Tag: ಪ್ರಭಾಕರ್ ಭಟ್

  • ಪುತ್ತೂರಿನ ಘಟನೆಗೆ ಪ್ರಭಾಕರ್ ಭಟ್, ನಳಿನ್ ಕುಮಾರ್ ಕಟೀಲ್ ಕಾರಣ: ಅಭಯ್ ಚಂದ್ರ ಜೈನ್

    ಪುತ್ತೂರಿನ ಘಟನೆಗೆ ಪ್ರಭಾಕರ್ ಭಟ್, ನಳಿನ್ ಕುಮಾರ್ ಕಟೀಲ್ ಕಾರಣ: ಅಭಯ್ ಚಂದ್ರ ಜೈನ್

    – ಬಿ.ಕೆ ಹರಿಪ್ರಸಾದ್‍ರನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಿ

    ಮಂಗಳೂರು: ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆಗೆ ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರೇ ಕಾರಣ ಎಂದು ಮಾಜಿ ಸಚಿವ ಅಭಯ್ ಚಂದ್ರ ಜೈನ್ (AbhayChandra Jain) ಗಂಭೀರ ಆರೋಪ ಮಾಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಗೆ ನೇರ ಕಾರಣ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ನಳಿನ್ ಕುಮಾರ್ ಕಟೀಲ್ ಕಾರಣ. ಸಿದ್ದರಾಮಯ್ಯ (Siddaramaiah) ನಾಳೆ ಅಧಿಕಾರ ಸ್ವೀಕಾರ ಮಾಡಬೇಕು. ಕಲ್ಲಡ್ಕ ಭಟ್ ಈ ಘಟನೆಗೆ ಕಾಂಗ್ರೆಸ್ ಕಾರಣ ಅಂತಾ ಹೇಳುತ್ತಾರೆ. ಕಟೀಲ್ ಲೋಕಸಭಾ ಸದಸ್ಯನಾಗಿ ಕಾರ್ಯಕರ್ತರಿಗೆ ಸಾಯುವ ಹಾಗೆ ಹೊಡಿಸ್ತಾರೆ ಅಂದ್ರೆ ಅವರಿಗೆ ಮಾನವೀಯತೆ ಇದ್ಯಾ ಎಂದು ಜೈನ್ ಪ್ರಶ್ನಿಸಿದರು.

    ಇದೇ ವೇಳೆ ಬಿ.ಕೆ ಹರಿಪ್ರಸಾದ್ (BK Hariprasad) ರನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಿ ಎಂದು ಒತ್ತಾಯಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ನಲ್ಲಿ ನಾಯಕತ್ವದ ಕೊರತೆ ಇದೆ. ಮೊಯ್ಲಿ, ಆಸ್ಕರ್, ಪೂಜಾರಿಯವರಂತಹ ನಾಯಕ ನಮಗೆ ಬೇಕು. ಈ ಜಿಲ್ಲೆಗೆ ಬಲಿಷ್ಠ ನಾಯಕ ಬೇಕು. ಇದನ್ನು ಹೈಕಮಾಂಡ್, ಕಾಂಗ್ರೆಸ್ ಪ್ರಮುಖರು ಇದನ್ನು ಅರಿಯಬೇಕು. ಹೀಗಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ಗೃಹ ಸಚಿವರನ್ನಾಗಿ ಮಾಡಬೇಕು. ಹಾಗೆಯೇ ದ.ಕ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿಯೂ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ‘ಸಿದ್ದರಾಮಯ್ಯ ಎಂಬ ನಾನು’: ಸಿದ್ದರಾಮಯ್ಯ ಕುರಿತು ಮತ್ತೊಂದು ಸಿನಿಮಾ ಘೋಷಣೆ

    ಹರಿಪ್ರಸಾದ್ ಶಕ್ತಿವಂತ, ಆಡಳಿತದಲ್ಲಿ ತಿಳುವಳಿಕೆಯುಳ್ಳ ವ್ಯಕ್ತಿಯಾಗಿದ್ದಾರೆ. ಹರಿಪ್ರಸಾದ್ ಉಸ್ತುವಾರಿ ಮಂತ್ರಿ ಆದರೆ ಜಿಲ್ಲೆಯ ಅಭಿವೃದ್ಧಿಯಾಗುತ್ತದೆ. ಅವರು ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರದ ಜನರನ್ನು ಸಮಾನಾಗಿ ಕಾಣುತ್ತಾರೆ. ಹರಿಪ್ರಸಾದ್ ಅವರು ಗಡುಸಾಗಿ ಆಡಳಿತ ನಡೆಸುವ ವ್ಯಕ್ತಿಯಾಗಿದ್ದಾರೆ. ಅವರು ಛಲದಂಕ ಮಲ್ಲ,1978 ರಿಂದ ರಾಜಕೀಯದಲ್ಲಿ ಸಕ್ರಿಯವಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೊಟ್ಟರೆ ಜನ ಸಾಮರಸ್ಯದ ಜೀವನ ಮಾಡಬಹುದು. ಜಿಲ್ಲೆಗೆ ಶಕ್ತಿ ತುಂಬುವ ಕೆಲಸವನ್ನು ಬಿ.ಕೆ ಹರಿಪ್ರಸಾದ್ ಮಾಡಲಿದ್ದಾರೆ. ಯುಟಿ ಖಾದರ್ (UT Khader) ಗೂ ಒಳ್ಳೆಯ ಮಂತ್ರಿ ಸ್ಥಾನ ಸಿಗಬೇಕು ಎಂದರು.

    ಹರಿಪ್ರಸಾದ್ ಗೆ ಉಸ್ತುವಾರಿ ಸ್ಥಾನ, ಖಾದರ್ ಗೆ ಮಂತ್ರಿ ಸ್ಥಾನ ಕೊಡಬೇಕು. ಕಾಂಗ್ರೆಸ್ ನ ಐದು ಗ್ಯಾರಂಟಿ ಜಿಲ್ಲೆಯಲ್ಲಿ ಯಶಸ್ವಿಯಾಗಿಲ್ಲ. ಆದರೆ ಈ ಜಿಲ್ಲೆಗೂ ಆ ಯೋಜನೆಯನ್ನು ಜಾರಿ ಮಾಡಬೇಕು. ಯುಟಿ ಖಾದರ್ ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದಾರೆ. ಯುಟಿ ಖಾದರ್ ರಲ್ಲಿ ಡ್ಯಾಶಿಂಗ್ ನೇಚರ್ ಇಲ್ಲ. ಖಾದರ್ ಮೇಲೆ ಕೋಮು ಭಾವನೆ ತೋರಿಸಿ ಅವರನ್ನು ಸ್ತಬ್ಧ ಮಾಡುತ್ತಾರೆ ಎಂದು ಹೇಳಿದರು.

