Tag: ಪ್ರತ್ಯೇಕ ರಾಜ್ಯ

  • ನನಗೆ ಸಿಎಂ ಆಗೋ ಎಲ್ಲಾ ಅರ್ಹತೆಯಿದೆ: ಉಮೇಶ್ ಕತ್ತಿ

    ನನಗೆ ಸಿಎಂ ಆಗೋ ಎಲ್ಲಾ ಅರ್ಹತೆಯಿದೆ: ಉಮೇಶ್ ಕತ್ತಿ

    ಮೈಸೂರು: ನನಗೆ ಸಿಎಂ ಆಗುವ ಎಲ್ಲಾ ಅರ್ಹತೆಯಿದೆ. ಹಣೆ ಬರಹದಲ್ಲಿ ಬರೆದಿದ್ದರೆ ನಾನೂ ಸಿಎಂ ಆಗ್ತೇನೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

    ಮೈಸೂರಿನಲ್ಲಿಂದು ಪ್ರತ್ಯೇಕ ರಾಜ್ಯದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ದೃಷ್ಟಿಯಿಂದ ನಾನು ಪ್ರತ್ಯೇಕ ರಾಜ್ಯ ಕೇಳುತ್ತಿದ್ದೇನೆ ಹೊರತು ಬೇರೆ ಉದ್ದೇಶ ಇಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಸೆಪ್ಟೆಂಬರ್‌ವರೆಗೂ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಿದ ದೆಹಲಿ ಸರ್ಕಾರ

    ಇರುವ 224 ಶಾಸಕರಲ್ಲಿ ನಾನೇ ಹಿರಿಯ ಶಾಸಕ. ನನಗೆ ಸಿಎಂ ಆಗಿವ ಎಲ್ಲಾ ಅರ್ಹತೆ ಇದೆ. ನಾನು ಸಿಎಂ ಆಗಬೇಕಾದರೆ ಅಖಂಡ ಕರ್ನಾಟಕದ ಸಿಎಂ ಆಗುತ್ತೇನೆ. ಆದರೆ ಸಿಎಂ ಸ್ಥಾನಕ್ಕಾಗಿ ಪ್ರತ್ಯೇಕ ರಾಜ್ಯ ಕೇಳುತ್ತಿಲ್ಲ. ಪ್ರತ್ಯೇಕ ರಾಜ್ಯವಾದರೂ ನಾವು ಕನ್ನಡಿಗರೇ, ಆಂಧ್ರ, ತೆಲಂಗಾಣ ರೀತಿಯಲ್ಲೇ ನಮ್ಮದೂ ಪ್ರತ್ಯೇಕವಾಗಲಿ ಎಂದು ಬಯಸಿದ್ದೇನೆ ಅಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಆಕೆಯ ಮೇಲೆ ಪದೇ-ಪದೇ ಅತ್ಯಾಚಾರ ಮಾಡಿದ್ರು, ನರಮಾಂಸ ತಿನ್ನುವಂತೆ ಒತ್ತಾಯಿಸಿದ್ರು!

    ನಮ್ಮ ಜನರ ದೃಷ್ಟಿಯಿಂದ ನಾನೇ ಹಿರಿಯನಾಗಿ ಧ್ವನಿ ಎತ್ತಿದ್ದೇನೆ. ಹೈಕಮಾಂಡ್ ಮಟ್ಟದಲ್ಲೂ ಹೊಸ ರಾಜ್ಯಗಳ ರಚನೆ ಬಗ್ಗೆ ಚಿಂತನೆ ನಡೆದಿದೆ ಎಂಬುದು ನನ್ನ ಅನಿಸಿಕೆ. ನಾನು ಮಾತನಾಡಿದರೆ ಆ ವಿಚಾರ ಕೇಂದ್ರದ ಮಟ್ಟಕ್ಕೂ ಹೋಗುತ್ತದೆ. ಆದ್ದರಿಂದಲೇ ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

    bjP

    ಬೆಂಗಳೂರಿನಲ್ಲಿ ಲಾ ಅಂಡ್ ಆರ್ಡರ್ ಎಲ್ಲಿದೆ?
    ಇದೇ ವೇಳೆ ಸ್ವಪಕ್ಷೀಯ ಸರ್ಕಾರದ ಆಡಳಿತವನ್ನೇ ಪ್ರಶ್ನಿಸಿದ ಉಮೇಶ್ ಕತ್ತಿ, ದೊಡ್ಡ ರಾಜ್ಯಗಳಾದಾಗ ಇಂತಹ ಸಮಸ್ಯೆಗಳು ಇದ್ದೇ ಇರುತ್ತವೆ. ಇದೇ ಕಾರಣಕ್ಕೆ ನಾವು ರಾಜ್ಯ ಇಬ್ಬಾಗ ಆಗಬೇಕೆಂದು ಕೇಳುತ್ತಿದ್ದೇನೆ. ಜಲಾಶಯಗಳ ನೀರಿನ ಬಳಕೆ, ಗಡಿ ಸಮಸ್ಯೆಗಳ ನಿವಾರಣೆ ಇದರ ದೃಷ್ಟಿಯಿಂದ ಚಿಕ್ಕ ರಾಜ್ಯಗಳು ಆಗಬೇಕು. ಅತಿ ಹೆಚ್ಚು ಜನಸಂಖ್ಯೆ ಇದ್ದಾಗ ಯಾವ ಸಮಸ್ಯೆಗಳೂ ಬಗೆಹರಿಯುವುದಿಲ್ಲ ಎಂದು ಕುಟುಕಿದ್ದಾರೆ.

