Tag: ಪ್ರಭುತ್ವ

  • ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಸಿನಿಮಾ ನಾಯಕ ನಟ ಸ್ಪರ್ಧೆ

    ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಸಿನಿಮಾ ನಾಯಕ ನಟ ಸ್ಪರ್ಧೆ

    ಮುಂಬರುವ 2023ರ ವಿಧಾನಸಭಾ ಚುನಾವಣೆಗೆ (Politics) ಮತ್ತೊಬ್ಬ ಸಿನಿಮಾ ಸ್ಟಾರ್ ಎಂಟ್ರಿ ಕೊಡುವ ಬಗ್ಗೆ ಸುದ್ದಿ ಹರಿದಾಡುತ್ತಿದೆ. ಈ ನಟ ಹಾಲಿ ಶಾಸಕ ಮುನಿರತ್ನ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲಿದ್ದಾರೆ ಎನ್ನುವುದು ಸಿಕ್ಕಿರುವ ಮಾಹಿತಿ. ಈ ಸ್ಟಾರ್ ಎಂಟ್ರಿಯಿಂದಾಗಿ ಯಾವ ಪಕ್ಷಕ್ಕೆ ಲಾಭ ಯಾವ ಪಕ್ಷಕ್ಕೆ ನಷ್ಟ ಎನ್ನುವ ಕುರಿತು ಚರ್ಚೆ ಆಗುತ್ತಿದೆ.

    ಸ್ವತಂತ್ರ ಅಭ್ಯರ್ಥಿಯಾಗಿ ಈ ನಟ ಕಣಕ್ಕಿಳಿಯುವ ಸಾಧ್ಯತೆ ಇದ್ದು, ಈ ಸ್ಟಾರ್ ನಟನ ಹಿಂದೆ ತೆರೆ ಮರೆಯಲ್ಲಿ ರಾಜಕೀಯ ದಿಗ್ಗಜರು ಇದ್ದಾರೆ ಎಂದು ಹೇಳಲಾಗುತ್ತಿದೆ. ಆ ಸ್ಟಾರ್ ನಟ ಬೇರೆ ಯಾರೂ ಅಲ್ಲ ಚೇತನ್ ಚಂದ್ರ (Chetan Chandra). ಬರೋಬ್ಬರಿ 15 ವರ್ಷದಿಂದ ಕನ್ನಡ ಚಿತ್ರರಂಗದಲ್ಲಿರೋ ಚೇತನ್ ಚಂದ್ರ. ಪಿಯುಸಿ, ಪ್ರೇಮಿಸಂ, ರಾಜಧಾನಿ, ಕುಂಬರಾಶಿ, ಜಾತ್ರೆ, ಹುಚ್ಚುಡುಗ್ರು, ಸಂಯುಕ್ತ 2, ಪ್ಲಸ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಾಯಕರಾಗಿ ನಟಿಸಿದ್ದಾರೆ. ಇದನ್ನೂ ಓದಿ: ತೆರೆಗೆ ಅಪ್ಪಳಿಸಲು ಸಜ್ಜಾದ ರಕ್ಷಿತ್‌ ನಟನೆಯ `ಸಪ್ತಸಾಗರದಾಚೆ ಎಲ್ಲೋ’ ಚಿತ್ರ

    ಚೇತನ್ ಚಂದ್ರ ಅಭಿನಯದ ಇತ್ತೀಚಿನ ಚಿತ್ರ‌ ‘ಪ್ರಭುತ್ವ’ ಚಿತ್ರ ಇದೀಗ ಬಿಡುಗಡೆಗೆ ಸಜ್ಜಾಗಿದೆ. ಇಂದಿನ ರಾಜಕೀಯ ಸ್ಥಿತಿ, ಸರ್ಕಾರದ ವ್ಯವಸ್ಥೆ ಬಗ್ಗೆ ಮಾತನಾಡೋ ಸಿನಿಮಾ ಇದಾಗಿದ್ದು, ಇತ್ತೀಚೆಗಷ್ಟೆ ಟ್ರೈಲರ್ ಬಿಡುಗಡೆ ಮಾಡಲಾಗಿತ್ತು. ಇದ್ರಲ್ಲಿ ಚೇತನ್ ಕ್ರಾಂತಿಕಾರಿ ಯುವಕನಾಗಿ ಕಾಣಿಸಿಕೊಂಡಿದ್ದಾರೆ. ವ್ಯವಸ್ಥೆ ಮತ್ತು ಮತದಾನದ ಬಗ್ಗೆ ಹೊಡೆದಿರೋ ಡೈಲಾಗ್ಸ್ ಸಿನಿಮಾದ ಹೈಲೈಟ್ ಆಗಿದೆ.

