Tag: ಪ್ರದೀಪ್‌

  • ‘ಮರ್ಯಾದೆ ಪ್ರಶ್ನೆ’ ತಂಡದಿಂದ ಗೌರಿ ಗಣೇಶ ಹಬ್ಬಕ್ಕೆ ಥ್ರಿಲ್ಲಿಂಗ್ ಅಪ್ ಡೇಟ್

    ‘ಮರ್ಯಾದೆ ಪ್ರಶ್ನೆ’ ತಂಡದಿಂದ ಗೌರಿ ಗಣೇಶ ಹಬ್ಬಕ್ಕೆ ಥ್ರಿಲ್ಲಿಂಗ್ ಅಪ್ ಡೇಟ್

    ಸ್ಯಾಂಡಲ್‌ವುಡ್‌ನಲ್ಲಿ ಅಂಗಳದಲ್ಲಿ ‘ಮರ್ಯಾದೆ ಪ್ರಶ್ನೆ’ (Maryade Prashne) ಸಿನಿಮಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ಶೀರ್ಷಿಕೆ ಅನಾವರಣವನ್ನೇ ಕೊಂಚ ವಿಭಿನ್ನವಾಗಿ ಮಾಡಿದ್ದ ಚಿತ್ರತಂಡ, ಅದಾದ ಬಳಿಕವೂ ಚಿತ್ರದ ಪ್ರಚಾರವನ್ನೂ ಅಷ್ಟೇ ವಿಶೇಷವಾಗಿ ನೋಡುಗನ ಮುಂದೆ ತಂದಿಟ್ಟಿತ್ತು. ಸಾಕಷ್ಟು ಸಿನಿಮೋತ್ಸಾಹವಿರುವ  ಆರ್ ಜೆ ಪ್ರದೀಪ್ (Pradeep) ಅವರು ತಮ್ಮದೇ ಸಕ್ಕತ್ ಸ್ಟುಡಿಯೋ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಇದು ಇವರ ಮೊದಲ ಸಿನಿಮಾ. ಸಕ್ಕತ್ ಕಂಟೆಂಟ್‌ಗಳ ಮೂಲಕವೇ ಪ್ರೇಕ್ಷಕರ ನಿರೀಕ್ಷೆ ಹೆಚ್ಚಿಸಿರುವ ಸಕ್ಕತ್ ಸ್ಟುಡಿಯೋ, ಈ ಹಿಂದೆ ವೆಬ್‌ಸಿರೀಸ್‌ ಗಮನ ಸೆಳೆದಿದ್ದ  ಈ ನಿರ್ಮಾಣ ಸಂಸ್ಥೆ ಈಗ ಸಿನಿರಂಗಕ್ಕೂ ಹೆಜ್ಜೆ ಇಟ್ಟಿದೆ.

    ಸಕ್ಕತ್ ಸ್ಟುಡಿಯೋ ಸಖತ್ ಕ್ರಿಯೇಟಿವ್ ಆಗಿ ಮರ್ಯಾದೆ ಪ್ರಶ್ನೆ ಚಿತ್ರವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ. RCB ಕಪ್ ಗೆಲ್ಲಬೇಕು ಅಂತಾ ಕೊಹ್ಲಿ ತಂಡಕ್ಕೆ ಚಿಯರ್ ಹೇಳುವ ಹಾಡು ನಿರ್ಮಿಸಿದ್ದ ಸಕ್ಕತ್ ಸ್ಟುಡಿಯೋ,  ರ್ಯಾಪರ್‌ ಆಲ್ ಓಕೆ ಕಡೆಯಿಂದಲೂ ಮರ್ಯಾದೆ ಪ್ರಶ್ನೆಗಳಿಗೆ ಉತ್ತರ ಕೊಡಿಸಿತ್ತು. ಹೀಗೆ ಆರಂಭದಿಂದಲೂ ಬಗೆ ಬಗೆಯಲ್ಲಿ ಪ್ರಚಾರ ಮಾಡುತ್ತಿರುವ ಚಿತ್ರತಂಡ ಗೌರಿ ಗಣೇಶ ಹಬ್ಬದ ದಿನವಾದ ಇಂದು ಥ್ರಿಲ್ಲಿಂಗ್ ಅಪ್ ಡೇಟ್ ಕೊಟ್ಟಿದೆ.

    ಮರ್ಯಾದೆ ಪ್ರಶ್ನೆ ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ. ವಿಘ್ನ ವಿಪತ್ತುಗಳಿಲ್ಲದೆ ನಿಮ್ಮೆಲ್ಲರನ್ನು ತಲುಪುತ್ತೇವೆ ಅತಿ ಶೀಘ್ರದಲ್ಲೇ..ಹಬ್ಬ ಮಾಡೋಣ ರೆಡಿ  ಇರಿ..ಇದು ಮರ್ಯಾದೆ ಪ್ರಶ್ನೆ ಎಂದು ಚಿತ್ರತಂಡ ಘೋಷಣೆ ಮಾಡಿದೆ. ಪ್ರತಿಭಾನ್ವಿತರ ದಂಡೇ ಚಿತ್ರದಲ್ಲಿದ್ದು, ಭಿನ್ನ ಪಾತ್ರಗಳಿಗೆ ಹಲವರು ಬಣ್ಣ ಹಚ್ಚಿದ್ದಾರೆ. ರಾಕೇಶ್‌ ಅಡಿಗ, ಸುನೀಲ್‌ ರಾವ್‌, ಶೈನ್‌‌ ಶೆಟ್ಟಿ, ತೇಜು ಬೆಳವಾಡಿ, ಪೂರ್ಣಚಂದ್ರ ಮೈಸೂರು, ಪ್ರಭು ಮುಂಡ್ಕೂರ್‌, ರೇಖಾ ಕೂಡ್ಲಿಗಿ, ನಾಗೇಂದ್ರ ಶಾ, ಶ್ರವಣ್‌ ಚಿತ್ರದ ಮುಖ್ಯ ತಾರಾಗಣದಲ್ಲಿದ್ದಾರೆ. ಸಕ್ಕತ್‌ ಸ್ಟುಡಿಯೋ ಬ್ಯಾನರ್‌ನಡಿ ಪ್ರದೀಪ್‌ ಈ ಸಿನಿಮಾವನ್ನು ನಿರ್ಮಿಸುತ್ತಿದ್ದು, ಈ ಚಿತ್ರಕ್ಕೆ ಪ್ರದೀಪ್‌ ಅವರೇ ಕಥೆ ಬರೆದಿದ್ದಾರೆ.

     

    ಕ್ರಿಯೆಟಿವ್ ಹೆಡ್ ಕೂಡ ಸಾಥ್ ಕೊಟ್ಟಿದ್ದಾರೆ. ಈ ಮೂಲಕ ಕನ್ನಡಕ್ಕೆ ಹೊಸದೊಂದು ಕಥೆ ಕೊಡೊಕೆ ರೆಡಿ ಆಗಿದ್ದಾರೆ ಪ್ರದೀಪ್. ಮರ್ಯಾದೆ ಪ್ರಶ್ನೆ ಚಿತ್ರವನ್ನ ನಾಗರಾಜ್ ಸೋಮಯಾಜಿ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಇವರು ದಿ ಬೆಸ್ಟ್ ಆ್ಯಕ್ಟರ್, ಮೈಕ್ರೋ ಮೂವಿ ಮಾಡಿದ್ದರು. ಮರ್ಯಾದೆ ಪ್ರಶ್ನೆ ಚಿತ್ರಕ್ಕೆ ಸಂದೀಪ್ ವೆಲ್ಲುರಿ ಕ್ಯಾಮರಾವರ್ಕ್ ಮಾಡಿದ್ದಾರೆ. ಅರ್ಜುನ್ ರಾಮು ಸಂಗೀತ ಕೊಟ್ಟಿದ್ದಾರೆ. ‌