    ಪ್ರತಿ ಜಿಲ್ಲೆಗಳಿಗೂ ಮೃಗಾಲಯ?
    ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲೂ ಮೃಗಾಲಯಗಳನ್ನು ಸ್ಥಾಪಿಸುವ ಚಿಂತನೆ ನಡೆಸಿದ್ದೇವೆ. ಇದಕ್ಕಾಗಿ ಎಲ್ಲ ಜಿಲ್ಲೆಗಳಲ್ಲೂ ಸೂಕ್ತ ಸ್ಥಳವನ್ನು ಗುರುತು ಮಾಡುತ್ತಿದ್ದೇವೆ. ರಾಜ್ಯದ ಈ ಪ್ರಸ್ತಾಪವನ್ನು ಕೇಂದ್ರಕ್ಕೆ ಕಳುಹಿಸುತ್ತೇವೆ. ಕೇಂದ್ರದ ಅನುಮತಿ ಬಂದ ಮೇಲೆಯೇ ಈ ಕಾರ್ಯ ಶುರುವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

    Live Tv

  • ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು: ಕತ್ತಿಗೆ ಹೊರಟ್ಟಿ ತಿರುಗೇಟು

    ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು: ಕತ್ತಿಗೆ ಹೊರಟ್ಟಿ ತಿರುಗೇಟು

    ಹುಬ್ಬಳ್ಳಿ: ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು. ಏಕೀಕರಣ ಹೋರಾಟದ ಉದ್ದೇಶ ಸಹಬಾಳ್ವೆ. ಆ ಉದ್ದೇಶ ಮರೆತು ಮಾತನಾಡುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಸಚಿವ ಉಮೇಶ್ ಕತ್ತಿಗೆ ತಿರುಗೇಟು ನೀಡಿದ್ದಾರೆ.

    ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಮೇಶ್ ಕತ್ತಿ 2009ರಲ್ಲಿ ಹೀಗೆಯೇ ಹೇಳಿದ್ದರು. ನನ್ನ ಮಗ ಮುಖ್ಯಮಂತ್ರಿ ಆಗುತ್ತಾನೆ ಎಂದಿದ್ದರು. ನಾನು ಬಿಜೆಪಿ ಪಕ್ಷದವನಾಗಿ ಹೇಳುತ್ತಿದ್ದೇನೆ, ಉಮೇಶ್ ಕತ್ತಿ ಹೇಳಿಕೆ ಸರಿಯಲ್ಲ. ಕರ್ನಾಟಕ ಅಖಂಡವಾಗಿಯೇ ಉಳಿಯಬೇಕು. ಪ್ರಾದೇಶಿಕ ಅಸಮಾನತೆ ಸರಿಪಡಿಸಲು ಸರ್ಕಾರಕ್ಕೆ ಕೇಳೋಣ. ಅದನ್ನು ಬಿಟ್ಟು ಪ್ರತ್ಯೇಕ ರಾಜ್ಯದ ಕೂಗು ಸರಿಯಲ್ಲ ಎಂದಿದ್ದಾರೆ. ಇದನ್ನೂ ಓದಿ: ಸೋನಿಯಾ ಗಾಂಧಿ ಆಪ್ತ ಸಹಾಯಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

    ಪಠ್ಯ ಪುಸ್ತಕ ಪೂರೈಕೆ ವಿಳಂಬ ವಿಚಾರವಾಗಿ ಮಾತನಾಡಿದ ಅವರು, ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಗೊಂದಲ ಉಂಟಾಗಿ ವಿಳಂಬವಾಗಿದೆ. ಈ ಕುರಿತು ಶಿಕ್ಷಣ ಸಚಿವರ ಜೊತೆ ಮಾತನಾಡುವೆ. ಪಠ್ಯ ವಿಚಾರದಲ್ಲಿ ಸರ್ಕಾರ ದೃಢ ನಿರ್ಧಾರ ತೆಗೆದುಕೊಳ್ಳಬೇಕು. ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ಸಮಿತಿಗೆ ಬಿಡಬೇಕು. ಅದರಲ್ಲಿ ಸರ್ಕಾರ ಹಾಗೂ ರಾಜಕಾರಣಿಗಳು ಭಾಗವಹಿಸುವುದು ಸರಿಯಲ್ಲ. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹಾನಿಯಾಗಬಾರದು ಎಂದರು. ಇದನ್ನೂ ಓದಿ: ಮೋದಿಯವರ ವ್ಯಕ್ತಿತ್ವ, ಜೀವನದ ಹಾದಿ ಪ್ರತಿಯೊಬ್ಬರಿಗೂ ಸ್ಫೂರ್ತಿ: ಗೆಹ್ಲೋಟ್

    ಶಿಕ್ಷಕರ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಶಿಕ್ಷಕರ ಸಭೆ ಕರೆದಿದ್ದೇನೆ. ಬಳಿಕ ಶಿಕ್ಷಕರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತೆನೆ ಎಂದರು.

    Live Tv

  • ರೈತ ಸಂಘದಿಂದ ಕೊಡಗು ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ

    ರೈತ ಸಂಘದಿಂದ ಕೊಡಗು ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ

    ಮಡಿಕೇರಿ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ವಿವಿಧ ಸರ್ಕಾರಗಳು, ರಾಜಕೀಯ ಪಕ್ಷಗಳು ಕೊಡಗಿನ ವಿಚಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿವೆ. ಹೀಗಾಗಿ ಮುಂದೆ ಕೊಡಗಿನ ಜನತೆ ಜಾತಿ, ಧರ್ಮ, ಮತ ಬೇಧ ಮರೆತು ರಾಜಕೀಯವಾಗಿ ಕೊಡಗು ಪ್ರತ್ಯೇಕ ರಾಜ್ಯಕ್ಕೆ ಹೋರಾಟ ನಡೆಸಬೇಕು ಎಂದು ಕೊಡಗು ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನುಸೋಮಯ್ಯ ಹೇಳಿದರು.

