Tag: ಪ್ರವಾಸಿ ತಾಣ

  • ವಿಯೆಟ್ನಾಂನಲ್ಲಿ ಪ್ರವಾಸಿ ದೋಣಿ ಮಗುಚಿ 34 ಮಂದಿ ಸಾವು – ಹಲವರು ಮಿಸ್ಸಿಂಗ್‌

    ವಿಯೆಟ್ನಾಂನಲ್ಲಿ ಪ್ರವಾಸಿ ದೋಣಿ ಮಗುಚಿ 34 ಮಂದಿ ಸಾವು – ಹಲವರು ಮಿಸ್ಸಿಂಗ್‌

    ಹನೋಯಿ: ವಿಯೆಟ್ನಾಂನಲ್ಲಿ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ದೋಣಿ ಮಗುಚಿ 34 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. 8ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಶನಿವಾರ ಮಧ್ಯಾಹ್ನದ ವೇಳೆಗೆ ಗುಡುಗು ಸಹಿತ ಭಾರೀ ಮಳೆಯಿಂದಾಗಿ ಹಾ ಲಾಂಗ್ ಕೊಲ್ಲಿ ಪ್ರವಾಸಿ ತಾಣದಲ್ಲಿ ದುರ್ಘಟನೆ ನಡೆದಿದೆ.

    ಪ್ರವಾಸಿ ದೋಣಿಯಲ್ಲಿ 48 ಮಂದಿ ಪ್ರಯಾಣಿಕರು ಹಾಗೂ ಐವರು ಸಿಬ್ಬಂದಿ ಇದ್ದರು. ಅವರೆಲ್ಲರೂ ವಿಯೆಟ್ನಾಮ್‌ನವರೇ ಎಂದು ವದರಿಗಳು ತಿಳಿಸಿವೆ. ವಿಷಯ ತಿಳಿದ ಕೂಡಲೇ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, 11 ಜನರನ್ನ ರಕ್ಷಣೆ ಮಾಡಿದ್ದಾರೆ.

  • ಪ್ರತಿ ರಾಜ್ಯದಲ್ಲಿ ಒಂದು ವಿಶ್ವದರ್ಜೆಯ ಪ್ರವಾಸಿ ತಾಣ ಅಭಿವೃದ್ಧಿಪಡಿಸಿ: ಮೋದಿ ಕರೆ

    ಪ್ರತಿ ರಾಜ್ಯದಲ್ಲಿ ಒಂದು ವಿಶ್ವದರ್ಜೆಯ ಪ್ರವಾಸಿ ತಾಣ ಅಭಿವೃದ್ಧಿಪಡಿಸಿ: ಮೋದಿ ಕರೆ

    – ಟೀಂ ಇಂಡಿಯಾ ರೀತಿ ಕೇಂದ್ರ, ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕು: ಪ್ರಧಾನಿ

    ನವದೆಹಲಿ: ವಿಕಸಿತ ಭಾರತ (Viksit Bharat) ಗುರಿಯನ್ನು ಸಾಧಿಸಲು ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ‘ಟೀಂ ಇಂಡಿಯಾ’ ರೀತಿ ಕೆಲಸ ಮಾಡಬೇಕೆಂದು ಪ್ರಧಾನಿ ಮೋದಿ (Narendra Modi) ಕರೆ ನೀಡಿದರು.

    ನೀತಿ ಆಯೋಗದ (Niti Aayog) ಹತ್ತನೇ ಸಭೆಯ ಅಧ್ಯಕ್ಷತೆ ವಹಿಸಿದ ಅವರು, ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾತನಾಡಿದರು. ನಾವು ಅಭಿವೃದ್ಧಿಯ ವೇಗವನ್ನು ಹೆಚ್ಚಿಸಬೇಕು. ಕೇಂದ್ರ ಮತ್ತು ಎಲ್ಲಾ ರಾಜ್ಯಗಳು ಒಟ್ಟಾಗಿ ಟೀಂ ಇಂಡಿಯಾದಂತೆ ಒಟ್ಟಾಗಿ ಕೆಲಸ ಮಾಡಿದರೆ, ಯಾವುದೇ ಗುರಿ ಅಸಾಧ್ಯವಲ್ಲ. ವಿಕಸಿತ ಭಾರತ ಭಾರತ ಪ್ರತಿಯೊಬ್ಬ ಭಾರತೀಯನ ಗುರಿ. ಪ್ರತಿಯೊಂದು ರಾಜ್ಯ ವಿಕಸಿತ ಆದಾಗ, ಭಾರತ ವಿಕಸಿತವಾಗುತ್ತದೆ. ಇದು 140 ಕೋಟಿ ನಾಗರಿಕರ ಆಕಾಂಕ್ಷೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಮೋದಿ ನೇತೃತ್ವದ ನೀತಿ ಆಯೋಗದ ಸಭೆಗೆ ಸಿದ್ದರಾಮಯ್ಯ ಗೈರು

    ರಾಜ್ಯಗಳು ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಅಗತ್ಯ ಸೌಲಭ್ಯಗಳು ಮತ್ತು ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಕನಿಷ್ಠ ಒಂದು ಪ್ರವಾಸಿ ತಾಣವನ್ನು ವಿಶ್ವದರ್ಜೆಯ ತಾಣವನ್ನಾಗಿ ಅಭಿವೃದ್ಧಿಪಡಿಸಬೇಕು. ಒಂದು ರಾಜ್ಯ, ಒಂದು ಜಾಗತಿಕ ತಾಣ. ಇದು ನೆರೆಯ ನಗರಗಳನ್ನು ಪ್ರವಾಸಿ ಸ್ಥಳಗಳಾಗಿ ಅಭಿವೃದ್ಧಿಪಡಿಸಲು ಸಹ ಕಾರಣವಾಗುತ್ತದೆ ಎಂದರು. ಇದನ್ನೂ ಓದಿ: ಪ್ರೀತಿಸಿದವನೊಂದಿಗೆ ಮನೆಬಿಟ್ಟು ಹೋದ ಮಗಳು – ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಶಂಕೆ

    ಭಾರತ ವೇಗವಾಗಿ ನಗರೀಕರಣಗೊಳ್ಳುತ್ತಿದೆ. ಭವಿಷ್ಯಕ್ಕೆ ಸಿದ್ಧವಾಗಿರುವ ನಗರಗಳತ್ತ ನಾವು ಕೆಲಸ ಮಾಡಬೇಕು. ಬೆಳವಣಿಗೆ, ನಾವೀನ್ಯತೆ ಮತ್ತು ಸುಸ್ಥಿರತೆಯು ನಮ್ಮ ನಗರಗಳ ಅಭಿವೃದ್ಧಿಗೆ ಎಂಜಿನ್ ಆಗಿರಬೇಕು. ನಮ್ಮ ಕಾರ್ಯಪಡೆಯಲ್ಲಿ ಮಹಿಳೆಯರನ್ನು ಸೇರಿಸಿಕೊಳ್ಳುವ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕು. ಅವರು ಕಾರ್ಯಪಡೆಯಲ್ಲಿ ಗೌರವಯುತವಾಗಿ ಸಂಯೋಜಿಸಲ್ಪಡುವಂತೆ ನಾವು ಕಾನೂನುಗಳು, ನೀತಿಗಳನ್ನು ರೂಪಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: `ಯುವನಿಧಿ’ ಗ್ಯಾರಂಟಿ ಹಣದಿಂದ ಲ್ಯಾಪ್‌ಟಾಪ್‌ ಖರೀದಿಸಿದ ವಿದ್ಯಾರ್ಥಿನಿ ಇಶಾ ಆಸಿಫ್‌

    ಸರ್ಕಾರ ಜಾರಿಗೆ ತಂದ ನೀತಿಗಳು ಸಾಮಾನ್ಯ ನಾಗರಿಕರ ಜೀವನದಲ್ಲಿ ಬದಲಾವಣೆ ತರುವ ರೀತಿಯಲ್ಲಿ ನಾವು ಕೆಲಸ ಮಾಡಬೇಕು. ಜನರು ಬದಲಾವಣೆಯನ್ನು ಅನುಭವಿಸಿದಾಗ ಮಾತ್ರ, ಅದು ಬದಲಾವಣೆಯನ್ನು ಬಲಪಡಿಸುತ್ತದೆ. ಬದಲಾವಣೆಯನ್ನು ಒಂದು ಚಳುವಳಿಯಾಗಿ ಪರಿವರ್ತಿಸುತ್ತದೆ. 140 ಕೋಟಿ ಜನರ ಆಕಾಂಕ್ಷೆಗಳನ್ನು ಈಡೇರಿಸಲು ನಮಗೆ ಒಂದು ತಂಡವಾಗಲು ಉತ್ತಮ ಅವಕಾಶವಿದೆ. 2047ರ ವೇಳೆಗೆ ಭಾರತವನ್ನು ವಿಕಸಿತ ಮಾಡುವುದು ನಮ್ಮ ಗುರಿಯಾಗಿದೆ. ಪ್ರತಿಯೊಂದು ರಾಜ್ಯ, ಪ್ರತಿಯೊಂದು ನಗರ, ಪ್ರತಿಯೊಂದು ನಗರ ಪಾಲಿಕೆ ಮತ್ತು ಪ್ರತಿಯೊಂದು ಗ್ರಾಮವನ್ನು ವಿಕಸಿತ ಮಾಡುವ ಗುರಿ ನಮಗಿರಬೇಕು. ನಾವು ಈ ಮಾರ್ಗಗಳಲ್ಲಿ ಕೆಲಸ ಮಾಡಿದರೆ, ವಿಕಸಿತ ಭಾರತ ಆಗಲು 2047ರವರೆಗೆ ಕಾಯಬೇಕಾಗಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಡ್ರೆಸ್ ತಪ್ಪಾಗಿದ್ದಕ್ಕೆ ಗಲಾಟೆ – ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಡೆಲಿವರಿ ಬಾಯ್!

    ಪುದುಚೇರಿ ಸಿಎಂ ರಂಗಸ್ವಾಮಿ, ಕರ್ನಾಟಕ ಸಿಎಂ ಸಿದ್ಧರಾಮಯ್ಯ ಮತ್ತು ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಸಭೆಗೆ ಗೈರುಹಾಜರಾಗಿದ್ದರು. ಆಂಧ್ರಪ್ರದೇಶ, ತಮಿಳುನಾಡು ಮತ್ತು ತೆಲಂಗಾಣ ಮುಖ್ಯಮಂತ್ರಿಗಳಾದ ಎನ್ ಚಂದ್ರಬಾಬು ನಾಯ್ಡು, ಎಂಕೆ ಸ್ಟಾಲಿನ್ ಮತ್ತು ರೇವಂತ್ ರೆಡ್ಡಿ ಉಪಸ್ಥಿತರಿದ್ದರು. ಜಮ್ಮು ಕಾಶ್ಮೀರದ ಸಿಎಂ ಒಮರ್ ಅಬ್ದುಲ್ಲಾ ಮತ್ತು ಹಿಮಾಚಲ ಪ್ರದೇಶದ ಸುಖವಿಂದರ್ ಸುಖು ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: Vijayapura | ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತ – ಯುವಕ ಸಾವು

  • ಆಗುಂಬೆ ಘಾಟ್- ಒಂದು ಬಾರಿ ಹೋದ್ರೆ ಮತ್ತೆ ಮತ್ತೆ ಸೆಳೆಯುವ ಏಕೈಕ ಸ್ಥಳ

    ಆಗುಂಬೆ ಘಾಟ್- ಒಂದು ಬಾರಿ ಹೋದ್ರೆ ಮತ್ತೆ ಮತ್ತೆ ಸೆಳೆಯುವ ಏಕೈಕ ಸ್ಥಳ

    ರಾವಳಿಯಂತೆ ಶಿವಮೊಗ್ಗದಲ್ಲಿಯೂ ಸಾಕಷ್ಟು ಅದ್ಭುತ ಪ್ರವಾಸಿ ತಾಣಗಳಿವೆ. ಅವುಗಳಲ್ಲಿ ಆಗುಂಬೆ ಘಾಟ್ ಕೂಡ ಒಂದು. ಇದು ಭಾರತದಲ್ಲಿ ಅತಿ ಹೆಚ್ಚು ಮಳೆ ಬೀಳುವ ಸ್ಥಳಗಳಲ್ಲಿ ಒಂದಾಗಿದ್ದು, ಈ ಹಿನ್ನೆಲೆಯಲ್ಲಿ ಆಗುಂಬೆಯನ್ನು ದಕ್ಷಿಣದ ಚಿರಾಪುಂಜಿ ಎಂದೂ ಕರೆಯುತ್ತಾರೆ. ಚಾರಣಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಈ ಆಗುಂಬೆ ಘಾಟ್. ಹೀಗಾಗಿ ಪ್ರಕೃತಿಯ ಈ ಸೌಂದರ್ಯವನ್ನು ಸವಿಯಲು ನೀವು ಈ ಸ್ಥಳಕ್ಕೆ ಭೇಟಿ ನೀಡಲೇಬೇಕು. ಈ ಸ್ಥಳಕ್ಕೆ ನೀವು ಒಂದು ಬಾರಿ ಭೇಟಿ ಕೊಟ್ಟರೆ ಮತ್ತೆ ಮತ್ತೆ ಹೋಗಬೇಕು ಎನ್ನುವ ಅದ್ಭುತ ಸ್ಥಳ ಇದಾಗಿದೆ.

    ಆಗುಂಬೆ ಘಾಟ್ ಎಲ್ಲಿದೆ?: ಪಶ್ಚಿಮ ಘಟ್ಟದಲ್ಲಿರುವ ಆಗುಂಬೆ ಘಾಟ್ ಉಡುಪಿ ಜಿಲ್ಲೆ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸಂಪರ್ಕಿಸುತ್ತದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಈ ಪ್ರವಾಸಿ ಸ್ಥಳ ಬರುತ್ತದೆ. ಇಲ್ಲಿನ ಪ್ರಕೃತಿ ಸೌಂದರ್ಯ ಎಂಥವರನ್ನೂ ಮಂತ್ರಮುಗ್ಧರನ್ನಾಗಿಸುತ್ತದೆ. ಆಗುಂಬೆಯು ಸೂರ್ಯಾಸ್ತ, ಟ್ರಕ್ಕಿಂಗ್, ಫೋಟೋಗ್ರಫಿ, ವಾತಾವರಣ, ರಾಜ ನಾಗರಹಾವಿನ ಸಂಶೋಧನಾ ಕೇಂದ್ರ ಹಾಗೂ ಔಷಧೀಯ ಸಸ್ಯಗಳಿಗೆ ಹೆಸರುವಾಸಿಯಾಗಿದೆ. ಎಲ್ಲದಕ್ಕಿಂತಲೂ ಮುಖ್ಯವಾಗಿ ಸಂಜೆಯ ವೇಳೆ ಸೂರ್ಯಾಸ್ತವಾಗುವ ದೃಶ್ಯವನ್ನು ಕಾಣಲು ಸಾವಿರಾರು ಮಂದಿ ಇಲ್ಲಿಗೆ ಆಗಮಿಸುತ್ತಾರೆ. ಮಳೆಗಾಲದಲ್ಲಿ ಕಾದು ಕುಳಿತು ಸೂರ್ಯಾಸ್ತವನ್ನು ಕಣ್ತುಂಬಿಕೊಳ್ಳುವುದೇ ಸಡಗರವಾಗಿರುತ್ತದೆ. ಹೆಚ್ಚಿನ ಪ್ರವಾಸಿಗರು ಆಗುಂಬೆಯನ್ನು ಅದರ ಕಾಡುಗಳ ಮೂಲಕ ಚಾರಣ ಮಾಡಲು ಅಥವಾ ಜಲಪಾತಗಳನ್ನು ವೀಕ್ಷಿಸಲು ಭೇಟಿ ನೀಡುತ್ತಾರೆ.

    ತಲುಪುವುದು ಹೇಗೆ?: ಆಗುಂಬೆ ಘಾಟ್‍ಗೆ ತೆರಳಲು ವಿಮಾನದಲ್ಲಿ ಬರುವವರಾದರೆ ನೀವು ಮಂಗಳೂರು ವಿಮಾನ ನಿಲ್ದಾಣಕ್ಕೆ ಬರಬೇಕು. ನಂತರ ಅಲ್ಲಿಂದ ಬಸ್ಸಿನ ಮೂಲಕ ಸುಮಾರು 100 ಕಿ.ಮೀ ದೂರ ಸಾಗಿದರೆ ಆಗುಂಬೆ ಘಾಟ್ (Agumbe Ghat) ಸಿಗುತ್ತದೆ. ಇನ್ನು ರೈಲಿನ ಮೂಲಕ ಬರುವವರಾದರೆ ಮಂಗಳೂರು ಮತ್ತು ಶಿವಮೊಗ್ಗ ಹತ್ತಿರದ ರೈಲು ನಿಲ್ದಾಣಗಳಿವೆ. ಇದನ್ನೂ ಓದಿ: ಪ್ರಕೃತಿ ರಮಣೀಯ ನರಹರಿ ಪರ್ವತದ ಸೌಂದರ್ಯ ಸವಿಯಲು ನೀವೂ ಭೇಟಿ ಕೊಡಿ

    ಭೇಟಿ ನೀಡಬೇಕಾದ ಪ್ರಮುಖ ಸ್ಥಳಗಳು: ಆಗುಂಬೆಯು ಕರ್ನಾಟಕದ ಒಂದು ಗಿರಿಧಾಮವಾಗಿದ್ದು, ಇದು ಹಚ್ಚ ಹಸಿರಿನ ಜೊತೆಗೆ ಬೆರಗುಗೊಳಿಸುವ ಸೂರ್ಯಾಸ್ತಗಳಿಗೆ ಹೆಸರುವಾಸಿಯಾಗಿದೆ. ವಾರಾಂತ್ಯದಲ್ಲಿ ಸ್ನೇಹಿತರು ಅಥವಾ ಕುಟುಂಬದೊಂದಿಗೆ ವಿಹಾರಕ್ಕೆ ಭೇಟಿ ನೀಡಲು ಇದು ಸೂಕ್ತ ಸ್ಥಳವಾಗಿದೆ. ಆಗುಂಬೆಯ ಜೊತೆಗೆ, ನೀವು ಭೇಟಿ ನೀಡಬಹುದಾದ ಕುಂದಾದ್ರಿ ಬೆಟ್ಟಗಳು, ಶೃಂಗೇರಿ ಮತ್ತು ಕುಪ್ಪಳ್ಳಿಯಂತಹ ಅನೇಕ ಹತ್ತಿರದ ಆಕರ್ಷಣೆಗಳಿವೆ. ಈ ಸ್ಥಳಗಳು ಅದ್ಭುತ ನೋಟಗಳು, ದೇವಾಲಯಗಳು, ಜಲಪಾತಗಳು, ವನ್ಯಜೀವಿಗಳು ಮತ್ತು ಸಾಹಸ ಚಟುವಟಿಕೆಗಳನ್ನು ನೀಡುತ್ತವೆ.

