Tag: ಪ್ರವಾಹ ಪೀಡಿತ ಪ್ರದೇಶ

  • ಕಲಬುರಗಿ | ಪ್ರವಾಹ ಪೀಡಿತ ಪ್ರದೇಶಗಳಿಗೆ ಜೆಡಿಎಸ್ ನಿಯೋಗ ಭೇಟಿ

    ಕಲಬುರಗಿ | ಪ್ರವಾಹ ಪೀಡಿತ ಪ್ರದೇಶಗಳಿಗೆ ಜೆಡಿಎಸ್ ನಿಯೋಗ ಭೇಟಿ

    – ಭೀಮಾ ನದಿ ಪ್ರವಾಹಕ್ಕೆ ಕೊಚ್ಚಿ ಹೋದ ನಿರ್ಮಾಣ ಹಂತದ ಸೇತುವೆ

    ಕಲಬುರಗಿ: ಮಳೆ ನಿಂತ್ರೂ ಮಳೆ ಹನಿ ನಿಂತಿಲ್ಲ ಎನ್ನೋ ಮಾತಿನಂತೆ ಸದ್ಯ ಭೀಮಾತೀರದಲ್ಲಿ ಪ್ರವಾಹವೇನೋ ಕಡಿಮೆಯಾಗಿದೆ. ಆದ್ರೆ ಪ್ರವಾಹ ತಂದಿಟ್ಟ ಆತಂಕಗಳು ಮಾತ್ರ ಇನ್ನು ಬೆಂಬಿಡದೇ ಅಲ್ಲಿನ ಅನ್ನದಾತರನ್ನು ಕಾಡುತ್ತಿದೆ. ಇದೀಗ ಜೆಡಿಎಸ್ ನಿಯೋಗವು (JDS delegation) ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ, ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

    ಹೀಗೆ ಒಂದೆಡೆ ಕಿತ್ತು ಹೋಗಿರುವ ಸೇತುವೆ ಸ್ಲ್ಯಾಬ್‌ಗಳು, ಇನ್ನೊಂದೆಡೆ ಮಳೆ ಹೊಡೆತಕ್ಕೆ ಮಣ್ಣು ಪಾಲಾಗಿರೋ ಪಪ್ಪಾಯ ಹಾಗೂ ಕಲ್ಲಂಗಡಿ ಬೆಳೆಗಳು. ಕಲಬುರಗಿ (Kalaburagi) ಜಿಲ್ಲೆ ಜೇವರ್ಗಿಯಲ್ಲಿ ಈ ಬಾರಿ ಸುರಿದ ಭಾರೀ ಮಳೆ ಹಾಗೂ ಭೀಮಾ ಪ್ರವಾಹದಿಂದಾಗಿ ಜಿಲ್ಲೆಯ ಜನರು ಕಣ್ಣೀರಿನಲ್ಲಿ ಕೈತೊಳೆಯುವಂತೆ ಆಗಿದೆ. ಈಗಾಗಲೇ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟರ್‌ಗಿಂತ ಬೆಳೆ ನಾಶವಾಗಿದೆ. ಇದನ್ನೂ ಓದಿ: ಬಿಗ್‌ಬಾಸ್‌ಗೆ ರಿಲೀಫ್‌| ಜಾಲಿವುಡ್‌ ಸ್ಟುಡಿಯೋಸ್‌ ಓಪನ್‌ಗೆ ಡಿಸಿಎಂ ಸೂಚನೆ – ಧನ್ಯವಾದ ತಿಳಿಸಿದ ಕಿಚ್ಚ ಸುದೀಪ್‌

    ಜೇವರ್ಗಿ ಪಟ್ಟಣದ ರೈತ ವಿಷ್ಣು ಮಹೇಂದ್ರಕರ್ಇ ಲಕ್ಷಾಂತರ ರೂ. ಹಣ ಸಾಲ ಮಾಡಿ, 5 ಎಕ್ರೆ ಜಮೀನಿನಲ್ಲಿ ಪಪ್ಪಾಯ ಹಾಗೂ ಕಲ್ಲಂಗಡಿ ಹಣ್ಣು ಬೆಳೆದಿದ್ದು ಫಲ ಕೈಗೆ ಸಿಗುವ ಮೊದಲೇ ನಾಶವಾಗಿದೆ ಎಂದು ಗೋಳಾಡಿದ್ದಾರೆ.

