Tag: ಪ್ರಧಾನಿ ಅಭ್ಯರ್ಥಿ

  • ಪ್ರಧಾನಿ ಅಭ್ಯರ್ಥಿ ಹುಚ್ಚನಾಗಿರಬಾರದು – ರಾಹುಲ್ ಗಾಂಧಿಗೆ ಸಂಸದ ಬಸವರಾಜು ಟಾಂಗ್

    ಪ್ರಧಾನಿ ಅಭ್ಯರ್ಥಿ ಹುಚ್ಚನಾಗಿರಬಾರದು – ರಾಹುಲ್ ಗಾಂಧಿಗೆ ಸಂಸದ ಬಸವರಾಜು ಟಾಂಗ್

    ತುಮಕೂರು: ಪ್ರಧಾನಿ ಅಭ್ಯರ್ಥಿ ಭಾರತೀಯ ಪ್ರಜೆಯಾಗಿರಬೇಕು, ಹುಚ್ಚನಾಗಿರಬಾರದು ಎಂದು ಬಿಜೆಪಿ ಸಂಸದ ಜಿ.ಎಸ್ ಬಸವರಾಜು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

    ಪುಲ್ವಾಮಾ ದಾಳಿಯಿಂದ ಯಾರಿಗೆ ಲಾಭವಾಯ್ತು ಎಂಬ ರಾಹುಲ್ ಗಾಂಧಿ ಟ್ವೀಟ್ ಅನ್ನು ಜಿ.ಎಸ್ ಬಸವರಾಜು ಖಂಡಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರು ಮುಂದಿನ ಪ್ರಧಾನಿ ಅಭ್ಯರ್ಥಿ ಈ ರೀತಿಯ ಹೇಳಿಕೆ ಕೊಟ್ಟಿದ್ದಾರಲ್ಲ ಎಂದು ಜಿ.ಎಸ್ ಬಸವರಾಜು ಅವರನ್ನು ಪ್ರಶ್ನಿಸಿದರು.  ಇದನ್ನೂ ಓದಿ: ಪುಲ್ವಾಮಾ ದಾಳಿಯಿಂದ ಲಾಭ ಆಗಿದ್ದು ಯಾರಿಗೆ: ರಾಹುಲ್ ಗಾಂಧಿ ಪ್ರಶ್ನೆ

    ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿ.ಎಸ್ ಬಸವರಾಜು, ಪ್ರಧಾನಿ ಆಗುವವರಿಗೂ ಅರ್ಹತಾ ಮಟ್ಟ ಇದೆ. ನನಗೂ ಪ್ರಧಾನಿ ಆಗಬೇಕೆಂಬ ಚಟ ಇದೆ. ಪ್ರಧಾನಿ ಅಭ್ಯರ್ಥಿ ಭಾರತೀಯನಾಗಿರಬೇಕು ಹೊರತು ಹುಚ್ಚನಾಗಿರಬಾರದು ಎಂದು ರಾಹುಲ್ ಗಾಂಧಿಗೆ ಟಾಂಗ್ ಕೊಟ್ಟಿದ್ದಾರೆ. ಅಲ್ಲದೆ ಪುಲ್ವಾಮಾ ದಾಳಿ ರಾಹುಲ್ ಗಾಂಧಿಯೇ ಮಾಡಿಸಿರಬೇಕು ಸೈದ್ಧಾಂತಿಕ ಬದ್ಧತೆ, ಸೈದಾಂತಿಕ ಅರಿವು ಇದ್ದವರಿಗೆ ಏನಾದರೂ ಹೇಳಬಹುದು, ಆದರೆ ರಾಹುಲ್ ಗಾಂಧಿಗೆ ಅದ್ಯಾವುದೂ ಇಲ್ಲ ಎಂದರು.

    ನಾನು ಕಾಂಗ್ರೆಸ್ಸಿನಲ್ಲಿ ಇದ್ದವನು. ಒಳ್ಳೆಯವರು ಯಾರು ಈಗ ಕಾಂಗ್ರೆಸ್ಸಿನಲ್ಲಿ ಇಲ್ಲ. ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳುವಂತೆ ಈಗ ಕಾಂಗ್ರೆಸ್ಸಿನಲ್ಲಿ ಕೇವಲ ಕಳ್ಳರೇ ತುಂಬಿಕೊಂಡಿದ್ದಾರೆ ಎಂದು ಆರೋಪಿಸಿದರು.

