಿಸಿದ್ದಾರೆ.

     

    ಬಿಎಂಟಿಸಿ ವ್ಯಾಪ್ತಿಗೆ ಬರಲ್ಲ
    ಡಿಪೋ- 3 ರಲ್ಲಿ 136 ಎಲೆಕ್ಟ್ರಿಕ್ ಬಸ್ಸುಗಳಿವೆ. ಮೂರು ಶಿಫ್ಟ್ ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರು ಕೆಲಸ ಮಾಡುತ್ತಿದ್ದಾರೆ. ಈ ಎಲೆಕ್ಟ್ರಿಕ್ ಬಸ್ ಚಾಲಕರು ಬಿಎಂಟಿಸಿ ಸಂಸ್ಥೆಯ ಅಧೀನಕ್ಕೆ ಒಳಪಡುವುದಿಲ್ಲ. ಎಲೆಕ್ಟ್ರಿಕ್ ಬಸ್ ನೋಡಿಕೊಳ್ಳುವ ಕಂಪನಿಯೇ ಚಾಲಕರನ್ನು ನೇಮಕ ಮಾಡಿಕೊಳ್ಳಬೇಕೆಂಬ ನಿಯಮವಿದೆ. ಈ ಕಾರಣಕ್ಕೆ ಖಾಸಗಿ ಕಂಪನಿಯ ಮಾನಂದಂಡಕ್ಕೆ ಅನುಗುಣವಾಗಿ ಸಂಬಳ ನಿಗದಿ ಮಾಡಿದೆ.

  • ಹಣ ಪಡೆದು ಬೆತ್ತಲೆ ನಾಟಕ: ನಟಿ ಶ್ರೀರೆಡ್ಡಿ ರಹಸ್ಯ ಬಯಲು

    ಹಣ ಪಡೆದು ಬೆತ್ತಲೆ ನಾಟಕ: ನಟಿ ಶ್ರೀರೆಡ್ಡಿ ರಹಸ್ಯ ಬಯಲು

    ನಗೆ ಅನ್ಯಾಯವಾಗಿದೆ,  ಲೈಂಗಿಕ ಶೋಷಣೆಗೆ ಒಳಗಾಗಿದ್ದೇನೆ ಎಂದು ಹಲವಾರು ಬಾರಿ ತೆಲುಗು ನಿರ್ಮಾಪಕರ ಸಂಘ, ಕಲಾವಿದರ ಸಂಘದ ಮುಂದೆ ಬೆತ್ತಲೆಯಾಗಿ ಪ್ರತಿಭಟನೆ (Protest) ಮಾಡಿದ್ದ ನಟಿ ಶ್ರೀರೆಡ್ಡಿ (Srireddy) ಕುರಿತಾಗಿ ಆಘಾತಕಾರಿ ಸುದ್ದಿಯೊಂದು ಬಂದಿದೆ. ಬೇರೆಯವರಿಂದ ಹಣ ಪಡೆದುಕೊಂಡು ಹೀಗೆ ಬೆತ್ತಲೆ (Bettale) ನಾಟಕ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಶೀಘ್ರವೇ ಹೊರ ಹಾಕಲಾಗುವುದು ಎಂದು ಉದ್ಯಮದವರು ಹೇಳುತ್ತಿದ್ದಾರೆ.

    ಶ್ರೀರೆಡ್ಡಿ ಈ ಹಿಂದೆ ಮೀಟೂ ಆರೋಪ ಮಾಡಿದ್ದರು. ಅದರಲ್ಲೂ ನರೇಶ್ ಮತ್ತು ಪವಿತ್ರಾ ಲೋಕೇಶ್ ಪ್ರಕರಣದಲ್ಲಿ ಪ್ರತಿಕ್ರಿಯೆ ನೀಡಿದ್ದರು. ಈ ಹಿಂದೆ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರೆಡ್ಡಿ ಬೆತ್ತಲೆ ಪ್ರತಿಭಟನೆ ಮಾಡಿದ್ದರು ಈ ಸಂದರ್ಭವನ್ನು ನೆನಪಿಸಿಕೊಂಡು ಲೈವ್ ಮಾಡಿದ್ದ ಶ್ರೀರೆಡ್ಡಿ ಮತ್ತೆ ನರೇಶ್ ಹಾಗೂ ಪವಿತ್ರಾ ವಿಷಯವನ್ನು ಪ್ರಸ್ತಾಪಿಸಿದ್ದರು. ‘ನಾನು ಮೀಟೂ ವಿರುದ್ಧ ಪ್ರತಿಭಟನೆ ನಡೆಸಿದಾಗ ನರೇಶ್‌, ಆ್ಯಸಿಡ್‌ನಿಂದ ಕೈ ತೊಳಯಬೇಕು ಎಂದು ಕಾಮೆಂಟ್ ಮಾಡಿದ್ದರು. ಈಗ ಅವರ ಸ್ಥಿತಿ ಏನಾಗಿದೆ ನೋಡಿ’ ಎಂದು ಕಾಮೆಂಟ್ ಮಾಡಿದ್ದರು.

