Tag: ಪ್ರತೀಕ್ ಶೆಟ್ಟಿ

  • ‘ನಿಮ್ಮೆಲ್ಲರ ಆರ್ಶೀರ್ವಾದ’ಕ್ಕಾಗಿ ಹೊಸಬರ ಭಿನ್ನ ಪ್ರಯತ್ನ- ಚಿತ್ರದ ಪೋಸ್ಟರ್‌ ಔಟ್

    ‘ನಿಮ್ಮೆಲ್ಲರ ಆರ್ಶೀರ್ವಾದ’ಕ್ಕಾಗಿ ಹೊಸಬರ ಭಿನ್ನ ಪ್ರಯತ್ನ- ಚಿತ್ರದ ಪೋಸ್ಟರ್‌ ಔಟ್

    ಚಿತ್ರರಂಗವೇ ಹರಿಯುವ ನೀರಿನ ಹಾಗೇ. ಹೊಸಬರ ಎಂಟ್ರಿಯಾಗುತ್ತಲೇ ಇರುತ್ತದೆ. ಗೆದ್ದವರು ಚಿತ್ರರಂಗದಲ್ಲಿ ಗಟ್ಟಿ ನೆಲೆ ಗಿಟ್ಟಿಸಿಕೊಳ್ಳುತ್ತಾರೆ. ಇದೀಗ ನಿಮ್ಮೆಲ್ಲರ ಆರ್ಶೀರ್ವಾದಕ್ಕಾಗಿಯೇ ಹೊಸಬರ ತಂಡವೊಂದು ಭಿನ್ನವಾಗಿರೋ ಟೈಟಲ್ ಹೊತ್ತು ‘ನಿಮ್ಮೆಲ್ಲರ ಆರ್ಶೀರ್ವಾದ’ (Nimmelara Ashirvada) ಚಿತ್ರದ ಮೂಲಕ ಬರುತ್ತಿದ್ದಾರೆ. ಸದ್ಯ ಚಿತ್ರದ ಫಸ್ಟ್ ಲುಕ್ ಎಲ್ಲೆಡೆ ಸದ್ದು ಮಾಡ್ತಿದೆ.‌ ಇದನ್ನೂ ಓದಿ:‘ಕೃಷ್ಣಂ ಪ್ರಣಯ ಸಖಿ’ಯಾಗಿ ಲವರ್‌ ಬಾಯ್‌ ಲುಕ್‌ನಲ್ಲಿ ಗೋಲ್ಡನ್‌ ಸ್ಟಾರ್‌ ಎಂಟ್ರಿ

    ವರುಣ್ ಸಿನಿ ಕ್ರಿಯೇಷನ್ಸ್ ಚೊಚ್ಚಲ ಹೆಜ್ಜೆ ‘ನಿಮ್ಮೆಲ್ಲರ ಆರ್ಶೀರ್ವಾದ’ ಸಿನಿಮಾ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸ ಮುಗಿಸಿ ಬಿಡುಗಡೆಗೆ ಹಂತಕ್ಕೆ ಬಂದಿದೆ. ಯುವ ಸಿನಿ ಸಿನಿಮೋತ್ಸಾಹಿಗಳೇ ಸೇರಿಕೊಂಡು ತಯಾರಿಸಿರುವ ಈ ಚಿತ್ರಕ್ಕೆ ವರುಣ್ ಹೆಗ್ಡೆ ಹಣ ಹಾಕಿದ್ದು, ಇದು ಇವರ ಮೊದಲ ಪ್ರಯತ್ನವಾಗಿದೆ. ಚಿತ್ರರಂಗದ ಮೇಲಿನ ಅಪಾರ ಅಭಿಮಾನ ಹಾಗೂ ಆಸಕ್ತಿಯಿಂದಾಗಿ ವರುಣ್ ಹೆಗ್ಡೆ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಈ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿದ್ದು, ನೋಡುಗರ ಗಮನ ಸೆಳೆಯುತ್ತಿದೆ.

