Tag: ಪ್ರತಿಷ್ಠಾಪನೆ

  • ಭಾರತದ ಅತಿ ಎತ್ತರದ ಏಕಶಿಲಾ ಗಣೇಶನ ಮೂರ್ತಿ ಪ್ರತಿಷ್ಠಾಪನೆಗೆ ಬೆಂಗಳೂರಿನಲ್ಲಿ ಅಡಿಗಲ್ಲು

    ಭಾರತದ ಅತಿ ಎತ್ತರದ ಏಕಶಿಲಾ ಗಣೇಶನ ಮೂರ್ತಿ ಪ್ರತಿಷ್ಠಾಪನೆಗೆ ಬೆಂಗಳೂರಿನಲ್ಲಿ ಅಡಿಗಲ್ಲು

    ಬೆಂಗಳೂರು: ಭಾರತದ ಅತಿ ಎತ್ತರದ ಏಕಶಿಲಾ ಗಣಪನ ಮೂರ್ತಿ ಪ್ರತಿಷ್ಠಾಪನೆಗೆ ಅಡಿಗಲ್ಲು ಕಾರ್ಯಕ್ರಮ ಇಂದು ಬೆಂಗಳೂರಿನ ನಾಗವಾರದಲ್ಲಿ ನಡೆಯಿತು.

    ಸರಿ ಸುಮಾರು 32 ವರ್ಷಗಳ ಹಿಂದೆ ಏಕಶಿಲಾ ವಿಗ್ರಹದ ಕೆತ್ತನೆ ಕಾರ್ಯಕ್ಕೆ ಅಂದಿನ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ.ದೇವೇಗೌಡರು ಚಾಲನೆ ನೀಡಿದ್ದರು. ಸುಮಾರು 42 ಅಡಿ ಎತ್ತರದ ಏಕಶಿಲಾ ಪಂಚಮುಖಿ ನಾಗಲಿಂಗ ಗಣಪನ ವಿಗ್ರಹ ಇದಾಗಿದೆ. ಮೂರ್ತಿ ಕೆತ್ತನೆಗೆ ಮಾಲೂರಿನಿಂದ ಏಕಶಿಲೆ ತಂದು 40 ಕ್ಕೂ ಹೆಚ್ಚು ಶಿಲ್ಪಿಗಳು ಕೆತ್ತನೆ ಮಾಡಿದ್ದಾರೆ. ಇದನ್ನೂ ಓದಿ: ಆಂಧ್ರ ವ್ಯಕ್ತಿಯ ಕೈ ಹಿಡಿದ ಟರ್ಕಿ ಮಹಿಳೆ

    ಈಗ ಗಣೇಶನ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುವ ಕಾರ್ಯ ಬರದಿಂದ ಸಾಗುತ್ತಿದ್ದು, ಇಂದು ಗಣೇಶ ಮೂರ್ತಿಯ ಪ್ರತಿಷ್ಠಾಪನೆಗೆ ಅಡಿಗಲ್ಲು ಹಾಕುವ ಕಾರ್ಯವನ್ನು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಿದ್ದಾರೆ.

    ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ನಾಗವಾರ ಗ್ರಾಮದ ನಾಗಲಿಂಗ ಗಣಪತಿ ದೇವಾಲಯ ಆವರಣದಲ್ಲಿ ಭಾರತದ ಅತಿ ಎತ್ತರದ ಗಣಪನ ಮೂರ್ತಿ ಕೆಲವೇ ತಿಂಗಳಲ್ಲಿ ಭಕ್ತರ ದರ್ಶನಕ್ಕೆ ಮುಕ್ತವಾಗಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಅರುವನಹಳ್ಳಿ ಗ್ರಾಮದಿಂದ 42 ಅಡಿ ಎತ್ತರದ ಏಕಶಿಲೆಯನ್ನು ನಾಗವಾರದ ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ 1990ರಲ್ಲಿ ಬೃಹತ್ ಲಾರಿಯ ಮೂಲಕ ತರಲಾಗಿತ್ತು. ಇದನ್ನೂ ಓದಿ: ಕೋವಿಡ್‌ ಲಸಿಕೆಯ 4ನೇ ಬೂಸ್ಟರ್‌ ಡೋಸ್‌ಗೆ ಇಸ್ರೇಲ್‌ ಅನುಮೋದನೆ

