Tag: ಪ್ರತ್ಯಕ್ಷದರ್ಶಿ

  • ಹೌದು, ಈ ಫೋಟೋದಲ್ಲಿರುವ ವ್ಯಕ್ತಿ ಕಾರಿನಲ್ಲಿದ್ದರು: ಪ್ರತ್ಯಕ್ಷದರ್ಶಿ

    ಹೌದು, ಈ ಫೋಟೋದಲ್ಲಿರುವ ವ್ಯಕ್ತಿ ಕಾರಿನಲ್ಲಿದ್ದರು: ಪ್ರತ್ಯಕ್ಷದರ್ಶಿ

    -ಅಪಘಾತದ ನಂತರ ಮತ್ತೊಂದು ಬ್ರ್ಯಾಂಡೆಡ್ ಕಾರಿನಲ್ಲಿ ಹೋದ್ರು

    ಬಳ್ಳಾರಿ: ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಚಾಲಕ ಯುವಕನಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಅಪಘಾತದ ವೇಳೆ ಪ್ರತ್ಯಕ್ಷದರ್ಶಿಯೊಬ್ಬರು ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

    ಪಬ್ಲಿಕ್ ಟಿವಿ ವರದಿಗಾರ ನವೀನ್ ಅವರು ಪ್ರತ್ಯಕ್ಷದರ್ಶಿಗೆ ಸಚಿವ ಆರ್. ಅಶೋಕ್ ಅವರ ಪುತ್ರ ಶರತ್ ಫೋಟೋವನ್ನು ತೋರಿಸಿ ಕಾರಿನಲ್ಲಿ ಈ ವ್ಯಕ್ತಿ ಇದ್ದರಾ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಪ್ರತ್ಯಕ್ಷದರ್ಶಿ ಹೌದು ಈ ಫೋಟೋದಲ್ಲಿರುವ ವ್ಯಕ್ತಿ ಕಾರಿನಲ್ಲಿ ಇದ್ದರು ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ಅಪಘಾತದ ಸುತ್ತ ಅನುಮಾನ: ಅಶೋಕ್ ಮಗ ಕೃತ್ಯ ಎಸಗಿ ಪರಾರಿ?ಪೊಲೀಸರಿಂದಲೇ ಬಚಾವ್?

    ಇದೇ ವೇಳೆ ಪ್ರತ್ಯಕ್ಷದರ್ಶಿ ಅಪಘಾತದ ಬಗ್ಗೆ ವಿವರಿಸಿದ್ದಾರೆ. ಇದು ಡಬಲ್ ರೋಡ್ ಆಗಿದ್ದು, ಒಂದು ಕಡೆಯಿಂದ ಇವರ ಕಾರು ಬರುತ್ತಿತ್ತು. ಮತ್ತೊಂದು ಕಡೆಯಲ್ಲಿ ಲಾರಿ ಬರುತ್ತಿತ್ತು. ದೊಡ್ಡ ಕಾರು ಎಂದರೆ ಮಾಮೂಲಿ ಸ್ಪೀಡ್ ಆಗಿ ಬರುತ್ತಿರುತ್ತೆ. ಹಾಗೆಯೇ ಸೋಮವಾರ ಈ ಕಾರು ಕೂಡ ಸ್ಪೀಡ್ ಆಗಿ ಬರುತ್ತಿತ್ತು. ಪಕ್ಕದಲ್ಲಿ ಲಾರಿ ಕೂಡ ಬರುತ್ತಿತ್ತು. ಈ ವೇಳೆ ಚಾಲಕ ಟೀ ಕುಡಿಯಲು ಎಂದು ತಕ್ಷಣ ತನ್ನ ಲಾರಿಯನ್ನು ಸೈಡ್‍ನಲ್ಲಿ ಪಾರ್ಕ್ ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಅಪಘಾತವಾದ ಕಾರಿಗೆ ನಮ್ಗೂ ಸಂಬಂಧವಿಲ್ಲ: ಅಡ್ಡಗೋಡೆಯ ಮೇಲೆ ದೀಪವಿಟ್ಟ ಅಶೋಕ್