    ಕೌಟುಂಬಿಕ ಕಥಾಹಂದರದ ‘ನಿಮ್ಮೆಲ್ಲರ ಆಶೀರ್ವಾದ’ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ವೃತ್ತಿ ಬದುಕು ಮತ್ತು ವೈಯಕ್ತಿಕ ಬದುಕಿನ ದಿನಚರಿಯನ್ನು ವಿಭಿನ್ನವಾಗಿ ಕಟ್ಟಿಕೊಡಲಾಗಿದೆ. ಈ ಚಿತ್ರದ ಮೂಲಕ ಪ್ರತೀಕ್ ಶೆಟ್ಟಿ (Pratheek Shetty) ನಾಯಕನಾಗಿ ಸ್ಯಾಂಡಲ್‌ವುಡ್‌ಗೆ (Sandalwood) ಪದಾರ್ಪಣೆ ಮಾಡಿದ್ದು, ಭಿನ್ನ ಸಿನಿಮಾ ಖ್ಯಾತಿಯ ಪಾಯಲ್ ರಾಧಾಕೃಷ್ಣ ನಾಯಕಿಯಾಗಿ ನಟಿಸಿದ್ದಾರೆ. ಎಂ. ಎನ್.ಲಕ್ಷ್ಮೀದೇವಿ, ಅರವಿಂದ ಬೋಳಾರ್, ಗೋವಿಂದೇಗೌಡ, ಸ್ವಾತಿ ಗುರುದತ್, ದಿನೇಶ್ ಮಂಗಳೂರು ಸೇರಿದಂತೆ ಹಿರಿಯ ಹಾಗೂ ಅನುಭವಿ ಕಲಾದಂಡು ಚಿತ್ರದಲ್ಲಿದೆ.

    ಯುವ ನಿರ್ದೇಶಕ ರವಿಕಿರಣ್ ಆಕ್ಷನ್ ಕಟ್ ಹೇಳಿದ್ದು, ಸರವಣನ್ ಜಿ.ಎನ್.ಛಾಯಾಗ್ರಹಣ, ರಘು ನಿಡುವಳ್ಳಿ ಡೈಲಾಗ್, ರೂಪೇಂದ್ರ ಆಚಾರ್ ಕಲಾ ನಿರ್ದೇಶನ, ಸುನಾದ್ ಗೌತಮ್ ಸಂಗೀತ ಮತ್ತು ವಿವೇಕ್ ಚಕ್ರವರ್ತಿ ಹಿನ್ನೆಲೆ ಸಂಗೀತ, ಸುರೇಶ್ ಆರುಮುಗಂ ಸಂಕಲನ ಸಿನಿಮಾದ ಶ್ರೀಮಂತಿಕೆ ಹೆಚ್ಚಿಸಿದೆ. ಈಗಾಗಲೇ ಒಂದಷ್ಟು ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ನಿಮ್ಮೆಲ್ಲರ ಆಶೀರ್ವಾದ ಚಿತ್ರ ಇದೇ ತಿಂಗಳು ರಾಜ್ಯಾದ್ಯಂತ ತೆರೆಗಪ್ಪಳಿಸಲಿದೆ. ಅದಕ್ಕೂ ಮುನ್ನ ಚಿತ್ರತಂಡ ಇದೇ ವಾರ ಆಡಿಯೋ ಬಿಡುಗಡೆಗೆ ತಯಾರಿ ನಡೆಸಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರತೀಕ್ ಶೆಟ್ಟಿ ದೊಡ್ಡ ಡ್ರಗ್ಸ್ ಪೆಡ್ಲರ್ ಆಗಿದ್ದ: ಅಲೋಕ್ ಕುಮಾರ್