    ಈ ಪ್ರವಾಹದಿಂದ ಲಕ್ಷಾಂತರ ಹೆಕ್ಟೇರ್ ಬೆಳೆ ನಾಶ ಹಾಗು ಗ್ರಾಮಗಳು ಜಲಾವೃತದ ಜೊತೆಗೆ, ಜೇವರ್ಗಿಯ ನರಿಬೋಳ ಗ್ರಾಮದಿಂದ ಚಿತ್ತಾಪುರದ ಚಾಮನೂರ ಗ್ರಾಮದ ಮಧ್ಯ ಸಂಪರ್ಕ ಕಲ್ಪಿಸಲು ನಿರ್ಮಾಣವಾಗುತ್ತಿದ್ದ ಬೃಹತ್ ಸೇತುವೆಯ ಸಿಮೆಂಟ್ ಸ್ಲ್ಯಾಬ್ ಸಹ ಭೀಮಾ ನದಿ ನೀರಿನ ಹೊಡೆತಕ್ಕೆ ನೀರು ಪಾಲಾಗಿದೆ. ಸುಮಾರು 36 ಬೃಹತ್ ಸಿಮೆಂಟ್ ಸ್ಲ್ಯಾಬ್‌ಗಳು ಭೀಮಾ ಪ್ರವಾಹಕ್ಕೆ ಕೊಚ್ಚಿ ಹೋಗಿದ್ದು, ಸೇತುವೆಯ ಕನಸ್ಸು ಕಂಡ ಈ ಎರಡು ತಾಲೂಕಿನ ಜನರ ಆಸೆಗಳಿಗೆ ಭೀಮಾ ಪ್ರವಾಹ ತಣ್ಣೀರೆರೆಚಿದೆ.

    ಇನ್ನೂ ಭೀಮಾ ನದಿ ಪ್ರವಾಹದ ಬಗ್ಗೆ ಸಮೀಕ್ಷಾ ವರದಿ ತರಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಸೂಚನೆ ಮೇರೆಗೆ ಜೆಡಿಎಸ್ ನಿಯೋಗ ಸಹ ಇದೀಗ ಕಲಬುರಗಿ ಜಿಲ್ಲೆಯ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದೆ. ಹೆಚ್‌ಡಿಡಿ ಮೂಲಕ ಕೇಂದ್ರಕ್ಕೂ ಸಹ ನೆರವಿಗೆ ಮನವಿ ಹಾಕಲು ಜೆಡಿಎಸ್ ಪಕ್ಷ ಮುಂದಾಗಿದೆ..

  • ರಾಯಚೂರಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ವಿ.ಸೋಮಣ್ಣ ಭೇಟಿ

    ರಾಯಚೂರಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ವಿ.ಸೋಮಣ್ಣ ಭೇಟಿ

    ರಾಯಚೂರು: ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಕೃಷ್ಣಾ ನದಿ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಮಳೆಯನ್ನೂ ಲೆಕ್ಕಿಸದೇ ನೆರೆ ಪೀಡಿತ ಗ್ರಾಮಗಳಿಗೆ ತೆರಳಿ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದರು. ಕಳೆದ ಬಾರಿ ಪ್ರವಾಹ ಪೀಡಿತ ಪ್ರದೇಶಗಳ ಭೇಟಿ ರದ್ದುಗೊಳಿಸಿ ತುರ್ತು ಕಾರ್ಯ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು. ಹೀಗಾಗಿ ಮಳೆ ನಡುವೆಯೂ ಗ್ರಾಮಗಳಿಗೆ ಭೇಟಿ ನೀಡಿದರು.

    ರಾಯಚೂರು ತಾಲೂಕಿನ ಅರಶಿಣಗಿ, ಗುರ್ಜಾಪುರ ಗ್ರಾಮದಲ್ಲಿ ಜನರ ಕಷ್ಟಗಳನ್ನ ಆಲಿಸಿದರು. ಸಂತ್ರಸ್ತರ ಅಸಮಧಾನ, ಆತಂಕಗಳಿಗೆ ಸ್ಪಂದಿಸಿ ಧೈರ್ಯ ತುಂಬಿದರು. ಒಂದೇ ಬಾರಿಗೆ ಎಲ್ಲಾ ಸಮಸ್ಯೆಗಳನ್ನ ಬಗೆಹರಿಸಲು ಸಾಧ್ಯವಿಲ್ಲ ಹಂತಹಂತವಾಗಿ ಪರಿಹಾರ ಕಾರ್ಯಗಳನ್ನ ಕೈಗೆತ್ತಿಕೊಳ್ಳುವುದಾಗಿ ಹೇಳಿದರು. ಪ್ರವಾಹ ಪೀಡಿತ ಗ್ರಾಮಗಳ ಸ್ಥಳಾಂತರ ಹಾಗೂ ವಸತಿ ಸಮಸ್ಯೆ ಬಗೆಹರಿಸಲು ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಇದನ್ನೂ ಓದಿ: ಇಂದು 1,431 ಜನಕ್ಕೆ ಕೊರೊನಾ ಸೋಂಕು – ರಾಜ್ಯದಲ್ಲಿ 22,497 ಸಕ್ರಿಯ ಪ್ರಕರಣ

    ಬಳಿಕ ದೇವಸುಗೂರು ಶ್ರೀಸುಗೂರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಸಚಿವ ಸೋಮಣ್ಣಗೆ ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್, ಗ್ರಾಮಾಂತರ ಶಾಸಕರ ಬಸನಗೌಡ ದದ್ದಲ ಸಾಥ್ ನೀಡಿದರು. ಇದನ್ನೂ ಓದಿ: ಸಿರಾಜ್ ವಿಕೆಟ್ ಪಡೆದ ಬಳಿಕ ವಿಶೇಷ ಸಂಭ್ರಮಾಚರಣೆಯ ಕಹಾನಿ ರಿವೀಲ್

  • ಕಾಂಗ್ರೆಸ್ ಸೋಲಿಸಲು ಬಿಜೆಪಿಯಿಂದ ಬ್ಲ್ಯಾಕ್ ಮೇಲ್ ರಾಜಕಾರಣ: ದಿನೇಶ್ ಗುಂಡೂರಾವ್

    ಕಾಂಗ್ರೆಸ್ ಸೋಲಿಸಲು ಬಿಜೆಪಿಯಿಂದ ಬ್ಲ್ಯಾಕ್ ಮೇಲ್ ರಾಜಕಾರಣ: ದಿನೇಶ್ ಗುಂಡೂರಾವ್

    – ಡಿಕೆಶಿ ಜೈಲಿಂದ ಹೊರಗೆ ಬಂದಿರೋದು ನಮಗೆ ಬಲ ಬಂದಿದೆ

    ಹುಬ್ಬಳ್ಳಿ: ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಕಾಂಗ್ರೆಸ್ ಸೋಲಿಸಬೇಕೆಂದು ಬಿಜೆಪಿಯಿಂದ ಬ್ಲ್ಯಾಕ್ ಮೇಲ್ ರಾಜಕಾರಣ ಮಾಡಲಾಗಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

    ಧಾರವಾಡ ಜಿಲ್ಲೆ ಕುಂದಗೋಳ ವಿಧಾನ ಸಭೆ ಕ್ಷೇತ್ರ ವ್ಯಾಪ್ತಿಯ ಅಂಚಟಗೇರಿ, ಚನ್ನಪುರ ಗ್ರಾಮದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪ್ರವಾಹ ಸಂತ್ರಸ್ತರಿಗೆ ದಿನೇಶ್ ಗುಂಡೂರಾವ್ ಪರಿಹಾರ ಕೊಡಿಸುವ ಭರವಸೆ ನೀಡಿದರು. ಈ ವೇಳೆ ಅವರಿಗೆ ಕುಂದಗೋಳ ಕೈ ಶಾಸಕಿ ಕುಸುಮಾವತಿ ಶಿವಳ್ಳಿ ಹಾಗೂ ಕಾಂಗ್ರೆಸ್ ಮುಖಂಡರು ಸಾಥ್ ಕೊಟ್ಟರು. ಬಳಿಕ ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ದಿನೇಶ್ ಗುಂಡೂರಾವ್, ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಕಾಂಗ್ರೆಸ್ ಸೋಲಿಸಬೇಕೆಂದು ಬಿಜೆಪಿಯಿಂದ ಬ್ಲ್ಯಾಕ್ ಮೇಲ್ ರಾಜಕಾರಣ ಮಾಡಲಾಗಿತ್ತು. ಕಾಂಗ್ರೆಸ್ ಧೂಳಿಪಟ ಆಗುತ್ತೆ ಎಂದು ಹೇಳಿದ್ದರು. ಆದ್ರೆ ಹರ್ಯಾಣದಲ್ಲಿ ಇನ್ನು ಯಾರು ಸರ್ಕಾರ ರಚನೆ ಮಾಡುತ್ತಾರೆ ಎನ್ನೋದು ಗೊತ್ತಾಗುತ್ತಿಲ್ಲ. ಕಾಂಗ್ರೆಸ್ ಪಕ್ಷವನ್ನು ಸರ್ವನಾಶ ಮಾಡೋಕೆ ಪ್ರಯತ್ನ ಮಾಡಿದ್ದರು. ಆದ್ರೆ ಅದು ಸಾಧ್ಯವಿಲ್ಲ, ಅದಕ್ಕೆ ಉದಾಹರಣೆ ಇಂದಿನ ರಿಸಲ್ಟ್ ಎಂದು ವಾಗ್ದಾಳಿ ನಡೆಸಿದರು.

    ಎರಡೂ ರಾಜ್ಯಗಳಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹೆಚ್ಚು ರ್ಯಾಲಿ ಮಾಡಿದ್ದಾರೆ. ಆದರೆ ಜನ ಅವರಿಂದ ನಿರಾಶರಾಗಿದ್ದಾರೆ ಎನ್ನೋದು ಗೊತ್ತಾಗಿದೆ. ಎಲ್ಲಾ ಸಂಸ್ಥೆಗಳನ್ನ ದುರುಪಯೋಗ ಪಡಿಸಿಕೊಂಡರು, ಹೀಗಾಗಿ ಅವರಿಗೆ ಜನ ಸರಿಯಾಗಿ ಸ್ಪಂದಿಸಿಲ್ಲ. ಇದೆಲ್ಲಾ ನೋಡಿದರೆ ನಾವು ಇನ್ನಷ್ಟು ಗಟ್ಟಿಯಾಗಬೇಕಿದೆ, ನಾವು ಪಕ್ಷವನ್ನ ಇನ್ನಷ್ಟು ಸದೃಡ ಮಾಡಬೇಕೆಂದು ಹೇಳಿದರು.

    ರಾಜ್ಯದಲ್ಲೂ ಕೂಡಾ ಸರ್ಕಾರ ವಿಫಲವಾಗಿದೆ. ಹೀಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಹೋರಾಟ ಮಾಡುತ್ತೇವೆ. ಉತ್ತರ ಕರ್ನಾಟಕ ಭಾಗದಲ್ಲಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳುತ್ತೇವೆ. ದೀಪಾವಳಿ ನಂತರ ಪಾದಯಾತ್ರೆ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ ನೆರೆ ಪೀಡಿತರಿಗೆ ಇನ್ನೂ ಒಂದು ಪೈಸೆ ಬಂದಿಲ್ಲ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ಕೇಂದ್ರ ಸರ್ಕಾರ ರಾಜ್ಯವನ್ನ ಕಡೆಗಣಿಸಿದೆ. ಹೀಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನ ಎಬ್ಬಿಸಲು ಹೋರಾಟ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಹಾಗೆಯೇ ಉಪಚುನಾವಣೆ ಬಗ್ಗೆ ಮಾತನಾಡಿ, ಉಪಚುನಾವಣೆ ಬೇಗ ಆಗಬೇಕೆಂಬುದೇ ನಮ್ಮ ಆಶಯ. ಅನರ್ಹ ಶಾಸಕರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಏನು ತೀರ್ಮಾನ ಮಾಡುತ್ತೆ ನೋಡಬೇಕು. ಡಿಕೆಶಿ ಜೈಲಿಂದ ಹೊರಗೆ ಬಂದಿರೋದು ನಮಗೆ ಬಲ ಬಂದಿದೆ. ಬಿಜೆಪಿಯವರ ರಾಜಕೀಯ ಸಂಚಿಗೆ ಡಿಕೆಶಿ ಬಲಿಯಾಗಿಲ್ಲ. ಹೀಗಾಗಿ ಅವರ ಮೇಲೆ ಐಟಿ, ಇಡಿ ದಾಳಿ ಮಾಡಿಸಿದರು ಎಂದು ಕಿಡಿಕಾರಿದರು.