  • ಪ್ರಧಾನಿ ಹುದ್ದೆಗೆ ಚಂದ್ರಬಾಬು ನಾಯ್ಡು ಹೆಸರು ತೇಲಿಬಿಟ್ಟ ಎಚ್‍ಡಿಡಿ

    ಪ್ರಧಾನಿ ಹುದ್ದೆಗೆ ಚಂದ್ರಬಾಬು ನಾಯ್ಡು ಹೆಸರು ತೇಲಿಬಿಟ್ಟ ಎಚ್‍ಡಿಡಿ

    – ಎಲ್ಲ ವಿಪಕ್ಷಗಳನ್ನು ನಾಯ್ಡು ಸಂಘಟಿಸುವಲ್ಲಿ ಯಶಸ್ವಿಯಾಗಿದ್ದಾರೆ
    – ನಾನು ಪ್ರಧಾನಿ ಸ್ಥಾನದ ಆಕಾಂಕ್ಷಿಯಲ್ಲ: ನಾಯ್ಡು

    ಅಮರಾವತಿ: ಮಹಾಘಟಬಂಧನ್ ಪ್ರಧಾನಿ ಅಭ್ಯರ್ಥಿ ಯಾರು ಎನ್ನುವುದು ಇಲ್ಲಿಯವರೆಗೆ ಸ್ಪಷ್ಟವಾಗಿಲ್ಲ. ಈ ಮಧ್ಯೆ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಅವರು ಆಂಧ್ರ ಪ್ರದೇಶದ ಮುಖ್ಯಮಂತ್ರಿ, ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರ ಹೆಸರನ್ನು ಪ್ರಧಾನಿ ಹುದ್ದೆಗೆ ತೇಲಿಬಿಟ್ಟಿದ್ದಾರೆ.

    ಆಂಧ್ರ ಪ್ರದೇಶದ ತಿರುವೂರಿನಲ್ಲಿ ನಡೆದ ಚುನಾವಣೆ ಸಭೆಯಲ್ಲಿ ಮಾತನಾಡಿದ ಅವರು, ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಸನ್ನಿವೇಶದಲ್ಲಿ ಮಹತ್ವದ ಜವಾಬ್ದಾರಿ ಹೊರಲು ಒಪ್ಪಿಕೊಂಡಿದ್ದಾರೆ. ಅವರು ಯಾಕೆ ದೇಶದ ಪ್ರಧಾನಿಯಾಗಬಾರದು ಎಂದು ಪ್ರಶ್ನಿಸಿದ್ದಾರೆ.

    ಇದೇ ವೇಳೆ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಚಂದ್ರಬಾಬು ನಾಯ್ಡು ಅವರು, ನಾನು ಪ್ರಧಾನಿ ಸ್ಥಾನದ ಆಕಾಂಕ್ಷಿಯಲ್ಲ ಎಂದು ಸ್ಪಷ್ಟನೆ ನೀಡಿದರು.

    ಎಚ್.ಡಿ.ದೇವೇಗೌಡ ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸವಾಲು ಒಡ್ಡುವ ಬಲಿಷ್ಠ ನಾಯಕ ಯಾರು ಎನ್ನುವುದೇ ಪ್ರಶ್ನೆಯಾಗಿದೆ. ಮಾಧ್ಯಮಗಳಲ್ಲಿ ಇದೇ ವಿಚಾರಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಹೀಗಾಗಿ ಮೋದಿ ಅವರಿಗೆ ಪ್ರಬಲ ಪ್ರತಿಸ್ಪರ್ಧೆ ನೀಡಲು ಚಂದ್ರಬಾಬು ನಾಯ್ಡು ಸಮರ್ಥ ನಾಯಕರಾಗಿದ್ದಾರೆ ಎಂದು ಹೇಳಿದರು.

    ಪ್ರಧಾನಿ ಮೋದಿ ಪ್ರಜಾಪ್ರಭುತ್ವವನ್ನು ನಾಶ ಮಡಲು ಯತ್ನಿಸುತ್ತಿದ್ದಾರೆ. ಆದರೆ ಚಂದ್ರಬಾಬು ನಾಯ್ಡು ಅವರು ಪ್ರಜಾಸತ್ತಾತ್ಮಕ ರೀತಿಯಲ್ಲಿ ಮೋದಿ ಅವರನ್ನು ಎದುರಿಸಲು ಮುಂದಾಗಿದ್ದಾರೆ. ಇದರಿಂದಾಗಿ ಚಂದ್ರಬಾಬು ನಾಯ್ಡು ಪ್ರಧಾನಿಯಾಗಲು ಸಮರ್ಥರು ಎಂದು ತಿಳಿಸಿದರು.