    ಚಾಲಕ ತಕ್ಷಣ ಸೈಡಿನಲ್ಲಿ ಲಾರಿ ಪಾರ್ಕ್ ಮಾಡಿದ್ದನ್ನು ನೋಡಿದ ಕಾರು ಚಾಲಕ ನಾನು ಸ್ಪೀಡಾಗಿ ಬಂದರೆ ಅಪಘಾತವಾಗುತ್ತೆ ಎಂದು ತಿಳಿದಿದ್ದನು. ಈ ವೇಳೆ ಒಂದು ಕಡೆ ಮಣ್ಣು ಇರುವುದು ನೋಡಿ ಮತ್ತೊಂದು ಕಡೆಯೂ ಮಣ್ಣು ಇರಬಹುದು. ಅಲ್ಲಿ ಮುಖ್ಯರಸ್ತೆ ಇರಬಹುದು ಎಂದು ತಿಳಿದುಕೊಂಡು ಆ ಕಡೆ ಹೋದ. ಲಾರಿ ಕೂಡ ಅಡ್ಡ ಇದ್ದಿದ್ದರಿಂದ ಕಾರು ಚಾಲಕ ಯುವಕನನ್ನು ನೋಡಿಲ್ಲ. ಆ ಯುವಕನನ್ನು ಹೊಡೆದುಕೊಂಡು ಮುಂದೆ ಬೋರ್ಡ್ ಹೊಡೆದುಕೊಂಡು ಮುಂದೆ ಹೋಯ್ತು ಎಂದು ವಿವರಿಸಿದರು. ಇದನ್ನೂ ಓದಿ: ಪ್ರಭಾವಿ ವ್ಯಕ್ತಿಯನ್ನ ರಕ್ಷಿಸಲು ಬಿಜೆಪಿ ಸರ್ಕಾರದಿಂದ ಪ್ರಯತ್ನ – ಕಾಂಗ್ರೆಸ್

    ಘಟನೆ ನಡೆದ ನಂತರ ಆ ಗಲಾಟೆಯಲ್ಲಿ ಅಶೋಕ್ ಪುತ್ರ ಶರತ್ ಎಲ್ಲಿ ಹೋದರು ಎಂದು ಸರಿಯಾಗಿ ನೋಡಲಿಲ್ಲ. ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಹಾಗೂ ಇನ್ನೊಬ್ಬ ವ್ಯಕ್ತಿಯನ್ನು ನೋಡಿದ್ದೇವೆ ಅಷ್ಟೇ. ಇನ್ನೊಬ್ಬ ವ್ಯಕ್ತಿಯ ಮೃತದೇಹವನ್ನು ಅಂಬುಲೆನ್ಸ್ ನಲ್ಲಿ ಕಳುಹಿಸಿಕೊಟ್ಟೇವು. ಇವರೆಲ್ಲರೂ ಒಂದೇ ಕಾರಿನಲ್ಲಿ ಹೋಗುತ್ತಿದ್ದರು ಎಂದು ಪ್ರತ್ಯಕ್ಷದರ್ಶಿ ಘಟನೆಯನ್ನು ವಿವರಿಸಿದ್ದರು.

    ಅಪಘಾತವಾದ ನಂತರ ಮತ್ತೊಂದು ಬ್ರ್ಯಾಂಡೆಡ್ ಕಾರಿನಲ್ಲಿ ಅವರು ಮೃತದೇಹವನ್ನು ತೆಗೆದುಕೊಂಡು ಹೋಗಲಾಯಿತು. ಅಪಘಾತವಾದ ನಂತರ ಮತ್ತೊಂದು ಕಾರು ತಕ್ಷಣ ಬಂತು. ಆಗ ನಾವು ಅವರ ಪರಿಚಯಸ್ಥರು ಎಂದು ತಿಳಿದುಕೊಂಡಿದ್ದೇವೆ. ಅವರು ಅವರ ಜೊತೆಗಿದ್ದ ವ್ಯಕ್ತಿಯ ಮೃತದೇಹವನ್ನು ತೆಗೆದುಕೊಂಡು ಹೋದರು. ಸ್ಥಳದಲ್ಲಿದ್ದ ಜನರು ಯುವಕನ ಮೃತದೇಹವನ್ನು ಅಂಬುಲೆನ್ಸ್‍ನಲ್ಲಿ ಕಳುಹಿಸಿಕೊಟ್ಟರು ಎಂದು ತಿಳಿಸಿದರು.

  • ಉದ್ಯಮಿ ಸಿದ್ಧಾರ್ಥ್ ನಾಪತ್ತೆ – ಸೇತುವೆಯಿಂದ ಹಾರಿದ್ದನ್ನು ಕಂಡ ಪ್ರತ್ಯಕ್ಷದರ್ಶಿ ಹೇಳಿದ್ದೇನು?

    ಉದ್ಯಮಿ ಸಿದ್ಧಾರ್ಥ್ ನಾಪತ್ತೆ – ಸೇತುವೆಯಿಂದ ಹಾರಿದ್ದನ್ನು ಕಂಡ ಪ್ರತ್ಯಕ್ಷದರ್ಶಿ ಹೇಳಿದ್ದೇನು?