  • ‘ಮರ್ಯಾದೆ ಪ್ರಶ್ನೆ’ಗೆ ಕೊನೆಗೂ ಉತ್ತರ ಸಿಕ್ತು: ಇದು ಪ್ರದೀಪ್ ಕನಸು

    ‘ಮರ್ಯಾದೆ ಪ್ರಶ್ನೆ’ಗೆ ಕೊನೆಗೂ ಉತ್ತರ ಸಿಕ್ತು: ಇದು ಪ್ರದೀಪ್ ಕನಸು

    ಳೆದ ಎರಡ್ಮೂರು ದಿನದಿಂದ ಸ್ಯಾಂಡಲ್ ವುಡ್ ನಲ್ಲಿ ‘ಮರ್ಯಾದೆ ಪ್ರಶ್ನೆ’ ಎನ್ನುವ ಪದವು ನಾನಾ ರೂಪಗಳನ್ನು ತಾಳಿ ಸಂಚಲನ ಮೂಡಿಸಿತ್ತು. ಅನೇಕ ನಟ ನಟಿಯರು, ತಂತ್ರಜ್ಞರು, ಬಿಗ್ ಬಾಸ್ ಸ್ಪರ್ಧಿಗಳು, ಕಿರುತೆರೆಯ ಕಲಾವಿದರು ತಮ್ಮದೇ ಆದ ರೀತಿಯಲ್ಲಿ ಈ ಪದ ಪ್ರಯೋಗ ಮಾಡಿ, ಕುತೂಹಲ ಮೂಡಿಸಿದ್ದರು. ಇದು ಏನಿರಬಹುದು ಎನ್ನುವ ಚರ್ಚೆ ಕೂಡ ಸೃಷ್ಟಿಯಾಗಿತ್ತು. ಅದಕ್ಕೀಗ  ಉತ್ತರ ಸಿಕ್ಕಿದೆ. ಇದು ಸಿನಿಮಾದ ಟೈಟಲ್ ಅನ್ನುವ ವಿಚಾರ ಬಹಿರಂಗವಾಗಿದೆ.

    ಕೆಲ ತಿಂಗಳ ಹಿಂದೆ ಆರ್.ಜೆ ಪ್ರದೀಪ್ ತಮ್ಮ ಸಕ್ಕತ್ ಸ್ಟುಡಿಯೋ ಮೂಲಕ ಸಿನಿಮಾವೊಂದನ್ನು ತಯಾರಿಸಿರುವ ವಿಚಾರವನ್ನು ಹಂಚಿಕೊಂಡಿದ್ದರು. ನಾಗರಾಜ್ ಸೋಮಯಾಜಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಆ ಚಿತ್ರಕ್ಕೆ ‘ಮರ್ಯಾದೆ ಪ್ರಶ್ನೆ’ (Maryade prashne) ಎಂದು ಹೆಸರಿಡಲಾಗಿದೆ. ಈ ಶೀರ್ಷಿಕೆಯನ್ನು ಪ್ರದೀಪ್ ಸೇರಿದಂತೆ ಚಿತ್ರತಂಡ ಹಂಚಿಕೊಂಡಿದೆ.

    ಕನ್ನಡ ಡಿಜಿಟಲ್ ಕ್ಷೇತ್ರದಲ್ಲಿ ಸಕ್ಕತ್ ಸ್ಟುಡಿಯೋ (Sakkat Studio) ಟ್ರೆಂಡ್ಸೆಟ್ಟರ್ ಆಗಿರುವುದು ಸುಳ್ಳಲ್ಲಾ. ಸುನೀಲ್ ರಾವ್, ಅನುಪಮಾ ಗೌಡ, ಸಿಂಧು ಲೋಕನಾಥ್ ಮುಂತಾದವರು ನಟಿಸಿರುವ ‘ಲೂಸ್ ಕನೆಕ್ಷನ್’ ನಮ್ಮ ಕನ್ನಡದ ಮೊದಲ ವೆಬ್ ಸರಣಿಯ ನಿರ್ಮಿಸಿದ್ದು ಇದೇ ಸಂಸ್ಥೆ. ಸ್ಟಾರ್ ದಂಪತಿಗಳಾದ ಆರ್. ಜೆ. ಪ್ರದೀಪ್ (Pradeep) ಮತ್ತು ಶ್ವೇತಾ ಆರ್ ಪ್ರಸಾದ್ (Shweta R Prasad) ಅವರ ನೇತೃತ್ವದಲ್ಲಿ ಶುರುವಾದ ಸಕ್ಕತ್ ಸ್ಟುಡಿಯೋ ವೈವಿಧ್ಯಮಯ ವೆಬ್ ಸರಣಿಗಳೊಂದಿಗೆ ಪ್ರೇಕ್ಷಕರನ್ನು ಆಕರ್ಷಿಸುತ್ತಲೇ ಇತ್ತು. ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ರವರ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ಅವರ ಸಹಯೋಗದೊಂದಿಗೆ ಸಕ್ಕತ್ ಸ್ಟುಡಿಯೋ, ನಾಗಭೂಷಣ ಮತ್ತು ಸಂಜನಾ ಆನಂದ್ ಅಭಿನಯದ ‘ಹನಿಮೂನ್’, ಪೂರ್ಣ ಮೈಸೂರು ಮತ್ತು ಸಿರಿ ರವಿಕುಮಾರ್ ಅಭಿನಯದ ‘ಬೈ ಮಿಸ್ಟೇಕ್’ ಮತ್ತು ಅರವಿಂದ್ ಅಯ್ಯರ್ ಮತ್ತು ದಿಶಾ ಮದನ್ ಅಭಿನಯದ “ಹೇಟ್ ಯು ರೋಮಿಯೋ” ಹೀಗೆ ಉನ್ನತ ಮಟ್ಟದ ಸರಣಿಗಳು ನಿರ್ಮಾಣವಾಗಿ ವೂಟ್ ( Voot), ಆಹಾ (Aha ), ಮುಂತಾದ ಒಟಿಟಿ ಪ್ಲಾಟ್‌ಫಾರಂ ಗಳಲ್ಲಿ ನೋಡುಗರ ಗಮನ ಸೆಳೆದಿವೆ.

    ಡಿಜಿಟಲ್ ಕ್ಷೇತ್ರದಲ್ಲಿ ಒಂದು ಸ್ಥಾನವನ್ನು ಯಶಸ್ವಿಯಾಗಿಸಿ, ಸಕ್ಕತ್ ಸ್ಟುಡಿಯೋ ಈಗ ಸಿನಿಮಾ ಜಗತ್ತಿಗೆ ಕಾಲಿಡುವ ಮೂಲಕ ಹೊಸ ಅಧ್ಯಾಯವನ್ನು ಪ್ರಾರಂಭಿಸಿದೆ. ತನ್ನ ಮೊಟ್ಟಮೊದಲ ಚಿತ್ರದ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಹೊಡೆದು ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತ ತಲುಪಿದೆ. ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಅವರು ಚಿತ್ರದ ಮಹೂರ್ತಕ್ಕೆ ಆಗಮಿಸಿ ಕ್ಲ್ಯಾಪ್ ಮಾಡಿ ಚಿತ್ರಕ್ಕೆ ಶುಭ ಹಾರೈಸಿದ್ದರು. ಅದೇ ಚಿತ್ರವೇ ಮರ್ಯಾದೆ ಪ್ರಶ್ನೆ.

    ದಕ್ಷಿಣ ಭಾರತದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದ ‘ದಿ ಬೆಸ್ಟ್ ಆಕ್ಟರ್’ ಮೈಕ್ರೊ ಮೂವಿ ನಿರ್ದೇಶನ ಸೇರಿದಂತೆ, ದಿವಂಗತ ಸಂಚಾರಿ ವಿಜಯ್ ನಟಿಸಿರುವ ‘ಪುಕ್ಸಟ್ಟೆ ಲೈಫ್ “ಚಿತ್ರವನ್ನು ನಿರ್ಮಿಸಿದ್ದ ನಾಗರಾಜ್ ಸೋಮಯಾಜಿ ಇದೀಗ ಸಕ್ಕತ್ ಸ್ಟುಡಿಯೋದ ಮೊದಲ ಸಿನಿಮಾದ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಮುಂಬರುವ ದಿನಗಳಲ್ಲಿ ವಿಶಿಷ್ಟ ಶೀರ್ಷಿಕೆ, ಪರಿಕಲ್ಪನೆ ಮತ್ತು ತಾರಾಗಣವನ್ನು ಅನಾವರಣಗೊಳಿಸುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಇದೀಗ ಕೇವಲ ಶೀರ್ಷಿಕೆಯನ್ನು ಮಾತ್ರ ಬಹಿರಂಗ ಪಡಿಸಿದೆ. ಮುಂದಿನ ದಿನಗಳಲ್ಲಿ ತಾರಾಗಣ ಹಾಗೂ ಮತ್ತಿತರ ವಿಷಯಗಳನ್ನು ಹಂಚಿಕೊಳ್ಳಬಹುದು.