    ಯಾರ ಬದುಕಿನಲ್ಲೂ ಯಾರು ಬಿರುಗಾಳಿ ಎಬ್ಬಿಸಬಾರದು ಎಂದು ಪರೋಕ್ಷವಾಗಿ ಪವಿತ್ರಾ ಲೋಕೇಶ್ ಕುರಿತಾಗಿಯೂ ಮಾತನಾಡಿದ್ದ ಶ್ರೀರೆಡ್ಡಿ, ರಮ್ಯಾ ಅವರ ಜೀವನವನ್ನು ಹಾಳು ಮಾಡುವ ಹಕ್ಕು ಯಾರಿಗೂ ಇಲ್ಲ. ಅಲ್ಲದೇ, ಮಹಿಳೆ ಅಂದಾಕ್ಷಣ ಅವರ ಶೀಲವನ್ನು ಶಂಕಿಸಲಾಗುತ್ತದೆ. ರಮ್ಯಾ ಮೇಲೂ ಅದೇ ಆಗಿದೆ. ಆದರೆ, ನಿಜವಾಗಿಯೂ ಜನರ ಮುಂದೆ ಬೆತ್ತಲೆ ಆದವರು ಯಾರು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ನರೇಶ್ ಅವರನ್ನು ಕೇಳಿದ್ದರು.

     

    ಶ್ರೀರೆಡ್ಡಿ ಲೈವ್ ಗೆ ಬಂದು ಮತ್ತೆ ಹಲವು ಕಲಾವಿದರ ಹೆಸರುಗಳನ್ನು ಬಹಿರಂಗ ಪಡಿಸಿದ್ದರು. ಅವರು ಜೀವನವೂ ಇದೇ ಹಾದಿಯಲ್ಲಿದೆ. ಮುಂದೆ ಜನರಿಗೂ ಗೊತ್ತಾಗಲಿದೆ ಎಂದು ಅಬ್ಬರಿಸಿದ್ದರು. ಶ್ರೀರೆಡ್ಡಿ ಲೈವ್ ಗೆ ಬರುತ್ತಿದ್ದಂತೆಯೇ ಮೀಟೂ ಚಳವಳಿ ಮತ್ತೆ ಆರಂಭವಾಗಲಿದೆಯಾ ಅನ್ನುವ ಅನುಮಾನವನ್ನಂತೂ ಅವರು ಹುಟ್ಟು ಹಾಕಿದ್ದರು. ಇದೆಲ್ಲದ ಹಿಂದೆ ಹಣದ ವಾಸನೆ ಇದೆ ಎನ್ನಲಾಗುತ್ತಿದೆ.

  • ಮೋದಿ ಕಾರ್ಯಕ್ರಮ ಸ್ಥಳಕ್ಕೆ NSUI ಸಂಘಟನೆ ಮುತ್ತಿಗೆ ಯತ್ನ

    ಮೋದಿ ಕಾರ್ಯಕ್ರಮ ಸ್ಥಳಕ್ಕೆ NSUI ಸಂಘಟನೆ ಮುತ್ತಿಗೆ ಯತ್ನ

    – ಗೋ ಬ್ಯಾಕ್ ಮೋದಿ ಎಂದು ಧಿಕ್ಕಾರ

    ದಾವಣಗೆರೆ: ಮೋದಿ ಕಾರ್ಯಕ್ರಮ ಸ್ಥಳಕ್ಕೆ ಮುತ್ತಿಗೆ ಹಾಕಲು ಎನ್‌ಎಸ್‌ಯುಐ (NSUI) ಯತ್ನಿಸಿದ ಘಟನೆ ದಾವಣಗೆರೆಯ (Davanagere) ಅಂಬೇಡ್ಕರ್ ಸರ್ಕಲ್‌ನಲ್ಲಿ ನಡೆದಿದೆ.

