Tag: ಪ್ರವೀಣ್‌ ಕುಮಾರ್‌ ನೆಟ್ಟಾರು

  • ಪ್ರವೀಣ್‌ ನೆಟ್ಟಾರು ಕನಸು ನನಸು – ನೂತನ ಮನೆಯ ಗೃಹ ಪ್ರವೇಶ,  ಸ್ಮಾರಕ ಲೋಕಾರ್ಪಣೆ

    ಪ್ರವೀಣ್‌ ನೆಟ್ಟಾರು ಕನಸು ನನಸು – ನೂತನ ಮನೆಯ ಗೃಹ ಪ್ರವೇಶ, ಸ್ಮಾರಕ ಲೋಕಾರ್ಪಣೆ

    ಮಂಗಳೂರು: ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದ ಬಿಜೆಪಿ (BJP) ಕಾರ್ಯಕರ್ತ ಪ್ರವೀಣ್ ನೆಟ್ಟಾರ್ (Praveen Kumar Nettar) ಅವರ ನೂತನ ಮನೆಯ ಗೃಹ ಪ್ರವೇಶವು ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ನೆಟ್ಟಾರ್‌ನಲ್ಲಿ ನೆರವೆರಿದೆ.

    ಬೆಳ್ಳಾರೆಯ ನೆಟ್ಟಾರ್‌ನ ಹಳೆ ಮನೆಯ ಆವರಣದಲ್ಲೇ ಹೊಸ ಮನೆ ನಿರ್ಮಾಣವನ್ನು ಬಿಜೆಪಿ ವತಿಯಿಂದ ಮಾಡಿದ್ದಾರೆ. ಜೊತೆಗೆ ಮನೆ ಮುಂಭಾಗದಲ್ಲಿ ಪ್ರವೀಣ್ ಸ್ಮಾರಕ ನಿರ್ಮಿಸಲಾಗಿದೆ. ಪ್ರವೀಣ್ ಸ್ಮಾರಕವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalinkumar Kateel) ಅವರು ಗುರುವಾರ ಲೋಕಾರ್ಪಣೆ ಮಾಡಲಾಯಿತು.

    ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ನೆರೆದಿದ್ದರು. ಬಿಜೆಪಿ ವತಿಯಿಂದ ನಿರ್ಮಾಣಗೊಂಡ ಪ್ರವೀಣ್ ನೆಟ್ಟಾರ್‌ನ ಕನಸಿನ ಮನೆಯನ್ನು ಪ್ರವೀಣ್ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಇದನ್ನೂ ಓದಿ: ರೈತ ಯುವಕರನ್ನ ಮದುವೆ ಆಗೋರಿಗೆ 2 ಲಕ್ಷ ಪ್ರೋತ್ಸಾಹ ಧನ – JDS ಪ್ರಣಾಳಿಕೆ ಬಿಡುಗಡೆ

    ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸುಳ್ಯ ತಾಲೂಕಿನ ನೆಟ್ಟಾರುವಿನಲ್ಲಿ ಐದೇ ತಿಂಗಳಲ್ಲಿ ವಿಶಾಲವಾದ ಸುಂದರ ಮನೆ ನಿರ್ಮಾಣವಾಗಿದೆ. 70 ಲಕ್ಷ ವೆಚ್ಚದಲ್ಲಿ, 2,800 ಚದರಡಿ ವಿಸ್ತೀರ್ಣದಲ್ಲಿ ಮನೆ‌‌ ನಿರ್ಮಾಣ ಮಾಡಲಾಗಿದೆ. ಮಾತ್ರವಲ್ಲದೆ, ನೀಡಿದ ಆಶ್ವಾಸನೆಯಂತೆ, ಪ್ರವೀಣ್ ಪತ್ನಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ‌ಕಚೇರಿಯಲ್ಲಿ ಉದ್ಯೋಗವನ್ನೂ ಕೊಡಿಸಲಾಗಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಮೋದಿಯವರನ್ನು ಸಾವಿನ ಕೂಪಕ್ಕೆ ತಳ್ಳೋ ಆಹ್ವಾನ ನೀಡಿತ್ತು: ಸ್ಮೃತಿ ಇರಾನಿ

  • Praveen Nettaru Case: ಹತ್ಯೆಯ ಪ್ರಮುಖ ಆರೋಪಿಗಳು ಸೌದಿಯಲ್ಲಿ ಭೂಗತ – ತನಿಖೆಯಲ್ಲಿ ಮಹತ್ವದ ಪ್ರಗತಿ

    Praveen Nettaru Case: ಹತ್ಯೆಯ ಪ್ರಮುಖ ಆರೋಪಿಗಳು ಸೌದಿಯಲ್ಲಿ ಭೂಗತ – ತನಿಖೆಯಲ್ಲಿ ಮಹತ್ವದ ಪ್ರಗತಿ

    ಮಂಗಳೂರು: ಪ್ರವೀಣ್ ಕುಮಾರ್‌ ನೆಟ್ಟಾರು (Praveen Kumar Nettar) ಹತ್ಯೆ ಪ್ರಕರಣದ ಆರೋಪಿಗಳ ಬೆನ್ನು ಬಿದ್ದಿರುವ (National Investigation Agency) ಎನ್‍ಐಎಗೆ ಮಹತ್ವದ ಸುಳಿವು ಸಿಕ್ಕಿದೆ. ತಲೆ ಮರೆಸಿಕೊಂಡಿರುವ ಪ್ರಮುಖ ಆರೋಪಿಗಳ ಸುಳಿವು ಸಿಕ್ಕಿ ಎನ್‍ಐಎ ವಿದೇಶದತ್ತ ತೆರಳಲು ತಯಾರಿ ನಡೆಸಿದೆ.

    2022ರ ಜುಲೈ 27 ರಂದು ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ (Bellare) ಬಿಜೆಪಿ (BJP) ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪಿಎಫ್‍ಐ ಸಂಘಟನೆ ನಡೆಸಿದ ಈ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈ ಹತ್ಯೆ ಪ್ರಕರಣವನ್ನು ಎನ್‍ಐಎಗೆ ಹಸ್ತಾಂತರಿಸಿದ ಬಳಿಕ ತೀವ್ರಗತಿಯಲ್ಲಿ ತನಿಖೆ ನಡೆದಿದ್ದು ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಹತ್ತು ಮಂದಿಯನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಆದ್ರೆ ಹತ್ಯೆಯ ಮಾಸ್ಟರ್ ಪ್ಲಾನ್ ಮಾಡಿದವರು, ಹಣಕಾಸು ಹಾಗೂ ಆಶ್ರಯ ನೀಡಿದ ಪ್ರಮುಖ ಆರೋಪಿಗಳು ಇನ್ನೂ ತಲೆಮರೆಸಿಕೊಂಡಿದ್ದಾರೆ. ಇವರ ಬಂಧನ ತಲೆನೋವಾಗಿದ್ದ ಎನ್‍ಐಎ ಆರೋಪಿಗಳ ಪತ್ತೆಗೆ ಬಹುಮಾನ ಘೋಷಿಸಿತ್ತು. ಒಟ್ಟು ಆರು ಪ್ರಮುಖ ಆರೋಪಿಗಳನ್ನು ಪತ್ತೆ ಹಚ್ಚಿ ಕೊಟ್ಟವರಿಗೆ ಒಟ್ಟು 22 ಲಕ್ಷ ಬಹುಮಾನ ಘೋಷಿಸಿತ್ತು. ಇದರ ಫಲವಾಗಿಯೇ ಇದೀಗ ಇಬ್ಬರು ಪ್ರಮುಖ ಆರೋಪಿಗಳ ಸುಳಿವು ಸಿಕ್ಕಿದ್ದು ಬಂಧನಕ್ಕೆ ಎನ್‍ಐಎ ಬಲೆ ಬೀಸಿದೆ. ಇದನ್ನೂ ಓದಿ: Praveen Nettaru murder case: 1,500 ಪುಟಗಳ ಸುದೀರ್ಘ ಚಾರ್ಜ್‌ಶೀಟ್‌ ಸಲ್ಲಿಸಿದ NIA