    ಇದರ ಜೊತೆಗೆ ಗೋಪಾಲಕೃಷ್ಣ ದೇವಾಲಯ, ಸನ್ಸೆಟ್ ಪಾಯಿಂಟ್ ಗಳಿಗೆ ಭೇಟಿ ನೀಡಿದರೆ ನಿಮಗೆ ಅದ್ಭುತ ಅನುಭವ ಸಿಗುವುದರಲ್ಲಿ ಎರಡು ಮಾತಿಲ್ಲ. ಇದರ ಜೊತೆಗೆ ಒಂದಷ್ಟು ಜಲಪಾತಗಳಿಗೂ ಭೇಟಿ ಕೊಟ್ಟು ಎಂಜಾಯ್ ಮಾಡಬಹುದು. ಅವುಗಳೆಂದರೆ ಕುಂಚಿಕಲ್ ಜಲಪಾತ, ಬರ್ಕಾನ ಜಲಪಾತ, ಒನಕೆ ಅಬ್ಬಿ ಜಲಪಾತ, ಜೋಗಿಗುಂಡಿ ಹಾಗೂ ಕೂಡ್ಲು ತೀರ್ಥ ಜಲಪಾತ.

    ಇಷ್ಟು ಮಾತ್ರವಲ್ಲದೇ ಆಗುಂಬೆಯಲ್ಲಿ ನಾರಿಷ್ಮ ಪರ್ವತ ಅನ್ನುವ ಎತ್ತರದ ಶಿಖರವಿದೆ. ಕೆಲಸದ ಜಂಜಾಟದಲ್ಲಿದ್ದವರು ಮನಸ್ಸಿಗೆ ಏಕಾಂತವನ್ನು ಬಯಸುವವರು ಹಾಗೂ ವಿಶ್ರಾಂತಿ ತೆಗೆದುಕೊಳ್ಳಬೆಕೆಂಬ ಬಯಕೆ ಇರುವವರಿಗೆ ಈ ಚಾರಣವು ಬಹಳಷ್ಟು ಮುದ ನೀಡುತ್ತದೆ. ಇದು ಎತ್ತರದ ಹುಲ್ಲುಗಾವಲು ಮತ್ತು ದಟ್ಟವಾದ ಅರಣ್ಯ ಪ್ರದೇಶವನ್ನು ಹೊಂದಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಒಳಗೆ ಹಲವಾರು ಬಗೆಯ ಪಕ್ಷಿಗಳು ಮತ್ತು ಇತರ ಪ್ರಾಣಿಗಳನ್ನು ನೋಡಬಹುದು.

    ಸ್ವರ್ಗದ ಅನುಭವ: ನೀವು ಕಾಡಿನೊಳಗೆ ಹೋಗುತ್ತಿದ್ದಂತೆಯೇ ನಿಮಗೆ ಸ್ವರ್ಗದ ಅನುಭವಾಗುತ್ತದೆ. ಸುತ್ತಮುತ್ತಲೂ ಹಚ್ಚ ಹಸುರಿನಿಂದ ಕಂಗೊಳಿಸುವ ಮರಗಳು, ಪಕ್ಷಿಗಳ ಕೂಗು.. ಅಲ್ಲಲ್ಲಿ ಝುಳು ಝುಳು ನೀರಿನ ಶಬ್ಧ ಇವೆಲ್ಲವೂ ನಿಮ್ಮ ಮನಸ್ಸಿನ ಭಾರವನ್ನು ಇಳಿಯುವಂತೆ ಮಾಡುತ್ತವೆ. ಈ ಜಾಡು ನಿಮ್ಮನ್ನು ದಟ್ಟವಾದ ಕಾಡುಗಳ ಮೂಲಕ ಕರೆದೊಯ್ಯುತ್ತದೆ. ಹೀಗೆ ಸಾಗುವಾಗ ಕೆಲವರು ವಿವಿಧ ಸಸ್ಯ ಮತ್ತು ಪ್ರಾಣಿಗಳನ್ನು ವೀಕ್ಷಿಸಬಹುದು, ಇನ್ನೂ ಕೆಲವರು ದಾರಿಯಲ್ಲಿರುವ ಜಲಪಾತಗಳಲ್ಲಿ ಆನಂದಿಸಬಹುದು ಅಥವಾ ವಿಶ್ರಾಂತಿ ಪಡೆಯಬಹುದು.

    ಕೊನೆಯದಾಗಿ ನೀವು ಸೂರ್ಯಾಸ್ತದ ಸ್ಥಳಕ್ಕೆ ಗಿರಿಧಾಮಕ್ಕೆ ಚಾರಣ ಮಾಡಬಹುದು. ನೀವು ಹೋಗುವ ಸಂದರ್ಭದಲ್ಲಿ ಮಂಜು ಕಡಿಮೆ ಇದ್ದರೆ ಅರಬ್ಬಿ ಸಮುದ್ರದ ಸುಂದರವಾದ ದೂರದ ನೋಟವನ್ನು ಸವಿಯಬಹುದು. ಇಲ್ಲಿ ವಿಶ್ರಾಂತಿಯನ್ನು ಪಡೆದುಕೊಳ್ಳಬಹುದು. ಪ್ರಶಾಂತವಾದ ವಾತಾವರಣದ ನಡುವೆ ಕುಳಿತು ಅದ್ಭುತ ನೋಟಗಳು ನಿಮ್ಮನ್ನೇ ನೀವು ಮರೆಯುಂತೆ ಮಾಡುತ್ತದೆ.

    ಉತ್ತಮ ಸಮಯ: ಆಗುಂಬೆಗೆ ನೀವು ಯಾವಾಗ ಬೇಕಾದರೂ ಭೇಟಿ ಕೊಡಬಹುದು. ಯಾಕೆಂದರೆ ಈ ಸ್ಥಳ ತಂಪಾದ ವಾತಾವರಣವನ್ನು ಹೊಂದಿದೆ. ಮಳೆಗಾಲ ಮತ್ತು ಚಳಿಗಾಲವು ಆಗುಂಬೆಗೆ ಭೇಟಿ ನೀಡಲು ಉತ್ತಮ ತಿಂಗಳುಗಳಾಗಿವೆ. ಈ ಸಮಯದಲ್ಲಿ ಪ್ರಕೃತಿ ವಿಸ್ಮಯವನ್ನು ನೀವು ಆನಂದಿಸಬಹುದು. ಅಕ್ಟೋಬರ್‍ನಿಂದ ಫೆಬ್ರವರಿ ನಡುವೆ ಯಾವಾಗ ಬೇಕಾದರೂ ಭೇಟಿ ನೀಡಬಹುದು, ಇದು ಸರಾಸರಿ ಮಾನ್ಸೂನ್ ಋತುವಾಗಿದೆ, ಇದು ಸೌಮ್ಯವಾದ ಮತ್ತು ಶುಷ್ಕ ಋತುವಾಗಿದ್ದು, ಪಾದಯಾತ್ರೆಗೆ ಸೂಕ್ತವಾಗಿದೆ.

  • ಕಾಫಿನಾಡಿನ ಸ್ವರ್ಗ ಮುಳ್ಳಯ್ಯನಗಿರಿ ನೀವೂ ಭೇಟಿ ಕೊಡಿ

    ಕಾಫಿನಾಡಿನ ಸ್ವರ್ಗ ಮುಳ್ಳಯ್ಯನಗಿರಿ ನೀವೂ ಭೇಟಿ ಕೊಡಿ

    ಬ್ಯುಸಿ ಲೈಫ್‍ನ ಜಂಜಾಟದಿಂದ ಹೊರಬರಲು ಪ್ರಕೃತಿ ಸೌಂದರ್ಯ ಸವಿಯಬೇಕೇ ಹಾಗಿದ್ರೆ ಚಿಕ್ಕಮಗಳೂರು (Chikkamagaluru) ಜಿಲ್ಲೆಗೆ ಒಂದು ಬಾರಿ ಭೇಟಿ ಕೊಡಿ. ಅಲ್ಲಿ ವಿವಿಧ ಪ್ರವಾಸಿ ಸ್ಥಳಗಳಿವೆ. ಹಚ್ಚ ಹಸಿರಿನ ತಂಪಿಗೆ ಮೈ ಒಡ್ಡಿ ನಿಂತರೆ ನಿಮ್ಮೆಲ್ಲಾ ಒತ್ತಡಗಳು ನಿವಾರಣೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಈ ಪ್ರವಾಸಿ ಸ್ಥಳಗಳಲ್ಲಿ (Tourist Place) ಮುಳ್ಳಯ್ಯನಗಿರಿ ಬೆಟ್ಟವೂ ಒಂದು.

    ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾಗಿರುವ ಇಲ್ಲಿ ಕಾಫಿ ಹಾಗೂ ಟೀ ತೋಟಗಳು, ದಟ್ಟ ಅರಣ್ಯ ಮತ್ತು ಗಿರಿ ಶಿಖರಗಳು ಇಲ್ಲಿನ ಪ್ರಮುಖ ಆಕರ್ಷಣೆ. ಇಲ್ಲಿನ ಪರ್ವತಗಳು ಒಂದಕ್ಕಿಂತ ಒಂದು ವಿಭಿನ್ನ ಮತ್ತು ಆಕರ್ಷಿತವಾಗಿರುತ್ತವೆ. ಇವುಗಳಲ್ಲಿ ಮುಳ್ಳಯ್ಯನಗಿರಿ ಪ್ರಮುಖವಾದುದು. ಇದು ಅತ್ಯಂತ ಸುಲಭದ ಚಾರಣ ತಾಣ, ಪ್ರವಾಸಿಗರ ನೆಚ್ಚಿನ ಹಾಗೂ ಅತ್ಯಂತ ಎತ್ತರದ ಶಿಖರವಾಗಿದೆ.

    ಚಿಕ್ಕಮಗಳೂರಿಗೆ ಲ್ಯಾಂಡ್ ಮಾರ್ಕ್‍ನಂತಿರೋ ಈ ಶಿಖರ ವು ಮಳೆಗಾಲದಿಂದ ಚಳಿಗಾಲದವರೆಗೆ ಭಾರೀ ಸಂಖ್ಯೆಯ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತದೆ. ಇದು ಸಮುದ್ರ ಮಟ್ಟದಿಂದ ಸುಮಾರು 6,330 ಅಡಿ ಎತ್ತರವಿದ್ದು, ಹಿಮಾಲಯ ಮತ್ತು ನೀಲಗಿರಿ ಪರ್ವತ ಶ್ರೇಣಿಗಳ ನಡುವಿನ ಅತಿ ಎತ್ತರದ ಪ್ರದೇಶವಾಗಿದೆ. ಮುಳ್ಳಯ್ಯನಗಿರಿ (Mullayanagiri) ಚಿಕ್ಕಮಗಳೂರಿನಿಂದ ಸುಮಾರು 20 ಕಿ.ಮಿ. ದೂರದಲ್ಲಿದ್ದು, ಬೆಟ್ಟದ ತುದಿಯವರೆಗೆ ಉತ್ತಮವಾದ ರಸ್ತೆಯಿದೆ. ರಸ್ತೆ ಕಿರಿದಾದ್ದರಿಂದ ಈ ರಸ್ತೆ ಅಪಾಯಕಾರಿ ರಸ್ತೆಯೂ ಹೌದು. ಇದನ್ನೂ ಓದಿ: ಅನಾಮಿಕ ಸುಂದರಿ ದಿಡುಪೆ ಫಾಲ್ಸ್

    ನಡೆದುಕೊಂಡು ಅಥವಾ ಸೈಕಲ್ ನಲ್ಲಿ ಪ್ರಯಾಣ ಮಾಡುವವರಿಗೆ ಉತ್ತಮ ಪ್ರಯಾಣದ ಅನುಭವ ನೀಡುತ್ತದೆ. ಆದರೆ ಕಾರು ಅಥವಾ ಅದಕ್ಕಿಂತ ದೊಡ್ಡ ವಾಹನಗಳು ಇಲ್ಲಿ ಚಲಿಸಬೇಕು ಎಂದರೆ ಕೊಂಚ ಅಪಾಯವೇ ಸರಿ. ಯಾಕೆಂದರೆ ಇಲ್ಲಿನ ರಸ್ತೆಗಳು ಉತ್ತಮವಾಗಿವೆಯಾದರೂ ಕಿರಿದಾದದ್ದು. ಅಲ್ಲದೆ ಬೆಟ್ಟ ಏರುತ್ತಿದ್ದಂತೆಯೇ ಮಂಜುಕವಿದ ವಾತಾವರಣ ನಿರ್ಮಾಣವಾಗುವುದರಿಂದ ಅಪಘಾತದ ಸಂಭವ ಹೆಚ್ಚು. ಹೀಗಾಗಿ ಕಾರಿನಲ್ಲಿ ಚಲಿಸುವವರು ನಿಧಾನದ ಮೊರೆಹೋಗಬೇಕು. ಇಲ್ಲಿನ ರಸ್ತೆಯ ಕಡಿದಾದ ತಿರುವಿನಲ್ಲಿ ಕಾರುಗಳು ಚಲಿಸಲು ಕೇವಲ ಉತ್ತಮ ಚಾಲಕನಿದ್ದರೆ ಸಾಲದು ಅನುಭವ ಹಾಗೂ ಸಹನೆ ಕೂಡ ಇರಬೇಕು.

    ಗಿರಿಯ ತುದಿಯಲ್ಲಿ ಶ್ರೀ ಗುರು ಮುಳ್ಳಪ್ಪಸ್ವಾಮಿ ತಪಸ್ಸು ಮಾಡಿದ ಗದ್ದುಗೆ ಹಾಗೂ ದೇವಾಲಯವಿದೆ. ಪುಟ್ಟದಾದ ಬಸವನ ಪ್ರತಿಮೆ ಹಾಗೂ ಪಕ್ಕದಲ್ಲಿ ಗುಹೆಯಂತಹ ರಚನೆಯಿದೆ. ಗದ್ದುಗೆ ಇರುವ ಜಾಗವನ್ನು ಮುನ್ನೂರಕ್ಕೂ ಹೆಚ್ಚು ಮೆಟ್ಟಿಲುಗಳ ಮೂಲಕ ಕಾಲ್ನಡಿಗೆಯಲ್ಲಿ ಸಾಗಬೇಕು. ಬೆಟ್ಟದ ತುದಿ ತಲುಪುತ್ತಿದ್ದಂತೆಯೇ ಮೋಡವನ್ನು ಚುಂಬಿಸುವಷ್ಟರ ಮಟ್ಟಿಗೆ ಮಂಜು ಆವರಿಸುತ್ತದೆ. ಮೋಡಗಳ ನಡುವೆ ಚಲಿಸುತ್ತಿದ್ದರೆ ಸ್ವರ್ಗದ ದಾರಿಯಲ್ಲಿ ಚಲಿಸುತ್ತಿದ್ದೇವೆಯೇನೋ ಎಂಬ ಅನುಭವ ಎದುರಾಗುತ್ತದೆ. ನಮ್ಮ ಪಕ್ಕದಲ್ಲಿರುವ ವ್ಯಕ್ತಿ/ವಸ್ತುಗಳೇ ಕಾಣದಷ್ಟು ಮಂಜು ಆವರಿಸುವ ಮೂಲಕ ನಮ್ಮನ್ನು ಮತ್ತೊಂದು ಲೋಕಕ್ಕೆ ಕರೆದೊಯ್ಯುತ್ತದೆ. ಇದನ್ನೂ ಓದಿ: ಇದು ಅಂತಿಂಥ ಕಲ್ಲಲ್ಲ ಗಡದ್ದಾದ ಗಡಾಯಿ ಕಲ್ಲು!

    ಬೆಟ್ಟದ ತುತ್ತತುದಿಯಲ್ಲಿರುವ ಒಂದೊಂದೇ ಮೆಟ್ಟಿಲುಗಳನ್ನು ಹತ್ತುತ್ತಿದ್ದರೆ ಸುಯ್ಯನೆ ಬೀಸುವ ಗಾಳಿ ಎಲ್ಲಿ ನಮ್ಮನ್ನೇ ಹೊತ್ತೊಯ್ಯುತ್ತದೆಯೋ ಎನ್ನುವ ಭೀತಿ ಕೂಡ ಕಾಡಲಾರಂಭಿಸುತ್ತದೆ. ಆ ಪ್ರಮಾಣದಲ್ಲಿ ಇಲ್ಲಿ ಗಾಳಿ ಬಿರುಸಾಗಿರುತ್ತದೆ. ಈ ವೇಳೆ ನಮಗೆ ಕಾಣಸಿಗುವ ಗಿರಿ-ಕಂದರಗಳು, ಪ್ರಪಾತಗಳು ಭಯದೊಂದಿಗೆ ಅಪೂರ್ವ ಸಂತೋಷವನ್ನು ಕೂಡ ಉಂಟು ಮಾಡುತ್ತದೆ. ಚಾರಣ ಪ್ರಿಯರ ಸ್ವರ್ಗವೆನಿಸಿಕೊಂಡಿರುವ ಮುಳ್ಳಯ್ಯನಗಿರಿ ದಕ್ಷಿಣ ಭಾರತದಲ್ಲೇ ಪ್ರಮುಖ ಚಾರಣ ಸ್ಥಳಗಳಲ್ಲೊಂದು.

