Tag: ಪ್ರಭುದೇವ

  • ಮೈಸೂರು | ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿಸಿದ ನಟ ಪ್ರಭುದೇವ

    ಮೈಸೂರು | ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿಸಿದ ನಟ ಪ್ರಭುದೇವ

    ಮೈಸೂರು: ಬಹುಭಾಷಾ ನಟ ಪ್ರಭುದೇವ (Prabhu Deva) ಕೊನೆಗೂ ತಾಯಿ ಆಸೆಯಂತೆ ಹುಟ್ಟೂರಿನಲ್ಲಿ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ಮಾಡಿಸಿದ್ದಾರೆ. 25 ಲಕ್ಷ ರೂ. ವೆಚ್ಚದಲ್ಲಿ ಮಲೆ ಮಹದೇಶ್ವರ ದೇವಸ್ಥಾನದ (Mahadeshwara Temple) ಜೀರ್ಣೋದ್ಧಾರ ಮಾಡಿಸಿದ್ದಾರೆ.

    ಭಾರತದ ಮೈಕೆಲ್​ ಜಾಕ್ಸನ್​ ಎಂದೇ ಪ್ರಸಿದ್ಧಿ ಪಡೆದಿರುವ ಡ್ಯಾನ್ಸ್​ ಮಾಸ್ಟರ್​ ಪ್ರಭುದೇವ ಅವರು ಮೂಲತಃ ಮೈಸೂರು (Mysuru) ಜಿಲ್ಲೆಯ ದೂರ ಗ್ರಾಮದವರು. ಇದನ್ನೂ ಓದಿ: ಬೆಟ್ಟಿಂಗ್ ಆಪ್ ಪ್ರಮೋಟ್ ಆರೋಪ – ಸೋನು ಗೌಡ ಸೇರಿ ಹಲವು ರೀಲ್ಸ್‌ ಸ್ಟಾರ್‌ಗಳಿಂದ ಕ್ಷಮೆಯಾಚನೆ

    ನಂಜನಗೂಡು ತಾಲೂಕಿನ ಕೆಂಬಾಳು ಗ್ರಾಮದಲ್ಲಿ ಪ್ರಭುದೇವ ಅವರ ತಾಯಿ ಮಹದೇವಮ್ಮ ಅವರು ಜಮೀನು ಖರೀದಿ ಮಾಡಿದ್ದರು. ಈ ಜಮೀನಿನ ಪಕ್ಕದಲ್ಲೇ ಇದ್ದ ಮಲೆ ಮಹದೇಶ್ವರ ದೇವಸ್ಥಾನ ಶಿಥಿಲಾವಸ್ಥೆಯಲ್ಲಿತ್ತು. ಚೋಳರ ಕಾಲದ ದೇವಸ್ಥಾನ ಅತ್ಯಂತ ಪ್ರಖ್ಯಾತಿ ಪಡೆದಿತ್ತು. ಹಾಗಾಗಿ ಗ್ರಾಮಸ್ಥರು ಶಿಥಿಲಾವಸ್ಥೆಯಲ್ಲಿದ್ದ ಅದೇ ದೇವಾಲದಲ್ಲಿ ಪೂಜಾ ಕೈಂಕರ್ಯ ನೆರವೇರಿಸುತ್ತಿದ್ದರು. ಸದ್ಯ ತನ್ನ ತಾಯಿ ಆಸೆಯಂತೆ, ಗ್ರಾಮಸ್ಥರ ಬಯಕೆಯಂತೆ ನಟ ದೇವಸ್ಥಾನದ ಜೀರ್ಣೋದ್ಧಾರ ಮಾಡಿಸಿದ್ದಾರೆ.

    ಕಳೆದ ಎರಡು ದಿನಗಳಿಂದ ದೇವಸ್ಥಾನದಲ್ಲೇ ಉಳಿದುಕೊಂಡಿರುವ ನಟ, ಪತ್ನಿ ಹಿಮಾನಿ ಪ್ರಭುದೇವ ಜೊತೆಗೂಡಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ. ಕಳಶ ಪೂಜೆ, ಹೋಮ, ಹವನ, ನವಗ್ರಹ ಪೂಜೆಗಳನ್ನು ನೆರವೇರಿಸುತ್ತಿದ್ದಾರೆ. ಇದನ್ನೂ ಓದಿ: ಅಜಿತ್ ಸಿನಿಮಾ ವಿರುದ್ಧ ಇಳಯರಾಜ ಕಾನೂನು ಸಮರ- 5 ಕೋಟಿ ಪರಿಹಾರ ಕೋರಿ ನೋಟಿಸ್

    ಅಲ್ಲದೇ ಜೀರ್ಣೋದ್ಧಾರ ಕಾರ್ಯನಿಮಿತ್ತ ಇಡೀ ಗ್ರಾಮಸ್ಥರಿಗೆ ಊಟದ ವ್ಯವಸ್ಥೆಯನ್ನೂ ಸಹ ನಟ ಮಾಡಿದ್ದಾರೆ. ಹುಟ್ಟೂರು ಮರೆಯದ ನಟನ ಈ ಕಾರ್ಯಕ್ಕೆ ಸಾರ್ವಜನಿಕರು ಹೃದಯತುಂಬಿ ಹಾರೈಸಿದ್ದಾರೆ. ಇದನ್ನೂ ಓದಿ: ‘ಕುಬೇರ’ ಚಿತ್ರದ ಪೋಸ್ಟರ್ ಔಟ್- ಧನುಷ್ ಸಿನಿಮಾ ಬಗ್ಗೆ ಸಿಕ್ತು ಅಪ್‌ಡೇಟ್

  • ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ನಟ ಪ್ರಭುದೇವ

    ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ನಟ ಪ್ರಭುದೇವ

    ಮಂಗಳೂರು: ನಟ ಪ್ರಭುದೇವ (Prabhu Deva) ಕುಟುಂಬ ಸಮೇತರಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ (Kukke Subramanya Temple) ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು.

    ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ಬಳಿಕ ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ ದಂಪತಿಯನ್ನು ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಿದರು.

    ಬಳಿಕ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿ, ಅಲ್ಲಿನ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಮಂತ್ರಾಕ್ಷತೆ ಪಡೆದರು.

  • ಬಹುಭಾಷಾ ನಟ ಪ್ರಭುದೇವ ಅಜ್ಜಿ ನಂಜನಗೂಡಿನಲ್ಲಿ ನಿಧನ

    ಬಹುಭಾಷಾ ನಟ ಪ್ರಭುದೇವ ಅಜ್ಜಿ ನಂಜನಗೂಡಿನಲ್ಲಿ ನಿಧನ

    ನ್ನಡಿಗ, ಬಹುಭಾಷಾ ನಟ ಪ್ರಭುದೇವ (Prabhudeva) ಅವರ ಅಜ್ಜಿ (Grand Mother) ಪುಟ್ಟಮ್ಮಣ್ಣಿ ವಯೋಸಹಜ ಕಾಯಿಲೆಯಿಂದ ಜು.9ರಂದು ವಿಧಿವಶರಾಗಿದ್ದಾರೆ. ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಸಹೋದರರ ಜೊತೆ ಪ್ರಭುದೇವ ಚೆನ್ನೈನಿಂದ ಮೈಸೂರಿಗೆ ಆಗಮಿಸಿದ್ದಾರೆ. ಇದನ್ನೂ ಓದಿ:ಪ್ರಣಂ ದೇವರಾಜ್, ಖುಷಿ ರವಿ ನಟನೆಯ ‘S/o ಮುತ್ತಣ್ಣ’ನಿಗೆ ಕುಂಬಳಕಾಯಿ ಪ್ರಾಪ್ತಿ

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಭುದೇವ ಅಜ್ಜಿ 97ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. ಜು.9ರಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೂರ ಗ್ರಾಮದಲ್ಲಿ ಅಜ್ಜಿ ನಿಧನರಾಗಿದ್ದಾರೆ. ದೂರ ಗ್ರಾಮದಲ್ಲಿ ಇಂದು (ಜು.10) ಸಂಜೆ ಅಜ್ಜಿ ಪುಟ್ಟಮ್ಮಣ್ಣಿ ಅಂತ್ಯಕ್ರಿಯೆ ನಡೆಯಲಿದೆ.

    ಅಂದಹಾಗೆ, ಪುಟ್ಟಮ್ಮಣ್ಣಿ ಅವರು ಪ್ರಭುದೇವ ತಾಯಿ ಮಹಾದೇವಮ್ಮ ಅವರ ತಾಯಿ. ಅವರ ನಿಧನದಿಂದ ಕುಟುಂಬಕ್ಕೆ ಆಘಾತವಾಗಿದೆ.

  • ಎರಡೂವರೆ ದಶಕದ ನಂತರ ಒಂದಾದ ಪ್ರಭುದೇವ-ರೆಹಮಾನ್

    ಎರಡೂವರೆ ದಶಕದ ನಂತರ ಒಂದಾದ ಪ್ರಭುದೇವ-ರೆಹಮಾನ್

    ಟ, ನಿರ್ದೇಶಕ ಪ್ರಭುದೇವ (Prabhudeva) ಮತ್ತು ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ (AR Rahman) ಬರೋಬ್ಬರಿ 25 ವರ್ಷಗಳ ನಂತರ ಒಂದಾಗಿ ಕೆಲಸ ಮಾಡಲಿದ್ದಾರೆ. ಎಆರ್.ಆರ್.ಪಿಡಿ 6 ಎನ್ನುವ ಹೆಸರಿನ ಚಿತ್ರದಲ್ಲಿ ಈ ಜೋಡಿ ಒಂದಾಗಿದ್ದಾರೆ. ಮನೋಜ್ ಎಂ.ಎಸ್ ನಿರ್ದೇಶನದ ಈ ಚಿತ್ರದ ಮೊದಲ ಪೋಸ್ಟರ್ ಕೂಡ ರಿಲೀಸ್ ಆಗಿದೆ.

    ಈ ಕುರಿತಂತೆ ನಟ ಪ್ರಭುದೇವ ಕೂಡ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಯೋಗಿ ಬಾಬು, ಅಜು ವರ್ಗೀಸ್, ಸಿಂಗಂ ಪುಲಿ ಸೇರಿದಂತೆ ಅನೇಕ ಕಲಾವಿದರು ಈ ಸಿನಿಮಾದಲ್ಲಿದ್ದಾರೆ. ಅನೂಪ್ ಶೈಲಜಾ ಸಿನಿಮಾಟೋಗ್ರಫಿಯಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ರೇಮಂಡ್ ಡೆರಿಕ್ ಕ್ರಿಸ್ಟಾ ಅವರ ಸಂಕಲನ ಚಿತ್ರಕ್ಕಿದೆ.