    ಇದೇ ವೇಳೆ ಡಿಕೆಶಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ನೀಡುವ ವಿಚಾರವಾಗಿ ಮಾತನಾಡಿ, ಅದು ಹೈಕಮಾಂಡ್‍ಗೆ ಬಿಟ್ಟ ವಿಚಾರ. ನಾನು, ಡಿಕೆಶಿ, ಸಿದ್ದರಾಮಯ್ಯ, ಖರ್ಗೆ ಎಲ್ಲಾ ಒಗ್ಗಟ್ಟಾಗಿ ಪಕ್ಷಕ್ಕೆ ಬಂದ ಕಷ್ಟಗಳನ್ನು ಎದುರಿಸುತ್ತೇವೆಂದು ತಿಳಿಸಿದರು.

  • ಉತ್ತರ ಕರ್ನಾಟಕ ಪ್ರವಾಹಕ್ಕೆ ಮಿಡಿದ ಮಕ್ಕಳ ಹೃದಯ

    ಉತ್ತರ ಕರ್ನಾಟಕ ಪ್ರವಾಹಕ್ಕೆ ಮಿಡಿದ ಮಕ್ಕಳ ಹೃದಯ

    – ಕಣ್ಣೀರಾಕಿ ಚಂದಾ ಎತ್ತಿದ ಮಕ್ಕಳು

    ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಉಂಟಾಗಿದ್ದ ಭೀಕರ ಪ್ರವಾಹದಿಂದ ತತ್ತರಿಸಿದ ಜನರಿಗಾಗಿ ಶಾಲಾ ವಿದ್ಯಾರ್ಥಿಗಳು ಕಣ್ಣೀರು ಹಾಕಿ ಚಂದಾ ಸಂಗ್ರಹ ಮಾಡಿದ್ದಾರೆ.

    ಪಬ್ಲಿಕ್ ಟಿವಿಯ ‘ಬುಲೆಟ್ ರಿಪೋರ್ಟರ್’ನಲ್ಲಿ ರಾಮದುರ್ಗದ ಪ್ರವಾಹ ಪೀಡಿತ ಪ್ರದೇಶದ ಕುರಿತು ಪ್ರಸಾರವಾಗಿತ್ತು, ಅದರಲ್ಲಿ ರಾಮದುರ್ಗ ಶಾಲೆಯ ಮಕ್ಕಳಿಗೆ ಸಹಾಯ ಮಾಡುವಂತೆ ಅಲ್ಲಿನ ಮುಖ್ಯೋಪಾಧ್ಯಾಯರು ಮನವಿ ಮಾಡಿಕೊಂಡಿದ್ದರು. ಈ ಮನವಿಗೆ ಬನಶಂಕರಿಯಲ್ಲಿರುವ ಸೆಂಟ್ ಪೀಟರ್ಸ್ ಶಾಲೆಯ ಮಕ್ಕಳ ಮನ ಮಿಡಿದಿದ್ದು, ಪ್ರವಾಹ ಪೀಡಿತರಿಗಾಗಿ ಚಂದಾ ಸಂಗ್ರಹ ಮಾಡಿದ್ದಾರೆ.

