Tag: ಪ್ರವೀಣ್ ಕುಮಾರ್

  • ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನ

    ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನ

    ಹೆಸರಾಂತ ಸಂಗೀತ ನಿರ್ದೇಶಕರ (Music director) ಮೆಚ್ಚುಗೆಗೆ ಪಾತ್ರವಾಗಿದ್ದ, ಹೊಸ ಹೊಸ ಆಲೋಚನೆಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ್ದ ತಮಿಳಿನ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್  (Praveen Kumar) ನಿಧನರಾಗಿದ್ದಾರೆ. (Passed away) ಅನಾರೋಗ್ಯದಿಂದ ಅವರು ಬಳಲುತ್ತಿದ್ದರು.

    ಮೇಡಗು, ರಾಕಥಾನ್ ನಂತಹ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿ ಸೈ ಅನಿಸಿಕೊಂಡಿದ್ದರು ಪ್ರವೀಣ್. ಇವರ ಪ್ರತಿಭೆಗೆ ಕೈ ತುಂಬಾ ಅವಕಾಶಗಳು ಇದ್ದವು. ಆದರೆ, ಆರೋಗ್ಯ ಕೈ ಕೊಟ್ಟ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

     

    ಖಾಸಗಿ ಆಸ್ಪತ್ರೆಯ ನಂತರ ಅವರನ್ನು ಓಮಂದೂರರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಚಿಕಿತ್ಸೆ ಫಲಕಾರಿಯಾಗಿ ಬೆಳಗ್ಗೆ ಅವರು ಇಹಲೋಕ ತ್ಯಜಿಸಿದ್ದಾರೆ. ಮೃತರ ಆತ್ಮಕ್ಕೆ ಅವರ ಅಭಿಮಾನಿಗಳು ಮತ್ತು ಚಿತ್ರೋದ್ಯಮ ಕಂಬನಿ ಮಿಡಿದೆ.

  • ‘ದೇಸಾಯಿ’ಗಾಗಿ ರೆಸಾರ್ಟ್ ನಲ್ಲಿ ಕುಣಿದ ಪ್ರವೀಣ್ ಕುಮಾರ್

    ‘ದೇಸಾಯಿ’ಗಾಗಿ ರೆಸಾರ್ಟ್ ನಲ್ಲಿ ಕುಣಿದ ಪ್ರವೀಣ್ ಕುಮಾರ್

    ಹಾಂತೇಶ ವಿ ಚೋಳದಗುಡ್ಡ ಕಥೆ ಬರೆದು ನಿರ್ಮಿಸುತ್ತಿರುವ, ನಾಗಿರೆಡ್ಡಿ ಭಡ ರಚನೆ ಮತ್ತು ನಿರ್ದೇಶನದ ಹಾಗೂ ಲವ್ 360 ಖ್ಯಾತಿಯ ಪ್ರವೀಣ್ ಕುಮಾರ್ ನಾಯಕನಾಗಿ ನಟಿಸುತ್ತಿರುವ ‘ದೇಸಾಯಿ’ ಚಿತ್ರದ ಹಾಡೊಂದರ ಚಿತ್ರೀಕರಣ ಬೆಂಗಳೂರು ನಗರದ ಹೊರವಲಯದ ಡೆಸ್ಟಿನೊ ರೆಸಾರ್ಟ್ ನ ಸುಂದರ ಪರಿಸರದಲ್ಲಿ ನಡೆಯಿತು. ಶಿವು ಬೋರ್ಗಿ ಅವರು ಬರೆದಿರುವ, ಸಾಯಿಕಾರ್ತಿಕ್ ಸಂಗೀತ ನೀಡಿರುವ ಈ ಹಾಡಿಗೆ ಮೋಹನ್ ಮಾಸ್ಟರ್ ನೃತ್ಯ ನಿರ್ದೇಶನದಲ್ಲಿ ನಾಯಕ ಪ್ರವೀಣ್ ಕುಮಾರ್ ಹಾಗೂ ನಾಯಕಿ ರಾಧ್ಯ ಹೆಜ್ಜೆ ಹಾಕಿದರು. ಹಾಡು ಹಾಗೂ ಚಿತ್ರದ ಬಗ್ಗೆ ಚಿತ್ರತಂಡದ ಸದಸ್ಯರು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದರು.

    ದೇಸಾಯಿ ಒಂದು ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರ ಎಂದು ಮಾತನಾಡಿದ ನಿರ್ದೇಶಕ ನಾಗಿರೆಡ್ಡಿ ಭಡ, ಸುಮಾರು ವರ್ಷಗಳಿಂದ ಚಿತ್ರರಂಗದೊಂದಿಗೆ ನಂಟಿರುವ ನನಗೆ ಇದು ಮೊದಲ ನಿರ್ದೇಶನದ ಚಿತ್ರ.  ತಾತಾ, ತಂದೆ ಹಾಗೂ ಮಗ ಮೂರು ತಲೆಮಾರಿನ ಕಥೆ ಇದರಲ್ಲಿದೆ‌. ಸೆಂಟಿಮೆಂಟ್ ಸನ್ನಿವೇಶಗಳು ಸಖತಾಗಿ ಮೂಡಿಬಂದಿದೆ. ಜನರು ಬಯಸುವ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ಇನ್ನೊಂದು ಹಾಡು ಮುಗಿದರೆ ಚಿತ್ರೀಕರಣ ಮುಕ್ತಾಯವಾಗುತ್ತದೆ ಎಂದು ತಿಳಿಸಿದರು.

    ನಾನು ಮೂಲತಃ  ಬಾಗಲಕೋಟೆಯವನು.  ಚಿತ್ರ ನಿರ್ಮಾಣ ಮಾಡಬೇಕೆಂಬುದು ನನ್ನ ಕನಸು. ಅದು ಈಗ ಈಡೇರಿದೆ. ಇದೊಂದು ಪಕ್ಕಾ ಉತ್ತರ ಕರ್ನಾಟಕ ಶೈಲಿಯ ಚಿತ್ರ. ಸಂಭಾಷಣೆ ಕೂಡ ಅದೇ ಸೊಗಡಿನಲ್ಲಿರುತ್ತದೆ. ಯಾವುದಕ್ಕೂ ಕೊರತೆ ಬಾರದ ಹಾಗೆ ಚಿತ್ರವನ್ನು ನಿರ್ಮಿಸುತ್ತಿದ್ದೇನೆ. ಹೆಚ್ಚಿನ ಚಿತ್ರೀಕರಣ ಬಾದಾಮಿ, ಬಾಗಲಕೋಟೆಯಲ್ಲಿ ನಡೆದಿದೆ‌. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿ ಬರುತ್ತಿದೆ ಎಂದರು ನಿರ್ಮಾಪಕ ಮಹಂತೇಶ್ ವಿ ಚೋಳದಗುಡ್ಡ.

    ಈ ಚಿತ್ರದಲ್ಲಿ ನನ್ನದು ಆಟಗಾರ(ಅಥ್ಲೆಟಿಕ್)ನ ಪಾತ್ರ. ಲವ್ 360 ಚಿತ್ರದ ನಂತರ ಒಳ್ಳೆಯ ಪಾತ್ರಕ್ಕಾಗಿ ಕಾಯುತ್ತಿದೆ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನನ್ನ ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೇನೆ ಎಂದು ನಾಯಕ ಪ್ರವೀಣ್ ಕುಮಾರ್ ತಿಳಿಸಿದರು. ದೇಸಾಯಿ ಚಿತ್ರದಲ್ಲಿ ನನ್ನದು ಬೋಲ್ಡ್  ಹುಡುಗಿಯ ಪಾತ್ರ ಎಂದು ತಮ್ಮ ಪಾತ್ರದ ಬಗ್ಗೆ ನಾಯಕಿ ರಾಧ್ಯ ಮಾಹಿತಿ ನೀಡಿದರು. ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್ ಚಿತ್ರದ ಬಗ್ಗೆ ಮಾತನಾಡಿದರು.

    ಲವ್ 360 ಖ್ಯಾತಿಯ ಪ್ರವೀಣ್ ಕುಮಾರ್, ರಾಧ್ಯ, ಒರಟ ಪ್ರಶಾಂತ್, ಚೆಲುವರಾಜು, ಮಧುಸೂದನ್ ರಾವ್, ಕಲ್ಯಾಣಿ, ಹರಿಣಿ, ನಟನ ಪ್ರಶಾಂತ್, ಮಂಜುನಾಥ್ ಹೆಗಡೆ, ಸೃಷ್ಟಿ (ಕಾಂತಾರ) ಮುಂತಾದವರು ತಾರಾಬಳಗದಲ್ಲಿದ್ದಾರೆ.

  • ‘ದೇಸಾಯಿ’ ಚಿತ್ರಕ್ಕೆ ಡಬ್ಬಿಂಗ್ ಕೆಲಸ ಶುರು

    ‘ದೇಸಾಯಿ’ ಚಿತ್ರಕ್ಕೆ ಡಬ್ಬಿಂಗ್ ಕೆಲಸ ಶುರು

    ವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಲಾಂಛನದಲ್ಲಿ ಮಹಾಂತೇಶ ವಿ ಚೋಳದಗುಡ್ಡ ಕಥೆ ಬರೆದು ನಿರ್ಮಿಸುತ್ತಿರುವ ಹಾಗೂ ನಾಗಿರೆಡ್ಡಿ ಭಡ ನಿರ್ದೇಶನದ ‘ದೇಸಾಯಿ’ ಚಿತ್ರಕ್ಕೆ ಮಾತಿನ ಜೋಡಣೆ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.

    ದೇಸಾಯಿ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ಉತ್ತರ ಕರ್ನಾಟಕದ ಶೈಲಿಯ ಕಥಾಹಂದರ ಹೊಂದಿರುವ ಈ ಚಿತ್ರದ ರಚನೆ ಹಾಗೂ ನಿರ್ದೇಶನ ನಾಗಿರೆಡ್ಡಿ ಭಡ ಅವರದು. ಬಾದಾಮಿ, ಬಾಗಲಕೋಟೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.

    ಲವ್ 360 ಖ್ಯಾತಿಯ ಪ್ರವೀಣ್ ಕುಮಾರ್ ಈ ಚಿತ್ರದ ನಾಯಕನಾಗಿ ಅಭಿನಯಿಸುತ್ತಿದ್ದು, ನಾಯಕಿಯಾಗಿ ಮೈಸೂರಿನ ರಾಧ್ಯ ಇದ್ದಾರೆ. ಒರಟ ಪ್ರಶಾಂತ್, ಚೆಲುವರಾಜು, ಮಧುಸೂದನ್ ರಾವ್, ಕಲ್ಯಾಣಿ, ಹರಿಣಿ, ನಟನ ಪ್ರಶಾಂತ್, ಮಂಜುನಾಥ್ ಹೆಗಡೆ, ಸೃಷ್ಟಿ (ಕಾಂತಾರ) ಮುಂತಾದವರು ತಾರಾಬಳಗದಲ್ಲಿದ್ದಾರೆ.

     ಕಳೆದ ಇಪ್ಪತ್ತು ವರ್ಷಗಳಿಂದ ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ನಾಗಿರೆಡ್ಡಿ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ನಿರ್ಮಾಪಕ ಮಹಾಂತೇಶ್ ಅವರಿಗೂ  ದೇಸಾಯಿ ಮೊದಲ ನಿರ್ಮಾಣದ ಚಿತ್ರ.