     

    ಜಂಟಲ್ ಮನ್ ಸಿನಿಮಾದಲ್ಲಿ ಈ ಜೋಡಿ ಒಂದಾಗಿತ್ತು. ಈ ಸಿನಿಮಾದ ಚಿಕ್ಕು ಬುಕ್ಕು ರೈಲೇ ಹಾಡು ಫೇಮಸ್ ಆಗಿತ್ತು. ಆನಂತರ ಈ ಜೋಡಿ ಮತ್ತೆ ಜೊತೆಯಾಲಿ ಕೆಲಸ ಮಾಡಲೇ ಇಲ್ಲ. ಈಗ ಮತ್ತೆ ಅಂಥದ್ದೊಂದು ಅವಕಾಶ ಒದಗಿ ಬಂದಿದೆ.

  • ಕೋಲಾರದಲ್ಲಿ ಆಸ್ತಿ ಖರೀದಿ ಮಾಡಿದ ಬಹುಭಾಷಾ ನಟ ಪ್ರಭುದೇವ

    ಕೋಲಾರದಲ್ಲಿ ಆಸ್ತಿ ಖರೀದಿ ಮಾಡಿದ ಬಹುಭಾಷಾ ನಟ ಪ್ರಭುದೇವ

    ಹುಭಾಷಾ ನಟ ಪ್ರಭುದೇವ (Actor Prabhudeva) ಅವರು ಚಿನ್ನದ ಗಣಿ ನಾಡಿನಲ್ಲಿ ಆಸ್ತಿ ಖರೀದಿ ಮಾಡಿದ್ದಾರೆ. ಈ ವಿಚಾರವಾಗಿ ಕೋಲಾರಕ್ಕೆ ಆಗಮಿಸಿದ ನಟ ಪ್ರಭುದೇವ ಇಂದು (ಮಾ.21) ಮಾಸ್ಕ್ ಹಾಗೂ ಕ್ಯಾಪ್ ಧರಿಸಿ ಬಂದು ಅಚ್ಚರಿ ಮೂಡಿಸಿದ್ದಾರೆ. ಕೋಲಾರ (Kolar) ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಸಬ್ ರಿಜಿಸ್ಟ್ರಾರ್ ಕಚೇರಿಗೆ ಸಿಂಪಲ್ ಆಗಿ ಬಂದ ನಟ ಪ್ರಭುದೇವ ಕಂಡ ಅಭಿಮಾನಿಗಳು ಕೆಲಕಾಲ ದಂಗಾಗಿದ್ದಾರೆ.

    ಯಾರಿಗೂ ತಿಳಿಯದಂತೆ ಸಬ್ ರಿಜಿಸ್ಟ್ರಾರ್ ‌ಕಚೇರಿಗೆ ಆಗಮಿಸಿದ ಪ್ರಭುದೇವ ಸಹಿ ಮಾಡಿ, ಫೋಟೋ ಕೊಟ್ಟು ತೆರಳಿದ್ದಾರೆ. ತಾಲ್ಲೂಕು ಕಚೇರಿ ಎದುರು ಕಾರ್‌ನಲ್ಲಿ ಇಳಿದ ಪ್ರಭುದೇವ ಮಾಸ್ಕ್ ಹಾಗೂ ಕ್ಯಾಪ್ ಧರಿಸಿ ಬಂದು ಅಚ್ಚರಿ ಮೂಡಿಸಿದ್ದರು. ಉಪ ನೊಂದಣಾಧಿಕಾರಿ ಕಚೇರಿಯಲ್ಲಿ ಫೋಟೊ ಕೊಟ್ಟು, ಸಹಿ ಮಾಡಿ ತೆರಳಿದ್ದಾರೆ.

    ಇನ್ನೂ ಪ್ರಭುದೇವ (Prabhudeva) ಬರೋದರ ಕುರಿತು ಮೊದಲೇ ಅಧಿಕಾರಿಗಳಿಗೆ ಗೌಪ್ಯತೆ ಕಾಪಾಡಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ಆದರೆ ನಟ ಬರೋದನ್ನು ಕಾದು ಕುಳಿತಿದ್ದ ಕೆಲ ಅಭಿಮಾನಿಗಳು ಅವರ ಫೋಟೋ ತೆಗೆದುಕೊಂಡು ಖುಷಿಪಟ್ಟಿದ್ದಾರೆ. ಇನ್ನೂ ಬಂಗಾರಪೇಟೆ ತಾಲ್ಲೂಕಿನ ಹಂಚಾಳ ಬಳಿ ಇರುವ ಜಿಯೋನಿ ಗಾಲ್ಫ್ ಕೋರ್ಸ್‌ನಲ್ಲಿ ದುಬಾರಿ ಬೆಲೆಯ ಐಷಾರಾಮಿ ವಿಲ್ಲಾ ಖರೀದಿ ಮಾಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ:ಮೊದಲ ಗರ್ಲ್‌ಫ್ರೆಂಡ್‌ ಬಗ್ಗೆ ರಿವೀಲ್ ಮಾಡಿದ ಟೈಗರ್ ಶ್ರಾಫ್

    ನಟ ಪ್ರಭುದೇವ ಅವರು ಕನ್ನಡ ಮತ್ತು ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಶಿವಣ್ಣ- ಪ್ರಭುದೇವ ನಟನೆಯ ‘ಕರಟಕ ದಮನಕ’ ರಿಲೀಸ್ ಆಗಿತ್ತು. ಅಭಿಮಾನಿಗಳ ಮೆಚ್ಚುಗೆ ಪಡೆದಿತ್ತು.

  • ಅಂದು ಅಪ್ಪು, ಇಂದು ಶಿವಣ್ಣ ಜೊತೆ ಡಾನ್ಸ್: ಖುಷಿ ಹಂಚಿಕೊಂಡ ಪ್ರಭುದೇವ

    ಅಂದು ಅಪ್ಪು, ಇಂದು ಶಿವಣ್ಣ ಜೊತೆ ಡಾನ್ಸ್: ಖುಷಿ ಹಂಚಿಕೊಂಡ ಪ್ರಭುದೇವ

    ಖ್ಯಾತ ನಟ, ನಿರ್ದೇಶಕ, ಡಾನ್ಸರ್ ಪ್ರಭುದೇವ (Prabhudeva) ಇದೇ ಮೊದಲ ಬಾರಿಗೆ ಶಿವರಾಜ್ ಕುಮಾರ್ (Shivaraj Kumar) ಜೊತೆ ತೆರೆಹಂಚಿಕೊಂಡಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಕರಟಕ ದಮನಕ ಸಿನಿಮಾದಲ್ಲಿ ಅವರು ಶಿವಣ್ಣ ಜೊತೆ ನಟಿಸಿದ್ದಾರೆ. ಈ ಕುರಿತಂತೆ ಅವರು ಮಾತನಾಡಿದ್ದಾರೆ. ಅಂದು ಅಪ್ಪು (Puneeth) ಜೊತೆ ಡಾನ್ಸ್ ಮಾಡಿದ್ದೆ. ಇಂದು ಶಿವಣ್ಣ ಜೊತೆ ಡಾನ್ಸ್ ಮಾಡಿದ್ದು ಖುಷಿ ತಂದಿದೆ ಎಂದಿದ್ದಾರೆ. ಶಿವಣ್ಣ ಎನರ್ಜಿಗೆ ಫಿದಾ ಆಗಿದ್ದಾರೆ.

    ಈಗಾಗಲೇ ಚಿತ್ರತಂಡ ಪ್ರಚಾರವನ್ನು ಆರಂಭಿಸಿದ್ದು ಕರಟಕ ದಮನಕ (Karataka Damanaka) ಸಿನಿಮಾ ಶಿವರಾತ್ರಿ ದಿನದಂದು ರಿಲೀಸ್ (Release)ಆಗಲಿದೆ. ಮಾರ್ಚ್ 8 ರಂದು ತಮ್ಮ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಶಿವರಾತ್ರಿಗೆ ಶಿವಣ್ಣನ ಚಿತ್ರದ ಅಬ್ಬರ ಕೇಳಿ ಬರಲಿದೆ.

    ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ತಯಾರಾಗಿರುವ, ಯೋಗರಾಜ್ ಭಟ್ (Yogaraj Bhat) ನಿರ್ದೇಶನದ ಈ ಸಿನಿಮಾಗೆ ವಿಚಿತ್ರವಾಗಿರುವಂಥ ಶೀರ್ಷಿಕೆ ಇಡಲಾಗಿದೆ. ಈವರೆಗೂ ಟೈಟಲ್ ವಿಷಯದಲ್ಲಿ ಉಪೇಂದ್ರ ಮಾತ್ರ ತಲೆಕೆಡಿಸುತ್ತಿದ್ದರು. ಇದೀಗ ಆ ಸಾಲಿಗೆ ಯೋಗರಾಜ್ ಭಟ್ಟರು ಕೂಡ ಸೇರ್ಪಡೆಗೊಂಡಿದ್ದಾರೆ. ಟೈಟಲ್ ನೋಡಿದವರು, ಏನ್ ಗುರು ಇದರ ಅರ್ಥ ಎಂದು ಕೇಳುವಂತಾಗಿದೆ.

     

    ಟೈಟಲ್ ಇಟ್ಟಾಗಿನಿಂದ ಈವರೆಗೂ ‘ಕರಟಕ ದಮನಕ’ ಎಂದರೇನು ಎನ್ನುವ ಕುರಿತು ಯೋಗರಾಜ್ ಭಟ್ ಎಲ್ಲಿಯೂ ಬಾಯಿ ಬಿಟ್ಟಿರಲಿಲ್ಲ. ಈ ಕುರಿತು ಅವರು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದರು. ಜೊತೆಗೆ ಚಿತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಿದ್ದರು. ‘ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು ಕರಟಕ ಇನ್ನೊಂದರ ಹೆಸರು ದಮನಕ. ಈ ಎರಡೂ ನರಿಗಳು ಕಾಡು ಮತ್ತು ನಾಡಿನ ತಲೆ ಕೆಡಿಸಿ ಇತಿಹಾಸವಾದವು. ಈ ಕುತಂತ್ರಿ ನರಿಗಳು ಇಂದು ಇಲ್ಲಿ ಮಾನವ ರೂಪ ತಾಳಿವೆ. ಎಚ್ಚರಿಕೆ’ ಎಂದು ಪೋಸ್ಟ್ ಮಾಡಿದ್ದರು.