    ಈಗ ಗಣಪತಿ ವಿಗ್ರಹ ಅಂತಿಮ ರೂಪ ಪಡೆದುಕೊಳ್ಳುತ್ತಿದೆ. ಮಹಾಬಲಿಪುರಂನ ಶಿಲ್ಪಿ ಅಂಬಿಕಾಪತಿ ನೇತೃತ್ವದಲ್ಲಿ ಗಣಪತಿಯ ಮೂರ್ತಿಯ ಕೆತ್ತನೆ ಕಾರ್ಯ ನಡೆದಿತ್ತು. ಏಕಶಿಲಾ ಗಣೇಶನ ಮೂರ್ತಿಗೆ ಪೂಜೆ ಸಲ್ಲಿಸಿ ಸಿದ್ದಗಂಗಾ ಸ್ವಾಮೀಜಿ ಅವರು ಅಡಿಗಲ್ಲು ಕಾರ್ಯಕ್ರಮ ನೆರವೇರಿಸಿದರು.

  • ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ

    ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ

    – ದೆಹಲಿ ಉದ್ಯಮಿಯಿಂದ ಬೆಳ್ಳಿ ವಿಗ್ರಹ ಸಮರ್ಪಣೆ

    ತುಮಕೂರು: ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.

    ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ ಪೀಠದ ಮೇಲೆ ಬೆಳ್ಳಿ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು.

    ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಗದ್ದುಗೆ ಪೀಠವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಪೀಠದ ಕೆಳಭಾಗದಲ್ಲಿ ಶ್ರೀಗಳ ಪಾದುಕೆ, ಸ್ವಲ್ಪ ಮೇಲ್ಭಾಗದಲ್ಲಿ ಶಿವಲಿಂಗ ಈಗಾಗಲೇ ಪ್ರತಿಷ್ಠಾಪನೆ ಮಾಡಲಾಗಿತ್ತು. ಶಿವಲಿಂಗದ ಹಿಂಭಾಗದ ಮೇಲ್ಭಾಗದಲ್ಲಿ ಶ್ರೀಗಳ ಭಾವಚಿತ್ರ ಇರಿಸಲಾಗಿತ್ತು. ಈ ಭಾವ ಚಿತ್ರ ತೆರವುಗೊಳಿಸಿ ಅದರ ಜಾಗದಲ್ಲಿ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗಿದೆ.

    ಗದ್ದುಗೆ ಪೀಠದಲ್ಲಿ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆಯಾಗುತ್ತಿದ್ದಂತೆ ಸಾಕ್ಷಾತ್ ಶಿವಕುಮಾರ ಶ್ರೀಗಳೇ ಬಂದು ಕುಂತ ಅನುಭವ ಭಕ್ತಾಧಿಗಳಲ್ಲಿ ಕಂಡಿದೆ. ಇಂದು ಶ್ರೀಗಳು ಲಿಂಗೈಕ್ಯರಾಗಿ 1 ವರ್ಷವಾಗಿದೆ. ಹಾಗಾಗಿ ಶ್ರೀಮಠದ ಭಕ್ತರಾದ ದೆಹಲಿ ಮೂಲದ ಉದ್ಯಮಿ ಮುಕೇಶ್ ಗರ್ಗ್ ಭಕ್ತಿಪೂರ್ವಕವಾಗಿ ಸಮರ್ಪಿಸಿದ ಬೆಳ್ಳಿ ವಿಗ್ರಹ ಇದಾಗಿದೆ.

  • ರಾಜ್ಯದಲ್ಲೇ ಪ್ರಪ್ರಥಮ ಪರಿಸರ ಸ್ನೇಹಿ ದಾರದ ವಿನಾಯಕನ ಪ್ರತಿಷ್ಠಾಪನೆ

    ರಾಜ್ಯದಲ್ಲೇ ಪ್ರಪ್ರಥಮ ಪರಿಸರ ಸ್ನೇಹಿ ದಾರದ ವಿನಾಯಕನ ಪ್ರತಿಷ್ಠಾಪನೆ

    ಚಿಕ್ಕಬಳ್ಳಾಪುರ: ಇಂದು ವಿಘ್ನ ವಿನಾಶಕ-ನಿವಾರಕ ವಿನಾಯಕ ಚೌತಿ ನಾಡಿನೆಲ್ಲಡೆ ಎಲ್ಲೆಲ್ಲೂ ಬಣ್ಣ-ಬಣ್ಣದ ಮಣ್ಣಿನಿಂದ ಮಾಡಲಾಗಿರುವ ಭಿನ್ನ-ವಿಭಿನ್ನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಸುತ್ತಾರೆ. ಆದರೆ ಇಲ್ಲೊಬ್ಬ ಟೈಲರ್ ಮಾತ್ರ ತಮ್ಮ ಕಸುಬಿಗೆ ತಕ್ಕ ಹಾಗೆ ಬಟ್ಟೆ, ದಾರ, ಬಂಗಾರ, ಬೆಳ್ಳಿ ಬಳಸಿ ಸುಂದರ ಗಣೇಶನನ್ನು ಬಿಡಿಸಿ ಪ್ರತಿಷ್ಠಾಪಿಸಿದ್ದಾರೆ.