  • ಗುಜರಾತ್ ಹತ್ಯಾಕಾಂಡದ ಸಿನಿಮಾ ಬಂದ್ರೆ ಸಿದ್ದರಾಮಯ್ಯ ಊರು ಬಿಟ್ಟು ಓಡಬೇಕಾಗುತ್ತದೆ: ಕಲ್ಲಡ್ಕ ಪ್ರಭಾಕರ ಭಟ್

    ಗುಜರಾತ್ ಹತ್ಯಾಕಾಂಡದ ಸಿನಿಮಾ ಬಂದ್ರೆ ಸಿದ್ದರಾಮಯ್ಯ ಊರು ಬಿಟ್ಟು ಓಡಬೇಕಾಗುತ್ತದೆ: ಕಲ್ಲಡ್ಕ ಪ್ರಭಾಕರ ಭಟ್

    ಮಂಗಳೂರು: ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಕುರಿತು ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ. ಜೊತೆಗೆ ಗುಜರಾತ್ ಹತ್ಯಾಕಾಂಡ ಬಗ್ಗೆ ಸಿನಿಮಾ ಮಾಡಿ ಎಂದು ಹೇಳುತ್ತಿದ್ದಾರೆ. ಗುಜರಾತ್ ಹತ್ಯಾಕಾಂಡದ ಸಿನಿಮಾ ಮಾಡಿದ್ರೆ ಸಿದ್ದರಾಮಯ್ಯ ಊರು ಬಿಟ್ಟು ಓಡಬೇಕಾಗುತ್ತದೆ ಎಂದು ಆರ್‌ಎಸ್‌ಎಸ್‌ನ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವ್ಯಂಗ್ಯವಾಡಿದ್ದಾರೆ.

    ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ ಬಂದಿರೋದು ಎಲ್ಲವೂ ಸುಳ್ಳು ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಗುಜರಾತ್‍ನಲ್ಲಿ ಮುಸಲ್ಮಾನರು ಮಾಡಿದ ಅತ್ಯಾಚಾರವನ್ನು ಯಾರು ಒಪ್ಪಿಕೊಳ್ಳಲು ಸಾಧ್ಯವಿಲ್ಲ, ಸಿದ್ದರಾಮಯ್ಯ ಬೇಕಾದರೆ ಒಂದು ಸಲ ಹೋಗಿ ಬರಲಿ, 56 ಜನರನ್ನು ರೈಲಿನಲ್ಲಿ ಬೆಂಕಿ ಹಾಕಿ ಕೊಂದಿದ್ದರು. ಅವರ ಮನೆಗೆ ಹೋಗಿ ಕುಟುಂಬದ ದುಃಖ ಏನು ಎಂದು ಕೇಳಿದಾಗ ಗೊತ್ತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ:  ಭಗವದ್ಗೀತೆಯನ್ನು ಪಠ್ಯಪುಸ್ತಕದಲ್ಲಿ ಸೇರಿಸಲು ಸಿಎಂಗೆ ಒತ್ತಾಯಿಸುವೆ: ಬಿಎಸ್‍ವೈ

    ಸಿದ್ದರಾಮಯ್ಯ ಬದುಕಿರೋದು ಅವರ ತಾಯಿ, ಹೆಂಡ್ತಿ ಮಾಡಿರೋ ಪುಣ್ಯದ ಫಲದಿಂದ:
    ರಸ್ತೆ ಮಧ್ಯೆ ದನದ ಮಾಂಸ ತಿನ್ನುತ್ತೇವೆ ಎನ್ನುವ ಸಿದ್ದರಾಮಯ್ಯ ಇವತ್ತು ಬದುಕಿರುವುದು ಅವರ ತಾಯಿ ಹಾಗೂ ಹೆಂಡತಿ ಬೆಳಗ್ಗೆಯಿಂದ ರಾತ್ರಿವರೆಗೆ ದೇವರ ಪೂಜೆ ಮಾಡಿರುವುದರಿಂದ ಅನ್ನೋದು ಅವರಿಗೆ ಗೊತ್ತಿರಲಿ. ಸಿದ್ದರಾಮಯ್ಯನವರ ಮನೆಯಲ್ಲಿ ಪೂಜೆ ಮಾಡುತ್ತಾರೆ ಎಂದು ಅವರ ಹೆಂಡತಿ ಮತ್ತು ತಾಯಿಯನ್ನು ಮನೆಯಿಂದ ಹೊರಗೆ ಹಾಕ್ತಾರ, ಅವರ ಪುಣ್ಯದ ಫಲದಿಂದ ಸಿದ್ದರಾಮಯ್ಯ ಬದುಕಿದ್ದಾರೆ ಅನ್ನೋದು ಅವರಿಗೆ ಗೊತ್ತಿರಬೇಕು. ಹಿಂದೂ ಸಮಾಜವನ್ನು ಹೀಯಾಳಿಸುವ ಕೆಲಸ ಅವರು ಮಾಡಬಾರದು ಎಂದು ಕಿವಿಮಾತು ಹೇಳಿದರು. ಇದನ್ನೂ ಓದಿ: ಭಗವದ್ಗೀತೆ ಹೊಟ್ಟೆ ತುಂಬಿಸುವುದಿಲ್ಲ, ತಲೆಯನ್ನು ತುಂಬಿಸುತ್ತದೆ: ಪ್ರತಾಪ್‍ಸಿಂಹ

    ಹಿಜಬ್ ಪ್ರಕರಣದಲ್ಲಿ ಇವರಿಗೆ ಹಿಜಬ್ ದೊಡ್ಡ ವಿಷಯ ಆಗಿಲ್ಲ, ಹುಡುಗರು ಕೇಸರಿ ಶಾಲು ಹಾಕಿರೋದು ದೊಡ್ಡ ವಿಷಯ ಆಗಿದೆ. ಹಿಜಬ್‍ನ ಬಗ್ಗೆ ಇವರಿಗೆ ಮಾತನಾಡಲು ಧೈರ್ಯವಿಲ್ಲ. ಆ ಕಡೆ ಮಾತನಾಡಿದ್ರು ವೋಟು ಹೋಗುತ್ತೆ, ಈ ಕಡೆ ಮಾತನಾಡಿದ್ರು ವೋಟ್ ಹೋಗುತ್ತೆ ಎಂಬ ಭಯ ಇದೆ. ಸಿದ್ದರಾಮಯ್ಯ ಬಗ್ಗೆ ಗೌರವವಿದೆ ಆದ್ರೆ ಹುಚ್ಚುಚ್ಚಾಗಿ ಮಾತನಾಡಬಾರದು ಎಂದು ಕಿಡಿಕಾರಿದರು.

  • ತಿದ್ದುಪಡಿಯೊಂದಿಗೆ ಕೃಷಿ ಮಸೂದೆ ಮತ್ತೆ ಮಂಡನೆ ಆಗುತ್ತೆ: ಪ್ರಭಾಕರ ಭಟ್

    ತಿದ್ದುಪಡಿಯೊಂದಿಗೆ ಕೃಷಿ ಮಸೂದೆ ಮತ್ತೆ ಮಂಡನೆ ಆಗುತ್ತೆ: ಪ್ರಭಾಕರ ಭಟ್

    ಉಡುಪಿ: ಒಂದು ಒಳ್ಳೆಯ ಮಸೂದೆಯನ್ನು ವಾಪಸ್ ಪಡೆದುಕೊಳ್ಳಲಾಗಿದೆ. ಸಣ್ಣಪುಟ್ಟ ತಿದ್ದುಪಡಿಯೊಂದಿಗೆ ಮತ್ತೆ ಕೃಷಿ ಮಸೂದೆ ಮಂಡನೆ ಮಾಡಿಯೇ ಮಾಡುತ್ತಾರೆ ಎಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.

