Tag: ಪ್ರಭಾ ಬೆಳವಂಗಲ

  • ಕತ್ತೆಗೇನು ಗೊತ್ತು ಕಸ್ತೂರಿ ಪರಿಮಳ: ಸುಧಾಮೂರ್ತಿ ಆಯ್ಕೆಗೆ ಅಪಸ್ವರ ಎತ್ತಿದ್ದ ಚಿಂತಕಿಗೆ ಸುರೇಶ್ ಕುಮಾರ್ ಟಾಂಗ್

    ಕತ್ತೆಗೇನು ಗೊತ್ತು ಕಸ್ತೂರಿ ಪರಿಮಳ: ಸುಧಾಮೂರ್ತಿ ಆಯ್ಕೆಗೆ ಅಪಸ್ವರ ಎತ್ತಿದ್ದ ಚಿಂತಕಿಗೆ ಸುರೇಶ್ ಕುಮಾರ್ ಟಾಂಗ್

    ಬೆಂಗಳೂರು: ಇನ್ಫೋಸಿಸ್ ಫೌಂಡೇಶನ್ ಸಂಸ್ಥಾಪಕ ನಾರಾಯಣ ಮೂರ್ತಿ ಪತ್ನಿ ಸುಧಾಮೂರ್ತಿಯವರ ದಸರಾ ಉದ್ಘಾಟನೆಗೆ ಅಪಸ್ವರ ಎತ್ತಿದ್ದ ಪ್ರಗತಿಪರ ಚಿಂತಕಿ ಪ್ರಭಾ ಬೆಳವಂಗಲ ಹೇಳಿಕೆಗೆ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದಾರೆ.

    ಪ್ರಗತಿಪರ ಚಿಂತಕಿ ಪ್ರಭಾ ಬೆಳವಂಗಲ ಮಾಡಿದ್ದ ಫೇಸ್ಬುಕ್ ಪೋಸ್ಟ್ ಗೆ ವ್ಯಂಗ್ಯವಾಗಿ ತಿರುಗೇಟು ನೀಡಿದ ಸುರೇಶ್ ಕುಮಾರ್ ತಮ್ಮ ಟ್ವಿಟ್ವರ್ ಖಾತೆಯಲ್ಲಿ, ಎಲ್ಲರೂ ಒಪ್ಪುವ ಸುಧಾಮೂರ್ತಿಯವರು ದಸರಾ ಉತ್ಸವವನ್ನು ಉದ್ಘಾಟಿಸುತ್ತಿರುವುದನ್ನು, ಯಾರನ್ನೂ ಒಪ್ಪದ “ಬುದ್ದಿವಂತೆ”ಯೊಬ್ಬರು ತಾಳಲಾರದ ಸಂಕಟದಿಂದ ಟೀಕಿಸಿದ್ದಾರೆ. ಕತ್ತೆಗೇನು ಗೊತ್ತು ಕಸ್ತೂರಿ ಪರಿಮಳ ಎಂದು ಬರೆಯುವ ಮೂಲಕ ಟಾಂಗ್ ಕೊಟ್ಟಿದ್ದಾರೆ.

    ರಾಜ್ಯ ಸರ್ಕಾರ ಈ ಬಾರಿ ದಸರಾ ಉದ್ಘಾಟನೆಗೆ ಸುಧಾಮೂರ್ತಿಯವರನ್ನು ಆಯ್ಕೆಮಾಡಿದ್ದಕ್ಕೆ ಪ್ರಭಾ ಬೆಳವಂಗಲರವರು ಅಪಸ್ವರ ತೋರಿ ತಮ್ಮ ಫೇಸ್ಬುಕ್ ಖಾತೆಯಲ್ಲಿ “ದುಡ್ಡು ಮಾಡಿ ನಾಜೂಕಿನ ಮಾತು ಕಲಿತುಬಿಟ್ಟರೆ ದಸರಾ ಉದ್ಘಾಟನೆ ಮಾಡಬಹುದೆಂದು” ಪೋಸ್ಟ್ ಮಾಡಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಂಸದನಾಗಿ ನನ್ನ ದೂರಿಗೆ ಸ್ಪಂದಿಸದ ನೀವು ಸಾಮಾನ್ಯ ಜನರಿಗೆ ಹೇಗೆ ಸ್ಪಂದಿಸ್ತೀರಿ: ಪ್ರವೀಣ್ ಸೂದ್‍ಗೆ ಪ್ರತಾಪ್ ಸಿಂಹ ಪ್ರಶ್ನೆ

