Tag: ಪ್ರವಾಸಿತಾಣ

  • ಡಾ.ವಿಷ್ಣುವರ್ಧನ್ ಸ್ಮಾರಕ ಪ್ರವಾಸಿ ತಾಣವಾಗಲಿ : ಸಿಎಂ ಬೊಮ್ಮಾಯಿ

    ಡಾ.ವಿಷ್ಣುವರ್ಧನ್ ಸ್ಮಾರಕ ಪ್ರವಾಸಿ ತಾಣವಾಗಲಿ : ಸಿಎಂ ಬೊಮ್ಮಾಯಿ

    ಮೈಸೂರಿನಲ್ಲಿ ಇಂದು ನಟ ವಿಷ್ಣುವರ್ಧನ್ (Vishnuvardhan) ಅವರ ಸ್ಮಾರಕವನ್ನು (Memorial) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ಮಾರಕವು ಪ್ರವಾಸಿ ತಾಣವಾಗಬೇಕು. ಈ ನಿಟ್ಟಿನಲ್ಲಿ ಸರಕಾರವು ವಿಷ್ಣುವರ್ಧನ್ ಅವರ ಕುಟುಂಬದೊಂದಿಗೆ ನಿಲ್ಲುತ್ತದೆ ಎಂದು ಭರವಸೆ ನೀಡಿದರು. ಈ ನಾಡಿಗೆ ವಿಷ್ಣುವರ್ಧನ್ ನೀಡಿದ ಕೊಡುಗೆಯನ್ನು ಸ್ಮರಿಸಿದ ಅವರು, ನಾನೂ ಕೂಡ ವಿಷ್ಣುವರ್ಧನ್ ಅವರ ಅಭಿಮಾನಿ ಎಂದು ಘೋಷಣೆ ಮಾಡಿದರು.

    ಬೊಮ್ಮಾಯಿ ಅವರು ಭಾಷಣ ಮಾಡುವ ವೇಳೆ ವಿಷ್ಣು ಅಭಿಮಾನಿಗಳು ಪ್ಲೇ ಕಾರ್ಡ್ ಹಿಡಿದುಕೊಂಡು ಮೌನವಾಗಿ ‘ಮಾನ್ಯ ಮುಖ್ಯಮಂತ್ರಿಗಳೇ.. ಡಾ.ವಿಷ್ಣುವರ್ಧನ್ ಅವರು ಕರ್ನಾಟಕ ರತ್ನ ಅಲ್ಲವೆ?’ ಎನ್ನುವ ಬೋರ್ಡ್ ಹಿಡಿದುಕೊಂಡು ನಿಂತಿದ್ದರು. ಅದನ್ನು ಕಂಡ ಮುಖ್ಯಮಂತ್ರಿಗಳು, ‘ನಿಮ್ಮೆಲ್ಲರ ಭಾವನೆಗಳಿಗೆ ನಮ್ಮ ಸರಕಾರ ಮುಂದಿನ ದಿನಗಳಲ್ಲಿ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತದೆ’ ಎನ್ನುವ ಭರವಸೆಯನ್ನೂ ನೀಡಿದರು. ಇದನ್ನೂ ಓದಿ: ವಿಷ್ಣುವರ್ಧನ್ ಪರಭಾಷಾ ನಟರಾ?: ಫಿಲ್ಮ್ ಚೇಂಬರ್ ವಿರುದ್ಧ ವೀರಕಪುತ್ರ ಶ್ರೀನಿವಾಸ್ ಆಕ್ರೋಶ