    ಸ್ಥಿತಿವಂತ ಹಿನ್ನೆಲೆ ಇರೋ ಚೇತನ್ ಚಂದ್ರಗೆ ಈ ಹಿಂದೆಯೇ ಕಾರ್ಪೋರೇಟರ್ ಎಲೆಕ್ಷನ್ಗೆ ಆಫರ್ ಬಂದಿತ್ತು. ಆದರೆ, ಮುಂದಾಲೋಚನೆ ದೊಡ್ಡದಿಟ್ಟುಕೊಂಡಿದ್ದ ಅವರು ಈ ಬಾರಿ ಚುನಾವಣೆಯಲ್ಲಿ ತಮ್ಮ ಅದೃಷ್ಟ ಪರೀಕ್ಷೆ ಮಾಡೋ ಯೋಜನೆಯನ್ನು ಐದು ವರ್ಷದ ಹಿಂದೆಯೇ ರೂಪಿಸಿದ್ದರಂತೆ. ಅದಕ್ಕೆ ತಕ್ಕಂತೆ ಇದೀಗ ಅದು ಚಾಲ್ತಿಗೆ ಬಂದಿದೆ. ಅದಕ್ಕೆ ಕಾಕತಾಳೀಯ ಎಂಬಂತೆ ಈಗ  ಪ್ರಭುತ್ವ ಸಿನಿಮಾ ಬಿಡುಗಡೆ ಹೊಸ್ತಿಲಲ್ಲಿದೆ.

    ಎಲೆಕ್ಷನ್ಗೂ ಮೊದ್ಲೇ ಪ್ರಭುತ್ವ ಸಿನಿಮಾ ರಿಲೀಸ್ ಆಗೋದು ಕನ್ಫರ್ಮ್ ಆಗಿದ್ದು, ಈ ಸಿನಿಮಾ ಬಂದ್ಮೇಲೆ ಚೇತನ್ ಚಂದ್ರ ಸಿನಿಮಾ ನಸೀಬು ಏನಾಗುತ್ತೋ ಗೊತ್ತಿಲ್ಲ ಆದ್ರೆ ರಾಜಕೀಯವಾಗಿ ಹಣೆಬರಹ ಬದಲಾಗೋ ಎಲ್ಲಾ ಸೂಚನೆ ಸಿಕ್ತಿದೆ. ಇದಿಷ್ಟು ತೆರೆಮರೆಯಲ್ಲಿ‌ ಸಿಕ್ಕಿರೋ ಮಾಹಿತಿ ಅಧಿಕೃತವಾಗಿ ಸದ್ಯದಲ್ಲೇ ಚೇತನ್ ಚಂದ್ರ ಈ ವಿಚಾರವನ್ನ ಬಹಿರಂಗ ಪಡಿಸಲಿದ್ದಾರಂತೆ.

  • ಪ್ರಭುತ್ವದ ಮೂಲಕ ಹೊಸ ಕಥೆ ಹೇಳಲಿದ್ದಾರೆ ಚೇತನ್ ಚಂದ್ರ

    ಪ್ರಭುತ್ವದ ಮೂಲಕ ಹೊಸ ಕಥೆ ಹೇಳಲಿದ್ದಾರೆ ಚೇತನ್ ಚಂದ್ರ

    ತ್ತೀಚೆಗೆ ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳೇ ಹೆಚ್ಚು ಗೆಲುತ್ತಿದೆ. ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಉತ್ತಮ ಕಥಾಹಂದರ ಹೊಂದಿರುವ ‘ಪ್ರಭುತ್ವ’ (Prabhutva) ಚಿತ್ರದ ಟ್ರೈಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚೇತನ್ ಚಂದ್ರ (Chetan Chandra) ನಾಯಕರಾಗಿ ನಟಿಸಿರುವ ಈ ಚಿತ್ರದ ಟ್ರೈಲರನ್ನು ರಾಜಕೀಯ ಮುಖಂಡರಾದ ರವೀಂದ್ರ ಅನಾವರಣ ಮಾಡಿದರು. ಈ ಚಿತ್ರದ ಟ್ರೈಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

    ಪ್ರತಿಯೊಬ್ಬ ಪ್ರಜೆ ಈ ಚಿತ್ರವನ್ನು ನೋಡಬೇಕು. ಮತದಾನ ಅಮೂಲ್ಯವಾದ್ದದ್ದು. ಹಾಗಾಗಿ ಮತದಾನವನ್ನು ಮಾರಾಟ ಮಾಡಿಕೊಳ್ಳಬಾರದು. ಈ ರೀತಿ ಮತದಾನದ ಮಹತ್ವ ಸಾರುವ ಈ ಸಿನಿಮಾಗೆ ನಾನೇ ಕಥೆ ಬರೆದಿದ್ದೇನೆ. ನನ್ನ ಮಗ ರವಿರಾಜ್ ಎಸ್ ಕುಮಾರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.  ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ಮೇಘಡಹಳ್ಳಿ ಶಿವಕುಮಾರ್. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಚಿತ್ರ ಕೂಡ ತೆರೆಗೆ ಬರಲಿದೆ. ಚುನಾವಣೆ ಮುಂಚೆಯೇ ಚಿತ್ರವನ್ನು ಬಿಡುಗಡೆ ‌ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ಮಾಪಕ ರವಿರಾಜ್ ಎಸ್ ಕುಮಾರ್ ತಿಳಿಸಿದರು. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ `ಸತ್ಯ’ ಸೀರಿಯಲ್ ನಟ ಸೀರುಂಡೆ ರಘು

    ಚಿತ್ರದ ಕಥಾಹಂದರದ ಬಗ್ಗೆ ಪರಿಚಯ ನೀಡಿದ್ದ, ನಿರ್ದೇಶಕ ಆರ್ ರಂಗನಾಥ್, ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ತಮ್ಮ ತಂಡಕ್ಕೆ ಧನ್ಯವಾದ ಹೇಳಿದರು. ಇದು ನನ್ನ ಹನ್ನೆರಡನೇ ಸಿನಿಮಾ. ಮೇಘಡಹಳ್ಳಿ ಶಿವಕುಮಾರ್ ಅವರು ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಒಳ್ಳೆಯ ಕಥೆ ಬರೆದಿದ್ದಾರೆ. ರಂಗನಾಥ್ ಅಷ್ಟೇ ಚೆನ್ನಾಗಿ ನಿರ್ದೇಶನ ಮಾಡಿದ್ದಾರೆ. ತಂತ್ರಜ್ಞರ ಕಾರ್ಯವೈಖರಿ ಹಾಗೂ ಎಲ್ಲಾ ಕಲಾವಿದರ ಅಭಿನಯ ಅದ್ಭುತವಾಗಿದೆ ಎಂದರು ನಾಯಕ ಚೇತನ್ ಚಂದ್ರ.

    ಅನು ಎಂಬ ಪಾತ್ರದಲ್ಲಿ ನಟಿಸಿರುವುದಾಗಿ ನಾಯಕಿ ಪಾವನ ತಿಳಿಸಿದರು. ಚಿತ್ರದಲ್ಲಿ ಅಭಿನಯಿಸಿರುವ ಅರವಿಂದ್ ರಾವ್, ಹರೀಶ್ ರಾಯ್, ಆದಿ ಲೋಕೇಶ್, ವಿಜಯ್ ಚೆಂಡೂರ್, ವೀಣಾ ಸುಂದರ್, ಅನಿತಾ‌ ಭಟ್ ಮುಂತಾದ ಕಲಾವಿದರು ಹಾಗೂ ಸಂಭಾಷಣೆ ಬರೆದಿರುವ ವಿನಯ್ ‘ಪ್ರಭುತ್ವ’  ಚಿತ್ರದ ಕುರಿತು ‌ಮಾತನಾಡಿದರು.  ಎಮಿಲ್ ಸಂಗೀತ ನಿರ್ದೇಶನ, ಕೆ.ಎಸ್ ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ಚೇತನ್ ಚಂದ್ರ, ಪಾವನ, ನಾಸರ್, ಶರತ್ ಲೋಹಿತಾಶ್ವ, ಆದಿ ಲೋಕೇಶ್, ಅರವಿಂದ್ ರಾವ್, ಹರೀಶ್ ರಾಯ್, ವಿಜಯ್ ಚೆಂಡೂರ್, ವೀಣಾ ಸುಂದರ್, ರಾಜೇಶ್ ನಟರಂಗ, ಅನಿತಾ ಭಟ್ ಮುಂತಾದವರಿದ್ದಾರೆ.