    PM MODI

    ಉಡುಪಿಯ ಪ್ರಸಾದ್ ನೇತ್ರಾಲಯದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ಕೇಂದ್ರ ಕೃಷಿ ಕಾಯ್ದೆ ವಾಪಾಸ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಯ್ದೆಯನ್ನು ಜನರಿಗೆ ಅರ್ಥ ಮಾಡಿಸುವಲ್ಲಿ ಗೊಂದಲ ನಿರ್ಮಾಣವಾಗಿತ್ತು. ಒಂದು ಒಳ್ಳೆಯ ಮಸೂದೆಯನ್ನು ವಾಪಸ್ ಪಡೆದುಕೊಳ್ಳಲಾಗಿದೆ. ಸಣ್ಣಪುಟ್ಟ ತಿದ್ದುಪಡಿಯೊಂದಿಗೆ ಮತ್ತೆ ಮಂಡನೆ ಮಾಡಿಯೇ ಮಾಡುತ್ತಾರೆ. ಕೂತು ಚರ್ಚಿಸಲು ಹೋರಾಟಗಾರರು ತಯಾರಿರಲಿಲ್ಲ. ನಮ್ಮ ದೇಶದಲ್ಲಿ ವಿಪಕ್ಷಗಳು ವಿರೋಧ ಪಕ್ಷಗಳಾಗಿವೆ. ಕೇಂದ್ರ ಸರ್ಕಾರ ಮತ್ತೆ ರೈತರ ಜೊತೆ ಚರ್ಚಿಸಲಿದೆ. ಸರ್ಕಾರದ ಜೊತೆ ಚರ್ಚಿಸದೆ ವಿರೋಧಿಸುವುದು ಪ್ರಜಾಪ್ರಭುತ್ವವೇ? ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ರೈತ ಹೋರಾಟಕ್ಕೆ ಬಿಜೆಪಿ ಸಂಸದ ಬೆಂಬಲ – ಮೋದಿಗೆ ಸೆಡ್ಡು ಹೊಡೆದ ವರುಣ್ ಗಾಂಧಿ

    ಕರ್ನಾಟಕದಲ್ಲೂ ಸರ್ಕಾರದ ಜೊತೆ ವಿಪಕ್ಷಗಳು ಚರ್ಚಿಸಲು ಸಿದ್ಧವಿರಲಿಲ್ಲ. ವಿರೋಧಿಗಳು ರಾಜಕೀಯ ಲಾಭ ಪಡೆಯುವ ಉದ್ದೇಶ ಹೊಂದಿದ್ದಾರೆ. ರಾಜಕೀಯ ಲಾಭದ ಉದ್ದೇಶದಿಂದ ಕಾಯಿದೆಯನ್ನು ವಾಪಸ್ ಪಡೆದಿದ್ದಲ್ಲ. ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ವಾಪಾಸ್ ಪಡೆಯಲಾಗಿದೆ. ಎಲ್ಲಾ ಕಾಯ್ದೆಗಳನ್ನು ಬೀದಿಯಲ್ಲಿ ನಿಂತು ನಿರ್ಧರಿಸುವುದು ಸಾಧ್ಯವಿಲ್ಲ. ಒಂದು ವರ್ಷಗಳ ಕಾಲ ಕೇಂದ್ರ ಸರ್ಕಾರ ಮನವೊಲಿಸಲು ಪ್ರಯತ್ನಿಸಿದೆ. ಮೋದಿ ಒಂದು ಹೆಜ್ಜೆ ಹಿಂದೆ ಇಟ್ಟಿದ್ದಾರೆ ಎಂದರೆ ಎರಡು ಹೆಜ್ಜೆ ಮುಂದಕ್ಕೆ ಇಡುತ್ತಾರೆ ಎಂದು ಮಾರ್ಮಿಕವಾಗಿ ಹೇಳಿದರು. ಇದನ್ನೂ ಓದಿ: ಉಪಚುನಾವಣೆಯಲ್ಲಿ ಹಿನ್ನಡೆ, ಪಂಚರಾಜ್ಯಗಳ ಚುನಾವಣೆಯ ಮೇಲೆ ಕಣ್ಣು – ಕೃಷಿ ಕಾಯ್ದೆ ವಾಪಸ್‌!

  • ರಾಮಮಂದಿರ ಕಟ್ಟೇ ಕಟ್ತೇವೆ- ಪ್ರಭಾಕರ್ ಭಟ್

    ರಾಮಮಂದಿರ ಕಟ್ಟೇ ಕಟ್ತೇವೆ- ಪ್ರಭಾಕರ್ ಭಟ್

    – ಪ್ರಧಾನಿ ಇಲ್ಲಿಗೆ ಬಂದೇ ಪರಿಹಾರ ಕೊಡ್ಬೇಕಾ?
    – ಹೆಚ್‍ಡಿಕೆ ವಿರುದ್ಧ ಕಿಡಿ

    ಬಾಗಲಕೋಟೆ: ಅಯೋಧ್ಯೆಯಲ್ಲಿ ರಾಮಂದಿರ ಕಟ್ಟಿಯೇ ಕಟ್ಟುತ್ತೇವೆ ಎಂದು ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಗುಳೇದಗುಡ್ಡ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನುಮಾನವೇ ಬೇಡ, ನೂರಕ್ಕೆ ನೂರು ರಾಮ ಮಂದಿರ ಕಟ್ಟಿಯೇ ಕಟ್ಟುತ್ತೇವೆ. ಸುಪ್ರೀಂ ಕೋರ್ಟ್ ರಾಮ ಮಂದಿರದ ಪರವಾಗಿಯೇ ತೀರ್ಪು ಕೊಡಬೇಕು. ಅದನ್ನ ಬಿಟ್ಟು ಸುಪ್ರೀಂ ಕೋರ್ಟಿಗೆ ಬೇರೆ ದಾರಿಯೇ ಇಲ್ಲ. ಅಲ್ಲಿರುವ ಎಲ್ಲ ದಾಖಲೆಗಳನ್ನು ಈಗಾಗಲೇ ಕೊಟ್ಟಿದ್ದಾರೆ. ಈಗಿರುವ ರಾಮನ ಮೂರ್ತಿ ಜಾಗ ರಾಮ ಮಂದಿರನೇ ಎಂದು ಹಿಂದಿನ ಹೈಕೋರ್ಟ್ ಹೇಳಿದೆ. ಈಗ ಅದನ್ನ ಬದಲು ಮಾಡುವುದು ಹೇಗೆ ಎಂದು ಪ್ರಶ್ನಿಸಿದರು.

    ಇದೇ ವೇಳೆ ಬಿಹಾರ ಪ್ರವಾಹಕ್ಕೆ ಪ್ರಧಾನಿ ಟ್ವೀಟ್ ಮಾಡುತ್ತಾರೆ, ಆದರೆ ಕರ್ನಾಟಕಕ್ಕೆ ಬಂದೂ ಇಲ್ಲ, ಟ್ವೀಟೂ ಮಾಡಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ಇಲ್ಲಿಗೆ ಬಂದೇ ಪರಿಹಾರ ಕೊಡಬೇಕಾ ಎಂದು ಪ್ರಶ್ನಿಸಿದರು. ಅಮಿತ್ ಶಾ ಬಂದು ವರದಿ ಮಾಡಿದ್ದಾರೆ, ಸಾಕು. ಪ್ರಧಾನಿ ಮೋದಿ ವಿಶ್ವನಾಯಕ. ಪ್ರತಿ ಹಂತದಲ್ಲೂ ಇಲ್ಲಿಗೆ ಬರಬೇಕು ಅನ್ನೋ ಅಪೇಕ್ಷೆ ಏಕೆ ಎಂದು ಮರು ಪ್ರಶ್ನೆ ಹಾಕಿದ ಭಟ್, ಏನು ಬರಬೇಕಿದೆ. ಅದು ಬಂದಿದೆ ಸಾಕು ಎಂದರು.