    ಕೊಡಗು ಜಿಲ್ಲೆಯ ಪೋನ್ನಂಪೇಟೆ ತಾಲೂಕಿನ ಗೋಣಿಕೊಪ್ಪಲುವಿನ ಪರಿಮಳ ಮಂಗಳ ವಿಹಾರದಲ್ಲಿ ಆಯೋಜನೆ ಗೊಂಡಿದ್ದ ರೈತ ಸಂಘದ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊಡಗು ಜಿಲ್ಲೆ ಅಭಿವೃದ್ಧಿ ಕಾಣಬೇಕಾದರೆ ಕೊಡಗು ಪ್ರತ್ಯೇಕ ರಾಜ್ಯವಾಗಬೇಕು ಇದರಿಂದ ನಮ್ಮ ಜಿಲ್ಲೆಯ ಏಳಿಗೆ ಸಾಧ್ಯ ಎಂದರು. ಇದನ್ನೂ ಓದಿ: ಚಂಡಮಾರುತ ಎಫೆಕ್ಟ್- ಸಮುದ್ರದಲ್ಲಿ ತೇಲಿ ಬಂತು ಚಿನ್ನದ ರಥ!

    ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ರೈತ ಸಂಘದ ಸದಸ್ಯರು ಇದನ್ನು ಒಗ್ಗಟ್ಟಾಗಿ ಒಪ್ಪಿಗೆ ಸೂಚಿಸಿ ಮುಂದೆ ಪ್ರತ್ಯೇಕ ರಾಜ್ಯದ ಹೋರಾಟ ಕೈಗೆತ್ತಿಕೊಳ್ಳವುದೇ ಲೇಸು ಎಂದು ಸಹಮತ ವ್ಯಕ್ತಪಡಿಸಿದರು. ಚೆಸ್ಕಾಂ ಇಲಾಖೆಯು ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡದೇ ಗ್ರಾಹಕರಿಂದ ವಿದ್ಯುತ್ ಬಿಲ್ ಪಡೆಯುತ್ತಿರುವ ಬಗ್ಗೆ ತೀವ್ರ ಚರ್ಚೆ ನಡೆಯಿತು. ಇದೇ ವೇಳೆ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಸಭೆಯಲ್ಲಿ ರೈತ ಸಂಘದ ಜಿಲ್ಲಾ ಪ್ರಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ ವಾರ್ಷಿಕ ವರದಿ ಮಂಡಿಸಿದರು. ಇದನ್ನೂ ಓದಿ: ಎರಡೇ ದಿನದಲ್ಲಿ ಸಿಕ್ಸ್ ಪ್ಯಾಕ್ – ವೀಡಿಯೋ ನೋಡಿ ಶಾಕ್ ಆದ ನೆಟ್ಟಿಗರು

    ಕಾನೂನು ಸಲಹೆಗಾರರಾದ ಹೇಮಚಂದ್ರ ಪ್ರಾಸ್ತಾವಿಕ ಮಾತನಾಡಿ, ರೈತ ಸಂಘವು ನಡೆಸಿದ ಹೋರಾಟದ ಮಾಹಿತಿಗಳನ್ನು ಸಭೆಯಲ್ಲಿ ಮಂಡಿಸಿದರು. ರೈತರ 10 ಹೆಚ್.ಪಿ. ಉಚಿತ ವಿದ್ಯುತ್ ವಿಚಾರದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

  • ಮುಧೋಳದಲ್ಲಿ ಉತ್ತರಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣ

    ಮುಧೋಳದಲ್ಲಿ ಉತ್ತರಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣ

    ಬಾಗಲಕೋಟೆ: ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿ ಮುಧೋಳ ನಗರದಲ್ಲಿರುವ ಉತ್ತರ ಕರ್ನಾಟಕ ಹೋರಾಟ ಸಮಿತಿ ಉಪಕಚೇರಿ ಆವರಣದಲ್ಲಿ ಇಂದು ಧ್ವಜಾರೋಹಣ ನೆರವೇರಿಸಲಾಯಿತು.

    ಮುಧೋಳ ನಗರದಲ್ಲಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಸದಸ್ಯರು ಪ್ರತ್ಯೇಕ ರಾಜ್ಯಕ್ಕಾಗಿ ಕರ್ನಾಟಕ ಧ್ವಜವನ್ನು ಬಿಟ್ಟು ಹೊಸ ಧ್ವಜವನ್ನು ರಚಿಸಿ ಧ್ವಜಾರೋಹಣ ನಡೆಸಿದ್ದಾರೆ. ಇಂದು ಬೆಳಿಗ್ಗೆ 9 ಗಂಟೆಗೆ ಉತ್ತರ ಕರ್ನಾಟಕ ಹೋರಾಟ ಸಮಿತಿ ಉಪಕಚೇರಿ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿದೆ.