     

    ಹೆಚ್ಚು ಹೆಚ್ಚು ಕನ್ನಡ ಸಿನಿಮಾಗಳು ನಿರ್ಮಾಣವಾಗಬೇಕು ಹಾಗು ಗೆಲ್ಲಬೇಕೆಂಬ ನಿರೀಕ್ಷೆಯಲ್ಲಿರುವ ಪ್ರೇಕ್ಷಕ ವರ್ಗ, ಝೀ5ನ ಒಟಿಟಿ ಕ್ಷೇತ್ರದಲ್ಲಿ ಪ್ರದೀಪ್ ಅವರ ಹಿಂದಿನ ನಾಯಕತ್ವ ಮತ್ತು ಛಾಯಾಗ್ರಹಣ ಮತ್ತು ಕಥೆ ಹೇಳುವಿಕೆಯಲ್ಲಿ ನಾಗರಾಜ್ ಅವರ ಪ್ರಭಾವ, ಸೃಜನಶೀಲ ಮನಸ್ಸುಗಳನ್ನು ಒಳಗೊಂಡಿರುವ ತಂಡವು ನಿಸ್ಸಂದೇಹವಾಗಿ ‘ಸಕ್ಕತ್’ ಕನ್ನಡ ಚಿತ್ರವನ್ನು  ಪ್ರೇಕ್ಷಕನಿಗೆ ನೀಡುತ್ತಾರೆಂಬ ಭರವಸೆ ಮೂಡಿಸಿದೆ.

  • ಕೆ.ಶಿವರಾಮ್ ಆರೋಗ್ಯದ ಬಗ್ಗೆ ಅಳಿಯ ಪ್ರದೀಪ್ ಪ್ರತಿಕ್ರಿಯೆ

    ಕೆ.ಶಿವರಾಮ್ ಆರೋಗ್ಯದ ಬಗ್ಗೆ ಅಳಿಯ ಪ್ರದೀಪ್ ಪ್ರತಿಕ್ರಿಯೆ

    ಎಎಸ್ ಅಧಿಕಾರಿ ಕಮ್ ‘ಬಾ ನಲ್ಲೆ ಮಧುಚಂದ್ರಕೆ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿರುವ ಕೆ.ಶಿವರಾಮ್ (K.Shivaram) ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅನಾರೋಗ್ಯದಿಂದಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಅಳಿಯ ಪ್ರದೀಪ್ (Actor Pradeep) ಇದೀಗ ಕೆ.ಶಿವರಾಮ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರ ಕಂಡೀಷನ್ ಕ್ರಿಟಿಕಲ್ ಆಗಿದೆ ಎಂದಿದ್ದಾರೆ.

    ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಫೆ.3ರಂದು ಕೆ.ಶಿವರಾಮ್ ಅವರನ್ನು ದಾಖಲಾಗಿದ್ದರು. ಕಳೆದ 6 ದಿನಗಳ ಹಿಂದೆ ಶಿವರಾಮ್‌ಗೆ ಹೃದಯಾಘಾತವಾಗಿದೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನಡೆಯುತ್ತಿದೆ ಎನ್ನಲಾಗಿದೆ. ಇದೀಗ ಮಾವನನ್ನು ನೋಡಲು ನಟ ಪ್ರದೀಪ್ ಆಸ್ಪತ್ರೆಗೆ ಬಂದಿದ್ದಾರೆ. ಈ ವೇಳೆ, ಬಿಪಿ ಏರುಪೇರಾಗಿತ್ತು. ಈಗಲೂ ಅವರ ಬಿಪಿ ನಾರ್ಮಲ್ ಆಗ್ತಿಲ್ಲ. ಅವರ ಸ್ಥಿತಿ ಕ್ರಿಟಿಕಲ್ ಆಗಿದೆ ಎಂದು ನಟ ಪ್ರದೀಪ್ ಮಾಹಿತಿ ನೀಡಿದ್ದಾರೆ. ಅವರ ಆರೋಗ್ಯಕ್ಕಾಗಿ ಇಷ್ಟಪಡುವಂತಹ ಅಭಿಮಾನಿಗಳು ದೇವರನ್ನು ಪ್ರಾರ್ಥಿಸಿ ಎಂದು ಪ್ರದೀಪ್ ಮನವಿ ಮಾಡಿದ್ದಾರೆ.

    ಎಚ್.ಸಿ.ಜಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪರಿಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕನ್ನಡದಲ್ಲೇ ಐಎಎಸ್ ಬರೆದು, ನಂತರ ಬೆಂಗಳೂರು, ವಿಜಯಪುರ, ಕೊಪ್ಪಳ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಅವರು ಕೆಲಸ ಮಾಡಿದ್ದಾರೆ. ಇದನ್ನೂ ಓದಿ:ಕೈಗೆ ಪೆಟ್ಟು ಮಾಡಿಕೊಂಡಿದ್ದ ವಿಕ್ಕಿ ಕೌಶಲ್ ಆರೋಗ್ಯ ಹೇಗಿದೆ?

    ನಂತರ ‘ಬಾ ನಲ್ಲೆ ಮಧುಚಂದ್ರಕೆ’, ವಸಂತ ಕಾವ್ಯದಂತಹ ಚಿತ್ರಗಳಲ್ಲಿ ನಾಯಕರಾಗಿ ನಟಿಸಿದ್ದಾರೆ. ಸಾಂಗ್ಲಿಯಾನ 3 ಚಿತ್ರದಲ್ಲಿ ಇವರದ್ದು ಖಳನಾಯಕನ ಪಾತ್ರ. ಹತ್ತಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಶಿವರಾಮ್, ತಮ್ಮ ಮಗಳನ್ನು ನಟ ಪ್ರದೀಪ್ ಅವರಿಗೆ ಧಾರೆಯರೆದಿದ್ದರು.

  • ಸ್ಯಾಂಡಲ್ ವುಡ್ ಲೋಕಕ್ಕೆ ಸಕ್ಕತ್ ಸ್ಟುಡಿಯೋ ಪ್ರವೇಶ : ಹೊಸ ಚಿತ್ರಕ್ಕೆ ರವಿಚಂದ್ರನ್ ಕ್ಲ್ಯಾಪ್

    ಸ್ಯಾಂಡಲ್ ವುಡ್ ಲೋಕಕ್ಕೆ ಸಕ್ಕತ್ ಸ್ಟುಡಿಯೋ ಪ್ರವೇಶ : ಹೊಸ ಚಿತ್ರಕ್ಕೆ ರವಿಚಂದ್ರನ್ ಕ್ಲ್ಯಾಪ್

    ನ್ನಡ ಡಿಜಿಟಲ್ ಕ್ಷೇತ್ರದಲ್ಲಿ ಸಕ್ಕತ್ ಸ್ಟುಡಿಯೋ (Sakkat Studio) ಟ್ರೆಂಡ್ಸೆಟ್ಟರ್ ಆಗಿರುವುದು ಸುಳ್ಳಲ್ಲಾ. ಸುನೀಲ್ ರಾವ್, ಅನುಪಮಾ ಗೌಡ, ಸಿಂಧು ಲೋಕನಾಥ್ ಮುಂತಾದವರು ನಟಿಸಿರುವ ‘ಲೂಸ್ ಕನೆಕ್ಷನ್’ ನಮ್ಮ ಕನ್ನಡದ ಮೊದಲ ವೆಬ್ ಸರಣಿಯ ನಿರ್ಮಿಸಿದ್ದು ಇದೇ ಸಂಸ್ಥೆ. ಸ್ಟಾರ್ ದಂಪತಿಗಳಾದ ಆರ್. ಜೆ. ಪ್ರದೀಪ್ (Pradeep) ಮತ್ತು ಶ್ವೇತಾ ಆರ್ ಪ್ರಸಾದ್ (Shweta R Prasad) ಅವರ ನೇತೃತ್ವದಲ್ಲಿ ಶುರುವಾದ ಸಕ್ಕತ್ ಸ್ಟುಡಿಯೋ ವೈವಿಧ್ಯಮಯ ವೆಬ್ ಸರಣಿಗಳೊಂದಿಗೆ ಪ್ರೇಕ್ಷಕರನ್ನು ಆಕರ್ಷಿಸುತ್ತಲೇ ಇತ್ತು. ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ರವರ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ಅವರ ಸಹಯೋಗದೊಂದಿಗೆ ಸಕ್ಕತ್ ಸ್ಟುಡಿಯೋ, ನಾಗಭೂಷಣ ಮತ್ತು ಸಂಜನಾ ಆನಂದ್ ಅಭಿನಯದ ‘ಹನಿಮೂನ್’, ಪೂರ್ಣ ಮೈಸೂರು ಮತ್ತು ಸಿರಿ ರವಿಕುಮಾರ್ ಅಭಿನಯದ ‘ಬೈ ಮಿಸ್ಟೇಕ್’ ಮತ್ತು ಅರವಿಂದ್ ಅಯ್ಯರ್ ಮತ್ತು ದಿಶಾ ಮದನ್ ಅಭಿನಯದ “ಹೇಟ್ ಯು ರೋಮಿಯೋ” ಹೀಗೆ ಉನ್ನತ ಮಟ್ಟದ ಸರಣಿಗಳು ನಿರ್ಮಾಣವಾಗಿ ವೂಟ್ ( Voot), ಆಹಾ (Aha ), ಮುಂತಾದ ಒಟಿಟಿ ಪ್ಲಾಟ್‌ಫಾರಂ ಗಳಲ್ಲಿ ನೋಡುಗರ ಗಮನ ಸೆಳೆದಿವೆ.