    ಮೊದಲಿಗೆ ನಾಲ್ಕು ಆರೋಪಿಗಳ ಬಂಧನಕ್ಕೆ ಎನ್‍ಐಎ ಬಹುಮಾನ ಘೋಷಿಸಿದ್ದು ಬಳಿಕ ಜನವರಿ 22 ರಂದು ಬಂಟ್ವಾಳದ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ ಹಾಗೂ ನೆಕ್ಕಿಲಾಡಿ ಅಗ್ನಾಡಿ ಹೌಸ್ ನಿವಾಸಿ ಕೆ.ಎ.ಮಸೂದ್ ಪತ್ತೆಗೆ ಒಟ್ಟು ಹತ್ತು ಲಕ್ಷ ಬಹುಮಾನ ಘೋಷಿಸಿತ್ತು. ಈ ಬಹುಮಾನ ಘೋಷಣೆಯ ಕೆಲವೇ ದಿನಗಳಲ್ಲಿ ಎನ್‍ಐಎ ಅಧಿಕಾರಿಗಳಿಗೆ ಅನಾಮಿಕ ವ್ಯಕ್ತಿ ಮಾಹಿತಿ ನೀಡಿದ್ದು ಆರೋಪಿಗಳಿಬ್ಬರೂ ಸೌದಿ ಅರೇಬಿಯಾದಲ್ಲಿ ಇರುವ ಸುಳಿವು ನೀಡಿದ್ದಾನೆ. ಹೀಗಾಗಿ ಎನ್‍ಐಎ ಅಧಿಕಾರಿಗಳು ಈ ಇಬ್ಬರನ್ನೂ ಸೌದಿ ಅರೇಬಿಯಾದಿಂದ ಬಂಧಿಸಿ ತರಲು ತಯಾರಿ ನಡೆಸಿದ್ದಾರೆ. ಇವರ ಬಂಧನಕ್ಕೆ ಬೇಕಾದ ಸಹಾಯಕ್ಕೆ ಸೌದಿ ಅರೇಬಿಯಾ ಸರ್ಕಾರದ ಜೊತೆ ಉನ್ನತ ಅಧಿಕಾರಿಗಳು ಈಗಾಗಲೇ ಮಾತುಕತೆ ನಡೆಸಿದ್ದು, ಕೆಲವೇ ದಿನಗಳಲ್ಲಿ ಬಂಧಿಸಿ ಕರೆ ತರುವ ಸಾಧ್ಯತೆ ಹೆಚ್ಚಿದೆ. ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಂತೆ ತೀರ್ಮಾನ ಮಾಡಿದ್ದೇನೆ: ಬಿಎಸ್‌ವೈ

    ಈ ಹತ್ಯೆ ಪ್ರಕರಣದಲ್ಲಿ ಇನ್ನೂ ನಾಲ್ವರು ಪ್ರಮುಖ ಆರೋಪಿಗಳಿದ್ದು ಅವರ ಬಂಧನಕ್ಕೆ ಮೊದಲ ಹಂತದಲ್ಲಿ 12 ಲಕ್ಷ ರೂ. ಬಹುಮಾನ ಘೋಷಿಸಿದೆ. ಆರೋಪಿಗಳಾದ ಸುಳ್ಯದ ಬೆಳ್ಳಾರೆ ಬೂಡುಮನೆ ನಿವಾಸಿ ಮೊಹಮ್ಮದ್ ಮುಸ್ತಾಫಗೆ 5 ಲಕ್ಷ ರೂ., ಮಡಿಕೇರಿಯ ಗದ್ದಿಗೆ ನಿವಾಸಿ ತುಫೈಲ್ ಎಚ್.ಎಂಗೆ 5 ಲಕ್ಷ ರೂ., ಸುಳ್ಯದ ಕಲ್ಲುಮುಟ್ಲು ನಿವಾಸಿ ಉಮ್ಮರ್ ಫಾರೂಕ್‍ಗೆ 2 ಲಕ್ಷ ರೂ. ಹಾಗೂ ಸುಳ್ಯದ ಬೆಳ್ಳಾರೆ ನಿವಾಸಿ ಅಬೂಬಕ್ಕರ್ ಸಿದ್ದಿಕ್ ಪತ್ತೆಗೆ 2 ಲಕ್ಷ ರೂ. ಬಹುಮಾನ ಈ ಹಿಂದೆಯೇ ಎನ್‍ಐಎ ಘೋಷಿಸಿತ್ತು. ಒಟ್ಟಿನಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಕೇಸನ್ನು ಗಂಭೀರವಾಗಿ ಪರಿಗಣಿಸಿರುವ ಎನ್ಐಎ ಎಲ್ಲಾ ಆರೋಪಿಗಳನ್ನು ಬಂಧಿಸುವವರೆಗೂ ವಿರಮಿಸುವ ಲಕ್ಷಣ ಕಾಣಿಸುತ್ತಿಲ್ಲ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ- NIA ಚಾರ್ಜ್‍ಶೀಟ್‍ನಲ್ಲಿ ಸ್ಫೋಟಕ ಮಾಹಿತಿ ಬಯಲು

    ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ- NIA ಚಾರ್ಜ್‍ಶೀಟ್‍ನಲ್ಲಿ ಸ್ಫೋಟಕ ಮಾಹಿತಿ ಬಯಲು

    – ಕಿಲ್ಲಿಂಗ್ ಸ್ಕ್ವಾಡ್‍ಗೆ ತರಬೇತಿ

    ಬೆಂಗಳೂರು/ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು (Praveen Kumar Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎನ್‍ಐಎ ಚಾರ್ಜ್‍ಶೀಟ್‍ (NIA Chargesheet) ನಲ್ಲಿ ಮತ್ತಷ್ಟು ಸ್ಫೋಟಕ ರಹಸ್ಯಗಳು ಬಯಲಾಗಿವೆ.