    ಪ್ರವಾಹದಿಂದ ಹಾನಿಯಾಗಿರುವ ದೃಶ್ಯಗಳನ್ನು ಮಾಧ್ಯಮದಲ್ಲಿ ನೋಡಿ ಸೆಂಟ್ ಪೀಟರ್ಸ್ ಶಾಲೆಯ ವಿದ್ಯಾರ್ಥಿಗಳು ಬೇಸರಗೊಂಡು ತಮ್ಮ ಮುಖ್ಯೋಪಾಧ್ಯಾಯರ ಬಳಿ ಹೋಗಿ, ಪ್ರವಾಹ ಪೀಡಿತರಿಗೆ ಸಹಾಯ ಮಾಡಲು ಬಯಸುತ್ತೇವೆ ಎಂದು ಕಣ್ಣೀರು ಹಾಕಿದ್ದಾರೆ. ಅಲ್ಲದೆ ಅವರಿಗಾಗಿ ಹಣ ಸಂಗ್ರಹಿಸಿ ನೀಡುತ್ತೇವೆ ಎಂದು ಹೇಳಿದ್ದಾರೆ. ಸಂತ್ರಸ್ತರಿಗೆ ಸಹಾಯ ಮಾಡಲು ಬಯಸಿದ ಮಕ್ಕಳ ನಿರ್ಧಾರಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು ಅನುಮತಿ ನೀಡುವ ಮೂಲಕ ಮಕ್ಕಳ ಸಹಾಯ ಕಾರ್ಯಕ್ಕೆ ಕೈಜೊಡಿಸಿದ್ದಾರೆ.

    ಈವರೆಗೆ ವಿದ್ಯಾರ್ಥಿಗಳೆಲ್ಲಾ ಸೇರಿ ಸುಮಾರು 25 ಸಾವಿರ ರೂಪಾಯಿ ಹಣ ಸಂಗ್ರಹ ಮಾಡಿದ್ದಾರೆ. ಈ ಹಣವನ್ನು ಪ್ರವಾಹ ಪೀಡಿತ ಜನರಿಗೆ ನೀಡಲು ಮಕ್ಕಳು ನಿರ್ಧರಿಸಿದ್ದಾರೆ.

  • ದಡ ಸೇರಿದ್ದ ತೆಪ್ಪಕ್ಕೆ ಹುಟ್ಟು ಹಾಕಿ ಪೋಸ್- ರೇಣುಕಾಚಾರ್ಯ ಟ್ರೋಲ್

    ದಡ ಸೇರಿದ್ದ ತೆಪ್ಪಕ್ಕೆ ಹುಟ್ಟು ಹಾಕಿ ಪೋಸ್- ರೇಣುಕಾಚಾರ್ಯ ಟ್ರೋಲ್

    – ಪೋಸ್‍ಗಾಗಿ ಮಾಡಿಲ್ಲ, ಉದ್ಘಾಟನೆ ಮಾಡಿದೆ ಅಷ್ಟೇ
    – ತೆಪ್ಪದಲ್ಲಿ ಬರಬೇಕು ಅಂತ ಜನರೇ ಹೇಳಿದ್ರು
    – ಸ್ಪಷ್ಟನೆ ನೀಡಲು ಹೋಗಿ ಇಕ್ಕಟ್ಟಿಗೆ ಸಿಲುಕಿದ ಶಾಸಕ

    ದಾವಣಗೆರೆ: ದಡ ಸೇರಿದ್ದ ತೆಪ್ಪದಲ್ಲಿ ನಿಂತು ಹುಟ್ಟು ಹಾಕಿದ ಬಿಜೆಪಿ ಶಾಸಕ ರೇಣುಕಾಚಾರ್ಯ ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು  ನೆಟ್ಟಿಗರು, ಸ್ಥಳೀಯರು ಶಾಸಕರ ವಿರುದ್ಧ ಅಸಮಾಧಾನ ಹೊರ  ಹಾಕಿದ್ದಾರೆ.

    ತುಂಗಾಭದ್ರಾ ನದಿಯು ಪ್ರವಾಹ ಮಟ್ಟ ಮೀರಿ ಹರಿಯುತ್ತಿದ್ದು, ದಾವಣಗೆರೆಯ ಹೊನ್ನಾಳಿಯ ಕೆಲ ಪ್ರದೇಶಗಳು ಸಂಪೂರ್ಣ ಮುಳುಗಡೆಯಾಗಿದೆ. ಮುಳುಗಡೆಯಾದ ಪ್ರದೇಶಕ್ಕೆ ಶಾಸಕ ರೇಣುಕಾಚಾರ್ಯ ಭೇಟಿ ನೀಡಿದ್ದಾರೆ. ಈ ವೇಳೆ ದಡಕ್ಕೆ ಸೇರಿದ್ದ ದೋಣಿಯಲ್ಲಿ ನಿಂತು ಹುಟ್ಟು ಹಾಕಿದ್ದಾರೆ. ಇದನ್ನು ನೋಡಿದ ಸ್ಥಳೀಯರು ಫೋಟೋ ಚೆನ್ನಾಗಿ ಹೊಡಿರೀ, ವಿಡಿಯೋ ಮಾಡಿ. ಪಾಪ ಶಾಸಕರು ಪ್ರವಾಹದಲ್ಲಿ ತೇಲಿ ಹೋಗಿದ್ದ ಜನರನ್ನು ತೆಪ್ಪದಲ್ಲಿ ಕರೆದುಕೊಂಡು ಬಂದಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