    ಪ್ರತೀಕ್ ಶೆಟ್ಟಿ ದೊಡ್ಡ ಡ್ರಗ್ಸ್ ಪೆಡ್ಲರ್ ಆಗಿದ್ದ: ಅಲೋಕ್ ಕುಮಾರ್

    – ದೊಡ್ಡ ಸೆಲೆಬ್ರಿಟಿಗಳಿಗೆ ಕೊಕೇನ್ ಮಾರಾಟ ಮಾಡುತ್ತಿದ್ದ

    ಬೆಂಗಳೂರು: ಸ್ಯಾಂಡಲ್‍ವುಡ್‍ಗೆ ಡ್ರಗ್ ಮಾಫಿಯಾ ನಂಟು ಇರೋದು ಸಿಸಿಬಿ ತನಿಖೆಯಿಂದ ಗೊತ್ತಾಗುತ್ತಿದೆ. ಇದರ ನಡುವೆಯೇ ಈ ಹಿಂದೆಯೇ ಪೆಡ್ಲರ್ ಪ್ರತೀಕ್ ಶೆಟ್ಟಿಯನ್ನು ಅರೆಸ್ಟ್ ಮಾಡಿದ್ದೇವು ಎಂದು ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅಲೋಕ್ ಕುಮಾರ್, 2018ರಲ್ಲೇ ಡ್ರಗ್ ಪೆಡ್ಲರ್ ಪ್ರತೀಕ್ ಶೆಟ್ಟಿ ಬಂಧನವಾಗಿತ್ತು. ಆದರೆ ಪ್ರತಿಕ್ ಶೆಟ್ಟಿ ಮತ್ತು ಕಾರ್ತಿಕ್ ರಾಜ್ ನಂಟಿನ ಬಗ್ಗೆ ಮಾಹಿತಿ ಲಭ್ಯವಾಗಿರಲಿಲ್ಲ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ. ಸದ್ಯ ಸಿಸಿಬಿ ಪೊಲೀಸರ ವಶದಲ್ಲಿರುವ ಕಾರ್ತಿಕ್ ರಾಜ್ ಮತ್ತು ಪೆಡ್ಲರ್ ಪ್ರತೀಕ್ ಶೆಟ್ಟಿ ಸೇರಿ ಸೆಲೆಬ್ರಿಟಿಗಳಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು ಎಂದು ಹೇಳಲಾಗಿದೆ.

    ಪತ್ರೀಕ್ ಬಂಧನ ವೇಳೆ ಆಫ್ರಿಕನ್ ಪೆಡ್ಲರ್ ಒಬ್ಬನಿಂದ ಆತ ಡ್ರಗ್ಸ್ ಪಡೆಯುತ್ತಿದ್ದ. ಆತನ ಮೂಲಕ ನಗರದ ಒಳ್ಳೆ ಮನೆತನದ ಹುಡುಗಿಯರು, ಸೆಲೆಬ್ರಿಟಿಗಳು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು. ಈ ಬಗ್ಗೆ ಮಾಹಿತಿ ಸಿಕ್ಕ ವೇಳೆ ನಾವು ವಿದ್ಯಾರ್ಥಿಗಳು, ಸೆಲೆಬ್ರಿಟಿಗಳು, ಉದ್ಯಮಿಗಳಿಗೆ ಡ್ರಗ್ಸ್ ಕುರಿತು ಎಚ್ಚರಿಕೆ ನೀಡಿದ್ದೇವು. ಬಂಧಿತರ ವಿರುದ್ಧ ಕಲಂ 27ರ ಅನ್ವಯ ಪ್ರಕರಣವನ್ನು ದಾಖಲಿಸಿದ್ದೇವು ಎಂದು ಹೇಳಿದ್ದಾರೆ.

    ಪ್ರೀತಿಕ್ ಶೆಟ್ಟಿ ಅಂಡ್ ಗ್ಯಾಂಗ್ ಇಂದಿರಾ ನಗರ, ಎಂ.ಜಿ ರೋಡ್ ಪಬ್ ಗಳಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿತ್ತು. ಆದರೆ ಕೆಲ ವಿಚಾರಗಳು ನಮ್ಮ ಗಮನಕ್ಕೆ ಬಂದರೂ ಅದನ್ನು ಸಾಬೀತು ಪಡಿಸಲು ನಮಗೇ ಸೂಕ್ತ ಸಾಕ್ಷಿ ಲಭ್ಯವಾಗಲಿಲ್ಲ. ಆದ್ದರಿಂದ ನಾವು ಅದನ್ನು ಬಹಿರಂಗವಾಗಿ ಪ್ರಸ್ತಾಪ ಮಾಡಿರಲಿಲ್ಲ. ಪ್ರತೀಪ್ ಶೆಟ್ಟಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ, ಕೆಲ ಗಣ್ಯರ ಜೊತೆ ಸಂಪರ್ಕವನ್ನು ಹೊಂದಿದ್ದ. ಆತನ ಬಂಧನದ ಬಳಿಕ ಡ್ರಗ್ಸ್ ದಂಧೆ ನಿಯಂತ್ರಣಕ್ಕೆ ಬಂದಿತ್ತು. ಸದ್ಯ ಪ್ರತಿಕ್ ಶೆಟ್ಟಿ ಮತ್ತು ಕಾರ್ತಿಕ್ ರಾಜ್ ನಂಟಿನ ಬಗ್ಗೆ ಮಾಹಿತಿ ಲಭ್ಯವಾಗಿರಲಿಲ್ಲ. ನಾವು ಯಾವುದೇ ಪ್ರಕರಣದಲ್ಲಿ ಸಾಕ್ಷಿ ಸಂಗ್ರಹಿಸದೆ ಅವರ ಹೆಸರು ಬಹಿರಂಗಗೊಳಿಸುವಂತಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.