    ಎನ್‌ಎಸ್‌ಯುಐ ಸಂಘಟನೆಯಿಂದ ಮೋದಿಗೆ (Narendra Modi) ಚೊಂಬು ಪ್ರದರ್ಶನಕ್ಕೆ ಯತ್ನಿಸಿದ್ದು, ಅಂಬೇಡ್ಕರ್ ಸರ್ಕಲ್‌ನಲ್ಲಿ ಪ್ರತಿಭಟನೆ (Protest) ನಡೆಸಿದ್ದಾರೆ. ಖಾಲಿ ಚೊಂಬು ಪೋಸ್ಟರ್ ಪ್ರದರ್ಶನ ಮಾಡುತ್ತಾ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ನೇಹಾ ಬದಲು ಮುಸ್ಲಿಂ ಸಾವಾಗಿದ್ರೆ ಸಿಎಂ ಹೆಲಿಕಾಪ್ಟರ್ ಇಳಿಸ್ತಿದ್ರು: ಯತ್ನಾಳ್

    ಪ್ರಧಾನಿ ಮೋದಿ ದಾವಣಗೆರೆಗೆ ಆಗಮಿಸುವ ಹಿನ್ನೆಲೆ ಗೋಬ್ಯಾಕ್ ಮೋದಿ ಎಂದು ಎನ್‌ಎಸ್‌ಯುಐ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ. ಸದ್ಯ ಪ್ರತಿಭಟನೆ ನಡೆಸಿ ಗದ್ದಲ ಎಬ್ಬಿಸಿದ ಎನ್‌ಎಸ್‌ಯುಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಕೇಸ್ – ನೊಂದ ಮಹಿಳೆಯಿಂದ ಮಹಿಳಾ ಆಯೋಗಕ್ಕೆ ದೂರು

  • ಬರ ಪರಿಹಾರ; ಕೇಂದ್ರದ ವಿರುದ್ಧ ಭಾನುವಾರ ಕಾಂಗ್ರೆಸ್ ಪ್ರತಿಭಟನೆ: ಡಿಕೆಶಿ

    ಬರ ಪರಿಹಾರ; ಕೇಂದ್ರದ ವಿರುದ್ಧ ಭಾನುವಾರ ಕಾಂಗ್ರೆಸ್ ಪ್ರತಿಭಟನೆ: ಡಿಕೆಶಿ

    ಬೆಂಗಳೂರು: ಬರ ಪರಿಹಾರದ (Drought Relief) ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ (Congress) ಭಾನುವಾರ ಬೆಳಗ್ಗೆ 9:30ಕ್ಕೆ ಪ್ರತಿಭಟನೆಗೆ (Protest) ನಿರ್ಧರಿಸಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

    ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾನುವಾರ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಕೇಂದ್ರದ ವಿರುದ್ಧ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ಬಹಳ ಕಡಿಮೆ ಬರ ಪರಿಹಾರ ಕೊಟ್ಟಿದ್ದಾರೆಂದು ಮಹಾತ್ಮ ಗಾಂಧಿ ಪ್ರತಿಮೆ ಎದುರು ನಮ್ಮ ಪಕ್ಷದ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಾನೂ ಭಾಗವಹಿಸುತ್ತೇನೆ ಎಂದರು. ಇದನ್ನೂ ಓದಿ: ಜಮೀರ್ ರೋಷಾವೇಶದ‌ ಭಾಷಣಕ್ಕೆ ಗ್ಲಾಸ್‌ ಪೀಸ್‌ ಪೀಸ್!