  • ಚೇತನ್ ಚಂದ್ರ ನಟನೆಯ ‘ಪ್ರಭುತ್ವ’ ಸಿನಿಮಾದ ಮೆಲೋಡಿ ಸಾಂಗ್ ರಿಲೀಸ್

    ಚೇತನ್ ಚಂದ್ರ ನಟನೆಯ ‘ಪ್ರಭುತ್ವ’ ಸಿನಿಮಾದ ಮೆಲೋಡಿ ಸಾಂಗ್ ರಿಲೀಸ್

    ಮೇಘಡಹಳ್ಳಿ ಡಾ.ಶಿವಕುಮಾರ್ ಅರ್ಪಿಸುವ, ರವಿರಾಜ್ ಎಸ್ ಕುಮಾರ್ (Raviraj) ನಿರ್ಮಿಸಿರುವ ಹಾಗೂ ಆರ್ ರಂಗನಾಥ್ ನಿರ್ದೇಶನದಲ್ಲಿ ಚೇತನ್ ಚಂದ್ರ ನಾಯಕರಾಗಿ ನಟಿಸಿರುವ “ಪ್ರಭುತ್ವ” (Prabhutva) ಚಿತ್ರದಿಂದ “ನೀನೇನಾ ನೀನೇನಾ” ಎಂಬ ಮೆಲೋಡಿ ಸಾಂಗ್  ಬಿಡುಗಡೆಯಾಗಿದೆ. ಇತ್ತೀಚೆಗೆ ಹಾಡು ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ನಡೆಯಿತು.

    “ಪ್ರಭುತ್ವ” ಚಿತ್ರ ನನ್ನ ಸಿನಿಪಯಣದಲ್ಲೇ ಬಿಗ್ ಬಜೆಟ್ ಚಿತ್ರ ಎನ್ನಬಹುದು. ಇದಕ್ಕೆ ಕಾರಣ ನಿರ್ಮಾಪಕರು. ಯಾವುದಕ್ಕೂ ಕೊರತೆ ಇಲ್ಲದೆ ನಿರ್ಮಾಣ‌ ಮಾಡಿದ್ದಾರೆ. ಇನ್ನು, ನಿರ್ದೇಶಕ ರಂಗನಾಥ್ ಚಿತ್ರವನ್ನು ಅದ್ಭುತವಾಗಿ ನಿರ್ದೇಶಿಸಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ.  ಹಾಡು ಬಿಡುಗಡೆ ಸಮಾರಂಭ ಆಗಿರುವುದರಿಂದ, ಹಾಡಿನ ಬಗ್ಗೆ ಹೇಳುತ್ತೇನೆ. ನಿರ್ದೇಶಕ ಹರಿ ಸಂತೋಷ್ ಈ ಹಾಡನ್ನು ಬರೆದಿದ್ದು, ಕಾರ್ತಿಕ್ ಹಾಗೂ ಸುಪ್ರಿಯಾ ರಾಮ್ ಸೊಗಸಾಗಿ ಹಾಡಿದ್ದಾರೆ. ಎಮಿಲ್ ಅಷ್ಟೇ ಚೆನ್ನಾಗಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಛಾಯಾಗ್ರಾಹಕ ಕೆ.ಎಸ್ ಚಂದ್ರಶೇಖರ್ ಅವರ ಛಾಯಾಗ್ರಹಣ ಕೂಡ ಸುಂದರವಾಗಿದೆ. ಸದ್ಯದಲ್ಲೇ ಟ್ರೇಲರ್ ಬಿಡುಗಡೆಯಾಗಲಿದೆ. ನನ್ನ ಜೊತೆ‌ ನಟಿಸಿರುವ ಎಲ್ಲಾ ಕಲಾವಿದರು ಉತ್ತಮವಾಗಿ ನಟಿಸಿದ್ದಾರೆ ಎಂದು ನಾಯಕ ಚೇತನ್ ಚಂದ್ರ (Chetan Chandra) ಹೇಳಿದರು.

