Tag: ಪ್ರಧಾನ ಮಂತ್ರಿ ವಿಪತ್ತು ಪರಿಹಾರ ನಿಧಿ

  • ಕೊರೊನಾ ವಿರುದ್ಧದ ಹೋರಾಟಕ್ಕೆ 2 ಕೋಟಿ ರೂ. ದೇಣಿಗೆ ನೀಡಿದ ಪವನ್ ಕಲ್ಯಾಣ್

    ಕೊರೊನಾ ವಿರುದ್ಧದ ಹೋರಾಟಕ್ಕೆ 2 ಕೋಟಿ ರೂ. ದೇಣಿಗೆ ನೀಡಿದ ಪವನ್ ಕಲ್ಯಾಣ್

    ಹೈದರಾಬಾದ್: ಜನಸೇನಾ ಪಕ್ಷದ ಮುಖ್ಯಸ್ಥ, ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಕೊರೊನಾ ವಿರುದ್ಧದ ಹೋರಾಟಕ್ಕೆ ಎರಡು ಕೋಟಿ ರೂ. ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ.

    ಕೊರೊನಾ ವೈರಸ್ ದೇಶಾದ್ಯಂತ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಪವನ್ ಕಲ್ಯಾಣ್ ಸಹಾಯಕ್ಕೆ ಮುಂದಾಗಿದ್ದಾರೆ. ಅವರು ಆಂಧ್ರ ಪ್ರದೇಶ, ತೆಲಂಗಾಣ ಹಾಗೂ ಕೇಂದ್ರ ಸರ್ಕಾರಕ್ಕೆ ಸೇರಿ ಒಟ್ಟು 2 ಕೋಟಿ ರೂ. ದೇಣಿಗೆ ನೀಡಲಿದ್ದಾರೆ. ಇದನ್ನೂ ಓದಿ: ಕೊರೊನಾ ಪರಿಹಾರ ನಿಧಿಗೆ ತನ್ನ 6 ತಿಂಗ್ಳ ಸಂಬಳ ನೀಡಿದ ಭಾರತದ ಕುಸ್ತಿಪಟು

    ಈ ಕುರಿತು ಟ್ವೀಟ್ ಮಾಡಿವ ಪವನ್ ಕಲ್ಯಾಣ್, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ತಲಾ 50 ಲಕ್ಷ ರೂ.ನಂತೆ 1 ಕೋಟಿ ರೂ. ದೇಣಿಗೆ ನೀಡುತ್ತೇನೆ. ಅಷ್ಟೇ ಅಲ್ಲದೆ ಪ್ರಧಾನ ಮಂತ್ರಿ ವಿಪತ್ತು ಪರಿಹಾರ ನಿಧಿಗೆ ಒಂದು ಕೋಟಿ ನೀಡಲು ನಿರ್ಧರಿಸಿರುವೆ ಎಂದು ತಿಳಿಸಿದ್ದಾರೆ

    ಇನ್ನೊಂದೆಡೆ ಪವನ್ ಕಲ್ಯಾಣ್ ಅವರು ಕೇಂದ್ರ ಸರ್ಕಾರದ ಸಂದೇಶ ಮತ್ತು ಸಲಹೆಯನ್ನು ಸ್ವಾಗತಿಸಿದ್ದಾರೆ. ‘ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಪೂರ್ಣ ಬೆಂಬಲ ನೀಡುತ್ತೇನೆ. ಜನಸೇನಾ ಪಕ್ಷದ ಮುಖ್ಯಸ್ಥರು ಹಾಗೂ ದೇಶದ ಪ್ರತಿಯೊಬ್ಬ ಪ್ರಜೆ ಪ್ರಧಾನಿ ಮೋದಿ ಅವರ ಸಲಹೆಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ. ಜೊತೆಗೆ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಾಗೂ ಇತರರ ಸೇವೆಗಳನ್ನು ಪವನ್ ಕಲ್ಯಾಣ್ ಶ್ಲಾಘಿಸಿದ್ದಾರೆ.

    ಪವನ್ ಕಲ್ಯಾಣ್ ಅವರು ಸಿನಿಮಾ ಕ್ಷೇತ್ರಕ್ಕೆ ಪುನರಾಗಮನ ಮಾಡಿದ್ದು, ಮುಂಬರುವ ಅವರ ‘ವಕೀಲ್ ಸಾಬ್’ ಚಿತ್ರವನ್ನು ವೇಣು ಶ್ರೀರಾಮ್ ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅಂಜಲಿ ಮತ್ತು ನಿವೇತಾ ಥಾಮಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.