Tag: ಪ್ರತ್ಯೇಕ ಲಿಂಗಾಯತ ಧರ್ಮ

  • ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಮಾತೆ ಮಹಾದೇವಿ ತಿರುಗೇಟು

    ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಮಾತೆ ಮಹಾದೇವಿ ತಿರುಗೇಟು

    ಬಾಗಲಕೋಟೆ: ಲಿಂಗಾಯತ ಧರ್ಮ ಒಡೆಯಲು ಬಿಡುವುದಿಲ್ಲ ಎಂದು ಹೇಳಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿಕೆ ವಿರುದ್ಧ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ತಿರುಗೇಟು ನೀಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಮಿತ್ ಶಾ ಅವರಿಗೆ ಲಿಂಗಾಯತ ಧರ್ಮದ ಬಗ್ಗೆ ಸರಿಯಾಗಿ ಮನವರಿಕೆ ಆಗಿಲ್ಲ ಹಾಗೂ ತಿಳುವಳಿಕೆ ಇಲ್ಲ. ನಮ್ಮಲ್ಲಿಯೇ ಕೆಲವರು ಅಮಿತ್ ಶಾ ಅವರಿಗೆ ತಪ್ಪು ಮಾಹಿತಿ ಕೊಟ್ಟಿದ್ದು, ಇದನ್ನು ಸರಿಪಡಿಸಲು ಪುನಃ ಮನವರಿಕೆ ಮಾಡುತ್ತೇವೆ ಎಂದು ಹೇಳಿದರು.

    ದೆಹಲಿಯಲ್ಲಿ ಬೃಹತ್ ಲಿಂಗಾಯತ ಧರ್ಮದ ಸಮಾವೇಶವು ಡಿಸೆಂಬರ್ 10, 11 ಹಾಗೂ 12ರಂದು ನಡೆಯಲಿದೆ. ಈ ವೇಳೆ ಪ್ರತ್ಯೇಕ ಲಿಂಗಾಯತ ಧರ್ಮದ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸುತ್ತೇವೆ. ಜೊತೆಗೆ ಲಿಂಗಾಯತ ಧರ್ಮ ಅಲ್ಪಸಂಖ್ಯಾತರಿಗೆ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಕೇರಳ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.

    ಇದೇ ವೇಳೆ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆ ಅವಕಾಶ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಯಾವುದೋ ಸಮಯದಲ್ಲಿ ಅನಿಷ್ಟ ಪದ್ಧತಿಗಳು ಜಾರಿಯಾಗಿರುತ್ತವೆ. ಅವುಗಳನ್ನು ಮುಂದುವರಿಸಿಕೊಂಡು ಹೋಗುವುದು ತಪ್ಪು. ಸುಪ್ರೀಂಕೋರ್ಟ್ ತೀರ್ಪು ಸ್ವಾಗತಾರ್ಹವಾಗಿದೆ. ಆದರೆ ಸಂಕುಚಿತ ಮನೋಭಾವ ಹೊಂದಿರುವ ಕೆಲವರು ಇದನ್ನು ವಿರೋಧಿಸುತ್ತಿದ್ದಾರೆ ಎಂದು ದೂರಿದರು.

    ಎಲ್ಲ ಕ್ಷೇತ್ರದಲ್ಲಿ ಮಹಿಳೆ ಮೇಲೆ ಶೋಷಣೆ ನಡೆಯುತ್ತಿದೆ. ಅದನ್ನು ವಿರೋಧಿಸುವ ಮಹಿಳೆಯರನ್ನು ಬೆಂಬಲಿಸುತ್ತೇವೆ. ಆದರೆ ಈ ವಿಚಾರದಲ್ಲಿ ಕಾನೂನು ದುರುಪಯೋಗಕ್ಕೆ ಅವಕಾಶ ಕೊಡಬಾರದು. ಮಹಿಳೆಯರ ಪ್ರತಿಭೆ, ಸ್ವಾತಂತ್ರ್ಯ ಗುರುತಿಸುವ ಕೆಲಸ ಆಗಬೇಕು ಎಂದ ಅವರು, ಧಾರ್ಮಿಕ ವಿಚಾರದಲ್ಲಿ ಮಹಿಳೆಯರು ಶೋಷಣೆಗೆ ಒಳಗಾಗುತ್ತಿದ್ದರೆ ಅದೇ ಸಮುದಾಯದವರೇ, ಶೋಷಣೆ ವಿರುದ್ಧ ಹೋರಾಡಬೇಕು. ಒಂದು ವೇಳೆ ಬೇರೆ ಸಮುದಾಯದವರು ಇಂತಹ ಪ್ರಕರಣದಲ್ಲಿ ಭಾಗಿಯಾದರೆ ಅದಕ್ಕೆ ಕೋಮ ಗಲಭೆ ಎನ್ನುವ ಬಣ್ಣ ಹಚ್ಚುತ್ತಾರೆ ಎಂದು ಹೇಳಿದರು.