    ಡಿಜಿಟಲ್ ಕ್ಷೇತ್ರದಲ್ಲಿ ಒಂದು ಸ್ಥಾನವನ್ನು ಯಶಸ್ವಿಯಾಗಿಸಿ, ಸಕ್ಕತ್ ಸ್ಟುಡಿಯೋ ಈಗ ಸಿನಿಮಾ ಜಗತ್ತಿಗೆ ಕಾಲಿಡುವ ಮೂಲಕ ಹೊಸ ಅಧ್ಯಾಯವನ್ನು ಪ್ರಾರಂಭಿಸಿದೆ. ತನ್ನ ಮೊಟ್ಟಮೊದಲ ಚಿತ್ರದ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಹೊಡೆದು ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತ ತಲುಪಿದೆ. ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಅವರು ಚಿತ್ರದ ಮಹೂರ್ತಕ್ಕೆ ಆಗಮಿಸಿ ಕ್ಲ್ಯಾಪ್ ಮಾಡಿ ಚಿತ್ರಕ್ಕೆ ಶುಭ ಹಾರೈಸಿದ್ದರು.

    ದಕ್ಷಿಣ ಭಾರತದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದ ‘ದಿ ಬೆಸ್ಟ್ ಆಕ್ಟರ್’ ಮೈಕ್ರೊ ಮೂವಿ ನಿರ್ದೇಶನ ಸೇರಿದಂತೆ, ದಿವಂಗತ ಸಂಚಾರಿ ವಿಜಯ್ ನಟಿಸಿರುವ ‘ಪುಕ್ಸಟ್ಟೆ ಲೈಫ್ “ಚಿತ್ರವನ್ನು ನಿರ್ಮಿಸಿದ್ದ ನಾಗರಾಜ್ ಸೋಮಯಾಜಿ ಇದೀಗ ಸಕ್ಕತ್ ಸ್ಟುಡಿಯೋದ ಮೊದಲ ಸಿನಿಮಾದ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದಾರೆ.

    ಮುಂಬರುವ ವಾರದಲ್ಲಿ ವಿಶಿಷ್ಟ ಶೀರ್ಷಿಕೆ, ಪರಿಕಲ್ಪನೆ ಮತ್ತು ತಾರಾಗಣವನ್ನು ಅನಾವರಣಗೊಳಿಸಲು ಯೋಜಿಸಿದೆ. ಇದು ಒಂದು ಅದ್ಭುತವಾದ ಸಿನಿಮೀಯ ಅನುಭವದ ಭರವಸೆಯನ್ನು ಈ ತಂಡ ನೀಡುತ್ತದೆ. ಹೆಚ್ಚು ಹೆಚ್ಚು ಕನ್ನಡ ಸಿನಿಮಾಗಳು ನಿರ್ಮಾಣವಾಗಬೇಕು ಹಾಗು ಗೆಲ್ಲಬೇಕೆಂಬ ನಿರೀಕ್ಷೆಯಲ್ಲಿರುವ ಪ್ರೇಕ್ಷಕ ವರ್ಗ, ಝೀ5ನ ಒಟಿಟಿ ಕ್ಷೇತ್ರದಲ್ಲಿ ಪ್ರದೀಪ್ ಅವರ ಹಿಂದಿನ ನಾಯಕತ್ವ ಮತ್ತು ಛಾಯಾಗ್ರಹಣ ಮತ್ತು ಕಥೆ ಹೇಳುವಿಕೆಯಲ್ಲಿ ನಾಗರಾಜ್ ಅವರ ಪ್ರಭಾವ, ಸೃಜನಶೀಲ ಮನಸ್ಸುಗಳನ್ನು ಒಳಗೊಂಡಿರುವ ತಂಡವು ನಿಸ್ಸಂದೇಹವಾಗಿ ‘ಸಕ್ಕತ್’ ಕನ್ನಡ ಚಿತ್ರವನ್ನು  ಪ್ರೇಕ್ಷಕನಿಗೆ ನೀಡುತ್ತಾರೆಂಬ ಭರವಸೆ ಮೂಡಿಸಿದೆ.

  • ಕೋಮಲ್ ಹುಟ್ಟುಹಬ್ಬಕ್ಕೆ ‘ಯಲಾ ಕುನ್ನಿ’ ಫಸ್ಟ್ ಲುಕ್

    ಕೋಮಲ್ ಹುಟ್ಟುಹಬ್ಬಕ್ಕೆ ‘ಯಲಾ ಕುನ್ನಿ’ ಫಸ್ಟ್ ಲುಕ್

    ಟ ಕೋಮಲ್ (Komal) ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರ ಹುಟ್ಟುಹಬ್ಬದ (Birthday) ಸಂದರ್ಭದಲ್ಲಿ ‘ಯಲಾ ಕುನ್ನಿ’ ಚಿತ್ರತಂಡವು ಹೊಸದೊಂದು ಪೋಸ್ಟರ್ (Poster) ರಿಲೀಸ್ ಮಾಡಿದೆ. ಥೇಟ್ ವಜ್ರಮುನಿಯಂತೆ ಕಾಣುವ ಈ ಪೋಸ್ಟರ್ ಸದ್ಯ ಕೋಮಲ್ ಅಭಿಮಾನಿಗಳನ್ನು ಖುಷಿ ಪಡಿಸಿದೆ.

    ಮೊಟ್ಟಮೊದಲ ಬಾರಿಗೆ ಕೋಮಲ್ ದ್ವಿಪಾತ್ರದಲ್ಲಿ  ನಟಿಸುತ್ತಿರುವ ‘ಯಲಾ ಕುನ್ನಿ’ (Yalakunni) ಚಿತ್ರದ ಮುಹೂರ್ತ ಸಮಾರಂಭ ಈಗಾಗಲೇ ನಡೆದಿದೆ. ಚಿತ್ರಕ್ಕೆ  ಕನ್ನಡ ಚಿತ್ರರಂಗದ ದಂತಕಥೆ ವಜ್ರಮುನಿ ಅವರ ಕುಟುಂಬದ ಎಲ್ಲ ಸದಸ್ಯರು ಆಗಮಿಸಿ ಚಿತ್ರಕ್ಕೆ ಶುಭ ಕೋರಿದ್ದರು. ವಜ್ರಮುನಿಯವರ ಪತ್ನಿ  ಲಕ್ಷ್ಮೀ ವಜ್ರಮುನಿ (Lakshmi Vajramuni) ಕ್ಯಾಮೆರಾ ಚಾಲನೆ ಮಾಡಿದರೆ, ಮೊದಲ ಸನ್ನಿವೇಶಕ್ಕೆ  ವಜ್ರಮುನಿ ಅವರ ಹಿರಿಯ ಪುತ್ರ ವಿಶ್ವನಾಥ್ ಆರಂಭಫಲಕ ತೋರಿದ್ದರು. ವಜ್ರಮುನಿ ಅವರ ಕಿರಿಯ ಪುತ್ರ ಜಗದೀಶ್ ವಜ್ರಮುನಿ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