    ರೇಣುಕಾಚಾರ್ಯ ಅವರು ಹುಟ್ಟು ಹಾಕುತ್ತಿರುವ ದೃಶ್ಯವನ್ನು ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ತಮ್ಮ ಮೊಬೈಲ್ ನಲ್ಲಿ  ಸೆರೆ ಹಿಡಿದಿದ್ದಾರೆ. ಈ ವೇಳೆ ಸ್ಥಳೀಯರು ಶಾಸಕರ ವಿರುದ್ಧ ಅಸಮಾಧಾನ ಹೊರ ಹಾಕಿದ ಮಾತುಗಳು ವಿಡಿಯೋದಲ್ಲಿ ಕೇಳಿ ಬಂದಿದೆ.

    ವಿಡಿಯೋ ವೈರಲ್ ಆಗಿರುವ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಶಾಸಕರು, ತೆಪ್ಪದಲ್ಲಿ ಬರಬೇಕು ಅಂತ ಸ್ಥಳೀಯರು ಒತ್ತಾಯ ಮಾಡಿದರು. ಉದ್ಘಾಟನೆ ಮಾಡಲು ತೆಪ್ಪದಲ್ಲಿ ನಿಂತಿದ್ದೆ. ನಾನು ಪ್ರಚಾರಕ್ಕೆ ಹಾಗೆ ಮಾಡಿಲ್ಲ. ಬೆಳಗ್ಗೆಯಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜನರಿಗೆ ಸಹಾಯ ಮಾಡುತ್ತಿದ್ದೇನೆ. ಗಂಜಿ ಕೇಂದ್ರಗಳನ್ನು ತೆರೆದು, ಸಂತ್ರಸ್ತರಿಗೆ ಮೂಲ ಸೌಕರ್ಯ ವ್ಯವಸ್ಥೆ ಮಾಡಿದ್ದೇವೆ ಎಂದು ತಿಳಿಸಿದರು.

    ಹೊನ್ನಾಳಿಯ ಬಂಬೂ ಬಜಾರ್, ಬಾಲ್ ರಾಜ್ ಘಾಟ್, ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಮನೆಗಳನ್ನು ಖಾಲಿ ಮಾಡಿ ಬೇರೆಡೆಗೆ ಸ್ಥಳಾಂತರ ಮಾಡಲಾಗುತ್ತಿದೆ. ಅಲ್ಲದೇ ತುಂಗಾಭದ್ರಾ ಹೊಳೆಯ ಪಕ್ಕದಲ್ಲೇ ಇರುವ ಬೇಲಿ ಮಲ್ಲೂರು, ಕೋಟೆ ಮಲ್ಲೂರು ಗ್ರಾಮಗಳಲ್ಲಿ ನೂರಾರು ಎಕರೆ ಬೆಳೆ ಮುಳುಗಡೆಯಾಗಿದೆ.

    ಈ ಪ್ರದೇಶಗಳಿಗೆ ಭೇಟಿ ನೀಡಿ ಮಾತನಾಡಿದ ಶಾಸಕರು, ಸರ್ಕಾರದಿಂದ ಆದಷ್ಟು ಬೇಗ ಪರಿಹಾರ ನೀಡಲಾಗುತ್ತದೆ. ಇಲ್ಲಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲಾಗುವುದು. ಸ್ವಕ್ಷೇತ್ರ ಬದಾಮಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಒಮ್ಮೆಯೂ ಅಲ್ಲಿಗೆ ಭೇಟಿ ನೀಡಿಲ್ಲ. ದೆಹಲಿಗೆ ಹೋಗಿ ಸಭೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು.