Tag: ಪ್ರಯಾಣ ದರ

  • ರೈಲ್ವೆ ಇಲಾಖೆಯಿಂದ ಚಾರ್ ಧಾಮ್ ಯಾತ್ರೆಗೆ ಮೇ ತಿಂಗಳಲ್ಲಿ ವಿಶೇಷ ಆಫರ್

    ರೈಲ್ವೆ ಇಲಾಖೆಯಿಂದ ಚಾರ್ ಧಾಮ್ ಯಾತ್ರೆಗೆ ಮೇ ತಿಂಗಳಲ್ಲಿ ವಿಶೇಷ ಆಫರ್

    ನವದೆಹಲಿ: ರೈಲ್ವೆ ಇಲಾಖೆ ಮೇ ತಿಂಗಳಲ್ಲಿ ಚಾರ್ ಧಾಮ್ ಯಾತ್ರೆಗೆ ವಿಶೇಷ ರಿಯಾಯ್ತಿ ಘೋಷಿಸಿದೆ. ಐಆರ್​ಸಿಟಿಸಿ ವಿಶೇಷ ರಿಯಾಯ್ತಿ ಘೋಷಿಸಿದ್ದು, ಹಲವು ಅಗತ್ಯ ಸೌಲಭ್ಯಗಳಿರುವ ಟೂರ್ ಪ್ಯಾಕೇಜ್ ಇದಾಗಿದೆ.

    ಯಾವ ಸ್ಥಳಗಳಿಗೆ: ಹರಿದ್ವಾರ, ಬಾರ್‍ಕೊಟ್, ಜಾನಕಿಚಟ್ಟಿ, ಯಮುನೋತ್ರಿ, ಉತ್ತರಕಾಶಿ, ಗಂಗೋತ್ರಿ, ಗುಪ್ತಕಾಶಿ, ಸನ್‍ಪ್ರಯಾಗ, ಕೇದಾರನಾಥ, ಬದರಿನಾಥ ಕ್ಷೇತ್ರಗಳನ್ನು ಸಂದರ್ಶಿಸಲಾಗುತ್ತದೆ. ನಾಗಪುರ ಮತ್ತು ದೆಹಲಿ ಮಾರ್ಗವಾಗಿ ವಾಯುಯಾನ ಟಿಕೆಟ್‍ಗಳನ್ನೂ ಈ ಪ್ಯಾಕೇಜ್ ಒಳಗೊಂಡಿರುತ್ತದೆ.

    ಭಾರತ ಸರ್ಕಾರದ ಆಜಾದಿ ಕ ಅಮೃತ್ ಮಹೋತ್ಸವ್ ಮತ್ತು ದೇಖೋ ಆಪ್ನಾ ದೇಶ್ ಉಪಕ್ರಮಗಳ ಭಾಗವಾಗಿ ಐಆರ್​ಸಿಟಿಸಿ ಈ ಯೋಜನೆಯನ್ನು ಪರಚಯಿಸಿದೆ. ಈ ವರ್ಷ ಕೊರೊನಾ ಪ್ರಕರಣಗಳು ಕಡಿಮೆಯಾಗಿರುವುದರಿಂದ ಸಾಕಷ್ಟು ಜನರು ಈ ಸೌಲಭ್ಯ ಪಡೆದುಕೊಳ್ಳಬಹುದು. ಮೇ 14ರಿಂದ ಆರಂಭವಾಗಿ ಮೇ 25ಕ್ಕೆ ಮುಕ್ತಾಯವಾಗಲಿರುವ ಈ ಯಾತ್ರೆಯು 12 ಹಗಲು ಮತ್ತು 11 ರಾತ್ರಿಗಳ ಪ್ರವಾಸ ಪ್ಯಾಕೇಜ್ ಹೊಂದಿರುತ್ತದೆ. ಇದನ್ನೂ ಓದಿ: ಕ್ರಿಶ್ಚಿಯನ್ ವರ, ಮುಸ್ಲಿಂ ವಧು ಹಿಂದೂ ಸಂಪ್ರದಾಯದಂತೆ ಮದುವೆ 

    ಪ್ರಯಾಣ ದರ: ಒಬ್ಬರಿಗೆ 77,600 ಮತ್ತು ಇಬ್ಬರಿಗೆ 61,400 ಶುಲ್ಕ ನಿಗದಿಪಡಿಸಲಾಗಿದೆ. ಈ ಶುಲ್ಕವು ಪ್ರಯಾಣದರದೊಂದಿಗೆ ವಸತಿ, ಊಟೋಪಚಾರ ವೆಚ್ಚಗಳನ್ನೂ ಒಳಗೊಂದಿದೆ. ಹೆಚ್ಚಿನ ಮಾಹಿತಿಗೆ  www.irctctourism.com ಜಾಲತಾಣ ನೋಡಿ.

     

  • ಹಬ್ಬಕ್ಕೆ ದುಪ್ಪಟ್ಟು ದರ ಪಡೆಯುತ್ತಿರೋ ಖಾಸಗಿ ಟ್ರಾವೆಲ್ಸ್‌ಗಳಿಗೆ ಬಿಗ್ ಶಾಕ್

    ಹಬ್ಬಕ್ಕೆ ದುಪ್ಪಟ್ಟು ದರ ಪಡೆಯುತ್ತಿರೋ ಖಾಸಗಿ ಟ್ರಾವೆಲ್ಸ್‌ಗಳಿಗೆ ಬಿಗ್ ಶಾಕ್

    ಬೆಂಗಳೂರು: ಹಬ್ಬಕ್ಕೆ ದುಪ್ಪಟ್ಟು ದರ ಪಡೆಯುತ್ತಿರುವ ಖಾಸಗಿ ಟ್ರಾವೆಲ್ಸ್‌ಗಳಿಗೆ ಸಾರಿಗೆ ಇಲಾಖೆ ಬಿಗ್ ಶಾಕ್ ಕೊಟ್ಟಿದೆ. ಹೌದು, ನಿಯಮ ಮೀರಿ ಪ್ರಯಾಣದ ದರ ಪಡೆಯುತ್ತಿರುವ ಖಾಸಗಿ ಬಸ್‍ಗಳ ಮೇಲೆ ಅಧಿಕಾರಿಗಳು ರೈಡ್ ಮಾಡುತ್ತಿದ್ದಾರೆ.

    ಹಬ್ಬದ ದಿನಗಳಲ್ಲಿ ಬೆಂಗಳೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ತಮ್ಮ ಊರಿಗೆ ಮರಳುತ್ತಾರೆ. ಹೀಗಾಗಿ ಖಾಸಗಿ ಟ್ರಾವೆಲ್ಸ್ ಗಳು ಲಾಭಕ್ಕಾಗಿ ಪ್ರಯಾಣಿಕರಿಂದ ಹೆಚ್ಚು ಹಣ ಪಡೆಯುತ್ತವೆ. ಇದರ ವಿರುದ್ಧ ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆ ಈ ನಿರ್ಧಾರಕ್ಕೆ ಬಂದಿದೆ.

    ಜಂಟಿ ಸಾರಿಗೆ ಆಯುಕ್ತ ಜ್ಞಾನೇಂದ್ರ ಕುಮಾರ್ ಮತ್ತು ಅಪರ ಸಾರಿಗೆ ಆಯುಕ್ತ ನಾರಾಯಣ್ ಸ್ವಾಮಿ ಅವರ ಮಾರ್ಗದರ್ಶನದಲ್ಲಿ ದಾಳಿ ಮಾಡಲಾಗುತ್ತಿದೆ. ಒಟ್ಟು 12 ತಂಡಗಳನ್ನು ರಚಿಸಲಾಗಿದ್ದು, ಅದರಲ್ಲಿ 35 ಜನ ಆರ್‌ಟಿಓ ಇನ್‍ಸ್ಪೆಕ್ಟರ್ ಗಳು ಹಾಗೂ 20 ಜನ ಅಧಿಕಾರಿಗಳಿದ್ದಾರೆ. ಈ ತಂಡಗಳು ಬೆಂಗಳೂರಿನಿಂದ ಹೊರ ಹೊಗುವ ಪ್ರತಿ ಬಸ್ ಅನ್ನು ತಪಾಸಣೆ ಮಾಡುತ್ತಿವೆ.

    ಬಸ್‍ನಲ್ಲಿ ಪ್ರಯಾಣಿಕರು ಮತ್ತು ಅವರ ಲಗೇಜ್ ಹೊರತು ಪಡಿಸಿ ಯಾವುದೇ ರೀತಿಯ ವಸ್ತುಗಳನ್ನು ಹಾಕುವಂತಿಲ್ಲ. ನಿಯಮ ಮೀರಿ ಹಣ ಪಡೆದಿರುವ ಬಗ್ಗೆ ಮಾಹಿತಿ ಪಡೆಯಲು ಪ್ರಯಾಣಿಕರಿಂದ ಟಿಕೆಟ್ ತಗೆದುಕೊಂಡು ಪರಿಶೀಲನೆ ನಡೆಸಿದ್ದಾರೆ. ಒಂದು ವೇಳೆ ಹೆಚ್ಚಿನ ಹಣ ಪಡೆದಿದ್ದರೆ ಅಂತಹ ಟ್ರಾವೆಸ್ಸ್ ವಿರುದ್ಧ ಪ್ರಕರಣ ದಾಖಲಿಸಲು ಆರ್‍ಟಿಓ ಅಧಿಕಾರಿಗಳು ಮುಂದಾಗಿದ್ದಾರೆ.

    ಎಲ್ಲೆಲ್ಲಿ ಪರಿಶೀಲನೆ?: ಮೆಜೆಸ್ಟಿಕ್, ಕಲಾಸಿಪಾಳ್ಯ, ಗೊರಗುಂಟೆಪಾಳ್ಯ, ನೆಲಮಂಗಲ, ದೇವನಹಳ್ಳಿ ಟೋಲ್ ಸೇರಿದಂತೆ ಬೆಂಗಳೂರಿನಿಂದ ಹೊರ ಭಾಗಗಳ ಪ್ರತಿ ಟೋಲ್‍ಗಳಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ಈ ಮೂಲಕ ಖಾಸಗಿ ಟ್ರಾವೆಲ್ಸ್ ಗಳ ದರ್ಬಾರ್ ಗೆ ಬ್ರೇಕ್ ಹಾಕಲು ಹಾಗೂ ಪ್ರಯಾಣಿಕರ ಮೇಲೆ ಆಗುತ್ತಿರುವ ಹೊರೆಯನ್ನು ತಡೆಯಲು ಸಾರಿಗೆ ಇಲಾಖೆ ಮುಂದಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಿಎಂಟಿಸಿ ವೋಲ್ವೋ ಬಸ್ ಪ್ರಯಾಣಿಕರಿಗೆ ಶಾಕ್

    ಬಿಎಂಟಿಸಿ ವೋಲ್ವೋ ಬಸ್ ಪ್ರಯಾಣಿಕರಿಗೆ ಶಾಕ್

    ಬೆಂಗಳೂರು: ಬಿಎಂಟಿಸಿ ವೋಲ್ವೋ ಬಸ್ ಪ್ರಯಾಣಿಕರಿಗೆ ಶಾಕ್ ನೀಡಲಾಗಿದ್ದು, ಡಿಸೇಲ್ ದರ ಏರಿಕೆ ಹಿನ್ನೆಲೆಯಲ್ಲಿ ವೋಲ್ವೋ ಬಸ್ ಪ್ರಯಾಣ ದರ ಹೆಚ್ಚಳವಾಗಲಿದೆ.

    ಜುಲೈ 1 ರಿಂದ ಹಂತ ಸಂಖ್ಯೆ 7 ರಿಂದ 25 ರವರೆಗೆ ಮಾತ್ರ ಹಂತವಾರು ಬಸ್ ಪ್ರಯಾಣ ದರ 3.45% ರಿಂದ 26% ರವರೆಗೆ ಹೆಚ್ಚಳವಾಗಲಿದ್ದು, ಸರಾಸರಿ 16.89 ರಷ್ಟು ಏರಿಕೆ ಕಾಣಲಿದೆ. ನಾಳೆಯಿಂದಲೇ ನಗರದ ಸುಮಾರು 700 ವೋಲ್ವೋ ಬಸ್ಸುಗಳಿಗೆ ದರ ಅನ್ವಯವಾಗಲಿದೆ.

    2018 ವರ್ಷದ ಮೊದಲ ದಿನವೇ ಬಿಎಂಟಿಸಿ ವೋಲ್ವೋ ಬಸ್ ಪ್ರಯಾಣ ದರ ಕಡಿಮೆ ಮಾಡುವ ಮೂಲಕ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿತ್ತು. ಈ ವೇಳೆ ವಜ್ರ ಪ್ರಯಾಣ ದರಗಳನ್ನು 5% ರಿಂದ 37% ರವರೆಗೆ ಸರಾಸರಿ 29 ರಷ್ಟು ಕಡಿಮೆಗೊಳಿಸಿ ಪರಿಷ್ಕರಿಸಲಾಗಿತ್ತು. ನಿರಂತರವಾಗಿ ಏರಿಕೆಯಾಗುತ್ತಿರುವ ಡೀಸೆಲ್ ದರ, ತುಟ್ಟಿಭತ್ಯೆ ಹೆಚ್ಚಳ, ಸಿಬ್ಬಂದಿ ಹಾಗೂ ಕಾರ್ಯಾಚರಣೆ ವೆಚ್ಚದಲ್ಲಿಯೂ ಏರಿಕೆಯಾಗಿದ್ದರಿಂದ ಈ ಕ್ರಮಕ್ಕೆ ಮುಂದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

    ಈ ಹಿಂದೆ ಸಾರಿಗೆ ಸಚಿವ ಡಿಸಿ ತಮ್ಮಣ್ಣ ಅವರು, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಗಳು ಬಸ್ ಟಿಕೆಟ್ ದರ ಏರಿಸುವಂತೆ ಪ್ರಸ್ತಾವನೆ ಸಲ್ಲಿಸಿವೆ. ಆದರೆ ಯಾವುದೇ ಕಾರಣಕ್ಕೂ ಬಸ್ ಟಿಕೆಟ್ ದರ ಏರಿಕೆ ಮಾಡುವುದಿಲ್ಲ. ಈ ಕುರಿತು ಮುಖ್ಯಮಂತ್ರಿಗಳು ಸಭೆ ಕರೆದಿದ್ದು, ಸಭೆಯಲ್ಲಿ ಬಸ್ ದರ ಏರಿಸುವ ಬದಲು ಸಾರಿಗೆ ಸಂಸ್ಥೆಗಳಲ್ಲಿ ಆಗುತ್ತಿರುವ ನಷ್ಟವನ್ನು ಕಡಿಮೆಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿಕೆ ನೀಡಿದ್ದರು.

  • ವೋಟ್ ಹಾಕೋಕೆ ಊರಿಗೆ ಹೊರಟಿದ್ದೀರಾ?- ಮಾಮೂಲಿಗಿಂತ ಡಬಲ್ ದುಡ್ಡು ಇಟ್ಕೊಳ್ಳಿ

    ವೋಟ್ ಹಾಕೋಕೆ ಊರಿಗೆ ಹೊರಟಿದ್ದೀರಾ?- ಮಾಮೂಲಿಗಿಂತ ಡಬಲ್ ದುಡ್ಡು ಇಟ್ಕೊಳ್ಳಿ

    ಬೆಂಗಳೂರು: ಶನಿವಾರ ರಾಜ್ಯಾದ್ಯಂತ ವಿಧಾಸಭಾ ಚುನಾವಣೆ ಇರೋ ಹಿನ್ನೆಲೆಯಲ್ಲಿ ಮತದಾನ ನಡೆಯಲಿದೆ. ಹೀಗಾಗಿ ಸ್ವಂತ ಊರಿನಿಂದ ದೂರದಲ್ಲಿರುವ ಮತದಾರರು ತಮ್ಮ ಊರಿಗೆ ತೆರಳಬೇಕು ಅಂತಾ ಪ್ಲಾನ್ ಮಾಡಿದ್ದರೆ, ಜೇಬಿನಲ್ಲಿ ಮಾಮೂಲಿಗಿಂತ ಡಬಲ್ ಹಣ ಇಟ್ಟುಕೊಂಡು ಪ್ರಯಾಣಿಸಿ. ಕಾರಣ ಖಾಸಗಿ ಬಸ್‍ಗಳ ಪ್ರಯಾಣ ದರ ದುಪ್ಪಟ್ಟು ಆಗಿದೆ. ಚುನಾವಣಾ ಕಾರ್ಯಕ್ಕಾಗಿ 4,000 ಬಿಎಂಟಿಸಿ ಬಸ್‍ಗಳನ್ನು ನಿಯೋಜನೆ ಮಾಡಲಾಗಿದೆ.

    ಚುನಾವಣಾ ಕೆಲಸಕ್ಕಾಗಿ ಕೆಎಸ್‍ಆರ್‍ಟಿಸಿ ಬಸ್ ಗಳು ಬುಕ್ ಆಗಿವೆ. ಸಾಮಾನ್ಯವಾಗಿ ದಿನನಿತ್ಯ ಸಂಚರಿಸುವ ಬಸ್‍ಗಳಿಂತ ಕಡಿಮೆ ಸಂಖ್ಯೆಯಲ್ಲಿ ಬಸ್ ಲಭ್ಯವಾಗಲಿವೆ. ಸಾರಿಗೆ ಬಸ್‍ಗಳ ಸಂಖ್ಯೆ ಕಡಿಮೆ ಇರುವ ಕಾರಣ ಖಾಸಗಿ ವಾಹನಗಳಿಗೆ ಬೇಡಿಕೆ ಹೆಚ್ಚಾಗಿದೆ. ಇತ್ತ ತಮ್ಮ ವಾಹನಗಳಿಗೆ ಬೇಡಿಕೆ ಹೆಚ್ಚಾಗ್ತಿದ್ದಂತೆ ಪ್ರಯಾಣ ದರವನ್ನು ಮಾಲೀಕರು ಡಬಲ್, ತ್ರಿಬಲ್ ಮಾಡಿಕೊಂಡಿದ್ದಾರೆ.

    ಸಾಮಾನ್ಯ ದಿನಗಳಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ 600 ರೂ. ದಿಂದ 800 ರೂ.ವರೆಗೂ ಟಿಕೆಟ್ ಸಿಗುತ್ತೆ. ಇಂದು ಅದೇ ಬೆಲೆಯ ಒಂದು ಸೀಟ್‍ಗೆ 1800 ರೂ. ಏರಿಕೆ ಮಾಡಲಾಗಿದೆ. ಇತ್ತ 500 ರಿಂದ 700ರೂ. ಬೆಂಗಳೂರಿನಿಂದ ಮಂಗಳೂರಿಗಿದ್ದ ಬಸ್ ಚಾರ್ಜ್ 1,500 ರೂ.ವರೆಗೂ ತಲುಪಿದೆ. ಇದೇ ರೀತಿಯಾಗಿ ಎಲ್ಲ ಮಾರ್ಗಗಳ ಪ್ರಯಾಣ ದರ ಬೇಡಿಕೆಗೆ ತಕ್ಕಂತೆ ಏರಿಕೆ ಮಾಡಲಾಗಿದೆ.

  • ಮೋದಿ ಸರ್ಕಾರಕ್ಕೆ 3ರ ಸಂಭ್ರಮ- ಮಂಗ್ಳೂರು ಅಭಿಮಾನಿಯಿಂದ 1 ರೂ.ಗೆ ಆಟೋ ಸೇವೆ

    ಮೋದಿ ಸರ್ಕಾರಕ್ಕೆ 3ರ ಸಂಭ್ರಮ- ಮಂಗ್ಳೂರು ಅಭಿಮಾನಿಯಿಂದ 1 ರೂ.ಗೆ ಆಟೋ ಸೇವೆ

    ಮಂಗಳೂರು: ಮೋದಿ ನೇತೃತ್ವದ ಬಿಜೆಪಿ ಸರ್ಕಾರ 3 ವರ್ಷ ಪೂರೈಸಿ 4ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮೋದಿ ಅಭಿಮಾನಿಯಾಗಿರೋ ಆಟೋ ಚಾಲಕರೊಬ್ಬರು 1 ರೂ.ಗೆ ಗ್ರಾಹಕರಿಗೆ ಪ್ರಯಾಣಿಸಲು ಆಫರ್ ನೀಡಿದ್ದಾರೆ.

    ಮಂಗಳೂರು ನಿವಾಸಿ ಸತೀಶ್ ಪ್ರಭು (44) ಅವರೇ ಗ್ರಾಹಕರಿಗೆ ಈ ಬಂಪರ್ ಆಫರ್ ನೀಡಿದವರು. ದೇಶದಲ್ಲಿ ಮೋದಿ ಆಡಳಿತ ನಾಲ್ಕನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಅಂದ್ರೆ ಇಂದಿನಿಂದ ನಾಲ್ಕು ದಿನಗಳ ಕಾಲ ಆಟೋರಿಕ್ಷಾ ಪ್ರಯಾಣ ದರವನ್ನ 5 ಕಿ.ಮೀಗೆ 1 ರೂ. ನಂತೆ ನಿಗಡಿಪಡಿಸಿದ್ದಾರೆ.

    ಸತೀಶ್ ಪ್ರಭು ತಮ್ಮ ಆಟೋ ರಿಕ್ಷಾದ ಹಿಂಭಾಗದಲ್ಲಿ ಈ ಬಗ್ಗೆ ಬ್ಯಾನರ್‍ವೊಂದನ್ನ ಹಾಕಿಕೊಂಡಿದ್ದಾರೆ. “ಮೋದಿ ಅವರು ದೇಶದಾದ್ಯಂತ ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. ನಾನು ಅವರಿಗೆ ಧನ್ಯವಾದ ಹೇಳಬೇಕೆಂದು ಬಯಸಿದೆ. ಅದಕ್ಕಾಗಿ ಪ್ರಯಾಣಿಕರಿಗೆ ದರವನ್ನ ಕಡಿಮೆ ಮಾಡಿದ್ದೇನೆ. 1 ರೂ. ಪ್ರಯಾಣದರದಿಂದ ಪ್ರಯಾಣಿಕರಿಗೆ ಸಹಾಯವಾಗಲಿದೆ. ಅದರಲ್ಲೂ ಮಧ್ಯಮ ವರ್ಗದವರು ಹಣ ಉಳಿತಾಯ ಮಾಡಬಹುದು ಎಂದು ಸತೀಶ್ ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ.

    ನಮೋಬ್ರಿಗೆಡ್ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ಟ್ವಿಟರ್‍ನಲ್ಲಿ ಈ ಫೋಟೋ ಹಂಚಿಕೊಂಡ ನಂತರ ಬಿಜೆಪಿ ವಲಯದಲ್ಲಿ ಈ ವಿಷಯ ಚರ್ಚೆಯಾಗ್ತಿದೆ.

    ಸತೀಶ್ ಅವರು ಮೋದಿ ಮೇಲೆ ಅಭಿಮಾನ ಪ್ರದರ್ಶಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಮೋದಿ ಅಧಿಕಾರಕ್ಕೆ ಬಂದಾಗ ಸುಮಾರು 150ಕ್ಕೂ ಹೆಚ್ಚು ಜನರಿಗೆ ಇದೇ ರೀತಿಯ ಆಫರ್ ನೀಡಿದ್ದರು.

    ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸತೀಶ್ ಅವರ ಈ ಕಾರ್ಯವನ್ನ ಶ್ಲಾಘಿಸಿದ್ದು, ಮೋದಿ ಅವರ ಜನಪ್ರಿಯತೆ ಎಲ್ಲಾ ವರ್ಗಗಳನ್ನು ಮೀರಿ ನಿಂತಿದೆ ಎಂಬುದನ್ನ ಇದು ತಿಳಿಸುತ್ತಿದೆ ಎಂದು ಹೇಳಿದ್ದಾರೆ.