    ‘ಯಲಾಕುನ್ನಿ’ ಖ್ಯಾತ ನಟ ವಜ್ರಮುನಿ ಅವರ ಚಿತ್ರಗಳಲ್ಲಿ ಹೆಚ್ಚಾಗಿ ಬಳಸುತ್ತಿದ್ದ ಪದ. ಈಗ ಆ ಪದವೇ ಚಿತ್ರದ ಶೀರ್ಷಿಕೆಯಾಗಿದೆ. ‘ಮೇರಾ ನಾಮ್ ವಜ್ರಮುನಿ’ ಎಂಬ ಅಡಿಬರಹ ಕೂಡ ಇದೆ. ಈ ಕುರಿತು ಕೋಮಲ್ ಮಾತನಾಡುತ್ತಾ, ‘ನಾನು ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ನಿರ್ದೇಶಕ ಪ್ರದೀಪ್ ಬಹಳ ಚೆನ್ನಾಗಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಚಿತ್ರದ ಮುಕ್ಕಾಲು ಭಾಗ 1981 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಶ್ರೀರಂಗಪಟ್ಟಣ, ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಗಂಜಾಂ ಬಳಿ ಪುರಾತನ ದೇವಾಲಯವಿದ್ದು, ಆ ದೇವಾಲಯದಲ್ಲೇ ಹೆಚ್ಚಿನ ಚಿತ್ರೀಕರಣವಾಗಲಿದೆ. ಚಿತ್ರಕ್ಕಾಗಿ ವಿಶೇಷ ಸೆಟ್ ಸಹ ಹಾಕಲಾಗುವುದು ನಮ್ಮ ಈ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ’ ಎಂದಿದ್ದರು. ಇದನ್ನೂ ಓದಿ:ರಣಬೀರ್- ರಶ್ಮಿಕಾ ನಟನೆಯ ‘ಅನಿಮಲ್’ ಸಿನಿಮಾದ ನ್ಯೂ ರಿಲೀಸ್ ಡೇಟ್ ಅನೌನ್ಸ್

    ‘ನಾನು ಕನ್ನಡದ ಹಿರಿಯ ನಿರ್ದೇಶಕರ ಬಳಿ ಕೆಲಸ ಮಾಡಿದ್ದೀನಿ . ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಈ ಹಿಂದೆ ಸಡಗರ ಚಿತ್ರ ನಿರ್ಮಿಸಿದ್ದ ಮಹೇಶ್ ಗೌಡ್ರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.  ಮತ್ತೊಂದು ವಿಶೇಷವೆಂದರೆ  ವಜ್ರಮುನಿ ಅವರ ಮೊಮ್ಮಗ ಆಕರ್ಷ ಈ ಚಿತ್ರದ ಮೂಲಕ  ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಹೊಸ ಪ್ರತಿಭೆ ನಿಸರ್ಗ ಈ ಚಿತ್ರದ ನಾಯಕಿ.‌ ಯತಿರಾಜ್ ಜಗ್ಗೇಶ್, ಫ್ರೆಂಚ್ ಬಿರಿಯಾನಿ ಮಹಾಂತೇಶ್, ಜಯಸಿಂಹ ಮುಸುರಿ, ಅರವಿಂದ್ ರಾವ್, ಮಂಜು ಪಾವಗಡ, ರಾಜು ತಾಳಿಕೋಟೆ, ಶಿವರಾಜ್, ಬಿರಾದರ್, ವೆಂಕಟೇಶ್ ಪ್ರಸಾದ್, ಉಮೇಶ್ ಸಕ್ಕರೆನಾಡು, ಅನಿಲ್ ಯಾದವ್ ಇನ್ನು ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಧರ್ಮವಿಶ್ ಸಂಗೀತ ‌ನಿರ್ದೇಶನ ಹಾಗೂ ಉದಯ್ ಲೀಲಾ ಅವರ ಛಾಯಾಗ್ರಹಣ, ದೀಪು ಎಸ್. ಕುಮಾರ್ ಸಂಕಲನ , ವಿನೋದ್ ರವರ ಸಾಹಸ  ಈ ಚಿತ್ರಕ್ಕಿದೆ. ಈ ಚಿತ್ರದಲ್ಲಿ ಕೋಮಲ್ ಕುಮಾರ್  ವಜ್ರಮುನಿಯಾದರೆ, ಅವರ ಬಲಗೈ ಬಂಟನಾಗಿ ಜಯಸಿಂಹ ಮುಸುರಿ ಕನೆಕ್ಷನ್ ಕಾಳಪ್ಪನಾಗಿ  ಕಾಣಿಸಿ ಕೊಳ್ಳಲಿದ್ದಾರೆ. ಚಿತ್ರದ ಹಿನ್ನಲೆ  ಗೋವಿನ ಹಾಡಿನಲ್ಲಿ ಬರುವ ವ್ಯಾಘ್ರ ಹುಲಿ ಅರ್ಭುತ ಮತ್ತು ಸತ್ಯವೇ ಭಗವಂತನೆಂದ ಪುಣ್ಯಕೋಟಿಯ ಕಥೆಯಿಂದ ಪ್ರೇರಿತವಾಗಿದೆ.  ಏಪ್ರಿಲ್ ನಲ್ಲಿ ಚಿತ್ರೀಕರಣ ಆರಂಭವಾಗಲಿದೆ’ ಎಂದು ನಿರ್ದೇಶಕ ಪ್ರದೀಪ್ ತಿಳಿಸಿದ್ದರು.

     

    ನಾಯಕಿ ನಿಸರ್ಗ ಹಾಗೂ ಚಿತ್ರದಲ್ಲಿ ನಟಿಸುತ್ತಿರುವ ಯತಿರಾಜ್, ಮಾಹಂತೇಶ್, ಆಕರ್ಷ,‌ ಅರವಿಂದ್ ರಾವ್, ಮಂಜು ಪಾವಗಡ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದರು. ‘ನನ್ನ ಮೊಮ್ಮಗ ಆಕರ್ಷ ಈ ಚಿತ್ರದಲ್ಲಿ ಕೋಮಲ್ ಅವರ ಮಗನ   ಪಾತ್ರದಲ್ಲಿ ಅಭಿನಯಿಸುತ್ತಿದ್ದಾನೆ. ಅವನಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆಯದಾಗಲಿ’ ಎಂದಿದ್ದರು ಲಕ್ಷ್ಮೀ ವಜ್ರಮುನಿ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋಮಲ್ ನಟನೆಯ ‘ಯಲಾಕುನ್ನಿ’ ಚಿತ್ರಕ್ಕೆ ಚಾಲನೆ

    ಕೋಮಲ್ ನಟನೆಯ ‘ಯಲಾಕುನ್ನಿ’ ಚಿತ್ರಕ್ಕೆ ಚಾಲನೆ

    ಸೆನ್ಸೇಷನಲ್ ಸ್ಟಾರ್ ಕೋಮಲ್ ಕುಮಾರ್ (Komal) ಮೊಟ್ಟಮೊದಲ ಬಾರಿಗೆ ದ್ವಿಪಾತ್ರದಲ್ಲಿ  ನಟಿಸುತ್ತಿರುವ ‘ಯಲಾ ಕುನ್ನಿ’ (Yalakunni) ಚಿತ್ರದ ಮುಹೂರ್ತ ಸಮಾರಂಭ ವಿಜಯನಗರದ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರಕ್ಕೆ  ಕನ್ನಡ ಚಿತ್ರರಂಗದ ದಂತಕಥೆ ವಜ್ರಮುನಿ ರವರ ಕುಟುಂಬದ ಎಲ್ಲ ಸದಸ್ಯರು ಆಗಮಿಸಿ ಚಿತ್ರಕ್ಕೆ ಶುಭ ಕೋರಿದ್ದು ವಿಶೇಷವಾಗಿತ್ತು. ವಜ್ರಮುನಿರವರ ಪತ್ನಿ  ಲಕ್ಷ್ಮೀ ವಜ್ರಮುನಿ (Lakshmi Vajramuni) ಕ್ಯಾಮರಾ ಚಾಲನೆ ಮಾಡಿದರೆ, ಮೊದಲ ಸನ್ನಿವೇಶಕ್ಕೆ  ವಜ್ರಮುನಿ ಅವರ ಹಿರಿಯ ಪುತ್ರ ವಿಶ್ವನಾಥ್ ಆರಂಭಫಲಕ ತೋರಿದರು, ವಜ್ರಮುನಿ ಯವರ ಕಿರಿಯ ಪುತ್ರ ಜಗದೀಶ್ ವಜ್ರಮುನಿ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಆನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು. ‘ಯಲಾಕುನ್ನಿ’ ಖ್ಯಾತ ನಟ ವಜ್ರಮುನಿ ಅವರ ಚಿತ್ರಗಳಲ್ಲಿ ಹೆಚ್ಚಾಗಿ ಬಳಸುತ್ತಿದ್ದ ಪದ. ಈಗ ಆ ಪದವೇ ಚಿತ್ರದ ಶೀರ್ಷಿಕೆಯಾಗಿದೆ. ‘ಮೇರಾ ನಾಮ್ ವಜ್ರಮುನಿ’ ಎಂಬ ಅಡಿಬರಹ ಕೂಡ ಇದೆ.