    ವಿವಾಹಿತರ ಅನ್ಯಸಂಬಂಧ ಅಪರಾಧವಲ್ಲ ಎನ್ನುವ ಸುಪ್ರೀಂ ತೀರ್ಪಿನ ಕುರಿತು ಮಾತನಾಡಿದ ಮಹಾದೇವಿ ಅವರು, ಈ ತೀರ್ಪನ್ನು ಮರು ಪರಿಶೀಲನೆ ಮಾಡಬೇಕು. ಸಂಸ್ಕೃತಮಯವಾಗದ ನಮ್ಮ ದೇಶದಲ್ಲಿ ಸಂಬಂಧಗಳಿಗೆ ಪಾವಿತ್ರ ಭಾವನೆ ಇದೆ. ಇದರಿಂದಾಗಿ ಅನೈತಿಕ ಸಂಬಂಧ ಅಪರಾಧವಲ್ಲ ಎಂದಿದ್ದು ಸಮಂಜಸವಲ್ಲ. ಇದು ನಮ್ಮ ಸಂಸ್ಕೃತಿಗೆ ವಿರೋಧ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಲಿಂಗಾಯತರ ಬಗ್ಗೆ ಕಾಳಜಿ ಇದ್ದವರು ಜನಾಂದೋಲನ ಕೈಗೊಳ್ಳಲಿ: ಜಗದೀಶ್ ಶೆಟ್ಟರ್ ಸವಾಲು

    ಲಿಂಗಾಯತರ ಬಗ್ಗೆ ಕಾಳಜಿ ಇದ್ದವರು ಜನಾಂದೋಲನ ಕೈಗೊಳ್ಳಲಿ: ಜಗದೀಶ್ ಶೆಟ್ಟರ್ ಸವಾಲು

    ಹುಬ್ಬಳ್ಳಿ: ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಕಾಳಜಿ ಇರುವವರು ಈಗ ಜನಾಂದೋಲನ ಹೋರಾಟಕ್ಕೆ ಮುಂದಾಗಲಿ. ರಾಜಕೀಯ ಉದ್ದೇಶಕ್ಕಾಗಿ ಹೋರಾಟ ಮಾಡಿ ಸಮಾಜದಲ್ಲಿ ಒಡಕು ತಂದಿಟ್ಟರು ಎಂದು ಶಾಸಕ ಜಗದೀಶ್ ಶೆಟ್ಟರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಭಾನುವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಲಿಂಗಾಯತ ಹಾಗೂ ವೀರಶೈವ ಲಿಂಗಾಯತ ಒಂದೇ. ಚುನಾವಣೆ ಹಿನ್ನೆಲೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ಕೆಲವರು ಮುಂದಾದರು. ಅಂತವರಿಗೆ ಜನರು ಚುನಾವಣೆಯ ಫಲಿತಾಂಶದಲ್ಲಿ ತಕ್ಕ ಪಾಠ ಕಲಿಸಿದ್ದಾರೆ. ಲಿಂಗಾಯತರ ಬಗ್ಗೆ ಕಾಳಜಿ ಇದ್ದವರು ಈಗ ಹೋರಾಟಕ್ಕೆ ಇಳಿಯಲಿ ಎಂದು ಸವಾಲು ಹಾಕಿದರು.

    ಪ್ರತ್ಯೇಕ ಲಿಂಗಾಯತ ಧರ್ಮದ ಪ್ರಸ್ತಾವವನ್ನು ಕೇಂದ್ರ ಸರ್ಕಾರ ಯಾವ ಕಾರಣಕ್ಕೆ ವಾಪಸ್ ಕಳುಹಿಸಿದೆ ಎಂದು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ. ಇದೊಂದು ಸ್ವಾರ್ಥ ಸಾಧನೆಗಾಗಿ ಮಾಡಿದ ಹೋರಾಟ ಅಷ್ಟೇ. ಕೆಲವೇ ಕೆಲವು ನಾಯಕರು, ಸ್ವಾಮೀಜಿಗಳು ಮುಂಚೂಣಿಯಲ್ಲಿದ್ದರು, ಸ್ವಹಿತಾಸಕ್ತಿಗೋಸ್ಕರ ನಡೆಸಿದ ಹೋರಾಟಕ್ಕೆ ಮಹತ್ವ ನೀಡುವುದು ಬೇಡ ಎಂದು ಹೇಳಿದರು.

  • ಲಿಂಗಾಯತ ಧರ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲಲ್ಲ: ಬಸವರಾಜ್ ಹೊರಟ್ಟಿ

    ಲಿಂಗಾಯತ ಧರ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲಲ್ಲ: ಬಸವರಾಜ್ ಹೊರಟ್ಟಿ

    ಧಾರವಾಡ: ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಇನ್ನುಮುಂದೆ ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.

    ಕೇಂದ್ರ ಸರ್ಕಾರವು ಮರು ಶಿಫಾರಸ್ಸು ಮಾಡುವಂತೆ ಸೂಚಿಸಿದ್ದು, ಇದರ ಹಿಂದೆ ಏನೋ ಷಡ್ಯಂತ್ರವಿದೆ. ನಮ್ಮಲ್ಲಿಯೇ ಜಗಳ ಹಚ್ಚುವ ಆಲೋಚನೆ ಹೊಂದಿದ್ದು, ನಾವು ಇನ್ನು ಮುಂದೆ ಯಾವುದೇ ರ್ಯಾಲಿ ಮಾಡುವುದಿಲ್ಲ. ಬದಲಿಗೆ ಕಾನೂನು ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಅವರು ಹೇಳಿದರು.

    ಸಿ.ಎಂ.ಕುಮಾರಸ್ವಾಮಿ ಅವರು ಸಾಲ ಮನ್ನಾ ಸಭೆ ಆಯೋಜಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರು ವಿನಾಕಾರಣ ನೆಪ ಹೇಳಿ ಗೈರಾಗಿದ್ದಾರೆ. ರೈತರ ಬಗ್ಗೆ ಕಾಳಜಿ ಇದ್ದವರು ಸಭೆಗೆ ಏಕೆ ಹೋಗಲಿಲ್ಲ ಎಂದು ಬಿಎಸ್‍ವೈ ವಿರುದ್ಧ ವಾಗ್ದಾಳಿ ನಡೆಸಿದರು.