    ಸಂಸದನಾಗಿ ನನ್ನ ದೂರಿಗೆ ಸ್ಪಂದಿಸದ ನೀವು ಸಾಮಾನ್ಯ ಜನರಿಗೆ ಹೇಗೆ ಸ್ಪಂದಿಸ್ತೀರಿ: ಪ್ರವೀಣ್ ಸೂದ್‍ಗೆ ಪ್ರತಾಪ್ ಸಿಂಹ ಪ್ರಶ್ನೆ

    ಮೈಸೂರು: ದೂರು ನೀಡಿದ್ದರೂ ಕ್ರಮ ಕೈಗೊಳ್ಳದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರವೀಣ್‍ಸೂದ್ ಅವರ ನಡೆಯನ್ನು ಟೀಕಿಸಿ ಫೇಸ್‍ಬುಕ್‍ನಲ್ಲಿ ವಿಡಿಯೋ ಒಂದನ್ನು ಸಂಸದ ಪ್ರತಾಪ್ ಸಿಂಹ ಅಪ್ಲೋಡ್ ಮಾಡಿದ್ದಾರೆ.

    ಸಾಮಾಜಿಕ ಕಾರ್ಯಕರ್ತೆ ಪ್ರಭಾ ಬೆಳವಂಗಲ ಫೇಸ್‍ಬುಕ್‍ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರ ಅವಹೇಳನಕಾರಿ ಪೋಸ್ಟ್ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಾವು ದೂರು ನೀಡಿದ್ದರೂ ಪೊಲೀಸರು ಇನ್ನು ಯಾಕೆ ಕ್ರಮವನ್ನು ಕೈಗೊಂಡಿಲ್ಲ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

    ದೂರು ನೀಡುವ ವೇಳೆ ಆ ವ್ಯಕ್ತಿ ಇದ್ದರೋ ಇಲ್ಲವೋ ಗೊತ್ತಿಲ್ಲ. ಯುಆರ್‍ಎಲ್ ಚೆಕ್ ಮಾಡಬೇಕು ಎಂದು ಪ್ರವೀಣ್ ಸೂದ್ ಹೇಳಿದ್ದಕ್ಕೆ ನಾವು ಪ್ರಭಾ ಅವರಿಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ನೀಡಿದ್ವಿ. ಆದರೆ ದೂರಿನ ಸ್ಟೇಟಸ್ ಎಲ್ಲಿಯವರೆಗೆ ಬಂತು ಎನ್ನುವುದನ್ನು ಅವರು ತಿಳಿಸಿಲ್ಲ. ಈ ಬಗ್ಗೆ ಸೋಮವಾರ ಕೇಳಿದ್ದಕ್ಕೆ ನಾನೇ ನಿಮಗೆ ಫೋನ್ ಮಾಡ್ತೀನಿ ಅಂತ ಪ್ರವೀಣ್ ಸೂದ್ ಹೇಳಿದ್ರು. ಆದರೆ ದೂರು ದಾಖಲಾದ ಬಳಿಕ 10 ದಿನವಾದರೂ ಇದೂವರೆಗೂ ಕೇಸ್ ಸ್ಟೇಟಸ್ ರಿಪೋರ್ಟ್ ಗೊತ್ತಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಸಿಎಂ ಸಿದ್ದರಾಮಯ್ಯ ವಿರುದ್ಧ ವಿಡಿಯೋವನ್ನು ಅಪ್ಲೋಡ್ ಮಾಡಿದ್ದಕ್ಕೆ ತುಮಕೂರಿನಲ್ಲಿ ನಾಗರಾಜ್‍ರನ್ನು ಬಂಧಿಸುತ್ತೀರಿ. ಅದೇ ವೇಗವನ್ನು ಈ ಪ್ರಕರಣದಲ್ಲಿ ನೀವು ಯಾಕೆ ತೋರಿಸಿಲ್ಲ? ದೂರು ನೀಡಿದ ವ್ಯಕ್ತಿಗೆ ಆ ಪ್ರಕರಣ ಬಗ್ಗೆ ಸಂಪೂರ್ಣವಾಗಿ ತಿಳಿಯುವ ಹಕ್ಕು ಇದೆ. ಅಷ್ಟೇ ಅಲ್ಲದೇ ದೂರು ನೀಡಿದ ವ್ಯಕ್ತಿಗೆ ಆ ಪ್ರಕರಣ ಎಲ್ಲಿಗೆ ಬಂತು ಎಂದು ತಿಳಿಸುವುದು ಪೊಲೀಸರ ಕರ್ತವ್ಯ. ಆದರೆ ಈ ಪ್ರಕರಣದಲ್ಲಿ ಇದ್ಯಾವುದು ನಡೆಯುತ್ತಿಲ್ಲ ಯಾಕೆ ಎಂದು ಅವರು ಪ್ರವೀಣ್ ಸೂದ್ ಅವರಲ್ಲಿ ಪ್ರಶ್ನೆ ಕೇಳಿದ್ದಾರೆ.