  • ಶಿವರಾತ್ರಿಗೆ ರಿಲೀಸ್ ಆಗಲಿದೆ ‘ಕರಟಕ ದಮನಕ’ ಸಿನಿಮಾ

    ಶಿವರಾತ್ರಿಗೆ ರಿಲೀಸ್ ಆಗಲಿದೆ ‘ಕರಟಕ ದಮನಕ’ ಸಿನಿಮಾ

    ದೇ ಮೊದಲ ಬಾರಿಗೆ ಪ್ರಭುದೇವ್ ಮತ್ತು ಶಿವರಾಜ್ ಕುಮಾರ್ ನಟಿಸಿರುವ ಕರಟಕ ದಮನಕ (Karataka Damanaka) ಸಿನಿಮಾ ಶಿವರಾತ್ರಿ ದಿನದಂದು ರಿಲೀಸ್ (Release)ಆಗಲಿದೆ. ಮಾರ್ಚ್ 8 ರಂದು ತಮ್ಮ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಶಿವರಾತ್ರಿಗೆ ಶಿವಣ್ಣನ ಚಿತ್ರದ ಅಬ್ಬರ ಕೇಳಿ ಬರಲಿದೆ.

    ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ತಯಾರಾಗಿರುವ, ಯೋಗರಾಜ್ ಭಟ್ (Yogaraj Bhat) ನಿರ್ದೇಶನದ ಈ ಸಿನಿಮಾಗೆ ವಿಚಿತ್ರವಾಗಿರುವಂಥ ಶೀರ್ಷಿಕೆ ಇಡಲಾಗಿದೆ. ಈವರೆಗೂ ಟೈಟಲ್ ವಿಷಯದಲ್ಲಿ ಉಪೇಂದ್ರ ಮಾತ್ರ ತಲೆಕೆಡಿಸುತ್ತಿದ್ದರು. ಇದೀಗ ಆ ಸಾಲಿಗೆ ಯೋಗರಾಜ್ ಭಟ್ಟರು ಕೂಡ ಸೇರ್ಪಡೆಗೊಂಡಿದ್ದಾರೆ. ಟೈಟಲ್ ನೋಡಿದವರು, ಏನ್ ಗುರು ಇದರ ಅರ್ಥ ಎಂದು ಕೇಳುವಂತಾಗಿದೆ.

    ಟೈಟಲ್ ಇಟ್ಟಾಗಿನಿಂದ ಈವರೆಗೂ ‘ಕರಟಕ ದಮನಕ’ ಎಂದರೇನು ಎನ್ನುವ ಕುರಿತು ಯೋಗರಾಜ್ ಭಟ್ ಎಲ್ಲಿಯೂ ಬಾಯಿ ಬಿಟ್ಟಿರಲಿಲ್ಲ. ಈ ಕುರಿತು ಅವರು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದರು. ಜೊತೆಗೆ ಚಿತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಿದ್ದರು. ‘ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು ಕರಟಕ ಇನ್ನೊಂದರ ಹೆಸರು ದಮನಕ. ಈ ಎರಡೂ ನರಿಗಳು ಕಾಡು ಮತ್ತು ನಾಡಿನ ತಲೆ ಕೆಡಿಸಿ ಇತಿಹಾಸವಾದವು. ಈ ಕುತಂತ್ರಿ ನರಿಗಳು ಇಂದು ಇಲ್ಲಿ ಮಾನವ ರೂಪ ತಾಳಿವೆ. ಎಚ್ಚರಿಕೆ’ ಎಂದು ಫೋಸ್ಟ್ ಮಾಡಿದ್ದರು.

     

    ದಭಿರುಚಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿರುವ  ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಮೊದಲ ಬಾರಿಗೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ (Shivaraj Kumar)  ಹಾಗೂ ಇಂಡಿಯನ್ ಮೈಕೆಲ್ ಜಾಕ್ಸನ್ ಪ್ರಭುದೇವ (Prabhudev) ಅಭಿನಯಿಸಿದ್ದು ವಿಶೇಷ.

  • Thalapathy 68: ‘ಲಿಯೋ’ ರಿಲೀಸ್ ಬೆನ್ನಲ್ಲೇ ಹೊಸ ಚಿತ್ರದಲ್ಲಿ ವಿಜಯ್ ಬ್ಯುಸಿ

    Thalapathy 68: ‘ಲಿಯೋ’ ರಿಲೀಸ್ ಬೆನ್ನಲ್ಲೇ ಹೊಸ ಚಿತ್ರದಲ್ಲಿ ವಿಜಯ್ ಬ್ಯುಸಿ

    ಳಪತಿ ವಿಜಯ್ (Thalapathy Vijay) ನಟನೆಯ ‘ಲಿಯೋ’ (Leo) ಸಿನಿಮಾ ಅ.19ಕ್ಕೆ ರಿಲೀಸ್ ಆಗಿದ್ದು, ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಹೊಸ ಸಿನಿಮಾದ ಮುಹೂರ್ತ ಕಾರ್ಯದಲ್ಲಿ ವಿಜಯ್ ಬ್ಯುಸಿಯಾಗಿದ್ದಾರೆ. ದಸರಾ ಹಬ್ಬದಂದು ಹೊಸ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಇದನ್ನೂ ಓದಿ:‘ಜೇಮ್ಸ್’ ನಿರ್ದೇಶಕನ ಜೊತೆ ಕೈಜೋಡಿಸಿದ ಅಣ್ಣಾವ್ರ ಮೊಮ್ಮಗ ಧೀರೆನ್

    ಕಾಲಿವುಡ್‌ನಲ್ಲಿ (Kollywood) ವಿಜಯ್‌ಗೆ ದೊಡ್ಡ ಮಟ್ಟದಲ್ಲಿ ಫ್ಯಾನ್ ಬೇಸ್ ಇದೆ. ಅವರ ಸಿನಿಮಾಗಾಗಿಯೇ ಕಾದು ಕೂರುವ ಅಭಿಮಾನಿಗಳಿದ್ದಾರೆ. ಸದ್ಯ ‘ಲಿಯೋ’ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಸೌಂಡ್ ಮಾಡುತ್ತಿದೆ. ಇದರ ನಡುವೆ ಹೊಸ ಸಿನಿಮಾದತ್ತ ವಿಜಯ್ ಮುಖ ಮಾಡಿದ್ದಾರೆ.