  • ನಾನು ಕೊಟ್ಟಿರುವ ದಾಖಲೆಗಳಲ್ಲಿ ಸಣ್ಣಪುಟ್ಟ ಲೋಪದೋಷಗಳಿದ್ದರೆ ಎಂ.ಬಿ.ಪಾಟೀಲ್ ಹೇಳಿದ್ದಂತೆ ಕೇಳಲು ನಾನು ಸಿದ್ದನಿದ್ದೇನೆ: ಬಿಎಸ್‍ವೈ

    ನಾನು ಕೊಟ್ಟಿರುವ ದಾಖಲೆಗಳಲ್ಲಿ ಸಣ್ಣಪುಟ್ಟ ಲೋಪದೋಷಗಳಿದ್ದರೆ ಎಂ.ಬಿ.ಪಾಟೀಲ್ ಹೇಳಿದ್ದಂತೆ ಕೇಳಲು ನಾನು ಸಿದ್ದನಿದ್ದೇನೆ: ಬಿಎಸ್‍ವೈ

    ತುಮಕೂರು: ನಾನು ಕೊಟ್ಟಿರುವ ದಾಖಲೆಗಳಲ್ಲಿ ಸಣ್ಣಪುಟ್ಟ ಲೋಪದೋಷಗಳಿದ್ದರೆ ಎಂ.ಬಿ.ಪಾಟೀಲ್ ಹೇಳಿದ್ದಂತೆ ಕೇಳಲು ನಾನು ಸಿದ್ದನಿದ್ದೇನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

    ತುಮಕೂರಿನಲ್ಲಿ ರಾಜ್ಯಸಭಾ ಚುನಾವಣೆ ಬಗ್ಗೆ ಕುರಿತು ಮಾತನಾಡಿದ ಅವರು, ರಾಜ್ಯಸಭಾ ಚುನಾವಣೆಯಲ್ಲಿ 50 ಕ್ಕೂ ಹೆಚ್ಚು ಜನ ಶಾಸಕರ ಬೆಂಬಲವಿದೆ. ಹಾಗಾಗಿ ನಮ್ಮ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರು ಗೆಲವು ಸಾಧಿಸುತ್ತಾರೆಂದು ವಿಶ್ವಾಸದ ಮಾತನ್ನಾಡಿದರು.

    ಕಾಮಗಾರಿ ಗುತ್ತಿಗೆ ನೀಡಿರೊದ್ರಲ್ಲಿ ಅವ್ಯವಹಾರ ನಡೆದಿರೋದು ಸತ್ಯ. ಇದನ್ನು ಸಚಿವ ಎಂ.ಬಿ ಪಾಟೀಲ್ ಅವರಿಗೆ ನೇರವಾಗಿ ಕೇಳಲು ಬಯಸುತ್ತೇನೆ. ನಾನು ಕೊಟ್ಟಿರುವ ದಾಖಲೆಗಳಲ್ಲಿ ಸಣ್ಣಪುಟ್ಟ ಲೋಪದೋಷಗಳಿದ್ದರೆ ಅವರು ಹೇಳಿದ್ದಂತೆ ಕೇಳಲು ನಾನು ಸಿದ್ದನಿದ್ದೇನೆ. ಹೊರ ರಾಜ್ಯದಿಂದ ಫೇಕ್ ಸರ್ಟಿಫಿಕೇಟ್ ಗಳನ್ನು ತಂದು ಕಾಮಗಾರಿ ಮಾಡಿದ್ದೇನೆಂದು ಸವಾಲು ಹಾಕಿದ್ದಾರೆ.

    ಎಜೆನ್ಸಿಯವರು ಅಪ್ಲೈ ಮಾಡಿದ್ದು, ಅದಕ್ಕೆ ಅನುಮತಿ ನೀಡಲಾಗಿತ್ತು. ನಾವು ಅದಕ್ಕೆ ಆಕ್ಷೇಪ ಮಾಡಿದ ಮೇಲೆ ಅವರು ಎರಡು ದಿನದ ಹಿಂದೆ ವಿತ್ ಡ್ರಾ ಮಾಡಲಾಗಿದೆ. 25 ಕೋಟಿ ಕಮಿಷನ್ ಹೊಡೆದು, ಕಾಮಗಾರಿಗೆ ಕೊಟ್ಟಿದ್ದಾರೆ. ಹೊರಗಡೆಯಿಂದ ಇಬ್ಬರನ್ನು ಕರೆದು ಇಷ್ಟು ದೊಡ್ಡ ಕಾಮಗಾರಿ ಕೊಟ್ಟಿರುವ ಉದ್ದೇಶವೇನು? ಇದು ಅಕ್ಷಮ್ಯ ಅಪರಾಧವಾಗಿದೆ. ಕಮಿಷನ್ ತೆಗೆದುಕೊಂಡ ಮೇಲೆ ವರ್ಕ್ ಕೊಡಲಾಗಿತ್ತು ಎಂದು ಎಂ.ಬಿ.ಪಾಟೀಲ್ ವಿರುದ್ದ ಅಕ್ಷಮ್ಯ ಅಪರಾಧವೆಂದು ಹರಿಹಾಯ್ದರು.

  • ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆಗೆ ಬಿಎಸ್‍ವೈ, ಅನಂತ್ ಕುಮಾರ್, ಡಿವಿಎಸ್ ಸಹಾಯ ಮಾಡ್ಬೇಕು- ಎಂ.ಬಿ ಪಾಟೀಲ್

    ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆಗೆ ಬಿಎಸ್‍ವೈ, ಅನಂತ್ ಕುಮಾರ್, ಡಿವಿಎಸ್ ಸಹಾಯ ಮಾಡ್ಬೇಕು- ಎಂ.ಬಿ ಪಾಟೀಲ್

    ವಿಜಯಪುರ: ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆ ಶಿಫಾರಸ್ಸು ಪತ್ರವನ್ನು ರಾಜ್ಯ ಸರ್ಕಾರ, ಕೇಂದ್ರಕ್ಕೆ ಕಳುಹಿಸಿದೆ. ಆದ್ರೆ ಆ ವಿಚಾರದಲ್ಲಿ ಹಾಲಲ್ಲಿ ಉಪ್ಪು ಹಾಕುವ ಕೆಲಸವನ್ನು ಮಾಡಬೇಡಿ ಎಂದು ಪರೋಕ್ಷವಾಗಿ ಯಡಿಯೂರಪ್ಪ, ಅನಂತಕುಮಾರ್ ಹಾಗೂ ಸದಾನಂದಗೌಡ ಅವ್ರಿಗೆ ಜಲಸಂಪನ್ಮೂಲ ಸಚಿವ ಎಂ ಬಿ ಪಾಟೀಲ್ ಟಾಂಗ್ ನೀಡಿದ್ದಾರೆ.

    ನಗರದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ಪುರಾವೆಗಳನ್ನು, ಸಾಕ್ಷ್ಯಗಳನ್ನು ನೀಡಿ ಕೇಂದ್ರಕ್ಕೆ ಕಳುಹಿಸಿದ್ದೇವೆ. ಕೇಂದ್ರ ಸರ್ಕಾರ ಕೂಡ ನಮ್ಮ ಮನವಿಗೆ ಸ್ಪಂದಿಸುತ್ತದೆಯೆಂಬ ಅಚಲ ವಿಶ್ವಾಸವಿದೆ. ಆದ್ರೆ ಅದ್ರಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರಾದ ಅನಂತಕುಮಾರ್, ಸದಾನಂದಗೌಡ ಅವರು ನಮಗೆ ಸಹಾಯ ಮಾಡಬೇಕೆಂದು ಅವರು ಮನವಿ ಮಾಡಿದ್ರು. ಇದನ್ನೂ ಓದಿ: ಸಿಎಂ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ: ರಂಭಾಪುರಿ ಶ್ರೀ

    ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆಗೂ ಚುನಾವಣೆಗೂ ಸಂಬಂಧವಿಲ್ಲ. ಚುನಾವಣೆಗಾಗಿ ನಾವು ಮಾಡೋದಿದ್ರೆ ನಾವು ಯಾವಾಗಲೋ ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸುತ್ತಿದ್ದೆವು. ರಾಜ್ಯದಲ್ಲಿ ಅದಕ್ಕೆ ಮಾನ್ಯತೆ ಕೊಟ್ಟು ಬಳಿಕ ನಾವು ಕೇಂದ್ರಕ್ಕೆ ಶಿಫಾರಸ್ಸು ಕಳಿಸಿದ್ದೇವೆ. ಆರಂಭದಲ್ಲಿ ಬಹಳ ಜನ ಎಂಬಿ ಪಾಟೀಲರು ಚುನಾವಣೆಗಾಗಿ ಪ್ರತ್ಯೇಕತೆ ಕೂಗು ಎತ್ತಿದ್ದಾರೆಂದು ಮಾತನಾಡಿದ್ರು. ಆದ್ರೆ ಅದಕ್ಕೆ ನಾವು ಬದ್ಧತೆಯಿಂದ ರಾಜ್ಯದಲ್ಲಿ ಮಾನ್ಯತೆ ನೀಡಿ ಕೇಂದ್ರಕ್ಕೆ ಶಿಫಾರಸ್ಸು ಕಳಿಸಿದ್ದೆವೆ. ಇದ್ರಲ್ಲಿ ರಾಜಕೀಯ ಮಾಡುವುದು ಬೇಡ. ನಾವು ಯಡಿಯೂರಪ್ಪ, ಅನಂತಕುಮಾರ್, ಸದಾನಂದಗೌಡ ಅವರಿಗೆ ತಲೆ ಬಾಗಿಸುತ್ತೆವೆ.ವಿನಂಮ್ರತೆಯಿಂದ ಮುನ್ನಡೆಯಬೇಕಿದೆ ಅಂದ್ರು. ಇದನ್ನೂ ಓದಿ: ಲಿಂಗಾಯತ, ವೀರಶೈವ ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ – ಕೇಂದ್ರಕ್ಕೆ ಶೀಘ್ರವೇ ಸಿದ್ದು ಸರ್ಕಾರದಿಂದ ಶಿಫಾರಸ್ಸು

    ರಂಭಾಪುರಿ ಶ್ರೀಗಳೂ ನಮ್ಮ ಗುರುಗಳು. ಅವರು ನಮ್ಮ ಬಸವ ತತ್ವಕ್ಕೆ ಒಪ್ಪಿಕೊಳ್ಳುವುದಿಲ್ಲ. ಅವ್ರಿಗೆ ಅವರದ್ದೇ ಆದ ತಾತ್ವಿಕ ಅಭಿಪ್ರಾಯ ಇದೆ. ಹೀಗಾಗಿ ಶೀಘ್ರದಲ್ಲೇ ರಂಭಾಪುರಿ ಶ್ರೀಗಳನ್ನು ಭೇಟಿ ಮಾಡಿ ಅವರ ಮನವೊಲಿಸುತ್ತೆವೆ ಅಂತ ತಿಳಿಸಿದ್ರು.  ಇದನ್ನೂ ಓದಿ: ಲಿಂಗಾಯತ, ವೀರಶೈವರಿಗೆ ಅಲ್ಪಸಂಖ್ಯಾತ ಸ್ಥಾನ ಸಿಕ್ಕಿದ್ರೆ ಯಾವ ಸೌಲಭ್ಯ ಸಿಗುತ್ತೆ?