    ಸೆಪ್ಟೆಂಬರ್ 23 2018 ರಂದು ಬಾಗಲಕೋಟೆ ನಗರದಲ್ಲಿ ಹೋರಾಟ ಸಮಿತಿ ಸದಸ್ಯರು ಪಂಚನಿರ್ಣಯ ಕೈಗೊಂಡಿದ್ದರು. ಆಗ ಜನವರಿ 1ರಂದು ಪ್ರತ್ಯೇಕ ಧ್ವಜಾರೋಹಣದ ಮಾಡಬೇಕು ಎಂದು ಹೋರಾಟಗಾರರು ನಿರ್ಧರಿಸಿದ್ದರು. ಇಂದು ಧ್ವಜಾರೋಹಣ ನಡೆಸಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

    ಈ ಪ್ರತ್ಯೇಕ ಧ್ವಜವು 4 ಬಣ್ಣಗಳಿಂದ ಕೂಡಿದ್ದು, ಮಧ್ಯದಲ್ಲಿ ಉತ್ತರ ಕರ್ನಾಟಕದ ನಕ್ಷೆಯನ್ನು ಒಳಗೊಂಡಿದೆ. ಕೇಸರಿ, ಹಳದಿ, ಹಸಿರು ಬಣ್ಣದ ಮಧ್ಯೆ ನೀಲಿ ವರ್ಣದ ಉತ್ತರ ಕರ್ನಾಟಕ ನಕ್ಷೆಯ ಧ್ವಜವನ್ನು ಅನಾವರಣ ಮಾಡಲಾಗಿದೆ. ಈ ಪ್ರತ್ಯೇಕ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ನಾಗೇಶ್ ಗೋಲಶೆಟ್ಟಿ ಸೇರಿದಂತೆ ಇತರೇ ಹೋರಾಟಗಾರರು ಭಾಗಿಯಾಗಿದ್ದರು.

    ಒಟ್ಟು ಉತ್ತರ ಕರ್ನಾಟಕದ ಹದಿಮೂರು ಜಿಲ್ಲೆಗಳು ಒಳಗೊಂಡ ನಕ್ಷೆಯನ್ನು ಧ್ವಜದ ಮಧ್ಯೆ ರೂಪಿಸಲಾಗಿದೆ. ಹಾಗೆಯೇ ಕೇಸರಿ ಬಣ್ಣ ಧೈರ್ಯ, ಶೌರ್ಯದ ಸಂಕೇತವಾದರೆ, ಹಳದಿ ಹೊಸತನದ ಸಂಕೇತ, ಹಸಿರು ಸಮೃದ್ಧಿಯ ಸಂಕೇತ ಹಾಗೂ ನೀಲಿ ವಿಶಾಲತೆಯ ಸಂಕೇತ ಎಂದು ಹೊಸ ಧ್ವಜದಲ್ಲಿ ಬಳಸಿರುವ ಬಣ್ಣಗಳ ಕುರಿತು ಹೋರಾಟಗಾರರು ತಿಳಿಸಿದರು.

    ಈ ವೇಳೆ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಗೇಶ್ ಗೋಲಶೆಟ್ಟಿ ಭಾಷಣ ಮಾಡಿ, ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕೆಂಬ ಉದ್ದೇಶದಿಂದ ಹೀಗೆ ನೂತನ ಧ್ವಜವನ್ನು ಸೃಷ್ಟಿಸಿ ಧ್ವಜಾರೋಹಣ ಮಾಡಿದ್ದೇವೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿ. ಆಗ ಇಲ್ಲಿನ ಮನೆ ಮನೆಯಲ್ಲೂ ಈ ಧ್ವಜವನ್ನು ಹಾರಿಸೋಣ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆಪರೇಷನ್ ಕಮಲ ಅಂದ್ರೆ ಕುರಿ, ದನಗಳನ್ನು ಖರೀದಿಸಿದಂತೆ: ಬಿಎಸ್‍ವೈಗೆ ಸಿದ್ದರಾಮಯ್ಯ ಟಾಂಗ್

    ಆಪರೇಷನ್ ಕಮಲ ಅಂದ್ರೆ ಕುರಿ, ದನಗಳನ್ನು ಖರೀದಿಸಿದಂತೆ: ಬಿಎಸ್‍ವೈಗೆ ಸಿದ್ದರಾಮಯ್ಯ ಟಾಂಗ್

    -ಬಿಜೆಪಿ ಶಾಸಕರು ಕಾಂಗ್ರೆಸ್‍ಗೆ ಬರೋದು ಬೇಡ

    ವಿಜಯಪುರ: ಆಪರೇಷನ್ ಕಮಲ ಅಂದರೆ ಕುರಿ, ದನ, ಎಮ್ಮೆಗಳನ್ನು ದುಡ್ಡು ಕೊಟ್ಟು ಖರೀದಿಸಿದಂತೆ. ಯಾವ ಶಾಸಕರು ಮಾರಾಟಕ್ಕೆ ಇರುತ್ತಾರೆ ಅವರನ್ನು ಖರೀದಿಸಿ ಮುಂದಿನ ಚುನಾವಣೆಯಲ್ಲಿ ಹಣ ಖರ್ಚು ಮಾಡಿ ಗೆಲ್ಲಿಸುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಕಾಲೆಳೆದ್ದಿದ್ದಾರೆ.

    ಆಲಮಟ್ಟಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ, ಬಿ.ಎಸ್.ಯಡಿಯೂರಪ್ಪ 20 ರಿಂದ 25 ಕೋಟಿ ರೂ. ನೀಡಿ ಶಾಸಕರನ್ನು ಖರೀದಿಸಿ, ಸರ್ಕಾರ ರಚಿಸಲು ಮುಂದಾಗಿದ್ದರು. ಹೀಗಾಗಿ ಮೊದಲ ಅನೈತಿಕ ರಾಜಕಾರಣ ಮಾಡಿದ್ದು ಅವರೇ ಎಂದು ವಾಗ್ದಾಳಿ ನಡೆಸಿದರು.