    ಪ್ರಾದೇಶಿಕ ಪಕ್ಷಗಳು ಸ್ವಾರ್ಥ- ಸ್ವಹಿತಾಸಕ್ತಿ ಹೊಂದಿದ್ದು, ಒಗ್ಗೂಡುವುದು ಸುಲಭವಲ್ಲ ಎಂದು ಬಿಜೆಪಿಯವರು ದೂರುತ್ತಿದ್ದಾರೆ. ಆದರೆ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ 23 ಪಕ್ಷಗಳನ್ನು ಸೇರಿಸಿ ಎನ್‍ಡಿಎ ಮೈತ್ರಿಕೂಟ ಮುನ್ನಡೆಸಿದ್ದರು. ಆ ಅವಧಿಯಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಕಾರ್ಗಿಲ್ ಯುದ್ಧವನ್ನೂ ವಾಜಪೇಯಿ ಗೆದ್ದರು. ಆದರೆ ಪ್ರಧಾನಿ ಮೋದಿ ಪ್ರಾದೇಶಿಕ ಪಕ್ಷಗಳ ಒಕ್ಕೂಟದ ಬಗ್ಗೆ ತಪ್ಪಾಗಿ ಬಿಂಬಿಸುತ್ತಿದ್ದಾರೆ ಎಂದು ದೂರಿದರು.

    ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನನ್ನು ಸೋಲಿಸಲು ಚಂದ್ರಬಾಬು ನಾಯ್ಡು ಅವರು ಅನೇಕ ರಾಜಕೀಯ ನಾಯಕರನ್ನು ಭೇಟಿ ಮಾಡಿದ್ದರು. ಈ ನಿಟ್ಟಿನಲ್ಲಿ ಮಹಾಘಟಬಂಧನ್ ರೂಪಿಸಲಾಗಿತ್ತು. ಆದರೆ ಪ್ರಧಾನಿ ಅಭ್ಯರ್ಥಿ ಯಾರು ಎನ್ನುವುದನ್ನು ನಾಯಕರು ಸ್ಪಷ್ಟಪಡಿಸಿಲ್ಲ. ಬಿಎಸ್‍ಪಿ ನಾಯಕಿ ಮಯಾವತಿ, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಸರುಗಳು ಪ್ರಧಾನಿ ರೇಸ್‍ನಲ್ಲಿ ಕೇಳಿ ಬರುತ್ತಿವೆ.

    ಆಂಧ್ರ ಪ್ರದೇಶದಲ್ಲಿ ಒಟ್ಟು 25 ಲೋಕಸಭಾ ಸ್ಥಾನಗಳಿದ್ದು, ಒಂದೇ ಹಂತದಲ್ಲಿ ಏಪ್ರಿಲ್ 11ರಂದು ಮತದಾನ ನಡೆಯಲಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಟಿಡಿಪಿ 15 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಉಳಿದಂತೆ ವೈ.ಎಸ್.ಜಗನ್ಮೋಹನ್ ರೆಡ್ಡಿ ಅವರ ವೈಎಸ್‍ಆರ್ ಪಕ್ಷವು 8 ಹಾಗೂ ಬಿಜೆಪಿ 2 ಕ್ಷೇತ್ರಗಳಲ್ಲಿ ಜಯಗಳಿಸಿದ್ದವು.

  • ಪ್ರಧಾನಿ ಆಸೆ ನನಗಿಲ್ಲ, ರಾಷ್ಟ್ರದ ಅಭಿವೃದ್ಧಿಯೇ ಮೊದಲ ಆಯ್ಕೆ: ಗಡ್ಕರಿ

    ಪ್ರಧಾನಿ ಆಸೆ ನನಗಿಲ್ಲ, ರಾಷ್ಟ್ರದ ಅಭಿವೃದ್ಧಿಯೇ ಮೊದಲ ಆಯ್ಕೆ: ಗಡ್ಕರಿ

    ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಬದಲಾಗಿ ನಿತಿನ್ ಗಡ್ಕರಿ ಅವರನ್ನು ಆಯ್ಕೆ ಮಾಡಲಾಗುತ್ತದೆ ಎಂಬ ಸುದ್ದಿಯ ಬಗ್ಗೆ ಸದ್ಯ ಸ್ವತಃ ಗಡ್ಕರಿ ಅವರೇ ಸ್ಪಷ್ಟನೆ ನೀಡಿದ್ದಾರೆ.