    ನಾನು ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ನಿರ್ದೇಶಕ ಪ್ರದೀಪ್ ಬಹಳ ಚೆನ್ನಾಗಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಚಿತ್ರದ ಮುಕ್ಕಾಲು ಭಾಗ 1981 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಶ್ರೀರಂಗಪಟ್ಟಣ, ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಗಂಜಾಂ ಬಳಿ ಪುರಾತನ ದೇವಾಲಯವಿದ್ದು, ಆ ದೇವಾಲಯದಲ್ಲೇ ಹೆಚ್ಚಿನ ಚಿತ್ರೀಕರಣವಾಗಲಿದೆ. ಚಿತ್ರಕ್ಕಾಗಿ ವಿಶೇಷ ಸೆಟ್ ಸಹ ಹಾಕಲಾಗುವುದು ನಮ್ಮ ಈ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ ಎಂದು ನಾಯಕ ಕೋಮಲ್ ಕುಮಾರ್ ತಿಳಿಸಿದರು. ಇದನ್ನೂ ಓದಿ:ಹೊಸ ಫೋಟೋಶೂಟ್‌ನಿಂದ ಇಂಟರ್‌ನೆಟ್‌ ಬೆಂಕಿ ಹಚ್ಚಿದ ರಶ್ಮಿಕಾ ಮಂದಣ್ಣ

    ನಾನು ಕನ್ನಡದ ಹಿರಿಯ ನಿರ್ದೇಶಕರ ಬಳಿ ಕೆಲಸ ಮಾಡಿದ್ದೀನಿ . ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಈ ಹಿಂದೆ ಸಡಗರ ಚಿತ್ರ ನಿರ್ಮಿಸಿದ್ದ ಮಹೇಶ್ ಗೌಡ್ರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.  ಮತ್ತೊಂದು ವಿಶೇಷವೆಂದರೆ  ವಜ್ರಮುನಿ ಯವರ ಮೊಮ್ಮಗ ಆಕರ್ಶ್ ಈ ಚಿತ್ರದ ಮೂಲಕ  ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಹೊಸ ಪ್ರತಿಭೆ ನಿಸರ್ಗ ಈ ಚಿತ್ರದ ನಾಯಕಿ.‌ ಯತಿರಾಜ್ ಜಗ್ಗೇಶ್, ಫ್ರೆಂಚ್ ಬಿರಿಯಾನಿ ಮಹಾಂತೇಶ್, ಜಯಸಿಂಹ ಮುಸುರಿ, ಅರವಿಂದ್ ರಾವ್, ಮಂಜು ಪಾವಗಡ, ರಾಜು ತಾಳಿಕೋಟೆ, ಶಿವರಾಜ್, ಬಿರಾದರ್, ವೆಂಕಟೇಶ್ ಪ್ರಸಾದ್, ಉಮೇಶ್ ಸಕ್ಕರೆನಾಡು, ಅನಿಲ್ ಯಾದವ್ ಇನ್ನು ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಧರ್ಮವಿಶ್ ಸಂಗೀತ ‌ನಿರ್ದೇಶನ ಹಾಗೂ ಉದಯ್ ಲೀಲಾ ಅವರ ಛಾಯಾಗ್ರಹಣ, ದೀಪು ಎಸ್. ಕುಮಾರ್ ಸಂಕಲನ , ವಿನೋದ್ ರವರ ಸಾಹಸ  ಈ ಚಿತ್ರಕ್ಕಿದೆ. ಈ ಚಿತ್ರದಲ್ಲಿ ಕೋಮಲ್ ಕುಮಾರ್  ವಜ್ರಮುನಿಯಾದರೆ, ಅವರ ಬಲಗೈ ಬಂಟನಾಗಿ ಜಯಸಿಂಹ ಮುಸುರಿ ಕನೆಕ್ಷನ್ ಕಾಳಪ್ಪನಾಗಿ  ಕಾಣಿಸಿ ಕೊಳ್ಳಲಿದ್ದಾರೆ. ಚಿತ್ರದ ಹಿನ್ನಲೆ  ಗೋವಿನ ಹಾಡಿನಲ್ಲಿ ಬರುವ ವ್ಯಾಘ್ರ ಹುಲಿ ಅರ್ಭುತ ಮತ್ತು ಸತ್ಯವೇ ಭಗವಂತನೆಂದ ಪುಣ್ಯಕೋಟಿಯ ಕಥೆಯಿಂದ ಪ್ರೇರಿತವಾಗಿದೆ.  ಏಪ್ರಿಲ್ ನಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಪ್ರದೀಪ್ ತಿಳಿಸಿದರು.

    ಇದು ನನ್ನ ಎರಡನೇ ನಿರ್ಮಾಣದ ಚಿತ್ರ . ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಮಹೇಶ್ ಗೌಡ್ರು. ನಾಯಕಿ ನಿಸರ್ಗ ಹಾಗೂ ಚಿತ್ರದಲ್ಲಿ ನಟಿಸುತ್ತಿರುವ ಯತಿರಾಜ್, ಮಾಹಂತೇಶ್, ಆಕರ್ಶ್,‌ ಅರವಿಂದ್ ರಾವ್, ಮಂಜು ಪಾವಗಡ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಛಾಯಾಗ್ರಾಹಕ ಉದಯ್ ಲೀಲಾ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ನನ್ನ ಮೊಮ್ಮಗ ಆಕರ್ಶ್ ಈ ಚಿತ್ರದಲ್ಲಿ ಕೋಮಲ್ ಅವರ ಮಗನ   ಪಾತ್ರದಲ್ಲಿ ಅಭಿನಯಿಸುತ್ತಿದ್ದಾನೆ. ಅವನಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು ಶ್ರೀಮತಿ ಲಕ್ಷ್ಮೀ ವಜ್ರಮುನಿ.

  • ಉದ್ಯಮಿ ಪ್ರದೀಪ್ ಶೂಟೌಟ್ ಕೇಸ್- A3 ಆರೋಪಿ ಲಿಂಬಾವಳಿ ಹೇಳಿಕೆ ಕೂಡ ದಾಖಲು

    ಉದ್ಯಮಿ ಪ್ರದೀಪ್ ಶೂಟೌಟ್ ಕೇಸ್- A3 ಆರೋಪಿ ಲಿಂಬಾವಳಿ ಹೇಳಿಕೆ ಕೂಡ ದಾಖಲು

    ರಾಮನಗರ: ಕಗ್ಗಲೀಪುರದ ಉದ್ಯಮಿ ಪ್ರದೀಪ್ (Businessman Pradeep) ಶೂಟೌಟ್ ಕೇಸ್‍ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರು ಇನ್ನೊಂದು ವಾರದಲ್ಲಿ ನ್ಯಾಯಾಲಯಕ್ಕೆ ತನಿಖಾ ರಿಪೋರ್ಟ್ ಸಲ್ಲಿಕೆ ಮಾಡಲಿದ್ದಾರೆ.