    ಮಂಗಳೂರು: ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನದ ಬೆನ್ನಲ್ಲೇ ಪ್ರತ್ಯಕ್ಷದರ್ಶಿಯೊಬ್ಬರು ನೀಡಿದ ಹೇಳಿಕೆ ಈಗ ಮಹತ್ವ ಪಡೆದುಕೊಂಡಿದೆ. ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಸ್ಥಳೀಯ ವ್ಯಕ್ತಿ ಸೈಮನ್ ತಾವು ನೋಡಿದ ದೃಶ್ಯಗಳ ಬಗ್ಗೆ ವಿವರಿಸಿದ್ದಾರೆ.

    ಸೈಮನ್ ಹೇಳಿದ್ದೇನು?
    ಸೋಮವಾರ ಸಂಜೆ 5.30ರ ವೇಳೆಗೆ ನಾನು ನದಿ ಬಳಿ ಮೀನು ಹಿಡಿಯಲು ಹೋಗಿದ್ದೆ. ರಾತ್ರಿ 7.30ರ ವೇಳೆಗೆ ಸೇತುವೆ ಬಳಿ ಶಬ್ದ ಕೇಳಿ ಬಂತು. ತಕ್ಷಣ ನೋಡಿದ ಕೂಡಲೇ ವ್ಯಕ್ತಿಯೊಬ್ಬರು ನದಿಗೆ ಹಾರಿದ್ದು, ಅಲ್ಲಿಂದ ಸ್ವಲ್ಪ ದೂರ ಸಾಗಿದ್ದು ಕಂಡು ಬಂತು. ನಾನು 6ನೇ ಪಿಲ್ಲರ್ ಬಳಿ ಇದ್ದೆ, ಅವರು 8ನೇ ಪಿಲ್ಲರ್ ಬಳಿ ಹಾರಿದ್ದರು.

    ಕೂಡಲೇ ಅವರನ್ನು ರಕ್ಷಣೆ ಮಾಡುವ ಪ್ರಯತ್ನ ನಡೆಸಿದೆ. ಒಬ್ಬನೇ ಇದ್ದ ಕಾರಣ ನನಗೆ ಅವರು ಸಿಗಲಿಲ್ಲ. ಆದ್ದರಿಂದ ನನ್ನ ಪ್ರಯತ್ನ ವಿಫಲವಾಯಿತು. ಮೋಟರ್ ಇಲ್ಲದ ದೋಣಿಯಲ್ಲಿ ತೆರಳಿದ್ದೆ. ಬೇಗ ಹೋಗುವ ಪ್ರಯತ್ನ ಸಾಧ್ಯವಾಗಲಿಲ್ಲ. ಅವರು ಯಾವ ರೀತಿ ಇದ್ದರು, ಯಾವ ಬಟ್ಟೆ ಧರಿಸಿದ್ದರು ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಹಿಂದೆ ಇಂತಹದ್ದೆ ಸಂದರ್ಭದಲ್ಲಿ 6 ಮಂದಿಯನ್ನ ರಕ್ಷಣೆ ಮಾಡಿದ್ದೆ. ನಮಗೂ ಜೀವದ ಕುರಿತು ಆಸೆ ಇರುವುದರಿಂದ ನದಿಗೆ ಹಾರದೇ ದೋಣಿ ಮೂಲಕವೇ ಸಾಗುತ್ತೇವೆ. ಏಕೆಂದರೆ ನೀರಿನ ರಭಸ ಹೆಚ್ಚಾಗಿರುತ್ತದೆ.

    ಇದಕ್ಕೂ ಮುನ್ನ ಸಾಕಷ್ಟು ಮಂದಿ ಇಲ್ಲಿಯೇ ಬಂದು ಹಾರಿದ್ದರು. ಆದ್ದರಿಂದ ನಾನು ಸ್ಥಳೀಯವಾಗಿ ಮಾಹಿತಿ ನೀಡಿದ್ದೆ ಅಷ್ಟೇ. ಮಳೆ ಪ್ರಮಾಣ ಕಡಿಮೆ ಇರುವುದರಿಂದ ದೇಹ ಸಿಗುವ ಸಾಧ್ಯತೆ ಇದೆ. ಯಾವುದೇ ಮೃತ ದೇಹವಾದರೂ 24 ಗಂಟೆ ಬಳಿಕ ನೀರಿನಿಂದ ಮೇಲೆ ಬರುತ್ತದೆ. ಸಮುದ್ರಕ್ಕೆ ಕೊಚ್ಚಿ ಹೋಗುವ ಸಾಧ್ಯತೆ ಕಡಿಮೆ ಇದ್ದು, ನದಿಯಲ್ಲೇ ಸಿಗುವ ವಿಶ್ವಾಸ ಇದೆ. ಈ ಬಗ್ಗೆ ಬೆಳಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ಕಾರ್ಯಾಚರಣೆ ನಡೆಯುತ್ತಿದ್ದು, ಎಲ್ಲರ ನಿರೀಕ್ಷೆ ಒಂದೇ ಇದೆ ಎಂದರು.

    https://www.youtube.com/watch?v=S8AvtIh5VB8

  • ಗೌರಿ ಲಂಕೇಶ್ ಹತ್ಯೆ ಬಗ್ಗೆ ಪ್ರತ್ಯಕ್ಷದರ್ಶಿ ಹೇಳಿದ್ದೇನು?