    ನಾನು ಈ ಹಿಂದೆ “ಅರಿವು” ಹಾಗೂ “ಕೂಗು” ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದೆ. ಇದು ಮೂರನೇ ಚಿತ್ರ. ನಿರ್ಮಾಪಕ ರವಿರಾಜ್ ಅವರ ತಂದೆ ಮೇಘಡಹಳ್ಳಿ ಶಿವಕುಮಾರ್ ಅವರೆ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಸಂಭಾಷಣೆ ವಿನಯ್ ಅವರದು. ಎಮಿಲ್ ಸಂಗೀತ ಸಂಯೋಜಿಸಿರುವ ನಾಲ್ಕು ಹಾಡುಗಳು ಚಿತ್ರದಲ್ಲಿದೆ. ಇಂದು ಮೊದಲ ಹಾಡು ಬಿಡುಗಡೆಯಾಗಿದೆ.   “ಮತದಾನ” ದ ಮಹತ್ವ ಸಾರುವ ಚಿತ್ರ ಅಂತ ಹೇಳಬಹುದು. ಚೇತನ್ ಚಂದ್ರ, ಪಾವನ, ಶರತ್ ಲೋಹಿತಾಶ್ವ, ವಿಜಯ್ ಚೆಂಡೂರ್, ಡ್ಯಾನಿ ಎಲ್ಲಾ ಕಲಾವಿದರ ಅಭಿನಯ  ಹಾಗೂ ತಂತ್ರಜ್ಞರ ಉತ್ತಮ ಕಾರ್ಯವೈಖರಿಯಿಂದ ಚಿತ್ರ ಚೆನ್ನಾಗಿ ಬಂದಿದೆ. ‌ಮುಂದಿನ ದಿನಗಳಲ್ಲಿ ಇನ್ನೂ ಎರಡು ಹಾಡುಗಳು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ ಎಂದರು ನಿರ್ದೇಶಕ ರಂಗನಾಥ್. ಇದನ್ನೂ ಓದಿ: ನಟ ಗೋಪಿಚಂದ್‌ಗೆ ಸ್ಯಾಂಡಲ್‌ವುಡ್‌ ನಿರ್ದೇಶಕ ಎ.ಹರ್ಷ ಆ್ಯಕ್ಷನ್ ಕಟ್

    ತಮ್ಮ ಪಾತ್ರದ ಬಗ್ಗೆ ಮಾತನಾಡಿದ ನಾಯಕಿ ಪಾವನ, ಇಂದು ಬಿಡುಗಡೆಯಾಗಿರುವ ಹಾಡು ತುಂಬಾ ಚೆನ್ನಾಗಿದೆ ಎಂದರು. ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಮೊದಲು ಮೊಲೋಡಿ ಸಾಂಗ್ ಬಿಡುಗಡೆಯಾಗಿದೆ. ಕಾರ್ತಿಕ್ ಹಾಗೂ ಸುಪ್ರಿಯಾರಾಮ್ ಈ ಹಾಡನ್ನು ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ಎಮಿಲ್ ಮಾಹಿತಿ ನೀಡಿದರು. ನಟರಾದ ಶರತ್ ಲೋಹಿತಾಶ್ವ, ವಿಜಯ್ ಚೆಂಡೂರ್, ಡ್ಯಾನಿ ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು. ಛಾಯಾಗ್ರಾಹಕ ಕೆ.ಎಸ್ ಚಂದ್ರಶೇಖರ್ ಛಾಯಾಗ್ರಹಣದ ಬಗ್ಗೆ ಮಾಹಿತಿ ನೀಡಿದರು.

    ಕಥೆ ಬರೆದಿರುವ ಮೇಘಡಹಳ್ಳಿ ಶಿವಕುಮಾರ್ ಮುಂದಿನ ದಿನಗಳಲ್ಲಿ ಕಥೆಯ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದಾಗಿ ಹೇಳಿದರು. ಚಿತ್ರ ಉತ್ತಮವಾಗಿ ಬರಲು ಸಹಕಾರ ನೀಡಿದ ಚಿತ್ರತಂಡದ ಪ್ರತಿಯೊಬ್ಬರಿಗೂ ನಿರ್ಮಾಪಕ ರವಿರಾಜ್ ಎಸ್ ಕುಮಾರ್ ಧನ್ಯವಾದ ತಿಳಿಸಿದರು.