    ಬಿಜೆಪಿ ಅನೇಕ ಮುಖಂಡರು ಕಾಂಗ್ರೆಸ್ಸಿಗೆ ಬರುವುತ್ತೇವೆ ಎಂದು ಕೇಳುತ್ತಿದ್ದಾರೆ. ಆದರೆ ಅವರು ಬರುವುದು ಬೇಡ ಅಂತಾ ಅವರಿಗೆ ಅಲ್ಲೆ ಇರುವಂತೆ ನಾವೇ ಹೇಳಿದ್ದೇವೆ ಎಂದು ಯಡಿಯೂರಪ್ಪಗೆ ಟಾಂಗ್ ನೀಡಿದ ಅವರು, ರಾಜ್ಯದ ಜನರು ಸಮ್ಮಿಶ್ರ ಸರ್ಕಾರ ರಚನೆಯಾಗಲಿ ಅಂತಾ ಜನರು ಮತ ಹಾಕಿದ್ದಾರೆ. ಅದರಂತೆ ಸಮ್ಮಿಶ್ರ ಸರ್ಕಾರ ನಡೆಯುತ್ತಿದೆ ಎಂದರು.

    ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಕರಾವಳಿ ಕರ್ನಾಟಕ ಎಂದು ಪ್ರತ್ಯೇಕ ಮಾಡುವುದು ಸರಿಯಲ್ಲ. ರಾಜ್ಯವನ್ನು ನಾನು ಅಖಂಡ ಕರ್ನಾಟಕವಾಗಿ ನೋಡಲು ಬಯಸುತ್ತೇನೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒತ್ತಾಯಿಸಿ ನಡೆಸುವ ಹೋರಾಟವನ್ನು ನಾನು ಬೆಂಬಲಿಸುತ್ತೇನೆ. ಆದರೆ ಪ್ರತ್ಯೇಕ ರಾಜ್ಯ ಬೇಡಿಕೆಗೆ ನನ್ನ ವಿರೋಧವಿದೆ ಎಂದು ಹೇಳಿದರು.

  • ನನ್ನ ಜೀವಿತಾವಧಿಯಲ್ಲಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಸಾಧ್ಯವಿಲ್ಲ: ಎಚ್‍ಡಿಡಿ

    ನನ್ನ ಜೀವಿತಾವಧಿಯಲ್ಲಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಸಾಧ್ಯವಿಲ್ಲ: ಎಚ್‍ಡಿಡಿ

    ನವದೆಹಲಿ: ನನ್ನ ಜೀವಿತಾವಧಿಯಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆಯನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.

    ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ವಿಚಾರ ಹಲವು ಸಂಘಟನೆಗಳು ಇಂದು ಕರೆ ನೀಡಿದ್ದ ಬಂದ್ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯ ಬಜೆಟ್ ನಲ್ಲಿ ನಿಧಿ ಹಂಚುವ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ಯಾವುದೇ ಅನ್ಯಾಯವಾಗಿಲ್ಲ. ಬಿಜೆಪಿ ನಾಯಕ ಯಡಿಯೂರಪ್ಪ ದುರುದ್ದೇಶಪೂರಿತ ಪ್ರಚಾರದ ಮೂಲಕ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ್ದಾರೆ. ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡುವುದಕ್ಕೆ ನಮ್ಮ ಬೆಂಬಲವಿಲ್ಲ ಹಾಗೂ ನಾನು ಮತ್ತು ನನ್ನ ಮಗ ಮುಖ್ಯಮಂತ್ರಿ ಕುಮಾರಸ್ವಾಮಿ ಜೀವಿತಾವಧಿಯಲ್ಲಿ ಇದು ಎಂದಿಗೂ ಸಾಧ್ಯವಿಲ್ಲವೆಂದು ತಿಳಿಸಿದ್ದಾರೆ.

    ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳಿಸಿದ ಬಿಜೆಪಿಯೂ ಸರ್ಕಾರ ರಚನೆ ಮಾಡಲಾಗದೇ ಹೋದದ್ದಕ್ಕೆ ಬಿಜೆಪಿ ನಾಯಕರಾದ ಯಡಿಯೂರಪ್ಪ ಅವರಿಗೆ ನಿರಾಸೆಯಾಗಿದೆ. ಆದ್ದರಿಂದಲೇ ಅವರು ಉತ್ತರ ಕರ್ನಾಟಕದ ಜನರಿಗೆ ಪ್ರತ್ಯೇಕ ಕರ್ನಾಟಕಕ್ಕಾಗಿ ಪ್ರಚೋದನೆ ಕೊಡುತ್ತಿದ್ದಾರೆ. ಅಲ್ಲದೆ ರಾಜ್ಯ ಬಜೆಟ್, ರೈತರ ಸಾಲ ಮನ್ನಾ ಹಾಗೂ ಇತರೆ ವಿಚಾರಗಳನ್ನಿಟ್ಟುಕೊಂಡು ಜನರನ್ನು ಪ್ರಚೋದಿಸುತ್ತಿದ್ದಾರೆ. ಇವೆಲ್ಲವೂ ರಾಜಕೀಯ ಲಾಭಕ್ಕಾಗಿಯೇ ಮಾಡುತ್ತಿದ್ದಾರೆ ಎಂದು ಬಿಎಸ್‍ವೈ ವಿರುದ್ಧ ಕಿಡಿಕಾರಿದ್ದಾರೆ.