    ಗೌರಿ ಲಂಕೇಶ್ ಹತ್ಯೆ ಬಗ್ಗೆ ಪ್ರತ್ಯಕ್ಷದರ್ಶಿ ಹೇಳಿದ್ದೇನು?

    ಬೆಂಗಳೂರು: ಮಂಗಳವಾರ ರಾತ್ರಿ ನಡೆದ ಗೌರಿ ಲಂಕೇಶ್ ಹತ್ಯೆಯನ್ನು ಅವರ ಮನೆಯ ಮುಂದಿನ ಅಪಾರ್ಟ್‍ಮೆಂಟ್ ನ ಸೆಕ್ಯೂರಿಟಿಯೊಬ್ಬರು ನೋಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಅಪಾರ್ಟ್‍ಮೆಂಟ್ ನಿವಾಸಿಯೊಬ್ಬರು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ್ದಾರೆ.

    ನಾನು ಮನೆಯಲ್ಲಿ ಟಿವಿ ನೋಡುವಾಗ ಪಟಾಕಿ ಹೊಡೆದ ಶಬ್ದ ಕೇಳಿಸಿತು. ಗಣಪತಿ ಹಬ್ಬ ಇದೆಯಲ್ಲಾ ಎಂದು ನಾವು ಕೂಡ ಸುಮ್ಮನಾಗಿದ್ದೆವು. ಕೆಲ ಸಮಯದ ಬಳಿಕ ನಮ್ಮ ಅಪಾರ್ಟ್‍ಮೆಂಟ್ ಸೆಕ್ಯೂರಿಟಿ ಬಂದು ವಿಷಯ ತಿಳಿಸಿದಾಗ ಗೌರಿ ಅವರ ಕೊಲೆ ನಡೆದಿರುವುದು ಗೊತ್ತಾಯ್ತು ಎಂದು ಅಪಾರ್ಟ್‍ಮೆಂಟ್ ನಿವಾಸಿ ಹೇಳಿದ್ದಾರೆ.

    ಸೆಕ್ಯೂರಿಟಿ ಹೇಳಿದ್ದೇನು: ಗೌರಿ ಅವರು ಕಾರ್ ನಿಲ್ಲಿಸಿ ಗೇಟ್ ತೆಗೆದು ಒಳಗಡೆ ಹೋಗುವಾಗ ಸುಮಾರು ಮೂರರಿಂದ ನಾಲ್ಕು ಆಗಂತುಕರು ಬಂದರು. ಬಂದವರೇ ನೇರವಾಗಿ ಗೌರಿಯವರನ್ನು ಹಿಡಿದು ಶೂಟ್ ಮಾಡಿದ್ರು. ಹತ್ಯೆಯ ಬಳಿಕ ಮನೆಯ ಕಾಂಪೌಂಡ್ ಜಿಗಿದು ಪರಾರಿಯಾದ್ರು ಎಂದು ಸೆಕ್ಯೂರಿಟಿ ಹೇಳಿದ್ದಾರೆ.

    ನಾವು ಮನೆಯಿಂದ ಹೊರ ಬಂದು ನೋಡಿದಾಗ ಗೌರಿಯವರ ಮೃತ ದೇಹ ವರಾಂಡದಲ್ಲಿ ಬಿದ್ದಿತ್ತು. ನಾನು ಬರುಷ್ಟರಲ್ಲೇ ತುಂಬಾ ಜನರು ಘಟನಾ ಸ್ಥಳದಲ್ಲಿ ಸೇರಿದ್ದರು. ಈ ಬಡವಾಣೆಯಲ್ಲಿ ಹೆಚ್ಚಾಗಿ ಗಣ್ಯ ವ್ಯಕ್ತಿಗಳು ವಾಸವಾಗಿದ್ದು, ಇಲ್ಲಿ ಈ ತರಹದ ಘಟನೆ ನಡೆದಿದ್ದು ಸಹಜವಾಗಿಯೇ ನಮ್ಮಲ್ಲಿ ಭಯದ ವಾತವಾರಣವನ್ನುಂಟು ಮಾಡಿದೆ ಎಂದು ಅಪಾರ್ಟ್‍ಮೆಂಟ್ ನಿವಾಸಿ ತಿಳಿದ್ದಾರೆ.

    https://youtu.be/jtfEPQsG_LQ