    ಈಗ ಜಾಗತಿಕ ಧರ್ಮ ಆಗಲು ಕಾಲ ಪಕ್ವವಾಗಿದೆ. ಜಯದ ಜೊತೆಗೆ ನಾವು ವಿನಂಮ್ರವಾಗಿ ಎಲ್ಲರನ್ನು ಕೂಡಿಸಿಕೊಂಡು ಬಸವ ಧರ್ಮಗಾಗಿ ಒಟ್ಟಾಗಲಿದ್ದೆವೆ. ನಮಗೆ ಬೈದವ್ರನ್ನು ಸೇರಿಸಿಕೊಂಡು ಒಟ್ಟಾಗಿ ಹೋಗುತ್ತೇವೆ. ಈಶ್ವರ ಖಂಡ್ರೆ, ಮಲ್ಲಿಕಾರ್ಜುನ, ಶಾಮನೂರು ಶಿವಶಂಕರಪ್ಪ, ಯಡಿಯೂರಪ್ಪ ಹೀಗೆ ಎಲ್ಲರನ್ನು ಸೇರಿಸಿಕೊಂಡು ಧರ್ಮ ಸ್ಥಾಪನೆಗೆ ಮುನ್ನಡೆಯಲಿದ್ದೇವೆ ಎಂದರು.

  • ಲಿಂಗಾಯತ, ವೀರಶೈವರಿಗೆ ಅಲ್ಪಸಂಖ್ಯಾತ ಸ್ಥಾನ ಸಿಕ್ಕಿದ್ರೆ ಯಾವ ಸೌಲಭ್ಯ ಸಿಗುತ್ತೆ?

    ಲಿಂಗಾಯತ, ವೀರಶೈವರಿಗೆ ಅಲ್ಪಸಂಖ್ಯಾತ ಸ್ಥಾನ ಸಿಕ್ಕಿದ್ರೆ ಯಾವ ಸೌಲಭ್ಯ ಸಿಗುತ್ತೆ?

    ಬೆಂಗಳೂರು: ರಾಜ್ಯದ ರಾಜಕೀಯ ಹಾಗೂ ಧಾರ್ಮಿಕ ವಲಯದಲ್ಲಿ ಕೋಲಾಹಲ ಸೃಷ್ಟಿಸಿದ್ದ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೊನೆಗೂ ಸಿದ್ದರಾಮುಯ್ಯ ನೇತೃತ್ವದ ರಾಜ್ಯಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇದೇ ವೇಳೆ ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ಸಿಕ್ಕಿದ್ರೆ ಹೆಚ್ಚು ಸೌಲಭ್ಯ ಸಿಗುತ್ತೆ ಎನ್ನವು ಚರ್ಚೆ ನಡೆಯುತ್ತದೆ. ಆದರೆ ಪ್ರತ್ಯೇಕ ಧರ್ಮ ಸ್ಥಾನ ಜೊತೆಗೆ ಯಾವ ಸೌಲಭ್ಯಗಳಿ ಸಿಗುತ್ತೆ ಎಂಬುದರ ಮಾಹಿತಿ ಇಲ್ಲಿದೆ.

    ರಾಜ್ಯ ಸರ್ಕಾರ ಪ್ರತ್ಯೇಕ ಧರ್ಮ ಸ್ಥಾನಮಾನ ವಿಚಾರದಲ್ಲಿ ಕೆಲವು ನಿರ್ಣಯಗಳನ್ನು ಕೈಗೊಂಡಿದೆ. ಒಂದು ವೇಳೆ ಕೇಂದ್ರ ರಾಜ್ಯ ಸರ್ಕಾರದ ಶಿಫಾರಸಿಗೆ ಒಪ್ಪಿಗೆ ನೀಡಿದರು ಅಲ್ಪ ಸಂಖ್ಯಾತರಿಗೆ ಸಿಗುವ ವಿಶೇಷ ಸೌಲಭ್ಯಗಳು ಲಿಂಗಾಯತ, ವೀರಶೈವರಿಗೆ ಸಿಗುವುದಿಲ್ಲ. ಉದ್ಯೋಗದಲ್ಲೂ ಯಾವುದೇ ಸೌಲಭ್ಯಗಳು ಸಿಗಲ್ಲ. ಆದರೆ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅಲ್ಪಸಂಖ್ಯಾತರಿಗೆ ಇರುವ ಸೌಲಭ್ಯ ಸಿಗುತ್ತೆ.