    ಬಿಎಸ್‍ವೈ ಹೇಳಿದ್ದು ಏನು?
    ತಮ್ಮ ರಾಜಕೀಯ ಲಾಭಕ್ಕಾಗಿ ಏಕೀಕೃತ ಕರ್ನಾಟಕ ಒಡೆಯಲು ಜೆಡಿಎಸ್ ಷಡ್ಯಂತ್ರ ರೂಪಿಸಿದೆ. ಈ ಹಿಂದೆ ವೀರಶೈವ, ಲಿಂಗಾಯತ ಪ್ರತ್ಯೇಕತೆ ಮಾಡಲು ಕಾಂಗ್ರೆಸ್ ಕೈ ಹಾಕಿತ್ತು. ಈಗ ಜೆಡಿಎಸ್ ರಾಜ್ಯ ಪ್ರತ್ಯೇಕ ಮಾಡುವ ಹುನ್ನಾರ ಮಾಡ್ತಿದೆ. ದೇವೇಗೌಡರ ಈ ತಂತ್ರವನ್ನು ರಾಜ್ಯದ ಜನತೆ ಒಪ್ಪುವುದಿಲ್ಲ. ಪ್ರತ್ಯೇಕ ರಾಜ್ಯ ಹೋರಾಟ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಮೌನವಹಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಡುತ್ತಿದೆ ಯಡಿಯೂರಪ್ಪ ಹೇಳಿದ್ದರು.

  • ಎಚ್‍ಡಿಕೆಯ ಪ್ರಚೋದನಾಕಾರಿ ಹೇಳಿಕೆಯೇ ಪತ್ಯೇಕ ರಾಜ್ಯದ ಹೋರಾಟಕ್ಕೆ ಕಾರಣ: ಶೆಟ್ಟರ್

    ಎಚ್‍ಡಿಕೆಯ ಪ್ರಚೋದನಾಕಾರಿ ಹೇಳಿಕೆಯೇ ಪತ್ಯೇಕ ರಾಜ್ಯದ ಹೋರಾಟಕ್ಕೆ ಕಾರಣ: ಶೆಟ್ಟರ್

    ಹುಬ್ಬಳ್ಳಿ: ಸಿಎಂ ಕುಮಾರಸ್ವಾಮಿಯವರ ಪ್ರಚೋದನಾಕಾರಿ ಹೇಳಿಕೆಯಿಂದಲೇ ರಾಜ್ಯದಲ್ಲಿ ಪ್ರತ್ಯೇಕ ರಾಜ್ಯದ ಕೂಗು ಏಳಲು ಕಾರಣ ಎಂದು ಮಾಜಿ ಸಿಎಂ ಹಾಗೂ ಹಾಲಿ ಹುಬ್ಬಳ್ಳಿ-ಧಾರವಾಡದ ಶಾಸಕರಾದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

    ನಗರದಲ್ಲಿ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಗೆ ಅಖಂಡ ಕರ್ನಾಟಕದ ಕನಸಿದೆ. ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ನಾವು ಹೋರಾಟ ಮಾಡುತ್ತೇವೆ. ಆದರೆ ಈ ವಿಚಾರದಲ್ಲಿ ಉಮೇಶ ಕತ್ತಿ ಹಾಗೂ ಶ್ರೀರಾಮುಲು ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ ಅಷ್ಟೇ. ಆದರೆ ಸಿಎಂ ಕುಮಾರಸ್ವಾಮಿಯವರ ಪ್ರಚೋದನಾಕಾರಿ ಹೇಳಿಕೆಯಿಂದಲೇ ರಾಜ್ಯದಲ್ಲಿ ಪ್ರತ್ಯೇಕ ರಾಜ್ಯದ ಕೂಗು ಹೆಚ್ಚಾಗಿ ಬಂದ್ ನಡೆದಿದೆ ಎಂದು ದೂರಿದರು.

    ಪ್ರತ್ಯೇಕ ರಾಜ್ಯದ ವಿಚಾರದ ಹಿಂದೆ ಬಿಜೆಪಿ ಕೈವಾಡವಿದೆ ಎಂಬ ಕಾಂಗ್ರೆಸ್ ಆರೋಪ ಸತ್ಯಕ್ಕೆ ದೂರವಾದುದು. ಬಿಜೆಪಿಗೆ ಉತ್ತರ ಕರ್ನಾಟಕ ಅಭಿವೃದ್ಧಿಯಾಗುವುದು ಮುಖ್ಯ. ಈ ರಾಜ್ಯವನ್ನು ಹೆಚ್ಚಾಗಿ ಆಳಿದ್ದು ಕಾಂಗ್ರೆಸ್ ಪಕ್ಷ, ಅವರೇ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಿದರು.

  • ಹೈದ್ರಾಬಾದ್ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು- ಸಹಿ ಸಂಗ್ರಹಕ್ಕೆ ಮುನ್ನವೇ ಹೋರಾಟಗಾರರು ವಶಕ್ಕೆ

    ಹೈದ್ರಾಬಾದ್ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು- ಸಹಿ ಸಂಗ್ರಹಕ್ಕೆ ಮುನ್ನವೇ ಹೋರಾಟಗಾರರು ವಶಕ್ಕೆ

    ಕಲಬುರಗಿ: ಹೈದ್ರಾಬಾದ್ ಕರ್ನಾಟಕದಲ್ಲಿ ಪ್ರತ್ಯೇಕ ರಾಜ್ಯ ಬೇಕು ಅಂತ ಆಗ್ರಹಿಸಿ ಕಲಬುರಗಿಯಲ್ಲಿ ಸಹಿ ಸಂಗ್ರಹಕ್ಕೂ ಮುನ್ನ ಮುಂಜಾಗ್ರತಾ ಕ್ರಮವಾಗಿ 30ಕ್ಕೂ ಹೆಚ್ಚು ಮಂದಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಹೊಸ ದಕ್ಷಿಣ ಕರ್ನಾಟಕವೂ ಬೇಡ. ಮುಂಬೈ ಕರ್ನಾಟಕವೂ ಬೇಡ. ನಮಗೆ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಕು ಅಂತ ಇಂದು ಲಕ್ಷ ಲಕ್ಷ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲು ಮುಂದಾಗಿದ್ದರು. ಈಗ ಹೋರಾಟಗಾರರನ್ನು ವಶಕ್ಕೆ ಪಡೆಯುವ ಮೂಲಕ ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡಲಿಲ್ಲ.