    ಮುಸ್ಲಿಂ ಆಡಳಿತ ಜಾರಿಗಾಗಿ ಭಯೋತ್ಪಾದನಾ ಕೃತ್ಯಕ್ಕೆ ಪಿಎಫ್‍ಐ ಸ್ಕೆಚ್ ಹಾಕಿದ್ದು, ಪಿಎಫ್‍ಐ ಸಭೆಯಲ್ಲಿ ಕಿಲ್ಲಿಂಗ್ ಸ್ವಾಡ್ ರಚನೆ ಬಗ್ಗೆ ಚರ್ಚೆ ನಡೆದಿದೆ. ಕಿಲ್ಲಿಂಗ್ ಸ್ಕ್ವಾಡ್‍ಗೆ ಶಸ್ತ್ರಾಸ್ತ್ರ ನೀಡಿ ಪಿಎಫ್‍ಐ ತರಬೇತಿ ನೀಡಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: Praveen Nettaru murder case: 1,500 ಪುಟಗಳ ಸುದೀರ್ಘ ಚಾರ್ಜ್‌ಶೀಟ್‌ ಸಲ್ಲಿಸಿದ NIA

    6 ದಿನ; 10 ಮೀಟಿಂಗ್; 7 ಜನರ ಶಾರ್ಟ್ ಲಿಸ್ಟ್: 2047ಕ್ಕೆ ಮುಸ್ಲಿಂ ಆಡಳಿತ ಜಾರಿಗೆ ತರುವ ಉದ್ದೇಶವನ್ನು ಪಿಎಫ್‍ಐ (Popular Front Of India) ಹೊಂದಿತ್ತು. ಇದಕ್ಕಾಗಿ ಸಮಾಜದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನ ನಡೆಸುತ್ತಿತ್ತು. ಪಿಎಫ್‍ಐನ ಪ್ರಮುಖ ನಾಯಕರು ಸಭೆ ನಡೆಸಿ ಯಾರನ್ನ ಕೊಲೆ ಮಾಡಬೇಕು ಎಂದು ನಿರ್ಧಾರ ಮಾಡುತ್ತಿದ್ದರು. ಇದಕ್ಕಾಗಿ ಕಿಲ್ಲಿಂಗ್ ಸ್ಕ್ವಾಡ್ಸ್ ನ್ನ ಮಾಡಿಕೊಂಡು ಕಾರ್ಯಾಚರಣೆ ಮಾಡುತ್ತಿತ್ತು. ಅದರಂತೆ ಆರೋಪಿಗಳು ಪ್ರವೀಣ್ ನೆಟ್ಟಾರು ಕೊಲೆ ಸಂಬಂಧ ಬೆಂಗಳೂರು, ಸುಳ್ಯ ಹಾಗೂ ಬೆಳ್ಳಾರೆಯಲ್ಲಿ ಸಭೆಗಳನ್ನ ಮಾಡಿದ್ದರು. ಇನ್ನೂ ಆರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ಎನ್‍ಐಎ ಹುಡುಕಾಟ ನಡೆಸಿತ್ತು.

    ಪಿಎಫ್‍ಐನ ಇಸ್ಲಾಮಿಕ್ ಆಡಳಿತವನ್ನ ಜಾರಿಗೆ ತರಲು ಅಡ್ಡಿಯಾಗುವ ವ್ಯಕ್ತಿಗಳನ್ನ ಶತ್ರುಗಳು ಎಂದು ಗುರುತಿಸಲಾಗುತ್ತಿತ್ತು. ಇಂತಹವರನ್ನ ಕೊಲೆ ಮಾಡುವ ಕೆಲಸವನ್ನ ಈ ಸರ್ವಿಸ್ ಟೀಮ್ ಅಥವಾ ಕಿಲ್ಲಿಂಗ್ ಸ್ಕ್ವಾಡ್ ಮಾಡುತ್ತಿತ್ತು. ಈ ಕಿಲ್ಲಿಂಗ್ ಸ್ಕ್ವಾಡ್‍ಗೆ ಶಸ್ತ್ರಾಸ್ತ್ರ ನೀಡಿ ತರಬೇತಿ ನೀಡಲಾಗುತ್ತಿತ್ತು. ಕೊಲೆ ಹೇಗೆ ಮಾಡಬೇಕು ಪುನಃ ಹೇಗೆ ತಪ್ಪಿಸಿಕೊಳ್ಳಬೇಕು ಎಲ್ಲದರ ಬಗ್ಗೆಯೂ ತರಬೇತಿ ನೀಡಲಾಗುತ್ತಿತ್ತು. ನಿರ್ದಿಷ್ಟ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನ ಗುರುತಿಸಿ ಕೊಲೆ ಮಾಡಿದ ಬಳಿಕ ಅಷ್ಟೇ ಸುಲಭವಾಗಿ ಎಸ್ಕೇಪ್ ಆಗುವ ತರಬೇತಿಯನ್ನ ಕಿಲ್ಲಿಂಗ್ ಸ್ಕ್ವಾಡ್ ಪಡೆದುಕೊಂಡಿತ್ತು.

    ಒಟ್ಟಿನಲ್ಲಿ 7 ಹಿಂದೂಗಳಲ್ಲಿ ಇಬ್ಬರ ಹತ್ಯೆಗೆ ಪ್ಲಾನ್ ಮಾಡಲಾಗಿತ್ತು. ಪ್ರವೀಣ್ ಹತ್ಯೆ ಬಳಿಕ ಆರೋಪಿಗಳು ಮಡಿಕೇರಿಯಲ್ಲಿ ತುಫೈನ್ ಮನೆಯಲ್ಲಿ ಅಡಗಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನುಡಿದಂತೆ ಪ್ರವೀಣ್ ನೆಟ್ಟಾರ್ ಕುಟುಂಬದ ಮನೆ ನಿರ್ಮಾಣಕ್ಕೆ ಅಡಿಪಾಯ ಹಾಕಿದ ಬಿಜೆಪಿ

    ನುಡಿದಂತೆ ಪ್ರವೀಣ್ ನೆಟ್ಟಾರ್ ಕುಟುಂಬದ ಮನೆ ನಿರ್ಮಾಣಕ್ಕೆ ಅಡಿಪಾಯ ಹಾಕಿದ ಬಿಜೆಪಿ

    ಮಂಗಳೂರು: ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Kumar Nettar) ಕನಸಿನ ಮನೆ ನಿರ್ಮಾಣಗೊಳ್ಳುವ ಕಾಲ ಸನ್ನಿಹಿತವಾಗಿದೆ. ಕೆಲ ದಿನಗಳ ಹಿಂದೆ ಪ್ರವೀಣ್ ಕುಟುಂಬಸ್ಥರಿಗೆ ಸಂಸದ, ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalinkumar Kateel) ಕೊಟ್ಟ ಮಾತಿನಂತೆ ಮನೆ ನಿರ್ಮಾಣಕ್ಕೆ ಚಾಲನೆ ನೀಡಿದ್ದಾರೆ.