    ಮುಂದುವರೆದು ಮಾತನಾಡುತ್ತಾ, ‘ವಿಷ್ಣುವರ್ಧನ್ ಅವರ ಕಲೆ, ಸಾಹಸ, ಚಿತ್ರರಂಗದಲ್ಲಿ ಮಾಡಿರೋ ಸಾಧನೆ ಕಣ್ಣ ಮುಂದೆ ಇದೆ. ನಾನು ಒಬ್ಬ ವಿಷ್ಣುವರ್ಧನ್ ಅಭಿಮಾನಿಯಾಗಿ ಇಲ್ಲಿ ಬಂದಿದ್ದೇನೆ. 70 ರ ದಶಕದಲ್ಲಿ ನಾಗರಹಾವಿನ ಹೊಸ ನಾಯಕ, ಅವ್ರ ಚಿತ್ರ ಬಂದಿತ್ತು. ಮೊದಲ ಸಲಾ ನೋಡಿದವ್ರು ಖಂಡಿತವಾಗಿ ವಿಷ್ಣುವರ್ಧನ್ ಫ್ಯಾನ್ ಆಗ್ತಾ ಇದ್ದರು. ನಾಗರಹಾವು ಚಿತ್ರದ ಮೂಲಕ ನಾಡಿನ ಜನಮನ ಗೆದ್ದವರು ಡಾ. ವಿಷ್ಣುವರ್ಧನ್. ಎಲ್ಲಾ ರೀತಿಯ ಪಾತ್ರಗಳನ್ನು ಮಾಡಿ ಸಾಹಸ ಸಿಂಹನಾಗಿ ಕರ್ನಾಟಕದಲ್ಲಿ ಮರೆದವರು’ ಎಂದು ಕೊಂಡಾಡಿದರು ಬಸವರಾಜ ಬೊಮ್ಮಾಯಿ.

    ಈ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ರಾಮದಾಸ್, ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ, ಮಗಳು ಕೀರ್ತಿ ಸೇರಿದಂತೆ ಲಕ್ಷಾಂತರ ಅಭಿಮಾನಿಗಳು ಸ್ಮಾರಕ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಮೈಸೂರಿಗೆ ಹರಿದು ಬಂದಿದ್ದರು. ಅನ್ನದಾನ, ರಕ್ತದಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಸ್ಥಳದಲ್ಲೇ ಆಯೋಜನೆ ಮಾಡಲಾಗಿತ್ತು.

    2020ರ ಸೆ.15ರಂದು ಸ್ಮಾರಕ ನಿರ್ಮಾಣಕ್ಕೆ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವರ್ಚುವೆಲ್ ಆಗಿ ಭೂಮಿ ಪೂಜೆಯನ್ನು ನೆರವೇರಿಸಿದ್ದರು. ಬರೋಬ್ಬರಿ 11 ಕೋಟಿ ವೆಚ್ಚದಲ್ಲಿ ಈ ಸ್ಮಾರಕ ನಿರ್ಮಾಣವಾಗಿದ್ದು, ಪೊಲೀಸ್ ವಸತಿ ನಿಗಮವು ಇದರ ಉಸ್ತುವಾರಿ ವಹಿಸಿಕೊಂಡಿತ್ತು.  5 ಎಕರೆ ಜಾಗದಲ್ಲಿ ಈ ಸ್ಮಾರಕ ನಿರ್ಮಾಣವಾಗಿದೆ. ಒಟ್ಟು 27 ಸಾವಿರ ಚದರಡಿಯಲ್ಲಿ ಸ್ಮಾರಕದ ಕಟ್ಟಡ ತಲೆಯೆತ್ತಿದೆ.

    ಸ್ಮಾರಕ ಕಟ್ಟದಲ್ಲಿ ಎರಡು ಎಕರೆಯಲ್ಲಿ ತಳಮಹಡಿ, ನೆಲಮಹಡಿ ಹಾಗೂ ವಿಷ್ಣುವರ್ಧನ್ ನಿಂತಿರುವ ಭಂಗಿಯ ಪ್ರತಿಮೆ, ಸಂಭಾಗಣ, ಕಲಾವಿದರ ಕೊಠಡಿ, ತರಗತಿ ಕೊಠಡಿಗಳು ಹೀಗೆ ನಾನಾ ಕಟ್ಟಡಗಳನ್ನು ಅದು ಒಳಗೊಂಡಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ವಿಷ್ಣು ಪ್ರತಿಮೆಯು ಕೂಡ ಪ್ರವಾಸಿಗರನ್ನು ಕೈ ಬೀಸಿ ಕರೆಯುವಂತಿದೆ. ಅಲ್ಲದೇ, ವಿಷ್ಣುವರ್ಧನ್ ಅವರ ಚಿತಾಭಸ್ಮವನ್ನು ಇಲ್ಲಿಯೇ ತಂದಿಡಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಿಸರ್ಗದ ನೈಜ ಸೌಂದರ್ಯವನ್ನೇ ಅನಾವರಣಗೊಳಿಸಿದೆ ಅಬ್ಬುಗುಡಿಗೆ ಫಾಲ್ಸ್