    ಮಣ್ಣಿನ ಗಣಪನಾ ಎಲ್ಲರೂ ಪ್ರತಿಷ್ಠಾಪಿಸ್ತಾರೆ. ನಾವೇನಾದರೂ ಡಿಫ್ರೆಂಟ್ ಆಗಿ ಮಾಡಬೇಕು ಅಂದುಕೊಂಡ ಚಿಕ್ಕಬಳ್ಳಾಪುರ ನಗರದ ಟೆಂಕರ್ಸ್ ಟೈಲರ್ ಶಾಪ್ ಮಾಲೀಕ ಮುರುಳಿ ಬಟ್ಟೆಯ ಮೇಲೆ ಝರ್ದೋಸಿ, ಕುಂದನ್, ಹಾಗೂ ರೇಷ್ಮೆಯ ದಾರ ಬಳಸಿ ಕಸೂತಿ ಕಲೆಯ ಮೂಲಕ ವಿಘ್ನ ವಿನಾಯಕನನ್ನು ಬಿಡಿಸಿದ್ದಾರೆ. ವಿಶೇಷ ಅಂದರೆ ಗಣೇಶನಿಗೆ 50ಗ್ರಾಂ ಬೆಳ್ಳಿ ಸೇರಿದಂತೆ 10ಗ್ರಾಂ ಚಿನ್ನ ಸಹ ಬಳಸಿ ವಿನಾಯಕನನ್ನು ಪ್ರತಿಷ್ಠಾಪಿಸಿದ್ದಾರೆ. ಇದನ್ನೂ ಓದಿ: ಗಣೇಶ ಚತುರ್ಥಿಗೆ ಸಂಬಂಧಿಸಿದ ಸುದ್ದಿ ಓದಲು ಕ್ಲಿಕ್ ಮಾಡಿ

    8 ಪಾಯಿಂಟ್ 5 ಅಡಿ ಎತ್ತರ ಹಾಗೂ 6 ಪಾಯಿಂಟ್ 5 ಅಡಿ ಅಗಲ ಇರುವ ಈ ಗಣೇಶನ ಸುತ್ತಲೂ 12 ರಾಶಿಗಳನ್ನು ಸಹ ಬಿಡಿಸಲಾಗಿದೆ. ತಮ್ಮ ಆರು ಮಂದಿ ನುರಿತ ಕೆಲಸಗಾರರ ಜೊತೆ 1 ತಿಂಗಳ ನಿರಂತರ ಶ್ರಮ ಹಾಕಿರುವ ಟೈಲರ್ ಮುರುಳಿ ಸರಿಸುಮಾರು 3 ಲಕ್ಷ ರೂ. ಗಳನ್ನು ಖರ್ಚು ಮಾಡಿ ಈ ಗಣೇಶನನ್ನು ಬಿಡಿಸಿದ್ದಾರೆ. ಸದ್ಯ ಈ ದಾರದ ಗಣೇಶನನ್ನು ನೋಡುಗರ ಮನ ಸೆಳೆಯುತ್ತಿದೆ.

    ಕಳೆದ ಬಾರಿಯೂ ಸಹ ಟೈಲರ್ ಮುರುಳಿ 5 ಅಡಿ ಅಗಲ 5 ಅಡಿ ಉದ್ದದ ರೇಷ್ಮೆ ದಾರದ ಗಣಪನನ್ನು ಸಿದ್ಧಪಡಿಸಿ ಪ್ರತಿಷ್ಠಾಪಿಸಿ ಕೊನೆಗೆ ಅದನ್ನು ಶ್ರೀ ಧರ್ಮಸ್ಥಳದ ಮಂಜುನಾಥ ಸನ್ನಿಧಿಗೆ ಕೊಡುಗೆಯಾಗಿ ನೀಡಿದರು. ಈ ಬಾರಿಯೂ ಸಹ ಯಾವುದಾದರೂ ದೇವಾಲಯಕ್ಕೆ ಈ ವಿಘ್ನೇಶ್ವರನನ್ನು ಉಡುಗೊರೆ ನೀಡೋಕೆ ಟೈಲರ್ ಮುರುಳಿ ನಿರ್ಧರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv