Tag: ಪ್ರಮಾಣವಚನ ಕಾರ್ಯಕ್ರಮ

  • ಮೋದಿ ಪ್ರಮಾಣವಚನ ಸಮಾರಂಭಕ್ಕೆ ಹಾಜರಾಗಲ್ಲ – ಯೂಟರ್ನ್ ಹೊಡೆದ ದೀದಿ

    ಮೋದಿ ಪ್ರಮಾಣವಚನ ಸಮಾರಂಭಕ್ಕೆ ಹಾಜರಾಗಲ್ಲ – ಯೂಟರ್ನ್ ಹೊಡೆದ ದೀದಿ

    ಕೋಲ್ಕತ್ತಾ: ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭಕ್ಕೆ ಹಾಜರಾಗುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿ ಯೂಟರ್ನ್ ಹೊಡೆದಿದ್ದಾರೆ.

    ಮಮತಾ ಬ್ಯಾನರ್ಜಿ ಅವರು ಮಂಗಳವಾರ ಮೋದಿಯವರ ಪ್ರಮಾಣವಚನ ಸಮಾರಂಭಕ್ಕೆ ಹಾಜರಾಗುತ್ತೇನೆ ಎಂದು ತಿಳಿಸಿದ್ದರು. ಆದರೆ ಈಗ ಬರುವುದಕ್ಕೆ ಸಾಧ್ಯವಾಗುವುದಿಲ್ಲ ಎಂದು ಪತ್ರ ಬರೆದಿದ್ದಾರೆ.

    ಪ್ರಧಾನಿ ಹುದ್ದೆ ಅಲಂಕರಿಸುತ್ತಿರುವ ನಿಮಗೆ ಧನ್ಯವಾದಗಳು ನರೇಂದ್ರ ಮೋದಿ ಜೀ. ನಿಮ್ಮ ಪ್ರಮಾಣವಚನ ಕಾರ್ಯಕಾರ್ಯಕ್ರಮಕ್ಕೆ ಹಾಜರಾಗಲು ನಿರ್ಧರಿಸಿದ್ದೆ. ಆದರೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ದುರುದ್ದೇಶದಿಂದ 54 ಜನರನ್ನು ಹತ್ಯೆ ಮಾಡಲಾಗಿದೆ ಎಂದು ಬಿಜೆಪಿಯವರು ಗಂಭೀರವಾಗಿ ಆರೋಪಿಸುತ್ತಿದ್ದಾರೆ. ಕಳೆದ ಒಂದು ಗಂಟೆಯಿಂದ ಮಾಧ್ಯಮಗಳಲ್ಲಿ ಇದೇ ಸುದ್ದಿ ಕೇಳಿಬರುತ್ತಿದೆ. ಇದು ಶುದ್ಧ ಸುಳ್ಳು. ರಾಜಕೀಯ ಹಿತಾಸಕ್ತಿಗಾಗಿ ಯಾವುದೇ ಕೊಲೆ ನಡೆದಿಲ್ಲ. ವೈಯಕ್ತಿಕ ವ್ಯಾಜ್ಯ, ಕೌಟುಂಬಿಕ ಕಲಹದಿಂದಾಗಿ ಕೊಲೆಗಳು ನಡೆದಿದೆ ಎಂದು ಮಮತಾ ಬ್ಯಾನರ್ಜಿ ಪತ್ರದಲ್ಲಿ ತಿಳಿಸಿದ್ದಾರೆ.

    ಬಿಜೆಪಿಯ ಆರೋಪದಿಂದಾಗಿ ನಾನು ನಿಮ್ಮ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ಇದಕ್ಕೂ ಮುನ್ನ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರು, ಮಮತಾ ಬ್ಯಾನರ್ಜಿ ಯಾಕೆ ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭಕ್ಕೆ ಯಾಕೆ ಹಾಜರಾಗುತ್ತಿದ್ದಾರೆ ಎಂದು ರಿವೀಲ್ ಮಾಡಿದ್ದರು.

    ಮಾಧ್ಯಮಗಳ ಜೊತೆಗೆ ಇಂದು ಮಾತನಾಡಿದ ಅವರು, ಮಮತಾ ಬ್ಯಾನರ್ಜಿ ಅವರು ಸೋದರಳಿಯ, ಟಿಎಂಸಿ ಪಕ್ಷದ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ರಾಜಕೀಯ ಉಳಿವಿಗಾಗಿ ಶ್ರಮಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಮೋದಿಯವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಹಾಜರಾಗಲು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

    ಅರ್ಜುನ್ ಸಿಂಗ್ ತೃಣಮೂಲ ಕಾಂಗ್ರೆಸ್‍ನ (ಟಿಎಂಸಿ) ನಾಯಕರಾಗಿದ್ದರು. ಅವರು ಭಟ್ಟರಾ ವಿಧಾನಸಭಾ ಕ್ಷೇತ್ರದಿಂದ ನಿರಂತರವಾಗಿ ನಾಲ್ಕು ಬಾರಿ ಆಯ್ಕೆಯಾಗಿದ್ದರು. ಆದರೆ ಈ ಬಾರಿ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಈ ಮೂಲಕ ಬಾರ್ರಾಕ್ಪೋರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

    ಮಮತಾ ಬ್ಯಾನರ್ಜಿ ಅವರು ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿ, ಮೋದಿಯವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಮಾತನಾಡಿದ್ದೇನೆ. ಇದು ಪ್ರಮಾಣವಚನ ಕಾರ್ಯಕ್ರಮವಾಗಿದ್ದರಿಂದ ಹಾಜರಾಗಲು ಯೋಚಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದರು.

    2014ರ ಲೋಕಸಭಾ ಚುನಾವಣೆ ವೇಳೆ ಪಶ್ಚಿಮ ಬಂಗಾಳದ 42 ಕ್ಷೇತ್ರಗಳ ಪೈಕಿ ಕೇವಲ 2 ಕ್ಷೇತ್ರಗಳಲ್ಲಿ ಬಿಜೆಪಿ ಜಯ ಗಳಿಸಿತ್ತು. ಆದರೆ ಈ ಬಾರಿ ಪಶ್ಚಿಮ ಬಂಗಾಳ ಹಾಗೂ ಉತ್ತರ ಪ್ರದೇಶದ ಮೇಲೆ ಹೆಚ್ಚು ಗಮನ ಕೇಂದ್ರಿಕರಿಸಿತ್ತು. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೀದಿ ನಾಡಿನಲ್ಲಿ 17 ಬೃಹತ್ ಸಮಾವೇಶ ಕೈಗೊಂಡಿದ್ದರು. ಎಲ್ಲ ಪ್ರಯತ್ನಗಳ ಮೂಲಕ ಬಿಜೆಪಿಯು 18 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. 2014ರಲ್ಲಿ 34 ಕ್ಷೇತ್ರಗಳಲ್ಲಿ ಜಯ ಕಂಡಿದ್ದ ಟಿಎಂಸಿ ಈ ಬಾರಿ 22 ಸ್ಥಾನಕ್ಕೆ ಕುಸಿದಿದೆ.

    ಲೋಕಸಭಾ ಚುನಾವಣೆ ಬಳಿಕ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಸರ್ಕಾರ ಬೀಳಿಸಲು ಆಪರೇಷನ್ ಕಮಲ ಭಾರೀ ಸದ್ದು ಮಾಡುತ್ತಿದೆ. ಈ ಮೂಲಕ ಟಿಎಂಸಿಯ ಇಬ್ಬರು ಶಾಸಕರು ಹಾಗೂ 50 ಜನ ಕೌನ್ಸಿಲರ್ ಗಳು ಮಂಗಳವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

  • ಮೋದಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಹಾಜರಾಗುತ್ತೇನೆ: ಮಮತಾ ಬ್ಯಾನರ್ಜಿ

    ಮೋದಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಹಾಜರಾಗುತ್ತೇನೆ: ಮಮತಾ ಬ್ಯಾನರ್ಜಿ

    ಕೋಲ್ಕತ್ತಾ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 30ರಂದು ನಡೆಯಲಿರುವ ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಹಾಜರಾಗುತ್ತೇನೆ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

    ಕೋಲ್ಕತ್ತಾದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಮೋದಿಯವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಮಾತನಾಡಿದ್ದೇನೆ. ಇದು ಪ್ರಮಾಣವಚನ ಕಾರ್ಯಕ್ರಮವಾಗಿದ್ದರಿಂದ ಹಾಜರಾಗಲು ಯೋಚಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

    ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆದರೆ ಈಗ ರಾಜಕೀಯ ವೈರತ್ವ ಮರೆತು ಪ್ರಮಾಣವಚನ ಕಾರ್ಯಕ್ರಮಕ್ಕೆ ಆಮಂತ್ರಣ ನೀಡಿದ್ದಾರೆ.

    ಸಿಎಂ ಕುಮಾರಸ್ವಾಮಿ ಅವರಿಗೂ ಇಂದು ಆಮಂತ್ರಣ ತಲುಪಿದೆ. ಆದರೆ ಕಾರ್ಯಕ್ರಮಕ್ಕೆ ಹಾಜರಾಗುವ ಕುರಿತು ಜೆಡಿಎಸ್ ವರಿಷ್ಠ, ತಂದೆ ಎಚ್.ಡಿ.ದೇವೇಗೌಡರ ಜೊತೆಗೆ ಸಿಎಂ ಚರ್ಚೆ ಮಾಡಲಿದ್ದಾರೆ. ಹೀಗಾಗಿ ನಾಳೆ ನಿರ್ಧಾರ ತಿಳಿಸಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    ಬಿಜೆಪಿಯು 2014ರ ಲೋಕಸಭಾ ಚುನಾವಣೆ ವೇಳೆ ಪಶ್ಚಿಮ ಬಂಗಾಳದ 42 ಕ್ಷೇತ್ರಗಳ ಪೈಕಿ ಕೇವಲ 2 ಕ್ಷೇತ್ರಗಳಲ್ಲಿ ಜಯ ಗಳಿಸಿತ್ತು. ಆದರೆ ಈ ಬಾರಿ ಪಶ್ಚಿಮ ಬಂಗಾಳ ಹಾಗೂ ಉತ್ತರ ಪ್ರದೇಶದ ಮೇಲೆ ಹೆಚ್ಚು ಗಮನ ಕೇಂದ್ರಿಕರಿಸಿತ್ತು. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೀದಿ ನಾಡಿನಲ್ಲಿ 17 ಬೃಹತ್ ಸಮಾವೇಶ ಕೈಗೊಂಡಿದ್ದರು. ಎಲ್ಲ ಪ್ರಯತ್ನಗಳ ಮೂಲಕ ಬಿಜೆಪಿಯು 18 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. 2014ರಲ್ಲಿ 34 ಕ್ಷೇತ್ರಗಳಲ್ಲಿ ಜಯ ಕಂಡಿದ್ದ ಟಿಎಂಸಿ ಈ ಬಾರಿ 22 ಸ್ಥಾನಕ್ಕೆ ಕುಸಿದಿದೆ.

    ಲೋಕಸಭಾ ಚುನಾವಣೆ ಬಳಿಕ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಸರ್ಕಾರ ಬೀಳಿಸಲು ಆಪರೇಷನ್ ಕಮಲ ಭಾರೀ ಸದ್ದು ಮಾಡುತ್ತಿದೆ. ಈ ಮೂಲಕ ಟಿಎಂಸಿಯ ಇಬ್ಬರು ಶಾಸಕರು ಹಾಗೂ 50 ಜನ ಕೌನ್ಸಿಲರ್ ಗಳು ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.