    ಕಲಬುರಗಿಯ ಸರ್ಧಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಮ್ ಎಸ್ ಪಾಟೀಲ್ ನೇತೃತ್ವದಲ್ಲಿ ಮಠಾಧೀಶರು, ವಕೀಲರು, ವೈದ್ಯರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಹೋರಾಟಕ್ಕೆ ಚಾಲನೆ ನೀಡಲಾಯಿತು.

    ಉತ್ತರ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಬಂದ್‍ಗೆ ಯಾವುದೇ ಸಂಘಟನೆಗಳ ಬೆಂಬಲ ನೀಡಲಿಲ್ಲ. ಎಂದಿನಂತೆ ಸಾರಿಗೆ ಸಂಚಾರ, ಜನಜೀವನ, ಅಂಗಡಿ ಮುಂಗಟ್ಟುಗಳನ್ನ ವ್ಯಾಪಾರಸ್ಥರು ತೆರೆದಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.

  • ಅಭಿವೃದ್ಧಿ ಬಯಸುತ್ತೇವೆ ಹೊರತು ಪ್ರತ್ಯೇಕ ರಾಜ್ಯ ಅಲ್ಲ- ಎಂ.ಬಿ ಪಾಟೀಲ್

    ಅಭಿವೃದ್ಧಿ ಬಯಸುತ್ತೇವೆ ಹೊರತು ಪ್ರತ್ಯೇಕ ರಾಜ್ಯ ಅಲ್ಲ- ಎಂ.ಬಿ ಪಾಟೀಲ್

    ಬೆಂಗಳೂರು: ಪ್ರತ್ಯೇಕ ರಾಜ್ಯ ಬಯಸಿದವರು ನಾವಲ್ಲ. ಸಮಗ್ರ ಕರ್ನಾಟಕ ಬಯಸಿದವರು ನಾವು ಎಂದು ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

    ಉತ್ತರ ಕರ್ನಾಟಕ-ದಕ್ಷಿಣ ಕರ್ನಾಟಕ ರಾಜ್ಯದ ಎರಡು ಕಣ್ಣುಗಳು ಇದ್ದಂತೆ. ನಾವು ಅಭಿವೃದ್ಧಿಯನ್ನು ಬಯಸುತ್ತೇವೆ ಹೊರತು ಪ್ರತ್ಯೇಕ ರಾಜ್ಯ ಅಲ್ಲ. ಕಾಂಗ್ರೆಸ್ ಪಕ್ಷಕ್ಕೆ ದಕ್ಷಿಣ ಕರ್ನಾಟಕಕ್ಕಿಂತ ಹೆಚ್ಚಾಗಿ ಉತ್ತರ ಕರ್ನಾಟಕದ ಜನ ಮತ ನೀಡಿದ್ದಾರೆ ಅಂದ್ರು.

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವತ್ತೂ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂಬ ತಾರತಮ್ಯ ಮಾಡಿಲ್ಲ. ಕುಮಾರಸ್ವಾಮಿಯವರೂ ಮಾಡಲ್ಲ ಅನ್ನೋ ನಂಬಿಕೆ ಇದೆ ಎಂದು ಹೇಳಿದ್ದಾರೆ. ರಾಜ್ಯ ಇಬ್ಬಾಗ ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸಬಾರದು. ಈ ವಿಚಾರವನ್ನಿಟ್ಟುಕೊಂಡು ಬಿಎಸ್‍ವೈ ರಾಜ್ಯ ಪ್ರವಾಸ ನಡೆಸಿದ್ರೆ ಅದು ದುರ್ದೈವ ಎಂದು ಅಸಮಾಧಾನ ವ್ಯಕ್ತಪಡಿಸಿದರು.

  • ಲೋಕಸಮರದಲ್ಲಿ ಉತ್ತರ ಭಾಗದ ಸಂಸದರಿಗೆ ವೋಟ್ ಹಾಕ್ಬೇಡಿ- ಪಾಟೀಲ್ ಪುಟ್ಟಪ್ಪ ಕರೆ

    ಲೋಕಸಮರದಲ್ಲಿ ಉತ್ತರ ಭಾಗದ ಸಂಸದರಿಗೆ ವೋಟ್ ಹಾಕ್ಬೇಡಿ- ಪಾಟೀಲ್ ಪುಟ್ಟಪ್ಪ ಕರೆ

    ಧಾರವಾಡ: ಪ್ರತ್ಯೇಕ ಉತ್ತರ ಕರ್ನಾಟಕದ ಹೋರಾಟದಿಂದ ಏನೂ ಪ್ರಯೋಜನವಿಲ್ಲ. ಈ ಭಾಗದ ನೂರು ಜನ ಶಾಸಕರಿದ್ದರೂ ಏನು ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ರು. ಇಲ್ಲಿ ಆಯ್ಕೆಯಾದ ಸಂಸದರು ಏನೂ ಮಾಡಿಲ್ಲ, ಅವರಿಗೆ ಓಟ್ ಮಾಡ್ಬೇಡಿ ಎಂದು ಉತ್ತರ ಕರ್ನಾಟಕ ಜನತೆಗೆ ಹಿರಿಯ ಪತ್ರಕರ್ತ ಪಾಟೀಲ್ ಪುಟ್ಟಪ್ಪ ಕರೆ ನೀಡಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕರು ಮೊದಲು ಇಂಗ್ಲೆಂಡ್, ಆಸ್ಟ್ರೇಲಿಯಾ ನೋಡಬೇಕು ಎನ್ನುವ ಹವ್ಯಾಸ ಬಿಡಲಿ. ಅವರು ಮೊದಲು ಕರ್ನಾಟಕ ನೋಡಲಿ ಅಂತ ಸಲಹೆ ನೀಡಿದ್ರು. ಎಷ್ಟೋ ಮಂದಿ ಕರ್ನಾಟಕವನ್ನೇ ನೋಡಿಲ್ಲ. ಎಷ್ಟೋ ಮಂದಿ ಮಂತ್ರಿಗಳಾಗಿದ್ದಾರೆ. ಆದ್ರೆ ಅವರು ಉತ್ತರ ಕರ್ನಾಟಕಕ್ಕೆ ಬಂದೇ ಇಲ್ಲ. ಸಿನೆಮಾ ನಟರೊಬ್ಬರಿಗೆ ವೈದ್ಯಕೀಯ ಸೇವೆ ಬೇಕಾಯಿತು. ಸಿಂಗಾಪುರಕ್ಕೆ ಹೋದ್ರು. 3 ಕೋಟಿ ರೂ. ಖರ್ಚಾಯಿತು. ಇದು ರಾಜ್ಯ ಕಟ್ಟೋ ಯೋಜನೆಯಾ? ಅವರು ಕರ್ನಾಟಕವನ್ನು ನೋಡಿಲ್ಲ. ಹೀಗಾಗಿ ಅವರನ್ನು ಜನ ನೋಡಿಲ್ಲ ಅಂದ್ರು.

    ಈ ಹಿನ್ನೆಲೆಯಲ್ಲಿ ಸರ್ಕಾರ ತಮ್ಮ ಶಾಸಕರಿಗೆ ಏನಾದ್ರೂ ಉಪಕಾರ ಮಾಡಬೇಕು. ಕರ್ನಾಟಕವನ್ನು ಅವರಿಗೆ ತೋರಿಸಬೇಕು. ಹೀಗಾಗಿ ರಾಜ್ಯದ ಬಗ್ಗೆ ಅವರಿಗೆ ಆಸಕ್ತಿ ಮೂಡಲಿ. ವಿಷಾದವೆಂದರೆ ಉತ್ತರ ಕರ್ನಾಟಕದ ಶಾಸಕರು ಕೂಡ ಆ ಶಾಸಕರ ಭಾಗವಾಗಿದ್ದಾರೆ. ಅವರು ಜನರನ್ನು ಬಿಟ್ಟು ನಡೇತಿರಬೇಕಾದ್ರೆ ಜನ ಕೂಡ ಅವರನ್ನು ಬಿಟ್ಟು ನಡೀಬೇಕಾಗುತ್ತದೆ ಅಂತ ಸಿಡಿಮಿಡಿಗೊಂಡರು.

    ಅನ್ಯಾಯವಾಗಿದೆ ಆದ್ರೆ ಹೋರಾಟದ ಮೂಲಕ ನಾವು ಅದನ್ನು ಪಡೀಬೇಕು. ಇಷ್ಟಕ್ಕೆ ನಿಮ್ಮನ್ನು ಬಿಡಲ್ಲ. ಹೀಗಾಗಿ ಹೋರಾಟ ಮಾಡಿಯಾದ್ರು ಸರಿ ಕರ್ನಾಟಕವನ್ನು ಸಮಗ್ರವಾಗಿ ಬೆಳೆಯುವಂತೆ ನೋಡಿಕೊಳ್ಳುತ್ತೇವೆ ಅಂತ ವಿಶ್ವಾಸ ವ್ಯಕ್ತಪಡಿಸಿದ ಅವರು, ಒಂದು ವೇಳೆ ಜನ ವಿಭಜನೆ ಆಗುತ್ತೇವೆ ಅನ್ನೋ ಹಂತಕ್ಕೆ ಬಂದ್ರೆ ಏನೂ ಪ್ರಯೋಜನವಾಗಲ್ಲ. ಯಾಕಂದ್ರೆ ಆಂಧ್ರಪ್ರದೇಶ, ಹೈದರಾಬಾದ್, ತೆಂಗಾಣದಂತಹ ಸ್ಥಿತಿಗೆ ನಾವಿನ್ನು ಮುಟ್ಟಿಲ್ಲ ಅಂದ್ರು.

    ಉತ್ತರ ಕರ್ನಾಟಕದಲ್ಲಿ ನೂರು ಮಂದಿ ಶಾಸಕರಿದ್ದಾರೆ. ಆದ್ರೆ ಈ ಭಾಗಕ್ಕೆ ಅನ್ಯಾಯವಾಗುತ್ತಿದೆ ಅಂತ ಗೊತ್ತಿದ್ರೂ ಬಾಯಿ ಮುಚ್ಚಿ ಕೂತಿದ್ದಾರೆ ಅಂತ ಕಿಡಕಾರಿದ್ರು.