Tag: ಪ್ರಭುದೇವ

  • ಅಮಾವಾಸ್ಯೆಯಂದು ಪ್ರಭುದೇವ ಹುಟ್ಟಿದ್ದು, ರಹಸ್ಯ ಬಿಚ್ಚಿಟ್ಟ ತಂದೆ ಮೂಗೂರ್‌ ಸುಂದರ್‌

    ಅಮಾವಾಸ್ಯೆಯಂದು ಪ್ರಭುದೇವ ಹುಟ್ಟಿದ್ದು, ರಹಸ್ಯ ಬಿಚ್ಚಿಟ್ಟ ತಂದೆ ಮೂಗೂರ್‌ ಸುಂದರ್‌

    ಕಿರುತೆರೆಯ ಜನಪ್ರಿಯ Weekend With Ramesh-5 ಶೋಗೆ ರಮ್ಯಾ (Ramya) ಮೊದಲ ಅತಿಥಿಯಾಗಿ ಎಂಟ್ರಿ ಕೊಟ್ಟಿದ್ದರು. ತನ್ನ ಬದುಕಿನ ಹಲವು ವಿಚಾರಗಳನ್ನ ನಟಿ ಬಿಚ್ಚಿಟ್ಟಿದ್ದರು. ಇದೀಗ ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ (Prabhudeva) ಅವರು ಈ ಸಾಧಕರ ಸೀಟ್ ಅನ್ನ ಅಲಂಕರಿಸಿದ್ದಾರೆ.

    ಮೊದಲ ಅತಿಥಿಯಾಗಿ ರಮ್ಯಾ ಕಾಲಿಟ್ಟ ಬೆನ್ನಲ್ಲೇ ಪ್ರಭುದೇವ ಅವರು 2ನೇ ಅತಿಥಿಯಾಗಿ ತಮ್ಮ ಬದುಕಿನ ಹಲವು ವಿಚಾರಗಳನ್ನ ಹಂಚಿಕೊಂಡಿದ್ದಾರೆ. ಪ್ರಭುದೇವ ಅವರು ಬೆಳೆದು ಬಂದ ದಾರಿ, ಬೆಳೆದ ರೀತಿಯ ಬಗ್ಗೆ Weekend With Ramesh ಶೋನಲ್ಲಿ  ನೋಡಬಹುದಾಗಿದೆ. ಈ ವಾರ ಏಪ್ರಿಲ್‌ 1 & 2ರಂದು ರಾತ್ರಿ 9ಕ್ಕೆ ಪ್ರಭುದೇವ ಅವರ ಸಂಚಿಕೆ ಪ್ರಸಾರವಾಗಲಿದೆ.

    ಈ ಕುರಿತ ಪ್ರೋಮೋ ಸದ್ದು ಮಾಡ್ತಿದೆ. ಪ್ರಭುದೇವ ತಂದೆ ಮೂಗೂರು ಸುಂದರ್ (Muguru Sundar) ಎಂಟ್ರಿ ಪ್ರಮುಖ ಘಟ್ಟವಾಗಿದೆ. ಈ ಪ್ರೋಮೊದಲ್ಲಿ ಮೂಗೂರು ಸುಂದರ್ ಅವರ ಮಗನ ಹುಟ್ಟಿನ ರಹಸ್ಯವನ್ನು ರಿವೀಲ್ ಮಾಡಿದ್ದಾರೆ. ಬ್ಯಾಕ್‌ಗ್ರೌಂಡ್‌ನಲ್ಲಿ ಪ್ರಭುದೇವ ಅವರ ತಂದೆ, ಮಗ “ಅಮಾವಾಸ್ಯೆಯಲ್ಲಿ ಹುಟ್ಟಿದ್ದಾನೆ ಅಂದ್ರು” ಅಂತ ಹೇಳಿದ್ದಾರೆ.

    ಪ್ರಭುದೇವ ಯಾವುದೇ ಕಾರ್ಯಕ್ರಮಕ್ಕೆ ಹೋದರೂ, ಡ್ಯಾನ್ಸ್ ಇಲ್ಲದೆ ಹೊರ ಬರುವ ಹಾಗಿಲ್ಲ. ವೀಕ್ಷಕರ ಡಿಮ್ಯಾಂಡ್ ಕೂಡ ಇದೇನೆ. `ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲೂ ಪ್ರಭುದೇವ ಭರ್ಜರಿಯಾಗಿ ಸ್ಟೆಪ್ಸ್ ನೋಡುವುದಕ್ಕೆ ಸಿಗುತ್ತಿದೆ. ಅಲ್ಲದೆ, ತಂದೆ ಮೂಗೂರು ಸುಂದರ್ ಜೊತೆ ಹುಟ್ಟಿದರೆ `ಕನ್ನಡ ನಾಡಿನಲ್ಲಿ ಹುಟ್ಟಬೇಕು’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇದು ಕಾರ್ಯಕ್ರಮದಲ್ಲಿ ನೆನಪಿನಲ್ಲಿ ಉಳಿಯುವ ಘಳಿಗೆ ಆಗಬಹುದು. ಇದರೊಂದಿಗೆ ನಿರೂಪಕ ರಮೇಶ್ ಅರವಿಂದ್ ಜೊತೆ ಪ್ರಭುದೇವ ಮೂನ್ ವಾಕ್ ಮಾಡಿದ್ದಾರೆ. ಇದು ಕೂಡ ಪ್ರೋಮೊದ ಹೈಲೈಟ್ ಆಗಿದೆ. ಈ ಕಾರ್ಯಕ್ರಮದಲ್ಲಿ ನಿರ್ದೇಶಕ ಯೋಗರಾಜ್ ಭಟ್ (Yogaraj Bhat) ಕೂಡ ಭಾಗಿಯಾಗಿದ್ದಾರೆ.

  • Exclusive- ವೀಕೆಂಡ್ ವಿತ್ ರಮೇಶ್ 5 : ಮೊದಲ ಅತಿಥಿ ರಿಷಬ್ ಶೆಟ್ಟಿ ಅಲ್ಲ,  ಖ್ಯಾತ ಡಾನ್ಸರ್

    Exclusive- ವೀಕೆಂಡ್ ವಿತ್ ರಮೇಶ್ 5 : ಮೊದಲ ಅತಿಥಿ ರಿಷಬ್ ಶೆಟ್ಟಿ ಅಲ್ಲ, ಖ್ಯಾತ ಡಾನ್ಸರ್

    ಜೀ ಕನ್ನಡ ವಾಹಿನಿಯ ಜನಪ್ರಿಯ ಟಾಕ್ ಶೋ ವೀಕೆಂಡ್ ವಿತ್ ರಮೇಶ್ ಸೀಸನ್ 5 (Weekend with Ramesh) ಅತೀ ಶೀಘ್ರದಲ್ಲೇ ಶುರುವಾಗಲಿದೆ. ಮಾರ್ಚ್ 25ರಿಂದ ಪ್ರಸಾರವಾಗಲಿದೆ ಎನ್ನಲಾದ ಈ ಕಾರ್ಯಕ್ರಮದ ಮೊದಲ ಅತಿಥಿಯಾಗಿ ರಿಷಬ್ ಶೆಟ್ಟಿ (Rishabh Shetty) ಬರುತ್ತಾರೆ ಎಂದು ಹೇಳಲಾಗಿತ್ತು. ಈಗಾಗಲೇ ರಿಷಬ್ ಬಗ್ಗೆ ರಮೇಶ್ (Ramesh Arvind) ತಂಡ ಸಂಶೋಧನೆ ನಡೆಸಿದ್ದಾರೆ ಎಂಬ ಮಾಹಿತಿ ಇತ್ತು. ಅಲ್ಲದೇ, ರಿಷಬ್ ಮೊದಲನೇ ಎಪಿಸೋಡ್ ಗಾಗಿ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನುವ ಸುದ್ದಿಯಿತ್ತು. ಆದರೆ, ಮೊದಲ ಎಪಿಸೋಡಿನಲ್ಲಿ ಬರುವ ಅತಿಥಿ ಬದಲಾಗಿದ್ದಾರೆ.

    ನಿನ್ನೆಯಿಂದ ವೀಕೆಂಡ್ ವಿತ್ ರಮೇಶ್ ಸೀಸನ್ 5ರ ಚಿತ್ರೀಕರಣ ಶುರುವಾಗಿದ್ದು, ಮೊದಲನೇ ಅತಿಥಿಯಾಗಿ ಖ್ಯಾತ ನೃತ್ಯ ನಿರ್ದೇಶಕ, ನಿರ್ದೇಶಕ, ನಟ ಪ್ರಭುದೇವ (Prabhudeva) ಆಗಮಿಸಿದ್ದಾರೆ. ಸೀಸನ್ 5ರ ಮೊದಲ ಅತಿಥಿಯಾಗಿ ಪ್ರಭುದೇವ ಕಾಣಿಸಿಕೊಳ್ಳಲಿದ್ದಾರೆ. ನಿನ್ನೆ ಬೆಂಗಳೂರಿನ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ನಡೆದ ಚಿತ್ರೀಕರಣದಲ್ಲಿ ಪ್ರಭುದೇವ ಪಾಲ್ಗೊಂಡಿದ್ದಾರೆ. ಇದನ್ನೂ ಓದಿ: ಬರ್ತ್‌ಡೇ ಸಂಭ್ರಮದ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್

    ಮೈಸೂರು ಮೂಲದ ಪ್ರಭುದೇವ ಕನ್ನಡ, ತಮಿಳು ಮತ್ತು ಹಿಂದಿ ಸಿನಿಮಾ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು. ನಿರ್ದೇಶನ, ನಟನೆ, ನೃತ್ಯ ನಿರ್ದೇಶನ, ನಿರ್ಮಾಣ ಹೀಗೆ ಸಿನಿಮಾ ರಂಗದ ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡವರು. ಪ್ರಭುದೇವ ಅವರ ತಂದೆ, ಸಹೋದರರು ಸಿನಿಮಾ ರಂಗದಲ್ಲೇ ದುಡಿದವರು. ಅಲ್ಲದೇ, ಪ್ರಭುದೇವ ಅವರ ಬದುಕು ವರ್ಣರಂಜಿತವಾದದ್ದು. ಹಾಗಾಗಿ ಸಹಜವಾಗಿಯೇ ಇವರ ಎಪಿಸೋಡ್ ಕುತೂಹಲದಿಂದ ಕೂಡಿರಲಿದೆ.

    ಸೀಸನ್ 5ರಲ್ಲಿ ಕೇವಲ ಸೆಲೆಬ್ರಿಟಿಗಳಿಗೆ ಮಾತ್ರವಲ್ಲ, ಸಾಮಾನ್ಯ ಸಾಧಕರಿಗೂ ಅವಕಾಶ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಕ್ರಿಕೆಟ್, ರಾಜಕಾರಣಿಗಳು, ಸಿನಿಮಾ, ಕಿರುತೆರೆ, ರಂಗಭೂಮಿ ಹೀಗೆ ಬೇರೆ ಬೇರೆ ಕ್ಷೇತ್ರಗಳ ಸಾಧಕರು ಈ ಬಾರಿ ವೀಕೆಂಡ್ ಕುರ್ಚಿಯ ಮೇಲೆ ಕೂತು, ತಮ್ಮ ಕಥೆಯನ್ನು ಹೇಳಿಕೊಳ್ಳಲಿದ್ದಾರೆ. ಎಂದಿನಂತೆ ರಮೇಶ್ ಅರವಿಂದ್ ಅವರ ಮಾತಿಗೆ ಕಿವಿಯಾಗಲಿದ್ದಾರೆ.

  • ಪ್ರಭುದೇವ ನಟನೆಯ `ವೂಲ್ಫ್’ ಚಿತ್ರದಲ್ಲಿ ಪತ್ರಕರ್ತನಾದ ವಸಿಷ್ಠ ಸಿಂಹ

    ಪ್ರಭುದೇವ ನಟನೆಯ `ವೂಲ್ಫ್’ ಚಿತ್ರದಲ್ಲಿ ಪತ್ರಕರ್ತನಾದ ವಸಿಷ್ಠ ಸಿಂಹ

    ಟ ಪ್ರಭುದೇವ (Actor Prabhudeva) ಸದ್ಯ `ವೂಲ್ಫ್’ (Wolf) ಸಿನಿಮಾದಲ್ಲಿ ಬ್ಯುಸಿಯಿದ್ದಾರೆ. ಬಹುನಿರೀಕ್ಷಿತ ಈ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಕನ್ನಡದ ದೈತ್ಯ ಪ್ರತಿಭೆಗಳು ಕೂಡ ಸಾಥ್ ನೀಡಿದ್ದಾರೆ. ಈ ಕುರಿತ ಕಂಪ್ಲಿಟ್ ಡಿಟೈಲ್ಸ್ ಇಲ್ಲಿದೆ.

    ಕನ್ನಡ ನಾಡಿನ ಯುವ ನಿರ್ದೇಶಕ ವಿನೂ ವೆಂಕಟೇಶ್ (Vinoo Venkatesh) ಇದೀಗ ಪ್ರಭುದೇವ ಅವರ 60ನೇ ಚಿತ್ರ `ವೂಲ್ಫ್’ ಸಿನಿಮಾಗೆ ಡೈರೆಕ್ಷನ್ ಮಾಡ್ತಿದ್ದಾರೆ. ಮಿಸ್ಟರಿ ಕಥೆಯನ್ನ ವಿಭಿನ್ನವಾಗಿ ಹೇಳೋಕೆ ಹೊರಟಿದ್ದಾರೆ. ಪ್ರಭುದೇವ ಅವರ ಚಿತ್ರದಲ್ಲಿ ತಾರೆಯರ ದಂಡೇ ಇದೆ. ಸೂಪರ್ ಸ್ಟಾರ್ ಜೊತೆ ಕನ್ನಡದ ಪ್ರತಿಭೆ ವಸಿಷ್ಠ ಸಿಂಹ (Vasista Simha) ಕೂಡ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

    ಚಿತ್ರದಲ್ಲಿ ವಸಿಷ್ಠ ಸಿಂಹ ಅವರು ಪತ್ರಕರ್ತನಾಗಿ (Journalist) ಕಾಣಿಸಿಕೊಂಡಿದ್ದಾರೆ. ಇವರ ಪಾತ್ರ ಇಡೀ ಚಿತ್ರಕಥೆಗೆ ಮುಖ್ಯವಾಗಿರುತ್ತದೆ. ಎಂದೂ ಕಾಣಿಸಿಕೊಂಡಿರದ ಪಾತ್ರದಲ್ಲಿ ವಸಿಷ್ಠ ನಟಿಸಿದ್ದಾರೆ. ಇದನ್ನೂ ಓದಿ:ದಿನಕರ್ ತೂಗುದೀಪ್ ನಿರ್ದೇಶನದಲ್ಲಿ ʻರಾಯಲ್ʼ ಆಗಿ ಮಿಂಚಲು ವಿರಾಟ್ ರೆಡಿ

    ʻWOLFʼ ಸಿನಿಮಾದಲ್ಲಿ ನಟ ವಿಜಯ್ ಸೇತುಪತಿ ಒಂದು ಹಾಡನ್ನ ಹಾಡಿದ್ದಾರೆ. ಇದು ವಿಶೇಷವಾಗಿ ಹಾಡಿರುವ ಹಾಡು ಆಗಿದೆ. ಸದ್ಯದಲ್ಲೇ ಸಿನಿಮಾ ಬಗ್ಗೆ ಮತ್ತಷ್ಟು ಸಿಗಲಿದೆ. ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಮಾರ್ಚ್ನಲ್ಲಿ ರಿಲೀಸ್ ಮಾಡೋಕೆ ರೆಡಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ರಭುದೇವ ನಟನೆಯ ಕನ್ನಡ ಚಿತ್ರಕ್ಕೆ ವಿಜಯ್ ಸೇತುಪತಿ ಗಾಯಕ

    ಪ್ರಭುದೇವ ನಟನೆಯ ಕನ್ನಡ ಚಿತ್ರಕ್ಕೆ ವಿಜಯ್ ಸೇತುಪತಿ ಗಾಯಕ

    ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ)  ನಿರ್ಮಿಸಿರುವ, ಖ್ಯಾತ ನಟ ಪ್ರಭುದೇವ ನಾಯಕರಾಗಿ ನಟಿಸಿರುವ “wolf” ಚಿತ್ರದ ವಿಶೇಷ ಹಾಡೊಂದನ್ನು ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ ಹಾಡಿದ್ದಾರೆ. ಅಂಬರೀಶ್ ಈ ಚಿತ್ರದ ಸಂಗೀತ ನಿರ್ದೇಶಕರು.

    ಇತ್ತೀಚೆಗಷ್ಟೇ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಫಸ್ಟ್  ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದರು.  ವಿನು ವೆಂಕಟೇಶ್  ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿದೆ. ಇದನ್ನೂ ಓದಿ: ಪೊಲೀಸ್‌ ಲಾಠಿ ಏಟಿನಿಂದ ತಪ್ಪಿಸಿಕೊಳ್ಳಲು ರ‍್ಯಾಪರ್‌ನನ್ನು ತಳ್ಳಿ ಬೀಳಿಸಿದ ಫ್ಯಾನ್‌

    ಪ್ರಭುದೇವ, ಅಂಜು ಕುರಿಯನ್, ಲಕ್ಷ್ಮೀ ರೈ, ಅನಸೂಯ(ಪುಷ್ಪ ಖ್ಯಾತಿ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಮೊನ್ನೆಯಷ್ಟೇ ಈ ಸಿನಿಮಾದ ಫಸ್ಟ್ ಲುಕ್ ಅನ್ನು ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಲೋಕಾರ್ಪಣೆ ಮಾಡಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ರಭುದೇವ ನಟನೆಯ ‘wolf’ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದ ಶಿವರಾಜಕುಮಾರ್

    ಪ್ರಭುದೇವ ನಟನೆಯ ‘wolf’ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದ ಶಿವರಾಜಕುಮಾರ್

    ನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್ ನಿರ್ಮಿಸಿರುವ, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ (Prabhudeva) ನಾಯಕರಾಗಿ ನಟಿಸಿರುವ ‘wolf’ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ.  ಕರುನಾಡ ಚಕ್ರವರ್ತಿ ಶಿವರಾಜಕುಮಾರ್  (Shivaraj Kumar) ಫಸ್ಟ್ ಲುಕ್ (First Look) ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

    ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ವಿನು ವೆಂಕಟೇಶ್ (Vinu Venkatesh) ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ.  ಪ್ರಭುದೇವ, ಅಂಜು ಕುರಿಯನ್, ಲಕ್ಷ್ಮೀ ರೈ, ಅನಸೂಯ(ಪುಷ್ಪ ಖ್ಯಾತಿ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ: ಮೂರು ಮದುವೆ ಗುಟ್ಟನ್ನು ಬಿಚ್ಚಿಟ್ಟ ನಟ ಪವನ್ ಕಲ್ಯಾಣ್

    ಅಂಬರೀಶ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಅರುಳ್ ವಿನ್ಸೆಂಟ್ ಅವರ ಛಾಯಾಗ್ರಹಣವಿದೆ. ಲಾರೆನ್ಸ್ ಕಿಶೋರ್ ಸಂಕಲನ, ಪ್ರದೀಪ್ ದಿನೇಶ್ ಸಾಹಸ ನಿರ್ದೇಶನ, ಮಣಿ ಮೌಳಿ ಕಲಾ ನಿರ್ದೇಶನ ಹಾಗೂ ಗಣೇಶ್, ಶ್ರೀಧರ್, ಭೂಪತಿ ರಾಜ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಪ್ತಸಾದ್ ನಿರ್ಮಾಣ ಮೇಲ್ವಿಚಾರಣೆ ಹಾಗೂ ಶಂಕರ್ ಲಿಂಗಂ, ಮೈಸೂರು ಸುರೇಶ್ ನಿರ್ಮಾಣ ನಿರ್ವಹಣೆ  ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ರಭುದೇವ ಅಭಿನಯದ ‘wolf’ ಸಿನಿಮಾದ ಶೂಟಿಂಗ್ ಮುಕ್ತಾಯ

    ಪ್ರಭುದೇವ ಅಭಿನಯದ ‘wolf’ ಸಿನಿಮಾದ ಶೂಟಿಂಗ್ ಮುಕ್ತಾಯ

    ನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ)  ನಿರ್ಮಸಿರುವ, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ (Prabhudeva) ನಾಯಕರಾಗಿ ನಟಿಸಿರುವ “wolf” ಚಿತ್ರದ ಚಿತ್ರೀಕರಣ (shooting) ಮುಕ್ತಾಯವಾಗಿದೆ. ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಪಾಂಡಿಚೇರಿ, ಚೆನೈ, ಬೆಂಗಳೂರು, ಅಂಡಮಾನ್, ನಿಕೋಬಾರ್ ಮುಂತಾದ ಕಡೆ 65 ದಿನಗಳ ಚಿತ್ರೀಕರಣ ನಡೆದಿದೆ.

    ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿನು ವೆಂಕಟೇಶ್ (Vinu Venkatesh) ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಪ್ರಭುದೇವ, ಅಂಜು ಕುರಿಯನ್, ಲಕ್ಷ್ಮೀ ರೈ, ಅನಸೂಯ(ಪುಷ್ಪ ಖ್ಯಾತಿ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ: ಬಾಯ್‌ಫ್ರೆಂಡ್ ಜಾಕಿ ಭಗ್ನಾನಿ ಬರ್ತ್‌ಡೇಗೆ ನಟಿ ರಾಕುಲ್ ಲವ್ಲಿ ವಿಶ್

    ಅಂಬರೀಶ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಅರುಳ್ ವಿನ್ಸೆಂಟ್ ಅವರ ಛಾಯಾಗ್ರಹಣವಿದೆ. ಲಾರೆನ್ಸ್ ಕಿಶೋರ್ ಸಂಕಲನ, ಪ್ರದೀಪ್ ದಿನೇಶ್ ಸಾಹಸ ನಿರ್ದೇಶನ, ಮಣಿ ಮೌಳಿ ಕಲಾ ನಿರ್ದೇಶನ ಹಾಗೂ ಗಣೇಶ್, ಶ್ರೀಧರ್, ಭೂಪತಿ ರಾಜ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಪ್ತಸಾದ್ ನಿರ್ಮಾಣ ಮೇಲ್ವಿಚಾರಣೆ ಹಾಗೂ ಶಂಕರ್ ಲಿಂಗಂ, ಮೈಸೂರು ಸುರೇಶ್ ನಿರ್ಮಾಣ ನಿರ್ವಹಣೆ “wolf” ಚಿತ್ರದ ನಿರ್ಮಾಣ ನಿರ್ವಾಹಕರು.

    Live Tv
    [brid partner=56869869 player=32851 video=960834 autoplay=true]

  • ಪುನೀತ್ ಪರ್ವ ಕಾರ್ಯಕ್ರಮದಲ್ಲಿ ರಮ್ಯಾ, ಪ್ರಭುದೇವ ಡಾನ್ಸ್

    ಪುನೀತ್ ಪರ್ವ ಕಾರ್ಯಕ್ರಮದಲ್ಲಿ ರಮ್ಯಾ, ಪ್ರಭುದೇವ ಡಾನ್ಸ್

    ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಪುನೀತ್ ಪರ್ವ ಕಾರ್ಯಕ್ರಮದಲ್ಲಿ ರಮ್ಯಾ (Ramya), ಪ್ರಭುದೇವ (Prabhudeva) ಸೇರಿದಂತೆ ಅನೇಕ ತಾರೆಯರು ನೃತ್ಯ (Dance) ಮಾಡಲಿದ್ದಾರೆ. ಪುನೀತ್ ರಾಜ್ ಕುಮಾರ್ ನಟನೆಯ ಸಿನಿಮಾಗಳ ಗೀತೆಗಳಿಗೆ ತಾರೆಯರು ಹೆಜ್ಜೆ ಹಾಕಲಿದ್ದಾರೆ. ಈಗಾಗಲೇ ಅರಮನೆ ಮೈದಾನ ಸಿದ್ಧಗೊಂಡಿದ್ದು, ಕನ್ನಡ ಸಿನಿಮಾ ರಂಗದ ಬಹುತೇಕ ತಾರೆಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ.

    ಖ್ಯಾತಗಾಯಕರಾದ ವಿಜಯ್ ಪ್ರಕಾಶ್, ಗುರುಕಿರಣ್ ಸೇರಿದಂತೆ ಅನೇಕ ಗಾಯಕರು ಈ ಕಾರ್ಯಕ್ರಮದಲ್ಲಿ ಪುನೀತ್ ನಟನೆಯ ಹಾಡುಗಳನ್ನು ಹೇಳಲಿದ್ದಾರೆ. ಐದುನೂರಕ್ಕೂ ಹೆಚ್ಚು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುವ ಸಾಧ್ಯತೆ ಇದೆ. ಪುನೀತ್ ರಾಜ್ ಕುಮಾರ್ ಅವರನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುವ ಬಹೃತ್ ಸಮಾರಂಭ ಇದಾಗಿದೆ. ಇದನ್ನೂ ಓದಿ:ಆಮದು ಮಾಡಿಕೊಂಡ ಧರ್ಮಗಳು ಎಂದು ಚೇತನ್ ಮತ್ತೆ ಕಿಡಿ

    ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಪುನೀತ್ ರಾಜ್ ಕುಮಾರ್ (Puneeth Rajkumar) ನೆನಪಿನಲ್ಲಿ ‘ಪುನೀತ್ ಪರ್ವ’ (Puneeth Parva) ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಪುನೀತ್ ನಟನೆಯ ಕಟ್ಟಕಡೆಯ ಡಾಕ್ಯುಮೆಂಟರಿ ಮಾದರಿಯ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಕೂಡ ಇದಾಗಿದ್ದು, ಭಾರತೀಯ ಸಿನಿಮಾ ರಂಗದ ಅನೇಕ ದಿಗ್ಗಜರು ಸಮಾರಂಭದಲ್ಲಿ ಭಾಗಿ ಆಗುತ್ತಿದ್ದಾರೆ. ಅಲ್ಲದೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಲಾಗಿದೆ.

    ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ಗಣ್ಯರು ಮಾತ್ರವಲ್ಲ, 40 ಸಾವಿರಕ್ಕೂ ಅಧಿಕ ಅಭಿಮಾನಿಗಳು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿ ಆಗಿರುವುದರಿಂದ ಪೊಲೀಸ್ ಬಂದೋಬಸ್ತ್ ಕೂಡ ಮಾಡಿಕೊಳ್ಳಲಾಗಿದೆ. ಸಂಜೆ 6 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭವು ಸರಾಗವಾಗಿ ನಡೆಯುವಂತೆ ನೋಡಿಕೊಳ್ಳುವುದಕ್ಕಾಗಿ ಬೆಂಗಳೂರು ಪೊಲೀಸರು ಭಾರೀ ಸಿದ್ದತೆಯನ್ನೇ ಮಾಡಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪುನೀತ್ ರಾಜ್ ಕುಮಾರ್ ಕಂಡ ನಾಲ್ಕು ಕನಸುಗಳಲ್ಲಿ ಈಡೇರಿದ್ದು ಎಷ್ಟು? ರಾಘವೇಂದ್ರ ರಾಜ್ ಕುಮಾರ್ ಬಿಚ್ಚಿಟ್ಟ ರಹಸ್ಯ

    ಪುನೀತ್ ರಾಜ್ ಕುಮಾರ್ ಕಂಡ ನಾಲ್ಕು ಕನಸುಗಳಲ್ಲಿ ಈಡೇರಿದ್ದು ಎಷ್ಟು? ರಾಘವೇಂದ್ರ ರಾಜ್ ಕುಮಾರ್ ಬಿಚ್ಚಿಟ್ಟ ರಹಸ್ಯ

    ಸಾಮಾನ್ಯರು ಅಸಾಮಾನ್ಯ ಕನಸುಗಳನ್ನು ಕಾಣುವುದು ಸಹಜ. ಆದರೆ, ಸೂಪರ್ ಸ್ಟಾರ್ ನಟರೊಬ್ಬರು ನಾಲ್ಕು ಕನಸುಗಳನ್ನು ಕಂಡು, ಒಂದೇ ಒಂದು ಕನಸನ್ನು ಈಡೇರಿಸಿಕೊಂಡರು ಅನ್ನುವುದು ಅಚ್ಚರಿ. ಈ ವಿಷಯವನ್ನು ಸ್ವತಃ ಸ್ಟಾರ್ ನಟರ ಸಹೋದರರೇ ಹೇಳಿಕೊಂಡಿದ್ದು, ಆ ಕನಸು ಈಡೇರಿದ ಕುರಿತು ಲಕ್ಕಿ ಮ್ಯಾನ್ ಸಿನಿಮಾದ ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡಿದ್ದಾರೆ.

    ಅಗಲಿದ ಚೇತನ ಪುನೀತ್ ರಾಜ್ ಕುಮಾರ್ ಅವರು ಏನೆಲ್ಲ ಸಾಧನೆ ಮಾಡಿದ್ದರೂ, ಅವರೂ ನಾಲ್ಕು ಕನಸುಗಳನ್ನು ಕಂಡಿದ್ದರಂತೆ. ಆ ನಾಲ್ಕರಲ್ಲಿ ಒಂದೇ ಒಂದು ಕನಸು ಈಡೇರಿದೆ ಎಂದು ರಾಘವೇಂದ್ರ ರಾಜ್ ಕುಮಾರ್ ಈ ವಿಷಯವನ್ನು ಹಂಚಿಕೊಂಡರು. ನಾಲ್ಕು ಕನಸುಗಳಲ್ಲಿ ಪ್ರಭುದೇವ ಅವರ ಜೊತೆ ಡಾನ್ಸ್ ಮಾಡಬೇಕು ಎನ್ನುವುದು ಅಪ್ಪ ಆಸೆ ಆಗಿತ್ತಂತೆ. ಅದನ್ನು ಲಕ್ಕಿ ಮ್ಯಾನ್ ಸಿನಿಮಾದ ಮೂಲಕ ಅಪ್ಪು ಈಡೇರಿಸಿಕೊಂಡಿದ್ದಾರೆ. ಇದನ್ನೂ ಓದಿ:ಎರಡನೇ ಮದುವೆ ವದಂತಿಯ ಬಗ್ಗೆ ಮೇಘನಾ ರಾಜ್ ಸ್ಪಷ್ಟನೆ

    ಹಾಗಾದರೆ, ಅಪ್ಪು ಕಂಡ ಇತರ ಕನಸುಗಳು ಅಂದರೆ, ತಾವು ಸ್ಟಾರ್ ನಟ ಆದ ನಂತರ ತಂದೆಯೊಂದಿಗೆ ನಟಿಸುವ ಆಸೆ ಹೊಂದಿದ್ದರಂತೆ. ಮಣಿರತ್ನಂ ಅವರು ನಿರ್ದೇಶನದಲ್ಲಿ ಕೆಲಸ ಮಾಡಲು ಬಯಸಿದ್ದರಂತೆ ಮತ್ತು ಅಪ್ಪು ಚಿತ್ರಕ್ಕೆ ಎ.ಆರ್.ರೆಹಮಾನ್ ಅವರು ಸಂಗೀತ ನಿರ್ದೇಶನ ಮಾಡಬೇಕು ಎಂದು ಅವರು ಕನಸು ಕಂಡಿದ್ದರು. ಅಲ್ಲದೇ ಪ್ರಭುದೇವ ಅವರ ಜೊತೆ ಡಾನ್ಸ್ ಮಾಡುವಂತಹ ಅವಕಾಶಕ್ಕೆ ಕಾದಿದ್ದರು. ಅದೊಂದು ಇದೀಗ ಈಡೇರಿದೆ.

    Live Tv
    [brid partner=56869869 player=32851 video=960834 autoplay=true]

  • ಶಿವಣ್ಣ -ಪ್ರಭುದೇವ ಹೊಸ ಪ್ರಾಜೆಕ್ಟ್‌ಗೆ ಈ ನಾಯಕಿಯರು ಫಿಕ್ಸ್

    ಶಿವಣ್ಣ -ಪ್ರಭುದೇವ ಹೊಸ ಪ್ರಾಜೆಕ್ಟ್‌ಗೆ ಈ ನಾಯಕಿಯರು ಫಿಕ್ಸ್

    ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಸೌಂಡ್ ಮಾಡುತ್ತಿರುವ `ಗಾಳಿಪಟ -2′ ಸಿನಿಮಾದ ಸಕ್ಸಸ್ ನಂತರ ನಿರ್ದೇಶಕ ಯೋಗರಾಜ್ ಭಟ್, ಶಿವಣ್ಣ ಮತ್ತು ಪ್ರಭುದೇವ ಕಾಂಬಿನೇಷನ್ ಸಿನಿಮಾಗೆ ಡೈರೆಕ್ಷನ್ ಮಾಡಲು ಸಜ್ಜಾಗಿದ್ದಾರೆ. ಈ ಸ್ಟಾರ್ ನಟರಿಗೆ ನಾಯಕಿಯರನ್ನ ಕೂಡ ಯೋಗರಾಜ್ ಭಟ್ ಹುಡುಕಿದ್ದಾರೆ.

    yogaraj bhat (3)ಇತ್ತೀಚೆಗಷ್ಟೇ ಶಿವಣ್ಣ ಮತ್ತು ಪ್ರಭುದೇವ ಕಾಂಬಿನೇಷನ್‌ನಲ್ಲಿ ನಿರ್ದೇಶನ ಮಾಡುವುದಾಗಿ ಭಟ್ರು ಅಧಿಕೃತವಾಗಿ ಹೇಳಿದ್ದರು. ಇದೀಗ ಈ ಸಿನಿಮಾಗಾಗಿ ತೆರೆಮರೆಯಲ್ಲಿ ಭರ್ಜರಿಯಾಗಿ ತಯಾರಿ ನಡೆಯುತ್ತಿದೆ. ಶಿವರಾಜ್‌ಕುಮಾರ್ ಮತ್ತು ಪ್ರಭುದೇವ ಚಿತ್ರಕ್ಕೆ ಚಂದನವನದ ಪ್ರತಿಭಾವಂತ ನಾಯಕಿಯರನ್ನೇ ಭಟ್ರು ಹುಡುಕಿದ್ದಾರೆ.

    `ಕುಲದಲ್ಲಿ ಕೀಳ್ಯಾವುದೋ’ ತಾತ್ಕಲಿಕ ಟೈಟಲ್‌ನ ಈ ಚಿತ್ರದಲ್ಲಿ ನಾಯಕಿಯರಾಗಿ ರಾಜಕುಮಾರ ಮತ್ತು ಜೇಮ್ಸ್ ಚಿತ್ರದ ನಾಯಕಿ ಪ್ರಿಯಾ ಆನಂದ್ ಶಿವಣ್ಣಗೆ ಜೋಡಿಯಾಗಿ ಕಾಣಿಸಿಕೊಂಡ್ರೆ, ಇತ್ತ ಪ್ರಭುದೇವಗೆ ನಾಯಕಿಯಾಗಿ ಸಖತ್ ಬ್ಯೂಟಿ ನಿಶ್ವಿಕಾ ನಾಯ್ಡು ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ:ತಂದೆಯ ಹುಟ್ಟು ಹಬ್ಬದ ನೆನಪಿಗೆ ಹುಟ್ಟೂರಿನ ಆಸ್ಪತ್ರೆಗೆ 50 ಲಕ್ಷ ರೂ. ನೀಡಿದ ಪ್ರಶಾಂತ್ ನೀಲ್

    ಬಿಗ್ ಸ್ಟಾರ್‌ಗಳಿರುವ ಈ ಪ್ರಾಜೆಕ್ಟ್ ಮೇಲೆ ದೊಡ್ಡ ಮಟ್ಟದಲ್ಲಿ ಅಭಿಮಾನಿಗಳಿಗೆ ನಿರೀಕ್ಷೆಯಿದೆ. ಇದೇ ಆಗಸ್ಟ್ 20ಕ್ಕೆ ಸಿನಿಮಾ ಕೂಡ ಸೆಟ್ಟೇರಲಿದೆ. ಮುಂದಿನ ದಿನಗಳಲ್ಲಿ ಈ ಚಿತ್ರ ಹೇಗೆ ಕಮಾಲ್ ಮಾಡಬಹುದು ಅಂತಾ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರಭುದೇವ ನಟನೆಯ ಪ್ಯಾನ್ ಇಂಡಿಯಾ ಚಿತ್ರದಲ್ಲಿ `ಬಾಹುಬಲಿ’ ನಟಿ

    ಪ್ರಭುದೇವ ನಟನೆಯ ಪ್ಯಾನ್ ಇಂಡಿಯಾ ಚಿತ್ರದಲ್ಲಿ `ಬಾಹುಬಲಿ’ ನಟಿ

    ಇಂಡಿಯನ್ ಮೈಕಲ್ ಜಾಕ್ಸನ್ ಅಂತಲೇ ಫೇಮಸ್ ಆಗಿರುವ ಪ್ರಭುದೇವ ಸಂದೇಶ್ ಪ್ರೊಡಕ್ಷನ್ ಸಂಸ್ಥೆಯ ಮೂಲಕ ಮತ್ತೆ ಕನ್ನಡ ಸಿನಿಮಾಗೆ ಬಣ್ಣ ಹಚ್ತಿದ್ದಾರೆ. ಈ ಪ್ಯಾನ್ ಇಂಡಿಯಾ ಚಿತ್ರಕ್ಕೆ ಸ್ಟಾರ್ ನಟ ಪ್ರಭುದೇವ ಜೊತೆ ದಕ್ಷಿಣ ಭಾರತದ ಖ್ಯಾತ ನಟಿ ರಮ್ಯಾ ಕೃಷ್ಣ ಕೂಡ ಕಾಣಿಸಿಕೊಳ್ತಿದ್ದಾರೆ.

     

    View this post on Instagram

     

    A post shared by Sandesh Nagraj (@sandesh_nagaraju)

    ದಕ್ಷಿಣ ಭಾರತದ ಸ್ಟಾರ್ ನಟ ಪ್ರಭುದೇವ ಮತ್ತೆ ಕನ್ನಡ ಸಿನಿಮಾಗೆ ಬಣ್ಣ ಹಚ್ಚಲು ರೆಡಿಯಾಗಿದ್ದಾರೆ. ಸಂದೇಶ್ ಪ್ರೊಡಕ್ಷನ್‌ನ 31ನೇ ಚಿತ್ರ ಇದಾಗಿದ್ದು, ಕನ್ನಡ, ತೆಲುಗಿ, ತಮಿಳು, ಹಿಂದಿ ಮತ್ತು ಮಲಯಾಳಂನಲ್ಲಿ ಈ ಚಿತ್ರ ತೆರೆ ಕಾಣಲಿದೆ. `ಬಾಹುಬಲಿ’ ಖ್ಯಾತಿಯ ಶಿವಗಾಮಿ ಅಲಿಯಾಸ್ ನಟಿ ರಮ್ಯಾ ಕೃಷ್ಣ ಕೂಡ ಈ ಚಿತ್ರಕ್ಕೆ ಸಾಥ್ ನೀಡ್ತಿದ್ದಾರೆ. ಪ್ರಭುದೇವ ಜೊತೆ ಪ್ರಮುಖ ಪಾತ್ರಕ್ಕೆ ರಮ್ಯಾ ಕೃಷ್ಣ ಬಣ್ಣ ಹಚ್ಚಲಿದ್ದಾರೆ. ಸಾಕಷ್ಟು ಸ್ಟಾರ್ ಕಲಾವಿದರ ದಂಡೇ ಈ ಚಿತ್ರದಲ್ಲಿರಲಿದೆ. ಇದನ್ನೂ ಓದಿ: ಮಾಲ್ಡೀವ್ಸ್‌ನಲ್ಲಿ ತನ್ನ ಹುಡುಗನ ಜೊತೆ ಕಾಣಿಸಿಕೊಂಡ `ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಚಿನ್ನು

    ವಿನಿ ವೆಂಕಟೇಶ್ ನಿರ್ದೇಶನದ ಚಿತ್ರದಲ್ಲಿ ಡ್ಯಾನ್ಸ್ ಕಿಂಗ್ ಪ್ರಭುದೇವ ಎಂದೂ ಮಾಡಿರದ ಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರ ಜುಲೈ 5ರಿಂದ ಶುರುವಾಗಲಿದೆ. ಅಂಡಮಾನ್, ನಿಕೋಬಾರ್, ಬೆಂಗಳೂರು ಸೇರಿದಂತೆ ಹಲವಡೆ ಚಿತ್ರೀಕರಣ ನಡೆಯಲಿದೆ. ಇನ್ನು ಸದ್ಯದಲ್ಲೇ ಚಿತ್ರದ ಟೈಟಲ್ ಕೂಡ ರಿವೀಲ್ ಮಾಡಲಿದೆ ಚಿತ್ರತಂಡ.