    223 ತಾಲೂಕುಗಳಲ್ಲಿ ಬರವಿದೆ. 120 ವರ್ಷಗಳ ಇತಿಹಾಸದಲ್ಲಿ ಹೀಗಾಗಿರಲಿಲ್ಲ. ಬೆಂಗಳೂರಿಗೆ ನೀರಿನ ಬವಣೆ ಹೆಚ್ಚಾಗಿತ್ತು. ಆದರೂ ಬವಣೆಯಾಗದಂತೆ ನಿರ್ವಹಿಸುತ್ತಿದ್ದೇವೆ. 56.9 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿತ್ತು. ಎನ್‌ಡಿಆರ್‌ಎಫ್ ನಾರ್ಮ್ಸ್ ಪ್ರಕಾರ ಡಿಕ್ಲೇರ್ ಮಾಡಿದ್ದೆವು. ಆಗಸ್ಟ್ನಲ್ಲೇ ಟೀಂ ಬಂದು ಪರಿಶೀಲಿಸಿತ್ತು. ನಾವು ಕಂಪ್ಲೀಟ್ ದಾಖಲೆ ಕೇಂದ್ರಕ್ಕೆ ಕೊಟ್ಟಿದ್ದೇವೆ. ಅಕ್ಟೋಬರ್ 20ರಂದು ಸಚಿವರು ಭೇಟಿ ಮಾಡಿದ್ದರು. ನವೆಂಬರ್‌ನಲ್ಲಿ ಸಿಎಂ, ಹೋಂ ಮಿನಿಸ್ಟರ್ ಭೇಟಿ ಮಾಡಿದ್ದರು. ಡಿಸೆಂಬರ್‌ನಲ್ಲಿ ಸಿಎಂ, ಕಂದಾಯ ಸಚಿವರು ಭೇಟಿ ಮಾಡಿದ್ದರು. ಅವರು ಹೈಲೆವೆಲ್ ಕಮಿಟಿ ಸಭೆ ಮಾಡುತ್ತೇವೆ ಎಂದರು. ಜನವರಿ 19ರಂದು ಸಿಎಂ ಪ್ರಧಾನಿಯನ್ನು ಭೇಟಿ ಮಾಡಿ ಬರ ಪರಿಹಾರಕ್ಕೆ ಮನವಿ ಮಾಡಿದ್ದರು. ಅಷ್ಟಾದರೂ ಬರ ಪರಿಹಾರವನ್ನು ಕೊಟ್ಟಿರಲಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಲೋಕಸಭಾ ಚುನಾವಣೆ: ಹನೂರು ಭಾಗದ ಒಂದು ಮತಗಟ್ಟೆಗೆ ಏ.29 ರಂದು ಮರು ಮತದಾನ

    ನರೇಗಾ 50 ದಿನಕ್ಕೆ ಹೆಚ್ಚಿಸುವಂತೆ ಬೇಡಿಕೆ ಇಟ್ಟಿದ್ದೆವು. ಅದನ್ನು ಅವರು ಮಾಡಲಿಲ್ಲ. ನಮ್ಮ ರಾಜ್ಯಕ್ಕೆ ಬಿಜೆಪಿ ಕೇಂದ್ರ ಸರ್ಕಾರ ದ್ರೋಹ ಮಾಡಿದೆ. ಮೊದಲೇ ಹಣ ಸಿಕ್ಕಿದ್ದರೆ ಎಷ್ಟು ಕಾಮಗಾರಿ ಮಾಡುತ್ತಿದ್ದೆವು. ಎಷ್ಟು ಉದ್ಯೋಗ ಸೃಷ್ಟಿ ಮಾಡುತ್ತಿದ್ದೆವು. ನಾರ್ಮ್ಸ್ ಪ್ರಕಾರ 18 ಸಾವಿರ ಕೋಟಿ ಬರಬೇಕು. ನಾವು ಕೇಳಿದ್ದು 18 ಸಾವಿರ ಕೋಟಿ. ನಮ್ಮ ತೆರಿಗೆ ನಮ್ಮ ಹಕ್ಕು. ಹೀಗಾಗಿ ನಾಳೆ ಧರಣಿಯನ್ನು ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಮೋದಿ ಮತ್ತೆ ಪ್ರಧಾನಿಯಾದ್ರೆ ಮುಸ್ಲಿಂ ಮೀಸಲಾತಿ ವಾಪಸ್: ಯತ್ನಾಳ್