    ಪ್ರವೀಣ್ ನೆಟ್ಟಾರು ಕಂಡಿದ್ದ ಸುಂದರ ಮನೆಯ ಕನಸನ್ನು ನನಸು ಮಾಡುವತ್ತ ಬಿಜೆಪಿ (BJP) ಮುಂದಡಿ ಇಟ್ಟಿದೆ. ನಳಿನ್ ಕುಮಾರ್ ಕಟೀಲ್ ಧಾರ್ಮಿಕ ವಿಧಿ ವಿಧಾನದಂತೆ ಶಂಕುಸ್ಥಾಪನೆ ನೆರವೇರಿಸಿದರು. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ತುಫೈಲ್ ಹುಡುಕಾಟಕ್ಕಿಳಿದ ಕೊಡಗು ಪೊಲೀಸರು

    ಪ್ರವೀಣ್ ಕಂಡಿದ್ದ ಕನಸಿನಂತೆಯೇ ಮನೆ ನಿರ್ಮಾಣಗೊಳ್ಳುತ್ತಿದೆ. ಹಳೆಯ ಮನೆ ಕೆಡವಿ ಇಂದು ಹೊಸ ಮನೆಗೆ ಗುದ್ದಲಿ ಪೂಜೆ ಮಾಡಲಾಗಿದೆ. ಪ್ರವೀಣ್ ಮನೆಯವರೇ ಕೊಟ್ಟ ನಕ್ಷೆಯ ಪ್ರಕಾರ ಮನೆ ನಿರ್ಮಾಣ ಆಗುತ್ತಿದೆ. ಮೊಗರೋಡಿ ಕನ್ಸ್ ಸ್ಟ್ರಕ್ಷನ್ ಕಂಪನಿಗೆ ಮನೆ ನಿರ್ಮಾಣದ ಜವಾಬ್ದಾರಿ ವಹಿಸಲಾಗಿದೆ. 60 ಲಕ್ಷ ರೂ. ವೆಚ್ಚದಲ್ಲಿ 2,700 ಚದರ ಅಡಿಯ ಮನೆ ನಿರ್ಮಾಣ ಆಗಲಿದೆ. ಮುಂದಿನ ವರ್ಷದ ಮೇ ತಿಂಗಳ ಒಳಗಾಗಿ ಮನೆಯನ್ನು ಪೂರ್ಣ ಮಾಡಿಕೊಡಲು ಇಂದಿನಿಂದಲೇ ಕೆಲಸ ಆರಂಭಿಸಲಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

    ಪ್ರವೀಣ್ ಪತ್ನಿ ನೂತನಾರವರಿಗೆ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೌಕರಿ ಕೊಡಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದ ನಳಿನ್ ಕುಮಾರ್ ಕಟೀಲ್ ಇದೀಗ ಮನೆಯ ಕನಸ್ಸನ್ನು ನನಸಾಗಿಸುವತ್ತ ಹೆಜ್ಜೆ ಇರಿಸಿದ್ದಾರೆ. ಪ್ರವೀಣ್ ಕುಟುಂಬಕ್ಕೆ ಮನೆ ನಿರ್ಮಾಣವಾಗುತ್ತಿರುವುದಕ್ಕೆ ಪತ್ನಿ ಮತ್ತು ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಸಂಸದರು, ಸಚಿವರು ಮತ್ತು ಬಿಜೆಪಿ ಮುಖಂಡರು ಪ್ರವೀಣ್ ಅವರ ಕನಸು ನನಸು ಮಾಡಲು ಮೊದಲ ಹೆಜ್ಜೆ ಇಟ್ಟಿದ್ದಾರೆ. ನಮ್ಮ ಮನೆಯವರ ಪರವಾಗಿ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕೇಸ್ – ನಾಲ್ವರು ಆರೋಪಿಗಳ ಸುಳಿವು ನೀಡಿದವರಿಗೆ ಭಾರೀ ಬಹುಮಾನ ಘೋಷಣೆ

    ಬಿಜೆಪಿ ವತಿಯಿಂದ ಈಗಾಗಲೇ ಪ್ರವೀಣ್ ಕುಟುಂಬಕ್ಕೆ 25 ಲಕ್ಷ ನೀಡಲಾಗಿದ್ದು, ಸರ್ಕಾರದಿಂದಲೂ 25 ಲಕ್ಷ ರೂ. ಪರಿಹಾರ ನೀಡಲಾಗಿದೆ. ಅಲ್ಲದೆ ಪ್ರವೀಣ್ ನೆಟ್ಟಾರು ಕಾರ್ಯಾಚರಿಸುತ್ತಿದ್ದ ಯುವ ಮೋರ್ಚಾದಿಂದ 15 ಲಕ್ಷ ರೂ. ಪರಿಹಾರ ನೀಡಲಾಗಿದೆ. ಇದೀಗ ಮನೆ ಕಟ್ಟುವ ಜವಾಬ್ದಾರಿಯನ್ನೂ ಪಕ್ಷ ತೆಗೆದುಕೊಂಡಿದ್ದು ಆದಷ್ಟು ಬೇಗ ಮನೆ ನಿರ್ಮಾಣಗೊಳ್ಳಲಿ ಎನ್ನುವುದು ಪ್ರವೀಣ್ ಪೋಷಕರು ಮತ್ತು ಕಾರ್ಯಕರ್ತರ ಆಶಯವಾಗಿದೆ.

    ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಪುತ್ತೂರು ಶಾಸಕ ಸಂಜೀವ ಮಠಂದೂರು, ಪ್ರವೀಣ್ ಅವರ ತಂದೆ, ತಾಯಿ ಸಹಿತ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಶಂಕುಸ್ಥಾಪನೆಗೆ ಸಾಕ್ಷಿಗಳಾದರು. ಜೊತೆಗೆ ಪ್ರವೀಣ್ ನೆಟ್ಟಾರು ಸಮಾಧಿಗೆ ನಮನ ಸಲ್ಲಿಸಿದರು.

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ತುಫೈಲ್ ಹುಡುಕಾಟಕ್ಕಿಳಿದ ಕೊಡಗು ಪೊಲೀಸರು

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ತುಫೈಲ್ ಹುಡುಕಾಟಕ್ಕಿಳಿದ ಕೊಡಗು ಪೊಲೀಸರು

    ಮಡಿಕೇರಿ: ಪ್ರವೀಣ್ ನೆಟ್ಟಾರು (Praveen Nettar) ಹತ್ಯೆಯ ಆರೋಪಿಗಳಿಗಾಗಿ ಎನ್‍ಐಎ (NIA) ತಂಡ ಬಹಳಷ್ಟು ಹುಡುಕಾಟ ನಡೆಸುತ್ತಿದೆ. ಆದ್ರೆ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಗಳ ಸುಳಿವು ಮಾತ್ರ ಇನ್ನೂ ಸಿಕ್ತಾ ಇಲ್ಲ. ಬಹಳಷ್ಟು ಕಡೆಗಳಲ್ಲಿ ತಲಾಶ್ ನಡೆಸಿದ ಎನ್‍ಐಎ ತಂಡ ಇದೀಗ ನಾಲ್ವರು ಪ್ರಮುಖ ಆರೋಪಿಗಳ ವಾಂಟೆಡ್ ಲಿಸ್ಟ್ ರಿಲೀಸ್ ಮಾಡಿದ್ದು, ಅದರಲ್ಲಿ ಕೊಡಗು (Kodagu) ಮೂಲದ ತುಫೈಲ್ ಕೂಡ ಒಬ್ಬ. ಹೀಗಾಗಿ ತುಫೈಲ್‍ಗಾಗಿ ಎನ್‍ಐಎ ಮಡಿಕೇರಿಯಲ್ಲೂ (Madikeri) ಹುಡುಕಾಟ ಆರಂಭಿಸಿದೆ.

    ತುಫೈಲ್ (Tufail) ಮೂಲತಃ ಕೊಡಗು ಜಿಲ್ಲೆ ಮಡಿಕೇರಿಯ ಗದ್ದಿಗೆಯ ನಿವಾಸಿಯಾಗಿದ್ದಾನೆ. ಪ್ರವೀಣ್ ನೆಟ್ಟಾರು ಹತ್ಯೆಯ ಸಮಯದಲ್ಲಿ ಈತ ಆರೋಪಿಗಳಿಗೆ ಸಹಕಾರವನ್ನು ನೀಡಿದ್ದ ಎಂಬ ಆರೋಪದ ಅಡಿಯಲ್ಲಿ ಈತನನ್ನೂ ಕೂಡ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಗಳು ಸುಳ್ಯದ ಬೆಳ್ಳಾರೆಯಲ್ಲಿ ಹತ್ಯೆ ನಡೆಸಿ ಪರಾರಿಯಾದ ಆರೋಪಿಗಳಿಗೆ ಈತ ಉಳಿದುಕೊಳ್ಳಲು ವಸತಿ ಇತ್ಯಾದಿ ವ್ಯವಸ್ಥೆಗಳನ್ನು ಮಾಡಿಕೊಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಅದಲ್ಲದೆ ಈತ ನಿಷೇಧಿತ PFI ಸಂಘಟನೆಯಲ್ಲೂ ಸಕ್ರೀಯವಾಗಿ ತೊಡಗಿಸಿಕೊಂಡಿದ್ದ. ಈ ಹಿಂದೆ ತುಫೈಲ್‍ನನ್ನು ಹುಡುಕಿಕೊಂಡು ಎನ್‍ಐಎ ತಂಡ ಸೆಪ್ಟೆಂಬರ್‌ನಲ್ಲಿ ಎರಡು ಭಾರಿ ಕೊಡಗಿಗೆ ಬಂದಿತ್ತು. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕೇಸ್ – ನಾಲ್ವರು ಆರೋಪಿಗಳ ಸುಳಿವು ನೀಡಿದವರಿಗೆ ಭಾರೀ ಬಹುಮಾನ ಘೋಷಣೆ

    ಸೆಪ್ಟೆಂಬರ್ 6 ಮತ್ತು 22 ರಂದು ಕೊಡಗಿಗೆ ಭೇಟಿ ಕೊಟ್ಟ ತಂಡ ತುಫೈಲ್ ಮನೆ ಸೇರಿದಂತೆ ಮಡಿಕೇರಿಯ ಸಾಕಷ್ಟು ಸ್ಥಳಗಲ್ಲಿ ಹುಡುಕಾಟ ನಡೆಸಿತ್ತು. ಆದ್ರೆ ಅಧಿಕಾರಿಗಳಿಗೆ ಯಾವುದೇ ಮಾಹಿತಿ ಕೂಡ ಲಭ್ಯವಾಗಿರಲಿಲ್ಲ. ಕಳೆದ ಹಲವು ದಿನಗಳಿಂದ ಆರೋಪಿಗಳು ಪತ್ತೆಯಾಗದ ಹಿನ್ನಲೆಯಲ್ಲಿ ಇದೀಗ ಎನ್‍ಐಎ ತಂಡ ನಾಲ್ಕು ಜನರ ವಾಂಟೆಡ್ ಲಿಸ್ಟ್ ರಿಲೀಸ್ ಮಾಡಿದ್ದು ಅದರಲ್ಲಿ ಕೊಡಗಿನ ತುಫೈಲ್ ತಲೆಗೆ 5 ಲಕ್ಷ ರೂ. ಬಹುಮಾನ ಘೋಷಿಸಿದೆ. ಮಡಿಕೇರಿ ನಗರ ಪೊಲೀಸರ ಸಹಾಯದಿಂದ ಆತನ ಮನೆ ಸೇರಿದಂತೆ ಸುಮಾರು 40 ಕಡೆಗಳಲ್ಲಿ ವಾಂಟೆಡ್ ಪೋಸ್ಟರ್ ಅಂಟಿಸಲಾಗಿದ್ದು, ಯಾರಾದರು ಈತನ ಸುಳಿವು ಸಿಕ್ಕಿದ್ದಲ್ಲಿ ಮಾಹಿತಿ ನೀಡುವಂತೆ ಸೂಚಿಸಿದೆ. ಇದನ್ನೂ ಓದಿ: ಹಾಡಹಗಲೇ ಮಹಿಳೆ ಮೇಲೆ ಯುವಕರಿಂದ ಅತ್ಯಾಚಾರಕ್ಕೆ ಯತ್ನ

    ಮಡಿಕೇರಿಯ ಗದ್ದಿಗೆ ಬಳಿ ತುಫೈಲ್ ನಿವಾಸ ಇದೆ. ಆದರೆ ಆತ ಮನೆ ಬಿಟ್ಟು 8 ತಿಂಗಳಾಗಿದೆ ಎನ್ನುತ್ತಿರುವ ಪೋಷಕರು ಅವನಿಗೂ ನಮಗೂ ಜಗಳವಾಗಿ ಬೇರೆ ಇದ್ದೇವು 8 ತಿಂಗಳಿಂದ ಆತ ನಮ್ಮ ಸಂಪರ್ಕದಲ್ಲಿಲ್ಲ ಅಂತ ಪೋಷಕರು ಹೇಳ್ತಾರೆ. ಈತ ಪ್ರವಿಣ್ ನೆಟ್ಟಾರು ಹತ್ಯೆಯ ಸಮಯದಲ್ಲಿ ಕೊಡಗಿನಲ್ಲೇ ಇದ್ದ ನಂತರದಲ್ಲಿ ಆತ ಪರಾರಿಯಾಗಿದ್ದು ಎಂಬ ಆರೋಪ ಕೂಡ ಹರಿದಾಡುತ್ತಿದೆ. ಹೀಗಾಗಿ ತುಫೈಲ್‍ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಂಗಳೂರಿನಲ್ಲಿ ಕೆಲ್ಸ- ಸಿಎಂಗೆ ಧನ್ಯವಾದ ಹೇಳಿದ ಪ್ರವೀಣ್ ನೆಟ್ಟಾರು ಪತ್ನಿ

    ಮಂಗಳೂರಿನಲ್ಲಿ ಕೆಲ್ಸ- ಸಿಎಂಗೆ ಧನ್ಯವಾದ ಹೇಳಿದ ಪ್ರವೀಣ್ ನೆಟ್ಟಾರು ಪತ್ನಿ

    ಬೆಂಗಳೂರು: ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ಕುಮಾರ್ ನೆಟ್ಟಾರು (Praveen Kumar Nettar) ಅವರ ಧರ್ಮಪತ್ನಿ ನೂತನ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಭೇಟಿಯಾಗಿ ಸರ್ಕಾರದಿಂದ ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದ್ದಾರೆ.

    ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ಕುಮಾರ್ ನೆಟ್ಟಾರು ಅವರ ಧರ್ಮಪತ್ನಿ ಶ್ರೀಮತಿ ನೂತನ ಅವರು ಬಿಜೆಪಿ ರಾಜ್ಯಾದ್ಯಕ್ಷರಾದ ನಳಿನ್ ಕುಮಾರ್ ಕಟೀಲ್ (Nalinkumar Kateel) ಅವರೊಂದಿಗೆ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಸರ್ಕಾರದಿಂದ ಕೆಲಸ ಕೊಡಿಸಿ ಮಂಗಳೂರಿನಲ್ಲಿ ಕಾರ್ಯನಿರ್ವಹಿಸಲು ಸಹಕರಿಸಿದಕ್ಕಾಗಿ ಧನ್ಯವಾದ ಸಮರ್ಪಿಸಿದರು. ಇದನ್ನೂ ಓದಿ: ಮದರಸಾದಲ್ಲಿ 1985ರಿಂದಲೂ ಪೂಜೆ ಇತ್ತು, ಪೊಲೀಸರ ಅನುಮತಿ ಸಿಕ್ಕಿತ್ತು: ಹಿಂದೂ ಮುಖಂಡರ ಸ್ಪಷ್ಟನೆ

    ಸರ್ಕಾರದಿಂದ ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿ ಸಿಎಂ ಕಚೇರಿಯಲ್ಲಿ ಕೆಲಸ ಕೊಡುವುದಾಗಿ ಸಿಎಂ ಹೇಳಿದ್ದರು. ಈ ವೇಳೆ ಮಂಗಳೂರಿನಲ್ಲಿ ಕೆಲಸ ಕೊಡುವಂತೆ ಬೇಡಿಕೆ ಕೇಳಿ ಬಂದಿತ್ತು. ಇದನ್ನು ಮನಗಂಡು ಬೊಮ್ಮಾಯಿ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ PayCM ಕ್ಯಾಂಪೇನ್‌ – ಬಿಜೆಪಿ ನಾಯಕರಿಗೆ ಹೈಕಮಾಂಡ್‌ ಕ್ಲಾಸ್‌

    Live Tv
    [brid partner=56869869 player=32851 video=960834 autoplay=true]

  • ಕಾಸರಗೋಡು ಮಸೀದಿಗೆ ಹೋಗಿದ್ದ ಹಂತಕರು – SDPI, PFI ಲಿಂಕ್‌, ವಾರಂಟ್ ಜಾರಿ ಮಾಡಿ ಆಸ್ತಿ ಸೀಜ್‌

    ಕಾಸರಗೋಡು ಮಸೀದಿಗೆ ಹೋಗಿದ್ದ ಹಂತಕರು – SDPI, PFI ಲಿಂಕ್‌, ವಾರಂಟ್ ಜಾರಿ ಮಾಡಿ ಆಸ್ತಿ ಸೀಜ್‌

    – ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅಲೋಕ್‌ಕುಮಾರ್‌

    ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯ ಆರೋಪಿಗಳಿಗೆ ಪಿಎಫ್‍ಐ ಮತ್ತು ಎಸ್‍ಡಿಪಿಐ ಜೊತೆ ಸಂಬಂಧ ಇರುವುದು ಗೊತ್ತಾಗಿದೆ. ಹತ್ಯೆಯ ಬಳಿಕ ಆರೋಪಿಗಳು ಕಾಸರಗೋಡು ಮಸೀದಿಗೆ ಹೋಗಿದ್ದರು ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

    ಪ್ರಕರಣದ ಕುರಿತಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿ ಹಲ್ಲೆ ನಡೆಸಿದ ಮೂವರು ಆರೋಪಿಗಳನ್ನು ಇಂದು ಬೆಳಗ್ಗೆ ಮಂಗಳೂರಿನ ತಲಪಾಡಿ ಚೆಕ್ ಪೋಸ್ಟ್ ಬಳಿ ಬಂಧಿಸಲಾಗಿದೆ. ಸುಳ್ಯದ ಶಿಯಾಬ್ (33), ಅಂಕತಡ್ಕದ ರಿಯಾಝ್ (27) ಸುಳ್ಯದ ಎಲಿಮಲೆ ನಿವಾಸಿ ಬಶೀರ್‌ನನ್ನು ಬಂಧಿಸಿದ್ದೇವೆ. ಶಿಯಾಬ್‌ ಕ್ಯಾಂಪ್ಕೋ ಕಂಪನಿಗೆ ಕೊಕ್ಕೊ ವಿತರಣೆ ಮಾಡುತ್ತಿದ್ದರೆ ರಿಯಾಝ್ ಕೋಳಿ ವ್ಯಾಪಾರ ಮಾಡುತ್ತಿದ್ದ. ಬಶೀರ್ ಹೋಟೆಲ್‍ನಲ್ಲಿ ಕೆಲಸ ಮಾಡುತ್ತಿದ್ದ. ಕೃತ್ಯಕ್ಕೆ ಬ್ಲ್ಯಾಕ್ ಸ್ಪ್ಲೆಂಡರ್ ಬೈಕನ್ನು ಬಳಕೆ ಮಾಡಲಾಗಿದೆ. ಕಾರೊಂದನ್ನು ಸಹ ಬಳಕೆ ಮಾಡಿದ್ದಾರೆ. ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ಸಹ ವಶಪಡಿಸಿಕೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ವಾರದ ಹಿಂದೆಯೇ ಪ್ರವೀಣ್‌ ಹತ್ಯೆಗೆ ಸ್ಕೆಚ್‌ – ಕೇರಳದ 7 ಕಡೆ ಆಶ್ರಯ, ಹಂತಕರು ಕೊನೆಗೂ ಅಂದರ್‌

    ಆರೋಪಿಗಳ ಬಗ್ಗೆ ಮೊದಲೇ ನಮಗೆ ಸುಳಿವು ಸಿಕ್ಕಿತ್ತು. ಆದರೆ ನಾವು ಬಹಿರಂಗ ಮಾಡಿರಲಿಲ್ಲ. ಮುಂದೆ ಈ ರೀತಿಯ ಯಾವುದೇ ಕೃತ್ಯ ನಡೆಯದೇ ಕಠಿಣ ಕ್ರಮ ಕೈಗೊಳ್ಳುತ್ತೇವೆ. ವಾರೆಂಟ್ ಇಶ್ಯೂ ಮಾಡಿ ಹಂತಕರು ಮತ್ತು ಹಂತಕರಿಗೆ ಸಹಕಾರ ನೀಡಿದವರ ಆಸ್ತಿಗಳನ್ನು ಮುಟ್ಟುಗೋಲು ಹಾಕುತ್ತೇವೆ. ಯಾವುದೇ ಅಮಾಯಕರನ್ನು ಬಂಧನ ಮಾಡುವುದಿಲ್ಲ. ಆದರೆ ಕೃತ್ಯದಲ್ಲಿ ಭಾಗಿಯಾದವರೆಲ್ಲರನ್ನು ಬಂಧಿಸುತ್ತೇವೆ. ಯಾರನ್ನು ಫಿಕ್ಸ್ ಮಾಡುವುದಕ್ಕೆ ಹೋಗುವುದಿಲ್ಲ. ಯಾರನ್ನೋ ಬಂಧಿಸುವುದಕ್ಕೆ ಇದು ಹುಡುಗಾಟವಲ್ಲ. ನಮಗೆ ಜಾತಿ, ಧರ್ಮ, ಬಣ್ಣ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಈದ್ಗಾ ಮೈದಾನದ ವಿವಾದ- ಸರ್ಕಾರದ ನಿರ್ಧಾರವೇ ಅಂತಿಮ: ಬೊಮ್ಮಾಯಿ

    ಎಲ್ಲ ಮಾಹಿತಿಯನ್ನು ನಾವು ಎನ್‍ಐಎಗೆ ನೀಡುತ್ತೇವೆ. ಎನ್‍ಐಎ ಕೂಡಾ ತನಿಖೆ ಮುಂದುವರಿಸುತ್ತಿದೆ. ನಮ್ಮ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಿದ್ದಾರೆ. ಪೊಲೀಸ್ ತಂಡಕ್ಕೆ ಸೂಕ್ತ ಬಹುಮಾನ ನೀಡಲಾಗುತ್ತದೆ. ಶತಾಯಗತಾಯವಾಗಿ ಈ ಪ್ರಕರಣ ಭೇದಿಸಬೇಕಾಗಿತ್ತು. ಜನರಲ್ಲಿಯೂ ಸಾಕಷ್ಟು ಆತಂಕವಿತ್ತು. ಪ್ರಕರಣ ಭೇದಿಸಲು ಸಾಕಷ್ಟು ಒತ್ತಡಗಳಿತ್ತು. ಅಧಿಕಾರಿಗಳು ಉತ್ತಮ ಕೆಲಸ ಮಾಡಿದ್ದಾರೆ. ಅಧಿಕಾರಿ ತಂಡಕ್ಕೆ ಬಹುಮಾನವೂ ಘೋಷಿಸಲಾಗುತ್ತದೆ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ – ಪ್ರಮುಖ ಮೂವರು ಆರೋಪಿಗಳ ಬಂಧನ

    ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ – ಪ್ರಮುಖ ಮೂವರು ಆರೋಪಿಗಳ ಬಂಧನ

    ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
    ಪ್ರವೀಣ್ ಹತ್ಯೆಗೈದು ಪ್ರಮುಖ ಮೂವರು ಆರೋಪಿಗಳು ಕೇರಳಕ್ಕೆ ಪರಾರಿಯಾಗಿದ್ದರು. ಆ ಬಳಿಕ ಪೊಲೀಸರು ಆರೋಪಿಗಳ ಪತ್ತೆಗಾಗಿ ಕೇರಳದಲ್ಲಿ ಬೀಡುಬಿಟ್ಟಿದ್ದರು. ಇದೀಗ ಕೇರಳದಲ್ಲಿ ಮೂವರು ಆರೋಪಿಗಳಾದ ಶಿಯಾಬ್, ರಿಯಾಝ್, ಬಶೀರ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಆಸ್ತಿ ಸೀಜ್: ಅಲೋಕ್ ಕುಮಾರ್
    ಪೊಲೀಸರು ಕೇರಳದಲ್ಲಿ ಆರೋಪಿಗಳನ್ನು ಬಂಧಿಸಿರುವ ಬಗ್ಗೆ ಮಾಹಿತಿ ಇದ್ದು, ಗೌಪ್ಯ ಸ್ಥಳದಲ್ಲಿರಿಸಿ ಮೂವರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಪ್ರವೀಣ್ ಹತ್ಯೆಗೈದ ಪ್ರಮುಖ ಆರೋಪಿಗಳ ಬಂಧನದ ಬಗ್ಗೆ ಇಂದು ಮಧ್ಯಾಹ್ನ 12.30ಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಇದನ್ನೂ ಓದಿ: ಸೇನಾ ಶಿಬಿರದೊಳಗೆ ನುಗ್ಗಲು ಯತ್ನಿಸಿದ್ದ ಇಬ್ಬರು ಉಗ್ರರ ಹತ್ಯೆ- ಮೂವರು ಯೋಧರು ಹುತಾತ್ಮ
    ಏನಿದು ಘಟನೆ:
    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಆಸ್ತಿ ಸೀಜ್: ಅಲೋಕ್ ಕುಮಾರ್

    ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಆಸ್ತಿ ಸೀಜ್: ಅಲೋಕ್ ಕುಮಾರ್

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಇದೀಗ ಆರೋಪಿಗಳ ಆಸ್ತಿ ಸೀಜ್ ಮಾಡಲಾಗುತ್ತಿದ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.

    ಬೆಳ್ಳಾರೆಯಲ್ಲಿ ಆರು ಜಿಲ್ಲೆಯ ಎಸ್‍ಪಿ ಹಾಗೂ ಎನ್‍ಐಎ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಬೆಳ್ಳಾರೆ ಪ್ರವೀಣ್ ಕೊಲೆ ಕೇಸ್ ನಲ್ಲಿ ಮುಖ್ಯ ಆರೋಪಿಗಳ ಬಂಧನ ಆಗಬೇಕಿದೆ. ಆರೋಪಿಗಳ ದಸ್ತಗಿರಿಗೆ ಬೇರೆ ಬೇರೆ ಜಿಲ್ಲೆಯ ಅಧಿಕಾರಿಗಳ ಸಭೆ ಮಾಡುತ್ತೇವೆ. ಪ್ರಮುಖ ಆರೋಪಿಗಳ ಬಂಧನಕ್ಕೆ ಸಂಬಂಧಿಸಿದಂತೆ ಸಭೆ ಮಾಡಲಿದ್ದೇವೆ. ಮಂಗಳೂರಿನ ಕಾನೂನು ಸುವ್ಯವಸ್ಥೆ ಬಗ್ಗೆಯೂ ಸಭೆ ಮಾಡುತ್ತೇವೆ. ಮುಖ್ಯ ಆರೋಪಿಗಳಿಗೆ ಪ್ರತ್ಯಕ್ಷ- ಪರೋಕ್ಷವಾಗಿ ಸಹಕಾರ ಮಾಡಿದವರಿಗೂ ಕ್ರಮ ಆಗಲಿದೆ ಎಂದರು.

    ಎನ್‍ಐಎ ಅಧಿಕಾರಿಗಳ ಜೊತೆ ಸೇರಿ ಕ್ರಮ ಜರುಗಿಸುತ್ತೇವೆ. ಕೋರ್ಟ್ ಮೂಲಕ ವಾರೆಂಟ್ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ. ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಪ್ರಕ್ರಿಯೆ ನಡೆಯುತ್ತಿದೆ. ಎನ್ ಐಎ ಅಧಿಕಾರಿಗಳ ಜೊತೆ ಕರ್ನಾಟಕ ತಂಡ ಈ ಕೆಲಸ ಮಾಡಲಿದೆ ಎಂದು ಹೇಳಿದರು.

    ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿಗಳ ಸಂಪೂರ್ಣ ಮಾಹಿತಿ ಇದೆ. ಅವರ ಫೋಟೋ, ಮನೆ ವಿಳಾಸ, ತಂದೆ-ತಾಯಿ, ಹೆಂಡತಿ ಮಾಹಿತಿ ಎಲ್ಲವೂ ಲಭ್ಯವಿದೆ. ಪ್ರಮುಖ ಆರೋಪಿಗಳನ್ನು ಬಚ್ಚಿಡುವ ಕೆಲಸ ನಡೆಯುತ್ತಿದೆ. ಆವಾಗವಾಗ ಅವರ ಸ್ಥಳ ಬದಲಾವಣೆ ಮಾಡಲಾಗುತ್ತಿದೆ. ಪೊಲೀಸರ ದಾಳಿ ವೇಳೆ ಪ್ರಮುಖ ಆರೋಪಿಗಳು ಪರಾರಿಯಾಗುತ್ತಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಬಿಕಿನಿ ಧರಿಸಿದ ಫೋಟೋ ಹಾಕಿದ್ದಕ್ಕೆ ಕೆಲಸ ಕಳೆದುಕೊಂಡ ಪ್ರಾಧ್ಯಾಪಕಿ

    ಆರೋಪಿಗಳಿಗೆ ಪಿಎಫ್‍ಐ ಲಿಂಕ್ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾವು ಯಾವುದೇ ದಾಖಲೆ ಇಲ್ಲದೇ ಮಾತನಾಡೋದಿಲ್ಲ. ದಾಖಲೆ ಜೊತೆಗೆ ಮಾತನಾಡುತ್ತೇವೆ,ಸುಮ್ಮನೆ ಏನನ್ನೂ ಹೇಳೋದಿಲ್ಲ. ಕೆಲವು ಆರೋಪಿಗಳಿಗೆ ಪಿಎಫ್ ಐ ಲಿಂಕ್ ಇದೆ. ಈ ಬಗ್ಗೆ ತನಿಖೆಯನ್ನು ಮಾಡುತ್ತಿದ್ದೇವೆ. ತನಿಖೆಯ ಬಳಿಕ ಯಾರಿಗೆಲ್ಲಾ ಪಿಎಫ್‍ಐ ಲಿಂಕ್ ಇದೆ ಎಂಬುವುದರ ಬಗ್ಗೆ ಹೇಳುತ್ತೇವೆ ಎಂದು ಹೇಳಿದರು.

    ಈಗಾಗಲೇ ಪ್ರಕರಣ ತನಿಖೆಯ ಹಂತದಲ್ಲಿದೆ. ಈ ಸಂಧರ್ಭದಲ್ಲಿ ಪ್ರಕರಣಕ್ಕೆ ಕೇರಳ ಲಿಂಕ್ ಇರುವ ಬಗ್ಗೆ ಹೇಳಲು ಸಾಧ್ಯವಿಲ್ಲ. ಈಗ ಬಂಧನವಾಗಿರುವ ಏಳು ಮಂದಿಯೂ ಸ್ಥಳೀಯರೇ ಆಗಿದ್ದಾರೆ. ಅವರಿಗೆ ನಿರ್ದೇಶನ ಕೊಟ್ಟಿರೋದು ಯಾರು ಎಂಬುವುದರ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ಮಾಡುತ್ತೇವೆ. ಬೆಳ್ಳಾರೆಯಲ್ಲಿ ಈ ಎಲ್ಲಾ ವಿಚಾರದ ಬಗ್ಗೆ ಸಭೆಯನ್ನು ಮಾಡುತ್ತೇವೆ. ಎನ್ ಐ ಎ ಅಧಿಕಾರಿಗಳು, ಚಾಮರಾಜನಗರ ಹಾಸನ, ಚಿಕ್ಕಮಗಳೂರು, ಉಡುಪಿ,ದಕ್ಷಿಣ ಕನ್ನಡ ಎಸ್‍ಪಿಗಳ ಜೊತೆ ಸಭೆ ಮಾಡುತ್ತೇವೆ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್‌ನನ್ನು ಕೊಲೆ ಮಾಡಿದವರು ಕೇರಳದವರಲ್ಲ, ಸ್ಥಳೀಯರು: ಆರಗ ಜ್ಞಾನೇಂದ್ರ

    ಪ್ರವೀಣ್‌ನನ್ನು ಕೊಲೆ ಮಾಡಿದವರು ಕೇರಳದವರಲ್ಲ, ಸ್ಥಳೀಯರು: ಆರಗ ಜ್ಞಾನೇಂದ್ರ

    ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಪ್ರವೀಣ್‍ಕುಮಾರ್ ನೆಟ್ಟಾರು ಅವರನ್ನು ಹತ್ಯೆ ಮಾಡಿದವರು ದಕ್ಷಿಣ ಕನ್ನಡ ಜಿಲ್ಲೆಯವರೇ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

    ಶಿವಮೊಗ್ಗದಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಪ್ರವೀಣ್ ಹತ್ಯೆಯ ಹಂತಕರು ಸ್ಥಳೀಯರೇ ಆಗಿದ್ದಾರೆ. ಇವರ ಹಿನ್ನೆಲೆ ಏನು ಯಾವ ಸಂಘಟನೆಗೆ ಸೇರಿದವರು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ ಶೀಘ್ರದಲ್ಲೇ ಆರೋಪಿಗಳನ್ನು ಹಿಡಿದು ತರುವ ಪ್ರಯತ್ನದಲ್ಲಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಹೆಲ್ಮೆಟ್ ಧರಿಸದೇ ಬೈಕ್ ರ‍್ಯಾಲಿ ನಡೆಸಿದ್ದ ಬಿಜೆಪಿಗೆ ಸಂಸದನಿಗೆ ಬಿತ್ತು 20 ಸಾವಿರ ರೂ. ದಂಡ

    ಏನಿದು ಘಟನೆ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಜುಲೈ 26ರ ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು. ಇದನ್ನೂ ಓದಿ: ಮಲೇಷ್ಯಾಗೆ 18 ತೇಜಸ್‌ ವಿಮಾನ – ಅಮೆರಿಕ ಸೇರಿದಂತೆ 6 ರಾಷ್ಟ್ರಗಳಿಂದ ಖರೀದಿಗೆ ಆಸಕ್ತಿ

    Live Tv
    [brid partner=56869869 player=32851 video=960834 autoplay=true]