    ಪ್ರಧಾನಿ ನನಗೆ ಸ್ಪಂದಿಸಿದ್ದರು ಆದರೆ ಯಡಿಯೂರಪ್ಪ ಅವರಿಗೆ ಪ್ರಧಾನಿ ಯಾಕೆ ಸ್ಪಂದಿಸ್ತಿಲ್ಲ ಎಂಬ ಹೆಚ್ ಡಿಕೆ ಹೇಳಿಕೆಗೆ ತಿರುಗೇಟು ಕೊಟ್ಟ ಪ್ರಭಾಕರ ಭಟ್, ನಾನು ಹೋದಾಗ ಪ್ರಧಾನಿ ಸ್ಪಂದಿಸಿದ್ದರು ಎಂದು ಕುಮಾರಸ್ವಾಮಿ ಅವತ್ತೇ ಯಾಕೆ ಹೇಳಲಿಲ್ಲ?. ಅಂದು ಕೇಂದ್ರ ಸರ್ಕಾರ ನನಗೆ ಬೆಂಬಲ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ನಮ್ಮ ವಿರುದ್ಧವಾಗಿ ನಿಂತುಕೊಂಡಿದೆ ಎಂದು ಬೊಬ್ಬೆ ಹೊಡೆದ ಆ ಮನುಷ್ಯ ಇವತ್ಯಾಕೆ ಈ ರೀತಿ ಮಾತನಾಡುತ್ತಿದ್ದಾರೆ. ಯಡಿಯೂರಪ್ಪ ಅವರಿಗೆ ಸ್ಪಂದಿಸದೇ ಇದ್ದಿದ್ದರೆ 1200 ಕೋಟಿ ರೂ. ಬಿಡುಗಡೆ ಆಗಿದ್ದೇಗೆ ಎಂದು ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಹಾಕಿದರು. ಅಲ್ಲದೆ ಯಡಿಯೂರಪ್ಪ ಹೋದ ಮೇಲೆ ಮಾತಾಡಿದ್ದಾರೆ, ಅದಾದ ಮೇಲೆ 1,200 ಕೋಟಿ ರೂ. ಬಂದಿದೆ ಎಂದರು.  ಇದನ್ನೂ ಓದಿ: ಕೋರ್ಟ್ ತೀರ್ಪಿಗೆ ದಿನಗಣನೆ- ಅಯೋಧ್ಯೆಯಲ್ಲಿ ಹೈ ಅಲರ್ಟ್

    ಪ್ರಧಾನಿ ಮೋದಿ ಒಬ್ಬ ಒಳ್ಳೆಯ ಮನುಷ್ಯ. ನಾವು ಹೋದಾಗ ಭಾರೀ ಸತ್ಕಾರದಿಂದ ಸ್ವಾಗತ ಮಾಡಿದ್ರು, ನಾವು ಕೇಳಿದ್ದನ್ನೆಲ್ಲ ಕೊಟ್ಟಿದ್ದಾರೆ ಎಂದು ಇವರು(ಎಚ್‍ಡಿಕೆ) ಅವತ್ತೇ ಯಾಕೆ ಹೇಳ್ಲಿಲ್ಲ?. ಇವರೆಲ್ಲ ರಾಜಕೀಯ ಮಾಡುತ್ತಿದ್ದಾರೆ. ಮೊನ್ನೆ ಪ್ರವಾಹ ಆಯ್ತಲ್ಲ, ಅಲ್ಲಿಗೆ ಕುಮಾರಸ್ವಾಮಿ, ಸಿದ್ದರಾಮಯ್ಯ, ದೇವೇಗೌಡ ಹೋಗಿದ್ದಾರಾ?. ನಾನು ನೋಡಿದ ಒಳ್ಳೆಯ ಸಿಎಂ, ಪ್ರವಾಹ ಪೀಡಿತ ಸ್ಥಳಕ್ಕೆ ಹೋಗಿದ್ದಾರೆ ಎಂದು ಬಿಎಸ್‍ವೈ ಪರ ದೇವೇಗೌಡ ಒಳ್ಳೆಯ ಮಾತುಗಳನ್ನಾಡಿದ್ದಾರೆ. ಆದರೆ ಇಂತಹ ಒಳ್ಳೆಯ ಮಾತುಗಳನ್ನಾಡುವ ಯೋಗ್ಯತೆನೂ ಇವರಿಗೆ ಇಲ್ಲ ಎಂದು ಕಿಡಿಕಾರಿದರು.

  • ಅನುದಾನಕ್ಕೆ ಕತ್ತರಿ ಹಾಕಿದ್ರೂ ಕುಗ್ಗಲಿಲ್ಲ- ಭತ್ತ ಬೆಳೆದು ಸರ್ಕಾರಕ್ಕೆ ಸವಾಲೆಸೆದ ಶ್ರೀರಾಮ ವಿದ್ಯಾಕೇಂದ್ರದ ಮಕ್ಕಳು

    ಅನುದಾನಕ್ಕೆ ಕತ್ತರಿ ಹಾಕಿದ್ರೂ ಕುಗ್ಗಲಿಲ್ಲ- ಭತ್ತ ಬೆಳೆದು ಸರ್ಕಾರಕ್ಕೆ ಸವಾಲೆಸೆದ ಶ್ರೀರಾಮ ವಿದ್ಯಾಕೇಂದ್ರದ ಮಕ್ಕಳು

    ಮಂಗಳೂರು: ರಾಜಕೀಯ ಜಿದ್ದಿನಿಂದ ಸುದ್ದಿಯಲ್ಲಿದ್ದ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಈಗ ಛಲದಿಂದ ಸುದ್ದಿಯಾಗಿದೆ. ಅನುದಾನ ಕಡಿತಗೊಳಿಸಿ ಮಧ್ಯಾಹ್ನದ ಬಿಸಿಯೂಟ ಕಸಿದುಕೊಂಡಿತ್ತ ಸರ್ಕಾರದ ವಿರುದ್ಧ ಶ್ರೀರಾಮವಿದ್ಯಾಕೇಂದ್ರದ ಮಕ್ಕಳೇ ಭತ್ತ ಬೆಳೆದಿದ್ದಾರೆ.

    ಆಗಸ್ಟ್ ತಿಂಗಳಲ್ಲಿ ಸಿದ್ದು ಸರ್ಕಾರ, ಕಲ್ಲಡ್ಕ ಪ್ರಭಾಕರ್ ಭಟ್ಟರ ಶ್ರೀರಾಮ ವಿದ್ಯಾಕೇಂದ್ರದ ಮಕ್ಕಳ ಬಿಸಿಯೂಟಕ್ಕೆ ಕತ್ತರಿ ಹಾಕಿತ್ತು. ಆದ್ರೆ, ಯಾರ ಮುಂದೆಯೂ ಕೈಯೊಡ್ಡದ ಕಲ್ಲಡ್ಕ ಶಾಲೆಯ ಮಕ್ಕಳು ಇದೀಗ ಸ್ವಾವಲಂಬಿಗಳಾಗಿದ್ದಾರೆ.