    ಲಿಂಗಾಯತ, ವೀರಶೈವರಿಗೆ ಅಲ್ಪಸಂಖ್ಯಾತ ಸ್ಥಾನಮಾನದಿಂದ ಹಾಲಿ ಇರುವ ಪ್ರವರ್ಗ ಬದಲಾಗುವುದಿಲ್ಲ. ಪ್ರಸ್ತುತ ಇರುವ 3ಬಿ ಅಡಿಯಲ್ಲಿಯೇ ಲಿಂಗಾಯತ, ವೀರಶೈವ ಸಮುದಾಯ ಮುಂದುವರೆಯುತ್ತದೆ. ಲಿಂಗಾಯತ, ವೀರಶೈವರಿಗೆ ಅಲ್ಪಸಂಖ್ಯಾತ ಸ್ಥಾನ ಸಿಕ್ಕರೇ ಮುಸ್ಲಿಮರಿಗೆ ಹಾಲಿ ಇರುವ ಸೌಲಭ್ಯಗಳಿಗೆ ಯಾವುದೇ ಧಕ್ಕೆ ಉಂಟಾಗುವುದಿಲ್ಲ. ರಾಜ್ಯದಲ್ಲಿ ಮುಸ್ಲಿಮರಿಗೆ ಪ್ರಸ್ತುತ 4%ರಷ್ಟು ಮೀಸಲಾತಿ ನೀಡಲಾಗಿದೆ. ಇದನ್ನು ಓದಿ: ಬಸವ ತತ್ವ ಪರಿಪಾಲಕರಿಗೆ ಪ್ರತ್ಯೇಕ ಧರ್ಮ- ಕ್ಯಾಬಿನೆಟ್ ಸಭೆಯ ಇನ್‍ಸೈಡ್ ಸ್ಟೋರಿ ಇಲ್ಲಿದೆ

    ಸಚಿವ ಸಂಪುಟದ ನಿರ್ಣಯಗಳೇನು?
    * ಬಸವ ತತ್ವ ಒಪ್ಪಿ ಬರುವವರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ
    * ಲಿಂಗಾಯತ ಮತ್ತು ವೀರಶೈವ, ಬಸವತತ್ವದಡಿ ನಂಬಿಕೆ ಇರುವವರಿಗೆ ಅನ್ವಯ
    * ಪ್ರತ್ಯೇಕ ಧರ್ಮಕ್ಕೆ ಒಳಗಾಗುವವರಿಗೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ
    * ಕರ್ನಾಟಕ ಅಲ್ಪಸಂಖ್ಯಾತ ಕಾಯ್ದೆಯ ಸೆಕ್ಷನ್ 2ಡಿ ಅಡಿ ಶಿಫಾರಸು
    * ಕೇಂದ್ರದ ಅಲ್ಪಸಂಖ್ಯಾತ ಆಯೋಗದ 2 (ಸಿ) ಕಾಯ್ದೆ ಅನ್ವಯ

    ಅಲ್ಪಸಂಖ್ಯಾತರ ಸ್ಥಾನಮಾನ ಯಾರಿಗೆ?
    * ರಾಜ್ಯ ಸರ್ಕಾರವೇನೋ ಶಿಫಾರಸು ಮಾಡಿದೆ ಆದ್ರೆ ಕೇಂದ್ರ ಸಂಪುಟ ಒಪ್ಪಿಗೆ ನೀಡಬೇಕು
    * ಅಲ್ಪಸಂಖ್ಯಾತರ ಸ್ಥಾನಮಾನ ಬೇಕಾದರೆ ವೀರಶೈವರು ಕೂಡ ಬಸವ ತತ್ವ ಪಾಲನೆ ಮಾಡಬೇಕು
    * ವೀರಶೈವರು ತಮ್ಮದೇ ಆದ ತತ್ವ ಸಿದ್ಧಾಂತ ಹೊಂದಿರುವುದರಿಂದ ಬಸವ ತತ್ವ ಅನುಕರಣೆ ಅಸಾಧ್ಯ
    * ಅಲ್ಪಸಂಖ್ಯಾತರ ಸ್ಥಾನಮಾನ ಸಿಕ್ಕಿದ್ರೆ, ಲಿಂಗಾಯತರು ಮತ್ತು ವೀರಶೈವರು ಹಿಂದುಗಳಲ್ಲ! ಇದನ್ನು ಓದಿ: ಸಿಎಂ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ: ರಂಭಾಪುರಿ ಶ್ರೀ

  • ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ – ವೀರಶೈವ, ಲಿಂಗಾಯತ ಕಾರ್ಯಕರ್ತರ ನಡುವೆ ಮಾರಾಮಾರಿ

    ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ – ವೀರಶೈವ, ಲಿಂಗಾಯತ ಕಾರ್ಯಕರ್ತರ ನಡುವೆ ಮಾರಾಮಾರಿ

    ಕಲಬುರಗಿ: ರಾಜ್ಯ ಸರ್ಕಾರ ಪ್ರತ್ಯೇಕ ಲಿಂಗಾಯತ ಧರ್ಮ ವರದಿಯನ್ನು ಒಪ್ಪಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ನಿರ್ಧಾರ ಕೈಗೊಂಡಿದ್ದಕ್ಕೆ ಪರ, ವಿರೋಧ ವ್ಯಕ್ತವಾಗಿದೆ.

    ನಗರದ ಪಟೇಲ್ ವೃತ್ತದಲ್ಲಿ ವೀರಶೈವರು ತೀರ್ಮಾನವನ್ನು ವಿರೋಧಿಸಿದ್ದರೆ, ಲಿಂಗಾಯತರು ಸ್ವಾಗತಿಸಿದ್ದಾರೆ. ಇದೇ ವೇಳೆ ರಾಜ್ಯ ಸರ್ಕಾರ ಶಿಫಾರಸ್ಸು ಕೈಗೊಳ್ಳಲು ತೀರ್ಮಾನಿಸಿದ ಹಿನ್ನೆಲೆಯಲ್ಲಿ ಸಂಭ್ರಮಾಚಣೆಯಲ್ಲಿ ತೊಡಗಿದ್ದ ಲಿಂಗಾಯತರು ಹಾಗೂ ವೀರಶೈವರ ನಡುವೆ ಮಾತಿನ ಚಕಮಕಿ ನಡೆದು ಮಾರಾಮರಿ ನಡೆದಿದೆ.