    ಒಂದು ವೇಳೆ ಈ ಪ್ರಕರಣದ ಬಗ್ಗೆ ನೀವು ತಿಳಿಸದೇ ಇದ್ದರೆ ನಾವು ಹೈಕೋರ್ಟ್ ಮೊರೆ ಹೋಗಿ ಉತ್ತರವನ್ನು ಪಡೆದುಕೊಳ್ಳಬೇಕಾಗುತ್ತದೆ. ಒಬ್ಬ ಸಂಸದನ ದೂರಿಗೆ ಸ್ಪಂದಿಸದ ನೀವು ಜನ ಸಾಮಾನ್ಯರ ಸಮಸ್ಯೆಗಳಿಗೆ ಹೇಗೆ ಸ್ಪಂದಿಸುತ್ತೀರಿ? ಪೊಲೀಸ್ ಇಲಾಖೆಯ ಬಗ್ಗೆ ನನಗೆ ಗೌರವ ಇದೆ. ಹೀಗಾಗಿ ಈ ವಿಡಿಯೋ ನೋಡಿಯಾದರೂ ನೀವು ಉತ್ತರ ನೀಡುತ್ತೀರಿ ಎನ್ನುವ ನಂಬಿಕೆಯನ್ನು ನಾನು ಇಟ್ಟುಕೊಂಡಿದ್ದೇನೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

    ಏನಿದು ದೂರು? 
    ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಹಿಳೆಯೊಬ್ಬಳ ಜೊತೆ ಇದ್ದಾರೆ ಎಂದು ಅಶ್ಲೀಲ ವಿಡಿಯೋದ ಫೋಟೋ ಒಂದನ್ನು ಪ್ರಭಾ ಬೆಳವಂಗಲ ಫೇಸ್‍ಬುಕ್‍ನಲ್ಲಿ ಅಪ್ಲೋಡ್ ಮಾಡಿದ್ದರು. ಇದನ್ನು ಖಂಡಿಸಿ ಪ್ರಭಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಬಿಜೆಪಿ ಯುವಮೋರ್ಚಾ ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರಿಗೆ ದೂರು ನೀಡಿತ್ತು.

    ಇದನ್ನೂ ಓದಿ: ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಐಪಿಎಸ್ ರೂಪಾ, ಪ್ರತಾಪ್ ಸಿಂಹ ನಡುವೆ ಟ್ವಿಟ್ಟರ್ ವಾರ್