    ಹೋಗುವುದು ಹೇಗೆ..?: ಮಂಗಳೂರಿನಿಂದ ಸುಮಾರು 172 ಕಿ.ಮೀ ದೂರದಲ್ಲಿದ್ದು, ಉಡುಪಿಯಿಂದ 187 ಕಿ.ಮೀ, ಬೆಂಗಳೂರಿನಿಂದ 264 ಕಿ.ಮೀ, ಉಜಿರೆಯಿಂದ 106 ಕಿ.ಮೀ. ದೂರದಲ್ಲಿದೆ. ಮುಳ್ಳಯ್ಯನಗಿರಿಗೆ ಮಂಗಳೂರು-ಉಜಿರೆ-ಚಾರ್ಮಾಡಿ ಮಾರ್ಗವಾಗಿ ಹೋಗಬಹುದು. ಇದಲ್ಲದೆ ಮಂಗಳೂರು-ಕಾರ್ಕಳ-ಕಳಸ-ಬಾಳೆಹೊನ್ನೂರು ಮಾರ್ಗವಾಗಿಯೂ ಇಲ್ಲಿಗೆ ತಲುಪಬಹುದು. ಇಲ್ಲಿಗೆ ಸಾಕಷ್ಟು ಸಂಖ್ಯೆಯ ಖಾಸಗಿ ಹಾಗೂ ಸರ್ಕಾರಿ ಸಾರಿಗೆ ಬಸ್‍ಗಳ ಸೇವೆ ಲಭ್ಯವಿದೆ. ಚಿಕ್ಕಮಗಳೂರು ಜಿಲ್ಲೆಯಿಂದ ಇಲ್ಲಿಗೆ ಬಾಡಿಗೆ ಟ್ಯಾಕ್ಸಿ ವ್ಯವಸ್ಥೆಯೂ ಇದೆ. ಸ್ವಂತ ವಾಹನಗಳು ಇಲ್ಲದ ಮಂದಿ ಬಾಡಿಗೆ ವಾಹನಗಳನ್ನು ಮಾಡಿಕೊಂಡು ಈ ಸ್ಥಳವನ್ನು ತಲುಪಬಹುದು.

    ಊಟ-ತಿಂಡಿ ವ್ಯವಸ್ಥೆ ಇಲ್ಲ: ವಾರಾಂತ್ಯದಲ್ಲಿ ಮಾತ್ರ ಬೆಟ್ಟದ ಬುಡದಲ್ಲಿ ಮಾತ್ರ ಸ್ಥಳೀಯರು ಕೆಲ ತಿಂಡಿ ತಿನಿಸುಗಳನ್ನು ಮಾರುತ್ತಾರೆ. ಹೊರತು ಇಲ್ಲಿ ಊಟ ತಿಂಡಿಯ ವ್ಯವಸ್ಥೆ ಇಲ್ಲ. ಹೀಗಾಗಿ ಟ್ರೆಕ್ಕಿಂಗ್ ಹೋಗುವವರು ಊಟ-ತಿಂಡಿಯನ್ನು ಕಟ್ಟಿಕೊಂಡು ಹೋಗುವುದು ಒಳ್ಳೆಯದು.

    ಯಾವ ಸಮಯ ಸೂಕ್ತ: ಮುಳ್ಳಯನಗಿರಿ ಟ್ರಿಪ್ ಹೋಗ ಬಯಸುವವರು ಅಕ್ಟೋಬರ್ ತಿಂಗಳಿನಿಂದ ಫೆಬ್ರವರಿ ತಿಂಗಳ ಅವಧಿಯಲ್ಲಿ ಹೋಗುವುದು ಒಳ್ಳೆಯದು. ಈ ಸಮಯದಲ್ಲಿ ಬೆಟ್ಟದ ತುದಿಯಲ್ಲಿ ನಿಂತರೆ ಬಿರುಸಾದ ಗಾಳಿ, ಬಿಸಿಲಿನಲ್ಲೂ ಚಳಿಯ ಅನುಭವ ನೀಡುತ್ತದೆ.

  • ಶಕ್ತಿ ಯೋಜನೆ ಬಳಿಕ ಒಂದೇ ತಿಂಗಳಲ್ಲಿ ದೇಗುಲಗಳ ಆದಾಯ ಹೆಚ್ಚಳ

    ಶಕ್ತಿ ಯೋಜನೆ ಬಳಿಕ ಒಂದೇ ತಿಂಗಳಲ್ಲಿ ದೇಗುಲಗಳ ಆದಾಯ ಹೆಚ್ಚಳ

    – ಪ್ರವಾಸಿ ತಾಣಗಳಲ್ಲಿಯೂ ಪ್ರವಾಸಿಗರ ಸಂಖ್ಯೆ ಹೆಚ್ಚಳ

    ರಾಜ್ಯದಲ್ಲಿ ಮಳೆ (Rain)  ಕಡಿಮೆಯಾಗಿದ್ದು, ಈ ಹಿನ್ನೆಲೆ ಹಲವು ಸ್ಥಳಗಳಿಗೆ ಹಾಕಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಹೀಗಾಗಿ ಪ್ರಮುಖ ಪ್ರವಾಸಿ ಸ್ಥಳಗಳು (Tourist Place) ಹಾಗೂ ದೇಗುಲಗಳಲ್ಲಿ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.

    ಹೌದು. ಕಡಲತೀರದಲ್ಲಿ ನಿರ್ಬಂಧ ಹಾಕಲಾಗಿತ್ತು. ಇತ್ತ ಜುಲೈನಲ್ಲಿ ಪ್ರವಾಸಕ್ಕೆ ಬರಬೇಡಿ ಅಂತ ಚಿಕ್ಕಮಗಳೂರು ಡಿಸಿ ಮನವಿ ಮಾಡಿಕೊಂಡಿದ್ದರು. ಶಿವಮೊಗ್ಗದ ಕೊಡಚಾದ್ರಿ ಬೆಟ್ಟ ಕೂಡ ಪ್ರವಾಸಿಗರಿಗೆ ಮುಕ್ತವಾಗಿದೆ. ಇನ್ನು ಪ್ರಧಾನಿ (Narendra Modi) ಭೇಟಿ ಬಳಿಕ ಬಂಡೀಪುರದಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಇಷ್ಟು ಮಾತ್ರವಲ್ಲದೆ ಶಕ್ತಿ ಯೋಜನೆಯಿಂದ ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿಯೂ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಸದ್ಯ ಆಷಾಢ ಮುಗಿದು ಶ್ರಾವಣ ಆರಂಭವಾಗಿದ್ದು, ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುವವರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಶಕ್ತಿ ಯೋಜನೆಯಿಂದಾಗಿ ಯಾವ ದೇಗುಲಕ್ಕೆ ಎಷ್ಟು ಆದಾಯ ಬಂದಿದೆ ಎಂಬುದನ್ನು ಡೀಟೈಲ್ ಆಗಿ ಇಲ್ಲಿ ನೀಡಲಾಗಿದೆ. ಇದನ್ನೂ ಓದಿ: ಚಾರಣ ಸ್ನೇಹಿ ಬೆಟ್ಟ ಕೊಡಚಾದ್ರಿಯ ಪ್ರಮುಖ ಆಕರ್ಷಣೀಯ ಸ್ಥಳಗಳು

    ದೇಗುಲಗಳ ಆದಾಯ ಹೆಚ್ಚಾಗಿರುವ ವಿವರ: ಒಂದೇ ತಿಂಗಳಲ್ಲಿ 58 ದೇಗುಲಗಳ ಹುಂಡಿಯಲ್ಲಿ 25 ಕೋಟಿ ರೂಪಾಯಿ ಸಂಗ್ರಹವಾಗಿದೆ. ಕಳೆದ ವರ್ಷ ಜೂನ್ 11 ರವರೆಗೆ ಪ್ರತಿಷ್ಠಿತ 58 ದೇಗುಲಗಳಲ್ಲಿ ಇ- ಹುಂಡಿ ಮೂಲಕ 19 ಕೋಟಿ ಆದಾಯ ಸಂಗ್ರಹವಾಗಿತ್ತು. ಆದರೆ ಈ ವರ್ಷ ಜೂನ್ 11 ರಿಂದ ಜುಲೈ 15 ರವರೆಗೆ 24.47 ಕೋಟಿ ಆದಾಯ ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಆದಾಯದಲ್ಲಿ ಭಾರೀ ಹೆಚ್ಚಳ ಕಂಡಿದೆ. ಇದನ್ನೂ ಓದಿ:

    ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಸಂಗ್ರಹವಾಗಿರುವ ಆದಾಯದ ಆಧಾರದಲ್ಲಿ ಅಧಿಕೃತವಾಗಿ ಹೊಂದಿರುವ ಅಂಕಿ-ಅಂಶಗಳ ಪ್ರಕಾರ 2023-23ರಲ್ಲಿ ಅತ್ಯಂತ ಶ್ರೀಮಂತವಾದ ದೇವಸ್ಥಾನವೆಂದರೆ ಅದು ಕುಕ್ಕೆ ಸುಬ್ರಮಣ್ಯ (Kukke Subramanya). ಟಾಪ್ 1 ಸ್ಥಾನವನ್ನು ಕಾಯ್ದುಕೊಂಡಿರುವ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ಅತ್ಯಂತ ಹೆಚ್ಚು ವರಮಾನವುಳ್ಳ ದೇವಸ್ಥಾನವಾಗಿದೆ. ಅದರ ಆದಾಯ ಬರೋಬ್ಬರಿ 123 ಕೋಟಿ 64 ಲಕ್ಷ ಆಗಿದೆ.

    ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ನಂತರದ ಸ್ಥಾನದಲ್ಲಿರೋದು ಕುಂದಾಪುರದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯ (Kolluru Sri Mookambika Temple) . ಈ ದೇವಸ್ಥಾನಕ್ಕೆ ಹರಿದುಬಂದ ಆದಾಯ 59 ಕೋಟಿ 47 ಲಕ್ಷವಾಗಿದ್ದರೆ, ಖರ್ಚಾಗಿರುವುದು 33 ಕೋಟಿ 32 ಲಕ್ಷ. ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಹರಿದುಬಂದ ಆದಾಯದ 50% ರಷ್ಟು ಇಲ್ಲಿ ಸಂಗ್ರಹವಾಗಿದೆ. ಇನ್ನು ಟಾಪ್ 3ರ ಸ್ಥಾನದಲ್ಲಿರುವುದು ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಾಲಯ (Chamundeshwari Temple) ಮತ್ತು ಅರಮನೆ ಮುಜರಾಯಿ ದೇವಾಲಯಗಳು. ಇಲ್ಲಿ ಭಕ್ತಾದಿಗಳಿಂದ 52 ಕೋಟಿ 40 ಲಕ್ಷ ಸಂಗ್ರಹವಾಗಿದೆ.

    ಟಾಪ್ 4ರ ಸ್ಥಾನದಲ್ಲಿ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕು ಎಡೆಯೂರಿನ ಶ್ರೀ ಸಿದ್ಧಲಿಂಗೇಶ್ವರ ದೇವಾಲಯವಿದೆ. ಇಲ್ಲಿ ಸಂಗ್ರಹವಾಗಿದ್ದು 36 ಕೋಟಿ 48 ಲಕ್ಷವಾದ್ರೆ ಬರೋಬ್ಬರಿ 35 ಕೋಟಿ 68 ಲಕ್ಷದಷ್ಟು ಖರ್ಚಾಗಿದೆ. ಉಳಿದಿರೋದು ಕೇವಲ ಅರ್ಧ ಕೋಟಿ ಮಾತ್ರ. ಟಾಪ್ 5ರ ಸ್ಥಾನದಲ್ಲಿ ಮಂಗಳೂರು ತಾಲೂಕು ಕಟೀಲಿನ ಶ್ರೀ ದುರ್ಗಾಪರಮೇಶ್ವರಿ (Kateel Durgaparameshwari) ದೇವಸ್ಥಾನವಿದೆ. 32 ಕೋಟಿ 10 ಲಕ್ಷ ಆದಾಯದ ರೂಪದಲ್ಲಿ ಸಂಗ್ರಹವಾಗಿದ್ದು, 25 ಕೋಟಿ 97 ಲಕ್ಷದಷ್ಟು ಖರ್ಚಾಗಿದೆ.

    ಟಾಪ್ 6 ರ ಸ್ಥಾನದಲ್ಲಿ ಮೈಸೂರಿನ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯವಿದೆ. ಈ ದೇಗುಲಕ್ಕೆ 26 ಕೋಟಿ 71 ಲಕ್ಷ ಆದಾಯದ ರೂಪದಲ್ಲಿ ಹರಿದುಬಂದಿದ್ದು, 18 ಕೋಟಿ 74 ಲಕ್ಷದಷ್ಟು ಖರ್ಚಾಗಿದೆ. ಹಾಗೆಯೇ ಟಾಪ್ 7 ರ ಸ್ಥಾನದಲ್ಲಿ ಬೆಳಗಾಂನ ಎಲ್ಲಮ್ಮನ ಗುಡ್ಡ ಸವದತ್ತಿ ತಾಲೂಕಿನ ಶ್ರೀ ರೇಣುಕಾ ಎಲ್ಲಮ್ಮ ದೇವಸ್ಥಾನವಿದೆ. 22 ಕೋಟಿ 52 ಲಕ್ಷದಷ್ಟು ಆದಾಯ ಹರಿದುಬಂದಿದ್ರೆ ಖರ್ಚಾಗಿರುವುದು 11ಕೋಟಿ 51 ಲಕ್ಷವಂತೆ.

    ಟಾಪ್ 8ರ ಸ್ಥಾನದಲ್ಲಿ ಉಡುಪಿ ಜಿಲ್ಲೆ ಮಂದಾರ್ತಿಯ ಶ್ರೀ ದುರ್ಗಾಪರಮೇಶ್ವರಿ ದೇವಾಲಯವಿದ್ದು, ವಾರ್ಷಿಕ 14 ಕೋಟಿ 55 ಲಕ್ಷ ಗಳಿಕೆಯಾಗಿದೆ. ಈ ಪೈಕಿ 13 ಕೋಟಿ 2 ಲಕ್ಷದಷ್ಟು ಖರ್ಚಾಗಿದೆ. ಟಾಪ್ 9 ರ ಸ್ಥಾನದಲ್ಲಿ ದೊಡ್ಡಬಳ್ಳಾಪುರ ಜಿಲ್ಲೆ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯವಿದೆ. ದೇವಸ್ಥಾನಕ್ಕೆ ಹರಿದುಬಂದಿದ್ದು 12 ಕೋಟಿ 25 ಲಕ್ಷವಾದ್ರೆ 7 ಕೋಟಿ 2 ಲಕ್ಷ ಖರ್ಚಾಗಿದೆ. ಟಾಪ್ 10ರ ಸ್ಥಾನದಲ್ಲಿ ಬೆಂಗಳೂರಿನ ಶ್ರೀ ಬನಶಂಕರಿ ದೇವಸ್ಥಾನವಿದೆ. ದೇವಸ್ಥಾನದಲ್ಲಿ ಸಂಗ್ರಹವಾಗಿದ್ದು 10 ಕೋಟಿ 58 ಲಕ್ಷವಾದ್ರೆ, 19 ಕೋಟಿ 41 ಲಕ್ಷದಷ್ಟು ಖರ್ಚಾಗಿದೆ.

    ಆದಾಯಕ್ಕಿಂತ ಖರ್ಚಾಗಿರುವುದೇ ಹೆಚ್ಚು. ಇದು ಆಶ್ಚರ್ಯ-ಅನುಮಾನಕ್ಕೆ ಕಾರಣವಾಗಿದ್ರೂ ಆಶ್ಚರ್ಯವಿಲ್ಲ. ಅಂದಹಾಗೆ ಈ 10 ದೇವಸ್ಥಾನಗಳಿಂದಲೇ 390 ಕೋಟಿ 75 ಲಕ್ಷದಷ್ಟು ಆದಾಯ ಹರಿದುಬಂದಿರುವುದು ವಿಶೇಷ. 2023-24 ರಲ್ಲಿ ಆದಾಯದ ಪ್ರಮಾಣ ಹೆಚ್ಚಾಗಿರುವ ಸಾಧ್ಯತೆಗಳಿವೆ. ಇಷ್ಟೊಂದು ಆದಾಯದಲ್ಲಿ 281 ಕೋಟಿ 27 ಲಕ್ಷ ಖರ್ಚಾಗಿದೆ ಎಂದು ಮುಜರಾಯಿ ಇಲಾಖೆ ವಿವರಣೆ ಕೊಟ್ಟಿದೆ. ಇದೆಲ್ಲವೂ ಅಲ್ಲಿನ ದೇವಸ್ಥಾನಗಳು ಆಂತರಿಕವಾಗಿ ಮಾಡಿಕೊಂಡ ಲೆಕ್ಕಪರಿಶೋಧನೆಯಿಂದ ಹೊರಬಂದ ಮಾಹಿತಿಗಳಾಗಿವೆ. ಒಟ್ಟಿನಲ್ಲಿ ಮಳೆ, ಶ್ರಾವಣ, ಮಹಿಳೆಯರಿಗೆ ಫ್ರೀ ಬಸ್ ಟಿಕೆಟ್ ಪರಿಣಾಮ ರಾಜ್ಯದ್ಯಾಂತ ಇರುವ ಪ್ರವಾಸಿತಾಣಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುತ್ಯಾಲಮಡುವು ಪ್ರವಾಸಿತಾಣದಲ್ಲಿ ಈಜಲು ಹೋಗಿ ವ್ಯಕ್ತಿ ನೀರುಪಾಲು

    ಮುತ್ಯಾಲಮಡುವು ಪ್ರವಾಸಿತಾಣದಲ್ಲಿ ಈಜಲು ಹೋಗಿ ವ್ಯಕ್ತಿ ನೀರುಪಾಲು

    ಆನೇಕಲ್: ಈಜಲು ಹೋಗಿ ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಹೆಸರಾಂತ ಪ್ರವಾಸಿ ತಾಣ ಮುತ್ಯಾಲಮಡುವಿ (Muthyala Maduvu) ನಲ್ಲಿ ನಡೆದಿದೆ.