  • ಭೀಕರ ಕಾರು ಅಪಘಾತ – ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್‌ ಕುಮಾರ್‌, ಪುತ್ರ ಗ್ರೇಟ್‌ ಎಸ್ಕೇಪ್

    ಭೀಕರ ಕಾರು ಅಪಘಾತ – ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್‌ ಕುಮಾರ್‌, ಪುತ್ರ ಗ್ರೇಟ್‌ ಎಸ್ಕೇಪ್

    ಲಕ್ನೋ: ಮೀರತ್‌ನಲ್ಲಿ (Meerut) ನಡೆದ ಭೀಕರ ಕಾರು ಅಪಘಾತದಲ್ಲಿ ಭಾರತದ ಮಾಜಿ ಕ್ರಿಕೆಟಿಗ (Former Indian cricketer) ಪ್ರವೀಣ್ ಕುಮಾರ್ (Praveen Kumar) ಮತ್ತು ಅವರ ಪುತ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಮಂಗಳವಾರ ರಾತ್ರಿ ಅವರ ವಾಹನಕ್ಕೆ ಟ್ರಕ್ ಅತಿವೇಗವಾಗಿ ಬಂದು ಡಿಕ್ಕಿ ಹೊಡೆದಿತ್ತು. ಅದೃಷ್ಟವಶಾತ್ ಪ್ರವೀಣ್ ಕುಮಾರ್ ಮತ್ತು ಅವರ ಮಗ ಇಬ್ಬರೂ ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಆದರೆ ಅವರ ಕಾರು ಹೆಚ್ಚಿನ ಪ್ರಮಾಣದಲ್ಲಿ ಹಾನಿಗೊಳಗಾಗಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ.‌ ಇದನ್ನೂ ಓದಿ: ಟೀಂ ಇಂಡಿಯಾ ಬೌಲಿಂಗ್‌ ಯಾವಾಗ್ಲೂ ಕಳಪೆ, ನಾವ್‌ ತಲೆ ಕೆಡಿಸಿಕೊಳ್ಳಲ್ಲ – ಪಾಕ್‌ ಮಾಜಿ ಕ್ರಿಕೆಟಿಗ ವ್ಯಂಗ್ಯ

    ವೇಗದ ಬೌಲರ್ ಆಗಿ ತನ್ನ ಕೌಶಲ್ಯಕ್ಕೆ ಹೆಸರುವಾಸಿಯಾದ ಪ್ರವೀಣ್ ಕುಮಾರ್, ಮೀರತ್‌ನ ಮುಲ್ತಾನ್ ನಗರದಲ್ಲಿ ನೆಲೆಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ಎಂ.ಎಸ್‌ ಧೋನಿ ನಾಯಕತ್ವದಲ್ಲಿ ನಡೆದ 2008 CB ಸರಣಿಯಲ್ಲಿ ಭಾರತದ ಗೆಲುವಿನಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸಿದ್ದರು.

    6 ಟೆಸ್ಟ್ ಪಂದ್ಯಗಳು, 68 ಏಕದಿನ ಅಂತಾರಾಷ್ಟ್ರೀಯ (ODI) ಮತ್ತು 10 ಟಿ20 ಅಂತಾರಾಷ್ಟ್ರೀಯ (T20Is) ಪಂದ್ಯಗಳಲ್ಲಿ ಪ್ರವೀಣ್‌ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಅವರು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ 119 ಪಂದ್ಯಗಳನ್ನಾಡಿದ್ದಾರೆ. ಇದನ್ನೂ ಓದಿ: India Women’s Squad: ಭಾರತ Vs ಬಾಂಗ್ಲಾದೇಶ ಟಿ20, ಏಕದಿನ ಸರಣಿಗೆ ಬಲಿಷ್ಠ ತಂಡ ಪ್ರಕಟ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ದೇಸಾಯಿ’ ಚಿತ್ರಕ್ಕೆ ‘ಲವ್ 360’ ಚಿತ್ರದ ಪ್ರವೀಣ್ ಕುಮಾರ್ ಹೀರೋ

    ‘ದೇಸಾಯಿ’ ಚಿತ್ರಕ್ಕೆ ‘ಲವ್ 360’ ಚಿತ್ರದ ಪ್ರವೀಣ್ ಕುಮಾರ್ ಹೀರೋ

    ಹಿಂದಿನಿಂದಲೂ ‘ದೇಸಾಯಿ’ (Desai) ಮನೆತನಕ್ಕೆ ಅದರದೆ ಆದ ಪರಂಪರೆಯ ವೈಶಿಷ್ಟ್ಯವಿದೆ. ಇದನ್ನು ಚಲನಚಿತ್ರದ ಮೂಲಕ ತೆರೆಗೆ ತರುತ್ತಿದ್ದಾರೆ ನಿರ್ಮಾಪಕ ಮಹಾಂತೇಶ್ ವಿ ಚೊಳಚಗುಡ್ಡ. ‘ಲವ್ 360’ ಚಿತ್ರದ ಮೂಲಕ ಎಲ್ಲರ ಮೆಚ್ಚುಗೆ ಪಡೆದಿದ್ದ ಪ್ರವೀಣ್ ಕುಮಾರ್ (Praveen Kumar) ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ‌. ಇತ್ತೀಚೆಗೆ ಈ ಚಿತ್ರದ ಮುಹೂರ್ತ (Muhurta) ಸಮಾರಂಭ ಬಾಗಲಕೋಟೆಯ ಮುಚಖಂಡಿಯ ಶ್ರೀವೀರಭದ್ರೇಶ್ವರಸ್ವಾಮಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು.

    ಚಿತ್ರದ ಮೊದಲ ಸನ್ನಿವೇಶಕ್ಕೆ  ಶಾಸಕರಾದ ಶ್ರೀ ವೀರಣ್ಣ ಚರಂತಿಮಠ ಅವರು ಆರಂಭಫಲಕ ತೋರಿದರು.  ವನಶ್ರೀಮಠ ವಿಜಯಪುರದ ಜಯಬಸವಕುಮಾರ ಮಹಾಸ್ವಾಮಿಗಳು ಕ್ಯಾಮೆರಾ ಚಾಲನೆ ಮಾಡಿದರು. ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಈ ಚಿತ್ರ ಆರಂಭವಾಯಿತು. ಗಣ್ಯರು ಚಿತ್ರತಂಡದ ಸದಸ್ಯರು ಮೊದಲಿಗೆ ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ‌

    ಇದು ನನ್ನ ಮೊದಲ ಚಿತ್ರ ಅದ್ಧೂರಿಯಾಗಿ ತೆರೆಯ ಮೇಲೆ ತರುವ ಹಾಗೆ ನಿರ್ದೇಶನಕ್ಕೆ ಸಿದ್ದ ಮಾಡಿಕೊಂಡಿದ್ದೇನೆ ಎಂದು ನಿರ್ದೇಶಕ ನಾಗಿರೆಡ್ಡಿ ಬಡ ತಿಳಿಸಿದರು. ಚಿತ್ರದ ನಿರ್ಮಾಪಕ ಮಹಾಂತೇಶ ವಿ ಚೊಳಚಗುಡ್ಡ ಮಾತನಾಡಿ, ವಿಶಿಷ್ಟ ಕಥಾಹಂದರ ಹೊಂದಿರುವ ಕಥೆಯನ್ನು ನಾನು ಹುಡುಕುತ್ತಿದ್ದಾಗ ನನ್ನ ಯೋಚನೆಗೆ ಬಂದದ್ದು ಈ ಗತಕಾಲದ, ತನ್ನದೇ ಆದ ವೈಶಿಷ್ಟ್ಯ ಪರಂಪರೆಯನ್ನು ಹೊಂದಿರುವ “ದೇಸಾಯಿ” ಮನೆತನದ ಕುರಿತು ಸಿನಿಮಾ ಮಾಡಬೇಕು ಎಂದು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆ ಎಂದರು. ಇದನ್ನೂ ಓದಿ: ನಟಿ ಸ್ವರಾ ಭಾಸ್ಕರ್ ಆರತಕ್ಷತೆಯಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ

    ಈ ಚಿತ್ರ ನನ್ನ ನಟನಾ ವೃತ್ತಿಯಲ್ಲಿ ಒಂದು ಹೊಸ ಅಧ್ಯಾಯ ಆಗಲಿದೆ ಅಂತಹ ಚಾಲೆಂಜಿಂಗ್ ಪಾತ್ರ ಇದಾಗಿದೆ. ಚಿತ್ರದ ಕಥೆ ತುಂಬಾ ಇಷ್ಟವಾಯಿತು‌‌ ಎಂದರು ನಾಯಕ ಪ್ರವೀಣ್ ಕುಮಾರ್.  ಮೈಸೂರು ಮೂಲದ ರಾದ್ಯಾ “ದೇಸಾಯಿ” ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದಾರೆ. ಚಿತ್ಕಲಾ ಬಿರಾದಾರ್, ಮಧುಸೂದನ್ ರಾವ್,  ನಟನ  ಪ್ರಶಾಂತ್, ವೀರೇಂದ್ರ, ಹರಿಣಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

    ಜೈ ಆನಂದ್ ಛಾಯಾಗ್ರಹಣ, ಸಾಯಿಕಾರ್ತಿಕ್ ಸಂಗೀತ ನಿರ್ದೇಶನ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿದೆ. ಯಲ್ಲಪ್ಪ ವಿ ಚೊಳಚಗುಡ್ಡ ಸಹ ನಿರ್ಮಾಪಕರಾಗಿರುವ ಈ ಚಿತ್ರದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆಯಲಿದೆ.

  • ಪ್ರವೀಣ್ ಕುಮಾರ್ ಬಿಡುಗಡೆಗೆ ವಿರೋಧ – ವಿಶೇಷ ಸಭೆ ಕರೆದ ಆರಗ ಜ್ಞಾನೇಂದ್ರ

    ಪ್ರವೀಣ್ ಕುಮಾರ್ ಬಿಡುಗಡೆಗೆ ವಿರೋಧ – ವಿಶೇಷ ಸಭೆ ಕರೆದ ಆರಗ ಜ್ಞಾನೇಂದ್ರ

    ಬೆಂಗಳೂರು: 90ರ ದಶಕದಲ್ಲಿ ಕರಾವಳಿಯನ್ನು ಬೆಚ್ಚಿಬೀಳಿಸಿದ್ದ ಕೊಲೆ ಪ್ರಕರಣದಲ್ಲಿ ಸುದೀರ್ಘ 28 ವರ್ಷಗಳ ಜೈಲು ವಾಸದಲ್ಲಿದ್ದ ಪ್ರವೀಣ್ ಕುಮಾರ್ ಎಂಬಾತ ಬಿಡುಗಡೆಯಾಗುತ್ತಿದ್ದಾನೆ. ಆದರೆ ಆತನ ಕುಟುಂಬಸ್ಥರೇ ಅಪರಾಧಿಯನ್ನು ಬಿಡುಗಡೆ ಮಾಡದಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ಕರೆದಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

    ಪ್ರವೀಣ್ ಕುಟುಂಬಸ್ಥರು ಇಂದು ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ಬಿಡುಗಡೆ ಮಾಡದಂತೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಚಿವರು, ಪ್ರವೀಣ್‍ನಿಗೆ 14 ವರ್ಷದ ಹಿಂದೆ ಶಿಕ್ಷೆ ಆಗಿದೆ. ಮೊದಲು ಗಲ್ಲುಶಿಕ್ಷೆ ಆಗಿತ್ತು. ಬಳಿಕ ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷಗೆ ಬದಲಾವಣೆ ಮಾಡಿತ್ತು. ರಾಷ್ಟ್ರಪತಿಗಳು ಅದನ್ನು ಎತ್ತಿ ಹಿಡಿದಿದ್ದರು. ಅಪರಾಧಿಯ ಹಿನ್ನೆಲೆ ಈಗ ನಮಗೆ ಗೊತ್ತಾಗ್ತಿದೆ. ಅವರ ಮನೆಯವರು ಬಂದಿದ್ದಾರೆ. ಯಾವುದೇ ಕಾರಣಕ್ಕೂ ಅವರನ್ನು ಬಿಡುಗಡೆ ಮಾಡಬೇಡಿ ಎಂದಿದ್ದಾರೆ. ಇದನ್ನೂ ಓದಿ: ಹಣದಾಸೆಗಾಗಿ ಉಂಡ ಮನೆಗೇ ದ್ರೋಹ ಬಗೆದ ಅಪರಾಧಿಗೆ ಬಿಡುಗಡೆ ಭಾಗ್ಯ – ಜೈಲಿನಿಂದ ಹೊರಬಿಡದಂತೆ ಗೋಗರೆದ ಕುಟುಂಬಸ್ಥರು

    ಹೊರಗೆ ಬಂದ್ರೆ ಮತ್ತೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ ಎಂದಿದ್ದಾರೆ. ಬೆಳಗಾವಿ ಜೈಲಿನಿಂದ ಕೋರ್ಟ್‍ಗೆ ಬರೋವಾಗ ಈತ ಹಿಂದೆ ತಪ್ಪಿಸಿಕೊಂಡು ಹೋಗಿದ್ದ. ಗೋವಾದಲ್ಲಿ ಮದುವೆಯಾಗಿ ಮಗು ಕೂಡ ಇತ್ತು ಎಂದು ಕುಟುಂಬದವರು ಹೇಳಿದ್ದಾರೆ. ಹಳೆಯ ಕೇಸ್‌ನಲ್ಲಿ 14 ವರ್ಷ ಈತನಿಗೆ ಸನ್ನಡತೆ ಇದೆ. ಹೀಗಾಗಿ ಆತನನ್ನು ಬಿಡುಗಡೆ ಮಾಡುವ ಪ್ರಸ್ತಾಪ ಬಂದಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನಾವೆಲ್ಲಾ ಸಚಿವರು, ನಮಗೆ ಕಾನೂನನ್ನು ಉಲ್ಲಂಘಿಸಲು ಹಕ್ಕಿದೆ: ನಿತಿನ್ ಗಡ್ಕರಿ

    ಇದೊಂದು ವಿಶೇಷ ಕೇಸ್. ಇಂದು ಅಧಿಕಾರಿಗಳ ಸಭೆ ಕರೆದಿದ್ದೇನೆ. ಕಾನೂನಿನ ಪ್ರಕಾರ ಏನು ಮಾಡಲು ಸಾಧ್ಯವೋ ಅದನ್ನು ಮಾಡ್ತೀವಿ. ಎರಡು ಕುಟುಂಬಕ್ಕೆ ಭದ್ರತೆ ಕೊಡ್ತೀವಿ. ಕಳೆದ ಕ್ಯಾಬಿನೆಟ್‍ನಲ್ಲಿ ಕೊಲೆ ಮಾಡಿದವರಿಗೆ, ರೇಪ್ ಮಾಡಿದವರನ್ನು ಬಿಡಬಾರದು ಎಂದು ನಿಯಮ ಮಾಡಿದ್ದೇವೆ. ಇನ್ನು ಮೇಲೆ ಇಂತಹ ಕೇಸ್‍ನಲ್ಲಿ ಅಪರಾಧಿಯನ್ನು ಬಿಡುಗಡೆ ಮಾಡುವುದಿಲ್ಲ. ಹಿಂದಿನ ನಿಯಮದ ಪ್ರಕಾರ ಈತನಿಗೆ ಬಿಡುಗಡೆಗೆ ಶಿಫಾರಸು ಬಂದಿದೆ. ಇವತ್ತು ಅಧಿಕಾರಿಗಳ ಸಭೆ ಮಾಡಿ ಅಂತಿಮ ನಿರ್ಧಾರ ಮಾಡ್ತೀವಿ. 4 ಜನರನ್ನು ಕೊಂದಿದ್ದಾನೆ. ಅವನು ಸೈಕೋ ಅನ್ನಿಸುತ್ತದೆ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಐಪಿಎಲ್ ಇತಿಹಾಸದಲ್ಲೇ ಹೆಚ್ಚು ಮೇಡನ್ ಓವರ್ ಮಾಡಿದ್ಯಾರು?

    ಐಪಿಎಲ್ ಇತಿಹಾಸದಲ್ಲೇ ಹೆಚ್ಚು ಮೇಡನ್ ಓವರ್ ಮಾಡಿದ್ಯಾರು?

    ನವದೆಹಲಿ: ಐಸಿಸಿ 2007ರಲ್ಲಿ ಆರಂಭಿಸಿದ ಟಿ20 ವಿಶ್ವಕಪ್ ಟೂರ್ನಿಯನ್ನು ಎಂ.ಎಸ್.ಧೋನಿ ನಾಯಕತ್ವದಲ್ಲಿ ಭಾರತ ಗೆದ್ದು ಬೀಗಿತ್ತು. ಇದಾದ ಬಳಿಕ ಅಂದ್ರೆ 2008ರಲ್ಲಿ ಬಿಸಿಸಿಐ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅನ್ನು ಆರಂಭಿಸಿ ಕ್ರಿಕೆಟ್ ಅಭಿಮಾನಿಗಳ ಮನ ಗೆದ್ದಿತ್ತು.

    ಐಪಿಎಲ್ ಟೂರ್ನಿಯು ವಿಶ್ವದ ಅತ್ಯುತ್ತಮ ಟಿ20 ಲೀಗ್ ಎಂದು ಪ್ರಶಂಸಿಸಲ್ಪಟ್ಟಿದೆ. ಏಕೆಂದರೆ ಇದು ಟೀಂ ಇಂಡಿಯಾದ ಸ್ಟಾರ್ ಆಟಗಾರರನ್ನು ವಿದೇಶಿ ಕ್ರಿಕೆಟಿಗರೊಂದಿಗೆ ಅಥವಾ ವಿರುದ್ಧವಾಗಿ ಆಡಲು ಅವಕಾಶ ಮಾಡಿಕೊಟ್ಟಿದೆ. ಜೊತೆಗೆ ಯುವ ಭಾರತೀಯ ಪ್ರತಿಭೆಗಳಿಗೆ ತಮ್ಮ ಪ್ರದರ್ಶನವನ್ನು ನೀಡಲು ಒಂದು ಉತ್ತಮ ವೇದಿಕೆಯನ್ನು ನೀಡುತ್ತಿದೆ.

    ಇಂಡಿಯನ್ ಪ್ರೀಮಿಯರ್ ಲೀಗ್ ವಿಶ್ವ ಕ್ರಿಕೆಟ್‍ಗೆ ಸಾಕಷ್ಟು ದೊಡ್ಡ ಬ್ಯಾಟ್ಸ್‌ಮನ್‌ಗಳನ್ನು ನೀಡಿದೆ ಎಂದು ಅನೇಕರು ನಂಬಿದ್ದಾರೆ. ಜೊತೆಗೆ ಬೌಲರ್‌ಗಳ ಕೌಶಲ್ಯವನ್ನೂ ಅಭಿಮಾನಿಗಳು ಗೌರವಿಸುತ್ತಾರೆ. ರನ್ ಏರಿಕೆ ನಿಯಂತ್ರಿಸಲು ಮತ್ತು ಸಿಕ್ಸರ್, ಬೌಂಡರಿಗಳನ್ನು ಮಿತಿಗೊಳಿಸಲು ಅನೇಕ ಬೌಲರ್‌ಗಳು ಶ್ರಮಿಸುತ್ತಾರೆ. ಈ ನಿಟ್ಟಿನಲ್ಲಿ ಐಪಿಎಲ್ ಇತಿಹಾಸದಲ್ಲೇ ಯಾರು ಹೆಚ್ಚಿನ ಸಂಖ್ಯೆಯ ಮೇಡನ್ ಓವರ್‌ಗಳನ್ನು ಮಾಡಿದ್ದಾರೆ ಎನ್ನುವುದು ತಿಳಿಯುವುದು ಅಗತ್ಯವಾಗಿದೆ.

    ವಿಶೇಷವೆಂದರೆ ಐಪಿಎಲ್ ಇತಿಹಾಸದಲ್ಲೇ ಅತಿಹೆಚ್ಚು ಮೇಡನ್ ಓವರ್ ಮಾಡಿದ ಬೌಲರ್‌ಗಳ ಪಟ್ಟಿಯ ಟಾಪ್ ತ್ರಿಯಲ್ಲಿ ಭಾರತೀಯರೇ ಇದ್ದಾರೆ. ಟೀಂ ಇಂಡಿಯಾ ಮಾಜಿ ಕ್ರಿಕೆಟರ್, 84 ಅಂತರರಾಷ್ಟ್ರೀಯ ಪಂದ್ಯಗಳನ್ನ ಆಡಿರುವ ಅನುಭವಿ ಪ್ರವೀಣ್ ಕುಮಾರ್ ಅವರು ಅಗ್ರಸ್ಥಾನದಲ್ಲಿದ್ದಾರೆ.  2 ಸ್ಥಾನದಲ್ಲಿ ಟೀಂ ಇಂಡಿಯಾ ಮಾಜಿ ಆಲ್‍ರೌಂಡರ್ ಇರ್ಫಾನ್ ಪಠಾಣ್ ಇದ್ದಾರೆ.

    ಯಾರು ಎಷ್ಟು ಮೇಡನ್‍ ಓವರ್?:
    ಪ್ರವೀಣ್ ಕುಮಾರ್- 14
    ಇರ್ಫಾನ್ ಪಠಾಣ್- 10
    ಧವಲ್ ಕುಲಕರ್ಣಿ- 8
    ಲಸಿತ್ ಮಾಲಿಂಗ- 8
    ಸಂದೀಪ್ ಶರ್ಮಾ- 8

    ಪ್ರವೀಣ್ ಕುಮಾರ್ ಅವರು ಐಪಿಎಲ್ ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ), ಸನ್‍ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್), ಕಿಂಗ್ಸ್ ಇಲೆವೆನ್ ಪಂಜಾಬ್ (ಕೆಎಕ್ಸ್‌ಐಪಿ) ಮತ್ತು ಗುಜರಾತ್ ಲಯನ್ಸ್ (ಜಿಎಲ್) ಪರ ಆಡಿದ್ದಾರೆ. 33ರ ಹರೆಯದ ಪ್ರವೀಣ್ ಕುಮಾರ್ 2017ರ ಆವೃತ್ತಿಯಲ್ಲಿ ಸುರೇಶ್ ರೈನಾ ನೇತೃತ್ವದ ಜಿಎಲ್ ತಂಡದ ಪರ ಕೊನೆಯದಾಗಿ ಆಡಿದ್ದರು.

    ಐಪಿಎಲ್ ಇತಿಹಾಸದಲ್ಲಿ ಹೆಚ್ಚಿನ ವಿಕೆಟ್ ಪಡೆದ ಅಗ್ರ 20 ಬೌಲರ್‌ಗಳಲ್ಲಿ ಪ್ರವೀಣ್ ಕುಮಾರ್ ಕೂಡ ಒಬ್ಬರಾಗಿದ್ದಾರೆ. ಅವರು ಒಟ್ಟು 119 ಐಪಿಎಲ್ ಪಂದ್ಯಗಳನ್ನು ಆಡಿ 90 ವಿಕೆಟ್ ಉರುಳಿಸಿದ್ದಾರೆ.

    2020ರ ಐಪಿಎಲ್ ಆವೃತ್ತಿಯು ಕೊರೊನಾ ವೈರಸ್‍ನಿಂದಾಗಿ ಮುಂದೂಡಲ್ಪಟ್ಟಿದೆ. ಹೀಗಾಗಿ ಅಭಿಮಾನಿಗಳಲ್ಲಿ ನಿರಾಸೆ ಮೂಡಿದೆ. ಲಾಕ್‍ಡೌನ್‍ನಿಂದಾಗಿ ಕ್ರಿಕೆಟ್ ಆಟಗಾರರು ಮನೆಯಲ್ಲೇ ಕಾಲ ಕಳೆಯುತ್ತಿದ್ದಾರೆ.

  • ಕುಡಿದ ಮತ್ತಿನಲ್ಲಿ ವ್ಯಕ್ತಿಗೆ ಥಳಿಸಿದ ಟೀಂ ಇಂಡಿಯಾ ಮಾಜಿ ಆಟಗಾರ

    ಕುಡಿದ ಮತ್ತಿನಲ್ಲಿ ವ್ಯಕ್ತಿಗೆ ಥಳಿಸಿದ ಟೀಂ ಇಂಡಿಯಾ ಮಾಜಿ ಆಟಗಾರ

    – 7 ವರ್ಷದ ಮಗುವಿನ ಮೇಲೂ ಹಲ್ಲೆ

    ಮೀರತ್: ಕುಡಿದ ಮತ್ತಿನಲ್ಲಿ ವ್ಯಕ್ತಿಯನ್ನು ಥಳಿಸಿ, ಅವರ 7 ವರ್ಷದ ಮಗನ ಮೇಲೂ ಹಲ್ಲೆ ಮಾಡಿದ ಆರೋಪವೊಂದು ಟೀಂ ಇಂಡಿಯಾ ಮಾಜಿ ಆಟಗಾರ ಪ್ರವೀಣ್ ಕುಮಾರ್ ವಿರುದ್ಧ ಕೇಳಿ ಬಂದಿದೆ.

    ಉತ್ತರ ಪ್ರದೇಶದ ಮೀರತ್‍ನಲ್ಲಿ ವಾಸಿಸುತ್ತಿರುವ ಪ್ರವೀಣ್ ಕುಮಾರ್ ಅವರ ಮೇಲೆ ನೆರೆಮನೆಯ ನಿವಾಸಿ ದೀಪಕ್ ಶರ್ಮಾ ಗಂಭೀರ ಆರೋಪವನ್ನು ಮಾಡಿದ್ದು, ಕುಡಿದ ಮತ್ತಿನಲ್ಲಿ ಪ್ರವೀಣ್ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಈ ಘಟನೆ ಕುರಿತು ಪೊಲೀಸರಿಗೂ ಮಾಹಿತಿ ನೀಡಿದ್ದು, ಪ್ರಕರಣ ಕುರಿತು ಸ್ಥಳೀಯ ಎಸ್‍ಪಿ ವಿಚಾರಣೆ ನಡೆಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಪೊಲೀಸ್ ಮಾಹಿತಿ ಅನ್ವಯ, ಇಬ್ಬರೂ ನೆರೆಮನೆಯ ನಿವಾಸಿಗಳಾಗಿದ್ದು, ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಕುರಿತು ಪಡೆದ ಹೇಳಿಕೆಯ ಆಧಾರವಾಗಿ ನಾವು ಹೆಚ್ಚಿನ ವಿಚಾರಣೆಯನ್ನು ನಡೆಸಿದ್ದಾಗಿ ಎಸ್‍ಪಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

    ದೀಪಕ್ ಶರ್ಮಾ ಪೊಲೀಸರ ವಿರುದ್ಧವೂ ಆರೋಪ ಮಾಡಿದ್ದು, ಘಟನೆಯ ಬಗ್ಗೆ ಪ್ರಕರಣವನ್ನು ದಾಖಲು ಮಾಡಿಕೊಳ್ಳಲು ಪೊಲೀಸರು ನಿರಾಕರಿಸಿದ್ದರು. ಅಂತಾರಾಷ್ಟ್ರೀಯ ಮಾಜಿ ಕ್ರಿಕೆಟ್ ಆಟಗಾರರಾದ ಕಾರಣ ಪ್ರಕರಣದ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕ ಮಾಡಲು ಹೇಳಿದ್ದರು ಎಂದು ತಿಳಿಸಿದ್ದಾರೆ.

    ದೀಪಕ್ ಶರ್ಮಾ ಹೇಳಿಕೆ ಪ್ರಕಾರ, ‘ಸಂಜೆ 3 ಗಂಟೆಯ ಸಮಯದಲ್ಲಿ ನನ್ನ ಮಗನನ್ನು ಕರೆದುಕೊಂಡು ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದೆ. ಅಲ್ಲಿಗೆ ಬಂದ ಪ್ರವೀಣ್ ಕುಮಾರ್ ಮೊದಲು ಬಸ್ ಚಾಲಕನನ್ನು ನಿಂದಿಸಿದ್ದರು. ಆ ಬಳಿಕ ನನ್ನನ್ನು ನಿಂದಿಸಿದರು. ಆ ವೇಳೆ ಅವರು ಸ್ಥಿತಿ ಉತ್ತಮವಾಗಿರಲಿಲ್ಲ. ನನ್ನನ್ನು ಥಳಿಸಿ, ಕೈ ಮುರಿದರು. ಅಲ್ಲದೇ ನನ್ನ ಮಗನನ್ನು ಕೂಡ ತಳ್ಳಿದರು. ಇದರಿಂದ ಮಗನ ಬೆನ್ನಿಗೆ ಗಾಯವಾಗಿದೆ. ಆದರೆ ಈಗ ಪೊಲೀಸರು ಪ್ರಕರಣವನ್ನು ರಾಜಿ ಮಾಡಿಕೊಳ್ಳಲು ಒತ್ತಾಯ ಮಾಡುತ್ತಿದ್ದಾರೆ. ಅಲ್ಲದೇ ನನಗೆ ಕೊಲೆ ಬೆದರಿಕೆಗಳು ಕೂಡ ಬರುತ್ತಿದೆ ಎಂದಿದ್ದಾರೆ. ಪ್ರಕರಣದ ಬಗ್ಗೆ ಪ್ರವೀಣ್ ಇದುವರೆಗೂ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

    2007ರಲ್ಲಿ ಪಾಕ್ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಪ್ರವೀಣ್ ಕುಮಾರ್ ಟೀಂ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದರು. 2018 ಅಕ್ಟೋಬರ್ ನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದರು. 68 ಏಕದಿನ ಪಂದ್ಯಗಳನ್ನು ಆಡಿರುವ ಪ್ರವೀಣ್ 77 ವಿಕೆಟ್ ಪಡೆದಿದ್ದು, 6 ಟೆಸ್ಟ್ ಪಂದ್ಯಗಳಿಂದ 27 ವಿಕೆಟ್ ಹಾಗೂ 10 ಟಿ20 ಪಂದ್ಯಗಳಿಂದ 8 ವಿಕೆಟ್ ಪಡೆದಿದ್ದಾರೆ.

  • ಸಂಜಯ್ ದತ್ತ್ ಲುಕ್‍ನಲ್ಲಿ ಕಾಣಿಸಿಕೊಂಡ ಮಾಜಿ ಕ್ರಿಕೆಟಿಗ

    ಸಂಜಯ್ ದತ್ತ್ ಲುಕ್‍ನಲ್ಲಿ ಕಾಣಿಸಿಕೊಂಡ ಮಾಜಿ ಕ್ರಿಕೆಟಿಗ

    ನವದೆಹಲಿ: 13 ವರ್ಷಗಳ ತಮ್ಮ ಕ್ರಿಕೆಟ್ ವೃತ್ತಿ ಜೀವನಕ್ಕೆ 2018ರಲ್ಲಿ ವಿದಾಯ ಹೇಳಿದ್ದ ಟೀಂ ಇಂಡಿಯಾ ಮಾಜಿ ಬೌಲರ್ ಪ್ರವೀಣ್ ಕುಮಾರ್, ನಟ ಸಂಜಯ್ ದತ್ತ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದು, ತಮ್ಮ ಹೊಸ ಲುಕ್ ಫೋಟೋವನ್ನು ಇನ್‍ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    33 ವರ್ಷದ ಪ್ರವೀಣ್ ಕುಮಾರ್ ತಮ್ಮ ಜೀವನದಲ್ಲಿ ಬೌಲಿಂಗ್ ಮಾತ್ರವಲ್ಲದೇ ಅವರು ಧರಿಸುತ್ತಿದ್ದ 50 ತೊಲೆ ಚಿನ್ನದ ಸರದಿಂದಲೂ ಹೆಚ್ಚು ಖ್ಯಾತಿ ಪಡೆದಿದ್ದರು. ಆದರೆ 8 ಲಕ್ಷ ರೂ. ಮೌಲ್ಯದ ಸರ 2014 ರಲ್ಲಿ ಕಳೆದು ಹೋಗಿತ್ತು. ವಿಜಯ್ ಹಜಾರೆ ಟೂರ್ನಿಯ ಸಂದರ್ಭದಲ್ಲಿ ಉತ್ತರ ಪ್ರದೇಶದ ಪರ ಆಡುತ್ತಿದ್ದ ಪ್ರವೀಣ್ ಫೀಲ್ಡಿಂಗ್‍ಗೆ ತೆರಳುವ ಮುನ್ನ ಸರವನ್ನು ಬಿಚ್ಚಿಟ್ಟು ತೆರಳಿದ್ದರು. ಆದರೆ ಆ ಬಳಿಕ ಅದನ್ನು ಅಲ್ಲಿಯೇ ಮರೆತು ಹೋಟೆಲ್ ರೂಮ್‍ಗೆ ಮರಳಿದ್ದರು.

    https://www.instagram.com/p/B3gkR97jWdM/

    ತಾವು ಸರವನ್ನು ಮರೆತು ಬಂದ ಬಗ್ಗೆ ಪ್ರವೀಣ್ ಕ್ರೀಡಾಂಗಣದ ಅಧಿಕಾರಿಗಳಿಗೆ ದೂರು ನೀಡಿದರು ಕೂಡ ಯಾವುದೇ ಪ್ರಯೋಜನ ಆಗಿರಲಿಲ್ಲ. ಆದರೆ ಇತ್ತೀಚೆಗೆ ತಮ್ಮ ಫೋಟೋ ಪೋಸ್ಟ್ ಮಾಡಿರುವ ಪ್ರವೀಣ್ ಕುಮಾರ್, ‘ಸಂಜು ಬಾಬಾರನ್ನ ನಾನು ಗಂಭೀರವಾಗಿ ತೆಗೆದುಕೊಂಡಾಗ.. ನನ್ನ 50 ತೊಲದ ಸರವನ್ನ ನೋಡಿ’ ಎಂದು ಸಿನಿಮಾ ಡೈಲಾಂಗ್ ಹೇಳಿದ್ದಾರೆ. ಅಂದಹಾಗೇ ಈ ಡೈಲಾಗ್ ಸಂಜಯ್ ದಂತ್ ಅವರು 1999 ರಲ್ಲಿ ಬಿಡುಗಡೆಯಾಗಿದ್ದ ‘ವಾಸ್ತವ್’ ಸಿನಿಮಾದಲ್ಲಿ ಹೇಳಿದ್ದರು.

    2007 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿದ್ದ ಪ್ರವೀಣ್ ಕುಮಾರ್ ಅವರು, ನಿವೃತ್ತಿ ಬಳಿಕ ಟಿ10 ಲೀಗ್ ನಲ್ಲಿ ಭಾಗವಹಿಸಿದ್ದರು. ಭಾರತದ ಪರ 6 ಟೆಸ್ಟ್, 68 ಏಕದಿನ ಹಾಗೂ 10 ಟಿ20 ಪಂದ್ಯಗಳನ್ನು ಪ್ರವೀಣ್ ಆಡಿದ್ದು ಕ್ರಮವಾಗಿ 27, 77, 8 ವಿಕೆಟ್ ಪಡೆದಿದ್ದಾರೆ. 2012 ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದ ಟಿ20 ಸರಣಿಯಲ್ಲಿ ಅಂತಿಮವಾಗಿ ಆಡಿದ್ದರು.

    https://www.instagram.com/p/Bi_NibaFZ1i/

    https://www.instagram.com/p/BpJOJU3lD7y/