    ನಿಸರ್ಗದ ನೈಜ ಸೌಂದರ್ಯವನ್ನೇ ಅನಾವರಣಗೊಳಿಸಿದೆ ಅಬ್ಬುಗುಡಿಗೆ ಫಾಲ್ಸ್

    – ಜಲಧಾರೆಯ ಸೊಬಗಿಗೆ ಮಾರು ಹೋದ ಪ್ರವಾಸಿಗರು
    – ಫಾಲ್ಸ್ ಎಲ್ಲಿದೆ..? ಏನಿದರ ವಿಶೇಷ..?

    ಚಿಕ್ಕಮಗಳೂರು: ನೈಸರ್ಗಿಕ ಸೌಂದರ್ಯದ ಖನಿಯಂತಿರೋ ಕಾಫಿನಾಡಲ್ಲೀಗ ಮುಂಗಾರು ಮಳೆ ಕೊಂಚ ಬಿಡುವು ಪಡೆದಿದೆ. ಆದರೆ ಮಳೆಯ ಹನಿಗಳ ಸಿಂಚನದಿಂದಾಗಿ ಜಲಪಾತಗಳು ಮೈದುಂಬಿ ಹರಿಯುತ್ತಿವೆ. ಚಂದ್ರದ್ರೋಣ ಪರ್ವತ ಶ್ರೇಣಿಯ ಸೆರಗಲ್ಲಿರೋ ಅಬ್ಬುಗುಡಿಗೆ ಫಾಲ್ಸ್ ನಿಸರ್ಗದ ನೈಜ ಸೌಂದರ್ಯವನ್ನೇ ಅನಾವರಣಗೊಳಿಸಿದೆ. ದಟ್ಟಕಾನನದ ನಡುವೆ ಬಂಡೆಗಳ ಮೇಲಿಂದ ಧುಮ್ಮಿಕ್ಕಿ ಹರಿಯುತ್ತಿರೋ ಜಲಪಾತವೀಗ ಅದ್ಭುತ ಲೋಕವನ್ನೇ ಸೃಷ್ಟಿಸಿದೆ. ಈ ಜಲಧಾರೆಯ ಸೊಬಗನ್ನು ಸವಿಯೋಕೆ ಪ್ರವಾಸಿಗರ ದಂಡೀಗ ಕಾಫಿನಾಡಲ್ಲಿ ಮನೆ ಮಾಡಿದೆ.

    ಹೌದು. ಎಲ್ಲಿ ನೋಡಿದರೂ ಹಚ್ಚ ಹಸರಿನ ಸೊಬಗು. ತಂಪಾದ ವಾತಾವರಣ. ಇದು ಕಾಫಿನಾಡಲ್ಲಿ ಕಂಡು ಬರುವ ಸುಂದರ ದೃಶ್ಯಗಳು. ಈ ಸೌಂದರ್ಯವನ್ನ ಸವಿಯಲೆಂದೇ ಪ್ರವಾಸಿಗರು ಕಾಫಿನಾಡನ್ನ ಭೂಲೋಕದ ಸ್ವರ್ಗ ಅಂತಾರೆ. ಒಮ್ಮೆ ಇಲ್ಲಿಗೆ ಭೇಟಿ ಕೊಟ್ಟರೆ ಸಾಕು ಮನಸ್ಸು ಪ್ರಪುಲ್ಲಗೊಳ್ಳುತ್ತೆ. ಅದರಲ್ಲೂ ಇಲ್ಲಿನ ಜಲಪಾತಗಳಲ್ಲಿ ಎಂಜಾಯ್ ಮಾಡಿದರೆ ಪ್ರವಾಸಿಗರು ಕಾಫಿನಾಡ ಸೌಂದರ್ಯಕ್ಕೆ ಮತ್ತಷ್ಟು ಮಾರು ಹೋಗ್ತಾರೆ. ಅದರಲ್ಲೂ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಈ ಜಲಪಾತ ಹೊರ ಪ್ರಪಂಚಕ್ಕೆ ಅಷ್ಟಾಗಿ ಗೊತ್ತಿಲ್ಲ. ಆದರೆ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿರೋ ಈ ಅಬ್ಬುಗುಡಿಗೆ ಜಲಪಾತ ಕಳಸಾದಿಂದ ಕೇವಲ 5 ಕಿ.ಮೀ ದೂರವಷ್ಟೆ. ಹಚ್ಚ ಹಸಿರಿನ ಕಾನನದ ಮಧ್ಯೆ ಹಾಲ್ನೋರೆಯಂತೆ ಭಾಸವಾಗುತ್ತಾ ಧುಮ್ಮಿಕ್ಕುವ ಈ ಜಲಪಾತದ ಸೌಂದರ್ಯವನ್ನು ವರ್ಣಿಸಲಾಧ್ಯ. ಅದರಲ್ಲೂ ಮಳೆಗಾಲದಲ್ಲಿ ಈ ಜಲಪಾತವನ್ನ ನೋಡುವುದೇ ಕಣ್ಣಿಗೆ ಹಬ್ಬ. ಮಳೆಗಾಲದಲ್ಲಿ ಈ ಜಲಪಾತದ ಸೊಬಗನ್ನ ಕಂಡವರು ಕಾಫಿನಾಡಿನ ಬಗ್ಗೆ ಮತ್ತಷ್ಟು ಫಿದಾ ಆಗೋದ್ರಲ್ಲಿ ನೋ ಡೌಟ್.

    ಕಳಸ ಪಟ್ಟಣದಿಂದ ಐದು ಕಿ.ಮೀ ಸಾಗಿ ಅರ್ಧ ಕಿ.ಮೀ. ನಷ್ಟು ದೂರ ಕಾಲು ದಾರಿಯಲ್ಲಿ ನಡೆದು ಹೋದರೆ ನೀರಿನ ಸದ್ದು ಕೇಳೋದಕ್ಕೆ ಶುರುವಾಗುತ್ತೆ. ಸುಮಾರು 20-30 ಅಡಿ ಎತ್ತರದಿಂದ ಹಾಲ್ನೊರೆಯಂತೆ ದುಮ್ಮಿಕ್ಕೋ ಜಲಪಾತವನ್ನ ನೋಡಲೆರಡು ಕಣ್ಣು ಸಾಲದು. ಮಳೆಗಾಲದಲ್ಲಿ ಅಬ್ಬುಗುಡಿಗೆ ಫಾಲ್ಸ್‍ನ ಚೇಲುವೇ ಬೇರೆ. ಈ ಫಾಲ್ಸ್ ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿದೆ. ಇಲ್ಲಿಗೆ ಬರುವವರು ಪ್ರವಾಸಿಗರು ಮೋಜು-ಮಸ್ತಿ ಮಾಡೋದ್ರಿಂದ ಗ್ರಾಮಸ್ಥರಿಗೆ ಕಿರಿಕಿರಿಯಾಗಿದೆ. ಫಾಲ್ಸ್‍ಗೆ ಮೂಲಭೂತ ಸೌಲಭ್ಯಗಳಿಲ್ಲ. ಈ ಫಾಲ್ಸ್ ಅಭಿವೃದ್ಧಿಯಾಗುತ್ತೆ. ಪ್ರವಾಸಿಗರು ಬರೋದ್ರಿಂದ ಗ್ರಾಮ ಅಭಿವೃದ್ಧಿಯಾಗುತ್ತೆ ಎಂದು ಭಾವಿಸಿದ್ದ ಗ್ರಾಮಸ್ಥರಿಗೆ ಪ್ರವಾಸಿಗರಿಂದ ಕಿರಿಕಿರಿಯೇ ಹೆಚ್ಚಾಗಿದೆ. ಇಲ್ಲಿ ಕೆಲ ಚಿತ್ರಗಳ ಚಿತ್ರೀಕರಣ ಕೂಡ ನಡೆದಿದೆ. ರಸ್ತೆ ಸಂಪರ್ಕವೂ ಸರಿ ಇಲ್ಲ. ಸಂಬಂಧಪಟ್ಟ ಅಧಿಕಾರಿಗಳು ಪ್ರವಾಸಿಗರ ವರ್ತನೆಗೆ ಕಡಿವಾಣ ಹಾಕಿ. ಜಲಪಾತವನ್ನು ಅಭಿವೃದ್ಧಿಪಡಿಸಬೇಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

    ಒಟ್ಟಾರೆ ಅಗತ್ಯ ಅಭಿವೃದ್ಧಿಯಾದಲ್ಲಿ ಈ ಫಾಲ್ಸ್ ಅದ್ಭುತ ತಾಣವಾಗೋದ್ರದಲ್ಲಿ ಎರಡು ಮಾತಿಲ್ಲ. ಮಳೆಗಾಲದಲ್ಲಿ ಕಳಸ-ಹೊರನಾಡಿಗೆ ಭೇಟಿ ಕೊಡೋ ಪ್ರವಾಸಿಗರು ಕಳಸೇಶ್ವರ ಹಾಗೂ ಅನ್ನಪೂಣೇಶ್ವರಿಯ ದರ್ಶನ ಪಡೆದು ಫಾಲ್ಸ್ ಸೌಂದರ್ಯವನ್ನ ಸವಿಯುತ್ತಾರೆ. ಪ್ರೇಕ್ಷಣಿಯ ಸ್ಥಳಗಳು, ತಂಪು ವಾತಾವರಣ, ಹಕ್ಕಿಪಕ್ಷಿಗಳ ನಿನಾದ ಪ್ರವಾಸಿಗರ ನೆನಪಲ್ಲಿ ಉಳಿಯಲಿದೆ. ಆದರೆ, ಸರ್ಕಾರ ಇತ್ತ ಗಮನ ಹರಿಸಿ ಇಲ್ಲಿಗೆ ಮೂಲಭೂತ ಸೌಲಭ್ಯ ಕಲ್ಪಿಸೋದ್ರ ಜೊತೆ ಈ ತಾಣವನ್ನ ಅಭಿವೃದ್ಧಿ ಪಡಿಸಬೇಕೆಂಬ ಕೂಗು ಜೋರಿದೆ.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಕೊಡಗಿನಲ್ಲಿ ಅಧಿಕಾರಿಗಳಿಂದ ಅಂಗಡಿಗಳ ಮೇಲೆ ದಾಳಿ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಕೊಡಗಿನಲ್ಲಿ ಅಧಿಕಾರಿಗಳಿಂದ ಅಂಗಡಿಗಳ ಮೇಲೆ ದಾಳಿ

    ಮಡಿಕೇರಿ: ಕೊಡಗು ಜಿಲ್ಲೆಯ ಪ್ರವಾಸಿ ಕೇಂದ್ರಗಳು ಮತ್ತು ಕೆಲವೆಡೆ ನಕಲಿ ಚಾಕ್ಲೇಟ್ ಮಾರಾಟ ನಡೆಯುತ್ತಿರುವ ಬಗ್ಗೆ ಕಳೆದ ಎರಡು ದಿನಗಳ ಹಿಂದೆ ಪಬ್ಲಿಕ್ ಟಿವಿಯಲ್ಲಿ ಪ್ರಸಾರ ಮಾಡಲಾಗಿತ್ತು. ಈ ಸುದ್ದಿ ವರದಿಯಾದ ಬೆನ್ನಲ್ಲೇ ಇದೀಗ ಆಹಾರ ಇಲಾಖೆ ಅಧಿಕಾರಿಗಳು ಮಡಿಕೇರಿಯಲ್ಲಿ ದಾಳಿ ನಡೆಸಿ, ಕೆಲ ವರ್ತಕರಿಗೆ ನೋಟಿಸ್ ನೀಡಿದ್ದಾರೆ.

    ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ದಂಧೆ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಆಹಾರ ಇಲಾಖೆಯ ಹಿರಿಯ ಅಧಿಕಾರಿ ಶಿವಕುಮಾರ್, ರಾಜಾಸೀಟ್, ಅಬ್ಬಿಫಾಲ್ಸ್, ಕಾವೇರಿ ನಿಸರ್ಗಧಾಮ ಸೇರಿದಂತೆ ವಿವಿಧ ಕಡೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ ಹೋಮ್ ಮೇಡ್ ದಂಧೆ- ಪಬ್ಲಿಕ್ ಟಿವಿ ಸ್ಟಿಂಗ್‍ನಲ್ಲಿ ಚಾಕ್ಲೇಟ್ ಬಣ್ಣ ಬಯಲು

    ಆಹಾರ ಪದಾರ್ಥಗಳನ್ನು ಮಾರಾಟ ಮಾಡಲು ನಿಯಮಾನುಸಾರ ಪರವಾನಗಿ ಪಡೆಯಬೇಕು, ನಕಲಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿರುವ ಅಧಿಕಾರಿಗಳು ಹಲವು ವರ್ತಕರಿಗೆ ನೋಟೀಸ್ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲೆಡೆ ಹಲವು ತಂಡಗಳು ಕಾರ್ಯಾಚರಣೆ ನಡೆಸಲಿದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

    ಕೊಡಗಿನ ಹೋಂ ಮೇಡ್ ಚಾಕ್ಲೇಟ್‍ಗೆ ವಿಶೇಷ ಸ್ಥಾನಮಾನ ಇದೆ. ರಾಜ್ಯದ ಹಾಗೂ ಹೊರರಾಜ್ಯದಿಂದ ಬರುವ ಪ್ರವಾಸಿಗರು ಅಪಾರ ಪ್ರಮಾಣದಲ್ಲಿ ಚಾಕ್ಲೇಟ್ ಕೊಳ್ಳುತ್ತಾರೆ. ಇದನ್ನೇ ಎನ್‍ಕ್ಯಾಶ್ ಮಾಡಿಕೊಂಡ ದಂಧೆಕೋರರು ಹೋಂಮೇಡ್ ಹೆಸರಲ್ಲಿ ಜನರ ಹೊಟ್ಟೆಗೆ ವಿಷ ತುಂಬುತ್ತಿದ್ದಾರೆ. ಹೊರರಾಜ್ಯದಿಂದ ಚಾಕ್ಲೇಟ್ ಸ್ಲ್ಯಾಬ್‍ಗಳನ್ನು ತಂದು ಅವುಗಳನ್ನೇ ಕರಗಿಸಿ ಬೇಕಾದ ಶೇಪ್‍ಗಳಿಗೆ ಬದಲಾಯಿಸಿ ಮಾರಾಟ ಮಾಡುತ್ತಿದ್ದಾರೆ. ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ಚಾಕ್ಲೇಟ್ ತಯಾರಿಸುತ್ತಿದ್ದಾರೆ. ಈ ಚಾಕ್ಲೇಟ್ ಮೇಲೆ ತಯಾರಿಕಾ ದಿನ ಆಗಲಿ, ಎಕ್ಸ್ ಪೈರಿ ಡೇಟ್ ಆಗಲಿ ಯಾವುದೂ ಇಲ್ಲ. ಅಷ್ಟೇ ಏಕೆ ಆಹಾರ ಸುರಕ್ಷಾ ಇಲಾಖೆ ನೀಡುವ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‍ಎಸ್‍ಎಸ್‍ಎಐ) ಅನುಮತಿ ಕೂಡ ಇಲ್ಲ.