    ಜಿಗಣಿ ನಿವಾಸಿ ಜೋತಿಶ್ ಕುಮಾರ್ ಮೃತ ವ್ಯಕ್ತಿಯಾಗಿದ್ದು, ತನ್ನ ಎರಡು ವರ್ಷದ ಮಗನ ಜೊತೆಯಲ್ಲಿ ಮಧ್ಯಾಹ್ನ ಮುತ್ಯಾಲಮಡುವಿಗೆ ದ್ವಿಚಕ್ರ ವಾಹನದಲ್ಲಿ ಬಂದಿದ್ದರು. ಮುತ್ಯಾಲಮಡು ಜಲಪಾತದ ಬಳಿಗೆ ತೆರಳಿ ಅಲ್ಲಿಯೇ ಮದ್ಯವನ್ನ ಸೇವಿಸಿ ಬಳಿಕ ಈಜಲು ಮುಂದಾಗಿದ್ದರು. ಇದನ್ನೂ ಓದಿ: ತುಂಗಾ ತೀರದಲ್ಲಿ ಟ್ರಯಲ್‌ ಬ್ಲಾಸ್ಟ್‌ ಕೇಸ್‌ – ಐಸಿಸ್‌ ಸಂಪರ್ಕಿತರಿಂದ ಹಣ, ಇಬ್ಬರು ಅರೆಸ್ಟ್‌

    ಈ ವೇಳೆ ನೀರಿನಲ್ಲಿ ಮುಳುಗಿದ್ದ ಜ್ಯೋತಿಶ್ ಕುಮಾರ್ ಅಲ್ಲಿದ್ದ ಇತರೆ ಪ್ರವಾಸಿಗಳು ನೀರಿನಿಂದ ಹೊರತೆಗೆದಿದ್ದಾರೆ. ಅಷ್ಟರಲ್ಲಿ ಆಗಲೇ ಜ್ಯೋತಿಶ್ ಕುಮಾರ್ ಪ್ರಾಣಪಕ್ಷಿ ಹಾರಿಹೋಗಿದ್ದು, ಆನೇಕಲ್ ಪೋಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಪೋಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತಾಜ್ ಮಹಲ್ ನೋಡಲು ಬಂದಿದ್ದವಳ ಮೇಲೆ ಕೋತಿ ದಾಳಿ- ಗಳಗಳನೆ ಅತ್ತ ಸ್ಪೇನ್ ಸುಂದರಿ

    ತಾಜ್ ಮಹಲ್ ನೋಡಲು ಬಂದಿದ್ದವಳ ಮೇಲೆ ಕೋತಿ ದಾಳಿ- ಗಳಗಳನೆ ಅತ್ತ ಸ್ಪೇನ್ ಸುಂದರಿ

    ಲಕ್ನೋ: ವಿಶ್ವ ಪ್ರಸಿದ್ಧ ತಾಜ್ ಮಹಲ್ (Taj Mahal) ವೀಕ್ಷಣೆಗೆ ಬರುವ ಪ್ರವಾಸಿಗರ (Tourist) ಸಂಖ್ಯೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಿಂದಲೂ ಪ್ರವಾಸಿಗರು ಬರುತ್ತಿದ್ದಾರೆ. ಹಾಗೆಯೇ ಸ್ಪೇನ್‌ನಿಂದ (Spain) ಬಂದಿದ್ದ ಮಹಿಳೆಯೊಬ್ಬರ ಮೇಲೆ ಕೋತಿ ದಾಳಿ ನಡೆಸಿದೆ.

    ತಾಜ್‌ಮಹಲ್ (Taj Mahal) ಮುಂಭಾಗದ ರಾಯಲ್ ಗೇಟ್ ಬಳಿ ಫೋಟೋ ತೆಗೆಯಲೆಂದು ನಿಂತಿದ್ದ ಸ್ಪೇನ್ ಮಹಿಳೆ (Spanish woman) ಮೇಲೆ ಕೋತಿ ಎರಗಿ ದಾಳಿ ಮಾಡಿದೆ. ಈ ವೇಳೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಹಿಳೆ ಸ್ಥಳದಲ್ಲೇ ಗಳಗಳನ್ನೆ ಅತ್ತಿದ್ದಾಳೆ. ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ: ಚಂಡೀಗಢ ವಿವಿ ಬಳಿಕ ಐಐಟಿ ಬಾಂಬೆ- ಹಾಸ್ಟೆಲ್ ಸ್ನಾನಗೃಹದಲ್ಲಿ ಇಣುಕಿದ ಕ್ಯಾಂಟೀನ್ ಸಿಬ್ಬಂದಿ ಬಂಧನ

    2019ರಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ತಾಜ್ ಮಹಲ್‌ನ ರಕ್ಷಣೆಯ ಜವಾಬ್ದಾರಿ ವಹಿಸಿತ್ತು. ಈ ವೇಳೆ ಕೋತಿಗಳನ್ನು (Monkey) ಓಡಿಸಲು ಸಿಂಗಲ್‌ಶಾಟ್ ಗನ್ ಬಳಕೆ ಮಾಡಲಾಗುತ್ತಿತ್ತು. ಇದಕ್ಕೆ ಪ್ರಾಣಿಪ್ರಿಯರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಇದನ್ನೂ ಓದಿ: ಸೂಪರ್ ಸ್ಟಾರ್ ಸ್ಮೃತಿ ಮಂಧಾನಗೆ ICC ರ‍್ಯಾಂಕಿಂಗ್ ಪಟ್ಟಿಯಲ್ಲಿ 2ನೇ ಸ್ಥಾನ

    ಪ್ರವಾಸಿಗರ ಮೇಲೆ ಕೋತಿಗಳು ದಾಳಿ ನಡೆಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಸಮಸ್ಯೆ ಬಗೆಹರಿಸುವಂತೆ ಅರಣ್ಯ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ಭಧ್ರತಾ ಸಿಬ್ಬಂದಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಿಮಪಾತದಿಂದ 8 ಪ್ರವಾಸಿಗರ ದುರ್ಮರಣ – ತುರ್ತು ಪರಿಸ್ಥಿತಿ ಘೋಷಿಸಿದ ಪಾಕಿಸ್ತಾನ

    ಹಿಮಪಾತದಿಂದ 8 ಪ್ರವಾಸಿಗರ ದುರ್ಮರಣ – ತುರ್ತು ಪರಿಸ್ಥಿತಿ ಘೋಷಿಸಿದ ಪಾಕಿಸ್ತಾನ

    ಇಸ್ಲಾಮಾಬಾದ್: ಪಾಕಿಸ್ತಾನದ ಜನಪ್ರಿಯ ಪ್ರವಾಸಿ ತಾಣ ಮರ‍್ರೆಯಲ್ಲಿ ಭಾರೀ ಹಿಮಪಾತವಾಗಿದ್ದು, ಇದರಿಂದ ವಾಹನಗಳಲ್ಲಿ ಸಿಲುಕಿದ್ದ ಸುಮಾರು 8 ಮಂದಿ ಪ್ರವಾಸಿಗರು ಮೃತಪಟ್ಟಿದ್ದಾರೆ.

    ಭಾರೀ ಹಿಮಪಾತದಿಂದಾಗಿ ಪ್ರವಾಸಿಗರು ಹಿಮಾವೃತವಾದ ತಮ್ಮ ವಾಹನಗಳ ಒಳಗಡೆಯೇ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ತೀವ್ರ ಹಿಮಪಾತದಿಂದಾಗಿ ಸ್ಥಳೀಯರು ಹಾಗೂ ಪ್ರವಾಸಿಗರು ಕಷ್ಟ ಎದುರಿಸುತ್ತಿದ್ದಾರೆ. ಈಗಾಗಲೇ 8 ಪ್ರವಾಸಿಗರು ಸಾವನ್ನಪ್ಪಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ಪಾಕಿಸ್ತಾನ ಸರ್ಕಾರ ಮರ‍್ರೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದೆ. ಇದನ್ನೂ ಓದಿ: ಕೊರೊನಾ ತನಗೆ ಬರಬಾರದೆಂದು ಸೋಂಕಿತ ಮಗನನ್ನೇ ಕಾರ್‌ನ ಟ್ರಂಕ್‌ನಲ್ಲಿ ಬಂಧಿಸಿದ್ದ ತಾಯಿ ಅರೆಸ್ಟ್

    ಮರ‍್ರೆಗೆ ಪ್ರಯಾಣಿಸುವವರನ್ನು ತಡೆಯಲಾಗುತ್ತಿದೆ ಹಾಗೂ ಹಿಲ್ ರೆಸಾರ್ಟ್ ಕಡೆ ಹೋಗುವ ಎಲ್ಲಾ ಮಾರ್ಗಗಳನ್ನು ಮುಚ್ಚಲಾಗಿದೆ ಎಂದು ಪಾಕಿಸ್ತಾನದ ರಾಷ್ಟ್ರೀಯ ಹೆದ್ದಾರಿ ಹಾಗೂ ಮೋಟರ್‌ವೇ ಪೊಲೀಸ್(ಎನ್‌ಹೆಚ್‌ಎಮ್‌ಪಿ) ಇನ್ಸ್‌ಪೆಕ್ಟರ್ ಜನರಲ್ ಇನಾಮ್ ಘನಿ ತಿಳಿಸಿದ್ದಾರೆ. ಇದನ್ನೂ ಓದಿ: ಸೇನಾ ನೆಲೆಯಲ್ಲೇ ಮಕ್ಕಳನ್ನು ಕೆಟ್ಟದಾಗಿ ನಿಂದಿಸಿದ್ದಕ್ಕೆ ವ್ಯಕ್ತಿಗೆ 50 ವರ್ಷ ಜೈಲು ಶಿಕ್ಷೆ!

    ಪಾಕಿಸ್ತಾನದ ಪ್ರವಾಸಿ ತಾಣ ಮರ‍್ರೆ ರಾಜಧಾನಿ ಇಸ್ಲಾಮಾಬಾದ್‌ನಿಂದ ಈಶಾನ್ಯದೆಡೆ 60 ಕಿ.ಮೀ ದೂರದಲ್ಲಿದೆ. ಪ್ರತೀ ವರ್ಷ ಚಳಿಗಾಲದ ಹಿಮಪಾತವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಮರ‍್ರೆಗೆ ಪ್ರಯಾಣ ಬೆಳೆಸುತ್ತಾರೆ.

  • ಮೂಳೆ ಮುರಿತ – ಆಟ ನಿಲ್ಲಿಸಿದ ವಿಶ್ವದ ವೇಗದ ರೋಲರ್ ಕೋಸ್ಟರ್

    ಮೂಳೆ ಮುರಿತ – ಆಟ ನಿಲ್ಲಿಸಿದ ವಿಶ್ವದ ವೇಗದ ರೋಲರ್ ಕೋಸ್ಟರ್

    ಟೋಕಿಯೋ: ವಿಶ್ವದ ವೇಗದ ರೋಲರ್ ಕೋಸ್ಟರ್ ತನ್ನ ಆಟವನ್ನು ನಿಲ್ಲಿಸಿದೆ. ಪ್ರವಾಸಿಗರ ಮೂಳೆಗಳು ಮುರಿದ ಪ್ರಕರಣ ವರದಿಯಾದ ಹಿನ್ನೆಲೆಯಲ್ಲಿ ಜಪಾನ್ ಪ್ರವಾಸಿ ತಾಣ ರೋಲರ್ ಕೋಸ್ಟರ್ ಸೇವೆಯನ್ನು ನಿಲ್ಲಿಸಿದೆ.

    ಜಪಾನ್‍ನ ಯಮನಶಿಯ ಫುಜಿಯೊಶಿಡಾದ ದೋ-ಡೋಡೊನ್ಪಾ ಥೀಮ್ ಪಾರ್ಕಿನಲ್ಲಿದ್ದ ರೋಲರ್ ಕೋಸ್ಟರ್ 1.8 ಸೆಕೆಂಡಿನಲ್ಲಿ 172 ಕಿ.ಮೀ/ಗಂಟೆ ವೇಗ ಪಡೆದುಕೊಳ್ಳುತ್ತಿದ್ದರಿಂದ ವಿಶ್ವದ ಅತಿ ವೇಗದ ರೋಲರ್ ಕೋಸ್ಟರ್ ಎಂಬ ಪಟ್ಟ ಸಿಕ್ಕಿತ್ತು. ಈ ರೋಲರ್ ಕೋಸ್ಟರ್ ನಲ್ಲಿ ಕುಳಿತುಕೊಳ್ಳಲೆಂದೇ ವಿಶ್ವದಿಂದ ಪ್ರವಾಸಿಗರು ಈ ಥೀಮ್ ಪಾರ್ಕ್ ವೀಕ್ಷಣೆಗೆ ಆಗಮಿಸುತ್ತಿದ್ದರು. ಇದನ್ನೂ ಓದಿ: ನಟ ಕೋಮಲ್ ವಿರುದ್ಧ ಸ್ವೆಟರ್ ಹಗರಣ ಆರೋಪ 

    2001ರಲ್ಲಿ ಈ ಸೇವೆ ಆರಂಭಗೊಂಡಿದ್ದು ಈಗ ಮೂಳೆ ಮುರಿತ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಡಿಸೆಂಬರ್ 2020 ರಿಂದ ಇಲ್ಲಿಯವರೆಗೆ 6 ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ರೋಲರ್ ಕೋಸ್ಟರ್ ಆಟವನ್ನು ಬಂದ್ ಮಾಡಲಾಗಿದೆ. ಇದಕ್ಕೂ ಮೊದಲು 2007ರಲ್ಲಿ ಒಂದು ಪ್ರಕರಣ ವರದಿಯಾಗಿತ್ತು.

    ಈ ಪ್ರಕರಣದ ಬಳಿಕ ಇತ್ತೀಚಿನ ಪ್ರಕರಣಗಳು ಹೆಚ್ಚು ಗಂಭೀರವಾಗಿದ್ದ ಕಾರಣ ಥೀಮ್ ಪಾರ್ಕ್ ಆಡಳಿತ ಮಂಡಳಿ ಈ ಸೇವೆಯನ್ನು ನಿಲ್ಲಿಸುವ ನಿರ್ಧಾರಕ್ಕೆ ಬಂದಿದ್ದಾರೆ. ರೋಲರ್ ಕೋಸ್ಟರ್ ನಲ್ಲಿ  ಯಾವುದೇ ತಾಂತ್ರಿಕ ದೋಷ ಇಲ್ಲದಿರುವ ವಿಚಾರ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ತಟ್ಟೆಯಲ್ಲಿ ಪೌಡರ್ ಹಾಕಿ ಎಟಿಎಂ ಕಾರ್ಡ್‍ನಿಂದ ಉಜ್ಜಿ ಕೊಕೇನ್ ಸೇವಿಸಿದ್ದ ರಾಗಿಣಿ 

    ರೋಲರ್ ಕೋಸ್ಟರ್ ವಿನ್ಯಾಸಗಳಲ್ಲಿ ಪರಿಣತಿ ಹೊಂದಿರುವ ನಿಹಾನ್ ವಿಶ್ವವಿದ್ಯಾನಿಲಯದ ವಾಸ್ತುಶಿಲ್ಪ ಪ್ರಾಧ್ಯಾಪಕರಾದ ನಯೋಯಾ ಮಿಯಾಸಾಟೊ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ರೋಲರ್ ಕೋಸ್ಟರ್ ನಲ್ಲಿ ವೇಗ ಜಾಸ್ತಿ ಇದ್ದು, ಸರಿಯಾಗಿ ಕುಳಿತುಕೊಳ್ಳದ ಕಾರಣ ಮೂಳೆಗಳು ಮುರಿದಿರಬಹುದು. ಹೀಗಾಗಿ ಪಾರ್ಕ್ ಸಿಬ್ಬಂದಿ ವ್ಯಕ್ತಿಗಳು ಸರಿಯಾಗಿ ಕುಳಿತುಕೊಂಡಿದ್ದಾರೋ ಇಲ್ಲವೋ ಎಂಬುದನ್ನು ಪರೀಕ್ಷಿಸಬೇಕು. ಇದು ಸಿಬ್ಬಂದಿಯ ಜವಾಬ್ದಾರಿ ಎಂದು ಹೇಳಿದ್ದಾರೆ.

  • ಇಂದಿನಿಂದ ತುಮಕೂರಲ್ಲಿ ದೇವಸ್ಥಾನ, ಪ್ರವಾಸಿತಾಣಗಳು ಬಂದ್

    ಇಂದಿನಿಂದ ತುಮಕೂರಲ್ಲಿ ದೇವಸ್ಥಾನ, ಪ್ರವಾಸಿತಾಣಗಳು ಬಂದ್

    ತುಮಕೂರು: ಕೋವಿಡ್ 19 ಸೋಂಕು ಹರಡುವುದನ್ನು ನಿಯಂತ್ರಿಸುವ ಸಂಬಂಧ ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

    ಜಿಲ್ಲೆಯು ಆಂಧ್ರಪ್ರದೇಶ ರಾಜ್ಯಕ್ಕೆ ಹೊಂದಿಕೊಂಡಿದ್ದು, ಸದರಿ ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿದೆ. ಹಾಗೂ ಶ್ರಾವಣ ಮಾಸ ಮುಂಬರುವ ಹಬ್ಬಗಳ ಕಾಲವಧಿಯಲ್ಲಿ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ಕೋವಿಡ್ 3ನೇ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸಲು ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

    ಈ ಹಿನ್ನೆಲೆಯಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ದೈನಂದಿನ ಪೂಜಾ ಕಾರ್ಯಕ್ರಮಗಳನ್ನು ಹೊರತುಪಡಿಸಿ ಭಕ್ತಾದಿಗಳಿಗೆ ನಿಷೇಧ ಇದೆ. ಪ್ರವಾಸಿ ತಾಣಗಳು ಬಂದ್ ಮಾಡಲು ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಕಳ್ಳರಿಂದ ಚಿನ್ನ ಖರೀದಿಸಿದ ಆರೋಪ- ಚಿನ್ನದಂಗಡಿ ವ್ಯಾಪಾರಿಯ ಬಂಧನ