    ಸರ್ಕಾರ ಅನುದಾನ ಕಟ್ ಮಾಡಿದ ಕೂಡಲೇ ವಿದ್ಯಾರ್ಥಿಗಳು ಶಾಲೆಗೆ ಸೇರಿದ ಸುಮಾರು ಏಳು ಎಕರೆ ಗದ್ದೆಯಲ್ಲಿ ತಾವೇ ಭತ್ತದ ಪೈರು ನಾಟಿ ಮಾಡಿದ್ದರು. ಇದೀಗ ಭತ್ತ ಬೆಳೆದು ನಿಂತಿದೆ. ವಿದ್ಯಾರ್ಥಿಗಳು ತಾವೇ ಕಟಾವು ಮಾಡಿ ಒಟ್ಟು ಮಾಡಿದ್ದಾರೆ. ಸುಮಾರು 20 ಕ್ವಿಂಟಾಲ್ ನಷ್ಟು ಭತ್ತ ಸಿಕ್ಕಿದೆ.

    ಸರ್ಕಾರ ಅನ್ನ ಕಸಿದರೂ ನಾವೇ ನಮಗೆ ಬೇಕಾದ ಅನ್ನದ ದಾರಿಯನ್ನು ಹುಡುಕಿದ್ದೇವೆ ಅನ್ನುವ ಖುಷಿ ವಿದ್ಯಾರ್ಥಿಗಳಲ್ಲಿದೆ. ಇನ್ನು ಭತ್ತದ ಹುಲ್ಲನ್ನ ಅಲ್ಲಿನ ದನಕರುಗಳಿಗೆ ಮೇವನ್ನಾಗಿ ಬಳಸಲಾಗುತ್ತಿದೆ.

    ಮಕ್ಕಳ ಈ ಕೃಷಿಗೆ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಕಲ್ಲಡ್ಕ ಡಾ.ಪ್ರಭಾಕರ ಭಟ್ಟರು ಸಾಥ್ ನೀಡಿದ್ರು. ಇದೀಗ ಮಕ್ಕಳ ಕೃಷಿಗೆ ಫಲ ಸಿಕ್ಕಿರೋ ಖುಷಿ ಅವರಲ್ಲಿದೆ. ಭತ್ತ ಕೃಷಿಯನ್ನು ಮುಂದುವರೆಸಿಕೊಂಡು ಹೋಗಲು ಶಾಲೆ ಆಡಳಿತ ಮಂಡಳಿ ನಿರ್ಧರಿಸಿದೆ. ಒಟ್ಟಿನಲ್ಲಿ ಮಕ್ಕಳ ಸ್ವಾವಲಂಬನೆ ಇಡೀ ದೇಶಕ್ಕೆ ಮಾದರಿ ಅಂದ್ರೆ ತಪ್ಪಾಗಲಿಕ್ಕಿಲ್ಲ.

    https://www.youtube.com/watch?v=88Za5hVEpZM

  • ಕಲ್ಲಡ್ಕ ಶಾಲೆಗೆ ಭರಪೂರ ದೇಣಿಗೆ ನೀಡಿದ ಮಾಜಿ ಸಚಿವ

    ಕಲ್ಲಡ್ಕ ಶಾಲೆಗೆ ಭರಪೂರ ದೇಣಿಗೆ ನೀಡಿದ ಮಾಜಿ ಸಚಿವ

    ಮಂಗಳೂರು: ಕಲ್ಲಡ್ಕ ಶಾಲೆಗೆ ಅನ್ನದಾನದ ಅನುದಾನ ಕಡಿತದ ಹಿನ್ನೆಲೆಯಲ್ಲಿ ಶಾಲೆಯ ಹಿತೈಷಿಗಳ ಭಿಕ್ಷಾಂದೇಹಿ ಅಭಿಯಾನಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಸಾಥ್ ನೀಡಿದ್ದಾರೆ.

    ಹೌದು. ಕಲ್ಲಡ್ಕದ ಶಾಲೆಗೆ ಭೇಟಿ ನೀಡಿದ ಜನಾರ್ದನ ರೆಡ್ಡಿ 25 ಲಕ್ಷ ರೂಪಾಯಿ ಚೆಕ್ ಅನ್ನು ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಹಸ್ತಾಂತರಿಸಿದ್ದಾರೆ.

    ಇದನ್ನೂ ಓದಿ: ಕಲ್ಲಡ್ಕ ಪ್ರಭಾಕರ್ ಶಾಲೆಗಾಗಿ ಭಿಕ್ಷಾಂದೇಹಿ ಆಂದೋಲನ- 2 ದಿನದಲ್ಲಿ ಹರಿದುಬಂದ ಹಣವೆಷ್ಟು ಗೊತ್ತಾ?

    ಸಾಮಾಜಿಕ ಜಾಲತಾಣಗಳಲ್ಲಿ ಆರಂಭವಾದ ಈ ಆನ್ ಲೈನ್ ಅಭಿಯಾನಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ಕಲ್ಲಡ್ಕದ ಎರಡು ಶಾಲೆಗಳಿಗೆ ಬರುತ್ತಿದ್ದ ಅನ್ನದಾನದ ಅನುದಾನ ಕಡಿತಗೊಳಿಸಿ ಸರಕಾರ ಆದೇಶಿಸುತ್ತಿದ್ದಂತೆ ಶಾಲೆಯ ಸಂಚಾಲಕ, ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಭಿಕ್ಷೆ ಎತ್ತಿಯಾದರೂ ಶಾಲೆಯನ್ನು ನಡಿಸ್ತೀನಿ ಅನ್ನೋ ಮಾತು ಹೇಳಿದ್ದರು.

    ಈ ಹಿನ್ನೆಲೆಯಲ್ಲಿ ಮಹೇಶ್ ಮತ್ತು ಅವರ ತಂಡ ಸಾಮಾಜಿಕ ಜಾಲತಾಣದ ಮೂಲಕ `ಭಿಕ್ಷಾಂದೇಹಿ’ ಆನ್ ಲೈನ್ ಅಭಿಯಾನ ಆರಂಭಿಸಿತ್ತು. ಇದೀಗ ಅಭಿಯಾನಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಕೂಡಾ ದೇಣಿಗೆ ನೀಡುವ ಮೂಲಕ ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ. ಕಲ್ಲಡ್ಕ ಶಾಲೆಗೆ ಆಗಮಿಸಿದ ಜನಾರ್ದನ ರೆಡ್ಡಿ ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮೂಲಕ 25 ಲಕ್ಷ ರೂಪಾಯಿ ಚೆಕ್ ನೀಡಿದ್ದಾರೆ. ಈಗಾಗಲೇ ಹಲವು ರಾಜಕೀಯ, ಸಾಮಾಜಿಕ ಮುಖಂಡರು ದೇಣಿಗೆ ನೀಡಿ ಶಾಲೆಗೆ ನೈತಿಕ ಬೆಂಬಲ ನೀಡಿದ್ದಾರೆ.