    ಪ್ರತಿಭಟನೆ ನಡೆಸುತ್ತಿದ್ದಾಗ ವೀರಶೈವರು ಚಪ್ಪಲಿ ತೋರಿಸಿದ್ದಾರೆ. ಈ ವೇಳೆ ಆರಂಭದಲ್ಲಿ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದ್ದು ಈ ಸಂದರ್ಭದಲ್ಲಿ ವೀರಶೈವ ಕಾರ್ಯಕರ್ತರ ಮೇಲೆ ದಾಳಿ ನಡೆದಿದೆ. ವಿಕೋಪಕ್ಕೆ ಹೋಗಿ ವೀರಶೈವ ಲಿಂಗಾಯತ ಮುಖಂಡ ಎಮ್ ಎಸ್ ಪಾಟೀಲ್ ನರಿಬೋಳ್ ಮತ್ತು ಕಾರ್ಯಕರ್ತರು ಲಿಂಗಾಯತ ಮುಖಂಡರಿಗೆ ಚಪ್ಪಲಿ ತೋರಿಸಿದ್ದಾರೆ. ಇದರಿಂದ ರೊಚ್ವಿಗೆದ್ದ ಲಿಂಗಾಯತ ಮುಖಂಡರು, ಎಮ್ ಎಸ್ ಪಾಟೀಲ್ ನರಿಬೋಳ್‍ನ ಶರ್ಟ್ ಹಿಡಿದು ಎಳೆದಾಡಿ ಮನಬಂದಂತೆ ಥಳಿಸಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಹೆಚ್ಚಿನ ಪೊಲೀಸರು ಇಬ್ಬರ ಜಗಳವನ್ನ ಬಿಡಿಸಲು ಹರಸಾಹಸಪಟ್ಟರು.

    ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಎಂಬಿ ಪಾಟೀಲ್, ವಿನಯ್ ಕುಲಕರ್ಣಿ ಹಾಗೂ ಬಸವರಾಜ್ ಹೊರಟ್ಟಿ ಅವರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ವೀರಶೈವರು ಪ್ರತಿಭಟನೆ ನಡೆಸಿದರು. ಅಲ್ಲದೇ ರಾಜ್ಯ ಸರ್ಕಾರದ ಶಿಫಾರಸನ್ನು ಕೇಂದ್ರ ಸರ್ಕಾರ ತಿರಸ್ಕರಿಸಲು ಒತ್ತಾಯ ಮಾಡಿದ್ದಾರೆ. ಇದನ್ನೂ ಓದಿ: ಸಿಎಂ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ: ರಂಭಾಪುರಿ ಶ್ರೀ

    ಪೊಲೀಸರು ಮಧ್ಯಸ್ಥಿಕೆ ವಹಿಸಿದ್ದರು ಸಹ ವೀರಶೈವರ ಮೇಲೆ ಲಿಂಗಾಯತರ ಸಿಟ್ಟು ಮಾತ್ರ ಕಡಿಮೆಯಾಗಲಿಲ್ಲ. ಇನ್ನು ಘಟನೆ ನಂತರ ಸ್ಥಳಕ್ಕೆ ಭೇಟಿ ನೀಡಿದ ಕಲಬುರಗಿ ಎಸ್ಪಿ ಎನ್.ಶಶಿಕುಮಾರ್ ಪ್ರಕರಣ ದಾಖಲಿಸಿ ಸೂಕ್ತ ತನಿಖೆ ನಡೆಸುವುದ್ದಾಗಿ ಹೇಳಿದ್ದಾರೆ. ಇದನ್ನೂ ಓದಿ: ಲಿಂಗಾಯತ, ವೀರಶೈವ ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ – ಕೇಂದ್ರಕ್ಕೆ ಶೀಘ್ರವೇ ಸಿದ್ದು ಸರ್ಕಾರದಿಂದ ಶಿಫಾರಸ್ಸು

    ಹಲ್ಲೆ ನಡೆದ ಬಗ್ಗೆ ಪ್ರತಿಕ್ರಿಯಿಸಿದ ಲಿಂಗಾಯತರು, ನಾವು ಯಾರು ಹಲ್ಲೆ ನಡೆಸಿಲ್ಲ, ಕೆಲವರು ಶಾಂತಿ ಹಾಗೂ ಸುವ್ಯವಸ್ಥೆ ಕದಡಲು ಯತ್ನಸಿದ್ದಾರೆ ಎಂದು ಆರೋಪಿಸಿದರು. ಅಷ್ಟೇ ಅಲ್ಲೇ ಹಲವು ವರ್ಷಗಳ ಹೋರಾಟಕ್ಕೆ ಈಗ ಜಯ ಸಿಕ್ಕಿದೆ ಎಂದು ತಿಳಿಸಿದರು.

