Tag: ಪ್ರಮೋದ್ ಮುತಾಲಿಕ

  • ಹಿಜಬ್ ಮಾನಸಿಕತೆ ಮೋಸ್ಟ್ ಡೇಂಜರಸ್: ಪ್ರಮೋದ್ ಮುತಾಲಿಕ್

    ಹಿಜಬ್ ಮಾನಸಿಕತೆ ಮೋಸ್ಟ್ ಡೇಂಜರಸ್: ಪ್ರಮೋದ್ ಮುತಾಲಿಕ್

    ಬೆಳಗಾವಿ : ಹಿಜಬ್ ಪ್ರಕರಣ ಎರಡು ತಿಂಗಳಿನಿಂದ ನಡೆಯುತ್ತಿದೆ. ಆಗಲೇ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದರೆ ರಾಜ್ಯ ವ್ಯಾಪ್ತಿ ವಿಸ್ತಾರ ಆಗುತ್ತಿರಲಿಲ್ಲ ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ

    ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಜಬ್ ಬಗ್ಗೆ ನಿಮಗೆ ಹಕ್ಕು ಸ್ವಾತಂತ್ರ್ಯ ಇರಬಹುದು. ಕಾಲೇಜಿನ ಹೊರಗಡೆ ಸ್ವತಂತ್ರವಾಗಿ ಇರಬಹುದು. ಆದರೆ ಕಾಲೇಜಿನ ನೀತಿ ನಿಯಮ ಪಾಲಿಸಬೇಕು. ಕಾಲೇಜಿನ ಆವರಣದಲ್ಲಿ ಇದ್ದರೆ ಕಾಲೇಜು ನಿಯಮದಲ್ಲಿರಬೇಕು. ಅಲ್ಲಿ ಹಿಜಬ್, ಬುರ್ಖಾ ಹಾಕುತ್ತೇನೆ ಅಂದರೆ ನಡೆಯುವುದಿಲ್ಲ. ಮುಸ್ಲಿಂ ವಿದ್ಯಾರ್ಥಿನಿಯರ ಹಿಂದೆ ಎಸ್.ಡಿ.ಪಿ.ಐ ಮತ್ತು ಪಿಎಫ್‍ಐ, ಎಂಐಎಂ ಸಂಘಟನೆ ಇದೆ. ಇವರ ನೀಚ ಕೃತ್ಯಕ್ಕೆ ವಿದ್ಯಾರ್ಥಿನಿಯರು ಬಲಿಯಾಗುತ್ತಿದ್ದಾರೆ. ಶಿಕ್ಷಣದಲ್ಲಿ ಇಸ್ಲಾಮೀಕರಣ ಮಾಡಲಾಗುತ್ತಿದೆ. ಸರ್ಕಾರ ಇದಕ್ಕೆ ಅವಕಾಶ ಮಾಡಿಕೊಡಬಾರದು. ಇನ್ನೂ ಆರು ಜನ ವಿದ್ಯಾರ್ಥಿನಿಯರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾಳೆಯಿಂದ ಥಿಯೇಟರ್‌ ಹೌಸ್‌ ಫುಲ್‌- ಸರ್ಕಾರದಿಂದ ಅನುಮತಿ

    ಹಿಜಬ್ ಮಾನಸಿಕತೆ ಮೋಸ್ಟ್ ಡೇಂಜರಸ್ ಇದು ಟೆರರಿಸ್ಟ್ ಮಾನಸಿಕತೆ ಇಸ್ಲಾಮೀಕರಣ ಇದು ನಡೆಯಲ್ಲ. ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಮಸೀದಿ ನಿರ್ಮಾಣ, ಮುಸ್ಲಿಂ ಹೆಚ್ಚು ಇರುವ ಗ್ರಾಮದಲ್ಲಿ ಹಿಂದೂ ಅಂಗನವಾಡಿ ಶಿಕ್ಷಕಿಗೆ ವಿರೋಧಿಸಲಾಗಿದೆ. ಕೇಸರೀಕರಣ ಸಹ ಸರಿಯಲ್ಲ. ಹಿಜಬ್ ಹಾಕಿದ್ದರಿಂದ ಕೇಸರಿ ಶಾಲು ಹಾಕಲಾಗಿದೆ. ಹಿಂದೂಗಳಲ್ಲಿ ಈ ರೀತಿಯ ಮಾನಸಿಕತೆ ಇಲ್ಲ. ಏಕತೆಯ ಮನೋಭಾವ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಕ್ಸಲ್ ನಿಗ್ರಹ ದಳ ಸಿಬ್ಬಂದಿಗೆ ವಿಶೇಷ ಆಹಾರ ಭತ್ಯೆ ಹೆಚ್ಚಿಸಿದ ಸರ್ಕಾರ

    ಇದೇ ವೇಳೆ ಕಾಶ್ಮೀರದಲ್ಲಿ ಮಾಜಿ ಸಿಎಂ ಮೆಹಬೂಬ್ ಮುಫ್ತಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಶ್ಮೀರದಲ್ಲಿ ಇಸ್ಲಾಮೀಕರಣ ಅನಾಹುತ ಮಾಡಿದ್ದೀರಿ. ಸೈನಿಕರಿಗೆ ಅವಮಾನ ಮಾಡಿದ್ದೀರಿ. ನೀವು ಕರ್ನಾಟಕದ ವಿಚಾರದಲ್ಲೂ ಮೂಗು ತೂರಿಸುವ ಅವಶ್ಯಕತೆ ಇಲ್ಲ. ಈಗಾಗಲೇ ಕೇರಳ ಹೈಕೋರ್ಟ್ ಸಹ ಹಿಜಬ್‍ಗೆ ಅವಕಾಶ ಕೊಟ್ಟಿಲ್ಲ. ಕರ್ನಾಟಕದಲ್ಲಿ ರಿಜೆಕ್ಟ್ ಆಗಲಿದೆ ಎಂದು ತಿಳಿಸಿದ್ದಾರೆ.

  • ಮದುವೆ ಆಗಿ ಮುಹೂರ್ತ ಫಿಕ್ಸ್ ಆಗಿದೆ- ಬಜೆಟ್ ಮಂಡಿಸಿದ್ರೆ ಮಂಡಿಸಲಿ: ಸಿಎಂ ಇಬ್ರಾಹಿಂ

    ಮದುವೆ ಆಗಿ ಮುಹೂರ್ತ ಫಿಕ್ಸ್ ಆಗಿದೆ- ಬಜೆಟ್ ಮಂಡಿಸಿದ್ರೆ ಮಂಡಿಸಲಿ: ಸಿಎಂ ಇಬ್ರಾಹಿಂ

    ಬೆಂಗಳೂರು: ನೂತನ ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆ ವಿಚಾರದಲ್ಲಿ ಉಂಟಾದ ಗೊಂದಲಕ್ಕೆ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂರವರು ಹೊಸ ಸಿಎಂ ಹುಮ್ಮಸ್ಸಿನಲ್ಲಿದ್ದಾರೆ ಬಜೆಟ್ ಮಂಡಿಸಿದರೆ ಮಂಡಿಸಲಿ ಎಂದು ಹೇಳಿಕೆ ನೀಡಿದ್ದಾರೆ.

    ಇಂದು ಹೊಸ ಬಜೆಟ್ ಮಂಡನೆ ಕುರಿತು ಪ್ರತಿಕ್ರಿಯಿಸಿದ ಅವರು, ಸಮ್ಮಿಶ್ರ ಸರ್ಕಾರಕ್ಕೆ ಮದುವೆ ಆಗಿ ಮುಹೂರ್ತ ಫಿಕ್ಸ್ ಆಗಿದೆ. ಮುಖ್ಯಮಂತ್ರಿಯವರು ಕೂಡ ಹೊಸ ಹುರುಪಿನಲ್ಲಿದ್ದಾರೆ. ಹೀಗಾಗಿ ಬಜೆಟ್ ಮಂಡನೆ ವಿಚಾರದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಹೊಸ ಬಜೆಟ್ ಮಂಡಿಸಿದರೆ ಮಂಡಿಸಲಿ ಬಿಡಿ ಎಂದು ಉತ್ತರಿಸಿದ್ದಾರೆ.

    ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ ಸಚಿವ ಸಂಪುಟದ ಗೊಂದಲದ ಕುರಿತು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನೋಡಿಕೊಳ್ಳುತ್ತಾರೆ ಎಂದರು.

    ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್‍ರವರ ಹೇಳಿಕೆಗೆ ಪ್ರತಿಕ್ರಿಯಿಸಿದ ಇಬ್ರಾಹಿಂರವರು, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ನಾನು ಹೇಳಿದ್ದು ಅಮಾಯಕ ಯುವಕರ ತಲೆ ಕೆಡಿಸಿದವರು ಯಾರು ಎಂದು? ಆರೋಪಿಗಳು ಈಗಾಗಲೇ ನಾಲ್ಕು ತಂಡಗಳಾಗಿ ಹತ್ಯೆ ಮಾಡಿರುವುದಾಗಿ ಅಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದಾರೆ. ಹತ್ಯೆಗೆ ಆರೋಪಿಗಳಿಗೆ ಪ್ರೇರೆಪಿಸಿದ್ದು ಯಾರು ಎಂದು ಪ್ರಮೋದ್ ಮುತಾಲಿಕ್ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಯವರಿಗೆ ಪ್ರಶ್ನಿಸಿದ್ದಾರೆ.

    ಮನುಷ್ಯನ ಜೀವನ ಶಾಶ್ವತ ಅಲ್ಲ, ನಾವು 60-70 ವರ್ಷ ಬದುಕುತ್ತೇವೆ. ಈ ವೇಳೆ ಒಳ್ಳೆಯ ಕೆಲಸಗಳನ್ನು ಮಾಡಬೇಕು. ನಾವೆಲ್ಲರೂ ಒಂದೇ ತಾಯಿಯ ಮಕ್ಕಳು, ನಮ್ಮಲ್ಲಿ ವಿಷ ಬೀಜ ಬಿತ್ತುತ್ತಿರುವುದು ಯಾರು? ಯಾವುದೇ ಧರ್ಮದವರಾದರೂ ಇಂತಹ ಘಟನೆಗಳನ್ನು ಖಂಡಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ದೇಶಕ್ಕೆ ಭಾರೀ ಗಂಡಾಂತರ ಎದುರಾಗುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.

    ನಮಗೆ ಅಟಲ್ ಬಿಹಾರಿ ವಾಜಪೇಯಿ ಹಾಗೂ ಅಡ್ವಾಣಿಯವರ ಮೇಲೆಯೂ ಗೌರವವಿದೆ. ಮುತಾಲಿಕ್ ರವರು ಆಚಾರವಿಲ್ಲದ ನಾಲಿಗೆ ಎಂಬಂತೆ ಮಾತನಾಡಬಾರದು ಎಂದು ಹೇಳಿದರು.