    ಬರೋಬ್ಬರಿ ಇಪ್ಪತ್ತು ಮಂದಿಯ ಹೇಳಿಕೆಯನ್ನ ದಾಖಲಿಸಿರೋ ಪೊಲೀಸ್ರು, ಎ3 ಆರೋಪಿ ಅರವಿಂದ್ ಲಿಂಬಾವಳಿ ಸೇರಿದಂತೆ ಎಲ್ಲರ ಮೇಲೂ ಬಿ ರಿಪೋರ್ಟ್ ಸಲ್ಲಿಕೆ ಸಾಧ್ಯತೆ ಇದೆ. ಪೊಲೀಸರು ಪ್ರಕರಣ ಸಂಬಂಧ ಶಾಸಕ ಅರವಿಂದ ಲಿಂಬಾವಳಿ (Aravind Limbavali) ಬಳಿ ಎರಡು ಪುಟಗಳ ಹೇಳಿಕೆ ಪಡೆದಿದ್ದಾರೆ ಎನ್ನಲಾಗ್ತಿದೆ. ಆದರೆ ನನಗೂ ಪ್ರದೀಪ್ ಆತ್ಮಹತ್ಯೆ ಕೇಸ್‍ಗೂ ಸಂಬಂಧವಿಲ್ಲ. ಪ್ರದೀಪ್ ಪರಿಚಿತ ವ್ಯಕ್ತಿವಾಗಿದ್ದು, ಸ್ನೇಹಿತರ ನಡುವಿನ ಹಣಕಾಸಿನ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸೂಚಿಸಿದ್ದೇ ಅಷ್ಟೇ ಎಂದು ಅರವಿಂದ ಲಿಂಬಾವಳಿ ಹೇಳಿಕೆ ನೀಡಿದ್ದಾರೆ ಎನ್ನಲಾಗ್ತಿದೆ. ಇದನ್ನೂ ಓದಿ: ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಮೂರು ಡೆತ್‍ನೋಟ್ ಪತ್ತೆ

    ಅಲ್ಲದೆ ಡೆತ್‍ನೋಟ್‍ನಲ್ಲಿ ಪ್ರದೀಪ್ ಮಾಡಿರೋ ಆರೋಪಕ್ಕೆ ಸ್ಪಷ್ಟ ಸಾಕ್ಷ್ಯ ಸಿಗ್ತಿಲ್ಲ. ಮೊಬೈಲ್‍ನ ಟೆಕ್ನಿಕಲ್ ಎವಿಡೆನ್ಸ್ ಹಾಗೂ ಡೆತ್‍ನೋಟ್ ಬಗ್ಗೆಯೂ ಪ್ರಬಲ ಸಾಕ್ಷ್ಯವಿಲ್ಲ. ಸದ್ಯ ಎ1 ಆರೋಪಿ ಗೋಪಿ ಸೇರಿ ಶಾಸಕ ಅರವಿಂದ ಲಿಂಬಾವಳಿ ಒಳಗೊಂಡಂತೆ ಆರು ಮಂದಿ ಆರೋಪಿತರ ಹೇಳಿಕೆಯನ್ನ ದಾಖಲಿಸಿರೋ ಪೊಲೀಸ್ರು ತನಿಖಾ ರಿಪೋರ್ಟ್ ಸಲ್ಲಿಕೆಗೆ ಸಿದ್ಧರಾಗಿದ್ದಾರೆ. ಇದನ್ನೂ ಓದಿ: ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರದೀಪ್ ನಮ್ಮ ಕಾರ್ಯಕರ್ತನೇ – ಲಿಂಬಾವಳಿ ಸ್ಪಷ್ಟನೆ

  • ‘ಯಲಾ ಕುನ್ನಿ’ ಎನ್ನುತ್ತಾ ಹೊಸ ಸುದ್ದಿ ಕೊಟ್ಟ ಕೋಮಲ್

    ‘ಯಲಾ ಕುನ್ನಿ’ ಎನ್ನುತ್ತಾ ಹೊಸ ಸುದ್ದಿ ಕೊಟ್ಟ ಕೋಮಲ್

    ಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ಸೆನ್ಸೇಷನಲ್ ಸ್ಟಾರ್ ಕೋಮಲ್ ಕುಮಾರ್ (Komal Kumar) ಅಭಿನಯದ ನೂತನ ಚಿತ್ರ “ಯಲಾ ಕುನ್ನಿ” (Yelakunni) ಮೇರಾ ನಾಮ್ ವಜ್ರಮುನಿ  (Vajramuni) ಎಂಬ ಅಡಿಬರಹ ಇರುವ ಶೀರ್ಷಿಕೆ ಇತ್ತೀಚೆಗೆ ಅನಾವರಣವಾಯಿತು. ಸೌಭಾಗ್ಯ ಸಿನಿಮಾಸ್ ಲಾಂಛನದಲ್ಲಿ  ಮಹೇಶ್ ಗೌಡ್ರು ನಿರ್ಮಿಸುತ್ತಿರುವ ಈ ಚಿತ್ರವನ್ನು ಎನ್. ಆರ್ ಪ್ರದೀಪ (Pradeep) ನಿರ್ದೇಶಿಸುತ್ತಿದ್ದಾರೆ.

    ಓಂಪ್ರಕಾಶ್ ರಾವ್, ಮುಸ್ಸಂಜೆ ಮಹೇಶ್ ಗರಡಿಯಲ್ಲಿ ಪಳಗಿರುವ ಪ್ರದೀಪ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. 1981 ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದ್ದು ಶ್ರೀರಂಗಪಟ್ಟಣ ಹಾಗೂ ಮೈಸೂರು ಸುತ್ತಮುತ್ತಲಿನಲ್ಲಿ ಹಳ್ಳಿ ಮತ್ತು ದೇವಸ್ಥಾನದ ಸೆಟ್ ಗಳನ್ನು ನಿರ್ಮಿಸಿ ಚಿತ್ರೀಕರಣ ಮಾಡಲಾಗುವುದಂತೆ.‌ ಇದನ್ನೂ ಓದಿ: ಅಪ್ಪು ನಟಿಸಬೇಕಿದ್ದ ಕತೆಯಲ್ಲಿ ವಿನಯ್ ರಾಜ್‌ಕುಮಾರ್ ಹೀರೋ

    ಕನ್ನಡದ ಖ್ಯಾತ ನಟ ವಜ್ರಮುನಿ ತಮ್ಮ ಚಿತ್ರಗಳಲ್ಲಿ ಹೆಚ್ಚು ಬಯ್ಯಲು ಬಳಸುತ್ತಿದ್ಡ ಸಂಭಾಷಣೆ “ಯಲಾ ಕುನ್ನಿ”. ಈ ಪದವನ್ನೆ ಚಿತ್ರದ ಶೀರ್ಷಿಕೆಯಾಗಿ ನಿರ್ದೇಶಕರು ಬಳಸಿಕೊಂಡಿದ್ದಾರೆ.  ಚಿತ್ರದಲ್ಲಿ “ವಜ್ರಮುನಿ”ಯಾಗಿ ಕೋಮಲ್  ರೆಟ್ರೂ ಲುಕ್ ನಲ್ಲಿ ಕಮಾಲ್ ಮಾಡಲಿದ್ದಾರೆ.  ಹಿರಿಯ ಕಲಾವಿದ ಮುಸುರಿ ಕೃಷ್ಣ ಮೂರ್ತಿ ಅವರ ಮಗ ಜಯಸಿಂಹ ಮುಸುರಿ, ನವರಸ ನಾಯಕ ಜಗ್ಗೇಶ್ ಅವರ ಕಿರಿಯ ಮಗ ಯತಿರಾಜ್ ಹಾಗೂ “ಫ್ರೆಂಚ್ ಬಿರಿಯಾನಿ” ಖ್ಯಾತಿಯ ಮಹಾಂತೇಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

    ಕುಟುಂಬ ಸಮೇತ ನೋಡಬಹುದಾದ ಪರಿಶುದ್ಧ ಹಾಸ್ಯ ಕಥಾಹಂದರದ ಜೊತೆಗೆ ಎಮೋಶನ್ ಸನ್ನಿವೇಶಗಳನ್ನು ಒಳಗೊಂಡಿರುವ ಈ ಚಿತ್ರಕ್ಕೆ ನಿರ್ದೇಶಕ ಪ್ರದೀಪ ಅವರೆ, ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ,ಗೀತ ರಚನೆ ಸಹ ಮಾಡಿದ್ದಾರೆ  ಧರ್ಮ ವಿಶ್ ಸಂಗೀತ, ಉದಯ್ ಲೀಲಾ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿರಲಿದೆ.

  • ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಮೂರು ಡೆತ್‍ನೋಟ್ ಪತ್ತೆ

    ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಮೂರು ಡೆತ್‍ನೋಟ್ ಪತ್ತೆ

    ರಾಮನಗರ: ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ (Businessman Pradeep) ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಆತ್ಮಹತ್ಯೆಗೂ ಮುನ್ನ ಪ್ರದೀಪ್ ಬರೆದಿಟ್ಟಿದ್ದ ಮೂರು ಡೆತ್‍ನೋಟ್ ಪತ್ತೆಯಾಗಿದೆ.

    ನ್ಯೂ ಇಯರ್ ಸೆಲೆಬ್ರೇಷನ್‍ (New Year Celebration) ಗೆ ಅಂತ ಪ್ರದೀಪ್ ತನ್ನ ಸ್ನೇಹಿತರು ಹಾಗೂ ಸಂಬಂಧಿಕರೊಂದಿಗೆ ಕಗ್ಗಲೀಪರ ಸಮೀಪದ ರೆಸಾರ್ಟ್‍ಗೆ ಹೋಗಿದ್ರು. ರಾತ್ರಿ ಪಾರ್ಟಿ ಮುಗಿಸಿದ ಬಳಿಕ ಮಂಕಾಗಿದ್ದ ಪ್ರದೀಪ್, ಬೆಳಗ್ಗೆ ಯಾರಿಗೂ ಹೇಳದೆ ಬೆಳ್ಳಂದೂರಿನ ಮನೆಗೆ ಬಂದಿದ್ದರು. ಮನೆಗೆ ಬಂದವರೇ ಆತ್ಮಹತ್ಯೆಗೆ ನಿರ್ಧಾರ ಮಾಡಿ, ಮನೆಯಲ್ಲಿದ್ದ ಲೈಸೆನ್ಸ್ ಪಿಸ್ತೂಲ್ ತೆಗೆದುಕೊಂಡಿದ್ದರು. ಬಳಿಕ ಬರೆದಿದ್ದ ಮೂರು ಡೆತ್‍ನೋಟ್‍ಗಳಲ್ಲಿ ಒಂದನ್ನು ಪತ್ನಿ ನಮಿತಾ ವಾರ್ಡ್ ರೋಬ್‍ನಲ್ಲಿಟ್ಟಿದ್ದರು. ಇದನ್ನೂ ಓದಿ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಪ್ರಕರಣ – ಲಿಂಬಾವಳಿ ಸೇರಿ 6 ಜನರ ವಿರುದ್ಧ FIR

    ಇದಾದ ಬಳಿಕ ರೆಸಾರ್ಟ್ (Resort) ಗೆ ತೆರಳಿ ಸಂಬಂಧಿಕರ ಕಾರಿನ ವೈಪರ್ ಬಳಿ ಒಂದನ್ನು ಇಟ್ಟಿದ್ದರು. ಮತ್ತೊಂದು ಡೆತ್ ನೋಟನ್ನ ಬ್ಯಾಂಕ್ ದಾಖಲೆಗಳನ್ನ ಅಟ್ಯಾಚ್ ಮಾಡಿ ಕಾರಿನಲ್ಲಿಟ್ಟಿದ್ದರು. ಅದನ್ನ ಗಮನಿಸದ ಸಂಬಂಧಿಕರು ರೆಸಾರ್ಟ್‍ನಿಂದ ಹೊರಟಿದ್ರು. ಪ್ರದೀಪ್ ಸಂಬಂಧಿಕರು ಹೋಗ್ತಿದ್ದ ಕಾರನ್ನ ಓವರ್ ಟೇಕ್ ಮಾಡಿ, ಒಂದು ಕಿ.ಮೀ ದೂರದಲ್ಲಿ ನಿಟ್ಟಿಗೆರೆ ಎಂಬಲ್ಲಿ ಪಿಸ್ತೂಲ್‍ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರದೀಪ್ ಕಾರು ಹತ್ತಿರ ಬಂದು ಸಂಬಂಧಿಕರು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ. ತಾನು ಆತ್ಮಹತ್ಯೆ ಮಾಡಿಕೊಂಡ್ರೆ ಅನಾಥ ಶವವಾಗಬಾರದು ಅನ್ನೋ ಕಾರಣಕ್ಕೆ ಇಷ್ಟೆಲ್ಲಾ ಸರ್ಕಸ್ ಮಾಡಿದ್ದರು ಎನ್ನಲಾಗ್ತಿದೆ.

    ಸದ್ಯ ಡೆತ್‍ನೋಟ್‍ನಲ್ಲಿದ್ದ ಶಾಸಕ ಅರವಿಂದ ಲಿಂಬಾವಳಿ (Aravind Limbavali) ಸೇರಿದಂತೆ ಐವರು ಆರೋಪಿಗಳಿಗೆ ಕಗ್ಗಲೀಪುರ ಪೊಲೀಸ (Kaggalipura Police) ರಿಂದ ನೊಟೀಸ್ ನೀಡಲಾಗಿದೆ. ಪ್ರದೀಪ್ ಪತ್ನಿಯ ಮೇಲೂ ಕೆಲವು ಅನುಮಾನಗಳು ಇರುವುದರಿಂದ ನಮಿತಾಳ ಫೋನ್‍ನ ಸಿಡಿಆರ್ ಅನ್ನು ಪೊಲೀಸರು ಕಲೆಕ್ಟ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹೃದಯಾಘಾತದಿಂದ ಮರಾಠಿ ನಟ ಪ್ರದೀಪ್ ಪಟವರ್ಧನ್ ನಿಧನ

    ಹೃದಯಾಘಾತದಿಂದ ಮರಾಠಿ ನಟ ಪ್ರದೀಪ್ ಪಟವರ್ಧನ್ ನಿಧನ

    ರಾಠಿ ಸಿನಿಮಾಗಳ ಮೂಲಕ ಸಂಚಲನ ಮೂಡಿಸಿರುವ ನಟ ಪ್ರದೀಪ್ ಪಟವರ್ಧನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪ್ರದೀಪ್ ಅಗಲಿಕೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕ್‌ನಾಥ್ ಶಿಂಧೆ ಸಂತಾಪ ಸೂಚಿಸಿದ್ದಾರೆ.‌‌

    ರಂಗಭೂಮಿ ಹಿನ್ನಲೆ ಇರುವ ನಟ ಪ್ರದೀಪ್, ಮರಾಠಿ ಚಿತ್ರರಂಗದಲ್ಲಿ ಸಾಕಷ್ಟು ಸಿನಿಮಾಗಳ ಮೂಲಕ ಗುರುತಿಸಿಕೊಳ್ತಿದ್ದಾರೆ. ಕಿರುತೆರೆ ಜತೆಗೆ ಬಾಲಿವುಡ್ ಸಿನಿಮಾಗಳಲ್ಲೂ ನಟಿಸಿದ್ದರು. ಇನ್ನು ೬೪ ವರ್ಷದ ನಟ ಪ್ರದೀಪ್ ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ. ನಟ ಪ್ರದೀಪ್ ನಿಧನದಿಂದ ಮರಾಠಿ ಚಿತ್ರರಂಗದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ:ನಾನು ಎಷ್ಟೋ ಜನರ ಜೊತೆ ಫ್ಲರ್ಟ್ ಮಾಡಿದ್ದೇನೆ ಲೆಕ್ಕವಿಲ್ಲ: ಅರ್ಜುನ್ ರಮೇಶ್

    ಮರಾಠಿ ಸಿನಿಮಾಗಳಲ್ಲಿನ ತಮ್ಮ ಅದ್ಭುತ ನಟನೆಯಿಂದಾಗಿ ಪ್ರದೀಪ್ ಪಟವರ್ಧನ್ ಅವರು ಪ್ರೇಕ್ಷಕರ ಹೃದಯ ಗೆದ್ದಿದ್ದರು. ಇಂದು ಅವರು ನಿಧನರಾಗಿದ್ದಾರೆ. ಅವರ ಅಗಲಿಕೆಯಿಂದ ಮರಾಠಿ ಕಲಾ ಪ್ರಪಂಚಕ್ಕೆ ತೀವ್ರ ನಷ್ಟ ಆಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ನೆಚ್ಚಿನ ನಟನ ನಿಧನಕ್ಕೆ ಅಭಿಮಾನಿಗಳು, ಸಹಕಲಾವಿದರು, ಹಿತೈಷಿಗಳು ಸಂತಾಪ ಸೂಚಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]