    ಪ್ರಧಾನಿಯಾವುವ ಯಾವುದೇ ಆಸೆ ನನಗೆ ಇಲ್ಲ. ನನ್ನ ಮನಸ್ಸಿನಲ್ಲಿ ಹಾಗೂ ಆರ್ ಎಸ್‍ಎಸ್ ನಲ್ಲೂ ಇಂತಹ ಯಾವುದೇ ಚಿಂತನೆ ಇಲ್ಲ. ನಮಗೆ ರಾಷ್ಟ್ರದ ಅಭಿವೃದ್ಧಿಯೇ ಮೊದಲ ಆಯ್ಕೆ ಆಗಿದೆ ಎಂದಿದ್ದಾರೆ.

    ಪ್ರಧಾನಿ ಆಗಬೇಕೆಂದು ನಾನು ಕನಸು ಕೂಡ ಕಂಡಿಲ್ಲ. ಅಲ್ಲದೇ ಯಾರ ಬಳಿಯೂ ಲಾಬಿ ಮಾಡಲು ಕೂಡ ಹೋಗಿಲ್ಲ. ಪ್ರಧಾನಿಯ ಪಟ್ಟದ ರೇಸ್‍ನಲ್ಲಿ ಇಲ್ಲ. ಇದನ್ನು ನನ್ನ ಹೃದಯದಿಂದ ಹೇಳುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

    ನಾನು ಮತ್ತು ನನ್ನ ಪಕ್ಷ ಮೋದಿ ಜೀ ಅವರ ಬೆನ್ನಿಗೆ ನಿಂತು ಅವರ ಉತ್ತಮ ಕಾರ್ಯಗಳನ್ನು ಬೆಂಬಲಿಸುತ್ತೇವೆ. ನಾನು ಯಾವುದೇ ಲೆಕ್ಕಾಚಾರಗಳನ್ನು ಮಾಡಿಲ್ಲ. ಅಲ್ಲದೇ ಯಾವುದೇ ಟಾರ್ಗೆಟ್ ಕೂಡ ಇಟ್ಟುಕೊಂಡಿಲ್ಲ. ನಾನು ನಾನು ನಂಬಿದ ದಾರಿ ಎಲ್ಲಿ ಕರೆದ್ಯೊಯುತ್ತದೆ ಅಲ್ಲಿಗೆ ಸಾಗುತ್ತೇನೆ. ನನಗೆ ನೀಡಿದ ಜವಾಬ್ದಾರಿಗಳನ್ನು ಮಾತ್ರ ನಿರ್ವಹಿಸುತ್ತೇನೆ ಎಂದಿದ್ದಾರೆ.

    ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷ ಬಿಜೆಪಿ ನಾಯಕತ್ವದ ಕುರಿತು ಮಾಡಿದ ಟೀಕೆಗಳ ಬೆನ್ನಲ್ಲೇ ಗಡ್ಕರಿ ಈ ಸ್ಪಷ್ಟನೆಯನ್ನು ನೀಡಿದ್ದಾರೆ. ಗಣರಾಜೋತ್ಸವ ದಿನದಂದು ನಿತಿನ್ ಗಡ್ಕರಿ ಹಾಗು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪಕ್ಕದಲ್ಲೇ ಕುಳಿತು ಮಾತುಕತೆ ನಡೆಸಿದ್ದರು. ಅಲ್ಲದೇ ಸಂಸತ್ ಅಧಿವೇಶನದ ಸಮಯದಲ್ಲೂ ಸಚಿವರಾಗಿ ಗಡ್ಕರಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮೇಜುಕುಟ್ಟಿ ಸ್ವಾಗತಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ‘ಯೋಗಿಯನ್ನ ತನ್ನಿ – ದೇಶವನ್ನು ಉಳಿಸಿ’

    ‘ಯೋಗಿಯನ್ನ ತನ್ನಿ – ದೇಶವನ್ನು ಉಳಿಸಿ’

    – ಪ್ರಧಾನಿ ಪಟ್ಟಕ್ಕೆ ಯೋಗಿ ನೇಮಿಸಿ
    – ಉತ್ತರ ಪ್ರದೇಶದಲ್ಲಿ ಯೋಗಿ ಪರ ಬ್ಯಾನರ್

    ನವದೆಹಲಿ: ಪಂಚರಾಜ್ಯ ಚುನಾವಣೆಯಲ್ಲಿ ಮೂರು ಕಡೆಯಲ್ಲಿ ಸೋಲು ಕಂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತೊಂದು ಸವಾಲು ಎದುರಾಗಿದೆ.

    ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿ ನರೇಂದ್ರ ಮೋದಿ ಸ್ಪರ್ಧಿಸುವುದು ಬೇಡ. ಅವರ ಬದಲಾಗಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಕಣಕ್ಕೆ ಇಳಿಯಲಿ ಎನ್ನುವ ಬೇಡಿಕೆ ವ್ಯಕ್ತವಾಗಿದೆ.

    ಯೋಗಿ ಆದಿತ್ಯನಾಥ್ ಅವರಿಂದಾಗಿ ಪ್ರಧಾನಿ ಮೋದಿ ಜನಪ್ರಿಯತೆ ಕುಸಿಯುತ್ತಿದೆ. ಸುಳ್ಳಿಗೆ ಮತ್ತೊಂದು ಹೆಸರು ಮೋದಿ. ಹಿಂದುತ್ವದ ಫೈರ್ ಬ್ರ್ಯಾಂಡ್ ಯೋಗಿ ಆದಿತ್ಯನಾಥ್ ಹೀಗಾಗಿ ಅವರನ್ನೇ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಬೇಕು ಎಂದು ಉತ್ತರ ಪ್ರದೇಶದ ಕೆಲವು ಕಾರ್ಯಕರ್ತರು ಒತ್ತಾಯಿಸಿದ್ದಾರೆ.

    ಲಕ್ನೋದಲ್ಲಿ ಫೆಬ್ರವರಿ 10ರಂದು ಧರ್ಮ ಸಂಸತ್ತು ನಡೆಯಲಿದೆ. ಈ ಕಾರ್ಯಕ್ರಮ ಸ್ವಾಗತ ಕೋರಿ ಹಾಕಿರುವ ಪೋಸ್ಟರ್ ಗಳಲ್ಲಿ ಯೋಗಿ ಪರ ಉತ್ತರ ಪ್ರದೇಶ ನವ ನಿರ್ಮಾಣ ಸೇನಾ ಪ್ರಚಾರ ಮಾಡಿದೆ. ‘ಪ್ರಧಾನಿ ಪಟ್ಟಕ್ಕೆ ಯೋಗಿ’, ‘ಯೋಗಿಯನ್ನ ತನ್ನಿ – ದೇಶವನ್ನು ಉಳಿಸಿ’ ಎಂಬ ಘೋಷಣೆಯುಳ್ಳ ಪೋಸ್ಟರ್ ಗಳನ್ನು ಬೀದಿಯ ಬದಿಯಲ್ಲಿ ಹಾಕಲಾಗಿದೆ.

    ಯೋಗಿಯೇ ಯಾಕೆಬೇಕು?:
    ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಭರವಸೆ ನೀಡಿದ್ದರು. ಆದರೆ ಮತ್ತೆ ಚುನಾವಣೆ ಬಂದರೂ ಯಾವುದೇ ಬೆಳವಣಿಗೆ ಕಾಣಲಿಲ್ಲ. ಯೋಗಿ ಆದಿತ್ಯನಾಥ್ ಅವರು ರಾಮಮಂದಿರ ನಿರ್ಮಾಣದಲ್ಲಿ ಬದ್ಧರಾಗಿದ್ದಾರೆ. ಅವರು ತಮ್ಮ ಭಾಷಣದ ಮೂಲಕ ಹಿಂದೂ ಹೃದಯ ಸಾಮ್ರಾಟ್ ಅಂತ ಗುರುತಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಹಿಂದಿ ಭಾಷೆಯನ್ನು ಚೆನ್ನಾಗಿ ಅರಗಿಸಿಕೊಂಡಿರುವ ಯೋಗಿ ಧಾರ್ಮಿಕ ಮಾರ್ಗದ ಮೂಲಕ ಜನರಿಗೆ ಹತ್ತಿರವಾಗಿದ್ದಾರೆ. ಈ ಕಾರಣಕ್ಕೆ ಯೋಗಿ ಪರ ನವ ನಿರ್ಮಾಣ ಸೇನಾ ಬ್ಯಾನರ್ ಹಾಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv