Tag: ಪ್ರಲ್ಹಾದ್ ಜೋಶಿ

  • ಕಂಡ ಕಂಡವರಿಗೆ ಕರೆದು ಕರೆದು ಪ್ರಶಸ್ತಿ ವಿತರಣೆ ಮಾಡಿದ ಸಚಿವರು

    ಕಂಡ ಕಂಡವರಿಗೆ ಕರೆದು ಕರೆದು ಪ್ರಶಸ್ತಿ ವಿತರಣೆ ಮಾಡಿದ ಸಚಿವರು

    – ಜಲಶಕ್ತಿ ಅಭಿಯಾನ ಸಮಾರಂಭದಲ್ಲಿ ಮಹಾಯಡವಟ್ಟು

    ಹುಬ್ಬಳ್ಳಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಇಲಾಖೆಯಿಂದ ಹುಬ್ಬಳ್ಳಿಯಲ್ಲಿಂದು ರಾಜ್ಯ ಮಟ್ಟದ ಜಲಶಕ್ತಿ ಅಭಿಯಾನ ಸಮಾರಂಭ ಜರುಗಿತು. ಡೆನಿಸನ್ಸ್ ಹೋಟೆಲ್ ಆವರಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭವನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಉದ್ಘಾಟನೆ ಮಾಡಿದರು. ಆದರೆ ಅರ್ಥಪೂರ್ಣವಾಗಿ ನಡಯಬೇಕಾದ ಸಮಾರಂಭದಲ್ಲಿ ಸಚಿವರು ಕಂಡ ಕಂಡವರಿಗೆ ಕರೆದು ಕರೆದು ಪ್ರಶಸ್ತಿ ವಿತರಣೆ ಮಾಡುವ ಮೂಲಕ ಮಹಾ ಯಡವಟ್ಟು ಮಾಡಿಕೊಂಡಿದ್ದಾರೆ.

    ಕಾರ್ಯಕ್ರಮದಲ್ಲಿ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಸಮಾರಂಭದಲ್ಲಿ ಕೆರೆ, ಕಲ್ಯಾಣಿ, ನಾಲಾ ಪುನಶ್ಚೇತನ, ಗೋಕಟ್ಟೆ ನಿರ್ಮಾಣ ಸೇರಿದಂತೆ ಸಾಂಪ್ರದಾಯಿಕ ಹಾಗೂ ಇತರೆ ಜಲಮೂಲಗಳ ಸಂರಕ್ಷಣೆ ಹಾಗೂ ಪುನಶ್ಚೇತನಕ್ಕಾಗಿ ಪ್ರಧಾನಮಂತ್ರಿಗಳ ಆಶಯಕ್ಕೆ ಅನುಗುಣವಾಗಿ ರಾಜ್ಯದಲ್ಲಿ 3 ಲಕ್ಷಕ್ಕೂ ಅಧಿಕ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುವ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ 4,310 ಕೋಟಿ ರೂ. ಗಳನ್ನು ವಿನಿಯೋಗಿಸಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡರು. ಆದರೆ ಸಮಾರಂಭದ ಅಂತ್ಯದ ವೇಳೆ ಈಶ್ವರಪ್ಪ ಮಹಾ ಯಡವಟ್ಟು ಮಾಡಿ ಸಮಾರಂಭದ ಅರ್ಥವನ್ನೆ ಅನರ್ಥವಾಗುವಂತೆ ಮಾಡಿಬಿಟ್ಟರು.

    ಸಮಾರಂಭದಲ್ಲಿ ನರೇಗಾ ಯೋಜನೆಯ ರಾಜ್ಯ ಮಟ್ಟದ ಪ್ರಶಸ್ತಿ ವಿತರಣಾ ಸಮಾರಂಭ ಸಹ ಜರುಗಿತು. ಈ ವೇಳೆ ಸಚಿವರು ನೂರು ಜನ ಸಾಧಕರಿಗೆ ಪ್ರಶಸ್ತಿ ನೀಡುವ ಸಮಯದಲ್ಲಿ ಊಟದ ವೇಳೆಯಾದ ಪರಿಣಾಮ ಕೆ.ಎಸ್ ಈಶ್ವರಪ್ಪ, ಜಗದೀಶ ಶೆಟ್ಟರ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸಮಾರಂಭದಲ್ಲಿ ಸಾಧಕರನ್ನು ಬಿಟ್ಟು ಕಂಡ ಕಂಡವರನ್ನು ಕರೆದು ಕರೆದು ಪ್ರಶಸ್ತಿ ವಿತರಣೆ ಮಾಡಿದರು.

    ತರಾತುರಿಯಲ್ಲಿ ಸಾಧಕರನ್ನು ಕೈ ಬಿಟ್ಟು ವೇದಿಕೆಗೆ ಆಗಮಿಸಿದ ಎಲ್ಲರಿಗೂ ಕರೆದು ಪ್ರಶಸ್ತಿ ವಿತರಣೆ ಮಾಡಿದರು. ವೇದಿಕೆಗೆ ತೆರಳಿ ಸಚಿವರಿಗೆ ಮನವಿ ನೀಡಲು ಹೋದ ವ್ಯಕ್ತಿಗೂ ಸಹ ಪ್ರಶಸ್ತಿ ವಿತರಣೆ ಮಾಡಿದ್ದು ಮಾತ್ರ ಸಮಾರಂಭದಲ್ಲಿನ ಮಹಾ ಯಡವಟ್ಟುವನ್ನು ಎತ್ತಿ ತೋರಿಸುವಂತೆ ಮಾಡಿತು.

  • ಸಾರಿಗೆ ನೌಕರರ ಒಂಬತ್ತು ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧ: ಲಕ್ಷ್ಮಣ್ ಸವದಿ

    ಸಾರಿಗೆ ನೌಕರರ ಒಂಬತ್ತು ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧ: ಲಕ್ಷ್ಮಣ್ ಸವದಿ

    -ಸರ್ಕಾರದಿಂದ ನೌಕರರ ಸಂಬಳಕ್ಕಾಗಿ 1,746 ಕೋಟಿ ನೆರವು

    ಹುಬ್ಬಳ್ಳಿ : ಕೊರೊನಾ ಲಾಕ್ ಡೌನ್‍ನಿಂದಾಗಿ ಸಾರಿಗೆ ಇಲಾಖೆಯ ನಾಲ್ಕು ವಿಭಾಗದಿಂದ 3700 ಕೋಟಿ ನಷ್ಟ ಸಂಭವಿಸಿದೆ. ಇಂತಹ ಸಂದರ್ಭದಲ್ಲಿ ಸಂಸ್ಥೆಯ 1.30 ಲಕ್ಷ ನೌಕರಿಗೆ ತೊಂದರೆಯಾಗಬಾರದು ಎಂದು, ರಾಜ್ಯ ಸರ್ಕಾರದಿಂದ ಸಾರಿಗೆ ನೌಕರರ ಸಂಬಳಕ್ಕಾಗಿ 1,746 ಕೋಟಿ ನೆರವು ನೀಡಲಾಗಿದೆ. ನೌಕರರ ಒಂಬತ್ತು ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.

    ಕಲಘಟಗಿ ನೂತನ ಬಸ್ ಘಟಕದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸಾರಿಗೆ ಸಚಿವನಾಗಿ ಅಧಿಕಾರಿ ಸ್ವೀಕರಿಸದ ಸಂದರ್ಭದಲ್ಲಿ ಸಾರಿಗೆ ಸಂಸ್ಥೆಯ ನಷ್ಟದ ಪ್ರಮಾಣ 3000 ಕೋಟಿ ಇತ್ತು. ಸರ್ಕಾರದಿಂದ 2980 ಕೋಟಿ ಬರುವುದು ಬಾಕಿ ಇತ್ತು. ಇದರೊಂದಿಗೆ ಅನೀರಿಕ್ಷಿತ ಕೊರೊನಾ ಲಾಕ್ ಡೌನ್‍ನಿಂದಾಗಿ ನಷ್ಟದ ಪ್ರಮಾಣ ಹೆಚ್ಚಾಗಿದೆ. ಲಾಕ್ ಡೌನ್ ನಂತರ ಸಾರಿಗೆ ಸಂಚಾರ ಪುನಃ ಪ್ರಾರಂಭಿಸಲಾಗಿದೆ. ಪ್ರತಿದಿನ 1 ಕೋಟಿ ಜನರು ಪ್ರಯಾಣಿಸುತ್ತಿದ್ದಾರೆ. ಲಾಕ್ ಡೌನ್ ಪ್ರಾರಂಭಕ್ಕೂ ಮುನ್ನ 4.20 ಕೋಟಿ ಜನರು ಪ್ರಯಾಣಿಸುತ್ತಿದ್ದರು. ಪ್ರಯಾಣಿಕರ ಸಂಖ್ಯೆ ಇಳಿಕೆಯಿಂದಾಗಿ ಸಾರಿಗೆ ಆದಾಯ ಕುಂಠಿತವಾಗಿದೆ ಎಂದರು.

     

    ಇನ್ನೂ ಸಂಸ್ಥೆಯ 2,000 ಬಸ್‍ಗಳು 9 ಲಕ್ಷಕ್ಕೂ ಹೆಚ್ಚು ದೂರ ಕ್ರಮಿಸಿದ್ದು, ಅವುಗಳನ್ನು ನಿಷ್ಕ್ರಿಯ ಗೊಳಿಸಲಾಗುವುದು. ಹಳೆ ಬಸ್ ಗಳನ್ನು ಗುಜರಿಯವರಿಗೆ ಹರಾಜು ಮಾಡದೆ ಸಾರ್ವಜನಿಕ ಸ್ಥಳಗಳಲ್ಲಿ ಬಸ್ ಗಳನ್ನು ಬಳಸಿ ಸುಸಜ್ಜಿತ ಶೌಚಾಲಯ, ಸ್ನಾನ ಗೃಹಗಳನ್ನು ನಿರ್ಮಿಸಲಾಗುವುದು. ನೌಕರರು ಯಾರದೋ ಮಾತು ಕೇಳಿ ಪ್ರತಿಭಟನೆಗೆ ಇಳಿಯಬಾರದು. ಇಲಾಖೆ ಕಾರ್ಮಿಕರ ಹಿತರಕ್ಷಣೆಗೆ ಬದ್ದವಾಗಿದೆ. ಅಧಿಕಾರಿಗಳಿಂದ ಕೆಳ ಹಂತದ ನೌಕರರಿಗೆ ಉಂಟಾಗುವ ಕಿರುಕುಳ ತಪ್ಪಿಸಬೇಕು. ವರ್ಗಾವಣೆ ನಿಯಮಗಳನ್ನು ಬದಲಿಸಲಾಗುವುದು. ವಾ.ಕ.ರ.ಸಾ.ಸಂಸ್ಥೆ ನಿವೃತ್ತಿ ನೌಕರರ ಉಪದಾನ ನಗದೀಕರಣ ಸೇರಿದಂತೆ ಇತರೆ ಸೌಲಭ್ಯಗಳನ್ನು ನೀಡಲು ಅಲ್ಪಾವಧಿ ಸಾಲ ಪಡೆಯುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ ಸಚಿವರು ಸೂಚಿಸಿದರು.

    ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ಅಂತರ ನಿಗಮ ವರ್ಗಾವಣೆ ಬಗ್ಗೆ ಸರಳ ನಿಯಮ ರೂಪಿಸಬೇಕು. ಪತಿ ಪತ್ನಿ ಪ್ರಕರಣಗಳಲ್ಲಿ ಆದ್ಯತೆ ಮೇರೆಗೆ ವರ್ಗಾವಣೆ ಮಾಡಬೇಕು. ಸುರಕ್ಷಿತ ಪ್ರಯಾಣ ಕೇಂದ್ರ ಸರ್ಕಾರದ ಗುರಿಯಾಗಿದೆ. ಪ್ರಧಾನ ಮಂತ್ರಿ ಗ್ರಾಮ್ ಸಡಕ್ ಯೋಜನೆಯಡಿ 80 ಸಾವಿರ ಕೋಟಿ ರೂಪಾಯಿಗಳ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ 1.25 ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯಕ್ಕೆ ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಇದರಲ್ಲಿ 3200 ಕಿ.ಮೀ.ಗ್ರಾಮೀಣ ರಸ್ತೆ ನಿರ್ಮಿಸಲಾಗುವುದು. ಎಂದರು.

    ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮಾತನಾಡಿ, ಅವಳಿ ನಗರದಲ್ಲಿ ಬೇಂದ್ರೆ ಬಸ್ ಗಳ ಹಾವಳಿ ಹೆಚ್ಚಾಗಿರುವುದರಿಂದ ಸಾರಿಗೆ ಸಂಸ್ಥೆಗೆ ಪ್ರತಿ ತಿಂಗಳು 20 ಕೋಟಿ ರೂ. ನಷ್ಟವಾಗುತ್ತಿದೆ. ಸಾರಿಗೆ ಸಚಿವರು ಖಾಸಗಿ ಬಸ್ ಗಳ ಹಾವಳಿಯನ್ನು ತಡೆಯಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಬಸ್ ಓಡಾಟ ಹೆಚ್ಚಿಸಬೇಕು ಎಂದರು.

    ವಾಯುವ್ಯ ಕಾರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್ ಪಾಟೀಲ, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ಅಧ್ಯಕ್ಷ ಶಂಕರ ಪಾಟೀಲ ಮುನೇನಕೊಪ್ಪ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿದ್ದು ಕೆ. ಸವದಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

  • ಸೆ. 19ರಿಂದ ಹುಬ್ಬಳ್ಳಿ ಟು ಮುಂಬೈ ಇಂಡಿಗೋ ವಿಮಾನಯಾನ ಆರಂಭ

    ಸೆ. 19ರಿಂದ ಹುಬ್ಬಳ್ಳಿ ಟು ಮುಂಬೈ ಇಂಡಿಗೋ ವಿಮಾನಯಾನ ಆರಂಭ

    ಹುಬ್ಬಳ್ಳಿ: ಕೊರೊನಾ ಕರಿಛಾಯೆ ಎಲ್ಲೆಡೆಯೂ ಹಬ್ಬಿದ ಬೆನ್ನಲ್ಲೇ ಸ್ಥಗಿತಗೊಂಡ ವಿಮಾನ ಹಾರಾಟ ಒಂದೊಂದಾಗಿ ಪುನರಾರಂಭಗೊಂಡಿದ್ದು, ಈಗ ಇಂಡಿಗೋ ವಿಮಾನ ಸೆಪ್ಟಂಬರ್ 19ರಿಂದ ಮುಂಬೈಗೆ ಪ್ರಯಾಣ ಪ್ರಾರಂಭಿಸುವುದಾಗಿ ಸೂಚನೆ ನೀಡಿದೆ.

    ಇಂಡಿಗೊ ಸಂಸ್ಥೆ ಮೊದಲ ಬಾರಿಗೆ ಸೆಪ್ಟೆಂಬರ್ 19ರಿಂದ ವಾರದಲ್ಲಿ ಮೂರು ದಿನ ಹುಬ್ಬಳ್ಳಿಯಿಂದ ಮುಂಬೈಗೆ ವಿಮಾನ ಸೌಲಭ್ಯ ಆರಂಭಿಸಲಿದೆ. ಪ್ರತಿ ಮಂಗಳವಾರ, ಗುರುವಾರ ಮತ್ತು ಶನಿವಾರ ಬೆಳಿಗ್ಗೆ 6.35ಕ್ಕೆ ಮುಂಬೈನಿಂದ ಹೊರಡುವ ವಿಮಾನ 8 ಗಂಟೆಗೆ ಹುಬ್ಬಳ್ಳಿ ತಲುಪಲಿದ್ದು, ಇಲ್ಲಿಂದ 8.40ಕ್ಕೆ ಹೊರಟು 10.05ಕ್ಕೆ ಮುಂಬೈ ತಲುಪಲಿದೆ.

    ಇಂಡಿಗೊ ಈಗಾಗಲೇ ಅಹಮದಾಬಾದ್, ಕಣ್ಣೂರು, ಚೆನ್ನೈ, ಕೊಚ್ಚಿ ಮತ್ತು ಬೆಂಗಳೂರು ನಗರಗಳಿಗೆ ವಿಮಾನ ಸೌಲಭ್ಯ ಹೊಂದಿದ್ದು, ಮುಂಬೈಗೆ ಮೊದಲ ಬಾರಿಗೆ ನೇರ ವಿಮಾನ ಆರಂಭಿಸಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈ ವಿಷಯ ಖಚಿತಪಡಿಸಿದ್ದಾರೆ.

  • ಕೋವಿಡ್ ನಿರ್ವಹಣೆಯಲ್ಲಿ ಕಿಮ್ಸ್ ರಾಜ್ಯಕ್ಕೆ ಮಾದರಿ: ಪ್ರಹ್ಲಾದ್ ಜೋಶಿ

    ಕೋವಿಡ್ ನಿರ್ವಹಣೆಯಲ್ಲಿ ಕಿಮ್ಸ್ ರಾಜ್ಯಕ್ಕೆ ಮಾದರಿ: ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ಕೋವಿಡ್ ಸಂದರ್ಭದಲ್ಲಿ ಕಿಮ್ಸ್ ನ ಎಲ್ಲಾ ವೈದ್ಯರು ರೋಗಿಗಳ ಬಗೆಗೆ ಬಹಳ ಮುತುವರ್ಜಿ ವಹಿಸಿ ಸೇವೆ ಸಲ್ಲಿಸುತ್ತಿದ್ದಾರೆ. ಗಂಭೀರ ಪ್ರಕರಣಗಳನ್ನು ಸಹ ದಾಖಲಿಸಿಕೊಂಡು ಚಿಕಿತ್ಸೆ ನೀಡಿ ಗುಣಪಡಿಸುವ ಮೂಲಕ ವೈದ್ಯಕೀಯ ವೃತ್ತಿ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ್ ಜೋಶಿ ಹೇಳಿದರು.

    ನಗರದ ಸರ್ಕ್ಯೂಟ್ ಹೌಸಿನಲ್ಲಿ ಇಂದು ಬೆಳಗಾವಿಯ ಏಕಸ್ ಇನ್ಫ್ರಾ ಮತ್ತು ಏಕಸ್ ಫೌಂಡೇಶನ್ ಕೋವಿಡ್-19 ರೋಗಿಗಳ ಚಿಕಿತ್ಸೆಗಾಗಿ ನೀಡಿದ ಹೈ ಫ್ಲೋ ನಾಸಲ್ ಆಕ್ಸಿಜನ್ ಉಪಕರಣಗಳನ್ನು ಕಿಮ್ಸ್ ಸಂಸ್ಥೆಗೆ ಹಸ್ತಾಂತರಿಸಿ ಅವರು ಮಾತನಾಡಿದರು. ಕಿಮ್ಸ್ ಸಂಸ್ಥೆಯನ್ನು ನಾಡಿಗೆ ಸಂಜೀವಿನಿಯಾಗುವಂತೆ ಮಾದರಿಯಾಗಿ ರೂಪಿಸಿದ್ದಾರೆ ಎಂದು ಹಾಡಿ ಹೊಗಳಿದರು.

    ಕೋವಿಡ್‍ನಿಂದ ಗಂಭೀರವಾಗಿ ಬಳಲುತ್ತಿದ್ದ ರಾಜಕೀಯ ಪಕ್ಷದ ಜನಪ್ರತಿನಿಧಿಯೊಬ್ಬರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡಿರಲಿಲ್ಲ. ಕೊನೆಗೆ ಕಿಮ್ಸ್ ನಲ್ಲಿ ಅವರು ದಾಖಲಾಗಿ ಉತ್ತಮ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇಂತಹ ಸಹಸ್ರಾರು ಪ್ರಕರಣಗಳಲ್ಲಿ ಕಿಮ್ಸ್ ವೈದ್ಯರು ಅಮೂಲ್ಯ ಸೇವೆ ಸಲ್ಲಿಸಿದ್ದಾರೆ. ಕೋವಿಡ್ ರೋಗಿಗಳ ಹೆಚ್ಚಳ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಇನ್ನಷ್ಟು ಸೌಲಭ್ಯಗಳ ಅವಶ್ಯಕತೆ ಮತ್ತು ಗಂಭೀರತೆ ಬಗ್ಗೆ ಜಿಲ್ಲಾಡಳಿತ ಗಮನ ಸೆಳೆದಿತ್ತು. ಈ ಹಿನ್ನೆಲೆಯಲ್ಲಿ ಏಕಸ್ ಸೇರಿದಂತೆ ನಾನಾ ಕಂಪನಿಗಳನ್ನು ಸಂಪರ್ಕಿಸಿ ಸಿಎಸ್‍ಆರ್ ಅಡಿ ಅನುದಾನ ಒದಗಿಸಲಾಗಿದೆ ಎಂದರು.

    ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಏಕಸ್ ಫೌಂಡೇಶನ್ ನಿರ್ದೇಶಕ ಪ್ರವೀಣಕುಮಾರ್ ನಾಯಕ, ಏಕಸ್ ಕಂಪನಿ ಉಪಾಧ್ಯಕ್ಷ ಬಸವರಾಜ ಸುಗಂ, ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರಠಾಣಿ, ಕಿಮ್ಸ್ ಮುಖ್ಯ ಆಡಳಿತಾಧಿಕಾರಿ ರಾಜಶ್ರೀ ಜೈನಾಪುರ, ವೈದ್ಯಕೀಯ ಅಧೀಕ್ಷಕ ಡಾ. ಅರುಣಕುಮಾರ್ ಚವ್ಹಾಣ, ಡಾ.ಎಸ್.ವೈ. ಮುಲ್ಕಿಪಾಟೀಲ, ಡಾ.ರಾಜಶೇಖರ ದ್ಯಾಬೇರಿ, ಡಾ.ಲಕ್ಷ್ಮೀಕಾಂತ ಲೋಕರೆ, ತಹಶೀಲ್ದಾರ್ ಶಶಿಧರ ಮಾಡ್ಯಾಳ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಇದ್ದರು.

  • ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅವ್ಯವಹಾರ- ಅಧಿಕಾರಿಗಳ ಬೆವರಿಳಿಸಿದ ಜೋಶಿ

    ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅವ್ಯವಹಾರ- ಅಧಿಕಾರಿಗಳ ಬೆವರಿಳಿಸಿದ ಜೋಶಿ

    ಧಾರವಾಡ: ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅವ್ಯವಹಾರ ನಡೆದಿರುವ ವಿಚಾರವಾಗಿ ಧಾರವಾಡ ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ನಡೆದ ದಿಶಾ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆನ್‍ಲೈನ್‍ಲ್ಲೇ ಅಧಿಕಾರಿಗಳ ಬೆವರಿಳಿಸಿದ್ದಾರೆ.

    ನವದೆಹಲಿಯಿಂದ ಆನ್‍ಲೈನ್ ನಲ್ಲೇ ವಿಡಿಯೋ ಸಂವಾದ ಮೂಲಕ ಸಭೆ ತೆಗೆದುಕೊಂಡ ಜೋಶಿ, ಬೇರೆಯವರ ಹೆಸರಿನಲ್ಲಿ ಹಣ ಜಮಾ ಮಾಡಿಸಿಕೊಂಡು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ವಿಷಯದ ಚರ್ಚೆ ಬಂದಾಗ, ಜಿಲ್ಲಾ ಪಂಚಾಯ್ತಿ ಸಿಇಒ ಸತೀಶ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

    ಈ ವೇಳೆ ಸಮಾಜಾಯಿಸಿ ನೀಡಲು ಹೋಗಿ ಪ್ರಗತಿ ವರದಿಯಲ್ಲಿ ಪದ ಬಳಕೆ ತಪ್ಪಾಗಿದೆ ಎಂದು ಸಿಇಒ ಹೇಳಿದ್ದಕ್ಕೆ ಮತ್ತೆ ಆಕ್ರೋಶಿತರಾದ ಸಚಿವ ಜೋಶಿ, ನನ್ನ ಬಳಿ ಉದ್ಯೋಗ ಖಾತ್ರಿ ಹಣ ದುರುಪಯೋಗ ದಾಖಲೆಗಳಿವೆ ಎಂದು ತೋರಿಸಿದರು. ತಪ್ಪಿತಸ್ಥರ ವಿರುದ್ಧ ಈ ಕೂಡಲೇ ಕ್ರಮ ಕೈಗೊಳ್ಳುವಂತೆ ಸಿಇಒಗೆ ಜೋಶಿ ಖಡಕ್ ವಾರ್ನಿಂಗ್ ಕೂಡ ಮಾಡಿದರು.

  • ಅಮಿತ್ ಶಾ ಕಾರ್ಯಕ್ರಮಕ್ಕೆ ಮರಗಳ ಮಾರಣಹೋಮ!

    ಅಮಿತ್ ಶಾ ಕಾರ್ಯಕ್ರಮಕ್ಕೆ ಮರಗಳ ಮಾರಣಹೋಮ!

    ಹುಬ್ಬಳ್ಳಿ: ಜನವರಿ 18ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಡೆಯಲಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಜನಜಾಗೃತಿ ಸಮಾವೇಶಕ್ಕೆ ಹತ್ತಾರು ಮರಗಳನ್ನ ಕಡಿದು ಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

    ನೆಹರು ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ. ಈ ಸಮಾವೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ. ಹೀಗಾಗಿ ಭದ್ರತಾ ದೃಷ್ಟಿಯಿಂದ ಹತ್ತಾರು ಮರಗಳ ಟೊಂಗೆ ಕಡಿಯಬೇಕಾದ ಪಾಲಿಕೆ ಸಿಬ್ಬಂದಿ ಮರಗಳನ್ನ ಕಡಿದು ಹಾಕಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಗೃಹ ಸಚಿವ ಅಮಿತ್ ಶಾ ಅವರಿಗೆ ಭದ್ರತೆ ನೀಡುವ ಜವಾಬ್ದಾರಿ ಹೊತ್ತಿದ್ದಾರೆ. ಹೀಗಾಗಿ ರಕ್ಷಣೆಗೆ ತೊಡಕಾಗುತ್ತದೆ ಎಂದು ನೆಹರು ಮೈದಾನದಕ್ಕೆ ಹೊಂದಿಕೊಂಡಿರುವ ಕೊಪ್ಪಿಕರ ರಸ್ತೆಯ ಬಳಿಯ ಗಿಡಮರಗಳ ಟೊಂಗೆ ಕಡಿಯಲು ಪಾಲಿಕೆಗೆ ಸೂಚಿಸಿದ್ದರು. ಆದರೆ ಪಾಲಿಕೆ ಸಿಬ್ಬಂದಿ ಟೊಂಗೆಗಳನ್ನ ಕಡಿಯದೆ ಮರಗಳನ್ನೇ ನೆಲಕ್ಕೆ ಉರುಳಿಸಿದ್ದಾರೆ.

    ಮರ ಕಡಿದಿದ್ದಕ್ಕೆ ಸಚಿವರು ಗರಂ:
    ಅಮಿತ್ ಶಾ ಕಾರ್ಯಕ್ರಮದ ಭದ್ರತೆಗಾಗಿ ಮರಗಳನ್ನ ಕಡಿದು ಹಾಕಿರುವ ವಿಚಾರ ತಿಳಿಯುತ್ತಿದ್ದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಿಟ್ಟಾಗಿ ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳನ್ನ ತರಾಟೆಗೆ ತಗೆದುಕೊಂಡಿದ್ದಾರೆ. ಮರಗಳನ್ನ ಕಡಿದಿದ್ದು ಯಾರು? ಅವರಿಗೆ ಸೂಚನೆ ಕೊಟ್ಟವರು ಯಾರು? ಎಂದು ಪ್ರಲ್ಹಾದ ಜೋಶಿ ಪಾಲಿಕೆ ಆಯುಕ್ತರನ್ನ ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ಮರಗಳನ್ನ ಕಡಿದಿರುವ ಬಗ್ಗೆ ಪರಿಶೀಲನೆ ನಡೆಸಿ ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಲ್ಹಾದ್ ಜೋಶಿ ಸೂಚನೆ ನೀಡಿದ್ದಾರೆ.

  • ಕಾಂಗ್ರೆಸ್ಸಿನವ್ರು 70 ವರ್ಷದಿಂದ ಮಾಡಿದ್ದು, ಈಗ ಬಯಲಿಗೆ ಬರ್ತಾ ಇದೆ: ಶೆಟ್ಟರ್

    ಕಾಂಗ್ರೆಸ್ಸಿನವ್ರು 70 ವರ್ಷದಿಂದ ಮಾಡಿದ್ದು, ಈಗ ಬಯಲಿಗೆ ಬರ್ತಾ ಇದೆ: ಶೆಟ್ಟರ್

    ಹುಬ್ಬಳಿ: ಕಾಂಗ್ರೆಸ್ಸಿನವರು 60-70 ವರ್ಷಗಳ ಕಾಲ ದೇಶವನ್ನು ದರೋಡೆ ಮಾಡಿದ್ದಾರೆ. ಅದೆಲ್ಲವೂ ಈಗ ಬಯಲಿಗೆ ಬರುತ್ತಾ ಇದೆ ಎಂದು ಬೃಹತ್, ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಕೈ ನಾಯಕರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

    ಹುಬ್ಬಳ್ಳಿಯಲ್ಲಿಂದು ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಶೆಟ್ಟರ್, ಜೆಡಿಎಸ್ ಪಕ್ಷದಲ್ಲಿ ಸಾಕಷ್ಟು ಶಾಸಕರು ಅಸಮಧಾನಗೊಂಡಿದ್ದಾರೆ. ಶನಿವಾರ ಹಲವು ಶಾಸಕರು ಹೊರಟ್ಟಿಯವರ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಜೆಡಿಎಸ್ ಶಾಸಕರು ಅಸಮಧಾನಗೊಂಡು ಮುಂದಿನ ತೀರ್ಮಾನ ಕೈಗೊಳ್ಳಲು ರೆಡಿಯಾಗಿದ್ದಾರೆ ಎಂದು ತಿಳಿಸಿದರು.

    ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಐಟಿ ದಾಳಿ ಬಗ್ಗೆ ನಾನು ಏನೂ ಹೇಳಲ್ಲ. ಪರಮೇಶ್ವರ್ ಸಹ ರಾಜಕೀಯ ಪ್ರೇರಿತವಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಹೇಳಿದರು.

    ಕಾಂಗ್ರೆಸ್ಸಿನವರು ಐಟಿ ದಾಳಿ ವಿಚಾರದಲ್ಲಿ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಾ ಇದ್ದಾರೆ. ರಮೇಶ್ ಆತ್ಮಹತ್ಯೆ ಪ್ರಕರಣ ತನಿಖೆ ನಡೆಯುತ್ತಿದೆ. ಮುಂದೆ ಎಲ್ಲವೂ ಬಯಲಿಗೆ ಬರಲಿದೆ ಎಂದು ಹೇಳುವ ಮೂಲಕ ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಹೇಳಿದ ಕೈ ನಾಯಕರಿಗೆ ತಿರುಗೇಟು ನೀಡಿದರು.

  • ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಕರ್ನಾಟಕ ಸಂಸದರು

    ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಕರ್ನಾಟಕ ಸಂಸದರು

    ನವದೆಹಲಿ: 17ನೇ ಲೋಕಸಭೆಯ ಮೊಟ್ಟ ಮೊದಲ ಅಧಿವೇಶನ ಆರಂಭವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಆಯ್ಕೆ ಆಗಿರುವ 542 ಮಂದಿ ಸದಸ್ಯರು ಸದನದ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

    ಕರ್ನಾಟಕದಿಂದ ಆಯ್ಕೆ ಆಗಿರುವ ಸಂಸದರಾದ ಸದಾನಂದ ಗೌಡ, ಸುರೇಶ್ ಅಂಗಡಿ ಅವರು ಕನ್ನಡದಲ್ಲೇ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಈ ವೇಳೆ ಇತರೇ ಸಂಸದರು ಮೇಜು ಕುಟ್ಟಿ ಸ್ವಾಗತ ಮಾಡಿದರು.

    ಕಳೆದ ಲೋಕಸಭೆಯಲ್ಲಿ ಅನಂತ್ ಕುಮಾರ್ ನಿರ್ವಹಿಸುತ್ತಿದ್ದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯನ್ನೇ ಸದಾನಂದ ಗೌಡರಿಗೆ ನೀಡಲಾಗಿದೆ. ಇಂದು ಡಿವಿಎಸ್ ಅವರು 4ನೇಯವರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ 12ನೇಯವರಾಗಿ ಸಂಸರಾದ ಪ್ರಹ್ಲಾದ್ ಜೋಶಿ ಅವರು ಕೂಡ ಕನ್ನಡಲ್ಲೇ ಪ್ರಮಾಣ ವಚನ ಸ್ವೀಕರಿಸಿದರು.

    ಲೋಕಸಭೆಯಲ್ಲಿ ಆಡಳಿತ ಪಕ್ಷದ ನಾಯಕರಾಗಿರುವ ಪ್ರಧಾನಿ ನರೇಂದ್ರ ಮೋದಿ ಮೊದಲಿಗರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಮಧ್ಯಪ್ರದೇಶದ ಸಾಗರ್ ಕ್ಷೇತ್ರದ ಸಂಸದ ವೀರೇಂದ್ರ ಕುಮಾರ್ ಹಂಗಾಮಿ ಸ್ಪೀಕರ್ ಆಗಿದ್ದು ಹೊಸ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. ಪ್ರಧಾನಿ ಮೋದಿ ಬಳಿಕ ರಾಜ್‍ನಾಥ್ ಸಿಂಗ್, ನಿತಿನ್ ಗಡ್ಕರಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

    542 ಸಂಸದರಲ್ಲಿ 267 ಮಂದಿ ಲೋಕಸಭೆಗೆ ಹೊಸ ಸದಸ್ಯರಾಗಿದ್ದು, ಅತೀ ದೊಡ್ಡ ಪಕ್ಷವಾಗಿರುವ ಬಿಜೆಪಿ 303 ಸದಸ್ಯ ಬಲದ ಪ್ರಚಂಡ ಬಹುಮತ ಹೊಂದಿದೆ. ಆದರೆ ಕಳೆದ ಬಾರಿಯಂತೆ ಈ ಬಾರಿಯೂ ಲೋಕಸಭೆಯಲ್ಲಿ ಯಾವುದೇ ಅಧಿಕೃತ ವಿಪಕ್ಷವಿಲ್ಲ. ಕಾಂಗ್ರೆಸ್ 52 ಸಂಸದರನ್ನು ಹೊಂದಿದ್ದರೂ ಅಧಿಕೃತ ವಿಪಕ್ಷ ಸ್ಥಾನಕ್ಕೆ 55 ಸ್ಥಾನಗಳು ಅಗತ್ಯವಿದೆ. ಉಳಿದಂತೆ ಡಿಎಂಕೆ -23, ಟಿಎಂಸಿ -22, ಜೆಡಿಯು – 16, ಬಿಎಸ್‍ಪಿ -10, ವೈಎಸ್‍ಆರ್‍ಪಿ -22, ಶಿವಸೇನೆ -18, ಬಿಜೆಡಿ – 12, ಟಿಆರ್‍ಎಸ್ -9, ಎಲ್‍ಜೆಪಿ – 6 ಸಂಸದರನ್ನು ಹೊಂದಿದೆ. ಪಕ್ಷೇತರ ಸಂಸದೆಯಾಗಿ ಆಯ್ಕೆ ಇತಿಹಾಸ ನಿರ್ಮಿಸಿರುವ ಮಂಡ್ಯ ಸಂಸದೆ ಸುಮಲತಾ ನಾಳೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.