    https://www.youtube.com/watch?v=mGoyjkZFU_M

  • ಸಿಎಂ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ: ರಂಭಾಪುರಿ ಶ್ರೀ

    ಸಿಎಂ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ: ರಂಭಾಪುರಿ ಶ್ರೀ

    ಹುಬ್ಬಳ್ಳಿ: ಪ್ರತ್ಯೇಕ ಲಿಂಗಾಯತ ಧರ್ಮ ಕುರಿತ ನಾಗಮೋಹನ ದಾಸ್ ಸಮಿತಿ ವರದಿಯನ್ನು ಒಪ್ಪಿದ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ನಿರ್ಧಾರವನ್ನು ಕೈಗೊಂಡ ಹಿನ್ನೆಲೆಯಲ್ಲಿ ರಂಭಾಪುರಿ ಶ್ರೀ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ರಂಭಾಪುರಿ ಶ್ರೀಗಳು, ಮುಖ್ಯಮಂತ್ರಿಗಳು ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ. ಲಿಂಗಾಯತ ವೀರಶೈವ ಧರ್ಮವನ್ನ ಛಿದ್ರ ಮಾಡಿದ್ದಾರೆ. ಇವರಿಗೆ ಜನರು ತಕ್ಕಪಾಠ ಕಲಿಸುತ್ತಾರೆ. ಅತ್ಯಂತ ಅವೈಜ್ಞಾನಿಕ ಹಾಗೂ ರಾಜಕೀಯ ಪ್ರೇರಿತರಾಗಿ ನಿರ್ಧಾರ ಕೈಗೊಂಡಿದ್ದಾರೆ ಎಂದು ಕಿಡಿಕಾರಿದರು.

    ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯೇಕ ಧರ್ಮ ಸ್ಥಾಪನೆ ಮಾಡುವ ವಿಚಾರದಲ್ಲಿ ಅತುರದ ನಿರ್ಧಾರ ಮಾಡಿದ್ದಾರೆ. ಕ್ಯಾಬಿನೆಟ್ ನಿರ್ಧಾರವನ್ನು ವೀರಶೈವ ಲಿಂಗಾಯತ ಧರ್ಮ ರಾಷ್ಟ್ರೀಯ ಮಠ ಪರಿಷತ್ ಖಂಡಿಸುತ್ತದೆ. ಅಲ್ಲದೇ ವೀರಶೈವ ಮಠಾಧೀಶರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ವೀರಶೈವದಿಂದ ಲಿಂಗಾಯತವನ್ನು ಯಾರು ಬೇರ್ಪಡಿಸಲು ಸಾಧ್ಯವಿಲ್ಲ. ಧರ್ಮವನ್ನು ಒಡೆಯುವ ಕೆಲಸ ಮಾಡಿದ ರಾಜಕಾರಣಿಗಳಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ. ರಾಜ್ಯದ ಶಿಫಾರಸಿಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸುವುದಿಲ್ಲ ಎಂದು ಹೇಳಿದರು.

    ಸಮಿತಿಯ ಮುಂದೆ ಈಗಾಗಲೇ ನಾವು ಸಾವಿರಾರು ಪುಟಗಳ ಮಾಹಿತಿ ನೀಡಿದ್ದೆವು. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರು ಸಹ ವೀರಶೈವ ಹಾಗೂ ಲಿಂಗಾಯತ ಧರ್ಮದ ಎಲ್ಲರು ಒಟ್ಟಿಗೆ ಬಂದರೆ ಮಾತ್ರ ಶಿಫಾರಸು ಮಾಡುವ ಕುರಿತು ಹೇಳಿದ್ದರು. ಆದರೆ ಇಂದು ಅವರು ತಮ್ಮ ಮಾತನ್ನು ತಪ್ಪಿದ್ದಾರೆ. ಅವರ ಮಾತಿನ ಮೇಲೆ ಅವರಿಗೆ ನಂಬಿಕೆ ಇಲ್ಲ ಎಂದು ಆರೋಪಿಸಿದರು.

    ಸಮಿತಿಗೆ ಸಾವಿರಾರು ಪುಟ ವೀರಶೈವ ಇತಿಹಾಸದ ಕುರಿತು ಮಾಹಿತಿ ನೀಡಲಾಗಿದೆ. ಆದರೆ ಇಲ್ಲಿ ಏಕಪಕ್ಷೀಯ ನಿರ್ಧಾರ ಮಾಡಿ. ಸ್ವಾತಂತ್ರ್ಯ ಲಿಂಗಾಯತರು ನೀಡಿದ ಮಾಹಿತಿಯನ್ನೇ ಸಮಿತಿ ನೀಡಿದೆ ಎಂದರು.

    ಮುಂದಿನ ದಿನಗಳಲ್ಲಿ ನಮ್ಮ ಹೋರಾಟ ಮುಂದುವರೆಯುತ್ತದೆ. ವೀರಶೈವ ಮಠದ ರಾಷ್ಟ್ರೀಯ ಪರಿಷತ್ ಹಾಗೂ ವೀರಶೈವ ಮುಂಖಡರ ಸಮಾವೇಶ ಕರೆದು ಚರ್ಚೆ ನಡೆಸಲಾಗುತ್ತದೆ. ಅಲ್ಲದೇ ಈ ಕುರಿತು ಕೇಂದ್ರ ಸರ್ಕಾರಕ್ಕೂ ಮಾಹಿತಿ ಸಲ್ಲಿಸಲಾಗುತ್ತದೆ. ಕಾನೂನು ಹೋರಾಟಕ್ಕೂ ನಾವು ಸಿದ್ಧರಾಗಿದ್ದೇವೆ ಎಂದು ತಿಳಿಸಿದರು.   ಇದನ್ನು ಓದಿ: ಲಿಂಗಾಯತ, ವೀರಶೈವ ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ – ಕೇಂದ್ರಕ್ಕೆ ಶೀಘ್ರವೇ ಸಿದ್ದು ಸರ್ಕಾರದಿಂದ ಶಿಫಾರಸ್ಸು