    ವಿಜಯ್ 68ನೇ ಚಿತ್ರಕ್ಕೆ ವೆಂಕಟ್ ಪ್ರಭು (Venkat Prabhu) ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ದಸರಾ ಹಬ್ಬದ (ಅ.24) ಶುಭ ಸಂದರ್ಭದಲ್ಲಿ ಅದ್ದೂರಿಯಾಗಿ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಚಿತ್ರದ ದೊಡ್ಡ ತಾರಾ ಬಳಗ ಈ ಸಮಾರಂಭದಲ್ಲಿ ಭಾಗಿಯಾಗಿದೆ.

    ದಳಪತಿ ವಿಜಯ್ ಜೊತೆ ಬಹುಭಾಷಾ ನಟ ಕನ್ನಡಿಗ ಪ್ರಭುದೇವ (Prabhudeva), ಸ್ನೇಹಾ, ಲೈಲಾ, ಮೀನಾಕ್ಷಿ ಚೌಧರಿ, ಜಯರಾಮ್, ಯೋಗಿ ಬಾಬು (Yogi Babu) ಸೇರಿದಂತೆ ಹಲವರು ಈ ಚಿತ್ರದಲ್ಲಿ ನಟಿಸಲಿದ್ದಾರೆ. ಇದೀಗ ಮುಹೂರ್ತ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದಾರೆ.

    ‘ಲಿಯೋ’ (Leo) ಬಳಿಕ 68ನೇ ಚಿತ್ರಕ್ಕೆ ವಿಜಯ್ & ಟೀಂ ಚಾಲನೆ ನೀಡಿರೋದು ದಳಪತಿ ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಸಿನಿಮಾ ಬಗೆಗಿನ ಹೆಚ್ಚಿನ ಅಪ್‌ಡೇಟ್‌ಗಾಗಿ ಎದುರು ನೋಡ್ತಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಕರಟಕ ದಮನಕ’ ಮೋಷನ್ ಪೋಸ್ಟರ್ ರಿಲೀಸ್: ಇದು ಕುತಂತ್ರಿ ನರಿಗಳ ಕಥನ ಎಂದ ಭಟ್

    ‘ಕರಟಕ ದಮನಕ’ ಮೋಷನ್ ಪೋಸ್ಟರ್ ರಿಲೀಸ್: ಇದು ಕುತಂತ್ರಿ ನರಿಗಳ ಕಥನ ಎಂದ ಭಟ್

    ಯೋಗರಾಜ್ ಭಟ್ (Yogaraj Bhat) ನಿರ್ದೇಶನದಲ್ಲಿ ಮೂಡಿ ಬರುತ್ತಿರುವ, ಇದೇ ಮೊದಲ ಬಾರಿಗೆ ಶಿವರಾಜ್ ಕುಮಾರ್ (Shivaraj Kumar) ಮತ್ತು ಪ್ರಭುದೇವ (Prabhu Deva) ಜೊತೆಯಾಗಿ ನಟಿಸುತ್ತಿರುವ ‘ಕರಟಕ ದಮನಕ’ (Karataka Damanaka) ಚಿತ್ರದ ಮೋಷನ್ ಪೋಸ್ಟರ್ (Motion Poster) ರಿಲೀಸ್ ಆಗಿದೆ. ಪ್ರಮುಖ ಪಾತ್ರಗಳು ಮತ್ತು ಆ ಪಾತ್ರಗಳ ಪ್ರತಿಮೆಯನ್ನು ತೋರಿಸುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು. ಕರಟಕ ದಮನಕ ಎರಡು ಕುತಂತ್ರ ನರಿಗಳ ಕಥನವನ್ನೂ ಈ ಮೋಷಲ್ ಪೋಸ್ಟರ್ ನಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ.

    ಇದೀಗ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಇಂದಿಗೆ ಈ ಚಿತ್ರ ಪ್ರಾರಂಭವಾಗಿ ಒಂದು ವರ್ಷಗಳಾಗಿದೆ ಎಂದು ಮಾತು ಆರಂಭಿಸಿದ ನಿರ್ದೇಶಕ ಯೋಗರಾಜ್ ಭಟ್, ಕರಟಕ ದಮನಕ ಎಂದರೆ ಎರಡು ಕುತಂತ್ರಿ ನರಿಗಳ ಹೆಸರು. ಸಾಮಾನ್ಯವಾಗಿ ಇಬ್ಬರನ್ನು ಹೆಚ್ಚು ಸಲ ಒಟ್ಟಾಗಿ ನೋಡಿದಾಗ ಕರಟಕ ದಮನಕ ಎನ್ನುವುದು ಉಂಟು. ನಮ್ಮ ಚಿತ್ರದಲ್ಲಿ ಈ ಪಾತ್ರಗಳನ್ನು ಶಿವಣ್ಣ ಹಾಗೂ ಪ್ರಭುದೇವ ಮಾಡಿದ್ದಾರೆ. ಅವರಿಬ್ಬರ ಎನರ್ಜಿ ನೋಡಿದರೆ ನಿಜಕ್ಕೂ ಖುಷಿಯಾಗುತ್ತದೆ. ರಾಕ್ ಲೈನ್ ವೆಂಕಟೇಶ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜನೆಯ ಏಳು ಹಾಡುಗಳು ಚಿತ್ರದಲ್ಲಿದೆ. ಸಂತೋಷ್ ರೈ ಪಾತಾಜೆ ಈ ಚಿತ್ರದ ಛಾಯಾಗ್ರಾಹಕರು. ನಿಶ್ವಿಕಾ ನಾಯ್ಡು, ಪ್ರಿಯಾ ಆನಂದ್ ನಾಯಕಿಯರು. ಮುಖ್ಯ ಮಂತ್ರಿ ಚಂದ್ರು ಹಾಗೂ ತನಿಕೆಲ್ಲ ಭರಣಿ ಅವರಂತಹ ಹಿರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಾನು ಹಾಗೂ ರಾಕ್ ಲೈನ್ ವೆಂಕಟೇಶ್ ಅವರು ಸಹ ನಟಿಸಿದ್ದೇವೆ. ಶೇಕಡಾ ತೊಂಬತ್ತು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಡಿನ ಚಿತ್ರೀಕರಣ ಬಾಕಿ ಇದೆ ಎಂದರು. ಇದನ್ನೂ ಓದಿ:2023: ಅತ್ಯುತ್ತಮ ಸಿನಿಮಾ, ರಾಕೆಟ್ರಿ ದಿ ನಂಬಿ ಎಫೆಕ್ಟ್

    ನಮ್ಮ ಸಂಸ್ಥೆಯಿಂದ ಶಿವರಾಜಕುಮಾರ್ ಅವರ ಚಿತ್ರ ಬಂದು ಬಹಳ ವರ್ಷಗಳಾಗಿತ್ತು. ಪ್ರಭುದೇವ ಅವರ ಚಿತ್ರ ನಿರ್ಮಾಣ ಮಾಡುವುದು ನನ್ನ ಕನಸಾಗಿತ್ತು. ಈ ಇಬ್ಬರು ನಟರು ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ನಿಜಕ್ಕೂ ಖುಷಿಯ ವಿಚಾರ. ಯೋಗರಾಜ್ ಭಟ್ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಹರಿಕೃಷ್ಣ ಸುಮಧುರ ಹಾಡುಗಳನ್ನು ನೀಡುತ್ತಿದ್ದಾರೆ ಎಂದು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ತಿಳಿಸಿದರು.

     

    ಶಿವರಾಜಕುಮಾರ್ ಅವರ ಎನರ್ಜಿ ನೋಡಿದರೆ ಖುಷಿಯಾಗುತ್ತದೆ. ಅವರ ಜೊತೆ ನಟಿಸುತ್ತಿರುವುದು ಹೆಚ್ಚಿನ ಸಂತಸ ತಂದಿದೆ. ಯೋಗರಾಜ್ ಭಟ್ ಅವರ ನಿರ್ದೇಶನ ಹಾಗೂ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ ಎಂದರು ಪ್ರಭುದೇವ.  ನಾಯಕಿಯರಾದ ನಿಶ್ವಿಕಾ ನಾಯ್ಡು, ಪ್ರಿಯ ಆನಂದ್, ಹಿರಿಯ ಕಲಾವಿದರಾದ  ಮುಖ್ಯ ಮಂತ್ರಿ ಚಂದ್ರು, ತನಿಕೆಲ್ಲ ಭರಣಿ ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು. ‌ಛಾಯಾಗ್ರಹಣದ ಬಗ್ಗೆ ಸಂತೋಷ್ ರೈ ಪಾತಾಜೆ ಮಾತನಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುಕ್ತಾಯ ಹಂತದಲ್ಲಿ ‘ಕರಟಕ ದಮನಕ’: ಶಿವಣ್ಣ-ಪ್ರಭುದೇವ ನಟನೆಯ ಚಿತ್ರ

    ಮುಕ್ತಾಯ ಹಂತದಲ್ಲಿ ‘ಕರಟಕ ದಮನಕ’: ಶಿವಣ್ಣ-ಪ್ರಭುದೇವ ನಟನೆಯ ಚಿತ್ರ

    ರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ (Shivaraj Kumar) , ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ (Prabhudeva) ಅಭಿನಯದ, ರಾಕ್ ಲೈನ್ ವೆಂಕಟೇಶ್ (Rock Line Venkatesh) ನಿರ್ಮಾಣದ ಹಾಗೂ ಯೋಗರಾಜ್ ಭಟ್ (Yogaraj Bhatt) ನಿರ್ದೇಶನದ ‘ಕರಟಕ ದಮನಕ’ (Karataka Damanaka) ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

    ಇಂದಿಗೆ ಈ ಚಿತ್ರ ಪ್ರಾರಂಭವಾಗಿ ಒಂದು ವರ್ಷಗಳಾಗಿದೆ ಎಂದು ಮಾತು ಆರಂಭಿಸಿದ ನಿರ್ದೇಶಕ ಯೋಗರಾಜ್ ಭಟ್, ಕರಟಕ ದಮನಕ ಎಂದರೆ ಎರಡು ಕುತಂತ್ರಿ ನರಿಗಳ ಹೆಸರು. ಸಾಮಾನ್ಯವಾಗಿ ಇಬ್ಬರನ್ನು ಹೆಚ್ಚು ಸಲ ಒಟ್ಟಾಗಿ ನೋಡಿದಾಗ ಕರಟಕ ದಮನಕ ಎನ್ನುವುದು ಉಂಟು. ನಮ್ಮ ಚಿತ್ರದಲ್ಲಿ ಈ ಪಾತ್ರಗಳನ್ನು ಶಿವಣ್ಣ ಹಾಗೂ ಪ್ರಭುದೇವ ಮಾಡಿದ್ದಾರೆ. ಅವರಿಬ್ಬರ ಎನರ್ಜಿ ನೋಡಿದರೆ ನಿಜಕ್ಕೂ ಖುಷಿಯಾಗುತ್ತದೆ. ರಾಕ್ ಲೈನ್ ವೆಂಕಟೇಶ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜನೆಯ ಏಳು ಹಾಡುಗಳು ಚಿತ್ರದಲ್ಲಿದೆ. ಸಂತೋಷ್ ರೈ ಪಾತಾಜೆ ಈ ಚಿತ್ರದ ಛಾಯಾಗ್ರಾಹಕರು. ನಿಶ್ವಿಕಾ ನಾಯ್ಡು, ಪ್ರಿಯಾ ಆನಂದ್ ನಾಯಕಿಯರು. ಮುಖ್ಯ ಮಂತ್ರಿ ಚಂದ್ರು ಹಾಗೂ ತನಿಕೆಲ್ಲ ಭರಣಿ ಅವರಂತಹ ಹಿರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಾನು ಹಾಗೂ ರಾಕ್ ಲೈನ್ ವೆಂಕಟೇಶ್ ಅವರು ಸಹ ನಟಿಸಿದ್ದೇವೆ. ಶೇಕಡಾ ತೊಂಬತ್ತು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಡಿನ ಚಿತ್ರೀಕರಣ ಬಾಕಿ ಇದೆ ಎಂದರು.

    ನಮ್ಮ ಸಂಸ್ಥೆಯಿಂದ ಶಿವರಾಜಕುಮಾರ್ ಅವರ ಚಿತ್ರ ಬಂದು ಬಹಳ ವರ್ಷಗಳಾಗಿತ್ತು. ಪ್ರಭುದೇವ ಅವರ ಚಿತ್ರ ನಿರ್ಮಾಣ ಮಾಡುವುದು ನನ್ನ ಕನಸಾಗಿತ್ತು. ಈ ಇಬ್ಬರು ನಟರು ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ನಿಜಕ್ಕೂ ಖುಷಿಯ ವಿಚಾರ. ಯೋಗರಾಜ್ ಭಟ್ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಹರಿಕೃಷ್ಣ ಸುಮಧುರ ಹಾಡುಗಳನ್ನು ನೀಡುತ್ತಿದ್ದಾರೆ ಎಂದು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ತಿಳಿಸಿದರು. ಇದನ್ನೂ ಓದಿ:ಸುದೀಪ್ ಹುಟ್ಟುಹಬ್ಬ: ಮನೆಗೆ ಬರಬೇಡಿ, ಅಭಿಮಾನಿಗಳ ಭೇಟಿಗೆ ಸ್ಥಳ ಫಿಕ್ಸ್

    ರಾಕ್ ಲೈನ್ ಪ್ರೊಡಕ್ಷನ್ಸ್ ನನ್ನ ಕುಟುಂಬವಿದಂತೆ. ಇನ್ನು ಯೋಗರಾಜ್ ಭಟ್ ಅವರ ಚಿತ್ರಗಳು ನನಗೆ ಇಷ್ಟ. ಅವರ ಎಷ್ಟೋ ಚಿತ್ರಗಳನ್ನು ಚಿತ್ರಮಂದಿರಕ್ಕೆ ಹೋಗಿ ನೋಡಿದ್ದೇನೆ. ಅವರ ನಿರ್ದೇಶನದಲ್ಲಿ ನಟಿಸುತ್ತಿರುವುದು ಸಂತೋಷ. ಗೆಳೆಯ ಪ್ರಭುದೇವ ಹಾಗೂ ನಾನು ಈ ಚಿತ್ರದಲ್ಲಿ ಒಟ್ಟಿಗೆ ಅಭಿನಯಿಸುತ್ತಿದ್ದೇವೆ. ಈ ಚಿತ್ರದಲ್ಲೂ ನಾವಿಬ್ಬರು ಸ್ನೇಹಿತರಾಗಿಯೇ ನಟಿಸುತ್ತಿದ್ದೇವೆ ಎಂದು ಶಿವರಾಜಕುಮಾರ್ ತಿಳಿಸಿದರು.

    ಶಿವರಾಜಕುಮಾರ್ ಅವರ ಎನರ್ಜಿ ನೋಡಿದರೆ ಖುಷಿಯಾಗುತ್ತದೆ. ಅವರ ಜೊತೆ ನಟಿಸುತ್ತಿರುವುದು ಹೆಚ್ಚಿನ ಸಂತಸ ತಂದಿದೆ. ಯೋಗರಾಜ್ ಭಟ್ ಅವರ ನಿರ್ದೇಶನ ಹಾಗೂ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ ಎಂದರು ಪ್ರಭುದೇವ.  ನಾಯಕಿಯರಾದ ನಿಶ್ವಿಕಾ ನಾಯ್ಡು, ಪ್ರಿಯ ಆನಂದ್, ಹಿರಿಯ ಕಲಾವಿದರಾದ  ಮುಖ್ಯ ಮಂತ್ರಿ ಚಂದ್ರು, ತನಿಕೆಲ್ಲ ಭರಣಿ ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು. ‌ಛಾಯಾಗ್ರಹಣದ ಬಗ್ಗೆ ಸಂತೋಷ್ ರೈ ಪಾತಾಜೆ ಮಾತನಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]