    ಇದನ್ನೂ ಓದಿ: ಕಲ್ಲಡ್ಕ ಪ್ರಭಾಕರ್ ಶಾಲೆಗೆ ಅನುದಾನ ಕಟ್- ತಟ್ಟೆ ಹಿಡಿದು ಸರ್ಕಾರದ ವಿರುದ್ಧ ಮಕ್ಕಳ ಧಿಕ್ಕಾರ

    ಇದನ್ನೂ ಓದಿ: ಸರ್ಕಾರದಿಂದ ಕಲ್ಲಡ್ಕ ಪ್ರಭಾಕರ್ ಭಟ್ ಶಾಲೆಗೆ ಬರುತ್ತಿದ್ದ ಅನುದಾನ ಕಟ್: ರಮಾನಾಥ ರೈ ಹೀಗಂದ್ರು!

    ಇದನ್ನೂ ಓದಿ: ಕಲ್ಲಡ್ಕ ಪ್ರಭಾಕರ್ ಶಾಲೆಗೆ ಬರುತ್ತಿದ್ದ ಅನುದಾನ ಕಡಿತಗೊಳಿಸಿದ ಸರ್ಕಾರ

  • ಮತೀಯವಾದ ಸೃಷ್ಟಿಸುವ ಕಾರ್ಖಾನೆಗಳಾಗಿವೆ ಶಾಲೆಗಳು: ಕಲ್ಲಡ್ಕ ಭಟ್ ವಿರುದ್ಧ ರೈ ಹೊಸ ಬಾಂಬ್!

    ಮತೀಯವಾದ ಸೃಷ್ಟಿಸುವ ಕಾರ್ಖಾನೆಗಳಾಗಿವೆ ಶಾಲೆಗಳು: ಕಲ್ಲಡ್ಕ ಭಟ್ ವಿರುದ್ಧ ರೈ ಹೊಸ ಬಾಂಬ್!

    ಮಂಗಳೂರು: ಕೊಲ್ಲೂರು ದೇಗುಲದಿಂದ ಪಡೆದ ಹಣ ಅವ್ಯವಹಾರವಾಗಿದೆ. ದೇಣಿಗೆ ಹಣದಲ್ಲಿ ಪ್ರಭಾಕರ್ ಭಟ್ಟರು ರಿಯಲ್ ಎಸ್ಟೇಟ್ ಮಾಡುತ್ತಾರೆ ಅಂತ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ.

    ಕಲ್ಲಡ್ಕ ವಿದ್ಯಾಕೇಂದ್ರಗಳ ಅನುದಾನ ಕಡಿತ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಕಲ್ಲಡ್ಕದ ಎರಡೂ ಶಾಲೆಗಳು ಆರ್ಥಿಕ ಸದೃಢವಾಗಿವೆ. ದೇಗುಲದ ಹಣವನ್ನು ಖಾಸಗಿ ಶಾಲೆಗೆ ನೀಡಲು ಅವಕಾಶ ಇಲ್ಲ. ಉಭಯ ಜಿಲ್ಲೆಗಳಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಹಲವಾರು ಶಾಲೆಗಳಿವೆ ಅಂತ ಹೇಳಿದ್ದಾರೆ.

    ಹಾಲಿವುಡ್, ಬಾಲಿವುಡ್ ನಟರು, ಉದ್ಯಮಿಗಳಿಂದ ದೇಗುಲಕ್ಕೆ ದೇಣಿಗೆ ಬರುತ್ತೆ. ಈ ಹಣವನ್ನು ಪ್ರಭಾಕರ್ ಭಟ್ ನಗದು ರೂಪದಲ್ಲಿ ಪಡೆದು ದುರುಪಯೋಗ ಮಾಡುತ್ತಿದ್ದಾರೆ. ಹೀಗಾಗಿ ಭಟ್ಟರ ಅವ್ಯವಹಾರದ ಬಗ್ಗೆ ಕೂಡಲೇ ತನಿಖೆ ಆಗಬೇಕು ಅಂತ ಅವರು ಒತ್ತಾಯಿಸಿದ್ದಾರೆ.

    ಇದನ್ನೂ ಓದಿ: ಕಲ್ಲಡ್ಕ ಪ್ರಭಾಕರ್ ಶಾಲೆಗೆ ಬರುತ್ತಿದ್ದ ಅನುದಾನ ಕಡಿತಗೊಳಿಸಿದ ಸರ್ಕಾರ

    ಕಲ್ಲಡ್ಕ ಶಾಲೆಯ ನೂರು ಮೀಟರ್ ದೂರದಲ್ಲಿ ಸರ್ಕಾರಿ ಶಾಲೆ ಇದೆ. ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲಿ. ಈ ಎರಡೂ ಶಾಲೆಗಳು ಮತೀಯವಾದ ಸೃಷ್ಟಿಸುವ ಕಾರ್ಖಾನೆಗಳಾಗಿವೆ. ಮಕ್ಕಳ ಕೈಯಲ್ಲಿ ತಟ್ಟೆ ಕೊಟ್ಟು ರಾಜಕೀಯ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಣ ಸಂಗ್ರಹಕ್ಕೆ ಅಭಿಯಾನ ಮಾಡುತ್ತಿದ್ದು, ಇದೊಂದು ದುಡ್ಡು ಮಾಡುವ ದಂಧೆಯಾಗಿದೆ ಅಂತ ಅವರು ತಿರುಗೇಟು ನೀಡಿದ್ದಾರೆ.

    ಇದನ್ನೂ ಓದಿ: ಕಲ್ಲಡ್ಕ ಪ್ರಭಾಕರ್ ಶಾಲೆಗೆ ಅನುದಾನ ಕಟ್- ತಟ್ಟೆ ಹಿಡಿದು ಸರ್ಕಾರದ ವಿರುದ್ಧ ಮಕ್ಕಳ ಧಿಕ್ಕಾರ

    ಇದನ್ನೂ ಓದಿ: ಕಲ್ಲಡ್ಕ ಪ್ರಭಾಕರ ಭಟ್ಟರ ಹಿಂದೂ ಧರ್ಮಕ್ಕೆ ಧಿಕ್ಕಾರ, ಮೋದಿ ದೊಡ್ಡ ಜಾದೂಗಾರ: ಅಮೀನ್ ಮಟ್ಟು

    ಇದನ್ನೂ ಓದಿ: ಸರ್ಕಾರದಿಂದ ಕಲ್ಲಡ್ಕ ಪ್ರಭಾಕರ್ ಭಟ್ ಶಾಲೆಗೆ ಬರುತ್ತಿದ್ದ ಅನುದಾನ ಕಟ್: ರಮಾನಾಥ ರೈ ಹೀಗಂದ್ರು!

  • ಸರ್ಕಾರದಿಂದ ಕಲ್ಲಡ್ಕ ಪ್ರಭಾಕರ್ ಭಟ್ ಶಾಲೆಗೆ ಬರುತ್ತಿದ್ದ ಅನುದಾನ ಕಟ್: ರಮಾನಾಥ ರೈ ಹೀಗಂದ್ರು!

    ಸರ್ಕಾರದಿಂದ ಕಲ್ಲಡ್ಕ ಪ್ರಭಾಕರ್ ಭಟ್ ಶಾಲೆಗೆ ಬರುತ್ತಿದ್ದ ಅನುದಾನ ಕಟ್: ರಮಾನಾಥ ರೈ ಹೀಗಂದ್ರು!

    ಮಂಗಳೂರು: ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಖಾಸಗಿ ಶಾಲೆಗೆ ಕೊಲ್ಲೂರು ದೇವಸ್ಥಾನದಿಂದ ಬರುತ್ತಿದ್ದ ಅನ್ನದಾನದ ಅನುದಾನ ಕಡಿತಗೊಳಿಸಿರುವುದು ಇದೀಗ ಭಾರೀ ವಿವಾದಕ್ಕೀಡಾಗಿದೆ.

    ಸಚಿವ ರಮಾನಾಥ ರೈ ರಾಜಕೀಯ ದ್ವೇಷದಿಂದ ಈ ರೀತಿ ಮಾಡಿದ್ದಾರೆ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಆರೋಪಿಸಿದ್ದಾರೆ. ಆದರೆ ಕೇವಲ ಎರಡು ಖಾಸಗಿ ಶಾಲೆಗಳಿಗೆ ಅನುದಾನ ಕೊಡುವುದರ ಮೂಲಕ ಅಂದಿನ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರಕಾರ ಅಧಿಕಾರ ದುರುಪಯೋಗಪಡಿಸಿಕೊಂಡಿದೆ. ಈಗ ರಾಜ್ಯ ಸರಕಾರ ಸರಿಯಾದ ನಿರ್ಧಾರ ಕೈಗೊಂಡಿದೆ ಎಂದು ಸಚಿವ ರಮಾನಾಥ ರೈ ಪ್ರತಿಕ್ರಿಯಿಸಿದ್ದಾರೆ.

    ಕೊಲ್ಲೂರು ದೇವಸ್ಥಾನದಿಂದ ಎರಡು ಖಾಸಗಿ ಶಾಲೆಗಳಿಗೆ ಅನ್ನದಾನ ಬರುತ್ತಿದೆ. ಉಭಯ ಜಿಲ್ಲೆಗಳಲ್ಲಿ ಸಾಕಷ್ಟು ಶಾಲೆಗಳಿವೆ. ಈ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಹೀಗಾಗಿ ವಾಪಾಸ್ ಪಡೆದಿದೆ ಅಂತ ಹೇಳಿದ್ರು.

    ಕಳೆದ 4 ವರ್ಷಗಳ ಬಳಿಕ ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಬೆಳವಣಿಗೆಗಳಿಂದಾಗಿ ರೈ ಈ ಕೆಲಸ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಸುಮಾರು 5 ತಿಂಗಳಿಕ್ಕಿಂತಲೂ ಹಿಂದೆ ಈ ಬಗ್ಗೆ ಮುಖ್ಯಮಂತ್ರಿ ಪತ್ರ ಬರೆದಿದ್ದರು. ಅದಕ್ಕಿಂತಲೂ ಹಿಂದೆ ಕೂಡ ಎರಡು ಖಾಸಗಿ ಶಾಲೆಗಳಿಗೆ ಅನ್ನದಾನ ನೀಡಲಾಗುತ್ತಿದೆ ಎಂಬ ವಿಚಾರವನ್ನು ಗಮನಕ್ಕೆ ತಂದಿದ್ದರು. ಹೀಗಾಗಿ ಸರ್ಕಾರ ಇದೀಗ ವಾಪಾಸ್ ಪಡೆದುಕೊಂಡಿದೆ. ಹಿಂದಿನ ಸರ್ಕಾರ ಕೇವಲ ಎರಡು ಶಾಲೆಗಳಿಗೆ ಅನ್ನದಾನ ಕೊಟ್ಟಿರೋದು ಸರಿಯಲ್ಲ. ಅದೇ ಅಧಿಕಾರ ದುರುಪಯೋಗ. ಅದಕ್ಕಿಂತ ಕಷ್ಟದಲ್ಲರುವಂತಹ ಶಾಲೆಗಳು ಸಾಕಷ್ಟಿವೆ. ಅವರಿಗೂ ಕೂಡ ಕೊಡಬಹುದಿತ್ತು. ಯಾಕೆ ಸಂಘ ಪರಿವಾರದ ಶಾಲೆಗೆ ಮಾತ್ರ ಕೊಡಬೇಕಿತ್ತು ಅಂತ ಪ್ರಶ್ನಿಸಿದ್ದಾರೆ.

    ಈ ಹಿನ್ನೆಲೆಯಿಂದ ಸರ್ಕಾರ ಗಮನಕ್ಕೆ ಬಂದ ಕೂಡಲೇ ವಾಪಾಸ್ ಪಡೆದಿದೆ. ಇದು ನಿನ್ನೆ ಮೊನೆಯ ಬೆಳವಣಿಗೆಯಿಂದಾಗಿ ಈ ನಿಧಾರ ತೆಗೆದುಕೊಂಡಿದ್ದಲ್ಲ. 5, 6 ತಿಂಗಳ ಹಿಂದೆಯೇ ಮುಜರಾಯಿ ಇಲಾಖೆಗೆ ಸಿಎಂ ಪತ್ರ ಬರೆದಿದ್ದರು. ಖಾಸಗಿ ಶಾಲಾ ಮಕ್ಕಳ ಅನ್ನದಾನಕ್ಕೆ ಸರ್ಕಾರ ದುಡ್ಡು ಕೊಡುವುದು ಇಲ್ಲ. ಬೇಕಿದ್ರೆ ಮಕ್ಕಳಿಗೆ ಅವರೇ ಅನ್ನ ಹಾಕಿಸಬೇಕು. ಅದು ಅವರ ಜವಾಬ್ದಾರಿ. ಕೆಲವು ಮಠಾಧೀಶರು ಶಾಲಾ ಮಕ್ಕಳಿಗೆ ಅನ್ನದಾನ ಮಾಡ್ತಾರೆ. ಆದ್ರೆ ಅವರು ಸರ್ಕಾರ ದುಡ್ಡು ಉಪಯೋಗಿಸಲ್ಲ ಅಂತ ಹೇಳಿ ಸರ್ಕಾರದ ನಡೆಯನ್ನು ರಮಾನಾಥ ರೈ ಸಮರ್ಥಿಸಿಕೊಂಡರು.

  • ಎಸ್‍ಡಿಪಿಐ ಆಶ್ರಫ್ ಕೊಲೆ ಪ್ರಕರಣ- ಪ್ರಮುಖ ಆರೋಪಿ ಎಸ್ಕೇಪ್

    ಎಸ್‍ಡಿಪಿಐ ಆಶ್ರಫ್ ಕೊಲೆ ಪ್ರಕರಣ- ಪ್ರಮುಖ ಆರೋಪಿ ಎಸ್ಕೇಪ್

    – ಐವರು ಆರೋಪಿಗಳ ಬಂಧನ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದ ಕೋಮು ಗಲಭೆ ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿರುವಾಗಲೇ ಎಸ್‍ಡಿಪಿಐ ಮುಖಂಡ ಅಶ್ರಫ್ ಕಲಾಯಿ ಹತ್ಯೆ ನಡೆದಿತ್ತು. ಜೂನ್ 21ರಂದು ಮಧ್ಯಾಹ್ನ ನಡೆದ ಹತ್ಯೆ ಭಾರೀ ಸುದ್ದಿಯಾಗಿತ್ತು.

    ಮಂಗಳೂರು ಪೊಲೀಸರು ಜಂಟಿಕಾರ್ಯಾಚರಣೆ ನಡೆಸಿ ಎರಡೇ ದಿನದಲ್ಲಿ ಐವರು ಆರೋಪಿಗಳನ್ನ ಬಂಧಿಸಿದ್ದಾರೆ. ಬಂಟ್ವಾಳದ ಆಸುಪಾಸಿನ ನಿವಾಸಿಗಳಾದ ಪವನ್ ಕುಮಾರ್, ಅಭಿನ್ ರೈ, ಶಿವಪ್ರಸಾದ್, ಸಂತೋಷ್ ಮತ್ತು ರಂಜಿತ್ ಬಂಧಿತ ಆರೋಪಿಗಳು.

    ಆರೋಪಿಗಳ ಪೈಕಿ ನಾಲ್ವರ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಈಗಾಗ್ಲೆ ಹಲವಾರು ಕೇಸುಗಳಿವೆ. ಅಲ್ಲದೆ, ಈ ಹಿಂದೆ ಕೋಮು ಗಲಭೆಯಲ್ಲಿ ಗುರುತಿಸಿಕೊಂಡಿದ್ದರು. ಆದರೆ ಅಶ್ರಫ್ ಹತ್ಯೆಯನ್ನು ಯಾವ ಕಾರಣಕ್ಕೆ ನಡೆಸಿದ್ದಾರೆ ಅನ್ನೋದ್ರ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಕೊಲೆಯ ಕಾರಣ, ಹಿಂದಿರುವ ಶಕ್ತಿಗಳೂ ಬೆಳಕಿಗೆ ಬರಲಿದೆ. ಪದೇ ಪದೇ ಅಪರಾಧ ಚಟುವಟಿಕೆಯಲ್ಲಿ ಪಾಲ್ಗೊಂಡವರ ವಿರುದ್ಧ ಗೂಂಡಾ ಕಾಯಿದೆ ಹಾಕಲಾಗುವುದು ಅಂತಾ ಐಜಿಪಿ ಹೇಳಿದ್ದಾರೆ.

    ಕೊಲೆಯ ಪ್ರಮುಖ ಆರೋಪಿ ಭರತ್ ಕುಮ್ಡೋಲು ತಲೆಮರೆಸಿಕೊಂಡಿದ್ದಾನೆ. ಈತ ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಶಿಷ್ಯ ಅಂತ ಹೇಳಲಾಗ್ತಿದೆ. ಯಾಕಂದ್ರೆ, ಕಳೆದ ತಿಂಗಳ 28 ರಂದು ಪ್ರಭಾಕರ್ ಭಟ್ಟರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ಭರತ್ ಕಾಣಿಸಿಕೊಂಡಿದ್ದನು ಎನ್ನಲಾಗಿದೆ.

    ಹೀಗಾಗಿ, ಬಂಟ್ವಾಳದ ಬೆಂಜನಪದವು ಬಳಿ ನಡೆದ ಆಶ್ರಫ್ ಮರ್ಡರ್ ಕೇಸ್‍ಗೂ ಭಟ್ಟರಿಗೂ ನಂಟಿದ್ಯಾ ಅನ್ನೋ ಅನುಮಾನ ಎದ್ದಿದೆ. ಆದರೆ, ಭರತ್ ಕುಮ್ಡೇಲು ಹಾಗೂ ದಿವ್ಯರಾಜ್ ಶೆಟ್ಟಿ, ಕೊಲೆಗೆ ಸಂಚು ರೂಪಿಸಿದವರಾಗಿದ್ದು ಇನ್ನೆರಡು ದಿನಗಳಲ್ಲಿ ಬಂಧಿಸುವುದಾಗಿ ಪಶ್ಚಿಮ ವಲಯ ಐಜಿಪಿ ಹರಿಶೇಖರನ್ ಹೇಳಿದ್ದಾರೆ.

  • ಶೋಭಾ ಕರಂದ್ಲಾಜೆಯವರು ಪ್ರಭಾಕರ್ ಭಟ್ ಭಾಷಣ ಕೇಳಲಿ: ಸಂಸದೆಗೆ ಖಾದರ್ ತಿರುಗೇಟು

    ಶೋಭಾ ಕರಂದ್ಲಾಜೆಯವರು ಪ್ರಭಾಕರ್ ಭಟ್ ಭಾಷಣ ಕೇಳಲಿ: ಸಂಸದೆಗೆ ಖಾದರ್ ತಿರುಗೇಟು

    ಕೋಲಾರ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಮ್ಮಿಂದ ಯಾವುದೇ ಭಯಭೀತಿಯ ವಾತಾವರಣ ನಿರ್ಮಾಣವಾಗಿಲ್ಲ. ಪ್ರಭಾಕರ್ ಭಟ್ ಅವ್ರ ಭಾಷಣಗಳು ಪ್ರಚೋದನಾಕಾರಿಯಾಗಿದೆ. ಹೀಗಾಗಿ ಸಂಸದೆ ಶೋಭಾ ಕರಂದ್ಲಾಜೆ ಅವರು ಒಮ್ಮೆ ಅವರ ಭಾಷಣ ಕೇಳಲಿ ಎಂದು ಆಹಾರ ಸಚಿವ ಯು ಟಿ ಖಾದರ್ ಸಂಸದೆ ಹೇಳಿಕೆಗೆ ತಿರುಗೇಟು ನೀಡಿದ್ರು.

    ರಂಜಾನ್ ಪ್ರಯುಕ್ತ ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಕಾಂಗ್ರೆಸ್ ಮುಖಂಡ ಕೆ ವೈ ನಂಜೇಗೌಡ ಹಮ್ಮಿಕೊಂಡಿದ್ದ ಇಫ್ತಿಯಾರ್ ಕೂಟದಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ರಮಾನಾಥ ರೈ ರಾಜೀನಾಮೆ ನೀಡುವ ಪ್ರಸ್ತಾಪವಿಲ್ಲ. ಬಿಜೆಪಿ ಜನರ ಭಾವನೆಗಳೊಂದಿಗೆ ಚೆಲ್ಲಾಟ ಆಡುತ್ತಿದೆ ಎಂದು ಅವರು ಬಿಜೆಪಿ ಮುಖಂಡರ ಆರೋಪವನ್ನ ತಳ್ಳಿ ಹಾಕಿದ್ರು.

    ಖಾಸಗಿ ಆಸ್ಪತ್ರೆಗಳ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಖಾಸಗಿ ಆಸ್ಪತ್ರೆಗಳು ಮಾನವೀಯತೆಯಿಂದ ಚಿಂತಿಸಬೇಕು. ಸರ್ಕಾರದ ವಿಧೇಯಕಕ್ಕೆ ಎಲ್ಲರೂ ಬೆಂಬಲಿಸಬೇಕು ಎಂದು ಹೇಳಿದ ಅವರು, ಸಚಿವ ರಮೇಶ್ ಕುಮಾರ್ ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ಪರೋಕ್ಷ ಬೆಂಬಲ ನೀಡಿದ್ರು.

    ವಿಧೇಯಕಕ್ಕೆ ಬಿಜೆಪಿ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ, ಬಡವರ ಹಿತ ದೃಷ್ಟಿಯಿಂದ ಸರ್ಕಾರ ವಿಧೇಯಕ ಮಂಡನೆ ಮಾಡಿದೆ ಎಂದು ಸರ್ಕಾರದ ನಿರ್ಧಾರವನ್ನ ಸಮರ್ಥಿಸಿಕೊಂಡ್ರು.